Tag: Abroad

  • ಎರಡು ತಿಂಗಳ ವಿರಾಮ ಘೋಷಿಸಿದ ನಟ ಪ್ರಭಾಸ್

    ಎರಡು ತಿಂಗಳ ವಿರಾಮ ಘೋಷಿಸಿದ ನಟ ಪ್ರಭಾಸ್

    ಪ್ರಭಾಸ್ (Prabhas) ಆಕಾಶದಲ್ಲಿ ತೇಲಾಡುತ್ತಿದ್ದಾರೆ. ಅದಕ್ಕೆ ಕಾರಣ ಸಲಾರ್ (Salaar) ಮಹಾ ಗೆಲುವು. ಭರ್ತಿ ಏಳು ನೂರು ಕೋಟಿಯನ್ನು ಗಳಿಸಿ ಮತ್ತೆ ರೆಬೆಲ್‌ ಸ್ಟಾರ್‌ಗೆ ಆನೆ ಬಲ ನೀಡಿದೆ. ಮೂರು ಸೋಲಿನಿಂದ ಒದ್ದಾಡುತ್ತಿದ್ದ ಡಾರ್ಲಿಂಗ್ ಅದೇ ಖುಷಿಯಲ್ಲಿ ವಿದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಇನ್ನು ಎರಡು ತಿಂಗಳು ಯಾರಿಗೂ ಸಿಗಲ್ಲ ಎಂದು ಘೋಷಿಸಿದ್ದಾರೆ. ಏಕಾಏಕಿ ಯುರೋಪ್‌ಗೆ ಹೊರಟಿದ್ದೇಕೆ ಪ್ರಭಾಸ್? ಎರಡು ತಿಂಗಳು ಏನು ಮಾಡಲಿದ್ದಾರೆ ? ಅದರ ಪಿನ್ ಟು ಪಿನ್ ಡಿಟೇಲ್ಸ್ ಇಲ್ಲಿದೆ.

    ಸಲಾರ್. ಇದೊಂದು ಗೆಲುವು ಬೇಕಾಗಿತ್ತು. ಒಂದಲ್ಲ ಎರಡಲ್ಲ, ಭರ್ತಿ ಮೂರು ಮೂರು ಸಿನಿಮಾ ಆಕಾಶ ನೋಡಿದ್ದವು. ಅಂದರೆ ಹೆಚ್ಚು ಕಮ್ಮಿ ಐದು ವರ್ಷ ಪ್ರಭಾಸ್‌ಗೆ ಗೆಲುವು ದಕ್ಕಿರಲಿಲ್ಲ. ಗೆಲುವನ್ನು ಪಕ್ಕಕ್ಕಿಡಿ. ಈ ಸಿನಿಮಾಗಳಿಂದ ಅವರು ಅತಿ ಹೆಚ್ಚು ಟೀಕೆ ಎದುರಿಸಬೇಕಾಯಿತು. ಹೀಗಾಗಿ ಪ್ರಶಾಂತ್ ನೀಲ್ ಮೇಲೆ ಭರವಸೆ ಇಟ್ಟಿದ್ದರು. ಕೊನೆಗೂ ನೀಲ್ ಕೈ ಬಿಡಲಿಲ್ಲ. ಮಿಶ್ರ ಪ್ರತಿಕ್ರಿಯೆ ನಡುವೆಯೂ ನೀಲ್ ಮ್ಯಾಜಿಕ್ ಕೆಲಸ ಮಾಡಿತ್ತು. ಬರೋಬ್ಬರಿ ಏಳು ನೂರು ಕೋಟಿಯನ್ನು ಗಳಿಸಿತು. ಹೊಂಬಾಳೆ ಸಂಸ್ಥೆ ಮೀಸೆ ತಿರುವಿತು. ಪ್ರಭಾಸ್ ಮೈ ಕೊಡವಿ ಎದ್ದು ನಿಂತರು. ಇದೇ ಖುಷಿಯಲ್ಲಿ ಯುರೋಪ್‌ಗೆ ಎರಡು ತಿಂಗಳು ಹಾರಲಿದ್ದಾರೆ. ಪಿಕ್‌ನಿಕ್ ಅಲ್ಲಪ್ಪಾ, ಚಿಕಿತ್ಸೆ ಮಾಡಿಸಿಕೊಂಡು ಬರಲು.

    ಸಿನಿಮಾ ಮಂದಿಗೆ ಇದು ಹೊಸದಲ್ಲ. ಶೂಟಿಂಗ್ ಸಮಯದಲ್ಲಿ ಯಾವ್ಯಾವುದೋ ಕಾರಣಕ್ಕೆ ಏಟು ಬಿದ್ದಿರುತ್ತವೆ. ಅದನ್ನು ಆ ಕ್ಷಣಕ್ಕೆ ಸರಿ ಮಾಡಿಕೊಂಡು ಮತ್ತೆ ಕ್ಯಾಮೆರಾ ಮುಂದೆ ನಿಂತಿರುತ್ತಾರೆ. ಆದರೆ ಅದು ಸಾಕಾಗಲ್ಲ. ಅದಕ್ಕೆ ವಿದೇಶದಲ್ಲಿ ಶಸ್ತ್ರ ಚಿಕಿತ್ಸೆ (Surgery) ನಡೆಯಬೇಕು. ಅದಕ್ಕಾಗಿಯೇ ಪ್ರಭಾಸ್ ಎರಡು ತಿಂಗಳು ವಿಶ್ರಾಂತಿ ತೆಗೆದುಕೊಂಡು, ಮೈ ಹಗುರ ಹಾಗೂ ಗಟ್ಟಿ ಮಾಡಿಕೊಂಡು ಬರಲು ವಿಮಾನ ಏರಲಿದ್ದಾರೆ. ಇದೇನು ತೀರಾ ಗಂಭೀರ ಆಪರೇಶನ್ ಅಲ್ಲ. ಕೆಲವು ದಿನ ರೆಸ್ಟ್ ಮಾಡಿ, ಮತ್ತೆ ಕಲ್ಕಿ ಹಾಗೂ ರಾಜಾಸಾಬ್ ಶೂಟಿಂಗ್‌ಗೆ ಎಂಟ್ರಿ ಕೊಡಲಿದ್ದಾರೆ.

    ಎರಡು ತಿಂಗಳಲ್ಲಿ ಮತ್ತೆ ಕುದುರೆಯಂತೆ ಎದ್ದು ಬರುವ ಪ್ರಭಾಸ್ ಗಾಗಿ ಅವರ ಅಭಿಮಾನಿಗಳು ಕಾಯುತ್ತಾರೆ. ಕಾಯುವುದರಲ್ಲಿ ಸುಖವಿದೆ ಎನ್ನುವುದು ಅವರ ಅಭಿಮಾನಿಗಳು ಅರಿತುಕೊಂಡಿದ್ದಾರೆ.

  • ವೀಕೆಂಡ್ ನಿಂದ ವಿದೇಶದಲ್ಲಿಯೂ ‘ಹಾಸ್ಟೆಲ್ ಬಾಯ್ಸ್’ ಹಂಗಾಮ

    ವೀಕೆಂಡ್ ನಿಂದ ವಿದೇಶದಲ್ಲಿಯೂ ‘ಹಾಸ್ಟೆಲ್ ಬಾಯ್ಸ್’ ಹಂಗಾಮ

    ಳ್ಳೆಯ ಸಿನಿಮಾಗಳಿಲ್ಲದೇ ಸೊರಗಿದ್ದ ಸ್ಯಾಂಡಲ್ ವುಡ್ ಇಂಡಸ್ಟ್ರೀಗೆ ಹಾಸ್ಟೆಲ್ ಹುಡುಗರು (Hostel Hudugaru) ಬೇಕಾಗಿದ್ದಾರೆ ಚಿತ್ರ ಹೊಸ ಚೈತನ್ಯ ತಂದು ಕೊಟ್ಟಿದೆ. ತುಂಗಾ ಬಾಯ್ಸ್ ಹಾಸ್ಟೆಲ್ ಹುಡುಗರ ಕ್ವಾಟ್ಲೆಗೆ ಪ್ರೇಕ್ಷಕ ಹೊಟ್ಟೆ ಹುಣ್ಣಾಗುವಂತೆ ನಕ್ಕುತ್ತಿದ್ದಾರೆ. ಭರಪೂರ ಮನರಂಜನೆ ಉಣಬಡಿಸಿರುವ ಈ ಸಿನಿಮಾಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಬರೀ ರಾಜ್ಯ ಮಾತ್ರವಲ್ಲ ಹೊರರಾಜ್ಯಗಳಿಗೂ ಹಾಸ್ಟೆಲ್ ಹುಡುಗರ  ಹಾವಳಿ ಹಬ್ಬಿದೆ. ಈಗ ವಿದೇಶದಲ್ಲಿಯೂ ಧಮಾಕ ಎಬ್ಬಿಸಲು ಬಾಯ್ಸ್ ರೆಡಿಯಾಗಿದ್ದಾರೆ.

    ಹಾಸ್ಟೆಲ್ ಹುಡುಗರ ಬೇಕಾಗಿದ್ದಾರೆ ಸಿನಿಮಾ ವಿದೇಶದಲ್ಲಿಯೂ (Abroad) ಬಿಡುಗಡೆಯಾಗುತ್ತಿದೆ. ಕೆನಡಾ, ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಯುಕೆ ಮತ್ತು ಯೂರೋಪ್ ದೇಶಗಳಲ್ಲಿ ಇದೇ ವೀಕೆಂಡ್ ನಿಂದ ತುಂಗಾ ಹಾಸ್ಟೆಲ್ ಬಾಯ್ಸ್ ಕ್ವಾಟ್ಲೆ ಶುರುವಾಗಲಿದೆ. ಆರಂಭದಿಂದಲೂ ತಮ್ಮ ಚಿತ್ರವನ್ನು ಅತ್ಯಂತ ಕೆಟ್ಟ ಚಿತ್ರ ಎನ್ನುತ್ತಲೇ ಅತ್ಯುತ್ತಮ ಸಿನಿಮಾ ಎಂದು ಪ್ರೇಕ್ಷಕರಿಂದ ಬೆನ್ನು ತಟ್ಟಿಸಿಕೊಂಡಿರುವ ಚಿತ್ರತಂಡ ವಿಶ್ವಾದ್ಯಂತ ತಮ್ಮ ಸಿನಿಮಾವನ್ನು ಸಂಭ್ರಮಿಸುವ ತವಕದಲ್ಲಿದೆ. ಇದನ್ನೂ ಓದಿ:ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಬಾಲಿಗೆ ಹಾರಿದ ಹರ್ಷಿಕಾ ಪೂಣಚ್ಚ

    ಹೈದರಾಬಾದ್, ಚೆನ್ನೈ, ಕೊಚ್ಚಿ ಸೇರಿದಂತೆ ಹಲವರು ರಾಜ್ಯಗಳಲ್ಲಿ ನಿತಿನ್ ಕೃಷ್ಣಮೂರ್ತಿ (Nitin Krishnamurthy) ಚೊಚ್ಚಲ ಕನಸ್ಸಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ವರುಣ್ ಗೌಡ (Varun Gowda), ನಿತಿನ್ ಕೃಷ್ಣಮೂರ್ತಿ, ಪ್ರಜ್ವಲ್ ಬಿ.ಪಿ, ಅರವಿಂದ್ ಎಸ್ ಕಶ್ಯಪ್ ಸಿನಿಮಾಗೆ ಬಂಡವಾಳ ಹೂಡಿದ್ದು, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ನಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸಾಥ್ ಕೊಟ್ಟಿದ್ದಾರೆ.

     

    ಇಡೀ ಸ್ಯಾಂಡಲ್ ವುಡ್ ಬೆಂಬಲವಾಗಿ ನಿಂತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಕನ್ನಡ ಸಿನಿಮಾ ಇಂಡಸ್ಟ್ರೀಗೆ ಹೊಸ ಹುರುಪು ತಂದುಕೊಟ್ಟಿದೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕಿದೆ. ಕಳೆದ ಶುರುವಾರ ರಾಜ್ಯಾದ್ಯಂತ ತೆರೆಕಂಡ ಸಿನಿಮಾ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕಪ್ರಭುವಿಗೆ ಮನರಂಜನೆ ರಸದೌತಣ ನೀಡುವಲ್ಲಿ ಹೊಸಬರ ತಂಡ ಯಶಸ್ವಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಮಂತಾಗೆ ಗಂಭೀರ ಆರೋಗ್ಯ ಸಮಸ್ಯೆಯಾ? ಆತಂಕಗೊಂಡ ಫ್ಯಾನ್ಸ್

    ಸಮಂತಾಗೆ ಗಂಭೀರ ಆರೋಗ್ಯ ಸಮಸ್ಯೆಯಾ? ಆತಂಕಗೊಂಡ ಫ್ಯಾನ್ಸ್

    ಕ್ಷಿಣದ ಖ್ಯಾತ ನಟಿ ಸಮಂತಾ (Samantha) ಹಲವು ದಿನಗಳಿಂದ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಅವರ ನಟನೆಯ ಶಾಕುಂತಲಾ ಮತ್ತು ಯಶೋಧಾ (Yashodha) ಸಿನಿಮಾಗಳ ಹಲವು ಕಾರ್ಯಕ್ರಮಗಳು ಜರುಗಿದ್ದರೂ, ಅವರು ಒಂದಕ್ಕೂ ಪ್ರತಿಕ್ರಿಯಿಸಿಲ್ಲ. ಅಲ್ಲದೇ ಹಲವು ದಿನಗಳಿಂದ ಯಾವುದೇ ಶೂಟಿಂಗ್ ನಲ್ಲೂ ಅವರು ಪಾಲ್ಗೊಳ್ಳದೇ ಇರುವ ಕಾರಣಕ್ಕಾಗಿ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಸಮಂತಾ ಈಗ ಎಲ್ಲಿದ್ದಾರೆ ಎಂದು ಹುಡುಕುತ್ತಿದ್ದಾರೆ.

    ತಮಿಳು ಮಾಧ್ಯಮಗಳು ವರದಿ ಮಾಡಿದಂತೆ ಸಮಂತಾ ಅವರು ಗಂಭೀರ (Serious) ಆರೋಗ್ಯ (Health) ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅತೀ ಶೀಘ್ರದಲ್ಲೇ ಅವರು ವಿದೇಶಕ್ಕೂ ಹಾರಿ, ಅಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ವರದಿ ಮಾಡಿವೆ. ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆಯುವಂತಹ ಸಮಸ್ಯೆ ಏನಾಗಿದೆ ಎನ್ನುವ ಕುರಿತು ಸರಿಯಾದ ಮಾಹಿತಿ ಹಂಚಿಕೊಳ್ಳದೇ ಇದ್ದರೂ, ಅವರು ಚರ್ಮ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

    ಕೆಲ ಮಾಧ್ಯಮಗಳು ಚರ್ಮ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿ ಮಾಡಿದರೆ, ಕೆಲವರು ಬೇರೆ ಸಮಸ್ಯೆಗಳ ಕುರಿತು  ಬರೆದಿದ್ದಾರೆ. ಹಾಗಾಗಿ ಸಮಂತಾಗೆ ಇಂಥದ್ದೆ ಸಮಸ್ಯೆ ಇದೆ ಎಂದು ಗೊತ್ತಾಗಿಲ್ಲ. ಅವರು ಕೂಡ ಈ ಕುರಿತು ಎಲ್ಲಿಯೂ ಹೇಳಿಕೊಂಡಿಲ್ಲ. ಸಮಂತಾ ಆಪ್ತರ ಪ್ರಕಾರ, ನಟಿಗೆ ಆರೋಗ್ಯ ಸಮಸ್ಯೆ ಎದುರಾಗಿದ್ದು ನಿಜ. ಚಿಕಿತ್ಸೆಗಾಗಿ (Treatment) ವಿದೇಶಕ್ಕೂ (Abroad) ಹೋಗುತ್ತಾರೆ ಎನ್ನುವುದೂ ಅಷ್ಟೇ ಸತ್ಯ. ಹೀಗಾಗಿ ಸಹಜವಾಗಿಯೇ ಅಭಿಮಾನಿಗಳಿಗೆ ಆತಂಕ ಶುರುವಾಗಿದೆ.

    ಸಮಂತಾ ನಟನೆಯ ಯಶೋಧಾ ಮತ್ತು ಶಾಂಕುತಲಾ (Shakuntala) ಸಿನಿಮಾಗಳು ಬಹುತೇಕ ಶೂಟಿಂಗ್ ಮುಗಿಸಿಕೊಂಡು ಬಿಡುಗಡೆಗೆ ಸಿದ್ಧವಾಗಿದೆ. ಮೊನ್ನೆಯಷ್ಟೇ ಎರಡು ಸಿನಿಮಾಗಳ ಲುಕ್ ರಿಲೀಸ್ ಆಗಿದೆ. ಟ್ರೈಲರ್ ಕೂಡ ಬಿಡುಗಡೆ ಮಾಡಿದ್ದಾರೆ. ಈ ಎರಡೂ ಚಿತ್ರಗಳು ಸಮಂತಾ ವೃತ್ತಿ ಬದುಕಿಗೆ ಬಹುದೊಡ್ಡ ಬ್ರೇಕ್ ನೀಡಲಿವೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸುಖವಾಗಿರಬಹುದೆಂದು ಪತಿ ಜೊತೆಗೆ ವಿದೇಶಕ್ಕೆ ಹೋದ್ಲು – ಕಿರುಕುಳ ತಡೆಯದೆ ಮಸಣ ಸೇರಿದ್ಲು

    ಸುಖವಾಗಿರಬಹುದೆಂದು ಪತಿ ಜೊತೆಗೆ ವಿದೇಶಕ್ಕೆ ಹೋದ್ಲು – ಕಿರುಕುಳ ತಡೆಯದೆ ಮಸಣ ಸೇರಿದ್ಲು

    ಅಲ್ಬನಿ: ಪತಿ ಜೊತೆ ನ್ಯೂಯಾರ್ಕ್‍ನಲ್ಲಿದ್ದ ಭಾರತೀಯ ಮೂಲದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಭಾರೀ ಸದ್ದು ಮಾಡುತ್ತಿದೆ.

    ನ್ಯೂಯಾರ್ಕ್ ನಿವಾಸಿಯಾಗಿರುವ 30 ವರ್ಷದ ಭಾರತೀಯ ಮೂಲದ ಮಹಿಳೆ ಮಂದೀಪ್ ಕೌರ್ ಅವರು ಎಂಟು ವರ್ಷಗಳ ಕಾಲ ಆಕೆಯ ಪತಿ ರಂಜೋಧಬೀರ್ ಸಿಂಗ್ ಸಂಧು ಅವರಿಂದ ಪದೇ ಪದೇ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದರು. ಪರಿಣಾಮ ಪತಿಯ ಕಿರಿಕುಳ ತಡೆಯಲಾದೆ ಆಗಸ್ಟ್ 3 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌರ್ ಅವರಿಗೆ ನಾಲ್ಕು ಮತ್ತು ಆರು ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದು ಅವರನ್ನು ಅಗಲಿದ್ದಾರೆ. ಇದನ್ನೂ ಓದಿ: 3 ಆ್ಯಪ್‍ಗಳನ್ನು ರಚಿಸಿ ಗಿನ್ನಿಸ್ ದಾಖಲೆ ಮಾಡಿದ 12 ವರ್ಷದ ಪೋರ

    ಪ್ರಸ್ತುತ ಪೊಲೀಸರು ಸಂಧು ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ಮಾಡುತ್ತಿದ್ದಾರೆ. ಪುತ್ರಿಯರು ನ್ಯೂಯಾರ್ಕ್‍ನ ರಿಚ್ಮಂಡ್ ಹಿಲ್‍ನಲ್ಲಿದ್ದಾರೆ. ಅವರ ಕುಟುಂಬ ಉತ್ತರ ಪ್ರದೇಶದ ಬಿಜ್ನೋರ್‌ನಿಂದ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    @TheKaurMovement ಎಂಬ ಇನ್‍ಸ್ಟಾ ಪೇಜ್ ಕ್ರಿಯೇಟ್ ಮಾಡಿ ಪ್ರತಿಭಟನೆಕಾರರು ಜಸ್ಟಿಸ್‍ಗಾಗಿ ಹೋರಾಟ ಮಾಡುತ್ತಿದ್ದಾರೆ. ಈ ಪೇಜ್ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಕೌರ್ ತನ್ನ ವೈವಾಹಿಕ ಜೀವನದುದ್ದಕ್ಕೂ ಹಿಂಸೆ ಮತ್ತು ನಿಂದನೆಯನ್ನು ಅನುಭವಿಸಿದ್ದಾಳೆ. ತನ್ನ ಮೂಗೇಟುಗಳು ಮತ್ತು ರಕ್ತ ಹೆಪ್ಪುಗಟ್ಟುವಿಕೆಯನ್ನು ತೋರಿಸುತ್ತಾ, ತನ್ನ ಅತ್ತೆ ಹೇಗೆ ನಿಂದನೆಯನ್ನು ಪ್ರೋತ್ಸಾಹಿಸುತ್ತಿದ್ದರು ಎಂಬುದನ್ನು ವಿವರಿಸಿದ್ದಾಳೆ.

     

    View this post on Instagram

     

    A post shared by The Kaur Movement (@thekaurmovement)

    ವೀಡಿಯೋದಲ್ಲಿ ಏನಿದೆ?
    ನನಗೆ ನಿಜವಾಗಿಯೂ ತುಂಬಾ ದುಃಖವಾಗಿದೆ. ನಾನು ಮದುವೆಯಾಗಿ ಎಂಟು ವರ್ಷಗಳಾಯಿತು. ನಾನು ನನ್ನ ಕೈಲಾದಷ್ಟು ಪ್ರಯತ್ನಿಸಿದೆ. ನಾನು ಪ್ರತಿದಿನ ಅವನ ಹೊಡೆತಗಳನ್ನು ಅನುಭವಿಸುತ್ತಿದ್ದೇನೆ. ಅವನು ಒಂದು ದಿನ ಸುಧಾರಿಸುತ್ತಾನೆ ಎಂದು ತಿಳಿದುಕೊಂಡಿದ್ದೆ. ಆದರೆ ಇಲ್ಲ, ಅವನು ಎಂದೂ ಸುಧಾರಿಸುವುದಿಲ್ಲ. ಅಲ್ಲದೇ ಅವನು ಅಕ್ರಮ ಸಂಬಂಧವನ್ನು ಹೊಂದಿದ್ದಾನೆ. ನಾವು ಮೊದಲ ಎರಡೂವರೆ ವರ್ಷ ಭಾರತದಲ್ಲಿ ವಾಸಿಸುತ್ತಿದ್ದೆವು. ಅದು ನರಕವಾಗಿತ್ತು ಎಂದು ವಿವರಿಸಿದ್ದಾರೆ. ಇದನ್ನೂ ಓದಿ:  ವರಮಹಾಲಕ್ಷ್ಮಿ ಪೂಜೆ ಮಾಡಿ ಸಾಮರಸ್ಯಕ್ಕೆ ಸಾಕ್ಷಿಯಾದ ಮುಸ್ಲಿಂ ಕುಟುಂಬ 

    ನನ್ನ ತಂದೆ ಪೊಲೀಸ್ ಕೇಸ್ ದಾಖಲಿಸಿದ್ದರು. ನಂತರ ಅವನು ನನ್ನನ್ನು ಉಳಿಸಿ, ನನ್ನನ್ನು ಉಳಿಸಿ ಎಂದು ಬೇಡಿಕೊಳ್ಳಲು ಪ್ರಾರಂಭಿಸಿದ. ನಾನು ಅವನನ್ನು ಉಳಿಸಿದೆ. ನಾನು ಎಲ್ಲವನ್ನೂ ಸರಿಮಾಡಲು ಪ್ರಯತ್ನಿಸಿದೆ, ಆದರೆ ನನ್ನ ಅತ್ತೆ ನನಗೆ ಏನು ಸಹಾಯ ಮಾಡಲಿಲ್ಲ. ಆದರೆ ಇದಕ್ಕೆಲ್ಲ ದೇವರು ಉತ್ತರ ತೋರಿಸುತ್ತಾನೆ. ನಾನು ಏನನ್ನೂ ಹೇಳುವುದಿಲ್ಲ. ದೇವರು ಎಲ್ಲರನ್ನು ಶಿಕ್ಷಿಸುತ್ತಾನೆ. ಆದರೆ ಈಗ ನಾನು ಅಸಹಾಯಕಿಯಾಗಿದ್ದೇನೆ. ನಾನು ನನ್ನ ಮಕ್ಕಳನ್ನು ಬಿಟ್ಟು ಈಗ ಹೋಗಬೇಕಾಗಿದೆ ಎಂದು ವೀಡಿಯೋದಲ್ಲಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ವದೇಶದಲ್ಲಿ ಅಂತ್ಯಕ್ರಿಯೆಗೆ ಪೋಷಕರ ಪಟ್ಟು – 59 ದಿನಗಳ ನಂತ್ರ ದೇಶಕ್ಕೆ ಆಗಮಿಸಲಿರೋ ಟೆಕ್ಕಿ ಶವ

    ಸ್ವದೇಶದಲ್ಲಿ ಅಂತ್ಯಕ್ರಿಯೆಗೆ ಪೋಷಕರ ಪಟ್ಟು – 59 ದಿನಗಳ ನಂತ್ರ ದೇಶಕ್ಕೆ ಆಗಮಿಸಲಿರೋ ಟೆಕ್ಕಿ ಶವ

    ಹುಬ್ಬಳ್ಳಿ: ಸ್ವದೇಶದಲ್ಲಿ ಅಂತ್ಯಕ್ರಿಯೆಗೆ ಮಾಡಬೇಕೆಂದು ಪೋಷಕರ ಮನವಿ ಮಾಡಿಕೊಂಡಿದ್ದರಿಂದ 59 ದಿನಗಳ ಹಿಂದೆ ಲಂಡನ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಹುಬ್ಬಳ್ಳಿಯ ಲಿಂಗರಾಜ ನಗರದ ಎಂಜಿನಿಯರ್ ಶವ ಇಂದು ಬೆಂಗಳೂರಿಗೆ ಬರಲಿದೆ.

    ಶಿವರಾಜ ಪಾಟೀಲ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಈ ವಿಷಯವನ್ನು ಕೇಂದ್ರ ಸಂಸದೀಯ ಸಚಿವ ಹಾಗೂ ಸಂಸದ ಪ್ರಹ್ಲಾದ್ ಜೋಶಿ ಅವರು ಶನಿವಾರ ಖಚಿತಪಡಿಸಿದ್ದಾರೆ.

    ಮಾರ್ಚ್ 13 ರಂದು ಆತ್ಮಹತ್ಯೆ ಮಾಡಿಕೊಂಡ ಶಿವರಾಜ ಅಂತ್ಯ ಸಂಸ್ಕಾರವನ್ನು ಭಾರತದಲ್ಲೇ ನಡೆಸಬೇಕೆಂದು ಪಾಲಕರು ಪಟ್ಟು ಹಿಡಿದಿದ್ದರು. ಹೀಗಾಗಿ 59 ದಿನಗಳಿಂದಲೂ ಶವದ ಅಂತ್ಯಸಂಸ್ಕಾರ ನಡೆಸದೆ ಲಂಡನ್ ಆಸ್ಪತ್ರೆಯೊಂದರಲ್ಲಿ ಇರಿಸಲಾಗಿತ್ತು.

    ಈ ಕುರಿತು ಶಿವರಾಜ ತಂದೆ, ತಾಯಿ 15 ದಿನಗಳ ಹಿಂದೆಯಷ್ಟೇ ತಮ್ಮ ಮಗನ ಶವವನ್ನು ದೇಶಕ್ಕೆ ತರಲು ಸಹಾಯ ಮಾಡುವಂತೆ ಕೇಂದ್ರ ಸಚಿವ ಜೋಶಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ಸಚಿವರು, ಈ ನಿಟ್ಟಿನಲ್ಲಿ ನೆರವು ನೀಡಿದ್ದರು. ಭಾರತ ಸರ್ಕಾರ ಮನವಿ ಮಾಡಿದ ಹಿನ್ನೆಲೆಯಲ್ಲಿ ಬ್ರಿಟನ್ ಸರ್ಕಾರ ಒಪ್ಪಿಗೆ ನೀಡಿ ಶವದ ಜೊತೆ ಪತ್ನಿ, ಮಗು ಬರಲು ಒಪ್ಪಿಗೆ ನೀಡಿದೆ.

    ಕಳೆದ ಎರಡ್ಮೂರು ದಿನಗಳಿಂದ ಸ್ವಲ್ಪ ಮಟ್ಟಿನ ಲಾಕ್‍ಡೌನ್ ತೆರವುಗೊಂಡು ವಿಮಾನಯಾನ ಆರಂಭಗೊಂಡಿದೆ. ಇಂದು ಲಂಡನ್‍ನಿಂದ ಬೆಂಗಳೂರಿಗೆ ವಿಮಾನವೊಂದು ಬರುತ್ತಿದೆ. ಅದೇ ವಿಮಾನದಲ್ಲಿ ಟೆಕ್ಕಿ ಶಿವರಾಜ ಪಾಟೀಲ ಶವ ಹಾಗೂ ಪತ್ನಿ, ಮಗು ಬರುವ ಸಾಧ್ಯತೆ ಇದೆ ಎಂದು ಸಚಿವ ಜೋಶಿ ತಿಳಿಸಿದರು.

  • ಐಎಂಎ ಕಚೇರಿಗೆ ಅಧಿಕೃತ ಬೀಗ ಮುದ್ರೆ – ಏರ್‌ಪೋರ್ಟ್‌ನಲ್ಲಿ ಮನ್ಸೂರ್ ಕಾರು ಪತ್ತೆ

    ಐಎಂಎ ಕಚೇರಿಗೆ ಅಧಿಕೃತ ಬೀಗ ಮುದ್ರೆ – ಏರ್‌ಪೋರ್ಟ್‌ನಲ್ಲಿ ಮನ್ಸೂರ್ ಕಾರು ಪತ್ತೆ

    ಬೆಂಗಳೂರು: ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಎಸ್‍ಐಟಿ ತಂಡ ಇಂದು ಅಧಿಕೃತವಾಗಿ ಐಎಂಎ ಕಚೇರಿ ಸೀಜ್ ಮಾಡಿದೆ.

    ನಗರದ ಶಿವಾಜಿನಗರದಲ್ಲಿರುವ ಐಎಂಎ ಜ್ಯುವೆಲರ್ಸ್ ಕಚೇರಿಗೆ ಅಧಿಕೃತವಾಗಿ ಬೀಗ ಮುದ್ರೆ ಹಾಕಿದ್ದಾರೆ. ಐಎಂಎ ವಂಚನೆ ಪ್ರಕರಣ ತನಿಖಾ ಹಂತದಲ್ಲಿರುವ ಹಿನ್ನೆಲೆ ಎಸ್‍ಐಟಿ ಮಳಿಗೆಯನ್ನು ಸೀಜ್ ಮಾಡಿದೆ.

    ಇತ್ತ ಮನ್ಸೂರ್ ಖಾನ್ ಕಾರು ಬೆಂಗಳೂರು ಅಂತರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಕೆಐಎಎಲ್ ನಲ್ಲಿ ಕಾರು ವಶಕ್ಕೆ ಪಡೆದಿದ್ದಾರೆ. ಸದ್ಯ ಮನ್ಸೂರ್ ಕಾರು ಕೆಐಎಎಲ್‍ನಲ್ಲಿ ಪತ್ತೆ ಆಗಿರುವುದರಿಂದ ಮನ್ಸೂರ್ ಖಾನ್ ವಿದೇಶಕ್ಕೆ ಪರಾರಿಯಾಗಿರುವ ಕುರಿತು ಅನುಮಾನ ವ್ಯಕ್ತವಾಗಿದೆ.

    ಸದ್ಯ ಲಭ್ಯವಾಗಿರುವ ಮಾಹಿತಿ ಅನ್ವಯ ಮನ್ಸೂರ್ ಖಾನ್ ಜೂನ್ 06 ರಂದು ಕೆಐಎಎಲ್ ನಲ್ಲಿ ಕಾರು ಬಿಟ್ಟು ವಿದೇಶಕ್ಕೆ ಹಾರಿದ್ದಾರೆ ಎನ್ನಲಾಗಿದ್ದು, ರೇಂಜ್ ರೋವಾರ್ ಕಾರನ್ನು ನಿಲ್ಲಿಸಿ ಬಹಳ ದಿನಗಳಾದರು ಕಾರು ತೆಗೆಯಲು ಯಾರು ಬಾರದ ಹಿನ್ನೆಲೆ ವಿಮಾನ ನಿಲ್ದಾಣದ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಕಾರನ್ನ ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

    ಆಡಿಯೋ ಬಿಡುಗಡೆ ಮಾಡಿ ನಾಪತ್ತೆಯಾಗಿದ್ದ ಮನ್ಸೂರ್ ಖಾನ್ ವಿದೇಶಕ್ಕೆ ತೆರಳಿದ್ದಾನೆ ಎಂಬ ಮಾತಿಗೆ ಸದ್ಯ ಸಾಕಷ್ಟು ಪುಷ್ಠಿ ನೀಡಿದ್ದು, ಅಂತರಾಷ್ಟ್ರಿಯ ವಿಮಾನದಲ್ಲಿ ಮನ್ಸೂರ್ ಖಾನ್ ಪತ್ತೆ ಆಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಆತ ನಿಜಕ್ಕೂ ವಿದೇಶಕ್ಕೆ ತೆರಳಿದ್ದಾನಾ ಅಥವಾ ಬೇರೆ ಕಡೆ ತೆರಳಿದ್ದಾನಾ ಎಂಬದನ್ನು ಪೊಲೀಸರು ಖಚಿತ ಪಡಿಸಿಕೊಳ್ಳಲು ತನಿಖೆ ಚುರುಕುಗೊಳಿಸಿದ್ದಾರೆ.

  • ತಲಾ 1.10 ಲಕ್ಷದಂತೆ ಹಣ ಪಡೆದು 76 ವಿದ್ಯಾರ್ಥಿಗಳಿಗೆ ಪ್ರಾಂಶುಪಾಲನಿಂದ ಮೋಸ!

    ತಲಾ 1.10 ಲಕ್ಷದಂತೆ ಹಣ ಪಡೆದು 76 ವಿದ್ಯಾರ್ಥಿಗಳಿಗೆ ಪ್ರಾಂಶುಪಾಲನಿಂದ ಮೋಸ!

    ಕಾರವಾರ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

    ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಕಳೆದ 2016ರಿಂದ ಕಲ್ಪತರು ಎನ್ನುವ ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜು ಪ್ರಾರಂಭವಾಗಿತ್ತು. ಹೋಟೆಲ್ ಮ್ಯಾನೇಜ್‍ಮೆಂಟ್ ಕೋರ್ಸ್ ಮುಗಿಸಿದರೆ ವಿದೇಶದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ ಕಾಲೇಜಿನ ಪ್ರಾಂಶುಪಾಲ ಗಂಗಾಧರ್ ವಿದ್ಯಾರ್ಥಿಗಳನ್ನು ಕೋರ್ಸ್‍ಗೆ ದಾಖಲಾತಿ ಮಾಡಿಕೊಂಡಿದ್ದನು.

    ಕಾಲೇಜು ಶುಲ್ಕ ಎಂದು ಪ್ರತಿಯೊಬ್ಬರಿಂದ 60 ಸಾವಿರ ಹಣ ಸಹ ಪಡೆದಿದ್ದ. ಕೋರ್ಸ್ ಮುಗಿಸಿದ ವಿದ್ಯಾರ್ಥಿಗಳಿಗೆ ಹಾಂಕಾಂಗ್‍ನಲ್ಲಿ ಕೆಲಸ ಕೊಡಿಸುವುದಾಗಿ ಸುಮಾರು 76 ವಿದ್ಯಾರ್ಥಿಗಳಿಂದ ತಲಾ 1.10 ಲಕ್ಷದಂತೆ 83,60,000 ಲಕ್ಷ ಪಡೆದಿದ್ದಾನೆ. ಆದರೆ ಸಾಲಸೋಲ ಮಾಡಿ ಹಣ ಖರ್ಚು ಮಾಡಿದ್ದ ವಿದ್ಯಾರ್ಥಿಗಳು ಇದೀಗ ಕೆಲಸ ಇಲ್ಲದೆ ಕೊಟ್ಟ ಹಣವೂ ವಾಪಾಸ್ ಸಿಗದೇ ಬೀದಿಗೆ ಬಿದ್ದು ನ್ಯಾಯಕ್ಕಾಗಿ ಹೋರಾಡುತಿದ್ದಾರೆ.

    2016ರಿಂದ ಪ್ರಾಂಶುಪಾಲನಾಗಿ ಸೇರಿಕೊಂಡಿದ್ದ ಗಂಗಾಧರ್ ಕಾಲೇಜಿನಲ್ಲಿ ಮೊದಲ ಬ್ಯಾಚ್‍ನವರು ಕೋರ್ಸ್ ಮುಗಿಸಿ ಎರಡನೇ ಬ್ಯಾಚ್‍ನವರು ಪರೀಕ್ಷೆ ಬರೆದಿದ್ದು, ಕೆಲಸಕ್ಕಾಗಿ ಕಾಯುವ ವೇಳೆ ವಂಚನೆಗೊಳಗಾಗಿರುವುದು ತಿಳಿದು ಬಂದಿದೆ. ಅಲ್ಲದೆ ಒಳ್ಳೆಯವನಂತೆ ನಟಿಸಿ ಎಲ್ಲರ ಮೆಚ್ಚುಗೆ ಪಡೆದಿದ್ದನು.

    ವಿದೇಶದಲ್ಲಿ ಕೆಲಸ ಸಿಗುತ್ತೆ ಎಂದು ಎಲ್ಲರೂ ಹಣವನ್ನು ಕಟ್ಟಿದ್ದು ಪಾಸ್‍ಪೋರ್ಟ್ ಮಾಡಿಸಿಕೊಂಡ ನಂತರ ಪ್ರವಾಸಿಗರಿಗೆ ಕೊಡುವ ವೀಸಾವನ್ನು ಹೊರದೇಶಕ್ಕೆ ಕೆಲಸಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ನೀಡಿದ್ದನು. ಮೆಡಿಕಲ್ ಮಾಡಿಸಬೇಕು, ಬೇರೆ ಸರ್ಟಿಫಿಕೇಟ್ ಮಾಡಿಸಬೇಕು ಎಂದು ಹಲವು ಬಾರಿ ಈ ಪ್ರಾಂಶುಪಾಲ ವಿದ್ಯಾರ್ಥಿಗಳಿಂದ ಹಣ ಪಡೆದು ಪರಾರಿಯಾಗಿದ್ದಾನೆ.

  • ವಿದೇಶದಲ್ಲಿ ಗೆಳೆಯರಾದ ದರ್ಶನ್- ಸೃಜನ್‍ಗೆ ಸನ್ಮಾನ

    ವಿದೇಶದಲ್ಲಿ ಗೆಳೆಯರಾದ ದರ್ಶನ್- ಸೃಜನ್‍ಗೆ ಸನ್ಮಾನ

    ಬೆಂಗಳೂರು: 63ನೇ ಕನ್ನಡ ರಾಜ್ಯೋತ್ಸವದಂದು ಗೆಳೆಯರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿದೆ.

    ಇತ್ತೀಚೆಗೆ ಕತಾರ್ ದೇಶದಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಆ ದೇಶದ ಕನ್ನಡ ಸಂಘವೊಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮಕ್ಕೆ ದರ್ಶನ್ ಹಾಗೂ ಸೃಜನ್ ಲೋಕೇಶ್ ಅತಿಥಿಯಾಗಿ ಭಾಗವಹಿಸಿದ್ದರು.

    ಅಲ್ಲಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಹಾಗೂ ಸೃಜನ್ ಅವರನ್ನು ಅಲ್ಲಿನ ಸಂಘ ಗೌರವಿಸಿದೆ. ಕತಾರ್ ನಲ್ಲಿದ್ದ ಕನ್ನಡಿಗರು ತಮ್ಮ ನೆಚ್ಚಿನ ನಟ ದರ್ಶನ್ ಹಾಗೂ ಸೃಜನ್ ಅವರನ್ನು ನೋಡಿ ಸಂತೋಷಪಟ್ಟಿದ್ದಾರೆ.

    ಸದ್ಯ ದರ್ಶನ್ ಹಾಗೂ ಸೃಜನ್ ಅವರನ್ನು ಸನ್ಮಾನ ಮಾಡುತ್ತಿರುವ ಫೋಟೋವನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಸನ್ಮಾನ ಮಾಡಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ.

    ಕಳೆದ ವರ್ಷ ದರ್ಶನ್ ಅವರು ಬ್ರಿಟಿಷ್ ಪಾರ್ಲಿಮೆಂಟ್‍ನಲ್ಲಿ ಯುಕೆ ಸರ್ಕಾರ ನೀಡಿದ್ದ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಈ ಮೂಲಕ ಪ್ರಶಸ್ತಿಗೆ ಭಾಜನಾಗಿರುವ ದಕ್ಷಿಣ ಭಾರತ ಹಾಗೂ ಕನ್ನಡ ಮೊದಲ ಎಂಬ ಹೆಗ್ಗಳಿಕೆಗೆ ದರ್ಶನ್ ಅವರು ಪಾತ್ರರಾಗಿದ್ದರು.

    ಲಂಡನ್ ಸರ್ಕಾರದಿಂದ ಪ್ರತಿ ವರ್ಷ ವಿವಿಧ ವಲಯಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರಿಗೆ ಸನ್ಮಾನಿಸಲಾಗುತ್ತದೆ. ಭಾರತ ಮೂಲದ ವಿರೇಂದ್ರ ಶರ್ಮಾ ಲಂಡನ್ ಪಾರ್ಲಿಮೆಂಟ್‍ನಲ್ಲಿ ಸಂಸದರಾಗಿದ್ದು, ಈ ಹಿಂದೆ ಸಲ್ಮಾನ್ ಖಾನ್, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews