Tag: accident

  • ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಕಾರು ಡಿಕ್ಕಿ – ಅಪ್ರಾಪ್ತ ಚಾಲಕನಿಗೆ ಸ್ಥಳೀಯರಿಂದ ಧರ್ಮದೇಟು

    ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಕಾರು ಡಿಕ್ಕಿ – ಅಪ್ರಾಪ್ತ ಚಾಲಕನಿಗೆ ಸ್ಥಳೀಯರಿಂದ ಧರ್ಮದೇಟು

    – ಅದೃಷ್ಟವಶಾತ್‌ ಬಾಲಕಿ ಪಾರು

    ಗಾಂಧಿನಗರ: ಅಹಮದಾಬಾದ್‌ನ (Ahmedabad) ನೋಬಲ್‌ನಗರದಲ್ಲಿ ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ ಕಾರು (Car) ಮೂರು ವರ್ಷದ ಬಾಲಕಿಗೆ (Accident) ಡಿಕ್ಕಿಯಾಗಿದೆ. ‌

    ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸರೆಯಾಗಿದ್ದು, ಬಾಲಕಿಗೆ ಕಾರಿನ ಮುಂಭಾಗ ಡಿಕ್ಕಿಯಾಗಿ ಕೆಳಕ್ಕೆ ಬಿದ್ದಿದ್ದಾಳೆ. ಅದೃಷ್ಟವಶಾತ್‌ ಬಾಲಕಿ ಕಾರಿನ ನಡು ಭಾಗದಲ್ಲಿ ಕೆಳಗೆ ಬಿದ್ದಿದ್ದಾಳೆ. ಕಾರು ಮುಂದೆ ಚಲಿಸುತ್ತಿದ್ದಂತೆ, ಹಿಂಬದಿಯಿಂದ ಎದ್ದು ನಡೆದು ಬಂದಿದ್ದಾಳೆ. ಈ ವೇಳೆ ಅಪ್ರಾಪ್ತ ಕಾರು ನಿಲ್ಲಿಸಿ ಬಾಲಕಿ ಬಳಿ ಬಂದಿದ್ದಾನೆ. ಇದನ್ನೂ ಓದಿ: ಟಿಪ್ಪರ್‌, ಇನ್ನೋವಾ ನಡುವೆ ಡಿಕ್ಕಿ – ಚಾಲಕ ಸಜೀವ ದಹನ

    ಸ್ಥಳಕ್ಕೆ ಬಂದ ಸ್ಥಳೀಯ ನಿವಾಸಿಗಳು ಬಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಕಪಾಳಮೋಕ್ಷ ಮಾಡಿದ್ದಾರೆ. ಬಾಲಕನಿಗೆ ಕಪಾಳಮೋಕ್ಷ ಮಾಡುವ ವೀಡಿಯೋ ವೈರಲ್‌ ಆಗಿದೆ. ಈ ಸಂಬಂಧ ಚಾಲಕನ ವಿರುದ್ಧ ಅಹಮದಾಬಾದ್ ಪೊಲೀಸರು ಬಿಎನ್ಎಸ್ ಸೆಕ್ಷನ್ 281, 125(ಎ), ಮತ್ತು ಮೋಟಾರು ವಾಹನ ಕಾಯ್ದೆ ಸೆಕ್ಷನ್ 177, 184, 181 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಕಾರಿನ ಕೀಗಳನ್ನು ಅಪ್ರಾಪ್ತರಿಗೆ ನೀಡಬಾರದು. ಅವರಿಗೆ ಸಿಗದಂತೆ ಇಡಬೇಕು ಎಂದು ಒಬ್ಬರು ಅಪಘಾತದ ವೀಡಿಯೋಗೆ ಕಾಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ಪವಾಡಗಳು ಸಂಭವಿಸುತ್ತವೆ ಎಂಬುದಕ್ಕೆ ಈ ವೀಡಿಯೊ ಪುರಾವೆಯಾಗಿದೆ. ಆದರೆ ಪ್ರತಿ ಬಾರಿಯೂ ಅದು ಸಂಭವಿಸಲ್ಲ. ರಸ್ತೆ ಆಟದ ಮೈದಾನವಲ್ಲ, ಪೋಷಕರು ಯಾವಾಗಲೂ ಮಕ್ಕಳ ಮೇಲೆ ಕಣ್ಣಿಡಬೇಕು ಎಂದು ಬರೆದುಕೊಂಡಿದ್ದಾರೆ.

    ಮತ್ತೊಬ್ಬರು, ಅಪ್ರಾಪ್ತ ವಯಸ್ಕನಿಗೆ ಕಾರಿನ ಕೀ ಹೇಗೆ ಸಿಕ್ಕಿತು? ಅವನ ಪೋಷಕರನ್ನು ಶಾಶ್ವತವಾಗಿ ಜೈಲಿಗೆ ಹಾಕಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಬೆಳಗಾವಿ | ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಹರಿದ ಲಾರಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

  • ಟಿಪ್ಪರ್‌, ಇನ್ನೋವಾ ನಡುವೆ ಡಿಕ್ಕಿ – ಚಾಲಕ ಸಜೀವ ದಹನ

    ಟಿಪ್ಪರ್‌, ಇನ್ನೋವಾ ನಡುವೆ ಡಿಕ್ಕಿ – ಚಾಲಕ ಸಜೀವ ದಹನ

    ಮಂಡ್ಯ: ಟಿಪ್ಪರ್ ಹಾಗೂ ಇನ್ನೋವಾ ಕಾರಿನ (Innova) ನಡುವೆ ಡಿಕ್ಕಿಯಾಗಿ (Accident), ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ.

    ಹುಣಸೂರು ಮೂಲದ ಚಂದ್ರಶೇಖರ್‌ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಬುಧವಾರ (ಅ.29) ತಡರಾತ್ರಿ ಈ ಘಟನೆ ನಡೆದಿದೆ. ಹುಣಸೂರು ಕಡೆಗೆ ಹೋಗುತ್ತಿದ್ದ ಕಾರು, ಶ್ರೀರಂಗಪಟ್ಟಣ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿತ್ತು. ತಕ್ಷಣ ಕಾರು ಹೊತ್ತಿ ಉರಿದಿತ್ತು. ಕಾರಿನಿಂದ ಹೊರಬರಲಾರದೆ ಚಾಲಕ ಸಾವನ್ನಪ್ಪಿದೆ. ಇದನ್ನೂ ಓದಿ: ನೆಲಮಂಗಲ | ರಸ್ತೆ ದುರಸ್ತಿ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ – ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ

    ಚಂದ್ರಶೇಖರ್ ಮೃತದೇಹವನ್ನು ಮೈಸೂರಿನ ಕೆ.ಆರ್ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಈ ಅಪಘಾತ ನಡೆದಿದೆ. ಇದನ್ನೂ ಓದಿ: ಲವ್ವರ್‌ ನೋಡಲು ಬಂದ ಯುವಕನಿಗೆ ಥಳಿಸಿ ಹತ್ಯೆ; ಮನನೊಂದು ಕತ್ತು ಕೊಯ್ದುಕೊಂಡ ಪ್ರೇಯಸಿ

  • ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ರಸ್ತೆಗೆ ಬಿದ್ದ ಟೆಕ್ಕಿ – ಲಾರಿ ಹರಿದು ದುರ್ಮರಣ

    ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ರಸ್ತೆಗೆ ಬಿದ್ದ ಟೆಕ್ಕಿ – ಲಾರಿ ಹರಿದು ದುರ್ಮರಣ

    ನೆಲಮಂಗಲ: ರಸ್ತೆ ಗುಂಡಿ (Pothole) ತಪ್ಪಿಸಲು ಹೋಗಿ ಟೆಕ್ಕಿಯೊಬ್ಬರು (Techie) ಲಾರಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ.

    ಮೃತ ಟೆಕ್ಕಿಯನ್ನು ಪ್ರಿಯಾಂಕ (26) ಎಂದು ಗುರುತಿಸಲಾಗಿದೆ. ಯುವತಿ ಅಣ್ಣನ ಜೊತೆ ಬೈಕ್‍ನಲ್ಲಿ ಎಪಿಎಂಸಿ ಹುಸ್ಕೂರು ರಸ್ತೆಯಿಂದ ಮಾದಾವರಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ (Accident) ನಡೆದಿದೆ. ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ರಸ್ತೆ ಗುಂಡಿಗೆ ಬಿ.ಕಾಂ ಪದವೀಧರೆ ಬಲಿ

    ರಸ್ತೆ ಕಾಮಗಾರಿಯಿಂದ ಈ ರಸ್ತೆ ಹದಗೆಟ್ಟಿದ್ದು, ಗುಂಡಿ ತಪ್ಪಿಸಲು ಪ್ರಿಯಾಂಕ ಸಹೋದರ ಯತ್ನಿಸಿದ್ದಾರೆ. ಈ ವೇಳೆ ಮುಂದೆ ಬಂದ ಲಾರಿ ಕೆಳಗೆ ಯುವತಿ ಬಿದ್ದಿದ್ದಾರೆ. ಈ ವೇಳೆ ಲಾರಿ ಯುವತಿಯ ತಲೆ ಮೇಲೆ ಹರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು | ಸಿಲಿಂಡರ್‌ ಸ್ಫೋಟ – ಮನೆಯೇ ನೆಲಸಮ, ಓರ್ವ ಸಾವು

  • ಹುಟ್ಟುಹಬ್ಬದ ದಿನವೇ ಮಗ ಸಾವು – ಕೈ ಹಿಡಿದು ಕೇಕ್‌ ಕತ್ತರಿಸಿ, ಅಂಗಾಂಗ ದಾನ ಮಾಡಿದ ಪೋಷಕರು

    ಹುಟ್ಟುಹಬ್ಬದ ದಿನವೇ ಮಗ ಸಾವು – ಕೈ ಹಿಡಿದು ಕೇಕ್‌ ಕತ್ತರಿಸಿ, ಅಂಗಾಂಗ ದಾನ ಮಾಡಿದ ಪೋಷಕರು

    ಕೊಪ್ಪಳ: ಅಪಘಾತಕ್ಕೊಳಗಾಗಿ (Accident) ಚಿಕಿತ್ಸೆ ಪಡೆಯುತ್ತಿದ್ದ ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನ (Organ Donation) ಮಾಡಿ ಸಾರ್ಥಕತೆ ಮೆರೆದಿದ್ದಾರೆ.

    ಕೊಪ್ಪಳದ (Koppal) ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. 15 ದಿನಗಳ ಹಿಂದೆ ಹಾಸನದ (Hassan) ಸಮೀಪ ಬೈಕ್ ಅಪಘಾತಕ್ಕೊಳಗಾಗಿ, ಆರ್ಯನ್‌ ಗಾಯಗೊಂಡಿದ್ದ. ಆತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಹುಟ್ಟುಹಬ್ಬದ ದಿನವೇ (ಅ.24) ಯುವಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬೆಂಗಳೂರು| ಉಸಿರುಗಟ್ಟಿಸಿ 7 ವರ್ಷದ ಮಗಳ ಕೊಂದ ಮಲತಂದೆ

    ಮೃತಪಟ್ಟ ಮಗನ ಕೈ ಹಿಡಿದು ಪೋಷಕರು ಕೇಕ್ ಕತ್ತರಿಸಿ ಕಣ್ಣೀರಿಟ್ಟಿದ್ದಾರೆ. ಬಳಿಕ ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಇಂದು (ಅ.25) ಕೊಪ್ಪಳದ ಕನಕಗಿರಿಯಲ್ಲಿ ಆರ್ಯನ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಲೈಫ್‌ ಸೆಟಲ್‌ ಮಾಡ್ತೀನಿ, ಮದುವೆಯಾಗೋಣ ಅಂತ ನಂಬಿಸಿ ರೇಪ್ – ಡಿಜೆ ಹಳ್ಳಿ ಇನ್ಸ್‌ಪೆಕ್ಟರ್‌ ವಿರುದ್ಧ ಎಫ್‌ಐಆರ್

  • ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್‌ರಿಂದ ಹಿಟ್ & ರನ್ – ಮಹಿಳೆಗೆ ಗಂಭೀರ ಗಾಯ

    ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್‌ರಿಂದ ಹಿಟ್ & ರನ್ – ಮಹಿಳೆಗೆ ಗಂಭೀರ ಗಾಯ

    ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್‌ ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ನಟಿ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಅ.4ರ ರಾತ್ರಿ 1:30ಕ್ಕೆ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಅ.7 ರಂದು ಗಾಯಗೊಂಡ ಮಹಿಳೆಯ ಸಂಬಂಧಿ ಕಿರಣ್ ನಟಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಕೋಲ್ಕತ್ತಾ ಮೂಲದ ಮಹಿಳೆ ಮೇಲೆ ಗ್ಯಾಂಗ್ ರೇಪ್ – ಆರು ಮಂದಿ ಅರೆಸ್ಟ್

    ದೂರಿನಲ್ಲಿ ನಮ್ಮ ಸಂಬಂಧಿ ಅನುಷಾಗೆ ಹುಷಾರಿರಲಿಲ್ಲ. ಹೀಗಾಗಿ ಅವತ್ತು ರಾತ್ರಿ ಗಿರಿನಗರದ ಆಸ್ಪತ್ರೆಗೆ ಹೋಗ್ತಾ ಇದ್ದೆವು. ಬೈಕ್‌ನಲ್ಲಿ ಮಧ್ಯೆ ಅನುಷಾ ಕುತಿದ್ರೂ. ನಾನು ಬೈಕ್ ಓಡಿಸುತ್ತಾ ಇದ್ದೇ, ಅನಿತಾ ಬೈಕ್ ಹಿಂದೆ ಕುಳಿತಿದ್ದರು. ಈ ವೇಳೆ ನಾಯಿ ಬೊಗಳಿದ್ದಕ್ಕೆ ಸ್ವಲ್ಪ ಬಲಕ್ಕೆ ಬೈಕ್‌ ತೆಗೆದುಕೊಂಡೆ. ಆಗ ಏಕಾಏಕಿ ಕ್ರಾಸ್‌ನಲ್ಲಿ ಬಂದು ದಿವ್ಯಾ ಸುರೇಶ್ ಕಾರು ಅನಿತಾ ಅವರ ಕಾಲಿಗೆ ಗುದ್ದಿತ್ತು. ದಿವ್ಯಾ ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಬಿದ್ದಿದ್ದೆವು.

    ಕಾರು ಡಿಕ್ಕಿ ಹೊಡೆದಾಗ ಮಹಿಳೆಗೆ ಕಾಲಿನ ಮಂಡಿ ಚಿಪ್ಪಿಗೆ ಪೆಟ್ಟಾಗಿತ್ತು. ಕೂಡಲೇ ನಮ್ಮನ್ನು ನೋಡದೇ, ಕಾರು ನಿಲ್ಲಿಸದೇ ದಿವ್ಯಾ ಸುರೇಶ್ ಪರಾರಿಯಾಗಿದ್ದರು. ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಕಾಲಿನ ಮಂಡಿ ಚಿಪ್ಪು ಮುರಿದಿರೋದಾಗಿ ಚಿಕಿತ್ಸೆ ನೀಡಿದ್ದಾರೆ.

    ಸಿಸಿಟಿವಿ ಮೂಲಕ ಕಾರಿನ ನಂಬರ್ ಟ್ರೇಸ್ ಮಾಡಿದ್ದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ದಿವ್ಯಾ ಸುರೇಶ್‌ರನ್ನು ಕರೆಸಿ, ಕಾರನ್ನು ಸೀಜ್ ಮಾಡಿದ್ದರು. ಆದರೆ ರಾತ್ರೋ ರಾತ್ರಿ ನಟಿ ಕಾರನ್ನು ಬಿಡಿಸಿಕೊಂಡು ಹೋಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

    ಅನಿತಾಗೆ ಆಪರೇಷನ್‌ಗೆ ಎರಡು ಲಕ್ಷ ರೂ. ಹಣ ಖರ್ಚಾಗಿದೆ. ನಾನು ಕ್ಯಾಬ್‌ ಓಡಿಸಿ ಜೀವನ ಮಾಡುತ್ತಿದ್ದೇನೆ. ಇದುವರೆಗೂ ಸಂತ್ರಸ್ಥ ಮಹಿಳೆಯನ್ನು ನಟಿ ದಿವ್ಯಾ ಸುರೇಶ್ ಸಂಪರ್ಕಿಸಿಲ್ಲ. ದಯವಿಟ್ಟು ನಮಗೆ ಪರಿಹಾರ ಕೊಡಿಸಿ ಎಂದು ಕಿರಣ್‌ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

  • ನೆಲಮಂಗಲ ಹೈವೇಯಲ್ಲಿ ಲಾರಿ, ಕಾರು ಮಧ್ಯೆ ಭೀಕರ ಅಪಘಾತ – ಇಬ್ಬರು ಬಲಿ

    ನೆಲಮಂಗಲ ಹೈವೇಯಲ್ಲಿ ಲಾರಿ, ಕಾರು ಮಧ್ಯೆ ಭೀಕರ ಅಪಘಾತ – ಇಬ್ಬರು ಬಲಿ

    ನೆಲಮಂಗಲ: ತುಮಕೂರು- ಬೆಂಗಳೂರು (Tumakuru-Bengaluru) ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಕಾರು ನಡುವೆ ಭೀಕರ ಅಪಘಾತ (Accident) ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.

    ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಮಾರುತಿ ಎರ್ಟಿಗಾ ಕಾರು ಬರುತ್ತಿತ್ತು. ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ:  ಬೈಕ್‌ ಡಿಕ್ಕಿ, ಧಗಧಗಿಸಿದ ಬೆಂಗಳೂರಿಗೆ ಬರುತ್ತಿದ್ದ ಬಸ್ಸು – 10ಕ್ಕೂ ಹೆಚ್ಚು ಮಂದಿ ಸಜೀವ ದಹನ

    ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಶಿವಲಿಂಗ ಗೌಡ(60), ಪ್ರಮೀಳಾ (55) ಮೃತಪಟ್ಟಿದ್ದಾರೆ.

    ಕಾರಿನಲ್ಲಿ ಕುಟುಂಬ ಸದಸ್ಯರು ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುತ್ತಿದ್ದರು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

  • ಶಿವಮೊಗ್ಗ | ಕಾರ್ಗಲ್‌ ಬಳಿ ಪ್ರವಾಸಿಗರ ಬಸ್ ಪಲ್ಟಿ – 18 ಮಂದಿಗೆ ಗಾಯ

    ಶಿವಮೊಗ್ಗ | ಕಾರ್ಗಲ್‌ ಬಳಿ ಪ್ರವಾಸಿಗರ ಬಸ್ ಪಲ್ಟಿ – 18 ಮಂದಿಗೆ ಗಾಯ

    ಶಿವಮೊಗ್ಗ: ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ (Accident) ಘಟನೆ ಕಾರ್ಗಲ್‌ ಸಮೀಪದ ಆಡುಕಟ್ಟೆಯ ಜೋಗಿನ ಮಠದ ಬಳಿ ನಡೆದಿದೆ. ಅಪಘಾತದಲ್ಲಿ ಸುಮಾರು 18 ಮಂದಿ ಗಾಯಗೊಂಡಿದ್ದಾರೆ.

    ಗಾಯಾಳುಗಳನ್ನು ರತ್ನಮ್ಮ (50), ಗಮ್ಯಶ್ರೀ (11), ಸುಶೀಲಾ (45), ನಾರಾಯಣಪ್ಪ (72), ಸುಮಿತ್ ಕುಮಾರ್ (38), ಸುಬ್ಬಲಕ್ಷ್ಮಿ(29), ರೋಹಿತ್ ( 20), ನವೀನ್ (12), ಸಾವಿತ್ರಿ (36), ವಿದ್ಯಾ ರಾಣಿ (34), ಜ್ಯೋತಿ (32), ಪುಷ್ಪಾವತಿ (48), ಲಕ್ಷ್ಮಿ (50), ಗಂಗಮ್ಮ (65), ಮದನ್ (14), ಗೌತಮ್ (30), ಶಕುಂತಲಾ (34) ‌ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯರ ನೆರವಿನೊಂದಿಗೆ ಕಾರ್ಗಲ್ ಠಾಣೆ ಪೊಲೀಸರು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | ದೇವಸ್ಥಾನಕ್ಕೆ ಬಂದಿದ್ದ ದಂಪತಿ ಭದ್ರಾ ನಾಲೆಯಲ್ಲಿ ಮುಳುಗಿ ಸಾವು, ಆತ್ಮಹತ್ಯೆ ಶಂಕೆ

    ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲೂಕಿನ 45 ಜನ ಪ್ರವಾಸಿಗರ ತಂಡ, ಖಾಸಗಿ ಬಸ್‌ನಲ್ಲಿ ಪ್ರವಾಸಕ್ಕೆ ಆಗಮಿಸಿತ್ತು. ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ (Sigandur Chowdeshwari Temple) ಭೇಟಿ ನೀಡಿ, ವಡನಬೈಲ್ ಬಳೆ ಪದ್ಮಾವತಿ ಅಮ್ಮನವರ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿದೆ ಎನ್ನಲಾಗುತ್ತಿದೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಇದನ್ನೂ ಓದಿ: ದೇವಿರಮ್ಮ ಬೆಟ್ಟ ಏರುವಾಗ ಇಬ್ಬರು ಅಸ್ವಸ್ಥ – ಬೆಟ್ಟದಿಂದ ಹೊತ್ತುತಂದ ಅಗ್ನಿಶಾಮಕ ಸಿಬ್ಬಂದಿ

  • ಮಂಡ್ಯ: 3 ಸಾರಿಗೆ ಬಸ್‌ಗಳ ನಡುವೆ ಡಿಕ್ಕಿ – ಓರ್ವ ಮಹಿಳೆ ಸಾವು; 75 ಮಂದಿಗೆ ಗಾಯ

    ಮಂಡ್ಯ: 3 ಸಾರಿಗೆ ಬಸ್‌ಗಳ ನಡುವೆ ಡಿಕ್ಕಿ – ಓರ್ವ ಮಹಿಳೆ ಸಾವು; 75 ಮಂದಿಗೆ ಗಾಯ

    ಮಂಡ್ಯ: ಮೂರು ಸಾರಿಗೆ ಬಸ್‌ಗಳ ನಡುವೆ ಡಿಕ್ಕಿಯಾಗಿ ಓರ್ವ ಮಹಿಳೆ ಸಾವಿಗೀಡಾಗಿದ್ದು, 75ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಮಳವಳ್ಳಿ ತಾಲೂಕಿನ ಬಾಚಹಳ್ಳಿ ಗ್ರಾಮದ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಎರಡು KSRTC ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದವು. ಅಪಘಾತಗೊಂಡ ಬಸ್‌ಗೆ ಮತ್ತೊಂದು ಬಸ್ ಡಿಕ್ಕಿ ಹೊಡೆಯಿತು. ಮೂರು ಬಸ್‌ಗಳ ಕೆಲವು ಭಾಗಗಳು ಜಖಂಗೊಂಡವು. ಬಸ್‌ನಲ್ಲಿದ್ದ 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಬಗ್ಗೆ ಮಾಹಿತಿ ಇನ್ನೂ ಸಿಕ್ಕಿಲ್ಲ. ಗಾಯಾಳುಗಳಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್‌ಗೆ ರವಾನಿಸಲಾಗಿದೆ.

  • ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್‌ ನಡುವೆ ಅಪಘಾತ – ಶಿಕ್ಷಕನ ಕಾಲು ಮುರಿತ, ಸಹ ಶಿಕ್ಷಕಿಗೆ ಗಾಯ

    ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್‌ ನಡುವೆ ಅಪಘಾತ – ಶಿಕ್ಷಕನ ಕಾಲು ಮುರಿತ, ಸಹ ಶಿಕ್ಷಕಿಗೆ ಗಾಯ

    ಮೈಸೂರು: ಜಾತಿಗಣತಿಗೆ (Caste Census) ತೆರಳಿದ್ದಾಗ ಕಾರು, ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಶಿಕ್ಷಕರು ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ (H.D Kote) ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.

    ಗಾಯಾಳುಗಳನ್ನು ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸ್ವಾಮೀಗೌಡ ಹಾಗೂ ಸಹ ಶಿಕ್ಷಕಿ ಮಧುಶ್ರೀ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮುಖ್ಯಶಿಕ್ಷಕನ ಕಾಲು ಮುರಿದಿದೆ. ಸಹ ಶಿಕ್ಷಕಿಗೆ ಸಣ್ಣಪುಟ್ಟ ಗಾಯವಾಗಿದೆ. ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು | 8 ದಿನ ಪ್ರೇಯಸಿ ಜೊತೆಯಿದ್ದ ಯುವಕ ಲಾಡ್ಜ್‌ನಲ್ಲಿ ಸಾವು

    ಅದೃಷ್ಟವಶಾತ್‌ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: 7ನೇ ಕ್ಲಾಸ್ ವಿದ್ಯಾರ್ಥಿನಿಯ ರೇಪ್ ಮಾಡಿದ ಟ್ಯೂಷನ್ ಟೀಚರ್‌ಗೆ 10 ವರ್ಷ ಜೈಲು – ತೆಲಂಗಾಣ ಕೋರ್ಟ್ ಆದೇಶ

  • ಕೊಡಗು | ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಪಲ್ಟಿ

    ಕೊಡಗು | ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಪಲ್ಟಿ

    ಮಡಿಕೇರಿ: ಅಕ್ರಮವಾಗಿ ಗೋವುಗಳನ್ನು (Cows) ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯಲ್ಲಿನ ಕಾಗಡಿಕಟ್ಟೆ ಬಳಿ ಇಂದು ಬೆಳಗ್ಗಿನ ಜಾವ 2:30 ಗಂಟೆ ಸುಮಾರಿಗೆ ನಡೆದಿದೆ.

    ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನ ಸಂಖ್ಯೆ KA13-B 3078ರಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಅಪಘಾತದಲ್ಲಿ ಮೂರು ಗೋವುಗಳು ಗಾಯಗೊಂಡಿವೆ. ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಆರೋಪಿಗಳನ್ನು ತಡರಾತ್ರಿಯೇ ಬೆರೆಡೆಗೆ ಸಾಗಿಸಲಾಗಿದೆ. ಆರೋಪಿಕಡೆಯವರು ಇನ್ನೋವಾ ಕಾರಿನಲ್ಲಿ ಬೇರೆಡೆಗೆ ಸಾಗಿಸಿದ್ದಾರೆ.

    ಅಪಘಾತದ (Accident) ಬಳಿಕ ಕೊಡಗಿನಲ್ಲಿ ಗೋವುಗಳ ಅಕ್ರಮ ಸಾಗಾಟ ಹಾಗೂ ಹಾಗೂ ಗೋಹತ್ಯೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪೊಲೀಸರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದಾರೆ.

    ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ
    ಘಟನೆ ಬಳಿಕ, ತಪ್ಪಿತಸ್ಥರ ವಿರುದ್ಧ ಪೊಲೀಸ್‌ ಇಲಾಖೆ ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೇ ಕ್ರಮ ಕೈಗೊಳ್ಳಬೇಕು. ಇಲ್ಲಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದು ಜಾಗರಣ ವೇದಿಕೆ ಮುಖಂಡ ಬೋಜೆಗೌಡ ಎಚ್ಚರಿಸಿದ್ದಾರೆ.