Tag: accused

  • ಬಂಧನಕ್ಕೆ ತೆರಳಿದ್ದ ಖಾಕಿಗೆ ಚಾಕು ಇರಿತ- ಯುವತಿ ಕಿಡ್ನಾಪರ್ಸ್ ಕಾಲಿಗೆ ಪೊಲೀಸರಿಂದ ಗುಂಡೇಟು

    ಬಂಧನಕ್ಕೆ ತೆರಳಿದ್ದ ಖಾಕಿಗೆ ಚಾಕು ಇರಿತ- ಯುವತಿ ಕಿಡ್ನಾಪರ್ಸ್ ಕಾಲಿಗೆ ಪೊಲೀಸರಿಂದ ಗುಂಡೇಟು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ಬೆಳ್ಳಂದೂರು ಪೊಲೀಸರು ಯುವತಿಯೊಬ್ಬಳ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆಂದು ಕೊಡತಿ ಬಸ್ ಡಿಪೋ ಬಳಿ ತೆರಳಿದ್ದರು. ಈ ವೇಳೆ ಇನ್ಸ್ ಪೆಕ್ಟರ್ ವಿಕ್ಟರ್ ಸೈಮನ್ ಮತ್ತು ಟೀಂ ಮೇಲೆ ಆರೋಪಿಗಳಾದ ಸೆಲ್ವಕುಮಾರ್ ಮತ್ತು ಶಂಕರ್ ದಾಳಿ ನಡೆಸಿದ್ದಾರೆ.

    ಮಾರ್ಚ್ 18 ರಂದು ಸರ್ಜಾಪುರ ರಸ್ತೆಯ ಕಸವನಹಳ್ಳಿ ಬಳಿ ಮನೆ ಬಳಿ ನಿಂತಿದ್ದ ಯುವತಿಯನ್ನ ಇಂಡಿಕಾ ಕಾರಿನಲ್ಲಿ ಕಿಡ್ನಾಪ್ ಮಾಡಿದ್ದರು. ಕೊಡತಿ ಬಿಎಂಟಿಸಿ ಕ್ವಾಟ್ರಸ್ ಬಳಿ ಆರೋಪಿಗಳಿರುವ ಮಾಹಿತಿ ಆಧಾರದ ಮೇರೆಗೆ ಬಂಧಿಸಲು ಪೊಲೀಸರು ಹೋಗಿದ್ದಾರೆ. ಬೆಳ್ಳಂದೂರು ಠಾಣೆಯ ಇನ್ಸ್ ಪೆಕ್ಟರ್ ವಿಕ್ಟರ್ ಸೈಮನ್ ಆಂಡ್ ಟಿಂ ನಿಂದ ಕಾರ್ಯಾಚರಣೆ ಮಾಡಲಾಗಿತ್ತು.


    ಈ ವೇಳೆ ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ ಪೇದೆ ಮಹಾಂತೇಶ್ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ವಿಕ್ಟರ್ ಸೈಮನ್ ಮತ್ತು ಎಸ್‍ಐ ಸೋಮಶೇಖರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಸುಮ್ಮನಿರದ ಆರೋಪಿಗಳು ಪುನಃ ಹಲ್ಲೆಗೆ ಮುಂದಾಗಿದ್ದಾರೆ. ಆಗ ಇನ್ಸ್ ಪೆಕ್ಟರ್ ವಿಕ್ಟರ್ ಸೈಮನ್ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.

    ಸದ್ಯಕ್ಕೆ ಗಾಯಗೊಂಡಿರುವ ಆರೋಪಿಗಳಾದ ಸೆಲ್ವಕುಮಾರ್, ಶಂಕರ್ ಮತ್ತು ಪೇದೆ ಮಹಾಂತೇಶ್‍ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

  • ಹೆಣ್ಣು ಮಕ್ಕಳ ಚಪ್ಪಲಿಯಲ್ಲಿ ಅರ್ಧ ಕೆಜಿ ಚಿನ್ನ ಕಳ್ಳ ಸಾಗಾಣೆ – ಆರೋಪಿ ಅರೆಸ್ಟ್

    ಹೆಣ್ಣು ಮಕ್ಕಳ ಚಪ್ಪಲಿಯಲ್ಲಿ ಅರ್ಧ ಕೆಜಿ ಚಿನ್ನ ಕಳ್ಳ ಸಾಗಾಣೆ – ಆರೋಪಿ ಅರೆಸ್ಟ್

    ಬೆಂಗಳೂರು: ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಚಿನ್ನ ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

    ದುಬೈನಿಂದ ಬೆಂಗಳೂರಿಗೆ ಶನಿವಾರ ರಾತ್ರಿ ಆಗಮಿಸಿದ್ದ ಇಂಡಿಗೋ ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಣೆ ಮಾಡುತ್ತಿದ್ದ ಮುಂಬೈ ಮೂಲದ ವ್ಯಕ್ತಿಯನ್ನ ಕೆಐಎಎಲ್ ಅಧಿಕಾರಿಗಳು ಬಂಧಿಸಿದ್ದಾರೆ.

    ಆರೋಪಿ ಹೆಣ್ಣು ಮಕ್ಕಳ ಚಪ್ಪಲಿ ಹಾಗೂ ಸೌಂದರ್ಯ ಆಭರಣಗಳಲ್ಲಿ ಚಿನ್ನ ಅಡಗಿಸಿಟ್ಟು ಸಾಗಾಣೆ ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಕಸ್ಟಮ್ಸ್ ಆಯುಕ್ತರಾದ ಶಿವಪ್ರಕಾಶ್ ಸೇರಿದಂತೆ ವಸಂತ್ ಮಗೋಡ್ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ. ದಾಳಿಯಲ್ಲಿ ವಿವಿಧ ವಸ್ತುಗಲ್ಲಿ ಅಡಗಿಸಿಟ್ಟಿದ್ದ ಸುಮಾರು ಅರ್ಧ ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

  • ಬ್ಯಾಟರಿ ಕದ್ದು ಸಿಕ್ಕಿಬಿದ್ದ ಇಕ್ಬಾಲ್  ಅನ್ಸಾರಿ ಆಪ್ತ – ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ

    ಬ್ಯಾಟರಿ ಕದ್ದು ಸಿಕ್ಕಿಬಿದ್ದ ಇಕ್ಬಾಲ್ ಅನ್ಸಾರಿ ಆಪ್ತ – ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ

    ಕೊಪ್ಪಳ: ವಾಹನಗಳ ಬ್ಯಾಟರಿ ಕಳ್ಳತನ ಮಾಡುವ ವೇಳೆ ನಗರಸಭೆ ಸದಸ್ಯನೊಬ್ಬ ಸಿಕ್ಕಿಬಿದ್ದು, ಬಳಿಕ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ.

    ಜಿಲ್ಲೆ ಗಂಗಾವತಿ ನಗರಸಭೆ ನಾಮನಿರ್ದೇಶಿತ ಸದಸ್ಯ ಬಿಚ್ಚುಗತ್ತಿ ಸಲ್ಮಾನ್ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ. ಶಾಸಕ ಇಕ್ಬಾಲ್ ಅನ್ಸಾರಿ ಬಲಗೈ ಬಂಟ ಎಂದು ಗುರುತಿಸಿಕೊಂಡಿರುವ ಸಲ್ಮಾನ್ ಕೆಲ ದಿನಗಳ ಹಿಂದೆ ಲಾರಿ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನ ಆಧರಿಸಿ ಕಳ್ಳತನದ ಆರೋಪಿ ಸಲ್ಮಾನ್ ನನ್ನು ಬಂಧಿಸಲು ಪೊಲೀಸರು ತೆರಳಿದ್ದರು.

    ಈ ವೇಳೆ ಸಲ್ಮಾನ್ ಮತ್ತು ಆತನ ಬೆಂಬಲಿಗರು ಪೊಲೀಸರ ಮೇಲೆ ಸಿನಿಮೀಯ ಮಾದರಿಯಲ್ಲಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸಲ್ಮಾನ್ ರೌಡಿಶೀಟರ್ ಕೂಡ ಹೌದು.

    ಪ್ರಸ್ತುತ ಘಟನೆ ಕುರಿತು ಸಲ್ಮಾನ್ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ. ಲಾರಿ ಮಾಲೀಕ ಭಾಷಸಾಬ ನೀಡಿದ ದೂರಿನ ಹಿನ್ನೆಲೆಯಲ್ಲಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಷಸಾಬ ಅವರು ಸಿಸಿ ಕ್ಯಾಮೆರಾದ ವಿಡಿಯೋಗಳನ್ನು ಮಾಧ್ಯಮಗಳಿಗೆ ನೀಡಿದ್ದಾರೆ.

    https://www.youtube.com/watch?v=1yfjpJhvomg

     

  • ಪೋಲಿಸರ ವಿರುದ್ಧ ಸೇಡು- ಕಾಂಟ್ರೋಲ್ ರೂಮ್ ಗೆ 1,264 ಬಾರಿ ಕರೆ ಮಾಡಿದ ವ್ಯಕ್ತಿ

    ಪೋಲಿಸರ ವಿರುದ್ಧ ಸೇಡು- ಕಾಂಟ್ರೋಲ್ ರೂಮ್ ಗೆ 1,264 ಬಾರಿ ಕರೆ ಮಾಡಿದ ವ್ಯಕ್ತಿ

    ಅಹಮದಾಬಾದ್: ವ್ಯಕ್ತಿಯೊಬ್ಬ ಪೊಲೀಸ್ ಕಾಂಟ್ರೋಲ್ ರೂಮ್ ಗೆ ಸುಮಾರು 1,264 ಬಾರಿ ಕರೆ ಮಾಡಿ ನಿಂದಿಸಿರುವ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.

    ಈಶ್ವರ್ ಭೋಯ್(40) ಎಂಬಾತ ಈ ಕೃತ್ಯವೆಸಗಿದ್ದಾನೆ. ಭೂವಿವಾದವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಈತನನ್ನು ಹೊಡೆದಿದ್ದರಿಂದ ಅವರ ಮೇಲೆ ಸೇಡು ಹೊಂದಿದ್ದ. ಮೂರು ವರ್ಷಗಳ ಹಿಂದೆ ಸೆಕ್ಯೂರಿಟಿ ಗಾರ್ಡ್ ಕೆಲಸ ನಿರ್ವಹಿಸುತ್ತಿದ್ದ ಈಶ್ವರ್, 108 ತುರ್ತು ಸೇವೆಯ ನಂಬರ್‍ಗೆ ಕರೆ ಮಾಡಿ ನಿಂದಿಸುವ ಮೂಲಕ ವಿಕೃತ ಆನಂದ ಪಡೆಯುತ್ತಿದ್ದ. ಆಗ ಈಶ್ವರ್ ನನ್ನು ಪೊಲೀಸರು ಬಂಧಿಸಿದ್ದರು.

    ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾದ ಆರೋಪಿ ಈಶ್ವರ್, ಬಳಿಕ ಪೊಲೀಸ್ ಕಾಂಟ್ರೋಲ್ ರೂಮ್ ಗೆ ಫೋನ್ ಮಾಡಿ ನಿಂದಿಸಲು ಆರಂಭಿಸಿದ್ದ. ಈ ವೇಳೆ ಕಾಂಟ್ರೋಲ್ ರೂಮ್ ನ ಮಹಿಳಾ ಸಿಬ್ಬಂದಿ ಕರೆ ಸ್ವೀಕರಿಸಿದರೆ ಆರೋಪಿ ಮತ್ತಷ್ಟು ಜೋರಾಗಿ ನಿಂದಿಲು ಆರಂಭಿಸುತ್ತಿದ್ದ ಎನ್ನಲಾಗಿದೆ. ಈ ಕುರಿತು ಮಹಿಳಾ ಪೊಲೀಸ್ ಸಿಬ್ಬಂದಿ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

    ಸೈಬರ್ ಕ್ರೈಂ ವಿಭಾಗದ ಪೊಲೀಸರ ಸಹಾಯ ಪಡೆದ ಅಧಿಕಾರಿಗಳು ಮೊಬೈಲ್ ನ ಐಎಂಇಐ ನಂಬರ್ ನಿಂದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆರೋಪಿ ಈಶ್ವರ್ ಗೆ ಈಗಾಗಲೇ ಮದುವೆಯಾಗಿದ್ದು ಹೆಂಡತಿ ಬಿಟ್ಟು ಹೋಗಿದ್ದಾಳೆ. ಈತ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವ ಕುರಿತು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

  • 51 ಬಾರಿ ತಿವಿದು ಹತ್ಯೆಗೈದ ಕೊಲೆಗಡುಕನಿಗೆ ಪ್ರತಿ ತಿಂಗಳು ಸಿಗುತ್ತೆ 15 ದಿನ ಪೆರೋಲ್!

    51 ಬಾರಿ ತಿವಿದು ಹತ್ಯೆಗೈದ ಕೊಲೆಗಡುಕನಿಗೆ ಪ್ರತಿ ತಿಂಗಳು ಸಿಗುತ್ತೆ 15 ದಿನ ಪೆರೋಲ್!

    ತಿರುವನಂತಪುರ: ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಸಿಪಿಐ(ಎಂ) ಪಕ್ಷದ ಮುಖಂಡ 3 ವರ್ಷದಲ್ಲಿ ಪ್ರತಿ ತಿಂಗಳು 15 ದಿನಗಳ ಕಾಲ ಪೆರೋಲ್ ಪಡೆದಿರುವ ಮಾಹಿತಿ ಬಹಿರಂಗ ಗೊಂಡಿದೆ.

    ರೆವೊಲ್ಯೂಷನರಿ ಮಾರ್ಕ್ಸಿಸ್ಟ್ ಪಕ್ಷದ (ಆರ್ ಎಂಪಿ) ಪಕ್ಷ ನಾಯಕ ಟಿಪಿ ಚಂದ್ರಶೇಖರನ್ ಎಂಬವರ ಕೊಲೆ ಪ್ರಕರಣದಲ್ಲಿ ಅಪರಾಧಿ ಪಿಕೆ ಕುನ್ಹನಂದನ್ ಜೈಲು ಶಿಕ್ಷೆಗೆ ಗುರಿಯಾಗಿದ್ದ. ಆದರೆ 2015 ನಂತರ ಮೂರು ವರ್ಷದಲ್ಲಿ ಪ್ರತಿ ತಿಂಗಳು 15 ದಿನಗಳ ಕಾಲ ಪೆರೋಲ್ ಮೂಲಕ ಬಿಡುಗಡೆಯಾಗುತ್ತಿದ್ದ ವಿಚಾರ ಮಾಹಿತಿ ಹಕ್ಕಿನ ಅಡಿ ಬೆಳಕಿಗೆ ಬಂದಿದೆ.

    ಕೊಲೆಯಾದ ಚಂದ್ರಶೇಖರನ್ ಅವರ ಪತ್ನಿ ಕೆಕೆ ರೀಮಾ ಅವರಿಗೆ ಸಿಕ್ಕಿದ ಮಾಹಿತಿ ಪ್ರಕಾರ ಅಪರಾಧಿಗೆ 2017 ರ ಅಕ್ಟೋಬರ್ ಮತ್ತು ನವೆಂಬರ್ ತಿಂಗಳು ಹೊರತು ಪಡಿಸಿ 2015 ರಿಂದ 2018ರ ವರೆಗೆ ಪ್ರತಿ ತಿಂಗಳು ಪೆರೋಲ್ ಲಭಿಸಿದೆ.

    ಏನಿದು ಪ್ರಕರಣ: ಕೇರಳ ಸ್ಥಳೀಯ ರಾಜಕೀಯ ಮುಖಂಡರಾಗಿದ್ದ ಟಿಪಿ ಚಂದ್ರಶೇಖರ್ ಅವರನ್ನು 2012 ಮೇ 4 ರಂದು 51 ಬಾರಿ ತಿವಿದು ಕೊಲೆ ಮಾಡಲಾಗಿತ್ತು. ಚಂದ್ರಶೇಖರ್ ಮೊದಲು ಸಿಪಿಐ(ಎಂ) ಪಕ್ಷದಲ್ಲಿ ಗುರುತಿಸಿಕೊಂಡು ಬಳಿಕ ನೂತನ ರೆವೊಲ್ಯೂಷನರಿ ಮಾರ್ಕ್ಸಿಸ್ಟ್ ಪಕ್ಷದ ನಾಯಕತ್ವ ವಹಿಸಿದ್ದರು. ಚಂದ್ರಶೇಖರನ್ ಕೊಲೆ ಬಳಿಕ ಅವರ ಕ್ಷೇತ್ರದಲ್ಲಿ ಆರ್ ಎಂಪಿ ಪಕ್ಷ ಜಯಗಳಿಸಿತ್ತು.

    ಪ್ರಕರಣದ ವಿಚಾರಣೆ ಬಳಿಕ ಸಿಪಿಐ(ಎಂ) ನಾಯಕ ಕೊಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಆದರೆ ಚಂದ್ರಶೇಖರನ್ ಕೊಲೆ ನಡೆದು ಆರು ವರ್ಷ ಕಳೆದರೂ ಕೊಲೆ ನಡೆದ ಪ್ರದೇಶದಲ್ಲಿ ನಿರ್ಮಿಸಿಲಾಗಿದ್ದ ಚಂದ್ರಶೇಖರನ್ ಸ್ಮಾರಕ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. 5 ಬಾರಿ ಸ್ಮಾರಕ ನಿರ್ಮಾಣವಾಗಿದ್ದರೂ ಸಿಪಿಐ(ಎಂ) ಕಾರ್ಯಕರ್ತರು ದ್ವಂಸಗೊಳಿಸಿದ್ದಾರೆ. ಪ್ರಸ್ತುತ ನಿರ್ಮಾಣಗೊಂಡಿರುವ ಚಂದ್ರಶೇಖರನ್ ಅವರ ಸ್ಮಾರಕದ ರಕ್ಷಣೆಗೆ ಪೊಲೀಸ್ ರಕ್ಷಣೆಯನ್ನು ಕಲ್ಪಿಸಲಾಗಿದೆ.

    ಪೆರೋಲ್ ದುರ್ಬಳಕೆಯಾಗುತ್ತಿರುವ ವಿಚಾರ ತಿಳಿದು ಈಗ ಚಂದ್ರಶೇಖರನ್ ಪತ್ನಿ ರೀಮಾ ಅವರು ಕೇರಳ ಸರ್ಕಾರದ ವಿರುದ್ಧ ಕಾನೂನು ಸಮರ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ.

  • ಗೌರಿ ಕೇಸ್ – ಶಂಕಿತ ಆರೋಪಿ ಹೊಟ್ಟೆ ಮಂಜನಿಗೆ ಮಂಪರು ಪರೀಕ್ಷೆ- ಏನಿದು ಪರೀಕ್ಷೆ? ಹೇಗೆ ಮಾಡುತ್ತಾರೆ? ಇಲ್ಲಿದೆ ಪೂರ್ಣ ವಿವರ

    ಗೌರಿ ಕೇಸ್ – ಶಂಕಿತ ಆರೋಪಿ ಹೊಟ್ಟೆ ಮಂಜನಿಗೆ ಮಂಪರು ಪರೀಕ್ಷೆ- ಏನಿದು ಪರೀಕ್ಷೆ? ಹೇಗೆ ಮಾಡುತ್ತಾರೆ? ಇಲ್ಲಿದೆ ಪೂರ್ಣ ವಿವರ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಂಬಂಧ ಬಂಧನಕ್ಕೆ ಒಳಗಾಗಿರುವ ಶಂಕಿತ ಆರೋಪಿ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ನ್ಯಾಯಾಲಯ ಅನುಮತಿ ನೀಡಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಆರೋಪಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ವಿಶೇಷ ತನಿಖಾ ತಂಡ ಮನವಿ ಮಾಡಿತ್ತು. ಮನವಿಯನ್ನು ಪುರಸ್ಕರಿಸಿದ ಮೂರನೇ ಎಸಿಎಂಎಂ ಕೋರ್ಟ್ ಮಂಪರು ಪರೀಕ್ಷೆ ನಡೆಸಲು ಅನುಮತಿ ನೀಡಿದೆ.

    ವಿಚಾರಣೆ ವೇಳೆ ನ್ಯಾಯಾಧೀಶರು, ನಿನ್ನ ಮಂಪರು ಪರೀಕ್ಷೆಗೆ ಒಪ್ಪಿಗೆ ಇದ್ಯಾ ಎಂದು ನವೀನ್‍ಗೆ ಕೇಳಿದರು. ಇದಕ್ಕೆ ಒಪ್ಪಿಗೆ ಇದೆ ಆರೋಗ್ಯಕ್ಕೆ ಏನಾದ್ರೂ ಪರಿಣಾಮ ಬೀರುತ್ತಾ ಎಂದು ಪ್ರಶ್ನೆ ಮಾಡಿದ್ದಾನೆ. ಕೂಡಲೇ ಜಡ್ಜ್ ಅಂತಹ ಪರಿಸ್ಥಿತಿ ಬರುವುದಿಲ್ಲ ಎಂದು ಹೇಳಿದರು. ಕೂಡಲೇ ನವೀನ್, ಆರೋಗ್ಯದಲ್ಲಿ ತೊಂದರೆ ಆಗುವುದಿಲ್ಲ ಎಂದರೆ ಮಂಪರು ಪರೀಕ್ಷೆಗೆ ಒಪ್ಪಿಗೆ ನೀಡುತ್ತೇನೆ ಎಂದು ಹೇಳಿದ.

    ನವೀನ್ ಪರ ವಕೀಲರ ಸಮಕ್ಷಮದಲ್ಲಿ ಅಹಮದಾಬಾದ್ ನಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಮಂಪರು ಪರೀಕ್ಷೆ ನಡೆಯಲಿದೆ.

    ಮಂಪರು ಪರೀಕ್ಷೆ ಹೇಗೆ ನಡೆಯುತ್ತೆ?
    ಯಾವುದೇ ವ್ಯಕ್ತಿಗೆ ಮಂಪರು ಪರೀಕ್ಷೆ ನಡೆಸಲು ನ್ಯಾಯಾಲಯದ ಅನುಮತಿ ತೆಗೆದುಕೊಳ್ಳಬೇಕಾಗುತ್ತದೆ. ಅನುಮತಿ ದೊರೆತ ಬಳಿಕ ಆರೋಪಿಗೆ ಕೇಳ ಬೇಕಾದ ಪ್ರಶ್ನೆಗಳ ಕುರಿತು ಪಟ್ಟಿ ಮಾಡಿಕೊಳ್ಳಲಾಗುತ್ತದೆ. ಈ ಪ್ರಶ್ನೆಗಳ ಪಟ್ಟಿಯಲ್ಲಿ ಎರಡು ವಿಧಗಳಿದ್ದು ಮೊದಲಿಗೆ ಆತನ ಹೆಸರು, ಊರು ಎಂಬ ಸಾಮಾನ್ಯ ಮಾಹಿತಿ ಪಡೆಯಲಾಗುತ್ತದೆ. ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಕುರಿತು ಪ್ರಶ್ನೆಗಳನ್ನು ಸಿದ್ಧಪಡಿಸಲಾಗುತ್ತದೆ.

    ಮಂಪರು ಪರೀಕ್ಷೆಯನ್ನು ವೈದ್ಯರು, ಮನಶಾಸ್ತ್ರಜ್ಞರು ಸಮ್ಮುಖದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಮಾಡಲಾಗುತ್ತದೆ. ಇದಕ್ಕೂ ಮುನ್ನ ಆರೋಪಿಯ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ. ನಂತರ ಆತನ ದೇಹದ ಆರೋಗ್ಯದ ಸಾಮರ್ಥ್ಯದ ಮೇಲೆ ವೈದ್ಯರು ಸೋಡಿಯಂ ಪೆಂಟೋಥಲ್ ಇಂಜೆಕ್ಷನ್ ಮೂಲಕ ನೀಡುತ್ತಾರೆ. ಆರೋಪಿಯ ಲಿಂಗ, ವಯಸ್ಸು, ದೇಹ ಸಾಮರ್ಥ್ಯ, ಆರೋಗ್ಯ ಇವುಗಳನ್ನು ನೋಡಿಕೊಂಡು ನಿಗಧಿತ ಪ್ರಮಾಣದಲ್ಲಿ ನೀಡಲಾಗುತ್ತದೆ. ಸರಿಯಾಗಿ ಪರೀಕ್ಷೆ ನಡೆಸದೇ ಜಾಸ್ತಿ ಪ್ರಮಾಣದಲ್ಲಿ ಸೋಡಿಯಂ ಪೆಂಟೋಥಲ್ ನೀಡಿದರೆ ರೋಗಿ ಕೋಮಾಕ್ಕೆ ಜಾರುವ ಸಾಧ್ಯತೆ ಇರುತ್ತದೆ.

    ಈ ಡೋಸ್ ನೀಡಿದ ಬಳಿಕ ಆರೋಪಿ ನಿದ್ರಾವಸ್ಥೆಗೆ ಜಾರುವ ಹಂತದ ಮೊದಲಿನ ಹಂತಕ್ಕೆ ಬಂದಾಗ ನಿಧಾನವಾಗಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಸಾಧಾರಣವಾಗಿ ನಿದ್ದೆಯ ಮಂಪರಿನಲ್ಲಿದ್ದ ವ್ಯಕ್ತಿಗೆ ಏನು ಕೇಳಿದರೂ ಆತ ಸತ್ಯ ಹೇಳುತ್ತಾನೆ. ಹೀಗಾಗಿ ಈ ಹಂತದಲ್ಲಿದ್ದ ಆರೋಪಿ ನಿದ್ದೆಗೆ ಜಾರದಂತೆ ಮೊದಲೇ ನಿಗದಿ ಪಡಿಸಿದ ಪ್ರಮಾಣದಲ್ಲಿ ಸೋಡಿಯಂ ಪೆಂಟೋಥಲ್ ಡೋಸ್ ಅನ್ನು ನಿಮಿಷ, ನಿಮಿಷ ಗಳ ಅಂತರದಲ್ಲಿ ಸ್ವಲ್ಪ ಸ್ವಲ್ಪ ನೀಡಲಾಗುತ್ತದೆ.

    ಯಾರಿಗೆ ಮಾಡಬಹುದು?
    ಯಾವುದೇ ವ್ಯಕ್ತಿಗೆ ಮಂಪರು ಪರೀಕ್ಷೆ ನಡೆಸಲು ಸಾಧ್ಯವಿದೆ. ಸಕ್ಕರೆ ಕಾಯಿಲೆ, ಬಿಪಿ ಇರುವಂತಹ ವ್ಯಕ್ತಿಗಳಿಗೂ ಪರೀಕ್ಷೆ ನಡೆಸಬಹುದು. ಈ ವೇಳೆ ಆರೋಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಗೆ ತಿಳಿದಿರುವ ಪೂರ್ಣ ಮಾಹಿತಿಯನ್ನು ತಿಳಿಸುತ್ತಾನೆ. ಯಾವುದೇ ಮಾಹಿತಿಯನ್ನು ಹೇಳದಿರಲು ಈ ಸ್ಥಿತಿಯಲ್ಲಿ ಆತನಿಗೆ ಸಾಧ್ಯವಿರುವುದಿಲ್ಲ. ಆತನಿಂದ ಮಾಹಿತಿ ಪಡೆಯುವ ಪ್ರತಿಯೊಂದು ಅಂಶವನ್ನು ವಿಡಿಯೋ ಹಾಗೂ ಧ್ವನಿ ಮುದ್ರಣವನ್ನು ಮಾಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗುತ್ತದೆ.

    ಅಹಮದಬಾದ್ ನಲ್ಲಿ ಏಕೆ?
    ಈ ಹಿಂದೆ ಛಾಪಾ ಕಾಗದ ಹಗರಣದಲ್ಲಿ ಸಿಕ್ಕಿಬಿದ್ದ ಕರೀಂ ಲಾಲ್ ತೆಲಗಿ ಸೇರಿದಂತೆ 350 ಕ್ಕೂ ಹೆಚ್ಚು ಆರೋಪಿಗಳನ್ನು ಬೆಂಗಳೂರಿನಲ್ಲೇ ಪರೀಕ್ಷೆ ನಡೆಸಲಾಗಿತ್ತು. ಗುಜರಾತ್ ವಿಧಿವಿಜ್ಞಾನ ವಿಶ್ವವಿದ್ಯಾಲಯ 2008ರಲ್ಲಿ ಆರಂಭಗೊಂಡಿದೆ. ವಿಧಿವಿಜ್ಞಾನ ಕ್ಷೇತ್ರದ ಅಧ್ಯಯನಕ್ಕೆ ಸಂಬಂಧಿಸಿದಂತೆ ಆರಂಭಗೊಂಡ ವಿಶ್ವದ ಮೊದಲ ವಿಶ್ವವಿದ್ಯಾಲಯ ಎನ್ನುವ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ.

    https://www.youtube.com/watch?v=yGCm67SXFx8

  • ನಾಲ್ವರು ಪೊಲೀಸರಿದ್ದರೂ ಸಿನಿಮಾ ಸ್ಟೈಲ್‍ನಲ್ಲಿ ಇಬ್ಬರು ಆರೋಪಿಗಳು ಎಸ್ಕೇಪ್- ಸಿಸಿಟಿವಿಯಲ್ಲಿ ರೆಕಾರ್ಡ್ ಆಯ್ತು ಕೃತ್ಯ

    ನಾಲ್ವರು ಪೊಲೀಸರಿದ್ದರೂ ಸಿನಿಮಾ ಸ್ಟೈಲ್‍ನಲ್ಲಿ ಇಬ್ಬರು ಆರೋಪಿಗಳು ಎಸ್ಕೇಪ್- ಸಿಸಿಟಿವಿಯಲ್ಲಿ ರೆಕಾರ್ಡ್ ಆಯ್ತು ಕೃತ್ಯ

    ಬಾಗಲಕೋಟೆ: ವೈದ್ಯಕೀಯ ಪರೀಕ್ಷೆಗೆ ಎಂದು ಕರೆತಂದ ಆರೋಪಿ ಓರ್ವ ಪೊಲೀಸರಿಂದ ತಪ್ಪಿಸಿಕೊಂಡು ಸಿನಿಮೀಯ ರೀತಿಯಲ್ಲಿ ಓಡಿಹೋದ ಘಟನೆ ಮಾರ್ಚ್ 9ರ ರಾತ್ರಿ 9.15ಕ್ಕೆ ಬಾಗಲಕೋಟೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ದಿಲೀಪ್ ರಾಟೋಡ್ ಮತ್ತು ಕೃಷ್ಣಾ ಇಬ್ಬರು ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಮೊದಲು ಪೊಲೀಸರೊಂದಿಗೆ ಇಬ್ಬರು ಸುಮ್ಮನೆ ಬರುತ್ತಾರೆ. ಪರೀಕ್ಷೆ ಬಳಿಕ ಇಬ್ಬರು ಆಸ್ಪತ್ರೆಯಿಂದ ಓಡುತ್ತಾರೆ. ಅದರಲ್ಲಿ ಕೃಷ್ಣನನ್ನ ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ಮಾತ್ರ ಕೈಗೆ ಸಿಗದೆ ಪರಾರಿಯಾಗಿದ್ದಾನೆ.

    ಪೊಲೀಸರೊಂದಿಗೆ ಶಾಂತವಾಗಿ ಬರುತ್ತಿದ್ದ ದಿಲೀಪ್ ಒಮ್ಮಿಂದೊಮ್ಮೆಲೆ ಓಡಲು ಶುರು ಮಾಡುತ್ತಾನೆ. ಆತನ ಹಿಂದೆ ಪೊಲೀಸರು ಬೆನ್ನಟ್ಟುತ್ತಾರೆ. ಆದರೆ ದಿಲೀಪ್ ಮಾತ್ರ ಪೊಲೀಸರ ಕೈಗೆ ಸಿಗದೇ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾನೆ.

    ಜಿಲ್ಲಾಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ದಿಲೀಪ್ ರಾಟೋಡ್, ಕೃಷ್ಣಾ ರಾಟೋಡ್ ಮುಚಕಂಡಿ ತಾಂಡಾ ನಿವಾಸಿಗಳಾಗಿದ್ದಾರೆ. ಹೋಳಿ ಹಬ್ಬದ ಸಂದರ್ಭ ಬಾಗಲಕೋಟೆಯ ಹರನಶಿಕಾರಿಗಲ್ಲಿ ಯುವಕರು ಮತ್ತು ದಿಲೀಪ್ ರಾಟೋಡ್, ಕೃಷ್ಣಾ ರಾಟೋಡ್ ಹೊಡೆದಾಡಿದ್ದರು.

    ಎರಡು ಕಡೆಯಿಂದ ಬಾಗಲಕೋಟೆ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿವೆ. ಪೊಲೀಸ್ ಕಸ್ಟಡಿ ವೇಳೆ ವೈದ್ಯಕೀಯ ಪರೀಕ್ಷೆಗೆ ಎಂದು ಕರೆತಂದಾಗ ದಿಲೀಪ್ ಓಡಿ ಹೋಗಿದ್ದು, ಬಾಗಲಕೋಟೆ ನಗರ ಠಾಣಾ ಪೊಲೀಸರು ಶೋಧ ನಡೆಸಿದ್ದಾರೆ.

    https://www.youtube.com/watch?v=Z1woh9XyXz8

  • ಪತ್ನಿಗೆ ಕಿರುಕುಳ, ಅಕ್ರಮ ಸಂಬಂಧ ಆರೋಪ ನಿರಾಕರಿಸಿದ ಮಹಮದ್ ಶಮಿ

    ಪತ್ನಿಗೆ ಕಿರುಕುಳ, ಅಕ್ರಮ ಸಂಬಂಧ ಆರೋಪ ನಿರಾಕರಿಸಿದ ಮಹಮದ್ ಶಮಿ

    ನವದೆಹಲಿ: ಟೀಂ ಇಂಡಿಯಾ ವೇಗಿ ಮಹಮದ್ ಶಮಿ ತಮ್ಮ ವಿರುದ್ಧ ಪತ್ನಿ ಮಾಡಿರುವ ಕೌಟುಂಬಿಕ ಹಿಂಸೆ ಮತ್ತು ಅಕ್ರಮ ಸಂಬಂಧದ ಆರೋಪವನ್ನು ನಿರಾಕರಿಸಿದ್ದಾರೆ.

    ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತನ್ನ ಗೌರವಕ್ಕೆ ಧಕ್ಕೆ ತರಲು ಈ ಆರೋಪಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

    ಮಹಮದ್ ಶಮಿ ಅವರ ಪತ್ನಿ ಹಾಸಿನ್ ಜೋಹನ್ ಅವರು ಪತಿ ಹಾಗೂ ಆತನ ಕುಟುಂಬ ಸದಸ್ಯರು ತಮಗೆ ಕಿರುಕುಳ ನೀಡುತ್ತಿದ್ದಾರೆ. ಪತಿ ಶಮಿ ಅವರು ಸಹ ಆಫ್ರಿಕಾ ಸರಣಿಯಿಂದ ಹಿಂದುರುಗಿದ ನಂತರ ತಮಗೆ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು.

    https://www.facebook.com/CircleofCricket.MDShami/posts/1696050590488023

    ಮಹಮದ್ ಶಮಿ ಹಾಗೂ ಅವರ ಕುಟುಂಬದ ವಿರುದ್ಧ ಈ ಕುರಿತು ದೂರು ದಾಖಲಿಸಲಾಗುವುದು ಎಂದು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಮಾಧ್ಯಮ ವರದಿಯ ಪ್ರಕಾರ ಹಾಸಿನ್ ಅವರಿಗೆ ಪತಿ ಶಮಿ ಅವರ ಕುಟುಂಬ ಸದಸ್ಯರು ಕೆಲ ದಿನಗಳಿಂದ ಕಿರುಕುಳ ನೀಡುತ್ತಿದ್ದು, ಕೆಲವು ವೇಳೆ ಮುಂಜಾನೆ 2 ಗಂಟೆವರೆಗೂ ಇದು ಮುಂದುವರೆಯುತ್ತಿತ್ತು. ಅಲ್ಲದೆ ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ.

     ಕುಟುಂಬದ ಭವಿಷ್ಯದ ದೃಷ್ಟಿಯಿಂದ ಇದನ್ನು ತಡೆದುಕೊಂಡಿದ್ದೆ, ಆದರೆ ಶಮಿ ಕಿರುಕುಳದಿಂದ ಬೇಸತ್ತು ಅವರ ವಿರುದ್ಧ ದೂರು ನೀಡುವುದಾಗಿ ಪತ್ನಿ ತಿಳಿಸಿದ್ದಾರೆ.

  • ಟಾರ್ಗೆಟ್ ಗ್ರೂಪ್ ಲೀಡರ್ ಇಲ್ಯಾಸ್ ಹಂತಕರ ಜೊತೆಗಿನ ಸಚಿವ ಖಾದರ್ ಫೋಟೋ ವೈರಲ್

    ಟಾರ್ಗೆಟ್ ಗ್ರೂಪ್ ಲೀಡರ್ ಇಲ್ಯಾಸ್ ಹಂತಕರ ಜೊತೆಗಿನ ಸಚಿವ ಖಾದರ್ ಫೋಟೋ ವೈರಲ್

    ಮಂಗಳೂರು: ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಟಾರ್ಗೆಟ್ ಗ್ರೂಪ್ ಲೀಡರ್ ಇಲ್ಯಾಸ್ ಜೊತೆ ಈ ಹಿಂದೆ ಸಚಿವ ಯು.ಟಿ.ಖಾದರ್ ಭೋಜನ ಮಾಡುತ್ತಿದ್ದ ಫೋಟೊ ವೈರಲ್ ಆಗಿತ್ತು. ಇದೀಗ ಇತ್ತೀಚೆಗೆ ಹತ್ಯೆಯಾದ ಟಾರ್ಗೆಟ್ ಗ್ರೂಪ್ ಲೀಡರ್ ಇಲ್ಯಾಸ್ ಹಂತಕರ ಜೊತೆ ನಿಂತು ಸಚಿವ ಖಾದರ್ ತೆಗೆಸಿಕೊಂಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದಾವೂದ್, ಸಮೀರ್, ಉಸ್ಮಾನ್ ಜೊತೆಗಿರುವ ಫೋಟೊ ಈಗ ವೈರಲ್ ಆಗಿದೆ. ಈ ಮೂವರು ಇಲ್ಯಾಸ್ ಹತ್ಯೆ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ. ಸಚಿವ ಯು.ಟಿ.ಖಾದರ್, ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಗಳೊಂದಿಗೆ ನಂಟು ಹೊಂದಿದ್ದಾರೆಂದು ಬಿಂಬಿಸಿ ಜಾಲತಾಣದಲ್ಲಿ ಹರಿಯಬಿಡಲಾಗುತ್ತಿದೆ. ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಉಸ್ಮಾನ್ ಹೆಗಲಿನ ಮೇಲೆ ಖಾದರ್ ಕೈ ಹಾಕಿದ ಕಾರಣ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

    ಕಳೆದ ಜನವರಿ 13 ರಂದು ಇಲ್ಯಾಸ್ ನನ್ನು ಆತನ ಮಂಗಳೂರಿನ ಫ್ಲಾಟ್ ಒಂದರಲ್ಲಿ ಹತ್ಯೆ ಮಾಡಲಾಗಿತ್ತು. ಅದಕ್ಕೂ ಮುನ್ನ, ಸಚಿವ ಖಾದರ್ ಆಪ್ತನೆಂದು ಗುರುತಿಸಿಕೊಂಡಿದ್ದ ಇಲ್ಯಾಸ್ ಉಳ್ಳಾಲ ಯುವ ಕಾಂಗ್ರೆಸ್ ಉಪಾಧ್ಯಕ್ಷನೂ ಆಗಿದ್ದ. ಆನಂತರ ರೌಡಿಗಳ ನಡುವಿನ ದ್ವೇಷದಿಂದ ಹತ್ಯೆ ಇಲ್ಯಾಸ್ ಹತ್ಯೆ ಮಾಡಲಾಗಿತ್ತು ಎನ್ನಲಾಗಿದೆ. ಇದೀಗ ಆರೋಪಿಗಳ ಜೊತೆಗಿರುವ ಖಾದರ್ ಫೋಟೊ ಮತ್ತೆ ಹೆಚ್ಚು ಸಂಚಲನ ಉಂಟು ಮಾಡಿದೆ.

  • ಮೂರೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ- 25ರ ಯುವಕನ ಬಂಧನ

    ಮೂರೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ- 25ರ ಯುವಕನ ಬಂಧನ

    ಶಿಮ್ಲಾ: ಮೂರೂವರೆ ವರ್ಷದ ಕಂದಮ್ಮನ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ ಘಟನೆ ಹಿಮಾಚಲಪ್ರದೇಶದಲ್ಲಿ ಸೋಮವಾರ ನಡೆದಿದೆ.

    ಪ್ರಕರಣ ಸಂಬಂಧ ಇದೀಗ ಸ್ಥಳೀಯ ಪೊಲೀಸರು 25 ವರ್ಷದ ಬಂಟಿ ಎಂಬಾತನನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಬಾಲಕಿಯ ಪೋಷಕರು ಹರಿಪುರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ ಬಳಿಕ ಬೆಳಕಿಗೆ ಬಂದಿದೆ.

    ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಪರೀಕ್ಷೆಗಾಗಿ ತಂಡಾ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇತ್ತ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.