Tag: accused

  • ಕ್ರಿಕೆಟ್ ದೇವರ ವಿರುದ್ಧವೂ ನಾಲಿಗೆ ಹರಿಬಿಟ್ಟ ಶ್ರೀರೆಡ್ಡಿ!

    ಕ್ರಿಕೆಟ್ ದೇವರ ವಿರುದ್ಧವೂ ನಾಲಿಗೆ ಹರಿಬಿಟ್ಟ ಶ್ರೀರೆಡ್ಡಿ!

    – ಹೈದ್ರಾಬಾದ್‍ನಲ್ಲಿ ಚಾರ್ಮಿಂಗ್ ಹುಡುಗಿ ಜೊತೆ ಸಚಿನ್ ರೊಮ್ಯಾನ್ಸ್ ಮಾಡಿದ್ರಂತೆ?

    ಹೈದರಾಬಾದ್: ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ಬಗ್ಗೆ ನಡು ರಸ್ತೆಯಲ್ಲಿ ಬಟ್ಟೆಬಿಚ್ಚಿ ಪ್ರತಿಭಟನೆ ನಡೆಸಿದ್ದ ಟಾಲಿವುಡ್ ನಟಿ ಸದ್ಯ ಟೀಂ ಇಂಡಿಯಾ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ಅವರನ್ನು ಟಾರ್ಗೆಟ್ ಮಾಡಿ ಗಂಭೀರ ಆರೋಪ ಮಾಡಿದ್ದಾರೆ.

    ಈ ಕುರಿತು ತಮ್ಮ ಫೇಸ್‍ಬುಕ್‍ನಲ್ಲಿ ಶ್ರೀರೆಡ್ಡಿ ವಿವಾದಿತ ಸ್ಟೇಟಸ್ ಹಾಕಿದ್ದು, ಸಚಿನ್ ತೆಂಡೂಲ್ಕರ್ ಹೈದರಾಬಾದ್‍ಗೆ ಆಗಮಿಸಿದ ವೇಳೆ ಹುಡುಗಿ ಜೊತೆ ಸಚಿನ್ ರೊಮ್ಯಾನ್ಸ್ ಮಾಡುತ್ತಿದ್ದರು. ಅಲ್ಲದೇ ಹೈದರಾಬಾದ್‍ನಲ್ಲಿ ಹೈ ಪ್ರೊಫೈಲ್ ಹೊಂದಿರುವ ಚಾಮುಂಡೇಶ್ವರ್ ಸ್ವಾಮಿ ಅವರಿಗೆ ಮಧ್ಯವರ್ತಿಯಾಗಿದ್ದರು. ಖ್ಯಾತನಾಮ ಪಡೆದಿರುವವರು ರೊಮ್ಯಾನ್ಸ್ ಚೆನ್ನಾಗಿ ಮಾಡುತ್ತಾರೆ ಅಲ್ವಾ ಎಂದು ಪ್ರಶ್ನೆ ಮಾಡಿ ಎಂದು ಬರೆದುಕೊಂಡಿದ್ದಾರೆ.

    ಸದ್ಯ ಶ್ರೀರೆಡ್ಡಿಗೆ ಸ್ಟೇಟಸ್ ಗೆ ಕಿಡಿಕಾರಿದ ನೆಟ್ಟಿಗರು ದುರುದ್ದೇಶದಿಂದ ಬಿಟ್ಟಿ ಪ್ರಚಾರಕ್ಕಾಗಿ ಇಂತಹ ಸ್ಟೇಟಸ್ ಹಾಕಲಾಗುತ್ತಿದೆ ಎಂದು ತರಾಟೆ ತೆಗೆದುಕೊಂಡಿದ್ದಾರೆ. ಈ ಹಿಂದೆಯೂ ಟಾಲಿವುಡ್, ಕಾಲಿವುಡ್ ಸೇರಿದಂತೆ ಹಲವು ಸಿನಿಮಾ ರಂಗಗಳ ಸ್ಟಾರ್ ನಟರು, ನಿರ್ದೇಶಕರು ಹಾಗೂ ಕಲಾವಿದರ ಕುರಿತು ಇಂತಹದ್ದೇ ಆರೋಪ ಮಾಡಿದ್ದ ಶ್ರೀ ರೆಡ್ಡಿ ಕೆಲ ಸಾಕ್ಷ್ಯಗಳನ್ನು ನೀಡಿದ್ದರು. ಆದರೆ ಸಚಿನ್‍ರ ಮೇಲಿನ ಆರೋಪಕ್ಕೆ ಯಾವುದೇ ರೀತಿಯ ಸಾಕ್ಷ್ಯವನ್ನು ನೀಡಿಲ್ಲ.

    ಕೆಲ ದಿನಗಳ ಹಿಂದೆಯಷ್ಟೇ ನಟ, ನಿದೇರ್ಶಕ, ನಿರ್ಮಾಪಕ, ಡಾನ್ಸ್ ಮಾಸ್ಟರ್ ರಾಘವ ಲಾರೆನ್ಸ್ ವಿರುದ್ಧವೂ ಆರೋಪ ಮಾಡಿದ್ದ ಶ್ರೀರೆಡ್ಡಿ ಫೋಟೋವೊಂದನ್ನು ಪೋಸ್ಟ್ ಮಾಡಿದ್ದರು. ಅಲ್ಲದೇ ಈ ಕುರಿತು ಪ್ರತಿಕ್ರಿಯೆ ನೀಡಿದ್ದ ನಿದೇರ್ಶಕ ಲಾರೆನ್ಸ್, ಹೆಣ್ಣು ಮಕ್ಕಳನ್ನು ಎಷ್ಟು ಗೌರವಿಸುತ್ತೆನೆ ಎಂಬುವುದಕ್ಕೆ ನಮ್ಮ ಅಮ್ಮನಿಗಾಗಿ ನಿರ್ಮಾಣ ಮಾಡಿರುವ ದೇವಾಲಯವೇ ಸಾಕ್ಷಿ. ಅಮ್ಮನಿಗೆ ನೀಡುವ ಗೌರವವನ್ನು ಎಲ್ಲಾ ಮಹಿಳೆಯರಿಗೂ ನೀಡುತ್ತೆನೆ ಎಂದು ಸ್ಪಷ್ಟನೆ ನೀಡಿದ್ದರು. ಉಳಿದಂತೆ ಬಿಗ್ ಸ್ಟಾರ್ ಗಳಾದ ರಾಣಾ ದಗ್ಗುಬಾಟಿ ಸಹೋದರ ಸೇರಿದಂತೆ ಹಲವರ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು. ಈ ವೇಳೆ ಕೆಲ ಸಹಕಲಾವಿದರು ಕೂಡ ಶ್ರೀರೆಡ್ಡಿಗೆ ವಿರುದ್ಧ ಪ್ರತ್ಯಾರೋಪಗಳನ್ನು ಮಾಡಿದ್ದರು.

    ಶ್ರೀರೆಡ್ಡಿ ಆರೋಪಕ್ಕೆ ಚಿತ್ರರಂಗ ಮಾತ್ರವಲ್ಲವೇ ಹಲವು ಅಭಿಮಾನಿಗಳು ಶಾಕ್‍ಗೆ ಒಳಗಾಗಿದ್ದು, ಇದುವರೆಗೂ ಶ್ರೀರೆಡ್ಡಿ ತನ್ನ ಆರೋಪದ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೇ ಸಚಿನ್ ಕೂಡ ಈ ಕುರಿತು ಇದುವರೆಗೂ ಪ್ರತಿಕ್ರಿಯೆ ನೀಡಿಲ್ಲ. ಅದರೆ ಸದ್ಯ ಶ್ರೀರೆಡ್ಡಿ ಸದ್ಯ ತೆಂಡೂಲ್ಕರ್ ವಿರುದ್ಧ ಆರೋಪ ಮಾಡಿ ಸಚಿನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಠಾಣೆಯಲ್ಲೇ ಪೊಲೀಸರ ಮೇಲೆ ಗುದ್ದಲಿಯಿಂದ ಹಲ್ಲೆ ಮಾಡಿ ಆರೋಪಿ ಪರಾರಿ- ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ

    ಠಾಣೆಯಲ್ಲೇ ಪೊಲೀಸರ ಮೇಲೆ ಗುದ್ದಲಿಯಿಂದ ಹಲ್ಲೆ ಮಾಡಿ ಆರೋಪಿ ಪರಾರಿ- ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ

    ಭೋಪಾಲ್: ಬಂಧಿತ ಆರೋಪಿಯೊಬ್ಬ ಪೊಲೀಸ್ ಠಾಣೆಯಲ್ಲೇ ಇಬ್ಬರ ಪೇದೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾದ ಘಟನೆ ಮಧ್ಯಪ್ರದೇಶದ ಠಾಣೆಯಲ್ಲಿ ನಡೆದಿದೆ.

    ಭಾನುವಾರ ಈ ಘಟನೆ ನಡೆದಿದ್ದು, ವಿಷ್ಣು ರಾಜಾವತ್ ಎಂಬವನು ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ. ಪೊಲೀಸರು ಶಾಂತಿ ಕದಡಿದ ಕಾರಣಕ್ಕಾಗಿ ವಿಷ್ಣು ಹಾಗೂ ಆತನ ಸ್ನೇಹಿತನನ್ನು ಬಂಧಿಸಿದ್ದರು. ಆದರೆ ವಿಷ್ಣು ಸ್ನೇಹಿತನೊಂದಿಗೆ ಸೇರಿ ಠಾಣೆಯಲ್ಲಿ ಕೆಲಸದಲ್ಲಿ ಮಗ್ನರಾಗಿದ್ದ ಇಬ್ಬರು ಪೊಲೀಸ್ ಪೇದೆಯ ಮೇಲೆ ಗುದ್ದಲಿಯಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆ ನಡೆದ ಕೆಲ ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸಲಾಗಿದೆ.

    ಈ ಎಲ್ಲಾ ದೃಶ್ಯಗಳು ಠಾಣೆಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಯ ಹೊಡೆತಕ್ಕೆ ಪೇದೆಯೊಬ್ಬರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಈ ವೇಳೆ ಮುಖ್ಯ ಪೇದೆ ಉಮೇಶ್ ಬಾಬು ಕೃತ್ಯವನ್ನು ತಡೆಯಲು ಹೋಗಿದ್ದು ಅವರ ಮೇಲೂ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

    ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅದರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಇನ್ನೊಬ್ಬರನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ವರಿಷ್ಠ ಪೊಲೀಸ್ ಅಧಿಕಾರಿ ರುಡಾಲ್ಫ ಅಲ್ವರೆಜ್ ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಭಾನುವಾರ ಪೊಲೀಸರು ಭಿನ್ಡ್ ಜಿಲ್ಲೆಯಿಂದ ರಾಜಾವತ್ ಮತ್ತು ಆತನ ಸ್ನೇಹಿತ ಮಾನ್ಸಿಂಗ್ ನನ್ನು ಬಂಧಿಸಿ ಠಾಣೆಗೆ ಕರೆತಂದಿದ್ದರು. ಆರೋಪಿಗಳನ್ನು ಲಾಕಪ್‍ನಲ್ಲಿ ಇರಿಸದೇ ಹೊರಗೆ ಕುರಿಸಿದ್ದರು. ಈ ವೇಳೆ ಆರೋಪಿಗಳು ಯಾರು ಹಿರಿಯ ಪೊಲೀಸರು ಇಲ್ಲದೇ ಇರುವ ಸಮಯ ನೋಡಿ ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.

    ಇಬ್ಬರ ಮೇಲೂ ಐಪಿಸಿ ಸೆಕ್ಷನ್ 151 ರ ಅಡಿಯಲ್ಲಿ ಶಾಂತಿ ಕದಡುವಿಕೆ ಹಾಗೂ ಪೊಲೀಸ್ ಪೇದೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾದ ಆಪಾದನೆಯ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಡುಪಿ ಪೊಲೀಸರು ಬಿಜೆಪಿಯ ಏಜೆಂಟರು- ಜಿಲ್ಲಾ ಕಾಂಗ್ರೆಸ್ ಆರೋಪ

    ಉಡುಪಿ ಪೊಲೀಸರು ಬಿಜೆಪಿಯ ಏಜೆಂಟರು- ಜಿಲ್ಲಾ ಕಾಂಗ್ರೆಸ್ ಆರೋಪ

    ಉಡುಪಿ: ಭಾರತ್ ಬಂದ್ ವೇಳೆ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ, ನಗರಸಭಾ ಸದಸ್ಯರ ಮೇಲೆ ಬಿಜೆಪಿ ಗೂಂಡಾಗಳು ಮತ್ತು ಪೊಲೀಸ್ ಅಧಿಕಾರಿಗಳು ದೌರ್ಜನ್ಯ ನಡೆಸಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್‍ನಿಂದ ಆರೋಪಿಸಿದೆ.

    ಈ ಘಟನೆಯಿಂದ ಕಾಂಗ್ರೆಸ್ ಪಕ್ಷ ಧೃತಿಗೆಟ್ಟಿಲ್ಲ. ಬಿಜೆಪಿಯವರ ಗೂಂಡಾಗಿರಿ ಮತ್ತು ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಎದುರಿಸಲು ಕಾಂಗ್ರೆಸ್ ಸದಾ ಸಿದ್ದವಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಹೇಳಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಪ್ರಖ್ಯಾತ್ ಶೆಟ್ಟಿ, ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷವಾಗಿದ್ದು ಎಂದೂ ಕೂಡ ಹಿಂಸೆ ಪ್ರಚೋದನೆ ನೀಡುವ ಕೆಲಸ ಮಾಡಿದ ಉದಾಹರಣೆಗಳಿಲ್ಲ. ರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಭಾರತ್ ಬಂದ್ ಕರೆ ನೀಡಿದ್ದು, ಅದರ ಪ್ರಯುಕ್ತ ಜಿಲ್ಲೆಯಲ್ಲಿ ಕೂಡ ನಾಗರಿಕರಿಂದ ಉತ್ತಮವಾದ ಬೆಂಬಲ ವ್ಯಕ್ತವಾಗಿತ್ತು. ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ನಾಗರಿಕರು ಸಹಕರಿಸಿ ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ ವೇಳೆ ಬಿಜೆಪಿಗರು ಮಧ್ಯೆ ಬಂದು ಜನರನ್ನು ಕೆರಳಿಸುವ ಕೆಲಸ ಮಾಡಿರುವುದು ಅವರ ಹತಾಶೆ ಭಾವನೆಯನ್ನು ತೋರಿಸುತ್ತದೆ ಎಂದರು.

    ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ವೇಳೆ ಬಿಜೆಪಿಗರು ಹಲವು ಬಾರಿ ಬಂದ್ ನಡೆಸಿದ್ದಾರೆ. ಎಂದೂ ನಾವು ತಡೆದಿಲ್ಲ. ಯಾವುದೇ ಸಂದರ್ಭದಲ್ಲಿ ಕೂಡ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿಲ್ಲ. ಉದ್ದೇಶ ಪೂರ್ವಕವಾಗಿ ಗಲಭೆ ಸೃಷ್ಟಿಸುವ ನಿಟ್ಟಿನಲ್ಲಿ ಬಿಜೆಪಿಗರು ಮಧ್ಯ ಪ್ರವೇಶಿಸಿ ಬಂದ್ ಹಾಳು ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ದೂರಿದರು. ಈ ಸಮಯದಲ್ಲಿ ರಕ್ಷಣೆ ನೀಡಬೇಕಾಗಿದ್ದ ಪೋಲಿಸರು ಕೂಡ ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸಿರುವುದು ಖಂಡನೀಯ ಎಂದು ಹೇಳಿದರು.

    ಪ್ರತಿಭಟನೆಯ ವೇಳೆ ಶಾಂತಿ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಉಡುಪಿ ಪೋಲಿಸರು ಸಂಪೂರ್ಣ ವಿಫಲರಾಗಿದ್ದು, ಅವರುಗಳ ದೌರ್ಜನ್ಯವನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕಾಂಗ್ರೆಸ್ ಪಕ್ಷ ಇಂತಹ ಘಟನೆಯಿಂದ ಧೃತಿಗೆಟ್ಟಿಲ್ಲ ಬದಲಾಗಿ ಮುಂದೆಯೂ ಕೂಡ ಬಿಜೆಪಿಗರ ಗೂಂಡಾಗಿರಿಗೆ ಮತ್ತು ಪೋಲಿಸರ ದೌರ್ಜನ್ಯಕ್ಕೆ ಸೂಕ್ತ ಉತ್ತರ ನೀಡಲು ಶಕ್ತರಿದ್ದೇವೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಪೆಂಡಿಕ್ಸ್ ಇಲ್ಲದಿದ್ರೂ ಹಣದ ಆಸೆಗೆ ಆಪರೇಷನ್- ಮಿಮ್ಸ್ ವೈದ್ಯರ ವಿರುದ್ಧ ಗಂಭೀರ ಆರೋಪ

    ಅಪೆಂಡಿಕ್ಸ್ ಇಲ್ಲದಿದ್ರೂ ಹಣದ ಆಸೆಗೆ ಆಪರೇಷನ್- ಮಿಮ್ಸ್ ವೈದ್ಯರ ವಿರುದ್ಧ ಗಂಭೀರ ಆರೋಪ

    ಮಂಡ್ಯ: ಅಪೆಂಡಿಕ್ಸ್ ಇಲ್ಲದಿದ್ದರೂ ಹಣದಾಸೆಯಿಂದ ಮಂಡ್ಯ ಮಿಮ್ಸ್ ಆಸ್ಪತ್ರೆ ವೈದ್ಯ ಗೋಪಾಲಕೃಷ್ಣ ಆಪರೇಷನ್ ಮಾಡಲು ಮುಂದಾಗಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಕೇಶವಮೂರ್ತಿ ವೈದ್ಯರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಅಪೆಂಡಿಕ್ಸ್ ಇಲ್ಲದಿದ್ದರೂ ವೈದ್ಯರು ಆಪರೇಷನ್ ಮಾಡಲು ಮುಂದಾಗಿದ್ದಾರೆ. ಅದ್ದರಿಂದ ಅವರು ಮಾಧ್ಯಮ ಮುಂದೆಯೇ ಬಹಿರಂಗವಾಗಿ ಆಪರೇಷನ್ ಮಾಡಲಿ ಎಂದು ಸವಾಲು ಹಾಕಿದ್ದಾರೆ.

    ಡಾಕ್ಟರ್ ಗೋಪಾಲಕೃಷ್ಣ ಅವರ ಬಳಿ ಯಾರೇ ಹೊಟ್ಟೆನೋವು ಎಂದು ಹೇಳಿಕೊಂಡು ಹೋದರೂ ಅವರಿಗೆ ಅಪೆಂಡಿಕ್ಸ್ ಇದೆ ಎಂದು ಹಣ ಕೇಳುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಪರೀಕ್ಷಿಸುವ ಸಲುವಾಗಿ ನಾನು ಅವರ ಬಳಿ ಸುಳ್ಳು ಹೇಳಿಕೊಂಡು ಹೊಟ್ಟೆ ನೋವು ಎಂದು ಹೋಗಿದ್ದೆ. ನನ್ನನ್ನು ಖಾಸಗಿ ಸ್ಕ್ಯಾನಿಂಗ್ ಸೆಂಟರ್‍ನಲ್ಲಿ ತಪಾಸಣೆ ಮಾಡಿಸಿ, ನಿಮಗೆ ಅಪೆಂಡಿಕ್ಸ್ ಇದೆ ಎಂದು ಸುಳ್ಳು ಹೇಳಿ ಆಪರೇಷನ್ ಮಾಡಲು 5 ಸಾವಿರ ಖರ್ಚಾಗುತ್ತೆ ಎಂದು ಡಾಕ್ಟರ್ ಗೋಪಾಲಕೃಷ್ಣ ಹೇಳಿದ್ದರು. ಅಷ್ಟೇ ಅಲ್ಲದೇ ನನ್ನ ಬಳಿ ಒಂದೂವರೆ ಸಾವಿರ ಹಣ ಮುಂಗಡ ಪಡೆದು, ಆಪರೇಷನ್ ಮಾಡುವ ದಿನ ಉಳಿದ ಮೂರೂವರೆ ಸಾವಿರ ಹಣ ನೀಡುವಂತೆ ಹೇಳಿದ್ದಾರೆ ಎಂದು ಕೇಶವಮೂರ್ತಿ ಆರೋಪ ಮಾಡಿದ್ದಾರೆ.

    ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಪರೀಕ್ಷೆ ನಡೆಸಲು ಸೌಲಭ್ಯವಿದ್ದರೂ ರೋಗಿಗಳನ್ನು ಖಾಸಗಿ ಸ್ಕ್ಯಾನಿಂಗ್ ಸೆಂಟರ್‍ಗೆ ಪರೀಕ್ಷೆ ಮಾಡಿಸಿಕೊಳ್ಳಲು ಕಳುಹಿಸುತ್ತಾರೆ. ಅಷ್ಟೇ ಅಲ್ಲದೇ ಡಾಕ್ಟರ್ ಗೋಪಾಲಕೃಷ್ಣ ಮತ್ತು ನಾನು ಅಪೆಂಡಿಕ್ಸ್ ಆಪರೇಷನ್ ಬಗ್ಗೆ ಮಾತನಾಡಿರುವುದು ಹಾಗೂ ನಾನು ಅವರಿಗೆ ದುಡ್ಡು ಕೊಟ್ಟಿರುವುದನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದೇನೆ. ಈ ಬಗ್ಗೆ ದಾಖಲೆಗಳ ಸಮೇತ ಜಿಲ್ಲಾಧಿಕಾರಿ ಮಂಜುಶ್ರೀ, ಮಿಮ್ಸ್ ನಿರ್ದೇಶಕರಾದ ಪ್ರಕಾಶ್ ಹಾಗೂ ಉಸ್ತುವಾರಿ ಸಚಿವ ಪುಟ್ಟರಾಜು ಅವರಿಗೆ ದೂರು ಸಲ್ಲಿಸಿದ್ದೇನೆ ಎಂದು ತಿಳಿಸಿದರು.

    ಒಂದೊಮ್ಮೆ ನನಗೆ ಅಪೆಂಡಿಕ್ಸ್ ಇದ್ದರೆ ಮಾಧ್ಯಮದ ಎದುರು ಬಹಿರಂಗವಾಗಿ ಆಪರೇಷನ್ ಮಾಡಲಿ ಎಂದು ದೂರುದಾರ ಕೇಶವಮೂರ್ತಿ ತಿಳಿಸಿದ್ದಾರೆ. ಆದರೆ ಎಲ್ಲ ಆರೋಪಗಳನ್ನು ನಿರಾಕರಿಸಿರುವ ವೈದ್ಯ ಗೋಪಾಲಕೃಷ್ಣ, ನನ್ನ ಹೆಸರಿಗೆ ಕಪ್ಪು ಚುಕ್ಕೆ ತರುವ ಉದ್ದೇಶದಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೋರ್ಟ್ ಆವರಣದಲ್ಲಿಯೇ ಖಾಕಿಯ ಲಂಚಾವತಾರ

    ಕೋರ್ಟ್ ಆವರಣದಲ್ಲಿಯೇ ಖಾಕಿಯ ಲಂಚಾವತಾರ

    -ವಾರೆಂಟ್ ಜಾರಿಯಾದ ಆರೋಪಿಯಿಂದ ಲಂಚ

    ಬಳ್ಳಾರಿ: ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಪೊಲೀಸರೇ ಆತನಿಂದಲೇ ಹಣ ಪಡೆದು ನ್ಯಾಯಾಲಯಕ್ಕೆ ಮೋಸ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

    ನಗರದ ಹನುಮಂತ ಎನ್ನುವ ಆರೋಪಿಗೆ ಮಟ್ಕಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಆದರೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಪೊಲೀಸರು ಆರೋಪಿ ಹನುಮಂತ ಊರಿನಲ್ಲಿ ಇಲ್ಲ ಅಂತಾ ನ್ಯಾಯಾಲಯಕ್ಕೆ ಹೇಳಲು ಆತನಿಂದ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿವೆ.

    ನ್ಯಾಯಾಲಯದ ಆವರಣದಲ್ಲೆ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯ ಪೇದೆಗಳಾದ ಶ್ರೀನಿವಾಸ್ ಹಾಗೂ ಮುಜೀಬ್ ಎಂಬವರು ಆರೋಪಿಯಿಂದ ನ್ಯಾಯಾಲಯದ ಆವರಣದಲ್ಲೆ ಹಣ ಪಡೆದಿದ್ದಾರೆ. ಈ ಎಲ್ಲ ದೃಶ್ಯಗಳು ಮೊಬೈಲಿನಲ್ಲಿ ಸೆರೆಯಾಗಿವೆ.

    ಆರೋಪಿ ಹನುಮಂತ ನಿಂದ ನ್ಯಾಯಲಯದ ಆವರಣದಲ್ಲಿ ಎರಡು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಪೊಲೀಸ್ ಪೇದೆಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಪೇದೆಗಳ ವಿರುದ್ಧ ಹಿರಿಯ ಅಧಿಕಾರಿಗಳು ಎನೂ ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಇದೀಗ ಕುತೂಹಲ ಮೂಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಾಲ ಪಡೆದ ಹಣವನ್ನು ವಾಪಸ್ ಕೇಳಿದ್ದಕ್ಕೆ ಆತನನ್ನೇ ಕೊಂದ!

    ಸಾಲ ಪಡೆದ ಹಣವನ್ನು ವಾಪಸ್ ಕೇಳಿದ್ದಕ್ಕೆ ಆತನನ್ನೇ ಕೊಂದ!

    ಯಾದಗಿರಿ: 2.5 ಲಕ್ಷ ರೂ. ಸಾಲ ಪಡೆದ ಹಣವನ್ನು ವಾಪಸ್ ಕೇಳಿದಕ್ಕೆ ಸಾಲ ಕೊಟ್ಟ ವ್ಯಕ್ತಿಯನ್ನೇ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಈ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಹೊರಭಾಗದಲ್ಲಿ ನಡೆದಿದೆ. ದುಂಡಪ್ಪ ಹೂಗಾರ (24) ಕೊಲೆಯಾದ ವ್ಯಕ್ತಿ. ಇದೇ ತಿಂಗಳು 19ಕ್ಕೆ ಮರೆಪ್ಪ ಎಂಬವನು ದುಂಡಪ್ಪ ಅವರಿಗೆ ಪಡೆದು ಸಾಲದ ಹಣವನ್ನು ಕೊಡುತ್ತೇನೆಂದು ನಂಬಿಸಿ, ಅವರನ್ನು ಬೈಕ್ ಮೇಲೆ ಕೂರಿಸಿಕೊಂಡು ಹೋಗಿದ್ದಾನೆ. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದು ಮರೆಪ್ಪ, ದುಂಡಪ್ಪ ಅವರನ್ನು ಕೊಲೆ ಮಾಡುತ್ತಾನೆ. ಬಳಿಕ ಶವವನ್ನು ಕಾಲುವೆಯಲ್ಲಿ ಬಿಸಾಕಿದ್ದಾನೆ.

    ಘಟನೆ ಬಳಿಕ ದುಂಡಪ್ಪ ಅವರ ತಂದೆ ಸಾಹೇಬ್ ಅವರು ನಾಪತ್ತೆಯಾಗಿದ್ದಾರೆ ಎಂದು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ, ಆರೋಪಿ ಮರೇಪ್ಪನನ್ನು ಬಂಧಿಸಿದ್ದಾರೆ. ಸದ್ಯ ಅಗ್ನಿಶಾಮಕ ದಳದವರು ಶವಕ್ಕಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 1 ರೂ. ನಾಣ್ಯ ಹಾಕಿ ಪರಿಶೀಲನೆ: ಕೊನೆಗೆ ಹುಂಡಿಯೇ ಕಳ್ಳತನ!

    1 ರೂ. ನಾಣ್ಯ ಹಾಕಿ ಪರಿಶೀಲನೆ: ಕೊನೆಗೆ ಹುಂಡಿಯೇ ಕಳ್ಳತನ!

    – ಬೆಂಗಳೂರು ಪೊಲೀಸರಿಂದ ಕಳ್ಳರು ಅರೆಸ್ಟ್

    ಬೆಂಗಳೂರು: ದೇವಸ್ಥಾನದ ಹುಂಡಿಗೆ 1 ರೂ. ನಾಣ್ಯ ಹಾಕಿ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮೈಕೋಲೇಔಟ್ ಪೊಲೀಸರು ಬಂಧಿಸಿದ್ದಾರೆ.

    ಕುಮಾರ, ಮಂಜ, ಕೃಷ್ಣ, ವಿಜಯ, ಈ ನಾಲ್ವರು ಬಂಧಿತ ಆರೋಪಿಗಳಾಗಿದ್ದಾರೆ. ಈ ಆರೋಪಿಗಳು ಸ್ಟವ್ ರಿಪೇರಿ ಮಾಡೋದಾಗಿ ಏರಿಯಾಗಳಲ್ಲಿ ಓಡಾಡಿ ಕಳ್ಳತನ ಮಾಡುತ್ತಿದ್ದರು.

    ಈ ವೇಳೆ ಏರಿಯಾ ಸುತ್ತಾಡುವಾಗ ದೇವಸ್ಥಾನ ಕಂಡರೆ ಆರೋಪಿಗಳಿಗೆ ಎಲ್ಲಿಲ್ಲದ ಭಕ್ತಿ ಮೂಡುತ್ತಿತ್ತು. ಒಮ್ಮೆ ದೇವಸ್ಥಾನದ ಒಳಗೆ ಪ್ರವೇಶಿಸಿದರೆ ಅವರ ಕಣ್ಣು ಹುಂಡಿಯ ಮೇಲೆ ಬೀಳುತ್ತಿದ್ದು, ಹುಂಡಿಯಲ್ಲಿ ಹಣ ಇದೆಯಾ ಇಲ್ಲವೇ ಎನ್ನುವುದನ್ನು 1 ರೂ. ನಾಣ್ಯ ಹಾಕಿ ಖಚಿತ ಪಡಿಸಿಕೊಳ್ಳುತ್ತಿದ್ದರು. ಬಳಿಕ ಹಣ ಇದೆ ಅಂತ ಗೊತ್ತಾದರೆ ಹುಂಡಿಯನ್ನೇ ಕಳ್ಳತನ ಮಾಡುತ್ತಿದ್ದರು.

    ಆರೋಪಿಗಳು ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೆ ಮೈಕೋಲೇಔಟ್ ಇನ್ಸ್ ಪೆಕ್ಟರ್ ಅಜಯ್ ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದೆ.

    ಪೊಲೀಸರು ಆರೋಪಿಗಳಿಂದ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಆರೋಪಿಗಳ ಬಂಧನದಿಂದ ಬೇರೆ ಬೇರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯವೆಸಗಿದ್ದ 17 ಪ್ರಕರಣಗಳು ಬೆಳಕಿಗೆ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಂದು ಮಗುವಿಗೆ 45 ಲಕ್ಷ ರೂ.ನಂತೆ 300 ಮಕ್ಕಳನ್ನು ಮಾರಾಟ ಮಾಡಿದ್ದ ಕಿಂಗ್‍ಪಿನ್ ಅರೆಸ್ಟ್!

    ಒಂದು ಮಗುವಿಗೆ 45 ಲಕ್ಷ ರೂ.ನಂತೆ 300 ಮಕ್ಕಳನ್ನು ಮಾರಾಟ ಮಾಡಿದ್ದ ಕಿಂಗ್‍ಪಿನ್ ಅರೆಸ್ಟ್!

    ಮುಂಬೈ: ವಿದೇಶಕ್ಕೆ ಮಕ್ಕಳನ್ನು ಮಾರಾಟ ನಡೆಸುತ್ತಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತ ಆರೋಪಿಯು ಗುಜರಾತ್‍ನ ರಾಜುಭಾಯ್ ಗಮ್ಳೆವಾಲಾ ಅಲಿಯಾಸ್ ರಾಜುಭಾಯ್ ಆಗಿದ್ದಾನೆ. ಆರೋಪಿಯು 2007 ರಿಂದಲೂ ಮಕ್ಕಳ ಮಾರಾಟ ದಂಧೆಯಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದ್ದಾನೆ. ಒಂದು ಮಗುವನ್ನು ಅಮೆರಿಕಕ್ಕೆ 45 ಲಕ್ಷ ರೂಪಾಯಿಯಂತೆ ಮಾರಾಟ ಮಾಡಿದ್ದಾನೆಂದು ಪೊಲೀಸರು ಹೇಳಿದ್ದಾರೆ.

    ಭಾರತದಿಂದ ಅಮೆರಿಕಕ್ಕೆ ಸುಮಾರು 300 ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಬಾಲಕಿಯರನ್ನು ತಲಾ 45 ಲಕ್ಷ ರೂ.ಗೆ ಮಾರಾಟ ಮಾಡಿದ್ದು, ಹೆಚ್ಚಿನವರು ಗುಜರಾತ್ ಮೂಲದ ಮಕ್ಕಳಾಗಿದ್ದಾರೆ. ಗುಜರಾತಿನ ಬಡ ಕುಟುಂಬಗಳು ತಮ್ಮ 11 ರಿಂದ 16 ವರ್ಷದ ಮಕ್ಕಳನ್ನು ಸಾಕಲಾಗದೇ ರಾಜುಭಾಯ್‍ನಿಗೆ ಮಾರಾಟ ಮಾಡಿದ್ದಾರೆ. ಆದರೆ ಮಾರಾಟವಾದ ನೂರಾರು ಮಕ್ಕಳ ಸ್ಥಿತಿಗತಿ ಏನಾಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲವೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಮಾರಾಟ ಹೇಗೆ ನಡೆಯುತ್ತಿತ್ತು? ಹೇಗೆ ಅಮೆರಿಕಕ್ಕೆ ಕಳುಹಿಸುತ್ತಿದ್ದರು?
    ಅಮೆರಿಕದಿಂದ ಮಕ್ಕಳನ್ನು ಕೊಂಡುಕೊಳ್ಳಲು ಗಿರಾಕಿಗಳು ಆರ್ಡರ್ ಮಾಡಿದ ಕೂಡಲೇ ರಾಜುಭಾಯ್ ಹಾಗೂ ಆತನ ಸಹಚರರು ಬಡ ಕುಟುಂಬದ ಮಕ್ಕಳನ್ನು ಹುಡುಕುತ್ತಿದ್ದರು. ಹೆಚ್ಚಾಗಿ ಇವರಿಗೆ ಗುಜರಾತಿನ ಮೂಲದವರು ತಮ್ಮ ಹೆತ್ತಮಕ್ಕಳನ್ನೇ ಮಾರಾಟ ಮಾಡುತ್ತಿದ್ದರು. ಮಗುವನ್ನು ಪಡೆದುಕೊಂಡ ಬಳಿಕ, ಮಗುವಿನ ಹೋಲಿಕೆಯನ್ನೇ ಹೋಲುವ ಪಾಸ್‍ಪೋರ್ಟ್ ಹೊಂದಿರುವ ಮಕ್ಕಳ ಪೋಷಕರನ್ನು ಸಂಪರ್ಕಿಸುತ್ತಿದ್ದರು. ಅವರಿಂದ ಅಸಲಿ ಪಾಸ್‍ಪೋರ್ಟ್ ಪಡೆದುಕೊಂಡು ಮಕ್ಕಳಿಗೆ ಪಾಸ್‍ಪೋರ್ಟ್‍ನಲ್ಲಿರುವಂತೆಯೇ ಮೇಕ್‍ಅಪ್ ಮಾಡಿಸುತ್ತಿದ್ದರು. ನಂತರ ಮಗುವನ್ನು ಅಮೆರಿಕಕ್ಕೆ ಕಳುಹಿಸಿ, ಅಸಲಿ ಪಾಸ್‍ಪೋರ್ಟ್‍ಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸುತ್ತಿದ್ದರು ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ಬಾಲಿವುಡ್ ನಟಿ ಪ್ರೀತಿ ಸೂದ್‍ರವರು ಇದೇ ತಿಂಗಳ ಮಾರ್ಚ್ ನಲ್ಲಿ ನಗರದ ಸಲೂನ್‍ಗೆ ಹೋಗಿದ್ದಾರೆ. ಈ ವೇಳೆ ಸಲೂನ್‍ನಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮೇಕಪ್ ಮಾಡುತ್ತಿದ್ದನ್ನು ಕಂಡು ಪ್ರಶ್ನಿಸಿದ್ದಾರೆ. ಮಕ್ಕಳ ಜೊತೆ ಬಂದಿದ್ದ ಮೂವರು ವ್ಯಕ್ತಿಗಳು, ಇವರು ಅಮೆರಿಕ ದೇಶದವರಾಗಿದ್ದು, ಅವರ ಪೋಷಕರ ಬಳಿ ಕಳುಹಿಸಿ ಕೊಡಲು ಈ ರೀತಿ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದರಿಂದ ಅನುಮಾನಗೊಂಡ ನಟಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದಾಗ ಮೂವರು ವ್ಯಕ್ತಿಗಳ ಪೈಕಿ ಇಬ್ಬರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ಅವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಕ್ಕಳ ಕಳ್ಳ ಸಾಗಾಣಿಕೆ ಬೃಹತ್ ಜಾಲ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ನಿವೃತ್ತ ಪೊಲೀಸ್ ಇನ್ಸ್‍ಫೆಕ್ಟರ್ ಮಗ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದರು.

    ಆದರೆ ಪ್ರಕರಣದ ಕಿಂಗ್‍ಪಿನ್ ರಾಜುಭಾಯ್ ತಲೆಮರೆಸಿಕೊಂಡಿದ್ದ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು, ವಾಟ್ಸಪ್ ಮೂಲಕ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯು ಈ ಮೊದಲು 2007ರಲ್ಲಿ ಪಾಸ್‍ಪೋರ್ಟ್ ನಕಲು ಮಾಡಿದ್ದ ಆರೋಪದ ಮೇರೆಗೆ ಶಿಕ್ಷೆ ಅನುಭವಿಸಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 34 ಹಾಗೂ 373ರಡಿ ಪ್ರಕರಣ ದಾಖಲಾಗಿದ್ದು, ಆಗಸ್ಟ್ 18ರವರೆಗೆ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಡಿಸಿಪಿ ಪರಮ್‍ಜಿತ್ ಸಿಂಗ್ ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗುಟ್ಕಾ ಹಂಚಿಕೊಳ್ಳದ್ದಕ್ಕೆ ದಲಿತ ವ್ಯಕ್ತಿಗೆ ಬೆಂಕಿ ಹಚ್ಚಿದ ಪುಂಡರು!

    ಗುಟ್ಕಾ ಹಂಚಿಕೊಳ್ಳದ್ದಕ್ಕೆ ದಲಿತ ವ್ಯಕ್ತಿಗೆ ಬೆಂಕಿ ಹಚ್ಚಿದ ಪುಂಡರು!

    ಲಕ್ನೋ: ಗುಟ್ಕಾವನ್ನು ತಮ್ಮೊಂದಿಗೆ ಹಂಚಿಕೊಳ್ಳಲಿಲ್ಲವೆಂದು ಸಿಟ್ಟಿಗೆದ್ದ ಮೇಲ್ವರ್ಗದ ಇಬ್ಬರು ದಲಿತ ವ್ಯಕ್ತಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಮಥುರಾದ ಸಪೋಹ ಗ್ರಾಮಲ್ಲಿ ನಡೆದಿದೆ.

    ಸಪೋಹ ಗ್ರಾಮದ ಪರ್ದೇಶಿ (35) ಗಾಯಗೊಂಡ ದಲಿತ ವ್ಯಕ್ತಿ. ಶುಕ್ರವಾರ ಗ್ರಾಮದ ಅಂಗಡಿ ಬಳಿ ಗುಟ್ಕಾವನ್ನು ಹಂಚಿಕೊಳ್ಳುವ ವಿಚಾರಕ್ಕೆ ಅದೇ ಗ್ರಾಮದ ರಾಹುಲ್ ಠಾಕೂರ್ ಹಾಗೂ ರಾಜು ಎಂಬವರ ನಡುವೆ ಗಲಾಟೆ ಏರ್ಪಟ್ಟಿದೆ. ಇದರಿಂದ ರೊಚ್ಚಿಗೆದ್ದ ಇಬ್ಬರು ಪರ್ದೇಶಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಅಂಗಡಿಯಲ್ಲಿದ್ದ ಸಿಮೇಎಣ್ಣೆಯನ್ನು ಸುರಿದು ಬೆಂಕಿ ಹಂಚಿ ಪರಾರಿಯಾಗಿದ್ದಾರೆ.

    ಗಾಯಗೊಂಡಿದ್ದ ಪರ್ದೇಶಿಯನ್ನು ಅಂಗಡಿ ಮಾಲೀಕ ಹಾಗೂ ಗ್ರಾಮಸ್ಥರು ಕೂಡಲೇ ಮಥುರಾದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶೇ 20 ರಷ್ಟು ಸುಟ್ಟಗಾಯಗಳಾಗಿದ್ದು, ಜೀವಕ್ಕೆ ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಪರ್ದೇಶಿ ಸಹೋದರ ಮಥುರಾ ಪೊಲೀಸರಿಗೆ ದೂರು ನೀಡಿದ್ದಾರೆ.

    ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 307, 325, 504, 506 ಮತ್ತು ಎಸ್ಸಿ-ಎಸ್ಟಿ ಪ್ರಕರಣದಡಿ ದೂರು ದಾಖಲಿಸಿಕೊಂಡ ಪೊಲೀಸರು, ರಾಹುಲ್ ಠಾಕೂರ್ ಹಾಗೂ ರಾಜು ಎಂಬ  ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಘಟನೆ ಸಂಬಂಧ ಪ್ರತಿಕ್ರಿಯಿಸಿದ ಮಥುರಾ ಪೊಲೀಸ್ ಅಧಿಕಾರಿ ವಿನಯ್ ಚೌಹಾಣ್, ಶುಕ್ರವಾರ ಪರ್ದೇಶಿ ಎಂಬವರು ಗ್ರಾಮದ ಅಂಗಡಿಯಲ್ಲಿ ಗುಟ್ಕಾ ಹಾಗೂ ಇತರೆ ವಸ್ತುಗಳನ್ನು ಖರೀದಿಸಿದ್ದಾರೆ. ಈ ವೇಳೆ ಅಂಗಡಿ ಬಳಿಯಿದ್ದ ಆರೋಪಿಗಳು ಗುಟ್ಕಾವನ್ನು ಹಂಚಿಕೊಳ್ಳುವಂತೆ ಪರ್ದೇಶಿಗೆ ಕೇಳಿದ್ದಾರೆ. ಇದೇ ಕಾರಣಕ್ಕೆ ಇವರಿಬ್ಬರ ನಡುವೆ ಜಗಳವಾಗಿದ್ದು, ಆರೋಪಿಗಳು ಹಲ್ಲೆ ನಡೆಸಿದ್ದಲ್ಲದೇ, ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದರು ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ, ಕೊಲೆ ಪ್ರಕರಣಕ್ಕೆ ಟ್ವಿಸ್ಟ್

    ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ, ಕೊಲೆ ಪ್ರಕರಣಕ್ಕೆ ಟ್ವಿಸ್ಟ್

    ಕೋಲಾರ: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಂಜಿತ್ ಬಾಬು ಅಲಿಯಾಸ್ ಸುರೇಶ್ ಬಾಬುವನ್ನು ಶುಕ್ರವಾರ ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಕೊಲೆಯಾದ ವಿದ್ಯಾರ್ಥಿನಿ ಮನೆಯ ಬಳಿ ಗಾರೆ ಕೆಲಸ ಮಾಡಲು ಬರುತ್ತಿದ್ದ ಆರೋಪಿ ರಂಜಿತ್ ಬಾಬು, ಆಗಾಗ ಯುವತಿ ಮನೆ ಬಳಿ ಹೋಗಿ ಫಾಲೋ ಮಾಡಿ ನೀರು ಕೇಳಿದ್ದ, ಪ್ರೀತಿಸು ಅಂತಾ ಪ್ರಾಣ ತಿಂದಿದ್ದಾನೆ. ಆದ್ರೆ ಈತನ ಪ್ರೀತಿಗೆ ವಿದ್ಯಾರ್ಥಿನಿ ನಿರಾಕರಿಸಿದ ಹಿನ್ನೆಲೆಯಲ್ಲಿ ಜುಲೈ 1 ರಂದು ಶಾಲೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಕೊಲೆ ಮಾಡಿ ಪರಾರಿಯಾಗಿದ್ದಾನೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಾಗಿ ಬಲೆ ಬೀಸಿದ ಮಾಲೂರು ಪೊಲೀಸರು ಶುಕ್ರವಾರ ಸಂಜೆ ಟೇಕಲ್ ರೈಲ್ವೇ ನಿಲ್ದಾಣದಲ್ಲಿ ಆರೋಪಿ ರಂಜಿತ್ ಬಾಬುನನ್ನ ಬಂಧಿಸಿದ್ದಾರೆ. ಬಳಿಕ ಕೋಲಾರದ ಜೆಎಂಎಫ್ ಸಿ ನ್ಯಾಯಯಲಯದ ನ್ಯಾಯಾಧೀಶರ ಎದುರು ಬಿಗಿ ಪೊಲೀಸ್ ಬಂದೋ ಬಸ್ತ್‍ನಲ್ಲಿ ಕೊಲೆ ಅರೋಪಿ ಸುರೇಶ್ ಬಾಬು ಅಲಿಯಾಸ್ ರಂಜಿತ್ ಬಾಬುವನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

    ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ ಇಡೀ ಕೋಲಾರ ಜಿಲ್ಲೆಯ ಜನರನ್ನು ಬೆಚ್ಚಿಬೀಳುವಂತೆ ಮಾಡಿತ್ತು. ಘಟನೆಯಿಂದ ಆತಂಕಗೊಂಡಿದ್ದ ಜಿಲ್ಲೆಯ ಜನರು, ಸಾವಿರಾರು ವಿದ್ಯಾರ್ಥಿಗಳು ಅಮಾಯಕ ವಿದ್ಯಾರ್ಥಿನಿಯನ್ನು ಕೊಂದ ಆರೋಪಿಯ ಬಂಧನಕ್ಕಾಗಿ ಆಗ್ರಹಿಸಿ ಬೃಹತ್ ಹೋರಾಟವನ್ನ ಮಾಡಿದ್ದರು. ಆರೋಪಿಯನ್ನು ಬಂಧಿಸುವವರೆಗೆ ಹೋರಾಟ ಕೈಬಿಡೋ ಮಾತೇ ಇಲ್ಲ ಎಂದು ಪಟ್ಟು ಹಿಡಿದಿದ್ದರು. ಈ ನಡುವೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಕೋಲಾರ ಎಸ್ಪಿ ರೋಹಿಣಿ ಕಠೋಚ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕೊಲೆ ಆರೋಪಿ ಗಾರೆ ಕೆಲಸ ಮಾಡುತ್ತಿದ್ದನು. ಈತನ ತಂದೆ ಕೂಲಿ ಕೆಲಸ ಮಾಡಿಕೊಂಡಿದ್ರೆ, ತಾಯಿ ಹೂವಿನ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದಾರೆ.

    ಇಂತಹ ಘಟನೆ ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು, ಮಾಲೂರು ಶಾಸಕ ಕೆ.ವೈ.ನಂಜೇಗೌಡ ನೇತೃತ್ವದಲ್ಲಿ ತಾಲೂಕು ಪಂಚಾಯ್ತಿ ಆರವರಣದಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಪೊಲೀಸ್ ಅಧಿಕಾರಿಗಳು, ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರುಗಳು, ಕ್ಷೇತ್ರಶಿಕ್ಷಣಾಧಿಕಾರಿ ಸೇರಿದಂತೆ ಹಲವರು ಭಾಗವಹಿಸಿ ಮುಂದೆ ಇಂಥ ಘಟನೆ ನಡೆಯದಂತೆ ಸಭೆ ಸೇರಿ ಎಚ್ಚರಿಕೆ ಕ್ರಮಗಳಿಗೆ ಮುಂದಾದ್ರು.

    ಶಾಲಾ ಕಾಲೇಜು ಬಿಡುವ ಆರಂಭದ ವೇಳೆ ಹಾಗೂ ಶಾಲೆ ಬಿಡುವ ಸಂದರ್ಭದಲ್ಲಿ ಹೆಚ್ಚಿನ ಬೀಟ್ ವ್ಯವಸ್ಥೆ ಮಾಡುವುದು, ಖಾಸಗಿ ಶಾಲೆಗಳು ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ಸೇರಿಸುವುದು ಹಾಗೂ ಶಾಲಾ ಕಾಲೇಜಿನಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಶಾಲಾ ಕಾಲೇಜು ಸುತ್ತಮುತ್ತ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾವಹಿಸುವಂತೆ ಸೂಚನೆ ನೀಡಲಾಯಿತು.