Tag: accused

  • ಗನ್ ತೋರಿಸಿ ಅಪ್ರಾಪ್ತ ಅಕ್ಕ-ತಂಗಿ ಮೇಲೆ ಗ್ಯಾಂಗ್‍ರೇಪ್

    ಗನ್ ತೋರಿಸಿ ಅಪ್ರಾಪ್ತ ಅಕ್ಕ-ತಂಗಿ ಮೇಲೆ ಗ್ಯಾಂಗ್‍ರೇಪ್

    ಲಕ್ನೋ: ಗದ್ದೆಗೆ ಹೋಗಿದ್ದ ಇಬ್ಬರು ಅಪ್ರಾಪ್ತೆಯರಿಗೆ ದುಷ್ಕರ್ಮಿಗಳು ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಮುಜಾಫರ್ ನಗರ ಸಮೀಪದ ಕೆಸರ್ವಾ ಗ್ರಾಮದಲ್ಲಿ ನಡೆದಿದೆ.

    ಕೆಸರ್ವಾ ಗ್ರಾಮದಲ್ಲಿ ಮಂಗಳವಾರದಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಗಳವಾರ ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ತಾಯಿಯನ್ನು ನೋಡಲು 13 ಮತ್ತು 15 ವರ್ಷದ ವಯಸ್ಸಿನ ಅಕ್ಕ- ತಂಗಿ ತೆರೆಳಿದ್ದರು. ಈ ವೇಳೆ ಮಾರ್ಗ ಮಧ್ಯದಲ್ಲಿ ಬಾಲಕಿಯರನ್ನು ಅಡ್ಡಗಟ್ಟಿದ್ದ ನಾಲ್ವರು ದುಷ್ಕರ್ಮಿಗಳು, ಅವರಿಗೆ ಗನ್ ತೋರಿಸಿ ಹೆದರಿಸಿದ್ದಾರೆ. ಬಳಿಕ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ದುಷ್ಟತನ ಮೆರೆದಿದ್ದಾರೆ.

    ಕಬ್ಬಿನಗದ್ದೆಯಲ್ಲಿಯೇ ನಾಲ್ವರು ದುಷ್ಕರ್ಮಿಗಳು ಸೇರಿ ಗನ್ ತೋರಿಸಿ ಬಾಲಕಿಯರಿಬ್ಬರನ್ನು ಬೆದರಿಸಿ ಸಾಮೂಹಿಕ ಅತ್ಯಾಚಾರ ಮಾಡಿ ಪರಾರಿಯಾಗಿದ್ದಾರೆ. ಬಳಿಕ ಸಂತ್ರಸ್ತೆಯರು ಈ ಬಗ್ಗೆ ತಮ್ಮ ಪೋಷಕರ ಬಳಿ ಹೇಳಿದ್ದಾರೆ. ಕೂಡಲೇ ಪೋಷಕರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ನಾಲ್ಕು ಮಂದಿಯ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

    ಉತ್ತರಪ್ರದೇಶದಲ್ಲಿ ಇತ್ತೀಚೆಗೆ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗ್ರಾಮೀಣ ಪ್ರದೇಶದಲ್ಲಿ ಗಸ್ತು ಹೆಚ್ಚಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

  • ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಪೊಲೀಸ್ – ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್

    ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಪೊಲೀಸ್ – ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್

    ಕೊಪ್ಪಳ: ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯೊಬ್ಬ ದೂರು ದಾಖಲಾಗುತಿದ್ದಂತೆಯೇ ಪರಾರಿಯಾಗಿದ್ದನು. ಈ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತ ಕೊಪ್ಪಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಕೊಪ್ಪಳದ ಕಾರಟಗಿ ಪೊಲೀಸರು ಆರೋಪಿ ಶರಣಪ್ಪ ಕೊತ್ವಾಲ್ ನನ್ನು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕಾಗಿ ಪಿಎಸ್‍ಐ ಶರತ್ ಕುಮಾರ್ ನೇತೃತ್ವದಲ್ಲಿ ಬಲೆ ಬೀಸಲಾಗಿತ್ತು. ಇದೀಗ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಕೊಪ್ಪಳದಲ್ಲಿ ಹುಡುಕಾಟ- ಪಕ್ಕದ ಗದಗದಲ್ಲಿ ಪೊಲೀಸರ ಜೊತೆ ಆರೋಪಿಯ ಪಾರ್ಟಿ

    ಕೊಪ್ಪಳದ ಕಾರಟಗಿ ತಾಲೂಕಿನ ಬುದೂಗೂಂಪ ನಿವಾಸಿಯಾದ ಶರಣಪ್ಪ ಕೊತ್ವಾಲ್ ವಿರುದ್ಧ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಹತ್ತಿರದ ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾಗುತಿದ್ದಂತೆಯೇ ಆರೋಪಿ ಶರಣಪ್ಪ ಕೊತ್ವಾಲ್ ತಲೆಮರೆಸಿಕೊಂಡಿದ್ದನು. ಈ ಕಡೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನೆಡಸಿದ್ದರು.

    ಇತ್ತೀಚೆಗೆ ಆರೋಪಿ ಶರಣಪ್ಪ ಕೊತ್ವಾಲ್ ಗದಗ ಜಿಲ್ಲೆಯ ಗಜೇಂದ್ರ ಗಡದ ಪಿ.ಎಸ್.ಐ ರಾಮಣ್ಣ ಅವರ ಜೋತೆ ಇರುವ ಫೋಟೋ ವೈರಲ್ ಆಗಿತ್ತು. ಫೋಟೊದಲ್ಲಿ ಆರೋಪಿ ಶರಣಪ್ಪ ಕೊತ್ವಾಲ್, ಬಾಗಲಕೋಟೆ ಭೂ ಮತ್ತು ಗಣಿ ಇಲಾಖೆ ಅಧಿಕಾರಿ ಕೃಷ್ಣ ವೇಣಿ ಮತ್ತು ಕೊಪ್ಪಳದ ಮಹಿಳಾ ಆಯೋಗದ ಸದಸ್ಯೆ ಮಾಲತಿ ನಾಯಕ್ ಕಾಣಿಸಿಕೊಂಡಿದ್ದರು.

    ಮಾಲತಿ ನಾಯಕ್ ಅವರ ಬರ್ತ್ ಡೇ ಕಾರ್ಯಕ್ರಮದಲ್ಲಿ ಆರೋಪಿ ಭಾಗಿಯಾಗಿರುವ ಖಚಿತ ಮಾಹಿತಿ ಆಧರಿಸಿ ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗಿತ್ತು. ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಕೊಪ್ಪಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಷ್ಟು ದಿನ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾನೆ.

  • ನನ್ನನ್ನು ಗಲ್ಲಿಗೇರಿಸಿ- ಅಪ್ರಾಪ್ತ ಬಾಲಕಿಯ ರೇಪ್ ಮಾಡಿ ಕೊಲೆಗೈದ ಆರೋಪಿಯ ಮನವಿ

    ನನ್ನನ್ನು ಗಲ್ಲಿಗೇರಿಸಿ- ಅಪ್ರಾಪ್ತ ಬಾಲಕಿಯ ರೇಪ್ ಮಾಡಿ ಕೊಲೆಗೈದ ಆರೋಪಿಯ ಮನವಿ

    ಭೋಪಾಲ್: ನಾನು ಕುಡಿದ ಅಮಲಿನಲ್ಲಿ ತಪ್ಪು ಮಾಡಿದ್ದೇನೆ. ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ್ದೇನೆ ಎಂದು ಆರೋಪಿಯೊಬ್ಬ ತನ್ನ ತಪ್ಪೊಪ್ಪಿಕೊಂಡು ಕೋರ್ಟ್ ನಲ್ಲಿ ನನ್ನನ್ನು ಗಲ್ಲಿಗೇರಿಸಿ ಎಂದು ಮನವಿ ಮಾಡಿಕೊಂಡಿದ್ದಾನೆ.

    ಕುಡಿದ ಅಮಲಿನಲ್ಲಿದ್ದೆ. ತಪ್ಪು ನಡೆದು ಹೋಯಿತು. ನನ್ನ ತಪ್ಪನ್ನು ಒಪ್ಪಿಕೊಂಡಿದ್ದೇನೆ. ನನ್ನನ್ನು ನೇಣಿಗೇರಿಸಿ ಎಂದು 9 ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ 32 ವರ್ಷದ ವಿಷ್ಣು ಪ್ರಸಾದ್ ಕೋರ್ಟ್ ಮುಂದೆ ಮೊರೆಯಿಟ್ಟಿದ್ದಾನೆ. ಮಧ್ಯ ಪ್ರದೇಶದ ಸಿಎಂ ಕಮಲ್‍ನಾಥ್ ಸಂತ್ರಸ್ತೆಯ ಕುಟುಂಬಕ್ಕೆ 48 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗುತ್ತದೆ ಮತ್ತು ಒಂದು ತಿಂಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದ್ದರು.

    ಈ ಹಿನ್ನೆಲೆಯಲ್ಲಿ ಭೋಪಾಲ್‍ನಲ್ಲಿ ನಡೆದ ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇವಲ 48 ಗಂಟೆಗಳಲ್ಲಿ ಮಧ್ಯಪ್ರದೇಶ ಪೊಲೀಸರು ಬೇಧಿಸಿದ್ದಾರೆ. ಕಮಲ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ 108 ಪುಟಗಳ ಚಾರ್ಜ್ ಶೀಟ್ ಹಾಕಲಾಗಿತ್ತು. ವಿಶೇಷ ಪೋಕ್ಸೋ ಕೋರ್ಟ್ ನಲ್ಲಿ ಬುಧವಾರ ಆರೋಪಿಯನ್ನು ಹಾಜರು ಪಡಿಸಲಾಗಿತ್ತು. ಅಲ್ಲಿ ನ್ಯಾಯಧೀಶರು ಆರೋಪಿಯ ವಿಚಾರಣೆ ನಡೆಸಿ, ಇಂದು ಪ್ರಕರಣವನ್ನು ಟ್ರಯಲ್ ಕೋರ್ಟ್ ಗೆ ವರ್ಗಾಯಿಸಲಾಗುತ್ತದೆ ಎಂದಿದ್ದರು.

    ಬುಧವಾರ ನಡೆದ ವಿಚಾರಣೆ ವೇಳೆ ನ್ಯಾಯಾಧೀಶರು ಆರೋಪಿಯನ್ನು ಈ ಕೃತ್ಯ ಎಸೆಗಲು ಕಾರಣ ಕೇಳಿದಾಗ, ನಾನು ಮದ್ಯದ ಅಮಲಿನಲ್ಲಿದ್ದೆ, ಆಗ ಇದೆಲ್ಲಾ ನಡೆದೋಯಿತು. ನನ್ನ ತಪ್ಪನ್ನು ಒಪ್ಪಿಕೊಂಡಿದ್ದೇನೆ. ನನ್ನನ್ನು ಗಲ್ಲಿಗೇರಿಸಿ ಎಂದು ಕೋರಿಕೊಂಡಿದ್ದಾನೆ. ಅಲ್ಲದೆ ಇದನ್ನು ಆಲಿಸಿದ ನ್ಯಾಯಾಧೀಶರು ಆತನನ್ನು ಜೈಲಿಗೆ ಕಳುಹಿಸಿ ಸದ್ಯ ಪ್ರಕರಣದ ವಿಚಾರಣೆಯನ್ನು ಮುಂದೂಡಿದ್ದಾರೆ.

    ಪ್ರಕರಣದ ವಿಚಾರಣೆ ಅಂತ್ಯಗೊಳ್ಳುವವರೆಗೆ ಪ್ರಸಾದ್‍ನನ್ನು ಜೈಲಿಗೆ ಕಳುಹಿಸಲಾಗಿದ್ದು, ಆತ್ಮಹತ್ಯೆ ಸಾಧ್ಯತೆ ಇರುವು ಬಗ್ಗೆ ಪೊಲೀಸರು ಜಾಗ್ರತೆ ವಹಿಸಿದ್ದು, ಇಂದೇ ಈ ಪ್ರಕರಣ ಸಂಬಂಧ ತೀರ್ಪು ನೀಡಲಾಗುವುದು ಎಂಬ ಮಾಹಿತಿ ದೊರಕಿದೆ. ಅಲ್ಲದೆ ಆರೋಪಿ ಪರ ಯಾವ ವಕೀಲರು ವಾದ ಮಂಡಿಸದ ಕಾರಣ ಕೋರ್ಟ್ ನಿಂದಲೇ ವಕೀಲರ ನೇಮಕ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

  • ಕೊಪ್ಪಳದಲ್ಲಿ ಹುಡುಕಾಟ- ಪಕ್ಕದ ಗದಗದಲ್ಲಿ ಪೊಲೀಸರ ಜೊತೆ ಆರೋಪಿಯ ಪಾರ್ಟಿ

    ಕೊಪ್ಪಳದಲ್ಲಿ ಹುಡುಕಾಟ- ಪಕ್ಕದ ಗದಗದಲ್ಲಿ ಪೊಲೀಸರ ಜೊತೆ ಆರೋಪಿಯ ಪಾರ್ಟಿ

    ಕೊಪ್ಪಳ: ಒಂದು ಕಡೆ ಆರೋಪಿಗಾಗಿ ಕೊಪ್ಪಳ ಜಿಲ್ಲಾ ಪೊಲೀಸರು ಹುಡುಕಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಅದೇ ಆರೋಪಿಯೊಂದಿಗೆ ಪಕ್ಕದ ಗದಗ ಜಿಲ್ಲಾ ಪೊಲೀಸರು ಬಿಂದಾಸ್ ಪಾರ್ಟಿ ಮೂಡ್‍ನಲ್ಲಿದ್ದಾರೆ.

    ಹೌದು, ಕಳೆದ ಹದಿನೈದು ದಿನದ ಹಿಂದೆ ಕೊಪ್ಪಳದ ಕಾರಟಗಿ ತಾಲೂಕಿನ ಬುದೂಗೂಂಪ ನಿವಾಸಿಯಾದ ಶರಣಪ್ಪ ಕೊತ್ವಾಲ್ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿತ್ತು.

    ಪ್ರಕರಣ ದಾಖಲಾದ ಕೂಡಲೇ ಆರೋಪಿ ಶರಣಪ್ಪ ಕೊತ್ವಾಲ್ ಎಸ್ಕೇಪ್ ಆಗಿದ್ದನು. ಪ್ರಕರಣ ದಾಖಲಿಸಿಕೊಂಡ ಕಾರಟಗಿ ಪೊಲೀಸರು ಆರೋಪಿಯನ್ನು ಹಿಡಿಯುವುದಕ್ಕೆ ಹರಸಹಾಸ ಪಡುತ್ತಿದ್ದಾರೆ. ಆದರೆ ನೆರೆಯ ಗದಗ ಜಿಲ್ಲೆಯ ಗಜೇಂದ್ರಗಢದ ಪಿ.ಎಸ್.ಐ ರಾಮಣ್ಣ ಮಾತ್ರ ಆರೋಪಿ ಜೊತೆ ಬರ್ತ್ ಡೇ ಪಾರ್ಟಿ ಮೂಡ್ ನಲ್ಲಿದ್ದಾರೆ.

    ಇತ್ತೀಚಿಗಷ್ಟೆ ಜೂನ್ 06 ರಂದು ಪಿ.ಎಸ್.ಐ ಪತ್ನಿ ಮಾಲತಿನಾಯಕ್ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು. ಈ ವೇಳೆ ಬಾಗಲಕೋಟೆ ಜಿಲ್ಲೆಯ ಭೂ ಮತ್ತು ಗಣಿ ಇಲಾಖೆ ಅಧಿಕಾರಿ ಕೃಷ್ಣವೇಣಿ ಸಹ ಆರೋಪಿ ಜೊತೆ ಕಾಣಿಸಿಕೊಂಡಿದ್ದಾರೆ. ಇದೀಗ ಆರೋಪಿ ಜೊತೆಗಿರುವ ಮೂರು ಜಿಲ್ಲೆಯ ಅಧಿಕಾರಿಗಳ ಫೋಟೋ ಸ್ಥಳೀಯಮಟ್ಟದಲ್ಲಿ ವೈರಲ್ ಆಗಿದ್ದು ಸಾಕಷ್ಟು ಅನುಮಾನಕ್ಕೆ ಎಡ ಮಾಡಿಕೊಡುತ್ತಿದೆ.

    ಆರೋಪಿ ಜೊತೆ ಮೂರು ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಬಿಂದಾಸ್ ಆಗಿರುವುದು, ಆರೋಪಿಯನ್ನು ಬಚಾವ್ ಮಾಡಲು ಪೊಲೀಸರೇ ಬೆಂಗಾವಲಾಗಿ ನಿಂತಿದ್ದಾರೆ ಎನ್ನುವ ಅನುಮಾನ ಸಾರ್ವಜನಿಕರಲ್ಲಿ ಮೂಡುತ್ತಿದೆ. ಆರೋಪಿಯನ್ನು ಗಜೇಂದ್ರಗಢ ಪೊಲೀಸ್ ಕ್ವಾರ್ಟರ್ಸ್ ನಲ್ಲಿಯೇ ಪಿಎಸ್‍ಐ 15 ದಿನಗಳಿಂದ ರಕ್ಷಣೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

  • ತಾಯಿ ಮೇಲಿದ್ದ ಆಸೆಗೆ 9 ವರ್ಷದ ಮಗಳನ್ನು ಅಪಹರಿಸಿದ

    ತಾಯಿ ಮೇಲಿದ್ದ ಆಸೆಗೆ 9 ವರ್ಷದ ಮಗಳನ್ನು ಅಪಹರಿಸಿದ

    ನವದೆಹಲಿ: ಪ್ರೀತಿಯನ್ನು ಮಹಿಳೆ ತಿರಸ್ಕರಿಸಿದ್ದಕ್ಕೆ ಸಿಟ್ಟಾದ ವ್ಯಕ್ತಿಯೊಬ್ಬ ಸೇಡಿಗಾಗಿ 9 ವರ್ಷ ಮಗಳನ್ನು ಅಪಹರಣಗೈದ ಘಟನೆ ದೆಹಲಿಯಲ್ಲಿ ನಡೆದಿದೆ.

    ಆರೋಪಿಯನ್ನು 28 ವರ್ಷದ ಕಮಲೇಶ್ ಎಂದು ಗುರುತಿಸಲಾಗಿದೆ. ಪತಿಯಿಂದ ದೂರವಾಗಿರುವ ಮಹಿಳೆ ತಾನೇ ದುಡಿದುಕೊಂಡು ಮೂವರು ಹೆಣ್ಣು ಮಕ್ಕಳು ಮತ್ತು ಮಗನನ್ನು ಸಾಕುತ್ತಿದ್ದಾಳೆ.

    ಮೂರು ತಿಂಗಳ ಹಿಂದೆ ಮಹಿಳೆ ಕಮಲೇಶ್ ನನ್ನು ಭೇಟಿಯಾಗಿದ್ದರು. ತಮ್ಮ ರೂಮ್‍ನ ಮೇಲ್ಛಾವಣಿ ರಿಪೇರಿ ಮಾಡಿಸಲು ಕಮಲೇಶ್‍ನನ್ನು ಮಹಿಳೆ ಕೆಲಸಕ್ಕೆ ಕರೆದಿದ್ದರು. ಹೀಗೆ ಕೆಲವು ಬಾರಿ ಭೇಟಿಯ ಬಳಿಕ ಆತನಿಗೆ ಮಹಿಳೆ ಮೇಲೆ ಪ್ರೀತಿ ಹುಟ್ಟಿದೆ. ಈ ಬಗ್ಗೆ ಮಹಿಳೆಗೆ ಕಮಲೇಶ್ ತಿಳಿಸಿ, ಮದುವೆಯಾಗೋಣ ಎಂದಾಗ ಆಕೆ ನಿರಾಕರಿಸಿದ್ದಾರೆ.

    ಇದರಿಂದ ಸಿಟ್ಟಿಗೆದ್ದ ಕಮಲೇಶ್ ಹೇಗಾದರೂ ಮಹಿಳೆಯನ್ನು ಮದುವೆಯಾಗಬೇಕು ಎಂದು ನಿರ್ಧಸಿದ್ದಾನೆ. ಆಗ ಆಕೆಯ ಮಗಳನ್ನು ಅಪಹರಿಸಿ, ಹೆದರಿಸಿ ಮಹಿಳೆಯನ್ನು ಮದುವೆಯಾಗಲು ಮುಂದಾಗಿದ್ದನು. ಭಾನುವಾರ ಅಂಗಡಿಗೆ ಬಾಲಕಿ ಹೋದಾಗ ಆಕೆಯನ್ನು ಆರೋಪಿ ಅಪಹರಿಸಿ ಉತ್ತರ ಪ್ರದೇಶಕ್ಕೆ ಕರೆದೋಯ್ದಿದ್ದಾನೆ. ಆದರೆ ಅಂಗಡಿಗೆ ಹೋದ ಮಗಳು ವಾಪಸ್ ಬಾರದೇ ಇದ್ದಾಗ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

    ಈ ಸಂಬಂಧ ಪೊಲೀಸರು ತನಿಖೆಗೆ ಇಳಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ದೆಹಲಿಯಿಂದ ಉತ್ತರ ಪ್ರದೇಶಶಕ್ಕೆ ಬಾಲಕಿಯನ್ನು ಆರೋಪಿ ರೈಲಿನಲ್ಲಿ ಕರೆದೋಯ್ಯುತ್ತಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಯುಪಿ ಪೊಲೀಸರಿಗೆ ದೆಹಲಿ ಪೊಲೀಸರು ತಿಳಿಸಿದ್ದಾರೆ. ಅವರ ಸಹಾಯದಿಂದ ಆರೋಪಿಯನ್ನು ಯಶಸ್ವಿಯಾಗಿ ಸೆರೆಹಿಡಿದು, ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದಾರೆ.

  • ರೇಷ್ಮಾ ಪಡೇಕನೂರ ಕೊಲೆ ಪ್ರಕರಣ- ಆರೋಪಿ ಬಂಧನ

    ರೇಷ್ಮಾ ಪಡೇಕನೂರ ಕೊಲೆ ಪ್ರಕರಣ- ಆರೋಪಿ ಬಂಧನ

    ವಿಜಯಪುರ: ಜೆಡಿಎಸ್‍ನ ವಿಜಯಪುರ ಮಾಜಿ ಜಿಲ್ಲಾಧ್ಯಕ್ಷೆ, ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಹತ್ಯೆಯ ಆರೋಪಿ ಕೊನೆಗೂ ಪೊಲೀಸರ ಬಲೆ ಬಿದ್ದಿದ್ದಾನೆ.

    ತೌಫಿಕ್ ಶೇಕ್ ಅಲಿಯಾಸ್ ಪೈಲ್ವಾನ್ ಬಂಧಿತ ಆರೋಪಿ. ಈತನನ್ನು ಪೊಲೀಸರು ಧೂಳಖೇಡ ಗ್ರಾಮದ ಬಳಿ ಬಂಧಿಸಿದ್ದಾರೆ. ಸೊಲ್ಲಾಪುರದ ಎಂಐಎಂ ಮುಖಂಡ ತೌಫಿಕ್ ಶೇಕ್ ಮೇ 17 ರಂದು ರೇಷ್ಮಾ ಪಡೇಕನೂರನ್ನು ವಿಜಯಪುರದ ಕೋಲ್ಹಾರ ಸೇತುವೆ ಕೆಳಗೆ ಹತ್ಯೆ ಮಾಡಿದ್ದಾನೆ ಆರೋಪ ಕೇಳಿ ಬಂದಿದೆ.

    ಬಸವನಬಾಗೇವಾಡಿ ಸಿಪಿಐ ಮಹದೇವ ಶಿರಹಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

    ರೇಷ್ಮಾ ಪತಿ ಖಾಜಾ ಬಂದೇ ನವಾಜ್ ಸೊಲ್ಲಾಪುರದ ಎಂಐಎಂ ಮುಖಂಡ ತೌಫಿಕ್ ಶೇಖ್ ಊರ್ಫ್ ಪೈಲ್ವಾನ್ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸರು ತೌಫಿಕ್ ವಿರುದ್ಧ ಐಪಿಸಿ ಸೆಕ್ಷನ್ 302, 201 ಅಡಿಯಲ್ಲಿ ಕೇಸ್ ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಡಿವೈಎಸ್‍ಪಿ ಮಟ್ಟದಲ್ಲಿ ಬಸವನ ಬಾಗೇವಾಡಿ ಡಿಎಸ್‍ಪಿ ಮಹೇಶ್ವರಗೌಡ ಹಾಗೂ ವಿಜಯಪುರ ಡಿಎಸ್‍ಪಿ ಅಶೋಕ್ ನೇತೃತ್ವದಲ್ಲಿ ಎರಡು ತಂಡಗಳ ರಚನೆ ಮಾಡಲಾಗಿತ್ತು.

    ಕೆಲವು ದಿನ ಹಿಂದೆ ಕೊಲೆಗೂ ಮುನ್ನ ರೇಷ್ಮಾ ಅವರು ಆಪ್ತ ಸಮೀವುಲ್ಲಾ ಜೊತೆಗೆ ಪೈಲ್ವಾನ್ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಫುಲ್ ವೈರಲ್ ಆಗಿತ್ತು. ಆಡಿಯೋದಲ್ಲಿ ತೌಫಿಕ್ ಪೈಲ್ವಾನ್ ಜೊತೆಗಿನ ಹಣದ ವ್ಯವಹಾರದ ಕುರಿತು ರೇಷ್ಮಾ ಹಾಗೂ ಸಮೀವುಲ್ಲಾ ಮಾತನಾಡಿದ್ದರು. ‘ತೌಫಿಕ ಪೈಲ್ವಾನ್ ಸಾವು ಬದುಕಿನ ನಡುವೆ ಜೀವನ ಮಾಡಬೇಕು. ಸಾಯಲು ಬಾರದು, ಜೀವಂತವಾಗಿನೂ ಇರಬಾರದು ಎಂದು ರೇಷ್ಮಾ ಬಿಡುಗಡೆಯಾದ ಆಡಿಯೋದಲ್ಲಿ ಹೇಳಿದ್ದರು.

    ಎಂಐಎಂ ಮುಖಂಡ ತೌಫಿಕ್ ಪೈಲ್ವಾನ್ ಹೇಡಿ. ಇಂದಿಗೂ ಒಂದು ಮರ್ಡರ್ ಆಗಲಿ, ಹಾಫ್ ಮರ್ಡರ್ ಆಗಲಿ ಮಾಡಿಲ್ಲ. ಅವನೊಬ್ಬ ರಾಜಕೀಯ ವ್ಯಕ್ತಿಯೆಂದು ಸುಮ್ಮನೆ ಇದ್ದೇನೆ ಎಂದು ರೇಷ್ಮಾ ಹೇಳಿರುವುದು ಆಡಿಯೋದಲ್ಲಿ ರೆಕಾರ್ಡ್ ಆಗಿತ್ತು. ಹೀಗಾಗಿ ತೌಫಿಕ್ ಸೇರಿ ಒಟ್ಟು ಆರು ಜನ ಕೊಲೆ ಮಾಡಿದ್ದರು ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿತ್ತು.

  • ಮೈಸೂರಿನಲ್ಲಿ ಪ್ರಿಯಕರನ ಮುಂದೆ ಗ್ಯಾಂಗ್‍ರೇಪ್ – ಐವರು ಆರೋಪಿಗಳ ಬಂಧನ

    ಮೈಸೂರಿನಲ್ಲಿ ಪ್ರಿಯಕರನ ಮುಂದೆ ಗ್ಯಾಂಗ್‍ರೇಪ್ – ಐವರು ಆರೋಪಿಗಳ ಬಂಧನ

    ಮೈಸೂರು: ಪ್ರಿಯಕರನ ಮುಂದೆ ಯುವತಿಯನ್ನು ಗ್ಯಾಂಗ್‍ರೇಪ್ ಮಾಡಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಕಾರ್ತಿಕ್ ಕುಮಾರ್ (25), ಸೂರ್ಯಕುಮಾರ್(23), ದಿಲೀಪ್(26), ಜೀವನ್(25), ಪ್ರಶಾಂತ್( 27) ಬಂಧಿತ ಆರೋಪಿಗಳು. ಆರೋಪಿಗಳೆಲ್ಲಾ ಸ್ಥಳೀಯ ನಿವಾಸಿಗಳಾಗಿದ್ದು, ಯುವತಿ ಮೇಲೆ ಇದ್ದ ಹಳೆ ದ್ವೇಷವನ್ನು ತೀರಿಸಿಕೊಳ್ಳಲು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಆರೋಪಿಗಳು ಸಂತ್ರಸ್ತ ಯುವತಿ ಜೊತೆಗಿದ್ದ ಯುವಕ ಶಿವಸಿದ್ದು ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಅತ್ಯಾಚಾರ ಮಾಡಿದ್ದರು.

    ಏನಿದು ಪ್ರಕರಣ?
    ಮೇ 8ರಂದು ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು. ಸಂತ್ರಸ್ತ ಯುವತಿ ಲಾಡ್ಜ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಪ್ರೀತಿಸುತ್ತಿದ್ದಳು. ಮೇ 8ರ ತಡರಾತ್ರಿ ಯುವತಿ ತನ್ನ ಪ್ರಿಯಕರನ ಜೊತೆ ಲಿಂಗಾಂಬುಧಿ ಪಾಳ್ಯದ ನಿರ್ಜನ ಪ್ರದೇಶಕ್ಕೆ ಹೋಗಿದ್ದಳು.

    ಯುವತಿ ಹಾಗೂ ಆಕೆಯ ಪ್ರಿಯಕರ ಲಿಂಗಾಂಬುಧಿ ಪಾಳ್ಯದ ನಿರ್ಜನ ಪ್ರದೇಶಕ್ಕೆ ಹೋಗಿ ಅಲ್ಲಿಯೇ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ಇದೇ ಪ್ರದೇಶದಲ್ಲಿ ಕಾರಿನಲ್ಲಿ ಕುಳಿತುಕೊಂಡು ಐದು ಮಂದಿ ಮದ್ಯ ಸೇವನೆ ಮಾಡುತ್ತಿದ್ದರು. ಪ್ರೇಮಿಗಳು ಸ್ಥಳದಲ್ಲಿ ಇರುವುದನ್ನು ನೋಡಿ ಏಕಾಏಕಿ ಶಿವ ಸಿದ್ದು ಮೇಲೆ ಹಲ್ಲೆ ಮಾಡಿದ್ದರು. ಪ್ರಿಯಕರನ ಮೇಲೆ ಹಲ್ಲೆ ನಡೆಸಿ ಬಳಿಕ ಆತನ ಮುಂದೆಯೇ ಐದು ಮಂದಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು.

  • ರೌಡಿ ಲಕ್ಷ್ಮಣ್ ಕೊಲೆ ಆರೋಪಿ ವರ್ಷಿಣಿ ಮೇಲೆ ಕೋಕಾ ಕಾಯ್ದೆ ಪ್ರಯೋಗ!

    ರೌಡಿ ಲಕ್ಷ್ಮಣ್ ಕೊಲೆ ಆರೋಪಿ ವರ್ಷಿಣಿ ಮೇಲೆ ಕೋಕಾ ಕಾಯ್ದೆ ಪ್ರಯೋಗ!

    ಬೆಂಗಳೂರು: ಮೃತ ರೌಡಿ ಲಕ್ಷ್ಮಣ್ ಪ್ರೇಯಸಿ, ಜೈಲಿನಲ್ಲಿರುವ ವರ್ಷಣಿ ವಿರುದ್ಧ ಕೋಕಾ ಕಾಯ್ದೆಯ ಅಡಿ ಪ್ರಕರಣ ದಾಖಲಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.

    ಹೌದು. ವರ್ಷಿಣಿ ಅಪರಾಧ ಚಟುವಟಿಕೆಯಲ್ಲಿ ಹಾಗೂ ನಟೋರಿಯಸ್ ರೌಡಿ ಶೀಟರ್ ಹತ್ಯೆಯ ಪ್ರಮುಖ ಆರೋಪಿಯಾಗಿ ಜೈಲಿನಲ್ಲಿದ್ದಾಳೆ. ಇದೀಗ ಈಕೆಯ ಮೇಲೆ ಸಿಸಿಬಿ ಅಧಿಕಾರಿಗಳು ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಕೋಕಾ ಅಂದ್ರೆ ಏನು?:
    ಕೋಕಾ ಅಂದ್ರೆ ಸಂಘಟಿತ ಅಪರಾಧಗಳ ತಡೆ ಕಾಯ್ದೆ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಜಿಸ್ಡ್ ಕ್ರೈಮ್ಸ್ ಆಕ್ಟ್). ಸಂಘಟಿತರಾಗಿ ಅಪರಾಧ ಕೃತ್ಯ ಎಸಗಿ, ವ್ಯಕ್ತಿಯ ಸಾವಿಗೆ ಕಾರಣರಾಗುವವರಿಗೆ ಗರಿಷ್ಠ ಗಲ್ಲು ಶಿಕ್ಷೆ ಅಥವಾ ಜೀವನ ಪರ್ಯಂತ ಜೈಲು ಶಿಕ್ಷೆ ಜತೆಗೆ 1 ಲಕ್ಷ ರೂ.ಗೆ ಕಡಿಮೆ ಇಲ್ಲದಂತೆ 5 ಲಕ್ಷ ರೂ.ವರೆಗೂ ದಂಡ ವಿಧಿಸಲು ಈ ಕಾಯ್ದೆಯ ಅಡಿ ಅವಕಾಶವಿದೆ. ಆರೋಪಿಗಳಿಗೆ ಕನಿಷ್ಠ 5 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ವ್ಯಕ್ತಿಯ ಸಾವಿಗೆ ಕಾರಣರಾಗುವವರಿಗೆ ಗರಿಷ್ಠ ಗಲ್ಲು ಶಿಕ್ಷೆಯನ್ನೂ ವಿಧಿಸಬಹುದು.

    ಗೌರಿ ಹತ್ಯೆ ಪ್ರಕರಣವನ್ನು ನಡೆಸಿದ್ದ ವಿಶೇಷ ತನಿಖಾ ತಂಡ ಆರೋಪಿಗಳ ಮೇಲೆ ಕೋಕಾ ಕಾಯ್ದೆಯನ್ನು ಪ್ರಯೋಗಿಸಿದೆ. ಈ ಹಿಂದೆ ಪಿಯುಸಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ 2019ರ ಪರೀಕ್ಷೆಯ ವೇಳೆ ಯಾರಾದರೂ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದಲ್ಲಿ ಅವರ ವಿರುದ್ಧ ಕೋಕಾ ಕಾಯ್ದೆಯನ್ನು ಹಾಕಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಕೊನೆಗೂ ರೌಡಿ ಲಕ್ಷ್ಮಣ್ ಕೊಲೆ ಹಿಂದಿನ ರಹಸ್ಯ ಬಯಲು – ಮೂರು ಕಾರಣಕ್ಕೆ ಹತ್ಯೆಯ ಸ್ಕೆಚ್

    ಅಸಲಿಗೆ ಶೋರೂಂ ಫೋಟೋವನ್ನು ಪ್ರಿಯಕರ ರೂಪೇಶ್ ವರ್ಷಿಣಿಗೆ ಕಳುಹಿಸಿ ಕೊಲೆ ಮಾಡಲು ಸಿದ್ಧವಾಗಿದ್ದನು. ಗೆಳತಿ ಶೋರೂಂ ಬಳಿ ತನಗಾಗಿ ಕಾಯುತ್ತಿದ್ದಾಳೆ ಎಂದು ತಿಳಿದು ಲಕ್ಷ್ಮಣ್ ವರ್ಷಿಣಿ ತಿಳಿಸಿದ ಸ್ಥಳಕ್ಕೆ ಬಂದಿದ್ದನು. ಶೋರೂಂ ಬಳಿ ಲಕ್ಷ್ಮಣ್ ಬಂದ ಕೂಡಲೇ ರೌಡಿಗಳು ಆತನ ಮೇಲೆ ಮುಗಿಬಿದ್ದು ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಹಲವು ಟ್ವಿಸ್ಟ್ ಸಿಕ್ಕಿದ್ದು, ಸದ್ಯ ಪ್ರಮುಖ ಆರೋಪಿಯಾಗಿರುವ ವರ್ಷಿಣಿ ಜೈಲಿನಲ್ಲಿದ್ದಾಳೆ.

  • ಸ್ಮೃತಿ ಇರಾನಿ ಆಪ್ತನ ಕೊಲೆ ಪ್ರಕರಣ- ಮೂವರ ಬಂಧನ, ಇಬ್ಬರು ನಾಪತ್ತೆ

    ಸ್ಮೃತಿ ಇರಾನಿ ಆಪ್ತನ ಕೊಲೆ ಪ್ರಕರಣ- ಮೂವರ ಬಂಧನ, ಇಬ್ಬರು ನಾಪತ್ತೆ

    ಲಕ್ನೋ: ಅಮೇಠಿಯ ನೂತನ ಸಂಸದೆ ಸ್ಮೃತಿ ಇರಾನಿ ಅವರ ಆಪ್ತ ಸುರೇಂದ್ರ ಸಿಂಗ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಇಂದು ಪೊಲೀಸರು ಬಂಧಿಸಿದ್ದು, ಇನ್ನುಳಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

    ರಾಜಕೀಯ ದ್ವೇಷದ ಹಿನ್ನೆಲೆ ಐವರು ದುಷ್ಕರ್ಮಿಗಳು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿದ್ದ ಸುರೇಂದ್ರ ಸಿಂಗ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಈಗಾಗಲೇ ಘಟನೆಯಲ್ಲಿ ಶಾಮಿಲಾಗಿದ್ದ 3 ಮಂದಿಯನ್ನು ಬಂಧಿಸಲಾಗಿದೆ. ಉಳಿದ 2 ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನೂ ಕೂಡ ಆದಷ್ಟು ಬೇಗ ಬಂಧಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶನಿವಾರ ರಾತ್ರಿ ಸುರೇಂದ್ರ ಸಿಂಗ್ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡುವ ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದರು. ಆದರೆ ಭಾನುವಾರದಂದು ಈ ಘಟನೆ ಸಂಬಂಧ ಅನುಮಾನದ ಮೇರೆಗೆ ಕೆಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಆದರೆ ಹತ್ಯೆ ಮಾಡಲು ಕಾರಣ ಏನು ಎನ್ನುವುದು ತಿಳಿದು ಬಂದಿರಲಿಲ್ಲ. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿಯೇ ಕೊಲೆ ಮಾಡಿರುವ ಶಂಕೆಯಿದೆ ಎಂದು ಪೊಲೀಸರು ಹೇಳಿದರು.

    ಅಮೇಠಿಯಲ್ಲಿ ಪ್ರಚಾರ ಹಾಗೂ ಚುನಾವಣೆ ವೇಳೆ ತಮ್ಮೊಂದಿಗೆ ಇದ್ದು ಉತ್ತಮವಾಗಿ ಸಹಕರಿಸಿದ್ದ ಸುರೇಂದ್ರ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಸ್ಮೃತಿ ಇರಾನಿ ಹೆಗಲು ಕೊಟ್ಟಿದ್ದರು. ಅಂತ್ಯಸಂಸ್ಕಾರದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು, ಬೇಕಾದರೆ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಸುಪ್ರೀಂ ಕೋರ್ಟ್‍ಗೆ ಹೋಗಲು ನಾನು ಸಿದ್ಧ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

  • ನೆರೆಮನೆಯವರು ಬೈದ ಸಿಟ್ಟಿಗೆ 11ರ ಬಾಲಕನ ಬಲಿ ಪಡೆದ ಯುವಕ!

    ನೆರೆಮನೆಯವರು ಬೈದ ಸಿಟ್ಟಿಗೆ 11ರ ಬಾಲಕನ ಬಲಿ ಪಡೆದ ಯುವಕ!

    ನವದೆಹಲಿ: ನೆರೆಮನೆಯವರು ಬೈದ ಸಿಟ್ಟಿಗೆ ಅವರ 11 ವರ್ಷದ ಮಗನನ್ನು ಯುವಕನೊಬ್ಬ ಕತ್ತು ಹಿಸುಕಿ ಕೊಂದ ಅಮಾನವೀಯ ಘಟನೆ ದೆಹಲಿಯಲ್ಲಿ ನಡೆದಿದೆ.

    ಕಳೆದ ಎರಡು ವಾರದ ಹಿಂದೆ ಕಾಣೆಯಾಗಿದ್ದ ಬಾಲಕ ಈಗ ಹೆಣವಾಗಿ ಸಿಕ್ಕಿದ್ದಾನೆ. ಈಶಾನ್ಯ ದೆಹಲಿಯ ನೆಹರೂ ವಿಹಾರ್ ನಿವಾಸಿ ಡ್ಯಾನಿಷ್(28) ಕೃತ್ಯವೆಸೆಗಿರುವ ಆರೋಪಿ. ಡ್ಯಾನಿಷ್ ಹಾಗೂ ಬಾಲಕ ಅಕ್ಕಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದರು. ಡ್ಯಾನಿಷ್ ಕೋಳಿ ಮಾರಿ ಜೀವನ ನಡೆಸುತ್ತಿದ್ದನು. ಬಾಲಕನೊಂದಿಗೆ ಆರೋಪಿ ಒಡನಾಟ ಚೆನ್ನಾಗಿಯೇ ಇತ್ತು. ಆದರೆ ಬಾಲಕನ ತಂದೆ ತಾಯಿ ಬೈದಿದ್ದಕ್ಕೆ ಆರೋಪಿ ಮಗನ ಮೇಲೆ ತನ್ನ ಸಿಟ್ಟನ್ನು ತೋರಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಒಂದು ಜೀವವನ್ನೇ ಬಲಿಪಡೆದಿದ್ದಾನೆ.

    ಬಾಲಕನ ಪೋಷಕರು ದಿನಕೂಲಿ ಕಾರ್ಮಿಕರು, ಹೇಗೋ ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಡ್ಯಾನಿಷ್ ಹಾಗೂ ಬಾಲಕನ ಮನೆಯವರ ನಡುವೆ ಒಳ್ಳೆಯ ಒಡನಾಟವಿತ್ತು. ಆದರೆ ಕೆಲವು ದಿನಗಳ ಹಿಂದೆ ಡ್ಯಾನಿಷ್‍ಗೆ ಬಾಲಕನ ಪೋಷಕರು ಬೈದಿದ್ದರು. ಯಾವಾಗಲೂ ಮನೆ ಮುಂದೆ ಅಡ್ಡ ನಿಂತಿರುತ್ತೀಯ, ಓಡಾಡಲು ಕಷ್ಟವಾಗುತ್ತೆ ಎಂದು ಬೈದಿದ್ದರು. ಇಷ್ಟಕ್ಕೆ ಡ್ಯಾನಿಷ್ ಕೊಪಗೊಂಡಿದ್ದು, ಪೋಷಕರ ಮೇಲಿದ್ದ ಸಿಟ್ಟಿಗೆ ಮೇ 14ರಂದು ಬಾಲಕನನ್ನು ತನ್ನೊಡನೆ ಕರೆದೊಯ್ದು, ಖಜುರಿ ಖಾಸ್ ಫ್ಲೈಓವರ್ ಬಳಿ ಇರುವ ನಿರ್ಜನ ಪ್ರದೇಶದಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಹಾಗೆಯೇ ಶವವನ್ನು ಅಲ್ಲಿಯೆ ಹೂತಿದ್ದಾನೆ.

    ಬಾಲಕ ಕಾಣೆಯಾಗಿರುವ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಕೈಗೊಂಡಾಗ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ತನಿಖೆ ಕೈಗೊಂಡ ಪೊಲೀಸರು ಬಾಲಕ ಪ್ರತಿನಿತ್ಯ ಓಡಾಡುತ್ತಿದ್ದ ಸ್ಥಳಗಳಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಮೊದಲು ಪರಿಶೀಲನೆ ನಡೆಸಿದ್ದರು. ಈ ವೇಳೆ ಅಂಗಡಿಯೊಂದರ ಮುಂದೆ ಇದ್ದ ಸಿಸಿಟಿವಿಯಲ್ಲಿ ಡ್ಯಾನಿಷ್ ಜೊತೆ ಬಾಲಕ ಹೋಗುತ್ತಿದ್ದ ದೃಶ್ಯ ಸೆರೆಯಾಗಿತ್ತು. ಬಳಿಕ ಡ್ಯಾನಿಷ್‍ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯಾಂಶವನ್ನು ಆತ ಬಾಯ್ಬಿಟ್ಟಿದ್ದಾನೆ.

    ಇದೀಗ ಡ್ಯಾನಿಶ್ ಹೇಳಿಕೆಯನ್ನು ಮಾತ್ರ ದಾಖಲಿಸಿಕೊಂಡಿದ್ದೇವೆ. ಕೊಲೆಗೆ ಬೇರೆ ಕಾರಣಗಳು ಇರಬಹುದಾ ಎಂಬುದನ್ನು ಕೂಡ ಪತ್ತೆ ಹಚ್ಚುತ್ತಿದ್ದೇವೆ. ಹಾಗೆಯೇ ಬಾಲಕನ ಮೃತದೇಹ ಮಣ್ಣಿನಲ್ಲಿ ಹೂತಿಟ್ಟ ಕಾರಣಕ್ಕೆ ಕೊಳೆತಿದ್ದು, ಅದನ್ನು ಶವಪರೀಕ್ಷೆಂದು ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.