Tag: accused

  • ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

    ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

    ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಪಶುವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಪ್ರಕರಣದ ಆರೋಪಿಯೊರ್ವನ ತಾಯಿ, ಸಂತ್ರಸ್ತೆಯನ್ನು ಕೊಲೆ ಮಾಡಿದ ಹಾಗೆಯೇ ತಪ್ಪು ಮಾಡಿದ ನನ್ನ ಮಗನನ್ನು ಕೊಂದುಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    26 ವರ್ಷದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮಹ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ವೈದ್ಯೆಗೆ ಕೂಲ್ ಡ್ರಿಂಕ್ಸ್‌ನಲ್ಲಿ ವಿಸ್ಕಿ ಕುಡಿಸಿ ಅತ್ಯಾಚಾರಗೈದ ಪಾಪಿಗಳು

    ಈ ಪ್ರಕರಣ ಇಡೀ ದೇಶದಲ್ಲೇ ಸಂಚಲನ ಮೂಡಿಸಿದ್ದು, ಪ್ರಿಯಾಂಕಾ ರೆಡ್ಡಿ ಸಾವಿಗೆ ನ್ಯಾಯ ಕೊಡಿಸಿ ಆರೋಪಿಗಳನ್ನು ಗಲ್ಲಿಗೇರಿಸಿ ಎಂದು ಜನರು ಸಿಡಿದೆದ್ದಿದ್ದಾರೆ. ಈ ಮಧ್ಯೆ ಆರೋಪಿ ಚೆನ್ನಕೇಶವುಲು ತಾಯಿ ಪ್ರತಿಕ್ರಿಯಿಸಿ, ಮಗನ ಅಮಾನುಷ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ನನ್ನ ಮಗ ಈ ಪಾಪ ಮಾಡಿದ್ದಾನೆ ಎಂದು ಸಾಬೀತಾದರೆ ಖಂಡಿತಾ ಆತನಿಗೆ ಶಿಕ್ಷೆಯಾಗಬೇಕು. ಬೇಕಾದರೆ ಪ್ರಿಯಾಂಕ ರೆಡ್ಡಿಯನ್ನು ಹೇಗೆ ಆರೋಪಿಗಳು ಅಮಾನುಷವಾಗಿ ಕೊಲೆಗೈದಿದ್ದಾರೋ ಹಾಗೆಯೇ ನನ್ನ ಮಗನನ್ನೂ ಹತ್ಯೆ ಮಾಡಿ ಎಂದು ತಾಯಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನ ಕೊಲೆಗೈದ ಜಾಗದ ಸಮೀಪದಲ್ಲೇ ಸಿಕ್ತು ಮತ್ತೋರ್ವ ಮಹಿಳೆ ಶವ

    ನಾನು ಒಬ್ಬಳು ಹೆಣ್ಣು. ನನಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮಕ್ಕಳಿಗೆ ಹೀಗಾದರೆ ಹೆತ್ತ ಕರುಳು ಎಷ್ಟು ನೋವು ಪಡುತ್ತದೆ ಎಂದು ನನಗೂ ತಿಳಿದಿದೆ. ನನ್ನ ಮಗ ತಪ್ಪಿತಸ್ಥ ಆಗಿದ್ದರೆ ಆತನಿಗೆ ಶಿಕ್ಷೆ ಖಂಡಿತ ಆಗಬೇಕು. ಈ ರೀತಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿ ಹೀನಾಯ ಕೆಲಸ ಮಾಡುವವರಿಗೆ ಕಠಿಣ ಶಿಕ್ಷೆ ಕೊಡಬೇಕು. ಆಗ ಮುಂದೆ ಇಂತಹ ದುಷ್ಕೃತ್ಯಕ್ಕೆ ಯಾರು ಕೈ ಹಾಕಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

    ಈಗಾಗಲೇ ದೇಶಾದ್ಯಂತ ಈ ಪ್ರಕರಣ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘಿಸಿದವರಿಗೆ ದೊಡ್ಡ ಮೊತ್ತದ ದಂಡ ವಿಧಿಸಿ ಬಿಸಿ ಮುಟ್ಟಿಸಿ ನಿಯಮ ಪಾಲಿಸುವಂತೆ ಸರ್ಕಾರ ಮಾಡಿದೆ. ಅದರಂತೆ ಅತ್ಯಾಚಾರಿಗಳಿಗೆ ಗಲ್ಲಿಗೇರಿಸಿ, ಆಗ ಕಾಮುಕರ ಅಟ್ಟಹಾಸ ಅಂತ್ಯವಾಗುತ್ತದೆ. ಇಂಥವರಿಗೆ ಜೀವಾವಧಿ ಶಿಕ್ಷೆ ನೀಡರೆ ಆರಾಮಾಗಿ ಸಾಯುವ ತನಕ ಜೈಲಿನಲ್ಲಿ ಇರುತ್ತಾರೆ. ಅದರ ಬದಲು ಶಿಕ್ಷೆ ಸಾಬೀತಾದ ಕೂಡಲೇ ಗಲ್ಲಿಗೇರಿಸಿ ಎಂದು ಆಗ್ರಹಿಸಿದ್ದಾರೆ.

    ಆರೋಪಿಗಳ ವೈದ್ಯಕೀಯ ಪರೀಕ್ಷೆ ಆದ ಬಳಿಕ ಪೊಲೀಸರು ನಾಲ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಆರೋಪಿಗಳನ್ನು 14 ದಿನಗಳ ಕಾಲ ರಿಮ್ಯಾಂಡ್‍ನಲ್ಲಿ ಇರಿಸುವಂತೆ ಆದೇಶಿಸಿದೆ.

  • ಹನಿಟ್ರ್ಯಾಪ್ ಪ್ರಕರಣದಲ್ಲಿ ಮಗನಿಗೆ ಸಾಥ್ ಕೊಟ್ರಾ ತಾಯಿ?

    ಹನಿಟ್ರ್ಯಾಪ್ ಪ್ರಕರಣದಲ್ಲಿ ಮಗನಿಗೆ ಸಾಥ್ ಕೊಟ್ರಾ ತಾಯಿ?

    – ಬಗೆದಷ್ಟು ತೆರೆದುಕೊಳ್ತಿದೆ `ಹನಿ’ ಕಹಾನಿ

    ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆಯುತ್ತಿದ್ದು, ಸಿಸಿಬಿ ಪೊಲೀಸರಿಗೆ ಮತ್ತೊಂದು ಮಜಲಿನ ಸ್ಫೋಟಕ ಮಾಹಿತಿ ಸಿಕ್ಕಿದೆ. ಆರೋಪಿ ರಾಘವೇಂದ್ರ ಅಕ್ರಮ ದಂಧೆಯಲ್ಲಿ ಅವರ ತಾಯಿ ಪಾತ್ರ ಇರುವ ಬಗ್ಗೆ ಸಿಸಿಬಿಗೆ ಬಲವಾದ ಸಾಕ್ಷ್ಯಗಳು ಲಭ್ಯವಾಗಿದೆ ಎನ್ನಲಾಗಿದೆ.

    ಸಿಸಿಬಿ ಪೊಲೀಸರು ರಾಘವೇಂದ್ರ ತಾಯಿ ಜ್ಯೋತಿ ಮೇಲೆ ಕೂಡ ಒಂದು ಕಣ್ಣಿರಿಸಿದ್ದಾರೆ. ಪಬ್ಲಿಕ್ ಟಿವಿ ಕ್ಯಾಮೆರಾದ ಮುಂದೆ ನಾನು ಮತ್ತು ನನ್ನ ಮಗ ರಾಘವೇಂದ್ರ ಅಮಾಯಕರು. ವಿನಾಕಾರಣ ನಮ್ಮನ್ನ ಬೆದರಿಸುತ್ತಿದ್ದಾರೆಂದು ಹನಿಟ್ರ್ಯಾಪ್ ಕಿಂಗ್‍ಪಿನ್ ರಾಘವೇಂದ್ರನ ತಾಯಿ ಜ್ಯೋತಿ ಕಣ್ಣಿರಿಟ್ಟಿದ್ದರು. ಆದರೆ ಇದೀಗ ಸಿಸಿಬಿ ಪೊಲೀಸರಿಗೆ ಸಿಕ್ಕ ಮಹಿತಿ ಆಕೆಯ ಅಸಲಿಯತ್ತಿನ ಬಗ್ಗೆ ಸಂಶಯ ಮೂಡಿಸಿದೆ. ರಾಘವೇಂದ್ರನ ಅಕ್ರಮ ದಂಧೆಯ ವಿಡಿಯೋ ಸೇರಿದಂತೆ ಹಲವು ದಾಖಲೆಗಳನ್ನ ಲಾಕರ್ ನಲ್ಲಿ ಇಟ್ಟಿದ್ದ ಬಗ್ಗೆ ಮಾಹಿತಿ ಸಿಕ್ಕಿವೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಎದೆ ಮೇಲೆ ಹಚ್ಚೆ, ಶಾಸಕನನ್ನ ಯಾಮಾರಿಸಿದ್ಳು ಚಿಟ್ಟೆ- ಬಗೆದಷ್ಟು ಬಯಲಾಗ್ತಿದೆ ‘ಹನಿ’ಕಹಾನಿ

    ಈ ರಾಘವೇಂದ್ರ ಮತ್ತು ಟೀಂ ಸಾಮಾನ್ಯದವರಲ್ಲ. ಬ್ಲಾಕ್ ಮೇಲ್ ಮಾಡಿ ಹಣ ಪಿಕೋದ್ರಲ್ಲಿ ನಿಸ್ಸೀಮರು. ಅರೆಬರೆ ವಿಡಿಯೋ ತೋರಿಸಿ ಇಬ್ಬರು ಶಾಸಕರ ಬಳಿ ಹಣ ಪಿಕುತ್ತಿದ್ದರು. ಆ ಇಬ್ಬರು ಶಾಸಕರ ಹನಿಟ್ರ್ಯಾಪ್ ವಿಡಿಯೋ ಕ್ಲಿಯಾರಿಟಿ ಇಲ್ಲದೇ ಇದ್ದರೂ ಬ್ಲಾಕ್‍ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಬಗೆದಷ್ಟು ಈ ಹನಿ ಕಹಾನಿ ತೆರೆದುಕೊಳ್ಳುತ್ತಿದೆ. ಇನ್ನೂ ಯಾರೆಲ್ಲಾ ಈ ಕೇಸ್‍ನಲ್ಲಿದ್ದಾರೋ? ಯಾರ‍್ಯಾರ ಬಂಡವಾಳ ಬಯಲಾಗುತ್ತೋ ಕಾದು ನೋಡಬೇಕು. ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ- ಹಾಲಿ ಶಾಸಕರಿಂದ ಪೀಕಿದ್ರು ಬರೋಬ್ಬರಿ 1 ಕೋಟಿ

    ರಾಘವೇಂದ್ರ ತಾಯಿ ಜ್ಯೋತಿ ಹೇಳಿದ್ದೇನು?
    ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದ ರಾಘವೇಂದ್ರ ತಾಯಿ, ನನ್ನ ಮಗ ಅಂಥವನಲ್ಲ. ಮೊದಲಿಗೆ ಮೊಬೈಲ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಅಲ್ಲಿ ಕೆಲಸದಿಂದ ಹೊರಬಂದು ಬೇರೆ ಕಡೆ ಉದ್ಯೋಗ ಹುಡುಕುತ್ತಿದ್ದಾನೆ. ರಾತ್ರಿ ಮನೆಗೆ ಬಂದ ಪೊಲೀಸರು, ಮನೆ ಪರಿಶೀಲನೆ ನಡೆಸಿದರು. ರಾತ್ರಿಯೆಲ್ಲ ಮನೆಯಲ್ಲಿಯೇ ಕುಳಿತಿದ್ದರೂ, ನಮಗೆ ಏನೂ ಹೇಳಲಿಲ್ಲ. ಮೊಬೈಲ್ ಕಿತ್ತುಕೊಂಡು ಮಗನಿಗೆ ಬರುವಂತೆ ಹೇಳುವಂತೆ ಹೇಳಿದ್ದರು.

    ಮತ್ತೆ ಬಂದು ಮನೆಯಲ್ಲಿದ್ದ ಮೆಮೊರಿ ಕಾರ್ಡ್, ಪೆನ್‍ಡ್ರೈವ್ ರೀತಿಯಲ್ಲಿರುವ ಒಂದು ವಸ್ತು, ಚಿಕಿತ್ಸೆಗಾಗಿ ತೆಗೆದಿಟ್ಟಿದ್ದ 50 ಸಾವಿರ ರೂ. ಮತ್ತು ದೇವರ ಮನೆಯಲ್ಲಿಟ್ಟಿದ್ದ ಕಿವಿಯೋಲೆಯನ್ನು ಮಹಿಳಾ ಪೇದೆ ತೆಗೆದುಕೊಂಡು ಹೋಗಿದ್ದಾರೆ. ಪಬ್ಲಿಕ್ ಟಿವಿ ಮೂಲಕ ಮಗನ ಬಂಧನದ ಸುದ್ದಿ ತಿಳಿಯಿತು. ಮನೆಯಲ್ಲಿ ವಯಸ್ಸಾದ ತಾಯಿಯೊಂದಿಗೆ ಇದ್ದೇನೆ. ನಾವಿಬ್ಬರೂ ಹೆಣ್ಣು ಮಕ್ಕಳೇ ಮನೆಯಲ್ಲಿದ್ದೇವೆ. ನಾವು ಅಮಾಯಕ. ಬೇರೆಯವರ ಸಂಚಿಗೆ ಮಗ ಬಲಿಯಾಗಿರಬೇಕು ಎಂದು ರಾಘವೇಂದ್ರ ತಾಯಿ ಅನುಮಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಹನಿ ಮನಿ ಕಾಮಿನಿ ಸುಳಿಯಲ್ಲಿ ಶಾಸಕರು – ಹಾರ್ಡ್ ಡಿಸ್ಕ್ ನಲ್ಲಿತ್ತು 10 ಜನರ ವಿಡಿಯೋ

    ಆತ ಯಾರೊಂದಿಗೆ ಹೆಚ್ಚು ಸೇರಲ್ಲ. ನಮಗೆ ಇಲ್ಲಿ ಯಾರೂ ಸಂಬಂಧಿಕರಿಲ್ಲ. ಎಲ್ಲಿ ಹೋಗಬೇಕು ಮತ್ತು ಯಾರನ್ನ ಸಂಪರ್ಕಿಸಬೇಕು ಎಂಬುವುದು ನಮಗೆ ಗೊತ್ತಿಲ್ಲ. ಇರೋ ಒಬ್ಬ ಮಗ ಯಾರ ತಂಟೆಗೂ ಹೋಗದವನು. ಆತ ತಪ್ಪು ಮಾಡಿಲ್ಲ ಎಂಬುವುದು ನನ್ನ ನಂಬಿಕೆ. ಒಂದು ವೇಳೆ ಪೊಲೀಸ್ ತನಿಖೆ ವೇಳೆ ತಪ್ಪಿತಸ್ಥ ಎಂದು ಸಾಬೀತಾದ್ರೆ ಮಗನೊಂದಿಗಿನ ಸಂಬಂಧವನ್ನು ಕಳೆದುಕೊಂಡು, ಅನಾಥಳಂತೆ ಮುಂದಿನ ಜೀವನ ನಡೆಸುತ್ತೇನೆ ಎಂದಿದ್ದರು.

  • ಹುಟ್ಟುಹಬ್ಬ ಆಚರಣೆಗೆ ಹೋಗಿದ್ದ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್

    ಹುಟ್ಟುಹಬ್ಬ ಆಚರಣೆಗೆ ಹೋಗಿದ್ದ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್

    ಚೆನ್ನೈ: ತನ್ನ ಹುಟ್ಟುಹಬ್ಬದ ಆಚರಣೆಗೆ ಹೊರಗೆ ಹೋಗಿದ್ದ ಅಪ್ರಾಪ್ತೆಯ ಮೇಲೆ 6 ಜನರು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

    ತೆಲಂಗಾಣದಲ್ಲಿ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮಾಸುವ ಮುನ್ನವೇ ತಮಿಳುನಾಡಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ತನ್ನ ಹುಟ್ಟುಹಬ್ಬವನ್ನು ಆಚರಿಸಲು ಪಾರ್ಕಿಗೆ ಹೋಗಿದ್ದ 11 ನೇ ತರಗತಿಯ ವಿದ್ಯಾರ್ಥಿನಿಯನ್ನು 6 ಜನ ದುಷ್ಕರ್ಮಿಗಳು ಅತ್ಯಾಚಾರ ಮಾಡಿದ್ದಾರೆ,

    ಈ ಘಟನೆ ಗುರುವಾರ ನಡೆದಿದ್ದು, ಅಂದು ತನ್ನ ಹುಟ್ಟುಹಬ್ಬ ಇದ್ದ ಕಾರಣ ಬಾಲಕಿ ತನ್ನ ಸ್ನೇಹಿತರ ಜೊತೆ ಹುಟ್ಟುಹಬ್ಬವನ್ನು ಆಚರಿಸಲು ಪಾರ್ಕ್ ಗೆ ಹೋಗಿದ್ದಾರೆ. ಪಾರ್ಟಿ ಮುಗಿಸಿ ರಾತ್ರಿ ಸುಮಾರು 9 ಗಂಟೆಗೆ ಮನೆಗೆ ವಾಪಸ್ ಬರುತ್ತಿದ್ದ ಬಾಲಕಿ ಮತ್ತು ಆಕೆಯ ಸ್ನೇಹಿತರನ್ನು ಅಡ್ಡಗಟ್ಟಿದ ಆರೋಪಿಗಳು ಆಕೆಯ ಗೆಳೆಯರನ್ನು ಥಳಿಸಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರಗೈದು ವಿಡಿಯೋ ಕೂಡ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಇದಾದ ನಂತರ ಮನೆಗೆ ಬಂದ ಬಾಲಕಿ ನಡೆದ ಘಟನೆಯ ಬಗ್ಗೆ ಮರುದಿನ ತನ್ನ ತಾಯಿಗೆ ವಿವರಿಸಿದ್ದಾಳೆ. ಆಗ ತಾಯಿ ಪೋಲಿಸ್ ಠಾಣೆಗೆ ದೂರು ನೀಡಿದ್ದು, ದೂರ ದಾಖಲಿಸಿಕೊಂಡ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇನ್ನೂ ಇಬ್ಬರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

  • ವೈದ್ಯೆಗೆ ಕೂಲ್ ಡ್ರಿಂಕ್ಸ್‌ನಲ್ಲಿ ವಿಸ್ಕಿ ಕುಡಿಸಿ ಅತ್ಯಾಚಾರಗೈದ ಪಾಪಿಗಳು

    ವೈದ್ಯೆಗೆ ಕೂಲ್ ಡ್ರಿಂಕ್ಸ್‌ನಲ್ಲಿ ವಿಸ್ಕಿ ಕುಡಿಸಿ ಅತ್ಯಾಚಾರಗೈದ ಪಾಪಿಗಳು

    – ಕೃತ್ಯವೆಸುಗುವಾಲೇ ಉಸಿರುಗಟ್ಟಿಸಿ ಕೊಂದ್ರು

    ಹೈದರಾಬಾದ್: ತೆಲಂಗಾಣದ ಪಶುವೈದ್ಯೆಗೆ ಕೂಲ್ ಡ್ರಿಂಕ್ಸ್ ನಲ್ಲಿ ವಿಸ್ಕಿ ಬೆರಸಿ ಕುಡಿಸಿ ನಾಲ್ವರು ಆರೋಪಿಗಳು ಅತ್ಯಾಚಾರ ಮಾಡಿದ್ದಾರೆ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗಗೊಂಡಿದೆ.

    26 ವರ್ಷದ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಬೈಕ್ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ, ಮೂವರು ಕ್ಲೀನರ್ ಗಳು ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿದ್ದರು.

    ಈ ಪ್ರಕರಣದ ವಿಚಾರಣೆ ನಡೆಸಿದಾಗ, ಆರೋಪಿಗಳು ಒಂದೂವರೆ ಬಾಟಲು ವಿಸ್ಕಿ, ಸ್ಯ್ನಾಕ್ಸ್ ಮತ್ತು ಕೂಲ್ ಡ್ರಿಂಕ್ಸ್ ಅನ್ನು ತೋಂಡುಪಲ್ಲಿ ಗ್ರಾಮದ ಬಳಿ ಖರೀದಿಸಿದ್ದಾರೆ. ಶಂಶಾಬಾದ್ ಟೋಲ್ ಗೇಟ್ ಬಳಿ ನಾಲ್ವರು ಕುಳಿತು ಮದ್ಯಪಾನ ಮಾಡಿದ್ದಾರೆ. ನಂತರ ಕೂಲ್ ಡ್ರಿಂಕ್ಸ್‍ಗೆ ವಿಷ್ಕಿ ಬೆರೆಸಿ ಪ್ರಿಯಾಂಕಳಿಗೆ ಕಡಿಯಲು ಒತ್ತಾಯ ಮಾಡಿದ್ದಾರೆ. ಕೃತ್ಯ ಎಸಗುವಾಗ ಎಲ್ಲಾ ಆರೋಪಿಗಳು ಕಂಠ ಪೂರ್ತಿ ಕುಡಿದಿದ್ದರು ಎಂದು ಪೊಲೀಸರು ಹೇಳಿದ್ದಾರೆ.

    ಟೋಲ್ ಗೇಟ್ ಸಮೀಪದಲ್ಲಿ ಮದ್ಯ ಖರೀದಿಸಿ ಕಂಠ ಪೂರ್ತಿ ಕುಡಿದಿರುವ ಆರೋಪಿಗಳು ನಂತರ ಯುವತಿಯನ್ನು ರೇಪ್ ಮಾಡಿದ್ದಾರೆ. ರೇಪ್ ಮಾಡುವ ಸಮಯದಲ್ಲಿ ಯುವತಿಯ ಬಾಯಿ ಮತ್ತು ಮೂಗುನ್ನು ಗಟ್ಟಿಯಾಗಿ ಮುಚ್ಚಿಕೊಂಡಿದ್ದರಿಂದ ಉಸಿರುಗಟ್ಟಿ ಪ್ರಿಯಾಂಕ ಸಾವನ್ನಪ್ಪಿದ್ದಾರೆ. ನಂತರ ಇವರು ದೇಹವನ್ನು ತೆಗೆದುಕೊಂಡು ಹೋಗಿ ಸೇತುವೆ ಕೆಳಗೆ ಪೆಟ್ರೋಲ್ ಹಾಕಿ ಸುಟ್ಟು ಬಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ರೇಪ್ ಮಾಡಿ ಮೃತ ದೇಹವನ್ನು ಸುಟ್ಟ ನಂತರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಮೊಹಮ್ಮದ್ ಆರೀಫ್ ಉಳಿದ ಮೂವರನ್ನು ಅರಮ್‍ಘರ್ ಎಕ್ಸ್ ರಸ್ತೆಗೆ ಡ್ರಾಪ್ ಮಾಡಿ ನಂತರ ನಾರಾಯಣಪೇಟೆಯಲ್ಲಿರುವ ತನ್ನ ಮನೆಗೆ ಹೋಗಿದ್ದಾನೆ. ಆದರೆ ತನಿಖೆ ವೇಳೆ ಟೋಲ್ ಗೇಟ್ ಸಿಬ್ಬಂದಿ ಲಾರಿ ಇಲ್ಲಿ ನಿಂತಿದ್ದನ್ನು ನೋಡಿದ್ದೇವೆ ಎಂದು ಹೇಳಿದ್ದಾರೆ. ನಂತರ ಲಾರಿ ಮಾಲೀಕ ಶ್ರೀನಿವಾಸ್ ರೆಡ್ಡಿಯನ್ನು ವಿಚಾರಣೆ ಮಾಡಿದಾಗ ಈ ನಾಲ್ವರ ಬಗ್ಗೆ ಗೊತ್ತಾಗಿದೆ.

    ಇದರಲ್ಲಿ ಪ್ರಮುಖ ಆರೋಪಿಯಾದ ಆರೀಫ್ ಲಾರಿ ಡ್ರೈವರ್ ಆಗಿದ್ದು, ಇನ್ನುಳಿದ ಜೊಲ್ಲು ಶಿವ, ಜೊಲ್ಲು ನವೀನ್ ಮತ್ತು ಚಿಂತಕುಂಟ ಚೆನ್ನಾಕೇಶಾವುಲು ಲಾರಿಯಲ್ಲಿ ಕ್ಲೀನರ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ನಾಲ್ವರನ್ನು ಪೊಲೀಸರು ಶುಕ್ರವಾರ ಅರೆಸ್ಟ್ ಮಾಡಿದ್ದಾರೆ. ಈ ನಾಲ್ವರು ಚಿಕ್ಕಂದಿನಿಂದಲೂ ಸ್ವೇಹಿತರಾಗಿದ್ದು, ಎಲ್ಲರೂ ಶಾಲೆಯನ್ನು ಬಿಟ್ಟು ಲಾರಿ ಓಡಿಸುವ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  • ಕಾನೂನು ವಿದ್ಯಾರ್ಥಿನಿಗೆ ಗನ್ ತೋರಿಸಿ ಗ್ಯಾಂಗ್‍ರೇಪ್ – 12 ಮಂದಿ ಅರೆಸ್ಟ್

    ಕಾನೂನು ವಿದ್ಯಾರ್ಥಿನಿಗೆ ಗನ್ ತೋರಿಸಿ ಗ್ಯಾಂಗ್‍ರೇಪ್ – 12 ಮಂದಿ ಅರೆಸ್ಟ್

    ರಾಂಚಿ: ಜಾರ್ಖಂಡ್‍ನಲ್ಲಿ ಕಾನೂನು ವಿದ್ಯಾರ್ಥಿನಿಗೆ ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ಮಾಡಿ, ಪರಾರಿಯಾಗಿದ್ದ 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ನವೆಂಬರ್ 26 ರಂದು ಸಂಜೆ 5.30 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ರಾಂಚಿಯ ಸಂಗ್ರಾಮಪುರದ ಬಳಿ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ತೆರೆಳಿದ್ದಳು. ಈ ವೇಳೆ ಆರೋಪಿಗಳ ಗುಂಪು ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತನನ್ನು ಅಡ್ಡಗಟ್ಟಿದ್ದರು. ಬಳಿಕ ಸ್ನೇಹಿತನನ್ನು ಕೆಲವರು ಹಿಡಿದುಕೊಂಡು ಹಲ್ಲೆ ನಡೆಸಿ, ವಿದ್ಯಾರ್ಥಿನಿಗೆ ಗನ್ ತೋರಿಸಿ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸೆಗಿದ್ದರು. ಇದನ್ನೂ ಓದಿ: ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

    ಈ ಸಂಬಂಧ ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬ ಕಾಂಕೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಕುರಿತು ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದರು. ವಿದ್ಯಾರ್ಥಿನಿ ದೂರಿನ ಆಧಾರದ ಮೇಲೆ ಪೊಲೀಸ್ ವರಿಷ್ಠಾಧಿಕಾರಿ(ಗ್ರಾಮೀಣ) ರಿಷಭ್ ಕುಮಾರ್ ಜಾ ನೇತೃತ್ವದಲ್ಲಿ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪಾರ್ಟಿ ಮುಗಿಸಿ ಮಲಗಿದ್ದ ಸ್ನೇಹಿತನ ಪತ್ನಿಯನ್ನು ರೇಪ್‍ಗೈದ ಟೆಕ್ಕಿ

    ಐಪಿಸಿ ಸೆಕ್ಷನ್, ಎಸ್‍ಸಿ ಮತ್ತು ಎಸ್‍ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಆರೋಪಿಗಳ ಬಳಿಯಿದ್ದ ಕಾರು, ಬೈಕ್, 2 ಗನ್, 8 ಮೊಬೈಲ್ ಫೋನ್ ಹಾಗೂ ಸಂತ್ರಸ್ತೆಯ ಬಳಿ ದೋಚಿದ್ದ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

  • ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

    ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

    – ಪಂಕ್ಚರ್ ಸರಿ ಮಾಡುವ ನೆಪದಲ್ಲಿ ರೇಪ್
    – ಸಿಸಿಟಿವಿ ದೃಶ್ಯಾವಳಿಯಿಂದ ಆರೋಪಿಗಳು ಪತ್ತೆ
    – ಕೃತ್ಯವೆಸೆಗಿದ ಟ್ರಕ್ ಡ್ರೈವರ್ ಸೇರಿ ನಾಲ್ವರು ಅರೆಸ್ಟ್

    ಹೈದರಾಬಾದ್: ತೆಲಂಗಾಣದಲ್ಲಿ ಪಶುವೈದ್ಯೆಯನ್ನು ಓರ್ವ ಟ್ರಕ್ ಚಾಲಕ ಸೇರಿದಂತೆ ಒಟ್ಟು ನಾಲ್ಕು ಮಂದಿ ಸಾಮೂಹಿಕ ಅತ್ಯಾಚಾರಗೈದು ಕೊಲೆ ಮಾಡಿ, ಘಟನಾ ಸ್ಥಳದಿಂದ 25 ಕಿ.ಮೀ ದೂರ ಶವವನ್ನು ಕೊಂಡೊಯ್ದು ಸುಟ್ಟಿರುವುದು ಬಯಲಾಗಿದೆ.

    ತೆಲಂಗಾಣದ ಕೊಲ್ಲೂರು ಗ್ರಾಮದ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಪಶುವೈದ್ಯೆಯಾದ ಪ್ರಿಯಾಂಕಾ ರೆಡ್ಡಿ, ಬುಧವಾರ ಬೆಳಗ್ಗೆ ಶಾದ್‍ನಗರದ ತನ್ನ ಮನೆಯಿಂದ ತಾನು ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ನಂತರ ರಾತ್ರಿ ಸ್ಕೂಟಿ ಪಂಕ್ಚರ್ ಆಗಿದೆ ಎಂದು ತನ್ನ ತಂಗಿಗೆ ಕರೆ ಮಾಡಿದ್ದರು. ಆ ಬಳಿಕ ಅವರ ನಾಪತ್ತೆಯಾಗಿದ್ದರು. ಆದರೆ ಗುರುವಾರ ಬೆಳಗ್ಗೆ ಶಾಡ್‍ನಗರದಲ್ಲಿ ಅಂಡರ್ ಬ್ರಿಡ್ಜ್ ನ ಕೆಳಗೆ ಪ್ರಿಯಾಂಕಾ ಶವವಾಗಿ ಪತ್ತೆಯಾಗಿದ್ದರು.

    ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ತೊಂಡುಪಲ್ಲಿ ಟೋಲ್ ಪ್ಲಾಝಾ ಬಳಿ ಬೆಳಗ್ಗೆ ವೈದ್ಯೆ ತನ್ನ ಸ್ಕೂಟಿ ಪಾರ್ಕ್ ಮಾಡಿ ಗಚಿಬೌಲಿಗೆ ತೆರೆಳಿದ್ದರು. ಇದನ್ನು ಲಾರಿ ಚಾಲಕ ಮಹ್ಮದ್ ಪಾಷಾ, ಆತನ ಸಹಾಯಕ ಹಾಗೂ ಇನ್ನೂ ಇಬ್ಬರು ಗಮನಿಸಿದ್ದರು. ಸಂಜೆ ವೈದ್ಯೆ ಸ್ಕೂಟಿ ತೆಗೆದುಕೊಂಡು ಹೋಗಲು ಬಂದೇ ಬರುತ್ತಾರೆ ಎಂದು ತಿಳಿದುಕೊಂಡು ಬೇಕಂತಲೆ ವಾಹನವನ್ನು ಪಂಕ್ಚರ್ ಮಾಡಿದ್ದರು.

    ರಾತ್ರಿ 8 ಗಂಟೆ ವೇಳೆಗೆ ಗಚಿಬೌಲಿಯಿಂದ ವಾಪಸ್ ಆಗಿದ್ದ ವೈದ್ಯೆ ಟೋಲ್ ಬಳಿ ಸ್ಕೂಟಿ ತೆಗೆದುಕೊಂಡು ಹೋಗಲು ಬಂದಿದ್ದರು. ಆಗ ಸ್ಕೂಟಿ ಪಂಚರ್ ಆಗಿದ್ದನ್ನು ನೋಡಿ ಏನು ಮಾಡುವುದು ಎಂದು ತೋಚದೇ ಆತಂಕದಲ್ಲಿದ್ದರು. ಈ ವೇಳೆ ಮೊದಲೇ ಪ್ಲಾನ್ ಮಾಡಿಕೊಂಡಿದ್ದ ಆರೋಪಿಗಳು ಪಂಕ್ಚರ್ ರಿಪೇರಿ ಮಾಡಲು ಸಹಾಯ ಮಾಡುತ್ತೇವೆ ಎಂದು ವೈದ್ಯೆಗೆ ನಂಬಿಸಿದರು. ಬಳಿಕ ಸಹಾಯ ಮಾಡುವ ನೆಪದಲ್ಲಿ ವೈದ್ಯೆಯನ್ನು ಟೋಲ್‍ನಿಂದ ತುಸು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿದರು. ನಂತರ ವೈದ್ಯೆಯನ್ನು ಕೊಲೆಗೈದು, ಮೃತದೇಹವನ್ನು ಸುಮಾರು 25 ಕಿ.ಮೀ ದೂರ ಕೊಂಡೊಯ್ದು ಶಾಡ್‍ನಗರದಲ್ಲಿ ಅಂಡರ್ ಬ್ರಿಡ್ಜ್ ಕೆಳಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನಾ ಸ್ಥಳದ ಹತ್ತಿರವಿದ್ದ ಟಯರ್ ರಿಪೇರಿ ಅಂಗಡಿ ಮಾಲೀಕನನ್ನು ವಿಚಾರಿಸಿದಾಗ, ರಾತ್ರಿ ಸುಮಾರು 9:30 ಗಂಟೆಯಿಂದ 10 ಗಂಟೆ ವೇಳೆಯಲ್ಲಿ ಚಾಲಕರು ಸ್ಕೂಟಿ ತೆಗೆದುಕೊಂಡು ಬಂದಿದ್ದರು. ರಿಪೇರಿ ಆದ ಬಳಿಕ ಅದನ್ನು ತೆಗೆದುಕೊಂಡು ಹೋಗಿದ್ದರು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಆಧಾರದ ಮೇಲೆ ಪೊಲೀಸರು ಆರೋಪಿಗಳ ಪತ್ತೆಗೆ ಹೊರಟಾಗ ಇಬ್ಬರು ಚಾಲಕರು ಸಿಕ್ಕಿಬಿದ್ದಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಆರೋಪಿಗಳ ಬಗ್ಗೆ ಪತ್ತೆಯಾಗಿದ್ದು, ಸದ್ಯ 4 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಟೋಲ್ ಪ್ಲಾಝಾ ಬಳಿ ಇದ್ದ ವೈದ್ಯೆಯ ಸ್ಕೂಟಿ, ಬಟ್ಟೆ, ಚಪ್ಪಲಿ ಹಾಗೂ ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರಿಯಾಂಕಾ ಅವರ ಬಗ್ಗೆ ತಂಗಿ ಭವ್ಯ ಮಾತನಾಡಿ, ನನಗೆ ಪ್ರಿಯಾಂಕಾ ರಾತ್ರಿ 9:15 ಸುಮಾರಿಗೆ ಕರೆ ಮಾಡಿದಳು. ನನ್ನ ಬೈಕ್ ಪಂಕ್ಚರ್ ಆಗಿದೆ. ನನಗೆ ಭಯವಾಗುತ್ತಿದೆ ಎಂದು ಹೇಳಿದಳು. ನಂತರ ನಾನು ಅವಳಿಗೆ ಹತ್ತಿರದ ಟೋಲ್ ಬಳಿ ಹೋಗಲು ಹೇಳಿದೆ. ಆದರೆ ಅವಳು ನನಗೆ ತುಂಬಾ ಭಯವಾಗುತ್ತಿದೆ. ಇಲ್ಲಿ ಯಾರೋ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿದ್ದಾರೆ ಹಾಗೂ ತುಂಬಾ ಲಾರಿಗಳನ್ನು ಪಾರ್ಕ್ ಮಾಡಲಾಗಿದೆ ಎಂದು ಹೇಳಿದ್ದಳು.

    ನಾನು ನಂತರ ಅವಳಿಗೆ ಭಯಪಡಬೇಡ ಬೈಕನ್ನು ಅಲ್ಲೇ ನಿಲ್ಲಿಸಿ ನೀನು ಅಲ್ಲಿಂದ ಬಾ ಎಂದು ಹೇಳಿದೆ. ನಂತರ ಮತ್ತೆ ಅವಳ ಫೋನ್‍ಗೆ ಕರೆ ಮಾಡಿದಾಗ ಅವಳ ಫೋನ್ ಸ್ವಿಚ್ ಆಫ್ ಬಂತು. ಆದರೆ ಬೆಳಗ್ಗೆ ಶಾಡ್‍ನಗರದಲ್ಲಿ ಅಂಡರ್ ಬ್ರಿಡ್ಜ್ ಕೆಳಗೆ ಪತ್ತೆಯಾಗದ ರೀತಿಯಲ್ಲಿ ಸುಟ್ಟು ಹೋದ ಅವಳ ದೇಹ ದೊರಕಿದೆ. ಆಕೆ ಹಾಕಿದ್ದ ಚೈನ್ ಲಾಕೆಟ್ ನೋಡಿ ನಾವು ದೇಹವನ್ನು ಗುರುತಿಸಿದೆವು ಎಂದು ಭವ್ಯ ತಿಳಿಸಿದ್ದರು.

  • ಅಪ್ರಾಪ್ತೆಯನ್ನ ಅತ್ಯಾಚಾರಗೈದು ಕೊಂದ ಕಾಮುಕನನ್ನು 20 ನಿಮಿಷದಲ್ಲಿ ಪತ್ತೆಹಚ್ಚಿದ ಶ್ವಾನ

    ಅಪ್ರಾಪ್ತೆಯನ್ನ ಅತ್ಯಾಚಾರಗೈದು ಕೊಂದ ಕಾಮುಕನನ್ನು 20 ನಿಮಿಷದಲ್ಲಿ ಪತ್ತೆಹಚ್ಚಿದ ಶ್ವಾನ

    ಲಕ್ನೋ: ಅಪ್ರಾಪ್ರೆಯನ್ನು ಅತ್ಯಾಚಾರ ಮಾಡಿ, ಕೊಲೆಗೈದಿದ್ದ ಕಾಮುಕನನ್ನು ಶ್ವಾನವೊಂದು ಕೇವಲ 20 ನಿಮಿಷದಲ್ಲಿ ಪತ್ತೆ ಮಾಡಿ ಉತ್ತರ ಪ್ರದೇಶ ಪೊಲೀಸರಿಗೆ ಸಹಾಯ ಮಾಡಿದೆ.

    ಉತ್ತರ ಪ್ರದೇಶದ ಅಝಮ್‍ಗಢ ಜಿಲ್ಲೆಯಲ್ಲಿ 5 ವರ್ಷದ ಬಾಲಕಿಯನ್ನು ಮನೆಯಿಂದ ಅಪಹರಿಸಿ, ಅತ್ಯಾಚಾರಗೈದು ಕೊಲೆ ಮಾಡಲಾಗಿತ್ತು. ಶುಕ್ರವಾರ ಬೆಳಗ್ಗೆ ಬಾಲಕಿಯ ಮೃತದೇಹ ಆಕೆಯ ಮನೆಯಿಂದ 400 ಮೀ ದೂರದಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಾ ಆರೋಪಿಗಾಗಿ ಬಲೆ ಬೀಸಿದ್ದರು. ಇದನ್ನೂ ಓದಿ:ಮಲಗಿದ್ದ ಶ್ವಾನಕ್ಕೆ ಹಿಗ್ಗಾಮುಗ್ಗ ಥಳಿಸಿದ ಸೆಕ್ಯೂರಿಟಿಗಾರ್ಡ್

    ಈ ಪ್ರಕರಣ ಭೇದಿಸಲು ಪೊಲೀಸರಿಗೆ ಶ್ವಾನವೊಂದು ಸಹಾಯ ಮಾಡಿದೆ. 4 ವರ್ಷದ ಫ್ಯಾಂಟಮ್ ಹೆಸರಿನ ಶ್ವಾನ ಗಡಿ ಭದ್ರತಾ ಪಡೆಯ ತರಬೇತಿ ಕೇಂದ್ರದ ಶ್ವಾನ ಶಾಲೆಯಲ್ಲಿ ತರಬೇತಿ ಪಡೆಯುತ್ತಿದೆ. ಈ ಶ್ವಾನ ಈ ಹಿಂದೆ ಪೊಲೀಸರಿಗೆ ಹಲವು ಪ್ರಕರಣಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಲು ಸಹಾಯ ಮಾಡಿದೆ. ಹೀಗಾಗಿ ಪೊಲೀಸರು ಸೋಮವಾರ ಫ್ಯಾಂಟಮ್ ಅನ್ನು ಕರೆದುಕೊಂಡು ಘಟನಾ ಸ್ಥಳಕ್ಕೆ ಭೇಟಿಕೊಟ್ಟಿದ್ದರು. ಈ ವೇಳೆ ಸ್ಥಳ ಹಾಗೂ ಅಲ್ಲಿ ಬಿದ್ದಿದ್ದ ಆರೋಪಿಯ ಬಟ್ಟೆಯ ಚೂರನ್ನು ಮೂಸಿದ ಶ್ವಾನ, ನೇರವಾಗಿ ಆರೋಪಿ ವಾಸಿಸುವ ಮನೆಗೆ ಪೊಲೀಸರನ್ನು ಕರೆಕೊಂಡು ಹೋಯಿತು. ಇದನ್ನೂ ಓದಿ:ಮನೆಗೆ ನುಗ್ಗಿ ಅಪ್ರಾಪ್ತೆಯನ್ನು ಅತ್ಯಾಚಾರಗೈದು ಬೆಂಕಿ ಹಚ್ಚಿದ ಕಾಮುಕ

    ಬಾಲಕಿ ಮೃತದೇಹ ಪತ್ತೆಯಾಗಿದ್ದ ಸ್ಥಳದಿಂದ ಸುಮಾರು 250 ಮೀ. ದೂರದಲ್ಲಿ ಆರೋಪಿ ವಾಸಿಸುತ್ತಿದ್ದನು. ಹೀಗಾಗಿ ಕೇವಲ 20 ನಿಮಿಷದಲ್ಲಿ ಶ್ವಾನವು ಆರೋಪಿ ಯಾರು ಎನ್ನುವುದನ್ನು ಪತ್ತೆಹಚ್ಚಿದೆ. ಆರೋಪಿಯನ್ನು ರಾಮ ಪರ್ವೇಶ್ ಚೌಹಾನ್(25) ಎಂದು ಗುರುತಿಸಲಾಗಿದೆ. ಇದನ್ನೂ ಓದಿ:ಅಪ್ರಾಪ್ತೆ ಮೇಲೆ ತಂದೆಯಿಂದಲೇ ಅತ್ಯಾಚಾರ- 8 ವರ್ಷ ಬಳಿಕ ಆರೋಪಿ ಅರೆಸ್ಟ್

    ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಹೇಗೆ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆಗೈದೆ ಎನ್ನುವುದನ್ನು ಪೊಲೀಸರಿಗೆ ವಿವರಿಸಿದ್ದಾನೆ. ಬಾಲಕಿ ಪೋಷಕರೊಂದಿಗೆ ಮನೆಯ ಮಹಡಿ ಮೇಲೆ ಮಲಗಿದ್ದಳು. ಆಕೆಯನ್ನು ನಾನು ಅಪಹರಿಸಿಕೊಂಡು ಬಂದು ಅತ್ಯಾಚಾರ ಮಾಡಿದೆ. ಬಳಿಕ ಆಕೆಯನ್ನು ಕೊಲೆಗೈದು ಸ್ಥಳದಿಂದ ಎಸ್ಕೇಪ್ ಆದೆ ಎಂದು ಆರೋಪಿ ಹೇಳಿದ್ದಾನೆ.

    ಸದ್ಯ ಈ ಸಂಬಂಧ ಆರೋಪಿ ವಿರುದ್ಧ ಕೊಲೆ, ಅತ್ಯಾಚಾರ ಪ್ರಕರಣ ಹಾಗೂ ಎಸ್‍ಸಿ/ಎಸ್‍ಸಿಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಪತ್ತೆಹಚ್ಚುವಲ್ಲಿ ಸಹಾಯ ಮಾಡಿದ ಶ್ವಾನದ ಕಾರ್ಯಕ್ಕೆ ಪೊಲೀಸರು ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಅಣ್ಣ ಓಡಿಹೋಗಿ ಮದ್ವೆಯಾಗಿದ್ದಕ್ಕೆ ತಮ್ಮನನ್ನು ಕಂಬಕ್ಕೆ ಕಟ್ಟಿ, ಸುಟ್ಟರು

    ಅಣ್ಣ ಓಡಿಹೋಗಿ ಮದ್ವೆಯಾಗಿದ್ದಕ್ಕೆ ತಮ್ಮನನ್ನು ಕಂಬಕ್ಕೆ ಕಟ್ಟಿ, ಸುಟ್ಟರು

    – ರೈಲ್ ಮಿಲ್‍ನಲ್ಲಿ ಸಜೀವ ದಹನ
    – ಮೂವರು ಆರೋಪಿಗಳು ಅರೆಸ್ಟ್

    ಚಂಡೀಗಢ: ಅಣ್ಣ ಯುವತಿಯೋರ್ವಳನ್ನು ಪ್ರೀತಿಸಿ ಓಡಿಹೋಗಿ ಮದುವೆಯಾದ ಸಿಟ್ಟಿಗೆ ತಮ್ಮನನ್ನು ಯುವತಿ ಕಡೆಯವರು ಕಂಬಕ್ಕೆ ಕಟ್ಟಿ, ಸಜೀವ ಸುಟ್ಟ ಅಮಾನವೀಯ ಘಟನೆ ಪಂಜಾಬ್‍ನಲ್ಲಿ ನಡೆದಿದೆ.

    ಶನಿವಾರ ಪಂಜಾಬ್‍ನ ಮಾನ್ಸಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಜಸ್ಪ್ರೀತ್ ಸಿಂಗ್(16) ಮೃತ ದುರ್ದೈವಿ. ಆರೋಪಿಗಳನ್ನು ಜಶನ್ ಸಿಂಗ್, ಗುರ್ಜಿತ್ ಸಿಂಗ್ ಹಾಗೂ ರಾಜು ಸಿಂಗ್ ಎಂದು ಗುರುತಿಸಲಾಗಿದೆ. ಜಸ್ಪ್ರೀತ್ ಅಣ್ಣ ಕುಲ್ವಿಂದರ್ ಸಿಂಗ್ ಹಾಗೂ ಆರೋಪಿ ಜಶನ್ ತಂಗಿ ರಾಜೋ ಕೌರ್ ಪ್ರೀತಿಸುತ್ತಿದ್ದರು. ಇಬ್ಬರೂ ಕೂಡ ದಲಿತ ಸಮುದಾಯದವರಾಗಿದ್ದರೂ ರಾಜೋ ಮನೆಯವರಿಗೆ ಕುಲ್ವಿಂದರ್ ಇಷ್ಟವಿರಲಿಲ್ಲ. ಹೀಗಾಗಿ ಎರಡು ವರ್ಷದ ಹಿಂದೆ ಕುಲ್ವಿಂದರ್ ಮತ್ತು ರಾಜೋ ಓಡಿ ಹೋಗಿ ಮದುವೆಯಾಗಿದ್ದರು. ಆದರೆ ಅವರಿಬ್ಬರನ್ನು ಗ್ರಾಮಕ್ಕೆ ಬರಲು ಮನೆಯವರು ಬಿಡುತ್ತಿರಲಿಲ್ಲ. ಇದನ್ನೂ ಓದಿ:ದಲಿತ ಯುವಕನನ್ನು ಪ್ರೀತಿಸಿದ ಮಗಳನ್ನು ಜೀವಂತ ಸುಟ್ಟ ತಾಯಿ

    ಅಲ್ಲದೆ ಈ ವಿಷಯಕ್ಕೆ ರಾಜೋ ಕುಟುಂಬ ಗ್ರಾಮದಲ್ಲಿ ತಲೆತಗ್ಗಿಸುವಂತಾಗಿತ್ತು. ಇದರ ನಡುವೆ ಜಸ್ಪ್ರೀತ್ ಪದೇ ಪದೇ ರಾಜೋ ಕುಟುಂಬಕ್ಕೆ ಇದೇ ವಿಚಾರಕ್ಕೆ ಹಿಯಾಳಿಸುತ್ತಿದ್ದನು. ಈ ಬಗ್ಗೆ ತಿಳಿದು ಬೇರೆ ಊರಿನಲ್ಲಿ ಪತ್ನಿ, ಮಗುವಿನೊಂದಿಗೆ ವಾಸಿಸುತ್ತಿದ್ದ ಜಶನ್ ಗ್ರಾಮಕ್ಕೆ ಮರುಳಿದ್ದನು. ಮೊದಲೇ ಅಣ್ಣ ಮರ್ಯಾದೆ ಹಾಳು ಮಾಡಿದ್ದಾನೆ, ಈಗ ತಮ್ಮ ಹೀಯಾಳಿಸುತ್ತಿದ್ದಾನೆ ಎಂದು ಜಶನ್ ಕೋಪಕೊಂಡಿದ್ದನು.

    ಇದೇ ಸಿಟ್ಟಲ್ಲಿ ಶನಿವಾರ ರಾತ್ರಿ ಜಸ್ಪ್ರೀತ್ ಒಬ್ಬನೇ ಸಿಕ್ಕಾಗ ಆತನನ್ನು ಜಶನ್ ಹಾಗೂ ಆತನ ಸ್ನೇಹಿತರು ಎಳೆದುಕೊಂಡು ಹೋಗಿದ್ದರು. ಮುಚ್ಚಿದ್ದ ರೈಸ್ ಮಿಲ್‍ನೊಳಗೆ ಜಸ್ಪ್ರೀತ್‍ನನ್ನು ಕರೆದೊಯ್ದು, ಕಂಬಕ್ಕೆ ಆತನನ್ನು ಕಟ್ಟಿ ಬೆಂಕಿ ಹಚ್ಚಿದ್ದರು. ಪರಿಣಾಮ ಜಸ್ಪ್ರೀತ್ ಸ್ಥಳದಲ್ಲೇ ಸಾವನ್ನಪ್ಪಿದ್ದನು. ಇದನ್ನೂ ಓದಿ:22 ವರ್ಷದ ಮಗಳಿಗೆ ವಿದ್ಯುತ್ ಶಾಕ್ ನೀಡಿ, ಕತ್ತು ಸೀಳಿದ ಪಾಪಿ ತಂದೆ

    ಇತ್ತ ಜಸ್ಪ್ರೀತ್ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಪೊಲೀಸರಿಗೆ ದೂರು ಕೊಟ್ಟಿದ್ದರು. ಜಸ್ಪ್ರೀತ್ ಹುಡುಕಾಟದಲ್ಲಿದ್ದ ಪೊಲೀಸರು ಭಾನುವಾರ ಆತನ ಮೃತದೇಹ ರೈಸ್ ಮಿಲ್‍ನಲ್ಲಿ ಪತ್ತೆಹಚ್ಚಿದ್ದಾರೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದು, ಮೂವರನ್ನು ಪೊಲೀಸರು ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

  • ಮನೆಗೆ ನುಗ್ಗಿ ಅಪ್ರಾಪ್ತೆಯನ್ನು ಅತ್ಯಾಚಾರಗೈದು ಬೆಂಕಿ ಹಚ್ಚಿದ ಕಾಮುಕ

    ಮನೆಗೆ ನುಗ್ಗಿ ಅಪ್ರಾಪ್ತೆಯನ್ನು ಅತ್ಯಾಚಾರಗೈದು ಬೆಂಕಿ ಹಚ್ಚಿದ ಕಾಮುಕ

    ಲಕ್ನೋ: 16 ವರ್ಷದ ಆಪ್ರಾಪ್ತೆಯನ್ನು ನೆರೆ ಮನೆ ವ್ಯಕ್ತಿ ಅತ್ಯಾಚಾರಗೈದು, ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಸಂಭಾಲ್ ಜಿಲ್ಲೆಯ ನಖ್ಸಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನಖ್ಸಾ ನಿವಾಸಿ ಝೀಷನ್ ಕೃತ್ಯವೆಸೆಗಿದ ಆರೋಪಿ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಬಾಲಕಿ ಮನೆಯ ಪಕ್ಕದಲ್ಲಿಯೇ ಆರೋಪಿ ವಾಸಿಸುತ್ತಿದ್ದನು. ಗುರುವಾರ ರಾತ್ರಿ ಬಾಲಕಿಯ ತಾಯಿ ಮತ್ತು ಸಹೋದರ ಕಾರ್ಯಕ್ರಮಕ್ಕೆ ಹೋಗಿದ್ದರು. ಹೀಗಾಗಿ ಬಾಲಕಿ ಒಬ್ಬಳೇ ಮನೆಯಲ್ಲಿ ಇದ್ದಳು. ಇದನ್ನೂ ಓದಿ:ದಲಿತ ಯುವಕನನ್ನು ಪ್ರೀತಿಸಿದ ಮಗಳನ್ನು ಜೀವಂತ ಸುಟ್ಟ ತಾಯಿ

    ಆಗ ಆರೋಪಿ ಏಕಾಏಕಿ ಬಾಲಕಿ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಬಳಿಕ ಈ ಬಗ್ಗೆ ದೂರು ಕೊಡುವುದಾಗಿ ಆರೋಪಿಗೆ ಬಾಲಕಿ ಹೆದರಿಸಿದಾಗ, ಭಯದಿಂದ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಇದನ್ನೂ ಓದಿ:ನಾಲ್ಕರ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಮನೆಗೆ ಬೆಂಕಿ ಹಚ್ಚಿದ ಮೂರು ಮಕ್ಕಳ ತಂದೆ

    ಈ ವೇಳೆ ಬಾಲಕಿಯ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ಮನೆ ಬಳಿ ಬರುತ್ತಿದ್ದಂತೆ ಆರೋಪಿ ಎಸ್ಕೇಪ್ ಆಗಿದ್ದಾನೆ. ತಕ್ಷಣ ಬಾಲಕಿಯನ್ನು ರಕ್ಷಿಸಿದ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ರವಾನಿಸಿದರು. ಘಟನೆಯಲ್ಲಿ ಶೇ. 70ರಷ್ಟು ಬಾಲಕಿಯ ದೇಹದ ಭಾಗ ಸುಟ್ಟು ಹೋಗಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

    ಬಾಲಕಿ ಕುಟುಂಬ ಶುಕ್ರವಾರ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಐಪಿಸಿ ಸೆಕ್ಷನ್ 376, 307, 452 ಹಾಗೂ 506ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿಯನ್ನು ಶುಕ್ರವಾರ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದು, ಆತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

  • ಡ್ರಾಪ್ ಕೊಡೋ ನೆಪದಲ್ಲಿ ಟೆಕ್ಕಿಯ ಸುಲಿಗೆ ಮಾಡಿದ ಆಟೋ ಚಾಲಕ

    ಡ್ರಾಪ್ ಕೊಡೋ ನೆಪದಲ್ಲಿ ಟೆಕ್ಕಿಯ ಸುಲಿಗೆ ಮಾಡಿದ ಆಟೋ ಚಾಲಕ

    ಬೆಂಗಳೂರು: ಡ್ರಾಪ್ ಕೊಡುವ ನೆಪದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರನ್ನು ಆಟೋ ಚಾಲಕ ಹಾಗೂ ಮೂವರು ದುಷ್ಕರ್ಮಿಗಳು ಸೇರಿ ಸುಲಿಗೆ ಮಾಡಿದ್ದಾರೆ.

    ಸಿಲಿಕಾನ್ ಸಿಟಿಯ ಜೆಪಿ ನಗರದ ಇಸ್ರೋ ಲೇಔಟ್‍ನಲ್ಲಿ ಈ ಘಟನೆ ನಡೆದಿದೆ. ಟೆಕ್ಕಿ ಜೆಫಿನ್ ಬಳಿ ಖದೀಮರು ಸುಲಿಗೆ ಮಾಡಿದ್ದಾರೆ. ಜೆಫಿನ್ ತಡರಾತ್ರಿ ಆಟೋಗೆ ಕಾಯುತ್ತಾ ನಿಂತಿದ್ದರು. ಈ ವೇಳೆ ಡ್ರಾಪ್ ಮಾಡುವುದಾಗಿ ಆಟೋ ಚಾಲಕ ಅವರನ್ನು ಆಟೋಗೆ ಹತ್ತಿಸಿಕೊಂಡಿದ್ದನು. ಬಳಿಕ ಮುಂದೆ ಇನ್ನೂ ಮೂವರನ್ನು ಆಟೋಗೆ ಹತ್ತಿಸಿಕೊಂಡಿದ್ದನು.

    ಇದಾದ ಕೆಲ ನಿಮಿಷಗಳಲ್ಲಿ ಚಾಲಕ ದಾರಿ ಮಧ್ಯೆ ಆಟೋ ನಿಲ್ಲಿಸಿದನು. ಬಳಿಕ ಆಟೋದಲ್ಲಿದ್ದ ಮೂವರು ಹಾಗೂ ಚಾಲಕ ಜೊತೆಗೂಡಿ ಟೆಕ್ಕಿ ಮೇಲೆ ಹಲ್ಲೆ ಮಾಡಿ ಅವರ ಬಳಿ ಇದ್ದ ಹಣ, ಪರ್ಸ್, ಮೊಬೈಲ್ ಕಸಿದುಕೊಂಡಿದ್ದಾರೆ.

    ಟೆಕ್ಕಿ ಬಳಿ ಇದ್ದಿದ್ದನ್ನೆಲ್ಲಾ ದೋಚಿದ ಬಳಿಕ ಅವರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಸದ್ಯ ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.