Tag: abu dhabi

  • ಇಂದು ಫೈನಲ್ ಆಡಿ ಐಪಿಎಲ್‍ನಲ್ಲಿ ವಿಶೇಷ ಸಾಧನೆ ಮಾಡಲಿದ್ದಾರೆ ಹಿಟ್‍ಮ್ಯಾನ್

    ಇಂದು ಫೈನಲ್ ಆಡಿ ಐಪಿಎಲ್‍ನಲ್ಲಿ ವಿಶೇಷ ಸಾಧನೆ ಮಾಡಲಿದ್ದಾರೆ ಹಿಟ್‍ಮ್ಯಾನ್

    ಅಬುಧಾಬಿ: ಇಂದು ನಡೆಯಲಿರುವ ಐಪಿಎಲ್-2020ಯ ಫೈನಲ್ ಆಡುವ ಮೂಲಕ ಹೊಸ ಸಾಧನೆ ಮಾಡಲು ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ರೋಹಿತ್ ಶರ್ಮಾ ಸಿದ್ಧವಾಗಿದ್ದಾರೆ.

    ಇಂದು ದುಬೈ ಮೈದಾನದಲ್ಲಿ ಐಪಿಎಲ್-2020 ಫೈನಲ್ ಪಂದ್ಯ ನಡೆಯಲಿದೆ. ಟೂರ್ನಿಯದ್ದಕ್ಕೂ ಉತ್ತಮ ಪ್ರದರ್ಶನ ತೋರಿರುವ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಪೈನಲ್ ಪಂದ್ಯದಲ್ಲಿ ಸೆಣೆಸಾಡಲಿವೆ. ಇಂದು ಸಂಜೆ ಏಳು ಗಂಟೆಗೆ ಮ್ಯಾಚ್ ಆರಂಭವಾಗಲಿದೆ. ಈ ಪಂದ್ಯ ಆಡಲಿರುವ ರೋಹಿತ್ ಶರ್ಮಾ ಹೊಸ ಸಾಧನೆಯ ಅಂಚಿನಲ್ಲಿದ್ದಾರೆ.

    ಐಪಿಎಲ್‍ನಲ್ಲಿ 2008ರಿಂದಲೂ ಆಡಿಕೊಂಡು ಬಂದಿರುವ ರೋಹಿತ್ ಇಲ್ಲಿಯವರೆಗೂ ಬರೋಬ್ಬರಿ 199 ಪಂದ್ಯಗಳನ್ನು ಆಡಿದ್ದಾರೆ. ಇಂದು ನಡೆಯಲಿರುವ ಫೈನಲ್ ಅಲ್ಲಿ ರೋಹಿತ್ ಆಡುವ ಮೂಲಕ ಐಪಿಎಲ್‍ನಲ್ಲಿ 200 ಒಂದ್ಯಗಳನ್ನಾಡಿದ ಎರಡನೇ ಆಟಗಾರ ಎಂಬ ಸಾಧನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿಯವರು 200 ಪಂದ್ಯಗಳನ್ನಾಡಿ, 200 ಐಪಿಎಲ್ ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ಸಾಧನೆ ಮಾಡಿದ್ದರು.

    ಐಪಿಎಲ್‍ನಲ್ಲಿ 5,162 ರನ್ ಗಳಿಸಿರುವ ರೋಹಿತ್ ಶರ್ಮಾ ಐಪಿಎಲ್‍ನ ಐದನೇ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‍ಮನ್ ಆಗಿದ್ದಾರೆ. ಜೊತೆಗೆ ಐಪಿಎಲ್‍ನಲ್ಲಿ ಒಂದು ಶತಕ ಮತ್ತು 38 ಅರ್ಧಶತಕಗಳನ್ನು ಬಾರಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ರೋಹಿತ್, ಕೇವಲ ಏಳು ಆವೃತ್ತಿಯಲ್ಲಿ ತಮ್ಮ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವನ್ನು ನಾಲ್ಕು ಬಾರೀ ಚಾಂಪಿಯನ್ ಆಗುವಂತೆ ಮಾಡಿದ್ದಾರೆ.

  • ವಿರುಷ್ಕಾರೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಪರದಾಡಿದ ಆರ್‌ಸಿಬಿ ಫೋಟೋಗ್ರಾಫರ್

    ವಿರುಷ್ಕಾರೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಪರದಾಡಿದ ಆರ್‌ಸಿಬಿ ಫೋಟೋಗ್ರಾಫರ್

    ಅಬುಧಾಬಿ: 2020ರ ಐಪಿಎಲ್ ಆವೃತ್ತಿಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊರ ನಡೆದಿದೆ. ಇದರ ನಡುವೆಯೇ ನವೆಂಬರ್ 5 ರಂದು ನಾಯಕ ವಿರಾಟ್ ಕೊಹ್ಲಿ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಪರದಾಡಿದ ಸಂಗತಿಯನ್ನು ಸ್ವತಃ ತಂಡದ ಫೋಟೋಗ್ರಾಫರ್ ಬಿಚ್ಚಿಟ್ಟಿದ್ದಾರೆ.

    ಸತತ 4 ಸೋಲುಗಳ ನಡುವೆಯೂ ಪ್ಲೇ ಆಫ್ ಪ್ರವೇಶ ಮಾಡಿದ್ದು ಬೆಂಗಳೂರು ತಂಡದ ಸಾಧನೆಯಾಗಿದೆ. ಆದರೆ ಹೈದರಾಬಾದ್ ವಿರುದ್ಧದ ಪಂದ್ಯಕ್ಕೂ ಮುನ್ನ ತಂಡದ ನಾಯಕ ವಿರಾಟ್ ಕೊಹ್ಲಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಿಶೇಷ ಪಾರ್ಟಿ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಕ್ಲಿಕ್ಕಿಸಲಾಗಿದ್ದ ಅನುಷ್ಕಾ ಶರ್ಮಾ ಹಾಗೂ ಕೊಹ್ಲಿ ಅವರ ಫೋಟೋಗಳಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಉತ್ತಮ ಫೋಟೋಗಳನ್ನು ಸೆರೆ ಹಿಡಿದ ಫೋಟೋಗ್ರಾಫರ್ ಮಾತ್ರ ವಿರುಷ್ಕಾ ಜೋಡಿಯೊಂದಿಗೆ ಫೋಟೋ ತೆಗೆದುಕೊಳ್ಳಲು ಸಮಸ್ಯೆ ಎದುರಿಸಿದ್ದರು.

    ಈ ಕುರಿತಂತೆ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಮಾಹಿತಿ ನೀಡಿರುವ ಆರ್‌ಸಿಬಿ ತಂಡದ ಫೋಟೋಗ್ರಾಫರ್ ಮೋಹಿತ್ ಕಶ್ಯಪ್, ವಿಶೇಷ ಫೋಟೋವೊಂದರನ್ನು ಹಂಚಿಕೊಂಡು ಕೊಹ್ಲಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಚೆನ್ನಾಗಿರೋ ನಿನ್ನ ಫೋಟೋಗಳು ಏಕಿಲ್ಲ ಎಂದು ಜನರು ಪ್ರಶ್ನಿಸಿದ ಸಂದರ್ಭದಲ್ಲಿ ಸಾಮಾನ್ಯವಾಗಿ ಒಂದೇ ಉತ್ತರ ನೀಡುತ್ತೇನೆ. ಯಾರೂ ನನ್ನ ಉತ್ತಮ ಫೋಟೋಗಳನ್ನು ಸೆರೆಹಿಡಿಯುವುದಿಲ್ಲ ಎಂದು ಹೇಳುತ್ತೇನೆ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ಸಂಬಂಧಿಸಿದ ರಿಪೇರಿ ಕೆಲಸವನ್ನು ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

    ಮೋಹಿತ್ ಕಶ್ಯಪ್ ಹಂಚಿಕೊಂಡಿರುವ ಮೊದಲ ಫೋಟೋದಲ್ಲಿ ಕ್ಯಾಮೆರಾ ಫ್ಲಾಶ್ ಲೈಟ್‍ಯಿಂದ ಯಾರ ಮುಖವೂ ಸ್ಪಷ್ಟವಾಗಿ ಕಾಣುತ್ತಿಲ್ಲ. ಈ ಫೋಟೋಗೆ ವರ್ಕ್ ಮಾಡಿರುವ ಕಶ್ಯಪ್, ಮುಖ ಕಾಣುವಂತೆ ಮಾಡಿದ್ದಾರೆ.

    ವಿರಾಟ್ ಕೊಹ್ಲಿ ತಮ್ಮ 32ನೇ ಹುಟ್ಟುಹಬ್ಬವನ್ನು ಗರ್ಭಿಣಿಯಾಗಿರುವ ಪತ್ನಿ ಅನುಷ್ಕಾ ಶರ್ಮಾ ಹಾಗೂ ಆರ್‌ಸಿಬಿ ಆಟಗಾರರು, ಸಿಬ್ಬಂದಿಯೊಂದಿಗೆ ಆಚರಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿರನ್ನು ಬಿಗಿದಪ್ಪಿಕೊಂಡು ಕಿಸ್ ಮಾಡಿರುವ ಅನುಷ್ಕಾ ಅವರ ರೊಮ್ಯಾಟಿಂಗ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.

     

    View this post on Instagram

     

    ❤️

    A post shared by AnushkaSharma1588 (@anushkasharma) on

  • 13 ವರ್ಷಗಳಾದ್ರೂ ಕಪ್ ಗೆಲ್ಲದ ಆರ್‌ಸಿಬಿ – ಕಾರಣ ಬಿಚ್ಚಿಟ್ಟ ಡರೇನ್ ಸ್ಯಾಮಿ

    13 ವರ್ಷಗಳಾದ್ರೂ ಕಪ್ ಗೆಲ್ಲದ ಆರ್‌ಸಿಬಿ – ಕಾರಣ ಬಿಚ್ಚಿಟ್ಟ ಡರೇನ್ ಸ್ಯಾಮಿ

    ಅಬುಧಾಬಿ: 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವೈಫಲ್ಯ ಅನುಭವಿಸಿದ್ದು, 2020ರ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲುಂಡು ಟೂರ್ನಿಯಿಂದ ಹೊರ ನಡೆದಿದೆ. ಆರ್‌ಸಿಬಿ ತಂಡ ಐಪಿಎಲ್ ಆರಂಭವಾಗಿ 13 ವರ್ಷಗಳು ಕಳೆದರೂ ಕಪ್ ಗೆಲ್ಲದ ಹಿಂದಿನ ಕಾರಣವನ್ನು ವೆಸ್ಟ್ ಇಂಡೀಸ್ ಆಟಗಾರ ಡರೇನ್ ಸ್ಯಾಮಿ ಬಿಚ್ಚಿಟ್ಟಿದ್ದಾರೆ.

    ಬಹುವರ್ಷಗಳ ಬಳಿಕ ಆರ್‌ಸಿಬಿ ಪ್ಲೇ ಆಫ್‍ಗೆ ಪ್ರವೇಶ ಪಡೆದರೂ ಬೆಂಗಳೂರು ಆಟಗಾರರ ಕಪ್ ಗೆಲ್ಲುವ ಕನಸು ಈಡೇರಲಿಲ್ಲ. ಕ್ವಾಲಿಫೈಯರ್ ಪಂದ್ಯದಲ್ಲಿ ಸನ್‍ರೈಸರ್ಸ್ ವಿರುದ್ಧ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ನಿರಸ ಪ್ರದರ್ಶನ ತೋರಿದ ಆರ್‌ಸಿಬಿ ಸೋಲುಂಡಿತ್ತು.

    ಐಪಿಎಲ್ ಟೂರ್ನಿಗಳಲ್ಲಿ ಬೆಂಗಳೂರು ತಂಡ ಪ್ರದರ್ಶನವನ್ನು ಗಮನಿಸಿದರೆ ತಂಡದ ಬೌಲಿಂಗ್ ಪಡೆಯೇ ಹೆಚ್ಚು ಸಮಸ್ಯೆಯಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಡರೇನ್ ಸ್ಯಾಮಿ, ಬ್ಯಾಟ್ಸ್ ಮನ್‍ಗಳು ಪಂದ್ಯಗಳನ್ನು ಗೆಲ್ಲಿಸಿ ಕೊಡುತ್ತಾರೆ. ಆದರೆ ಬೌಲಿಂಗ್ ಪಡೆ ಟೂರ್ನಿಯನ್ನೇ ಗೆಲ್ಲಿಸುತ್ತದೆ. ಇದು ಬದಲಾವಣೆಯಾಗದ ಹೊರತು ಕಪ್ ಗೆಲ್ಲಲು ಆಗಲ್ಲ ಎಂದು ಟ್ವೀಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಈ ವರ್ಷದ ಆರ್‌ಸಿಬಿ ಬೌಲಿಂಗ್ ಪ್ರದರ್ಶನವನ್ನು ಗಮನಿಸುವುದಾದರೆ, ಯಜುವೇಂದ್ರ ಚಹಲ್ ಮಾತ್ರ ಸ್ಥಿರ ಪ್ರದರ್ಶನ ನೀಡಿದ್ದಾರೆ. ಪ್ರತಿ ಪಂದ್ಯದಲ್ಲೂ ತಂಡಕ್ಕಾಗಿ ವಿಕೆಟ್ ಪಡೆದ ಚಹಲ್, ಆವೃತ್ತಿಯ ಟಾಪ್ ವಿಕೆಟ್ ಕಿತ್ತ ಆಟಗಾರರ ಪಟ್ಟಿಯಲ್ಲಿ 4ನೇ ಸ್ಥಾನವನ್ನು ಪಡೆದಿದ್ದಾರೆ. ಚಹಲ್ 15 ಪಂದ್ಯಗಳಿಂದ 21 ವಿಕೆಟ್ ಉರುಳಿಸಿದ್ದಾರೆ. ಉಳಿದಂತೆ ಬೇರೆ ಯಾವುದೇ ಬೌಲರ್ ಸ್ಥಿರ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಯುವ ವೇಗಿ ನವದೀಪ್ ಸೈನಿ ಕೂಡ ನಿರಾಸೆ ಮೂಡಿಸಿದ್ದಾರೆ.

    ಸತತ ನಾಲ್ಕು ಪಂದ್ಯ ಸೋತರೂ ಪ್ಲೇ ಆಫ್ ಪ್ರವೇಶಿಸಿದ್ದ ಆರ್‌ಸಿಬಿ ನಿರ್ಣಾಯಕ ಪಂದ್ಯದಲ್ಲಿಯೂ ಸೋತು ಟೂರ್ನಿಯಿಂದ ಹೊರ ನಡೆದಿದೆ. ನಿನ್ನೆಯ ಪಂದ್ಯದಲ್ಲಿ ಟಾಸ್ ಸೋತ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿತ್ತು. ಸುಲಭದ ಗುರಿ ಬೆನ್ನತ್ತಿದ್ದ ಸನ್‍ರೈಸರ್ಸ್ ಕೇನ್ ವಿಲಿಯಮ್ಸನ್‍ರ ಅರ್ಧ ಶತಕ ನೆರವಿನಿಂದ ಇನ್ನಿಂಗ್ಸ್ ನ ಅಂತಿಮ ಓವರಿನಲ್ಲಿ ಗೆಲುವು ಪಡೆಯಿತು. ಆ ಮೂಲಕ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಪ್ರವೇಶ ಪಡೆಯಿತು. ಭಾನುವಾರ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಡೆಲ್ಲಿ ಮತ್ತು ಸನ್‍ರೈಸರ್ಸ್ ನಡುವೆ ಹಣಾಹಣಿ ನಡೆಯಲಿದೆ.

  • ಯಾರ್ಕರ್‌ನೊಂದಿಗೆ ಎಬಿಡಿ ವಿಕೆಟ್ ಕಿತ್ತ ನಟರಾಜನ್‍ಗೆ ಗುಡ್ ನ್ಯೂಸ್

    ಯಾರ್ಕರ್‌ನೊಂದಿಗೆ ಎಬಿಡಿ ವಿಕೆಟ್ ಕಿತ್ತ ನಟರಾಜನ್‍ಗೆ ಗುಡ್ ನ್ಯೂಸ್

    ಅಬುಧಾಬಿ: ಐಪಿಎಲ್ 2020ರ ಎಲಿಮಿನೇಟರ್ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಮೂಲಕ ಗಮನ ಸೆಳೆದ ಸನ್‍ರೈಸರ್ಸ್ ಆಟಗಾರ ನಟರಾಜನ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. 29 ವರ್ಷದ ಎಡಗೈ ವೇಗಿ ಟಿ.ನಟರಾಜನ್ ಪತ್ನಿ ಶುಕ್ರವಾರ ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ಆರ್ ಸಿಬಿ ವಿರುದ್ಧ ಪಂದ್ಯದಲ್ಲಿ ಯಾರ್ಕರ್ ಎಸೆತದ ಮೂಲಕ ಎಬಿ ಡಿವಿಲಿಯರ್ಸ್ ವಿಕೆಟ್ ಪಡೆದ ನಟರಾಜನ್ ಪಂದ್ಯಕ್ಕೆ ತಿರುವು ನೀಡಿದ್ದರು. ಬೆಂಗಳೂರು ಪರ ಏಕಾಂಗಿ ಹೋರಾಟ ಮಾಡುತ್ತಿದ್ದ ಎಬಿಡಿ ಔಟಾಗುತ್ತಿದಂತೆ ಭಾರೀ ಸ್ಕೋರ್ ಗಳಿಸಿರುವ ಅವಕಾಶವನ್ನು ತಂಡ ಕಳೆದುಕೊಂಡಿತ್ತು.

    ಪಂದ್ಯದ ಬಳಿಕ ಮಾತನಾಡಿದ ಸನ್‍ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್, ನಟರಾಜನ್ ಹಾಗೂ ಅವರ ಪತ್ನಿಗೆ ಶುಭಾಶಯ ಕೋರಿದ್ದರು. ನಟರಾಜನ್ ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ನಟರಾಜನ್ ಮಗು ಜನಿಸಿದ ಸಂತಸದಲ್ಲಿದ್ದಾರೆ. ಅವರಿಗೆ ಫೈನಲ್ ಪಂದ್ಯಕ್ಕೂ ಮುನ್ನ ವಿಶೇಷ ಗಿಫ್ಟ್ ಲಭಿಸಿದೆ ಎಂದು ವಾರ್ನರ್ ತಿಳಿಸಿದ್ದರು.

    ತಮಿಳುನಾಡಿನ ಚೆನ್ನೈನಿಂದ ಸುಮಾರು 340 ಕಿಮೀ ದೂರದ ಸೇಲಂ ಜಿಲ್ಲೆಯ ಸಣ್ಣ ಹಳ್ಳಿ ಚೆನ್ನಪ್ಪಂಪಟ್ಟಿ ಗ್ರಾಮದವರು. ಟೆನ್ನಿಸ್ ಬಾಲ್ ಕ್ರಿಕೆಟ್ ಆಡುತ್ತಿದ್ದ ನಟರಾಜನ್ ಅಲ್ಲಿಯೇ ತಮ್ಮ ಬೌಲಿಂಗ್ ಕೌಶಲ್ಯಗಳನ್ನು ಮೆರೆಗುಗೊಳಿಸಿದ್ದರು. ಉಳಿದಂತೆ ನಟರಾಜನ್ ತಾಯಿ ಹಾಗೂ ತಂದೆ ದಿನಗೂಲಿ ಕಾರ್ಮಿಕರಾಗಿದ್ದಾರೆ. 2017ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಿದ್ದ ನಟರಾಜನ್ ಅವರನ್ನು  ಬಳಿಕ ಸನ್‍ರೈಸರ್ಸ್ ಹೈದಾರಾಬಾದ್ ತಂಡ ಖರೀದಿ ಮಾಡಿತ್ತು. ಸದ್ಯ ನಟರಾಜನ್ ಯಾರ್ಕರ್ ಗೆ ಫಿದಾ ಆಗಿರುವ ಕ್ರಿಕೆಟ್ ವಿಶ್ಲೇಷಕರು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇನ್ನೂ ಆತನನ್ನು ಯಾರ್ಕರ್ ನಟರಾಜನ್ ಎಂದು ಕರೆದರೆ ಉತ್ತಮವಾಗಿರುತ್ತದೆ ಎಂದು ಕ್ರಿಕೆಟ್ ವಿಶ್ಲೇಷಕ ಹರ್ಷ ಭೋಗ್ಲೆ ಟ್ವೀಟ್ ಮಾಡಿದ್ದಾರೆ.

  • ಪ್ರೈವೇಟ್ ಬೋಟ್‍ನಲ್ಲಿ ಕಿಂಗ್ ಕೊಹ್ಲಿ ಬರ್ತ್ ಡೇ ಪಾರ್ಟಿ

    ಪ್ರೈವೇಟ್ ಬೋಟ್‍ನಲ್ಲಿ ಕಿಂಗ್ ಕೊಹ್ಲಿ ಬರ್ತ್ ಡೇ ಪಾರ್ಟಿ

    -ಕನ್ನಡದಲ್ಲೇ ವಿಶ್ ಮಾಡಿದ ಪವನ್ ದೇಶಪಾಂಡೆ

    ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ಯಾಪ್ಟನ್ ವಿರಾಟ್ ಕೊಹ್ಲಿ, ತಂಡದ ಆಟಗಾರರು ಹಾಗೂ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ತಮ್ಮ 32ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

    ಅಬುಧಾಬಿಯ ಪ್ರೈವೇಟ್ ಬೋಟ್‍ನಲ್ಲಿ ಆರ್ ಸಿಬಿ ತಂಡದ ಮಾಲೀಕರು ಪಾರ್ಟಿ ಏರ್ಪಡಿಸಿದ್ದು, ಗರ್ಭಿಣಿಯಾಗಿರುವ ಅನುಷ್ಕಾ, ಕೊಹ್ಲಿಗೆ ಕೇಕ್ ತಿನ್ನಿಸಿ, ಅಪ್ಪುಗೆ ಕೊಟ್ಟು ಹುಟ್ಟಹಬ್ಬದ ಶುಭಾಶಯ ಕೋರಿದ್ದಾರೆ. ಈ ಕುರಿತ ವಿಡಿಯೋ ಹಾಗೂ ಫೋಟೋಗಳನ್ನು ಆರ್ ಸಿಬಿ ತಂಡ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

    ಕೊಹ್ಲಿ 32ನೇ ವರ್ಷದ ಹುಟ್ಟುಹಬ್ಬದ ಪಾರ್ಟಿ ಹಿನ್ನೆಲೆಯಲ್ಲಿ ಉಮೇಶ್ ಯಾದವ್‍ರೊಂದಿಗೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವನ್ನು ಮೊಹಮ್ಮದ್ ಸಿರಾಜ್ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಮುಖಕ್ಕೆ ಬಳಿದು ಸಂಭ್ರಮಿಸಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ವಿಡಿಯೋದಲ್ಲಿ ಆರ್ ಸಿಬಿ ತಂಡದ ಆಟಗಾರರು ಹಾಗೂ ಸಿಬ್ಬಂದಿ ವರ್ಗ ಕೊಹ್ಲಿ ಅವರಿಗೆ ಶುಭಾಶಯ ತಿಳಿಸಿದ್ದಾರೆ. ವಿಶೇಷ ಎಂದರೇ, ಪವನ್ ದೇಶಪಾಂಡೆ ಕನ್ನಡದಲ್ಲೇ ಕೊಹ್ಲಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಗಮನಸೆಳೆದಿದ್ದಾರೆ.

    ಶುಕ್ರವಾರ ಅಬುಧಾಬಿಯಲ್ಲಿ ಸನ್‍ರೈಸರ್ಸ್ ಹೈದರಾಬಾದ್ ಹಾಗೂ ಆರ್ ಸಿಬಿ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಐಪಿಎಲ್ 2020ರ ಟೂರ್ನಿಯಲ್ಲಿ 14 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕೊಹ್ಲಿ ಪಡೆ ಪ್ಲೇ ಆಫ್ ಪ್ರವೇಶ ಮಾಡಿದೆ. ನಾಲ್ಕು ವರ್ಷಗಳ ಬಳಿಕ ಪ್ಲೇ ಆಫ್ ತಲುಪಿರುವ ಕೊಹ್ಲಿ ಪಡೆಗೆ ಕಪ್ ಗೆಲ್ಲಲು ಇನ್ನು ಮೂರು ಗೆಲುವು ಬೇಕಿದೆ. ಸರಣಿಯಲ್ಲಿ ಸನ್‍ರೈಸರ್ಸ್ ಹೈದರಾಬಾದ್ ತಂಡವನ್ನ ಕೊಹ್ಲಿ ಪಡೆ 2 ಬಾರಿ ಎದುರಿಸಿದ್ದು, ಟೂರ್ನಿಯ 3ನೇ ಪಂದ್ಯದಲ್ಲಿ ಆರ್ ಸಿಬಿ 10 ರನ್ ಗೆಲುವು ಪಡೆದರೆ, 52ನೇ ಪಂದ್ಯದಲ್ಲಿ ಹೈದರಾಬಾದ್ ತಂಡ 52 ರನ್ ಗಳ ಗೆಲುವು ಪಡೆದಿತ್ತು.

    2020ರ ಟೂರ್ನಿಯಲ್ಲಿ ಕೊಹ್ಲಿ ಇದುವರೆಗೂ 122ರ ಸ್ಟ್ರೈಕ್ ರೇಟ್‍ನಲ್ಲಿ 460* ರನ್ ಗಳಿಸಿದ್ದು, ಆರೆಂಜ್ ಕ್ಯಾಪ್ ರೇಸ್‍ನಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಟೂರ್ನಿಯಲ್ಲಿ 23 ಬೌಂಡರಿ, 11 ಸಿಕ್ಸರ್ ಸಿಡಿಸಿದ್ದು, 3 ಅರ್ಧ ಶತಕಗಳು ದಾಖಲಾಗಿದೆ.

  • ಯೆಲ್ಲೋ ಜೆರ್ಸಿಯಲ್ಲಿ ಕೊನೆಯ ಪಂದ್ಯವೇ?- ಎರಡೇ ಪದದಲ್ಲಿ ಉತ್ತರಿಸಿದ ಎಂಎಸ್‍ಡಿ

    ಯೆಲ್ಲೋ ಜೆರ್ಸಿಯಲ್ಲಿ ಕೊನೆಯ ಪಂದ್ಯವೇ?- ಎರಡೇ ಪದದಲ್ಲಿ ಉತ್ತರಿಸಿದ ಎಂಎಸ್‍ಡಿ

    ಅಬುಧಾಬಿ: ಯೆಲ್ಲೋ ಜೆರ್ಸಿಯಲ್ಲಿ ಇದೇ ಕೊನೆಯ ಪಂದ್ಯವೇ ಎಂದು ಕೇಳಿದ ಪ್ರಶ್ನೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿಯವರು ಎರಡನೇ ಪದಗಳಲ್ಲಿ ಉತ್ತರ ನೀಡಿದ್ದಾರೆ.

    ಇಂದು ಅಬುಧಾಬಿ ಮೈದಾನದಲ್ಲಿ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಸಿಎಸ್‍ಕೆ ತಂಡ 9 ವಿಕೆಟ್‍ಗಳಿಂದ ಗೆದ್ದು ಬೀಗಿದೆ. ಈ ಮೂಲಕ ತಾನು ಐಪಿಎಲ್-2020ಯಿಂದ ಹೊರ ಹೋಗಿದ್ದು, ತನ್ನ ಜೊತೆ ಪಂಜಾಬ್ ತಂಡವನ್ನು ಹೊರಗಡೆ ಕರೆದುಕೊಂಡಿದೆ.

    ಇಂದಿನ ಪಂದ್ಯದ ಟಾಸ್ ವೇಳೆ ಧೋನಿಯವರನ್ನು ಮಾತನಾಡಿಸಿದ ಕಮೆಂಟೆಟರ್ ಮತ್ತು ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಡ್ಯಾನಿ ಮಾರಿಸನ್, ಯೆಲ್ಲೋ ಜೆರ್ಸಿಯಲ್ಲಿ ಈ ಪಂದ್ಯವೇ ಕೊನೆ ಪಂದ್ಯ ಆಗಲಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಎರಡನೇ ಪದಗಳಲ್ಲಿ ಉತ್ತರಿಸಿರುವ ಧೋನಿ ಖಂಡಿತವಾಗಿಯೂ ಇಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಮುಂದಿನ ಐಪಿಎಲ್ ಅನ್ನು ಕೂಡ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಡುವ ಸುಳಿವು ನೀಡಿದ್ದಾರೆ.

    ಕಳೆದ ಆಗಸ್ಟ್ 15ರಂದು ಎಂಎಸ್ ಧೋನಿಯವರು ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಹೇಳಿದ್ದರು. ಧೋನಿಯವರು ಈ ಬಾರಿ ನಡೆಯಬೇಕಿದ್ದ ಅಂತಾರಾಷ್ಟ್ರೀಯ ಟಿ-20 ವಿಶ್ವಕಪ್ ಆಡುವ ಯೋಜನೆಯಲ್ಲಿದ್ದರು. ಆದರೆ ಕೊರೊನಾ ಕಾರಣದಿಂದ ವಿಶ್ವಕಪ್ ರದ್ದಾಗಿತ್ತು. ಇದಾದ ನಂತರ ಐಪಿಎಲ್ ಆರಂಭವಾಗಿತ್ತು. ಈ ಬಾರಿಯ ಐಪಿಎಲ್ ಧೋನಿಯವರ ಕಡೆ ಐಪಿಎಲ್ ಎಂದು ಹೇಳಲಾಗಿತ್ತು. ಆದರೆ ಧೋನಿ ಮತ್ತೆ ನಾನು ಆಡುತ್ತೇನೆ ಎಂಬ ಮಾತುಗಳನ್ನು ಆಡಿದ್ದಾರೆ.

    ಇಂದು ಅಬುಧಾಬಿ ಮೈದಾನದಲ್ಲಿ ನಡೆದ 53ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ ಉತ್ತಮ ಆರಂಭ ಪಡೆದು ಮಧ್ಯಮ ಕ್ರಮಾಂಕದಲ್ಲಿ ಕುಸಿದಿತು. ಆದರೆ ಕೊನೆಯಲ್ಲಿ ದೀಪಕ್ ಹೂಡಾ ಸ್ಫೋಟಕ ಬ್ಯಾಟಿಂಗ್‍ನಿಂದ ನಿಗದಿತ 20 ಓವರಿನಲ್ಲಿ 154 ರನ್ ಪೇರಿಸಿತು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಚೆನ್ನೈ ತಂಡ ಫಫ್ ಡು ಪ್ಲೆಸಿಸ್, ರುತುರಾಜ್ ಗಾಯಕ್ವಡ್ ಅದ್ಭುತ ಜೊತೆಯಾಟದಿಂದ ಇನ್ನೂ 7 ಬಾಲು ಉಳಿದಂತೆ ಗೆದ್ದು ಬೀಗಿತು.

  • ಕೋಪದಿಂದ ಬ್ಯಾಟ್ ಎಸೆದ ಗೇಲ್‍ಗೆ ಬಿತ್ತು ದಂಡ

    ಕೋಪದಿಂದ ಬ್ಯಾಟ್ ಎಸೆದ ಗೇಲ್‍ಗೆ ಬಿತ್ತು ದಂಡ

    ಅಬುಧಾಬಿ: ಐಪಿಎಲ್ ಕೋಡ್ ಆಫ್ ಕಂಡಕ್ಟ್ ನಿಯಮಗಳನ್ನು ಮುರಿದ ಕಾರಣ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕ್ರಿಸ್ ಗೇಲ್‍ಗೆ ಪಂದ್ಯದ ಶುಲ್ಕದಲ್ಲಿ ಶೇ.10 ರಷ್ಟು ದಂಡವಾಗಿ ವಿಧಿಸಲಾಗಿದೆ.

    ಕ್ರಿಸ್ ಗೇಲ್ ಅವರು ಟಿ-20 ಮಾದರಿಯ ಕ್ರಿಕೆಟ್‍ಗೆ ಹೇಳಿ ಮಾಡಿಸಿದಂತ ಬ್ಯಾಟ್ಸ್ ಮನ್ ಆಗಿದ್ದಾರೆ. ಆದರೆ ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ 99 ರನ್ ಗಳಿಸಿ ಔಟಾದ ಗೇಲ್, ಕ್ಷಣ ಕಾಲ ಹತಾಶೆಗೊಂಡು ಬ್ಯಾಟ್ ಎಸೆದಿದ್ದರು. ಪಂದ್ಯದಲ್ಲಿ 2ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಗೇಲ್, 63 ಎಸೆತದಲ್ಲಿ ಆರು ಬೌಂಡರಿ ಮತ್ತು ಎಂಟು ಭರ್ಜರಿ ಸಿಕ್ಸರ್ ಸಮೇತ ಬರೋಬ್ಬರಿ 99 ರನ್ ಬಾರಿಸಿ ಔಟಾದರು. ನಿಯಮಗಳನ್ನು ಮುರಿದ ಕಾರಣ ಅವರಿಗೆ ದಂಡ ವಿಧಿಸಲಾಗಿದ್ದು, ಸದ್ಯ ತಮ್ಮ ತಪ್ಪನ್ನು ಗೇಲ್ ಒಪ್ಪಿಕೊಂಡಿದ್ದಾರೆ. ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅಫೆನ್ಸ್ 2.2 ಲೆವೆಲ್ 1 ರ ಅನ್ವಯ ಪಂದ್ಯದ ರೆಫರಿ ದಂಡ ವಿಧಿಸಿದ್ದಾರೆ.

    ಪಂದ್ಯದಲ್ಲಿ 8 ಸಿಕ್ಸರ್ ಸಿಡಿಸುವುದರೊಂದಿಗೆ ಟಿ20 ಮಾದರಿ ಕ್ರಿಕೆಟ್‍ನಲ್ಲಿ ಸಾವಿರ ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದ ಗೇಲ್, ಐಪಿಎಲ್ ಆವೃತ್ತಿಯಲ್ಲಿ ಶತಕ ಗಳಿಸುವ ಅವಕಾಶದಿಂದ ವಂಚಿತರಾಗಿದ್ದರು. ಜೋಫ್ರಾ ಅರ್ಚರ್ ಎಸೆದ ಯಾರ್ಕರ್ ರನ್ನು ಎದುರಿಸಲು ಗೇಲ್ ವಿಫಲರಾಗಿದ್ದ ಗೇಲ್ 99 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದರೊಂದಿಗೆ ಐಪಿಎಲ್‍ನಲ್ಲಿ 99 ರನ್ ಗಳಿಗೆ 2ನೇ ಬಾರಿಗೆ ಔಟಾದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ. 2019ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗೇಲ್ 99 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.

    ಪಂದ್ಯದ ಬಳಿಕ ಮಾತನಾಡಿದ್ದ ಗೇಲ್, ಇಂದು ನಮ್ಮ ಆಟಗಾರರಿಗೆ ಶತಕ ಸಾಧನೆ ಮಾಡುವುದಾಗಿ ಮಾತು ಕೊಟ್ಟಿದ್ದೆ. ಆದರೆ ಅದು ಸದ್ಯವಾಗಿರಲಿಲ್ಲ. ಆದರೆ ನನ್ನ ಮನಸ್ಸಿಗೆ ಮಾತ್ರ ಇದು ಶತಕವೇ ಎಂದು ನಕ್ಕು ಸುಮ್ಮನಾಗಿದ್ದರು. 99 ರನ್ ಗಳಲ್ಲಿ ಔಟಾಗುವುದು ದುರಾದೃಷ್ಟಕರ. ಆದರೆ ನಾನು ಆಟವನ್ನು ಸಂತಸದಿಂದ ಆಡಿದ್ದೇನೆ. ಯುವ ಆಟಗಾರರೊಂದಿಗೆ ಬ್ಯಾಟಿಂಗ್ ಮಾಡುವುದು ಹೆಚ್ಚು ಸಂತಸ ನೀಡುತ್ತದೆ. ಅಂತೆಯೇ ಐಪಿಎಲ್ ಟ್ರೋಫಿ ಗೆದ್ದರೆ ಚೆನ್ನಾಗಿರುತ್ತೆ ಎಂದಿದ್ದಾರೆ.

    ವೆಸ್ಟ್ ಇಂಡೀಸ್ ಪರ ಅಂತಾರಾಷ್ಟ್ರೀಯ ಟಿ-20 ಪಂದ್ಯ, ಐಪಿಎಲ್ ಮತ್ತು ಬಿಗ್ ಬ್ಯಾಷ್ ಸೇರಿದಂತೆ ಗೇಲ್ ಹಲವಾರು ಟಿ-20 ಟೂರ್ನಿಗಳನ್ನು ಆಡಿದ್ದಾರೆ. ಈ ಎಲ್ಲ ಪಂದ್ಯಗಳಿಂದ ಕೇವಲ ಟಿ-20 ಪಂದ್ಯಗಳಲ್ಲೇ 10 ಸಾವಿರ ರನ್ ಸಿಡಿಸಿದ್ದಾರೆ. ಜೊತೆಗೆ ಐಪಿಎಲ್‍ನಲ್ಲಿ 349 ಸಿಕ್ಸ್ ಮತ್ತು 4,760 ರನ್ ಬಾರಿಸಿದ್ದಾರೆ.

  • ಮತ್ತೆ ನಿಜವಾಯ್ತು ಅರ್ಚರ್ ಭವಿಷ್ಯ- ವೈರಲ್ ಆಯ್ತು ಓಲ್ಡ್ ಟ್ವೀಟ್

    ಮತ್ತೆ ನಿಜವಾಯ್ತು ಅರ್ಚರ್ ಭವಿಷ್ಯ- ವೈರಲ್ ಆಯ್ತು ಓಲ್ಡ್ ಟ್ವೀಟ್

    ಅಬುಧಾಬಿ: ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕ್ರಿಸ್ ಗೇಲ್ 99 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದು, ಜೋಫ್ರಾ ಅರ್ಚರ್ ಎಸೆದ ಯಾರ್ಕರ್ ರನ್ನು ಎದುರಿಸಲು ಗೇಲ್ ವಿಫಲರಾಗಿದ್ದರು. ಸದ್ಯ ಈ ಕುರಿತಂತೆ ಜೋಫ್ರಾ ಅರ್ಚರ್ ಮಾಡಿದ್ದ ಹಳೆಯ ಟ್ವೀಟ್ ಒಂದು ಸಖತ್ ವೈರಲ್ ಆಗುತ್ತಿದೆ.

    ಪಂದ್ಯದಲ್ಲಿ 99 ರನ್ ಗಳಿಗೆ ವಿಕೆಟ್ ಒಪ್ಪಿಸಿದ ಗೇಲ್, ಐಪಿಎಲ್‍ನಲ್ಲಿ 2 ಬಾರಿ 99 ರನ್ ಗಳಿಗೆ ಔಟಾದ ಆಟಗಾರ ಎನಿಸಿಕೊಂಡಿದ್ದಾರೆ. ಗೇಲ್ ವಿಕೆಟ್ ಪಡೆದ ಜೋಫ್ರಾ ಇಂದಿಗೂ ಗೇಲ್ ಬಾಸ್ ಎಂದು ಟ್ವೀಟ್ ಮಾಡಿ ಅವರೊಂದಿಗೆ ಇದ್ದ ಫೋಟೋವನ್ನು ಹಂಚಿಕೊಂಡಿದ್ದಾರೆ.

    ನಾನು ಬೌಲಿಂಗ್ ಮಾಡಿದರೆ, ಆತ ಶತಕ ಗಳಿಸುವುದಿಲ್ಲ ಎಂದು 2013ರಲ್ಲಿ ಜೋಪ್ರಾ ಮಾಡಿದ್ದ ಟ್ವೀಟನ್ನು ರೀಟ್ವೀಟ್ ಮಾಡಿರುವ ರಾಜಸ್ಥಾನ ರಾಯಲ್ಸ್ ತಂಡ ಟ್ವೀಟ್ ವೈರಲ್ ಮಾಡಿದೆ. 2013ರ ಫೆಬ್ರವರಿಯಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ನಡುವೆ ನಡೆದ ಟೆಸ್ಟ್ ಪಂದ್ಯ ಉದ್ದೇಶಿಸಿ ಜೋಫ್ರಾ ಟ್ವೀಟ್ ಮಾಡಿದ್ದರು. ಜೋಫ್ರಾ ಅರ್ಚರ್ ಈ ಹಿಂದೆ ಮಾಡಿದ್ದ ಟ್ವೀಟ್ ಸದ್ಯದ ಪಂದ್ಯಗಳಿಗೆ ಹೋಲಿಕೆ ಆಗುತ್ತಿರುವುದು ಗಮನರ್ಹವಾಗಿದೆ. ಸತತ ನಾಲ್ಕು ಸಿಕ್ಸರ್, ಒಂದೇ ಓವರಿನಲ್ಲಿ 30 ರನ್ ಸೇರಿದಂತೆ ಜೋಫ್ರಾ ಮಾಡಿದ ಹಲವು ಟ್ವೀಟ್‍ಗಳು ಸಾಕಷ್ಟು ವೈರಲ್ ಆಗಿತ್ತು.

    ಕ್ರಿಸ್ ಗೇಲ್ ಅವರು ಟಿ-20 ಮಾದರಿಯ ಕ್ರಿಕೆಟ್‍ಗೆ ಹೇಳಿ ಮಾಡಿಸಿದಂತ ಬ್ಯಾಟ್ಸ್ ಮನ್ ಆಗಿದ್ದಾರೆ. ಹೊಡಿಬಡಿ ಆಟಕ್ಕೆ ಹೊಂದಿಕೊಳ್ಳುವಂತೆ ಬ್ಯಾಟ್ ಬೀಸುವ ಗೇಲ್ ಸಿಕ್ಸರ್ ಸಿಡಿಸುವುದರಲ್ಲಿ ನಿಸ್ಸೀಮರು. ಸದ್ಯ ಟಿ-20ಯಲ್ಲಿ ಮೊದಲ ಬಾರಿಗೆ 1 ಸಾವಿರ ಸಿಕ್ಸರ್ ಸಿಡಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಗೇಲ್ ಪಾತ್ರರಾಗಿದ್ದಾರೆ. ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ 2ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಗೇಲ್, 63 ಎಸೆತದಲ್ಲಿ ಆರು ಬೌಂಡರಿ ಮತ್ತು ಎಂಟು ಭರ್ಜರಿ ಸಿಕ್ಸರ್ ಸಮೇತ ಬರೋಬ್ಬರಿ 99 ರನ್ ಬಾರಿಸಿ ಔಟಾದರು. ಈ ಮೂಲಕ ಟಿ-20ಯಲ್ಲಿ ಸಾವಿರ ಸಿಕ್ಸರ್ ಸಿಡಿಸಿದರು. ವೆಸ್ಟ್ ಇಂಡೀಸ್ ಪರ ಅಂತಾರಾಷ್ಟ್ರೀಯ ಟಿ-20 ಪಂದ್ಯ, ಐಪಿಎಲ್ ಮತ್ತು ಬಿಗ್ ಬ್ಯಾಷ್ ಸೇರಿದಂತೆ ಗೇಲ್ ಹಲವಾರು ಟಿ-20 ಟೂರ್ನಿಗಳನ್ನು ಆಡಿದ್ದಾರೆ. ಈ ಎಲ್ಲ ಪಂದ್ಯಗಳಿಂದ ಕೇವಲ ಟಿ-20 ಪಂದ್ಯಗಳಲ್ಲೇ 10 ಸಾವಿರ ರನ್ ಸಿಡಿಸಿದ್ದಾರೆ. ಜೊತೆಗೆ ಐಪಿಎಲ್‍ನಲ್ಲಿ 349 ಸಿಕ್ಸ್ ಮತ್ತು 4760 ರನ್ ಬಾರಿಸಿದ್ದಾರೆ.

  • ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡೋ ಕ್ರಿಕೆಟ್ ದೇವರು- ವೈರಲ್ ಆಯ್ತು ಸೂರ್ಯಕುಮಾರ್ ಹಳೆ ಟ್ವೀಟ್

    ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡೋ ಕ್ರಿಕೆಟ್ ದೇವರು- ವೈರಲ್ ಆಯ್ತು ಸೂರ್ಯಕುಮಾರ್ ಹಳೆ ಟ್ವೀಟ್

    – ಸ್ಲೆಡ್ಜ್ ಮಾಡಿ ಟೀಕೆಗೆ ಗುರಿಯಾದ ಕೊಹ್ಲಿ

    ಅಬುಧಾಬಿ: ಸೂರ್ಯಕುಮಾರ್ ಯಾದವ್ ಐಪಿಎಲ್ 2020ರ ಆವೃತ್ತಿಯಲ್ಲಿ ಅತಿ ಹೆಚ್ಚು ಕೇಳಿ ಬರುತ್ತಿರುವ ಹೆಸರು. ಇತ್ತ ಇದೇ ಸಂದರ್ಭದಲ್ಲಿ ಟೀಂ ಇಂಡಿಯಾಗೆ ಆಯ್ಕೆ ಮಾಡದಿರುವುದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು. ಆದರೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ನಾಯಕ ವಿರಾಟ್ ಕೊಹ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಮುಂಬೈ ಯುವ ಆಟಗಾರ ಸೂರ್ಯಕುಮಾರ್ ಯಾದವ್ ಅವರನ್ನು ಸ್ಲೆಡ್ಜಿಂಗ್ ಮಾಡಿರುವುದು ಕ್ರಿಕೆಟ್ ಅಭಿಮಾನಿಗಳ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿದೆ.

    ಕೊಹ್ಲಿ ಸ್ಲೆಡ್ಜಿಂಗ್ ಮಾಡುತ್ತಿದಂತೆ ಸೂರ್ಯಕುಮಾರ್ ಯಾದವ್ ಅವರ ಹಳೆಯ ಟ್ವೀಟ್‍ಗಳನ್ನು ಬೆಳಕಿಗೆ ತರುತ್ತಿರುವ ಅಭಿಮಾನಿಗಳು ಟ್ವೀಟ್‍ಗಳನ್ನು ವೈರಲ್ ಮಾಡುತ್ತಿದ್ದಾರೆ. 2016 ರಿಂದ ಸೂರ್ಯಕುಮಾರ್ ವಿರಾಟ್ ಕೊಹ್ಲಿ ಕುರಿತು ಟ್ವೀಟ್ ಮಾಡುತ್ತಿದ್ದಾರೆ. ನಂಬರ್ 3ನೇ ಕ್ರಮಾಂಕದಲ್ಲಿ ಕ್ರಿಕೆಟ್ ದೇವರು ಭಾರತ ತಂಡ ಸಂಕಷ್ಟದಲ್ಲಿದ್ದರೆ ಪ್ರತಿ ಬಾರಿ ಕಾಪಾಡುತ್ತಾರೆ ಎಂದು 2016 ಮಾರ್ಚ್ 20 ರಂದು ಟ್ವೀಟ್ ಮಾಡಿದ್ದರು. ಇತ್ತ 2019ರ ಡಿಸೆಂಬರ್ 5 ರಂದು ಮತ್ತೊಂದು ಟ್ವೀಟ್ ಮಾಡಿದ್ದ ಅವರು, ವಿಶ್ವ ಕ್ರಿಕೆಟ್‍ನಲ್ಲಿ ಕೊಹ್ಲಿ ಅತ್ಯುನ್ನತ ಸ್ಥಾನವನ್ನು ತಲುಪಿದ್ದಾರೆ ಎಂದು ಬರೆದುಕೊಂಡಿದ್ದರು.

    ಕೊಹ್ಲಿ ಪರ ಇಷ್ಟು ಅಭಿಮಾನವನ್ನು ಹೊಂದಿರುವ ಯುವ ಆಟಗಾರನ ವಿರುದ್ಧ ಕೊಹ್ಲಿ ಸ್ಲೆಡ್ಜಿಂಗ್ ಮಾಡಿರುವುದು ಸರಿಯಲ್ಲ ಎಂದಿದ್ದಾರೆ. ಮತ್ತೆ ಕೆಲವರು ವಿರಾಟ್ ಕೊಹ್ಲಿರನ್ನು ಮಾಜಿ ನಾಯಕ ಎಂಎಸ್ ಧೋನಿಗೆ ಹೋಲಿಕೆ ಮಾಡಿ ಟೀಕೆ ಮಾಡಿದ್ದಾರೆ. ಯಾವುದೇ ಕಾರಣವಿಲ್ಲದೇ ಕೊಹ್ಲಿ ಏಕೆ ಸೂರ್ಯಕುಮಾರ್ ಯಾದವ್ ಮೇಲೆ ಗರಂ ಆಗಿದ್ದರು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ.

    ನಡೆದಿದ್ದೇನು?
    ಅಬುಧಾಬಿ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಬೆಂಗಳೂರು, ಮುಂಬೈ ನಡುವಿನ ಪಂದ್ಯದಲ್ಲಿ ಘಟನೆ ನಡೆದಿದೆ. ಪ್ಲೇ ಆಫ್ ಸೇರುವ ಹೈವೋಲ್ಟೇಜ್ ಪಂದ್ಯದಲ್ಲಿ ಕೊಹ್ಲಿ ಪಡೆ ನಿರೀಕ್ಷೆ ಮಟ್ಟದಲ್ಲಿ ಮಿಂಚಲು ವಿಫಲವಾಗಿತ್ತು. ಪಂದ್ಯದಲ್ಲಿ ಮುಂಬೈ ಪರ ಉತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣವಾದ ಸೂರ್ಯಕುಮಾರ್ ಯಾದವ್, ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ 79 ರನ್ ಗಳ ಕಾಣಿಕೆ ನೀಡಿದ್ದರು.

    ಮುಂಬೈ ಪರ ಉತ್ತಮ ಪ್ರದರ್ಶನ ನೀಡುತ್ತಿದ್ದ ಸೂರ್ಯಕುಮಾರ್ ಯಾದವ್, ಬೆಂಗಳೂರು ಬೌಲರ್ ಗಳನ್ನು ಸುಲಭಗಾಗಿ ಎದುರಿಸುತ್ತಿದ್ದರು. ಆದರೆ ಇತ್ತ ತಂಡದ ಬೌಲರ್ ಗಳು ಎದುರಾಳಿ ತಂಡದ ವಿಕೆಟ್ ಪಡೆಯಲು ವಿಫಲರಾಗಿದ್ದು, ಕೊಹ್ಲಿ ಅವರಿಗೆ ಸೂರ್ಯಕುಮಾರ್ ಅವರನ್ನು ಪ್ರಚೋದನೆ ಮಾಡುವಂತೆ ಮಾಡಿತ್ತು. 13ನೇ ಓವರಿನ ಅಂತಿಮ ಎಸೆತದ ಚೆಂಡನ್ನು ಎಕ್ಸ್ಟ್ರಾ ಕವರ್ ನತ್ತ ಸೂರ್ಯಕುಮಾರ್ ಯಾದವ್ ಬಾರಿಸಿದ್ದರು. ಈ ಚೆಂಡನ್ನು ಕೊಹ್ಲಿ ತಡೆದಿದ್ದರು. ಓವರ್ ಮುಕ್ತಾಯವಾದ ಕಾರಣ ಸೂರ್ಯಕುಮಾರ್ ಯಾದವ್ ಕ್ರಿಸ್‍ನಲ್ಲೇ ಕೊಹ್ಲಿರನ್ನು ನೋಡುತ್ತಾ ನಿಂತರು. ಕೂಡಲೇ ಚೆಂಡನ್ನು ಪಡೆದ ಕೊಹ್ಲಿ, ಸೂರ್ಯಕುಮಾರ್ ಯಾದವ್ ಬಳಿ ಗರಂ ಆಗಿ ಹೋಗಿ ನಿಂತರು. ಇತ್ತ ಸೂರ್ಯಕುಮಾರ್ ಸಮಯದ ಬಳಿಕ ನಾನ್ ಸ್ಟ್ರೈಕರ್ ಬ್ಯಾಟ್ಸ್ ಮನ್ ಬಳಿಗೆ ತೆರಳಿದ್ದರು. ಯಾದವ್ ಅಲ್ಲಿಂದ ಮುಂದೆ ಸಾಗಿದರೆ ಕೊಹ್ಲಿ ಮಾತ್ರ ಕೆಲ ಸಮಯ ಆತನನ್ನೇ ನೋಡುತ್ತಾ ನಿಂತರು.

    ಇತ್ತ ಪಂದ್ಯದಲ್ಲಿ 43 ಎಸೆತಗಳಲ್ಲಿ ಮೂರು ಸಿಕ್ಸರ್, 10 ಬೌಂಡರಿಗಳೊಂದಿಗೆ ಸೂರ್ಯಕುಮಾರ್ ಯಾದವ್ 79 ರನ್ ಗಳಿಸಿದ್ದಾರೆ. ಟೀಂ ಇಂಡಿಯಾಗೆ ಆಯ್ಕೆಯಾಗದೆ ಹೋದರೂ ಸೂರ್ಯಕುಮಾರ್ ತಮ್ಮದೇ ಶೈಲಿ ಆಯ್ಕೆ ಸಮಿತಿಗೆ ಸಂದೇಶ ರವಾನಿಸಿದ್ದಾರೆ. ಇತ್ತ ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ಸೂಚಿಸಿರುವ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ, ದೃಢವಾಗಿ, ತಾಳ್ಮೆಯಿಂದ ಇರುವಂತೆ ತಿಳಿಸಿದ್ದಾರೆ.

  • ಊಟ ಆಯ್ತಾ- ಮೈದಾನದಿಂದ್ಲೇ ಮಡದಿಯ ಕಾಳಜಿ ವಹಿಸಿದ ಕೊಹ್ಲಿ ವೀಡಿಯೋ ವೈರಲ್

    ಊಟ ಆಯ್ತಾ- ಮೈದಾನದಿಂದ್ಲೇ ಮಡದಿಯ ಕಾಳಜಿ ವಹಿಸಿದ ಕೊಹ್ಲಿ ವೀಡಿಯೋ ವೈರಲ್

    ಅಬುಧಾಬಿ: ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ನಡುವೆ ಐಪಿಎಲ್ ಪಂದ್ಯವೊಂದರ ಸಂದರ್ಭದಲ್ಲಿ ಸನ್ನೆ ಮಾಡುತ್ತಾ ಕಾಳಜಿ ವಹಿಸಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಕೋವಿಡ್ ಕಾರಣದಿಂದ ಐಪಿಎಲ್ ಪಂದ್ಯಗಳು ಯುಎಇನಲ್ಲಿ ನಡೆಯುತ್ತಿದ್ದು, ಬಯೋ ಸೆಕ್ಯೂರ್ ವಾತಾವರಣದಲ್ಲಿ ಬಿಸಿಸಿಐ ಪಂದ್ಯಗಳನ್ನು ನಡೆಸುತ್ತಿದೆ. ಈ ವೇಳೆ ಕೊಹ್ಲಿ ತಂಡವನ್ನು ಹುರಿದುಂಬಿಸಲು ಅನುಷ್ಕಾ ಶರ್ಮಾ ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಹಾಜರಿದ್ದರು. ಇದನ್ನೂ ಓದಿ:ವಿರಾಟ್ ಅಬ್ಬರದ ಆಟಕ್ಕೆ ಅನುಷ್ಕಾ ಫಿದಾ- ಚಪ್ಪಾಳೆ, ಕಿಸ್ ನೀಡಿ ಸಂಭ್ರಮ

    ಈ ಸಂದರ್ಭದಲ್ಲಿ ತಂಡದ ಇತರೇ ಆಟಗಾರರೊಂದಿಗೆ ಕ್ರೀಡಾಂಗಣಕ್ಕೆ ಆಗಮಿಸಿದ ವಿರಾಟ್ ಕೊಹ್ಲಿ, ಪ್ರೇಕ್ಷರಕರ ವಿಶೇಷ ಗ್ಯಾಲರಿಯಲ್ಲಿ ನಿಂತಿದ್ದ ಪತ್ನಿ ಅನುಷ್ಕಾರನ್ನು ನೋಡಿ ಸನ್ನೆಯ ಮೂಲಕವೇ ಊಟ ತಿಂದ ಎಂದು ವಿಚಾರಿಸಿದ್ದಾರೆ. ಸದ್ಯ ದಂಪತಿಯ ಈ ಮುದ್ದಾದ ವಿಡಿಯೋವನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ವಿಡಿಯೋದಲ್ಲಿ ವಿ-ನೆಕ್ಲೈನ್ ಹೊಂದಿರುವ ಕೆಂಪು ಉಡುಪಿನಲ್ಲಿ ಕಾಣಿಸಿಕೊಂಡಿರುವ ಅನುಷ್ಕಾ ಪತಿಗೆ ಆಯ್ತು ಎಂದು ಉತ್ತರಿಸಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಇಳಿ ಸಂಜೆಯಲಿ ಪತ್ನಿಯ ಜೊತೆ ರೊಮ್ಯಾಂಟಿಕ್ ಮೂಡ್‍ನಲ್ಲಿ ಕೊಹ್ಲಿ

    ಈ ಹಿಂದಿನ ಪಂದ್ಯದ ಸಂದರ್ಭದಲ್ಲೂ ಕ್ರೀಡಾಂಗಣದಲ್ಲಿ ಹಾಜರಿದ್ದ ಅನುಷ್ಕಾ, ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಫ್ಲೈಯಿಂಗ್ ಕಿಸ್ ನೀಡಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಂದಹಾಗೆ ಅನುಷ್ಕಾ ಐಪಿಎಲ್ 2020ರ ಆರಂಭದಿಂದಲೂ ಯುಎಇನಲ್ಲಿ ಹಾಜರಿದ್ದಾರೆ. ಗರ್ಭಿಣಿಯಾಗಿರುವ ಕಾರಣ ಕೆಳ ಪಂದ್ಯಗಳ ಸಂದರ್ಭದಲ್ಲಿ ಮಾತ್ರ ವೀಕ್ಷಿಸಲು ಕ್ರೀಡಾಂಗಣಕ್ಕೆ ಆಗಮಿಸುತ್ತಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಈ ಜೋಡಿ ತಮಗೆ ಸಿಕ್ಕ ಸಮಯವನ್ನು ಸಂತೋಷದಿಂದ ಕಳೆಯುತ್ತಿದ್ದಾರೆ.

     

    View this post on Instagram

     

    Couple Goals ???? Follow ❤️ ????@music__and__masthi ???? ❤️ #Followusformore . . . ????️ For more videos of ???? ????️ #TollyWood #BollyWood #VideoSongs #Musically #Dance #DanceVideos ????️????❤️ @instatrendsoffl #deepthishannu#combination #love #shekarmaster #naveenkumarreddy1#viral#tiktok#telugulovesongs#telugulovefailurewhatsappstatus#telugulovers #telugulovesongs #telugudubssmash #viratkohli #virushka #anushkasharma #iccworldcup2019 DISCLAIMER ‌This photo, video or Audio is not owned by ourselves ‌The copyright credit goes to respective owners ‌This video is not used for illegal sharing or profit Making ‌This video is purely Fan made ‌If any problem Message us on Instagram and the video will be removed ‌No need to report or send strike ‌Credit/Removal:-@music__and__masthi

    A post shared by MUSIC & MASTHI (@music__and__masthi) on