Tag: actor Chetan

  • ಅರ್ಹತೆ ಇಲ್ಲದವರಿಗೆ ಬಿಪಿಎಲ್ ಕಾರ್ಡ್ ಸಿಕ್ತಿದೆ, ಸರ್ಕಾರ ಪರಿಷ್ಕರಣೆ ಮಾಡಬೇಕು: ನಟ ಚೇತನ್

    ಅರ್ಹತೆ ಇಲ್ಲದವರಿಗೆ ಬಿಪಿಎಲ್ ಕಾರ್ಡ್ ಸಿಕ್ತಿದೆ, ಸರ್ಕಾರ ಪರಿಷ್ಕರಣೆ ಮಾಡಬೇಕು: ನಟ ಚೇತನ್

    – ರೈತರ ಜಮೀನು ಕಿತ್ಕೊಂಡು ಇನ್ನೊಂದು ಏರ್‌ಪೋರ್ಟ್ ಬೇಕಾ?

    ಬೀದರ್: ಬಿಪಿಎಲ್ ಕಾರ್ಡ್ (BPL Card) ಯಾರಿಗೆ ಸಿಗಬೇಕೊ ಅವರಿಗೆ ಸಿಕ್ಕಿಲ್ಲ, ಅರ್ಹತೆ ಇಲ್ಲದವರಿಗೆ ಬಿಪಿಎಲ್ ಕಾರ್ಡ್ ಸಿಗುತ್ತಿದೆ. ಹೀಗಾಗಿ ಮೊದಲು ಬಿಪಿಎಲ್ ಕಾರ್ಡ್‌ಗಳನ್ನು ಸರ್ಕಾರ ಪರಿಷ್ಕರಣೆ ಮಾಡಬೇಕು ಎಂದು ನಟ ಚೇತನ್ (Actor Darshan) ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಜಿಲ್ಲೆಯಲ್ಲಿ ಮಾತಾನಾಡಿದ ಅವರು, ಒಂದು ತಿಂಗಳ ಹಿಂದೆ ಸರ್ಕಾರ ಬಿಪಿಎಲ್ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತಾರೆ ಎಂದಿದ್ದರು. ಆದರೆ ಇನ್ನೂ ಮಾಡಿಲ್ಲ. ಪರಿಷ್ಕರಣೆ ಮಾಡಿದರೆ ರೇಷನ್ ಕಾರ್ಡ್ ವಿಚಾರದಲ್ಲಿ ಏನಾಗಿದೆ ಎಂದು ಗೊತ್ತಾಗುತ್ತದೆ. ಆದರೆ ನಮಗೆ ಸಮಸ್ಯೆಯಾಗುತ್ತಿರುವುದು ಸರ್ಕಾರದ ನಿರಾಸಕ್ತಿ, ಸಮಸ್ಯೆಗೆ ಪರಿಹಾರ ನೀಡಬೇಕು ಎಂಬ ಮನಸ್ಥಿತಿ ಸರ್ಕಾರದಲ್ಲಿ ಇಲ್ಲ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: BBK 11: ನಾಮಿನೇಷನ್‌ನಲ್ಲಿ ಒಡೆದ ಒಗ್ಗಟ್ಟು- ತ್ರಿವಿಕ್ರಮ್‌ ಮೇಲೆ ಉಗ್ರಂ ಮಂಜು ಕೆಂಡ

    ಇದು ಬಿಟ್ಟು ಬರೀ ವೈಯಕ್ತಿಕ ಟೀಕೆ ಮಾಡುವುದೆ ಆಗಿದೆ. ವೈಯಕ್ತಿಕ ಪ್ರತಿಷ್ಠೆಗಾಗಿ ರಾಜಕೀಯ ಮಾಡಿದರೆ ಉತ್ತಮ ಕೆಲಸಗಳು ಆಗಲ್ಲ. ಉಳ್ಳವರ ಬಳಿ ಬಿಪಿಎಲ್ ಕಾರ್ಡ್‌ಗಳು ಇದ್ದರೆ, ಅದನ್ನು ಕಿತ್ತುಕೊಂಡು ಬಂದು ಇಲ್ಲದವರಿಗೆ ಸರ್ಕಾರ ನೀಡಬೇಕು. ಪರಿಷ್ಕರಣೆ ಜೊತೆಗೆ ರೇಷನ್ ಕಾರ್ಡ್‌ಗಳ ಬಗ್ಗೆ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

    ಇನ್ನೂ ವಕ್ಫ್‌ನಿಂದ ರೈತರ ಜಮೀನು ಪಹಣಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ವಕ್ಫ್ ಜಮೀನು ಅಲ್ಲಾಗೆ ಸೇರಿದ್ದು ಎಂದು ಹೇಳುತ್ತಾರೆ. ಯಾವ ಉದ್ದೇಶಕ್ಕಾಗಿ ಜಾಗ ದಾನ ಮಾಡಿರಬಹುದು ಗೊತ್ತಿಲ್ಲ. ಆದರೆ ವಕ್ಫ್ ಜಾಗ ಕೂಡಾ ಸರ್ಕಾರದಾಗಿದ್ದು, ಸರ್ಕಾರದ ಜಾಗ ಅಂದ್ರೆ ಅದು ನಮ್ಮ ಜನರ ಜಾಗ ಎಂದರ್ಥ. ರೈತರ ಭೂಮಿ ಅಂದರೆ ಅದು ಬಹಳ ಸೂಕ್ಷ್ಮವಾದ ವಿಚಾರ. ಬೆಂಗಳೂರಿನಲ್ಲಿ ಎರಡನೇ ಏರ್‌ಪೋರ್ಟ್ ಮಾಡುವುದಕ್ಕೆ 4,500 ಎಕರೆ ರೈತರ ಜಮೀನು ಕಿತ್ತುಕೊಳ್ಳುತ್ತಿದ್ದು, ಬಂಡವಾಳಶಾಹಿ ರಾಜಧಾನಿಯಲ್ಲಿ ತಾಂಡವಾಡುತ್ತಿದೆ. ರೈತರ ಭೂಮಿ ಕಿತ್ತುಕೊಂಡು ಭೂಮಾಫಿಯಾಗಳು ಬೆಳೆಯುತ್ತವೆ. ಆದರೆ ರೈತರ ಜಮೀನು ಕಿತ್ತುಕೊಂಡು ಇನ್ನೊಂದು ಏರ್‌ಪೋರ್ಟ್ ಬೇಕಾ? ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಅರ್ಹರ ರೇಷನ್‌ ಕಾರ್ಡ್‌ ರದ್ದಾಗಿದ್ರೆ ಮರು ಅರ್ಜಿ ಸಲ್ಲಿಕೆಗೆ ವ್ಯವಸ್ಥೆ ಮಾಡ್ತೀವಿ: ಮುನಿಯಪ್ಪ

  • ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗಲ್ಲ, ಮತ್ತೆ ಮೋದಿಯೇ ಪ್ರಧಾನಿ – ನಟ ಚೇತನ್

    ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗಲ್ಲ, ಮತ್ತೆ ಮೋದಿಯೇ ಪ್ರಧಾನಿ – ನಟ ಚೇತನ್

    ಮಡಿಕೇರಿ: ಎಕ್ಸಿಟ್‌‌ ಪೋಲ್‌ನಲ್ಲಿ (Exit Poll) 370ಕ್ಕೂ ಅಧಿಕ ಸ್ಥಾನಗಳೊಂದಿಗೆ ಎನ್‌ಡಿಎ ಅಧಿಕಾರಕ್ಕೆ ಬರುತ್ತದೆ. ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್‌ (Actor Chetan) ಹೇಳಿದ್ದಾರೆ.

    ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ (Modi) ಅವರ ಬ್ರ್ಯಾಂಡ್‌ ಕಡಿಮೆ ಆಗಿರಬಹುದು. ಮೋದಿಯನ್ನು ಇನ್ನಷ್ಟು ಜನರು ಪ್ರಶ್ನೆ ಮಾಡಬಹುದು, ಹೋರಾಟಗಳು ಸಹ ಹೆಚ್ಚಾಗಬಹುದು. ಆದ್ರೆ ಎಕ್ಸಿಟ್‌ ಪೋಲ್‌ ಅಂಕಿ-ಅಂಶಗಳ ಪ್ರಕಾರ ಎನ್‌ಡಿಎ ಅಧಿಕಾರಕ್ಕೆ ಬರುತ್ತೆ, ಮೋದಿಯೇ ಪ್ರಧಾನಿಯಾಗ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ‘ಮಾರ್ಟಿನ್’, ‘ದೇವರ’ ಅಖಾಡಕ್ಕೆ ತಲೈವ ಎಂಟ್ರಿ- ರಜನಿಕಾಂತ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್

    ಚುನಾವಣೋತ್ತರ ಸಮೀಕ್ಷೆಗಳನ್ನು ನೋಡಿದ್ರೆ, ಎಲ್ಲಾ ಸಮೀಕ್ಷೆ ಒಂದೇ ರೀತಿಯಿದ್ದು, ಯಾವುದೇ ಗೊಂದಲಗಳು ಇರುವುದಿಲ್ಲ. ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗುವುದಿಲ್ಲ. 2004ರ ಸಮೀಕ್ಷೆಯಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿ ಬರುತ್ತದೆ ಅಂತ ಹೇಳಲಾಗಿತ್ತು. ಈ ಬಾರಿಯೂ ಬಿಜೆಪಿ 2019ರ ಚುನಾವಣೆಗಿಂತ ಹೆಚ್ಚಿನ ಫಲಿತಾಂಶ ಪಡೆಯಲಿದೆ, ಎನ್‌ಡಿಎ 350+ ಸ್ಥಾನಗಳನ್ನು ಪಡೆಯುತ್ತದೆ ಎಂದು ಹೇಳಿದ್ದಾರೆ.

    ಈಗ ಮೋದಿ ಅವರ ಬ್ರ್ಯಾಂಡ್‌ ಕಡಿಮೆಯಾಗಿದೆ. 2014-2019ರಲ್ಲಿ ಇದ್ದ ಮೋದಿ ಅಲೆ ಈಗ ಇಲ್ಲ. ಆದ್ರೂ ಬಿಜೆಪಿ ದೊಡ್ಡ ಮಟ್ಟದ ಫಲಿತಾಂಶ ಬರಲಿದೆ. ಮಂಗಳವಾರದ ವರೆಗೆ ಕಾದು ನೋಡಬೇಕು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಕುರಾನ್‌ ಅಪವಿತ್ರದ ಆರೋಪ- ಪಾಕ್‌ನಲ್ಲಿ ಕ್ರಿಶ್ಚಿಯನ್‌ ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ, ಸಾವು

  • ಮಡಿ, ಮೈಲಿಗೆ ಹೆಸರಲ್ಲಿ ಬ್ರಾಹ್ಮಣ್ಯ ನಮ್ಮನ್ನು ಕೀಳಾಗಿ ಮಾಡಿದೆ: ನಟ ಚೇತನ್‌

    ಮಡಿ, ಮೈಲಿಗೆ ಹೆಸರಲ್ಲಿ ಬ್ರಾಹ್ಮಣ್ಯ ನಮ್ಮನ್ನು ಕೀಳಾಗಿ ಮಾಡಿದೆ: ನಟ ಚೇತನ್‌

    ಮಡಿಕೇರಿ: ಕಳೆದ 3,500 ವರ್ಷಗಳಿಂದಲೂ ಮಡಿ ಮೈಲಿಗೆ ಹೆಸರಿನಲ್ಲಿ ಬ್ರಾಹ್ಮಣ್ಯ ನಮ್ಮನ್ನು ಕೀಳಾಗಿ ಮಾಡಿದೆ, ಕೆಳಸ್ತರಲ್ಲಿಟ್ಟಿದೆ. ಇದನ್ನು ನಾವು ಒಪ್ಪುವುದಿಲ್ಲ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಕಿಡಿ ಕಾರಿದ್ದಾರೆ.

    ಮಡಿಕೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಾಹ್ಮಣ್ಯ ನಮ್ಮನ್ನು ಕೀಳಾಗಿ ಮಾಡಿದೆ. ನಮಗೆ, ಬುದ್ಧ, ಬಸವ, ಅಂಬೇಡ್ಕರರು ಹೇಳಿದಂತೆ ಸಮಾನತೆ ಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕೊಟ್ಟ ಬೊಕ್ಕೆ ಬಿಸಾಕಿ ಸಿದ್ದರಾಮಯ್ಯ ಕೋಪ ಮಾಡಿಕೊಂಡಿದ್ದು ಏಕೆ?

    ಆರ್ಯನ್ನರ ಡಿಎನ್‌ಎ ನೋಡಿದರೆ ಸಾಕು ವಲಸೆ ಬಂದವರೆಂದು ತಿಳಿಯುತ್ತದೆ. ಅವರು ಇರಾನ್‌, ಪರ್ಷಿಯನ್‌ ಹಾಗೂ ಮಧ್ಯ ಏಷ್ಯಾದಿಂದ ಬಂದವರು. ಆರ್ಯನ್‌, ಬ್ರಾಹ್ಮಣ್ಯ, ಸಂಸ್ಕೃತ ವೇದ ಇವೆಲ್ಲವೂ ಪರದೇಶದ್ದು. ಭಾರತದಲ್ಲಿ ಹುಟ್ಟಿದ್ದು ಬೌದ್ಧ ಧರ್ಮ,  ಬಸವ, ಅಂಬೇಡ್ಕರ್‌, ಸಿಖ್‌, ಪೆರಿಯಾರ್‌ ಧರ್ಮಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: RSS ಬಗ್ಗೆ ಸಿದ್ದರಾಮಯ್ಯಗೆ 1 ಪರ್ಸೆಂಟ್ ಅಷ್ಟೂ ಗೊತ್ತಿಲ್ಲ: ಎಸ್.ಟಿ.ಸೋಮಶೇಖರ್ ತಿರುಗೇಟು

    ಹಿಂದಿನಿಂದಲೂ ಬ್ರಾಹ್ಮಣ್ಯೀಕರಣದಿಂದ ದೇಶದ ಮೂಲ ನಿವಾಸಿಗಳಿಗೆ ಅನ್ಯಾಯವಾಗಿದೆ. ಮೇಲು, ಕೀಳು ಎಂಬ ಜಾತಿ ವ್ಯವಸ್ಥೆಯನ್ನು ಹುಟ್ಟು ಹಾಕಿ ಮೂಲ ನಿವಾಸಿಗಳ ಶೋಷಣೆ ಮಾಡುತ್ತಿದೆ. ಅದನ್ನು ಸರಿಪಡಿಸಬೇಕಾದ ಅಗತ್ಯವಿದೆ. ಮೂಲ ನಿವಾಸಿಗಳು ಅಂದರೆ ಎಸ್ಸಿ, ಎಸ್ಟಿ, ಓಬಿಸಿ ಅಲ್ಪಸಂಖ್ಯಾತರು. ಈ ದೇಶದ ಬಹುಜನರಿಗೆ ನ್ಯಾಯ ದೊರಕಬೇಕಾಗಿದೆ. ಮೇಲ್ವರ್ಗದ ಗಂಡಸರೇ ನಮ್ಮನ್ನು ಅಳುತ್ತಿದ್ದಾರೆ. ಅವರಿಂದ ಬ್ರಾಹ್ಮಣ್ಯದ ಅಂಶಗಳು ಹೇರಲ್ಪಟ್ಟು ಶೋಷಣೆ ನಡೆಯುತ್ತಿದೆ. ಇದನ್ನು ತಪ್ಪಿಸಬೇಕಾದರೆ ದೇಶದಲ್ಲಿ ದೊಡ್ಡ ಸಂಘಟನೆ ಆಗಬೇಕಾಗಿದೆ ಎಂದು ಕರೆ ನೀಡಿದರು.

    Siddaramaiah

    ಆರ್ಯನ್ನರು ಪಶ್ಚಿಮ ಏಷ್ಯಾದಿಂದ ಬಂದಿರುವವರು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಯಲ್ಲಿ ಸತ್ಯವಿದೆ. ಆರ್ಯರು 3,500 ವರ್ಷಗಳ ಹಿಂದೆ ಭಾರತಕ್ಕೆ ವಲಸೆ ಬಂದವರು. ಸೌರಾಷ್ಟ್ರೀಕರಣದಿಂದ ಪ್ರಭಾವಿತರಾಗಿ ಬಂದಿದ್ದಾರೆ. ಅದಕ್ಕೆ ದಾಖಲೆ, ಅಂಕಿ-ಅಂಶ, ಇತಿಹಾಸವಿದೆ. ಅದನ್ನು ಯಾರು ಬದಲಾಯಿಸಲು ಸಾಧ್ಯವಿಲ್ಲ. ಆ ಸತ್ಯ ಇತಿಹಾಸ ನಮಗೆ ಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ತಾಕತ್ತಿದ್ದರೆ SDPIನ್ನು ನಿಷೇಧ ಮಾಡಲಿ: ದಿನೇಶ್ ಗುಂಡೂರಾವ್

    ನಮಗೆ ರಾಜಕಾರಣಕ್ಕಾಗಿ ಹೇಳುವ ಸುಳ್ಳು ಇತಿಹಾಸ ನಮಗೆ ಬೇಕಾಗಿಲ್ಲ. ಹಾಗೆಂದ ಮಾತ್ರಕ್ಕೆ ಅವರನ್ನು ಇಲ್ಲಿಂದ ಓಡಿಸಬೇಕು ಎಂದು ಹೇಳಲು ಸಾಧ್ಯವಿಲ್ಲ. ಅವರೆಲ್ಲರೂ ಈ ದೇಶದ ನಾಗರಿಕರೇ, ಅವರೆಲ್ಲರೂ ಇಲ್ಲೇ ಬದುಕಬೇಕಾಗಿದೆ.

  • ಬ್ರಾಹ್ಮಣ್ಯದ ವಿರುದ್ಧ ಹೇಳಿಕೆ ಕೇಸ್ – ನಟ ಚೇತನ್‌ಗೆ ಮತ್ತೆ ಸಮನ್ಸ್‌

    ಬ್ರಾಹ್ಮಣ್ಯದ ವಿರುದ್ಧ ಹೇಳಿಕೆ ಕೇಸ್ – ನಟ ಚೇತನ್‌ಗೆ ಮತ್ತೆ ಸಮನ್ಸ್‌

    ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆಂಬ ಆರೋಪದ ಮೇಲೆ ಈಗಷ್ಟೇ ಬಂಧನಕ್ಕೊಳಗಾಗಿದ್ದ ನಟ ಚೇತನ್‌ಗೆ ಮೇ 31ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

    ಕಳೆದ ವರ್ಷ ಬ್ರಾಹ್ಮಣ್ಯದ ವಿರುದ್ಧ ಹೇಳಿಕೆ ನೀಡಿದ್ದರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆ 2ನೇ ಬಾರಿಗೆ ಸಮನ್ಸ್ ನೀಡಿದೆ.  ಇದನ್ನೂ ಓದಿ: ಬ್ರಾಹ್ಮಣ್ಯದ ವಿರುದ್ಧ ಪೋಸ್ಟ್ – ನಾಳೆ ನಟ ಚೇತನ್ ವಿಚಾರಣೆ

    IPC (ಭಾರತೀಯ ದಂಡ ಸಂಹಿತೆ) ಸೆಕ್ಷನ್ 295A (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು), ಸೆಕ್ಷನ್ 153(1)C (ಹಗೆತನದ ಭಾವನೆಗಳು ಮೂಡುವಂತೆ ಪ್ರತಿಪಾದನೆ ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಇದೇ ಮೇ 31ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

    ಇದನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ನಟ ಚೇತನ್, ನಾನು ಅವರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2021ರ ಜೂನ್ 16ರಂದು ವಿಚಾರಣೆಗೆ ಹಾಜರಾಗಿದ್ದರು. ಇದೀಗ ಮತ್ತೆ ಸಮನ್ಸ್ ಬಂದಿದ್ದು, 2ನೇ ಬಾರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಇದನ್ನೂ ಓದಿ: ಕನ್ನಡ ಸಿನಿಮಾ ಕಳಪೆ ಎಂದ ನೆಟ್ಟಿಗ – ಚೇತನ್ ಬೆಂಬಲ, ರಕ್ಷಿತ್ ಶೆಟ್ಟಿ ಕಿಡಿ

    ಹಿನ್ನೆಲೆ ಏನು?: ನಟ ಚೇತನ್ ಬ್ರಾಹ್ಮಣ್ಯದ ವಿರುದ್ಧ ಅವಹೇಳನವಾಗಿ ಮಾತನಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯ ಹಾಳು ಮಾಡಿ, ಜಾತಿ ಜಾತಿಗಳ ನಡುವೆ ಗಲಭೆ ಉಂಟು ಮಾಡಲು ಪ್ರಚೋದನೆ ನೀಡಿದ್ದಾರೆ. ಅವರ ಹೇಳಿಕೆಗಳು ಯು ಟ್ಯೂಬ್ , ಫೇಸ್ ಬುಕ್ ನಲ್ಲಿ ವೈರಲ್ ಆಗಿವೆ ಎಂದು ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ದೂರು ನೀಡಿದ್ದರು. ದೂರು ಸಂಬಂಧ ಎಫ್‌ಐಆರ್ ದಾಖಲಿಸಿದ್ದ ಬಸವನಗುಡಿ ಪೊಲೀಸರು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ನೋಟಿಸ್ ನೀಡಿದ್ದರು.

    ಈ ನೋಟಿಸ್‌ನಲ್ಲಿ ಬ್ರಾಹ್ಮಣ್ಯ, ಪುರೋಹಿತ ಶಾಹಿ, ಬ್ರಾಹ್ಮಣ ವಿರೋಧವಾಗಿ ಮಾತಾಡಿರುವ ವೀಡಿಯೋ ನಿಮ್ಮದೇನಾ? ನಿಮ್ಮ ಪಾಸ್ಪೋರ್ಟ್ ನಂಬರ್ ಏನು? ವೀಸಾ ಮಾಹಿತಿ ತಿಳಿಸಿ? ಶ್ರೇಣಿಕೃತ ಅಸಮಾನತೆಯ ವ್ಯವಸ್ಥೆಯಿಂದ ಪುರೋಹಿತ ಶಾಹಿ ವರ್ಗದವರಿಗೆ ಹೇಗೆ ಲಾಭವಾಗುತ್ತದೆ? ಹೀಗೆ 36 ಪ್ರಶ್ನೆಗಳನ್ನ ಕೇಳಿ ಉತ್ತರ ಪಡೆದಿದ್ದರು. ಇದನ್ನೂ ಓದಿ: ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ವಿಚಾರಣೆ ಮುಗಿದ ಬಳಿಕ, ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಜಾತಿ, ಜನಾಂಗದ ವಿರುದ್ಧ ಹೋರಾಟ ಮಾಡುತ್ತಲ್ಲ. ಕೆಲವರು ಹುಟ್ಟಿದ ತಕ್ಷಣ ಶ್ರೇಷ್ಠ, ಕೆಲವರು ಕೀಳು ಅಂಥ ಮಾಡಬಾರದು. ಬೇಧ ಭಾವದ ವಿರುದ್ಧ ಹೋರಾಟ ಮಾಡುತ್ತೀವಿ. ಈ ಹೋರಾಟವನ್ನು ಮುಂದುವರಿಸುತ್ತೇವೆ. ನಮಗೆ ನ್ಯಾಯ ಸಿಗುತ್ತೆ. ವಿಚಾರಣೆಗೆ ಅಗತ್ಯವಿದ್ದಲ್ಲಿ ಮತ್ತೆ ಬರುತ್ತೇನೆ. 18ನೇ ತಾರೀಖು ಮತ್ತೆ ಬರುವುದಕ್ಕೆ ಹೇಳಿದ್ದಾರೆ. ಎಲ್ಲಾ ಪ್ರಶ್ನೆಗಳಿಗೂ ಸಂಪೂರ್ಣ ಉತ್ತರ ಕೊಡುತ್ತೇನೆ. ತನಿಖೆಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುತ್ತೇನೆ ಎಂದು ಚೇತನ್ ಹೇಳಿದ್ದರು.

  • ಹಲಾಲ್ ಕಟ್ : ನಟ ಚೇತನ್ ಪ್ರತಿಕ್ರಿಯೆಯೇ ಭಿನ್ನ

    ಹಲಾಲ್ ಕಟ್ : ನಟ ಚೇತನ್ ಪ್ರತಿಕ್ರಿಯೆಯೇ ಭಿನ್ನ

    ರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿದ್ಯಮಾನಗಳಿಗೂ ನಟ, ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸುತ್ತಿದ್ದಾರೆ. ಈ ಕಾರಣಕ್ಕಾಗಿ ಅವರು ಒಂದೊಂದು ಸಲ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಾರೆ. ಈ ಸಲ ಅವರು ‘ಹಲಾಲ್’ ಕಟ್ ಮತ್ತು ‘ಜಟ್ಕಾ’ ಕಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕೊಲ್ಲುವ ಮಾದರಿಗಳ ಬಗ್ಗೆ ಹೋರಾಡುವ ಬದಲು, ಜೀವ ರಕ್ಷಣೆಯ ಕೆಲಸ ಮಾಡಬೇಕು ಅಲ್ಲವಾ? ಎಂದು ಪರೋಕ್ಷವಾಗಿ ಹಿಂದೂ ಸಂಘಟನೆಗಳ ಕುರಿತು ಮಾತನಾಡಿದ್ದಾರೆ.  ಇದನ್ನೂ ಓದಿ : ಕಂಗನಾ ರಣಾವತ್ ಶೋನಲ್ಲಿ ಕರ್ಮ ಕರ್ಮ : ಶರ್ಟ್ ಬಿಚ್ಚಿತೀನಿ ಅಂದ ಮಾದಕ ನಟಿ ಪೂನಂ

    ಹಲಾಲ್ ಕಟ್ ನಿಷೇಧಿಸಬೇಕು ಎಂಬ ಹೋರಾಟ ಕರ್ನಾಟಕದಲ್ಲಿ ತೀವ್ರಗೊಂಡಿದೆ. ಹಲಾಲ್ ಆಹಾರಗಳನ್ನು ಹಿಂದೂಗಳು ಕೊಳ್ಳದಿರುವಂತೆ ಹಿಂದೂಪರ ಸಂಘಟನೆಗಳು ಬೀದಿಗೆ ಇಳಿದಿವೆ. ಈ ಸಂದರ್ಭದಲ್ಲಿ ನಟ ಚೇತನ್ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ತಮ್ಮ ಫೇಸ್ ಬುಕ್ ಖಾತೆಯಲ್ಲಿ “ಕರ್ನಾಟಕದಲ್ಲಿ ಹಿಂದುತ್ವ ಸಂಘಟನೆಗಳು ಹಲಾಲ್ ಕಟ್ ಮಾಂಸ ಮಾರಾಟಗಾರರನ್ನು ನಿಷೇಧಿಸಲು ಜಟ್ಕಾ ಕಟ್ ಮಾಂಸವನ್ನು ಒತ್ತಾಯಿಸಿ ದಂಗೆ ಎಬ್ಬಿಸುತ್ತಿದ್ದಾರೆ. ನಾವು ಕೊಲ್ಲುವ ಮಾರ್ಗಗಳ ಬಗ್ಗೆ ಹೋರಾಡುವ ಬದಲು, ಹೆಚ್ಚಿನ ಜೀವಗಳನ್ನು ರಕ್ಷಿಸುವ ಕೆಲಸ ಮಾಡಬೇಕು ಅಲ್ಲವೆ? ಸದ್ಯದ ಪರಿಸ್ಥಿತಿಯಲ್ಲಿ ಬುದ್ಧನ ಅಹಿಂಸೆಯ ಅಗತ್ಯವಿದೆಯೇ ಹೊರತು, ಕೋಮು ದ್ವೆಷದ ಅಗತ್ಯವಿಲ್ಲ” ಎಂದು ಬರಹದ ಮೂಲಕ ತಿವಿದಿದ್ದಾರೆ. ಇದನ್ನೂ ಓದಿ : ಸಿನಿಮಾ ಶೀರ್ಷಿಕೆ ಮೂಲಕ ಅಪ್ಪುನ ನೆನಪಿಸಿಕೊಂಡ ಗೋಲ್ಡನ್ ಸ್ಟಾರ್ : ಗಣಿ-ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ’ ಟೈಟಲ್

    ನಟ ಚೇತನ್ ಮೊನ್ನೆಯಷ್ಟೇ ಹಿಜಬ್ ಕುರಿತು ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ನ್ಯಾಯಾಧೀಶರ ವಿರುದ್ಧ ಮಾನಹಾನಿ ಆಗುವಂತಹ ಬರಹವನ್ನು ಟ್ವಿಟ್ ಮಾಡಿದರು ಎನ್ನುವ ಕಾರಣಕ್ಕಾಗಿ ಜೈಲಿಗೂ ಹೋಗಿ ಬಂದರು. ಅಲ್ಲದೇ ಇವರನ್ನು ದೇಶ ಬಿಡಿಸುವಂತಹ ಕೆಲಸಗಳು ನಡೆಯುತ್ತವೆ ಎಂದಾಗ, ಅದೆಲ್ಲವೂ ಸುಳ್ಳು, ನನ್ನ ಹೋರಾಟ ನಿರಂತರ ಎನ್ನುವ ಮೂಲಕ ತಮ್ಮ ಮಾತಿಗೆ ಬದ್ಧರಾಗಿಯೇ ಉಳಿಯುತ್ತಿದ್ದಾರೆ.

  • ನಟ ಚೇತನ್ ಗೆ ಬೆದರಿಕೆ ಕರೆ ಮಾಡ್ತಿರೋದು ಯಾರು?

    ನಟ ಚೇತನ್ ಗೆ ಬೆದರಿಕೆ ಕರೆ ಮಾಡ್ತಿರೋದು ಯಾರು?

    ಸಾಮಾಜಿಕ ಹೋರಾಟಗಾರ, ನಟ ಚೇತನ್ ಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ. ಅದರಲ್ಲೂ ಸೋಷಿಯಲ್ ಮೀಡಿಯಾದಲ್ಲಿ ರಾಶಿ ರಾಶಿ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿರುವ ಕುರಿತು ಅವರು ಮಾತನಾಡಿದ್ದಾರೆ.

    “ಒಂದು ಸಂಘಟನೆ, ಒಂದು ವ್ಯಕ್ತಿಯಂಥ ಹೇಳುವುದು ಕಷ್ಟವಾಗತ್ತೆ. ಅಷ್ಟೊಂದು ಬೆದರಿಕೆಯ ಕರೆಗಳು ಬರುತ್ತಿವೆ. ನನ್ನ ಹತ್ತಿರ ಎಲ್ಲ ದಾಖಲೆಗಳನ್ನೂ ಇಟ್ಟುಕೊಂಡಿದ್ದೇನೆ. ಆಧಾರವಿಲ್ಲದೇ ನಾನು ಯಾವತ್ತೂ ಮಾತನಾಡಿಲ್ಲ. ಸೂಕ್ತ ರೀತಿಯಲ್ಲಿ ಎಲ್ಲದಕ್ಕೂ ಉತ್ತರ ಕೊಡುವೆ’ ಎಂದಿದ್ದಾರೆ ಚೇತನ್. ಇದನ್ನೂ ಓದಿ : ಬಾಲಿವುಡ್ ಪಾಪ ತೊಳೆದ ದಿ ಕಾಶ್ಮೀರ್ ಫೈಲ್ಸ್: ಕಂಗನಾ ರಣಾವತ್

    ನ್ಯಾಯಾಧೀಶರ ಬಗ್ಗೆ ಅವಹೇಳನವಾಗಿ ಟ್ವಿಟ್ ಮಾಡಿದ್ದಕ್ಕೆ ಜೈಲಿಗೂ ಹೋಗಿ ಬಂದಿರುವ ಚೇತನ್, ಆ ಸಮಯದಲ್ಲಿ ಸರಕಾರ ಅವರ ಭದ್ರತೆಗಾಗಿ ಕೊಟ್ಟಿದ್ದ ಗನ್ ಮ್ಯಾನ್ ವಾಪಸ್ಸು ಪಡೆದಿತ್ತು. ಈ ಕುರಿತು ಅವರು ಮಾತನಾಡಿದ್ದಾರೆ. ‘ನನಗೆ ಸೂಕ್ತ ಭದ್ರತೆ ಈ ಹೊತ್ತಿನಲ್ಲಿ ಬೇಕಾಗಿದೆ. ಹಾಗಾಗಿ ಪೊಲೀಸ್ ಅಧಿಕಾರಿಗಳ ಜತೆಯೂ ಮಾತನಾಡಿದ್ದೇನೆ. ಕಮಿಷ್ನರ್ ಗೆ ಮನವಿ ಮಾಡಿಕೊಂಡಿದ್ದೇನೆ. ನನಗೆ ಈಗ ಸೂಕ್ತ ಭದ್ರತೆ ಬೇಕಾಗಿದೆ’ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

    ಮೇಲಿಂದ ಮೇಲೆ ಅವರನ್ನು ಗಡಿಪಾರು ಮಾಡುವಂತಹ ವಿಷಯ ಪ್ರಸ್ತಾಪ ಆಗುತ್ತಿದೆ. ಈ ಕುರಿತು ನನಗೇನೂ ಗೊತ್ತಿಲ್ಲ ಎಂದಿರುವ ಚೇತನ್, ಅದು ಕೇವಲ ಗಾಳಿ ಸುದ್ದಿ ಎಂದು ಪ್ರತಿಕ್ರಿಯಿಸಿದ್ದಾರೆ.

  • ಜೈಲುವಾಸಕ್ಕೆ ಅಮೆರಿಕಾದಲ್ಲೇ ತಾಲೀಮು ಮಾಡಿದ್ದರಂತೆ ನಟ ಚೇತನ್

    ಜೈಲುವಾಸಕ್ಕೆ ಅಮೆರಿಕಾದಲ್ಲೇ ತಾಲೀಮು ಮಾಡಿದ್ದರಂತೆ ನಟ ಚೇತನ್

    ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದ ನಂತರ ನಟ, ಸಾಮಾಜಿಕ ಹೋರಾಟಗಾರ ನಟ ಚೇತನ್ ಮತ್ತೆ ವ್ಯವಸ್ಥೆಯ ವಿರುದ್ಧ ಗುಡುಗುತ್ತಿದ್ದಾರೆ. ಈ ನಡುವೆ ಅವರು ಜೈಲಿನ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ತಾವು ಜೈಲಿನಲ್ಲಿರುವಾಗ ಎದೆಗುಂದಲಿಲ್ಲ. ಕಾರಣ ಅಮೆರಿಕಾದಲ್ಲಿಯೇ ಅದನ್ನು ಅಭ್ಯಾಸ ಮಾಡಿದ್ದೆ ಎಂದು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಣೆಗಾಗಿ ಸದನದಲ್ಲೇ ಆಹ್ವಾನಿಸಿದ ಸ್ಪೀಕರ್ ಕಾಗೇರಿ

    ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಚೇತನ್, 2003ರಲ್ಲಿ ಬೇಸಿಗೆಯ ಸಮಯದಲ್ಲಿ ವಾಷಿಂಗ್ಟನ್, ಡಿಸಿ, ಯು.ಎಸ್.ಎ ನಲ್ಲಿ ಸಂಬಳವಿಲ್ಲದ ಕಾನೂನಿನ ತರಬೇತಿ ವಿದ್ಯಾರ್ಥಿಯಾಗಿದ್ದಾಗ 3 ತಿಂಗಳ ಕಾಲ ನೆಲದ ಮೇಲೆ ಮಲಗುತ್ತಿದ್ದೆ. ನನ್ನ ಕಾಲೇಜಿನ ಸಹಪಾಠಿಗಳು ಇದರ ಬಗ್ಗೆ ಕೇಳಿದಾಗ ‘ಶಿಕ್ಷಣ ಮುಗಿದ ನಂತರ ಕರ್ನಾಟಕದಲ್ಲಿ ನಾನು ಹೋರಾಟಗಾರನಾದಾಗ ಖಂಡಿತವಾಗಿಯೂ ಜೈಲಿಗೆ ಹೋಗುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಈಗಲೇ ಸಿದ್ಧವಾಗಿರುವುದು ಒಳ್ಳೆಯದು ಎಂದು ಹೇಳಿದ್ದೆ. ಎರಡು ದಶಕಗಳ ಹಿಂದಿನ ಅಭ್ಯಾಸ ನನ್ನ ಸೆರೆವಾಸದ ವಾರದಲ್ಲಿ ಉಪಯೋಗಕ್ಕೆ ಬಂತು’ ಎಂದು ಬರೆದಿದ್ದಾರೆ.

    ಅಲ್ಲದೇ ಚೇತನ್ ಗಡಿಪಾರು ಆಗುತ್ತಾರೆ ಎನ್ನುವ ವಿಷಯವೂ ಹರಿದಾಡುತ್ತಿತ್ತು. ಈ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಅದೆಲ್ಲವೂ ಸುಳ್ಳು ಸುದ್ದಿ. ಅಂಥದ್ದು ಏನೂ ಆಗಿಲ್ಲ. ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದೂ ಅವರು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಹೋರಾಟವಂತೂ ನಿಲ್ಲುವುದಿಲ್ಲ. ನಿರಂತರವಾಗಿ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಲೇ ಇರುವುದಾಗಿ ಅವರು ಹೇಳಿದ್ದಾರೆ. ಇದನ್ನೂ ಓದಿ : ಉಪೇಂದ್ರ ಅವರ ಹೊಸ ಸಿನಿಮಾದ ಪೋಸ್ಟರ್ : ಅಸಲಿನಾ? ನಕಲಾ?

    ಹೋರಾಟದ ಜತೆ ಜತೆಗೆ ಹಲವು ಸಿನಿಮಾಗಳಲ್ಲೂ ಚೇತನ್ ನಟಿಸುತ್ತಿದ್ದಾರೆ. ಕನ್ನಡದಲ್ಲಿ ಮಾತ್ರವಲ್ಲ, ತೆಲುಗಿನಲ್ಲೂ ಇವರ ನಟನೆಯ ಹೊಸ ಸಿನಿಮಾ ಚಿತ್ರೀಕರಣವಾಗುತ್ತಿದೆ. ಅಲ್ಲದೇ, ಒಂದು ಸಿನಿಮಾ ಬಿಡುಗಡೆಗೆ ಸಿದ್ಧವಿದೆ.

  • ನಟ ಚೇತನ್ ಗಡಿಪಾರು? : ಹೋರಾಟಗಳೇ ನಟನಿಗೆ ಮುಳುವಾಗುತ್ತಾ..?

    ನಟ ಚೇತನ್ ಗಡಿಪಾರು? : ಹೋರಾಟಗಳೇ ನಟನಿಗೆ ಮುಳುವಾಗುತ್ತಾ..?

    ಸಾಮಾಜಿಕ ಹೋರಾಟಗಾರ, ನಟ ಚೇತನ್ ಅವರನ್ನು ಭಾರತದಿಂದ ಗಡಿಪಾರು ಮಾಡುವಂತಹ ವರದಿ ಸಿದ್ಧವಾಗಿದೆ ಎಂದು ಈ ಹಿಂದೆ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಯನ್ನು ಬ್ರೇಕ್ ಮಾಡಿತ್ತು. ಈಗ ಆ ಸುದ್ದಿ ಮತ್ತೆ ಮುನ್ನೆಲೆಗೆ ಬಂದಿದೆ. ಚೇತನ್ ಸಮುದಾಯಗಳ ನಡುವೆ ಸಾಮರಸ್ಯ ಕದಡುತ್ತಿದ್ದಾರೆ ಎಂದು ಪೊಲೀಸ್ ಇಲಾಖೆಯು ಸರಕಾರಕ್ಕೆ ವರದಿ ನೀಡಿದೆ. ಕರ್ನಾಟಕ ಸರಕಾರವು ಸಿದ್ಧಪಡಿಸಿದ ವರದಿಯನ್ನು, ಕೇಂದ್ರಕ್ಕೆ ಕಳುಹಿಸಲಿ ಹೊರಟಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಕಂಗನಾಳನ್ನು ಹೀರೋಯಿನ್ ಮಾಡಿದ್ದು ಆ ಜ್ಯೋತಿಷಿ: ಅಸಲಿ ಸತ್ಯ ಬಾಯ್ಬಿಟ್ಟ ನಟ ಪ್ರಭಾಸ್

    ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಚೇತನ್ ಉಲ್ಲಂಘನೆ ಮಾಡಿದ್ದಾರೆ ಎಂದು ಪೊಲೀಸ್ ಇಲಾಖೆಯು ಸರಕಾರಕ್ಕೆ ವರದಿ ಸಲ್ಲಿಸಿತ್ತು. ಈಗದು ಕೇಂದ್ರ ಸರಕಾರದ ವಿದೇಶಾಂಗ  ಇಲಾಖೆಗೆ ರವಾನೆ ಆಗಲಿದೆಯಂತೆ.  ಇದನ್ನೂ ಓದಿ: ಎಂಟು ವರ್ಷಗಳ ನಂತರ ಒಂದಾದ ನೀನಾಸಂ ಸತೀಶ್ ಮತ್ತು ಸಿಂಧು

    ಓಸಿಎ ನಿಯಮದ ಪ್ರಕಾರ ಸಾಗರೋತ್ತರ ನಾಗರಿಕರು ಸಾರ್ವಜನಿಕ ಪ್ರತಿಭಟನೆ, ಸರಕಾರದ ವಿರುದ್ಧ ಚಟುವಟಿಕೆ ಮ್ತು ರಾಜಕೀಯ ಚಟುವಟಿಕೆಗಳಲ್ಲೂ ಭಾಗಿಯಾಗುವಂತಿಲ್ಲ. ಚೇತನ್ ಭಾರತಿಯ ಪ್ರಜೆಯಲ್ಲ. ಅಮೆರಿಕದ ಪೌರತ್ವ ಹೊಂದಿದ್ದಾರೆ. ಹೀಗಾಗಿ ಓಸಿಎ ನಿಯಮವನ್ನು ಚೇತನ್ ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎನ್ನುತ್ತಿದೆಯಂತೆ ಪೊಲೀಸ್ ಇಲಾಖೆ ಕೊಟ್ಟ ವರದಿ. ಇದನ್ನೂ ಓದಿ: ಉಪೇಂದ್ರ ಹೊಸ ಸಿನಿಮಾ ಮಾಡಲು ಸ್ಟಾರ್ ನಟಿ ನಯನತಾರಾ ಕಾರಣ : ಏನಿದು ಅಸಲಿ ಗುಟ್ಟು?

    ಈ ಹಿಂದೆ ಚೇತನ್ ಒಂದು ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೇ, ಚೇತನ್ ಸರಕಾರದ ವಿರುದ್ಧ ಸಾಕಷ್ಟು ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಎಲ್ಲವನ್ನೂ ದಾಖಲೆ ಸಮೇತ ವರದಿ ಸಿದ್ಧವಾಗಿದೆಯಂತೆ. ಇದನ್ನೂ ಓದಿ: ಸಮಂತಾ ಯಾಕಿಂಗ್ ಆದೆ? ಗರಂ ಆದ ಅಭಿಮಾನಿಗಳು

    ಈ ಕುರಿತು ಮೊನ್ನೆಯೇ ಮಾಧ್ಯಮಗಳಿಗೆ ಸ್ಪಷ್ಟನೆ ಕೊಟ್ಟಿರುವ ಚೇತನ್, “ಈ ವರದಿ, ಗಡಿಪಾರಿನ ವಿಷಯವೇ ಅವರಿಗೆ ಗೊತ್ತಿಲ್ಲವಂತೆ.

  • ನಟ ಚೇತನ್ ಅಮೆರಿಕಾಗೆ ಗಡಿಪಾರು? : ಆತಂಕದಲ್ಲಿ ಚಿತ್ರ ನಿರ್ಮಾಪಕರು

    ನಟ ಚೇತನ್ ಅಮೆರಿಕಾಗೆ ಗಡಿಪಾರು? : ಆತಂಕದಲ್ಲಿ ಚಿತ್ರ ನಿರ್ಮಾಪಕರು

    ಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು ಅಮೆರಿಕಾಗೆ ಗಡಿಪಾರು ಮಾಡುವಂತೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಿಂದ ಎಡಿಜಿಪಿ ಪ್ರತಾಪ್ ರೆಡ್ಡಿ ಮೂಲಕ ಗೃಹಮಂತ್ರಿ ಕಛೇರಿಯ ಮುಖ್ಯ ಕಾರ್ಯದರ್ಶಿಗೆ ಶಿಫಾರಸ್ಸು ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ. ಸಮುದಾಯ ಒಂದರ ಅವಹೇಳನಕ್ಕೆ ಸಂಬಂಧಿಸಿದಂತೆ ಚೇತನ್ ಮೇಲೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಪೊಲೀಸ್ ಇಲಾಖೆ, ಚೇತನ್ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ. ಹಾಗಾಗಿ ಅವರನ್ನು ಅಮೆರಿಕಾಗೆ ಗಡಿಪಾರು ಮಾಡುವಂತೆ ಶಿಫಾರಸ್ಸು ಮಾಡಿದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದಿದೆ. ಇದನ್ನೂ ಓದಿ : ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ : ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ

    ಅಮೆರಿಕಾಗೆ ಯಾಕೆ?

    ಮೂಲತಃ ಮೈಸೂರಿನವರಾದ ಚೇತನ್ ಕುಟುಂಬ ಅಮೆರಿಕಾದಲ್ಲಿ ವಾಸವಿದೆ. ಚೇತನ್ ಅಮೆರಿಕಾದಲ್ಲೇ ಹುಟ್ಟಿ ಬೆಳೆದಿದ್ದಾರೆ. ಅವರು ಅಲ್ಲಿನ ಪೌರತ್ವ ಪಡೆದಿದ್ದಾರೆ. ಹಾಗಾಗಿ ಅಮೆರಿಕಾಗೆ ಗಡಿಪಾರು ಮಾಡುವಂತೆ ಶಿಫಾರಸ್ಸಿನಲ್ಲಿ ತಿಳಿಸಲಾಗಿದೆಯಂತೆ. ಇದನ್ನೂ ಓದಿ : ಅದ್ಧೂರಿ ಸಮಾರಂಭದಲ್ಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಹೀರೋ ಆಗಿ ಲಾಂಚ್

    ಆತಂಕದಲ್ಲಿ ನಿರ್ಮಾಪಕರು

    ಸದ್ಯ ಚೇತನ್ ಎರಡು ತೆಲುಗು ಮತ್ತು ಒಂದು ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮತ್ತೊಂದು ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇವರು ಅಮೆರಿಕಾಗೆ ಗಡಿಪಾರಾದರೆ, ಸಿನಿಮಾಗಳ ಗತಿಯೇನು? ಎನ್ನುವ ಆತಂಕ ನಿರ್ಮಾಪಕರದ್ದು. ಅಷ್ಟೂ ಸಿನಿಮಾಗಳು ಸೇರಿ ಹದಿನೈದು ಕೋಟಿಗೂ ಹೆಚ್ಚು ಬಂಡವಾಳವನ್ನು ನಿರ್ಮಾಪಕರು ಚೇತನ್ ಮೇಲೆ ಹೂಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ದುನಿಯಾ ವಿಜಯ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

    ಗಡಿಪಾರು ವಿಷ್ಯ ಗೊತ್ತೇ ಇಲ್ಲವಂತೆ

    ತಮ್ಮನ್ನು ಗಡಿಪಾರು ಮಾಡುವಂತೆ ಶಿಫಾರಸ್ಸು ಮಾಡಿರುವ ವಿಷಯ ತಮಗೆ ಗೊತ್ತಿಲ್ಲ ಮತ್ತು ತಮ್ಮ ವಕೀಲರ ಗಮನಕ್ಕೂ ಬಂದಿಲ್ಲ ಎಂದಿದ್ದಾರೆ ಚೇತನ್. ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಹೋರಾಟ ನಿರಂತರವಾಗಿ ಇರಲಿದೆ ಎಂದು ಅವರು ಹೇಳಿದ್ದಾರೆ. ಎರಡು ದಿನಗಳಿಂದ ಇಂಥದ್ದೊಂದು ಸುದ್ದಿ ಭಾರೀ ಸದ್ದು ಮಾಡುತ್ತಿದ್ದರೂ, ಪೊಲೀಸ್ ಇಲಾಖೆಯಾಗಲಿ, ಸರಕಾರವಾಗಲಿ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

  • ಪ್ರಶ್ನೆ ಮಾಡುವುದನ್ನು ನಿಲ್ಲಿಸಲ್ಲ : ಮತ್ತೆ ಗುಡುಗಿದ ನಟ ಚೇತನ್

    ಪ್ರಶ್ನೆ ಮಾಡುವುದನ್ನು ನಿಲ್ಲಿಸಲ್ಲ : ಮತ್ತೆ ಗುಡುಗಿದ ನಟ ಚೇತನ್

    ನ್ಯಾಯಾಧೀಶರ ಕುರಿತು ಟ್ವೀಟ್ ಮಾಡಿದ ಪ್ರಕರಣಕ್ಕೆ ಜೈಲುವಾಸ ಅನುಭವಿಸಿ ಸೋಮವಾರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್, ತಮ್ಮ  ನಿಲುವಿನ ಕುರಿತು ಮತ್ತೆ ಸ್ಪಷ್ಟಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ತಪ್ಪು ಕಂಡಲ್ಲಿ ಮಾತನಾಡುತ್ತೇನೆ. ಮತ್ತಷ್ಟು ಜನರಿಗೆ ತಲುಪಲು ಆ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವೆ. ಯಾವುದೇ ಕಾರಣಕ್ಕೂ ಟ್ವಿಟ್ ಮಾಡುವುದನ್ನು ನಿಲ್ಲಿಸುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ : ಚೇತನ್ ಅಹಿಂಸಾ ಬಿಡುಗಡೆ – ಖುಷ್ ಆದ ಅಭಿಮಾನಿಗಳು

    ಸೋಮವಾರ ಸಂಜೆ ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ನಟ ಚೇತನ್ ಅವರನ್ನು ಅಭಿಮಾನಿಗಳು ಮತ್ತು ಅವರ ತತ್ವವನ್ನು ಮೆಚ್ಚಿಕೊಂಡವರು ಜೈಲು ಮುಂದೆಯೇ ಸ್ವಾಗತಿಸಿದರು. ನೆಚ್ಚಿನ ನಟನ ಪರ ಘೋಷಣೆ ಕೂಗಿದರು. ಪತ್ನಿ ಮೇಘಾ ಕೂಡ ಪತಿಯ ಬಿಡುಗಡೆಗೆ ಹರ್ಷ ವ್ಯಕ್ತ ಪಡಿಸಿದರು. ಇದನ್ನೂ ಓದಿ : ಶಿವರಾತ್ರಿ ವಿಶೇಷ: ತೆರೆಗೆ ಶಿವನಾಗಿ ದರ್ಶನ ಕೊಟ್ಟ ನಟ ಶಿವರು

    ಚೇತನ್ ಬಿಡುಗಡೆಗಾಗಿ ವಕೀಲರಾದ ಬಾಲನ್, ಹರಿರಾಮ್ ಎ, ಕಾಶಿನಾಥ್ ಜೆ.ಡಿ, ರಮೇಶ್, ಪ್ರಸನ್ನ, ಸುನೀಲ್ ಕುಮಾರ್ ಗುನ್ನಾಪುರ ಮತ್ತು ಅವರ ತಂಡ ಸತತವಾಗಿ ಪ್ರಯತ್ನಿಸಿತ್ತು. ಹಾಗಾಗಿ ಚೇತನ್ ಬಿಡುಗಡೆ ಸಂದರ್ಭದಲ್ಲಿ ವಕೀಲರ ತಂಡವೂ ಅಲ್ಲಿತ್ತು.