Tag: abu dhabi

  • ಐಪಿಎಲ್‍ನಿಂದ ಭುವಿ ಔಟ್ – ಆಂಧ್ರದ ನ್ಯೂ ಬೌಲರ್ ಎಂಟ್ರಿ

    ಐಪಿಎಲ್‍ನಿಂದ ಭುವಿ ಔಟ್ – ಆಂಧ್ರದ ನ್ಯೂ ಬೌಲರ್ ಎಂಟ್ರಿ

    ಅಬುಧಾಬಿ: ಸನ್‍ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ವೇಗಿ ಭುವನೇಶ್ವರ್ ಕುಮಾರ್ ಅವರು ಗಾಯದ ಸಮಸ್ಯೆಯಿಂದ ಐಪಿಎಲ್-2020ಯಿಂದ ಹೊರಬಿದ್ದಿದ್ದಾರೆ.

    ಕಳೆದ ಅಕ್ಟೋಬರ್ 2ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಆಡಿದ್ದರು. ಈ ಪಂದ್ಯದ 19ನೇ ಓವರ್ ಬೌಲ್ ಮಾಡಲು ಬಂದ ಭುವಿ ಒಂದು ಬಾಲ್ ಎಸೆದು ಗಾಯದ ಸಮಸ್ಯೆಗೆ ತುತ್ತಾಗಿ ಪಂದ್ಯದಿಂದ ಹೊರ ಹೋಗಿದ್ದರು.

    ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದ ಭುವನೇಶ್ವರ್ ಕುಮಾರ್ ಅವರು ಈಗ ಟೂರ್ನಿಯಿಂದಲೇ ಹೊರಬಿದಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ, ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಭುನವೇಶ್ವರ್ ಕುಮಾರ್ ಅವರು ಡ್ರೀಮ್-11 ಐಪಿಎಲ್‍ನಿಂದ ಹೊರಬಿದ್ದಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಕೇಳಿಕೊಳ್ಳುತ್ತೇವೆ. ಅವರ ಸ್ಥಾನಕ್ಕೆ ಪೃಥ್ವಿ ರಾಜ್ ಯರ್ರಾ ಅವರು ಬರಲಿದ್ದಾರೆ ಎಂದು ತಿಳಿಸಿದೆ.

    ಸ್ನಾಯ ಸೆಳೆತದ ಸಮಸ್ಯೆಯಿಂದ ಭುವನೇಶ್ವರ್ ಕುಮಾರ್ ಅವರು ಐಪಿಎಲ್‍ನಿಂದ ಹೊರಬಿದ್ದಿದ್ದಾರೆ. ಅವರಿಗೆ 6 ರಿಂದ 8 ವಾರಗಳ ಕಾಲ ವಿಶ್ರಾಂತಿ ಬೇಕಿದ್ದು, ಅವರು ಈ ಬಾರಿಯ ಐಪಿಎಲ್‍ನಿಂದ ಹೊರನಡೆದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಈ ಬಾರಿಯ ಐಪಿಎಲ್‍ನಲ್ಲಿ ಹೈದರಬಾದ್ ಪರ 4 ಪಂದ್ಯಗಳನ್ನು ಆಡಿದ್ದ ಭುವಿ 3 ವಿಕೆಟ್ ಪಡೆದುಕೊಂಡಿದ್ದರು. ಅವರ ಅನುಪಸ್ಥಿತಿ ಹೈದರಾಬಾದ್ ತಂಡವನ್ನು ಕಾಡಲಿದ್ದು, ಡೆತ್ ಓವರ್ ಬೌಲಿಂಗ್ ಸಮಸ್ಯೆ ತಂಡಕ್ಕೆ ಎದುರಾಗಿದೆ.

    ಯಾರು ಈ ಪೃಥ್ವಿರಾಜ್?
    ಗಾಯದ ಸಮಸ್ಯೆಯಿಂದ ಹೊರಬಿದ್ದ ಭುವನೇಶ್ವರ್ ಕುಮಾರ್ ಅವರ ಜಾಗಕ್ಕೆ ಹೈದರಾಬಾದ್ ತಂಡ ಯುವ ವೇಗಿ ಪೃಥ್ವಿ ರಾಜ್ ಯರ್ರಾ ಅವರನ್ನು ಕರೆತಂದಿದೆ. ಪೃಥ್ವಿ ರಾಜ್ ಮೂಲತಃ ಆಂಧ್ರ ಪ್ರದೇಶದವರಾಗಿದ್ದು, ಆಂಧ್ರ ರಾಜ್ಯ ತಂಡಲ್ಲಿ ರಣಜಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ್ದಾರೆ. ಜೊತೆಗೆ 2018ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಐಪಿಎಲ್ ಆಡಿದ್ದಾರೆ.

  • ಪಡಿಕ್ಕಲ್, ಕೊಹ್ಲಿ ಬೊಂಬಾಟ್ ಆಟಕ್ಕೆ ಮಣಿದ ರಾಜಸ್ಥಾನ- ಆರ್‌ಸಿಬಿಗೆ 8 ವಿಕೆಟ್ ಗೆಲುವು

    ಪಡಿಕ್ಕಲ್, ಕೊಹ್ಲಿ ಬೊಂಬಾಟ್ ಆಟಕ್ಕೆ ಮಣಿದ ರಾಜಸ್ಥಾನ- ಆರ್‌ಸಿಬಿಗೆ 8 ವಿಕೆಟ್ ಗೆಲುವು

    -ಅಂಕ ಪಟ್ಟಿಯಲ್ಲಿ ಮೊದಲ‌‌ ಸ್ಥಾನಕ್ಕೆ ಏರಿದ ಆರ್‌ಸಿಬಿ

    ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2020ರ ಆವೃತಿಯಲ್ಲಿ 3ನೇ ಗೆಲುವು ಪಡೆದಿದ್ದು, ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್‍ಗಳ ಗೆಲುವು ಪಡೆದಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ 6 ಪಾಯಿಂಟ್ ಗಳೊಂದಿಗೆ ನಂ.1 ಸ್ಥಾನಕ್ಕೆ ಏರಿದೆ.

    ಪಡಿಕ್ಕಲ್ (63 ರನ್), ವಿರಾಟ್ ಕೊಹ್ಲಿ (72 ರನ್) ಅರ್ಧ ಶತಕದ ನೆರವಿನಿಂದ 155 ರನ್‍ಗಳ ಗುರಿಯನ್ನು 5 ಎಸೆತ ಬಾಕಿ ಇರುವಂತೆಯೇ ಆರ್‌ಸಿಬಿ ಗುರಿ ಮುಟ್ಟಿತು. 19.1 ಓವರ್ ನಲ್ಲಿ ಕೊಹ್ಲಿ ಪಡೆ 2 ವಿಕೆಟ್ ನಷ್ಟಕ್ಕೆ 158 ರನ್ ಸಿಡಿಸಿತು.

    155 ರನ್ ಗಳ ಸ್ಪರ್ಧತ್ಮಾಕ ರನ್ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ತಂಡಕ್ಕೆ ದೇವದತ್ ಪಡಿಕ್ಕಲ್ ಬೌಂಡರಿ, ಸಿಕ್ಸರ್ ಮೂಲಕ ಸ್ಫೋಟಕ ಆರಂಭವನ್ನೇ ನೀಡಿದರು. ಆದರೆ ತಂಡ 2.3 ಓವರ್ ಗಳಲ್ಲಿ 25 ರನ್ ಗಳಿಸಿದ್ದ ವೇಳೆ ಫಿಂಚ್, ಗೋಪಾಲ್‍ಗೆ ವಿಕೆಟ್ ಒಪ್ಪಿಸಿದರು. ಈ ಸಂದರ್ಭದಲ್ಲಿ ರಾಜಸ್ಥಾನ ತಂಡ ನಾಯಕ ತೆಗೆದುಕೊಂಡ ಡಿಆರ್‍ಎಸ್ ಮನವಿ ಸಫಲತೆಯನ್ನು ನೀಡಿತ್ತು.

    ಬಿರುಸಿನ ಬ್ಯಾಟಿಂಗ್‍ಗೆ ಮುಂದಾಗಿದ್ದ ಪಡಿಕ್ಕಲ್ ಜೊತೆ ಕೂಡಿಕೊಂಡ ನಾಯಕ ಕೊಹ್ಲಿ ತಾಳ್ಮೆ ಆಟಕ್ಕೆ ಮುಂದಾದರು. ಪವರ್ ಪ್ಲೇ ಅಂತ್ಯ ವೇಳೆಗೆ ಆರ್‌ಸಿಬಿ ವಿಕೆಟ್ ಕಳೆದುಕೊಂಡು 50 ರನ್ ಗಳಿಸಿತ್ತು.

    ಪಡಿಕ್ಕಲ್ ಬೊಂಬಾಟ್ ಬ್ಯಾಟಿಂಗ್: ಇನ್ನಿಂಗ್ಸ್ ಆರಂಭದಿಂದಲೂ ರಾಜಸ್ಥಾನ ಬೌಲರ್ ಗಳನ್ನು ತಮ್ಮ ಬಿರುಸಿನ ಬ್ಯಾಟಿಂಗ್ ಮೂಲಕ ಎದುರಿಸಿದ ಪಡಿಕ್ಕಲ್ 2020ರ ಆವೃತ್ತಿಯಲ್ಲಿ 3ನೇ ಅರ್ಧ ಶತಕ ಸಿಡಿಸಿದರು. 34 ಎಸೆತಗಳಲ್ಲಿ ಅರ್ಧ ಶತಕ ಪೂರ್ಣಗೊಳಿಸಿದ್ದು ವಿಶೇಷವಾಗಿತ್ತು. ಉತ್ತಮವಾಗಿ ಆಡುತ್ತಿದ್ದ ಪಡಿಕ್ಕಲ್ ಇನಿಂಗ್ಸ್ ನಲ್ಲಿ ತಂಡ 124 ರನ್ ಗಳಿಸಿದ್ದ ಸಂದರ್ಭದಲ್ಲಿ, 15 ಓವರಿನ 5ನೇ ಎಸೆತದಲ್ಲಿ ಭಾರೀ ಹೊಡೆತಕ್ಕೆ ಮುಂದಾಗಿ ಕ್ಲೀನ್ ಬೌಲ್ಡ್ ಆಗುವ ಮೂಲಕ ಆರ್ಚರ್ ಗೆ ವಿಕೆಟ್ ಒಪ್ಪಿಸಿದರು. 45 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ನೆರವಿನಿಂದ 140 ಸ್ಟ್ರೈಕ್ ರೇಟ್‍ನೊಂದಿಗೆ 63 ರನ್ ಗಳಿಸಿದ ಪಡಿಕ್ಕಲ್ ಸ್ಮರಣೀಯ ಬ್ಯಾಟಿಂಗ್ ಪ್ರದರ್ಶನ ನೀಡಿದರು.

    ಫಾರ್ಮ್‍ಗೆ ಮರಳಿದ ಕೊಹ್ಲಿ: ಐಪಿಎಲ್ 2020ರ ಆವೃತ್ತಿಯ ಆರಂಭಿಕ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್‍ನಲ್ಲಿ ವಿಫಲವಾಗಿದ್ದ ಕೊಹ್ಲಿ ರಾಜಸ್ಥಾನದ ವಿರುದ್ಧ ಪಂದ್ಯದಲ್ಲಿ ಫಾರ್ಮ್ ಗೆ ಮರಳಿದರು. ಇನ್ಸಿಂಗ್ ಆರಂಭದಿಂದಲೂ ಆತ್ಮವಿಶ್ವಾಸದಿಂದಲೇ ಬ್ಯಾಟ್ ಬೀಸಿದ ಕೊಹ್ಲಿ 42 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. 8 ಇನ್ನಿಂಗ್ಸ್ ಗಳ ಬಳಿಕ ಕೊಹ್ಲಿ ಅರ್ಧ ಶತಕ ಗಳಿಸಿದ್ದರು. ಇನ್ಸಿಂಗ್‍ನಲ್ಲಿ 71 ರನ್ ಗಳಿಸಿದ್ದ ಸಂದರ್ಭದಲ್ಲಿ ಕೊಹ್ಲಿ ಐಪಿಎಲ್‍ನಲ್ಲಿ 5500 ರನ್‍ಗಳನ್ನು ಪೂರ್ಣಗೊಳಿಸಿದರು.

    ಪಂದ್ಯದಲ್ಲಿ ಪಡಿಕ್ಕಲ್, ಕೊಹ್ಲಿ ಜೋಡಿ 80 ಎಸೆತಗಳಲ್ಲಿ 99 ರನ್ ಸಿಡಿಸಿ ತಂಡದ ಗೆಲುವಿಗೆ ಕಾರಣವಾಯಿತು. ನಾಯಕ ಕೊಹ್ಲಿ ಅಂತಿಮವಾಗಿ 53 ಎಸೆತಗಳಲ್ಲಿ 7 ಬೌಂಡತರಿ, 2 ಸಿಕ್ಸರ್ ನೆರವಿನಿಂದ 72 ರನ್ ಸಿಡಿಸಿ ಅಜೇಯರಾಗಿ ಉಳಿದರು. ಉಳಿದಂತೆ ಆರ್ ಸಿಬಿ ಪರ ಫಿಂಚ್ 8 ರನ್, ಎಬಿಡಿ ಔಟಾಗದೆ 10 ಎಸೆತಗಳಲ್ಲಿ 12 ರನ್ ಗಳಿಸಿದರು.

    ಇದಕ್ಕೂ ಮುನ್ನ ಆರ್‌ಸಿಬಿ ಸ್ಪಿನ್ ಮಾಂತ್ರಿಕ ಚಹಲ್, ವೇಗಿ ಇಸುರು ಉದಾನಾ ಅವರ ಬೌಲಿಂಗ್ ದಾಳಿಗೆ ತತ್ತರಿಸಿದ ರಾಜಸ್ಥಾನ್ ರಾಯಲ್ಸ್ ತಂಡ ಬೆಂಗಳೂರು ತಂಡಕ್ಕೆ 155 ರನ್‍ಗಳ ಟಾರ್ಗೆಟ್ ನೀಡಿತ್ತು. ಆರ್ ಸಿಬಿ ಪರ ಚಹಲ್ ಪ್ರಮುಖ 3 ವಿಕೆಟ್ ಪಡೆದರೆ, ಉದಾನಾ 2 ಹಾಗೂ ಸೈನಿ 1 ವಿಕೆಟ್ ಪಡೆದರು.

    ರಾಜಸ್ಥಾನ ರಾಯಲ್ಸ್ ಪರ ಲೊಮರ್ ಗಳಿಸಿದ ತಾಳ್ಮೆಯ 47 ರನ್ ಹಾಗೂ ಅಂತಿಮ ಸ್ಲಾಗ್ ಓವರ್ ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಆಡಿದ ರಾಹುಲ್ ತೇವಟಿಯಾ ಮತ್ತು ಜೋಫ್ರಾ ಆರ್ಚರ್ ಅವರು, 6ನೇ ವಿಕೆಟ್‍ಗೆ ಉತ್ತಮ ಜೊತೆಯಾಟವಾಡಿದರು. ಕೊನೆಯ 21 ಬಾಲಿಗೆ ಈ ಜೋಡಿ ಬರೋಬ್ಬರಿ 40 ರನ್ ಚಚ್ಚಿದ್ದು, ರಾಜಸ್ಥಾನ ತಂಡ ಇನ್ನಿಂಗ್ಸ್ ನಲ್ಲಿ ಸ್ಪಧಾತ್ಮಕ ಮೊತ್ತ ದಾಖಲಿಸಲು ಕಾರಣವಾಯ್ತು.

  • ವಿವಾದಕ್ಕೆ ಕಾರಣವಾಯ್ತು ಚಹಲ್ ಹಿಡಿದ ಕ್ಯಾಚ್- ಚೆಂಡು ನೆಲಕ್ಕೆ ತಾಗಿತ್ತಾ?

    ವಿವಾದಕ್ಕೆ ಕಾರಣವಾಯ್ತು ಚಹಲ್ ಹಿಡಿದ ಕ್ಯಾಚ್- ಚೆಂಡು ನೆಲಕ್ಕೆ ತಾಗಿತ್ತಾ?

    ಅಬುಧಾಬಿ: ಐಪಿಎಲ್ 2020ರ ಆವೃತ್ತಿಯಲ್ಲಿ ಮತ್ತೊಂದು ವಿವಾದತ್ಮಾಕ ತೀರ್ಪು ಚರ್ಚೆಗೆ ಕಾರಣವಾಗಿದೆ. ರಾಜಸ್ಥಾನ ರಾಯಲ್ಸ್, ಬೆಂಗಳೂರು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ಘಟನೆ ನಡೆದಿದೆ.

    ಪಂದ್ಯದಲ್ಲಿ 4ನೇ ಓವರಿನ ಮೊದಲ ಎಸೆತದಲ್ಲಿ ಸಂಜು ಸ್ಯಾಮ್ಸನ್ ಬೌಂಡರಿ ಸಿಡಿಸಲು ಮುಂದಾದರು, ಆದರೆ ಈ ವೇಳೆ ಸಂಜು ಬ್ಯಾಟ್‍ಗೆ ಟಚ್‍ಆಗಿ ಸಿಡಿದ ಚೆಂಡನ್ನು ಚಹಲ್ ಕ್ಯಾಚ್ ಪಡೆದರು. ಆದರೆ ಚಹಲ್ ಪಡೆದ ಕ್ಯಾಚ್ ಕುರಿತು ಅನುಮಾನ ವ್ಯಕ್ತಪಡಿಸಿದ ಆನ್‍ಫೀಲ್ಡ್ ಅಂಪೈರ್ ಮೂರನೇ ಅಂಪೈರ್ ಗೆ ಮನವಿ ಸಲ್ಲಿಸಿದ್ದರು. ರೀಪ್ಲೇ ಗಮನಿಸಿದ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದರು.

    ಆದರೆ ಮೂರನೇ ಅಂಪೈರ್ ತೀರ್ಪಿನ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಅಭಿಮಾನಿಗಳು, ಫೀಲ್ಡ್ ಅಂಪೈರ್ ತೀರ್ಪಿಗೆ ಸಹಮತ ವ್ಯಕ್ತಪಡಿಸಿದಕ್ಕೆ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಹಲ್ ಕ್ಯಾಚ್ ಪಡೆಯುವ ಸಂದರ್ಭದಲ್ಲಿ ಚೆಂಡು ಭೂಮಿಗೆ ತಾಗಿದೆ ಎಂದು ವಾದ ಮಂಡಿಸಿದ್ದರೆ. ಮತ್ತೆ ಕೆಲ ಅಭಿಮಾನಿಗಳು ಚಹಲ್ ಬೆರಳು ಚೆಂಡಿನ ಕೆಳಭಾಗದಲ್ಲಿ ಇರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಹೇಳಿದ್ದಾರೆ.

    ಪಂದ್ಯದಲ್ಲಿ ಆರ್‌ಸಿಬಿ ಸ್ಪಿನ್ ಮಾಂತ್ರಿಕ ಚಹಲ್, ವೇಗಿ ಇಸುರು ಉದಾನಾ ಅವರ ಬೌಲಿಂಗ್ ದಾಳಿಗೆ ತತ್ತರಿಸಿದ ರಾಜಸ್ಥಾನ್ ರಾಯಲ್ಸ್ ತಂಡ ಬೆಂಗಳೂರು ತಂಡಕ್ಕೆ 155 ರನ್‍ಗಳ ಟಾರ್ಗೆಟ್ ನೀಡಿದೆ. ಆರ್ ಸಿಬಿ ಪರ ಚಹಲ್ ಪ್ರಮುಖ 3 ವಿಕೆಟ್ ಪಡೆದರೆ, ಉದಾನಾ 2 ಹಾಗೂ ಸೈನಿ 1 ವಿಕೆಟ್ ಪಡೆದರು.

    ರಾಜಸ್ಥಾನ ರಾಯಲ್ಸ್ ಪರ ಲೊಮರ್ ಗಳಿಸಿದ ತಾಳ್ಮೆಯ 47 ರನ್ ಹಾಗೂ ಅಂತಿಮ ಸ್ಲಾಗ್ ಓವರ್ ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಆಡಿದ ರಾಹುಲ್ ತೇವಟಿಯಾ ಮತ್ತು ಜೋಫ್ರಾ ಆರ್ಚರ್ ಅವರು, 6ನೇ ವಿಕೆಟ್‍ಗೆ ಉತ್ತಮ ಜೊತೆಯಾಟವಾಡಿದರು. ಕೊನೆಯ 21 ಬಾಲಿಗೆ ಈ ಜೋಡಿ ಬರೋಬ್ಬರಿ 40 ರನ್ ಚಚ್ಚಿದ್ದು, ರಾಜಸ್ಥಾನ ತಂಡ ಇನ್ನಿಂಗ್ಸ್ ನಲ್ಲಿ ಸ್ಪಧಾತ್ಮಕ ಮೊತ್ತ ದಾಖಲಿಸಲು ಕಾರಣವಾಯ್ತು.

  • ಚಹಲ್, ಉದಾನಾ ಬೌಲಿಂಗ್ ಮೋಡಿಗೆ ಮಂಕಾದ ರಾಯಲ್ಸ್ – ಆರ್‌ಸಿಬಿಗೆ 155 ರನ್‍ಗಳ ಗುರಿ

    ಚಹಲ್, ಉದಾನಾ ಬೌಲಿಂಗ್ ಮೋಡಿಗೆ ಮಂಕಾದ ರಾಯಲ್ಸ್ – ಆರ್‌ಸಿಬಿಗೆ 155 ರನ್‍ಗಳ ಗುರಿ

    – 21 ಬಾಲಿಗೆ 40 ರನ್, ಕೊನೆಯಲ್ಲಿ ಆರ್ಚರ್, ತೇವಟಿಯಾ ಅಬ್ಬರ

    ಅಬುಧಾಬಿ: ಆರ್‌ಸಿಬಿ ಸ್ಪಿನ್ ಮಾಂತ್ರಿಕ ಯುಜ್ವೇಂದ್ರ ಚಹಲ್ ಮತ್ತು ವೇಗಿ ಇಸುರು ಉದಾನಾ ಅವರ ಬೌಲಿಂಗ್ ದಾಳಿಗೆ ತತ್ತರಿಸಿದ ರಾಜಸ್ಥಾನ್ ರಾಯಲ್ಸ್ ತಂಡ ಬೆಂಗಳೂರು ತಂಡಕ್ಕೆ 155 ರನ್‍ಗಳ ಟಾರ್ಗೆಟ್ ನೀಡಿದೆ.

    ಇಂದು ವಿಕೇಂಡ್ ಧಮಾಕದ ಮೊದಲನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿವೆ. ಅಬುಧಾಬಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಬಂದ ರಾಜಸ್ಥಾನ್ ತಂಡ ಆರಂಭಿಕ ಕುಸಿತದ ನಂತರ ಕೊಂಚ ಚೇತರಿಕೊಂಡು ಬೆಂಗಳೂರು ತಂಡಕ್ಕೆ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ನೀಡಿದೆ.

    ಚಹಲ್ ಸ್ಪಿನ್ ಮೋಡಿ
    ಆರ್‌ಸಿಬಿ ಪರವಾಗಿ ಮ್ಯಾಜಿಕಲ್ ಸ್ಪಿನ್ ಮಾಡಿದ ಯುಜ್ವೇಂದ್ರ ಚಹಲ್ ಅವರು ತಮ್ಮ ಕೋಟದ ನಾಲ್ಕು ಓವರ್ ಬೌಲ್ ಮಾಡಿ ಮೂರು ಪ್ರಮುಖ ವಿಕೆಟ್ ಕಿತ್ತು ಕೇವಲ 24 ರನ್ ಕೊಟ್ಟು ಮಿಂಚಿದರು. ಇದೇ ವೇಳೆ ಇವರಿಗೆ ಉತ್ತಮ ಸಾಥ್ ಕೊಟ್ಟ ಇಸುರು ಉದಾನಾ ಅವರು, ನಾಲ್ಕು ಓವರ್ ಬೌಲ್ ಮಾಡಿ ಎರಡು ವಿಕೆಟ್ ಕಿತ್ತು 41 ರನ್ ಬಿಟ್ಟುಕೊಟ್ಟು ದುಬಾರಿಯಾದರು. ನವದೀಪ್ ಸೈನಿಯವರ ಕೂಡ ಒಂದು ವಿಕೆಟ್ ಪಡೆದು ಮಿಂಚಿದರು.

    ರಾಜಸ್ಥಾನ್ ರಾಯಲ್ಸ್ ಕಡೆಯಿಂದ ಆರಂಭಿಕ ಜೋಸ್ ಬಟ್ಲರ್ ಅವರು ಆರಂಭದ ಓವರಿನಲ್ಲೇ ಸ್ಫೋಟಕ ಆಟಕ್ಕೆ ಮುಂದಾದರು. ಆದರೆ ಪಂದ್ಯದ 2ನೇ ಓವರಿನ ನಾಲ್ಕನೇ ಬಾಲಿನಲ್ಲಿ ನಾಯಕ ಸ್ಟೀವ್ ಸ್ಮಿತ್ ಅವರು ಕೇವಲ 5 ರನ್ ಗಳಿಸಿ ಇಸುರು ಉದಾನಾ ಅವರಿಗೆ ಬೌಲ್ಡ್ ಆದರು. ನಂತರ ಬಂದ ನವದೀಪ್ ಸೈನಿ ಅವರು 12 ಬಾಲಿಗೆ 22 ರನ್ ಸಿಡಿಸಿ ಅಬ್ಬರಿಸುವ ಮನ್ಸೂಚನೆ ನೀಡಿದ್ದ ಬಟ್ಲರ್ ಅವರನ್ನು ಪೆವಿಲಿಯನ್‍ಗೆ ಅಟ್ಟಿದರು.

    ನಾಲ್ಕನೇ ಓವರ್ ಬೌಲಿಂಗ್‍ಗೆ ಬಂದು ತಂಡಕ್ಕೆ ಟ್ವಿಸ್ಟ್ ಕೊಟ್ಟ ಯುಜ್ವೇಂದ್ರ ಚಾಹಲ್ ಅವರು, ಉತ್ತಮ ಲಯದಲ್ಲಿದ್ದ ಸಂಜು ಸ್ಯಾಮ್ಸನ್ ಅವರನ್ನು ಔಟ್ ಮಾಡಿದರು. ಈ ಮೂಲಕ ಆರಂಭದಲ್ಲೇ ಟಾಪ್ ಆರ್ಡರ್ ಬ್ಯಾಟ್ಸ್ ಮ್ಯಾನ್ ಕಳೆದುಕೊಂಡು ಕುಸಿದ ರಾಜಸ್ಥಾನ್ ರಾಯಲ್ಸ್ ತಂಡ ಪವರ್ ಪ್ಲೇ ಮುಕ್ತಾಯದ ವೇಳೆಗೆ 38 ರನ್ ಸೇರಿಸಿತ್ತು. ನಂತರ ಜೊತೆಯಾದ ರಾಬಿನ್ ಉತ್ತಪ್ಪ ಮತ್ತು ಮಹಿಪಾಲ್ ಲೊಮರ್ ಉತ್ತಮವಾಗಿ ಬ್ಯಾಟ್ ಬೀಸಿದರು. ಹೀಗಾಗಿ 10 ಓವರ್ ಮುಕ್ತಾಯಕ್ಕೆ ರಾಜಸ್ಥಾನ್ 70 ಪೇರಿಸಿತು.

    ನಂತರ ಚಹಲ್ ಓವರಿನಲ್ಲಿ ದೊಡ್ಡ ಹೊಡೆತಕ್ಕೆ ಕೈ ಹಾಕಿದ ರಾಬಿನ್ ಉತ್ತಪ್ಪ 17 ರನ್ ಸಿಡಿಸಿ ಹೊರನಡೆದರು. ನಂತರ ಒಂದಾದ ಯುವ ಆಟಗಾರಾದ ರಿಯಾನ್ ಪರಾಗ್ ಮತ್ತು ಮಹಿಪಾಲ್ ಲೊಮರ್ ಅವರು ತಾಳ್ಮೆಯಿಂದ ಬ್ಯಾಟ್ ಬೀಸಿ ರನ್ ಕಲೆ ಹಾಕಿದರು. ಪರಿಣಾಮ 15ನೇ ಓವರಿನ ಮೊದಲನೇ ಬಾಲಿನಲ್ಲೇ ರಾಜಸ್ಥಾನ್ 100ರ ಗಡಿದಾಟಿತು. ನಂತರ ರಿಯಾನ್ ಪರಾಗ್ ಅವರು ಉದಾನ ಅವರ ಬೌಲಿಂಗ್‍ನಲ್ಲಿ ಫಿಂಚ್ ಅವರಿಗೆ ಕ್ಯಾಚ್ ಕೊಟ್ಟು ಪೆವಿಲಿಯನ್ ಸೇರಿದರು.

    ನಂತರ ಉತ್ತಮವಾಗಿ ಆಡಿಕೊಂಡು ಬಂದಿದ್ದ ಯುವ ಆಟಗಾರ ಮಹಿಪಾಲ್ ಲೊಮರ್ ಅವರು 39 ಬಾಲಿಗೆ 47 ರನ್ ಹೊಡೆದ ಚಹಲ್ ಅವರ ಸ್ಪನ್ ಬಲೆಗೆ ಬಿದ್ದರು. ಆದರೆ ಕೊನೆಯಲ್ಲಿ ಹೊಂದಾಗಿ ಸ್ಫೋಟಕ ಬ್ಯಾಟಿಂಗ್ ಆಡಿದ ರಾಹುಲ್ ತೇವಟಿಯಾ ಮತ್ತು ಜೋಫ್ರಾ ಆರ್ಚರ್ ಅವರು, 6ನೇ ವಿಕೆಟ್‍ಗೆ ಉತ್ತಮ ಜೊತೆಯಾಟವಾಡಿದರು. ಕೊನೆಯ 21 ಬಾಲಿಗೆ ಈ ಜೋಡಿ ಬರೋಬ್ಬರಿ 40 ರನ್ ಚಚ್ಚಿದರು.

  • ಟಿ20 ಕ್ರಿಕೆಟ್‍ನಲ್ಲಿ ಮತ್ತೊಂದು ದಾಖಲೆ ನಿರ್ಮಿಸುವ ಸನಿಹದಲ್ಲಿ ಕೊಹ್ಲಿ

    ಟಿ20 ಕ್ರಿಕೆಟ್‍ನಲ್ಲಿ ಮತ್ತೊಂದು ದಾಖಲೆ ನಿರ್ಮಿಸುವ ಸನಿಹದಲ್ಲಿ ಕೊಹ್ಲಿ

    ಅಬುಧಾಬಿ: ಐಪಿಎಲ್‍ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿರುವ ವಿರಾಟ್ ಕೊಹ್ಲಿ ಟಿ20 ಮಾದರಿಯಲ್ಲಿ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.

    ಐಪಿಎಲ್‍ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿರುವ ವಿರಾಟ್ ಕೊಹ್ಲಿ ಟಿ20 ಮಾದರಿಯಲ್ಲಿ ದಾಖಲೆ ಬರೆಯುವ ಸನಿಹದಲ್ಲಿದೆ. ಕೊಹ್ಲಿ 82 ರನ್ ಗಳಿಸಿದರೆ ಟಿ20 ಮಾದರಿಯಲ್ಲಿ 9 ಸಾವಿರ ಗಳಿಸಿದ ಮೊದಲ ಟೀಂ ಇಂಡಿಯಾ ಆಟಗಾರ ಎನಿಸಿಕೊಳ್ಳಲಿದ್ದಾರೆ. ವಿಶ್ವ ಕ್ರಿಕೆಟ್‍ನಲ್ಲಿ ಕೊಹ್ಲಿ ಈ ಸಾಧನೆ ಮಾಡಿದ 7ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

    ಕೊಹ್ಲಿ 269 ಇನ್ನಿಂಗ್ಸ್ ಗಳಲ್ಲಿ ಇದುವರೆಗೂ 134.24 ಸ್ಟ್ರೈಕ್ ರೇಟ್‍ನಲ್ಲಿ 9,918 ರನ್ ಗಳಿಸಿದ್ದು, ಇದರಲ್ಲಿ 5 ಶತಕ, 64 ಅರ್ಧ ಶತಕಗಳು ಸೇರಿದೆ. ಐಪಿಎಲ್‍ನಲ್ಲಿ 180 ಪಂದ್ಯಗಳಲ್ಲಿ ಕೊಹ್ಲಿ 5,430 ರನ್ ಗಳಿಸಿದ್ದಾರೆ.

    ಐಪಿಎಲ್ 2020ರ ಆವೃತ್ತಿಯಲ್ಲಿ ಇದುವರೆಗೂ ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಇದುವರೆಗೂ ಆಡಿರುವ ಮೂರು ಪಂದ್ಯಗಳಲ್ಲಿ 18 ರನ್ (3, 1, 14) ಗಳಷ್ಟೇ ಗಳಿಸಿದ್ದಾರೆ. ಇಂದು ಆರ್‌ಸಿಬಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.

    ಟೂರ್ನಿಯಲ್ಲಿ ಆರ್‌ಸಿಬಿ ಸೋಲು, ಗೆಲುವಿನ ರುಚಿ ಸವಿದಿದ್ದು, ಹೈದರಾಬಾದ್ ಮತ್ತು ಮುಂಬೈ ಎದುರು ಗೆಲುವು ಪಡೆದಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಸೋಲುಂಡಿತ್ತು. ಇಂದಿನ ಪಂದ್ಯದಲ್ಲಿ ಉಭಯ ತಂಡಗಳ ಬಲಿಷ್ಠ ನಾಯಕರ ನಡುವಿನ ಸೆಣಸಾಟ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಬ್ಯಾಟಿಂಗ್ ಹಾಗೂ ನಾಯಕತ್ವದಲ್ಲಿ ಕೊಹ್ಲಿ ಮತ್ತು ಸ್ಟೀವ್ ಸ್ಮಿತ್ ಅವರ ನಡುವೆ ಯಾರು ಉತ್ತಮರು ಎಂಬ ಪ್ರಶ್ನೆ ವಿಶ್ವ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಕಾರಣ ಇಬ್ಬರಿಗೂ ಈ ಪಂದ್ಯ ಪ್ರತಿಷ್ಠೆಯ ಕಣವಾಗಿದೆ.

  • ಇಂದು ಆರ್‌ಸಿಬಿ ವರ್ಸಸ್ ರಾಜಸ್ಥಾನ್ ಪಂದ್ಯ – ಕೊಹ್ಲಿ, ಸ್ಟೀವ್ ಸ್ಮಿತ್ ಮುಖಾಮುಖಿ

    ಇಂದು ಆರ್‌ಸಿಬಿ ವರ್ಸಸ್ ರಾಜಸ್ಥಾನ್ ಪಂದ್ಯ – ಕೊಹ್ಲಿ, ಸ್ಟೀವ್ ಸ್ಮಿತ್ ಮುಖಾಮುಖಿ

    – ಇಬ್ಬರು ಬೆಸ್ಟ್ ಬ್ಯಾಟ್ಸ್‌ಮ್ಯಾನ್‌ಗಳಿಗೆ  ಪ್ರತಿಷ್ಠೆಯ ಕಣ

    ಅಬುಧಾಬಿ: ಇಂದು ಐಪಿಎಲ್ ವಿಕೇಂಡ್ ಧಮಾಕದ ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

    ಐಪಿಎಲ್‍ನಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿವೆ. ಅಬುಧಾಬಿ ಕ್ರಿಕೆಟ್ ಮೈದಾನದಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಉಭಯ ತಂಡಗಳ ಬಲಿಷ್ಠ ನಾಯಕರು ಇಂದು ಸೆಣಸಾಡಲಿದ್ದಾರೆ. ಬ್ಯಾಟಿಂಗ್‍ನಲ್ಲಿ ಕೊಹ್ಲಿ ಮತ್ತು ಸ್ಟೀವ್ ಸ್ಮಿತ್ ಅವರ ನಡುವೆ ಯಾರು ಉತ್ತಮರು ಎಂಬ ಪ್ರಶ್ನೆ ವಿಶ್ವ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಕಾರಣ ಇಬ್ಬರಿಗೂ ಈ ಪಂದ್ಯ ಪ್ರತಿಷ್ಠೆಯ ಕಣವಾಗಿದೆ.

    ಈಗಾಗಲೇ ಐಪಿಎಲ್‍ನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಎರಡು ಪಂದ್ಯ ಗೆದ್ದಿರುವ ಬೆಂಗಳೂರು ತಂಡ ಉತ್ತಮ ಸ್ಥಿತಿಯಲ್ಲಿದೆ. ಜೊತೆಗೆ ಕಳೆದ ಪಂದ್ಯವನ್ನು ಬಲಿಷ್ಠ ಮುಂಬೈ ವಿರುದ್ಧ ಸೂಪರ್ ಓವರಿನಲ್ಲಿ ಗೆದ್ದ ಆತ್ಮವಿಶ್ವಾಸದೊಂದಿಗೆ ಇಂದು ಕಣಕ್ಕೆ ಇಳಿಯಲಿದೆ. ಜೊತೆಗೆ ರಾಜಸ್ಥಾನ್ ಕೂಡ ಆಡಿರುವ 3 ಪಂದ್ಯಗಳಲ್ಲಿ ಎರಡಲ್ಲಿ ಗೆಲುವು ಸಾಧಿಸಿದೆ. ಜೊತೆಗೆ ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧ ಹೀನಾಯ ಸೋಲಿನ ಕಹಿ ಅನುಭವದೊಂದಿಗೆ ಇಂದು ಆಡಬೇಕಿದೆ.

    ಆರ್‌ಸಿಬಿಗೆ ಬ್ಯಾಟಿಂಗ್ ಬಲ
    ಆರ್‌ಸಿಬಿ ತಂಡದಲ್ಲಿ ಬ್ಯಾಟ್ಸ್ ಮ್ಯಾನ್‍ಗಳ ದಂಡೇ ಇದೆ. ಆಸೀಸ್‍ನ ಅನುಭವಿ ಆಟಗಾರ ಫಿಂಚ್, ನಾಯಕ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಪಂದ್ಯದ ಯಾವುದೇ ಹಂತದಲ್ಲಿಯಾದರೂ ಸಿಡಿದೆಳೇಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ. ಜೊತೆಗೆ ಕನ್ನಡಿಗ ದೇವದತ್ ಪಡಿಕಲ್ ಅವರು ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದು, ಬೆಂಗಳೂರು ತಂಡಕ್ಕೆ ವರದಾನವಾಗಲಿದೆ. ಕೊನೆಯ ಓವರ್ ಗಳಲ್ಲಿ ಶಿವಮ್ ದುಬೆ ಕೂಡ ದೊಡ್ಡ ಹೊಡೆತಕ್ಕೆ ಮುಂದಾಗಿದ್ದಾರೆ.

    ಬ್ಯಾಟಿಂಗ್‍ನಲ್ಲಿ ಬಲಿಷ್ಠವಾಗಿರುವ ಆರ್‍ಸಿಬಿ ಬೌಲಿಂಗ್‍ನಲ್ಲಿ ಕೊಂಚ ಸುಧಾರಿಸಬೇಕಿದೆ. ಡೆತ್ ಓವರಿನಲ್ಲಿ ಉತ್ತಮವಾಗಿ ಬೌಲ್ ಮಾಡುವ ಬೌಲರ್ ತಂಡಕ್ಕೆ ಬೇಕಿದೆ. ಈಗಾಗಲೇ ಡೇಲ್ ಸ್ಟೇನ್ ಮತ್ತು ಉಮೇಶ್ ಯಾದವ್ ಅವರು ವಿಫಲವಾಗಿ ತಂಡದಿಂದ ಹೊರಗುಳಿದಿದ್ದಾರೆ. ಹಿಂದಿನ ಪಂದ್ಯದಲ್ಲಿ ಕೊಂಚ ಸುಧಾರಿಸಿದ್ದ ಆರ್‌ಸಿಬಿ ಬೌಲಿಂಗ್‍ಗೆ ಸೈನಿ ಮತ್ತು ಉದಾನ ಅವರ ಬೌಲಿಂಗ್ ಕೈಹಿಡಿದಿದೆ. ಜೊತೆಗೆ ಯುಜ್ವೇಂದ್ರ ಚಹಲ್ ಅವರ ಸ್ಪಿನ್ ಮೋಡಿ ಚೆನ್ನಾಗಿ ಮ್ಯಾಜಿಕ್ ಮಾಡುತ್ತಿದೆ.

    ಅಬ್ಬರಿಸುತ್ತಿರುವ ಸಂಜು ಸಮ್ಸನ್
    ರಾಜಸ್ಥಾನ್ ರಾಯಲ್ಸ್ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಬಹಳ ಬ್ಯಾಲೆನ್ಸ್ ಆಗಿದೆ. ಆರಂಭದಲ್ಲಿ ನಾಯಕ ಸ್ಮಿತ್ ಮತ್ತು ಬಟ್ಲರ್ ಆಡುತ್ತಾರೆ. ಜೊತೆಗೆ ಸಂಜು ಸಮ್ಸನ್ ಅವರು ಉತ್ತಮ ಲಯದಲಿದ್ದು, ಹೀಗಾಗಲೇ 3 ಪಂದ್ಯದಲ್ಲಿ ಎರಡು ಅರ್ಧಶತಕದೊಂದಿಗೆ 167 ರನ್ ಸಿಡಿಸಿದ್ದಾರೆ. ರಾಜಸ್ಥಾನ್ ಬೌಲಿಂಗ್‍ನಲ್ಲಿ ಜೋಫ್ರಾ ಆರ್ಚರ್, ಟಮ್ ಕರ್ರನ್ ಅವರು ಮಿಂಚಲಿದ್ದಾರೆ.

  • ಪಂದ್ಯ ಸೋತ್ರೂ ಮನಸ್ಸು ಗೆದ್ದ ಮಹಿ – ಧೋನಿ ಪ್ರಯತ್ನಕ್ಕೆ ಫ್ಯಾನ್ಸ್ ಫಿದಾ

    ಪಂದ್ಯ ಸೋತ್ರೂ ಮನಸ್ಸು ಗೆದ್ದ ಮಹಿ – ಧೋನಿ ಪ್ರಯತ್ನಕ್ಕೆ ಫ್ಯಾನ್ಸ್ ಫಿದಾ

    ಮೈದಾನದಲ್ಲೇ ಕುಸಿದು ಕೂತ ಎಂಎಸ್‌ಡಿ

    ಅಬುಧಾಬಿ: ಶುಕ್ರವಾರ ನಡೆದ ಹೈದರಾಬಾದ್ ತಂಡ ವಿರುದ್ಧ ಪಂದ್ಯವನ್ನು ಸೋತರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿಯವರ ಪ್ರಯತ್ನಕ್ಕೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಹೌದು ನಿನ್ನೆ ನಡೆದ ಪಂದ್ಯದಲ್ಲಿ ಧೋನಿ ಕೊನೆಯವರೆಗೂ ಬ್ಯಾಟ್ ಬೀಸಿ ಪಂದ್ಯವನ್ನು ಕೊನೆಯ ಓವರ್ ತನಕ ತೆಗೆದುಕೊಂಡು ಬಂದಿದ್ದರು. ಆಲೌಟ್ ಆಗುವ ಹಂತದಲ್ಲಿದ್ದ ಚೆನ್ನೈ ತಂಡವನ್ನು ಎಂಎಸ್ ಧೋನಿಯವರು ರವೀಂದ್ರ ಜಡೇಜಾ ಅವರ ಜೊತೆಗೂಡಿ ಕೊನೆಯ ಓವರ್ ತನಕ ತೆಗೆದುಕೊಂಡು ಬಂದಿದ್ದರು. ಆದರೆ ಕೊನೆಯ ಬಾಲ್‍ವರೆಗೂ ಬ್ಯಾಟ್ ಬೀಸಿದ ಧೋನಿ ತಂಡವನ್ನು ಗೆಲ್ಲಿಸುವಲ್ಲಿ ವಿಫಲರಾದರು.

    ಹೈದರಾಬಾದ್ ತಂಡದ ಬೌಲರ್ ಗಳು ಚೆನ್ನೈ ಇನ್ನಿಂಗ್ಸ್ ನ ಆರಂಭದಿಂದಲು ಉತ್ತಮವಾಗಿ ಬೌಲ್ ಮಾಡಿದರು. ಪರಿಣಾಮ ಚೆನ್ನೈ ಟಾಪ್ ಆರ್ಡರ್ ಕುಸಿದು ಹೋಗಿತ್ತು. ಆರಂಭಿಕರಾದ ಫಾಫ್ ಡು ಪ್ಲೆಸಿಸ್, ಶೇನ್ ವಾಟ್ಸನ್ ಮತ್ತು ಅಂಬಾಟಿ ರಾಯುಡು ಅವರು ತಂಡ 36 ರನ್ ಸೇರಿಸುವಷ್ಟರಲ್ಲಿ ಔಟ್ ಆಗಿದ್ದರು. ನಂತರ ಬಂದ ಕೇದರ್ ಜಾಧವ್ ಅವರು ಕೂಡ 3 ರನ್ ಹೊಡೆದು ಔಟ್ ಆದರು.

    ಈ ವಿಕೆಟ್ ನಂತರ ಐದನೇ ವಿಕೆಟ್‍ಗೆ ಹೊಂದಾದ ಜಡೇಜಾ ಮತ್ತು ಧೋನಿ ತಾಳ್ಮೆಯ ಆಟಕ್ಕೆ ಮುಂದಾದರು. ಐದನೇ ವಿಕೆಟ್‍ಗೆ ಈ ಜೋಡಿ 56 ಎಸೆತಗಳಲ್ಲಿ 71 ರನ್ ಸಿಡಿಸಿ ತಂಡಕ್ಕೆ ಗೆಲುವಿನ ಭರವಸೆಯನ್ನು ಮೂಡಿಸಿತ್ತು. ಆದರೆ ಅರ್ಧ ಶತಕ ಸಿಡಿಸಿದ್ದ ಜಡೇಜಾ ಔಟ್ ಆದರು. ಆಗಲು ತಮ್ಮ ವಿಶ್ವಾಸವನ್ನು ಬಿಡದ ಧೋನಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಸಿಡಿಸಿ ತಂಡವನ್ನು ಗೆಲುವಿನ ಸನಿಹಕೆ ತಂದರು. ಆದರೆ ಕೊನೆಯ ಓವರಿನಲ್ಲಿ 28 ರನ್ ಬೇಕಿದ್ದ ಕಾರಣ ಚೆನ್ನೈ 7 ರನ್‍ನಿಂದ ಸೋಲನ್ನು ಒಪ್ಪಿಕೊಂಡಿತು.

    ಮೈದಾನದಲ್ಲೇ ಕುಸಿದ ಮಹಿ
    ಎಂಎಸ್ ಧೋನಿ ಭಾರತ ಕ್ರಿಕೆಟ್ ತಂಡದಲ್ಲಿದ್ದ ಬಲಿಷ್ಠ ಆಟಗಾರ. ಜೊತೆಗೆ ಮೈದಾನದಲ್ಲಿ ಚಿರತೆಯ ವೇಗದಲ್ಲಿ ಓಡುತ್ತಿದ್ದ ಬ್ಯಾಟ್ಸ್ ಮ್ಯಾನ್, ಆದರೆ ಧೋನಿ ನಿನ್ನೆಯ ಪಂದ್ಯದಲ್ಲಿ ಎರಡು ರನ್ ಓಡಲು ಕಷ್ಟಪಟ್ಟರು. ರನ್ ಓಡಿ ಸುಸ್ತಾಗಿ ಮೈದಾನದಲ್ಲೇ ಕುಸಿದು ಕೂತ್ತಿದ್ದರು. ಇದನ್ನು ನೋಡಿದ ಅವರ ಅಭಿಮಾನಿಗಳು ಶಾಕ್ ಆಗಿದ್ದರು. ಜೊತೆಗೆ ನಾವು ಗೆಲ್ಲುವ ಧೋನಿಯ ಅಭಿಮಾನಿಗಳಲ್ಲ. ಸೋತರು ನಾವು ಧೋನಿ ಅಭಿಮಾನಿಗಳೇ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಮಹಿ ಬೆಂಬಲಕ್ಕೆ ನಿಂತಿದ್ದಾರೆ.

    ನಿನ್ನೆ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಂಡಿದೆ. ಈ ಮೂಲಕ ಕಳೆದ ಮೂರು ಪಂದ್ಯಗಳನ್ನು ಸತತವಾಗಿ ಸೋತಿದೆ. ಟ್ಯಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ ಯುವ ಆಟಗಾರರಾದ ಪ್ರಿಯಮ್ ಗಾರ್ಗ್ ಮತ್ತು ಅಭಿಷೇಕ್ ಶರ್ಮಾ ಅವರು ಅದ್ಭುತ ಆಟದಿಂದ 165 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಚೆನ್ನೈ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದ 7 ರನ್ ಅಂತರದಲ್ಲಿ ಸೋತು ಹೋಗಿದೆ.

  • ಐಪಿಎಲ್‍ನಲ್ಲಿ ಇಂಗ್ಲೆಂಡ್ ಕ್ರಿಕೆಟಿಗರ ಪಕ್ಷಪಾತ?- ಗವಾಸ್ಕರ್ ಆಕ್ರೋಶ

    ಐಪಿಎಲ್‍ನಲ್ಲಿ ಇಂಗ್ಲೆಂಡ್ ಕ್ರಿಕೆಟಿಗರ ಪಕ್ಷಪಾತ?- ಗವಾಸ್ಕರ್ ಆಕ್ರೋಶ

    ಅಬುಧಾಬಿ: ಐಪಿಎಲ್ 2020ರ ಆವೃತ್ತಿಯಲ್ಲಿ ಇಂಗ್ಲೆಂಡ್ ಕ್ರಿಕೆಟಿಗರು ಪಕ್ಷಪಾತದಿಂದ ಆಡುತ್ತಿದ್ದಾರೆ ಎಂಬ ಅನುಮಾನ ರಾಜಸ್ಥಾನ ಮತ್ತು ಕೋಲ್ಕತ್ತಾ ವಿರುದ್ಧದ ಪಂದ್ಯದ ಬಳಿಕ ಮೂಡಿದೆ.

    ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಐಯಾನ್ ಮಾರ್ಗನ್ ಎದುರು ವೇಗದ ಬೌಲರ್ ಜೋಫ್ರಾ ಆರ್ಚರ್, ಟಾಮ್ ಕರ್ರನ್ ಕನಿಷ್ಠ ಒಂದು ಬೌನ್ಸರ್ ಕೂಡ ಎಸೆಯದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇದೇ ವಿಚಾರದ ಕುರಿತು ಕ್ರಿಕೆಟ್ ವಿಶ್ಲೇಷಕ ಸುನಿಲ್ ಗವಾಸ್ಕರ್ ಗರಂ ಆಗಿದ್ದಾರೆ.

    ಕೋಲ್ಕತ್ತಾ ತಂಡ 13.1 ಓವರ್ ಗಳಲ್ಲಿ 106 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಸಂದರ್ಭದಲ್ಲಿ ಐಯಾನ್ ಮಾರ್ಗನ್ ಬ್ಯಾಟಿಂಗ್‍ಗೆ ಇಳಿದಿದ್ದರು. ಪಂದ್ಯದಲ್ಲಿ 23 ಎಸೆತಗಳಲ್ಲಿ 34 ರನ್ ಗಳಿಸಿದ ಮಾರ್ಗನ್ ಚೆಂಡನ್ನು ಮಿಡಲ್ ಮಾಡಲು ವಿಫಲರಾಗುತ್ತಿದ್ದರು. ಆದರೂ ಆರ್ಚರ್ ಮತ್ತು ಕರ್ರನ್ ಆತನ ವಿರುದ್ಧ ಕನಿಷ್ಠ ಒಂದು ಬೌನ್ಸರ್ ಕೂಡ ಎಸೆಯಲಿಲ್ಲ. ಸ್ಲಾಗ್ ಓವರ್ ಗಳಲ್ಲಿ 2 ಸಿಕ್ಸರ್ ಸಿಡಿಸಿದ ಮಾರ್ಗನ್ ತಂಡಕ್ಕೆ ಉಪಯುಕ್ತವಾದರು. ಇದನ್ನೂ ಓದಿ: ಗುರು ದ್ರಾವಿಡ್ ಪರಿಶ್ರಮ – ಐಪಿಎಲ್ ಅಲ್ಲ ಇದು ಇಂಡಿಯನ್ ಪ್ಲೇಯರ್ಸ್ ಲೀಗ್

    ಐಪಿಎಲ್‍ನಲ್ಲಿ ಫಾಸ್ಟೆಸ್ಟ್ ಬೌಲರ್ ಎಂದು ಗುರುತಿಸಿಕೊಂಡಿರುವ ಆರ್ಚರ್ ಪಂದ್ಯದಲ್ಲಿ ಇಯಾನ್ ಮಾರ್ಗನ್‍ಗೆ ಒಂದು ಬೌನ್ಸರ್ ಕೂಡ ಹಾಕಿಲಿಲ್ಲ. ಆರ್ಚರ್ ರಂತಹ ಆಟಗಾರನಿಂದ ನಾನು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಇನ್ನು ಕರ್ರನ್ ಆದ್ರೆ ಏಕಾಏಕಿ ಫುಲ್‍ಟಾಸ್ ಎಸೆದು ತನ್ನ ಕ್ಯಾಪ್ಟನ್ ಸಿಕ್ಸರ್ ಸಿಡಿಸುವಂತೆ ಮಾಡಿದ್ದರು ಎಂದು ಸುನಿಲ್ ಗವಾಸ್ಕರ್ ಆರೋಪಿಸಿದ್ದಾರೆ. ಪಂದ್ಯದಲ್ಲಿ ಕೋಲ್ಕತ್ತಾ ತಂಡ 6 ವಿಕೆಟ್ ನಷ್ಟಕ್ಕೆ 174 ರನ್ ಸಿಡಿಸಿದ್ರೆ, ರಾಜಸ್ಥಾನ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯ್ತು.

  • ಅಬುಧಾಬಿ ಮೂಲದ ಮುಬದಾಲದಿಂದ ರಿಲಯನ್ಸ್ ರೀಟೇಲ್‍ನಲ್ಲಿ 6,247.5 ಕೋಟಿ ರೂ. ಹೂಡಿಕೆ

    ಅಬುಧಾಬಿ ಮೂಲದ ಮುಬದಾಲದಿಂದ ರಿಲಯನ್ಸ್ ರೀಟೇಲ್‍ನಲ್ಲಿ 6,247.5 ಕೋಟಿ ರೂ. ಹೂಡಿಕೆ

    ಮುಂಬೈ: ಅಬುಧಾಬಿ ಮೂಲದ ಸಾರ್ವಭೌಮ ಹೂಡಿಕೆದಾರ ಮುಬದಾಲ ಇನ್‍ವೆಸ್ಟ್ ಮೆಂಟ್ ಕಂಪೆನಿಯಿಂದ (ಮುಬದಾಲ) ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ನಲ್ಲಿ (RRVL) 6,247.5 ಕೋಟಿ ರುಪಾಯಿ (AED 3.1 ಬಿಲಿಯನ್) ಹೂಡಿಕೆ ಮಾಡಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಹಾಗೂ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ಗುರುವಾರ ಘೋಷಣೆ ಮಾಡಿವೆ.

    ಈ ಹೊಸ ಹೂಡಿಕೆಯು ರಿಲಯನ್ಸ್ ರೀಟೇಲ್ ಪ್ರೀ ಮನಿ ಈಕ್ವಿಟಿ ಮೌಲ್ಯವನ್ನು 4.285 ಲಕ್ಷ ಕೋಟಿ ರುಪಾಯಿ ಮಾಡಿದೆ. ಇಷ್ಟು ಮೊತ್ತಕ್ಕೆ ಫುಲ್ಲಿ ಡೈಲ್ಯೂಟೆಡ್ ಆಧಾರದಲ್ಲಿ ರಿಲಯನ್ಸ್ ರೀಟೇಲ್ ವೆಂಚರ್ಸ್ ನ 1.40% ಈಕ್ವಿಟಿ ಪಾಲು ಖರೀದಿಯನ್ನು ಮುಬದಾಲ ಮಾಡಿದಂತಾಗುತ್ತದೆ.

    ಈ ವರ್ಷದ ಆರಂಭದಲ್ಲಿ ಮುಬದಾಲದಿಂದ ಜಿಯೋ ಪ್ಲಾಟ್ ಫಾಮ್ರ್ಸ್ ನಲ್ಲಿ 1.2 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆಯ ಘೋಷಣೆ ಮಾಡಲಾಗಿತ್ತು. ಜಿಯೋ ಪ್ಲಾಟ್ ಫಾರ್ಮ್ಸ್ ನಂತರ ರಿಲಯನ್ಸ್ ಇಂಡಸ್ಟ್ರೀಸ್ ನ ಮತ್ತೊಂದು ಅಂಗಸಂಸ್ಥೆಯಾದ ರಿಲಯನ್ಸ್ ರೀಟೇಲ್ ವೆಂಚರ್ಸ್ ನಲ್ಲಿ ಮುಬದಾಲ ಮಾಡುತ್ತಿರುವ ಅತಿ ಮುಖ್ಯವಾದ ಹೂಡಿಕೆ ಇದು.

    ರಿಲಯನ್ಸ್ ರೀಟೇಲ್ ಲಿಮಿಟೆಡ್ ಎಂಬುದು ರಿಲಯನ್ಸ್ ಇಂಡಸ್ಟ್ರೀಸ್ ಅಂಗಸಂಸ್ಥೆ. ಭಾರತದ ಅತಿ ದೊಡ್ಡ ಹಾಗೂ ವೇಗವಾಗಿ ಬೆಳೆಯುತ್ತಿರುವ ಮತ್ತು ಲಾಭದಾಯಕವಾದ ಉದ್ಯಮ. ದೇಶದಾದ್ಯಂತ 12 ಸಾವಿರ ಮಳಿಗೆಗಳನ್ನು ಹೊಂದಿದೆ. ಭಾರತದ ರೈತರು, ಎಂಎಸ್ ಎಂಇ ವಲಯ ಬಲಪಡಿಸುವ ಮೂಲಕ ಲಕ್ಷಾಂತರ ಗ್ರಾಹಕರಿಗೆ ಸೇವೆ ಸಲ್ಲಿಸುವ ಉದ್ದೇಶ RRVLಗೆ ಇದೆ.

    ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮಾತನಾಡಿ, ರಿಲಯನ್ಸ್ ರೀಟೇಲ್ ವೆಂಚರ್ಸ್ ನ ಮೌಲ್ಯಯುತ ಹೂಡಿಕೆದಾರರಾಗಿ ಮುಬದಾಲವನ್ನು ಸ್ವಾಗತಿಸಲು ಸಂತೋಷವಾಗುತ್ತದೆ. ಜ್ಞಾನ ಶ್ರೀಮಂತಿಕೆಯಿಂದ ಕೂಡಿರುವ ಮುಬದಾಲದಂಥ ಸಂಸ್ಥೆ ಜತೆಗೆ ಸಹಭಾಗಿತ್ವ ವಹಿಸಿರುವುದನ್ನು ಗೌರವಿಸುತ್ತೇವೆ ಎಂದಿದ್ದಾರೆ.

    ಭಾರತದ ರೀಟೇಲ್ ವಲಯವನ್ನು ಬಲಪಡಿಸಬೇಕು ಎಂದಿರುವ ನಮ್ಮ ಗುರಿಯ ಮೇಲೆ ಮುಬದಾಲ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇವೆ. ಅದು ಕೂಡ ಲಕ್ಷಾಂತರ ಸಣ್ಣ ಪ್ರಮಾಣದ ಚಿಲ್ಲರೆ ಮಾರಾಟಗಾರರು, ವರ್ತಕರು- ತಂತ್ರಜ್ಞಾನದ ಶಕ್ತಿಯ ಮೂಲಕ. ಮುಬದಾಲದ ಹೂಡಿಕೆ ಮತ್ತು ಮಾರ್ಗದರ್ಶನವು ಈ ಪ್ರಯಾಣದಲ್ಲಿ ಬೆಲೆಯೇ ಕಟ್ಟಲಾಗದ ಬೆಂಬಲ ಆಗಲಿದೆ ಎಂದಿದ್ದಾರೆ.

    ಮುಬದಾಲ ಇನ್ವೆಸ್ಟ್ ಮೆಂಟ್ ಕಂಪೆನಿ ಸಮೂಹದ ಸಿಇಒ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಖಲ್ದೂನ್ ಅಲ್ ಮುಬಾರಕ್ ಮಾತನಾಡಿ, ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ನಲ್ಲಿ ಹೂಡಿಕೆ ಮಾಡುವ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ ಜತೆಗೆ ಬಾಂಧವ್ಯ ಗಟ್ಟಿಯಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.

    ಅವರ ದೃಷ್ಟಿಕೋನವು ಎಲ್ಲರನ್ನೂ ಒಳಗೊಂಡಂತೆ ಭಾರತದ ಗ್ರಾಹಕರ ಆರ್ಥಿಕತೆಯನ್ನು ಡಿಜಿಟೈಸೇಷನ್ ಶಕ್ತಿಯ ಮೂಲಕ ಬದಲಾವಣೆ ಮಾಡುತ್ತದೆ. ಅವಕಾಶಗಳನ್ನು ಸೃಷ್ಟಿಸುತ್ತದೆ. ದೇಶದಲ್ಲಿರುವ ಲಕ್ಷಾಂತರ ಮಂದಿ ಸಣ್ಣ ವ್ಯಾಪಾರಿಗಳಿಗೆ ಮಾರುಕಟ್ಟೆಗೆ ಸಂಪರ್ಕ ಪಡೆಯಲು ಸಹಾಯ ಮಾಡುತ್ತದೆ. ಕಂಪೆನಿಯ ನಿರಂತರ ಬೆಳವಣಿಗೆಗೆ ಬೆಂಬಲಿಸಲು ಬದ್ಧವಾಗಿದ್ದೇವೆ ಎಂದು ಹೇಳಿದ್ದಾರೆ.

    ನಿಯಂತ್ರಕರು ಮತ್ತು ಇತರ ಅನುಮತಿಗಳ ಆಧಾರದ ಮೇಲೆ ಈ ವ್ಯವಹಾರವು ಅಂತಿಮವಾಗುತ್ತದೆ. ಮೊರ್ಗನ್ ಸ್ಟ್ಯಾನ್ಲಿಯು ಆರ್ಥಿಕ ಸಲಹೆಗಾರರಾಗಿ ಹಾಗೂ ಸಿರಿಲ್ ಅಮರ್ ಚಂದ್ ಮಂಗಲ್ ದಾಸ್ ಮತ್ತು ಡೇವಿಸ್ ಪೋಲ್ಕ್ ಅಂಡ್ ವಾರ್ಡ್ ವೆಲ್ ಕಾನೂನು ಸಲಹೆಗಾರರಾಗಿ ರಿಲಯನ್ಸ್ ರೀಟೇಲ್ ಪರ ಇದ್ದರು.

  • ಕ್ಯಾಚ್ ಬಿಟ್ಟು ಬಾಲಿಗೆ ಎಂಜಲು ಹಚ್ಚಿ ಎಡವಟ್ಟು ಮಾಡಿಕೊಂಡ ಉತ್ತಪ್ಪ

    ಕ್ಯಾಚ್ ಬಿಟ್ಟು ಬಾಲಿಗೆ ಎಂಜಲು ಹಚ್ಚಿ ಎಡವಟ್ಟು ಮಾಡಿಕೊಂಡ ಉತ್ತಪ್ಪ

    ಅಬುಧಾಬಿ: ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರಾಬಿನ್ ಉತ್ತಪ್ಪ ಅವರು ಆಚಾನಕ್ ಆಗಿ ಬಾಲಿಗೆ ಎಂಜಲು ಹಚ್ಚಿ ಐಪಿಎಲ್‍ನಲ್ಲಿ ಮೊದಲ ಬಾರಿಗೆ ಕೊರೊನಾ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ.

    ಕೊರೊನಾ ಕಾರಣದಿಂದ 6 ತಿಂಗಳ ತಡವಾಗಿ ಐಪಿಎಲ್ ಯುಎಇಯಲ್ಲಿ ಆರಂಭವಾಗಿದೆ. ಇಡೀ ವಿಶ್ವದಲ್ಲೇ ಕೊರೊನಾ ಇರುವ ಕಾರಣದಿಂದ ಬಿಸಿಸಿಐ ಕೆಲ ಹೊಸ ಕೊರೊನಾ ನಿಯಮಗಳನ್ನು ರಚಿಸಿಕೊಂಡು ಐಪಿಎಲ್ ಆಡಿಸುತ್ತಿದೆ. ಈ ನಿಯಮಗಳ ಪ್ರಕಾರ ಬಾಲಿಗೆ ಎಂಜಲು ಹಚ್ಚುವುದನ್ನು ನಿಷೇಧ ಮಾಡಿದೆ.

    ರಾಬಿನ್ ಉತ್ತಪ್ಪ ಎಡವಟ್ಟು
    ಟಾಸ್ ಸೋತ ಕೋಲ್ಕತ್ತಾ ತಂಡ ಮೊದಲು ಬ್ಯಾಟಿಂಗ್ ಬಂದಿತ್ತು. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಬೌಲರ್ ಜಯದೇವ್ ಉನಾದ್ಕಟ್ ಅವರು ಇನ್ನಿಂಗ್ಸ್‍ನ ಮೂರನೇ ಓವರ್ ಬೌಲ್ ಮಾಡುತ್ತಿದ್ದರು. ಆಗ ನೈಟ್ ರೈಡರ್ಸ್ ತಂಡದ ಬ್ಯಾಟ್ಸ್ ಮ್ಯಾನ್ ಸುನಿಲ್ ನರೈನ್ ಅವರು ದೊಡ್ಡ ಹೊಡೆತಕ್ಕೆ ಕೈಹಾಕಿ ಉತ್ತಪ್ಪ ಅವರಿಗೆ ಕ್ಯಾಚ್ ನೀಡಿದರು. ಆದರೆ ಸುಲಭ ಕ್ಯಾಚ್ ಅನ್ನು ಕೈಚೆಲ್ಲಿದ ಉತ್ತಪ್ಪ ಆ ನಂತರ ಬಾಲಿಗೆ ಎಂಜಲು ಹಚ್ಚಿ ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದಾರೆ.

    ಕೊರೊನಾ ಕಾರಣದಿಂದ ಬಾಲಿಗೆ ಎಂಜಲು ಹಚ್ಚುವುದನ್ನು ಐಪಿಎಲ್ ನಿಷೇಧ ಮಾಡಿದೆ. ಈ ನಿಯಮ ಐಸಿಸಿ ಕೂಡ ಜಾರಿಗೆ ತಂದಿದ್ದು, ಅಂತಾರಾಷ್ಟ್ರೀಯ ಮಟ್ಟದ ಪಂದ್ಯಗಳಲ್ಲೂ ಬ್ಯಾನ್ ಮಾಡಲಾಗಿದೆ. ಜೊತೆಗೆ ಒಂದು ವೇಳೆ ಬಾಲಿಗೆ ಯಾವುದೇ ಆಟಗಾರ ಎಂಜಲು ಹಚ್ಚಿದರೆ ಎರಡು ಬಾರಿ ಎಚ್ಚರಿಕೆ ನೀಡುತ್ತಾರೆ. ಇದನ್ನೂ ಮೀರಿ ಮೂರನೇ ಬಾರಿ ತಪ್ಪು ಮಾಡಿದರೆ ಎದರುರಾಳಿ ತಂಡಕ್ಕೆ ಬೌಲಿಂಗ್ ಮಾಡುತ್ತಿದ್ದ ತಂಡ ಐದು ರನ್‍ಗಳನ್ನು ಬಿಟ್ಟುಕೊಡಬೇಕಾಗುತ್ತದೆ ಎಂದು ಐಸಿಸಿ ನಿಯಮ ಮಾಡಿದೆ.

    https://twitter.com/ItsRaviMaurya/status/1311308712670195713

    ಕೋಲ್ಕತ್ತಾಗೆ ಸುಲಭ ಜಯ
    ಬುಧವಾರ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಸುಲಭವಾಗಿ ಜಯಗಳಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ತಂಡ ಶುಭ್‍ಮನ್ ಗಿಲ್ ಮತ್ತು ಇಯೋನ್ ಮೋರ್ಗಾನ್ ಅವರ ಉತ್ತಮ ಆಟದಿಂದ ನಿಗದಿತ 20 ಓವರಿನಲ್ಲಿ ಆರು ವಿಕೆಟ್ ಕಳೆದುಕೊಂಡು 175 ರನ್ ಟಾರ್ಗೆಟ್ ನೀಡಿತ್ತು.

    ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ತಂಡ ಶಿವಮ್ ಮಾವಿ ಮತ್ತು ಕಮಲೇಶ್ ನಾಗರ್ಕೋಟಿ ಬೌಲಿಂಗ್‍ಗೆ ತತ್ತರಿಸಿ ಹೋಯ್ತು. ಪವರ್ ಪ್ಲೇ ಹಂತದಲ್ಲೇ ನಾಲ್ಕು ವಿಕೆಟ್ ಕಳೆದುಕೊಂಡಿತು. ನಾಯಕ ಸ್ಟೀವ್ ಸ್ಮಿತ್ ಮತ್ತು ಉತ್ತಮ ಲಯದಲ್ಲಿದ್ದ ಸಂಜು ಸಮ್ಸನ್ ಬೇಗ ಔಟ್ ಆದರು. ಕೊನೆಯವರೆಗೂ ತಾಳ್ಮೆ ಕಳೆದುಕೊಳ್ಳದೇ ಆಡುವ ಮೂಲಕ ಅರ್ಧ ಶತಕ ಬಾರಿಸಿದ ಟಾಮ್ ಕರ್ರನ್ ಅವರ ಪಂದ್ಯ ಗೆಲ್ಲಿಸುವ ಪ್ರಯತ್ನ ವಿಫಲವಾಗಿದ್ದು, ಈ ಮೂಲಕ 37 ರನ್‍ಗಳ ಅಂತರದಲ್ಲಿ ಕೋಲ್ಕತ್ತಾ ಜಯ ಗಳಿಸಿತು.