Tag: accused

  • ಸತತ 17 ದಿನ ಶ್ರಮಪಟ್ಟು ಕೊನೆಗೂ ಎಟಿಎಂ ಕಳ್ಳನನ್ನು ಸೆರೆ ಹಿಡಿದ ಮಹಿಳೆ!

    ಸತತ 17 ದಿನ ಶ್ರಮಪಟ್ಟು ಕೊನೆಗೂ ಎಟಿಎಂ ಕಳ್ಳನನ್ನು ಸೆರೆ ಹಿಡಿದ ಮಹಿಳೆ!

    ಮುಂಬೈ: ಎಟಿಎಂ ಸೆಂಟರ್ ನಲ್ಲಿ ತನಗೆ ವಂಚಿಸಿದ ಚಾಲಾಕಿ ಖದೀಮನನ್ನು ಮಹಿಳೆಯೊಬ್ಬರು ಸತತ 17 ದಿನ ಶ್ರಮಪಟ್ಟು, ಕೊನೆಗೂ ರೆಡ್‍ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಬಾಂದ್ರಾ ಪ್ರದೇಶದಲ್ಲಿ ನಡೆದಿದೆ.

    ನಗರದ ಬಾಂದ್ರಾ ಪ್ರದೇಶದಲ್ಲಿರುವ ಎಟಿಎಂನಲ್ಲಿ ಡಿ. 18ರ ರಾತ್ರಿ ವೇಳೆ ರೆಹಾನಾ ಶೇಖ್(35) ಹಣ ತೆಗೆಯಲು ಹೋಗಿದ್ದರು. ಎಟಿಎಂನಲ್ಲಿ ಕೊಂಚ ಯಾಂತ್ರಿಕ ಸಮಸ್ಯೆ ಇದ್ದ ಕಾರಣ ಹಣ ತೆಗೆಯಲು ಆಗುತ್ತಿರಲಿಲ್ಲ. ಈ ವೇಳೆ ಸ್ಥಳಕ್ಕೆ ಬಂದ ಭೂಪೇಂದ್ರ ಮಿಶ್ರಾ ಎಂಬಾತ ಮಹಿಳೆಗೆ ಸಹಾಯ ಮಾಡುವುದಾಗಿ ನಂಬಿಸಿ, ಎಟಿಎಂ ಒಳಗೆ ಆಕೆಯ ಕಾರ್ಡ್ ಹಾಕಿ, ಪಿನ್ ಹೊಡೆದು ಬಳಿಕ ಯಂತ್ರ ಕೆಲಸ ಮಾಡುತ್ತಿಲ್ಲ ಅಂತ ಮಹಿಳೆಗೆ ಕಾರ್ಡ್ ಕೊಟ್ಟು ಕಳುಹಿಸಿದ್ದಾನೆ.

    ಮಹಿಳೆ ಎಟಿಎಂ ನಿಂದ ಹೊರ ಬಂದು ಸ್ವಲ್ಪ ದೂರ ಹೋಗುತ್ತಿದ್ದಂತೆ ಖಾತೆಯಿಂದ 10 ಸಾವಿರ ರೂ. ಹಣ ತೆಗೆಯಲಾಗಿದೆ ಎಂದು ಫೋನ್‍ಗೆ ಮೆಸೇಜ್ ಬಂದಿದೆ. ಆಗ ತಕ್ಷಣ ಹಿಂತಿರುಗಿ ಎಟಿಎಂಗೆ ಹೋಗುವಷ್ಟರಲ್ಲಿ ಆ ವ್ಯಕ್ತಿ ಹಣ ತೆಗೆದುಕೊಂಡು ಪರಾರಿಯಾಗಿದ್ದನು. ತನಗೆ ಮೋಸ ಮಾಡಿದವನನ್ನು ಹುಡುಕಲೇ ಬೇಕೆಂದು ನಿರ್ಧಾರ ಮಾಡಿದ ಮಹಿಳೆ ಸತತ 17 ದಿನದಿಂದ ಅದೇ ಎಟಿಎಂಗೆ ಹೋಗುತ್ತಿದ್ದರು. ಅಲ್ಲದೆ ಎಟಿಎಂ ಹೊರಗೆ ನಿಂತು ಆ ವ್ಯಕ್ತಿ ಬೇರೊಬ್ಬರಿಗೆ ವಂಚನೆ ಮಾಡಬಹುದು. ಈ ಕಾರಣಕ್ಕೆ ಆತ ಮತ್ತೆ ಎಟಿಎಂಗೆ ಬರಬಹುದು ಎಂದು ನಂಬಿ ಆತನಿಗಾಗಿ ಕಾಯುತ್ತಿದ್ದರು.

    ಜನವರಿ 4 ರಂದು ಮಹಿಳೆ ಎಂಟಿಎಂ ಬಳಿ ಕಾಯುತ್ತಿದ್ದಾಗ ಆರೋಪಿ ಮಿಶ್ರ ಕಾಣಿಸಿಕೊಂಡಿದ್ದನು. ಆಗ ತಕ್ಷಣ ಮಹಿಳೆ ಪೊಲೀಸರಿಗೆ ಮಾಹಿತಿ ತಿಳಿಸಿ ಸ್ಥಳಕ್ಕೆ ಬರಲು ಹೇಳಿದ್ದಾರೆ. ಬಳಿಕ ಜಾಣತನದಿಂದ ಕಳ್ಳನನ್ನು ಹಿಡಿದು ಪೊಲೀಸರಿಗೆ ಮಹಿಳೆ ಒಪ್ಪಿಸಿದ್ದಾರೆ.

    ಆರೋಪಿ ಮಿಶ್ರ ಜನರನ್ನು ವಂಚಿಸಿದ್ದು ಇದೇ ಮೊದಲ ಬಾರಿ ಅಲ್ಲ. ರೆಹಾನಾ ಅವರಿಗೆ ವಂಚಿಸಿದ ಹಾಗೆಯೇ ಸಾಕಷ್ಟು ಜನರಿಗೆ ಪಂಗನಾಮ ಹಾಕಿದ್ದಾನೆ. ಜನರಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಹಣವನ್ನು ಮೋಸದಿಂದ ಪಡೆದು ಪರಾರಿಯಾಗುತ್ತಿದ್ದನು. ಹಲವು ಠಾಣೆಗಳಲ್ಲಿ ಆತನ ಮೇಲೆ ಸರಿಸುಮಾರು 7 ವಂಚನೆ ಪ್ರಕರಣಗಳು ಈ ಹಿಂದೆಯೇ ದಾಖಲಾಗಿತ್ತು. ಆದರಿಂದ ಈ ಖತರ್ನಾಕ್ ಕಳ್ಳನನ್ನು ಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದರು. ಕೊನೆಗೂ ದಿಟ್ಟ ಮಹಿಳೆ ರೆಹಾನಾ ಅವರ ಧೈರ್ಯದಿಂದ ಪೊಲೀಸರಿಗೆ ವಂಚಕ ದೊರಕಿದ್ದಾನೆ.

    ವಂಚನೆ ಹೇಗೆ ಮಾಡ್ತಿದ್ದ:
    ಭೂಪೇಂದ್ರ ಮಿಶ್ರಾ ತೆಗೆಯಲು ಸಹಾಯ ಮಾಡುವುದಾಗಿ ಹೇಳಿ ಎಟಿಎಂ ಒಳಗಡೆ ಜನರನ್ನು ನಂಬಿಸುತ್ತಿದ್ದ. ಎಟಿಎಂನಲ್ಲಿ ಪಿನ್ ಹಾಕಿ ಅರ್ಧ ಹಣ ವ್ಯವಹಾರ ನಡೆಸುತ್ತಿದ್ದಾಗ ಯಂತ್ರ ಹಾಳಾಗಿದೆ ಎಂದು ಹೇಳುತ್ತಿದ್ದ. ಗ್ರಾಹಕರು ಈತನ ಮಾತನ್ನು ನಂಬಿ ತೆರಳುತ್ತಿದ್ದರು. ಗ್ರಾಹಕರು ಎಟಿಎಂನಿಂದ ಹೊರ ಬರುವ ಸಮಯದಲ್ಲಿ `ಕ್ಯಾನ್ಸಲ್’ ಬಟನ್ ಒತ್ತುತ್ತಿರಲಿಲ್ಲ. ವ್ಯವಹಾರ ಕ್ಯಾನ್ಸಲ್ ಆಗದ ಕಾರಣ ಮಿಶ್ರಾ ಹಣವನ್ನು ಡ್ರಾ ಮಾಡುತ್ತಿದ್ದ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲಿಕ್ವಿಡ್ ಹಾಕಿದ್ರೆ ನಕಿಲಿ ನೋಟು ಅಸಲಿಯಾಗುತಂತೆ..!

    ಲಿಕ್ವಿಡ್ ಹಾಕಿದ್ರೆ ನಕಿಲಿ ನೋಟು ಅಸಲಿಯಾಗುತಂತೆ..!

    – ಖೋಟಾ ನೋಟು ವಂಚಕರ ಜಾಲ ಪತ್ತೆ

    ಬಾಗಲಕೋಟೆ: ಜನರನ್ನು ನಂಬಿಸಿ ಕಪ್ಪು ಕಾಗದಕ್ಕೆ ಲಿಕ್ವಿಡ್ ಹಾಕಿದ್ರೆ ನೈಜ ನೋಟಾಗಿ ಬದಲಾಗುತ್ತವೆ ಎಂದು ಮೋಸ ಮಾಡುತ್ತಿದ್ದ ವಂಚಕರ ಜಾಲವನ್ನು ಜಿಲ್ಲೆಯ ಸಿಇಎನ್ ಪೊಲೀಸರು ಕಾರ್ಯಾಚರಣೆ ಮಾಡಿ ಪತ್ತೆ ಮಾಡಿದ್ದಾರೆ.

    ಸೋಮಶೇಖರ್ ಹಳ್ಳೂರ, ಮಲ್ಲಿಕಾರ್ಜುನ ತೋರಗಲ್, ಈರಣ್ಣ ಹಾದಿಮನಿ ಬಂಧಿತ ವಂಚಕರು. ಈ ಮೂವರ ಇನ್ನೋರ್ವ ಸೇರಿ ನೋಟಿನಾಕಾರದ ಕಪ್ಪು ಕಾಗದವನ್ನು ಜನರಿಗೆ ನೀಡಿ ಇದಕ್ಕೆ ನಾವು ಕೊಡುವ ಲಿಕ್ವಿಡ್ ಹಾಕಿದ್ರೆ ನಿಜವಾದ ನೋಟು ಆಗುತ್ತೆ ಎಂದು ವಂಚನೆ ಮಾಡುತ್ತಿದ್ದರು. ಅಲ್ಲದೆ 500 ಹಾಗೂ 2000 ಮುಖಬೆಲೆಯ ನೋಟ್‍ಗಳಾಗುತ್ತವೆ ಎಂದು ಜನರನ್ನು ವಂಚಿಸುತ್ತಿದ್ದರು. ಆರೋಪಿಗಳಲ್ಲಿ ಮೂವರು ನಕಲಿ ನೋಟ್ ವಂಚಕರನ್ನು ಪೊಲೀಸರು ಕಾರ್ಯಚರಣೆ ಮಾಡಿ ಬಂಧಿಸಿದ್ದು, ಓರ್ವ ಆರೋಪಿ ಪರಾರಿಯಾಗಿದ್ದಾನೆ.

    ಬಂಧಿತ ಮೂವರು ಗುಳೇದಗುಡ್ಡ ಪಟ್ಟಣದವರು ಎಂದು ಗುರುತಿಸಲಾಗಿದ್ದು, ಮರಿಯಪ್ಪ ಮಾದರ ಎಂಬ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಗಳು ಜನರಿಗೆ ಕಪ್ಪು ನಕಲಿ ನೋಟ್ ನೀಡಿ ಹಣ ಪಡೆದು ವಂಚಿಸುವ ಪ್ರಯತ್ನದಲ್ಲಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಪೊಲೀಸರು ಗುಳೇದಗುಡ್ಡ ಪಟ್ಟಣದ ಶಿಕ್ಷಕರ ಕಾಲೋನಿಯಲ್ಲಿ ನಡೆಯುತ್ತಿದ್ದ ದಂದೆಗೆ ಬ್ರೇಕ್ ಹಾಕಿದ್ದಾರೆ. ಆರೋಪಿಗಳ ಬಳಿ ಇದ್ದ 2 ಸಾವಿರ ರೂ. ಮುಖಬೆಲೆಯ ಎರಡು ಖೋಟಾ ನೋಟನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಈ ಘಟನೆ ಕುರಿತು ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರು ಪೊಲೀಸರಿಂದ ಮಿಲಿಟರಿ ಮಾದರಿಯಲ್ಲಿ ಕಾರ್ಯಾಚರಣೆ

    ಬೆಂಗ್ಳೂರು ಪೊಲೀಸರಿಂದ ಮಿಲಿಟರಿ ಮಾದರಿಯಲ್ಲಿ ಕಾರ್ಯಾಚರಣೆ

    – ಭರ್ಜರಿ ಬೇಟೆಯಾಡಿ 35 ಲಕ್ಷ ರೂ. ಹಣ, 500 ಗ್ರಾಂ ಚಿನ್ನಾಭರಣ, ರಕ್ತ ಚಂದನ ವಶ

    ಬೆಂಗಳೂರು: ಚಂದನವನ ಎಂದೇ ಪ್ರಖ್ಯಾತಿ ಪಡೆದಿರುವ ಕನ್ನಡ ನಾಡಿನಲ್ಲಿ ರಕ್ತ ಚಂದನ ಹಾಗೂ ಶ್ರೀಗಂಧ ಮರ ಕಳ್ಳ ಸಾಗಾಣೆಯಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲು ಬೆಂಗಳೂರು ಸೆಂಟ್ರಲ್ ಪೊಲೀಸರು ಯಶಸ್ವಿಯಾಗಿದ್ದಾರೆ.

    ತಂದೆ ರಿಯಾಸ್, ಮಗ ಬಾಬಾ ಎಂಬ ನಟೋರಿಯಸ್ ಕಳ್ಳರನ್ನು ಪೊಲೀಸರು ಬಂಧಿಸಿದ್ದು, ಕೋಲಾರ ಜಿಲ್ಲೆ ಮಲೂರು ಬಳಿಯ ಕಟ್ಟಿಗೇನಹಳ್ಳಿ ಗ್ರಾಮದವರಾಗಿದ್ದಾರೆ. ಕಾರ್ಯಾಚರಣೆ ವೇಳೆ ಸುಮಾರು 35 ಲಕ್ಷ ನಗದು, 500 ಗ್ರಾಂ ಚಿನ್ನಾಭರಣ ಹಾಗೂ ರಕ್ತ ಚಂದನವನ್ನು ವಶಕ್ಕೆ ಪಡೆದಿದ್ದಾರೆ.

    ಏನಿದು ಪ್ರಕರಣ?
    ಕೋಲಾರ ಜಿಲ್ಲೆಯ ಕಟ್ಟಿಗೇನಹಳ್ಳಿ ಗ್ರಾಮದ ಈ ಇಬ್ಬರು ಆರೋಪಿಗಳು ಶ್ರೀಗಂಧ ಕಳ್ಳ ಸಾಗಾಣೆ ದಂಧೆಯಲ್ಲಿ ಕುಖ್ಯಾತಿ ಪಡೆದಿದ್ದು, ದಂಧೆಗೆ ಇಡೀ ಗ್ರಾಮವೇ ಸಾಥ್ ನೀಡುತ್ತಿತ್ತು. ಪೊಲೀಸರು ದಂಧೆಕೋರರ ಮೇಲೆ ದಾಳಿ ನಡೆಸಲು ಪ್ರಯತ್ನ ನಡೆಸಿದರೆ ಮಹಿಳೆಯರು, ಹೆಣ್ಣು ಮಕ್ಕಳನ್ನು ಮುಂದೇ ಬಿಟ್ಟು ಹೈಡ್ರಾಮಾ ಸೃಷ್ಟಿಸಿದ್ದರು. ಅಲ್ಲದೇ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿ ಸ್ಥಳದಿಂದ ಪರಾರಿಯಾಗುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಕಳೆದ ಕೆಲ ವರ್ಷಗಳಿಂದ ಇದೇ ದಂಧೆಯನ್ನು ನಡೆಸುತ್ತಿದ್ದ ಖದೀಮರು ಅಂತರಾಷ್ಟ್ರೀಯ ಮಟ್ಟದಲ್ಲಿ ಶ್ರೀಗಂಧ ಕಳ್ಳಸಾಗಾಣೆ ಮಾಡುತ್ತಿದ್ದರು. ಅಲ್ಲದೇ ಯಾರೇ ಶ್ರೀ ಗಂಧ ಕಳ್ಳತನ ಮಾಡಿದ್ದರು ಇಲ್ಲಿಂದಲೇ ಮಾರಾಟವಾಗುತ್ತಿತ್ತು. ಈ ಗ್ಯಾಂಗ್ ಶ್ರೀಗಂಧ ಕಳ್ಳತನ ಮಾಡಲು ಪ್ರೇರಣೆ ನೀಡಿ ಸಹಾಯ ಮಾಡುತ್ತಿದ್ದರು. ಕಳ್ಳತನ ಮಾಡಲು ತಮಿಳುನಾಡಿನ ಇಳಯರಾಜ ಎಂಬ ಗ್ಯಾಂಗ್ ಕರೆಯಿಸಿ ಡೀಲ್ ಮಾಡುತ್ತಿದ್ದರು. ಸರ್ಕಾರಿ ಕಚೇರಿಯ ಬಳಿ ಇರುತ್ತಿದ್ದ ಮರಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ಗ್ಯಾಂಗ್ 2010 ರಿಂದಲೇ ಇದರಲ್ಲಿ ತೊಡಗಿದ್ದರು.

    ಮಿಲಿಟರಿ ಮಾದರಿಯಲ್ಲಿ ಕಾರ್ಯಾಚರಣೆ: ಕೆಲ ಪ್ರಕರಣಗಳಲ್ಲಿ ಇವರ ವಿರುದ್ಧ ದೂರು ದಾಖಲಿಸಿ ಬಂಧನ ಮಾಡಲು ತೆರಳಿದ ಪೊಲೀಸರ ಮೇಲೆ ಊರಿನ ಗ್ರಾಮಸ್ಥರು ಕಲ್ಲು ತೂರಾಟ ನಡೆಸುತ್ತಿದ್ದರು. ಆದ್ದರಿಂದ ಕಳೆದ 3 ವರ್ಷಗಳಿಂದ ಈ ಗ್ರಾಮಕ್ಕೆ ಪೊಲೀಸರು ಹೋಗಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ಪೊಲೀಸರು ಸುಮಾರು 200 ಅಧಿಕಾರಿ ಸಿಬ್ಬಂದಿ, 3 ಕೆಎಸ್‍ಆರ್‍ಪಿ ವಾಹನ ಸೇರಿ ಇಡೀ ಗ್ರಾಮವನ್ನೇ ಸುತ್ತುವರೆದು ದಾಳಿ ನಡೆಸಿದ್ದರು. ತಡರಾತ್ರಿ 2 ಗಂಟೆ ಅವಧಿಯಲ್ಲಿ ದಾಳಿ ನಡೆಸಿದ್ದು, 3 ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಇಬ್ಬರು ಆರೋಪಿಗಳ ಬಂಧನ ಮಾಡಲು ಅವರ ಮನವೊಲಿಕೆ ಮಾಡಲು ಪೊಲೀಸರು ಯತ್ನಿಸಿದ್ದರು. ಆದರೆ ಆರೋಪಿಗಳು ಒಪ್ಪದ ಕಾರಣ ಮನೆ ಬಾಗಿಲು ಮುರಿದು ಕಾರ್ಯಾಚರಣೆ ನಡೆಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

    ಶ್ರೀಗಂಧ ಕಳ್ಳತನಕ್ಕೆ ಸಹಾಯ: ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಶ್ರೀಗಂಧ ಕಳ್ಳತನ ನಡೆಸುತ್ತಿರುವ ಈ ಆರೋಪಿಗಳು ಸುಮಾರು ವಾಹನಗಳ ನಂಬರ್ ಪ್ಲೇಟ್ ಹೊಂದಿದ್ದರು. ಅಲ್ಲದೇ ಬೇರೆ ಬೇರೆ ರಾಜ್ಯಗಳಿಂದ ಕಳ್ಳತನ ಮಾಡಲು ವ್ಯಕ್ತಿಗಳನ್ನು ಕರೆಸುತ್ತಿದ್ದರು. ಕಳ್ಳತನ ಮಾಡುವ ವೇಳೆ ಓಎಲ್‍ಎಕ್ಸ್ ತಾಣದಲ್ಲಿ ಮಾರಾಟ ಮಾಡುತ್ತಿದ್ದ ವಾಹನ ನಂಬರ್ ಗಳನ್ನು ನಮೂದಿಸಿ ವಾಹನ ನೀಡುತ್ತಿದ್ದರು.

    ಬೆಂಗಳೂರು ಕೇಂದ್ರ ಪೊಲೀಸರಾದ ಡಿಸಿಪಿ ದೇವರಾಜ್, ಡಿಸಿಪಿ ಅಹ್ಮದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, 5 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಈ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ (ಕೋಕಾ) ಕಾಯ್ದೆಯಲ್ಲಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಅಲ್ಲದೇ ಶ್ರೀಗಂಧ ಕಳ್ಳತನ ಮಾಡಿ ರಾಜ್ಯದ ವಿವಿಧ ಶ್ರೀಗಂಧ ಕಾರ್ಖಾನೆಗಳು ಮಾರಾಟ ಮಾಡುತ್ತಿದ್ದ ಬಗ್ಗೆ ಡೈರಿ ಕೂಡ ಲಭ್ಯವಾಗಿದ್ದು, ಯಾರಿಗೆ, ಎಷ್ಟು ಮಾರಾಟ ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಆದ್ದರಿಂದ ಶ್ರೀಗಂಧ ಖರೀದಿ ಮಾಡುತ್ತಿದ್ದ ಕಂಪೆನಿಯ ಮಾಲೀಕರನ್ನು ಕೋಕಾ ಕಾಯ್ದೆಯಲ್ಲಿ ತರುವ ಕಾರ್ಯವನ್ನ ಪೊಲೀಸರು ಮಾಡಿದ್ದಾರೆ.

    ಇತ್ತೀಚೆಗೆ ಅರ್ಧ ಲೈಫ್ ಎಂಬ ಕಂಪೆನಿ ಅರ್ಧ ಟನ್ ರಕ್ತ ಚಂದನಕ್ಕೆ ಈ ಗ್ಯಾಂಗಿಗೆ ಭೇಟಿಗೆ ಇಟ್ಟಿತ್ತು. ಈ ಮಾಲ್ ಸಿದ್ಧಪಡಿಸಲು ಆರೋಪಿಗಳು ಸಿದ್ಧತೆ ನಡೆಸುತ್ತಿದ್ದರು. ಈ ವೇಳೆ ತಮಿಳುನಾಡಿನ ಇಳಯರಾಜ್ ಗ್ಯಾಂಗ್ ಬಂಧನ ಆಗಿದೆ. ಅವರಿಂದ ಪಡೆದ ಮಾಹಿತಿ ಮೇರೆಗೆ ನ್ಯಾಯಾಲಯ ಹಾಗೂ ಉನ್ನತ ಅಧಿಕಾರಿಗಳ ಅನುಮತಿ ಪಡೆದು ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಈಗಾಗಲೇ ಈ ದಂಧೆಯಲ್ಲಿ ತೊಡಗಿದ್ದ ಮತ್ತೊಂದು ಗ್ಯಾಂಗನ್ನು ಬಂಧಿಸಲಾಗಿದೆ. ಇದರಲ್ಲಿ ಮತ್ತೊಬ್ಬ ಆರೋಪಿ ಬಂಧನ ಬಾಕಿ ಇದೆ. ಮುಂದಿನ ಹಂತದ ಕಾರ್ಯಾಚರಣೆಯಲ್ಲಿ ಎಲ್ಲರ ಬಂಧನ ಮಾಡಲಾಗುತ್ತದೆ. ಗ್ಯಾಂಗ್ ಬಂಧನದಿಂದ ರಾಜ್ಯದಲ್ಲಿ ನಡೆದ ಹಲವು ಶ್ರೀಗಂಧ ಕಳ್ಳತನ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ. ಮುಖ್ಯವಾಗಿ ಬಂಧಿತ ಇಬ್ಬರು ಆರೋಪಿಗಳು ಈ ಹಿಂದೆ ಒಮ್ಮೆ ಮಾತ್ರ ಬಂಧನವಾಗಿದ್ದರು. ಆ ಬಳಿಕ ಇವರು ಪೊಲೀಸರ ಕೈಗೆ ಸಿಕ್ಕಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜಡ್ಜ್ ಮುಂದೆ ಸುಳ್ವಾಡಿ ವಿಷ ದುರಂತದ ಆರೋಪಿಗಳು ಹಾಜರು – ಕೋರ್ಟ್ ವಿಚಾರಣೆಯಲ್ಲಿ ಏನಾಯ್ತು?

    ಜಡ್ಜ್ ಮುಂದೆ ಸುಳ್ವಾಡಿ ವಿಷ ದುರಂತದ ಆರೋಪಿಗಳು ಹಾಜರು – ಕೋರ್ಟ್ ವಿಚಾರಣೆಯಲ್ಲಿ ಏನಾಯ್ತು?

    ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ದುರಂತದಲ್ಲಿ ಬಂಧನವಾಗಿರುವ ನಾಲ್ವರು ಆರೋಪಿಗಳನ್ನು ಇಂದು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು.

    ಜಿಲ್ಲೆಯ ಕೊಳ್ಳೇಗಾಲದ ತಾಲೂಕು ನ್ಯಾಯಾಲಯಕ್ಕೆ ಇಂದು ಬಂಧಿತ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮೀಜಿ, ಅಂಬಿಕಾ, ಮಾದೇಶ್ ಹಾಗೂ ದೊಡ್ಡಯ್ಯ ಹಾಜರಾಗಿದ್ದಾರೆ. ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕೃಷ್ಣ ಅವರು ನಿಮ್ಮ ಪರ ವಾದ ಮಾಡಲು ಯಾರಾದರು ವಕೀಲರಿದ್ದಾರಾ ಎಂದು ಪ್ರಶ್ನೆ ಕೇಳಿದರು. ಈ ಪ್ರಶ್ನೆಗೆ ಪ್ರಕರಣದ ಎ1 ಆರೋಪಿ ಇಮ್ಮಡಿ ಮಹದೇವಸ್ವಾಮೀಜಿ ಯಾರು ಇಲ್ಲ ಎಂದು ಉತ್ತರಿಸಿದ್ದಾನೆ.

    ಆರೋಪಿಗಳ ಮಾತು ಕೇಳಿದ ನ್ಯಾಯಾಧೀಶರು ಜನವರಿ 16ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿ ಮತ್ತೆ ನ್ಯಾಯಾಲಯಕ್ಕೆ ಆರೋಪಿಗಳನ್ನು ಕರೆತರುವಂತೆ ಹೇಳಿದರು. ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನು ಮರಳಿ ಮೈಸೂರಿನ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಯಿತು.

    ಇಷ್ಟು ದಿನ ಖಾವಿ ತೊಟ್ಟಿದ್ದ ಇಮ್ಮಡಿ ಮಹದೇವಸ್ವಾಮೀಜಿ ಇಂದು ಬಿಳಿ ವಸ್ತ್ರದಲ್ಲಿ ನ್ಯಾಯಾಲಯದಲ್ಲಿ ಕಾಣಿಸಿಕೊಂಡಿದ್ದ. ಖಾವಿ ಬಟ್ಟೆಗೆ ತನ್ನದೇ ಆದ ಗೌರವವಿರುವ ಕಾರಣ ಪೊಲೀಸರೇ ಆತನ ಖಾವಿ ಬಟ್ಟೆಯನ್ನು ಕಳಚಿ ಬಿಳಿ ಬಣ್ಣದ ಶರ್ಟ್ ಹಾಗೂ ಪಂಚೆಯನ್ನು ನೀಡಿ ಕರೆತಂದಿದ್ದಾರೆ ಎನ್ನಲಾಗಿದೆ.

    ಮಾಧ್ಯಮ ಕ್ಯಾಮೆರಾಗಳಿಗೆ ಮುಖ ತೋರಿಸದ ಇಮ್ಮಡಿ ಮಹದೇವಸ್ವಾಮೀಜಿ ಕ್ಯಾಮೆರಾ ಕಂಡ ತಕ್ಷಣ ಮುಖ ಮುಚ್ಚಿಕೊಂಡೇ ತೆರಳಿದ್ದ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಳ್ವಾಡಿ ದುರಂತದ ಎ1 ಆರೋಪಿಗೆ ಬೇಲ್ ಕೊಡಿಸಲು ಮುಂದಾದ ವಕೀಲ

    ಸುಳ್ವಾಡಿ ದುರಂತದ ಎ1 ಆರೋಪಿಗೆ ಬೇಲ್ ಕೊಡಿಸಲು ಮುಂದಾದ ವಕೀಲ

    ಮೈಸೂರು: ಸುಳ್ವಾಡಿ ಮಾರಮ್ಮ ಪ್ರಸಾದದಲ್ಲಿ ವಿಷ ಬೆರೆಸಿ 17 ಜನರ ಸಾವಿಗೆ ಕಾರಣವಾದ ಪ್ರಮುಖ ಆರೋಪಿ ಇಮ್ಮಡಿ ಮಹದೇವ ಸ್ವಾಮೀಜಿಗೆ ಬೇಲ್ ಕೊಡಿಸಲು ಮೈಸೂರು ಮೂಲದ ವಕೀಲರು ಮುಂದಾಗಿದ್ದಾರೆ.

    ಸುಳ್ವಾಡಿ ಮಾರಮ್ಮ ವಿಷ ಪ್ರಸಾದ ಪ್ರಕರಣದ ಆರೋಪಿಗಳ ಪರ ವಕಾಲತ್ತು ವಹಿಸದೇ ಇರಲು ಚಾಮರಾಜನಗರ ಜಿಲ್ಲಾ ವಕೀಲರ ಸಂಘ ತೀರ್ಮಾನಿಸಿದ್ದಾರೆ. ಹೀಗಾಗಿ ಇಮ್ಮಡಿ ಮಹದೇವ ಸ್ವಾಮೀಜಿಗೆ ಬೇಲ್ ಕೊಡಿಸಲು ಮೈಸೂರು ಮೂಲದ ವಕೀಲ ಮಹದೇವಪ್ರಸಾದ್ ಅವರು ಕೊಳ್ಳೇಗಾಲ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

    ಬೇಲ್‍ಗೆ ಅರ್ಜಿ ಸಲ್ಲಿಸಿದ್ದಷ್ಟೇ ಅಲ್ಲದೆ ಸ್ವಾಮೀಜಿ ಪರವಾಗಿ ವಕಲಾತನ್ನು ನಾನೇ ವಹಿಸುತ್ತೇನೆ. ನನಗೆ ಅವಕಾಶ ನೀಡಬೇಕೆಂದು ವಕೀಲ ಮಹದೇವಪ್ರಸಾದ್ ಕೊಳ್ಳೇಗಾಲ ಕೋರ್ಟ್ ಗೆ ಅರ್ಜಿ ಹಾಕಿದ್ದಾರೆ.

    ಆರೋಪಿಗಳು ಮೈಸೂರಿನ ಕಾರಾಗೃಹದಲ್ಲಿದ್ದು, ಜನವರಿ 3ರಂದು ಕೊಳ್ಳೇಗಾಲ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಈ ನಿಟ್ಟಿನಲ್ಲಿ ಇಮ್ಮಡಿ ಸ್ವಾಮೀಜಿಗೆ ಮಾತ್ರ ಬೇಲ್ ಕೊಡಿಸಲು ಆತನ ಸಂಬಂಧಿಕರು ಹಾಗೂ ಆಪ್ತರು ಮುಂದಾಗಿದ್ದಾರೆ ಎನ್ನಲಾಗಿದೆ.

    ಇಮ್ಮಡಿ ಮಹದೇವಸ್ವಾಮೀಜಿಗೆ ಸಾಲೂರು ಮಠದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಸ್ವಾಮೀಜಿಯ ಆಪ್ತ ಪೊನ್ನಾಜಿ ಮಹದೇವಸ್ವಾಮಿಯೇ ಬೇಲ್ ಕೊಡಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪೊನ್ನಾಚಿ ಮಹದೇವಸ್ವಾಮಿ ನಾನು ಆ ಕೆಲಸಕ್ಕೆ ಮುಂದಾಗುವುದಿಲ್ಲ. ಅಲ್ಲದೇ ಸಾಲೂರು ಮಠವೂ ಕೂಡ ಇಮ್ಮಡಿ ಮಹದೇವ ಸ್ವಾಮೀಜಿಗೆ ಬೇಲ್ ಕೊಡಿಸುವ ಗೋಜಿಗೆ ಹೋಗಲ್ಲ. ಅವರಿಗೆ ಅವರ ಸಂಭಂಧಿಕರು ಬೇಲ್ ಕೊಡಿಸಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೆಡಿಎಸ್ ಮುಖಂಡನ ಮರ್ಡರ್ ಕೇಸ್ – ಕೊಲೆಗೈದ ಸ್ಥಳದಲ್ಲಿ ಹೊಂಚು ಹಾಕಿದ್ದ ಹಂತಕರು

    ಜೆಡಿಎಸ್ ಮುಖಂಡನ ಮರ್ಡರ್ ಕೇಸ್ – ಕೊಲೆಗೈದ ಸ್ಥಳದಲ್ಲಿ ಹೊಂಚು ಹಾಕಿದ್ದ ಹಂತಕರು

    -ಸಿಸಿಟಿವಿಯಲ್ಲಿ ಆರೋಪಿಗಳ ಚಲನವಲನ ಸೆರೆ

    ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ನಡೆದಿದ್ದ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಹತ್ಯೆಗೈದ ಆರೋಪಿಗಳು ಕೊಲೆಗೆ ಹೊಂಚು ಹಾಕಿದ್ದ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಖಾಸಗಿ ಹೊಟೇಲ್‍ನ ಸಿಸಿಟಿವಿಯಲ್ಲಿ ಆರೋಪಿಗಳ ಚಲನವಲನ ದೃಶ್ಯ ಸೆರೆಯಾಗಿದೆ. ಆರೋಪಿಗಳು ಕೊಲೆ ಮಾಡುವ ಮುನ್ನ ಹೊಟೇಲ್ ಬಳಿ ಬಂದು ಸ್ಥಳ ವೀಕ್ಷಣೆ ಮಾಡಿದ್ದು, ಮದ್ದೂರಿನ ಟಿವಿ ವೃತ್ತದಲ್ಲಿರುವ ಖಾಸಗಿ ಹೋಟೆಲ್ ನಲ್ಲಿರುವ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ಕೊಲೆಗೂ ಮುನ್ನ ಹೋಟೆಲ್ ಮುಂಭಾಗದಲ್ಲಿ ಕೊಲೆ ಮಾಡಿದ ದಿನ ಆರೋಪಿಗಳ ಚಲನವಲನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಜೆಡಿಎಸ್ ಮುಖಂಡನ ಹತ್ಯೆ ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    ಮೊದಲು ಇಬ್ಬರು ಆರೋಪಿಗಳು ನಡೆದುಕೊಂಡು ಬಂದು ಸ್ಥಳ ವೀಕ್ಷಣೆ ಮಾಡಿದ್ದಾರೆ. ನಂತರ 3 ಬೈಕ್ ನಲ್ಲಿ 5 ಜನರು ಬಂದು ಪ್ರಕಾಶ್ ಗಾಗಿ ಕಾಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇವರೇ ಪ್ರಕಾಶ್ ಅವರನ್ನು ಕೊಲೆ ಮಾಡಿದ್ದಾರೆ ಎಂದು ಸಿಸಿಟಿವಿ ದೃಶ್ಯ ಆಧರಿಸಿ ಶಂಕಿಸಲಾಗಿದೆ.

    ಕೊಲೆ ಮಾಡಿದ ದಿನ ಮದ್ದೂರಿನ ಪ್ರವಾಸಿ ಮಂದಿರದಿಂದ ಪ್ರಕಾಶ್ ಹೊರಡುತ್ತಿದ್ದಂತೆಯೇ ಆರೋಪಿಗಳು ಅಲರ್ಟ್ ಆಗಿದ್ದು, ಪ್ರವಾಸಿ ಮಂದಿರದಿಂದ 100 ಮೀಟರ್ ಅಂತರದಲ್ಲಿನ ಅಂಗಡಿಯಲ್ಲಿ ಕಾರ್ ನ ಸೀಟ್ ಹೊಲಿಸಲು ಪ್ರಕಾಶ್ ಕಾರ್ ನಿಲ್ಲಿಸಿದ್ದರು. ಕಾರ್ ನಿಲ್ಲಿಸುತ್ತಿದ್ದಂತೆ ಬೈಕ್ ನಲ್ಲಿ ತೆರಳಿದ ಐವರು ಆರೋಪಿಗಳು ಕೊಲೆ ಮಾಡಿ ಅದೇ ಬೈಕ್ ನಲ್ಲಿ ಬೆಂಗಳೂರು ಕಡೆಗೆ ಪರಾರಿಯಾಗಿದ್ದಾರೆ.

    ಪ್ರಕಾಶ್ ಕೊಲೆ ಸಂಬಂಧ 8 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇತರ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 143(ಅಕ್ರಮ ಕೂಟ), 146(ದೊಂಬಿ), 148(ಮಾರಕಾಸ್ತ್ರಗಳಿಂದ ಹಲ್ಲೆ), 341(ಅಕ್ರಮವಾಗಿ ಬಂಧಿಸುವುದು), 307(ಕೊಲೆ ಯತ್ನ), 302 (ಕೊಲೆಗೆ ದಂಡನೆ), 120ಬಿ(ಕ್ರಿಮಿನಲ್ ಪಿತೂರಿ) ಹಾಗೂ 114(ಅಪರಾಧ ನಡೆದಾಗ ದುಷ್ಪ್ರೇರಕನ ಹಾಜರಿ) ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ.

    https://www.youtube.com/watch?v=_TY3AJ71wY0

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೆಡಿಎಸ್ ಮುಖಂಡನ ಹತ್ಯೆ ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    ಜೆಡಿಎಸ್ ಮುಖಂಡನ ಹತ್ಯೆ ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    ಮಂಡ್ಯ: ಜಿಲ್ಲೆಯನ್ನೇ ತಲ್ಲಣಗೊಳಿಸಿದ್ದ ಮದ್ದೂರಿನ ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಯೋಗೇಶ್, ಸ್ವಾಮಿ, ಶಿವರಾಜ್ ಹಾಗೂ ಹೇಮಂತ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಪ್ರಕರಣ ಸಂಬಂಧ ಇಂದು ಬೆಳಗ್ಗೆ ಒಟ್ಟು 8 ಮಂದಿಯ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಅಲ್ಲದೇ ಮೃತ ಪ್ರಕಾಶ್ ಕಾರಿನಲ್ಲಿದ್ದ ತೊಪ್ಪನಹಳ್ಳಿಯ ಅಭಿಲಾಷ್ ನೀಡಿದ ದೂರಿನನ್ವಯ ಎಫ್‍ಐಆರ್ ದಾಖಲಾಗಿಸಿತ್ತು.

    ಪ್ರಕರಣದ ಬೆನ್ನತ್ತಿದ್ದ ಪೊಲೀಸರು ತೊಪ್ಪನಹಳ್ಳಿ ಹಾಗೂ ಮದ್ದೂರಿನಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 143(ಅಕ್ರಮ ಕೂಟ), 146(ದೊಂಬಿ), 148(ಮಾರಕಾಸ್ತ್ರಗಳಿಂದ ಹಲ್ಲೆ), 341(ಅಕ್ರಮವಾಗಿ ಬಂಧಿಸುವುದು), 307(ಕೊಲೆ ಯತ್ನ), 302 (ಕೊಲೆಗೆ ದಂಡನೆ), 120ಬಿ(ಕ್ರಿಮಿನಲ್ ಪಿತೂರಿ) ಹಾಗೂ 114(ಅಪರಾಧ ನಡೆದಾಗ ದುಷ್ಪ್ರೇರಕನ ಹಾಜರಿ) ಅಡಿಯಲ್ಲಿ ಪ್ರಕರಣ ದಾಖಲಾಗಿವೆ.

    ಏನಿದು ಘಟನೆ?
    ಸೋಮವಾರ ಸಂಜೆ 4.30ರ ವೇಳೆ ಮದ್ದೂರಿನ ಟಿಬಿ ಸರ್ಕಲ್ ಬಳಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು, ಕಾರಿನಲ್ಲಿ ಕುಳಿತಿದ್ದ ಪ್ರಕಾಶ್‍ರನ್ನು ಕತ್ತು ಸೀಳಿ ಪರಾರಿಯಾಗಿದ್ದರು. ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಪ್ರಕಾಶ್ ಮೂಲತಃ ಕೊಪ್ಪನಹಳ್ಳಿ ಗ್ರಾಮದವರಾಗಿದ್ದು, ಮಾಜಿ ಪಂಚಾಯತ್ ಅಧ್ಯಕ್ಷೆಯ ಪತಿ ಹಾಗೂ ಜೆಡಿಎಸ್ ಮುಖಂಡರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಅರೆಸ್ಟ್

    ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಅರೆಸ್ಟ್

    ಮೈಸೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಮೈಸೂರಿನ ಎಚ್.ಡಿ.ಕೋಟೆ ಮತ್ತು ಸರಗೂರು ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

    ದಿನೇಶ್(24) ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ. ನಾಲ್ಕು ದಿನಗಳ ಹಿಂದೆ ದಿನೇಶ್ 14 ವರ್ಷದ ಆದಿವಾಸಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದನು.

    ದಿನೇಶ್ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೊಳವಿಗೆ ಗ್ರಾಮದ ನಿವಾಸಿಯಾಗಿದ್ದು, ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ತಪ್ಪಿಸಿಕೊಂಡಿದ್ದನು. ಬಳಿಕ ಮೈಸೂರಿನ ಎಚ್.ಡಿ.ಕೋಟೆ ಮತ್ತು ಸರಗೂರು ಪೊಲೀಸರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

    ಈ ಬಗ್ಗೆ ಹೆಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಳ್ವಾಡಿ ವಿಷಪ್ರಸಾದ ದುರಂತ- ಪೊಲೀಸರ ನಡೆಯ ಬಗ್ಗೆ ಎದ್ದಿದೆ ಅನುಮಾನ

    ಸುಳ್ವಾಡಿ ವಿಷಪ್ರಸಾದ ದುರಂತ- ಪೊಲೀಸರ ನಡೆಯ ಬಗ್ಗೆ ಎದ್ದಿದೆ ಅನುಮಾನ

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷಪ್ರಸಾದ ಸೇವಿಸಿ 15 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ನಾಲ್ವರನ್ನು ಜೈಲಿಗಟ್ಟಿದ್ದಾರೆ.

    ರಾತ್ರೋರಾತ್ರಿ ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ಈ ಬೆನ್ನಲ್ಲೇ ಜೈಲಿಗಟ್ಟಿದ್ದಾರೆ. ಇದೀಗ ಪೊಲೀಸರ ಈ ನಡೆಯ ಬಗ್ಗೆ ತೀವ್ರ ಅನುಮಾನ ಸೃಷ್ಟಿಯಾಗಿದೆ. ಇದನ್ನೂ ಓದಿ: ಪೊಲೀಸರೇ ನಮ್ಮ ಮನೆಯಲ್ಲಿ ವಿಷ ಇಟ್ಟಿದ್ದಾರೆ – ವಿಷಜಂತು ಅಂಬಿಕಾ ಹೈಡ್ರಾಮ

    ಪೊಲೀಸರ ನಡೆಯಿಂದ ಎದ್ದಿರುವ ಪ್ರಶ್ನೆಗಳೇನು?:
    10 ದಿನ ಕಸ್ಟಡಿಗೆ ಕೇಳಿದ್ದ ಪೊಲೀಸರು ಕೇವಲ 2 ದಿನದಲ್ಲಿ ತನಿಖೆ ಮುಗಿಸಿದ್ದು ಹೇಗೆ?. ಅಂಬಿಕಾಳ ನಡೆ ಪೊಲೀಸರಿಗೆ ಭಯ ತರಿಸಿದೆಯೇ? ಜಿಲ್ಲಾ ಪೊಲೀಸರಿಂದ ನನಗೆ ನ್ಯಾಯ ಸಿಗೋದಿಲ್ಲ ಎಂಬ ಹೇಳಿಕೆ ಪೊಲೀಸರಿಗೆ ನಡುಕ ಹುಟ್ಟಿಸಿದೆಯೇ ಅನ್ನೋ ಪ್ರಶ್ನೆಗಳು ಹುಟ್ಟಿಕೊಂಡಿವೆ.

    ಅಂಬಿಕಾಳ ಬಳಿ ಅಧಿಕಾರಿಗಳು, ರಾಜಕೀಯ ಮುಖಂಡರು ಮತ್ತು ಮಠಾಧೀಶರ ಮಹತ್ತರವಾದ ದಾಖಲೆಗಳಿರುವುದು ನಿಜನಾ. ಯಾಕಂದ್ರೆ ಪದೇ ಪದೇ ಅಂಬಿಕಾ ಮಾಧ್ಯಮದವರ ಮುಂದೆ ಬಂದ್ರೆ ಅಕ್ರಮಗಳನ್ನ ಬಾಯಿ ಬಿಡುವಳೇ ಎಂಬ ಅನುಮಾನ ಪೊಲೀಸರಿಗಿದೆಯೇ ಅನ್ನೋ ಪ್ರಶ್ನೆಯೂ ಮೂಡಿದೆ. ಇದನ್ನೂ ಓದಿ: ಸುಳ್ವಾಡಿ ಕೇಸ್ – ಅಂಬಿಕಾ ಬಳಿಕ ಪೊಲೀಸರ ಮುಂದೆ ವಿಷಸ್ವಾಮಿ ನಾಟಕ!

    ಇಂದು ಮದ್ಯಾಹ್ನವರೆಗೆ ಕಾಲಾವಕಾಶವಿದ್ದರೂ ಮಧ್ಯರಾತ್ರಿ ಹಾಜರಿಪಡಿಸಿದ ಮರ್ಮ ಏನು? ಅಂಬಿಕಾ ಬಳಿ ಇರುವ ಕೆಲವು ದಾಖಲೆ ಪೊಲೀಸರ ಬಳಿಯೂ, ಕೆಲವು ದಾಖಲೆಗಳು ಆಕೆರ ಆಪ್ತರ ಬಳಿ ಇದೆಯೇ? ಅಂಬಿಕಾ ಸಿಬಿಐ ತನಿಖೆ ಕೇಳೋದಾದರೂ ಏಕೆ? ತನ್ನ ಬಳಿ ಇರುವ ದಾಖಲಾತಿಯನ್ನ ಜಿಲ್ಲಾ ಪೊಲೀಸರಿಗೆ ನೀಡಿದರೆ ನಾಶಪಡಿಸುವ ಸಾಧ್ಯತೆ ಇದೆಯೇ ಎಂಬ ಅನುಮಾನ ಇದೆಯೇ? ಸಿಬಿಐ ಮುಂದೆ ಶರಣು ಪಡಿಸಿದರೆ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮತ್ತೊಂದು ಮುಖ ಕಳಚಿ ಬೀಳಲಿದೆಯೇ ಅನ್ನೋ ಪ್ರಶ್ನೆಗಳ ಸುರಿಮಳೆಯೇ ಇದೀಗ ಎದ್ದಿದೆ. ಇದನ್ನೂ ಓದಿ: ಮಾರಮ್ಮ ದೇವಸ್ಥಾನದ ದುರಂತ – ಆರೋಪಿಗಳು ಜೈಲಿಗೆ ಶಿಫ್ಟ್

    https://www.youtube.com/watch?v=Ejrz4lVX5-4

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೈಂಗಿಕ ಕಿರುಕುಳ ಆರೋಪ- ಮನನೊಂದ ಟೆಕ್ಕಿ ಆತ್ಮಹತ್ಯೆಗೆ ಶರಣು

    ಲೈಂಗಿಕ ಕಿರುಕುಳ ಆರೋಪ- ಮನನೊಂದ ಟೆಕ್ಕಿ ಆತ್ಮಹತ್ಯೆಗೆ ಶರಣು

    ಲಕ್ನೋ: ಕೆಲಸ ನಿರ್ವಹಿಸುತ್ತಿದ್ದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಆರೋಪವನ್ನು ಎದುರಿಸುತ್ತಿದ್ದ 35 ವರ್ಷದ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

    35 ವರ್ಷದ ಸ್ವರೂಪ್ ರಾಜ್ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಸ್ವರೂಪ್ ನೋಯ್ಡಾದ ಜೆನ್‍ಪ್ಯಾಕ್ಟ್ ಸಾಫ್ಟ್ ವೇರ್ ಕಂಪೆನಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಇತ್ತೀಚೆಗೆ ಕಚೇರಿಯಲ್ಲಿ ಇಬ್ಬರು ಸಹೋದ್ಯೋಗಿಗಳು ಲೈಂಗಿಕ ಆರೋಪವನ್ನು ಸ್ವರೂಪ್ ಮೇಲೆ ಹೊರಿಸಿದ್ದರು. ಹೀಗಾಗಿ ಸ್ವರೂಪ್ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿತ್ತೆಂದು ಪೊಲೀಸರು ಹೇಳಿದ್ದಾರೆ.

    ಲೈಂಗಿಕ ಆರೋಪದ ಆಪಾದನೆಯಿಂದ ತೀವ್ರವಾಗಿ ಮನನೊಂದಿದ್ದ ಸ್ವರೂಪ್, ಗುರುವಾರ ನೋಯ್ಡಾದ ಸೆಕ್ಟರ್ 137ರರಲ್ಲಿರುವ ತಮ್ಮ ನಿವಾಸದಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದೇವೆ. ಅಲ್ಲದೇ ಘಟನಾ ಸಂಬಂಧ ಸ್ವರೂಪ್ ಕುಟುಂಬದವರು ಯಾವುದೇ ದೂರನ್ನು ದಾಖಲಿಸಿಲ್ಲ. ಹೀಗಾಗಿ ಸ್ವಯಂ ದೂರನ್ನು ದಾಖಲಿಸಿಕೊಂಡಿದ್ದೇವೆಂದು ಗೌತಮ್ ಬುದ್ಧ ನಗರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಪಾಲ್ ಶರ್ಮಾ ಅವರು ಹೇಳಿದ್ದಾರೆ.

    ಸ್ವರೂಪ್ ರಾಜ್ ಆತ್ಮಹತ್ಯೆಗೂ ಮುನ್ನ ತನ್ನ ಪತ್ನಿಗೆ ಪತ್ರ ಬರೆದಿದ್ದರು, ಪತ್ರದಲ್ಲಿ “ನಿನಗೆ ಗೊತ್ತು ನಾನು ನಿನ್ನನ್ನು ಎಷ್ಟು ಪ್ರೀತಿಸುತ್ತೇನೆಂದು. ಆದರೆ ನನ್ನ ಕಚೇರಿಯಲ್ಲಿ ಇಬ್ಬರು ಸಹದ್ಯೋಗಿಗಳು ನನ್ನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಮಾಡಿದ್ದಾರೆ. ನನ್ನನ್ನು ನಂಬು ನಾನು ಆ ರೀತಿ ನಡೆದುಕೊಂಡಿಲ್ಲ. ನನಗೆ ಗೊತ್ತು ಈ ಜಗತ್ತು ಯಾವ ರೀತಿ ಅರ್ಥಮಾಡಿಕೊಳ್ಳುತ್ತದೆಂದು. ಆದರೂ ನೀನು ಹಾಗೂ ನಮ್ಮ ಕುಟುಂಬ ನನ್ನನ್ನು ನಂಬಿದರೇ ಸಾಕು” ಎಂದು ಬರೆದಿದ್ದಾರೆ.

    “ಆ ಒಂದು ಆಪಾದನೆ ಶೀಘ್ರವೇ ಜೆನ್‍ಪ್ಯಾಕ್ಟ್ ನಲ್ಲಿರುವವರಿಗೆ ತಿಳಿಯುತ್ತದೆ. ಆದರೆ ನಾನು ಎಲ್ಲರನ್ನೂ ಎದುರಿಸಲು ಸಾಧ್ಯವಿಲ್ಲ. ನಾನು ಧೈರ್ಯ ಹಾಗೂ ಗೌರವದಿಂದ ನಿನ್ನ ಜೊತೆ ಜೀವನ ಸಾಗಿಸಬೇಕೆಂದು ಅಂದುಕೊಂಡಿದ್ದೆ. ನಿನ್ನ ಗಂಡ ಏನೂ ಮಾಡಲಿಲ್ಲ. ನಾನು ಆರೋಪ ಮುಕ್ತನಾಗಿ ಬಂದರೂ, ಎಲ್ಲರೂ ನನ್ನನ್ನು ಕೆಟ್ಟ ರೀತಿಯಲ್ಲೇ ನೋಡುತ್ತಾರೆಂದು” ಬರೆದಿದ್ದಾರೆಂದು ಅಜಯ್ ಪಾಲ್ ಶರ್ಮಾ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv