Tag: accused

  • ಅಮೆರಿಕದ ಮಹಿಳೆಗೆ ಮಸಾಜ್ ಮಾಡೋ ನೆಪದಲ್ಲಿ ಸೆಕ್ಸ್ ಗೆ ಬೇಡಿಕೆ ಇಟ್ಟ ಕಾಮುಕ ಅರೆಸ್ಟ್

    ಅಮೆರಿಕದ ಮಹಿಳೆಗೆ ಮಸಾಜ್ ಮಾಡೋ ನೆಪದಲ್ಲಿ ಸೆಕ್ಸ್ ಗೆ ಬೇಡಿಕೆ ಇಟ್ಟ ಕಾಮುಕ ಅರೆಸ್ಟ್

    ಕೊಪ್ಪಳ: ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು  ಕೊಪ್ಪಳ ಪೊಲೀಸರು ಬಂಧಿಸಿದ್ದಾರೆ.

    ಜಿಲ್ಲೆಯ ಹನುಮನ ಹಳ್ಳಿ ನಿವಾಸಿ ಆನಂದ ರೆಡ್ಡಿ ಬಂಧಿತ ಆರೋಪಿ. ಅಮೆರಿಕದ ಮಹಿಳೆಯೊಬ್ಬರು ಈತನ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಿದ್ದಾರೆ.

    ಏನಿದು ಪ್ರಕರಣ?
    ವಿದೇಶಿಗರು ತುಂಗಭದ್ರಾ ದಡದ ಕೊಪ್ಪಳದ ಗಂಗಾವತಿ ತಾಲೂಕಿನ ಗ್ರಾಮಗಳಾದ ವಿರುಪಾಪುರ ಗಡ್ಡಿ, ಸಣಾಪುರ್ ಮತ್ತು ಹನುಮನ ಹಳ್ಳಿಗಳಲ್ಲಿರುವ ಹೋಮ್ ಸ್ಟೇ ಗಳಲ್ಲಿ ವಾಸವಾಗುತ್ತಾರೆ. ಇದನ್ನೇ ಮೂಲ ದಂಧೆಯನ್ನಾಗಿಸಿಕೊಂಡ ಆನಂದ ರೆಡ್ಡಿ ಹನುಮನ ಹಳ್ಳಿಯಲ್ಲಿ ತನ್ನದೇ ಆದ ಸ್ಟೇ ಹೋಮ್‍ನಲ್ಲಿ ವಿದೇಶಿಗರಿಗೆ ತಂಗಲು ರೂಮ್‍ ಬಾಡಿಗೆ ನೀಡುವ ಕೆಲಸ ಮಾಡುತ್ತಾನೆ.

    ಇಂತಹ ರೂಮ್ ಗಳಲ್ಲಿ ಉಳಿಯುವ ವಿದೇಶಿಗರ ಜೊತೆ ಸ್ನೇಹವನ್ನು ಬೆಳೆಸಿಕೊಳ್ಳುವ ಆರೋಪಿ ಅವರಿಗೆ ಮಸಾಜ್ ಮಾಡುವುದಾಗಿ ನಂಬಿಸಿ ಸ್ಟೇ ಹೋಮ್‍ಗೆ ಕರೆದುಕೊಂಡು ಬಂದು ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೇ ಈ ಕುರಿತು ಸ್ಥಳೀಯರು ಆರೋಪಿಸಿದ್ದು, ಇಂತಹ ಸಾಕಷ್ಟು ಘಟನೆಗಳು ನಡೆದಿದ್ದರೂ ಯಾರು ಪೊಲೀಸರಿಗೆ ದೂರು ನೀಡಿರಲಿಲ್ಲ ಎನ್ನಲಾಗಿದೆ.

    ಇತ್ತೀಚಿಗೆ ಅಮೆರಿಕದಿಂದ ಬಂದ ಮಹಿಳೆಯೊಬ್ಬರು ಆತನ ಹೋಮ್ ಸ್ಟೇ ಬಾಡಿಗೆ ಪಡೆದಿದ್ದಾರೆ. ಈ ವೇಳೆ ಮಹಿಳೆ ಗೆ ಮಸಾಜ್ ಮಾಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೇ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದಕ್ಕೆ ಆಕೆ ವಿರೋಧ ವ್ಯಕ್ತಪಡಿಸಿದ ವೇಳೆ ಆರೋಪಿ ಆನಂದರೆಡ್ಡಿ ಮಹಿಳೆಯನ್ನು ಹೋಮ್ ನಿಂದ ಸ್ಟೇ ಕಳುಹಿಸಿದ್ದಾನೆ. ಘಟನೆ ನಂತರ ಮಹಿಳೆ ಅಮೆರಿಕಕ್ಕೆ ತೆರಳಿದ ವೇಳೆ ತಮ್ಮ ವಿದೇಶಾಂಗ ಇಲಾಖೆಗೆ ಈ ಕುರಿತು ಇಮೇಲ್ ಮುಖಾಂತರ ದೂರು ನೀಡಿದ್ದಾರೆ. ಈ ಹಿನ್ನೆಲೆ ಪ್ರಕರಣದ ಬೆನ್ನೆತ್ತಿದ ಕೊಪ್ಪಳ ಜಿಲ್ಲೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಅನಂದರೆಡ್ಡಿಯನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

  • ಬಿಜೆಪಿ ಕಾರ್ಯಕರ್ತ ರಾಜು ಹತ್ಯೆಯ ಪ್ರಮುಖ ಆರೋಪಿಗೆ ಜಾಮೀನು-ಹಾರ, ತುರಾಯಿ ಹಾಕಿ ಭರ್ಜರಿ ಸ್ವಾಗತ

    ಬಿಜೆಪಿ ಕಾರ್ಯಕರ್ತ ರಾಜು ಹತ್ಯೆಯ ಪ್ರಮುಖ ಆರೋಪಿಗೆ ಜಾಮೀನು-ಹಾರ, ತುರಾಯಿ ಹಾಕಿ ಭರ್ಜರಿ ಸ್ವಾಗತ

    ಮೈಸೂರು: ಬಿಜೆಪಿ ಕಾರ್ಯಕರ್ತ ರಾಜು ಹತ್ಯೆಯ ಪ್ರಮುಖ ಆರೋಪಿ ಅಬೀಬ್ ಪಾಷಾಗೆ ಎರಡು ದಿನಗಳ ಹಿಂದೆ ಜಾಮೀನು ಸಿಕ್ಕಿದ್ದು ಜೈಲಿನಿಂದ ಹೊರಬಂದವನಿಗೆ ಹಾರ, ತುರಾಯಿ ಹಾಕಿ ಸ್ವಾಗತ ಮಾಡಲಾಗಿದೆ. ಈ ವೇಳೆ ಕೆಲ ಯುವಕರು ಅಬೀಬ್ ಪಾಷಾಗೆ ಸನ್ಮಾನ ಮಾಡಿ ಸೆಲ್ಫಿ ತೆಗೆಸಿಕೊಂಡಿದ್ದಾರೆ.

    ಮಾರ್ಚ್ 13, 2016ರಂದು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜು ಎಂಬ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿತ್ತು. ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಅಬೀಬ್ ಪಾಷಾ 5 ತಿಂಗಳು ಕಾಲ ತಲೆಮರೆಸಿಕೊಂಡು ಸಿಕ್ಕಿಬಿದ್ದಿದ್ದನು. ಇದನ್ನೂ ಓದಿ: ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಆರೋಪಿಗೆ ಅದ್ಧೂರಿ ಮೆರವಣಿಗೆ

    ರಾಜು ಹತ್ಯೆ ಜೊತೆ ಮೂರು ಕೊಲೆ ಪ್ರಕರಣಗಳಲ್ಲಿ ಅಬೀಬ್ ಆರೋಪಿಯಾಗಿದ್ದಾನೆ. ಎಸ್‍ಡಿಪಿಐ ಸಂಘಟನೆಯ ಸಕ್ರಿಯ ಕಾರ್ಯಕರ್ತನಾಗಿದ್ದ ಅಬೀಬ್ ಪಾಷಾ ರಾಜು ಹತ್ಯೆ ನಡೆಸುವ ಮುನ್ನ ಕೇರಳದ ಸಮುದ್ರ ದಂಡೆಯಲ್ಲಿ ನಾಯಿಗಳನ್ನ ಸಂಹಾರ ಮಾಡುವ ಮೂಲಕ ರಿಹರ್ಸಲ್ ನಡೆಸಿದ್ದ ಅಂತಾ ಹೇಳಲಾಗುತ್ತಿದೆ. ಇದನ್ನೂ ಓದಿ: ಬೇಲ್ ಮೇಲೆ ಬಿಡುಗಡೆಯಾದ ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ- 500 ಬೈಕ್, ಕಾರ್‍ಗಳ ಜೊತೆ ಮೆರವಣಿಗೆ

    ಕಾಶ್ಮೀರದ ಉಗ್ರ ಸಂಘಟನೆಗೆ ಸೇರುವ ಬಯಕೆ ಹೊಂದಿದ್ದ ಅಬೀಬ್, ಮೈಸೂರಿನ ಮೂವರು ಬಿಜೆಪಿ ಮುಖಂಡರು, ಉತ್ತರ ಪ್ರದೇಶದ ಬಿಜೆಪಿ ಮುಖಂಡ ಕಮಲೇಶ್ ತಿವಾರಿ ಇವರನ್ನ ಟಾರ್ಗೆಟ್ ಮಾಡಿದ್ದ ಅಂತಾ ತಿಳಿದು ಬಂದಿತ್ತು. 2 ಲಕ್ಷ ಭದ್ರತೆ ಹಾಗೂ ಇಬ್ಬರು ಶ್ಯೂರಿಟಿಯೊಂದಿಗೆ ಮೈಸೂರು ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿತ್ತು.

  • ನನ್ನ ಅರೆಸ್ಟ್ ಮಾಡಿ, ಎನ್‍ಕೌಂಟರ್ ನಲ್ಲಿ ಸಾಯಲು ಇಷ್ಟವಿಲ್ಲ- ಯುಪಿ ಪೊಲೀಸರಿಗೆ ಕೊಲೆ ಆರೋಪಿ ಶರಣು

    ನನ್ನ ಅರೆಸ್ಟ್ ಮಾಡಿ, ಎನ್‍ಕೌಂಟರ್ ನಲ್ಲಿ ಸಾಯಲು ಇಷ್ಟವಿಲ್ಲ- ಯುಪಿ ಪೊಲೀಸರಿಗೆ ಕೊಲೆ ಆರೋಪಿ ಶರಣು

    ಲಕ್ನೋ: ಕೊಲೆ ಆರೋಪಿಯೊಬ್ಬ ಎನ್‍ಕೌಂಟರ್‍ಗೆ ಹೆದರಿ ಪೊಲೀಸರಿಗೆ ಶರಣಾಗಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಮುನ್ಶದ್ ಅಲಿ(22) ಪೊಲೀಸರಿಗೆ ಶರಣಾಗಿರೋ ಆರೋಪಿ. ಭಾನುವಾರ ಮಧ್ಯಾಹ್ನ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯ ಜಿಂಜಿನಾ ಪೊಲೀಸ್ ಠಾಣೆಗೆ ಹೋದ ಮುನ್ಶದ್, ಠಾಣೆಯಲ್ಲಿ ಕುಳಿತಿದ್ದ ಎಸ್‍ಹೆಚ್‍ಓ ಸಂದೀಪ್ ಬಾಲ್ಯನ್ ಅವರ ಮುಂದೆ ಕೈಜೋಡಿಸಿ, ನನಗೆ ಪೊಲೀಸರ ಗುಂಡೇಟಿನಿಂದ ಸಾಯುವ ಬಗ್ಗೆ ಭಯವಿದೆ. ನನ್ನನ್ನು ಬಂಧಿಸಿ ಎಂದು ಹೇಳಿ ಶರಣಾಗಿದ್ದಾನೆ.

    ಮುನ್ಶದ್ ತನ್ನ ಹಳ್ಳಿಯಲ್ಲಿ ತೈಯ್ಯಬ್ ಎಂಬವರನ್ನ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾನೆ. ಇದೀಗ ಈತ ಶರಣಾಗಿದ್ದು, ಇನ್ಮುಂದೆ ಅಪರಾಧ ಕೃತ್ಯಗಳನ್ನ ಮಾಡಲ್ಲ. ಅಪರಾಧ ಜೀವನ ಬಿಟ್ಟುಬಿಡುತ್ತೇನೆ. ಈಗಾಗಲೇ ಮಾಡಿರುವ ತಪ್ಪುಗಳಿಗೆ ಶಿಕ್ಷೆ ಅನುಭವಿಸುತ್ತೇನೆ ಅಂತ ಹೇಳಿದ್ದಾನೆ ಎಂದು ಸಂದೀಪ್ ಬಾಲ್ಯನ್ ತಿಳಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇತರೆ 6 ಆರೋಪಿಗಳನ್ನ ಬಂಧಿಸಿ ಜೈಲಿಗೆ ಕಳಿಸಲಾಗಿದೆ. 7ನೇ ಆರೋಪಿಯಾಗಿದ್ದ ಮುನ್ಶದ್ ತಲೆಮರೆಸಿಕೊಂಡಿದ್ದ. ಈಗ ಆತನನ್ನು ಶಾಮ್ಲಿ ಜಿಲ್ಲೆಯ ಜೈಲಿಗೆ ಕಳಿಸಲಾಗಿದ್ದು, ಶೀಘ್ರದಲ್ಲೇ ವಿಚಾರಣೆಗಾಗಿ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಸಂದೀಪ್ ಹೇಳಿದ್ದಾರೆ.

    ರಾಜ್ಯದಲ್ಲಿ ಈ ರೀತಿ ಎನ್‍ಕೌಂಟರ್‍ಗೆ ಭಯಪಟ್ಟು ಅರೋಪಿ ಪೊಲೀಸರಿಗೆ ಶರಣಾಗಿರುವುದು ಇದೇ ಮೊದಲೇನಲ್ಲ. ಕಳೆದ ವಾರ ಶಾಮ್ಲಿಯ ಕೈರಾನಾದಲ್ಲಿ ಕೊಲೆ ಆರೋಪಿಯಾದ ಸಲ್ಮಾನ್ ಬಾಬಾ ಎಂಬ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದ. ಅಪರಾಧ ಜೀವನವನ್ನ ಬಿಟ್ಟುಬಿಡ್ತೀನಿ ಎಂದು ಮಾತು ಕೊಟ್ಟಿದ್ದ.

    ಅಧಿಕೃತ ಅಂಕಿಅಂಶದ ಪ್ರಕಾರ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ಮೊದಲ 10 ತಿಂಗಳಲ್ಲಿ 1100 ಕ್ಕೂ ಹೆಚ್ಚು ಪೊಲೀಸ್ ಎನ್‍ಕೌಂಟರ್‍ಗಳು ನಡೆದಿವೆ. ಇದರಲ್ಲಿ 34 ಅಪರಾಧಿಗಳು ಸಾವನ್ನಪ್ಪಿದ್ದು, 265 ಮಂದಿ ಗಾಯಗೊಂಡಿದ್ದರು. ಹಾಗೂ 2744 ರೌಡಿ ಶೀಟರ್‍ಗಳ ಬಂಧನಕ್ಕೆ ನೆರವಾಗಿದೆ. ಹಾಗೇ ಇದೇ 10 ತಿಂಗಳಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದು, 247 ಮಂದಿ ಗಾಯಗೊಂಡಿದ್ದರು ಎಂದು ವರದಿಯಾಗಿದೆ.

    ರೌಡಿಗಳ ಕಾಟ ಜಾಸ್ತಿಯಾಗಿದ್ದ ಹಿನ್ನೆಲೆಯಲ್ಲಿ ಯೋಗಿ ಅದಿತ್ಯನಾಥ್ ಅವರು ಪೊಲೀಸರಿಗೆ, ಪಿಸ್ತೂಲ್ ಪಾಕೆಟ್ ನಲ್ಲಿ ಇಡಲು ಕೊಟ್ಟಿರುವುದಲ್ಲ. ಗೂಂಡಾಗಳನ್ನು ಎನ್‍ಕೌಂಟರ್ ಮಾಡಲು ಕೊಡಲಾಗಿದೆ. ಹೀಗಾಗಿ ನಿಮಗೆ ಕೊಟ್ಟಿರುವ ಅಧಿಕಾರವನ್ನು ಚಲಾಯಿಸಿ ರೌಡಿಗಳನ್ನು ಮಟ್ಟ ಹಾಕಿ ಎಂದು ಸೂಚಿಸಿದ್ದರು.

  • ಆಸ್ತಿಗಾಗಿ ಕುಟುಂಬಸ್ಥರ ಕಿತ್ತಾಟ- ತೆಲಗಿ ಪತ್ನಿ, ಮಗಳ ಮೇಲೆ ಸಹೋದರರರಿಂದ ಹಲ್ಲೆ

    ಆಸ್ತಿಗಾಗಿ ಕುಟುಂಬಸ್ಥರ ಕಿತ್ತಾಟ- ತೆಲಗಿ ಪತ್ನಿ, ಮಗಳ ಮೇಲೆ ಸಹೋದರರರಿಂದ ಹಲ್ಲೆ

    ಬೆಳಗಾವಿ: ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ ಮೃತಪಟ್ಟು ಅನೇಕ ತಿಂಗಳುಗಳು ಕಳೆದಿವೆ. ಆದರೆ ಆಸ್ತಿಗಾಗಿ ಕುಟುಂಬಸ್ಥರ ಕಿತ್ತಾಟ ಮಾತ್ರ ಇನ್ನೂ ನಿಂತಿಲ್ಲ.

    ಆಸ್ತಿಗಾಗಿ ತೆಲಗಿ ಸಹೋದರರು ಜಗಳವಾಡಿದ್ದು, ತೆಲಗಿ ಪತ್ನಿ ಶಹೀದಾ ಹಾಗೂ ಮಗಳು ಸನಾ ಮೇಲೆ ಹಲ್ಲೆ ನಡೆಸಿದ್ದಾರೆ. ಶಹೀದಾ ಈಗಾಗಲೇ ಪತಿಯ ಛಾಪಾಕಾಗದ ವ್ಯವಹಾರದಿಂದ ಬಂದ ಹಣವನ್ನು ಕೋರ್ಟ್ ಗೆ ಒಪ್ಪಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಪುಣೆ ಕೋರ್ಟ್ ಗೆ ಅರ್ಜಿವೊಂದನ್ನು ಸಹ ಸಲ್ಲಿಸಿದ್ದಾರೆ. ಇದನ್ನೂ ಓದಿ: 100 ಕೋಟಿಯ ಆಸ್ತಿಯನ್ನು ದಾನ ಮಾಡಲಿದ್ದಾರೆ ಕರೀಂಲಾಲ್ ತೆಲಗಿ ಪತ್ನಿ

    ಇದು ತೆಲಗಿ ಸಹೋದರ ಅಜೀಂ, ರಹಿಂ ಹಾಗೂ ಅವರ ಮಕ್ಕಳ ಕೆಂಗಣ್ಣಿಗೆ ಗುರಿಯಾಗಿದೆ. ಭಾನುವಾರ ಸಂಜೆ ಈ ವಿಚಾರ ಸಂಬಂಧ ಮನೆಯಲ್ಲಿ ಗಲಾಟೆ ನಡೆದಿದೆ. ಅಜೀಂ, ರಹೀಂ ಹಾಗೂ ಆತನ ಮಕ್ಕಳು ಗರ್ಭಿಣಿ ಸನಾಳ ಹೊಟ್ಟೆಗೆ ಒದ್ದು ಹಲ್ಲೆ ನಡೆಸಿದ್ದಾರೆ. ಸದ್ಯ ಅವರು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದಾರೆ. ಇದನ್ನೂ ಓದಿ:   ನಕಲಿ ಛಾಪಾ ಕಾಗದ ಹಗರಣದ ಕಿಂಗ್ ಪಿನ್ ತೆಲಗಿ ನಿಧನ

    ಈ ಬಗ್ಗೆ ಸನಾ ಹಾಗೂ ಶಹೀದಾ ತೆಲಗಿ ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

  • ಅತ್ಯಾಚಾರ ಆರೋಪ ಇರೋ ಮಠಾಧೀಶರನ್ನು ಕೈಬಿಟ್ಟ ಸನಾತನ ಧರ್ಮ ಸಂವರ್ಧಿನೀ ಸಭಾ

    ಅತ್ಯಾಚಾರ ಆರೋಪ ಇರೋ ಮಠಾಧೀಶರನ್ನು ಕೈಬಿಟ್ಟ ಸನಾತನ ಧರ್ಮ ಸಂವರ್ಧಿನೀ ಸಭಾ

    ಚಿಕ್ಕಮಗಳೂರು: ಶೃಂಗೇರಿಯಲ್ಲಿ ನಡೆದ ಸನಾತನ ಧರ್ಮ ಸಂವರ್ಧಿನೀ ಸಭಾದ ಸಭೆಯಲ್ಲಿ ಅತ್ಯಾಚಾರ ಆರೋಪ ಹೊತ್ತ ಸ್ವಾಮೀಜಿಗಳನ್ನು ಸಭಾದಿಂದ ಕೈಬಿಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ.

    ಶ್ರೀ ಮಠದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸನಾತನ ಧರ್ಮ ಸಂವರ್ಧನೆಗೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮಠಗಳು ಯೋಗ್ಯರಾದ ನಿಷ್ಕಳಂಕ ವ್ಯಕ್ತಿಗಳಿಂದ ಮುಂದುವರಿಯಬೇಕೆಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

    ಸಭೆಯಲ್ಲಿ ಶೃಂಗೇರಿಯ ಶಾರದಾಪೀಠದ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ, ಶ್ರೀ ವಿಧುಶೇಖರಭಾರತೀ ಮಹಾಸ್ವಾಮೀಜಿ, ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ, ಯಡತೊರೆ ಕೃಷ್ಣರಾಜನಗರದ ಮಠದ ಶಂಕರಭಾರತೀ ಸ್ವಾಮೀಜಿ, ಹರಿಪುರ ಮಠದಿಂದ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ. ಶಿವಗಂಗಾ ಮಠದಿಂದ ಪರುಷೋತ್ತಮಭಾರತೀ ಸ್ವಾಮೀಜಿ, ಎಡನೀರು ಮಠದಿಂದ ಕೇಶವಾನಂದ ಭಾರತೀ ಸ್ವಾಮಿಗಳು ಭಾಗವಹಿಸಿದ್ದರು.

    ಸಭೆಯಲ್ಲಿ ಕೈಗೊಂಡ ನಿರ್ಣಯಗಳು:
    ಸನಾತನ ಧರ್ಮದ ಉದ್ಧಾರಕ್ಕಾಗಿ ಶ್ರೀ ಶಂಕರಭಗವತ್ಪಾದಕರು ನಮ್ಮ ದೇಶದ ಉದ್ದಗಲಕ್ಕೂ ಕಾಲ್ನಡಿಗೆಯಿಂದ ಸಂಚರಿಸಿ ಧರ್ಮಜಾಗೃತಿಯ ಜೊತೆ ರಾಷ್ಟ್ರದಲ್ಲಿ ಏಕತೆಯನ್ನೂ ಸಾಧಿಸಿದರು. ಈ ರೀತಿ ಸಂಚಾರದ ಸಂದರ್ಭದಲ್ಲಿ ಶ್ರೀ ಶಂಕರರು ಸಂಚರಿಸಿದ ಶ್ರೀಶೈಲ ಮುಂತಾದ ಎಲ್ಲ ಪ್ರಮುಖ ಕ್ಷೇತ್ರಗಳಲ್ಲಿ ಸನಾತನ ಧರ್ಮ ಸಂವರ್ಧನೆಗಾಗಿ ವಿಶೇಷ ಸ್ಮಾರಕಗಳನ್ನು ನಿರ್ಮಿಸಲು ತೀರ್ಮಾನ.

    ಇತ್ತೀಚೆಗೆ ಮಧ್ಯಪ್ರದೇಶ ಸರ್ಕಾರ ಶ್ರೀ ಶಂಕರರ ಸಾರಿದ ಏಕಾತ್ಮಕತೆಯನ್ನು ಸಮಾಜಕ್ಕೆ ತಿಳಿಸಲು ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕಾರ್ಯಕ್ರಮ ಹಮ್ಮಿಕೊಂಡಂತೆ ನಮ್ಮ ದೇಶದ ಉಳಿದ ರಾಜ್ಯಗಳಲ್ಲೂ ಹಮ್ಮಿಕೊಳ್ಳುವುದು ದೇಶದ ದೃಷ್ಟಿಯಿಂದ ಅತ್ಯಂತ ಅವಶ್ಯಕ ಎಂದು ಅಭಿಪ್ರಾಯ ವ್ಯಕ್ತವಾಯಿತು.

    ಮನುಷ್ಯನ ಶ್ರೇಯಸ್ಸಿಗೆ ವೇದೋಪನಿಷತ್ತುಗಳೇ ಪ್ರಮಾಣ ಎಂದು ಭಗವಂತ ಗೀತೆಯಲ್ಲಿ ಉಪದೇಶಿಸಿದ್ದಾನೆ. ಇಂತಹ ಉಪದೇಶಗಳನ್ನು ತಿಳಿಸಿ, ಸನಾತನ ಧರ್ಮ ಸಂವರ್ಧನೆಗಾಗಿ ಸನಾತನ ಧರ್ಮ ಸಂವರ್ಧಿನಿ ಸಭಾ ಪ್ರಯತ್ನಿಸುತ್ತಿದೆ. ಸಂನ್ಯಾಸಾಶ್ರಮ ಧರ್ಮಪಾಲನೆಗೆ ವೇದೋಪನಿಷತ್ತು ಮೊದಲಾದವುಗಳು ಪ್ರಮಾಣ ಹಾಗೂ ಮಠಾಧೀಶರಾಗಿರುವುವವರಿಗೆ ಶ್ರೀ ಶಂಕರರಿಂದ ವಿರಚಿತವಾದ ಮಠಾಮ್ನಾಯ ಪ್ರಮಾಣ. ಇದಕ್ಕೆ ವ್ಯತಿರಿಕ್ತವಾದ ಜೀವನ ನಡೆಸುವ ಹಾಗೂ ಅತ್ಯಾಚಾರ, ಅನೈತಿಕ ಸಂಬಂಧ ಮೊದಲಾದ ಗಂಭೀರ ಆರೋಪಗಳನ್ನು ಹೊತ್ತ ಮಠಾಧೀಶರನ್ನು ನಮ್ಮ ಸಂಸ್ಥೆಯಿಂದ ಕೈಬಿಡಲು ತೀರ್ಮಾನಿಸಲಾಯಿತು. ಆದರೆ ಆ ಮಠಗಳು ಯೋಗ್ಯರಾದ ನಿಷ್ಕಳಂಕ ವ್ಯಕ್ತಿಗಳಿಂದ ಮುಂದುವರಿಯಬೇಕೆಂದು ಸಂಸ್ಥೆ ಅಭಿಪ್ರಾಯ ಪಟ್ಟಿದೆ.

    ವೈಶಾಖ ಶುಕ್ಲ ಪಂಚಮಿ ಶ್ರೀ ಶಂಕರಜಯಂತ್ಯುತ್ಸವ. ಈ ಉತ್ಸವದಲ್ಲಿ ಶ್ರೀ ಶಂಕರರ ಅಷ್ಟೋತ್ತರ ಪಾರಾಯಣದ ಜೊತೆ ಭಾಷ್ಯ-ಪ್ರಕರಣಗ್ರಂಥ-ಸ್ತೋತ್ರ ಹಾಗೂ ಶಂಕರ ದಿಗ್ವಿಜಯಗಳ ಪಾರಾಯಣವನ್ನು ಐದು ದಿನಗಳ ಕಾಲ ಎಲ್ಲ ಆಸ್ತಿಕರು ಮಾಡುವಂತೆ ತಮ್ಮ ತಮ್ಮ ಮಠಗಳ ಶಿಷ್ಯರುಗಳಲ್ಲಿ ಜಾಗೃತಿ ಮೂಡಿಸಬೇಕೆಂದು ನಿರ್ಣಯವನ್ನು ಕೈಗೊಳ್ಳಲಾಯಿತು.

  • ದೆಹಲಿ ವಿವಿ ವಿದ್ಯಾರ್ಥಿನಿ ಎದುರು ಹಸ್ತಮೈಥುನ ಪ್ರಕರಣ: ಕಾಮುಕನ ಸುಳಿವು ಕೊಟ್ಟವರಿಗೆ ಭರ್ಜರಿ ಬಹುಮಾನ

    ದೆಹಲಿ ವಿವಿ ವಿದ್ಯಾರ್ಥಿನಿ ಎದುರು ಹಸ್ತಮೈಥುನ ಪ್ರಕರಣ: ಕಾಮುಕನ ಸುಳಿವು ಕೊಟ್ಟವರಿಗೆ ಭರ್ಜರಿ ಬಹುಮಾನ

    ನವದೆಹಲಿ: ಫೆಬ್ರವರಿ 07 ರಂದು ಚಲಿಸುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿಯೊಬ್ಬರ ಮುಂದೆ ಹಸ್ತ ಮೈಥುನ ಮಾಡಿಕೊಂಡ ಕಾಮುಕನ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದು, ಆರೋಪಿ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನ ಘೋಷಿಸಲಾಗಿದೆ.

    ಈ ಕುರಿತು ಸಾರ್ವಜನಿಕ ಪ್ರಕಟಣೆ ನೀಡಿರುವ ಪೊಲೀಸರು, ಆರೋಪಿಯ ಫೋಟೋ ಹಾಕಿ, ಈತನ ವಿರುದ್ಧ ವಸಂತ್ ವಿಹಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕುರಿತು ಮಾಹಿತಿ ಸಿಕ್ಕರೆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ವಸಂತ್ ವಿಹಾರ್ ಎಸ್‍ಹೆಚ್‍ಓಗೆ ತಿಳಿಸಿ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 25 ಸಾವಿರ ರೂ. ಬಹುಮಾನ ನೀಡಲಾಗುತ್ತದೆ. ಹಾಗೂ ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.

    ಏನಿದು ಪ್ರಕರಣ: ಫೆಬ್ರವರಿ 7 ರಂದು ವಸಂತ್ ವಿಹಾರ್ ಮತ್ತು ಐಐಟಿ ಗೇಟ್ ನಡುವೆ ಚಲಿಸುತ್ತಿದ್ದ ಬಸ್ ನಲ್ಲಿ ದೆಹಲಿ ವಿವಿ ಯ ವಿದ್ಯಾರ್ಥಿನಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಆಕೆಯ ಸೊಂಟವನ್ನು ಪದೇ ಪದೇ ಸ್ಪರ್ಶಿಸಲು ಯತ್ನಿಸಿದ್ದ. ಅಷ್ಟೇ ಅಲ್ಲದೇ ಆರೋಪಿ ಕಾಮುಕ ವಿದ್ಯಾರ್ಥಿನಿ ಮುಂದೆಯೇ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿದ್ಯಾರ್ಥಿನಿ ಆರೋಪಿಯ ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದರು.

    ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ್ದ ವಿದ್ಯಾರ್ಥಿನಿ, ತಾನು ಸಂಜೆ 7 ಗಂಟೆ ವೇಳೆ ಬಸ್ಸಿನಲ್ಲಿ ಪ್ರಯಾಣಿಸುವ ವೇಳೆ ಬಹಳಷ್ಟು ಪ್ರಯಾಣಿಕರಿದ್ದರು. ಆದರೆ ಈ ವೇಳೆ ನನ್ನ ಪಕ್ಕ ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ. ಇದನ್ನು ಕಂಡು ಕ್ಷಣ ಕಾಲ ವಿಚಲಿತಳಾದೆ. ಆದರೆ ಮರುಕ್ಷಣದಲ್ಲಿ ಆತನ ಕೃತ್ಯವನ್ನು ನನ್ನ ಮೊಬೈಲ್ ನಲ್ಲಿ ಸೆರೆಹಿಡಿದೆ. ನಂತರ ಸಮಾಜದಲ್ಲಿ ಇಂತಹ ಘಟನೆಗಳ ಕುರಿತು ಅರಿವು ಮೂಡಿಸಲು ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾಗಿ ತಿಳಿಸಿದ್ದರು.

    ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ದೆಹಲಿಯ ವಸಂತ್ ವಿಹಾರ್ ಪೊಲೀಸರು ಐಪಿಸಿ ಸೆಕ್ಸನ್ 354(ಲೈಂಗಿಕ ಕಿರುಕುಳ), 354ಎ ಹಾಗೂ 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲತೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

  • ಮಹಿಳಾ ಪೋಲಿಸರ ಮುಂದೆಯೇ ಪ್ಯಾಂಟ್ ಜಿಪ್ ತೆಗೆದು ಹಸ್ತಮೈಥುನ ಮಾಡ್ತಿದ್ದ ಕಾಮುಕ ಅರೆಸ್ಟ್

    ಮಹಿಳಾ ಪೋಲಿಸರ ಮುಂದೆಯೇ ಪ್ಯಾಂಟ್ ಜಿಪ್ ತೆಗೆದು ಹಸ್ತಮೈಥುನ ಮಾಡ್ತಿದ್ದ ಕಾಮುಕ ಅರೆಸ್ಟ್

    ಪಂಚಕುಲಾ: ಸಾರ್ವಜನಿಕ ಸ್ಥಳದಲ್ಲಿ ಮಹಿಳಾ ಪೊಲೀಸರ ಮುಂದೇ ಹಸ್ತಮೈಥುನ ಮಾಡುತ್ತಿದ್ದ ಯುವಕ ಈಗ ಪೊಲೀಸರ ಸೆರೆಯಾಗಿದ್ದಾನೆ.

    ಹರ್ಯಾಣದಲ್ಲಿ ಪಂಚಕುಲದಲ್ಲಿ ಈ ಘಟನೆ ನಡೆದಿದ್ದು ಮದ್ಯಪಾನ ಮಾಡಿ ಈ ದುರ್ವತನೆ ತೋರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಂಚಕುಲದ ಐದನೇ ಸೆಕ್ಟರ್ ನ ಪೊಲೀಸ್ ಠಾಣೆ ಮುಖ್ಯ ಪೇದೆಯಾಗಿರುವ ಅನಿತಾ ಅವರು ಸಬ್ ಇನ್ಸ್ ಪೆಕ್ಟರ್ ಜೊತೆ ಪ್ರಕರಣವೊಂದರ ವಿಚಾರಣೆಗೆ ಹೊರಟಿದ್ದರು. ಈ ವೇಳೆ ಹಳೆ ಪಂಚಕುಲ ನಗರದ ಜನನಿಬಿಡ ರಸ್ತೆ ದಾಟಲೆಂದು ನಿಂತಿದ್ದಾಗ, ಇದೇ ರಸ್ತೆಯ ಎಡಭಾಗದಲ್ಲಿ ನಿಂತಿದ್ದ ಕಾಮುಕನೊಬ್ಬ ಇವರನ್ನು ನೋಡಿ ರಸ್ತೆಯಲ್ಲಿಯೇ ಪ್ಯಾಂಟ್ ಜಿಪ್ ತೆಗೆದು ಹಸ್ತಮೈಥುನ ಮಾಡಲು ಪ್ರಾರಂಭಿಸಿದ್ದಾನೆ ಎಂದು ಪೊಲೀಸರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ವೇಳೆ ಕಾಮುಕನ ದುರ್ವತನೆ ಕಂಡು ಸಿಗ್ನಲ್‍ ನಲ್ಲಿ ನಿಂತಿದ್ದ ಹಲವು ಪ್ರಯಾಣಿಕರು ಮುಜುಗರಕ್ಕೊಳಗಾಗಿ ತಮ್ಮ ಗಮನ ಬೇರೆಡೆ ಹರಿಸಿ ಮುಂದೆ ಸಾಗಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿ ಮುಂದೆ ಹಸ್ತಮೈಥುನ- ವಿಡಿಯೋ ವೈರಲ್

    ಕಾಮುಕನ ಕೃತ್ಯ ಕಂಡು ಕೋಪಗೊಂಡ ಮಹಿಳಾ ಪೊಲೀಸರು, ತಕ್ಷಣವೇ ಸ್ಥಳೀಯ ಪೊಲೀಸ್ ನಿಯಂತ್ರಣ ಕೊಠಡಿ(ಪಿಸಿಆರ್) ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಐದೇ ನಿಮಿಷದಲ್ಲಿ ಸ್ಥಳಕ್ಕಾಗಮಿಸಿ ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

  • ಹಣ ಕೊಡಲು ನಿರಾಕರಿಸಿದ ಪೊಲೀಸಪ್ಪನಿಗೇ ಬಿತ್ತು ಗೂಸಾ!

    ಹಣ ಕೊಡಲು ನಿರಾಕರಿಸಿದ ಪೊಲೀಸಪ್ಪನಿಗೇ ಬಿತ್ತು ಗೂಸಾ!

    ಮುಂಬೈ: ಮದ್ಯಪಾನ ಮಾಡಿದ್ದ ಸ್ಥಳೀಯ ಯುವಕರು ಹಣ ಕೇಳಿದಾಗ ಕೊಡಲು ನಿರಾಕರಿಸಿದ ಪೇದೆಯನ್ನು ಚೆನ್ನಾಗಿ ಥಳಿಸಿ, ಗಂಭೀರ ಗಾಯಗೊಳಿಸಿದ ಘಟನೆ ಮುಂಬೈನ ಶುಭಾಸ್ ನಗರದಲ್ಲಿ ನಡೆದಿದೆ.

    ಘಟನೆಯಲ್ಲಿ ಗಾಯಗೊಂಡ ಪೇದೆಯನ್ನು ಶ್ರೀಕಾಂತ್ ತೊರಟ್ ಎಂದು ಗುರುತಿಸಲಾಗಿದೆ. ಸದ್ಯ ಇವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಏನಿದು ಘಟನೆ: ಪೇದೆ ಶ್ರೀಕಾಂತ್ ಎಂದಿನಂತೆ ತಮ್ಮ ಕೆಲಸ ಮುಗಿಸಿ ನಹರ್ ಅಲ್ಲಿರೋ ತಮ್ಮ ಮನೆಗೆ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ಮೂವರು ವ್ಯಕ್ತಿಗಳು ಅವರನ್ನು ಅಡ್ಡಹಾಕಿದ್ದಾರೆ. ಅಲ್ಲದೇ ನಿನ್ನ ಕೈಯಲ್ಲಿ ಎಷ್ಟು ಹಣವಿದೆಯೋ ಅವೆಲ್ಲವನ್ನು ಕೊಡುವಂತೆ ಬೆದರಿಸಿದ್ದಾರೆ. ಇದರಿಂದ ಭಯಗೊಂಡ ಶ್ರೀಕಾಂತ್ ಕೂಡಲೇ ಕಂಟ್ರೋಲ್ ರೂಮ್ ಗೆ ಕರೆ ಮಾಡಲು ಪ್ರಯತ್ನಿಸಿದ್ದಾರೆ. ಈ ವೇಳೆ ಮೂವರು ಯುವಕರು ಕರೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.

    ಇದೇ ಸಂದರ್ಭದಲ್ಲಿ ತಾವು ಥಳಿಸಿರೋದು ಓರ್ವ ಪೇದೆಗೆ ಅನ್ನೋದು ತಿಳಿಯುತ್ತದೆ. ಕೂಡಲೇ ಅಲ್ಲಿಂದ ಯುವಕರು ಕಾಲ್ಕಿತ್ತಿದ್ದಾರೆ. ಘಟನೆಯಿಂದ ಕಾಲಿಗೆ ಗಾಯಗಳಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಪೇದೆಯನ್ನು ಅಲ್ಲೇ ಇದ್ದ ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಆರೋಪಿಗಳು ಅರೆಸ್ಟ್: ಘಟನೆಗೆ ಸಂಬಂಧಿಸಿದಂತೆ ಕೂಡಲೇ ಎಚ್ಚೆತ್ತ ಪೊಲೀಸರು ತಂಡಗಳನ್ನು ರಚಿಸಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ ಅವರನ್ನು ಬಂಧಿಸಲಾಗಿದ್ದು,ಆಸೀಫ್ ಶೈಕ್, ರಾಹುಲ್ ಭೋಸಲೆ ಹಾಗೂ ಕಿಶೋರ್ ರಾವತ್ ಎಂದು ಗುರುತಿಸಲಾಗಿದೆ. ಈ ಮೂವರು ಒಂದೇ ಕಡೆ ವಾಸಿಸುತ್ತಿದ್ದು, ಮದ್ಯವ್ಯಸನಿಗಳಾಗಿದ್ದಾರೆ. ಆರೋಪಿಗಳು ಹಣ ಕೇಳಿದಾಗ ಕೊಡಲು ನಿರಾಕರಿಸಿದ್ದಕ್ಕೆ ಪೇದೆಯ ಕೈ, ಕಾಲುಗಳಿಗೆ ಗಂಭೀರ ಗಾಯಗೊಳಿಸಿದ್ದಾರೆ ಅಂತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

     

  • ಪರೇಶ್ ಮೇಸ್ತಾ ಸಾವು ಪ್ರಕರಣ- ಮತ್ತಿಬ್ಬರು ಆರೋಪಿಗಳ ಬಂಧನ

    ಪರೇಶ್ ಮೇಸ್ತಾ ಸಾವು ಪ್ರಕರಣ- ಮತ್ತಿಬ್ಬರು ಆರೋಪಿಗಳ ಬಂಧನ

    ಕಾರವಾರ: ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಕಮಲಾಕರ್ ಮೇಸ್ತಾ ನೀಡಿದ್ದ ದೂರಿನ ಆಧಾರದಲ್ಲಿ ಎಲ್ಲಾ ಐವರು ಆರೋಪಿಗಳನ್ನ ಬಂಧಿಸುವಲ್ಲಿ ಹೊನ್ನಾವರ ಪೊಲೀಸರು ಯಶಸ್ವಿಯಾಗಿದ್ದಾರೆ.

    ಕಳೆದ ವಾರ ಮೊದಲ ಆರೋಪಿ ಆಸೀಪ್ ರಫಿಕ್ ಎಂಬವನನ್ನು ಭಟ್ಕಳದ ಶಿರಾಲಿಯಲ್ಲಿ ಬಂಧಿಸಿದ್ರೆ ಹೊನ್ನಾವರದಲ್ಲಿ ಡಿಸಂಬರ್ ನಲ್ಲಿ ಪ್ರಮುಖ ಆರೋಪಿ ಆಜಾದ್ ಅಣ್ಣಿಗೇರಿಯನ್ನು ಹಾಗೂ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸಲೀಂ ಶೇಖ್‍ನನ್ನು ಎರಡು ದಿನಗಳ ಹಿಂದೆ ಬಂಧಿಸಲಾಗಿತ್ತು. ಇದನ್ನೂ ಓದಿ:  Exclusive: ವಿಷವುಣಿಸಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ – ಪರೇಶ್ ಮೇಸ್ತಾ ತಂದೆ ಹೇಳಿಕೆ

    ನಂತರ ಬಂಧಿತರು ನೀಡಿದ ಖಚಿತ ಮಾಹಿತಿ ಆಧರಿಸಿ ಗುರುವಾರ ಶಿರಸಿಯಲ್ಲಿ ಇಮ್ತಿಯಾಜ್ ಶೇಖ್ ಹಾಗೂ ಸಯ್ಯದ್ ಫೈಜಲ್ ನನ್ನು ಬಂಧಿಸಲಾಗಿದೆ. ಈ ಮೂಲಕ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಎಲ್ಲಾ ಐದು ಆರೋಪಿಗಳ ಬಂಧನವಾಗಿದೆ. ಇದನ್ನೂ ಓದಿ: ಪರೇಶ್ ಮೇಸ್ತಾ ಸಾವು: ವೈದ್ಯರ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

    ಈ ಮೂಲಕ ಪ್ರಕರಣವನ್ನು ಸಿ.ಬಿ.ಐ ಕೈಗೆತ್ತಿಕೊಳ್ಳುವ ಮೊದಲು ಹೊನ್ನಾವರ ಪೊಲೀಸರು ಕಮಲಾಕರ್ ಮೇಸ್ತಾ ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ. ಪರೇಶ್ ಮೇಸ್ತಾ ಸಾವು ಕೊಲೆಯೇ ಅಥವಾ ಸಹಜ ಸಾವೋ ಎಂಬುದಕ್ಕೆ ಆರೋಪಿಗಳ ಹೇಳಿಕೆಯೇ ಪ್ರಮುಖವಾಗಲಿದೆ. ಇದನ್ನೂ ಓದಿ:   ಪರೇಶ್ ಮೇಸ್ತಾ ಸಾವಿನ ಪ್ರಕರಣದ ತನಿಖೆ ಸಿಬಿಐ ಹೆಗಲಿಗೆ

    https://www.youtube.com/watch?v=5XVX-SyTRAI

  • ಪರೇಶ್ ಮೇಸ್ತಾ ನಿಗೂಢ ಸಾವು ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

    ಪರೇಶ್ ಮೇಸ್ತಾ ನಿಗೂಢ ಸಾವು ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಪರೇಶ್ ಮೇಸ್ತಾ(19) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸುವಲ್ಲಿ ಹೊನ್ನಾವರ ಪೊಲೀಸರು ಯಶಸ್ವಿಯಾಗಿದ್ದಾರೆ.

    ಪ್ರಕರಣ ಸಂಬಂಧಿಸಿದಂತೆ ಹೊನ್ನಾವರ ಪೊಲೀಸರು ಪ್ರತ್ಯೇಕ ತಂಡ ರಚಿಸಿ ತನಿಖೆ ಕೈಗೊಂಡಿದ್ದು, ಈ ಹಿಂದೆ ಹೊನ್ನಾವರದ ಗುಡ್ ಲಕ್ ಹೋಟೆಲ್ ಮಾಲೀಕ ಆಜಾದ್ ಅಣ್ಣಿಗೇರಿಯನ್ನು ಮೊದಲು ಬಂಧಿಸಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸಲೀಂ ಶೇಖ್ ಎಂಬವನನ್ನು ಇದೇ ಶುಕ್ರವಾರ ಬಂಧಿಸಿದ್ದು, ಇದೀಗ ಹೊನ್ನಾವರದ ಕಟ್ಟಿಗೆ ಡಿಪೋದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಆರೋಪಿ ಆಸೀಫ್ ರಫೀಕ್ ನನ್ನು ಬಂಧಿಸಲಾಗಿದೆ. ಇದನ್ನೂ ಓದಿ:  Exclusive: ವಿಷವುಣಿಸಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ – ಪರೇಶ್ ಮೇಸ್ತಾ ತಂದೆ ಹೇಳಿಕೆ

    ಇನ್ನು ಉಳಿದ ಆರೋಪಿಗಳಾದ ಮಹ್ಮದ್ ಫೈಸಲ್ ಅಣ್ಣಿಗೇರಿ, ಇಮ್ತಿಯಾಜ್ ಗನಿ ಎಂಬವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪರೇಶ್ ಮೇಸ್ತಾ ಸಾವು: ವೈದ್ಯರ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

    ಸಿಬಿಐ ತನಿಖೆ ಪ್ರಾರಂಭವಾಗುವ ಮುನ್ನವೇ ಕಮಲಾಕರ್ ಮೇಸ್ತಾ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಪರೇಶ್ ಮೇಸ್ತಾ ಸಾವು ಸಹಜ ಸಾವಲ್ಲ. ಇದೊಂದು ಕೊಲೆ ಎನ್ನುವ ಆರೋಪಕ್ಕೆ ಹೆಚ್ಚಿನ ಮಹತ್ವ ಬಂದಿದ್ದು ಆರೋಪಿಗಳ ತನಿಖೆಯಲ್ಲಿ ಮತ್ತಷ್ಟು ವಿಷಯಗಳು ಹೊರಬರುವ ಸಾಧ್ಯತೆಯಿದೆ.

    ಹೊನ್ನಾವರದಲ್ಲಿ ಡಿಸೆಂಬರ್ 6ರಂದು ನಾಪತ್ತೆಯಾಗಿದ್ದ ಪರೇಸ್ ಮೇಸ್ತಾ ನಗರದ ಶಟ್ಟಿಕೆರೆಯಲ್ಲಿ ಡಿಸೆಂಬರ್ 8 ರಂದು ಹೆಣವಾಗಿ ಪತ್ತೆಯಾಗಿದ್ದ. ನಿಗೂಢ ಸಾವಿನ ಕುರಿತು ತಂದೆ ಕಮಲಾಕರ್ ಮೇಸ್ತಾ ರವರು ಶವ ಪತ್ತೆಯಾದ ಡಿಸೆಂಬರ್ 8 ರಂದೇ ಐದು ಮಂದಿ ಆರೋಪಿಗಳ ವಿರುದ್ಧ ದೂರು ನೀಡಿದ್ದರು. ದೂರು ನೀಡಿದ ಬಳಿಕ ಐದು ಮಂದಿ ನಾಪತ್ತೆಯಾಗಿದ್ದರು. ಇದನ್ನೂ ಓದಿ:   ಪರೇಶ್ ಮೇಸ್ತಾ ಸಾವಿನ ಪ್ರಕರಣದ ತನಿಖೆ ಸಿಬಿಐ ಹೆಗಲಿಗೆ

    ಪರೇಶ್ ಮೆಸ್ತಾ ಸಾವು ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿದ್ದಲ್ಲದೇ ಹಲವು ಭಾಗದಲ್ಲಿ ಘರ್ಷಣೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಿಬಿಐಗೆ ಪ್ರಕರಣವನ್ನು ನೀಡಿತ್ತು. ಇದನ್ನೂ ಓದಿ: ಪರೇಶ್ ಮೇಸ್ತಾ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

    ಈ ಕುರಿತು ಅಂದು ಪಬ್ಲಿಕ್ ಟಿವಿ ಜೊತೆಗೆ ಮಾತಾಡಿದ ತಂದೆ ಕಮಲಾಕರ್ ಮೇಸ್ತಾ, ನನ್ನ ಮಗನನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಲಾಗಿದೆ. ವಿಷವುಣಿಸಿ ಹಲ್ಲೆಗೈದು ಕೊಲೆ ಮಾಡಿದ್ದಾರೆ. ಆದ್ರೆ ಕಾಲು ಜಾರಿ ಬಿದ್ದು ಸತ್ತಿದ್ದಾನೆಂಬ ಪೊಲೀಸರ ಹೇಳಿಕೆ ನೀಡಿದ್ದು, ಇದು ಸರಿಯಲ್ಲ. ನಮ್ಮ ಮಗನಿಗೆ ಈಜು ಬರುತ್ತಿತ್ತು ತಂದೆ ಹೇಳಿದ್ದರು.

    ನನ್ನ ಮಗ 6ನೇ ತಾರೀಖು ಕಾಣೆಯಾದ. ಎಲ್ಲಾ ಕಡೆ ಹುಡುಕಿ ನಂತರ ಪೊಲೀಸರಿಗೆ ದೂರು ಕೊಟ್ಟಿದ್ವಿ. ನಂತರ ಶನೀಶ್ವರ ದೇವಸ್ಥಾನದ ಹಿಂದೆ ಶೆಟ್ಟಿ ಕೆರೆಯಲ್ಲಿ ಮಗನ ಶವ ತೇಲುತ್ತಿತ್ತು. ಮುಖ ನೋಡಿದಾಗ ಕಪ್ಪಾಗಿದ್ದು, ಮುಖ ಜಜ್ಜಿತ್ತು, ಕಣ್ಣು ಗೆಡ್ಡೆ ಕಿತ್ತು ಬಂದಿತ್ತು. ಕಿಡ್ನಾಪ್ ಮಾಡಿ ಸಾಯಿಸಿರೋದು ನೂರಕ್ಕೆ ನೂರು ಸತ್ಯ. ಇದಕ್ಕೆ ಪೊಲೀಸ್ ಇಲಾಖೆಯ ಕುಮ್ಮಕ್ಕೂ ಇದೆ. ನನ್ನ ಮಗನಿಗೆ ನ್ಯಾಯ ಸಿಗಬೇಕು. ಪ್ರಕರಣದ ತನಿಖೆಯನ್ನ ಸಿಬಿಐಗೆ ಒಪ್ಪಿಸಬೇಕು ಅಂತ ಒತ್ತಾಯಿಸಿದ್ದರು. ಇದನ್ನೂ ಓದಿ:ಮರಣೋತ್ತರ ಪರೀಕ್ಷೆ ವರದಿ ಇನ್ನೂ ಬಂದಿಲ್ಲ, ಕೊಲೆ ಹೇಗೆ ಆಗುತ್ತೆ: ಸಿಎಂ ಸಿದ್ದರಾಮಯ್ಯ

    ಪ್ರಕರಣದ ಸಾವಿನ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ನೀಡಿದ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವೈದ್ಯ ಶಂಕರ್ ಒಕ್ಕಣ್ಣನವರ್ ಸುಳ್ಳು ವರದಿ ಕೊಟ್ಟಿದ್ದಾರೆಂದು ಅಸಮಾಧಾನ ವ್ಯಕ್ತವಾಗಿದ್ದು, ಹೀಗಾಗಿ ಅವರ ವಿರುದ್ಧ ಮೇಲೆ ಫೇಸ್ ಬುಕ್- ವಾಟ್ಸಪ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

     

    https://www.youtube.com/watch?v=5XVX-SyTRAI