Tag: accused

  • ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ – ಆರೋಪಿಗಳು ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ

    ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ – ಆರೋಪಿಗಳು ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ

    ಚಾಮರಾಜನಗರ: ಸುಳ್ವಾಡಿ ಕಿಚ್‍ಕುತ್ ಮಾರಮ್ಮ ದೇವಿ ಪ್ರಸಾದ ದುರಂತ ಪ್ರಕರಣದ ನಾಲ್ವರು ಆರೋಪಿಗಳನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದಾರೆ. ಮಾರಮ್ಮ ದೇವಾಲಯ ಪ್ರಸಾದ ಸೇವನೆಯಿಂದಾಗಿ 15 ಮಂದಿ ಮೃತಪಟ್ಟಿದ್ದರು. ಈ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಪ್ರಸಾದಕ್ಕೆ ವಿಷ ಪ್ರಾಶನ ಮಾಡಿದ್ದ ಪ್ರಮುಖ ರೂವಾರಿಗಳಾಗಿದ್ದ ಇಮ್ಮಡಿ ಮಹಾದೇವಸ್ವಾಮಿ, ಅಂಬಿಕಾ, ಮಹದೇವಸ್ವಾಮಿ ಹಾಗೂ ಮಾದೇಶ್ ಎಂಬ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಇಂದು ಸಂಜೆ ಕೊಳ್ಳೇಗಾಲದ ಅಂಬೇಡ್ಕರ್ ರಸ್ತೆಯಲ್ಲಿನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಶ್ರೀಕಾಂತ್ ಅವರ ಮುಂದೆ ಆರೋಪಿಗಳನ್ನು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದಾರೆ.

    ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ವಿಚಾರ ತಿಳಿಯುತ್ತಿದ್ದಂತೆ, ನ್ಯಾಯಾಧೀಶರ ಮನೆ ಮುಂದೆ ಜನರು ಜಮಾಯಿಸಿದ್ದರು. ಇದರ ಮಾಹಿತಿ ಪಡೆದ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಧೀಶರ ಮನೆ ಸುತ್ತ ಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದರು. ಇದನ್ನೂ ಓದಿ : ಮಹದೇವ ಸ್ವಾಮಿಯೇ ಸುಳ್ವಾಡಿಯ ವಿಷ ಸರ್ಪ -ಸ್ವಾಮಿಯ ಸಂಚನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಐಜಿಪಿ

    ಘಟನಾ ವಿವರ:
    ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಕಿಕ್ ಕುತ್ ಮಾರಮ್ಮ ದೇವಸ್ಥಾನದಲ್ಲಿ ಕಳೆದ ಶುಕ್ರವಾರ ಗೋಪುರದ ಶಂಕುಸ್ಥಾಪನೆ ಕಾರ್ಯಕ್ರಮ ನೇರವೇರಿತ್ತು. ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದ ಬಳಿಕ, ಭಕ್ತರು ಪ್ರಸಾದದ ರೂಪದಲ್ಲಿ ರೈಸ್ ಬಾತ್ ಸೇವಿಸಿದ್ದರು. ಆದರೆ ಸ್ವಲ್ಪ ಸಮಯದ ನಂತರ ರೈಸ್ ಬಾತ್ ಸೇವಿಸಿದ್ದ 100 ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದರು. ಇದನ್ನು ಗಮನಿಸಿದ್ದ ಸ್ಥಳೀಯರು ಕೂಡಲೇ 108 ಆಂಬ್ಯುಲೆನ್ಸ್ ಗೆ ಕರೆ ಮಾಡಿ ಅಸ್ವಸ್ಥರನ್ನು ಆಸ್ಪತ್ರೆಗೆ ರವಾನಿಸಿದ್ದರು. ಅಸ್ವಸ್ಥರನ್ನು ಪರೀಕ್ಷಿಸಿದ್ದ ವೈದ್ಯರು, ಪ್ರಸಾದಲ್ಲಿ ವಿಷ ಬೆರೆತಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಅಲ್ಲದೇ ವಿಧಿವಿಜ್ಞಾನ ವರದಿಯ ಪ್ರಕಾರ ಪ್ರಸಾದದಲ್ಲಿ ಆರ್ಗಾನ್ ಪಾಸ್ಫರಸ್ ಕಾಂಪೌಂಡ್ ಮೋನೋಕ್ರೋಟೋಫೋಸ್ ಎಂಬ ಕ್ರಿಮಿನಾಶಕ ಮಿಶ್ರಣವಾಗಿರುವುದಾಗಿ ಹೇಳಿತ್ತು. ಈ ಕ್ರಿಮಿನಾಶಕ ಮಿಶ್ರಣ ಮಾಡಿದ್ದ ಪ್ರಸಾದ ಸೇವಿಸಿದ್ದರ ಪರಿಣಾಮ ಇದುವರೆಗೂ 15 ಮಂದಿ ಮೃತಪಟ್ಟಿದ್ದರು.

    ತನಿಖಾ ವಿವರ:
    ವಿಷ ಪ್ರಸಾದ ಸೇವನೆ ಬಳಿಕ ಹಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗುತ್ತಾರೆ. ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್‍ಪಿ ಧರ್ಮೇಂದ್ರ ಕುಮಾರ್ ಮೀನಾ, ಅಪರ ಪೊಲೀಸ್ ಅಧೀಕ್ಷಕರರಾದ ಶ್ರೀಮತಿ ಗೀತಪ್ರಸನ್ನ ಹಾಗೂ ಕೊಳ್ಳೇಗಾಲ ಡಿವೈಎಸ್‍ಪಿ ಪುಟ್ಟಮಾದಯ್ಯ, ಜಿಲ್ಲಾಡಳಿತದ ಸಹಕಾರದೊಂದಿಗೆ ಮುತುವರ್ಜಿ ವಹಿಸಿ ಯಾವುದೇ ಕಾನೂನು ವ್ಯವಸ್ಥೆಗೆ ಭಂಗವಾಗುವಂತಹ ಘಟನೆ ನಡೆಯದಂತೆ ನೋಡಿಕೊಳ್ಳುತ್ತಾರೆ.

    ರೈಸ್ ಬಾತ್‍ನಲ್ಲಿ ವಿಷವನ್ನು ಬೆರೆಸಿದ್ದ ಆಸಾಮಿಗಳನ್ನು ಪತ್ತೆ ಮಾಡುವ ಸಲುವಾಗಿ ಕೊಳ್ಳೇಗಾಲ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪುಟ್ಟಮಾದಯ್ಯ ಅವರ ನೇತೃತ್ವದ 5 ವಿವಿಧ ತಂಡಗಳನ್ನು ರಚಿಸಿದರು. ತನಿಖೆ ಕೈಗೊಂಡಿದ್ದ 5 ತಂಡಗಳು ಕೌಶಲ್ಯದಿಂದ ಪ್ರತಿಯೊಂದು ಅಂಶಗಳನ್ನು ಗಣನೆಗೆ ತೆಗೆದುಕೊಂಡು ಲಭ್ಯವಿದ್ದ ಮಾಹಿತಿಯನ್ನು ವಿಶ್ಲೇಷಿಸಿ ಹಲವಾರು ಜನರನ್ನು ವಿಚಾರಣೆಗೆ ಒಳಪಡಿಸಿ ವಿಧಿ ವಿಜ್ಞಾನ ಪ್ರಯೋಗಾಲಯದ ಪರಿಣತರ ತಂಡದ ನೆರವನ್ನು ಬಳಸಿಕೊಂಡು ಈ ಘೋರ ನರಹತ್ಯೆ ನಡೆಸಿರುವ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದರು.

    ಆರೋಪಿಗಳ ವಿವರ:
    1. ಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಮಠದ ಇಮ್ಮಡಿ ಮಹದೇವಸ್ವಾಮಿ (52) @ ದೇವಣ್ಣಬುದ್ದಿ ವೀರಬಸಪ್ಪ
    2. ಕೊಳ್ಳೇಗಾಲ ತಾಲೂಕಿನ ಮಾರ್ಟಳ್ಳಿ ಗ್ರಾಮದ (ಸ್ವಂತ ಸ್ಥಳ ಶ್ಯಾಗ) ಅಂಬಿಕಾ ಮಾದೇಶ ಮಹದೇವಸ್ವಾಮಿ (35)
    3. ಸುಳ್ವಾಡಿ ಕಿಚ್ ಗುತ್ ಮಾರಮ್ಮ ದೇವಸ್ಥಾನದ ವ್ಯವಸ್ಥಾಪಕ ಮಾದೇಶ ಮಹದೇವಸ್ವಾಮಿ (46) @ ಶ್ಯಾಗ ಮಾದೇಶ
    4. ಈ ಹಿಂದೆ ನಾಗರಕಲ್ಲಿನ ಅರ್ಚಕನಾಗಿದ್ದ ಸುಳ್ವಾಡಿ ಗ್ರಾಮ ದೊಡ್ಡಯ್ಯತಂಬಡಿ (35) ದೊಡ್ಡಯ್ಯ ಬಿನ್ ಕಾಳತಂಬಡಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೂಕನಂತೆ ನಟಿಸಿ ದುಬಾರಿ ಬೆಲೆಯ ಮೊಬೈಲ್ ಎಗರಿಸುತ್ತಿದ್ದ ಕಳ್ಳ ಅರೆಸ್ಟ್

    ಮೂಕನಂತೆ ನಟಿಸಿ ದುಬಾರಿ ಬೆಲೆಯ ಮೊಬೈಲ್ ಎಗರಿಸುತ್ತಿದ್ದ ಕಳ್ಳ ಅರೆಸ್ಟ್

    ಶಿವಮೊಗ್ಗ: ಮೂಕನಂತೆ ನಟಿಸಿ, ಕಚೇರಿಗಳಿಗೆ ಭೇಟಿ ಸಹಾಯ ಕೇಳುವ ನೆಪದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೊಬೈಲ್ ಎಗರಿಸುತ್ತಿದ್ದ ಐನಾತಿ ಕಳ್ಳನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.

    ತಮಿಳುನಾಡಿನ ವೆಲ್ಲೂರಿನ ನಿವಾಸಿ ಮುರುಗನ್ ಬಂಧಿತ ಆರೋಪಿ. ಇತನು ದುಬಾರಿ ಬೆಲೆಯ ಮೊಬೈಲ್‍ಗಳನ್ನು ಕಳ್ಳತನ ಮಾಡುತ್ತಿದ್ದ. ನಗರದ ಬಿ.ಎಚ್.ರಸ್ತೆಯಲ್ಲಿನ ಕಚೇರಿಯೊಂದರಲ್ಲಿ ಕೈಚಳಕ ತೋರಿಸಲು ಹೋದಾಗ ಮುರುಗನ್ ಸಿಕ್ಕಿಬಿದ್ದಿದ್ದು, ಸ್ಥಳೀಯರು ಧರ್ಮದೇಟು ನೀಡಿ ಕೋಟೆ ಠಾಣೆ ಪೊಲೀಸರು ವಶಕ್ಕೆ ನೀಡಿದ್ದಾರೆ.

    ಏನಿದು ಪ್ರಕರಣ?:
    ನಾನು ಮೂಕ, ನನಗೆ ನಿಮ್ಮ ಕೈಲಾದ ಸಹಾಯ ಮಾಡಿ ಎಂದು ಮುದ್ರಿಸಿದ್ದ ಪೇಪರ್ ಗಳನ್ನು ಹಿಡಿದುಕೊಂಡು ಬ್ಯಾಂಕ್, ಸರ್ಕಾರಿ ಹಾಗೂ ಕಚೇರಿಗಳಿಗೆ ಹೋಗುತ್ತಿದ್ದ. ಮೊಬೈಲ್ ಪಕ್ಕದಲ್ಲಿ ಇಟ್ಟುಕೊಂಡು ಅಥವಾ ಟೆಬಲ್ ಮೇಲೆ ಇಡುತ್ತಿದ್ದ ಸಿಬ್ಬಂದಿಯೇ ಮುರುಗನ್ ಟಾರ್ಗೆಟ್ ಆಗಿರುತ್ತಿದ್ದರು. ಸಹಾಯಧನ ಕೇಳು ನೆಪದಲ್ಲಿ ಪತ್ರಿಕೆ ನೀಡಿ, ಅವರ ಗಮನವನ್ನು ಬೇರೆ ಕಡೆಗೆ ಸೆಳೆದು ಮೊಬೈಲ್‍ಗಳನ್ನು ಮುರುಗನ್ ಕಳ್ಳತನ ಮಾಡುತ್ತಿದ್ದ.

    ನಗರದಲ್ಲಿ ಶನಿವಾರ ಒಂದೇ ದಿನಕ್ಕೆ ಮುರುಗನ್ ವಿವಿಧ ಕಚೇರಿಯಲ್ಲಿ ಐದು ಮೊಬೈಲ್ ಕಳ್ಳತನ ಮಾಡಿದ್ದಾನೆ. ಕೊನೆಯದಾಗಿ ಐದನೇ ಮೊಬೈಲ್ ಅನ್ನು ಬ್ಯಾಂಕ್ ಅಧಿಕಾರಿಯೊಬ್ಬರಿಂದ ಎಗರಿಸಿ ಪರಾರಿಯಾಗಿದ್ದಾನೆ. ತಕ್ಷಣವೇ ಅಧಿಕಾರಿ ಮೊಬೈಲ್ ಕಾಣೆಯಾಗಿರುವುದು ಗಮನಕ್ಕೆ ಬಂದು ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಮುರುಗನ್ ಕೈಚಳಕ ಬೆಳಕಿಗೆ ಬಂದಿದೆ.

    ಬ್ಯಾಂಕ್‍ನಿಂದ ಮುಂದೆ ಸಾಗಿದ್ದ ಮುರುಗನ್‍ನನ್ನು ಹಿಡಿದು ಕೋಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಚಾರಣೆಯ ವೇಳೆಯೂ ಮುರುಗನ್ ಮೂಕನಂತೆ ನಟಿಸಿದ್ದಾನೆ. ಆತನ ವರ್ತನೆಯಿಂದ ತೀವ್ರ ವಿಚಾರಣೆಗೆ ಒಳಪಡಿಸಿದಾಗ. ಬಾಯಿ ಬಿಟ್ಟು ಮಾತನಾಡಿ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ ಮೊಬೈಲ್‍ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಸಾದಕ್ಕೆ ವಿಷ ಹಾಕಿದ ಆರೋಪಿಗಳನ್ನು ಕೂಡಲೇ ಗಲ್ಲಿಗೇರಿಸಿ- ಸ್ಥಳೀಯರ ಒತ್ತಾಯ

    ಪ್ರಸಾದಕ್ಕೆ ವಿಷ ಹಾಕಿದ ಆರೋಪಿಗಳನ್ನು ಕೂಡಲೇ ಗಲ್ಲಿಗೇರಿಸಿ- ಸ್ಥಳೀಯರ ಒತ್ತಾಯ

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ವಿಷ ಹಾಕಿದ ವ್ಯಕ್ತಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಅಂತ ಸ್ಥಳೀಯರು ಒತ್ತಾಯಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಗ್ರಾಮಸ್ಥರು, ರಾಮಾಪುರದಲ್ಲಿ ಗಾಂಜಾ ಪ್ರಕರಣದಲ್ಲಿ ದೊಡ್ಡಯ್ಯ ಸಿಕ್ಕಿಬಿದ್ದು ಅರೆಸ್ಟ್ ಆಗಿದ್ದ. ಆ ದೊಡ್ಡಯ್ಯನನ್ನು ಮಾರಮ್ಮ ದೇವಾಲಯದ ಟ್ರಸ್ಟ್ ಅಧ್ಯಕ್ಷರಾಗಿರೋ ಸಾಲೂರು ಮಠದ ಇಮ್ಮಡಿ ಮಹದೇವ ಸ್ವಾಮಿ ಬಿಡುಗಡೆಗೊಳಿಸಿ ಟ್ರಸ್ಟಿಯನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

    ಕಳೆದ 3 ತಿಂಗಳ ಹಿಂದೆ ಸ್ವಾಮೀಜಿ ಸಂಗಮೇಶ ಎನ್ನುವವರಿಗೆ ಕಪಾಳ ಮೋಕ್ಷವನ್ನು ಮಾಡಿದ್ದರು. ಪುಣ್ಯದ ಕೆಲಸ ಮಾಡಬೇಕು ಅಂತ ಹೇಳಿ ದೇವಸ್ಥಾನದ ಗೋಪುರ ಮಾಡುವಾಗ ಎಲ್ಲಿ ನನ್ನ ಹೆಸರು ತಪ್ಪಿ ಹೋಗುತ್ತೋ? ನನ್ನನ್ನು ಬಿಟ್ಟು ಗೋಪುರ ಮಾಡುತ್ತಿದ್ದಾರೆ. ಹೀಗಾಗಿ ನನ್ನ ಕಡೆಯಿಂದಲೇ ಆಗಬೇಕು ಎಂದು ಅದರಲ್ಲಿ ಬರುತ್ತಿರುವ ಆದಾಯವೆಲ್ಲಾ ನಮ್ಮ ನಮಗೆ ಸೇರಬೇಕು ಎನ್ನುವ ಉದ್ದೇಶಕ್ಕಾಗಿ ಈ ರೀತಿಯ ಪಿತೂರಿ ನಡೆಸಿದ್ದಾರೆ ಅಂತ ಆರೋಪಿಸಿದ್ದಾರೆ.

    ಸ್ವಾಮೀಜಿ, ದೇವಸ್ಥಾನದ ಅಂದ್ರೆ ಜನರಿಗೆ ಅಪಾರವಾದ ಗೌರವವಿದೆ. ಅದ್ರಲ್ಲೂ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟ ಅಂದ್ರೆ ಬಹಳ ಪ್ರಸಿದ್ಧಿ ಇದೆ. ಆದ್ರೆ ಇಂತಹ ಸ್ವಾಮೀಜಿಗಳಿಂದ ಇಡೀ ಸ್ವಾಮೀಜಿ ಕುಲಕ್ಕೆ ಎಲ್ಲಾ ದೇವಸ್ಥಾನಗಳಿಗೆ ಕೆಟ್ಟ ಹೆಸರು ಬರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪ್ರಕರಣ ಸಂಬಂಧ ಸಿಕ್ಕಿಬಿದ್ದವರನ್ನು ಹೆಚ್ಚು ದಿನ ಬಿಡದೆ ಪೊಲೀಸರು ತನಿಖೆ ಮಾಡಿದ ಕೂಡಲೇ ಪ್ರಕರಣದ ಶೀಘ್ರ ಇತ್ಯರ್ಥಕ್ಕೆ ವಿಶೇಷವಾದ ನ್ಯಾಯಾಲಯವನ್ನು ಸ್ಥಾಪಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.

    ಮುಗ್ಧ ಜನರು ಸ್ವಾಮೀಜಿಗಳನ್ನು ನಂಬುತ್ತಾರೆ. ಇಂತಹವರು ಇರೋದಕ್ಕಿಂತ ಸಾಯೋದೇ ಮುಲು, ಇವರಿಗೆಲ್ಲ ಕಠಿಣ ಶಿಕ್ಷೆ ವಿಧಿಸಬೇಕು. ಗಲ್ಲು ಶಿಕ್ಷೆಯೇ ನೀಡಬೇಕು ಅಂತ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ಈಗಾಗಲೇ ಮೃತಪಟ್ಟವರ ಕುಟುಂಬದವರು ಎಷ್ಟು ಸಂಕಟವನ್ನು ಅನುಭವಿಸುತ್ತಿದ್ದಾರೆಯೋ, ಅದು ಅವರಿಗೆ ಅರಿವಾಗಬೇಕು ಅಂತಾದ್ರೆ ಈ ಕ್ಷಣಿಕವೇ ಒಂದು ತಿಂಗಳೊಳಗಡೆ ಗಲ್ಲು ಶಿಕ್ಷೆ ಆಗಬೇಕು. ಇನ್ನೊಬ್ಬರು ಮತ್ತೆ ಇಂತಹ ನೀಚ ಕೃತ್ಯ ಎಸಗಬಾರದು ಅಂತ ಆರೋಪಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.

    ಸ್ವಾಮೀಜಿಯಿಂದ ಸುಪಾರಿ:
    ಹೇಗಾದರೂ ಮಾಡಿ ಇನ್ನೊಂದು ಬಣಕ್ಕೆ ಕೆಟ್ಟ ಹೆಸರು ತರಬೇಕೆಂಬ ಕೆಟ್ಟ ಆಲೋಚನೆ ಇಮ್ಮಡಿ ಸ್ವಾಮೀಜಿಯದ್ದಾಗಿತ್ತು. ಆಗ ಪ್ರಸಾದಕ್ಕೆ ವಿಷ ಬೆರೆಸುವ ಕುತಂತ್ರ ಹೊಳೆದಿದೆ. ವಿಷಮಿಶ್ರಿತ ಪ್ರಸಾದ ಸೇವಿಸಿದವರು ವಾಂತಿ ಮಾಡಿ ಅಸ್ವಸ್ಥಗೊಳ್ಳುತ್ತಾರೆ. ಆಗ ಟ್ರಸ್ಟಿ ಚಿನ್ನಪ್ಪಿ ಹಾಗೂ ಇತರರಿಗೆ ಕೆಟ್ಟ ಹೆಸರು ಬರುತ್ತದೆ. ಇದರಿಂದಾಗಿ ದೇವಸ್ಥಾನ ಸಂಪೂರ್ಣವಾಗಿ ತಮ್ಮ ಆಡಳಿತಕ್ಕೆ ಒಳಪಡುತ್ತೆ ಎಂಬುದು ಸ್ವಾಮೀಜಿ ಪ್ಲಾನ್ ಮಾಡಿಕೊಂಡಿದ್ದರು.

    ಸ್ವಾಮೀಜಿ ಮತ್ತು ವ್ಯವಸ್ಥಾಪಕ ಮಾದೇಶ್, ಮಾದೇಶನ ಹೆಂಡತಿ ಅಂಬಿಕಾ (ಅಂಬಿಕಾ ಸ್ವಾಮೀಜಿಯ ಸಂಬಂಧಿಯೂ ಹೌದು) ಈ ಮೂವರು ಸೇರಿ ಪ್ರಸಾದಕ್ಕೆ ವಿಷ ಬೆರೆಸಲು ಸಂಚು ರೂಪಿಸಿದರು. ಕ್ರಿಮಿನಾಶಕ ತಂದು ನಾಗರಕೊಯೀಲು ದೇವಸ್ಥಾನದ ಅರ್ಚಕ ದೊಡ್ಡಯ್ಯನಿಗೆ ನೀಡಿ ಹೇಗಾದರೂ ಮಾಡಿ ಪ್ರಸಾದಕ್ಕೆ ಬೆರೆಸುವಂತೆ ಸುಪಾರಿ ನೀಡಿದರು.

    ಈ ಮೂವರ ಅಣತಿಯಂತೆ ದೊಡ್ಡಯ್ಯ ಶಂಕುಸ್ಥಾಪನೆ ಸಮಾರಂಭದ ದಿನ ಎಲ್ಲರ ಕಣ್ತಪ್ಪಿಸಿ ರೈಸ್ ಪ್ರಸಾದಕ್ಕೆ ಕ್ರಿಮಿನಾಶಕ ಮಿಶ್ರಣ ಮಾಡಿದ್ದ. ಈ ವಿಷಯ ಅರಿಯದ ಚಿನ್ನಪ್ಪಿ ಹಾಗೂ ಇತರರು ಶಂಕುಸ್ಥಾಪನೆ ಸಮಾರಂಭಕ್ಕೆ ಬಂದಿದ್ದ ಭಕ್ತರಿಗೆ ವಿಷಮಿಶ್ರಿತ ಪ್ರಸಾದ ವಿತರಿಸಿದ್ದಾರೆ. ನೋಡುನೋಡುತ್ತಿದ್ದಂತೆ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತು. ಒಬ್ಬೊಬ್ಬರಾಗಿ ಸಾವನ್ನಪ್ಪತೊಡಗಿದರು. ಒಟ್ಟಿನಲ್ಲಿ 5 ಮಂದಿಯ ಕುತಂತ್ರಕ್ಕೆ 15 ಮಂದಿ ಅಮಾಯಕರು ಬಲಿಯಾಗಿದ್ದಾರೆ.

    https://www.youtube.com/watch?v=GJDDFeVaJcg

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾವಿನ ಪ್ರಸಾದಕ್ಕೆ ತಮಿಳುನಾಡು ನಂಟು- ಆದಾಯ ಬರ್ತಿದ್ದನ್ನು ಕಂಡು ದ್ವೇಷಕ್ಕೆ ವಿಷಪ್ರಾಶನ..?

    ಸಾವಿನ ಪ್ರಸಾದಕ್ಕೆ ತಮಿಳುನಾಡು ನಂಟು- ಆದಾಯ ಬರ್ತಿದ್ದನ್ನು ಕಂಡು ದ್ವೇಷಕ್ಕೆ ವಿಷಪ್ರಾಶನ..?

    ಚಾಮರಾಜನಗರ: ದೇವರ ಪ್ರಸಾದಕ್ಕೆ ವಿಷ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ದೇವಾಲಯದ ನಂಟಿದೆ. ಮಾರಮ್ಮ ದೇವಾಲಯಕ್ಕೆ ಬರುತ್ತಿದ್ದ ಆದಾಯವನ್ನು ಕಂಡು ದ್ವೇಷದಿಂದ ವಿಷಪ್ರಾಶನ ಮಾಡಲಾಗಿದೆ ಎಂದು ಪೊಲೀಸರ ವಶದಲ್ಲಿರುವ ಶಂಕಿತ ಆರೋಪಿ ಚಿನ್ನಪ್ಪ ಪುತ್ರ ಲೋಕೇಶ್ ಆರೋಪಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಲೋಕೇಶ್, ತಮಿಳುನಾಡಿನ ಬ್ರಹ್ಮೇಶ್ವರಿ ದೇವಾಲಯದ ಕಾಳಪ್ಪನವರಿಗೂ ನಮ್ಮ ತಂದೆಗೂ ಆಗುತ್ತಿರಲಿಲ್ಲ. ಮೊದಲು ತಮಿಳುನಾಡಿನ ಅರ್ಚಕರು ದೇವಾಲಯದ ಪೂಜೆ ಮಾಡುತ್ತಿದ್ದರು. ಆದರೆ ಸರಿಯಾದ ರೀತಿಯಲ್ಲಿ ಪೂಜೆ ಮಾಡದ ಕಾರಣ ದೇವಾಲಯದ ಟ್ರಸ್ಟಿ ಆಗಿದ್ದ ನಮ್ಮ ತಂದೆ ಹಾಗೂ ಗ್ರಾಮಸ್ಥರು ಜವಾಬ್ದಾರಿಯನ್ನು ವಹಿಸಿಕೊಂಡರು. ಇದರಿಂದ ಅವರಿಗೆ ದೇವಾಲಯ ಕೈ ತಪ್ಪಿತ್ತು. ಈ ಹಿಂದೆ ಕೂಡ ಸುಮಾರು 1 ಸಾವಿರ ಜನ ಗ್ರಾಮಕ್ಕೆ ಆಗಮಿಸಿ ಜಗಳ ಮಾಡಿದ್ದರು. ಆದರೆ ನಮ್ಮ ಗ್ರಾಮಸ್ಥರು ಊರಿನ ದೇವಾಲಯ ಎಂದು ಅವರಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಹಿಂದಿರುಗಿದ್ದರು ಎಂದು ತಿಳಿಸಿದರು.

    ನಮ್ಮ ತಂದೆ ಚಿನ್ನಪ್ಪ ದೇವಾಲಯದ ಜವಾಬ್ದಾರಿ ವಹಿಸಿದ್ದರು, ದೇವಾಲಯವನ್ನು ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಮಾಡಲಾಯಿತು. ಇದರಿಂದ ದೇವಾಲಯದ ಆದಾಯದ ಹೆಚ್ಚಾಗುವ ನಿರೀಕ್ಷೆ ಇತ್ತು. ಇದನ್ನು ಸಹಿಸಲಾದ ಮಂದಿ ಈಗ ನಮ್ಮನ್ನು ಕೊಲೆ ಮಾಡಲು ಈ ರೀತಿ ಪ್ಲಾನ್ ಮಾಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ದೇವರ ಪ್ರಸಾದವನ್ನು ಭಕ್ತರಿಗೆ ನೀಡಲು ಮಾಡಿರಲಿಲ್ಲ. ಕೇವಲ ನಮಗಾಗಿ ಸಣ್ಣ ಪ್ರಮಾಣದಲ್ಲಿ ಮಾಡಲಾಗಿತ್ತು. ಆದರೆ ಓಂ ಶಕ್ತಿ ಭಕ್ತರು ಬೇರೆ ದೇವಾಲಯಕ್ಕೆ ಹೋಗುವ ಹಿನ್ನೆಲೆಯಲ್ಲಿ ಪ್ರಸಾದ ಕೇಳಿದ್ದರು. ಆದ್ದರಿಂದಲೇ ನಮಗೆ ಮಾಡಿದ್ದ ಪ್ರಸಾದ ಅವರಿಗೆ ನೀಡಲಾಯಿತು ಎಂದು ಸ್ಪಷ್ಟನೆ ನೀಡಿದರು.

    ಒಂದೊಮ್ಮೆ ಭಕ್ತರು ಪ್ರಸಾದ ಸೇವನೆ ಮಾಡದೇ ಇದ್ದಿದ್ದರೆ ದೇವಾಲಯದ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಮಾತ್ರ ಪ್ರಸಾದ ಸೇವಿಸಿ ಸಾವನ್ನಪ್ಪುತ್ತಿದ್ದರು. ಆದರೆ ಈ ಕುತಂತ್ರಕ್ಕೆ ಭಕ್ತರು ಬಲಿಯಾಗಿದ್ದಾರೆ. ಈ ಹಿಂದೆ ಗ್ರಾಮಕ್ಕೆ ಬಂದ ವೇಳೆಯೂ ನಮಗೇ ದೇವಾಲಯ ನೀಡಬೇಕು ಎಂದು ತಮಿಳುನಾಡು ದೇವಾಲಯದ ಮಂದಿ ಎಚ್ಚರಿಕೆ ನೀಡಿದ್ದರು. ಆಗ ಹಿರಿಯರ ಸಮ್ಮುಖದಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿತ್ತು. ಆದ್ರೆ ಈ ರೀತಿ ನಮ್ಮ ಮೇಲೆ ದ್ವೇಷ ಸಾಧಿಸುತ್ತಾರೆ ಎಂಬ ಊಹೆಯೂ ನಮಗೆ ಇಲ್ಲ. ಪ್ರಸಾದ ತಯಾರು ಮಾಡಿದ ಅರ್ಚಕರ ಅಂಗವಿಕಲ ಪುತ್ರಿ, ನಮ್ಮ ಸಂಬಂಧಿಯೊಬ್ಬರು ಕೂಡ ಮೃತ ಪಟ್ಟಿದ್ದಾರೆ. ಪ್ರಸಾದ ತಯಾರು ಮಾಡಿದವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಆದರೆ ಪೊಲೀಸ್ ಠಾಣೆಯಲ್ಲೇ ಅವರು ಕೂಡ ವಾಂತಿ ಮಾಡಿಕೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.

    ದೇವಾಲಯದ ಅಭಿವೃದ್ಧಿ ಮಾಡಿದ ಹಿನ್ನೆಲೆಯಲ್ಲಿ ದೇವಿ ಮಾರಮ್ಮ ನಮ್ಮ ರಕ್ಷಣೆ ಮಾಡಿದೆ. ಆದರೆ ಭಕ್ತರು ಬಂದು ಆಹಾರ ಕೇಳದಿದ್ದರೆ ನಾವು, ನಮ್ಮ ಗ್ರಾಮಸ್ಥರು ಸಾವನ್ನಪ್ಪುತ್ತಿದ್ದೆವು. ಸದ್ಯ ನಮ್ಮ ತಂದೆ ಪೊಲೀಸರ ವಶದಲ್ಲಿ ಇದ್ದು, ನಮಗೆ ಮಾತನಾಡಲು ಅವಕಾಶ ನೀಡಿಲ್ಲ. ಆದರೆ ಪೊಲೀಸರೇ ನಮಗೆ ಕರೆ ಮಾಡಿ ಬಂಧನ ಮಾಡಬೇಕೆಂದು ಹೇಳಿದ್ದರು. ಆದರೆ ನಾನೇ ಪೊಲೀಸರಿಗೆ ಮಾಹಿತಿ ನೀಡಿ ನೇರ ಠಾಣೆಗೆ ಬರುವುದಾಗಿ ತಿಳಿಸಿ ಕಳುಹಿಸಿದ್ದೇವೆ. ಅಲ್ಲದೇ ದೇವಾಲಯದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಅವರಿಗೂ ಆಹ್ವಾನ ನೀಡಲಾಗಿತ್ತು. ಆದರೆ ಅವರ ಕಡೆಯವರು ಯಾರು ಬಂದ ಹಾಗೇ ಕಾಣಲಿಲ್ಲ. ದೇವಾಲಯದ ಪೂಜೆ ಕಾರ್ಯ ನಡೆದ ಕಾರಣ ಈ ಕುರಿತು ಹೆಚ್ಚಿನ ಗಮನಹರಿಸಲು ಸಾಧ್ಯವಾಗಿಲ್ಲ. ಈ ಕುರಿತು ತನಿಖೆ ನಡೆಸಿ ತಪ್ಪು ಮಾಡಿದವರಿಗೆ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದರು.

    https://www.youtube.com/watch?v=pU5B9V-A7NA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪೋಷಕರೇ ಎಚ್ಚರ ಎಚ್ಚರ – ಕಲಬುರಗಿಯಲ್ಲಿ ಎಗ್ಗಿಲ್ಲದೆ ನಡೀತಿದೆ ಹುಕ್ಕಾ ಮಾರಾಟ

    ಪೋಷಕರೇ ಎಚ್ಚರ ಎಚ್ಚರ – ಕಲಬುರಗಿಯಲ್ಲಿ ಎಗ್ಗಿಲ್ಲದೆ ನಡೀತಿದೆ ಹುಕ್ಕಾ ಮಾರಾಟ

    ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಹಬಾದ್ ಪಟ್ಟಣದ ಖಾಸಗಿ ಶಾಲೆಯಲ್ಲಿ ಹುಕ್ಕಾ ಮಾರಾಟ ದಂಧೆ ಎಗ್ಗಿಲ್ಲದೇ ನಡೀತಿದೆ. ಅಪ್ರಾಪ್ತ ಬಾಲಕರಿಗೆ ಯಾಮಾರಿಸಿ ಶಾಲೆಯ ಆವರಣದಲ್ಲೇ ರಾಜಾರೋಷವಾಗಿ ಹುಕ್ಕಾ ಮಾರಾಟ ಮಾಡ್ತಿದ್ದಾರೆ.

    ಶಹಬಾದ್ ನಿವಾಸಿ ರಿಜ್ವಾನ್ ಎಂಬವನು ಈ ದಂಧೆ ನಡೆಸುತ್ತಿದ್ದು, ಮಕ್ಕಳಿಂದ 1 ಸಾವಿರದಿಂದ 1200 ರೂಪಾಯಿಗೆ ಮಾರಾಟ ಮಾಡ್ತಿದ್ದಾನೆ. ಹುಕ್ಕಾ ಚಟಕ್ಕೆ ಬಿದ್ದಿರುವ ಮಕ್ಕಳು ಅಪ್ಪನ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಮನೆಯಲ್ಲಿನ ದುಡ್ಡು ಕಳ್ಳತನದಿಂದ ಅನುಮಾನಗೊಂಡ ಪೋಷಕರು ಫಾಲೋ ಮಾಡಿದಾಗ ಆರೋಪಿ ರಿಜ್ವಾನ್‍ನ ಅಸಲಿ ಬಣ್ಣ ಬಯಲಾಗಿದೆ.

    ಹುಕ್ಕಾ ಮಾರಾಟ ಮಾಡಲು ಬಾಲಕರನ್ನೇ ಆರೋಪಿ ಟಾರ್ಗೆಟ್ ಮಾಡಿದ್ದನು. ಯಾಕಂದ್ರೆ ಈ ಹಿಂದೆ ಕೆಲ ಹುಡುಗರು ಅಲ್ಲಿ ಹುಕ್ಕಾ ಖರೀದಿ ಮಾಡಿದ್ದರು. ಆ ಬಳಿಕ ಶಾಲಾ ಮಕ್ಕಳಿಗೆ ಅದರ ರುಚಿ ತೋರಿಸಿದ್ದಾನೆ. ಇದರಿಂದ ಪ್ರೇರೇಪಣೆಗೊಂಡ ಶಹಬಾಜ್ ನ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಹುಕ್ಕಾ ಖರೀದಿ ಮಾಡಿ ಸೇವನೆ ಮಾಡಲು ಆರಂಭಿಸಿದ್ರು. ಇತ್ತ ಪ್ರತಿನಿತ್ಯ ಮನೆಯಲ್ಲಿ ಹಣ ಕಳ್ಳತನವಾಗುತ್ತಿರುವುದನ್ನು ಮನಗಂಡ ಪೋಷಕರು ತಮ್ಮ ಮನೆಯ ಬಾಲಕರನ್ನು ಫಾಲೋ ಮಾಡಿದ್ದಾರೆ. ಈ ವೇಳೆ ಮಕ್ಕಳು ಹುಕ್ಕಾ ಖರೀದಿ ಮಾಡಿ ಸೇವನೆ ಮಾಡುವುದು ಬೆಳಕಿಗೆ ಬಂದಿದೆ.

    ಸದ್ಯ ಆರೋಪಿ ರಿಜ್ವಾನ್‍ನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಶಹಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಕೂಡ ಮತ್ತೊಂದು ಖಾಸಗಿ ಶಾಲೆಯಲ್ಲಿ ಮೂರು ಹುಕ್ಕಾಗಳು ಪತ್ತೆಯಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಹಳೇ ನೋಟು ಸಂಗ್ರಹಿಸೋ ಖತರ್ನಾಕ್ ಗ್ಯಾಂಗ್ ಬಂಧನ- 1.95 ಕೋಟಿ ರೂ. ವಶ

    ಹಳೇ ನೋಟು ಸಂಗ್ರಹಿಸೋ ಖತರ್ನಾಕ್ ಗ್ಯಾಂಗ್ ಬಂಧನ- 1.95 ಕೋಟಿ ರೂ. ವಶ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 500 ರೂ., 1 ಸಾವಿರ ರೂ. ನೋಟು ಬ್ಯಾನ್ ಮಾಡಿ ಸರಿಸುಮಾರು 2 ವರ್ಷ ಆಗುತ್ತಿದ್ದರೂ ನಗರದಲ್ಲಿ ಹಳೇ ನೋಟು ಬದಲಾವಣೆ ದಂಧೆಗೆ ಮಾತ್ರ ಬ್ರೇಕ್ ಬಿದ್ದಿಲ್ಲ. ಇದರಂತೆ ನಗರದಲ್ಲಿ ನೋಟು ಬದಲಾವಣೆ ಮಾಡುತ್ತಿದ್ದ ಗ್ಯಾಂಗನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

    ರಮೇಶ್, ಸಕಾರಕ್, ಪ್ರಕಾಶ್, ವೆಂಕಟರಾಮ್ ಬಂಧಿತ ಆರೋಪಿಗಳು. ಮಡಿಕೇರಿ ಮೂಲದ ವ್ಯಕ್ತಿಯೊಬ್ಬರಿಂದ ಹಳೇ ನೋಟು ತಂದಿದ್ದ ನಾಲ್ವರು ಇಪ್ಪತ್ತು ಪರ್ಸೆಂಟ್ ಕಮೀಷನ್‍ಗೆ ಹಳೇ ನೋಟು ಕೊಟ್ಟು ಹೊಸ ನೋಟು ಪಡೆಯುತ್ತಿದ್ದರು.

    ನೋಟು ಬದಲಾವಣೆ ದಂಧೆ ಮಾಡುತ್ತಿದ್ದ ಆರೋಪಿಗಳು ಬಿಜೆಪಿ ಸರ್ಕಾರದ ಅವಧಿ ಮುಗಿದ ಬಳಿಕ ಮತ್ತೆ ಹಳೇ ನೋಟು ಚಲಾವಣೆಗೆ ಬರುತ್ತೆ ಎಂದು ಜನರಿಗೆ ಸುಳ್ಳು ಹೇಳಿ ಮೋಸ ಮಾಡುತ್ತಿದ್ದರು. ಈಗಾಗಲೇ ಹಲವು ಮಂದಿಗೆ ಇದೇ ರೀತಿ ಹೇಳಿ ಮೋಸ ಮಾಡಿದ್ದ ಈ ಗ್ಯಾಂಗ್, ಹಳೆ ನೋಟುಗಳನ್ನು ತೆಗೆದುಕೊಳ್ಳಲು ಸಾಕಷ್ಟು ಗಿರಾಕಿಗಳನ್ನು ಹೊಂದಿದ್ದರು ಎನ್ನಲಾಗಿದೆ.

    ನಗರದ ನಂದಿನಿ ಲೇಔಟ್ ಬಸ್ ನಿಲ್ದಾಣದ ಬಳಿ 1,95 ಕೋಟಿ ರೂ. ಹಣ ಬದಲಾವಣೆಗಾಗಿ ಕಾದು ಕುಳಿತಿದ್ದ ವೇಳೆ ಖಚಿತ ಮಾಹಿತಿ ಪಡೆದ ಪೊಲೀಸರು ನಗದು ಸಮೇತ ಬಂಧಿಸಿದ್ದಾರೆ. ಸದ್ಯ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ನಂದಿನಿ ಲೇಔಟ್ ಪೊಲೀಸರು ಈ ಗ್ಯಾಂಗಿನ ಪ್ರಮುಖ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೇ ಇಂತಹ ಗ್ಯಾಂಗ್ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸರ್ಕಾರಿ ಸೌಲಭ್ಯ ಕೇಳಿದ್ರೆ ಲಂಚ ಕೇಳ್ತಾರೆ, ಇಲ್ಲಂದ್ರೆ ಮಂಚಕ್ಕೆ ಕರೀತಾರೆ – ಸಿಎಂ ಎಚ್‍ಡಿಕೆ ಕಾರ್ಯಕ್ರಮದಲ್ಲಿ ಮಹಿಳೆ ಅಳಲು

    ಸರ್ಕಾರಿ ಸೌಲಭ್ಯ ಕೇಳಿದ್ರೆ ಲಂಚ ಕೇಳ್ತಾರೆ, ಇಲ್ಲಂದ್ರೆ ಮಂಚಕ್ಕೆ ಕರೀತಾರೆ – ಸಿಎಂ ಎಚ್‍ಡಿಕೆ ಕಾರ್ಯಕ್ರಮದಲ್ಲಿ ಮಹಿಳೆ ಅಳಲು

    ಚಿಕ್ಕಬಳ್ಳಾಪುರ: ಸರ್ಕಾರಿ ಸೌಲಭ್ಯ ಕೇಳಿಕೊಂಡು ಹೋದರೆ ಲಂಚ ಕೇಳುತ್ತಾರೆ ಇಲ್ಲ ಅಂದರೆ ಮಂಚಕ್ಕೆ ಕರೀತಾರೆ ಎಂದು ಸಿಎಂ ಕುಮಾರಸ್ವಾಮಿ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ಸಿಎಂ ಮುಂದೆ ಅಳಲು ತೋಡಿಕೊಂಡಿದ್ದಾರೆ.

    ರೈತರ ಸಾಲಮನ್ನಾ ಯೋಜನೆಯ ಋಣಮುಕ್ತ ಪತ್ರ ವಿತರಿಸಲು ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಮಹಿಳೆ ಸಿಎಂ ಬಳಿ ತಮ್ಮ ಅಳಲು ತೋಡಿಕೊಳ್ಳಲು ಪ್ರಯತ್ನಿಸಿದರು. ಸಿಎಂ ಅವರಿಗೆ ತಮ್ಮ ಮನವಿ ತಿಳಿಸಲು ತೆರಳಿದ್ದ ವೇಳೆ ಮಧ್ಯ ಪ್ರವೇಶಿದ ಪೊಲೀಸರು ಮಹಿಳೆಯನ್ನು ಕಾರ್ಯಕ್ರಮ ಸ್ಥಳದಿಂದ ಹೊರ ಕರೆತಂದರು.

    ದೊಡ್ಡಬಳ್ಳಾಪುರ ನಗರ ಶಾಂತಿ ನಗರದ ನಿವಾಸಿಯಾದ ಛಾಯಾ ಅವರು ಸಿಎಂ ಬಳಿ ತಮ್ಮ ಸಮಸ್ಯೆ ಮುಂದಿಟ್ಟು ಸಹಾಯ ಕೇಳಲು ಪ್ರಯತ್ನಿಸಿದ್ರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಹಿಳೆ, ನನ್ನ ಪತಿ ಅಪಘಾತವೊಂದರಲ್ಲಿ ಕೈ ಮುರಿದುಕೊಂಡು ಅಂಗವಿಕಲರಾಗಿದ್ದರು. ಈ ವೇಳೆ ಕುಟುಂಬವನ್ನು ನಿರ್ವಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡರು. ನನಗೆ ಇಬ್ಬರು ಮಕ್ಕಳಿದ್ದು, ಅವರಿಗೆ ಶಿಕ್ಷಣ ಕೊಡಿಸಲು ಕೂಡ ನನಗೆ ಕಷ್ಟವಾಗಿದೆ ಎಂದರು.

    ಸ್ವಾಭಿಮಾನದಿಂದ ಬದಲು ಬಯಸಿ ಸರ್ಕಾರದ ಯೋಜನೆಗಳ ಸಹಾಯ ಪಡೆಯಲು ತೆರಳಿದರೆ ಲಂಚ ಕೇಳುತ್ತಾರೆ. ಹಣ ಇಲ್ಲ ಎಂದರೆ ನೀನೇ ಬಾ ಎಂದು ಕರೆಯುತ್ತಾರೆ ಎಂದು ಎಂದು ಹೇಳಿ ಕಣ್ಣೀರಿಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆರೋಪಿಯನ್ನೇ ಅಪಹರಿಸಿ 1.5 ಕೋಟಿ ರೂ. ಬೇಡಿಕೆ ಇಟ್ಟ ಖತರ್ನಾಕ್ ಪೊಲೀಸರು

    ಆರೋಪಿಯನ್ನೇ ಅಪಹರಿಸಿ 1.5 ಕೋಟಿ ರೂ. ಬೇಡಿಕೆ ಇಟ್ಟ ಖತರ್ನಾಕ್ ಪೊಲೀಸರು

    ನವದೆಹಲಿ: ವಂಚನೆ ಆರೋಪದ ಮೇಲೆ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲು ಹೋದ ಪೊಲೀಸರೇ ಆತನನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ವಿಚಿತ್ರ ಪ್ರಕರಣವೊಂದು ದೆಹಲಿಯಲ್ಲಿ ಬುಧವಾರದಂದು ಬೆಳಕಿಗೆ ಬಂದಿದೆ.

    ನಗರದ ರಣಹೋಲಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌  ಸುಬೆ ಸಿಂಗ್, ಮುಖ್ಯ ಪೇದೆ ಇಂಧು ಪಾವಟ್, ಪೇದೆ ಅಜಯ್ ಕುಮಾರ್ ಅಪಹರಣ ಮಾಡಿದ ಪೊಲೀಸರು. ಚಂಡೀಗಢದಲ್ಲಿ ಆರು ಜನರ ಮೇಲೆ ವಂಚನೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದರು. ಆದರೆ ಪ್ರಧಾನ್ ಎಂಬ ಆರೋಪಿ ಪರಾರಿಯಾಗಿದ್ದನು.

    ದೆಹಲಿಯಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಧಾನ್‍ನನ್ನು ಪತ್ತೆ ಹಚ್ಚಿದ ರಣಹೋಲಾ ಠಾಣೆಯ ಮೂವರು ಪೊಲೀಸರು, ಆತನನ್ನು ಬಂಧಿಸುವ ಬದಲು ಅಪಹರಿಸಿ ಉತ್ತಮ್‍ನಗರದ ಮನೆಯೊಂದರಲ್ಲಿ ಕೂಡಿ ಹಾಕಿದ್ದರು. ಬಳಿಕ ಆರೋಪಿಯ ಪತ್ನಿಗೆ ಕರೆ ಮಾಡಿ 1.5 ಕೋಟಿ ರೂ. ಹಣವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡಲು ನಿರಾಕರಿಸಿದರೆ ಪ್ರಧಾನ್ ಮೇಲೆ ಈಗಾಗಲೇ ಇರುವ ವಂಚನೆ ಪ್ರಕರಣದ ಜೊತೆಗೆ ಸುಳ್ಳು ಕೇಸ್‍ಗಳನ್ನು ಹಾಕುವುದಾಗಿ ಬೆದರಿಸಿದ್ದಾರೆ.

    ಪೊಲೀಸರು ಆರೋಪಿಯನ್ನು ಅಪಹರಿಸಿರುವ ಮಾಹಿತಿ ಹಿರಿಯಾ ಪೊಲೀಸ್ ಅಧಿಕಾರಿಗಳಿಗೆ ತಿಳಿಯುತ್ತಿದ್ದಂತೆ ಅಪಹರಣದಲ್ಲಿ ಭಾಗಿಯಾಗಿದ್ದ ಮೂವರು ಪೊಲೀಸರನ್ನು ಕರ್ತವ್ಯದಿಂದ ವಜಾಗೊಳಿಸಿ ಬಂಧಿಸಿದ್ದಾರೆ.

    ಈ ಘಟನೆ ಕುರಿತು ದೆಹಲಿಯ ರಣಹೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಂಗಿಯನ್ನು ಚುಡಾಯಿಸ್ಬೇಡ ಅಂದಿದ್ದಕ್ಕೆ ಕೊಲೆಯಾದ ಅಣ್ಣ

    ತಂಗಿಯನ್ನು ಚುಡಾಯಿಸ್ಬೇಡ ಅಂದಿದ್ದಕ್ಕೆ ಕೊಲೆಯಾದ ಅಣ್ಣ

    ಬೆಂಗಳೂರು: ತಂಗಿಯನ್ನು ಚುಡಾಯಿಸಬೇಡ ಎಂದು ವಾರ್ನಿಂಗ್ ನೀಡಿದ್ದ ಅಣ್ಣನನ್ನೇ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ರಾಜಧಾನಿ ಬ್ಯಾಟರಾಯನಪುರದಲ್ಲಿ ನಡೆದಿದೆ.

    ಮಂಜು ಕೊಲೆಯಾದ ದುರ್ದೈವಿ ಅಣ್ಣ. ಮೃತ ಮಂಜುವಿನ ತಂಗಿಯನ್ನು ಮುರುಗೇಶ್ ಎನ್ನುವ ವ್ಯಕ್ತಿ ಪ್ರತಿನಿತ್ಯ ರೇಗಿಸುತ್ತಿದ್ದ. ಒಂದು ದಿನ ಮುರುಗೇಶ್ ರೇಗಿಸುತ್ತಿರುವಾಗಲೇ ಮಂಜು ಎಂಟ್ರಿ ಆಗಿ ಹಲ್ಲೆ ನಡೆಸಿದ್ದ. ಬಳಿಕ ನನ್ನ ತಂಗಿಯನ್ನು ಚುಡಾಯಿಸ ಬೇಡ ಎಂದು ವಾರ್ನಿಂಗ್ ಕೊಟ್ಟು ಕಳುಹಿಸಿದ್ದ.

    ಹಲ್ಲೆಗೊಳಗಾದ ಮುರುಗೇಶ್ ತನ್ನ ಮರ್ಯಾದೆಯನ್ನು ಜನರ ಮುಂದೆ ತೆಗೆದಿದ್ದಾನೆಂದು ಸಿಟ್ಟಿಗೆದ್ದು, ತನ್ನ ಕುಟುಂಬಸ್ಥರೊಂದಿಗೆ ಸೇರಿ ಮಂಜುವನ್ನು ಕೊಲೆ ಮಾಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮುರಗೇಶ್ ಸೇರಿದಂತೆ ಆತನ ಪತ್ನಿ ಶಶಿಕಲಾ ಸೇರಿದಂತೆ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ.

    ಘಟನೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ- ಆರೋಪಿಗೆ ಗುಂಡಿನ ರುಚಿ ತೋರಿಸಿದ ಇನ್ಸ್​ಪೆಕ್ಟರ್

    ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ- ಆರೋಪಿಗೆ ಗುಂಡಿನ ರುಚಿ ತೋರಿಸಿದ ಇನ್ಸ್​ಪೆಕ್ಟರ್

    ಬೆಂಗಳೂರು: ಬಂಧಿಸಲು ಹೋದಾಗ ತನ್ನ ಮೇಲೆ ಹಲ್ಲೆ ನಡೆಸಿದಕ್ಕೆ ಆತ್ಮರಕ್ಷಣೆಗಾಗಿ ಇನ್ಸ್​ಪೆಕ್ಟರ್ ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಿದ್ದಾರೆ.

    ಹೆಣ್ಣೂರು ಇನ್ಸ್​ಪೆಕ್ಟರ್ ಎಸ್.ಪಿ ಕುಲಕರ್ಣಿ ಆರೋಪಿ ಅಭಿಷೇಕ್(19) ಮೇಲೆ ಸೋಮವಾರ ರಾತ್ರಿ ಗುಂಡು ಹಾರಿಸಿ ಸೆರೆ ಹಿಡಿದ್ದಾರೆ. ಗುಂಡಿನ ದಾಳಿಯಿಂದ ಬಿದ್ದಿದ್ದ ಆತನನ್ನು ಈಗ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ

    ಏನಿದು ಪ್ರಕರಣ?
    ಕಳೆದ ಶುಕ್ರವಾರ ರಾತ್ರಿ ಲಾರಿ ಚಾಲಕ ಕೇಶವ ಎಂಬಾತನನ್ನು ಮಚ್ಚಿನಿಂದ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಆರೋಪಿಗಳ ಪತ್ತೆಗೆ ಇನ್ಸ್​ಪೆಕ್ಟರ್ ಕುಲಕರ್ಣಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಈ ಕೊಲೆಯನ್ನು ಅಭಿಷೇಕ್ ಮಾಡಿದ್ದಾನೆ ಎನ್ನುವ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದರು.

    ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಸೋಮವಾರ ರಾತ್ರಿ ಹೆಣ್ಣೂರು ಬಂಡೆ ಬಳಿ ಆರೋಪಿ ಇರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಈ ಮಾಹಿತಿ ಆಧಾರದಲ್ಲಿ ಬಂಧಿಸಲು ಹೋದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಸಂತೋಷ್ ಮೇಲೆ ಚಾಕುವಿನಿಂದ ಅಭಿಷೇಕ್ ಹಲ್ಲೆ ನಡೆಸಿದ್ದಾನೆ.

    ಈ ವೇಳೆ ಎಚ್.ಡಿ ಕುಲಕರ್ಣಿ ಮೊದಲು ಆರೋಪಿಯನ್ನು ಹೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದ್ಯಾವುದಕ್ಕೂ ಆರೋಪಿ ಹೆದರದೇ ಕುಲಕರ್ಣಿ ಮೇಲೆಯೇ ಹಲ್ಲೆ ನಡೆಸಲು ಬಂದಾಗ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    https://www.youtube.com/watch?v=nXkG2Xs-PS0

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv