Tag: accused

  • ಕೋಳ ಸಮೇತ ಕೇರಳ ಆರೋಪಿಯ ಮೃತದೇಹ ಉಡುಪಿಯಲ್ಲಿ ಪತ್ತೆ

    ಕೋಳ ಸಮೇತ ಕೇರಳ ಆರೋಪಿಯ ಮೃತದೇಹ ಉಡುಪಿಯಲ್ಲಿ ಪತ್ತೆ

    ಉಡುಪಿ: ಕೇರಳ ರಾಜ್ಯದ ಕಾಸರಗೋಡಿನ ಪೋಕ್ಸೋ ಕಾಯ್ದೆಯಡಿಯ ಬಂದಿತ ಆರೋಪಿಯ ಮೃತದೇಹ ಉಡುಪಿಯಲ್ಲಿ ಪತ್ತೆಯಾಗಿದೆ.

    ಕೇರಳ ರಾಜ್ಯದ ಕೂಡ್ಲು ಕಾಳ್ಯಾಂಗಾಡ್‍ನ ಮಹೇಶ್ (28) ಪೋಕ್ಸೋ ಕೇಸಿನ ಆರೋಪಿ. ಶೌಚಾಲಯದಲ್ಲಿ ಅಪ್ರಾಪ್ತ ಬಾಲಕಿಯ ವಿಡಿಯೋ ಮಾಡಿದ್ದ ಮಹೇಶ್ ನನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ಮಹಜರಿನ ವೇಳೆ ಆತ ಕೇರಳದಲ್ಲಿ ಸಮುದ್ರಕ್ಕೆ ಹಾರಿದ್ದ. ಜುಲೈ 22ರಂದು ಈ ಘಟನೆ ನಡೆದಿದ್ದು, ಇಂದು ಮೃತದೇಹ ಪತ್ತೆಯಾಗಿದೆ.

    ಕೇರಳದಿಂದ ತೆಲಿಕೊಂಡು ಬಂದು ಉಡುಪಿಯ ಕೋಟ ಮಣೂರು ಪಡುಕರೆಯ ಸಮುದ್ರ ತೀರದಲ್ಲಿ ಶವ ಪತ್ತೆಯಾಗಿದ್ದು, ಶವದ ಬಟ್ಟೆ, ಕೈಕೋಳ ಗಮನಿಸಿ ಪೊಲೀಸರು ವ್ಯಕ್ತಿಯ ಚಹರೆ ಪತ್ತೆ ಮಾಡಿದ್ದಾರೆ. ಈ ಸಂಬಂಧ ಕೋಟ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

  • ಚೆಕ್‍ನಲ್ಲಿ ಸಂಖ್ಯೆ ತಿದ್ದಿ ಉದ್ಯಮಿಗೆ 6.30 ಕೋಟಿ ವಂಚನೆ

    ಚೆಕ್‍ನಲ್ಲಿ ಸಂಖ್ಯೆ ತಿದ್ದಿ ಉದ್ಯಮಿಗೆ 6.30 ಕೋಟಿ ವಂಚನೆ

    – ಆಡಿಟ್ ವೇಳೆ ಕೃತ್ಯ ಬಯಲು

    ಬೆಂಗಳೂರು: ಚೆಕ್‍ನಲ್ಲಿನ ಅಂಕಿಗಳನ್ನು ತಿದ್ದಿ ಸಹೋದ್ಯೋಗಿಗಳೇ ಉದ್ಯಮಿಗೆ ಬರೋಬ್ಬರಿ 6.30 ಕೋಟಿ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.

    ರಾಜಶೇಖರ ರೆಡ್ಡಿ ವಂಚನೆಗೊಳಗಾದ ಉದ್ಯಮಿಯಾಗಿದ್ದು, ಭಾಸ್ಕರ್ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ವಂಚಿಸಿದ ಆರೋಪಿಗಳು. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳು ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಗೆ ಬೃಹತ್ ವಂಚನೆ ಮಾಡಿದ್ದಾರೆ.

    ಆರೋಪಿಗಳು ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದರು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷ ರೂ.ಗಳ 7 ಚೆಕ್‍ಗಳನ್ನು ಆರೋಪಿಗಳು 80 ಲಕ್ಷ ರೂ.ಗಳಿಗೆ ಮಾರ್ಪಾಡು ಮಾಡಿದ್ದಾರೆ. 7 ಲಕ್ಷದ ಒಂದು ಚೆಕ್‍ನ್ನು 70 ಲಕ್ಷ ರೂ.ಗೆ ಬದಲಿಸಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಒಂದು ವರ್ಷದ ಹಿಂದಿನ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯುತ್ತಿದ್ದಂತೆ 1,00,60,000 ರೂ.ಗಳನ್ನು ಆರೋಪಿಗಳು ಮರಳಿ ನೀಡಿದ್ದಾರೆ. ಉಳಿದ ಹಣ ವಾಪಾಸ್ ನೀಡದೆ ಸತಾಯಿಸುತ್ತಿದ್ದಾರೆ.

    ಉಳಿದ ಹಣವನ್ನು ನೀಡದೆ ಕಾಡಿಸುತ್ತಿದ್ದ ಹಿನ್ನೆಲೆ ರಾಜಶೇಖರ್ ರೆಡ್ಡಿ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.

  • ನೀವು ಝೂನಲ್ಲಿ ಇರಲು ಫಿಟ್ ಸಮಾಜದಲ್ಲಿ ಇರಲು ಅನ್‍ಫಿಟ್: ನಳಿನ್ ವ್ಯಂಗ್ಯ

    ನೀವು ಝೂನಲ್ಲಿ ಇರಲು ಫಿಟ್ ಸಮಾಜದಲ್ಲಿ ಇರಲು ಅನ್‍ಫಿಟ್: ನಳಿನ್ ವ್ಯಂಗ್ಯ

    ಹಾಸನ: ಹುಲಿಯಾ ಮತ್ತು ಬಂಡೆ ಝೂನಲ್ಲಿ ಇರಲು ಫಿಟ್ ಸಮಾಜದಲ್ಲಿ ಇರಲು ಅನ್‍ಫಿಟ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

    ಹಾಸನದ ಚನ್ನರಾಯಪಟ್ಟಣದಲ್ಲಿ ಕಾಂಗ್ರೆಸ್‍ನ ಆರೋಪಕ್ಕೆ ತಿರುಗೇಟು ನೀಡಿದ ಅವರು, ಆಡಳಿತದಲ್ಲಿ ತಪ್ಪಿದ್ರೆ ವಿಧಾನಸೌಧದಲ್ಲಿ ಬಂದು ಗಲಾಟೆ ಮಾಡಿ. ನಿಮಗೆ ಹಕ್ಕಿದೆ. ಬಹಳ ಪುರಾತನ ಇತಿಹಾಸ ಇರುವ ರಾಜಕೀಯ ಪಕ್ಷವಾಗಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಜನರಿಗೆ ಭಯ ಮೂಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ರಾಜ್ಯ, ರಾಷ್ಟ್ರವನ್ನು ಸುದೀರ್ಘವಾಗಿ ಆಡಳಿತ ಮಾಡಿ ವೆಂಟಿಲೇಟರ್ ಇಲ್ಲ ಸೌಲಭ್ಯ ಇಲ್ಲ ಅಂತಾರೆ. ಇಂದಿನ ಈ ಸ್ಥಿತಿಗೆ ನೀವೆ ಕಾರಣ. ನಿಮ್ಮ ಕಾಲದಲ್ಲಿ ಎಷ್ಟು ವೆಂಟಿಲೇಟರ್ ಬಂದವು ಎಲ್ಲಿ ಹೋದವು. ನಿಮ್ಮ ಆಡಳಿತದ ಕಾಲದಲ್ಲಿ ಡೆಂಗ್ಯೂ, ಹಾವು ಕಡಿತ, ಹುಚ್ಚು ನಾಯಿ ಕಡಿತಕ್ಕೆ ಔಷಧಿಯೇ ಬಂದಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇಂದಿರಾ ಕ್ಯಾಂಟೀನ್‍ನಲ್ಲಿ ಏನೆಲ್ಲಾ ಮೋಸ ಆಗಿದೆ ಲೆಕ್ಕ ಕೊಡಿ. ನಿಮ್ಮ ಕಾಲದಲ್ಲಿ ವಸತಿ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದರು.

    ಪ್ರಜಾಪ್ರಭುತ್ವದ ಕಗ್ಗೊಲೆ ಅಂತೀರಿ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದವರು ಇಂದಿರಾ ಗಾಂಧಿ. ಎಮರ್ಜೆನ್ಸಿ ತಂದವರು, ದೇಶವನ್ನು ಪೂರ್ತಿಯಾಗಿ ಜೈಲಲ್ಲಿ ಇಟ್ಟವರು ನೀವು ತಾನೆ. 20ಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಬಹುಮತ ಪಡೆದ ಪಕ್ಷವನ್ನು ಕಿತ್ತು ಒಗೆದಿದ್ರಿ. ಜನತಾದಳದ ಶಾಸಕರನ್ನು ನೀವೇ ಅಲ್ಲವೆ ತೆಗೆದಿಕೊಂಡಿದ್ದು. ನೀವು ಅಧಿಕಾರ ಹೇಗೆ ಬೇಕಾದರೂ ನಡೆಸಬಹುದು. ನಿಮ್ಮ ಆಡಳಿತ ಸರಿಯಿಲ್ಲ ಎಂದು ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದರೆ ನಮ್ಮ ಆಡಳಿತ ಸರಿಯಿಲ್ಲ ಎನ್ನುತ್ತೀರಾ ಎಂದು ಸಿದ್ದರಾಮಯ್ಯ ಮತ್ತು ಡಿಕೆಶಿ ಆರೋಪಕ್ಕೆ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.

  • ಲಾಂಗ್, ಮಚ್ಚುಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಕೊಲೆ

    ಲಾಂಗ್, ಮಚ್ಚುಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಕೊಲೆ

    – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

    ಚಿಕ್ಕಬಳ್ಳಾಪುರ: ಲಾಂಗು-ಮಚ್ಚುಗಳಿಂದ ಕೊಚ್ಚಿ ರೌಡಿಶೀಟರ್‍ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಾದಲವೇಣಿ ಗ್ರಾಮದಲ್ಲಿ ನಡೆದಿದೆ.

    ಹಳೆ ಉಪ್ಪಾರಹಳ್ಳಿ ಗ್ರಾಮದ 28 ವರ್ಷದ ರಮೇಶ್ ಕೊಲೆಯಾದ ರೌಡಿ ಶೀಟರ್. ಪ್ರಕರಣ ಬೆನ್ನತ್ತಿದ್ದ ಪೊಲೀಸರು, 4 ಆರೋಪಿಗಳನ್ನು ಬಂಧಿಸಿದ್ದಾರೆ. ಹೊಸೂರು ಗ್ರಾಮದ ಅರ್ಜುನ್, ಕಾಚಮಾಚೇನಹಳ್ಳಿಯ ವೆಂಕಟರೆಡ್ಡಿ, ಮುದೆಗೆರೆಯ ವೆಂಕಟೇಶ್ ಹಾಗೂ ಅಂಬರೀಶ್ ಬಂಧಿತರು.

    ಕೋಟಾಲದಿನ್ನೆ ಬಳಿಯಿಂದ ಬೈಕ್ ನಲ್ಲಿ ತೆರಳುತ್ತಿದ್ದ ರಮೇಶ್‍ನನ್ನು ಹಿಂಬಾಲಿಸಿದ ಮೂವರು ಆತನ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ರಮೇಶ್ ಬೈಕ್ ಬಿಟ್ಟು ಕಾದಲವೇಣಿ ಗ್ರಾಮದ ಮನೆಗೆ ನುಗ್ಗಿದ್ದಾನೆ. ಆದರೂ ಬಿಡದ ಕೊಲೆಪಾತಕರು, ಮನೆಯಲ್ಲೇ ಲಾಂಗ್ ಮಚ್ಚುಗಳಿಂದ ತಲೆ, ಎದೆ ಭಾಗದಲ್ಲಿ ಕೊಚ್ಚಿ ಕೊಲೆ ಮಾಡಿದ್ದಾರೆ. ಇದರಿಂದ ಮನೆಯಲ್ಲಿದ್ದವರು ಹಾಗೂ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ನಡುವೆ ಆರೋಪಿ ಅಂಬರೀಶ್ ಬಂಧಿಸಿ ಕೃತ್ಯಕ್ಕೆ ಬಳಿಸಿದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ಪೊಲೀಸ್ ಕಾನ್‍ಸ್ಟೇಬಲ್ ಮಧೂ ಅವರ ಮೇಲೆ ಕಲ್ಲು ಎತ್ತಿ ಹಾಕಲು ಯತ್ನಿಸಿದ್ದ. ಈ ವೇಳೆ ಆರೋಪಿ ಅಂಬರೀಶ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ.

    ಸದ್ಯ ಐದು ಮಂದಿಯ ವಿಚಾರಣೆ ನಡೆಸುತ್ತಿರುವ ಪೊಲೀಸರು, ಕೊಲೆಗೆ ನಿಖರ ಕಾರಣ ಏನೆಂಬುದುರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೇಲ್ನೋಟಕ್ಕೆ ಹಳೆ ದ್ವೇಷವೇ ಕೊಲೆಗೆ ಕಾರಣ ಇರಬಹುದು ಎಂದು ಅಂದಾಜಿಸಲಾಗಿದ್ದು, ಕಳೆದ ವಿಧಾನಸಭೆ ಚುನಾವಣೆ ವೇಳೆ ಕೋಟಾಲದಿನ್ನೆ ಬಾರ್ ಬಳಿ ಕ್ಷುಲ್ಲಕ ಕಾರಣಕ್ಕೆ ರಾಮರೆಡ್ಡಿ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ರಮೇಶ್ ಸಹ ಆರೋಪಿಯಾಗಿದ್ದ. ಹೀಗಾಗಿ ಅದೇ ಹಳೆ ದ್ವೇಷದ ಸೇಡು ಕೊಲೆಗೆ ಕಾರಣವಾಯಿತೇ ಎಂಬ ಅನುಮಾನ ಮೂಡಿದೆ.

  • ಪೊಲೀಸ್ ಠಾಣೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಮೊಬೈಲ್ ಕಳ್ಳ

    ಪೊಲೀಸ್ ಠಾಣೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಮೊಬೈಲ್ ಕಳ್ಳ

    – ಪೊಲೀಸ್ ಠಾಣೆಯಲ್ಲಿ ರಾದ್ಧಾಂತ, ಮನೆಗೆ ಕಳುಹಿಸಿದ ಪೊಲೀಸರು
    – ಮರಳಿ ಬಂದು ಠಾಣೆಯಲ್ಲೇ ಬೆಂಕಿ ಹಚ್ಚಿಕೊಂಡ

    ಹೈದರಾಬಾದ್: ಮೊಬೈಲ್ ಕದ್ದ ಆರೋಪಿ ಪೊಲೀಸ್ ಠಾಣೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊಂಡಿರುವ ಘಟನೆ ನಡೆದಿದೆ.

    ಹೈದರಾಬಾದ್‍ನ ಚಂದ್ರಯಂಗುತ್ತ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತಕ್ಷಣವೇ ಬೆಂಕಿ ನಂದಿಸಿದ್ದು, ಆರೋಪಿಯನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಶೇ.10ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    ನರೇಶ್ ಗೌಡ ಮೊಬೈಲ್ ಕಳೆದಿರುವ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಅದೇ ದಿನ ಸಂಜೆ ಸ್ಥಳೀಯರು ಮೊಬೈಲ್ ಕದ್ದ ಆರೋಪಿಗಳಲ್ಲಿ ಒಬ್ಬನಾದ ಮೊಹಮ್ಮದ್ ಶಬ್ಬಿರ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ನರೇಶ್ ಗೌಡರ ಮೊಬೈಲ್ ಕದ್ದ ಆರೋಪಿಗಳ ಪೈಕಿ ಈತನೂ ಹೌದು ಎಂದು ತಿಳಿಸಿದ್ದಾರೆ.

    ಈ ಕುರಿತು ಚಂದ್ರಯಂಗುತ್ತ ಪೊಲೀಸ್ ಇನ್ಸ್ ಪೆಕ್ಟರ್ ರುದ್ರ ಭಾಸ್ಕರ್ ಮಾಹಿತಿ ನೀಡಿದ್ದು, ದೈಹಿಕ ಪರೀಕ್ಷೆ ನಡೆಸಿದಾಗ ಆರೋಪಿ ಬಳಿ ಪೊಲೀಸರಿಗೆ ಸಂತ್ರಸ್ತನ ಮೊಬೈಲ್ ಸಿಕ್ಕಿಲ್ಲ. ನಂತರ ಆರೋಪಿ ಶಬ್ಬಿರ್ ಕೂಗಲು ಪ್ರಾರಂಭಿಸಿದ್ದಾನೆ. ಈ ಮೂಲಕ ಪೊಲೀಸ್ ಠಾಣೆಯಲ್ಲಿ ರಾದ್ಧಾಂತ ಮಾಡಿದ್ದಾನೆ. ಹೀಗೆ ಕೂಗಾಡುವುದನ್ನು ತಾಳಲಾರದೆ ಪೊಲೀಸರು ಆರೋಪಿಯನ್ನು ಮನೆಗೆ ಕಳುಹಿಸಿದ್ದರು. ಕೆಲವೇ ಸಮಯದ ಬಳಿಕ ಮರಳಿ ಪೊಲೀಸ್ ಠಾಣೆಗೆ ಆರೋಪಿ ಬಂದಿದ್ದಾನೆ. ಆಗ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ನಂತರ ಪೊಲೀಸರು ಬೆಂಕಿ ನಂದಿಸಿ ಒಸ್ಮಾನಿಯಾ ಜನರಲ್ ಆ ಸ್ಪತ್ರೆಗೆ ಸೇರಿಸಿದ್ದಾರೆ.

    ಈ ವೇಳೆ ಅಡಿಷನಲ್ ಇನ್ಸ್ ಪೆಕ್ಟರ್ ಕೆ.ಎನ್.ಪ್ರಸಾದ್ ವರ್ಮಾ ಹಾಗೂ ಕ್ರೈಂ ಪೊಲೀಸ್ ಕಾನ್‍ಸ್ಟೇಬಲ್‍ಗೂ ಸುಟ್ಟ ಗಾಯಗಳಾಗಿವೆ. ಶಬ್ಬಿರ್ ವಿರುದ್ಧ ಅವರು ದೂರು ನೀಡಿದ್ದರು. ವಿವಿಧ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಒಟ್ಟು 8 ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.

  • 2 ಗಂಟೆಯಲ್ಲಿ 12ಕಿಮೀ ಓಡಿ ಕೊಲೆ ಆರೋಪಿಯನ್ನು ಹಿಡಿದ ಪೊಲೀಸ್ ಶ್ವಾನ

    2 ಗಂಟೆಯಲ್ಲಿ 12ಕಿಮೀ ಓಡಿ ಕೊಲೆ ಆರೋಪಿಯನ್ನು ಹಿಡಿದ ಪೊಲೀಸ್ ಶ್ವಾನ

    – ಧೈರ್ಯಶಾಲಿ ತುಂಗಾಗೆ ಪೊಲೀಸರಿಂದ ಸನ್ಮಾನ
    – ಓಡಿಕೊಂಡು ಹೋಗಿ ಕೊಲೆ ಆರೋಪಿ ಮನೆ ಮುಂದೆ ನಿಂತ ನಾಯಿ

    ದಾವಣಗೆರೆ: ಎರಡು ಗಂಟೆ ಸತತವಾಗಿ 12 ಕಿಲೋಮೀಟರ್ ಓಡಿ ದಾವಣಗೆರೆಯ ಪೊಲೀಸ್ ಶ್ವಾನವೊಂದು ಕೊಲೆ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

    ಪೊಲೀಸ್ ಟ್ರೈನಿಂಗ್ ಪಡೆದ ಡಾಬರ್ ಮ್ಯಾನ್ ಜಾತಿಯ 9 ವರ್ಷದ ತುಂಗಾ ಹೆಸರಿನ ಶ್ವಾನ ಕೊಲೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದೆ. ಕೊಲೆ ನಡೆದ ಸ್ಥಳದಲ್ಲಿ ಕೆಲ ಕಾಲ ಸುತ್ತಿದ ತುಂಗಾ ನಂತರ ಓಡಲು ಶುರು ಮಾಡಿದೆ. ಸತತ ಎರಡು ಗಂಟೆ ಓಡಿ ನೇರವಾಗಿ ಆರೋಪಿಯ ಮನೆಯ ಮುಂದೆ ನಿಂತು ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದೆ.

    ಕಳೆದ ಕೆಲ ದಿನಗಳ ಹಿಂದೆ ಆರೋಪಿ ಚೇತನ್, ಚಂದ್ರ ನಾಯಕ್ ಮತ್ತು ಅವರ ಸ್ನೇಹಿತರು ಸೇರಿಕೊಂಡು ಧಾರವಾರ ಜಿಲ್ಲೆಯ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದು, ಆ ಮನೆಯಲ್ಲಿ ಪಿಸ್ತೂಲ್ ಮತ್ತು ಚಿನ್ನಾಭರಣ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದಾರೆ. ಈ ವೇಳೆ ಇದ್ದನ್ನು ಹಂಚಿಕೊಳ್ಳುವ ವಿಚಾರದಲ್ಲಿ ಚಂದ್ರ ಮತ್ತು ಚೇತನ್ ನಡುವೆ ಜಗಳವಾಗಿದೆ. ಆಗ ಚಂದ್ರನನ್ನು ಚಾನೆಲ್‍ವೊಂದರ ಬಳಿಗೆ ಕರೆಯಿಸಿಕೊಂಡ ಚೇತನ್ ಕದ್ದ ಪಿಸ್ತೂಲ್‍ನಿಂದ ಚಂದ್ರನನ್ನು ಶೂಟ್ ಮಾಡಿ ಕೊಲೆ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.

    ಈ ಕೊಲೆಯಾದ ಸ್ಥಳಕ್ಕೆ ತುಂಗಾಳನ್ನು ನೋಡಿಕೊಳ್ಳುತ್ತಿದ್ದ ಮುಖ್ಯ ಪೇದೆ ಶ್ವಾನವನ್ನು ಬೆಳಗ್ಗೆ 9.30ಕ್ಕೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಘಟನೆಯ ಸ್ಥಳದಲ್ಲಿ ವಾಸನೆಯನ್ನು ತೆಗೆದುಕೊಂಡ ತುಂಗಾ ತಕ್ಷಣ ಅಲ್ಲಿಂದ ಓಡಲು ಶುರು ಮಾಡಿದ್ದಾಳೆ. ನಮಗೆ ಸುಳಿವೇ ಸಿಗಲಿಲ್ಲ. ಆದರೆ ತುಂಗಾ ಘಟನಾ ಸ್ಥಳದಿಂದ 12 ಕಿಮೀ ಓಡಿದ್ದಾಳೆ. ಮೊದಲು ಕಾಶಿಪುರ ತಂಡಾಗೆ ಬಂದಳು. ನಂತರ ಅಲ್ಲಿಂದ ಒಂದು ವೈನ್‍ಶಾಪ್‍ಗೆ ಹೋದಳು. ಅಲ್ಲಿಂದ ಒಂದು ಮನೆಯ ಬಳಿ ನಿಂತುಕೊಂಡಳು. ಅಲ್ಲಿ ಆರೋಪಿ ಚೇತನ್ ಫೋನಿನಲ್ಲಿ ಮಾತನಾಡುತ್ತಿದ್ದ. ಆತನನ್ನು ನಾವು ವಶಕ್ಕೆ ಪಡೆದಿದ್ದೇವೆ ಎಂದು ಚೆನ್ನಗಿರಿ ವಿಭಾಗ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಮುನ್ನೊಲ್ಲಿ ಹೇಳಿದ್ದಾರೆ.

    ಸದ್ಯ ಆರೋಪಿ ಚೇತನ್‍ನನ್ನು ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ಮಾಡಿದ್ದು, ನಾನೇ ಕೊಲೆ ಮಾಡಿದ್ದು ಎಂದು ಆತ ಒಪ್ಪಿಕೊಂಡಿದ್ದಾನೆ. ಜೊತೆಗೆ ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಹಿಡಿದು ಕೊಟ್ಟ ತುಂಗಾಗೆ ದಾವಣಗೆರೆ ಪೊಲೀಸರು ಸನ್ಮಾನ ಮಾಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ದಾವಣಗೆರೆ ಎಸ್‍ಪಿ, ಇಂದು ಶ್ರೀ ಅಮರ್ ಕುಮಾರ್ ಪಾಂಡೆ ಐಪಿಎಸ್, ಮಾನ್ಯ ಎಡಿಜಿಪಿಯವರು ದಾವಣಗೆರೆ ಜಿಲ್ಲಾ ಪೊಲೀಸ್ ಕಛೇರಿಗೆ ಭೇಟಿ ನೀಡಿದ್ದು, ಇತ್ತೀಚಿಗೆ ಸೂಳೇಕೆರೆ ಬಳಿ ನಡೆದ ಕೊಲೆ ಪತ್ತೆ ಪ್ರಕರಣದಲ್ಲಿ ಮಹತ್ತರ ಪಾತ್ರವಹಿಸಿದ್ದ ಶ್ವಾನದಳದ ಕ್ರೈಮ್ ವಿಭಾಗದ ಶ್ವಾನ ‘ತುಂಗಾ’ಗೆ ಹೂವಿನ ಹಾರ ಹಾಕುವ ಮೂಲಕ ಗೌರವಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    ತುಂಗಾನ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿರುವ ಅದರ ಟ್ರೈನರ್, ಈಕೆ ನಿಜವಾಗಿಯೂ ಬೆಸ್ಟ್ ಡಾಗ್. ಆಕೆ ಇನ್ನೂ ಪೊಲೀಸ್ ವಿಭಾಗಕ್ಕಾಗಿ 15 ವರ್ಷ ಕೆಲಸ ಮಾಡುವ ಶಕ್ತಿಯನ್ನು ಹೊಂದಿದ್ದಾಳೆ. ನಾನು ಹಲವಾರು ಶ್ವಾನಗಳಿಗೆ ಟ್ರೈನಿಂಗ್ ಮಾಡಿದ್ದೇನೆ. ಯಾವುದೇ ಶ್ವಾನವಾಗಲಿ ಕ್ರೈಮ್ ನಡೆದ ಸ್ಥಳದಿಂದ ವಾಸನೆ ಹಿಡಿದು ಕೇವಲ 3-4 ಕಿಲೋಮೀಟರ್ ಹೋಗುತ್ತವೆ. ಆದರೆ ತುಂಗಾ ಮಾತ್ರ 12 ಕಿಮೀವರೆಗೆ ಹೋಗಿ ಆರೋಪಿಯನ್ನು ಹಿಡಿದುಕೊಟ್ಟಿದ್ದಾಳೆ ಎಂದಿದ್ದಾರೆ.

  • 12 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಸಾಗಾಟ – ನಾಲ್ವರ ಬಂಧನ

    12 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಸಾಗಾಟ – ನಾಲ್ವರ ಬಂಧನ

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ಬಳಿಯ ಮೇಲುಪೇಟೆ ಮಸೀದಿ ಬಳಿ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತರಿಂದ 50 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಸೀಜ್ ಮಾಡಿರುವಂತ ಗಾಂಜಾ ಬೆಲೆ ಅಂದಾಜು 12 ಲಕ್ಷಕ್ಕೂ ಅಧಿಕವಾಗಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮೋಹಿದ್ ಖಾನ್, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅಕ್ಬರ್ ಪಾಷಾ, ಶಾಹಿದ್ ಖಾನ್ ಹಾಗೂ ಪ್ರಭ ಬಂಧಿತ ಆರೋಪಿಗಳು.

    ಬಂಧಿತ ಆರೋಪಿಗಳಿಂದ 50 ಕೆಜಿ ಗಾಂಜಾ, ಕಾರು ಮತ್ತು ಬೈಕನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಮಾಯಾಜಾಲದಲ್ಲಿ 10ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ತು ಮಂದಿಯ ತಂಡ ಆಂಧ್ರಪ್ರದೇಶದ ವಿಶಾಖಪಟ್ಟಣದ ಪಾಲೇರು ಬಳಿಯ ಶೇಖರ್ ಎಂಬವರಿಂದ 80 ಕೆಜಿ ಗಾಂಜಾ ಸೊಪ್ಪನ್ನು ತಂದಿದ್ದಾರೆ. 80 ಕೆಜಿ ಗಾಂಜಾ ಸೊಪ್ಪಿನಲ್ಲಿ 30ಕೆಜಿ ಸೊಪ್ಪನ್ನು ಹಾಸನ ಹಾಗೂ ಸಕಲೇಶಪುರದಲ್ಲಿ ಮಾರಾಟ ಮಾಡಿದ್ದಾರೆ. ಉಳಿದ 50 ಕೆಜಿ ಗಾಂಜಾವನ್ನು ಮಂಗಳೂರಿನಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಕೊಂಡೊಯ್ಯುವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

    ಮಾರುತಿ 800 ಕಾರಿನಲ್ಲಿ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಜಿಲ್ಲೆಯ ಸಿಇಎನ್ ಠಾಣೆ ಇನ್ಸ್‍ಪೆಕ್ಟರ್ ರಕ್ಷಿತ್, ಪಿಎಸ್‍ಐ ರಮ್ಯಾ ಹಾಗೂ ಗೋಣಿಬೀಡು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಇತ್ತೀಚಿನ ವರ್ಷಗಳಲ್ಲಿ ಗಾಂಜಾ ಸಾಗಿಸುತ್ತಿದ್ದ ತಂಡವನ್ನು ರೈಡ್ ಮಾಡಿದ ದೊಡ್ಡ ಪ್ರಕರಣ ಇದಾಗಿದೆ. ಪೊಲೀಸರ ಈ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೂಡ ಅಧಿಕಾರಿಗಳನ್ನು ಶ್ಲಾಘಿಸಿದ್ದಾರೆ.

  • ಮೈಸೂರಿನಲ್ಲಿ ಬಂಧಿಸಿದ್ದ ಅತ್ಯಾಚಾರ ಆರೋಪಿಗೆ ಕೊರೊನಾ- 60 ಪೊಲೀಸರಿಗೆ ಕ್ವಾರಂಟೈನ್

    ಮೈಸೂರಿನಲ್ಲಿ ಬಂಧಿಸಿದ್ದ ಅತ್ಯಾಚಾರ ಆರೋಪಿಗೆ ಕೊರೊನಾ- 60 ಪೊಲೀಸರಿಗೆ ಕ್ವಾರಂಟೈನ್

    ರಾಯ್‍ಪುರ: ಕರ್ನಾಟಕದ ಮೈಸೂರಿನಲ್ಲಿದ್ದ ಅತ್ಯಾಚಾರ ಆರೋಪಿಯನ್ನು ಬಂಧಿಸಿ ಕರೆತಂದ ಹಿನ್ನೆಲೆಯಲ್ಲಿ 60 ಮಂದಿ ಪೊಲೀಸರನ್ನು ಕ್ವಾರಂಟೈನ್ ಮಾಡಿರುವ ಘಟನೆ ಛತ್ತೀಸ್‍ಗಢದ ಬಿಲಾಸ್‍ಪುರಲ್ಲಿ ಬೆಳಕಿದೆ ಬಂದಿದೆ.

    ಬಿಲಾಸ್‍ಪುರದ ಸಿವಿಲ್ ಲೈನ್ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಿ, ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಠಾಣೆಯ ಎಲ್ಲಾ ಪೊಲೀಸರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಬಿಸಾಲ್‍ಪುರ ಎಸ್‍ಪಿ ಪ್ರಶಾಂತ್ ಅರ್ಗವಾಲ್ ಮಾಹಿತಿ ನೀಡಿದ್ದಾರೆ.

    28 ವರ್ಷದ ಅತ್ಯಾಚಾರ ಆರೋಪಿಯನ್ನು ಮೈಸೂರಿನಲ್ಲಿ ಸಿವಿಲ್ ಪೊಲೀಸ್ ಠಾಣೆಯ ನಾಲ್ವರ ಪೊಲೀಸರ ತಂಡ ಬಂಧಿಸಿ ಬಿಲಾಸ್‍ಪುರಕ್ಕೆ ಕರೆತಂದಿತ್ತು. ಕಳೆದ ತಿಂಗಳು ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧಿತ ಆರೋಪಿ ಭಾಭಾ ಪರಮಾಣು ಸಂಶೋಧನಾ ಕೇಂದ್ರ ಮೈಸೂರಿನ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭಿಸಿತ್ತು ಎಂದು ಎಸ್‍ಪಿ ತಿಳಿಸಿದ್ದಾರೆ.

    ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಹಿನ್ನೆಲೆಯಲ್ಲಿ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಆತನಿಗೆ ಟೆಸ್ಟ್ ನಡೆಸಿದ ವೇಳೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಕೂಡಲೇ ಎಚ್ಚೆತ್ತು ಎಲ್ಲಾ ಪೊಲೀಸರ ಗಂಟಲು ಮಾದರಿಯನ್ನು ಪರೀಕ್ಷೆ ನಡೆಸಲು ಸೂಚಿಸಲಾಗಿತ್ತು. ಅಲ್ಲದೇ ಆರೋಪಿಯ ಪ್ರಾಥಮಿಕ ಸಂಪರ್ಕಿತರ ಪತ್ತೆ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಎಸ್‍ಪಿ ವಿವರಿಸಿದ್ದಾರೆ.

  • ಸಾಯುವ ವೇಳೆಯೂ ಕೊಲೆಗಾರರ ಸುಳಿವು ನೀಡಿದ ಪೊಲೀಸ್ ಪೇದೆ

    ಸಾಯುವ ವೇಳೆಯೂ ಕೊಲೆಗಾರರ ಸುಳಿವು ನೀಡಿದ ಪೊಲೀಸ್ ಪೇದೆ

    – ಪೇದೆ ಅಂಗೈಯಲ್ಲಿತ್ತು ಹಂತಕರ ಹಣೆಬರಹ

    ಹರ್ಯಾಣ: ಕಳೆದ ಮಂಗಳವಾರ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೊಂದು ಹಾಕಿದ್ದ ಆರು ಜನ ಆರೋಪಿಗಳನ್ನು ಹರ್ಯಾಣ ಪೊಲೀಸರು ಬಂಧಿಸಿದ್ದಾರೆ.

    ಹರ್ಯಾಣದ ಜಿಂದ್ ಜಿಲ್ಲೆಯಲ್ಲಿ ಕಳೆದ ಮಂಗಳವಾರ ಪೊಲೀಸ್ ಅಧಿಕಾರಿಗಳಾದ ರವೀಂದರ್ ಸಿಂಗ್ ಮತ್ತು ಕಪ್ತಾನ್ ಸಿಂಗ್ ಅವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿತ್ತು. ಈ ಆರೋಪಿಗಳನ್ನು ಪೊಲೀಸ್ ಪೇದೆ ರವೀಂದರ್ ಅವರು ಸಾವಿಗೂ ಮುನ್ನ ನೀಡಿದ ಸುಳಿವಿನಿಂದ ಸೋಮವಾರ ಪೊಲೀಸರು ಬಂಧಿಸಿದ್ದಾರೆ.

    ಕೊರೊನಾ ವೈರಸ್ ಭೀತಿಯ ನಡುವೆಯೂ ಬುಟಾನಾ ಪೊಲೀಸ್ ಠಾಣೆ ಬಳಿಯ ಸೋನಿಪತ್-ಜಿಂದ್ ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡು ಕೆಲ ಪುಂಡರು ಎಣ್ಣೆ ಪಾರ್ಟಿ ಮಾಡುತ್ತಿದ್ದರು. ಇದನ್ನು ಕೇಳಲು ರವೀಂದರ್ ಸಿಂಗ್ ಮತ್ತು ಕಪ್ತಾನ್ ಸಿಂಗ್ ಹೋಗಿದ್ದಾರೆ. ಆಗ ಕುಡಿತದ ಅಮಲಿನಲ್ಲಿದ್ದ ಪುಂಡರು ಅರಿತವಾದ ಅಯುಧಗಳಿಂದ ಪೊಲೀಸರ ಮೇಲೆ ಹಲ್ಲೆ ಮಾಡಿ ಅವರನ್ನು ಕೊಂದು ಹಾಕಿದ್ದರು.

    ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಪೇದೆ ರವೀಂದರ್ ಸಿಂಗ್, ಸಾಯುವ ಮುನ್ನ ಆರೋಪಿಗಳ ಕಾರಿನ ನಂಬರ್ ಅನ್ನು ತನ್ನ ಅಂಗೈ ಮೇಲೆ ಬರೆದುಕೊಂಡಿದ್ದರು. ಈ ಸಂಖ್ಯೆ ರವೀಂದ್ರ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡುವಾಗ ವೈದ್ಯರಿಗೆ ಸಿಕ್ಕಿದೆ. ನಂತರ ಈ ಸಂಖ್ಯೆಯನ್ನು ಆಧಾರವಾಗಿ ಇಟ್ಟುಕೊಂಡು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಹರ್ಯಾಣದ ಪೊಲೀಸ್ ಮುಖ್ಯಸ್ಥ ಮನೋಜ್ ಯಾದವ್, ನಮ್ಮ ಅಧಿಕಾರಿಗಳನ್ನು ಕೊಂದ ಪ್ರಕರಣದಲ್ಲಿ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ ಸಾಯುವ ಮುನ್ನವು ತನ್ನ ಪೊಲೀಸ್ ಕೌಶಲ್ಯವನ್ನು ತೋರಿಸಿರುವ ನಮ್ಮ ಧೈರ್ಯಶಾಲಿ ಪೇದೆ ರವೀಂದರ್ ಸಿಂಗ್, ಆರೋಪಿಗಳ ಕಾರಿನ ನಂಬರ್ ಅನ್ನು ತಮ್ಮ ಅಂಗೈಯಲ್ಲಿ ಬರೆದುಕೊಂಡಿದ್ದರು. ಮರಣೋತ್ತರ ಪರೀಕ್ಷೆ ವೇಳೆ ನಮಗೆ ಈ ನಂಬರ್ ಸಿಕ್ಕಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ.

    ಈ ಜಾಗದಲ್ಲಿ ಕಾರನ್ನು ನಿಲ್ಲಿಸಿಕೊಂಡು ಡ್ರಿಂಕ್ಸ್ ಮಾಡಬೇಡಿ ಎಂದು ಬುದ್ಧಿ ಹೇಳಲು ಹೋದ ಪೊಲೀಸರನ್ನು, ಎಣ್ಣೆಯ ನಶೆಯಲ್ಲಿ ಪುಂಡರು ಚುಚ್ಚಿ ಸಾಯಿಸಿದ್ದರು. ಸಾಯುವ ವೇಳೆಯಲ್ಲೂ ತನ್ನ ಕರ್ತವ್ಯ ಮಾಡಿ ಪ್ರಾಣ ಬಿಟ್ಟ ಪೇದೆ ರವೀಂದರ್ ಸಿಂಗ್ ಅವರಿಗೆ ಮರಣ ನಂತರದ ಪೊಲೀಸ್ ಪದಕ ಕೊಡಲಾಗುವುದು ಎಂದು ಮನೋಜ್ ಯಾದವ್ ತಿಳಿಸಿದ್ದಾರೆ.

  • ಬಂಧಿತ ಆರೋಪಿಯಲ್ಲೂ ಸೋಂಕು ಪತ್ತೆ- ಜೈಲಿನ ಖೈದಿಗಳು ಬಚಾವ್

    ಬಂಧಿತ ಆರೋಪಿಯಲ್ಲೂ ಸೋಂಕು ಪತ್ತೆ- ಜೈಲಿನ ಖೈದಿಗಳು ಬಚಾವ್

    ತುಮಕೂರು: ಕಳ್ಳತನದ ಆರೋಪದ ಮೇಲೆ ಬಂಧಿತನಾಗಿದ್ದ ಆರೋಪಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದರೆ ತುಮಕೂರು ಜಿಲ್ಲಾ ಕಾರಾಗ್ರಹದ ಖೈದಿಗಳು ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ.

    ಕಳ್ಳತನ ಪ್ರಕರಣದ 23 ವರ್ಷದ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲು ತಯಾರಿ ನಡೆಸಲಾಗುತ್ತಿತ್ತು. ಇದಕ್ಕೂ ಮುನ್ನ ಕೋವಿಡ್-19 ಟೆಸ್ಟ್ ಮಾಡಲಾಗಿದೆ. ಕೋವಿಡ್ ಟೆಸ್ಟ್ ನಲ್ಲಿ ಆರೋಪಿಗೆ ಪಾಸಿಟಿವ್ ಬಂದಿದ್ದು, ಆರೋಪಿಯನ್ನು ಜಿಲ್ಲಾ ಕೋವಿಡ್-19 ಆಸ್ಪತ್ರೆಯ ಖೈದಿಗಳ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತಿದೆ.

    ಪ್ರಕರಣದ ಹಿನ್ನೆಲೆ
    ಸೋಂಕಿತ 23 ವರ್ಷದ ಆರೋಪಿ ಈ ಹಿಂದೆ ಅಪರಾಧ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದ. ಜೂನ್ 19 ರಂದು ಜಾಮೀನು ಮೂಲಕ ಬಿಡುಗಡೆಗೊಂಡಿದ್ದ. ಜೂನ್ 19 ರಿಂದ 28 ರವರೆಗೂ ಈತ ಪಾವಗಡ ತಾಲೂಕು ಹಾಗೂ ಬೆಂಗಳೂರಿನಲ್ಲಿ ಓಡಾಡಿಕೊಂಡಿದ್ದ. ಈ ಮಧ್ಯೆ ಇನ್ನೊಂದು ಪ್ರಕರಣದಲ್ಲಿ ಜೂನ್ 28 ರಂದು ಪೊಲೀಸರು ಈತನನ್ನು ಬಂಧಿಸಿ ಕಾರಾಗೃಹಕ್ಕೆ ಕಳುಹಿಸುವ ಮುನ್ನ ಕೋವಿಡ್-19 ಟೆಸ್ಟ್ ಮಾಡಿದಾಗ ಸೋಂಕು ದೃಢಪಟ್ಟಿದೆ. ಹೀಗಾಗಿ ಜಿಲ್ಲಾಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದೆ.

    ಒಂದು ವೇಳೆ ಕೋವಿಡ್-19 ಟೆಸ್ಟ್ ಮಾಡಿಸದೇ ಆರೋಪಿಯನ್ನು ಜೈಲಿಗೆ ಕಳುಹಿಸಿದ್ದರೆ ಇತರ ಖೈದಿಗಳಿಗೂ ಸೋಂಕು ಹರಡುವ ಸಾಧ್ಯತೆ ಇತ್ತು. ಸದ್ಯ ತುಮಕೂರು ಜಿಲ್ಲಾ ಕಾರಾಗೃಹದ ಖೈದಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.