Tag: accused

  • ಲೋನ್ ಕೊಡಿಸೋದಾಗಿ ಜಾಹೀರಾತು- ಲಕ್ಷ-ಲಕ್ಷ ಪೀಕಿದ ಗ್ಯಾಂಗ್ ಅರೆಸ್ಟ್

    ಲೋನ್ ಕೊಡಿಸೋದಾಗಿ ಜಾಹೀರಾತು- ಲಕ್ಷ-ಲಕ್ಷ ಪೀಕಿದ ಗ್ಯಾಂಗ್ ಅರೆಸ್ಟ್

    – ಮಹಿಳೆಯರೇ ಇವರ ಟಾರ್ಗೆಟ್

    ಬೆಂಗಳೂರು: ಕೋಟಿ ಕೋಟಿ ಲೋನ್ ಕೊಡಿಸುವುದಾಗಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಲಕ್ಷ-ಲಕ್ಷ ವಂಚನೆ ಮಾಡುತ್ತಾ ಇದ್ದ ನಟೋರಿಯಸ್ ಗ್ಯಾಂಗ್ ಒಂದನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.

    ಕೇರಳ ಮೂಲದ ಎಂ. ಶರೂನ್, ರಿಬಿನ್, ಸೈಯದ್ ಅಹಮದ್ ಬಂಧಿತ ಆರೋಪಿಗಳು. ಇವರು ರಾಷ್ಟ್ರೀಯ ಬ್ಯಾಂಕಿನಲ್ಲಿ 33 ಕೋಟಿ ಹಣ ಬ್ಯಾಂಕ್ ಸಾಲ ಕೊಡಿಸುವುದಾಗಿ 26 ಲಕ್ಷ ಹಣ ಪಡೆದು ವಂಚಿಸಿದ್ದಾರೆ.

    ಬ್ಯಾಂಕ್ ಲೋನ್ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು 3 ಲಕ್ಷ ಪಡೆದು ಪರಾರಿಯಾಗಿದ್ದರು. ಈ ಸಂಬಂಧ ಆರೋಪಿಗಳನ್ನು ಬಂಧಿಸಿದ ಕಬ್ಬನ್ ಪಾರ್ಕ್ ಪೊಲೀಸರು ವಿಚಾರಣೆ ವೇಳೆ ಮತ್ತೊಂದು ಪ್ರಕರಣ ಬಯಲಾಗಿದೆ.

    ಈ ಮೂವರು ಆರೋಪಿಗಳು ಕೇರಳ ಮೂಲದ ಪತ್ರಿಕೆಗಳಲ್ಲಿ ಜಾಹೀರಾತನ್ನು ನೀಡುತ್ತಾ ಇದ್ದರು. ಜಾಹೀರಾತನ್ನು ನೀಡಿದ ಬಳಿಕ ಸಂಪರ್ಕ ಮಾಡಿದ ಜನರಲ್ಲಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಳ್ಳುತ್ತಾ ಇದ್ದ ಗ್ಯಾಂಗ್, ಕೋಟಿ ಕೋಟಿ ಹಣ ಸಿಗಬೇಕು ಅಂದರೆ ಪ್ರೊಷಿಜರ್ ಫೀ ಅಂತ ಲಕ್ಷಾಂತರ ರೂಪಾಯಿಯನ್ನು ಕೊಡಬೇಕು ಎಂದು ಹಣ ಪೀಕಿ ಯಾಮಾರಿಸುತ್ತಿದ್ದರು. ಇದೇ ರೀತಿ ವಂಚನೆ ಮಾಡಿದ ಗ್ಯಾಂಗ್ ಸಾಕಷ್ಟು ಜನರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.

  • ಕೊಲೆಗೈದು ಪರಾರಿಯಾಗಿದ್ದ ಆರೋಪಿ 14 ವರ್ಷಗಳ ಬಳಿಕ ಅರೆಸ್ಟ್

    ಕೊಲೆಗೈದು ಪರಾರಿಯಾಗಿದ್ದ ಆರೋಪಿ 14 ವರ್ಷಗಳ ಬಳಿಕ ಅರೆಸ್ಟ್

    ಬಳ್ಳಾರಿ: ಕೊಲೆಗೈದು ತಪ್ಪಿಸಿಕೊಂಡಿದ್ದ ಆರೋಪಿಯನ್ನು 14 ವರ್ಷಗಳ ಬಳಿಕ ಬಳ್ಳಾರಿಯ ಮೋಕಾ ಪೊಲೀಸರು ಬಂಧಿಸಿದ್ದಾರೆ.

    ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಾರಪ್ಪ ಎರಕುಲ್ (62) ಬಂಧಿತ ಆರೋಪಿ. ಮಾರಪ್ಪ ಸೇರಿದಂತೆ ಒಟ್ಟು ನಾಲ್ವರು ಸೇರಿ ಕರ್ನೂಲ್ ಜಿಲ್ಲೆಯ ಕಡ್ಮೂರ್ ಗ್ರಾಮದ ದತ್ತಗೌಡ ಎಂಬವರನ್ನು 3005ರಲ್ಲಿ ಕೊಲೆ ಮಾಡಿದ್ದರು. ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಾರಪ್ಪನನ್ನು ಪೊಲೀಸರು ಈಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಏನಿದು ಪ್ರಕರಣ?:
    ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದತ್ತಗೌಡ ಎಂಬವರನ್ನು ಬಳ್ಳಾರಿ ಸಮೀಪದ ಮೋಕಾ ಗ್ರಾಮಕ್ಕೆ ಕರೆದುಕೊಂಡು ಬಂದು ಕೊಲೆ ಮಾಡಿದ್ದರು. ಅಷ್ಟೇ ಅಲ್ಲದೆ ದತ್ತಗೌಡ ಅವರ ಮೃತದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದ ಪೊಲೀಸರು 2011ರಲ್ಲಿ ಪಿಂಜಾರ ದಸ್ತಗಿರಿ ಮತ್ತು ಹರಿಜನ್ ಜಾನ್‍ನನ್ನು ಪೊಲೀಸರು ಬಂಧಿಸಿದ್ದರು. ಆದರೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮಾರಪ್ಪ ಎರಕುಲ್ ಮತ್ತು ನಾಗರಾಜ್ ಎರಕುಲ್ ತಲೆ ಮರೆಸಿಕೊಂಡಿದ್ದರು. ಕಳೆದ ಒಂದು ವಾರದ ಹಿಂದೆ ಕರ್ನೂಲ್‍ನಲ್ಲಿ ಮಾರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

    ಇನ್ನೊಬ್ಬ ಆರೋಪಿ ನಾಗರಾಜ್ 2011ರಲ್ಲಿ ಕೊಲೆಯಾಗಿದ್ದಾನೆ. 14 ವರ್ಷಗಳಿಂದ ಪೊಲೀಸರಿಗೆ ಚಾಲೆಂಜ್ ಆಗಿದ್ದ ಪ್ರಕರಣದ ಎಲ್ಲಾ ಆರೋಪಿಗಳಿಗೆ ಶಿಕ್ಷ ಕೊಡಿಸುವಲ್ಲಿ ಮೋಕಾ ಪಿಎಸ್‍ಐ ಶ್ರೀನಿವಾಸ್ ಮತ್ತು ಸಿಪಿಐ ಭರತ್ ಅವರ ನೇತೃತ್ವದ ತಂಡವು ಯಶಸ್ವಿಯಾಗಿದೆ.

  • ಪತ್ರಿಕೋದ್ಯಮ ವಿದ್ಯಾರ್ಥಿನಿ ಗ್ಯಾಂಗ್ ರೇಪ್ – ಆರೋಪಿಗಳಿಗೆ ಜಾಮೀನು

    ಪತ್ರಿಕೋದ್ಯಮ ವಿದ್ಯಾರ್ಥಿನಿ ಗ್ಯಾಂಗ್ ರೇಪ್ – ಆರೋಪಿಗಳಿಗೆ ಜಾಮೀನು

    – ಗ್ಯಾಂಗ್ ರೇಪ್ ಮಾಡಿ ವಿಡಿಯೋ ವೈರಲ್ ಮಾಡಿದ್ದ ಕಾಮುಕರು

    ಮಂಗಳೂರು: ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನೇ ಐವರು ವಿದ್ಯಾರ್ಥಿಗಳು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿ ಜೈಲು ಸೇರಿದ್ದ ಎಲ್ಲಾ ಅತ್ಯಾಚಾರಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

    ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪತ್ರಿಕೋದ್ಯಮದ ವಿದ್ಯಾರ್ಥಿನಿಯೋರ್ವಳನ್ನು ಅದೇ ಕಾಲೇಜಿನ ಪ್ರಥಮ ಪಿಯುಸಿಯ ಐವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಅತ್ಯಾಚಾರ ನಡೆಸಿದ ವಿದ್ಯಾರ್ಥಿಗಳಾದ ಸುನಿಲ್ (19), ಗುರುನಂದನ್ (19), ಕಿಶನ್ (19), ಪ್ರಖ್ಯಾತ (19) ಹಾಗೂ ಪ್ರಜ್ವಲ್(19) ಜಾಮೀನು ಪಡೆದುಕೊಂಡ ಆರೋಪಿಗಳು. ಆರೋಪಿಗಳ ಪೈಕಿ ಪ್ರಜ್ವಲ್‍ಗೆ ಹತ್ತು ದಿನದ ಹಿಂದೆ ಜಾಮೀನು ಮಂಜೂರಾಗಿದ್ದು ಉಳಿದ ನಾಲ್ವರು ಅತ್ಯಾಚಾರಿಗಳಿಗೆ ಇಂದು ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

    ಸಾಲು ಸಾಲು ಅನುಮಾನಗಳು:
    ಕಳೆದ 2019ರ ಎಪ್ರಿಲ್ 3 ರಂದು ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ರು ಎಂದು 2019 ಜುಲೈ 3 ರಂದು ಸಂತ್ರಸ್ತೆ ದೂರು ನೀಡಿದ್ದರು. ಅತ್ಯಾಚಾರದ ವಿಡಿಯೋ ವೈರಲ್ ಆದ ಮೂರು ತಿಂಗಳ ಬಳಿಕ ದೂರು ನೀಡಿದ್ದು, ಈ ಮೂರು ತಿಂಗಳ ಅವಧಿಯಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಸಂತ್ರಸ್ತೆ ತನ್ನ ಹೆತ್ತವರಲ್ಲಾಗಲಿ, ಸ್ನೇಹಿತರಲ್ಲಾಗಲಿ ಅಥವಾ ಇತರೆ ಯಾವುದೇ ವ್ಯಕ್ತಿಗಳಲ್ಲಿ ಹೇಳಿಕೊಂಡಿಲ್ಲ. ಸಂತ್ರಸ್ತೆ ಪತ್ರಿಕೋದ್ಯಮದ ವಿದ್ಯಾರ್ಥಿನಿಯಾಗಿದ್ದು ಮಾತ್ರವಲ್ಲ ಪ್ರಬುದ್ಧೆಯಾಗಿದ್ದರೂ ಐದು ಜನ ಸೇರಿ ಅತ್ಯಾಚಾರ ನಡೆಸಿದ್ರೂ ಪೊಲೀಸರಿಗೆ ದೂರು ನೀಡದೇ ಇರೋದು ಅನುಮಾನಕ್ಕೆ ಕಾರಣವಾಗಿತ್ತು.

    ಜೊತೆಗೆ ಆಕೆ ಪುತ್ತೂರು ನಗರ ಠಾಣೆಯಲ್ಲಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು ಅದರಲ್ಲಿ ಸಂತ್ರಸ್ತೆ ತಾನು ಸ್ವತಂತ್ರವಾಗಿ ಬೆತ್ತಲಾಗುವ ದೃಶ್ಯದ ವಿಡಿಯೋ ಇದ್ದು, ಅದನ್ನು ಸಂತ್ರಸ್ತೆ ತನ್ನದೇ ವಿಡಿಯೋ ಎಂದು ತನಿಖೆಯಲ್ಲಿ ಒಪ್ಪಿಕೊಂಡಿರುತ್ತಾಳೆ. ಹೀಗಾಗಿ ಘಟನೆಯ ನೈಜ್ಯತೆಯ ಬಗ್ಗೆ ಅನುಮಾನ ಮೂಡಿಸುತ್ತದೆ. ಜೊತೆಗೆ ಈ ವಿಡಿಯೋದಲ್ಲಿ ಸಂತ್ರಸ್ತೆ ಸ್ವತಃ ಬೆತ್ತಲಾಗಿದ್ದು, ಬಳಿಕ ಒಬ್ಬೊಬ್ಬರೇ ವಿದ್ಯಾರ್ಥಿಗಳು ಅತ್ಯಾಚಾರ ನಡೆಸಿರೋ ದೃಶ್ಯಾವಳಿ ಇರೋದ್ರಿಂದ ಇದೊಂದು ಗ್ಯಾಂಗ್ ರೇಪ್ ಎಂದು ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಆದರೂ ಆರೋಪಿಗಳ ಹಾಗೂ ಪ್ರಕರಣದ ಸಂಬಂಧವನ್ನು ತಳ್ಳಿ ಹಾಕುವಂತಿಲ್ಲ. ಜೊತೆಗೆ ವಿದ್ಯಾರ್ಥಿಗಳನ್ನು ಜೈಲಿನಲ್ಲೇ ಇರಿಸಿದರೆ ಅವರ ವಿಧ್ಯಾಭ್ಯಾಸ ಹಾಗೂ ಮುಂದಿನ ಭವಿಷ್ಯಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಆರೋಪಿಗಳಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

    ಆ ಒಂದು ವಿಡಿಯೋ:
    2019ರ ಜುಲೈ 3 ರಂದು ಮಂಗಳೂರು ಸೇರಿದಂತೆ ಇಡೀ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಅದೊಂದು ವಿಡಿಯೋ ವೈರಲ್ ಆಗಿತ್ತು. ನಿರ್ಜನ ಪ್ರದೇಶವೊಂದರಲ್ಲಿ ಕಾರಿನೊಳಗೆ ಬೆತ್ತಲಾಗುವ ಸಮವಸ್ತ್ರದಲ್ಲಿದ್ದ ವಿದ್ಯಾರ್ಥಿನಿಯೋರ್ವಳನ್ನು ಕಾರಿನಲ್ಲಿದ್ದ ಐವರು ವಿದ್ಯಾರ್ಥಿಗಳು ಅತ್ಯಾಚಾರ ನಡೆಸುತ್ತಿದ್ದು ಎಲ್ಲಾ ದೃಶ್ಯವನ್ನು ಓರ್ವ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರೀ ವಿರೋಧ ವ್ಯಕ್ತವಾಗಿತ್ತು.

    ಬಳಿಕ ಪೊಲೀಸರು ಸಂತ್ರಸ್ತೆಯಿಂದ ದೂರು ಪಡೆದು ಆರೋಪಿಗಳನ್ನು ಬಂಧಿಸಿದ್ದರು. ಆಕೆ ನೀಡಿದ ದೂರಿನಂತೆ ತಾನು 2019ರ ಎಪ್ರಿಲ್ 3 ರಂದು ಸಂಜೆ ಕಾಲೇಜಿನಿಂದ ಎಂದಿನಂತೆ ಮನೆಗೆ ಹೋಗುತ್ತಿದ್ದಾಗ ಬೆಳ್ಳಿಪ್ಪಾಡಿ ಎಂಬಲ್ಲಿನಿಂದ ಕಾರಿನಲ್ಲಿ ಬಂದ ತನ್ನ ಕಾಲೇಜಿನ ಸಹಪಾಠಿಗಳು ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕೊಂಡೊಯ್ಯದ್ದು,ಬಳಿಕ ಕಾರಿನೊಳಗೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು, ಜೊತೆಗೆ ಮೊಬೈಲ್ ನಲ್ಲಿ ಚಿತ್ರೀಕರಣ ನಡೆಸಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು.

    ಬಳಿಕ ಆರೋಪಿಗಳ ವಿಚಾರಣೆಯ ವೇಳೆ ನಾವು ಐದು ಜನ ಸೇರಿ ಅತ್ಯಾಚಾರ ನಡೆಸಿದ್ದು ನಿಜ, ಬಳಿಕ ಚಿತ್ರೀಕರಿಸಿದ್ದೂ ನಿಜ ಆದ್ರೆ ಉದ್ದೇಶಪೂರ್ವಕವಾಗಿ ವಿಡಿಯೋ ವೈರಲ್ ಮಾಡಿಲ್ಲ, ಆರೋಪಿಗಳಲ್ಲಿ ಮೊಬೈಲ್ ನಲ್ಲಿ ಚಿತ್ರೀಕರಿಸಿದ ಆರೋಪಿ ಕಾಲೇಜಿನ ಚುನಾವಣಾ ವಿಚಾರದಲ್ಲಿ ಸ್ನೇಹಿತರೊಂದಿಗೆ ಮನಸ್ತಾಪವಾಗಿ, ಅವರ ಮಾನ ಮರ್ಯಾದೆ ತೆಗೆಯಬೇಕೆಂದು ತಾನೇ ಚಿತ್ರೀಕರಿಸಿದ ಅತ್ಯಾಚಾರದ ದೃಶ್ಯದಲ್ಲಿ ತನ್ನನ್ನು ಹೊರತು ಪಡಿಸಿ ಇತರ ನಾಲ್ವರು ಅತ್ಯಾಚಾರ ಮಾಡುವ ದೃಶ್ಯವನ್ನು ವೈರಲ್ ಮಾಡಿದ್ದ, ಆದ್ರೆ ಆರೋಪಿಗಳ ಬಂಧನದ ವೇಳೆ ಆತನೂ ಜೈಲು ಸೇರಿದ್ದ. ಇದೀಗ ಪ್ರಕರಣದ ಸುಧೀರ್ಘ ತನಿಖೆ ನಡೆಸಿದ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿದೆ.

    ಷರತ್ತುಗಳೇನು?
    * ಆರೋಪಿಗಳು ಎರಡು ಲಕ್ಷದ ಸ್ವಂತ ಮುಚ್ಚಳಿಕೆ ಹಾಗೂ ಎರಡು ಲಕ್ಷದ ಎರಡು ಜನ ಜಾಮೀನುದಾರರನ್ನು ನೀಡಬೇಕು.
    * ಅಧೀನ ನ್ಯಾಯಾಲಯಕ್ಕೆ ಸರಿಯಾದ ದಿನ ಹಾಜರಾಗಬೇಕು, ಜೊತೆಗೆ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ.

  • ಮನೆ ಹಿತ್ತಲಲ್ಲಿ 12 ಕೆ.ಜಿ ಗಾಂಜಾ ಗಿಡ ಬೆಳೆದ ಆರೋಪಿ ಅರೆಸ್ಟ್

    ಮನೆ ಹಿತ್ತಲಲ್ಲಿ 12 ಕೆ.ಜಿ ಗಾಂಜಾ ಗಿಡ ಬೆಳೆದ ಆರೋಪಿ ಅರೆಸ್ಟ್

    ರಾಯಚೂರು: ಗಾಂಜಾ ಬೆಳೆ ಬೆಳೆಯುವುದು ನಿಷೇಧವಾಗಿದ್ದರೂ ರಾಯಚೂರಿನ ಕೆಲ ತಾಲೂಕುಗಳಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿರುವ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆ ಹಿತ್ತಲಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.

    ಲಿಂಗಸಗೂರು ತಾಲೂಕಿನ ದೇವರಭೂಪುರ ಗ್ರಾಮದಲ್ಲಿ ಗಾಂಜಾ ಬೆಳೆಯುತ್ತಿರುವುದನ್ನ ಪತ್ತೆ ಮಾಡಿರುವ ಪೊಲೀಸರು, ಸೋಮವಾರ ರಾತ್ರಿ ವೇಳೆ ದಾಳಿ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ. ಯಾರಿಗೂ ತಿಳಿಯದಂತೆ ಮನೆಯ ಹಿತ್ತಲಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಗೋವಿಂದಪ್ಪನನ್ನ ಲಿಂಗಸುಗೂರು ಪೊಲೀಸರು ಬಂಧಿಸಿದ್ದಾರೆ. ಆದರೆ ಪೊಲೀಸರ ದಾಳಿ ಬಗ್ಗೆ ತಿಳಿದ ಇನ್ನೋರ್ವ ಆರೋಪಿ ಗುಂಡಪ್ಪ ಪರಾರಿಯಾಗಿದ್ದಾನೆ.

    ದಾಳಿ ವೇಳೆ 20 ಸಾವಿರ ರೂಪಾಯಿ ಮೌಲ್ಯದ 12 ಕೆ.ಜಿ ಗಾಂಜಾ ಗಿಡಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಎಲ್ಲೆ ಗಾಂಜಾ ಬೆಳೆದಿದ್ದಾರೆ ಎಂಬ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

  • ಸಿನಿಮಾದಲ್ಲಿ ಎನ್‍ಕೌಂಟರ್ ಮಾಡಿದ್ರೆ ಚಪ್ಪಾಳೆ, ರಿಯಲ್ ಆಗಿ ಮಾಡಿದ್ರೆ ವಿರೋಧ: ಜಗನ್ ಮೋಹನ್ ರೆಡ್ಡಿ

    ಸಿನಿಮಾದಲ್ಲಿ ಎನ್‍ಕೌಂಟರ್ ಮಾಡಿದ್ರೆ ಚಪ್ಪಾಳೆ, ರಿಯಲ್ ಆಗಿ ಮಾಡಿದ್ರೆ ವಿರೋಧ: ಜಗನ್ ಮೋಹನ್ ರೆಡ್ಡಿ

    ಅಮರಾವತಿ: ದಿಶಾ ಪ್ರಕರಣದ ನಾಲ್ವರು ಅತ್ಯಾಚಾರಿಗಳನ್ನು ಸೈಬರಾಬಾದ್ ಪೊಲೀಸರು ಎನ್‍ಕೌಂಟರ್ ಮಾಡಿದನ್ನು ಪ್ರಶ್ನಿಸಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ನಡೆಯನ್ನು ಆಂಧ್ರಪ್ರದೇಶ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ ಖಂಡಿಸಿದ್ದು, ಸಿನಿಮಾದಲ್ಲಿ ಎನ್‍ಕೌಂಟರ್ ಮಾಡಿದರೆ ಚಪ್ಪಾಳೆ ಹೊಡಿಯುತ್ತೇವೆ. ಆದರೆ ನಿಜವಾಗಿಯೂ ಎನ್‍ಕೌಂಟರ್ ಮಾಡಿದರೆ ವಿರೋಧಿಸುತ್ತೇವೆ ಎಂದು ಕಿಡಿಕಾರಿದ್ದಾರೆ.

    ಅಲ್ಲದೆ ಆರೋಪಿಗಳ ಹುಟ್ಟಡಗಿಸಿದ ತೆಲಂಗಾಣ ಪೊಲೀಸರ ಕಾರ್ಯವನ್ನು ಆಂಧ್ರ ಸಿಎಂ ಶ್ಲಾಘಿಸಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡಿದ ಜಗನ್ ಮೋಹನ್ ರೆಡ್ಡಿ, ಇಬ್ಬರು ಹೆಣ್ಣು ಮಕ್ಕಳ ತಂದೆಯಾಗಿ ಈ ಘಟನೆ ನನ್ನನ್ನು ಆಳವಾಗಿ ಸಂಕಟಕ್ಕೆ ದೂಡಿತ್ತು. ಒಬ್ಬ ತಂದೆಯಾಗಿ ಇಂತಹ ಘಟನೆಗಳಿಗೆ ನಾನು ಹೇಗೆ ಪ್ರತಿಕ್ರಿಯಿಸಲಿ? ಕ್ರೂರಿಗಳಿಗೆ ಯಾವ ಶಿಕ್ಷೆ ಕೊಟ್ಟರೆ ಪೋಷಕರಿಗೆ ಪರಿಹಾರ ನೀಡಿದಂತಾಗುತ್ತದೆ ಎಂದು ನಾವು ಚಿಂತಿಸಬೇಕಾಗಿದೆ ಎಂದು ಹೇಳಿದರು.

    ಇಂತಹ ದಿಟ್ಟ ನಿರ್ಧಾರ ತೆಗೆದುಕೊಂಡ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರಿಗೆ ಹಾಗೂ ತೆಲಂಗಾಣ ಪೊಲೀಸರಿಗೆ ಹ್ಯಾಟ್ಸ್ ಆಫ್. ಕೆಸಿಎರ್ ಅವರು ನಿಜಕ್ಕೂ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಆಂಧ್ರ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

    ದಿಶಾ ಪ್ರಕರಣದ ಆರೋಪಿಗಳ ಎನ್‍ಕೌಂಟರ್ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ನಡೆಯನ್ನು ಜಗನ್ ಅವರು ವಿರೋಧಿಸಿದರು. ಸಿನಿಮಾಗಳಲ್ಲಿ ನಾಯಕ ಎನ್‍ಕೌಂಟರ್ ಮಾಡಿದರೆ ನಾವೆಲ್ಲಾ ಚಪ್ಪಾಳೆ ಹೊಡೆಯುತ್ತೇವೆ. ಆದರೆ ಅದೇ ಕೆಲಸವನ್ನು ಒಬ್ಬ ವ್ಯಕ್ತಿ ರಿಯಲ್ ಆಗಿ ಮಾಡಿದರೆ, ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಹೆಸರಿನಲ್ಲಿ ಕೆಲವರು ದೆಹಲಿಯಿಂದ ಬಂದು ಇದು ತಪ್ಪು ಎನ್ನುತ್ತಾರೆ. ಏಕೆ ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

    ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆ ಹಾಗೂ ಶಿಕ್ಷೆ ಸಂಬಂಧ ಬಲವಾದ ಕಾನೂನು ಜಾರಿಗೆ ತರಲು ನಿರ್ಧರಿಸಿದ್ದೇವೆ. ಇದೇ ಅಧಿವೇಶನದಲ್ಲಿ ಆ ಮಸೂದೆಯನ್ನು ನಮ್ಮ ಸರ್ಕಾರ ಮಂಡಿಸಲಿದೆ ಎಂದು ಘೋಷಿಸಿದರು. ಜೊತೆಗೆ ಅದರಲ್ಲಿ ಮಹಿಳೆಯರ ಮೇಲೆ ಅತ್ಯಾಚಾರವೆಸಗುವ ಕಾಮುಕರಿಗೆ 21 ದಿನಗಳಲ್ಲಿ ಮರಣದಂಡನೆ ವಿಧಿಸುವ ಬಗ್ಗೆ ಕೂಡ ಪ್ರಸ್ತಾಪವಿದೆ ಎಂದು ತಿಳಿಸಿದರು.

  • ಮಗಳ ಮೇಲೆ ಅತ್ಯಾಚಾರವೆಸಗಲು ಕಾಮುಕರಿಗೆ ಸಾಥ್ ಕೊಟ್ಟ ತಾಯಿ

    ಮಗಳ ಮೇಲೆ ಅತ್ಯಾಚಾರವೆಸಗಲು ಕಾಮುಕರಿಗೆ ಸಾಥ್ ಕೊಟ್ಟ ತಾಯಿ

    – ಪತ್ನಿ ಕೃತ್ಯದ ಬಗ್ಗೆ ದೂರು ಕೊಟ್ಟ ಪತಿ
    – ಅಪ್ರಾಪ್ತೆ ಮೇಲೆ 1 ವರ್ಷದಿಂದ ನಿರಂತರ ಅತ್ಯಾಚಾರ
    – ತಾಯಿ ಪರಾರಿ, ಮೂವರು ಅರೆಸ್ಟ್

    ಗಾಂಧಿನಗರ: 12 ವರ್ಷದ ಮಗಳ ಮೇಲೆ ಅತ್ಯಾಚಾರವೆಸೆಗಲು ಕಾಮುಕರಿಗೆ ಸ್ವತಃ ತಾಯಿಯೇ ಸಹಕರಿಸಿದ ನೀಚ ಘಟನೆ ಗುಜರಾತ್‍ನ ಭಾವ್‍ನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ತನ್ನ ಮಗಳ ಮೇಲೆ ವಿಕೃತಿ ಮೆರೆದ ಪತ್ನಿ ವಿರುದ್ಧ ಪತಿಯೇ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

    ಭಾವ್‍ನಗರ ಜಿಲ್ಲೆಯ ಭುಟಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ 1 ವರ್ಷದಿಂದ ಕಾಮುಕರು ನನ್ನ ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ. ಇದಕ್ಕೆ ಸ್ವತಃ ನನ್ನ ಪತ್ನಿಯೇ ಸಾಥ್ ಕೊಡುತ್ತಿದ್ದಳು ಎಂದು ಬಾಲಕಿ ತಂದೆ ಪೊಲೀಸರಿಗೆ ಶನಿವಾರ ದೂರು ನೀಡಿದ್ದರು. ಇತ್ತ ಪತಿ ತನ್ನ ವಿರುದ್ಧ ದೂರು ನೀಡಿರುವ ವಿಚಾರ ತಿಳಿದ ಪತ್ನಿ ಮನೆಯಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದಾಳೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಕಲ್ಯಾಣ ಮಂಟಪದ ಬಾತ್‍ರೂಮಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‍ಗೈದ ಯುವಕ

    ಆರೋಪಿಗಳನ್ನು ಶಾಂತಿ ಧಂಧುಕಿಯಾ(46), ಬಾಬುಬಾಯಿ ಸಾರ್ತನ್‍ಪರ(43), ಚಂದ್ರೇಶ್ ಸಾರ್ತನ್‍ಪರ(32) ಎಂದು ಗುರುತಿಸಲಾಗಿದ್ದು, ಪೊಲೀಸರು ಭಾನುವಾರ ಈ ಮೂವರನ್ನು ಬಂಧಿಸಿದ್ದಾರೆ. ಮಗಳ ಮೇಲೆ ನಡೆಯುತ್ತಿದ್ದ ಅತ್ಯಾಚಾರದ ಬಗ್ಗೆ ತಂದೆಗೆ ಅರಿವಿರಲಿಲ್ಲ. ಆದರೆ ಬಾಲಕಿಯೇ ಈ ಬಗ್ಗೆ ಹೇಳಿದಾಗ ಪತ್ನಿಯ ನೀಚ ಕೃತ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದೂರು ಹಿಂಪಡೆಯಲು ನಿರಾಕರಿಸಿದ ರೇಪ್ ಸಂತ್ರಸ್ತೆ ಮೇಲೆ ಆ್ಯಸಿಡ್ ದಾಳಿ

    ಕಳೆದ 1 ವರ್ಷದಿಂದ ನನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ. ಮೂವರು ವ್ಯಕ್ತಿಗಳು ನನ್ನನ್ನು ಅತ್ಯಾಚಾರಗೈಯ್ಯುತ್ತಿದ್ದರು. ಇದಕ್ಕೆ ನನ್ನ ತಾಯಿಯೂ ಸಹಕರಿಸುತ್ತಿದ್ದರು. ತಂದೆಗೆ ಏನಾದರು ಕೆಲಸ ಹೇಳಿ ಅವರನ್ನು ಮನೆಯಿಂದ ಹೊರ ಕಳಿಸುತ್ತಿದ್ದರು. ಆ ಬಳಿಕ ಮೂವರು ಮನೆಗೆ ಬಂದು ಅತ್ಯಾಚಾರ ಮಾಡುತ್ತಿದ್ದರು. ಇದನ್ನು ನೋಡಿಕೊಂಡು ತಾಯಿ ಸುಮ್ಮನಿರುತ್ತಿದ್ದರು ಎಂದು ಸಂತ್ರಸ್ತೆ ಪೊಲೀಸರ ಬಳಿ ತಿಳಿಸಿದ್ದಾಳೆ.

  • ದೂರು ಹಿಂಪಡೆಯಲು ನಿರಾಕರಿಸಿದ ರೇಪ್ ಸಂತ್ರಸ್ತೆ ಮೇಲೆ ಆ್ಯಸಿಡ್ ದಾಳಿ

    ದೂರು ಹಿಂಪಡೆಯಲು ನಿರಾಕರಿಸಿದ ರೇಪ್ ಸಂತ್ರಸ್ತೆ ಮೇಲೆ ಆ್ಯಸಿಡ್ ದಾಳಿ

    ಲಕ್ನೋ: ಅತ್ಯಾಚಾರಿಗಳ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯಲು ನಿರಾಕರಿಸಿದ್ದಕ್ಕೆ ಸಂತ್ರಸ್ತೆಯ ಮೇಲೆ ನಾಲ್ವರು ಆರೋಪಿಗಳು ಆ್ಯಸಿಡ್ ಎರಚಿ ವಿಕೃತಿ ಮೆರೆದಿದ್ದಾರೆ.

    ಉತ್ತರ ಪ್ರದೇಶದಲ್ಲಿ ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಮುಜಾಫರ್‌ನಗರದಲ್ಲಿ ತನ್ನನ್ನು ಅತ್ಯಾಚಾರಗೈದ ನಾಲ್ವರು ಕಾಮುಕರ ಮೇಲೆ ಕೊಟ್ಟಿದ್ದ ದೂರನ್ನು ವಾಪಾಸ್ ಪಡೆಯಲು ಸಂತ್ರಸ್ತೆ ಒಪ್ಪದಿದ್ದಕ್ಕೆ ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದೆ. 30 ವರ್ಷದ ಮಹಿಳೆ ಮೇಲೆ ನಾಲ್ವರು ದುರುಳರು ಆ್ಯಸಿಡ್ ದಾಳಿ ನಡೆಸಿದ್ದಾರೆ. ಪರಿಣಾಮ ಶೇ. 30ರಷ್ಟು ಸಂತ್ರಸ್ತೆ ದೇಹದ ಭಾಗ ಸುಟ್ಟಿದ್ದು, ಮೀರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕಾಮುಕರ ಅಟ್ಟಹಾಸ- ಶಿಕ್ಷಕಿ ಮೇಲೆ ಗ್ಯಾಂಗ್ ರೇಪ್, ಲೈಂಗಿಕ ಕಿರುಕುಳಕ್ಕೆ ಯುವತಿ ಬಲಿ

    ಬುಧವಾರ ಸಂತ್ರಸ್ತೆ ಮೇಲೆ ಅತ್ಯಾಚಾರಗೈದು ನಾಲ್ವರು ಕಾಮುಕರು ಅಟ್ಟಹಾಸ ಮೆರೆದಿದ್ದರು. ಈ ಸಂಬಂಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದರು. ಈ ವೇಳೆ ತಮ್ಮ ವಿರುದ್ಧ ನೀಡಿರುವ ದೂರನ್ನು ವಾಪಾಸ್ ತೆಗೆದುಕೊಂಡು ನಿನ್ನ ಪಾಡಿಗೆ ಸುಮ್ಮನಾಗು ಎಂದು ಆರೋಪಿಗಳು ಸಂತ್ರಸ್ತೆಗೆ ಬೆದರಿಕೆ ಹಾಕಿದ್ದರು. ಆದರೆ ಇದ್ಯಾವುದಕ್ಕೂ ಸಂತ್ರಸ್ತೆ ಬಗ್ಗದೆ ದೂರನ್ನು ಹಿಂಪಡೆಯಲು ನಿರಾಕರಿಸಿದಾಗ, ಆರೋಪಿಗಳು ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ

    ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ಸಾಕಷ್ಟು ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಅತ್ಯಾಚಾರವೆಸೆಗಿರುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಪೊಲೀಸರು ಪ್ರಕರಣ ಮುಚ್ಚಿ ಹಾಕಿದ್ದರು. ಆದ್ದರಿಂದ ಸಂತ್ರಸ್ತೆ ನೇರವಾಗಿ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ. ಇದನ್ನೂ ಓದಿ: ಮತ್ತಷ್ಟು ಎನ್‌ಕೌಂಟರ್‌ಗಳನ್ನು ಮಾಡಿ- ತೆಲಂಗಾಣ ಪೊಲೀಸ್ರಿಗೆ ಹೆಚ್ಚಾಯ್ತು ಡಿಮ್ಯಾಂಡ್

    ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಸಂತ್ರಸ್ತೆ ಮನೆಗೆ ನುಗ್ಗಿ ನಾಲ್ವರು ಆರೋಪಿಗಳು ಆ್ಯಸಿಡ್ ದಾಳಿ ನಡೆಸಿದ್ದಾರೆ. ಸದ್ಯ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಘಟನೆ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆಮಾಡಿ ಕೈಗೆ ಕೋಳ ಹಾಕುತ್ತೇವೆ ಎಂದು ತಿಳಿಸಿದ್ದಾರೆ.

  • ಮತ್ತಷ್ಟು ಎನ್‌ಕೌಂಟರ್‌ಗಳನ್ನು ಮಾಡಿ- ತೆಲಂಗಾಣ ಪೊಲೀಸ್ರಿಗೆ ಹೆಚ್ಚಾಯ್ತು ಡಿಮ್ಯಾಂಡ್

    ಮತ್ತಷ್ಟು ಎನ್‌ಕೌಂಟರ್‌ಗಳನ್ನು ಮಾಡಿ- ತೆಲಂಗಾಣ ಪೊಲೀಸ್ರಿಗೆ ಹೆಚ್ಚಾಯ್ತು ಡಿಮ್ಯಾಂಡ್

    ಹೈದರಾಬಾದ್: ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಕಾಮುಕರನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹುಟ್ಟಡಗಿಸಿದ ಬೆನ್ನಲ್ಲೇ ತೆಲಂಗಾಣ ಪೊಲೀಸರಿಗೆ ಬೇಡಿಕೆ ಹೆಚ್ಚಾಗಿದೆ. ಅತ್ಯಾಚಾರಿಗಳಿಗೆ ಶಿಕ್ಷೆ ನೀಡಲು ಹೀಗೆ ಮತ್ತಷ್ಟು ಎನ್‌ಕೌಂಟರ್‌ಗಳನ್ನು ಮಾಡಿ ಎಂದು ಪೊಲೀಸರ ಮುಂದೆ ತೆಲಂಗಾಣದ ಜನರು ಬೇಡಿಕೆ ಇಟ್ಟಿದ್ದಾರೆ.

    ದಿಶಾ ಪ್ರಕರಣದಲ್ಲಿ ಸೈಬರಾಬಾದ್ ಪೊಲೀಸರು ಕೈಗೊಂಡ ಕ್ರಮಕ್ಕೆ ಎಲ್ಲೆಡೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದ್ದು, ತೆಲಂಗಾಣದಲ್ಲಿ ಇತ್ತೀಚೆಗೆ ಘಟಿಸಿದ್ದ ಇನ್ನೂ ಮೂರು ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಎನ್‍ಕೌಂಟರ್ ಮಾಡಲು ಪೊಲೀಸರು ಮುಂದಾಗಬೇಕು. ಈ ಮೂಲಕ ಸಂತ್ರಸ್ತೆಯರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹೈದ್ರಾಬಾದ್ ರೇಪಿಸ್ಟ್‌ಗಳನ್ನು ಎನ್‍ಕೌಂಟರ್ ಮಾಡಿದಂತೆ ಆರೋಪಿಗಳಿಗೆ ಶಿಕ್ಷೆಯಾಗಲಿ: ಉನ್ನಾವೋ ಸಂತ್ರಸ್ತೆಯ ತಂದೆ

    ವಾರಂಗಲ್ ಜಿಲ್ಲೆಯ ಹನಮಕೊಂಡ ಗ್ರಾಮದಲ್ಲಿನ ಯುವತಿ, ಯಾದಾದ್ರಿ ಜಿಲ್ಲೆಯ ಹಾಜಿಪುರದ ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ, ಕುಮುರಾಮ್ ಭೀಮ್ ಜಿಲ್ಲೆಯ ಅಸಿಫಾಬಾದ್‍ನಲ್ಲಿ ನಡೆದ ದಲಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು. ಈ ಮೂರು ಪ್ರಕರಣಗಳಲ್ಲಿ ಭಾಗಿಯಾಗಿರುವ ಕಾಮಾಂಧರನ್ನು ಪೊಲೀಸರು ಎನ್‍ಕೌಂಟರ್ ಮಾಡಬೇಕು ಎಂಬ ಕೂಗು ಕೇಳಿಬರುತ್ತಿದೆ. ಇದನ್ನೂ ಓದಿ: ಕಾಮುಕರಿಗೆ ಗುಂಡೇಟು – ಇಂದು ಬೆಳಗ್ಗೆ ಎನ್‍ಕೌಂಟರ್ ನಡೆದಿದ್ದು ಹೇಗೆ?

    ಈ ಮೇಲಿನ ಮೂರು ಪ್ರಕರಣಗಳ ಆರೋಪಿಗಳನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ದಿಶಾ ಪ್ರಕರಣದಂತೆ ಈ ಮೂರು ಪ್ರಕರಣದ ಆರೋಪಿಗಳ ಮೇಲೂ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಆದರೆ ಪೊಲೀಸರು ಸಂತ್ರಸ್ತೆಯರ ಆರ್ಥಿಕ ಪರಿಸ್ಥಿತಿ ಹಾಗೂ ಜಾತಿ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೂಡ ಕೇಳಿ ಬರುತ್ತಿದೆ. ದಯವಿಟ್ಟು ಪೊಲೀಸರು ಯಾವುದೇ ಭೇದಭಾವ ತೋರದೆ ಈ ಮೂರು ಪ್ರಕರಣದ ಆರೋಪಿಗಳನ್ನು ಗುಂಡಿಟ್ಟು ಹತ್ಯೆ ಮಾಡಿ ಎಂದು ಜನರು ಆಗ್ರಹಿಸಿದ್ದಾರೆ.

  • ಕಾಮುಕರ ಅಟ್ಟಹಾಸ- ಶಿಕ್ಷಕಿ ಮೇಲೆ ಗ್ಯಾಂಗ್ ರೇಪ್, ಲೈಂಗಿಕ ಕಿರುಕುಳಕ್ಕೆ ಯುವತಿ ಬಲಿ

    ಕಾಮುಕರ ಅಟ್ಟಹಾಸ- ಶಿಕ್ಷಕಿ ಮೇಲೆ ಗ್ಯಾಂಗ್ ರೇಪ್, ಲೈಂಗಿಕ ಕಿರುಕುಳಕ್ಕೆ ಯುವತಿ ಬಲಿ

    ಭೋಪಾಲ್: ಹೈದರಾಬಾದ್ ಪಶುವೈದ್ಯೆ ಹಾಗೂ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಬಗ್ಗೆ ಇಡೀ ದೇಶವೇ ಮಮ್ಮಲ ಮರುಗಿ, ಕಾಮುಕರ ವಿರುದ್ಧ ಸಿಡಿದೆದ್ದಿದೆ. ಈ ಕಿಚ್ಚಿನ ಬಿಸಿ ಆರುವ ಮುನ್ನವೇ ಮಧ್ಯಪ್ರದೇಶದಲ್ಲಿ ಕಾಮುಕರು ಅಟ್ಟಹಾಸ ಮೆರೆದಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

    ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಶಾಲಾ ಶಿಕ್ಷಕಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಇತ್ತ ಧಾಮೋಹ್ ಜಿಲ್ಲೆಯಲ್ಲಿ ಯುವತಿಯೊಬ್ಬಳು ಕಾಮಪಿಶಾಚಿಗಳ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಅಷ್ಟೇ ಅಲ್ಲದೆ 4 ವರ್ಷದ ಬಾಲಕಿಯನ್ನು ಅತ್ಯಚಾರಗೈದು ವಿಕೃತಿ ಮೆರೆದಿದ್ದ ಕಾಮುಕರಿಗೆ ಪೊಲೀಸರ ಎದುರೇ ವಕೀಲರ ತಂಡ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇಂದೋರ್ ನ ಮ್ಹಾವ್ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: 7ರ ಬಾಲೆಯನ್ನ ಅತ್ಯಾಚಾರಗೈದ ಕಾಮುಕನಿಗೆ 10 ವರ್ಷ ಜೈಲು ಶಿಕ್ಷೆ

    ಗುರುವಾರ ಶಾಲೆ ಮುಗಿಸಿಕೊಂಡು ಶಿಕ್ಷಕಿ ಸಂಜೆ ಸುಮಾರು 5 ಗಂಟೆಗೆ ಮನೆಗೆ ತೆರಳುತ್ತಿದ್ದಾಗ ಕಾಮುಕರು ಆಕೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ. ಅತ್ಯಾಚಾರ ಮಾಡಿದ ನಂತರ ಶಿಕ್ಷಕಿಯ ಜ್ಞಾನತಪ್ಪಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಕೆಲ ಸಮಯದ ನಂತರ ಶಿಕ್ಷಕಿಗೆ ಎಚ್ಚರವಾಗಿ ಮನೆಗೆ ಹೋಗಿ ಕುಟುಂಬಸ್ಥರ ಬಳಿ ನಡೆದ ಘಟನೆಯನ್ನು ತಿಳಿಸಿದ್ದರು. ಆಗ ಕುಟುಂಬಸ್ಥರು ರಾಂಪುರ್ ನೈಕಿನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ

    ಶಿಕ್ಷಕಿ ದೂರು ಕೊಟ್ಟ ತಕ್ಷಣ ಕಾರ್ಯನಿರತರಾದ ಪೊಲೀಸರು ಕೃತ್ಯವೆಸೆಗಿದ್ದ ಬಚ್ಚು ಲೋನಿಯಾ, ಬೀರು ಲೋನಿಯಾ, ನರೇಂದ್ರ ಲೋನಿಯಾ ಮತ್ತು ಶಿವ್ ಶಂಕರ್ ಲೋನಿಯಾನನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲದೆ ಈ ಎಲ್ಲಾ ಆರೋಪಿಗಳು ಈ ಹಿಂದೆ ಕೂಡ ಪ್ರಕರಣಗಳಲ್ಲಿ ಭಾಗಿಯಾದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಧಾಮೋಹ್‍ನಲ್ಲಿ 17 ವರ್ಷದ ಯುವತಿಗೆ ಪ್ರತಿನಿತ್ಯ ಸ್ಥಳೀಯ ಯುವಕರು ಲೈಂಗಿಕ ಕಿರುಕುಳವನ್ನು ಕೊಡುತ್ತಿದ್ದರು. ಕಾಮುಕರ ಅಟ್ಟಹಾಸಕ್ಕೆ ರೋಸಿಹೋಗಿದ್ದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಯುವತಿ ಕುಟುಂಬಸ್ಥರು, ಸ್ಥಳೀಯರ ಹೇಳಿಕೆಗಳನ್ನು ಪೊಲೀಸರು ಪಡೆದು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆಟಿಕೆ ಕೊಡಿಸುವುದಾಗಿ ಹೇಳಿ 9 ತಿಂಗಳ ಕಂದಮ್ಮನ ಮೇಲೆ ರೇಪ್

    ರಾಜ್ಯದಲ್ಲಿ ನಡೆದ ಈ ಘಟನೆಗಳ ಬಗ್ಗೆ ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಅವರು ಪ್ರತಿಕ್ರಿಯಿಸಿ, ಮಧ್ಯಪ್ರದೇಶವನ್ನು ಮತ್ತೊಂದು ಉತ್ತರ ಪ್ರದೇಶವಾಗಲು ಬಿಡುವುದಿಲ್ಲ. ಈ ರೀತಿಯ ಪ್ರಕರಣ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ. ಮಹಿಳೆಯರ ರಕ್ಷಣೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

  • ಮಹಿಳೆಯ ಕೊಲೆಗೈದು, ಮೆದುಳನ್ನೇ ತಿಂದ ನರ ರಾಕ್ಷಸ

    ಮಹಿಳೆಯ ಕೊಲೆಗೈದು, ಮೆದುಳನ್ನೇ ತಿಂದ ನರ ರಾಕ್ಷಸ

    – ಇಂಗ್ಲಿಷ್ ಮಾತನಾಡಿದ್ದಕ್ಕೆ ರೊಚ್ಚಿಗೆದ್ದು ಕೊಲೆ

    ಮನಿಲಾ: ಯುವಕನೊಬ್ಬ ತನ್ನೊಂದಿಗೆ ಇಂಗ್ಲೀಷ್ ಮಾತನಾಡಿದ ಮಹಿಳೆಯನ್ನು ಕೊಲೆಗೈದು, ಆಕೆಯ ಮೆದುಳನ್ನೇ ತಿಂದಿರುವ ಘಟನೆ ಫಿಲಿಪೈನ್ಸ್ ದೇಶದ ತಾಲಿಸಯನ್ ಪಟ್ಟಣದಲ್ಲಿ ನಡೆದಿದೆ.

    21 ವರ್ಷದ ಲಾಯ್ಡ್ ಬಾಗ್ಟಾಂಗ್ ಮಹಿಳೆಯನ್ನು ಕೊಲೆಗೈದ ಆರೋಪಿ ಎಂದು ಪೊಲೀಸರು ಗುರುತಿಸಿದ್ದು, ಆತನನ್ನು ಬಂಧಿಸಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಆರೋಪಿ ಕುಡಿದ ಮತ್ತಿನಲ್ಲಿದ್ದ ಹಾಗೂ ಹಸಿವಿನಲ್ಲಿದ್ದ ಎಂದು ಪೊಲೀಸರು ಹೇಳಿದ್ದಾರೆ.

    ತಾಲಿಸಯನ್ ಪಟ್ಟಣದ ಪಂಟಾ ಸ್ಯಾಂಟಿಯಾಗೊ ನಿವಾಸಿಯ ಮಹಿಳೆಯ ರುಂಡವಿಲ್ಲದ ದೇಹ ಪತ್ತೆಯಾಗಿತ್ತು. ಪ್ರಕರಣದ ಕುರಿತು ಮಾಹಿತಿ ನೀಡಿದ ತಾಲಿಯಸ್ ಪಟ್ಟಣದ ಪೊಲೀಸ್ ಮುಖ್ಯಸ್ಥರು, ಆರೋಪಿ ಯುವಕನೊಂದಿಗೆ ಮಹಿಳೆ ಇಂಗ್ಲಿಷ್ ಭಾಷೆಯಲ್ಲಿ ಮಾತನಾಡಿದ್ದು, ಆತನಿಗೆ ಅದು ಅರ್ಥವಾಗದ ಕಾರಣ ಕೋಪಗೊಂಡು ಕೊಲೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.

    ಮಹಿಳೆಯ ಕೊಲೆಯನ್ನು ತಾನೇ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದು, ಮಹಿಳೆಯ ರುಂಡ ತನ್ನ ಮನೆಯಲ್ಲಿರುವ ಸಂಗತಿಯನ್ನು ಪೊಲೀಸ್ ವಿಚಾರಣೆಯಲ್ಲಿ ತಿಳಿಸಿದ್ದಾನೆ. ಕೃತ್ಯ ನಡೆದ ಸ್ಥಳದಲ್ಲಿ ದೊರೆತ ಅಂಶಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

    ಆರೋಪಿಯ ಮನಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಮನೋವೈದ್ಯರನ್ನು ಸಂಪರ್ಕ ಮಾಡುವುದಾಗಿ ಪೊಲೀಸರು ತಿಳಿಸಿದ್ದು, ಸದ್ಯ ಬಂಧಿಸುವ ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಾಗಿರುವುದಾಗಿ ತಿಳಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಗುರುತಿಸಲು ಪೊಲೀಸರು ಕುಟುಂಬದವರ ಮೊರೆ ಹೋಗಿದ್ದಾರೆ.