Tag: abu dhabi

  • ಅಬುಧಾಬಿ ಯುವರಾಜ ಅಲ್ ನಹ್ಯಾನ್ ಭಾರತಕ್ಕೆ ಆಗಮನ

    ಅಬುಧಾಬಿ ಯುವರಾಜ ಅಲ್ ನಹ್ಯಾನ್ ಭಾರತಕ್ಕೆ ಆಗಮನ

    ನವದೆಹಲಿ: ಅಬುಧಾಬಿಯ (Abu Dhabi) ಯುವರಾಜ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ (Sheikh Khaled bin Mohamed bin Zayed Al Nahya) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆಹ್ವಾನದ ಮೇರೆಗೆ ಭಾರತಕ್ಕೆ (India) ಮೊದಲ ಅಧಿಕೃತ ಭೇಟಿ ನೀಡಿದ್ದಾರೆ. ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ವಿಮಾನ ನಿಲ್ದಾಣದಲ್ಲಿ ಗಣ್ಯರನ್ನು ಔಪಚಾರಿಕವಾಗಿ ಸ್ವಾಗತಿಸಿದರು.

    ಅಬುಧಾಬಿಯ ಯುವರಾಜರಾದ ನಂತರ ಜಾಯೆದ್ ಅಲ್ ನಹ್ಯಾನ್ ಅವರ ಮೊದಲ ಭಾರತ ಭೇಟಿ ಇದಾಗಿದೆ ಮತ್ತು ಯುಎಇ ಸರ್ಕಾರದ ಹಲವಾರು ಸಚಿವರು ಮತ್ತು ವ್ಯಾಪಾರ ನಿಯೋಗಗಳು ಅವರೊಂದಿಗೆ ಆಗಮಿಸಿವೆ. ಯುವರಾಜ ನಹ್ಯಾನ್ ಸೆ.9ರಂದು ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದು, ದ್ವಿಪಕ್ಷೀಯ ಸಹಕಾರದ ವ್ಯಾಪಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ ಮತ್ತು ರಾಜ್​ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಲಿದ್ದಾರೆ.

    ಸೆಪ್ಟೆಂಬರ್ 10ರಂದು ನಹ್ಯಾನ್ ಮುಂಬೈಗೆ ಭೇಟಿ ನೀಡಲಿದ್ದು, ವ್ಯಾಪಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಎರಡೂ ದೇಶಗಳ ಉದ್ಯಮಿಗಳು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

    ಭಾರತ ಮತ್ತು ಯುಎಇ ಐತಿಹಾಸಿಕವಾಗಿ ನಿಕಟ ಮತ್ತು ಸ್ನೇಹಪರ ಸಂಬಂಧಗಳನ್ನು ಹೊಂದಿವೆ. ಇತ್ತೀಚಿನ ವರ್ಷಗಳಲ್ಲಿ, ಭಾರತ ಮತ್ತು ಯುಎಇ ನಡುವೆ ರಾಜಕೀಯ, ವ್ಯಾಪಾರ ಕ್ಷೇತ್ರಗಳಲ್ಲಿ ಸಂಬಂಧ ಬಲಗೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

    ಜನವರಿಯಲ್ಲಿ, ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಭಾರತಕ್ಕೆ ಭೇಟಿ ನೀಡಿ ಮೋದಿ ಅವರೊಂದಿಗಿನ ಚರ್ಚೆಯ ಸಮಯದಲ್ಲಿ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ವಿಷಯಗಳ ಬಗ್ಗೆ ಚರ್ಚಿಸಿದ್ದರು. ಅಲ್ಲದೆ ಅವರು ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯ 10 ನೇ ಆವೃತ್ತಿಯಲ್ಲಿ ಭಾಗವಹಿಸಿದ್ದರು.

  • ಪದವಿ ಕಾರ್ಯಕ್ರಮದಲ್ಲಿ Free Palestine ಘೋಷಣೆ – ಯುಎಇಯಿಂದ ವಿದ್ಯಾರ್ಥಿ ಗಡಿಪಾರು

    ಪದವಿ ಕಾರ್ಯಕ್ರಮದಲ್ಲಿ Free Palestine ಘೋಷಣೆ – ಯುಎಇಯಿಂದ ವಿದ್ಯಾರ್ಥಿ ಗಡಿಪಾರು

    ಅಬುದಾಭಿ: ಪದವಿ ಪ್ರದಾನ ಸಮಾರಂಭದಲ್ಲಿ ಫ್ರೀ ಪ್ಯಾಲೆಸ್ತೀನ್ (Free Palestine) ಘೋಷಣೆ  ಕೂಗಿದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯನ್ನು ಮುಸ್ಲಿಂ ರಾಷ್ಟ್ರ ಯುಎಇ (UAE) ದೇಶದಿಂದಲೇ ಗಡಿಪಾರು ಮಾಡಿದೆ.

    ಮೇ ತಿಂಗಳಲ್ಲಿ ಅಬುಧಾಬಿಯಲ್ಲಿರುವ ನ್ಯೂಯಾರ್ಕ್ ವಿಶ್ವವಿದ್ಯಾನಿಲಯದ (New York University) ಪದವಿ ಪ್ರದಾನ ಸಮಾರಂಭದಲ್ಲಿ ಸಾಂಪ್ರದಾಯಿಕ ಪ್ಯಾಲೆಸ್ಟೀನಿಯನ್ ಕಪ್ಪು-ಬಿಳುಪು ಕೆಫಿಯೆಹ್ ಸ್ಕಾರ್ಫ್ ಅನ್ನು ಧರಿಸಿದ ವಿದ್ಯಾರ್ಥಿಯೊಬ್ಬ ಫ್ರೀ ಪ್ಯಾಲೆಸ್ತೀನ್  ಎಂದು ಘೋಷಣೆ ಕೂಗಿದ್ದ. ಇದನ್ನೂ ಓದಿ: ಚಾರ್ಮಾಡಿಯಲ್ಲಿ ಪ್ರವಾಸಿಗರ ಹುಚ್ಚಾಟ – ಬುದ್ಧಿ ಕಲಿಸಲು ಬಟ್ಟೆ ಹೊತ್ತೊಯ್ದ ಪೊಲೀಸರು

    ಘೋಷಣೆ ಕೂಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದ ಹಿನ್ನೆಲೆಯಲ್ಲಿ ಆತನನ್ನು ಯುಎಇಯಿಂದ ಗಡಿಪಾರು (Deported) ಮಾಡಲಾಗಿದೆ ಎಂದು ವರದಿಯಾಗಿದೆ. ಈ ವಿಚಾರಕ್ಕೆ ಯುಎಇ ಸರ್ಕಾರವನ್ನು ಸಂಪರ್ಕಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮಾಧ್ಯಮ ತನ್ನ ವರದಿಯಲ್ಲಿ ತಿಳಿಸಿದೆ.

    ಪದವಿ ಪ್ರದಾನ ಸಮಾರಂಭಕ್ಕೆ ಮೊದಲೇ ವಿದ್ಯಾರ್ಥಿಗಳಿಗೆ ಎಲ್ಲಾ ನಿಯಮಗಳನ್ನು ತಿಳಿಸಲಾಗಿತ್ತು. ಕ್ಯಾಂಪಸ್‌ನಲ್ಲಿ ಎಲ್ಲಿಯೂ ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶನಕ್ಕೆ ಅನುಮತಿ ನೀಡುವುದಿಲ್ಲ. ವಸತಿ ಕಟ್ಟಡಗಳಲ್ಲಿಯೂ ಸಹ ಧ್ವಜ ಹಾರಿಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿತ್ತು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾನೆ.

  • ಪ್ರಯಾಣಿಕರನ್ನು ಸಾಗಿಸುವ ಡ್ರೋನ್‌ – ಮಧ್ಯಪ್ರಾಚ್ಯದ ಅಬುಧಾಬಿಯಲ್ಲಿ ಪ್ರಯೋಗ ಯಶಸ್ವಿ

    ಪ್ರಯಾಣಿಕರನ್ನು ಸಾಗಿಸುವ ಡ್ರೋನ್‌ – ಮಧ್ಯಪ್ರಾಚ್ಯದ ಅಬುಧಾಬಿಯಲ್ಲಿ ಪ್ರಯೋಗ ಯಶಸ್ವಿ

    – ಪ್ಯಾಸೆಂಜರ್‌ ಹೊತ್ತೊಯ್ಯುವ ಮೊದಲ ಡ್ರೋನ್‌ ಎಂಬ ಹೆಗ್ಗಳಿಕೆ

    ಅಬುಧಾಬಿ: ಪ್ರಯಾಣಿಕರನ್ನು ಹೊತ್ತೊಯ್ಯುವ ಮೊದಲ ಡ್ರೋನ್‌ (Passenger-Carrying Drone) ಪ್ರಯೋಗವು ಮಧ್ಯಪ್ರಾಚ್ಯದ ಯುಎಇ ರಾಜಧಾನಿ ಅಬುಧಾಬಿಯಲ್ಲಿ (Abu Dhabi) ಯಶಸ್ವಿಯಾಗಿ ನಡೆದಿದೆ.

    ಅಬುಧಾಬಿ ಮೊಬಿಲಿಟಿ ವೀಕ್‌ನಲ್ಲಿ (24 ಏಪ್ರಿಲ್‌ನಿಂದ ಮೇ 1) ಮಲ್ಟಿ ಲೆವೆಲ್ ಗ್ರೂಪ್, ಫಿನ್‌ಟೆಕ್ ಸಹಯೋಗದೊಂದಿಗೆ ಎರಡು ಡ್ರೋನ್‌ಗಳ ಪ್ರಯೋಗ ನಡೆಯಿತು. ಇದನ್ನೂ ಓದಿ: ಭಾರತಕ್ಕೆ ರಾಜತಾಂತ್ರಿಕ ಗೆಲುವು – ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರು ಬಿಡುಗಡೆ

    350 ಕೆಜಿ ಪೇಲೋಡ್‌ನೊಂದಿಗೆ 25 ಕಿಮೀ ಗಿಂತ ಹೆಚ್ಚು ಪ್ರಯಾಣಿಸುವ ಸಾಮರ್ಥ್ಯವಿರುವ ಐದು ಆಸನಗಳ ಡ್ರೋನ್‌ ಮೊದಲ ಪ್ರಯೋಗದಲ್ಲಿ ಪಾಲ್ಗೊಂಡಿತ್ತು. ಎರಡನೇ ಪ್ರಯೋಗವು, ಸಣ್ಣ ಗಾತ್ರದ ಡ್ರೋನ್ ಅನ್ನು ಒಳಗೊಂಡಿತ್ತು. 20 ನಿಮಿಷಗಳ ಅವಧಿಯಲ್ಲಿ 35 ಕಿಮೀ ವರೆಗೆ ಇಬ್ಬರು ಪ್ರಯಾಣಿಕರನ್ನು ಹೊತ್ತು ಪ್ರಯಾಣಿಸುವ ಸಾಮರ್ಥ್ಯವನ್ನು ಇದು ಹೊಂದಿದೆ.

    ಐದು ಆಸನಗಳ ಡ್ರೋನ್, 123 ಕಿಮೀ ವಿಸ್ತಾರವಾದ ಪ್ರದೇಶದಲ್ಲಿ 40 ನಿಮಿಷಗಳ ದಾಖಲೆ ಅವಧಿಯ ಹಾರಾಟ ನಡೆಸಿದೆ. ಡ್ರೋನ್‌ ಹಾರಾಟದಲ್ಲೇ ಇದು ದಾಖಲೆ ಬರೆದಿದೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ – ಮಲಗಿದ್ದಲ್ಲೇ 7 ಕಾರ್ಮಿಕರು ಸಾವು

    MLG ಮಂಡಳಿಯ ಸದಸ್ಯ ಮೊಹಮ್ಮದ್ ಹಮದ್ ಅಲ್ ಧಹೇರಿ ಮಾತನಾಡಿ, ಈ ಐತಿಹಾಸಿಕ ಕ್ಷಣದ ಭಾಗವಾಗಿರುವುದು ನಿಜಕ್ಕೂ ಹರ್ಷದಾಯಕವಾಗಿದೆ. ತಂತ್ರಜ್ಞಾನ ಮತ್ತು ವಾಯುಯಾನದ ಏಕೀಕರಣವು ನಮ್ಮ ರಾಷ್ಟ್ರದ ಪ್ರಗತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

  • ಹುಟ್ಟುಹಬ್ಬ ಆಚರಿಸಿಕೊಳ್ಳಲು ಅಬುಧಾಬಿಗೆ ಹಾರಿದ ರಶ್ಮಿಕಾ

    ಹುಟ್ಟುಹಬ್ಬ ಆಚರಿಸಿಕೊಳ್ಳಲು ಅಬುಧಾಬಿಗೆ ಹಾರಿದ ರಶ್ಮಿಕಾ

    ನಾಳೆ ರಶ್ಮಿಕಾ ಮಂದಣ್ಣ (Rashmika Mandanna) ಹುಟ್ಟು ಹಬ್ಬ. ಈ ಬಾರಿಯ ಹುಟ್ಟು ಹಬ್ಬಕ್ಕೆ ಹಲವಾರು ಸರ್ ಪ್ರೈಸ್ ಗಳಿವೆ. ಈ ಎಲ್ಲ ಸರ್ ಪ್ರೈಸ್ ಗಳ ಮಧ್ಯೆ ರಶ್ಮಿಕಾ ಅಬು ಧಾಬಿಗೆ (Abu Dhabi) ಹಾರಿದ್ದಾರೆ. ಈ ಬಾರಿ ಅವರು ಅಲ್ಲಿಯೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಿದ್ದಾರಂತೆ. ಇದು ರಶ್ಮಿಕಾ ಅವರ 28ನೇ ವರ್ಷದ ಹುಟ್ಟು ಹಬ್ಬವಾಗಿದೆ.

    ತಮ್ಮ ಬರ್ತ್‌ಡೇ (Birthday) ದಿನವೇ ಅವರ ಫ್ಯಾನ್ಸ್‌ಗೆ ಭರ್ಜರಿ ಗಿಫ್ಟ್ ಸಿಗಲಿದೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಪುಷ್ಪ ಬೆಡಗಿಯ ಹೊಸ ಸಿನಿಮಾದ ಅಪ್‌ಡೇಟ್ ಸಿಗಲಿದೆ.

    ಕನ್ನಡತಿ ರಶ್ಮಿಕಾ ಮಂದಣ್ಣ ತಮ್ಮ ಜನ್ಮದಿನದಂದು ತಾವು ಅಭಿನಯಿಸುತ್ತಿರುವ ಬಹುನಿರೀಕ್ಷಿತ ‘ದಿ ಗರ್ಲ್‌ಫ್ರೆಂಡ್’ (The Girlfriend) ಚಿತ್ರದ ಮೊದಲ ಟೀಸರ್ ರಿಲೀಸ್ ಆಗಲಿದೆ. ಈ ಚಿತ್ರದ ಕಥೆ ಏನು? ಇದು ಎಂತಹ ಸಿನಿಮಾ, ಇದರಲ್ಲಿ ನಟಿ ರಶ್ಮಿಕಾ ಮಂದಣ್ಣ ಮಾಡುತ್ತಿರುವ ಪಾತ್ರವಾದರೂ ಯಾವುದು ಎಂಬ ಕುತೂಹಲಕ್ಕೆ ಉತ್ತರ ಚಿತ್ರದ ಟೀಸರ್ ಮೂಲಕ ಸಿಗಲಿದೆ. ಈ ಸಿನಿಮಾ ಬಹುಭಾಷೆಗಳಲ್ಲಿ ತೆರೆಗೆ ಬರಲಿದೆ. ಎಲ್ಲಾ ಭಾಷೆಗಳಲ್ಲೂ ನಟಿ ರಶ್ಮಿಕಾನೇ ಧ್ವನಿ ನೀಡಿರೋದು ಮತ್ತೊಂದು ಹೈಲೆಟ್ ಆಗಿದೆ.

     

    ‘ದಿ ಗರ್ಲ್‌ಫ್ರೆಂಡ್’ ಸಿನಿಮಾ ಒಂದೇ ಅಲ್ಲ, ಇದರ ಜೊತೆಗೆ ಹೊಸ ಸಿನಿಮಾ ಅನೌನ್ಸ್ ಕೂಡ ಆಗಲಿದೆ. ಈ ವರ್ಷ ಏನೆಲ್ಲಾ ಅಪ್‌ಡೇಟ್ ಸಿಗಲಿದೆ ಎಂಬುದನ್ನ ಕಾದುನೋಡಬೇಕಿದೆ. ಸದ್ಯ ಪುಷ್ಪ 2, ಅನಿಮಲ್ ಪಾರ್ಕ್, ರೈನ್‌ಬೋ, ದಿ ಗರ್ಲ್‌ಫ್ರೆಂಡ್, ಚಾವಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿಯಾಗಿದ್ದಾರೆ.

  • ದುಬೈನಲ್ಲಿ ಗೌಡರ ಗೌಜಿ ಗಮ್ಮತ್ತು-2024 – ಒಕ್ಕಲಿಗ ಸಮುದಾಯಗಳ ಕುಟುಂಬ ಸಮಾಗಮ

    ದುಬೈನಲ್ಲಿ ಗೌಡರ ಗೌಜಿ ಗಮ್ಮತ್ತು-2024 – ಒಕ್ಕಲಿಗ ಸಮುದಾಯಗಳ ಕುಟುಂಬ ಸಮಾಗಮ

    ಅಬುಧಾಬಿ: ದುಬೈನ ಒಕ್ಕಲಿಗ ಸಂಘದಿಂದ (Vokkaliga Organisation) ಇತ್ತೀಚೆಗೆ ನಡೆದ ಒಕ್ಕಲಿಗರ ವಿಶೇಷ ವಿಹಾರ ಕೂಟವು ಕಣ್ಮನ ಸೆಳೆಯಿತು.

    ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಒಕ್ಕಲಿಗ ಕುಟುಂಬಗಳ ಸಮಾಗಮವಾಯಿತು. ದುಬೈ (Dubai) ಒಕ್ಕಲಿಗ ಸಂಘದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಂಘದ ಅಧ್ಯಕ್ಷರಾದ ಕಿರಣ್ ಗೌಡ ಆವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಒಕ್ಕಲಿಗ ಸಮುದಾಯದವರು (Vokkaliga Community) ಪಾಲ್ಗೊಂಡಿದ್ದರು.

    ಮಹಿಳೆಯರು ಮಕ್ಕಳು ಸೇರಿದಂತೆ ನೂರಾರು ಮಂದಿ ಒಂದೆಡೆ ಸೇರಿ ವಿವಿಧ ಆಟೋಟ ಸ್ಪರ್ಧೆಗಳಲ್ಲೂ ಪಾಲ್ಗೊಂಡಿದ್ದರು. ಮಕ್ಕಳು ಮತ್ತು ಹಿರಿಯರಿಗೆ ವಿಶೇಷ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದನ್ನೂ ಓದಿ: ಬ್ರಿಟನ್ ಲೇಖಕಿ ನಿತಾಶಾ ಕೌಲ್‌ಗೆ ನೋ ಎಂಟ್ರಿ – ಬೆಂಗಳೂರು ವಿಮಾನ ನಿಲ್ದಾಣದಿಂದಲೇ ವಾಪಸ್

    ಇದೇ ಸಂದರ್ಭದಲ್ಲಿ ಹೊಸದಾಗಿ ಆಯ್ಕೆಯಾದ ಸಮಿತಿಯ ಸದ್ಯಸರಿಗೆ ಅಭಿನಂದನೆ ಸಲ್ಲಿಸಲಾಯ್ತು. ಇದೇ ವೇಳೆ ಗೌಡರ ಶೈಲಿಯ ಊಟೋಪಚಾರಗಳೊಂದಿಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಕಣ್ಮನ ಸೆಳೆದವು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಜ್‌ ಷರೀಫ್‌ ಪುತ್ರಿ ಆಯ್ಕೆ

  • ಅಬುಧಾಬಿಯ ಹಿಂದೂ ದೇವಾಲಯದ ಉದ್ಘಾಟನೆಯಲ್ಲಿ ಅಕ್ಷಯ್, ವಿವೇಕ್ ಒಬೆರಾಯ್

    ಅಬುಧಾಬಿಯ ಹಿಂದೂ ದೇವಾಲಯದ ಉದ್ಘಾಟನೆಯಲ್ಲಿ ಅಕ್ಷಯ್, ವಿವೇಕ್ ಒಬೆರಾಯ್

    ರಬ್ಬರ ನೆಲದಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಾಲಯವನ್ನು ಭಾರತದ ಪ್ರಧಾನಿ ನರೇಂದ್ರ (Narendra Modi) ಮೋದಿ ಅವರು ಇಂದು (ಫೆ.14) ಲೋಕಾರ್ಪಣೆಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar), ವಿವೇಕ್ ಒಬೆರಾಯ್, ದಿಲೀಪ್ ಜೋಶಿ, ಸಿಂಗರ್ ಶಂಕರ್ ಮಹಾದೇವನ್ ಭಾಗಿಯಾಗಿದ್ದಾರೆ.

    ಅಬುಧಾಬಿಯ ಹಿಂದೂ ದೇವಾಲಯದ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿರುವುದ್ದಕ್ಕೆ ಅಕ್ಷಯ್ ಕುಮಾರ್ ಮತ್ತು ವಿವೇಕ್ ಒಬೆರಾಯ್ ಸಂತಸ ವ್ಯಕ್ತಪಡಿಸಿದ್ದಾರೆ. ಇದು ಅತ್ಯಂತ ಸುಂದರವಾದ ದೇವಾಲಯವಾಗಿದ್ದು, ಇಂದು ದೇವರ ಸೇವೆ ಮಾಡುವ ಸೌಭಾಗ್ಯ ನನಗಿತ್ತು ಎಂದು ವಿವೇಕ್ ಒಬೆರಾಯ್ (Vivek Oberoi) ಮಾತನಾಡಿದ್ದಾರೆ.

    ಅಂದಹಾಗೆ, ಅರಬ್ ಸಂಯುಕ್ತ ಸಂಸ್ಥಾನದ (ಯುಎಇ) ಬೋಚಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ ಹಿಂದೂ ದೇವಾಲಯವನ್ನು ಮೋದಿ (Narendra Modi) ಫೆ.14ರ ಸಂಜೆ ಉದ್ಘಾಟಿಸಿದರು.

    ದೇವಾಲಯ ಉದ್ಘಾಟನೆಗೂ ಮುನ್ನ ಮಂದಿರದ ಹೊರಗಡೆ ಕಲ್ಯಾಣಿಗೆ ಗಂಗಾ ಪೂಜೆ ಕಾರ್ಯವನ್ನು ಮೋದಿ ನೆರವೇರಿಸಿದರು. ನಂತರ ಪ್ರವೇಶದ್ವಾರದಲ್ಲಿ ಟೇಪ್ ಕತ್ತರಿಸುವ ಮೂಲಕ ದೇವಾಲಯವನ್ನು ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ಪ್ರಧಾನಿ ಮೋದಿಗೆ ಈಶ್ವರಚರಣದಾಸ ಸ್ವಾಮೀಜಿ ಸೇರಿದಂತೆ ಇತರೆ ಸ್ವಾಮೀಜಿಗಳು ಸಾಥ್ ನೀಡಿದರು. ಈ ವೇಳೆ ಸ್ವಾಮೀಜಿಗಳು ಭವ್ಯ ಮಂದಿರದ ರಚನೆ ಕುರಿತು ಮೋದಿ ಅವರಿಗೆ ಮಾಹಿತಿ ನೀಡಿದರು.

    ನಂತರ ದೇವಾಲಯದಲ್ಲಿ ಮೋದಿ ಆರತಿ ಬೆಳಗಿದರು. ಮಂದಿರದ ದೇವರಿಗೆ ಪುಷ್ಪವನ್ನು ಅರ್ಪಿಸಿ ಪ್ರಾರ್ಥಿಸಿದರು. 27 ಎಕರೆ ಜಾಗದಲ್ಲಿ 900 ಕೋಟಿ ರೂ. ವೆಚ್ಚದಲ್ಲಿ ದೇವಾಲಯ ನಿರ್ಮಿಸಲಾಗಿದೆ.

  • ಭಾರತೀಯ ಕಾರ್ಮಿಕರಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ದುಬೈನಲ್ಲಿ ಭೂಮಿ: UAE ಘೋಷಣೆಗೆ ಮೋದಿ ಕೃತಜ್ಞತೆ

    ಭಾರತೀಯ ಕಾರ್ಮಿಕರಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ದುಬೈನಲ್ಲಿ ಭೂಮಿ: UAE ಘೋಷಣೆಗೆ ಮೋದಿ ಕೃತಜ್ಞತೆ

    ಅಬುಧಾಬಿ: ಭಾರತೀಯ ಕಾರ್ಮಿಕರಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ದುಬೈನಲ್ಲಿ ಭೂಮಿ ನೀಡುವುದಾಗಿ ಯುಎಇ ಉಪಾಧ್ಯಕ್ಷರು ಘೋಷಿಸಿದ್ದಾರೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಕೃತಜ್ಞತೆ ಸಲ್ಲಿಸಿದ್ದಾರೆ.

    ಅಬುಧಾಬಿಯಲ್ಲಿ (Abu Dhabi) ಹಿಂದೂ ದೇವಾಲಯ ಉದ್ಘಾಟಿಸಿ ನಂತರ ಮಾತನಾಡಿದ ಅವರು, ಇಲ್ಲಿಯವರೆಗೆ ಬುರ್ಜ್ ಖಲೀಫಾ, ಫ್ಯೂಚರ್ ಮ್ಯೂಸಿಯಂ, ಶೇಖ್ ಜಾಯೆದ್ ಮಸೀದಿ ಮತ್ತು ಇತರ ಹೈಟೆಕ್ ಕಟ್ಟಡಗಳಿಗೆ ಹೆಸರುವಾಸಿಯಾಗಿದ್ದ ಯುಎಇ ಈಗ ತನ್ನ ಗುರುತಿಗೆ ಮತ್ತೊಂದು ಸಾಂಸ್ಕೃತಿಕ ಅಧ್ಯಾಯವನ್ನು ಸೇರಿಸಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸುವ ವಿಶ್ವಾಸವಿದೆ. ಇದರಿಂದ ಯುಎಇಗೆ ಬರುವವರ ಸಂಖ್ಯೆಯೂ ಹೆಚ್ಚುತ್ತದೆ ಮತ್ತು ಜನರಿಂದ ಜನರ ಸಂಪರ್ಕವೂ ಹೆಚ್ಚುತ್ತದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: UAE ಅಧ್ಯಕ್ಷರಿಗೆ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಿ: ಮೋದಿ ಮನವಿ

    ಇಡೀ ಭಾರತ ಮತ್ತು ಪ್ರಪಂಚದಾದ್ಯಂತ ವಾಸಿಸುವ ಲಕ್ಷಾಂತರ ಭಾರತೀಯರ ಪರವಾಗಿ, ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತು ಯುಎಇ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

    ಯುಎಇ ಸುವರ್ಣ ಅಧ್ಯಾಯ ಬರೆದಿದೆ. ದೇವಾಲಯದ ಉದ್ಘಾಟನೆಯು ವರ್ಷಗಳ ಕಠಿಣ ಪರಿಶ್ರಮವನ್ನು ಹೊಂದಿದೆ. ಅನೇಕರ ಕನಸು ದೇವಾಲಯದೊಂದಿಗೆ ಸಂಪರ್ಕ ಹೊಂದಿದೆ. ಸ್ವಾಮಿನಾರಾಯಣ ಅವರ ಆಶೀರ್ವಾದವೂ ಎಲ್ಲರ ಮೇಲಿದೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

    ಈ ದೇವಾಲಯವು ಏಕತೆ ಮತ್ತು ಸಾಮರಸ್ಯದ ಸಂಕೇತವಾಗಲಿದೆ. ಮಂದಿರ ನಿರ್ಮಾಣದಲ್ಲಿ ಯುಎಇ ಸರ್ಕಾರದ ಪಾತ್ರ ಶ್ಲಾಘನೀಯ. ನಾನು ಮಾತೆ ಭಾರತಿಯನ್ನು ಆರಾಧಿಸುತ್ತೇನೆ. ದೇವರು ನನಗೆ ಕೊಟ್ಟಿರುವ ಪ್ರತಿಯೊಂದು ಕ್ಷಣವೂ ಭಾರತಮಾತೆಗಾಗಿ ಎಂದು ಮೋದಿ ತಿಳಿಸಿದ್ದಾರೆ.

  • ಅರಬ್ಬರ ನೆಲದಲ್ಲಿ ಹಿಂದೂ ಮಂದಿರ – ವಿಶ್ವದ ಮೂರನೇ ಅತಿ ದೊಡ್ಡ ದೇವಸ್ಥಾನ ಇಂದು ಲೋಕಾರ್ಪಣೆ

    ಅರಬ್ಬರ ನೆಲದಲ್ಲಿ ಹಿಂದೂ ಮಂದಿರ – ವಿಶ್ವದ ಮೂರನೇ ಅತಿ ದೊಡ್ಡ ದೇವಸ್ಥಾನ ಇಂದು ಲೋಕಾರ್ಪಣೆ

    ಅಬುಧಾಬಿ: ಇಂದು (ಫೆ.14) ಅಬುಧಾಬಿಯಲ್ಲಿ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ ಅಥವಾ ಬಿಎಪಿಎಸ್ (BAPS) ಸೊಸೈಟಿ ನಿರ್ಮಿಸಿರುವ ವಿಸ್ತಾರವಾದ ಹಿಂದೂ ದೇವಾಲಯವನ್ನು (Hindu Temple) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಲಿದ್ದಾರೆ.

    27 ಎಕರೆ ಭೂಮಿಯಲ್ಲಿ ನಿರ್ಮಿಸಲಾದ ಈ ದೇವಾಲಯ ಅಬುಧಾಬಿಯ (Abu Dhabi) ಮೊದಲ ಹಿಂದೂ ಕಲ್ಲಿನ ದೇವಾಲಯವಾಗಿದ್ದು, ಭಾರತೀಯ ಸಂಸ್ಕೃತಿಯ ವಿಶಿಷ್ಟ ಮಿಶ್ರಣ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಗುರುತನ್ನು ಹೊಂದಿದೆ. ಇದನ್ನೂ ಓದಿ: ಫೆ.14 ಕ್ಕೆ ಬಿಎಪಿಎಸ್‌ ಹಿಂದೂ ದೇವಾಲಯ ಉದ್ಘಾಟನೆ; ಎಲ್ಲಿ? ದೇವಸ್ಥಾನದ ವೈಶಿಷ್ಟ್ಯವೇನು?

    ಪ್ರಧಾನಿ ನರೇಂದ್ರ ಮೋದಿಯವರ ಎರಡು ದಿನದ ಅರಬ್ ಪ್ರವಾಸದಲ್ಲಿ ಈ ದೇವಾಲಯದ ಉದ್ಘಾಟನೆಯನ್ನು ಮಾಡಲಿದ್ದಾರೆ. ಇದು ಯುಎಇಯಲ್ಲಿ ಉದ್ಘಾಟನೆಗೊಂಡ ಎರಡನೇ ಅತಿ ದೊಡ್ಡ ಹಿಂದೂ ದೇವಾಲಯವಾಗಿದೆ. ಮಾರ್ಚ್ 1 ರಂದು ಸಾರ್ವಜನಿಕರಿಗೆ ತೆರೆಯಲಾಗುವ ದೇವಾಲಯದ ಸಮರ್ಪಣೆ ಸಮಾರಂಭಕ್ಕೂ ಪ್ರಧಾನಿ ಮೋದಿ ನೇತೃತ್ವ ವಹಿಸಲಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 5 ವರ್ಷ: 2019ರ ಫೆ.14 ರಂದು ನಡೆದಿದ್ದು ಏನು?

    2024ರ ವರ್ಷ ಹಿಂದೂಗಳಿಗೆ ಹರ್ಷ ತಂದಿದೆ. ಹೊಸ ವರ್ಷದ ಮೊದಲ ತಿಂಗಳಲ್ಲೇ ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ಸಂತಸ ಒಂದುಕಡೆಯಾದರೆ, 2ನೇ ತಿಂಗಳಲ್ಲಿ ಮುಸ್ಲಿಮರ ನೆಲದಲ್ಲಿ ಮೊಟ್ಟ ಮೊದಲ ಐತಿಹಾಸಿಕ ಹಿಂದೂ ದೇವಾಲಯ ಲೋಕಾರ್ಪಣೆ ಕಣ್ತುಂಬಿಕೊಳ್ಳುವ ಸೌಭಾಗ್ಯ ಹಿಂದೂಗಳಿಗೆ ಒಲಿದು ಬಂದಿದೆ. ಇದನ್ನೂ ಓದಿ: ಹೃದಯದ ಮೌನ.. ಹೃದಯಕೆ ಸೀದಾ.. ತಲುಪುವ ಹಾಗೆ ಮಾತಾಡು ನೀ…….

    ಮುಸ್ಲಿಮರ ನೆಲದಲ್ಲಿ ಲೋಕಾರ್ಪಣೆಗೊಳ್ಳುತ್ತಿರುವ ಮೊದಲ ಬಿಎಪಿಎಸ್ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಈ ದೇವಾಲಯ ಪಾತ್ರವಾಗಲಿದೆ. ಈ ದೇವಾಲಯವು ಭಾರತದ ಹೊರಗಿನ ಅತ್ಯಂತ ದೊಡ್ಡ ಮತ್ತು ಅತ್ಯಂತ ಸುಂದರವಾದ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ಪಶ್ಚಿಮ ಏಷ್ಯಾದ ಅತಿದೊಡ್ಡ ಹಿಂದೂ ದೇವಾಲಯವೂ ಹೌದು. ಇದನ್ನೂ ಓದಿ: ಉಡುಪಿಯಲ್ಲಿ ನಾಲ್ವರ ಹತ್ಯೆ ಕೇಸ್‌ – ಆಯ್ನಾಜ್ ಮೇಲಿನ ವಿಪರೀತ ವ್ಯಾಮೋಹವೇ ಕೊಲೆಗೆ ಕಾರಣ

    ಫೆಬ್ರವರಿ 2018 ರಲ್ಲಿ ಪ್ರಧಾನಿ ಮೋದಿ ಅವರು ದೇವಾಲಯದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಡಿಸೆಂಬರ್ 2019ರಲ್ಲಿ ನಿರ್ಮಾಣ ಪ್ರಾರಂಭವಾಯಿತು. ದೇವಾಲಯವನ್ನು 5.4 ಹೆಕ್ಟೇರ್ ಭೂಮಿ ಜಾಗದಲ್ಲಿ ನಿರ್ಮಿಸಲಾಗುತ್ತಿದೆ. 700 ಕೋಟಿ ರೂ. ವೆಚ್ಚದಲ್ಲಿ ದೇವಾಲಯ ನಿರ್ಮಿಸಲಾಗಿದೆ. ಇದನ್ನೂ ಓದಿ: ಭಾರತ ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ- ಅಬುಧಾಬಿಯಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ

  • ಭಾರತ ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ- ಅಬುಧಾಬಿಯಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ

    ಭಾರತ ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ- ಅಬುಧಾಬಿಯಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ

    ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನ (UAE)  ಮೊದಲ ಹಿಂದೂ ದೇವಾಲಯ ಸ್ವಾಮಿನಾರಾಯಣ್ ಮಂದಿರದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ತೆರಳಿದ್ದಾರೆ. ಇಂದು (ಮಂಗಳವಾರ) ಅಬುಧಾಬಿಯ (Abu Dhabi) ಜಾಯೆದ್ ಸ್ಪೋರ್ಟ್ಸ್ ಸಿಟಿ ಸ್ಟೇಡಿಯಂನಲ್ಲಿ ಆಯೋಜಿಸಲಾದ ಅಹ್ಲಾನ್ ಮೋದಿ ಕಾರ್ಯಕ್ರಮದಲ್ಲಿ ಭಾರತೀಯ ಅಭಿಮಾನಿಗಳತ್ತ ಕೈಬೀಸಿ ಮಾತನಾಡಿದ ಪ್ರಧಾನಿ ಮೋದಿ, `ಭಾರತ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತದೆ’ ಎಂದು ಕನ್ನಡದಲ್ಲಿ ಮಾತು ಆರಂಭಿಸಿದ್ದಾರೆ.

    ಅಲ್ಲದೇ ಮಲಯಾಳಂ, ತಮಿಳು, ಕನ್ನಡದಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು, 10 ವರ್ಷದಲ್ಲಿ ಇದು ನನ್ನ 7ನೇ ಯಾತ್ರೆ ಎಂದು ಹೇಳಿಕೊಂಡಿದ್ದಾರೆ. ಮುಂದುವರಿದು ಮಾತನಾಡಿದ ಅವರು, ಭಾರತ-ಯುಎಇ ಪರಸ್ಪರರ ಪ್ರಗತಿಯಲ್ಲಿ ಪಾಲುದಾರರಾಗಿದ್ದೇವೆ. ಈ ಸಂಬಂಧದಿಂದ ಅಭೂತಪೂರ್ವ ಪ್ರಗತಿಯನ್ನು ನಾವು ಸಾಧಿಸುತ್ತೇವೆ. ಈ ಮೂಲಕ ತಮ್ಮ ಮೂರನೇ ಅವಧಿಯಲ್ಲಿ ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ಭರವಸೆ ನೀಡಿದ್ದಾರೆ. 2015 ರಲ್ಲಿ ನಾನು ಅವರಿಗೆ (ಶೇಖ್ ಮೊಹಮ್ಮದ್ ಬಿನ್ ಜಾಯೆದ್) ಎಲ್ಲರ ಪರವಾಗಿ ಅಬುಧಾಬಿಯಲ್ಲಿ ದೇವಾಲಯವನ್ನು ನಿರ್ಮಿಸುವ ಪ್ರಸ್ತಾಪವನ್ನು ಪ್ರಸ್ತುತಪಡಿಸಿದ್ದೆ. ಅವರು ತಕ್ಷಣವೇ ಅದಕ್ಕೆ ಹೌದು ಎಂದು ಹೇಳಿದ್ದರು. ಈಗ ಈ ಭವ್ಯವಾದ ದೇವಾಲಯವನ್ನು ಉದ್ಘಾಟಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಅಬುಧಾಬಿಯಲ್ಲಿ ಯಕ್ಷಗಾನ ವೇಷಧಾರಿಗಳಿಂದ ಮೋದಿಗೆ ಸ್ವಾಗತ

    ಪ್ರವಾಸದ ವೇಳೆ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ವಿಶೇಷ ಧನ್ಯವಾದ ಅರ್ಪಿಸಿದ್ದಾರೆ. ನಿಮ್ಮ ಬೆಂಬಲವಿಲ್ಲದೇ ಇದ್ದಿದ್ದರೆ ಇಲ್ಲಿ ದೇವಾಲಯದ ನಿರ್ಮಾಣವು ಸಾಧ್ಯವಾಗುತ್ತಿರಲಿಲ್ಲ. ಇದಕ್ಕಾಗಿ ನಾನು ನಿಮಗೆ ಧನ್ಯವಾದ ಅರ್ಪಿಸುತ್ತೇನೆ. ಇಲ್ಲಿಗೆ ಬಂದಾಗಲೆಲ್ಲ ನಾನು ನನ್ನ ಕುಟುಂಬವನ್ನು ಭೇಟಿಯಾಗಲು ಬಂದಿದ್ದೇನೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ ಎಂದರು.

    ಸ್ವಾಮಿನಾರಾಯಣ್ ದೇವಾಲಯದ ವಿಶೇಷತೆ: ಪಶ್ಚಿಮ ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ದೇವಾಲಯ ಇದಾಗಿದ್ದು, 108 ಅಡಿ ಎತ್ತರ, 262 ಅಡಿ ಉದ್ದ, 180 ಅಡಿ ಅಗಲವಿದ್ದು, 402 ಸ್ತಂಭಗಳನ್ನು ದೇವಾಲಯ ಹೊಂದಿದೆ. ರಾಜಸ್ಥಾನದ ಗುಲಾಬಿ ಕಲ್ಲು, ಇಟಾಲಿಯನ್ ಮಾರ್ಬಲ್ ಬಳಕೆ ಮಾಡಿ ಭಾರತದಲ್ಲಿ ಶಿಲ್ಪಗಳ ಕೆತ್ತನೆ ಮಾಡಲಾಗಿದ್ದು, ಯುಎಇಗೆ ಕೊಂಡೊಯ್ದು ಜೋಡಣೆ ಮಾಡಲಾಗಿದೆ.

    2015ರಲ್ಲಿ ಮೋದಿ ಪ್ರವಾಸದ ವೇಳೆ ದೇಗುಲಕ್ಕೆ 13.5 ಎಕರೆ ಜಾಗವನ್ನು ಅಬುಧಾಬಿ ದೊರೆ ದಾನ ನೀಡಿದ್ದರು. 2019ರಲ್ಲಿ ಯುಎಇ ಸರ್ಕಾರದಿಂದ ಮತ್ತೊಮ್ಮೆ 13.5 ಎಕರೆ ದಾನ ನೀಡಲಾಗಿತ್ತು. ಒಟ್ಟು 27 ಎಕರೆ ಪ್ರದೇಶದಲ್ಲಿ ಅತಿದೊಡ್ಡ ಭವ್ಯ ಮಂದಿರ ನಿರ್ಮಾಣವಾಗಿದ್ದು ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.

    ಯುಎಇಯ ಏಳು ಎಮಿರೆಟ್ ಸಂಕೇತಿಸಲು ಮಂದಿರಕ್ಕೆ ಏಳು ಶಿಖರ, ವಿಶೇಷ ಫಲಕಗಳಲ್ಲಿ ರಾಮಾಯಣ, ಮಹಾಭಾರತ, ಶಿವಪುರಾಣ, ಭಾಗವತವನ್ನು ಬರೆಸಲಾಗಿದೆ. ಮಂದಿರದ ಕೆಳ ಭಾಗದಲ್ಲಿ ಕೃತಕ ಪ್ರವಾಹ, ಪ್ರತ್ಯೇಕ ಫೋಕಸ್ ಲೈಟ್ ಅಳವಡಿಕೆ ಮಾಡಲಾಗಿದೆ. ದೇಗುಲ ಕಾಂಪ್ಲೆಕ್ಸ್‌ನಲ್ಲಿ ಪ್ರಾರ್ಥನಾ ಮಂದಿರ, ಗಾರ್ಡನ್, ವಿಸಿಟಿಂಗ್ ಸೆಂಟರ್ ಇದೆ. ಕಂಪನ ಅಧ್ಯಯನಕ್ಕೆ ಮಂದಿರದ ಬುನಾದಿಯಲ್ಲಿ 100 ಸೆನ್ಸಾರ್ ಅಳವಡಿಕೆ ಮಾಡಲಾಗಿದೆ. ಈ ಮಂದಿರ ನಿರ್ಮಾಣಕ್ಕೆ ತಗುಲಿದ ಒಟ್ಟು ವೆಚ್ಚ 400 ಮಿಲಿಯನ್ ದಿರ್ಹಮ್ (900 ಕೋಟಿ ರೂ.) ಆಗಿದೆ. ಈ ಮಂದಿರ ನಿರ್ಮಾಣಕ್ಕೆ 2017ರಲ್ಲಿ ಪ್ರಧಾನಿ ಮೋದಿಯವರು ಭೂಮಿ ಪೂಜೆ ನೆರವೇರಿಸಿದ್ದರು. ಇದನ್ನೂ ಓದಿ: ಮೋದಿಯಿಂದ ಬುಧವಾರ UAEಯ ಮೊದಲ ಹಿಂದೂ ದೇಗುಲ ಉದ್ಘಾಟನೆ – 65,000ಕ್ಕೂ ಹೆಚ್ಚು ಗಣ್ಯರ ನೋಂದಣಿ!

  • ಅಬುಧಾಬಿಯಲ್ಲಿ ಯಕ್ಷಗಾನ ವೇಷಧಾರಿಗಳಿಂದ ಮೋದಿಗೆ ಅದ್ಧೂರಿ ಸ್ವಾಗತ

    ಅಬುಧಾಬಿಯಲ್ಲಿ ಯಕ್ಷಗಾನ ವೇಷಧಾರಿಗಳಿಂದ ಮೋದಿಗೆ ಅದ್ಧೂರಿ ಸ್ವಾಗತ

    ದುಬೈ: ಅಬುಧಾಬಿ (Abu Dhabi) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದು ಕಾರ್ಯಕ್ರಮವೊಂದಕ್ಕೆ ಬಹಳ ವಿಶೇಷವಾಗಿ ಸ್ವಾಗತಿಸಿರುವುದು ಗಮನ ಸೆಳೆದಿದೆ.

    ಹೌದು. ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ನಿರ್ಮಾಣಗೊಂಡಿರೋ ದೇಶದ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ಮೋದಿ (Narendra Modi) ಫೆ.14ರಂದು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿಯವರು ಈಗಾಗಲೇ ಅಬುಧಾಬಿಗೆ ಬಂದಿಳಿದಿದ್ದಾರೆ. ಬಳಿಕ ‘ಅಹ್ಲಾನ್ ಮೋದಿ’ ಕಾರ್ಯಕ್ರಮಕ್ಕಾಗಿ ಮೋದಿ ಅವರು ಅಬುಧಾಬಿಯ ಜಾಯೆದ್ ಸ್ಪೋರ್ಟ್ಸ್ ಸ್ಟೇಡಿಯಂಗೆ ಆಗಮಿಸಿದರು. ಈ ವೇಳೆ ಮೋದಿಯವರನ್ನು ಕರಾವಳಿಯ ಪ್ರಸಿದ್ಧ ಕಲೆ ಯಕ್ಷಗಾನ (Yakshagana) ಹಾಗೂ ಭರತನಾಟ್ಯ (Bharatanatya) ಮೊದಲಾದ ವೇಷಗಳ ಮೂಲಕ ವಿಶೇಷವಾಗಿ ಸ್ವಾಗತಿಸಲಾಯಿತು.

    ಅಬುದಾಬಿಯ ಜಾಯೆದ್ ಸ್ಪೋರ್ಟ್ಸ್ ಸಿಟಿ ಸ್ಟೇಡಿಯಂ ಮೋದಿ ಮಯವಾಗಿದೆ. ಮೋದಿ ಪರ ಘೋಷಣೆಗಳು ಮುಗಿಲುಮುಟ್ಟಿದವು. ಈ ಕಾರ್ಯಕ್ರಮಕ್ಕೆ ಹಾಜರಾಗಲು ಬರೋಬ್ಬರಿ 65 ಸಾವಿರ ಮಂದಿ ನೋಂದಣಿ ಮಾಡಿಕೊಂಡಿದ್ರು. ಆದ್ರೆ ಪ್ರತಿಕೂಲ ಹವಾಮಾನದ ಕಾರಣ 35 ಸಾವಿರ ಮಂದಿಗೆ ಮಾತ್ರ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಯ್ತು. ಭಾರತೀಯ ಅಭಿಮಾನಿಗಳತ್ತ ಪ್ರಧಾನಿ ಮೋದಿ ಕೈಬೀಸಿ ಸಂತಸ ವ್ಯಕ್ತಪಡಿಸಿದ್ರು. ಇದನ್ನೂ ಓದಿ: ಮೋದಿಯಿಂದ ಬುಧವಾರ UAEಯ ಮೊದಲ ಹಿಂದೂ ದೇಗುಲ ಉದ್ಘಾಟನೆ – 65,000ಕ್ಕೂ ಹೆಚ್ಚು ಗಣ್ಯರ ನೋಂದಣಿ!