Tag: Actor Abhishek

  • ನಟಭಯಂಕರ ಸೆಟ್‍ಗೆ ಸರ್‌ಪ್ರೈಸ್‌ ವಿಸಿಟ್ ಕೊಟ್ಟ ಯಂಗ್ ರೆಬೆಲ್ ಸ್ಟಾರ್!

    ನಟಭಯಂಕರ ಸೆಟ್‍ಗೆ ಸರ್‌ಪ್ರೈಸ್‌ ವಿಸಿಟ್ ಕೊಟ್ಟ ಯಂಗ್ ರೆಬೆಲ್ ಸ್ಟಾರ್!

    ಬೆಂಗಳೂರು: ಸದಾ ಚಿತ್ರರಂಗದ ಇತರರ ಕೆಲಸ ಕಾರ್ಯಗಳತ್ತಲೂ ಒಂದು ಕಣ್ಣಿಟ್ಟು ಬೆನ್ತಟ್ಟಿ ಪ್ರೋತ್ಸಾಹಿಸುತ್ತಿದ್ದ ಸ್ನೇಹಶೀಲ ವ್ಯಕ್ತಿತ್ವ ರೆಬೆಲ್ ಸ್ಟಾರ್ ಅಂಬರೀಶ್ ಅವರದ್ದು. ಅವರ ಪುತ್ರ ಅಭಿಷೇಕ್ ಕೂಡಾ ಅಂಥಾದ್ದೇ ಗುಣಗಳಿಂದಲೇ ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ. ಸ್ನೇಹಕ್ಕೆ ಸೋಲುವ ಸ್ವಭಾವದ ಅಭಿಷೇಕ್ ಇದ್ದಕ್ಕಿದ್ದಂತೆ ನಟಭಯಂಕರ ಶೂಟಿಂಗ್ ಸ್ಪಾಟಿಗೆ ಭೇಟಿ ನೀಡಿ ನಿರ್ದೇಶಕ ಕಂ ನಾಯಕ ಪ್ರಥಮ್‍ಗೆ ಸರ್‌ಪ್ರೈಸ್‌ ಕೊಟ್ಟಿದ್ದಾರೆ.

    ಅಭಿಷೇಕ್ ಈಗ ತಮ್ಮ ಬಣ್ಣದ ಬದುಕಿನ ಜೊತೆ ಜೊತೆಗೇ ಸಂಸದೆಯಾಗಿರೋ ಅಮ್ಮ ಸುಮಲತಾರ ಒಂದಷ್ಟು ಜವಾಬ್ದಾರಿಗಳನ್ನೂ ವಹಿಸಿಕೊಂಡಿದ್ದಾರೆ. ಅಮ್ಮನನ್ನು ಗೆಲ್ಲಿಸಿದ ಮಂಡ್ಯದ ಜನರಿಗಾಗಿಯೇ ಹೆಚ್ಚಿನ ಸಮಯವನ್ನು ಮೀಸಲಿಟ್ಟಿದ್ದಾರೆ. ಹೀಗೆ ಮಂಡ್ಯದತ್ತ ಹೊರಟಿದ್ದ ಅಭಿಷೇಕ್ ಆ ಅರ್ಜೆಂಟಿನ ನಡುವೆಯೂ ನಟಭಯಂಕರ ಸೆಟ್ಟಿಗೆ ಭೇಟಿ ಕೊಟ್ಟಿದ್ದಾರೆ. ಕೇವಲ ಭೇಟಿ ಕೊಟ್ಟು ಔಪಚಾರಿಕ ಮಾತುಕಥೆ ನಡೆಸಿ ಹೊರಟಿಲ್ಲ. ಬದಲಾಗಿ ಇಡೀ ಚಿತ್ರದ ಆಗು ಹೋಗುಗಳನ್ನು ತಿಳಿದುಕೊಂಡಿದ್ದಾರೆ. 4 ಗಂಟೆಗೂ ಹೆಚ್ಚು ಕಾಲ ಪ್ರಥಮ್ ಅವರ ಜೊತೆಗೇ ಇದ್ದು ಎಲ್ಲವನ್ನೂ ಗಮನಿಸಿದ್ದಾರೆ.

    ಇಷ್ಟು ಕಾಲ ಪ್ರಥಮ್ ಕಾರ್ಯವೈಖರಿಗಳನ್ನು ಗಮನಿಸಿದ ಅಭಿಷೇಕ್ ಪ್ರಥಮ್ ನಿರ್ದೇಶನದ ಶೈಲಿಯನ್ನು ಡೈಲಾಗ್ ಮತ್ತು ಆಕ್ಷನ್ ಗಳನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರಂತೆ. ಇಷ್ಟೇ ಅಲ್ಲದೇ ಒಂದಷ್ಟು ಸೀನ್‍ಗಳನ್ನು ತಾವೇ ಖುದ್ದಾಗಿ ಅಭಿ ನಿರ್ದೇಶನವನ್ನೂ ಮಾಡಿದ್ದಾರಂತೆ. ಇಷ್ಟೆಲ್ಲ ಮಾಡಿ, ಚಿತ್ರತಂಡದೊಂದಿಗೆ ಕಲೆತು ಖುಷಿ ಪಟ್ಟ ಅಭಿ ಆದಷ್ಟು ಬೇಗ ಸಿನಿಮಾ ತಮಗೆ ಸಿನಿಮಾ ತೋರಿಸುವಂತೆಯೂ ಪ್ರಥಮ್ ಅವರಿಗೆ ತಾಕೀತು ಮಾಡಿದ್ದಾರಂತೆ.

    ಹೀಗೆ ಜ್ಯೂನಿಯರ್ ರೆಬೆಲ್ ಸ್ಟಾರ್ ಅನಿರೀಕ್ಷಿತವಾಗಿ ಭೇಟಿ ನೀಡಿ ತುಂಬಾ ಸಮಯ ತಮಗಾಗಿ ಮೀಸಲಿಟ್ಟಿದ್ದರಿಂದ ಪ್ರಥಮ್ ಕೂಡಾ ಥ್ರಿಲ್ ಆಗಿದ್ದಾರೆ. ಅಭಿಷೇಕ್ ಭೇಟಿ ನೀಡಿದ ಸಂದರ್ಭದಲ್ಲಿ ನಟಭಯಂಕರ ಚಿತ್ರದ ನಾಯಕಿ ನಿಹಾರಿಕಾ ಶೆಣೈ, ಓಂಪ್ರಕಾಶ್ ರಾವ್, ಮಜಾ ಟಾಕೀಸ್ ಪವನ್ ಮತ್ತು ಉದಯ್ ಮೆಹ್ತಾ ಮುಂತಾದವರು ಉಪಸ್ಥಿತರಿದ್ದರು.

    ಈ ಹಿಂದೆ ನಟಭಯಂಕರ ಸಿನಿಮಾ ಸೆಟ್‍ಗೆ ಗೋಲ್ಡನ್ ಸ್ಟಾರ್ ಗಣೇಶ್ ಕೂಡಾ ಭೇಟಿ ನೀಡಿದ್ದರು. ಈಗ ಅಭಿಷೇಕ್ ಅಂಬರೀಷ್ ಭೇಟಿ ನೀಡಿದ್ದಾರೆ. ಅಂತೂ ಈ ಚಿತ್ರದ ಮೂಲಕ ಪ್ರಥಮ್ ನಿರ್ದೇಶಕನಾಗಿಯೂ ತಮ್ಮದೇ ಛಾಪು ಮೂಡಿಸುವತ್ತ ನಿರ್ಣಾಯಕ ಹೆಜ್ಜೆಯಿಟ್ಟಿದ್ದಾರೆ. ಇದಕ್ಕಾಗಿ ವಿಶಿಷ್ಟವಾದ ಕಥೆಯನ್ನು ಉದಯ್ ಮೆಹ್ತಾ ರಚಿಸಿದ್ದಾರೆ. ಈ ಚಿತ್ರದ ಚಿತ್ರೀಕರಣವೀಗ ಬಿಡುವಿಲ್ಲದಂತೆ ನಡೆಯುತ್ತಿದೆ.

  • ಆಸ್ಪತ್ರೆಯಲ್ಲಿದ್ದ ಅಭಿಷೇಕ್ ಕಣ್ಣಲ್ಲಿ ಒಂದು ತೊಟ್ಟು ನೀರಿರಲಿಲ್ಲ ಏಕೆ ಅನ್ನೋದನ್ನು ರಿವೀಲ್ ಮಾಡಿ ಭಾವುಕರಾದ ಸಿಎಂ

    ಆಸ್ಪತ್ರೆಯಲ್ಲಿದ್ದ ಅಭಿಷೇಕ್ ಕಣ್ಣಲ್ಲಿ ಒಂದು ತೊಟ್ಟು ನೀರಿರಲಿಲ್ಲ ಏಕೆ ಅನ್ನೋದನ್ನು ರಿವೀಲ್ ಮಾಡಿ ಭಾವುಕರಾದ ಸಿಎಂ

    ಬೆಂಗಳೂರು: ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು.

    ನಗರದ ಅಂಬೇಡ್ಕರ್ ಭವನದಲ್ಲಿ ಅಂಬಿ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಸಿಎಂ ಆಗಿದ್ದಾಗ ಇಬ್ಬರು ಗಣ್ಯರು ನಮ್ಮನ್ನು ಬಿಟ್ಟು ಹೋದರು. ಇಬ್ಬರ ಅಂತಿಮ ಕಾರ್ಯ ನಡೆಸುವ ಅವಕಾಶ ನನಗೆ ಲಭಿಸಿತು. ಇದು ಅದೃಷ್ಟವೋ, ಶಾಪವೋ ಗೊತ್ತಿಲ್ಲ. ನನ್ನ ತಂದೆ ತಾಯಿ ಬಿಟ್ಟರೆ ನನಗೆ ನನ್ನ ಜೀವನದಲ್ಲಿ ಪ್ರೇರಣೆಯಾಗಿದ್ದು ರಾಜ್ ಸಿನಿಮಾಗಳು. ಡಾ. ರಾಜ್‍ಕುಮಾರ್ ನಿಧನರಾದಾಗಲೂ ಹಲವು ಗೊಂದಲಗಳಿದ್ದವು. ಆಸ್ಪತ್ರೆಯಿಂದ ನನ್ನ ಗಮನಕ್ಕೆ ಯಾವುದೇ ಸುದ್ದಿ ತಿಳಿದಿರಲಿಲ್ಲ. ಅಷ್ಟರಲ್ಲೇ ಸುದ್ದಿ ಕಾಡ್ಗಿಚ್ಚಿನಂತೆ ಹರಿದು ರಾಜ್ ನಿವಾಸದ ಮುಂದೆ ಅಭಿಮಾನಿಗಳ ಸಾಗರವೇ ಸೇರಿತ್ತು. ಹಾಗೇ ಅಂಬರೀಶ್ ಸಾವಿನ ಸುದ್ದಿ ಕೇಳಿ ಅಘಾತಗೊಂಡು ಆಸ್ಪತ್ರೆಗೆ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರಿರಲಿಲ್ಲ. ಧೈರ್ಯವಾಗಿ ನಿಂತಿದ್ದರು. ನಾನು ಏಕೆ ಇಷ್ಟು ಧೈರ್ಯವಾಗಿ ಇದ್ದೀಯಾ ಎಂದು ಅಭಿಷೇಕ್‍ಗೆ ಕೇಳಿದೆ. ಅದಕ್ಕೆ ನಾನು ಜಾಸ್ತಿ ರೋಧಿಸಿದ್ರೆ ಅಮ್ಮನಿಗೆ ಮತ್ತಷ್ಟು ದುಃಖವಾಗುತ್ತದೆ ಎಂದು ಹೇಳಿದರು. ಈ ಮಾತು ಕೇಳಿ ನಾನು ಮತ್ತಷ್ಟು ಭಾವುಕನಾದೆ ಎಂದರು.

    ನಾನು ಚಿತ್ರರಂಗದಿಂದ ಬಂದವನು. ಅಂಬರೀಶ್ ನಮಗೆ ಅಣ್ಣನಂತೆ ಇದ್ದರು. ಸ್ನೇಹ ಎಂದರೆ ಅಂಬಿ ಅವರಿಂದಲೇ ನನಗೆ ತಿಳಿಯಿತು. ಅವರ ಅಂತಿಮ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಿದ್ದು, ಇದಕ್ಕೆ ಕಾರಣ ಅಂಬಿ ಒಳ್ಳೆಯ ಗುಣ ಕಾರಣ. ಅದ್ದರಿಂದಲೇ ಎಲ್ಲವೂ ಸುಸೂತ್ರವಾಗಿ ನಡೆಯಿತು. ನನಗೆ ನಿಖಿಲ್ ಮತ್ತು ಅಂಬರೀಶ್ ಸೇರಿಸಿ ಒಟ್ಟಿಗೆ ಸಿನಿಮಾ ಮಾಡಬೇಕು ಎಂಬ ಆಸೆ ಇತ್ತು. ಆದರೆ ರಾಜಕೀಯ ಒತ್ತಡಗಳಿಂದ ಸಿನಿಮಾ ಮಾಡಲು ಸಾಧ್ಯವಾಗಲಿಲ್ಲ ಎಂದರು.

    ಅಂಬಿ ನನಗೆ ಫೋನ್ ಮಾಡಿ ನನ್ನ ಆರೋಗ್ಯದ ಬಗ್ಗೆ ಎಚ್ಚರಿಕೆ ನೀಡಿದ್ದರು. ಆಗ ನಾನು ಅವರ ಆರೋಗ್ಯ ಬಗ್ಗೆ ನೋಡಿಕೊಳ್ಳುವಂತೆ ಸಲಹೆ ನೀಡಿದ್ದೆ ಎಂದರು. ಇದೇ ವೇಳೆ ಅಂಬರೀಶ್ ಅವರ ಅಂತಿಮ ಕಾರ್ಯಗಳು ಯಾವುದೇ ಗೊಂದಲವಿಲ್ಲದೇ ನಡೆಯಲು ಪ್ರಮುಖ ಕಾರಣ ಅವರ ಅಭಿಮಾನಿಗಳು. ಮಂಡ್ಯದಲ್ಲೂ ಅಭಿಮಾನಿಗಳು ಶಾಂತಿಯಿಂದ ವರ್ತನೆ ಮಾಡಿದರು. ಅಲ್ಲದೇ ಬೆಂಗಳೂರಿನ ಅಭಿಮಾನಿಗಳು ಮೆರವಣಿಗೆ ವೇಳೆಯೂ ಸಹಕಾರ ನೀಡಿದರು. ಅವರ ಈ ಸಹಕಾರಕ್ಕೆ ಧನ್ಯವಾದ ಎಂದು ತಿಳಿಸಿದರು.

    ಮೈಸೂರಿನಲ್ಲೇ ಫಿಲ್ಮ್ ಸಿಟಿ: ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾತನ್ನು ಪ್ರಸ್ತಾಪಿಸಿದ ಸಿಎಂ ಎಚ್‍ಡಿಕೆ ಅವರು, ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂದು ಮನವಿ ಮಾಡಿದ್ದಾರೆ. ಹಲವರ ಬೇಡಿಕೆ ಇದಾಗಿದೆ. ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡುವ ಯೋಚನೆ ನಮ್ಮ ಮುಂದಿದೆ. ಅದನ್ನು ಬದಲಾವಣೆ ಮಾಡಿಲ್ಲ. ಆದರೆ ರಾಮನಗರದಲ್ಲಿ ಫಿಲ್ಮ್ ವಿಶ್ವವಿದ್ಯಾಲಯ ಮಾಡೋಣ ಎಂಬ ಚಿಂತನೆ ಇದೆ. ಕನ್ನಡ ಸಿನಿಮಾ ರಂಗದ ಬಗ್ಗೆ ನನಗೆ ಬಹಳ ದೂರಾಲೋಚನೆ ಇದೆ. ಬೇರೆ ಭಾಷೆಗಳಿಗೆ, ಭಾರತದಲ್ಲಿ ಕನ್ನಡ ಸಿನಿಮಾ ಮತ್ತಷ್ಟು ಉತ್ತಮ ಯಶಸ್ಸು ಗಳಿಸಬೇಕು. ಆ ಕುರಿತು ನಮ್ಮ ಸರ್ಕಾರದ ಕಾರ್ಯ ಮುಂದುವರಿಯುತ್ತದೆ ಎಂದು ಆಶ್ವಾಸನೆ ನೀಡಿದರು.

    ವಿಷ್ಣು, ರಾಜ್‍ಕುಮಾರ್, ಅಂಬಿ ಅವರ ವ್ಯಕ್ತಿತ್ವ ಒಂದೇ ರೀತಿ ಇತ್ತು. ಅದ್ದರಿಂದ ಎಲ್ಲರಿಗೂ ಸಮಾನ ಗೌರವ ನೀಡಲಾಗುವುದು. ಇದರಲ್ಲಿ ಸರ್ಕಾರದಿಂದ ಲೋಪ ಆಗುವುದಿಲ್ಲ. ಆದರೆ ಈ ಕುರಿತು ಸರ್ಕಾರವನ್ನು ಪ್ರಶ್ನೆ ಮಾಡುವ ವೇಳೆ ಸ್ವಲ್ಪ ತಾಳ್ಮೆ ವಹಿಸಿ ಅಷ್ಟೇ. ಸರ್ಕಾರ ಎಂದಿಗೂ ಈ ವಿಚಾರದಲ್ಲಿ ಹಿಂದೆ ಉಳಿಯುದಿಲ್ಲ. ಅದಷ್ಟು ಶೀಘ್ರ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾವುದು ಎಂದರು.

    https://www.youtube.com/watch?v=-LM0X2q1GO8

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸಪ್ತಪದಿ ತುಳಿದ ತಿಥಿ ಚಿತ್ರ ನಟ ಅಭಿಷೇಕ್

    ಸಪ್ತಪದಿ ತುಳಿದ ತಿಥಿ ಚಿತ್ರ ನಟ ಅಭಿಷೇಕ್

    ಮಂಡ್ಯ: ತಿಥಿ ಸಿನಿಮಾದ ಮೂಲಕ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದ ಯುವ ನಟ ಅಭಿಷೇಕ್ ಇಂದು ಸಪ್ತಪದಿ ತುಳಿದಿದ್ದಾರೆ.

    ನಗರದ ಆಂಜನೇಯಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆಯಲ್ಲಿ ನಟ ಅಭಿಷೇಕ್ ತಮ್ಮದೇ ಗ್ರಾಮದ ಹೊಂಬಾಳೆಯವರನ್ನು ಮದುವೆಯಾಗಿದ್ದಾರೆ.

    2015 ರಲ್ಲಿ ಬಿಡುಗಡೆಯಾಗಿದ್ದ ಸುಂದರ ಸಾಮಾಜಿಕ ಹಾಗೂ ಕಲಾತ್ಮಕ ಸಿನಿಮಾ `ತಿಥಿ’ ಮೂಲಕ ಅಭಿಷೇಕ್ ತಮ್ಮ ಸಿನಿ ಜೀವನವನ್ನು ಆರಂಭಿಸಿದ್ದರು. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಅಪಾರ ಮೆಚ್ಚುಗೆಯನ್ನು ಪಡೆದುಕೊಳ್ಳುವುದರ ಜೊತೆಗೆ ಸಿನಿಮಾ ರಾಷ್ಟ್ರ ಪ್ರಶಸ್ತಿಯನ್ನು ಸಹ ಪಡೆದುಕೊಂಡಿತ್ತು.

    ಅಭಿಷೇಕ್ ತಿಥಿ ಸಿನಿಮಾದ ನಂತರ ತರ್ಲೆ ವಿಲೇಜ್, ಏನ್ ನಿನ್ನ ಪ್ರಾಬ್ಲಂ ಮತ್ತು ಹಳ್ಳಿ ಪಂಚಾಯ್ತಿ ಚಿತ್ರಗಳಲ್ಲಿ ನಟಿಸಿದ್ದಾರೆ.

    ಮೂಲತಃ ಮಂಡ್ಯದ ಹುಲಿಕೆರೆ ಕೊಪ್ಪಲು ಗ್ರಾಮದವರಾದ ಅಭಿಷೇಕ್, ಅಕ್ಕನ ಮಗಳು ಹೊಂಬಾಳೆಯನ್ನು ಮದುವೆಯಾಗಿದ್ದಾರೆ. ಅಭಿಷೇಕ್ ಮದುವೆಗೆ ಕಲಾವಿದರು, ಸ್ನೇಹಿತರು, ಸಂಬಂಧಿಕರು ಆಗಮಿಸಿ ಶುಭಕೋರಿದರು.