Tag: accused

  • ಉದ್ಯಮಿಯ ಮೊಮ್ಮಗನ ಪುಂಡಾಟ: ಆರೋಪಿ ವಿಷ್ಣು ತಂದೆ ಹೇಳಿದ್ದು ಹೀಗೆ

    ಉದ್ಯಮಿಯ ಮೊಮ್ಮಗನ ಪುಂಡಾಟ: ಆರೋಪಿ ವಿಷ್ಣು ತಂದೆ ಹೇಳಿದ್ದು ಹೀಗೆ

    ಬೆಂಗಳೂರು: ಉದ್ಯಮಿಯ ಮೊಮ್ಮಗನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆದರೆ ವಿಷ್ಣು ಇನ್ನೂ ಕೂಡ ಪೊಲೀಸರಿಗೆ ಮರೀಚಿಕೆಯಾಗಿಯೇ ಉಳಿದಿದ್ದಾನೆ. ಇದರ ಬೆನ್ನಲ್ಲೆ ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಾ ಇದ್ದು ಪೊಲೀಸರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಮಾಡುತ್ತಿದ್ದಾನೆ.

    ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಪರಾರಿಯಾಗಿರೋ ವಿಷ್ಣುವಿಗೆ ಇಂದು ನಿರೀಕ್ಷಣಾ ಜಾಮೀನು ಸಿಗುತ್ತದೆಯೇ ನೋಡಬೇಕಿದೆ. ಆದರೆ ವಿಷ್ಣುವಿಗಾಗಿ ಹೈದರಾಬಾದ್ ಮತ್ತು ಗೋವಾದಲ್ಲಿ ಹುಡುಕಾಟ ಮಾಡುತ್ತಿದ್ದು ವಿಷ್ಣುವಿನ ಅಪ್ಪ ಶ್ರೀನಿವಾಸ್ ಮೂರ್ತಿ ಅವರನ್ನು ಹೈದರಾಬಾದ್‍ನಲ್ಲೆಲ್ಲಾ ಅಲೆಸುತ್ತಿದ್ದಾರೆ.

     

    ಈ ನಡುವೆ ಸ್ಪಷ್ಟನೆ ನೀಡಿರುವ ವಿಷ್ಣು ತಂದೆ ಶ್ರೀನಿವಾಸ್ ಮೂರ್ತಿ, ವಿಷ್ಣು ಡ್ರಗ್ ವ್ಯಸನಿ ಅಲ್ಲ. ಆತನ ಕಾರಿನಲ್ಲಿ ಡ್ರಗ್ ಸಿಕ್ಕಿರುವ ಸಾಧ್ಯತೆ ಇಲ್ಲ. ಅಪಘಾತವಾದಾಗ ಯಾರೋ ತಂದು ಇಟ್ಟಿರಬಹುದು ಅನ್ನಿಸುತ್ತಿದೆ. ಇನ್ನು ಮಾಧ್ಯಮಗಳಲ್ಲಿ ಸುದ್ದಿ ನೋಡಿ ಆಸ್ಪತ್ರೆಯಿಂದ ಹೊರಟು ಹೋಗಿರಬಹುದು. ಆತ ಎಲ್ಲಿ ಹೋಗಿದ್ದಾನೆ ಎಂಬುದು ಗೊತ್ತಿಲ್ಲ ಅಂತಾ ತಿಳಿಸಿದ್ದಾರೆ. ಅಲ್ಲದೇ ಘಟನೆಯಿಂದ ನಮ್ಮ ಕುಟುಂಬದ ಗೌರವಕ್ಕೆ ಕುಂದು ಉಂಟಾಗದಂತೆ ಕಾಪಾಡಬೇಕೆಂದೂ ಮನವಿ ಮಾಡಿಕೊಂಡಿದ್ದಾರೆ.

    ಅಪಘಾತ ನಡೆದಿದ್ದು ಹೇಗೆ?
    ಗೀತಾವಿಷ್ಣು ಅವರು ಜಯನಗರದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದಾರೆ. ಘಟನೆ ನಡೆದ ದಿನ ಅವರು ವ್ಯಾಪಾರ ಮುಗಿಸಿ ಮನೆಗೆ ತೆರಳುತ್ತಿದ್ದರು. ಹಾಗೆ ತೆರಳುವ ಹೊತ್ತಲ್ಲಿ ಅವರು ಹೋಗುವ ದಾರಿಯಲ್ಲಿ ಗ್ರೀನ್ ಸಿಗ್ನಲ್ ಇದ್ದುದರಿಂದ ಚಾಲಕರು ವಾಹನವನ್ನು ಮುನ್ನಡೆಸುತ್ತಿದ್ದರು. ಅದೇ ಹೊತ್ತಿಗೆ ಪಕ್ಕದ ರಸ್ತೆಯಿಂದ ರೆಡ್ ಸಿಗ್ನಲ್ ಇದ್ದಾಗಲ್ಲೂ ಮಾರುತಿ ಓಮ್ನಿ ವಾಹನ ವೇಗವಾಗಿ ಬಂದಿದ್ದರಿಂದ, ಅಪಘಾತವನ್ನು ತಪ್ಪಿಸುವ ಸಲುವಾಗಿ ಚಾಲಕ ಕಾರನ್ನು ಪಕ್ಕಕ್ಕೆ ತಿರುಗಿಸಿದ್ದಾರೆ. ಹಾಗಿದ್ದರೂ ಅದು ಓಮ್ನಿಗೆ ಡಿಕ್ಕಿ ಹೊಡೆದಿದೆ. ನಂತರ ವಾಹನ ಫುಟ್ ಪಾತ್ ಮೇಲೆ ಏರಿ ಎರಡು ಕಂಬಗಳ ನಡುವೆ ನಿಂತಿದೆ.

    ಅಪಘಾತದ ತೀವ್ರತೆ ತಪ್ಪಿಸುವ ಸಲುವಾಗಿ ಎಚ್ಚರಿಕೆಯಿಂದಲೂ ಚಾಕಚಕ್ಯತೆಯಿಂದಲೂ ವಾಹನ ಓಡಿಸುವ ಮೂಲಕ ಚಾಲಕ ಆಗಬಹುದಾಗಿದ್ದ ಹಾನಿಯನ್ನು ತಪ್ಪಿಸಿದ್ದಾರೆ. ಅಪಘಾತದ ಸದ್ದು ಕೇಳುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಗಳಲ್ಲಿದ್ದ ಮೊಹಮ್ಮಡನ್ ಬ್ಲಾಕ್ ಮಂದಿ ಬಂದು ಗೀತಾವಿಷ್ಣು ಅವರಿಗೆ ಮಾತಾಡಲಿಕ್ಕೂ ಅವಕಾಶ ಕೊಡದೇ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಹಾಗೆಯೇ ಮತ್ತೆ ಕೆಲವರು ಗೀತಾವಿಷ್ಣು ತಪ್ಪಿಲ್ಲವೆಂದು ಹೇಳಿ ಅವರ ಪರವಾಗಿ ನಿಂತಿದ್ದಾರೆ ಚಾಲಕನ ಸಮಯ ಪ್ರಜ್ಞೆಯಿಂದ ಅಪಘಾತದ ತೀವ್ರತೆಯನ್ನು ಕಡಿಮೆ ಮಾಡಿದ್ದಾರೆ ಎಂದು ಹೇಳಿ ಅವರನ್ನು ಒಳಗೆ ಕೂರಿಸಿ ಉಪಚರಿಸಿದ್ದಾರೆ. ಸರಿಯಾದ ಸಮಯಕ್ಕೆ ಆಗಮಿಸಿದ ಪೊಲೀಸರು ಹೆಚ್ಚಿನ ಘರ್ಷಣೆ ನಡೆಯುವ ಮೊದಲು ಬಂದೋಬಸ್ತ್ ಮಾಡಿ ಎರಡೂ ಕಡೆಯ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

    ಡ್ರಗ್ ವ್ಯಸನಿ ಅಲ್ಲ: ಗೀತಾವಿಷ್ಣು ಮೊದಲು ರಾಮಕೃಷ್ಣ ನರ್ಸಿಂಗ್ ಹೋಮ್‍ನಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು. ನಂತರ ಹೆಚ್ಚಿನ ಚಿಕಿತ್ಸೆಗೆ ಮಲ್ಯ ಆಸ್ಪತ್ರೆ ದಾಖಲಾಗಿದ್ದರು. ಗೀತಾ ವಿಷ್ಣುವಿಗೆ ನಾರ್ಕೋಟಿಕ್(ಗಾಂಜಾ) ಸೇವಿಸುವ ಅಭ್ಯಾಸ ಇಲ್ಲ. ಆತನ ಕಾರಿನಲ್ಲಿ ಗಾಂಜಾ ಪ್ಯಾಕೆಟ್ಟುಗಳು ಸಿಕ್ಕಿರುವ ಸಾಧ್ಯತೆಯೂ ಇಲ್ಲ. ಅದನ್ನು ಆಮೇಲೆ ಯಾರಾದರೂ ತಂದಿಟ್ಟಿರಬಹುದು. ಆ ಕುರಿತು ನನಗೆ ಗೊತ್ತಿಲ್ಲ. ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೇರಿದ ಗೀತಾವಿಷ್ಣು ತನಗೆ ತಲೆ ಸುತ್ತು ಬರುವುದಾಗಿ ಹೇಳಿರುವುದು ದಾಖಲಾಗಿದೆ. ವೈದ್ಯರೂ ಅದನ್ನೇ ದೃಢಪಡಿಸಿದ್ದಾರೆ. ರಕ್ತದ ಸ್ಯಾಂಪಲ್ಲನ್ನು ಪಡೆಯಲಾಗಿದೆ. ಇಷ್ಟಾದ ಮೇಲೆ ವಾಹಿನಿಗಳಲ್ಲಿ ಬರುತ್ತಿರುವ ಸುದ್ದಿಗಳನ್ನು ನೋಡಿ ಗಾಬರಿಯಾಗಿ ಗೀತಾವಿಷ್ಣು ಅಲ್ಲಿಂದ ಹೊರಟು ಹೋಗಿದ್ದಾನೆ ಎಂದು ನನಗೆ ಅನ್ನಿಸುತ್ತದೆ. ಆತ ಎಲ್ಲಿಗೆ ಹೋಗಿದ್ದಾನೆ ಎಂಬುದು ನನಗೂ ಗೊತ್ತಿಲ್ಲ. ಆತ ಡ್ರಗ್ ವ್ಯಸನಿ ಅಲ್ಲ ಎಂದು ಹೇಳಿದ್ದಾರೆ.

    ಪೊಲೀಸರಿಗೆ ಧನ್ಯವಾದ: ಭಯಗ್ರಸ್ತನಾಗಿ ಹೊರಟು ಹೋಗಿರುವ ಆತನ ಆರೋಗ್ಯ ಮತ್ತು ಭದ್ರತೆಯ ಬಗ್ಗೆ ನನಗೆ ಆತಂಕವಾಗುತ್ತಿದೆ. ಈ ಸುದ್ದಿಗಳಿಂದ ಆತನ ಮನಸ್ಸಿಗೂ ಆಘಾತ ಆಗಿರುತ್ತದೆ. ಗೀತಾವಿಷ್ಣು ವಾಹನ ಚಲಾಯಿಸುತ್ತಿದ್ದನೋ ಇಲ್ಲವೋ ಅನ್ನುವುದು ಕೂಡ ನಮಗಿನ್ನೂ ಖಚಿತವಾಗಿಲ್ಲ. ಆ ಕುರಿತು ಗೀತಾವಿಷ್ಣು ನೀಡಿದ ಹೇಳಿಕೆಯಲ್ಲಿ ತಾನು ವಾಹನ ಓಡಿಸುತ್ತಿರಲಿಲ್ಲ ಎಂದೇ ಹೇಳಿದ್ದಾರೆ. ಈ ಸಂದರ್ಭದಲ್ಲಿ ಗುಂಪನ್ನು ಹತೋಟಿಗೆ ತಂದು ಹೆಚ್ಚಿನ ಅನಾಹುತವಾಗದಂತೆ ನೋಡಿಕೊಂಡ ಪೊಲೀಸರಿಗೆ ಧನ್ಯವಾದ. ಅವರು ಮಾನವೀಯವಾಗಿ ವರ್ತಿಸಿ ಎರಡೂ ಕಡೆಯ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕೆಲಸವನ್ನೂ ಮಾಡಿದ್ದಾರೆ. ಅವರಿಗೆ ಕೃತಜ್ಞತೆಗಳು. ಆದ್ದರಿಂದ ತಾವೆಲ್ಲರೂ ವದಂತಿಗಳು ಹಬ್ಬದಂತೆ ನೋಡಿಕೊಂಡು, ಗೀತಾವಿಷ್ಣು ಮನಸ್ಸಿಗೆ ಮುಂದೆಯೂ ಆಗಬಹುದಾದ ಆತಂಕ ಮತ್ತು ಒತ್ತಡಕ್ಕೆ ಅವಕಾಶ ಮಾಡಿಕೊಡಬಾರದೆಂದು ವಿನಂತಿ. ಹಾಗೆಯೇ ನಮ್ಮ ಕುಟುಂಬದ ಗೌರವಕ್ಕೆ ಕುಂದು ಉಂಟಾಗದಂತೆ ಕಾಪಾಡಬೇಕೆಂದೂ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ಘಟನೆಯಲ್ಲಿ ಗಾಯಗೊಂಡ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಶ್ರೀನಿವಾಸ್ ಮೂರ್ತಿ ತಿಳಿಸಿದ್ದಾರೆ.

  • 26 ವಯಸ್ಸಿನ ಮಹಿಳೆ ಮೇಲೆ ಗ್ಯಾಂಗ್‍ರೇಪ್ – ಆರೋಪಿಗಳ ಬಂಧನ

    26 ವಯಸ್ಸಿನ ಮಹಿಳೆ ಮೇಲೆ ಗ್ಯಾಂಗ್‍ರೇಪ್ – ಆರೋಪಿಗಳ ಬಂಧನ

    ಧಾರವಾಡ: 26 ವರ್ಷದ ಮಹಿಳೆಯ ಮೇಲೆ ಇಬ್ಬರು ಸೇರಿ ಅತ್ಯಾಚಾವೆಸಗಿದ ಘಟನೆ ತಾಲೂಕಿನ ತಡಕೋಡ ಗ್ರಾಮದಲ್ಲಿ ನಡೆದಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಆರೋಪಿಗಳನ್ನು ಅದೇ ಗ್ರಾಮದ ಮಕ್ತುಂಸಾಬ್ ತಲ್ಲೂರ ಹಾಗೂ ಈರಪ್ಪ ಅರವಳ್ಳಿ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ತಮ್ಮ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದು, ಬಟ್ಟೆ ಹೊಲಿಯುವ ಕೆಲಸವನ್ನು ಮಾಡುತ್ತಾ ಜೀವನ ಮಾಡುತ್ತಿದ್ದರು. ಬುಧವಾರ ರಾತ್ರಿ ಮನೆಯಲ್ಲಿ ಬಟ್ಟೆ ಹೊಲಿಯುತ್ತಿದ್ದಾಗ ಆರೋಪಿಗಳು ಏಕಾಏಕಿ ಮನೆಗೆ ನುಗ್ಗಿ ಬಲವಂತವಾಗಿ ಮಹಿಳೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಇಬ್ಬರೂ ಪರಾರಿಯಾಗಿದ್ದರು.

    ಈ ಸಂಬಂಧ ನೊಂದ ಮಹಿಳೆ ತಡರಾತ್ರಿಯಲ್ಲಿಯೇ ಸ್ಥಳೀಯ ಗರಗ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಗರಗ ಪೊಲೀಸರು ಜಿಲ್ಲಾ ಪೊಲೀಸ್ ಅಧಿಕಾರಿ ಸಂತೋಷ್ ಬಾಬು, ಡಿವೈಎಸ್‍ಪಿ ಬಿ.ಪಿ. ಚಂದ್ರಶೇಖರ್ ಮತ್ತು ಸಿಪಿಐ ಪ್ರಶಾಂತ ನಾಯ್ಕ್ ಅವರ ನಿರ್ದೇಶನದ ಮೇರೆಗೆ ಇಬ್ಬರು ಆರೋಪಿಗಳನ್ನು ಇಂದು ಬೆಳಿಗ್ಗೆ ಬಂಧಿಸಿದ್ದಾರೆ.

  • ಬೆಳಗಾವಿ: ಮೂರು ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಕೊಲೆ!

    ಬೆಳಗಾವಿ: ಮೂರು ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಕೊಲೆ!

    ಬೆಳಗಾವಿ: ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರೋ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.

    ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿ ಪಟ್ಟಣದ ಹೊರ ವಲಯದಲ್ಲಿ ಈ ಘಟನೆ ನಡೆದಿದೆ. ಕಾಮುಕ ಆರೋಪಿಯನ್ನು ಉದಪ್ಪ ಗಾಣಿಗೇರ(25) ಎಂಬುವುದಾಗಿ ಗುರುತಿಸಲಾಗಿದೆ.

    ಈತ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಮನೆ ಪಕ್ಕದ ತಿಪ್ಪೆಯಲ್ಲಿ ಹೂತು ಹಾಕಿದ್ದನು. ಇತ್ತ ಬಾಲಕಿ ಕಾಣದಿದ್ದಾಗ ಅಕ್ಕ ಪಕ್ಕದವರನ್ನು ಬಾಲಕಿಯ ಮನೆಯವರು ವಿಚಾರಿಸಿದಾಗ ಈ ಘಟನೆ ನಡೆದಿರೋ ಬಗ್ಗೆ ಬೆಳಕಿಗೆ ಬಂದಿದೆ.

    ಸದ್ಯ ಪೊಲೀಸರು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಈ ಸಂಬಂಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾದ ಕೊಲೆ ಆರೋಪಿ

    ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾದ ಕೊಲೆ ಆರೋಪಿ

    ರಾಯಚೂರು: ವಿಚಾರಣೆಗೆ ಕರೆದುಕೊಂಡು ಹೋಗುತ್ತಿದ್ದಾಗ ಕೊಲೆ ಆರೋಪಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿರುವ ಘಟನೆ ರಾಯಚೂರಿನ ಮಾನ್ವಿ ತಾಲೂಕಿನ ಅಮಿನಗಡದಲ್ಲಿ ನಡೆದಿದೆ.

    ಆರೋಪಿ ಹುಚ್ಚಪ್ಪನ ಕಲ್ಲೇಟಿನಿಂದ ತಪ್ಪಿಸಿಕೊಂಡು ಆತನನ್ನು ಹೆದರಿಸಲು ಮಾನ್ವಿ ಸರ್ಕಲ್ ಇನ್ಸ್ ಪೆಕ್ಟರ್ ಚಂದ್ರಶೇಖರ್, ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದ್ರೂ ಆರೋಪಿ ಪರಾರಿಯಾಗಿದ್ದಾನೆ. ಹುಚ್ಚಪ್ಪ ಸಜ್ಜೆ ಹೊಲದಲ್ಲಿ ಓಡಿ ಹೋಗಿದ್ದರಿಂದ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ವಿಫಲರಾಗಿದ್ದಾರೆ.

    2017 ಆಗಸ್ಟ್ 12 ರಂದು ಗ್ರಾಮದ 70 ವರ್ಷದ ಹುಲಿಗೆಮ್ಮ ಎಂಬ ವೃದ್ಧೆಯನ್ನ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಸಂಶಯದ ಮೇಲೆ ವೃದ್ಧೆಯ ತಂಗಿಯ ಮಗ ಆರೋಪಿ ಹುಚ್ಚಪ್ಪನನ್ನ ಕವಿತಾಳ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು.

    ವಿಚಾರಣೆ ಭಾಗವಾಗಿ ಗ್ರಾಮಕ್ಕೆ ಕರೆತಂದಾಗ ಹುಚ್ಚಪ್ಪ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಗಾಯಗೊಳಿಸಿದ್ದಾನೆ. ಆರೋಪಿ ಪರಾರಿಯಾದ ಹಿನ್ನೆಲೆಯಲ್ಲಿ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ: ಮೂವರ ಬಂಧನ

    ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ: ಮೂವರ ಬಂಧನ

    ಮಂಗಳೂರು: ರಾಜ್ಯದಲ್ಲೇ ಭಾರೀ ಸಂಚಲನ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಧಿತರನ್ನು ಶಫೀ, ಷರೀಫ್, ಖಲಂದರ್ ಎಂಬುವುದಾಗಿ ಗುರುತಿಸಲಾಗಿದ್ದು, ಇವರ ಬಗ್ಗೆ ಪೂರ್ಣ ಮಾಹಿತಿ ತಿಳಿದುಬಂದಿಲ್ಲ.

    ಏನಿದು ಪ್ರಕರಣ?: ಕಳೆದ ಜುಲೈ 4 ರಂದು ರಾತ್ರಿ ಬಂಟ್ವಾಳ ತಾಲೂಕಿನ ಬಿಸಿರೋಡ್ ಬಳಿ ತನ್ನ ಲಾಂಡ್ರಿಯ ಬಾಗಿಲು ಹಾಕಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಏಕಾಏಕಿ ಶರತ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಜುಲೈ 7 ರಂದು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಆ ಬಳಿಕ ರಾಜ್ಯಾದ್ಯಂತ ಸಾಕಷ್ಟು ಹೋರಾಟಗಳು ನಡೆದಿತ್ತು.

    ಆ ಬಳಿಕ ಪೊಲೀಸರು ಸುಮಾರು 7 ತನಿಖಾ ತಂಡಗಳನ್ನು ರಚಿಸಿ ಬೇರೆ ಬೇರೆ ಕಡೆಗಳಲ್ಲಿ ಆರೋಪಿಗಳ ಪತ್ತೆಗೆ ಬಲೆಬೀಸಿದ್ದರು. ಅಲ್ಲದೇ ಪೊಲೀಸರಿಗೆ ಆರೋಪಿಗಳನ್ನು ಪತ್ತೆಹಚ್ಚುವುದು ಸವಾಲಾಗಿತ್ತು. ಘಟನೆ ಬಳಿಕ ಮಂಗಳೂರು, ಬಂಟ್ವಾಳ, ಬಿಸಿರೋಡಿನಲ್ಲಿ ಹಲವು ದಿನ 144 ಸೆಕ್ಷನ್ ಜಾರಿಯಾಗಿತ್ತು. ಸದ್ಯ ಇದೀಗ ಮೂವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    https://www.youtube.com/watch?v=o40hIeKFh8E

     

  • ಸುಸೂ ಬಂತೆಂದು ಜೀಪಿನಿಂದ ಇಳಿದ ಆರೋಪಿ ಪೊಲೀಸ್ರಿಂದ ಎಸ್ಕೇಪ್!

    ಸುಸೂ ಬಂತೆಂದು ಜೀಪಿನಿಂದ ಇಳಿದ ಆರೋಪಿ ಪೊಲೀಸ್ರಿಂದ ಎಸ್ಕೇಪ್!

    ಬೆಂಗಳೂರು: ಪೊಲೀಸರ ವಶದಲ್ಲಿದ್ದ ಆರೋಪಿ ಪರಾರಿಯಾಗಿರೋ ಘಟನೆಯೊಂದು ನಗರದಲ್ಲಿ ನಡೆದಿದೆ.

    ಕುಖ್ಯಾತ ರೌಡಿ ಶೀಟರ್ ಪ್ರಶಾಂತ್ ಕುಮಾರ್ ಎಸ್ಕೇಪ್ ಅದ ಅರೋಪಿಯಾಗಿದ್ದು, ಶನಿವಾರ ರಾತ್ರಿ ಕೆಆರ್ ಪುರ ಬಳಿಯ ಐಟಿಐ ಗೇಟ್ ಬಳಿ ಈತ ಪರಾರಿಯಾಗಿದ್ದಾನೆ.

    ಪ್ರಕರಣವೊಂದರ ಸಂಬಂಧ ಆರೋಪಿ ಪ್ರಶಾಂತ್‍ನನ್ನು ಎಚ್‍ಎಎಲ್ ಪೊಲೀಸರು ಬಂಧಿಸಿದ್ದರು. ಬಳಿಕ ಆರೋಪಿ ಕೃತ್ಯ ಎಸಗಿದ್ದ ಸ್ಥಳಗಳ ಮಹಜರು ಮಾಡಲು ಹೋಗಿದ್ರು. ಈ ವೇಳೆ ಮೂತ್ರ ವಿಸರ್ಜನೆ ಮಾಡಬೇಕು ಅಂತ ಆರೋಪಿ ಹೇಳಿದ್ದನು. ಹೀಗಾಗಿ ಪೊಲೀಸರು ರಸ್ತೆ ಬದಿ ಜೀಪ್ ನಿಲ್ಲಿಸಿ ಆತನನ್ನು ಕರೆದುಕೊಂಡು ಹೋಗುತ್ತಿದ್ದರು. ಇದೇ ವೇಳೆ ಕರ್ತವ್ಯದಲ್ಲಿದ್ದ ಇಬ್ಬರು ಪೇದೆಗಳಾದ ಕಾಂತರಾಜು ಹಾಗೂ ರವಿಚಂದ್ರನನ್ನು ತಳ್ಳಿ ಪರಾರಿಯಾಗಿದ್ದಾನೆ.

    ಈ ಸಂಬಂಧ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅತ್ಯಾಚಾರ ಕೇಸಲ್ಲಿ 7 ವರ್ಷ ಜೈಲುಶಿಕ್ಷೆ ಅನುಭವಿಸಿದ ನಿರಪರಾಧಿ!

    ಅತ್ಯಾಚಾರ ಕೇಸಲ್ಲಿ 7 ವರ್ಷ ಜೈಲುಶಿಕ್ಷೆ ಅನುಭವಿಸಿದ ನಿರಪರಾಧಿ!

    – ವೆಂಕಟೇಶ್ ಪಾಲಿಗೆ ಕೊನೆಗೂ ನ್ಯಾಯದೇವತೆ ಕಣ್ಣು ಬಿಟ್ಟಳು
    – ರೇಪ್ ತನಿಖೆಯ ಹಾದಿ ತಪ್ಪಿಸಿದ ಪೊಲೀಸರಿಗೆ ಯಾವ ಶಿಕ್ಷೆ?

    ಕಾರವಾರ: ತನ್ನ ದ್ವಿಚಕ್ರ ವಾಹನವನ್ನು ಕೃತ್ಯ ನಡೆದಿದ್ದ ಜಾಗದಲ್ಲಿಟ್ಟು ಹೋಗಿದ್ದಕ್ಕೆ ಅಪರಾಧಿಯಾಗಿ 7 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಯಿತು ಅಂದ್ರೆ ನೀವು ನಂಬಲು ಸಾಧ್ಯವೇ? ಇಂತಹ ಎಡವಟ್ಟನ್ನು ಪೊಲೀಸರು ಮಾಡಿಬಿಟ್ಟಿದ್ದಾರೆ. ಆದರೆ 7 ವರ್ಷದ ಬಳಿಕ ಜೈಲು ಹಕ್ಕಿ ಸ್ವಚ್ಛಂದವಾಗಿ ಹಾರುತ್ತಿದೆ. ಆದರೆ ಮಾಡದ ತಪ್ಪಿಗೆ ಈ ಕುಟುಂಬ ನಿತ್ಯ ಅವಮಾನಕ್ಕೀಡಾಯಿತು. ಪೊಲೀಸರ ದೌರ್ಜನ್ಯಕ್ಕೆ ಬೆಚ್ಚಿಬಿದ್ದ ಒಂದೇ ಒಂದು ಸಣ್ಣ ತಪ್ಪಿಗೆ ಈತನ ಜೀವನದ 7 ಅಮೂಲ್ಯ ವರ್ಷ ಹಾಳಾಯಿತು.

    ಹೌದು. ಆತ ಏಳು ವರ್ಷ ತನ್ನ ಪುಟ್ಟ ಮಕ್ಕಳನ್ನು ಎತ್ತಾಡಿಸದೇ ತನ್ನ ಕುಟುಂಬವನ್ನು ಬಿಟ್ಟು ಜೈಲಿನಲ್ಲೇ ನೋವನ್ನು ಅನುಭವಿಸಿದ್ದು, ಕೊನೆಗೂ ನ್ಯಾಯಾಲಯ ಆತ ನಿರಪರಾಧಿ ಎಂದು ಬಿಡುಗಡೆ ಮಾಡಿದೆ.

    ಏನಿದು ಪ್ರಕರಣ: ಅಂದು ಅಕ್ಟೋಬರ್ 23, 2010 ಉತ್ತರ ಕನ್ನಡ ಜಿಲ್ಲೆಯ ಮುರಡೇಶ್ವರದ ಹಿರೇಧೋಮಿಯ ನಿವಾಸಿ ಮಹ್ಮದ್ ಸಾಧಿಕ್ ಎಂಬವರ ಮನೆಯ ಹಿಂಭಾಗದಲ್ಲಿ ಅದೇ ಮನೆಯಲ್ಲಿ ಕೆಲಸ ಮಾಡುವ ಯಮುನಾ ಎಂಬ ಯುವತಿಯನ್ನು ಅತ್ಯಾಚಾರವೆಸಗಿ ಅಮಾನುಷವಾಗಿ ಹತ್ಯೆಗೈಯಲಾಗಿತ್ತು. ಈ ವಿಷಯ ಸುತ್ತಮುತ್ತ ಹಬ್ಬಿ ಒಂದು ವಾರ ಕೋಮು ಗಲಭೆಯಾಗಿ ನಿಷೇಧಾಜ್ಞೆ ಜಾರಿಯಾಗುವ ಮಟ್ಟಿಗೆ ಈ ಹತ್ಯೆ ಪ್ರಾಮುಖ್ಯತೆ ಪಡೆದು ರಾಜ್ಯದಲ್ಲಿ ದೊಡ್ಡ ಸುದ್ದಿ ಮಾಡಿತ್ತು. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿರುವಾಗಲೇ ಅದೇ ಊರಿನ ವಿವಾಹಿತ ವೆಂಕಟೇಶ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದೇವೆ. ಆತ ಕೃತ್ಯ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅಂದಿನ ಭಟ್ಕಳ ಡಿವೈಎಸ್‍ಪಿ ಎಂ.ನಾರಾಯಣ್ ಘೋಷಿಸಿದ್ರು.

    ಯಾರೂ ಸಿಗದಿದ್ದಾಗ ಈತ ಸಿಕ್ಕಾಕಿಕೊಂಡ!: ಬಳಿಕ ವೆಂಕಟೇಶ್‍ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಚಾರ್ಜ್‍ಶೀಟ್ ಸಲ್ಲಿಸಿದ್ರು. ವೆಂಕಟೇಶ್ ಮುರಡೇಶ್ವರದಲ್ಲಿ ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದು, ತನ್ನ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಅತ್ಯಾಚಾರ ನೆಡೆದು ಕೊಲೆಯಾದ ಸ್ಥಳದಲ್ಲಿ ಪ್ರತಿ ದಿನ ತನ್ನ ಬೈಕ್ ನಿಲ್ಲಿಸಿ ಮುರಡೇಶ್ವರದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುತಿದ್ದರು. ಅಂದು ವೆಂಕಟೇಶ್ ಗ್ರಹಚಾರ ಕೆಟ್ಟಿತ್ತೋ ಏನೋ, ಬೈಕ್ ನಿಲ್ಲಿಸಿದ ಹತ್ತಿರದಲ್ಲಿಯೇ ಯಮುನಾ ಎಂಬ ಯುವತಿ ಅತ್ಯಾಚಾರವಾಗಿ ಹೆಣವಾಗಿ ಬಿದ್ದಿದ್ದಳು. ಈಕೆಯ ತಂದೆ ನಾಗಪ್ಪ ಅವರು ಯುವತಿ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕ ಮಹ್ಮದ್ ಸಾದಿಕ್ ಸೇರಿದಂತೆ ಒಂಭತ್ತು ಜನರ ಮೇಲೆ ದೂರು ದಾಖಲಿಸಿದ್ರು.

    ಇದೇ ಸಂದರ್ಭದಲ್ಲಿ ಕೋಮು ಘರ್ಷಣೆ ಕೂಡ ದೊಡ್ಡದಾಗಿತ್ತು. ಜನರನ್ನ ಸಮಾಧಾನ ಮಾಡುವ ನಿಟ್ಟಿನಲ್ಲಿ ಪೊಲೀಸರು ಎಲ್ಲಿಲ್ಲದ ಸಾಹಸ ಮಾಡಿದ್ರು. ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕೂಡ ದೊಡ್ಡ ಘರ್ಷಣೆಯ ಕಿಚ್ಚು ಹಚ್ಚಿಬಿಟ್ಟಿದ್ರು. ಇನ್ನೇನೂ ಮುರಡೇಶ್ವರ ರಣರಂಗವಾಗುತ್ತೆ ಎನ್ನುವುದರೊಳಗೆ ವೆಂಕಟೇಶ್ ಬಂಧಿಯಾಗಿದ್ದು, ಎಲ್ಲವನ್ನ ತಣ್ಣಗಾಗಿಸಿತ್ತು. ವೆಂಕಟೇಶ್ ನನ್ನು ಬಂಧಿಸಿ ಖಾಸಗಿ ಲಾಡ್ಜ್ ನಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ಬಲವಂತವಾಗಿ ತಾನೇ ಅಪರಾಧಿ ಎಂದು ಸಹಿ ಹಾಕಿಸಿ ವೀಡಿಯೋ ರೆಕಾರ್ಡ್ ಕೂಡ ಮಾಡಿಸಲಾಯ್ತು. ಹೀಗೆ ಪೊಲೀಸರು ಬಲವಂತವಾಗಿ ಅಪರಾಧಿ ಮಾಡಿದ್ರು.

    ಅತ್ಯಾಚಾರವಾಗಿ ಹತ್ಯೆಯಾಗಿದ್ದ ಯುವತಿಯ ಕೈಯಲ್ಲಿ ಅಪರಾಧಿಯ ಕೂದಲುಗಳು ದೊರಕಿದ್ದವು. ಜೊತೆಗೆ ಸ್ಥಳದಲ್ಲಿ ವೀರ್ಯದ ಅಂಶವೂ ಪತ್ತೆಯಾಗಿತ್ತು. ಇದನ್ನು ಹೈದ್ರಬಾದ್ ನ (ಸಿ.ಡಿ.ಎಫ್.ಡಿ) ವಿಧಿ ವಿಜ್ಞಾನ ಇಲಾಖೆಗೆ ಕಳುಹಿಸಿದ್ದು, ಶವಪರೀಕ್ಷೆಯನ್ನು ಮಣಿಪಾಲದ ಕಿಮ್ಸ್ ನಲ್ಲಿ ಡಾ ಶಂಕರ್ ಬಕ್ಕಣ್ಣನವರ್ ನೆಡೆಸಿದ್ರು. ಇದಲ್ಲದೇ ಐದು ಬಾರಿ ವೆಂಕಟೇಶ್ ನ ಡಿಎನ್‍ಎ ಪರಿಕ್ಷೆ ಸಹ ಮಾಡಿಸಲಾಯ್ತು. ವಿಶೇಷ ಅಂದ್ರೆ ಅತ್ಯಾಚಾರವಾಗಿ ಹತ್ಯೆಯಾಗಿದ್ದ ಯುವತಿಯ ಕುಟುಂಬದವರೂ ಪೊಲೀಸರ ಒತ್ತಡಕ್ಕೆ ಮಣಿದು ವೆಂಕಟೇಶ್ ಹೆಸರನ್ನ ಎಫ್.ಐ.ಆರ್.ನಲ್ಲಿ ಸೇರಿಸುವಂತಾಯ್ತು. ಹೀಗೆ ತನಿಖೆ ನಡೆಸುತ್ತಿದ್ದ ಅಂದಿನ ಭಟ್ಕಳದ ಡಿವೈಎಸ್‍ಪಿ ಎಂ. ನಾರಾಯಣ್ ಒಬ್ಬ ನಿರಪರಾಧಿಯನ್ನ ಅಪರಾಧಿಯಾಗಿ ಕಟಕಟೆಯಲ್ಲಿ ನಿಲ್ಲಿಸಿದ್ರು.

    ಅತ್ಯಾಚಾರ ಮಾಡಿ ಕೊಲೆ ಮಾಡಿದ ಅಪರಾಧವಿದ್ದಿದ್ದರಿಂದ ಬಂಧನದ ಮೂರು ತಿಂಗಳೊಳಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಹೀಗಾಗಿ ವೆಂಕಟೇಶ್ ಗೆ ಬೇಲ್ ಕೂಡ ಸಿಗಲಿಲ್ಲ. ಇಡೀ ಊರೇ ವೆಂಕಟೇಶ್ ಕುಟುಂಬದ ವಿರುದ್ಧ ನಿಂತುಬಿಟ್ಟಿತ್ತು. ಚಿಕ್ಕ ಮಕ್ಕಳನ್ನು ಎದೆಯಲ್ಲಿ ಅವಚಿ ಜೀವನ ಮಾಡಲು ಪತ್ನಿ ಮಾದೇವಿಗೆ ಕಷ್ಟವಾಗಿತ್ತು. ಇಂತಹ ಪರಿಸ್ಥಿತಿಯಲ್ಲೂ ತನ್ನ ಗಂಡ ನಿರಪರಾಧಿ ಎಂಬುದನ್ನ ಅರಿತಿದ್ದ ಈಕೆ ನ್ಯಾಯಕ್ಕಾಗಿ ಮುರಡೇಶ್ವರದ ವಕೀಲ ರವಿಕಿರಣ್ ಅವರ ಮೊರೆ ಹೋದ್ರು.

    ಘಟನೆಯ ಸಂಪೂರ್ಣ ಮಾಹಿತಿ ತಿಳಿದಿದ್ದ ವಕೀಲ ರವಿಕಿರಣ್ ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಿದ್ರೆ, ತನಿಖೆಯ ಭಾರ ಹೊತ್ತಿದ್ದ ಭಟ್ಕಳದ ಡಿವೈಎಸ್‍ಪಿ ಎಂ. ನಾರಾಯಣ್ 2011ರಲ್ಲಿ ವಿಧಿವಿಜ್ಞಾನ ಇಲಾಖೆಯಿಂದ ಬಂದಿದ್ದ ವರದಿಯನ್ನ ಒಂದು ವರ್ಷಗಳ ಕಾಲ ನ್ಯಾಯಾಲಯಕ್ಕೆ ನೀಡಲಿಲ್ಲ. ಹೀಗಾಗಿ ನ್ಯಾಯಾಲಯದಲ್ಲೂ ವಾದ ಪ್ರತಿವಾದಗಳು ದೀರ್ಘಾವಧಿ ನಡೆದು 51 ಜನರ ಸಾಕ್ಷಿ ಹೇಳಿಕೆ ನಂತರ ಡಿಎನ್‍ಎ ವರದಿ ಆಧರಿಸಿ ಇದೇ ತಿಂಗಳ 28 ರಂದು ಕಾರವಾರ ನ್ಯಾಯಾಲಯ ಅತ್ಯಾಚಾರ ಮತ್ತು ಹತ್ಯೆಯಲ್ಲಿ ವೆಂಕಟೇಶ್ ಪಾತ್ರವಿಲ್ಲವೆಂದು, ನಿರಪರಾಧಿ ಎಂದು ತೀರ್ಪು ನೀಡಿ ಬಿಡುಗಡೆಗೊಳಿಸುವ ಮೂಲಕ ನ್ಯಾಯವನ್ನು ಎತ್ತಿಹಿಡಿದಿದೆ.

    ಇನ್ನು 2010 ರಿಂದ ಈವರೆಗೆ ಮಾಡದ ತಪ್ಪಿಗೆ ವೆಂಕಟೇಶ್ ಜೈಲು ಶಿಕ್ಷೆ ಅನುಭವಿಸಿದ್ದಾರೆ. ತನಿಖೆಯನ್ನು ಸಮರ್ಪಕವಾಗಿ ಮಾಡದ ಭಟ್ಕಳದ ಅಂದಿನ ಡಿವೈಎಸ್‍ಪಿ ಎಂ.ನಾರಾಯಣ್ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಲು ವೆಂಕಟೇಶ್ ಕುಟುಂಬ ತೀರ್ಮಾನಿಸಿದೆ.

    ಪೊಲೀಸರು ಮಾಡಿದ ಮೋಸದಿಂದ ಒಬ್ಬ ನಿರಪರಾಧಿಯ ಜೀವನದ ಅಮೂಲ್ಯ ಕ್ಷಣಗಳು ವ್ಯರ್ಥವಾಗಿ ಹೋಗಿದೆ. ಗಂಡನಿಲ್ಲದೆ, ತಂದೆಯಿಲ್ಲದೆ ಹೆಂಡತಿ ಮಕ್ಕಳು ಕಷ್ಟದ ಜೀವನ ಸಾಗಿಸಿದ್ದಾರೆ. ಇವರ ಹಿಂದಿನ ಜೀವನವನ್ನ ಮತ್ತೆ ಮರಳಿ ನೀಡಲಾಗದು. ಆದ್ರೆ ಕೊನೆ ಪಕ್ಷ ಅತ್ಯಾಚಾರವಾಗಿ ಹತ್ಯೆಯಾಗಿದ್ದ ಯಮುನಾಳ ಸಾವಿಗೆ ನ್ಯಾಯ ಸಿಗಬೇಕಿದೆ. ತನಿಖೆಯ ದಿಕ್ಕು ತಪ್ಪಿಸಿ ಅನ್ಯಾಯವೆಸಗಿದ ಅಂದಿನ ಭಟ್ಕಳ ಡಿವೈಎಸ್‍ಪಿಗೆ ಶಿಕ್ಷೆಯಾಗಬೇಕು ಅಂತಾ ಇದೀಗ ಬಿಡುಗಡೆಗೊಂಡ ವೆಂಕಟೇಶ್ ಒತ್ತಾಯಿಸಿದ್ದಾರೆ.

  • ಮೈಸೂರಿನಲ್ಲಿ ಮರ್ಯಾದಾ ಹತ್ಯೆ ಪ್ರಕರಣ: ತಂದೆ ಸೇರಿ ಐವರ ಬಂಧನ

    ಮೈಸೂರಿನಲ್ಲಿ ಮರ್ಯಾದಾ ಹತ್ಯೆ ಪ್ರಕರಣ: ತಂದೆ ಸೇರಿ ಐವರ ಬಂಧನ

    ಮೈಸೂರು: ಜಿಲ್ಲೆಯಲ್ಲಿ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣವೊಂದು ಭಾನುವಾರ ಬೆಳಕಿಗೆ ಬಂದಿದ್ದು, ಇದೀಗ ಹತ್ಯೆಯ ಆರೋಪಿಗಳನ್ನು ಹೆಚ್‍ಡಿ ಕೋಟೆ ಪೊಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಪ್ರೀತಿಸಿ ಮದುವೆಯಾದಳು ಎಂಬ ಕಾರಣಕ್ಕೆ ಹೆತ್ತ ಮಗಳನ್ನೇ ಬಲಿ ಪಡೆದಿದ್ದು ತಡವಾಗಿ ಬೆಳಕಿಗೆ ಬಂದಿತ್ತು. ಇದೀಗ ತಂದೆ ಸೇರಿದಂತೆ ಒಟ್ಟು ಐವರು ಆರೋಪಿಗಳ ಬಂಧಿಸಲಾಗಿದೆ. ಗುರುಸಿದ್ದೇಗೌಡ, ಮಹದೇವಮ್ಮ, ಮಹೇಶ್, ಕಿರಣ್, ರಾಮೇಗೌಡ ಬಂಧಿತ ಆರೋಪಿಗಳು.

    ಹತ್ಯೆ ಬಳಿಕ ಆರೋಪಿಗಳು ಊಟಿಗೆ ಹೋಗಿ ತಲೆ ಮರೆಸಿಕೊಂಡಿದ್ದರು. ಆರೋಪಿಗಳ ಜಾಡು ಹಿಡಿದು ಹೆಚ್‍ಡಿ ಕೋಟೆ ತಾಲೂಕು ಸರಗೂರು ಪಟ್ಟಣ ಠಾಣೆ ಪೊಲೀಸರು ಸಾಗಿದ್ದರು.

    ಇದನ್ನೂ ಓದಿ: ಮೈಸೂರಿನಲ್ಲಿ ಮರ್ಯಾದಾ ಹತ್ಯೆ: ತಂದೆಯಿಂದಲೇ ಮಗಳ ಹತ್ಯೆ?

    ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಪಾರ್ವತಿಪುರದಲ್ಲಿ ತಮಗಿಷ್ಟವಿಲ್ಲದ ಯುವಕನ ಪ್ರೀತಿಸಿದ್ದಕ್ಕೆ ಪೋಷಕರಿಂದಲೇ ಯುವತಿಯ ಹತ್ಯೆ ನಡೆದಿರುವ ಬಗ್ಗೆ ಬಲವಾದ ಸಂಶಯ ವ್ಯಕ್ತವಾಗಿತ್ತು. ಯುವಕ ಕೃಷ್ಣಾ ಶೋಭಾ ಎಂಬಾಕೆಯನ್ನು ಪ್ರೀತಿಸುತ್ತಿದ್ದ. 19 ವರ್ಷದ ಶೋಭಾ ಹತ್ಯೆಯಾಗಿದ್ದಾಳೆಂದು ಕೃಷ್ಣ ಹೆಚ್‍ಡಿ ಕೋಟೆ ತಾಲೂಕು ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

  • ತನಿಖೆ ವೇಳೆ ತಪ್ಪಿಸಿಕೊಳ್ಳಲು ಪ್ಲಾನ್ – ಆತ್ಮರಕ್ಷಣೆಗಾಗಿ ಪೊಲೀಸರಿಂದ ಆರೋಪಿ ಕಾಲಿಗೆ ಫೈರಿಂಗ್

    ತನಿಖೆ ವೇಳೆ ತಪ್ಪಿಸಿಕೊಳ್ಳಲು ಪ್ಲಾನ್ – ಆತ್ಮರಕ್ಷಣೆಗಾಗಿ ಪೊಲೀಸರಿಂದ ಆರೋಪಿ ಕಾಲಿಗೆ ಫೈರಿಂಗ್

    ಬೆಂಗಳೂರು: ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಬೆಂಗಳೂರಿನ ಹೆಚ್‍ಎಎಲ್‍ನಲ್ಲಿ ನಡೆದಿದೆ.

     

    ಗಾಯಾಳು ಆರೋಪಿಯನ್ನು ಜಾನ್ಸನ್ ಎನ್ನಲಾಗಿದ್ದು, ಈತ ಜೂನ್ 10 ರಂದು ನಡೆದ ಸಾಯಿ ಚರಣ್ ಕೊಲೆ ಪ್ರಕರಣದ ಮುಖ್ಯ ಆರೋಪಿಯಾಗಿದ್ದಾನೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಲು ಹೋದ ಸಂದರ್ಭದಲ್ಲಿ ಆರೋಪಿ ಮೂತ್ರ ವಿಸರ್ಜನೆಗೆ ತೆರಳುತ್ತೇನೆಂದು ಪೆÇಲೀಸರ ಬಳಿ ಕೇಳಿ ಪರಾರಿಯಾಗಲು ಯತ್ನಿಸಿದ್ದಾನೆ.

    ಈ ವೇಳೆ ಪೊಲೀಸರು ಆತನನ್ನು ಹಿಡಿಯಲು ಮುಂದಾದಾಗ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಪರಿಣಾಮ ಕಾಂತ ಮತ್ತು ಮಂಜೇಶ್ ಎಂಬ ಪೇದೆಗಳಿಬ್ಬರಿಗೆ ಗಾಯಗಳಾಗಿವೆ. ತಕ್ಷಣವೇ ಎಚ್‍ಎಎಲ್ ಪೊಲೀಸರು ಜಾನ್ಸನ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಗಾಯಾಳು ಆರೋಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    https://www.youtube.com/watch?v=Us502DgmdJs

  • ಜೈಲಿನ ಕಿಟಿಕಿ ಮುರಿದು ವಿಚಾರಣಾಧೀನ ಕೈದಿಗಳು ಪರಾರಿ!

    ಜೈಲಿನ ಕಿಟಿಕಿ ಮುರಿದು ವಿಚಾರಣಾಧೀನ ಕೈದಿಗಳು ಪರಾರಿ!

    ಬೆಳಗಾವಿ: ಜೈಲಿನ ಕಿಟಕಿ ಮುರಿದು ಇಬ್ಬರು ವಿಚಾರಣೆ ಕೈದಿಗಳು ಪರಾರಿಯಾಗಿರೋ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿರುವ ಸಬ್ ಜೈಲಿನಲ್ಲಿ ನಡೆದಿದೆ.

    ಬೈಕ್ ಕಳ್ಳತನ ಆರೋಪದಡಿ ಸಬ್ ಜೈಲನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಸುರೇಶ ಶರಣಪ್ಪ ಚಲವಾದಿ(36) ಹಾಗೂ ಮನೆ ಕಳ್ಳತನ ಪ್ರಕರಣದಲ್ಲಿವಿಚಾರಣೆಗಾಗಿ ಕಳೆದ ಮೂರು ತಿಂಗಳಿಂದ ರಾಮದುರ್ಗ ಸಬ್ ಜೈಲ್‍ನಲ್ಲಿದ್ದ ವಿಜಾಪುರ ಜಿಲ್ಲೆ ಹೊನ್ನಳ್ಳಿ ಮೂಲದ ಕೈದಿ ಸಂತೋಷ ಶಿವಣ್ಣ ನಂದಿಹಾಳ್ (36) ಪರಾರಿಯಾದ ಕೈದಿಗಳು.

    ಸಬ್ ಜೈಲದಿಂದ ಪರಾರಿಯಾದ ಕೈದಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.