Tag: accused

  • 2 ವರ್ಷ, 100 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾ.ರೇಖಾ

    2 ವರ್ಷ, 100 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾ.ರೇಖಾ

    ಕೋಲಾರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ, ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ 10 ವರ್ಷ ಜೈಲು, 1 ಲಕ್ಷ ರೂ. ದಂಡ ಹೀಗೆ ಒಂದಲ್ಲ ಎರಡಲ್ಲ ಕೇವಲ ಎರಡು ವರ್ಷಗಳಲ್ಲಿ ಬರೋಬ್ಬರಿ 100 ಪ್ರಕರಣಗಳಲ್ಲಿ ಅತ್ಯಾಚಾರ ಆರೋಪಿಗಳಿಗೆ ಶಿಕ್ಷೆ ವಿಧಿಸಿರುವ ಹೆಗ್ಗಳಿಕೆ ಕೋಲಾರ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಸಲ್ಲುತ್ತದೆ.

    ರಾಜ್ಯದಲ್ಲಿ ಹಾಗೂ ದೇಶದಲ್ಲೇ ಅತಿ ಕಡಿಮೆ ಅವಧಿಯಲ್ಲಿ ಅತೀ ಹೆಚ್ಚು ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸಿರುವ ಕೋಲಾರ 2ನೇ ಜಿಲ್ಲಾ ಸತ್ರನ್ಯಾಯಾಲಯದ ನ್ಯಾಯಾಧೀಶೆ ಬಿ.ಎಸ್.ರೇಖಾ ಅವರು ಕಳೆದ ಎರಡು ವರ್ಷಗಳಲ್ಲಿ 100 ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ.

    2017 ರಿಂದ 2019ರವರೆಗೆ ನೂರು ಪ್ರಕರಣಗಳಲ್ಲಿ 74 ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕಣಗಳಾದರೆ, 26 ಜಾತಿನಿಂದನೆ ಹಾಗೂ ಕೊಲೆ ಪ್ರಕರಣಗಳಾಗಿವೆ. ಈ 100 ಪ್ರಕರಣಗಳಲ್ಲಿ ನ್ಯಾಯಾಧೀಶೆ ಬಿ.ಎಸ್ ರೇಖಾರವರು ನೀಡಿರುವ ಶಿಕ್ಷೆ ಪ್ರಮಾಣಗಳನ್ನು ನೋಡೋದಾದರೆ, 3 ಪ್ರಕರಣಗಳಲ್ಲಿ ಮರಣ ದಂಡನೆ ಶಿಕ್ಷೆ, 11 ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ, 26 ಪ್ರಕರಣಗಳಲ್ಲಿ 10 ವರ್ಷ ಜೈಲು ಶಿಕ್ಷೆ ಮತ್ತು 39 ಪ್ರಕರಣಗಳಲ್ಲಿ 7 ವರ್ಷ ಜೈಲು ಶಿಕ್ಷೆ, 21 ಪ್ರಕರಣಗಳಲ್ಲಿ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ನೀಡಲಾಗಿದೆ ಎಂದು ಸರ್ಕಾರಿ ವಕೀಲ ಮುನಿಸ್ವಾಮಿ ಗೌಡ ಹೇಳಿದ್ದಾರೆ.

    ಇದರ ಜೊತೆಗೆ ವಿಶೇಷವಾಗಿ ಆಗಸ್ಟ್ 1 2018 ರಂದು ಮಾಲೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಿಶೇಷ ಕಾಳಜಿ ವಹಿಸಿದ ನ್ಯಾಯಾಲಯ ಕೇವಲ 45 ದಿನಗಳಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಇತಿಹಾಸ ಕೂಡ ಇದೆ. ಈ ನ್ಯಾಯಾಲಯದಲ್ಲಿ ಅತ್ಯಾಚಾರಿಗಳಿಗೆ ನಿರ್ದಾಕ್ಷಿಣ್ಯವಾಗಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರಾದ ರೇಖಾ ಅವರು ತಮ್ಮ 100ನೇ ಪ್ರಕರಣದಲ್ಲಿ ಮಂಗಳವಾರ ಶಿಕ್ಷೆ ವಿಧಿಸಿದ್ದು, ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಸಹಕರಿಸಿದ ಒಂದಿಡೀ ಕುಟುಂಬಕ್ಕೆ ಜೈಲು ಶಿಕ್ಷೆ ವಿಧಿಸಿದ್ದಾರೆ.

    ಕೋಲಾರದ ಎರಡನೇ ಜಿಲ್ಲಾಸತ್ರ ನ್ಯಾಯಾಲಯದ ತೀರ್ಪು, ಜಿಲ್ಲೆಯಲ್ಲಿ ಕಾಮುಕರಿಗೆ ಸಿಂಹಸ್ವಪ್ನವಾಗಿದ್ದು ಇಂತಹ ತೀರ್ಪುಗಳಿಂದ ಜಾಗೃತರಾಗಿರುವ ಕಾಮುಕರು ಅಪರಾಧ ಕೃತ್ಯ ಎಸಗಲು ಹೆದರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಅತ್ಯಾಚಾರ, ಕೊಲೆ ಹಾಗೂ ಜಾತಿನಿಂದನೆ ಪ್ರಕರಣಗಳು ಕ್ರಮೇಣ ಕಡಿಮೆಯಾಗಿದೆ. ನ್ಯಾಯ ದೇವತೆಗೆ ಹಾಗೂ ನ್ಯಾಯಾಧೀಶರ ತೀರ್ಪಿಗೆ ಜಿಲ್ಲಾಡಳಿತ ಕೂಡ ಶ್ಲಾಘನೆ ವ್ಯಕ್ತಪಡಿಸಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.

  • ದರೋಡೆ ಮಾಡಿದ್ದ ಆರೋಪಿ ಬಂಧನ – ಕೊಲೆ ಪ್ರಕರಣ ಬೆಳಕಿಗೆ

    ದರೋಡೆ ಮಾಡಿದ್ದ ಆರೋಪಿ ಬಂಧನ – ಕೊಲೆ ಪ್ರಕರಣ ಬೆಳಕಿಗೆ

    ಬೆಂಗಳೂರು: ಇಬ್ಬರೇ ವೃದ್ಧರು ಮನೆಯಲ್ಲಿರುವುದನ್ನು ಗಮನಿಸಿದ ದರೋಡೆಕೊರನೊಬ್ಬ ದಂಪತಿ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಒಡವೆ ಮತ್ತು ಹಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಶ್ರೀನಿವಾಸ್‍ನ್ (32) ಎನ್ನಲಾಗಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆಯ ಗೋಲ್ಡನ್ ಗೇಟ್ ಬಡಾವಣೆಯಲ್ಲಿ ಮುನೀರೆಡ್ಡಿ ಮತ್ತು ಜಯ್ಯಮ್ಮ ವೃದ್ಧ ದಂಪತಿ ವಾಸವಾಗಿದ್ದರು.

    ಆರೋಪಿ ಶ್ರೀನಿವಾಸನ್ ಇದೇ ತಿಂಗಳ 21 ರಂದು ವೃದ್ಧ ದಂಪತಿ ಇಬ್ಬರೇ ಇರುವುದನ್ನು ಗಮನಿಸಿದ್ದನು. ಕೊನೆಗೆ ಅಂದು ಸಂಜೆ ವೇಳೆ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ವೃದ್ಧ ದಂಪತಿಯ ಮೇಲೆ ಹಲ್ಲೆ ನಡೆಸಿ ಕೈಗೆ ಸಿಕ್ಕ ಚಿನ್ನಾಭರಣ ಹಾಗೂ ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದನು. ಈ ಕುರಿತು ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ.

    ಆರೋಪಿ ತಮಿಳುನಾಡಿನಲ್ಲಿ ಕೊಲೆಯೊಂದನ್ನು ಮಾಡಿರುವ ಬಗ್ಗೆ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಈ ಸಂಬಂಧ ತಮಿಳುನಾಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

  • ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಆರೋಪಿಗಳು ಹಲ್ಲೆ

    ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಆರೋಪಿಗಳು ಹಲ್ಲೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

    ವಸೀಂ ಹಾಗೂ ಫಯಾಜ್ ಎಂಬವರ ಮೇಲೆ ಕಾಲಿಗೆ ಹೆಣ್ಣೂರು ಇನ್ಸ್ ಪೆಕ್ಟರ್ ಕುಲಕರ್ಣಿ ಹಾಗೂ ಕೆ.ಜಿ ಹಳ್ಳಿ ಇನ್ಸ್ ಪೆಕ್ಟರ್ ಎಲ್ವಿನ್ ಗುಂಡು ಹಾರಿಸಿದ್ದಾರೆ. ಕೆಜಿ ಹಳ್ಳಿ ಕ್ರಾಸ್ ಬಳಿ ಮೇ 27ರಂದು ರೌಡಿಶೀಟರ್ ಶಾಹಿದ್‍ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಆರೋಪಿಗಳ ಪತ್ತೆಗೆ ಬಾಣಸವಾಡಿ ಎಸಿಪಿ ಮಹದೇವಪ್ಪ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಲಾಗಿತ್ತು.

    ಹಳೆ ದ್ವೇಷ ಹಾಗೂ ಹಣಕಾಸಿನ ವಿಚಾರವಾಗಿ ಆರೋಪಿಗಳು ಶಾಹಿದ್‍ನನ್ನು ಕೊಲೆ ಮಾಡಿದ್ದರು. ಕೊಲೆ ಮಾಡಿದ ಬಳಿಕ ಆರೋಪಿಗಳು ಹೆಣ್ಣೂರು ಸಮೀಪದ ಅರ್ಕಾವತಿ ಲೇಔಟ್ ನಲ್ಲಿದ್ದರು. ಖಚಿತ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಲು ಹೋಗಿದ್ದರು.

    ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವೇಳೆ ಪೊಲೀಸ್ ಪೇದೆ ಸಿದ್ದಲಿಂಗಯ್ಯ ತೋಳಿಗೆ ಗಾಯವಾಗಿದ್ದು, ಪ್ರಾಣ ರಕ್ಷಣೆಗೆ ಇಬ್ಬರು ಇನ್ಸ್ ಪೆಕ್ಟರ್ ಗಳು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.

    ವಸೀಂ ಬಲಗಾಲು ಹಾಗೂ ಫಯಾಜ್ ಎಡಗಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಾಯಿಯ ಮೇಲೆ ಅತ್ಯಾಚಾರ-ಆರೋಪಿಯನ್ನು ಪತ್ತೆ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ

    ನಾಯಿಯ ಮೇಲೆ ಅತ್ಯಾಚಾರ-ಆರೋಪಿಯನ್ನು ಪತ್ತೆ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ

    ಹೈದರಾಬಾದ್: ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ನಡೆಸಿರುವ ವೀಡಿಯೋ ಸದ್ಯ ಸಾಮಾಜಿಕ ತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ಅಂತರಾಷ್ಟ್ರೀಯ ಎನ್‍ಜಿಒ ಈ ಅಮಾನನವೀಯ ಕೃತ್ಯ ಎಸಗಿರುವ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಘೋಷಿಸಿದೆ.

    ಹ್ಯೂಮನ್ ಸೊಸೈಟಿ ಇಂಟರ್ನ್ಯಾಷನಲ್/ಇಂಡಿಯಾ (ಎಚ್‍ಎಸ್‍ಐ) ಹೆಸರಿನ ಸಂಸ್ಥೆ ಈ ದಿಟ್ಟ ನಿರ್ಧಾರವನ್ನು ಮಾಡಿದೆ. ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದರೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ.

    ಹೈದರಾಬಾದ್‍ನಲ್ಲಿ ನಾಯಿಯೊಂದರ ಮೇಲೆ ನಿರ್ಜನ ಕಟ್ಟಡವೊಂದರಲ್ಲಿ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ ವಿಡಿಯೋ ಎಲ್ಲೆಡೆ ಸದ್ದು ಮಾಡುತ್ತಿದೆ. ವಿಡಿಯೋದಲ್ಲಿ ಅಪರಿಚಿತ ಶಿಥಿಲ ಕಟ್ಟಡದಲ್ಲಿ ನಾಯಿಯೊಂದನ್ನು ವ್ಯಕ್ತಿ ಬಲವಂತವಾಗಿ ಹಿಡಿದಿಟ್ಟುಕೊಂಡು ಆ ಮೂಕ ಪ್ರಾಣಿಯ ಮೇಲೆ ಅತ್ಯಾಚಾರ ನಡೆಸಿರುವ ದೃಶ್ಯಗಳು ಸೆರೆಯಾಗಿದೆ. ಅಲ್ಲದೆ ನಾಯಿ ಆತನಿಂದ ತಪ್ಪಿಸಿಕೊಂಡು ಪಾರಾಗಲು ಯತ್ನಿಸಿದರು ಸಾಧ್ಯವಾಗದೇ ನರಳುತ್ತಿರುವ ದೃಶ್ಯ ನೋಡುಗರ ಮನಕಲಕುತ್ತದೆ.

    ಹಿಂಸಾತ್ಮಕ ಮನಸ್ಥಿತಿ ಇರುವ ಜನರು ಪ್ರಾಣಿಗಳಿಗೆ ಹಿಂಸೆ ನೀಡುತ್ತಾ ಮನುಷ್ಯತ್ವ ಮರೆತು ಕ್ರೌರ್ಯ ಮೆರೆಯುತ್ತಿದ್ದಾರೆ. ದಿನೇ ದಿನೇ ಕಾಮುಕರ ಹಾವಳಿ ಹೆಚ್ಚಾಗುತ್ತಲೇ ಇದೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಎಚ್‍ಎಸ್‍ಐ/ಭಾರತದ ವ್ಯವಸ್ಥಾಪಕ ನಿರ್ದೇಶಕ ಎನ್. ಜಿ. ಜಯಸಿಂಹ ಹೇಳಿದ್ದಾರೆ.

    ಈಗಾಗಲೇ ಈ ಸಂಬಂಧ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಪತ್ತೆಮಾಡಲು ತನಿಖೆ ಆರಂಭಿಸಿದ್ದಾರೆ.

  • ಕಾಲಿಗೆ ಗುಂಡು ಹಾರಿಸಿ ಅತ್ಯಾಚಾರಿಯ ಬಂಧನ – ಯುಪಿ ಸಿಂಗಂಗೆ ಪ್ರಶಂಸೆಯ ಸುರಿಮಳೆ

    ಕಾಲಿಗೆ ಗುಂಡು ಹಾರಿಸಿ ಅತ್ಯಾಚಾರಿಯ ಬಂಧನ – ಯುಪಿ ಸಿಂಗಂಗೆ ಪ್ರಶಂಸೆಯ ಸುರಿಮಳೆ

    ಲಕ್ನೋ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯ ಮೇಲೆ ಗುಂಡಿನ ದಾಳಿ ನಡೆಸಿ ಎನ್‍ಕೌಂಟರ್ ಸ್ಪಷಲಿಸ್ಟ್ ಅಜಯ್ ಶರ್ಮಾ ನೇತೃತ್ವದ ತಂಡ ಬಂಧಿಸಿದೆ.

    ಮೇ 7ರಂದು ರಾಮ್‍ಪುರ ಜಿಲ್ಲೆಯಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈಯಲಾಗಿತ್ತು. ಈ ಕೃತ್ಯವನ್ನು ನಝೀಲ್ ಎಸಗಿ ಪರಾರಿಯಾಗಿದ್ದ. ಈತನ ಶೋಧ ಕಾರ್ಯ ನಡೆಸುತ್ತಿದ್ದ ಪೊಲೀಸರು ಪರಾರಿಯಾಗುತ್ತಿದ್ದಾಗ ಕಾಲಿಗೆ ಶೂಟ್ ಮಾಡಿ ಬಂಧಿಸಿದ್ದಾರೆ.

    ಎನ್‍ಕೌಂಟರ್ ಸ್ಪೆಷಲಿಸ್ಟ್ ಐಪಿಎಸ್ ಅಧಿಕಾರಿ ಡಾ.ಅಜಯ್ ಪಾಲ್ ಶರ್ಮಾ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಮೂರು ಸುತ್ತು ಗುಂಡು ಹಾರಿಸಲಾಗಿದ್ದು, ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಕಾಲಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಅಧಿಕಾರಿಗೆ ಪ್ರಶಂಸೆ: ಆರೋಪಿ ಬಂಧನದ ಕುರಿತು ಟ್ವಿಟ್ಟರ್ ಮೂಲಕ ಶರ್ಮಾ ಪೊಲೀಸ್ ಇಲಾಖೆಗೆ ಧನ್ಯವಾದ ತಿಳಿಸಿದ್ದು, ಅತ್ಯಾಚಾರಿ ಮತ್ತು ಕೊಲೆಗಾರನ ವಿರುದ್ಧ ನಮ್ಮ ಕ್ರಮಕ್ಕೆ ಅಪಾರ ಬೆಂಬಲ ನೀಡಿದ್ದಕ್ಕೆ ಧನ್ಯವಾದಗಳು. ಸಹೋದರ ಮತ್ತು ಮಗ ಎಂದು ಹೇಳಿ ದೇಶದ ವಿವಿಧೆಡೆಯಿಂದ ಸಾವಿರಕ್ಕೂ ಅಧಿಕ ಜನ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ತಂಡದಲ್ಲಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಹೇಳಿಕೊಂಡಿದ್ದಾರೆ.

    ಶರ್ಮಾ ಅವರು 2011ನೇ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದು, ಲುಧಿಯಾನಾ ಸೇರಿದಂತೆ ಉತ್ತರ ಪ್ರದೇಶದ ವಿವಿಧೆಡೆ ಸುಮಾರು 8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ರಾಮ್‍ಪುರ ಜಿಲ್ಲೆಯ ಐಪಿಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

    ಆರೋಪಿಗಳ ಬಂಧನ ಹಾಗೂ ಎನ್‍ಕೌಂಟರ್‍ನಿಂದಲೇ ಉತ್ತರ ಪ್ರದೇಶ ಪೊಲೀಸರು ಸುದ್ದಿಯಲ್ಲಿದ್ದು, ಶರ್ಮಾ ಅವರನ್ನು ಯುಪಿ ಸಿಗಂ ಎಂದೇ ಬಣ್ಣಿಸಲಾಗುತ್ತಿದೆ.

  • ಬಂಧಿಸಲು ಹೋದಾಗ ಪೇದೆ ಮೇಲೆಯೇ ಹಲ್ಲೆ ಮಾಡಿದ ಆರೋಪಿ

    ಬಂಧಿಸಲು ಹೋದಾಗ ಪೇದೆ ಮೇಲೆಯೇ ಹಲ್ಲೆ ಮಾಡಿದ ಆರೋಪಿ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಫೈರಿಂಗ್ ನಡೆಸಿದ ಘಟನೆ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ನಡೆದಿದೆ.

    ರಾಹುಲ್ ಅಲಿಯಾಸ್ ಗೋವಿಂದನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. 22ರಂದು ವೇದ ಮೂರ್ತಿ ಎಂಬವರನ್ನು ರಾಹುಲ್ ಕೊಲೆಗೆ ಯತ್ನಿಸಿದ್ದನು. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದಾಗ ಆತ ಹಲ್ಲೆಗೆ ಮುಂದಾಗಿದ್ದಾನೆ.

    ಆರೋಪಿ ರಾಹುಲ್ ಮಾರಕಾಸ್ತ್ರಗಳಿಂದ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ರಾಹುಲ್ ಮೇಲೆ ಗುಂಡು ಹಾರಿಸಿದ್ದಾರೆ. ಇನ್ಸ್ ಪೆಕ್ಟರ್ ವೀರೇಂದ್ರ ಪ್ರಸಾದ್ ಅವರು ಆರೋಪಿ ರಾಹುಲ್ ಮೇಲೆ ಗುಂಡು ಹಾರಿಸಿದ್ದಾರೆ.

    ಈ ಘಟನೆಯಲ್ಲಿ ಗಾಯಗೊಂಡ ಪೇದೆ ಹಾಗೂ ಆರೋಪಿ ರಾಹುಲ್‍ನನ್ನು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ರಾಹುಲ್ ಮೇಲೆ ಕೊಲೆ ಯತ್ನ, ಡಕಾಯಿತಿ ಪ್ರಕರಣಗಳು ದಾಖಲಾಗಿತ್ತು. ಪೊಲೀಸರು ಬಹುದಿನಗಳಿಂದ ರಾಹುಲ್‍ಗಾಗಿ ಶೋಧಕಾರ್ಯ ನಡೆಸುತ್ತಿದ್ದರು.

    ತಡರಾತ್ರಿ ಸಿಕ್ಕ ಖಚಿತ ಮಾಹಿತಿ ಮೇರೆಗೆ ಬ್ಯಾಟರಾಯನಪುರ ಪೊಲೀಸರು ಬಂಧನಕ್ಕೆ ತೆರಳಿದ್ದರು. ಈ ವೇಳೆ ಆರೋಪಿ ರಾಹುಲ್ ಪೊಲೀಸರ ಮೇಲೆಯೇ ಮಚ್ಚು ಬೀಸಿದ್ದಾನೆ. ಆಗ ಬ್ಯಾಟರಾಯನಪುರ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಗುರಾಯಿಸಿದ್ದಕ್ಕೆ ಚಾಕು ಇರಿದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಿದ ಪೊಲೀಸರು

    ಗುರಾಯಿಸಿದ್ದಕ್ಕೆ ಚಾಕು ಇರಿದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಿದ ಪೊಲೀಸರು

    ಬೆಂಗಳೂರು: ಕೇವಲ ಗುರಾಯಿಸಿದ್ದ ಎಂಬ ಕಾರಣಕ್ಕೆ ಚಾಕು ಇರಿದ ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    2 ದಿನಗಳ ಹಿಂದೆ ಜೂನ್ 21 ರಂದು ಗುರಾಯಿಸಿದ್ದ ಎಂಬ ಕಾರಣಕ್ಕೆ ಅರುಣ್ ಎಂಬ ಯುವಕನನ್ನು ಚಾಕು ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಅಮೀರ್ ಎಂಬವನನ್ನು ಸಿದ್ದಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.

    ತಂದೆ ಜೊತೆ ಮಿಕ್ಸಿ ರಿಪೇರಿ ಕೆಲಸ ಮಾಡುತ್ತಿದ್ದ ಅರುಣ್ ಕೆಲಸ ಮುಗಿಸಿ ಮನೆಗೆ ಬರುವಾಗ ತಂದೆಯನ್ನು ಏರಿಯಾ ಹುಡುಗರು ಕಿಚಾಯಿಸಿದ್ದಾರೆ. ಈ ವೇಳೆ ತಂದೆಯನ್ನು ಕಿಚಾಯಿಸಿದ್ದಕ್ಕೆ ಅರುಣ್ ಹುಡುಗರ ಜೊತೆ ಜಗಳವಾಡಿದ್ದ. ನಂತರ ಅರುಣ್ ಮಾವ ಇಬ್ಬರಿಗೂ ಸಂಧಾನ ಮಾಡಿ ಮಾತುಕತೆ ನಡೆಸಿ ಬುದ್ಧಿವಾದ ಹೇಳಿ ಎಲ್ಲರನ್ನು ಮನೆಗೆ ವಾಪಸ್ ಕಳುಹಿಸಿದ್ದರು.

    ಮನೆಗೆ ವಾಪಸ್ ಹೋಗುವ ಸಮಯದಲ್ಲಿ ಅರುಣ್, ಆರೋಪಿ ಅಮೀರ್‍ ಗೆ ಗುರಾಯಿಸಿದ್ದಾನೆ. ಈ ಕಾರಣದಿಂದ ಆರೋಪಿ ಆಮೀರ್ ಅರುಣ್‍ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಈ ಪ್ರಕರಣವನ್ನು ಕೈಗೆತ್ತಿಕೊಂಡ ಸಿದ್ದಾಪುರ ಠಾಣಾ ಪೊಲೀಸರು ಮಿಂಚಿನ ಕಾರ್ಯಚರಣೆ ಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮೂವರು ಸೆಕ್ಸ್ ವರ್ಕರ್ ಮೇಲೆ ಒಂಬತ್ತು ಜನರಿಂದ ಗ್ಯಾಂಗ್‍ ರೇಪ್

    ಮೂವರು ಸೆಕ್ಸ್ ವರ್ಕರ್ ಮೇಲೆ ಒಂಬತ್ತು ಜನರಿಂದ ಗ್ಯಾಂಗ್‍ ರೇಪ್

    ನವದೆಹಲಿ: ಮೂವರು ಸೆಕ್ಸ್ ವರ್ಕರ್ ಮೇಲೆ ಒಂಬತ್ತು ಪುರುಷರು ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ.

    ಓರ್ವ ಕ್ಯಾಬ್ ಡ್ರೈವರ್ ಸೇರಿದಂತೆ 8 ಜನ ಖಾಸಗಿ ಭದ್ರತಾ ಸಿಬ್ಬಂದಿ ಸೆಕ್ಸ್ ವರ್ಕರ್ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆ ಬೆಳಗ್ಗೆ 5 ಗಂಟೆಗೆ ಬೆಳಕಿಗೆ ಬರುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮಂಗಳವಾರ ರಾತ್ರಿ ನಾವು ದೆಹಲಿಯ ಲಜಪತ್ ನಗರ ಮೆಟ್ರೋ ನಿಲ್ದಾಣದ ಬಳಿ ಗ್ರಾಹಕರಿಗಾಗಿ ಕಾಯುತ್ತಾ ನಿಂತಿದ್ದೀವಿ. ಈ ವೇಳೆ ಸ್ವಿಫ್ಟ್ ಡಿಸೈರ್ ಓಲಾ ಕ್ಯಾಬ್ ನಲ್ಲಿ ಬಂದ ಚಾಲಕ ನಮ್ಮನ್ನು ಕರೆದ ಎಂದು ದೂರುದಾರೆ ಮತ್ತು ಉಳಿದಿಬ್ಬರು ತಿಳಿಸಿದ್ದಾರೆ.

    ಪ್ರತಿ ಪುರುಷರಿಗೆ 3,000 ಸಾವಿರದಂತೆ ಡೀಲ್ ಕುದರಿಸಿದ್ದು, ಡೀಲ್ ಕುದರಿದ ಮೇಲೆ ನೊಯ್ಡಾದ ಸೆಕ್ಟರ್ 18ರಲ್ಲಿ ಇನ್ನೂ ಇಬ್ಬರು ಸ್ನೇಹಿತರು ಕಾಯುತ್ತಿದ್ದು, ಅಲ್ಲಿಗೆ ಹೋಗೋಣ ಎಂದು ಕರೆದೊಯ್ದಿದ್ದಾರೆ. ಪುರುಷರು ಸಂತ್ರಸ್ತ ಮಹಿಳೆಯರಿಗೆ 3,600 ರೂ. ಮುಂಗಡ ಹಣವನ್ನೂ ಪಾವತಿಸಿದ್ದಾರೆ ಎಂದು ಹಿರಿಯ ಎಸ್‍ಪಿ ವೈಭವ್ ಕೃಷ್ಣ ಅವರು ಮಾಹಿತಿ ನೀಡಿದ್ದಾರೆ.

    ನೊಯ್ಡಾದ ಸೆಕ್ಟರ್ 135ರಲ್ಲಿರುವ ಫಾರ್ಮ್ ಹೌಸ್‍ಗೆ ಮಹಿಳೆಯರನ್ನು ಕರೆದೊಯ್ದಿದ್ದಾರೆ. ಇಬ್ಬರು ಪುರುಷರು ಕಾರ್‍ನಲ್ಲಿರುವವರ ಜೊತೆಗೆ ಇನ್ನೂ 7 ಜನ ಪುರುಷರು ಫಾರ್ಮ್ ಹೌಸ್‍ಗೆ ಬಂದಿದ್ದಾರೆ. ಆಗ ಮಹಿಳೆಯರು ಹಿಂಜರಿಕೆಯಿಂದ ಕ್ಯಾಬ್‍ನಲ್ಲಿದ್ದ ಇಬ್ಬರು ಪುರುಷರಿಗೆ ತಮ್ಮನ್ನು ಮರಳಿ ದೆಹಲಿಗೆ ಬಿಡುವಂತೆ ಕೇಳಿಕೊಂಡಿದ್ದಾರೆ. ಇದಕ್ಕೊಪ್ಪದ ಪುರುಷರು ತಮ್ಮನ್ನು ಹೊಡೆದಿದ್ದು, ಹಲ್ಲೆ ಮಾಡಿ ಮುಂಗಡವಾಗಿ ಪಾವತಿಸಿದ ಹಣವನ್ನು ಕಿತ್ತುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಘಟನೆ ಸಂಬಂಧ ಫಾರ್ಮ್ ಹೌಸ್‍ನ್ನು ಸೀಜ್ ಮಾಡಲಾಗಿದೆ. ಈಗಾಗಲೇ 7 ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನು ಇಬ್ಬರು ಬಂಧನಕ್ಕೆ ಶೋಧ ಕಾರ್ಯ ಮುಂದುವರೆದಿದೆ ಎಂದು ವೈಭವ್ ಕೃಷ್ಣ ಹೇಳಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಒಂದೇ ತಿಂಗ್ಳಲ್ಲಿ 20 ಮನೆಗಳ್ಳತನ – ಪೊಲೀಸರೇ ಕಳ್ಳತನ ಮಾಡಿಸ್ತಾರೆ ಎಂದ ಮಾಜಿ ಸಚಿವ

    ಒಂದೇ ತಿಂಗ್ಳಲ್ಲಿ 20 ಮನೆಗಳ್ಳತನ – ಪೊಲೀಸರೇ ಕಳ್ಳತನ ಮಾಡಿಸ್ತಾರೆ ಎಂದ ಮಾಜಿ ಸಚಿವ

    ತುಮಕೂರು: ಜಿಲ್ಲೆಯ ಗ್ರಾಮಾಂತರ ಕ್ಷೇತ್ರದಲ್ಲಿ ಮನೆ ಕಳ್ಳತನ ಮಿತಿಮೀರಿದೆ. ಕಳೆದ ಒಂದೇ ತಿಂಗಳಲ್ಲಿ ಸರಿಸುಮಾರು 20 ಕ್ಕೂ ಹೆಚ್ಚು ಮನೆಗಳಿಗೆ ಕನ್ನಹಾಕಲಾಗಿದೆ ಎನ್ನಲಾಗಿದೆ. ಆದರೂ ಹೆಬ್ಬರೂ ಪೊಲೀಸರು ಕನಿಷ್ಠ ಪಕ್ಷ ದೂರು ದಾಖಲಿಸಿಕೊಳ್ಳದೇ ದಿವ್ಯ ಮೌನ ವಹಿಸಿದ್ದಾರೆ. ಪೊಲೀಸರೇ ನಿಂತು ಕಳ್ಳತನ ಮಾಡಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.

    ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದಾದ ಮೇಲೊಂದು ಮನೆಗಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಮನೆಯ ಬೀಗದ ಕೀಯನ್ನು ಕಿಟಕಿಯ ಪಕ್ಕದಲ್ಲೋ, ಬಾಗಿಲ ಮೇಲಕ್ಕೋ ಇಟ್ಟು ಹೋಗಿದ್ದನ್ನು ಗಮನಿಸುವ ಕಳ್ಳರು ಇಂತಹ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹಾಡಹಗಲೇ ಇಂತಹ ಮನೆಗಳಿಗೆ ರಾಜಾರೋಷವಾಗಿ ನುಗ್ಗಿ ಕಳ್ಳತನ ಮಾಡುತ್ತಿದ್ದಾರೆ. ಕೆಲ ಮನೆಗಳ ಬೀಗ ಮುರಿದು ಮಧ್ಯಾಹ್ನದ ವೇಳೆಯೇ ಕನ್ನ ಹಾಕಿದ್ದಾರೆ.

    ಸೋಮವಾರದಂದು ಹುಳ್ಳೇಹಳ್ಳಿ ಗ್ರಾಮದಲ್ಲೂ ಕಳ್ಳತನ ಘಟನೆ ನಡೆದಿದೆ. ತಿಮ್ಮೇಗೌಡ ಎಂಬವರ ಮನೆಯ ಕಿಟಕಿ ಮೇಲಿದ್ದ ಬೀಗದ ಕೀ ಬಳಸಿಕೊಂಡು ಕಳ್ಳನೋರ್ವ ಮನೆಯೊಳಗೆ ಪ್ರವೇಶಿಸಿದ್ದಾನೆ. ಬೀರುವಿನಲ್ಲಿದ್ದ 1.5 ಲಕ್ಷ ನಗದು, 200 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ಇದೇ ರೀತಿ ಡಿ.ಕೊರಟಗೆರೆ ಗ್ರಾಮದ ಕೃಷ್ಣಮೂರ್ತಿ ಆಚಾರ್ ಎಂಬವರ ಮನೆ ಬೀಗ ಮುರಿದು ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ.

    ಒಂದೇ ತಿಂಗಳಲ್ಲಿ ಸರಿಸುಮಾರು 20 ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣಗಳು ನಡೆದಿದೆ. ಆದರೆ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬುವುದು ಮನೆ ಮಾಲೀಕರ ಆರೋಪ. ಪ್ರಕರಣದ ಬಗ್ಗೆ ಕೇಳಲು ಹೋದರೆ ಕಳ್ಳರು ಸಿಕ್ಕಿದಾಗ ಕಳೆದು ಹೋದ ಮಾಲುಗಳನ್ನು ನಾವೇ ತಂದು ಕೊಡುತ್ತೇವೆ ಎಂದು ಸಮಾಧಾನ ಮಾಡಿ ಕಳಿಸುತ್ತಿದ್ದಾರೆ. ಅದರಲ್ಲೂ ಹೆಬ್ಬೂರು ಪೊಲೀಸ್ ಠಾಣೆಯವರಂತೂ ಕಳ್ಳರನ್ನು ಹಿಡಿಯುವ ಪ್ರಯತ್ನವೇ ಮಾಡುತಿಲ್ಲ ಎಂದು ಸಾರ್ವಜನಿಕರ ಆರೋಸಿಸುತ್ತಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿದ ಮಾಜಿ ಶಾಸಕ ಸುರೇಶ್ ಗೌಡ, ಹೆಬ್ಬೂರು ಠಾಣೆಯ ಪೇದೆ ಪುಟ್ಟರಾಜು ಹಾಗೂ ಪಿಎಸ್‍ಐ ಶ್ರೀಕಾಂತರ ಕರಿನೆರಳಿನಲ್ಲಿ ಕಳ್ಳತನ ನಡಿಯುತ್ತಿದೆ. ಒಂದಿಷ್ಟು ಯುವಕರನ್ನು ಬಿಟ್ಟು ಪೊಲೀಸರೇ ಕಳ್ಳತನ ಮಾಡಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಮನೆಗಳ್ಳತನದ ಜೊತೆಗೆ ಸರಗಳ್ಳತನ, ಹಸು-ಕುರಿಗಳ ಕಳ್ಳತನವೂ ಎಲ್ಲೆ ಮೀರಿದೆ. ಇವೆಲ್ಲದಕ್ಕೂ ಹೆಬ್ಬೂರು ಪೊಲೀಸರ ಕುಮ್ಮಕ್ಕು ಇದೆ. ಪೊಲೀಸರ ಪಾತ್ರ ಇಲ್ಲದೇ ಇದ್ದರೆ ಒಂದು ತಿಂಗಳಲ್ಲಿ ನಡೆದ ಸರಿಸುಮಾರು 20 ಪ್ರಕರಣದಲ್ಲಿ ಒಂದನ್ನಾದರೂ ಭೇದಿಸುತ್ತಿದ್ದರು ಅನ್ನೋದು ಸುರೇಶ್ ಗೌಡರ ವಾದವಾಗಿದೆ. ಒಟ್ಟಾರೆ ಗ್ರಾಮಾಂತರ ಕ್ಷೇತ್ರದಲ್ಲಿನ ಮನೆಗಳ್ಳತನದ ವಿಚಾರ ಪೊಲೀಸ್ ಇಲಾಖೆಗೆ ಮುಜುಗರ ತಂದಿದೆ.

  • ಕೋಟ್ಯಂತರ ರೂ. ಮೌಲ್ಯದ ಅಕ್ರಮ ಮರದ ದಂಧೆ ಭೇದಿಸಿದ ಕೊಡಗು ಪೊಲೀಸರು

    ಕೋಟ್ಯಂತರ ರೂ. ಮೌಲ್ಯದ ಅಕ್ರಮ ಮರದ ದಂಧೆ ಭೇದಿಸಿದ ಕೊಡಗು ಪೊಲೀಸರು

    ಮಡಿಕೇರಿ: ಅತೀ ದೊಡ್ಡ ಮರ ದಂಧೆಯನ್ನು ಕೊಡಗು ಪೊಲೀಸರು ಭೇದಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಿವಿಧ ಮರಗಳನ್ನು ವಿರಾಜಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ.

    ಕಿಂಗ್ ಪಿನ್ ಕಳ್ಳೀಚಂಡ ನೋಬಿನ್ ನಡೆಸುತ್ತಿದ್ದ ಅಕ್ರಮ ಮರ ದಂಧೆಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಕೊಡಗು ಎಸ್‍ಪಿ ಸುಮನ್ ಡಿ. ಪನ್ನೇಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮ ಮರ ಸಂಗ್ರಹ ಯಾರ್ಡ್ ನಲ್ಲಿದ್ದ ಕೋಟ್ಯಂತರ ರೂಪಾಯಿಗೆ ಬೆಲೆಬಾಳುವ ಮರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಕಳ್ಳೀಚಂಡ ನೋಬಿನ್‍ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ನಾಲ್ಕೇರಿಯಲ್ಲಿ ಮನೆಗೆ ಡಿಸಿಐಬಿ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳ ದಾಳಿ ನಡೆಸಿ, ಬೀಟೆ, ಹಲಸು, ಹೆಬ್ಬಲಸು ಮರಗಳನ್ನು ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಲಾರಿಗಳು ಮತ್ತು ಫಾರ್ಚೂನರ್, ಬೊಲೇರೋ ಕಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

    ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.