Tag: ACMM court

  • ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಕಿಡ್ನ್ಯಾಪ್‌ – ರೇವಣ್ಣ, ಭವಾನಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಕಿಡ್ನ್ಯಾಪ್‌ – ರೇವಣ್ಣ, ಭವಾನಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    ಬೆಂಗಳೂರು: ಕೆ.ಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರೊಂದಿಗೆ ಪತ್ನಿ ಭವಾನಿ ರೇವಣ್ಣ (Bhavani Revanna) ಅವರನ್ನೂ ಆರೋಪಿ ಎಂದು ಆರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ.

    ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಸೇರಿ 7 ಆರೋಪಿಗಳ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ (ACMM Court) ಎಸ್‌ಐಟಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಅಲ್ಲದೇ ಭವಾನಿ ರೇವಣ್ಣರನ್ನ 8ನೇ ಆರೋಪಿಯಾಗಿ ಹೆಸರಿಸಲಾಗಿದೆ. ಇದನ್ನೂ ಓದಿ: Paris Olympics | ಭಾರತಕ್ಕೆ ಮೂರನೇ ಪದಕ- ಕಂಚು ಗೆದ್ದ ಸ್ವಪ್ನಿಲ್

    ರೇವಣ್ಣ ವಿರುದ್ಧ ಎಫ್‌ಐಆರ್‌ ರದ್ದು ಕೋರಿರುವ ಹಾಗೂ ರೇವಣ್ಣ ಜಾಮೀನು ರದ್ದಿಗೆ ಕೋರಿದ್ದ ಎರಡೂ ಅರ್ಜಿಗಳನ್ನು ಏಕಕಾಲಕಕ್ಕೆ ಹೈಕೋರ್ಟ್‌ನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಎಸ್‌ಐಟಿ ಪರ ಪ್ರೊ.ರವಿವರ್ಮಕುಮಾರ್ ವಾದ ಮಂಡಿಸಿದರು. ಸದ್ಯ ಜಾಮೀನು ರದ್ದು ಕೋರಿರುವ ಸಂಬಂಧ ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಎಫ್‌ಐಆರ್‌ ರದ್ದು ಕೋರಿರುವ ಅರ್ಜಿ ವಿಚಾರಣೆಯನ್ನು ಆಗಸ್ಟ್‌ 8ಕ್ಕೆ ಕೋರ್ಟ್‌ ಮುಂದೂಡಿದೆ. ಇದನ್ನೂ ಓದಿ: ಎರಡು ಭಾಗಗಳಲ್ಲಿ ಬರಲಿದೆ ‘ಹಾಯ್ ನಾನ್ನಾ’ ಡೈರೆಕ್ಟರ್‌ ಜೊತೆಗಿನ ಜ್ಯೂ.ಎನ್‌ಟಿಆರ್‌ ಹೊಸ ಸಿನಿಮಾ

    ದೋಷಾರೋಪ ಪಟ್ಟಿಯಲ್ಲಿರುವ ಅಂಶಗಳೇನು?
    ಎಸ್‌ಐಟಿ ಅಧಿಕಾರಿಗಳ ತಂಡ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದೆ. ಪ್ರಕರಣದ ಆರೋಪಿಗಳಾದ ರೇವಣ್ಣ ಮತ್ತು ಭವಾನಿ ಅಣತಿಯ ಮೇರೆಗೆ ಸಂತ್ರಸ್ತೆಯ ಅಪಹರಣ ನಡೆದಿದೆ. ರೇವಣ್ಣ ಏಪ್ರಿಲ್ 23ರಂದು ಸಂತ್ರಸ್ತೆಯನ್ನು ಹೊಳೆನರಸೀಪುರಕ್ಕೆ ಕರೆದು ಬೆದರಿಕೆ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಪೊಲೀಸರ ಕೈಗೆ ಸಿಗಬಾರದು ಅಂತ ಬೆದರಿಕೆ ಹಾಕಿದ್ದಾರೆ. ಅದಾದ ಬಳಿಕ ಏ.26ರಂದೇ ಸತೀಶ್ ಬಾಬು ಅವರ ಮೂಲಕ ಸಂತ್ರಸ್ತೆಯನ್ನ ಅಪಹರಣ ಮಾಡಿಸಿದ್ದಾರೆ ಎಸ್‌ಐಟಿ ಚಾರ್ಚ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ʻ9 ಮಕ್ಕಳು ನೀರಲ್ಲಿ ಕೊಚ್ಚಿ ಹೋದ್ರು, ಮನೆ ನೆಲಸಮ ಆಗೋಯ್ತು, ದೊಡ್ಡ ಮನಸ್ಸು ಮಾಡಿ ಸಹಾಯ ಮಾಡಿ ಸಾಹೇಬ್ರೆʼ

    ಮಹಿಳೆಯನ್ನ ಅಪಹರಿಸಿ 7ನೇ ಆರೋಪಿ ಮನೆಯಲ್ಲಿ ಇರಿಸಲಾಗಿತ್ತು. ಆಕೆಗೂ ಆರೋಪಿಗೂ ಯಾವುದೇ ಸಂಬಂಧ ಇರಲಿಲ್ಲ. ಪೊಲೀಸರು ಆ ಸ್ಥಳದಲ್ಲಿ ಮಹಜರ್‌ ನಡೆಸಿದಾಗ, ಆಕೆಯ ಕೂದಲು ದೊರೆತಿದೆ. 7ನೇ ಆರೋಪಿ ಈ ಹಿಂದೆ ರೇವಣ್ಣ ಅವರ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಭವಾನಿ ಅವರು ಕೀರ್ತಿ ಮತ್ತು ಮನು ಜೊತೆಯಲ್ಲಿ ಮಾತನಾಡಿದ್ದರು. ಆರೋಪಿಗಳ ಜೊತೆ ಭವಾನಿ ಮಾತನಾಡಿರೋದಕ್ಕೆ 22 ಆಡಿಯೋ ಕ್ಲಿಪ್ಪಿಂಗ್‌ಗಳು ಸಿಕ್ಕಿದೆ. ಫೋನ್‌ನಲ್ಲಿಯೇ ಭವಾನಿ ಅವರು ನಿರಂತರವಾಗಿ ಬೆದರಿಕೆ ಹಾಕಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ.

  • ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

    ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

    ಬೆಂಗಳೂರು: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ (Puneeth Kerehalli) 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

    ಶನಿವಾರ ಕಾಟನ್ ಪೇಟೆ ಪೊಲೀಸರ (Cottonpet Police) ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದ ಪುನೀತ್‌ ಕೆರೆಹಳ್ಳಿಯನ್ನ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆ ವಿಕ್ಟೋರಿಯಾ ಆಸ್ಪತ್ರೆಯಿಂದ ಕರೆತಂದಿದ್ದ ಪೊಲೀಸರು ಕೋರಮಂಗಲದ ಜ್ಯೂಡಿಷಿಯಲ್ ಬ್ಲಾಕ್ ನಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಈ ವೇಳೆ 5ನೇ ಎಸಿಎಂಎಂ ಕೋರ್ಟ್ (ACMM Court) ನ್ಯಾಯಾಧೀಶ ಶಿವಕುಮಾರ್‌ ಅವರು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಸೋಮವಾರ (ಜು.29) ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

    ಪುನೀತ್‌ ಕೆರೆಹಳ್ಳಿ ಅರೆಸ್ಟ್‌ ಆಗಿದ್ದೇಕೆ?
    ನಾಯಿ ಮಾಂಸದ ಜೊತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ (Bengaluru) ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂ ಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಮಧ್ಯರಾತ್ರಿ 12:00 ಗಂಟೆ ವೇಳೆಗೆ ಅವರನ್ನು ಕಾಟನ್ ಪೇಟೆ ಪೊಲೀಸರು (Cottonpet Police) ಬಂಧಿಸಿದ್ದರು.

    ಬಂಧನವಾಗುತ್ತಿದ್ದಂತೆ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡಿದ್ದರು. ಇನ್ನೂ ಬೆಳಗಿನ ಜಾವ 4:45ರ ವೇಳೆಗೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರು ಆರೋಗ್ಯ ತಪಾಸಣೆ ವೇಳೆ ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿತ್ತು. ಹಾಗಾಗಿ ಸಂಜೆ ವೇಳೆ ಕರೆದೊಯ್ದು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು.

    ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ.

  • ಪರಪ್ಪನ ಅಗ್ರಹಾರದಲ್ಲಿ ಮೊದಲ ದಿನ ಕಳೆದ ದರ್ಶನ್‌ – ʻದಾಸʼನ ಜೈಲು ದಿನಚರಿ ಹೇಗಿದೆ?

    ಪರಪ್ಪನ ಅಗ್ರಹಾರದಲ್ಲಿ ಮೊದಲ ದಿನ ಕಳೆದ ದರ್ಶನ್‌ – ʻದಾಸʼನ ಜೈಲು ದಿನಚರಿ ಹೇಗಿದೆ?

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy Case) ಬಂಧನವಾಗಿರುವ ನಟ ದರ್ಶನ್‌ಗೆ ಜುಲೈ 4ರ ವರೆಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ. ದರ್ಶನ್‌ (Darshan) ಸೇರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ ನಾಲ್ವರು ಆರೋಪಿಗಳನ್ನೂ ಪೊಲೀಸರು ಬಿಗಿಭದ್ರತೆಯಲ್ಲಿ ಸೆಂಟ್ರಲ್ ಜೈಲಿಗೆ ರವಾನಿಸಿದ್ದಾರೆ.

    ಇನ್ನೂ ಜೈಲಿನಲ್ಲಿ 6109 ಕೈದಿ ಸಂಖ್ಯೆ ಪಡೆದಿರುವ‌ ದರ್ಶನ್‌ ಪರಪ್ಪನ ಅಗ್ರಹಾರದಲ್ಲಿ (Parappana Agrahara Jail) ಮೊದಲ ದಿನ ಕಳೆದಿದ್ದಾರೆ. ಇದನ್ನೂ ಓದಿ: ಜು. 4 ರವರೆಗೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜೈಲು

    ʻಜಗ್ಗುದಾದಾʼ ಜೈಲು ದಿನಚರಿ ಹೇಗಿತ್ತು?
    13 ವರ್ಷಗಳ ನಂತರ ಮತ್ತೆ ಜೈಲು ಪಾಲಾಗಿರುವ ನಟ ದರ್ಶನ್‌ ಸೆಂಟ್ರಲ್‌ ಜೈಲ್‌ನಲ್ಲಿ ಮುದ್ದೆ ಮುರಿದಿದ್ದಾರೆ. ರಾತ್ರಿ ದರ್ಶನ್‌ಗೆ ಮುದ್ದೆ, ಚಪಾತಿ, ಸಾಂಬಾರ್ ಮತ್ತು ಮಜ್ಜಿಗೆ ನೀಡಲಾಗಿತ್ತು. ಆದ್ರೆ ಸರಿಯಾಗಿ ಊಟ ಮಾಡದ ದರ್ಶನ್‌ ತಡವಾಗಿಯೇ ನಿದ್ರೆಗೆ ಜಾರಿದ್ದಾರೆ. ಕಸ್ಟಡಿಯಲ್ಲಿ ಪೊಲೀಸ್‌ ವಿಚಾರಣೆಯಿಂದ ಹೈರಾಣಾಗಿದ್ದ ನಟ, ಮೊದಲ ದಿನ ಜೈಲೂಟ ಸರಿಯಾಗಿ ಮಾಡಲಾಗದೇ ತಡರಾತ್ರಿ ವರೆಗೂ ಮಂಕಾಗಿಯೇ ಕುಳಿತಿದ್ದರು. ರಾತ್ರಿ 11:30ರ ನಂತರ ನಿದ್ರೆಗೆ ಜಾರಿದ್ದಾರೆ ಎಂಬುದಾಗಿ ಎಂದು ಜೈಲರ್‌ವೊಬ್ಬರು ತಿಳಿಸಿದ್ದಾರೆ.

    ಬೆಳಗ್ಗೆ 6:30ರ ವೇಳೆಗೆ ಎಚ್ಚರಗೊಂಡ ದರ್ಶನ್‌, ನಿತ್ಯಕರ್ಮ ಮುಗಿಸಿ, ಸೆಲ್‌ನಲ್ಲಿ ಕುಳಿತಿದ್ದಾರೆ, ದರ್ಶನ್ ಇರುವ ಅದೇ ಸೆಲ್‌ನಲ್ಲಿ ಸಹಖೈದಿ ವಿನಯ್ ಸೆರೆವಾಸ ಅನುಭವಿಸುತ್ತಿದ್ದಾರೆ. ಇಂದು (ಭಾನುವಾರ) ಜೈಲಿನ ಮೆನುವಿನ ಪ್ರಕಾರ ದರ್ಶನ್‌ಗೆ ಪಲಾವ್‌ ನೀಡಲಿದ್ದಾರೆ ಎಂದು ಜೈಲರ್‌ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 13 ವರ್ಷಗಳ ನಂತರ ‘ದಾಸ’ ಮತ್ತೆ ಜೈಲುಪಾಲು!

    ಜೈಲಿಗೆ ತೆರಳುವ ಮುನ್ನ ಆಗಿದ್ದೇನು?
    ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳಿಸಿದ ಅಂತ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಶೆಡ್‌ನಲ್ಲಿ ಕೂಡಿ ಹಾಕಿ, ಚಿತ್ರಹಿಂಸೆ ಕೊಟ್ಟು ಕೊಂದ ಕೇಸಲ್ಲಿ ದರ್ಶನ್‌ಗೆ 13 ದಿನ ನ್ಯಾಯಾಂಗ ಬಂಧನ ವಿಧಿಸಲಾಯಿತು. 24ನೇ ಎಸಿಎಂಎಂ ಕೋರ್ಟ್ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿತು. ಹೀಗಾಗಿ, ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇಡಲಾಯಿತು. ಪತ್ನಿ ವಿಜಯಲಕ್ಷ್ಮಿ ಮೇಲೆ 2011ರಲ್ಲಿ ಹಲ್ಲೆ ಮಾಡಿದ್ದಾಗ 13 ವರ್ಷಗಳ ಹಿಂದೆ ಜೈಲು ಸೇರಿದ್ದರು. ಈಗ ಕೊಲೆ ಕೇಸಲ್ಲಿ ದರ್ಶನ್, ಪವಿತ್ರಾಗೌಡ ಸೇರಿದಂತೆ ಪ್ರಕರಣದ 17 ಜನ ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

    ಶನಿವಾರ ಮಧ್ಯಾಹ್ನ ಮಲ್ಲತಹಳ್ಳಿಯ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಕರೆತಂದು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲೇ ದರ್ಶನ್, ಪ್ರದೋಶ್‌, ವಿನಯ್, ಧನರಾಜ್‌ಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು. ಬಳಿಕ 4 ಗಂಟೆ ಸುಮಾರಿಗೆ ಕೋರ್ಟ್‌ಗೆ ಹಾಜರು ಪಡಿಸಲಾಯಿತು. ಈ ವೇಳೆ, ಎಲ್ಲಾ ಆರೋಪಿಗಳು ಒಟ್ಟಿಗೆ ಇದ್ದರೆ ಗಲಾಟೆ ಮಾಡಿಕೊಳ್ಳುವ, ಒಳಸಂಚು ಮಾಡುವ, ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ ಅಂತ ಕೋರ್ಟ್‌ಗೆ ಪೊಲೀಸರು ಮನವಿ ಮಾಡಿದರು. ಇದಕ್ಕೆ ದರ್ಶನ್ & ಗ್ಯಾಂಗ್ ಪರ ವಕೀಲರು ಆಕ್ಷೇಪಿಸಿದರು. ಆದರೆ, ಸೋಮವಾರ ಈ ಬಗ್ಗೆ ತೀರ್ಮಾನ ಮಾಡೋದಾಗಿ ಜಡ್ಜ್ ಹೇಳಿದರು. ಬಳಿಕ, ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಿಗಿಭದ್ರತೆಯಲ್ಲಿ ಸೆಂಟ್ರಲ್ ಜೈಲಿಗೆ ರವಾನಿಸಿದರು. ದರ್ಶನ್‌ಗೆ ಖೈದಿ ನಂಬರ್ 6109 ಕೊಡಲಾಗಿದೆ.

  • ರೇಣುಕಸ್ವಾಮಿ ಕೊಲೆಗೆ ಸಂಚು ರೂಪಿಸಿದ್ದೇ ಪವಿತ್ರಾಗೌಡ – ಹೊಸ ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?

    ರೇಣುಕಸ್ವಾಮಿ ಕೊಲೆಗೆ ಸಂಚು ರೂಪಿಸಿದ್ದೇ ಪವಿತ್ರಾಗೌಡ – ಹೊಸ ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?

    – ಪ್ರಕರಣದ ಕಿಂಗ್‌ಪಿನ್‌ ಪವಿತ್ರಾಗೌಡ ಅನ್ನೋದು ಬಟಾಬಯಲಾಗಿದ್ದೇಗೆ?

    ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಸ್ವಾಮಿ ಹತ್ಯೆ ಪ್ರಕರಣದ ಕಿಂಗ್ ಪಿನ್ ಪವಿತ್ರಾಗೌಡ ಅನ್ನೋದು ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ.

    ಎ1 ಆರೋಪಿಯಾಗಿರುವ ಪವಿತ್ರಾಗೌಡಗೆ ಸದ್ಯ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರದ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಪವಿತ್ರಾಗೌಡಗೆ ಸೇರಿ ಉಳಿದ ಆರೋಪಿಗಳು ಜುಲೈ 10ರ ವರೆಗೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯಲಿದ್ದಾರೆ. ಈ ಬೆನ್ನಲ್ಲೇ ಪವಿತ್ರಾಗೌಡ ಅವರೇ ಕೃತ್ಯಕ್ಕೆ ಪ್ರಮುಖ ಕಾರಣ ಎಂಬುದನ್ನು ಪೊಲೀಸರು ಹೊಸ ರಿಮ್ಯಾಂಡ್‌ ಕಾಪಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಗಣಿ ನಾಡಿನಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಯೋಗ – ನಟಿ ಶ್ರೀಲೀಲಾ ಸಾಥ್‌

    ಪೊಲೀಸರ ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?
    ಪ್ರಕರಣದ ಎ1, ಎ3 ರಿಂದ ಎ7, ಎ11, ಎ12, ಎ13, ಹಾಗೂ ಎ16 ಆರೋಪಿಗಳು ಕೊಲೆಯಂತ ಒಂದು ಗಂಭೀರ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿ ಕೃತ್ಯ ಎಸಗಿದ್ದು, ಇವರಿಗೆ ಕಾನೂನಿನ ಮೇಲೆ ಕಿಂಚಿತ್‌ ಗೌರವ ಇಲ್ಲದೇ ಇರೋದು ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ. ಇದನ್ನೂ ಓದಿ: ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

    ಎ1 ಆರೋಪಿಯೇ ಕೃತ್ಯಕ್ಕೆ ಪ್ರಮುಖ ಕಾರಣ ಕರ್ತೆಯಾಗಿದ್ದು ಈಕೆಯು ಪ್ರಚೋದನೆ ನೀಡಿ ಇತರೆ ಆರೋಪಿಗಳೊಂದಿಗೆ ಸೇರಿ ಕೊಲೆಗೆ ಒಳಸಂಚು ರೂಪಿಸಿರುವುದು ಮತ್ತು ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ದೃಢಪಟ್ಟಿರುತ್ತದೆ. ಎ2 ಆರೋಪಿಯು ತನ್ನ ಹಣ ಹಾಗೂ ಇತರೆ ಆರೋಪಿಗಳನ್ನು ಒಳಗೊಂಡ ತನ್ನ ಅಭಿಮಾನಿ ಬಳಗವನ್ನು ಬಳಸಿಕೊಂಡು ಕೃತ್ಯದಲ್ಲಿ ಭಾಗಿಯಾಗಿ ಹಾಗೂ ಭಾಗಿಯಾಗಿಸಿ ನೆಲದ ಕಾನೂನನ್ನು ದುರುಪಯೊಗ ಪಡಿಸಿಕೊಂಡಿರುವುದು ಸಾಕ್ಷ್ಯಾಧಾರಗಳಿಂದ ಕಂಡು ಬಂದಿರುತ್ತದೆ.

    ಎ2 ಆರೋಪಿಯು ತನ್ನ ಹಣಬಲ ಮತ್ತು ಪ್ರಭಾವಿ ಅಭಿಮಾನಿ ಬಳಗವನ್ನು ಬಳಿಸಿಕೊಂಡು ಅಮಾಯಕ ಮೃತ ರೇಣುಕಾಸ್ವಾಮಿಯನ್ನು ಚಿತ್ರದುರ್ಗದ ಎ4 ಮತ್ತು ಎ6 ರಿಂದ ಎ8 ರ ವರೆಗಿನ ಆರೋಪಿಗಳಿಂದ ಆತನನ್ನು ಅಪಹರಣ ಮಾಡಿಸಿದ್ದಾರೆ. ಮೃತನ ಬಳಿಯಿಂದ ಚಿನ್ನಾಭರಣಗಳನ್ನು ಬಿಚ್ಚಿಸಿಕೊಂಡು ಪಟ್ಟಣಗೆರೆಯ ಎ10 ಆರೋಪಿ ವಿನಯ್ ಸಂಬಂಧಿಯಾದ ಜಯಣ್ಣ ಅವರಿಗೆ ಸೇರಿದ್ದ ಶೆಡ್‌ಗೆ ಕರೆತಂದು ಅಲ್ಲಿ ಎ1 ಆರೋಪಿಯು ಸೇರಿದಂತೆ ಇತರೆ ಆರೋಪಿಗಳೊಂದಿಗೆ ಸಮಾನ ಉದ್ದೇಶದಿಂದ ಎಲ್ಲರೂ ಸೇರಿ ಮೃತನ ಮೇಲೆ ಅಮಾನುಷವಾಗಿ ಮತ್ತು ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಇದೆಲ್ಲವೂ ಇದೆಲ್ಲವೂ ಈವರೆಗಿನ ತನಿಖೆಯಲ್ಲಿ ಸಂಗ್ರಹಿಸಿರುವ ಭೌತಿಕ, ತಾಂತ್ರಿಕ ಹಾಗೂ ವೈಜ್ಞಾನಿಕವಾಗಿ ಸಂಗ್ರಹಿಸಿರುವ ಸಾಕ್ಷ್ಯಾಧಾರಗಳಿಂದ ದೃಢಪಟ್ಟಿರುತ್ತದೆ.

    ಆರೋಪಿಗಳು ಕೃತ್ಯದ ನಂತರ ಮತ್ತೆ ಒಳಸಂಚು ರೂಪಿಸಿ ಸಾಕ್ಷ್ಯ ನಾಶ ಪಡಿಸುವ ಉದ್ದೇಶದಿಂದ ಶವವನ್ನು ಸಾಗಿಸಲು ತಮ್ಮ ಹಣದ ಪ್ರಭಾವ ಬಳಸಿ ಕ್ರಿಮಿನಲ್ ಹಿನ್ನೆಲೆಯುಳ್ಳವರಿಗೆ ಹಣದ ಆಮಿಷ ತೋರಿಸಿ ಅವರ ಮೂಲಕ ಶವವನ್ನು ಕೃತ್ಯ ನಡೆದ ಸ್ಥಳದಿಂದ ಬೇರೆ ಕಡೆ ಸಾಗಿಸಿ ಸಾಕ್ಷಿ ನಾಶ ಪಡಿಸಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಇದನ್ನೂ ಓದಿ: ಅಫ್ಘಾನ್‌ ವಿರುದ್ಧ ಭಾರತಕ್ಕೆ 47 ರನ್‌ಗಳ ಸೂಪರ್‌ ಜಯ – ಹಿಟ್‌ಮ್ಯಾನ್‌ ವಿಶೇಷ ಸಾಧನೆ!

    ಪ್ರಕರಣದ ಎ2, ಎ4, ಎ15, ಎ16 ಆರೋಪಿಗಳು ಕ್ರಿಮಿನಲ್ ಹಿನ್ನೆಲೆಯುಳ್ಳವರಾಗಿರುತ್ತಾರೆ. ಮುಂದುವರಿದು ಆರೋಪಿಗಳು ಮೃತನನ್ನು ಕೊಲೆ ಮಾಡಿ, ನಂತರ ತನ್ನ ಹಣದ ಪ್ರಭಾವದಿಂದ ಬೇರೆ ವ್ಯಕ್ತಿಗಳನ್ನು ಕೊಲೆಯಲ್ಲಿ ಭಾಗಿಯಾರುವುದಾಗಿ ಬಿಂಬಿಸಿ ಪ್ರಕರಣದಿಂದ ತಾವುಗಳು ನುಣುಚಿಕೊಳ್ಳಲು ಪ್ರಯತ್ನಿಸಿರುವುದು ತನಿಖೆಯಲ್ಲಿ ಕಂಡು ಬಂದಿರುತ್ತದೆ ಎಂದು ಎಂದು ಪೊಲೀಸರು ರಿಮ್ಯಾಂಡ್‌ ಕಾಪಿಯಲ್ಲಿ ಉಲ್ಲೇಖಿಸಿದ್ದಾರೆ.

    ಪ್ರಕರಣದ ತನಿಖಾ ಕಾಲದಲ್ಲಿ ಅಮಾನತು ಪಡಿಸಿಕೊಂಡು ಪರಿಶೀಲಿಸಲಾದ ತಾಂತ್ರಿಕ ಸಾಕ್ಷ್ಯಾಧಾರಗಳಲ್ಲಿ ಆರೋಪಿಗಳು ನೇರವಾಗಿ ಭಾಗಿಯಾಗಿರುವುದು ಕಂಡು ಬಂದಿದ್ದು ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಪರಿಶೀಲನೆಗೆ ಕಳುಹಿಸಿದ್ದು ವರದಿ ಸಂಗ್ರಹಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.

  • ಲೈಂಗಿಕ ಕಿರುಕುಳ ಕೇಸ್‌ – ಜೂನ್‌ 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು!

    ಲೈಂಗಿಕ ಕಿರುಕುಳ ಕೇಸ್‌ – ಜೂನ್‌ 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು!

    ಬೆಂಗಳೂರು: ಲೈಂಗಿಕ ಕಿರುಕುಳ‌ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರಿಗೆ ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

    ಪ್ರಜ್ವಲ್ ರೇವಣ್ಣ ಅವರ 10 ದಿನಗಳ ಪೊಲೀಸ್‌ ಕಸ್ಟಡಿ (Police Custody) ಅಂತ್ಯಗೊಂಡ ಹಿನ್ನೆಲೆಯಲ್ಲಿ ಸೋಮವಾರ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ 42ನೇ ಎಸಿಎಂಎಂ ನ್ಯಾಯಾಲಯವು (ACMM Court) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ನನಗೆ ಯಾರೂ ಹಿತಶತ್ರುಗಳಿಲ್ಲ, ನನಗೆ ನಾನೇ ಶತ್ರು, ಸೋಲಿಗೆ ನಾನೇ ಹೊಣೆ: ಡಿಕೆ ಸುರೇಶ್

    ಪ್ರಜ್ವಲ್ ವಿರುದ್ಧ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಪ್ರತಿ ಪ್ರಕರಣದ ತನಿಖೆಯನ್ನ ಪ್ರತ್ಯೇಕವಾಗಿ ನಡೆಸುತ್ತಿರುವ ಎಸ್‌ಐಟಿ ಟೀಂ, ಸದ್ಯ ಈಗ ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿತ್ತು. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಸಂಬಂಧ ಕಳೆದ 14 ದಿನಗಳಿಂದ ಪ್ರಜ್ವಲ್ ವಿಚಾರಣೆ ನಡೆಸಲಾಗಿತ್ತು.

    ಇದೇ ವೇಳೆ ವೈದ್ಯಕೀಯ ಪರೀಕ್ಷೆ, ಧ್ವನಿ ಪರೀಕ್ಷೆ ಕೂಡ ನಡೆಸಲಾಗಿತ್ತು. ಬಳಿಕ ಕೃತ್ಯ ಎಸಗಿದ ಸ್ಥಳ ಮಹಜರು ಕೂಡ ನಡೆದಿತ್ತು. ಒಂದು ಪ್ರಕರಣದ ತನಿಖೆಯನ್ನ ಎಸ್‌ಐಟಿ ಬಹುತೇಕ ಪೂರ್ಣಗೊಳಿಸಿದ್ದು, ಮುಂದಿನ 2 ಪ್ರಕರಣಗಳ ತನಿಖೆ ಸಂಬಂಧ ಪ್ರತ್ಯೇಕವಾಗಿ ತನಿಖೆ ಶುರು ಮಾಡಲಿದೆ ಎಂದು ಮೂಲಗಳಿಂದ ತಿಳಿದುಬಂದಿತ್ತು. ಆದರೆ ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ‘ಎ ಮಾಸ್ಟರ್ ಪೀಸ್’ ನಿರ್ದೇಶಕನ ಜೊತೆ ಮದುವೆ ಆಗಿದೆ ಎಂದ ಜ್ಯೋತಿ ರೈ

  • ವಾಲ್ಮೀಕಿ ನಿಗಮದ ಹಗರಣ ಕೇಸ್: ಆರೋಪಿಗಳ ಸಮ್ಮುಖದಲ್ಲಿ ಸ್ಥಳ ಮಹಜರು- ಮಹತ್ವದ ದಾಖಲೆ ಜಪ್ತಿ

    ವಾಲ್ಮೀಕಿ ನಿಗಮದ ಹಗರಣ ಕೇಸ್: ಆರೋಪಿಗಳ ಸಮ್ಮುಖದಲ್ಲಿ ಸ್ಥಳ ಮಹಜರು- ಮಹತ್ವದ ದಾಖಲೆ ಜಪ್ತಿ

    ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ ಪ್ರಕರಣಕ್ಕೆ (Valmiki Development Corporation Case) ಸಂಬಂಧಿಸಿದಂತೆ ನಿಗಮದ ಕಚೇರಿಗೆ ಇಬ್ಬರು ಆರೋಪಿಗಳನ್ನು ಕರೆದೊಯ್ದು ಎಸ್‍ಐಟಿ (SIT) ಮಹಜರು ನಡೆಸಿದೆ.

    ಸ್ಥಳ ಮಹಜರು ವೇಳೆ ಡಿಜಿಟಲ್ ಸಾಕ್ಷಿಗಳಿಗಾಗಿ ಎಸ್‍ಐಟಿ ಹುಡುಕಾಟ ನಡೆಸಿದ್ದು, ಈ ವೇಳೆ ಮಹತ್ವದ ದಾಖಲೆಗಳನ್ನು ಜಪ್ತಿಮಾಡಿದೆ. ಆರೋಪಿಗಳು ಬ್ಯಾಂಕ್‍ಗೆ ನೀಡಿದ್ದ ನಕಲಿ ಪತ್ರಗಳು, ನಕಲಿ ಸೀಲ್‍ಗಳನ್ನು, ಸಚಿವರ ಆಪ್ತರು ಕಚೇರಿಗೆ ಬಂದಾಗ ಸಹಿ ಮಾಡಿರುವ ನೋಂದಣಿ ಬುಕ್‍ನ್ನು ಎಸ್‍ಐಟಿ ಜಪ್ತಿ ಮಾಡಿದೆ. ಡಿವೈಎಸ್ಪಿ ಅಂಜು ಮಾಲಾ ಅವರ ನೇತೃತ್ವದ ಎಸ್‍ಐಟಿ ಅಧಿಕಾರಿಗಳ ತಂಡ ನಿಗಮದ ಕಚೇರಿ ಮೇಲೆ ದಾಳಿ ಮಾಡಿದೆ. ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇಲೆ ವಾಲ್ಮೀಕಿ ನಿಗಮದ ಹಣ ವರ್ಗಾವಣೆ: ಹೆಚ್‍ಡಿಕೆ

    ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರ ಆಪ್ತನಾದ ನೆಕ್ಕುಂಟಿ ನಾಗರಾಜ್ ಎಂಬಾತನನ್ನು ಎಸ್ಐಟಿ ವಶಕ್ಕೆ ಪಡೆದಿದೆ.

    ಏನಿದು ಪ್ರಕರಣ?: ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರು ಶಿವಮೊಗ್ಗದ ತಮ್ಮ ನಿವಾಸದಲ್ಲಿ ಡೆತ್‍ನೋಟ್ ಬರೆದಿಟ್ಟು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದಲ್ಲಿ 85 ಕೋಟಿ ರೂ. ಹಗರಣ ನಡೆದಿದೆ, ಇದರಲ್ಲಿ ನನ್ನ ತಪ್ಪು ಏನೂ ಇಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

    ಈ ಬಹುಕೋಟಿ ಹಗರಣ ಪ್ರಕರಣದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಬಂಧಿಸಲಾಗಿತ್ತು. ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ, ಎಸಿಎಂಎಂ ಕೋರ್ಟ್ (ACMM Court) ಆದೇಶಿಸಿತ್ತು.

    ವಾಲ್ಮೀಕಿ ನಿಗಮ ಹಗರಣ ಪ್ರಕರಣದ ಸಮಗ್ರ ತನಿಖೆ ನಡೆಸಲು ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ಸರ್ಕಾರ ರಚಿಸಿತ್ತು. ತಂಡ ರಚನೆಯಾದ ಎರಡು ಗಂಟೆಗಳಲ್ಲೇ ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನ ಎಸ್‍ಐಟಿ ಬಂಧಿಸಿತ್ತು.

    ನಿಗಮದ ಹಗರಣ ಬೆಳಕಿಗೆ ಬಂದ ಬಳಿಕ ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಎಸ್ಕೇಪ್ ಆಗಿದ್ದರು. ಬೆಂಗಳೂರು ಹೊರವಲಯದಲ್ಲಿ ಅವರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ವಾಲ್ಮೀಕಿ ನಿಗಮ ಅಕ್ರಮ – ಸಿಎಂ ರಾಜೀನಾಮೆಗೆ ಎನ್.ರವಿಕುಮಾರ್ ಒತ್ತಾಯ

  • ವಾಲ್ಮೀಕಿ ನಿಗಮದಿಂದ 17 ಖಾತೆಗಳಿಗೆ ನಗದು ವರ್ಗಾವಣೆ – ಬಿಜೆಪಿಯಿಂದ ದಾಖಲೆ ಬಿಡುಗಡೆ

    ವಾಲ್ಮೀಕಿ ನಿಗಮದಿಂದ 17 ಖಾತೆಗಳಿಗೆ ನಗದು ವರ್ಗಾವಣೆ – ಬಿಜೆಪಿಯಿಂದ ದಾಖಲೆ ಬಿಡುಗಡೆ

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Corporation Corruption Scam) ಸಂಬಂಧ ಸಚಿವ ನಾಗೇಂದ್ರ ತಲೆದಂಡಕ್ಕೆ ಒತ್ತಡ ಹೆಚ್ಚುತ್ತಿರುವ ಹೊತ್ತಲ್ಲೇ ಹತ್ತು ಹಲವು ಕಂಪನಿಗಳಿಗೆ ನಿಗಮದ 80 ಕೋಟಿ ರೂ.ಗಿಂತಲೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಆಗಿರುವ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

    ಐಟಿ ಕಂಪನಿಗಳು, ಭದ್ರತಾ ಏಜೆನ್ಸಿಗಳು, ಡಿಟೆಕ್ಟಿವ್ ಏಜೆನ್ಸಿಗಳು ಮತ್ತು ಹಲವರ ವೈಯಕ್ತಿಕ ಖಾತೆಗಳಿಗೆ ಅಕ್ರಮವಾಗಿ ಹಣ ವರ್ಗವಾಗಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಜೆಪಿ (BJP) ಬಿಡುಗಡೆ ಮಾಡಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಕೇಸ್‌ – ಆರೋಪಿಗಳು 6 ದಿನ ಪೊಲೀಸ್‌ ಕಸ್ಟಡಿಗೆ

    ಇದರೊಂದಿಗೆ ಯೂನಿಯನ್ ಬ್ಯಾಂಕ್ ಖಾತೆಯಿಂದ ವರ್ಗಾವಣೆಯಾದ ಹಣವನ್ನು ತಡೆಹಿಡಿದು ಮೂಲ ಖಾತೆಗೆ ಮರಳಿಸುವಂತೆ ಕೋರಿ ಆರ್‌ಬಿಎಲ್ ಬ್ಯಾಂಕ್ ಎಂಡಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಎಸಿಎಸ್ ಎನ್.ಮಂಜುನಾಥ್ ಪ್ರಸಾದ್ ಬರೆದ ಪತ್ರವನ್ನು ಬಿಜೆಪಿ ರಿಲೀಸ್ ಮಾಡಿದೆ. ಈ ಹಣ ವರ್ಗಾವಣೆ ನಕಲಿ ದಾಖಲೆಗಳನ್ನು ಆಧರಿಸಿದೆ ಎಂದು ಎಸಿಎಸ್ ಈ ಪತ್ರದಲ್ಲಿ ವಿವರಿಸಿದ್ದಾರೆ.

    ಅಶೋಕ್ ವಾಗ್ದಾಳಿ:
    ಅಕ್ರಮವಾಗಿ ವರ್ಗವಾಗಿರುವ ವಾಲ್ಮೀಕಿ ನಿಗಮದ ಹಣ ದೆಹಲಿ ಕಾಂಗ್ರೆಸ್ ನಾಯಕರನ್ನು ತಲುಪಿದೆ. ಇದೆಲ್ಲಾ ಸಿಎಂಗೆ ಗೊತ್ತಿದ್ದೆ ನಡೆದಿದೆ ಎಂಬ ಗಂಭೀರ ಆರೋಪವನ್ನು ವಿಪಕ್ಷ ನಾಯಕ ಆರ್.ಅಶೋಕ್ (R Ashoka) ಮಾಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ ಪ್ರಕರಣ ಹೇಸಿಗೆ ಹುಟ್ಟಿಸಿದೆ, ಕ್ಷಮೆಗೆ ಅರ್ಹರಲ್ಲ – ಪ್ರಜ್ವಲ್‌ಗೆ ಶಿಕ್ಷೆ ಆಗಲೇಬೇಕು ಎಂದ ಜೋಶಿ

    ಈ ನಡುವೆ ವಾಲ್ಮೀಕಿ ನಿಗಮದ ಹಗರಣಕ್ಕೂ ನಮ್ಮ ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲ. ಅಲ್ಲಿ ತೋರಿಸಿರುವ ಬ್ಯಾಂಕ್ ಖಾತೆ ನಮ್ಮ ಸಂಸ್ಥೆಯದ್ದಲ್ಲ ಎಂದು ಹ್ಯಾಪಿಯೆಸ್ಟ್ ಮೈಂಡ್ಸ್ ಸಂಸ್ಥೆ ಸ್ಪಷ್ಟನೆ ನೀಡಿದೆ.

    8 ಕಡೆ ಎಸ್‌ಐಟಿ ದಾಳಿ:
    ತನಿಖಾ ತಂಡ ರಚನೆಯಾದ ಎರಡು ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸಿದ ಎಸ್‌ಐಟಿ ತಂಡ ಶನಿವಾರ ರಾಜ್ಯದ ವಿವಿಧೆಡೆ ಏಕಕಾಲಕ್ಕೆ 8 ಕಡೆ ದಾಳಿ ನಡೆಸಿದೆ. ಬಹುಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತ ಆರೋಪಿಗಳಾಗಿರುವ ಕೊಡಿಗೇಹಳ್ಳಿಯ ಪದ್ಮನಾಭ ಮನೆಯಲ್ಲಿ ಹಾಗೂ ದಾವಣಗೆರೆಯ ಪರಶುರಾಮ್ ಮತ್ತವರ ಸ್ನೇಹಿತರ ಮನೆಯಲ್ಲಿ ಎಸ್‌ಐಟಿ ದಾಳಿ ನಡೆಸಿದೆ.

  • ವಾಲ್ಮೀಕಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಕೇಸ್‌ – ಆರೋಪಿಗಳು 6 ದಿನ ಪೊಲೀಸ್‌ ಕಸ್ಟಡಿಗೆ

    ವಾಲ್ಮೀಕಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಕೇಸ್‌ – ಆರೋಪಿಗಳು 6 ದಿನ ಪೊಲೀಸ್‌ ಕಸ್ಟಡಿಗೆ

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ (Valmiki Development Corporation Case) ಬಂಧಿತ ಆರೋಪಿಗಳಾಗಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್‌ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಅವರನ್ನ 6 ದಿನ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ, ಎಸಿಎಂಎಂ ಕೋರ್ಟ್‌ (ACMM Court) ಆದೇಶಿಸಿದೆ.

    ವಾಲ್ಮೀಕಿ ನಿಗಮ ಹಗರಣ ಪ್ರಕರಣದ ಸಮಗ್ರ ತನಿಖೆ ನಡೆಸಲು ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (SIT) ಸರ್ಕಾರ ರಚಿಸಿತ್ತು. ತಂಡ ರಚನೆಯಾದ ಎರಡು ಗಂಟೆಗಳಲ್ಲೇ ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನ ಎಸ್‌ಐಟಿ ಬಂಧಿಸಿ, ಆರೋಪಿಗಳನ್ನ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಕೋರ್ಟ್‌ ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿತು.

    ನಿಗಮದ ಹಗರಣ ಬೆಳಕಿಗೆ ಬಂದ ಬಳಿಕ ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಎಸ್ಕೇಪ್ ಆಗಿದ್ದರು. ಬೆಂಗಳೂರು ಹೊರವಲಯದಲ್ಲಿ ಅವರನ್ನು ಬಂಧಿಸಲಾಗಿತ್ತು. ಇಂದು ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಬಳಿಕ ಎಸ್‌ಐಟಿ ತನ್ನ ಕಸ್ಟಡಿಗೆ ಪಡೆಯಿತು. ಇದನ್ನೂ ಓದಿ: ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ – ಸಿಎಂ, ಡಿಸಿಎಂಗೆ ಜಾಮೀನು

    SIT ತಂಡದಲ್ಲಿ ಯಾರ‍್ಯಾರು ಇದ್ದಾರೆ?
    ಎಸ್‌ಐಟಿಗೆ ಮುಖ್ಯಸ್ಥರಾಗಿ ಮನೀಶ್‌ ಖರ್ಬೀಕರ್‌ರನ್ನು ನೇಮಿಸಲಾಗಿದೆ. ಬೆಂಗಳೂರು ನಗರ ಉಪ ಪೊಲೀಸ್‌ ಆಯುಕ್ತ ಶಿವಪ್ರಕಾಶ್‌ ದೇವರಾಜು, ರಾಜ್ಯ ಗುಪ್ತ ವಾರ್ತೆ ಪೊಲೀಸ್‌ ಅಧೀಕ್ಷಕ ಹರಿರಾಮ್‌ ಶಂಕರ್‌, ಸಿಐಡಿ ಪೊಲೀಸ್‌ ಅಧೀಕ್ಷಕ ರಾಘವೇಂದ್ರ ಕೆ. ಹೆಗಡೆ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ.

    ಏನಿದು ಪ್ರಕರಣ?
    ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರು ಶಿವಮೊಗ್ಗದ ತಮ್ಮ ನಿವಾಸದಲ್ಲಿ‌ ಡೆತ್‌ನೋಟ್‌ ಬರೆದಿಟ್ಟು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದಲ್ಲಿ 85 ಕೋಟಿ ರೂ. ಹಗರಣ ನಡೆದಿದೆ, ಇದರಲ್ಲಿ ನನ್ನ ತಪ್ಪು ಏನೂ ಇಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್ ಎಸ್‌ಐಟಿ ತನಿಖೆಗೆ – ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ತನಿಖಾ ತಂಡ

  • ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ – ಕೋರ್ಟ್‌ನಲ್ಲಿ ಇಂದು ಏನಾಯ್ತು?

    ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ – ಕೋರ್ಟ್‌ನಲ್ಲಿ ಇಂದು ಏನಾಯ್ತು?

    ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri), ಐಪಿಎಸ್ ಅಧಿಕಾರಿ ಡಿ. ರೂಪಾ (D Roopa) ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

    ಪತಿ ಸುಧೀರ್ ರೆಡ್ಡಿ (Sudhir Reddy) ಜೊತೆ ಖುದ್ದು 24ನೇ ಎಸಿಎಂಎಂ ಕೋರ್ಟ್‌ಗೆ (ACMM Court) ಹಾಜರಾಗಿದ್ದ ರೋಹಿಣಿ ಸಿಂಧೂರಿ, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು. ಇದನ್ನೂ ಓದಿ: ರಾಜ್ಯ ಭ್ರಷ್ಟಾಚಾರದ ರಾಜಧಾನಿಯಾಗಿರೋ ಬಗ್ಗೆ ಮೋದಿ ಏಕೆ ಮಾತಾಡ್ತಿಲ್ಲ?: ಡಿಕೆಶಿ

    `ತಡೆಯಾಜ್ಞೆ ಇದ್ದರೂ, ರೂಪಾ ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್ ಹಾಕುತ್ತಲೇ ಇದ್ದಾರೆ. ಅವಹೇಳನ ಬರವಣಿಗೆ ಪೋಸ್ಟ್ ಮಾಡುತ್ತಿದ್ದಾರೆ. ಕೆಲವೊಮ್ಮೆ ಮಾತನಾಡಿದ್ರೆ ಪರವಾಗಿಲ್ಲ, ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಯಡಿಯೂರಪ್ಪರಿಗೆ ಕಣ್ಣೀರು ಹಾಕಿಸಿದ ಬಗ್ಗೆ ಮೋದಿ ಉತ್ತರ ಕೊಡಲಿ- ಡಿಕೆಶಿ

    ಚಾಮರಾಜನಗರದ ಅಮ್ಲಜನಕ ಸಿಲಿಂಡರ್ ದುರಂತ ಪ್ರಕರಣದಲ್ಲಿ ಈಗಾಗಲೇ ಸರ್ಕಾರ ತನಿಖೆ ನಡೆಸಿದೆ. ಸರ್ಕಾರ ವರದಿ ನೀಡಿದ್ದರೂ ಉದ್ದೇಶ ಪೂರ್ವಕವಾಗಿ ಅವಮಾನ ಮಾಡುತ್ತಿದ್ದಾರೆ ಎಂದು ಜಡ್ಜ್ ಗಮನಕ್ಕೆ ತಂದರು.

    ರೋಹಿಣಿ ಹೇಳಿಕೆ ಆಧರಿಸಿ, ಡಿ.ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಕೋರ್ಟ್ ಮಾರ್ಚ್ 3ಕ್ಕೆ ವಿಚಾರಣೆ ಮುಂದೂಡಿದೆ.

  • ರಮೇಶ್‌ ಜಾರಕಿಹೊಳಿ ಅತ್ಯಾಚಾರ ಮಾಡಿಲ್ಲ – ಬಿ ರಿಪೋರ್ಟ್‌ ಸಲ್ಲಿಸಿದ SIT

    ರಮೇಶ್‌ ಜಾರಕಿಹೊಳಿ ಅತ್ಯಾಚಾರ ಮಾಡಿಲ್ಲ – ಬಿ ರಿಪೋರ್ಟ್‌ ಸಲ್ಲಿಸಿದ SIT

    ಬೆಂಗಳೂರು: ಅತ್ಯಾಚಾರದ ಆರೋಪ ಹೊತ್ತಿದ್ದ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕ್ಲೀನ್‌ ಚಿಟ್‌ ಕೊಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ 1ನೇ ಎಸಿಎಂಎಂ ಕೋರ್ಟ್‌ಗೆ ಬಿ ರಿಪೋರ್ಟ್‌ ಪ್ರತಿ ಸಲ್ಲಿಸಿದೆ.

    150 ಪುಟಗಳ ಬಿ ರಿಪೋರ್ಟ್‌ ಅನ್ನು 1ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ. ಇದರಿಂದ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ಕ್ಲೀನ್ ಚಿಟ್ ಕೊಟ್ಟಿದೆ. ಯುವತಿ ಕೊಟ್ಟ ದೂರಿನಲ್ಲಿ ಯಾವುದೇ ಹುರುಳಿಲ್ಲ. ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್

    ರಮೇಶ್‌ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾಗಿದ್ದ ಸಿಡಿ ಪ್ರಕರಣದ ತನಿಖಾ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಹೈಕೋರ್ಟ್‌ ಸೂಚನೆ ನೀಡಿತ್ತು. ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದೆ. ಬಿ ರಿಪೋರ್ಟ್‌ ಸಲ್ಲಿಕೆ ಹಿನ್ನೆಲೆಯಲ್ಲಿ ದೂರುದಾರ ಯುವತಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ನಿಮ್ಮ ಪ್ರಕರಣ ಮುಕ್ತಾಯ ಆಗಿದೆ. ತನಿಖೆ ಮುಕ್ತಾಯಗೊಂಡಿದೆ. 1ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ ಎಂದು ನೋಟಿಸ್ ನೀಡಿದೆ.

    ಸಾಕ್ಷ್ಯಾಧಾರ ಕೊರತೆಯಿಂದ ಪ್ರಕರಣ ಮುಕ್ತಾಯ ಮಾಡಿದ್ದೇವೆ ಎಂಬುದಾಗಿ ಇಂದು ಬೆಳಗ್ಗೆ ನೋಟಿಸ್ ನೀಡಿ ಬಳಿಕ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಇದನ್ನೂ ಓದಿ: ದಲಿತ ಯುವತಿಯನ್ನ ಮದುವೆಯಾಗಿದ್ದಕ್ಕೆ ಸ್ವಜಾತಿಯವರಿಂದ ಬಹಿಷ್ಕಾರ

    ಬಿ ರಿಪೋರ್ಟ್‌ನಲ್ಲೇನಿದೆ?
    ಇಬ್ಬರು ಕೂಡ ಸಾಕಷ್ಟು ದಿನಗಳಿಂದ ಪರಿಚಯ ಇಟ್ಟುಕೊಂಡಿದ್ದವರು. ಇಬ್ಬರೂ ಸಮ್ಮತಿಯಿಂದ ಲೈಂಗಿಕ ಸಂಪರ್ಕ ಹೊಂದಿದ್ದಾರೆ.  ಯುವತಿ ಆರೋಪ ಮಾಡಿದಂತೆ ಇಲ್ಲಿ ಯಾವುದೇ ಬಲತ್ಕಾರವೂ ನಡೆದಿಲ್ಲ. ಮಾಜಿ ಸಚಿವರು ಯುವತಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ ಎನ್ನುವುದು ಆಧಾರ ರಹಿತ. ಯುವತಿಗೆ ಕೆಲಸ ಕೊಡಿಸುವುದಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಅನ್ನೋದಕ್ಕೆ ಯಾವುದೇ ಸಾಕ್ಷ್ಯ ಇಲ್ಲ. ಟೆಕ್ನಿಕಲ್ ಎವಿಡೆನ್ಸ್‌ಗಳು ಇಲ್ಲ.

    ಇಬ್ಬರು ನಿರಂತರವಾಗಿ ದೂರವಾಣಿಯ ಮೂಲಕ ತುಂಬಾ ಸಲಿಗೆಯಿಂದಲೇ ಮಾತನಾಡಿದ್ದಾರೆ. ಮಾತನಾಡುವಾಗ ಇಬ್ಬರ ಸಂಭಾಷಣೆಯಲ್ಲಿ ಕೂಡ ಲೈಂಗಿಕ ಪ್ರಚೋದನೆಯ ಮಾತುಗಳು ಇದ್ದಾವೆ. ಒಬ್ಬರ ಮೇಲೆ ಒಬ್ಬರು ಒತ್ತಡ ಹೇರಿದ್ದಾರೆ ಅನ್ನೋದಕ್ಕೆ ಸಾಕ್ಷ್ಯ ಇಲ್ಲ. ನ್ಯಾಯಾಧೀಶರ ಮುಂದೆ ಹೇಳಿದ ಹೇಳಿಕೆಗೆ ಸಂಬಂಧಪಟ್ಟ ಪೂರಕ ಸಾಕ್ಷ್ಯಗಳು ಇಲ್ಲ.

    ನ್ಯಾಯಾಧೀಶರ ಮುಂದೆ ಹೇಳಿದ ಹೇಳಿಕೆಗೂ ಪೊಲೀಸರ ಮುಂದೆ ಹೇಳಿದ ಹೇಳಿಕೆಗೂ ವ್ಯತ್ಯಾಸಗಳು ಇದ್ದಾವೆ. ಆರೋಪಿ ಮತ್ತು ಸಂತ್ರಸ್ತೆಯ ಮನೆಯನ್ನು ಮಹಜರು ಮಾಡಿದಾಗ ಪೂರಕ ಸಾಕ್ಷ್ಯಗಳು ಇಲ್ಲ. ಸಂತ್ರಸ್ತ ಯುವತಿ ಹೇಳಿದಂತೆ ಅಪಾರ್ಟ್ಮೆಂಟ್‌ನಲ್ಲಿ ಯಾವುದೇ ಕುರುಹುಗಳು ಪತ್ತೆ ಆಗಿಲ್ಲ. ವೈರಲ್ ಆಗಿರೋ ವಿಡಿಯೋ ಎಡಿಟೆಡ್ ವರ್ಸನ್ ವಿಡಿಯೋ ಆಗಿದೆ. ವಿಧಿವಿಜ್ಞಾನ ಪ್ರಯೋಗಾಲಯಕ್ಕೂ ವೀಡಿಯೋ ತುಣುಕುಗಳಿಗೆ ಸ್ಪಷ್ಟವಾದ ವರದಿಯನ್ನು ನೀಡಿಲ್ಲ.

    ವೀಡಿಯೋ ತುಣುಕುಗಳನ್ನು ಯುವತಿ ಉದ್ದೇಶ ಪೂರ್ವಕವಾಗಿ ಮಾಡಿದ್ದಾಳೆ ಎಂಬ ಅನುಮಾನ ಇದೆ. ಯುವತಿಯು ಎರಡೂ ಬಾರಿ ವೀಡಿಯೋವನ್ನು ಮಾಡಿದ್ದಾಳೆ. ಒಮ್ಮೆ ಕಪ್ಪು ಬಣ್ಣದ ಟೀ ಶರ್ಟ್ ಅನ್ನು, ಮತ್ತೊಮ್ಮೆ ಕಾಫಿ ಕಲರ್ ಟೀ ಶರ್ಟ್ ಅನ್ನು ಹಾಕಿದ್ದಾಳೆ. ಆಕೆ ಎರಡು ಬಾರಿ ವೀಡಿಯೋ ರೆಕಾರ್ಡ್ ಮಾಡಿರೋದು ಬೇರೊಂದು ಉದ್ದೇಶ ಇರಬಹುದು ಎಂದು ಅನಿಸಿದೆ. ಎರಡು ಕ್ಯಾಮೆರಾಗಳನ್ನು ಯುವತಿ ಬಳಸಿದ್ದು ಒಂದು ವ್ಯಾನಿಟಿ ಬ್ಯಾಗ್‌ನಲ್ಲಿ ಇತ್ತು ಎಂಬುದು ಸ್ಪಷ್ಟವಾಗಿದೆ. ವ್ಯಾನಿಟಿ ಬ್ಯಾಗ್‌ನಲ್ಲಿ ಇದ್ದ ಕ್ಯಾಮೆರಾವನ್ನು ಬೇರೊಬ್ಬ ಯುವಕನ ಸಹಾಯದಿಂದ ಆಫ್ ಮಾಡಿದ್ದಾರೆ. ಕ್ಯಾಮರಾ ಆಫ್ ಮಾಡುವಾಗ ಯುವತಿ ಬೇರೊಂದು ಪ್ರಕರಣದ ಶಂಕಿತ ಆರೋಪಿಯ ಹೆಸರನ್ನು ಉಲ್ಲೇಖ ಮಾಡಿದ್ದಾಳೆ. ಆರೋಪಿಯೂ ಕೂಡ ತನ್ನನ್ನು ಹೆದರಿಸುತ್ತಾ ಇದ್ದರು. ತನ್ನ ಮೊಬೈಲ್‌ಗೆ ಎರಡು ಬಾರಿ ವೀಡಿಯೋ ಕಳುಹಿಸಿದ್ದರು, ಹಣಕ್ಕೆ ಬೇಡಿಕೆ ಇಟ್ಟಿದ್ದರು ಅಂತ ಹೇಳಿದ್ದಾರೆ.

    ಆರೋಪಿ ಹೇಳಿಕೆಗೆ ಪೂರಕವಾದ ಕೆಲವೊಂದು ಸಾಕ್ಷ್ಯಗಳು ಸಿಕ್ಕಿವೆ. ಬೇರೊಂದು ಪ್ರಕರಣದ ಶಂಕಿತ ಆರೋಪಿಗಳು ಹಣವನ್ನು ಬ್ಲಾಕ್ ಅಂಡ್ ವೈಟ್ ಮಾಡಿರೋದು ಸಾಬೀತಾಗಿದೆ. ಆರೋಪಿ ರಮೇಶ್ ಜಾರಕಿಹೊಳಿ ಹಣ ನೀಡಿದ್ದಕ್ಕೂ ಈ ಯುವಕರು ಬ್ಲಾಕ್ ಅಂಡ್ ವೈಟ್ ಮಾಡಿದ್ದಕ್ಕೂ ತಾಳೆ ಆಗುತ್ತಾ ಇದೆ. ಅಲ್ಲದೇ ಯುವತಿಯ ಮೇಲೆ ಒಂದಷ್ಟು ಗಂಭೀರವಾದ ಆರೋಪಗಳು ಕೂಡ ಇದ್ದಾವೆ. ಆರೋಪಗಳಿಗೆ ಪ್ರಬಲ ಸಾಕ್ಷ್ಯ ಇಲ್ಲದೇ ಇದ್ದರೂ ಅನುಮಾನ ಹೆಚ್ಚಿದೆ. ಇಬ್ಬರೂ ಪ್ರಾಪ್ತರೂ ಆಗಿರುವುದರಿಂದ ಸಮ್ಮತಿಯ ಮೇಲೆ ಲೈಂಗಿಕ ಸಂಪರ್ಕವಾಗಿದೆ. ಇಲ್ಲಿ ಒತ್ತಾಯ ಪೂರ್ವಕವಾಗಿ ಯಾರ ಮೇಲೂ ಅತ್ಯಾಚಾರ ಆಗಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.