Tag: abhinaya chakravarthy

  • ಇಂದು ಕಿಚ್ಚನ ಹುಟ್ಟುಹಬ್ಬ: ಸೆಲೆಬ್ರೆಷನ್‌ಗೆ ಜಯನಗರದಲ್ಲಿ ಭರ್ಜರಿ ತಯಾರಿ

    ಇಂದು ಕಿಚ್ಚನ ಹುಟ್ಟುಹಬ್ಬ: ಸೆಲೆಬ್ರೆಷನ್‌ಗೆ ಜಯನಗರದಲ್ಲಿ ಭರ್ಜರಿ ತಯಾರಿ

    ಬೆಂಗಳೂರು: ಇಂದು ಅಭಿನಯ ಚಕ್ರವರ್ತಿ ಸುದೀಪ್ (Sudeep) ಹುಟ್ಟುಹಬ್ಬದ ಹಿನ್ನೆಲೆ ಅಭಿಮಾನಿಗಳಲ್ಲಿ ಸೆಲೆಬ್ರೆಷನ್ ಜೋರಾಗಿದೆ. ಜಯನಗರದ ಎಂಇಎಸ್ ಗ್ರೌಂಡ್‌ನಲ್ಲಿ (MES Ground Jayanagar) ಬರ್ತಡೇಗೆ ಭರ್ಜರಿ ತಯಾರಿ ನಡೆದಿದೆ.

    ಸ್ಯಾಂಡಲ್‌ವುಡ್ ಬಾದ್‌ಶಾ (Sandalwood Badshaah) ಕಿಚ್ಚ ಸುದೀಪ್ ಇಂದು (ಸೆ.2)ರಂದು ತಮ್ಮ 51ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಮೂಲಕ 50 ಮುಗಿದು 51ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ.ಇದನ್ನೂ ಓದಿ: ಅಪರಾಧಿಗಳು ನಿರ್ಭೀತಿಯಿಂದ ಓಡಾಟ, ಸಂತ್ರಸ್ತರ ಪರದಾಟ: ದ್ರೌಪದಿ ಮುರ್ಮು ಕಳವಳ

    ಇತ್ತೀಚಿಗಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸುದೀಪ್ ಮನೆಯ ಬಳಿ ಯಾವುದೇ ಆಚರಣೆ ಇರುವುದಿಲ್ಲ ಎಂಬ ಮನವಿ ಮಾಡಿದ್ದರೂ, ಮಧ್ಯರಾತ್ರಿಯೇ ಮನೆಯ ಬಳಿ ಅಭಿಮಾನಿಗಳು ಜಮಾಯಿಸಿದ್ದರು. ಆದರೆ ಅಲ್ಲಿ ಯಾವುದೇ ಸೆಲೆಬ್ರೇಷನ್‌ಗೂ ಕೂಡ ಅವಕಾಶ ಇರಲಿಲ್ಲ. ಪೊಲೀಸರು ಸುದೀಪ್ ಮನೆಯ ಬಳಿಯ ರಸ್ತೆಯನ್ನ ಬಂದ್ ಮಾಡಿದ್ದರು. ಸುದೀಪ್ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಬಾಸ್ ಬಾಸ್ ಕಿಚ್ಚ ಬಾಸ್ ಎಂದು ಘೋಷಣೆ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

    ಈ ವರ್ಷ ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ನಿರ್ಧರಿಸಿದ್ದು, ಜಯನಗರದ ಎಂಇಎಸ್ ಗ್ರೌಂಡ್‌ನಲ್ಲಿ ಸಕಲ ತಯಾರಿ ನಡೆದಿದೆ. ಇದೇ ವೇಳೆ ಸುದೀಪ್ ಫ್ಯಾನ್ಸ್‌ಗೆ ಸರ್‌ಪ್ರೈಸ್‌ ನೀಡಲಿದ್ದಾರೆ. ಬಿಲ್ಲಾರಂಗಾ ಬಾದ್‌ಶಾ ಸಿನಿಮಾ ಟೀಸರ್ ರಿಲೀಸ್ ಆಗಲಿದೆ. ಜೊತೆಗೆ ಮ್ಯಾಕ್ಸ್ ಸಿನಿಮಾದ ಸಾಂಗ್ ಕೂಡ ರಿಲೀಸ್ ಮಾಡಲಿದ್ದಾರೆ. ಕೆಆರ್‌ಜಿ ಸ್ಟುಡಿಯೋ ಪ್ರೊಡಕ್ಷನ್‌ನಲ್ಲಿ ಸುದೀಪ್ ನಿರ್ದೇಶನದ ಹೊಸ ಸಿನಿಮಾ ಕೂಡ ಇಂದು ಅನೌನ್ಸ್ ಆಗಲಿದೆ.ಇದನ್ನೂ ಓದಿ: ಸಿಎಂ ಬಳಿಕ ಹಲವು ಕೈ ನಾಯಕರಿಗೆ ಪ್ರಾಸಿಕ್ಯೂಷನ್‌ ಭೀತಿ

    ಬರ್ತ್ಡೇಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದ್ದು, ಸ್ಯಾಂಡಲ್‌ವುಡ್ ಸ್ನೇಹಿತರು, ಆಪ್ತರು ಸಹ ಬಾದ್‌ಶಾ ಬರ್ತ್ಡೇಗೆ ಪ್ರೀತಿಯಿಂದ ಶುಭ ಕೋರಿದ್ದಾರೆ. ಸೃಜನ್ ಲೋಕೇಶ್ (Srujan Lokesh), ಇಂದ್ರಜಿತ್ ಲಂಕೇಶ್ ಸೇರಿ ಹಲವರು ಸುದೀಪ್ ನಿವಾಸಕ್ಕೆ ತೆರಳಿ ಶುಭ ಕೋರಿದ್ದಾರೆ.

  • ಹುಟ್ಟುಹಬ್ಬಕ್ಕೆ ಮೊದಲೇ ಕಿಚ್ಚನಿಗೆ ಸರ್ಪ್ರೈಸ್ ನೀಡಿದ ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ

    ಹುಟ್ಟುಹಬ್ಬಕ್ಕೆ ಮೊದಲೇ ಕಿಚ್ಚನಿಗೆ ಸರ್ಪ್ರೈಸ್ ನೀಡಿದ ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ

    – ಸೋಶಿಯಲ್ ಮೀಡಿಯಾದಲ್ಲಿ ಕಾಮನ್ ಡಿಪಿ ಫೋಟೋ ವೈರಲ್

    ಬೆಂಗಳೂರು: ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ ಅವರು ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಬಿಗ್ ಸರ್ಪ್ರೈಸ್ ಒಂದನ್ನು ನೀಡಿದ್ದಾರೆ.

    ಹೌದು. ಸೆಪ್ಟೆಂಬರ್ 2ರಂದು ಅಭಿನಯಚಕ್ರವರ್ತಿಯ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಹುಟ್ಟುಹಬ್ಬಕ್ಕೆ 10 ದಿನ ಮೊದಲೇ ಸಿದ್ಧವಾಗಿರುವ ಫೋಟೋವನ್ನು ಕುಂಬ್ಳೆ ಇಂದು ರಿಲೀಸ್ ಮಾಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಫೋಟೋದಲ್ಲಿ ಸುತ್ತಲೂ ಜನರು ನೆರೆದಿರುವ ಕ್ರೀಡಾಂಗಣದ ಮಧ್ಯದಲ್ಲಿ ಕುಳಿತು ತಮ್ಮ ಅಭಿಮಾನಿಗಳ ಮುಂದೆ ಕಿಚ್ಚ ಕೈ ಚಾಚುತ್ತಿರುವಂತೆ ಫೋಟೋವೊಂದನ್ನು ಅದ್ಭುತವಾಗಿ ಎಡಿಟ್ ಮಾಡಲಾಗಿದೆ. ಅಲ್ಲದೆ ಫೋಟೋದಲ್ಲಿ ಬಾದ್ ಷಾ ಎಂದು ಬರೆಯಲಾಗಿದ್ದು, ಈ ಫೋಟೋವನ್ನು ಕುಂಬ್ಳೆ ಸೇರಿದಂತೆ ಹಲವಾರು ಅಭಿಮಾನಿಗಳು ತಮ್ಮ ಟ್ವಿಟ್ಟರ್ ಖಾತೆಗಳ ಮೂಲಕ ಮುಂಚಿತವಾಗಿಯೇ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

    ನನ್ನ ಆತ್ಮೀಯ ಸ್ನೇಹಿತ ಹಾಗೂ ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಕಾಮನ್ ಡಿಪಿ ಶೇರ್ ಮಾಡಿಕೊಳ್ಳಲು ತುಂಬಾ ಸಂತಸವಾಗುತ್ತಿದೆ. ಎಂದಿಗೂ ಸ್ಫೂರ್ತಿದಾಯಕವಾಗಿರಿ ಎಂದು ಕುಂಬ್ಳೆ ಫೋಟೋದೊಂದಿಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಕಿಚ್ಚ ಕೂಡ ಪ್ರತಿಕ್ರಿಯಿಸಿದ್ದು, ಇದಕ್ಕಿಂತ ಉತ್ತಮವಾದ ಉಡುಗೊರೆ ಇನ್ನೇನು ಇರಲು ಸಾಧ್ಯ ಅನಿಲ್ ಕುಂಬ್ಳೆ ಸರ್. ಇದು ನಿಜಕ್ಕೂ ದೊಡ್ಡ ಸರ್ಪ್ರೈಸ್ ಎಂದು ಧನ್ಯವಾದಗಳನ್ನು ತಿಳಿಸಿದ್ದಾರೆ. ಸುದೀಪ್ ಫೋಟೋ ವೈರಲ್ ಆಗುತ್ತಿದ್ದ ಹಿನ್ನೆಲೆಯಲ್ಲಿ ಟ್ವಿಟ್ಟರ್ ನಲ್ಲಿ ಹ್ಯಾಶ್ ಟ್ಯಾಗ್ ಕಿಚ್ಚ ಸುದೀಪ್ ಹಾಗೂ ಕೋಟಿಗೊಬ್ಬ ಅಂತ ಕೆಲ ಕಾಲ ಟ್ರೆಂಡಿಗ್ ನಲ್ಲಿತ್ತು.  ಇದನ್ನೂ ಓದಿ: ಡೇವಿಡ್ ವಾರ್ನರ್ ಕನ್ನಡ ಪ್ರೀತಿಗೆ ಕನ್ನಡಿಗರು ಫಿದಾ

    ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಇದೇ ವರಮಹಾಲಕ್ಷ್ಮಿ ಹಬ್ಬದಂದು ‘ವಿಕ್ರಾಂತ್ ರೋಣ’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ಎರಡನೇ ಅಲೆಯ ಆತಂಕ ಹಾಗೂ ಲಾಕ್ ಡೌನ್ ನಿಂದಾಗಿ ಚಿತ್ರ ಚಿಡುಗಡೆಯಾಗಿಲ್ಲ. ಪರಿಣಾಮ ತೆರಮೇಲೆ ಕಿಚ್ಚನನ್ನು ಕಾಣಲು ತುದಿಗಾಲಲ್ಲಿ ಕಾಯುತ್ತಿದ್ದ ಅಭಿಮಾನಿಗಳಲ್ಲಿ ನಿರಾಸೆ ಉಂಟಾಗಿದೆ. ಈ ಮಧ್ಯೆ ಹಬ್ಬದಂದು ಕಿಚ್ಚ ಫೋಟೋವೊಂದನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದರು. ಹಬ್ಬದ ಪ್ರಯುಕ್ತ ಸ್ಟೈಲಿಶ್ ಫೋಟೋ ಶೃ ಮಾಡಿರುವ ಕಿಚ್ಚ, ಬಹಳ ದಿನಗಳ ನಂತರ ವೈಯಕ್ತಿಕವಾಗಿ ಮಾಡಿದ ಫೊಟೋಶೂಟ್ ಎಂದು ಕ್ಯಾಪ್ಷನ್ ಕೂ ಹಾಕಿಕೊಂಡಿದ್ದು, ನೆಚ್ಚಿನ ನಟನ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ತೂಕ ಕಳೆದುಕೊಂಡ ರಣಧೀರ ನಟಿ