Tag: Accusations

  • 11 ವರ್ಷದ ಬಾಲಕನ ಮೇಲೆ ಮದರಸಾದ ಮುಫ್ತಿಯಿಂದ ಅತ್ಯಾಚಾರ ಆರೋಪ!

    11 ವರ್ಷದ ಬಾಲಕನ ಮೇಲೆ ಮದರಸಾದ ಮುಫ್ತಿಯಿಂದ ಅತ್ಯಾಚಾರ ಆರೋಪ!

    ಲಕ್ನೋ: 11 ವರ್ಷದ ಬಾಲಕನ ಮೇಲೆ ಮದರಸಾದ ಮುಫ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಮಾವನ ತಾಲೂಕಿನಲ್ಲಿ ನಡೆದಿದೆ.

    ಸತ್ಲದ ನಿವಾಸಿಯಾದ ಮದರಸಾದ ಮುಫ್ತಿ ಅಬ್ದುಲ್ ಕಲಾಂ ಶಿಕ್ಷಣದ ಹೆಸರಿನಲ್ಲಿ ಮೂಲತಃ ಸಹರಾನ್‍ಪುರದ ಸಂತ್ರಸ್ತ ಬಾಲಕನಿಗೆ ದೌರ್ಜನ್ಯ ಎಸಗುತ್ತಿದ್ದರು ಎನ್ನಲಾಗಿದೆ. ಈದ್ ಹಬ್ಬದಂದು ಮನೆಗೆ ತೆರಳಿದ್ದ 11 ವರ್ಷದ ಬಾಲಕ ತನ್ನ ಕುಟುಂಬಸ್ಥರಿಗೆ 7 ತಿಂಗಳ ನಂತರ ನೋವಿನ ಬಗ್ಗೆ ಹೇಳಿಕೊಂಡಿದ್ದಾನೆ.

    ಈ ಕುರಿತು ಸಂತ್ರಸ್ತ ಬಾಲಕನ ತಂದೆ ಶನಿವಾರ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸದ್ಯ ಮುಫ್ತಿ ತಲೆಮರೆಸಿಕೊಂಡಿದ್ದಾನೆ.

    ಮುಫ್ತಿ, ಮೀರತ್‍ನ ಮಾವಾನಾದ ಇಕ್ರಮ್ ನಗರ ಫರೀದ್ ಕಾಲೋನಿಯಲ್ಲಿರುವ ಮದರಸಾದ ನಿರ್ದೇಶಕನಾಗಿದ್ದಾನೆ. ಅವನು ಮಕ್ಕಳಿಗೆ ತರಬೇತಿ ನೀಡುತ್ತಿದ್ದು, ಸುತ್ತಮುತ್ತಲಿನ ಪ್ರದೇಶದ ಜೊತೆಗೆ ಇತರ ಹಲವು ಜಿಲ್ಲೆಗಳ ಮಕ್ಕಳು ಸಹ ಈ ಮದರಸಾದಲ್ಲಿ ಉಳಿದುಕೊಂಡು ಶಿಕ್ಷಣ ಪಡೆಯುತ್ತಿದ್ದಾರೆ. ಇದರಲ್ಲಿ ಸಂತ್ರಸ್ತ ಬಾಲಕನೂ ಇದ್ದಾನೆ. ಬಾಲಕನು ಸುಮಾರು 7 ತಿಂಗಳ ಹಿಂದೆ ಮದರಸಾದಲ್ಲಿ ಓದಲು ಬಂದಿದ್ದರು ಎಂದು ತಿಳಿದು ಬಂದಿದೆ.

    ಈದ್ ಹಬ್ಬದಂದು ಸಂತ್ರಸ್ತ ಬಾಲಕ ಮನೆಗೆ ಹೋದಾಗ ಆರೋಪಿ ಮುಫ್ತಿಯ ಕೃತ್ಯವನ್ನು ತನ್ನ ಕುಟುಂಬದ ಸದಸ್ಯರಿಗೆ ತಿಳಿಸಿದ್ದಾನೆ. ಹಬ್ಬ ಮುಗಿದ ಬಳಿಕ ಶನಿವಾರ ಮಧ್ಯಾಹ್ನ ಬಾಲಕನನ್ನು ಮನೆಯವರು ಮದರಸಾಕ್ಕೆ ಕರೆದೊಯ್ದರು. ಆದರೆ ಈ ಆರೋಪ ಸುಳ್ಳು ಎನ್ನುತ್ತಿದ್ದಾರೆ ಮದರಸಾದವರು.

    police (1)

    ಕೊನೆಗೆ ಸಂಜೆಯ ವೇಳೆಗೆ ವಿಷಯ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ದೂರು ಸ್ವೀಕರಿಸಿದ ಪೊಲೀಸರು ಸಂತ್ರಸ್ತ ಬಾಲಕನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಮುಫ್ತಿ ವಿರುದ್ಧ ಕೇಸ್ ದಾಖಲಾಗಿತ್ತು.

  • ಕಥೆ ಕಟ್ಟುವುದರಲ್ಲಿ ಕಾಂಗ್ರೆಸ್ ಎತ್ತಿದ ಕೈ – ಆರೋಪ ತಳ್ಳಿ ಹಾಕಿದ ಸಿಎಂ ಪುತ್ರ

    ಕಥೆ ಕಟ್ಟುವುದರಲ್ಲಿ ಕಾಂಗ್ರೆಸ್ ಎತ್ತಿದ ಕೈ – ಆರೋಪ ತಳ್ಳಿ ಹಾಕಿದ ಸಿಎಂ ಪುತ್ರ

    ಬೆಂಗಳೂರು: ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ 5 ಸಾವಿರ ಕೋಟಿ ರೂ. ಸಂಗ್ರಹ ಮಾಡಿದ್ದಾರೆ ಎಂದು ಆರೋಪ ಮಾಡಿತ್ತು. ಈ ಆರೋಪವನ್ನು ಸಿಎಂ ಪುತ್ರ ತಳ್ಳಿ ಹಾಕಿದ್ದಾರೆ.

    ಇಂದು ಬೆಳಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ 5 ಸಾವಿಕ ಕೋಟಿ ಸಂಗ್ರಹ ಮಾಡಿದ್ದಾರೆ ಎಂದು ಆರೋಪಿಸಿ ಪತ್ರವನ್ನು ಬಿಡುಗಡೆ ಮಾಡಿದ್ದರು. ಇದಕ್ಕೆ ಉತ್ತರಿಸಿರುವ ವಿಜಯೇಂದ್ರ, ಕಥೆ ಕಟ್ಟುವುದರಲ್ಲಿ ಕಾಂಗ್ರೆಸ್ ಎತ್ತಿದ ಕೈ ಎಂದಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ವಿಜಯೇಂದ್ರ, ಕಟ್ಟು ಕಥೆ ಕಟ್ಟುವುದರಲ್ಲಿ, ಹಸಿ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ಎತ್ತಿದ ಕೈ, ನನ್ನನ್ನು ಗುರಿಯಾಗಿಸಿಕೊಂಡು ಮೈಸೂರಿನಲ್ಲಿಂದು ಇಂಥದ್ದೇ ಒಂದು ಹಾಸ್ಯಾಸ್ಪದವಾದ ಟೊಳ್ಳು ಆರೋಪವನ್ನು ಮಾಡಲಾಗಿದೆ. ದುರುದ್ದೇಶ ಪೂರಿತ, ರಾಜಕೀಯ ಪಿತೂರಿಯ ಆರೋಪಗಳಿಗೆ ನಾನೆಂದೂ ಬೆನ್ನು ತೋರುವುದಿಲ್ಲ. ಅಪಪ್ರಚಾರಗಳು ನನ್ನ ನೈತಿಕ ಸ್ಥೈರ್ಯ ಕುಂದಿಸದು ಎಂದು ಕಿಡಿಕಾರಿದ್ದಾರೆ.

    ಇಂದು ಬೆಳಗ್ಗೆ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್, ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಕಳೆದ ಒಂದು ವರ್ಷದಲ್ಲಿ 5 ಸಾವಿರ ಕೋಟಿ ಸಂಗ್ರಹ ಮಾಡಿದ್ದಾರೆ. ಈ ಕುರಿತು ಬಿಜೆಪಿ ಪಕ್ಷದ ಶಾಸಕರು ಹೈಕಮಾಂಡ್‍ಗೆ ಬರೆದಿದ್ದಾರೆ. ಪತ್ರದಲ್ಲಿ ಬಿಜೆಪಿ ಶಾಸಕರೇ ಆರೋಪ ಮಾಡಿದ್ದಾರೆ ಎಂದು ಲಕ್ಷ್ಮಣ್ ಹೇಳಿದ್ದರು.

    ವಿಜಯೇಂದ್ರ ಅವರ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ಆಡಿಯೋ ಮತ್ತು ವಿಡಿಯೋ ಕ್ಲೀಪಿಂಗ್‍ಗಳನ್ನು ನಾವು ಸಂಗ್ರಹಿಸಿದ್ದೇವೆ. ಆದರೆ ಬಿಜೆಪಿ ಶಾಸಕರು ಬರೆದಿದ್ದಾರೆ ಎನ್ನಲಾದ ಪತ್ರದ ಬಗ್ಗೆ ತನಿಖೆಯನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ 20 ದಿನಗಳ ಸಮಯ ನೀಡುತ್ತಿದ್ದೇವೆ. ಯಾವುದೇ ಕ್ರಮಕೈಗೊಳ್ಳದಿದ್ದಾರೆ ಸೆಪ್ಟೆಂಬರ್ ತಿಂಗಳ ಎರಡು ಅಥವಾ ಮೂರನೇ ವಾರದಲ್ಲಿ ದೆಹಲಿಯಲ್ಲಿ ಆಡಿಯೋ, ವಿಡಿಯೋ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಲಕ್ಷ್ಮಣ್ ಅವರು ಆರೋಪಿಸಿದ್ದರು.