Tag: accused

  • ವಿಷಹಾಕಿ ನಾಯಿ ಕೊಂದು, ಮಾಲೀಕನನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದ್ರು

    ವಿಷಹಾಕಿ ನಾಯಿ ಕೊಂದು, ಮಾಲೀಕನನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದ್ರು

    ವಿಜಯಪುರ: ಮೊದಲು ನಾಯಿಗೆ ವಿಷಹಾಕಿ ಕೊಂದ ಬಳಿಕ ದುಷ್ಕರ್ಮಿಗಳು ಮಾಲೀಕನ ಕೊಲೆಗೆ ಸ್ಕೆಚ್ ಹಾಕಿ, ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಕೊಲೆಗೈದ ಘಟನೆ ವಿಜಯಪುರದಲ್ಲಿ ನಡೆದಿದೆ.

    ತಡರಾತ್ರಿ ಜಿಲ್ಲೆ ಆಲಮೇಲ ಪಟ್ಟಣದಲ್ಲಿ ದುಷ್ಕರ್ಮಿಗಳು ಈ ಕೃತ್ಯವೆಸೆಗಿದ್ದಾರೆ. ಆಲಮೇಲ ನಿವಾಸಿ ಬಸವರಾಜ್ ಗುರುಲಿಂಗಪ್ಪ ನನದಿ ಮೃತ ದುರ್ದೈವಿ. ಬಸವರಾಜ್ ಅವರನ್ನು ದುಷ್ಕಮಿಗಳು ತಡರಾತ್ರಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಬಸವರಾಜ್ ಪತ್ನಿಯನ್ನು ಹತ್ಯೆಗೈಯ್ಯಲು ದುಷ್ಕರ್ಮಿಗಳು ಪ್ರಯತ್ನಿಸಿದ್ದರು. ಈ ವೇಳೆ ಪತ್ನಿ ತೋಟದಲ್ಲಿ ಓಡಿಹೋಗಿ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ.

    ಕೆಲವು ದಿನಗಳ ಹಿಂದೆ ಬಸವರಾಜ್ ಅವರ ಮನೆಯಲ್ಲಿ ಸಾಕಿದ್ದ ನಾಯಿಗೆ ದುಷ್ಕರ್ಮಿಗಳು ವಿಷ ಹಾಕಿ ಕೊಂದಿದ್ದರು. ಇದೇ ಬೆನ್ನಲ್ಲೇ ಈಗ ನಾಯಿ ಮಾಲೀಕನ ಕೊಲೆ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಸದ್ಯ ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತ ಶ್ವಾನದಳದಿಂದ ದುಷ್ಕರ್ಮಿಗಳ ಪತ್ತೆಗೆ ಶೋಧಕಾರ್ಯ ನಡೆಯುತ್ತಿದೆ.

  • ಮದ್ಯಕ್ಕಾಗಿ ಹಣ ಕೇಳಿದ ಮಹಿಳೆಯನ್ನು ಜೀವಂತವಾಗಿ ಸುಟ್ಟ

    ಮದ್ಯಕ್ಕಾಗಿ ಹಣ ಕೇಳಿದ ಮಹಿಳೆಯನ್ನು ಜೀವಂತವಾಗಿ ಸುಟ್ಟ

    -ಸಲಾಕೆಯಿಂದ ಹೊಡೆದು ಜ್ಞಾನತಪ್ಪಿಸಿ ಬೆಂಕಿಯಿಟ್ಟ

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮದ್ಯ ಸೇವಿಸಲು ಹಣ ನೀಡುವಂತೆ ಪೀಡಿಸುತ್ತಿದ್ದ ಮಹಿಳೆಯನ್ನು ವ್ಯಕ್ತಿಯೋರ್ವ ಕಬ್ಬಿಣದ ಸಲಾಕೆಯಿಂದ ಹೊಡೆದು, ಜೀವಂತವಾಗಿ ಸುಟ್ಟು ಕೊಲೆಗೈದು ವಿಕೃತಿ ಮೆರೆದಿದ್ದಾನೆ.

    ಹೂಗ್ಲಿ ಜಿಲ್ಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಹೂಗ್ಲಿ ರೈಲು ನಿಲ್ದಾಣದ ಬಳಿಯ ಲೋರ‍್ಪಾರಾ ಪ್ರದೇಶದ ನಿವಾಸಿ ಸಂಜಯ್ ರಾಜಬಂಗ್ಶಿ ಆರೋಪಿ. ಲಕ್ಷ್ಮಿ ಕರ್ಮಾಕರ್(52) ಕೊಲೆಯಾದ ದುರ್ದೈವಿ. ಲಕ್ಷ್ಮಿ ಪಾಳು ಬಿದ್ದಿದ್ದ ರೈಲ್ವೆ ವಸತಿ ಗೃಹದಲ್ಲಿ ವಾಸಿಸುತ್ತಿದ್ದಳು. ಶುಕ್ರವಾರ ರಾತ್ರಿ ಮಹಿಳೆ ಸಂಜಯ್ ಬಳಿ ಕುಡಿಯಲು ಹಣ ಕೊಡುವಂತೆ ಪೀಡಿಸುತ್ತಿದ್ದಳು. ಎಷ್ಟೇ ಹೇಳಿದರೂ ಹಣ ಕೊಡು ಎಂದು ಕಾಟ ಕೊಡುತ್ತಿದ್ದಳು. ಇದರಿಂದ ಕೋಪಗೊಂಡ ಸಂಜಯ್ ಕಬ್ಬಿಣದ ಸಲಾಕೆಯಿಂದ ಮಹಿಳೆಗೆ ಹೊಡೆದಿದ್ದಾನೆ. ಆ ಬಳಿಕ ಆಕೆಯನ್ನು ಜೀವಂತವಾಗಿ ಸುಟ್ಟು ಕೊಲೆಗೈದಿದ್ದಾನೆ. ಇದನ್ನೂ ಓದಿ:ಕುಡಿಬೇಡ ಎಂದಿದ್ದಕ್ಕೆ ಅಪ್ರಾಪ್ತ ಮಗಳನ್ನೇ ಶೂಟ್ ಮಾಡಿದ ತಂದೆ

    ಈ ಬಗ್ಗೆ ತಿಳಿಯುತ್ತಿದಂತೆ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ಆರಂಭಿಸಿದ್ದಾರೆ. ವಿಚಾರಣೆ ವೇಳೆ ತಾನೇ ಮಹಿಳೆಯನ್ನು ಕೊಲೆ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ:ಹಣ ನೀಡದ್ದಕ್ಕೆ ಪೂಜೆ ಮಾಡುತ್ತಿದ್ದ ತಾಯಿಯನ್ನು ರಾಡ್‍ನಿಂದ ಹೊಡೆದು ಕೊಲೆಗೈದ ಮಗ

    ಈ ಹಿಂದೆ ಕೂಡ ಮಹಿಳೆ ಮದ್ಯ ಸೇವಿಸಲು ಹಣಕ್ಕಾಗಿ ಪೀಡಿಸಿದ್ದಳು. ಅ. 28ರಂದು ದುರ್ಗಾ ಪೂಜೆ ವೇಳೆ ನನ್ನ ತಾಯಿ ಬಳಿ ಹಣಕೊಡುವಂತೆ ಪೀಡಿಸಿ, ಅಸಭ್ಯವಾಗಿ ವರ್ತಿಸಿದ್ದಳು, ತಾಯಿಯನ್ನು ನಿಂದಿಸಿದ್ದಳು. ಆದ್ದರಿಂದ ಮಹಿಳೆಯನ್ನು ಕೊಲೆ ಮಾಡಿದೆ ಎಂದು ಆರೋಪಿ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ.

  • ಕೊಲೆ ಆರೋಪಿಯನ್ನ ಹಿಡಿದುಕೊಟ್ಟ ವ್ಯಕ್ತಿಗೆ ಸನ್ಮಾನ

    ಕೊಲೆ ಆರೋಪಿಯನ್ನ ಹಿಡಿದುಕೊಟ್ಟ ವ್ಯಕ್ತಿಗೆ ಸನ್ಮಾನ

    ಮಡಿಕೇರಿ: ನ್ಯಾಯಾಲಯ ಆವರಣದಲ್ಲಿನ ಶೌಚಾಲಯದ ಕಿಂಡಿಯಿಂದ ಪರಾರಿಯಾಗಿದ್ದ ಕೊಲೆ ಆರೋಪಿಯನ್ನು ಹಿಡಿದುಕೊಟ್ಟ ವ್ಯಕ್ತಿಯನ್ನು ಪೊಲೀಸರು ಸನ್ಮಾನಿಸಿದ್ದಾರೆ.

    ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಯಡವನಾಡಿನ ಸೂಳೆಭಾವಿಯ ರಾಮು ಪರಾರಿಯಾಗಿದ್ದ ಆರೋಪಿ. ಮೆಕ್ಯಾನಿಕ್ ಕೆಲಸ ಮಾಡುವ ರಫೀಕ್ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅವರ ಕಾರ್ಯಕ್ಕೆ ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಕೌಟುಂಬಿಕ ಕಲಹದಿಂದಾಗಿ ರಾಮು ತನ್ನ ಪತ್ನಿಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ. ಕುಶಾಲನಗರ ಪೊಲೀಸರು ನಿನ್ನೆಯಷ್ಟೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆದೊಯ್ದಿದ್ದರು. ನ್ಯಾಯಾಲಯದ ಆವರಣದಲ್ಲಿ ರಾಮು ಮೂತ್ರ ವಿಸರ್ಜನೆಗೆಂದು ಶೌಚಾಲಯಕ್ಕೆ ಹೋಗಿದ್ದ. ಆದರೆ ಶೌಚಾಲಯದ ಕಿಟಕಿಯಿಂದ ಜಿಗಿದು ಪರಾರಿಯಾಗಿದ್ದ.

    ಗುಡ್ಡೆಹೊಸೂರು ಸಮೀಪದ ತೆಪ್ಪದಕಂಡಿಯಲ್ಲಿ ಇಂದು ಓಡಾಡುತ್ತಿದ್ದ ರಾಮುನನ್ನು ಮೆಕ್ಯಾನಿಕ್ ರಫೀಕ್ ನೋಡಿದ್ದರು. ತಕ್ಷಣವೇ ಆತನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ರಫೀಕ್ ಅವರ ಕಾರ್ಯವನ್ನು ಗಮನಿಸಿ ಕುಶಾಲನಗರ ಡಿವೈಎಸ್‍ಪಿ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ರಫೀಕ್ ಅವರನ್ನು ಸನ್ಮಾನಿಸಿದ್ದಾರೆ.

  • ಮಹಿಳಾ ಟೆಲಿಕಾಲರ್ ಮೂಲಕ ಕರೆ ಮಾಡಿಸಿ ವಂಚಿಸುತ್ತಿದ್ದವನ ಬಂಧನ

    ಮಹಿಳಾ ಟೆಲಿಕಾಲರ್ ಮೂಲಕ ಕರೆ ಮಾಡಿಸಿ ವಂಚಿಸುತ್ತಿದ್ದವನ ಬಂಧನ

    ರಾಮನಗರ: ನಿಮಗೆ ಗಿಫ್ಟ್ ಅಫರ್ ಬಂದಿದೆ ಅದನ್ನು ಅಂಚೆಗೆ ಕಳುಹಿಸುತ್ತೇವೆ. ಅಲ್ಲಿ ಹಣ ಕೊಟ್ಟು ಪಡೆದುಕೊಳ್ಳಿ ಎಂದು ಮಹಿಳಾ ಟೆಲಿಕಾಲರ್ ಮೂಲಕ ಹೇಳಿಸಿ ಜನರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ನಮ್ಮ ಡಾಟಾ ಬೇಸ್‍ನಲ್ಲಿರುವ ಮೊಬೈಲ್ ನಂಬರ್ ಗಳ ಪೈಕಿ ನಿಮ್ಮ ಮೊಬೈಲ್ ಸಂಖ್ಯೆ ಲಕ್ಕಿ ಡ್ರಾನಲ್ಲಿ ಆಯ್ಕೆಯಾಗಿದೆ. ನಿಮ್ಮ ಹೆಸರಿಗೆ ಮೊಬೈಲ್ ಹಾಗೂ ಇನ್ನಿತರ ವಸ್ತುಗಳು ಬಹುಮಾನವಾಗಿ ಬಂದಿದೆ. ಅಂಚೆ ಕಚೇರಿಯಲ್ಲಿ ಹಣ ಕೊಟ್ಟು ಬಿಡಿಸಿಕೊಳ್ಳಿ ಎಂದು ಜನರನ್ನು ವಂಚಿಸುತ್ತಿದ್ದ ಆರೋಪಿಯನ್ನು ರಾಮನಗರ ಜಿಲ್ಲೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ವ್ಯಕ್ತಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಐವಾರ ಗ್ರಾಮದ ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಬಂಧಿತನಿಂದ 27 ಮೊಬೈಲ್, ಲ್ಯಾಪ್‍ಟಾಪ್, ಕಂಪ್ಯೂಟರ್, ಪ್ರಿಂಟರ್, 130 ತರಕಾರಿ ಕಟರ್ ಸೇರಿದಂತೆ ಮತ್ತಿತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಈತ ಮೈಸೂರು ಹಾಗೂ ಕೋಲಾರದಲ್ಲಿ ಕಾಲ್‍ಸೆಂಟರ್ ಗಳನ್ನು ತೆರೆದು ಮಹಿಳಾ ಟೆಲಿಕಾಲರ್ ಗಳ ಮೂಲಕ ಜನರನ್ನು ಸೆಳೆದು ನಂತರ ಪಾರ್ಸಲ್‍ನಲ್ಲಿ ತರಕಾರಿ ಕಟರ್ ಗಳನ್ನು ಕಳುಹಿಸಿ ಜನರನ್ನು ವಂಚಿಸುತ್ತಿದ್ದ. ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

  • ಕಾಶ್ಮೀರದಲ್ಲಿ 2 ಸರ್ಕಾರಿ ಶಾಲೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    ಕಾಶ್ಮೀರದಲ್ಲಿ 2 ಸರ್ಕಾರಿ ಶಾಲೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    – ಮಸೀದಿಯಲ್ಲಿ ಪ್ರಾರ್ಥನೆಗೆ ನಿಷೇಧ

    ಶ್ರೀನಗರ: ಕಣಿವೆ ರಾಜ್ಯ ಸದ್ಯ ಸಹಜ ಸ್ಥಿತಿಗೆ ಮರಳುತ್ತಿದೆ ಎನ್ನುವಾಗಲೇ ಮತ್ತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಎರಡು ಸರ್ಕಾರಿ ಶಾಲೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ವಿಕೃತಿ ಮೆರೆದ ಪರಿಣಾಮ ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆ ಮಾಡಲು ನಿಷೇಧ ಹೇರಲಾಗಿದೆ.

    ಗುರುವಾರ ರಾತ್ರಿ ದುಷ್ಕರ್ಮಿಗಳು ಎರಡು ಶಾಲೆಗೆ ಬೆಂಕಿ ಹಚ್ಚಿದ್ದಾರೆ. ಮೊದಲಿಗೆ ಚವಾಲ್ಗಾಮ್ ಪ್ರದೇಶದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಬೆಂಕಿ ಹಚ್ಚಿ, ಬಳಿಕ ಅದೇ ರೀತಿ ವಾಡೂನಲ್ಲಿರುವ ಮತ್ತೊಂದು ಶಾಲೆಗೂ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಹೀಗಾಗಿ ಶುಕ್ರವಾರ ಶ್ರೀನಗರದ ಜಾಮಿಯಾ ಮಸೀದಿಯಲ್ಲಿ ನಡೆಯಬೇಕಿದ್ದ ಸಾಮೂಹಿಕ ನಮಾಜ್ ಅನ್ನು ನಿಷೇಧಿಸಲಾಗಿತ್ತು. ಈ ವೇಳೆ ಈ ನಿರ್ಧಾರವನ್ನು ವಿರೋಧಿಸಿ ಶ್ರೀನಗರದಲ್ಲಿ ಯುವಕರು ಪ್ರತಿಭಟನೆ ನಡೆಸಿದ್ದರು.

    ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು, ಭದ್ರತಾ ಸಿಬ್ಬಂದಿ ಹಾಗೂ ಅವರ ವಾಹನಗಳ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಆಗ ಅವರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಹೀಗಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸ್ ಮತ್ತು ಸಿಆರ್‌ಪಿಎಫ್‌ ಸಿಬ್ಬಂದಿ ನಿಯೋಜಿಸಲಾಗಿದೆ.

    ಈ ಹಿಂದೆ ಗುರುವಾರ ಸಂಜೆ ಕಾಶ್ಮೀರದಲ್ಲಿ ಇಬ್ಬರು ಟ್ರಕ್ ಚಾಲಕರನ್ನು ಉಗ್ರರು ಗುಂಡಿಕ್ಕಿ ಕೊಲೆಗೈದಿದ್ದರು. ಜೊತೆಗೆ ಅವರ ಟ್ರಕ್‍ಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದರು.

    ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿತ್ತು. ರಾಜಸ್ಥಾನದ ಮೊಹಮ್ಮದ್ ಇಲಿಯಾಸ್ ಮತ್ತು ಪಂಜಾಬ್‍ನ ಜೀವನ್ ಮೃತ ಚಾಲಕರು. ಈ ಇಬ್ಬರು ಚಾಲಕರನ್ನು ಉಗ್ರರು ಗುರುವಾರ ಗುಂಡಿಕ್ಕಿ ಕೊಂದಿದ್ದರು. ಸೇಬು ಹಣ್ಣುಗಳನ್ನು ತುಂಬಿಸಿಕೊಳ್ಳಲು ತೆರಳಿದ್ದ ಟ್ರಕ್‍ಗಳನ್ನು ಉಗ್ರರು ಅಡ್ಡಗಟ್ಟಿ, ಅದರೊಳಗಿದ್ದ ಚಾಲಕರನ್ನು ಗುಂಡಿಕ್ಕಿ ಕೊಲೆ ಮಾಡಿದ್ದರು. ಅಲ್ಲದೆ ಅವರ ಟ್ರಕ್‍ಗೆ ಬೆಂಕಿ ಹಚ್ಚಿದ್ದರು. ಈ ವೇಳೆ ಇನ್ನೋರ್ವ ಚಾಲಕ ಗಾಯಗೊಂಡಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

  • ಕಮಲೇಶ್ ತಿವಾರಿ ಹತ್ಯೆ – ಹುಬ್ಬಳ್ಳಿ ಮೂಲದ ವ್ಯಕ್ತಿಯ ಬಂಧನ

    ಕಮಲೇಶ್ ತಿವಾರಿ ಹತ್ಯೆ – ಹುಬ್ಬಳ್ಳಿ ಮೂಲದ ವ್ಯಕ್ತಿಯ ಬಂಧನ

    ಹುಬ್ಬಳ್ಳಿ: ಉತ್ತರ ಪ್ರದೇಶದ ಹಿಂದೂ ಮುಖಂಡ ಕಮಲೇಶ್ ತಿವಾರಿಯ ಕೊಲೆ ಪ್ರಕರಣ ಸಂಬಂಧ ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಹಳೆ ಹುಬ್ಬಳ್ಳಿಯ ಅರವಿಂದ ನಗರದ ಮೊಹಮ್ಮದ್ ಜಾಫರ್ ಸಾಧೀಕ್ ಎಂದು ಗುರುತಿಸಲಾಗಿದೆ. ರೈಲ್ವೆ ಇಲಾಖೆಯ ಕಾರ್ಯಾಗಾರದಲ್ಲಿ ನೌಕರನಾಗಿದ್ದ ಮೊಹಮ್ಮದ್ ನನ್ನು ತಿವಾರಿ ಹತ್ಯೆಯ ವಿಚಾರವಾಗಿ ಹಳೆ ಹುಬ್ಬಳ್ಳಿ ಪೊಲೀಸರು ಇಂದು ಬಂಧಿಸಿದ್ದಾರೆ.

    ರೈಲ್ವೆ ಇಲಾಖೆಯ ಕಾರ್ಯಾಗಾರದಲ್ಲಿ ನೌಕರನಾಗಿದ್ದ ಮೊಹಮ್ಮದ್, ಕೆಲ ವರ್ಷಗಳಿಂದ ಸಿಮಿ ಸೇರಿದಂತೆ ಹಲವು ಉಗ್ರ ಸಂಘಟನೆಗಳ ಜೊತೆ ಗುರುತಿಸಿಕೊಂಡಿದ್ದನು ಎನ್ನಲಾಗಿದೆ. ಈತ ಉತ್ತರ ಪ್ರದೇಶದ ಹಿಂದೂ ಮುಖಂಡ ಕಮಲೇಶ್ ತಿವಾರಿ ಹತ್ಯೆ ಪ್ರಕರಣದಲ್ಲಿ ಆಂತರಿಕ ಭದ್ರತಾ ವಿಭಾಗ (ಐ.ಎಸ್.ಡಿ) ಪೊಲೀಸರಿಗೆ ಬೇಕಾಗಿದ್ದನು. ಆದ್ದರಿಂದ ಇಂದು ಹಳೆ ಹುಬ್ಬಳ್ಳಿ ಪೊಲೀಸರು ಬಂಧಿಸಿ ಬಳಿಕ ಆರೋಪಿಯನ್ನು ಆಂತರಿಕ ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾರೆ. ಐ.ಎಸ್.ಡಿ ಯ ವಿಚಾರಣೆ ಬಳಿಕ ರಾಷ್ಟ್ರೀಯ ಭದ್ರತಾ ತಂಡದ ವಶಕ್ಕೆ ಆರೋಪಿಯನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

    ಕಮಲೇಶ್ ತಿವಾರಿ ಅವರು ಹಿಂದೂ ಸಮಾಜ ಪಾರ್ಟಿಯ ಮುಖ್ಯಸ್ಥರು ಹಾಗೂ ಹಿಂದೂ ಮಹಾಸಭಾ ಮಾಜಿ ನಾಯಕರಾಗಿದ್ದು, ಶುಕ್ರವಾರ ಲಕ್ನೋದಲ್ಲಿ ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಎಸ್‍ಐಟಿ ತಂಡ ರಚಿಸಲಾಗಿತ್ತು. ಘಟನೆ ನಡೆದ 24 ಗಂಟೆಯೊಳಗೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

    ಕಮಲೇಶ್ ತಿವಾರಿ 2015ರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳು ಕೊಲೆಗೈದಿದ್ದಾರೆ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದು ಬಂದಿದೆ.

  • ಕಳ್ಳತನಕ್ಕೆಂದು ಹೋಗಿ ಯುವತಿಯನ್ನು ಕೊಚ್ಚಿ ಕೊಂದ

    ಕಳ್ಳತನಕ್ಕೆಂದು ಹೋಗಿ ಯುವತಿಯನ್ನು ಕೊಚ್ಚಿ ಕೊಂದ

    ಡೆಹ್ರಾಡೂನ್: ಕಳ್ಳತನಕ್ಕೆಂದು ಹೋದ ಕಳ್ಳನೊಬ್ಬ ಯುವತಿಯನ್ನು ಕೊಚ್ಚಿ ಕೊಂದ ಘಟನೆಯೊಂದು ಶುಕ್ರವಾರ ಉತ್ತರಾಖಂಡದ ಉದಮ್‍ಸಿಂಗ್ ನಗರದಲ್ಲಿ ನಡೆದಿದೆ.

    ಪಿಂಕಿ ರಾವತ್(22) ಕೊಲೆಯಾದ ಯುವತಿ. ಮೂಲತಃ ಪೌರಿ ಗರ್ವಾಲ್ ಜಿಲ್ಲೆಯವಳಾಗಿರುವ ಪಿಂಕಿ, ತನ್ನ ಅಣ್ಣನ ಜೊತೆ ಕಾಶಿಪುರದಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ವಾಸಿಸುತ್ತಿದ್ದಳು. ಪಿಂಕಿ ಮೊಬೈಲ್ ಅಂಗಡಿಯಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದಳು.

    ಶುಕ್ರವಾರ ಮಧ್ಯಾಹ್ನ ಸುಮಾರು 12.30ಕ್ಕೆ ಪಿಂಕಿ ಮೊಬೈಲ್ ಅಂಡಗಿಯಲ್ಲಿ ಒಂಟಿ ಆಗಿದ್ದಳು. ಸ್ವಲ್ಪ ಹೊತ್ತಿನಲ್ಲೇ ಅಂಗಡಿ ಮಾಲೀಕ ಬರಬೇಕಾಗಿತ್ತು. ಈ ವೇಳೆ ಕಳ್ಳತನಕ್ಕೆಂದು ಅಂಗಡಿಗೆ ಬಂದ ಕಳ್ಳ ಯುವತಿಯನ್ನು ನೋಡಿದ್ದಾನೆ. ಬಳಿಕ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ಕಳ್ಳ ಅಂಗಡಿಗೆ ಬಂದು ಮೊಬೈಲ್ ಬೆಲೆ ಕೇಳುವ ರೀತಿ ನಾಟಕವಾಡಿದ್ದಾನೆ. ಆದರೆ ಪಿಂಕಿಗೆ ಮೊಬೈಲ್ ಬೆಲೆ ಗೊತ್ತಿರಲಿಲ್ಲ. ಹಾಗಾಗಿ ಆಕೆ ತನ್ನ ಮಾಲೀಕನಿಗೆ ಕರೆ ಮಾಡಿ ಮಾಹಿತಿ ಕೇಳಿದ್ದಾಳೆ ಎಂದು ಕಾಶಿಪುರದ ಎಸ್‍ಎಚ್‍ಒ ಅಧಿಕಾರಿ ಚಂದ್ರ ಮೋಹನ್ ಸಿಂಗ್ ತಿಳಿಸಿದ್ದಾರೆ.

    ಪಿಂಕಿ ಮಾಲೀಕನಿಗೆ ಕರೆ ಮಾಡಿದಾಗ ಆತ ಐದು ನಿಮಿಷದಲ್ಲಿ ಅಂಗಡಿಗೆ ಬರುವುದಾಗಿ ಹೇಳಿದ್ದರು. ಬಳಿಕ ಅಂಗಡಿಗೆ ಬಂದು ನೋಡಿದಾಗ ಪಿಂಕಿ ಕುತ್ತಿಗೆಯನ್ನು ಚಾಕುವಿನಿಂದ ಇರಿಯಲಾಗಿತ್ತು. ಪರಿಣಾಮ ಆಕೆ ತೀವ್ರ ರಕ್ತಸ್ರಾವವಾಗಿ ಕೆಳಗೆ ಬಿದ್ದು ನರಳಾಡುತ್ತಿದ್ದಳು.

    ಈ ಬಗ್ಗೆ ಮಾಲೀಕ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಆರೋಪಿ ಒಂದೂವರೆ ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟರಲ್ಲಿ ಪಿಂಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

    ಪೊಲೀಸರು ಆರೋಪಿಯನ್ನು ಕಂಡು ಹಿಡಿಯಲು ಸ್ಥಳದಲ್ಲಿರುವ ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಪೊಲೀಸರು ತಂಡವನ್ನು ರಚಿಸಿ ಪರಾರಿಯಾಗಿರುವ ಆರೋಪಿಯನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ.

  • ಭೈರತಿ ಸುರೇಶ್ ಹತ್ಯೆ ಯತ್ನ – ವಿಚಾರಣೆ ವೇಳೆ ಹುಚ್ಚನಂತೆ ಹೇಳಿಕೆ ಕೊಟ್ಟ ಆರೋಪಿ

    ಭೈರತಿ ಸುರೇಶ್ ಹತ್ಯೆ ಯತ್ನ – ವಿಚಾರಣೆ ವೇಳೆ ಹುಚ್ಚನಂತೆ ಹೇಳಿಕೆ ಕೊಟ್ಟ ಆರೋಪಿ

    -ನನ್ನ ಮಗ ಯಾಕೆ ಹೀಗೆ ಮಾಡಿದ್ನೋ ಗೊತ್ತಿಲ್ಲ: ಆರೋಪಿ ತಾಯಿ

    ಬೆಂಗಳೂರು: ಶಾಸಕ ಭೈರತಿ ಸುರೇಶ್ ಅವರನ್ನು ಇಂದು ಹತ್ಯೆ ಮಾಡಲು ಯತ್ನಿಸಿದ್ದ ಆರೋಪಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಆರೋಪಿ ಶಿವು ಹುಚ್ಚನಂತೆ ಹೇಳಿಕೆಯನ್ನು ನೀಡಿದ್ದಾನೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಶಾಸಕ ಭೈರತಿ ಸುರೇಶ್ ಅವರ ಕೊಲೆಗೆ ಯತ್ನಿಸಿದ್ದ ಆರೋಪಿ ಶಿವು ಅಲಿಯಾಸ್ ಶಿವಕುಮಾರ್‍ನನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ ಸುರೇಶ್ ಅವರಿಗೆ ಚಾಕು ಹಾಕಲು ಹೋಗಿದ್ಯಾಕೆ ಎಂದು ಪ್ರಶ್ನಿಸಿದರೆ ಅಯ್ಯೋ ದೇವರೆ ನಾನಾ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾನೆ ಮತ್ತು ಚಾಕು ಬಿದ್ದಿತ್ತು ಎತ್ತಿಕೊಂಡೆ ನನಗೆ ಅಷ್ಟೇ ನೆನಪಿರುವುದು ಎಂದು ಹೇಳಿದ್ದಾನೆ ಎನ್ನಲಾಗಿದೆ.

    ಈ ವಿಚಾರವಾಗಿ ಮಾತನಾಡಿರುವ ಆರೋಪಿ ತಾಯಿ ಕಮಲಮ್ಮ ನನ್ನ ಮಗ ಚೆನ್ನಾಗಿಯೇ ಇದ್ದ. ಯಾಕೆ ಹೀಗೆ ಮಾಡಿದ್ನೋ ಗೊತ್ತಿಲ್ಲ. ನಾನು ಕೆಲಸಕ್ಕೆ ಹೋಗಿದ್ದೆ. ನನ್ನ ಮೊಮ್ಮಗ ಬಂದು ಹೇಳಿದ್ಮೇಲೆ ಗೊತ್ತಾಯಿತು. ಒಂದು ವರ್ಷದ ಹಿಂದೆ ರೋಡ್ ನಲ್ಲಿ ಗಲಾಟೆ ಮಾಡಿದ್ದ. ಅಕ್ಕ ಪಕ್ಕದ ಮನೆಯ ಗೇಟ್ ನೆಲ್ಲ ಹೊಡೆದು ಹಾಕಿದ್ದ. ಬೆತ್ತಲೆಯಾಗಿ ಓಡಾಡಿದ್ದ. ಆದ್ದರಿಂದ ಅವನನ್ನು ನಿಮ್ಹಾನ್ಸ್ ಗೆ ಸೇರಿಸಿದ್ದೆವು ಎಂದು ಹೇಳಿದ್ದಾರೆ.

    ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಮೂರು ತಿಂಗಳು ಚಿಕಿತ್ಸೆ ಪಡೆದ ಮೇಲೆ ಸರಿಯಾಗಿದ್ದ. ಆದರೆ ಕಳೆದ ಕೆಲ ದಿನಗಳ ಹಿಂದೆ ಮೂರ್ಛೆ ರೋಗ ಕಾಣಿಸಿಕೊಂಡಿತ್ತು. ಅಂದಿನಿಂದ ಹೀಗೆ ಹುಚ್ಚನಂತೆ ಆಡುತ್ತಿದ್ದಾನೆ. ಇವತ್ತು ಭೈರತಿ ಸುರೇಶ್ ಅವರಿಗೆ ಚಾಕು ಹಾಕಲು ಹೋಗಿದ್ದ ಎಂದು ಕೇಳಿ ಅಘಾತವಾಗಿದೆ ಎಂದು ಶಿವು ತಾಯಿ ಕಮಲಮ್ಮ ಹೇಳಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಭೈರತಿ ಸುರೇಶ್, ಶಿವು ಮೊದಲು ನನ್ನ ಕಾರಿಗೆ ಗುದ್ದಿ ಮುಂದಕ್ಕೆ ಹೋದನು. ಮತ್ತೆ ವಾಪಸ್ ಬಂದು ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಆದರೆ ಗನ್ ಮ್ಯಾನ್ ಸಹಾಯದಿಂದ ಪಾರಾಗಿದ್ದೇನೆ ಎಂದು ಹೇಳಿದ್ದರು.

    ಶಿವು ತಾಯಿ ನಮ್ಮ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದರು. ಅವನ ಮನೆಯವರೆಲ್ಲರೂ ಒಳ್ಳೆಯವರು. ಈತ ಮಾತ್ರ ಸ್ವಲ್ಪ ಪೋಲಿಯಾಗಿದ್ದನು. ಶಿವು ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದನು. ಆದರೆ ಯಾಕೆ ಹೀಗೆ ಮಾಡಿದನೆಂದು ನನಗೆ ಗೊತ್ತಾಗುತ್ತಿಲ್ಲ ಎಂದು ತಿಳಿಸಿದ್ದರು.

  • ನಾವು ತಪ್ಪು ಮಾಡಿಲ್ಲ, ನ್ಯಾಯ ಕೊಡಿಸಿ- ಕಲಬುರ್ಗಿ ಹತ್ಯೆ ಆರೋಪಿಗಳ ಕೂಗು

    ನಾವು ತಪ್ಪು ಮಾಡಿಲ್ಲ, ನ್ಯಾಯ ಕೊಡಿಸಿ- ಕಲಬುರ್ಗಿ ಹತ್ಯೆ ಆರೋಪಿಗಳ ಕೂಗು

    ಧಾರವಾಡ: ಸಂಶೋಧಕ ಎಂ.ಎಂ.ಕಲಬುರ್ಗಿ ಹತ್ಯೆಗೆ ಸಂಬಂಧಿಸಿದಂತೆ ಎಸ್‍ಐಟಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಇದೇ ಮೊದಲ ಬಾರಿಗೆ ವಿಚಾರಣೆಗೆ ಆಗಮಿಸಿದ್ದ ಆರೋಪಿಗಳು ಕೋರ್ಟ್ ಆವರಣದಲ್ಲಿ ನಾವು ತಪ್ಪು ಮಾಡಿಲ್ಲ, ನಮಗೆ ನ್ಯಾಯ ಕೊಡಿಸಿ ಎಂದು ಕೂಗಿದ್ದಾರೆ.

    ಎಸ್‍ಐಟಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಇದೇ ಮೊದಲ ಬಾರಿಗೆ ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿದೆ. ಬೆಳಗಾವಿ, ಧಾರವಾಡ ಮತ್ತು ಮುಂಬೈನಲ್ಲಿದ್ದ ಐವರು ಆರೋಪಿಗಳನ್ನು ಇಂದು 3ನೇ ಹೆಚ್ಚುವರಿ ದಿವಾಣಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

    ಅಮೋಲ್ ಕಾಳೆ ಹೊರತುಪಡಿಸಿ ಅಮಿತ್ ಬದ್ದಿ, ಗಣೇಶ್ ಮಿಸ್ಕಿನ್, ಪ್ರವೀಣ್ ಚತುರ, ವಾಸುದೇವ ಸೂರ್ಯವಂಶಿ ಹಾಗೂ ಶರದ್ ಬಾಹು ಸಾಹೇಬರನ್ನು ಪೊಲೀಸರು ವಿಚಾರಣೆಗೆ ಹಾಜರುಪಡಿಸಿದ್ದರು. ಆದರೆ ಪ್ರಮುಖ ಆರೋಪಿ ಅಮೋಲ್ ಕಾಳೆಯನ್ನು ಅನಾರೋಗ್ಯದ ಹಿನ್ನೆಲೆ ಮೈಸೂರು ಕಾರಾಗೃಹದಿಂದ ಕರೆ ತಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣದ ಎಲ್ಲ ಆರೋಪಿಗಳನ್ನು ಅಕ್ಟೋಬರ್ 24ರಂದು ಹಾಜರುಪಡಿಸಲೇಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ ನ್ಯಾಯಾಧೀಶರು, ವಿಚಾರಣೆಯನ್ನು ಮುಂದೂಡಿದರು. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಶಂಕಿತ ಹಂತಕರಿಂದ ಸ್ಫೋಟಕ ಮಾಹಿತಿ-ಮಾಧ್ಯಮಗಳ ಜೊತೆ ಮಾತನಾಡಿದ ಪರಶುರಾಮ್ ವಾಗ್ಮೋರೆ ಮತ್ತು ಮನೋಹರ್ ಯಡವೆ

    ಬೆಳಗ್ಗೆ ನ್ಯಾಯಾಲಯ ಪ್ರವೇಶಿಸುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ನಾವು ಏನೂ ಮಾಡಿಲ್ಲ. ನಾವು ಅಮಾಯಕರಿದ್ದೇವೆ. ನಮ್ಮನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ, ನಮಗೆ ನ್ಯಾಯ ಕೊಡಿಸಿ ಎಂದು ಗೊಣಗುತ್ತಲೇ ಒಳಪ್ರವೇಶಿಸಿದ್ದರು.

    ಅಲ್ಲದೆ ಸಂಜೆ ಕೋರ್ಟ್ ನಿಂದ ತೆರಳುತ್ತಿದ್ದಾಗಲೂ ಅಮಿತ್ ಬದ್ದಿ ಹಾಗೂ ಇತರರು, ನಾವು ಅಮಾಯಕರಿದ್ದೇವೆ. ನಾವು ಏನೂ ಮಾಡಿಯೇ ಇಲ್ಲ. ಎಲ್ಲರೂ ನಮ್ಮನ್ನು ಈ ಪ್ರಕರಣದಲ್ಲಿ ಸಿಲಕಿಸುವ ಕೆಲಸ ಮಾಡುತ್ತಿದ್ದಾರೆ. ನಮಗೆ ನ್ಯಾಯ ಬೇಕು, ನ್ಯಾಯ ಕೊಡಿಸಿ ಎಂದು ಕೂಗಾಡುತ್ತಲೇ ಪೊಲೀಸ್ ವಾಹನ ಏರಿದರು.

    https://youtu.be/oKmyWQuoB5M

  • ಅಲಯನ್ಸ್ ವಿವಿಯ ಮಾಜಿ ವಿಸಿ ಕೊಲೆಗೆ 1 ಕೋಟಿ ಸುಪಾರಿ

    ಅಲಯನ್ಸ್ ವಿವಿಯ ಮಾಜಿ ವಿಸಿ ಕೊಲೆಗೆ 1 ಕೋಟಿ ಸುಪಾರಿ

    – ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸರು
    – ಹಳೆ ದ್ವೇಷ, ಆಸ್ತಿ ವ್ಯಾಜ್ಯದ ಕಲಹಕ್ಕೆ ಕೊಲೆ
    – ಇಬ್ಬರು ಆರೋಪಿಗಳು ಅರೆಸ್ಟ್

    ಬೆಂಗಳೂರು: ಮಂಗಳವಾರ ಕೊಲೆಯಾಗಿದ್ದ ಅಲಯನ್ಸ್ ವಿವಿಯ ಮಾಜಿ ವಿಸಿ ಅಯ್ಯಪ್ಪ ದೊರೆ ಕೊಲೆ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಆರ್ ಟಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

    ಆರ್.ಟಿ ನಗರದ ಮೈದಾನಕ್ಕೆ ವಾಯುವಿಹಾರಕ್ಕೆ ತೆರಳಿದ್ದ ಅಯ್ಯಪ್ಪ ಅವರನ್ನು ದುಷ್ಕರ್ಮಿಗಳ ತಂಡ ಕೊಲೆ ಮಾಡಿ ಪರಾರಿಯಾಗಿತ್ತು. ಈ ವಿಚಾರದಲ್ಲಿ ಅಲಯನ್ಸ್ ವಿವಿಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದ ಸುಧೀರ್ ಅಂಗೂರ್ ಮತ್ತು ಅಲಯನ್ಸ್ ಯುನಿವರ್ಸಿಟಿಯ ನೌಕರ ಸೂರಜ್ ಸಿಂಗ್ ನನ್ನು ಬಂಧಿಸಲಾಗಿದೆ.

    ಅಲಯನ್ಸ್ ವಿವಿ ಎರಡು ಬಣಗಳಾಗಿ ಕಚ್ಚಾಟ ನಡೆಯುತ್ತಿತ್ತು ಮತ್ತು ಈ ಕೊಲೆ ಹಿಂದೆ ಹಳೆ ದ್ವೇಷ, ಆಸ್ತಿ ವ್ಯಾಜ್ಯದ ವಿವಾದಗಳು ಕೇಳಿ ಬಂದಿದ್ದವು. ಈ ಕಾರಣಕ್ಕಾಗಿ ನಾನು ಸೂರಜ್ ಸಿಂಗ್‍ಗೆ ಅಯ್ಯಪ್ಪ ಅವರನ್ನು ಕೊಲೆ ಮಾಡಲು ಒಂದು ಕೋಟಿ ರೂ. ಗೆ ಸುಪಾರಿ ನೀಡಿದ್ದೆ ಎಂದು ಪೊಲೀಸರ ಮುಂದೆ ಅದ್ದರಿಂದ ಸುಧೀರ್ ಅಂಗೂರ್ ತಪ್ಪೊಪ್ಪಿಕೊಂಡಿದ್ದಾನೆ.

    ಕೊಲೆಗೆ ಕಾರಣ ಏನು?
    ಅಲಯನ್ಸ್ ವಿವಿ ಎರಡು ಬಣಗಳಾಗಿ ಕಿತ್ತಾಟ ನಡೆಯುತಿತ್ತು. ಈ ವಿಚಾರದಲ್ಲಿ ಸ್ಥಾಪಕ ಮಧುಕರ್ ಅಂಗೂರ್ ನನ್ನ ವಿವಿಯಿಂದ ಆತನ ಸಹೋದರಿ ಶೈಲಜಾ ಛಬ್ಬಿ ಹೊರಗೆ ಹಾಕಿದ್ದರು. ಇತ್ತೀಚೆಗೆ ಕಾಲೇಜಿನ ಆಡಳಿತವನ್ನು ಶೈಲಜಾ ಛಬ್ಬಿ ಹಾಗೂ ಮತ್ತೊಬ್ಬ ಸಹೋದರ ಸುಧೀರ್ ಅಂಗೂರ್ ನೋಡಿಕೊಳ್ಳುತ್ತಿದ್ದರು. ಅಯ್ಯಪ್ಪ ದೊರೆ ಈ ವಿಚಾರದಲ್ಲಿ ಶೈಲಜಾ ಛಬ್ಬಿ ಜೊತೆ ಮನಸ್ತಾಪ ಹೊಂದಿದರು ಎನ್ನಲಾಗಿದೆ. ಹೀಗಾಗಿ ಕಾಲೇಜಿನ ಅವ್ಯವಹಾರದ ಕೆಲವೊಂದು ದಾಖಲೆಗಳನ್ನು ಮಧುಕರ್ ಅಂಗುರ್‍ಗೆ ಅಯ್ಯಪ್ಪ ದೊರೆ ನೀಡಿದ್ದರು. ಹೀಗಾಗಿ ಅಯ್ಯಪ್ಪ ದೊರೆಯನ್ನು ಕೊಲೆ ಮಾಡಲಾಗಿದೆ ಎನ್ನುವ ವಿಚಾರ ತಿಳಿದು ಬಂದಿದೆ.

    ಮಂಗಳವಾರ ಕೊಲೆಯಾದ ಅಯ್ಯಪ್ಪ ದೊರೆಯ ಪತ್ನಿ ಭಾವನ ಸುಧೀರ್ ಅಂಗೂರ್ ಜೊತೆ ನನ್ನ ಗಂಡನಿಗೆ ಮನಸ್ತಾಪ ಇತ್ತು ಎಂದು ಹೇಳಿದ್ದರು. ಈ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಸುಧೀರ್ ಅಂಗೂರ್ ನನ್ನು ಠಾಣೆಗೆ ಕರೆಯಿಸಿ ವಿಚಾರಣೆ ಮಾಡಿದ್ದಾರೆ. ಆದರೆ ಹೇ ನಾನ್ಯಾಕೆ ಕೊಲೆ ಮಾಡಲಿ. ನನಗೂ ಇದಕ್ಕೂ ಏನ್ ಸಂಬಂಧ.? ನನಗೆ ಏನೂ ಗೊತ್ತೇ ಇಲ್ಲ ಎಂದು ನಾಟಕವಾಡಿದ್ದ ಸುಧೀರ್ ಅಂಗೂರ್, ನಮ್ಮಲ್ಲೇ ಅಯ್ಯಪ್ಪ ವಿಸಿ ಆಗಿದರು, ನಾನ್ಯಾಕೆ ಅವರನ್ನು ಕೊಲೆ ಮಾಡಿಸಲಿ. ಇತ್ತೀಚೆಗೆ ನಮಗೂ ಅವರಿಗೂ ಸಂಬಂಧ ಇರಲಿಲ್ಲ ಎಂದು ಹೇಳಿ ಪೊಲೀಸರ ದಿಕ್ಕು ತಪ್ಪಿಸಲು ಯತ್ನಿಸಿದ್ದನು.

    ಈ ರೀತಿ ಹೇಳಿದ್ದರೂ ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ತೀವ್ರಗೊಳಿಸಿದಾಗ ನಾನೇ ಅಯ್ಯಪ್ಪ ದೊರೆಯನ್ನು ಕೊಲೆ ಮಾಡಿಸಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ಅವರನ್ನು ಕೊಲೆ ಮಾಡಲು ನಮ್ಮ ಯುನಿವರ್ಸಿಟಿಯಲ್ಲಿ ಕೆಲಸ ಮಾಡುತ್ತಿದ್ದ ಸೂರಜ್ ಸಿಂಗ್ ಒಂದು ಕೋಟಿ ರೂ ಗೆ ಸುಪಾರಿ ನೀಡಿದ್ದೆ. ಅದರಂತೆ ಆರ್.ಟಿ ನಗರದ ಮೈದಾನದಲ್ಲಿ ವಾಕಿಂಗ್ ಮಾಡುತ್ತಿದ್ದ ಅಯ್ಯಪ್ಪ ನನ್ನು ಕೊಲೆ ಮಾಡಿದ್ದೆವು ಎಂದು ಒಪ್ಪಿಕೊಂಡಿದ್ದಾನೆ.

    ಇನ್ನೊಂದು ಕೊಲೆಗೂ ಸ್ಕೆಚ್
    ಅಯ್ಯಪ್ಪ ದೊರೆಯನ್ನು ಕೊಲೆ ಮಾಡಿದ ಆರೋಪಿಗಳು ಅ ದಿನವೇ ಅಯ್ಯಪ್ಪ ದೊರೆ ಸಹಾಯ ಮಾಡುತ್ತಿದ್ದ ವಿವಿ ಸ್ಥಾಪಕ ಮಧುಕರ್ ಅಂಗೂರ್ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು. ಅಯ್ಯಪ್ಪ ಅವರ ಕೊಲೆಯ ಹಿನ್ನೆಲೆಯಲ್ಲಿ ಪೊಲೀಸರು ಮಧುಕರ್ ಅವರ ಮನೆಗೆ ಭದ್ರತೆ ನೀಡಿದ್ದರಿಂದ ಸ್ಕೆಚ್ ಮಿಸ್ ಆಗಿತ್ತು.

    https://www.youtube.com/watch?v=QbTObw08blQ