Tag: accused

  • ಕೊಲೆ ಆರೋಪಿಗಳ ಸುಳಿವು ನೀಡಿದ ಎಟಿಎಂ ಕಾರ್ಡ್

    ಕೊಲೆ ಆರೋಪಿಗಳ ಸುಳಿವು ನೀಡಿದ ಎಟಿಎಂ ಕಾರ್ಡ್

    – ಡಬಲ್ ಮರ್ಡರ್ ಮಾಡಿದ್ದ 6 ಆರೋಪಿಗಳು ಅಂದರ್

    ಹಾಸನ: ತೋಟದ ಮನೆಯಲ್ಲಿ ವೃದ್ಧ ದಂಪತಿಯ ಜೋಡಿ ಕೊಲೆ ಪ್ರಕರಣರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಜಿಲ್ಲೆಯ ಚನ್ನರಾಯಪಟ್ಟಣ ಪೊಲೀಸರು 6 ಜನ ಆರೋಪಿಗಳನ್ನು ಬಂಧಿಸಿದ್ದು, ಮಂಜಶೆಟ್ಟಿ(23), ಪ್ರಸಾದ್(25), ನಂದನ್ ಕುಮಾರ್(33), ಯೋಗಾನಂದ(29), ಭರತ್(24), ಮಧು(25) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸುಮಾರು 15 ಲಕ್ಷ ಮೌಲ್ಯದ 316 ಗ್ರಾಂ ಚಿನ್ನ, ಎರಡು ಕೆಜಿ 250 ಗ್ರಾಂ ಬೆಳ್ಳಿ, ಸುಮಾರು 25 ಸಾವಿರ ನಗದು, ಮೂರು ಮೊಬೈಲ್ ಫೋನ್, ಒಂದು ಕಾರು, ಮೂರು ಬೈಕ್ ವಶಕ್ಕೆ ಪಡೆಯಲಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಅವರ ಮಾಹಿತಿ ಮೇರೆಗೆ ಉಳಿದ ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳು ದಂಪತಿಯ ಎಟಿಎಂ ಕಾರ್ಡ್‍ನಿಂದ ಹಣ ಪಡೆಯಲು ಹೋಗಿದ್ದರಿಂದ ಆರೋಪಿಗಳ ಹುಡುಕಾಟದಲ್ಲಿದ್ದ ಪೊಲೀಸರಿಗೆ ಸುಳಿವು ಸಿಕ್ಕಿದ್ದು, ಎಟಿಎಂ ಮೂಲಕ ಎಲ್ಲರನ್ನೂ ಬಂಧಿಸಲು ಸಾಧ್ಯವಾಗಿದೆ.

    ಈ ಕುರಿತು ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳೆಲ್ಲ ಪೊಲೀಸರ ವಶವಾಗಿದ್ದು, ತನಿಖಾ ತಂಡಕ್ಕೆ ಎಸ್‍ಪಿ ಶ್ರೀನಿವಾಸ್‍ಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಆಗಸ್ಟ್ 29 ರಂದು ಚನ್ನರಾಯಪಟ್ಟಣ ತಾಲೂಕಿನ, ಆಲಗೊಂಡನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಮುರಳೀಧರ್ ಮತ್ತು ಉಮಾದೇವಿ ದಂಪತಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು.

  • ಹಾಸನದಲ್ಲಿ ಮತ್ತೊಂದು ಕೊಲೆ- ಸ್ನೇಹಿತನ ಮುಖಕ್ಕೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ

    ಹಾಸನದಲ್ಲಿ ಮತ್ತೊಂದು ಕೊಲೆ- ಸ್ನೇಹಿತನ ಮುಖಕ್ಕೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ

    – ಮನೆಯ ಹೊರಗೆ ಮಲಗಿದ್ದ ಸ್ನೇಹಿತನಿಗೆ ಬೆಂಕಿ

    ಹಾಸನ: ಇತ್ತೀಚೆಗೆ ಜಿಲ್ಲೆಯಲ್ಲಿ ಕೊಲೆ, ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರತಿ ದಿನ ಒಂದಿಲ್ಲೊಂದು ಪ್ರಕರಣ ಬೆಳಕಿಗೆ ಬರುತ್ತಿವೆ. ಇದೀಗ ವ್ಯಕ್ತಿ ಸ್ನೇಹಿತನ ಮುಖಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ವಿಕೃತವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

    ಹಾಸನ ಜಿಲ್ಲೆ, ಹೊಳೆನರಸೀಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ನೇಹಿತನ ಮುಖಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ರೌಡಿಶೀಟರ್ ಮೆಹಬೂಬ್ ಬಂಧಿತ ಆರೋಪಿ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ರಮೇಶ್ ಲಾಕ್‍ಡೌನ್ ನಂತರ ಹೊಳೆನರಸೀಪುರಕ್ಕೆ ವಾಪಸ್ಸಾಗಿದ್ದ. ಬಾರ್‍ನಲ್ಲಿ ಕುಡಿಯುವ ವೇಳೆ ರೌಡಿಶೀಟರ್ ಮೆಹಬೂಬ್ ಮತ್ತು ರಮೇಶ್ ನಡುವೆ ಗಲಾಟೆಯಾಗಿತ್ತು. ಇದರಿಂದ ಆಕ್ರೋಶಗೊಂಡ ರೌಡಿಶೀಟರ್ ಮೆಹಬೂಬ್ ರಮೇಶ್‍ನನ್ನು ಕೊಲೆ ಮಾಡಲು ನಿರ್ಧರಿಸಿದ್ದ.

    ರಾತ್ರಿವೇಳೆ ರಮೇಶ್ ಯಾವಾಗಲೂ ಮನೆ ಹೊರಗೆ ಮಲಗಿರುವುದನ್ನು ಅರಿತಿದ್ದ ರೌಡಿ ಶೀಟರ್ ಮೆಹಬೂಬ್ ಆಗಸ್ಟ್ 9ರಂದು ರಾತ್ರಿ ರಮೇಶ್ ಮುಖಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ರಮೇಶ್ ಕುಡಿದಿದ್ದರ ಜೊತೆಗೆ ಹೆಚ್ಚು ಸ್ಯಾನಿಟೈಸರ್ ಬಳಸಿದ್ದರಿಂದ ಬೀಡಿ, ಸಿಗರೇಟ್ ಸೇದುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟಗಾಯವಾಗಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರಬಹುದು ಎಂದು ಆರಂಭದಲ್ಲಿ ಎಲ್ಲರೂ ಭಾವಿಸಿದ್ದರು.

    ಅನುಮಾನಗೊಂಡ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ರೌಡಿಶೀಟರ್ ಮೆಹಬೂಬ್ ಎಂಬುವವನು ರಮೇಶ್ ಮುಖಕ್ಕೆ ಬೆಂಕಿ ಹಚ್ಚಿ ಪರಾರಿಯಾಗುತ್ತಿರುವುದು ಮತ್ತು ಪ್ರಾಣ ಉಳಿಸಿಕೊಳ್ಳಲು ರಮೇಶ್ ತನ್ನ ಬಟ್ಟೆಯನ್ನೆಲ್ಲ ಕಿತ್ತೆಸೆದು ಬೆಂಕಿ ಆರಿಸಿಕೊಳ್ಳಲು ಯತ್ನಿಸಿದ ದೃಶ್ಯ ಕಂಡು ಬಂದಿದೆ. ಅರಸೀಕೆರೆ ಡಿವೈಎಸ್‍ಪಿ ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ಅಶೋಕ್, ಎಸ್‍ಐ ಕುಮಾರ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಕೊಲೆ ಆರೋಪಿಯನ್ನು ಬಂಧಿಸಿದ ತಂಡಕ್ಕೆ ಎಸ್‍ಪಿ ಶ್ರೀನಿವಾಸ್‍ಗೌಡ ಅಭಿನಂದನೆ ಸಲ್ಲಿಸಿದ್ದಾರೆ.

  • ವಾಣಿಜ್ಯನಗರಿಯಲ್ಲಿ ಮುಂದುವರೆದ ಗಾಂಜಾ ಘಾಟು: ಮತ್ತಿಬ್ಬರು ಅಂದರ್

    ವಾಣಿಜ್ಯನಗರಿಯಲ್ಲಿ ಮುಂದುವರೆದ ಗಾಂಜಾ ಘಾಟು: ಮತ್ತಿಬ್ಬರು ಅಂದರ್

    ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪೊಲೀಸರು ಗಾಂಜಾ ಪ್ರಕರಣಗಳನ್ನು ಬೆನ್ನಟ್ಟುತ್ತಿದ್ದು, ಬಗೆದಷ್ಟು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಮೂರು ಪ್ರಕರಣಗಳನ್ನು ಪೊಲೀಸರು ಭೇಧಿಸಿದ್ದು, ಇಂದು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ನಗರದ ನೂರ್ ಅಹ್ಮದ್ ಹಾಗೂ ಅಕ್ಷಯ ವೇರ್ಣೆಕರ ಬಂಧಿತ ಆರೋಪಿಗಳು. ನಗರದಲ್ಲಿ ನಡೆಯುತ್ತಿರುವ ಗಾಂಜಾ ಹಾವಳಿಯ ಜಾಡು ಹಿಡಿದು ಹೊರಟಿರುವ ಪೊಲೀಸರಿಗೆ ಬಗೆದಷ್ಟು ಪ್ರಕರಣಗಳು ಪತ್ತೆಯಾಗುತ್ತಿದ್ದು, ಉಪನಗರ ಠಾಣೆ ಪೊಲೀಸರು ಇಂದು ಮತ್ತಿಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಗಾಂಜಾ ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಬೈಕ್ ಜಪ್ತಿ ಮಾಡಿದ್ದಾರೆ.

    ನಗರದ ಪ್ರಮುಖ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರೆಂದು ತಿಳಿಯುತ್ತಿದ್ದಂತೆ ಹುಬ್ಬಳ್ಳಿ-ಧಾರವಾಡ ನಗರ ಆರ್ಥಿಕ ಅಪರಾಧ ಮತ್ತು ಮಾದಕ ವಸ್ತುಗಳ ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿ ಇಬ್ಬರನ್ನು ಪತ್ತೆ ಹಚ್ಚಿ ಬಂಧಿಸಿ ಅರ್ಧ ಕೆ.ಜಿ.(500 ಗ್ರಾಂ.) ಗಾಂಜಾ ವಶಪಡಿಸಿಕೊಡಿದ್ದಾರೆ.

    ಶುಕ್ರವಾರವಷ್ಟೇ ತಿಮ್ಮಸಾಗರದ ವಿಶ್ವನಾಥ ಮಲ್ಲಪ್ಪ ಕರಡಿಗುಡ್ಡ ಹಾಗೂ ಮಂಟೂರ ರಸ್ತೆಯ ನರೇಶಕುಮಾರ ರಾಜಣ್ಣ ನಾಯಕಂಟಿ ಈ ಇಬ್ಬರನ್ನು ಪೊಲೀಸರು ಹಿಡಿದಿದ್ದರು. ಅವರಿಂದ 1.795 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದರು. ಇಂದು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 16ರ ಬಾಲಕಿ ಮೇಲೆ ಆ್ಯಸಿಡ್ ಹಾಕಿ, ಸಾಮೂಹಿಕ ಅತ್ಯಾಚಾರ- ವಿಡಿಯೋ ಮಾಡಿ ಬೆದರಿಕೆ

    16ರ ಬಾಲಕಿ ಮೇಲೆ ಆ್ಯಸಿಡ್ ಹಾಕಿ, ಸಾಮೂಹಿಕ ಅತ್ಯಾಚಾರ- ವಿಡಿಯೋ ಮಾಡಿ ಬೆದರಿಕೆ

    ಚಂಡೀಗಡ: ಮೂವರು ಯುವಕರು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೋ ಮಾಡಿ, ನಂತರ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ನಡೆದಿದೆ.

    ಭಾನುವಾರ ರಾತ್ರಿ ಪಂಜಾಬ್‍ನ ಲುಧಿಯಾನಾದಲ್ಲಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಪುಂಡರು ಅಡ್ಡಗಟ್ಟಿದ್ದಾರೆ. ಇದರಲ್ಲಿ ಇಬ್ಬರು ದ್ವಿಚಕ್ರ ವಾಹನದಲ್ಲಿ ತಮ್ಮೊಂದಿಗೆ ಬರುವಂತೆ ಒತ್ತಾಯಿಸಿದ್ದಾರೆ. ಆದರೆ ಬಾಲಕಿ ಬರಲು ಒಪ್ಪಿಲ್ಲ. ಈ ವೇಳೆ ಹಲ್ಲೆ ನಡೆಸಿ, ಆಕೆಯ ಮೇಲೆ ಆ್ಯಸಿಡ್ ಸುರಿದು ವಿಕೃತಿ ಮೆರೆದಿದ್ದಾರೆ.

    ನಂತರ ಬಾಲಕಿಯನ್ನು ನಿರ್ಜನ ಪ್ರದೇಶದಲ್ಲಿರುವ ರೂಮ್‍ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆಯನ್ನು ತಮ್ಮ ಮೊಬೈಲ್‍ನಲ್ಲಿ ವಿಡಿಯೋ ಮಾಡಿಕೊಂಡಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಆರಂಭದಲ್ಲಿ ಕುಟುಂಬಸ್ಥರಿಗೆ ಈ ಕುರಿತು ತಿಳಿಸಲು ಬಾಲಕಿ ಹಿಂದೇಟು ಹಾಕಿದ್ದಾಳೆ. ಆದರೆ ಮಂಗಳವಾರ ರಾತ್ರಿ ತನ್ನ ತಾಯಿಗೆ ಘಟನೆ ಕುರಿತು ವಿವರಿಸಿದ್ದಾಳೆ. ಬಾಲಕಿ ಅವಸ್ಥೆಯನ್ನು ಅರಿತ ಕುಟುಂಬಸ್ಥರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

    ಡಿವಿಶನ್ ನಂ.3 ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್ 376-ಡಿ(ಸಾಮೂಹಿಕ ಅತ್ಯಾಚಾರ) ಹಾಗೂ ಐಟಿ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಆರೋಪಿಗಳು 14-16 ವರ್ಷದವರಾಗಿದ್ದಾರೆ ಎಂದು ನಂಬಲಾಗಿದೆ. ಈ ಕುರಿತು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

  • ಅಕ್ರಮವಾಗಿ ಸಾಗಿಸುತ್ತಿದ್ದ 2 ಕೋಟಿ ವಶಕ್ಕೆ ಪಡೆದ ಪೊಲೀಸರು

    ಅಕ್ರಮವಾಗಿ ಸಾಗಿಸುತ್ತಿದ್ದ 2 ಕೋಟಿ ವಶಕ್ಕೆ ಪಡೆದ ಪೊಲೀಸರು

    ಕೋಲಾರ: ಯಾವುದೇ ಬಿಲ್, ಸೂಕ್ತ ದಾಖಲೆ ಇಲ್ಲದೆ ಅಕ್ರಮವಾಗಿ ಹಣ ಸಾಗಣೆ ಮಾಡುತ್ತಿದ್ದ 2 ಕೋಟಿ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಜಿಲ್ಲೆಯ ಶ್ರೀನಿವಾಸಪುರ ತಾಲೂಕು ರೋಜೇನಹಳ್ಳಿ ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದು, ಹಣ ಕೊಂಡೊಯ್ಯುತ್ತಿದ್ದ ಕೋಲಾರ ಮೂಲದ ಚಂದ್ರು ಹಾಗೂ ಅಮರ್ ನಾಥ್ ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ. ಬರೋಬ್ಬರಿ 2,94,50,000 ರೂ.ಗಳನ್ನು ವಶಕ್ಕೆ ಪಡೆದಿದಿದ್ದಾರೆ. ಅಲ್ಲದೆ ಇಬ್ಬರನ್ನೂ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

    ಕೊರೊನಾ ಸಂಕಷ್ಟ ಕಾಲದಲ್ಲಿ ಇಷ್ಟು ಹಣ ಹೇಗೆ ಬಂತು, ಯಾರಿಗೆ ಸೇರಿದ್ದು, ಉದ್ದೇಶ ಏನು ಎಂಬ ಹತ್ತು ಹಲವು ಅನುಮಾನಗಳು ಪೊಲೀಸರಿಗೆ ಮೂಡಿದ್ದು, ಕೋಲಾರ ಮೂಲದ ಚಂದ್ರು ಹಾಗೂ ಅಮರ್ ನಾಥ್ ಎಂಬ ಇಬ್ಬರು ವ್ಯಕ್ತಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಸ್ಥಳಕ್ಕೆ ಕೋಲಾರ ಎಸ್‍ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದು, ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

  • ಬೆಂಗ್ಳೂರಿನ ಸೆಲೆಬ್ರಿಟಿಗಳ ಡ್ರಗ್ಸ್ ಪೂರೈಕೆದಾರ ದೆಹಲಿಯಲ್ಲಿ ಅರೆಸ್ಟ್

    ಬೆಂಗ್ಳೂರಿನ ಸೆಲೆಬ್ರಿಟಿಗಳ ಡ್ರಗ್ಸ್ ಪೂರೈಕೆದಾರ ದೆಹಲಿಯಲ್ಲಿ ಅರೆಸ್ಟ್

    – ಒಂದು ಗ್ರಾಂ ಗಾಂಜಾಗೆ 5 ಸಾವಿರ ರೂ.
    – ವಿದೇಶದಿಂದ ಗಾಂಜಾ ಆಮದು

    ಬೆಂಗಳೂರು: ಭಾರೀ ಚರ್ಚೆಗೆ ಕಾರಣವಾಗಿರುವ ಡ್ರಗ್ಸ್ ಪ್ರಕರಣದ ತನಿಖೆ ಪೊಲೀಸರು ಚುರುಕುಗೊಳಿಸಿದ್ದು, ಹಲವು ಸ್ಟಾರ್ ಕಲಾವಿದರು ಭಾಗಿಯಾಗಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಡ್ರಗ್ ಸಪ್ಲೈಯರ್ ನನ್ನು ಬಂಧಿಸಿದ್ದಾರೆ.

    ಈ ಕುರಿತು ದೆಹಲಿಯ ಎನ್‍ಸಿಬಿ ಮುಖ್ಯ ಕಚೇರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಪೇಜ್ ತ್ರೀ ಸೆಲಬ್ರೆಟಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ. ಎಫ್.ಆಹ್ಮದ್ ಬಂಧಿತ ಆರೋಪಿ, ಈ ಮೂಲಕ ಸ್ಯಾಂಡಲ್‍ವುಡ್ ಗೆ ಡ್ರಗ್ಸ್ ಬರುತ್ತಿರುವುದು ಮತ್ತೊಮ್ಮೆ ರುಜುವಾಗಿದೆ. ಮೂರೂವರೆ ಕೆ.ಜಿ. ಗಾಂಜಾ ದೆಹಲಿಯಲ್ಲಿ ಸೀಜ್ ಮಾಡಲಾಗಿದ್ದು, ಫಾರೀನ್ ಪೋಸ್ಟ್ ಅಫೀಸ್‍ನಲ್ಲಿ ಈ ಗಾಂಜಾ ಸೀಜ್ ಮಾಡಲಾಗಿದೆ. ಇದು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ಅಧಿಕಾರಿಗಳ ಮತ್ತೊಂದು ಮೇಜರ್ ಅಪರೇಷನ್ ಆಗಿದೆ.

    ಈ ಡ್ರಗ್ಸ್ ದೆಹಲಿಯಿಂದ ಮುಂಬೈಗೆ ತಲುಪಬೇಕಿತ್ತು. ಇದೇ ಮಾಹಿತಿ ಮೇಲೆ ಮುಂಬೈನಲ್ಲಿ ಕಾರ್ಯಾಚರಣೆ ಮಾಡಿ ಆಹ್ಮದ್‍ನನ್ನು ಬಂಧಿಸಲಾಗಿದೆ. ಈ ಮೂಲಕ ಬೆಂಗಳೂರಿನ ಪೇಜ್ ತ್ರೀ ಸೆಲೆಬ್ರೆಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿರುವುದು ಬೆಳಕಿಗೆ ಬಂದಿದೆ.

    ಎನ್‍ಸಿಬಿ ಅಧಿಕಾರಿಗಳು ದೆಹಲಿ ಹಾಗೂ ಮುಂಬೈನಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆದಿದೆ. ಬೆಂಗಳೂರಿಗೆ ಮಾರಿಜುನಾ ಸರಬರಾಜು ಮಾಡುತ್ತಿದ್ದ ಗೋವಾ ಮೂಲದ ಕಿಂಗ್ ಪಿನ್ ಎಫ್.ಅಹ್ಮದ್ ವಶಕ್ಕೆ ಪಡೆಯಲಾಗಿದೆ. ಆಹ್ಮದ್ ಬೆಂಗಳೂರಿನ ಕೆಲ ಪ್ರಮುಖ ವ್ಯಕ್ತಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಈತ ಖಾಸಗಿ ರೆಸಾರ್ಟ್ ನಲ್ಲಿ ಕಾರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಬೆಂಗಳೂರಿಗೆ ಪ್ರಮುಖ ಮೆರಿಜುವಾನ ಸರಬರಾಜುಗಾರನಾಗಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ.

    ವಿದೇಶಿ ಪೋಸ್ಟ್ ಆಫೀಸ್ ಗಳಲ್ಲಿದ್ದ 3.5 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಮುಂಬೈ, ದೆಹಲಿ ಮಾರುಕಟ್ಟೆಯಲ್ಲಿ ಗಾಂಜಾ ಹೆಚ್ಚು ಮಾರಾಟವಾಗುತ್ತಿದೆ. 1 ಗ್ರಾಂ.ಗೆ ಬರೋಬ್ಬರಿ 5 ಸಾವಿರ ರೂ. ಡಿಮ್ಯಾಂಡ್ ಹೊಂದಿದೆ. ಮುಂಬೈನಲ್ಲಿ ವಶಪಡಿಸಿಕೊಂಡ ಗಾಂಜಾ ಕೆನಾಡಾದಿಂದ ಆಮದು ಮಾಡಿಕೊಳ್ಳಲಾಗಿತ್ತು. ಗೋವಾಗೆ ಸರಬರಾಜು ಮಾಡುವ ಉದ್ದೇಶ ಹೊಂದಲಾಗಿತ್ತು. ಡಾರ್ಕ್ ನೆಟ್ ಮೂಲಕ ಭಾರೀ ಗಾಂಜಾ ಖರೀದಿಯಾಗುತ್ತಿದೆ. ಕ್ರಿಪ್ಟೋ ಕರೆನ್ಸಿ ಮೂಲಕ ಖರೀದಿ ವ್ಯವಹಾರ ನಡೆಯುತ್ತಿದೆ ಎನ್ನಲಾಗಿದೆ. ಎನ್‍ಸಿಬಿ ಕಾರ್ಯಾಚರಣೆ ಮುಂದುವರಿಸಿದೆ.

    ಏನಿದು ಡಾರ್ಕ್‍ನೆಟ್?: ಅಪರಾಧದ ವಿಶ್ವದ ದೊಡ್ಡ ವೇದಿಕೆ ಎಂದು ಡಾರ್ಕ್ ನೆಟ್‍ನ್ನು ಕರೆಯಲಾಗುತ್ತದೆ. ಇಲ್ಲಿ ಡ್ರಗ್ಸ್ ಸಂಬಂಧಿಸಿದ ಔಷಧಿಗಳು, ಅಪರಾಧ ಪ್ರಕರಣಗಳಿಗೆ ಬೇಕಾದ ವಸ್ತುಗಳು ಇಲ್ಲಿ ಡಾರ್ಕ್‍ನೆಟ್ ನಲ್ಲಿ ಲಭ್ಯವಾಗುತ್ತವೆ. ವಿಶ್ವದ ಶೇ.4ರಷ್ಟು ಜನರು ಇಂಟರ್ ನೆಟ್ ಮೂಲಕ ಈ ವೆಬ್‍ಸೈಟ್ ಸಂಪರ್ಕಿಸುತ್ತಾರೆ. ಶೇ.94 ಜನರು ಸ್ಪೇಸ್ ಇಂಟರ್ ನೆಟ್ ಮೂಲಕ ಡೀಪ್ ಡಾರ್ಕ್‍ನೆಟ್ ಬಳಕೆ ಮಾಡುತ್ತಾರೆ. ನಕಲಿ ಐಡಿ ತಯಾರಿಸುವ ಮೂಲಕ ಇಲ್ಲಿ ವ್ಯವಹರಿಸಲಾಗುತ್ತದೆ. ಹೀಗಾಗಿ ಆರೋಪಿಗಳನ್ನು ಪತ್ತೆ ಹಚ್ಚೋದು ಕಷ್ಟದ ಕೆಲಸ.

  • ಹಾಸನದಲ್ಲಿ ಗುಂಡಿನ ಸದ್ದು- ಜೋಡಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

    ಹಾಸನದಲ್ಲಿ ಗುಂಡಿನ ಸದ್ದು- ಜೋಡಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

    – ಆರೋಪಿ ಮೊಣಕಾಲಿಗೆ ಗುಂಡು ಹಾರಿಸಿ ಬಂಧನ

    ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಆಲಗೊಂಡನಹಳ್ಳಿಯಲ್ಲಿ ಇಂದು ಗುಂಡಿನ ಶಬ್ದ ಕೇಳಿಸಿದ್ದು, ವೃದ್ಧ ದಂಪತಿಯನ್ನು ಹತ್ಯೆ ಮಾಡಿದ್ದ ಆರೋಪಿ ಮೇಲೆ ಫೈರಿಂಗ್ ಮಾಡುವ ಮೂಲಕ ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಪ್ರಸಾದ್ ಅಲಿಯಾಸ್ ಗುಂಡನ ಎಡಗಾಲಿನ ಮಂಡಿ ಭಾಗಕ್ಕೆ ಗುಂಡೇಟು ಹೊಡೆಯಲಾಗಿದೆ. ಆಲಗೊಂಡನಹಳ್ಳಿ ಗ್ರಾಮದ ಹೊರವಲಯದ ತೋಟದ ಮನೆಯಲ್ಲಿ ವಾಸವಿದ್ದ ವೃದ್ಧ ದಂಪತಿ ಮುರುಳಿಧರ್ (71), ಉಮಾದೇವಿ (67) ಅವರನ್ನು ಎರಡು ದಿನಗಳ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸದಂತೆ ಈಗ ಇಬ್ಬರನ್ನು ಬಂಧಿಸಲಾಗಿದೆ.

    ಕೋಳಿ ಫಾರಂನಲ್ಲಿ ಆರೋಪಿಗಳು ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಜೊತೆಗೆ ಶರಣಾಗುವಂತೆ ಮನವಿ ಮಾಡಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪೊಲೀಸರು ಬಂಧಿಸಲು ಮುಂದಾದಾಗ ಆರೋಪಿಗಳು ಇನ್‍ಸ್ಪೆಕ್ಟರ್ ವಿನಯ್ ಅವರಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಆಗ ರಕ್ಷಣೆಗಾಗಿ ವಿನಯ್ ಜೊತೆ ಇದ್ದ ಮತ್ತೊಬ್ಬ ಇನ್‍ಸ್ಪೆಕ್ಟರ್ ಸಿದ್ದರಾಮೇಶ್ವರ್ ಅವರು ಫೈರಿಂಗ್ ಮಾಡಿದ್ದಾರೆ.

    ವಿನಯ್ ಅವರ ಎಡಗೈಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾಕ್‍ಡೌನ್ ಸಮಯದಲ್ಲಿ ಊರಿಗೆ ಬಂದಿದ್ದ ಆರೋಪಿಗಳು ದುಡ್ಡಿಗಾಗಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. 80 ಎಕರೆ ಜಮೀನು ಹೊಂದಿದ್ದ ಮುರುಳಿಧರ್ ಅವರಿಗೆ ಮಕ್ಕಳಿರಲಿಲ್ಲ. ಅವರು ಆ ಜಮೀನನ್ನು ಮಾರಿ ಮನೆಯಲ್ಲಿ ದುಡ್ಡು ಇಟ್ಟಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಆರೋಪಿಗಳು ದರೋಡೆಗೆ ಯತ್ನಿಸಿದ್ದರು. ಈ ವೇಳೆ ವೃದ್ಧ ದಂಪತಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು.

    ಈ ವಿಚಾರವಾಗಿ ಮಾತನಾಡಿದ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಎರಡು ದಿನಗಳ ಹಿಂದೆ ಜೋಡಿ ಕೊಲೆಯಾಗಿತ್ತು. ಮಾಹಿತಿ ಆಧರಿಸಿ ಆರೋಪಿಗಳ ಪತ್ತೆಗೆ ನಮ್ಮ ಪೊಲೀಸರು ತೆರಳಿದ್ದರು. ಸ್ಥಳಕ್ಕೆ ತೆರಳಿದ ವೇಳೆ ಆರೋಪಿಗೆ ಶರಣಾಗುವಂತೆ ಪೊಲೀಸರು ಹೇಳಿದ್ದಾರೆ. ಆದರೆ ಆರೋಪಿ ಶರಣಾಗದೇ ಪೊಲೀಸರ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ನಮ್ಮ ಪೊಲೀಸರು ಫೈರಿಂಗ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

    ಆರೋಪಿ ಮತ್ತು ಸಿಪಿಐ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರ ಆರೋಗ್ಯದಲ್ಲೂ ಚೇತರಿಕೆ ಕಂಡು ಬಂದಿದೆ. ಸರಣಿ ಕೊಲೆಯಾಗುತ್ತಿರುವ ಚನ್ನರಾಯಪಟ್ಟಣ ಸೇರಿ ಎಲ್ಲೆಡೆ ಗಂಭೀರ ಕ್ರಮ ಕೈಗೊಂಡು ನಿಗಾ ವಹಿಸಿದ್ದೇವೆ. ಸದ್ಯ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದೇವೆ. ಇನ್ನೂ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.

  • ಜೋಡಿ ಕೊಲೆ ಮಾಡಿ ಕೋಳಿ ಫಾರಂನಲ್ಲಿ ಅಡಗಿದ್ದ ಹಂತಕರು – ಪೊಲೀಸರಿಂದ ಗುಂಡೇಟು

    ಜೋಡಿ ಕೊಲೆ ಮಾಡಿ ಕೋಳಿ ಫಾರಂನಲ್ಲಿ ಅಡಗಿದ್ದ ಹಂತಕರು – ಪೊಲೀಸರಿಂದ ಗುಂಡೇಟು

    – ಲಾಕ್‍ಡೌನ್ ವೇಳೆ ಊರಿಗೆ ಬಂದು ಹಣಕ್ಕಾಗಿ ಮರ್ಡರ್
    – ಇನ್ಸ್‍ಪೆಕ್ಟರ್ ಮೇಲೆ ಚಾಕುವಿನಿಂದ ದಾಳಿ

    ಹಾಸನ: ಚನ್ನರಾಯಪಟ್ಟಣದ ಆಲಗೊಂಡನಹಳ್ಳಿಯಲ್ಲಿ ವೃದ್ಧ ದಂಪತಿಗಳನ್ನು ಹತ್ಯೆ ಮಾಡಿ ಕೋಳಿ ಫಾರಂನಲ್ಲಿ ಅಡಗಿದ್ದ ಕೊಲೆಗಾರನ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿದ್ದಾರೆ.

    ಆರೋಪಿ ಪ್ರಸಾದ್ ಅಲಿಯಾಸ್ ಗುಂಡನ ಎಡಗಾಲಿನ ಮಂಡಿ ಭಾಗಕ್ಕೆ ಗುಂಡೇಟು ಹೊಡೆಯಲಾಗಿದೆ. ಆಲಗೊಂಡನಹಳ್ಳಿ ಗ್ರಾಮದ ಹೊರವಲಯದ ತೋಟದ ಮನೆಯಲ್ಲಿ ವಾಸವಿದ್ದ ವೃದ್ಧ ದಂಪತಿ ಮುರುಳಿಧರ್ (71), ಉಮಾದೇವಿ (67) ಅವರನ್ನು ಎರಡು ದಿನಗಳ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸದಂತೆ ಈಗ ಇಬ್ಬರನ್ನು ಬಂಧಿಸಲಾಗಿದೆ.

    ಕೋಳಿ ಫಾರಂನಲ್ಲಿ ಆರೋಪಿಗಳು ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಜೊತೆಗೆ ಶರಣಾಗುವಂತೆ ಮನವಿ ಮಾಡಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಆರೋಪಿಗಳು ಬಂಧಿಸಲು ಮುಂದಾದ ಇನ್ಸ್ ಪೆಕ್ಟರ್ ವಿನಯ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಆಗ ರಕ್ಷಣೆಗಾಗಿ ವಿನಯ್ ಜೊತೆ ಇದ್ದ ಮತ್ತೊಬ್ಬ ಇನ್ಸ್ ಪೆಕ್ಟರ್ ಸಿದ್ದರಾಮೇಶ್ವರ್ ಅವರು ಫೈರಿಂಗ್ ಮಾಡಿದ್ದಾರೆ. ವಿನಯ್ ಅವರ ಎಡಗೈಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಲಾಕ್‍ಡೌನ್ ಸಮಯದಲ್ಲಿ ಊರಿಗೆ ಬಂದಿದ್ದ ಆರೋಪಿಗಳು ದುಡ್ಡಿಗಾಗಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. 80 ಎಕ್ರೆ ಜಮೀನು ಹೊಂದಿದ್ದ ಮುರುಳಿಧರ್ ಅವರಿಗೆ ಮಕ್ಕಳಿರಲಿಲ್ಲ. ಅವರು ಆ ಜಮೀನನ್ನು ಮಾರಿ ಮನೆಯಲ್ಲಿ ದುಡ್ಡು ಇಟ್ಟಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಆರೋಪಿಗಳು ದರೋಡೆಗೆ ಯತ್ನಿಸಿದ್ದಾರೆ. ಈ ವೇಳೆ ವೃದ್ಧ ದಂಪತಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

    ಈ ವಿಚಾರವಾಗಿ ಮಾತನಾಡಿದ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಎರಡು ದಿನಗಳ ಹಿಂದೆ ಜೋಡಿ ಕೊಲೆಯಾಗಿತ್ತು. ಮಾಹಿತಿ ಆಧರಿಸಿ ಆರೋಪಿಗಳ ಪತ್ತೆಗೆ ನಮ್ಮ ಪೊಲೀಸರು ತೆರಳಿದ್ದರು. ಸ್ಥಳಕ್ಕೆ ತೆರಳಿದ ವೇಳೆ ಆರೋಪಿ ಶರಣಾಗುವಂತೆ ಪೊಲೀಸರು ಹೇಳಿದ್ದಾರೆ. ಆದರೆ ಆರೋಪಿ ಶರಣಾಗದೇ ಪೊಲೀಸರ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ನಮ್ಮ ಪೊಲೀಸರು ಫೈರಿಂಗ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

    ಆರೋಪಿ ಮತ್ತು ಸಿಪಿಐ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರ ಆರೋಗ್ಯದಲ್ಲೂ ಚೇತರಿಕೆ ಕಂಡು ಬಂದಿದೆ. ಸರಣಿ ಕೊಲೆಯಾಗುತ್ತಿರುವ ಚನ್ನರಾಯಪಟ್ಟಣ ಸೇರಿ ಎಲ್ಲೆಡೆ ಗಂಭೀರ ಕ್ರಮ ಕೈಗೊಂಡು ನಿಗಾ ವಹಿಸಿದ್ದೇವೆ. ಒಟ್ಟು ಈಗ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದೇವೆ. ಇನ್ನೂ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.

  • ಮಾದಕ ವಸ್ತುಗಳನ್ನು ಮಾರಾಟ ಮಾಡ್ತಿದ್ದ ಮೂವರ ಬಂಧನ

    ಮಾದಕ ವಸ್ತುಗಳನ್ನು ಮಾರಾಟ ಮಾಡ್ತಿದ್ದ ಮೂವರ ಬಂಧನ

    – 4.40 ಲಕ್ಷ ನಗದು, 11 ಕೆಜಿ ಗಾಂಜಾ ವಶ

    ಬೆಂಗಳೂರು: ಮಾದಕವಸ್ತುಗಳ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಮಹಮ್ಮದ್ ಅಲಗೀರ್, ಮಹಮ್ಮದ್ ರಿಪೂನ್ ಹಾಗೂ ಮೊಹರ್ ಅಲಿ ಬಂಧಿತ ಆರೋಪಿಗಳು. ಇವರು ಪಶ್ಚಮ ಬಂಗಾಳ ಮೂಲದವರು ಎನ್ನಲಾಗಿದೆ. ಬಂಧಿತರಿಂದ 4.40 ಲಕ್ಷ ನಗದು, 11 ಕೆಜಿ ಗಾಂಜಾ ಸೇರಿ ಮಾದಕವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

    ಆರೋಪಿಗಳು ಮಾದಕ ವಸ್ತುಗಳನ್ನು ಪಶ್ಚಿಮ ಬಂಗಾಳದಿಂದ ರೈಲಿನಲ್ಲಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಗರದ ವಿವಿಧ ಭಾಗಗಳಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

  • ಮಂಗಳೂರಲ್ಲಿ 132 ಕೆ.ಜಿ. ಗಾಂಜಾ ವಶ- ಇಬ್ಬರ ಬಂಧನ

    ಮಂಗಳೂರಲ್ಲಿ 132 ಕೆ.ಜಿ. ಗಾಂಜಾ ವಶ- ಇಬ್ಬರ ಬಂಧನ

    – ಬೆಂಗಳೂರು ಬಳಿಕ ಮಂಗಳೂರಿನಲ್ಲಿ ಗಾಂಜಾ ಸೀಜ್

    ಮಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಾರೀ ಪ್ರಮಾಣದ ಗಾಂಜಾ ಪತ್ತೆಯಾಗಿ ಹಾಗೂ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಜೋರಾಗಿ ನಡೆಯುತ್ತಿದೆ ಎಂಬ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಇದೀಗ ನಗರದಲ್ಲಿ 132 ಕೆ.ಜಿ.ಗಾಂಜಾ ಪತ್ತೆಯಾಗುವ ಮೂಲಕ ಭಯ ಗುಟ್ಟಿಸಿದೆ. ಇದನ್ನೂ ಓದಿ: ಬೆಂಗ್ಳೂರಿನಲ್ಲಿ 2 ಕ್ವಿಂಟಾಲ್ ಗಾಂಜಾ ವಶ – ಮೈಸೂರಿನ ಜೆಡಿಎಸ್ ಮುಖಂಡ ಅರೆಸ್ಟ್

    ಮಂಗಳೂರಿನಲ್ಲಿ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆಯಾಗಿದ್ದು, ಆರೋಪಿಗಳಾದ ಕಾಸರಗೋಡು ನಿವಾಸಿಗಳಾದ ಕಲಂದರ್ ಮಹಮ್ಮದ್(35) ಮತ್ತು ಮೊಯಿದ್ದೀನ್ ಅನ್ಸಾರ್(27) ಬಂಧಿಸಲಾಗಿದೆ. ಬಂಧಿತರಿಂದ ಬರೋಬ್ಬರಿ 132 ಕೆ.ಜಿ. ಗಾಂಜಾ, ಮಹೇಂದ್ರ ಬೊಲೆರೋ, ಸ್ವಿಫ್ಟ್ ಕಾರು ವಶಕ್ಕೆ ಪಡೆಯಲಾಗಿದೆ.

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿದ್ದು, ಮಹೀಂದ್ರ ಪಿಕಪ್ ವಾಹನದಲ್ಲಿ ಇಬ್ಬರು ಆರೋಪಿಗಳು ಗಾಂಜಾ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದೆ.