Tag: actor Duniya Vijay

  • ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ

    ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ

    ದ್ಯ ಕನ್ನಡ ಸಿನಿಮಾರಂಗದಲ್ಲಿ ಯಂಗ್ ಹೀರೋಗಳ ಪರ್ವ ಶುರುವಾಗಿದೆ. ಹೊಸ ನಾಯಕ ನಟರು ಹಾಗೂ ಕಲಾವಿದರು ತಮ್ಮದೇ ಸ್ಟೈಲ್ ಆಫ್ ಆಕ್ಟಿಂಗ್ ನಿಂದಾಗಿ ಇಂಡಸ್ಟ್ರಿಗೆ ಎಂಟ್ರಿ ಕೊಡ್ತಿದ್ದಾರೆ. ಅಂತದ್ದೇ ಸಾಲಿನಲ್ಲಿ ನಿಲ್ಲೋ ನಟ ಶಿಶಿರ್ ಬೈಕಾಡಿ. ಮೊದಲ ಸಿನಿಮಾದಲ್ಲಿಯೇ ಅದ್ಭುತವಾಗಿ ಆಕ್ಟ್ ಮಾಡಿ ಪ್ರೇಕ್ಷಕರಿಂದ ಮಾತ್ರವಲ್ಲದೇ ಸಿನಿಮಾ ಇಂಡಸ್ಟ್ರಿಯಿಂದಲೂ ಸೈ ಎನ್ನಿಸಿಕೊಂಡ ಕಲಾವಿದ.

    ಡೇರ್ ಡೆವಿಲ್ ಮುಸ್ತಾಫ ಸಿನಿಮಾದ ಅಭಿನಯ ಕಂಡು ಶಿಶಿರ್ (Actor Shishir) ಅವರಿಗೆ ಇಂಡಸ್ಟ್ರಿ ಕಡೆಯಿಂದ ಒಳ್ಳೆ ಅವಕಾಶಗಳೇ ಅರಸಿ ಬಂದಿದೆ. ಡೇರ್ ಡೆವಿಲ್ ಚಿತ್ರದ ನಂತರ ದುನಿಯಾ ವಿಜಯ್ (Actor Duniya Vijay) ಅಭಿನಯದ ‘ಲ್ಯಾಂಡ್ ಲಾರ್ಡ್’ ಸಿನಿಮಾದಲ್ಲಿ (Land Lord Movie) ಶಿಶಿರ್ ಉತ್ತಮ ಪಾತ್ರ ಗಿಟ್ಟಿಸಿಕೊಂಡಿದ್ದಾರೆ. ಕ್ಲಾಸ್ ಪಾತ್ರಗಳು ಮಾತ್ರವಲ್ಲದೆ ಮಾಸ್ ಹಾಗೂ ಕಮರ್ಷಿಯಲ್ ಸಿನಿಮಾಗೂ ಶಿಶಿರ್ ಸೂಟ್ ಆಗ್ತಾರೆ ಅನ್ನೋದನ್ನು ಫ್ರೂವ್ ಮಾಡೋದಕ್ಕೆ ಈ ಸಿನಿಮಾ ಮೂಲಕ ಚಾನ್ಸ್ ಸಿಕ್ಕಿದೆ ಸದ್ಯ. ಬಿಡುಗಡೆ ಆಗಿರೋ ಶಿಶಿರ್ ಪೋಸ್ಟರ್ ನಲ್ಲಿರೋ ಲುಕ್ ಕೂಡ ಸಖತ್ ಮಾಸ್ ಅಂಡ್ ಇಂಪ್ರೆಸಿವ್ ಆಗಿದೆ. ಇದನ್ನೂ ಓದಿ: ಹಲಗಲಿ ಚಿತ್ರದ ಫಸ್ಟ್ ರೋರ್ ರಿಲೀಸ್ – ವಾರಿಯರ್ ಪಾತ್ರದಲ್ಲಿ ಧನಂಜಯ್

    ಉತ್ತಮ ಸ್ಟಾರ್ ಕಾಸ್ಟ್ ಇರುವ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ಶಿಶಿರ್ ಅಭಿನಯ ಮಾಡುತ್ತಿದ್ದು ಕಾಟೇರ ಸಿನಿಮಾಗೆ ಕಥೆ ಬರೆದಿದ್ದ ಜಡೇಶ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ ದರ್ಶನ್ ಅವರ ಸಾರಥಿ ಸಿನಿಮಾ ನಿರ್ಮಾಣ ಮಾಡಿದ್ದ ಕೆವಿ ಸತ್ಯಪ್ರಕಾಶ್ ಅವರೆ ಲ್ಯಾಂಡ್ ಲಾರ್ಡ್ ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಮಾತ್ರವಲ್ಲದೇ ಪ್ಯಾನ್ ಇಂಡಿಯಾ ಮಟ್ಟದ ಸಿನಿಮಾದಲ್ಲಿ ಗುರುತಿಸಿಕೊಂಡಿರೋ ಸ್ಟಾರ್ ನಟ, ನಿರ್ದೇಶಕ, ನಿರ್ಮಾಪಕರ ಸಿನಿಮಾದಲ್ಲೂ ಶಿಶಿರ್ ಬೈಕಾಡಿ ಅಭಿನಯ ಮಾಡಿದ್ದು ಶೀಘ್ರದಲ್ಲೇ ಆ ಸಿನಿಮಾ ಅನೌನ್ಸ್ ಮಾಡಲಿದೆ ಸಿನಿಮಾ ಟೀಂ.

    ಸ್ಯಾಂಡಲ್‌ವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡ್ತಿರೋ ಶಿಶಿರ್ ಕಾಲಿವುಡ್ ಅಂಗಳಕ್ಕೂ ಕಾಲಿಟ್ಟಿದ್ದಾರೆ. ತಮಿಳು ಸಿನಿಮಾ ಒಂದರ ಮಾತುಕಥೆ ಮುಗಿಸಿದ್ದು ಪ್ರಿಪ್ರೊಡಕ್ಷನ್ ನಲ್ಲಿ ಸಿನಿಮಾ ಟೀಂ ಬ್ಯುಸಿ ಆಗಿದೆ. ಒಟ್ನಲ್ಲಿ ಒಂದು ಸಿನಿಮಾದ ಉತ್ತಮ ಅಭಿನಯದಿಂದ ಶಿಶಿರ್ ಸಾಲು ಸಾಲು ಸಿನಿಮಾಗಳ ಜೊತೆಗೆ ಒಂದಿಷ್ಟು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡರು. ಶಿಶಿರ್ ಬೈಕಾಡಿ ಇಂಡಸ್ಟ್ರಿಯಲ್ಲಿ ಉತ್ತಮ ಕಲಾವಿದನಾಗಿ ಗುರುತಿಸಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಇದನ್ನೂ ಓದಿ: ದರ್ಶನ್ ಜೈಲಿಗೆ ಹೋಗಿದ್ದು ಬೇಸರ ತಂದಿದೆ, ಅಕ್ಕಪಕ್ಕದವ್ರ ಸಹವಾಸ ಬಿಡ್ಬೇಕು – ರಮ್ಯಾ ಸಾಫ್ಟ್ ಕಾರ್ನರ್

  • ನಟ ದುನಿಯಾ ವಿಜಯ್ ತಾಯಿ ಆರೋಗ್ಯ ಗಂಭೀರ

    ನಟ ದುನಿಯಾ ವಿಜಯ್ ತಾಯಿ ಆರೋಗ್ಯ ಗಂಭೀರ

    ಬೆಂಗಳೂರು: ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ಅವರ ಆರೋಗ್ಯ ಗಂಭೀರವಾಗಿದ್ದು, ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ದುನಿಯಾ ವಿಜಯ್ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದಾರೆ.

    ಕೆಲ ದಿನಗಳ ಹಿಂದಷ್ಟೇ ಕೋವಿಡ್ ನಿಂದ ದುನಿಯಾ ವಿಜಯ್ ಪೋಷಕರು ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ತಾಯಿಯ ಆರೋಗ್ಯ ಹದಗೆಟ್ಟಿದೆ. ಬ್ರೇನ್ ಸ್ಟ್ರೋಕ್ ಆದ ಕಾರಣ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಪ್ರತಿದಿನ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

    ಅಮ್ಮನಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ತಾಯಿ ಮತ್ತೆ ಸಿಗಲ್ಲ, ಅವರು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋದಷ್ಟೇ ನನ್ನ ಆಸೆ. ದಿನಂಪ್ರತಿ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಆದರೆ ಮತ್ತೆ ಆರೋಗ್ಯ ಸರಿಯಾಗುತ್ತೆ ಎಂಬ ವಿಶ್ವಾಸವಿದೆ ಎಂದು ದುನಿಯಾ ವಿಜಯ್ ಹೇಳಿದ್ದಾರೆ.

  • ಮುಗಿಯದ ದುನಿಯಾ ರಗಳೆ – ಮಹಿಳಾ ಆಯೋಗದಿಂದ ವಿಜಿಗೆ ಬುಲಾವ್

    ಮುಗಿಯದ ದುನಿಯಾ ರಗಳೆ – ಮಹಿಳಾ ಆಯೋಗದಿಂದ ವಿಜಿಗೆ ಬುಲಾವ್

    ಬೆಂಗಳೂರು: ನಟ ದುನಿಯಾ ವಿಜಯ್ ವಿರುದ್ಧ ಮಹಿಳಾ ಆಯೋಗದ ಮೆಟ್ಟಿಲೇರಿದ್ದ ಪುತ್ರಿ ಮೋನಿಷಾರ ದೂರಿನ ಮೇರೆಗೆ ಆಯೋಗ ವಿಜಿಗೆ ನೋಟಿಸ್ ನೀಡಿದೆ.

    ಮಹಿಳಾ ಮತ್ತು ಮಕ್ಕಳ ಆಯೋಗಕ್ಕೆ ಕಳೆದ ಕೆಲ ದಿನಗಳ ಹಿಂದೆ ಮನವಿ ಸಲ್ಲಿಸಿದ್ದ ಮೋನಿಷಾರ ದೂರನ್ನು ಸ್ವೀಕರಿಸಿರುವ ಆಯೋಗ ನ. 12 ಅಥವಾ 13 ರಂದು ಆಯೋಗದ ಮುಂದೆ ಖುದ್ದು ಹಾಜರಾಗುವಂತೆ ವಿಜಯ್ ಅವರಿಗೆ ನೋಟೀಸ್ ಜಾರಿ ಮಾಡಿದೆ. ಈ ವೇಳೆ ಅಪ್ಪ ಮಕ್ಕಳ ಮಧ್ಯೆ ಸಂಧಾನ ನಡೆಸುವ ಸಾಧ್ಯತೆ ಇದ್ದು, ವಿಜಿ ಅವರಿಗೆ ಸಂಕಷ್ಟವಾಗಿಯೂ ಪರಿಣಮಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

    ಆಯೋಗದ ಮುಂದೇ ಅಪ್ಪ-ಮಗಳು ಇಬ್ಬರು ಹಾಜರಾಗಲಿದ್ದು, ಇಬ್ಬರಿಗೂ ಕೌನ್ಸಿಲಿಂಗ್ ಮಾಡುವ ಕೆಲಸ ನಡೆಯಲಿದೆ. ಒಂದೊಮ್ಮೆ ವಿಜಿ ಮನವೊಲಿಕೆ ವಿಫಲವಾದರೆ ಆಯೋಗ ವಿಜಿ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯೂ ಇದೆ. ಇದರೆ ಜೊತೆಗೆ ವಿಜಿ ಮಕ್ಕಳ ಮುಂದಿನ ವಿದ್ಯಾಭ್ಯಾಸ ಹಾಗೂ ಮಕ್ಕಳ ಮುಂದಿನ ಭವಿಷ್ಯಕ್ಕೆ ಆರ್ಥಿಕ ಸಹಾಯ ಯಾವ ರೀತಿ ಇರಲಿದೆ ಎಂಬುವುದರ ಬಗ್ಗೆ ಆಯೋಗ ಪರಾಮರ್ಶಿಸಲಿದ್ದು, ವಿಜಿ ಕಡೆಯಿಂದ ಲಿಖಿತವಾಗಿ ಬರೆಸಿಕೊಳ್ಳುವ ಸಾಧ್ಯತೆ ಇದೆ.

    ಅ.30 ರಂದು ವಿಜಯ್ ಅವರ ಪುತ್ರಿ ಮೋನಿಷಾ ಮಹಿಳಾ ಆಯೋಗದಲ್ಲಿ ಅಪ್ಪ-ಅಮ್ಮನ ಗಲಾಟೆಯಲ್ಲಿ ನಮಗೆ ತೊಂದರೆಯಾಗುತ್ತಿದೆ. ಆರ್ಥಿಕವಾಗಿಯೂ ಅಪ್ಪನಿಂದ ಸಹಾಯ ಸಿಗುತ್ತಿಲ್ಲ. ಹೀಗಾಗಿ ಕೂಡಲೇ ಆಯೋಗ ಮಧ್ಯಪ್ರವೇಶ ಮಾಡಿ ಇದನ್ನು ಬಗೆಹರಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದುನಿಯಾ ವಿಜಿ ಮೇಲೆ ಮತ್ತೊಂದು ಪ್ರಕರಣ ದಾಖಲು!

    ದುನಿಯಾ ವಿಜಿ ಮೇಲೆ ಮತ್ತೊಂದು ಪ್ರಕರಣ ದಾಖಲು!

    ಬೆಂಗಳೂರು: ನಟ ದುನಿಯಾ ವಿಜಯ್ ವಿರುದ್ಧ ಪ್ರಕರಣಗಳ ಮೇಲೆ ಪ್ರಕರಣಗಳು ದಾಖಲಾಗುತ್ತಿವೆ. ಪಾಣಿಪುರಿ ಕಿಟ್ಟಿ, ಪುತ್ರಿ ಮೋನಿಕಾ ಕೇಸ್ ಬೆನ್ನಲ್ಲೇ, ವಿಜಿ ಹಾಗೂ ಕುಟುಂಬದವರ ವಿರುದ್ಧ ಶಾಂತಿಭಂಗ ಕೇಸ್ ದಾಖಲಾಗಿದೆ.

    ಹೌದು, ಈ ಬಾರಿ ದುನಿಯಾ ವಿಜಿ, ಇಬ್ಬರು ಪತ್ನಿಯರು, ಮಕ್ಕಳು ಹಾಗೂ ಬಾಡಿಗಾರ್ಡ್ ವಿರುದ್ಧ ಗಿರಿನಗರ ಪೊಲೀಸರು ಶಾಂತಿಭಂಗದ ಕೇಸ್ ದಾಖಲಿಸಿಕೊಂಡಿದ್ದಾರೆ. ಹೀಗಾಗಿ ದುನಿಯಾ ವಿಜಯ್‍ರನ್ನು ಡಿಸಿಪಿ ಅಣ್ಣಮಲೈ ಮುಂದೆ ಹಾಜರು ಪಡಿಸಿಲಿದ್ದಾರಂತೆ.

    ಈ ಹಿಂದೆ ಆಗಿದ್ದೇನು?:
    ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ವಿಜಿ ಮೊದಲ ಪುತ್ರಿ ಮೋನಿಕಾ ತನ್ನ ತಂದೆ ವಿಜಿ, ಚಿಕ್ಕಮ್ಮ ಕೀರ್ತಿ ಗೌಡ ಸೇರಿದಂತೆ ಐವರ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನಾನು ಮನೆಯ ಒಳಗೆ ಹೋಗುವಾಗ ನನ್ನ ತಂದೆ ವಿಜಿ, ಕೀರ್ತಿಗೌಡ, ಹೇಮಂತ್, ವಿನೋದ್ ಹಾಗೂ ಕಾರ್ ಡ್ರೈವರ್ ಮಹಮ್ಮದ್ ಸೇರಿ ನನ್ನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ನನ್ನನ್ನು ಬೈದು ಕಾಲಿನಿಂದ ಹಾಗೂ ಕೆಲವು ಮಾರಕಸ್ತ್ರಗಳಿಂದ ಹೊಡೆದು ಗೋಡೆಗೆ ನನ್ನ ತಲೆಯನ್ನು ಹಿಡಿದು ಹೊಡೆದಿದ್ದಾರೆ ಎಂದು ಮೋನಿಕಾ ದೂರಿನಲ್ಲಿ ಹೇಳಿಕೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 34, 324, 323, 504 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

    ಪುತ್ರಿ ಮೋನಿಕಾ ಪ್ರಕರಣಕ್ಕೂ ಮುನ್ನ ದುನಿಯಾ ವಿಜಿ ಜಿಮ್ ಟ್ರೈನರ್ ಮಾರುತಿಗೌಡ ಹಲ್ಲೆ ಪ್ರಕರಣದಲ್ಲಿ ಸಿಲುಕಿದ್ದರು. ಹೀಗೆ ಒಂದೂವರೇ ತಿಂಗಳಿನಲ್ಲಿ ವಿಜಯ್ ವಿರುದ್ಧ ಒಂದೊಂದೇ ಪ್ರಕರಣಗಳು ದಾಖಲಾಗುತ್ತಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದುನಿಯಾ ವಿಜಿಗೆ ಪೊಲೀಸರಿಂದ ಬುದ್ಧಿ ವಾದ – ಗುರುವಾರವೂ ನಡೆಯಲಿದೆ ವಿಚಾರಣೆ

    ದುನಿಯಾ ವಿಜಿಗೆ ಪೊಲೀಸರಿಂದ ಬುದ್ಧಿ ವಾದ – ಗುರುವಾರವೂ ನಡೆಯಲಿದೆ ವಿಚಾರಣೆ

    ಬೆಂಗಳೂರು: ಪುತ್ರಿಯ ಮೇಲಿನ ಹಲ್ಲೆ ಪ್ರಕರಣದ ವಿಚಾರಣೆಗೆ ಇಂದು ಪೊಲೀಸ್ ಠಾಣೆಗೆ ಹಾಜರಾಗಿದ್ದ ನಟ ದುನಿಯಾ ವಿಜಯ್ ಅವರಿಗೆ ಪೊಲೀಸರು ಬುದ್ಧಿವಾದ ಹೇಳಿದ್ದು, ಪದೇ ಪದೇ ಇಂತಹ ಘಟನೆಗಳು ಪುನರಾವರ್ತನೆ ಆಗುತ್ತಿರುವುದಕ್ಕೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

    ತನ್ನ ಬಟ್ಟೆ ಮತ್ತು ದಾಖಲೆಗಳನ್ನು ತರಲು ತಂದೆ ವಿಜಯ್ ಮನೆಗೆ ಭೇಟಿ ನೀಡಿದ್ದ ಪುತ್ರಿ ಮೋನಿಕಾ ಮೇಲೆ ಹಲ್ಲೆ ನಡೆಸಿದ ದೂರಿಗೆ ಸಂಬಂಧಿಸಿದಂತೆ ಇಂದು ವಿಜಯ್ ಗಿರಿನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಆಗಮಿಸಿದ್ದರು. ಸತತ ಮೂರು ಗಂಟೆಗಳ ಕಾಲ ಪೊಲೀಸರು ವಿಜಯ್ ವಿಚಾರಣೆ ನಡೆಸಿದರು. ಈ ವೇಳೆ ವಿಜಯ್ ಆಪ್ತರಾದ ಹೇಮಂತ್, ಮಹಮ್ಮದ್, ವಿನೋದ್ ಕೂಡ ಹಾಜರಿದ್ದರು.

    ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ವಿಜಯ್, ಮಾಧ್ಯಮಗಳು ಸತ್ಯವನ್ನು ತೋರಿಸಿವೆ. ಆದ್ದರಿಂದ ನಿಮಗೆ ವಂದನೆ ತಿಳಿಸುತ್ತೇನೆ. ನಮ್ಮ ಮನೆಯಲ್ಲಿ ಇದ್ದ ಸಿಸಿಟಿವಿ ಡಿವಿಆರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಪುತ್ರಿ ಮೋನಿಕಾ ಮನೆ ಒಳಗಡೆ ಬಂದಿಲ್ಲ. ಮನೆಯಲ್ಲಿ ಯಾವುದೇ ಗಲಾಟೆ ನಡೆದಿಲ್ಲ. ಪೊಲೀಸರಿಗೆ ನೀಡಿರುವ ದೂರಿನ ಎಫ್‍ಐಆರ್ ನಲ್ಲಿ ತಲೆ ಜಜ್ಜಿದೆ, ಮಾರಕಾಸ್ತ್ರಗಳನ್ನ ಬಳಸಿದ್ದಾರೆ ಎಂದು ದಾಖಲಿಸಿದ್ದಾರೆ. ಈಗ ಲಭ್ಯವಾಗಿರುವ ವಿಡಿಯೋದಲ್ಲಿ ಏನೂ ಇಲ್ಲ. ಇದೆಲ್ಲಾ ಸುಳ್ಳು. ಇದರ ಹಿಂದೆ ಯಾರೋ ಇದ್ದಾರೆ ಎಂದು ನನಗೆ ಗೊತ್ತು. ನನ್ನ ಮೇಲೆ ಎಫ್.ಐ.ಆರ್ ಮೇಲೆ ಎಫ್.ಐ.ಆರ್ ದಾಖಲಿಸುತ್ತಿದ್ದಾರೆ. ಇನ್ನೂ ಮೂರು ದಿನದಲ್ಲಿ ದಾಖಲೆ ಸಮೇತ ಯಾರು ಎಂದು ಸಾಬೀತುಪಡಿಸುತ್ತೇನೆ ಎಂದು ತಿಳಿಸಿದರು.

    ಉಳಿದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದುನಿಯಾ ವಿಜಯ್ ಅವರ ಮೊದಲ ಪುತ್ರಿ ಮೋನಿಕಾ ಕೂಡ ಸಂಜೆ ಆರು ಗಂಟೆ ನಂತರ ತಾಯಿ ನಾಗರತ್ನ ಮತ್ತು ವಕೀಲೆ ಮೀರಾ ರಾಘವನ್ ಅವರೊಂದಿಗೆ ವಿಚಾರಣೆ ಹಾಜರಾಗಿದ್ದರು. ಅರ್ಧ ಗಂಟೆ ಕಾಲ ವಿಚಾರಣೆ ನಡೆಸಿದ ಪೊಲೀಸರು ಸಮಯ ಮೀರಿದ ಕಾರಣ ನಾಳೆ 11 ಗಂಟೆಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

    ವಿಚಾರಣೆ ಬಳಿಕ ಮಾತನಾಡಿದ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಪರ ವಕೀಲೆ ಮೀರಾ ರಾಘವನ್, ಸದ್ಯ ಕತ್ತಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ. ಹಲ್ಲೆ ಆಗಿಲ್ಲ ಎಂಬಂತೆ ಹೇಳಿಕೆ ನೀಡುತ್ತಿದ್ದಾರೆ. ಆದರೆ ಮನೆಯ ಹೊರಗಡೆ ನಡೆದ ಘಟನೆಯ ದೃಶ್ಯಗಳನ್ನು ಮಾತ್ರ ಪೊಲೀಸರಿಗೆ ಸಲ್ಲಿಸಲಾಗಿದೆ. ಮನೆಯ ಒಳಗಡೆ ಗಲಾಟೆ ನಡೆದಿದ್ದು, ಈ ದೃಶ್ಯಗಳನ್ನು ಕೊಟ್ಟಿಲ್ಲ. ಮನೆಯ ಒಳಗಡೆಯ ಸಿಸಿಟಿವಿ ದೃಶ್ಯಗಳು ನೀಡಿದರೆ ಮಾತ್ರ ಸತ್ಯ ಗೊತ್ತಾಗತ್ತೆ ಎಂದು ತಿಳಿಸಿದರು. ವಿಜಯ್ ಹಾಗೂ ಪುತ್ರಿ ಮೋನಿಕಾ ಅವರ ವಿಚಾರಣೆ ಗುರುವಾರವೂ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಫೇಕ್ ಕಂಪ್ಲೇಂಟ್ ಕೋಡೋಕೆ ನನಗೆ ತಲೆ ಸರಿ ಇಲ್ಲವಾ? ದುನಿಯಾ ವಿಜಿಗೆ ಪುತ್ರಿ ಮೋನಿಕಾ ತಿರುಗೇಟು

    ಫೇಕ್ ಕಂಪ್ಲೇಂಟ್ ಕೋಡೋಕೆ ನನಗೆ ತಲೆ ಸರಿ ಇಲ್ಲವಾ? ದುನಿಯಾ ವಿಜಿಗೆ ಪುತ್ರಿ ಮೋನಿಕಾ ತಿರುಗೇಟು

    ಬೆಂಗಳೂರು: ಫೇಕ್ ಕಂಪ್ಲೇಂಟ್ ಕೊಡುವುದ್ದಕ್ಕೆ ನನಗೆ ತಲೆ ಸರಿಯಿಲ್ಲವಾ? ಏನಾದರೂ ನಡೆದಿದ್ದರೆ ತಾನೇ ದೂರು ನೀಡುವುದು ಎಂದು ನಟ ದುನಿಯಾ ವಿಜಯ್ ಪುತ್ರಿ ಮೋನಿಕಾ ಪ್ರತಿಕ್ರಿಯೆ ನೀಡಿದ್ದಾರೆ.

    ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮೋನಿಕಾ ಅವರು, ಜಗಳ ಆಗಿ ನನ್ನ ಮೇಲೆ ಹಲ್ಲೆ ಆಗಿರುವುದ್ದಕ್ಕೆ ನಾನು ದೂರು ನೀಡಿದ್ದೇನೆ. ಆದರೆ ಆಸ್ಪತ್ರೆಯಲ್ಲಿದ್ದಾಗ ನನ್ನ ತಂದೆ ನನಗೆ ಕರೆ ಮಾಡಿ ಸಂಪರ್ಕ ಮಾಡಿಲ್ಲ. ನನ್ನ ವಸ್ತುಗಳನ್ನು ತೆಗೆದುಕೊಂಡು ಬರಲು ಅಪ್ಪನ ಮನೆಗೆ ತೆರಳಿದ್ದೆ. ಈ ವೇಳೆ ಮನೆಗೆ ಹೋಗುತ್ತಿದಂತೆ ಲಾಕ್ ಮಾಡಿ ಕೀರ್ತಿ ಪರ ಪೊಲೀಸರಿಗೆ ಹೇಳಿಕೆ ನೀಡುವಂತೆ ಒತ್ತಡ ಹಾಕಿದರು. ಇದಕ್ಕೆ ನಿರಾಕರಿಸಿದಕ್ಕೆ ನನ್ನ ಮೇಲೆ 4 ರಿಂದ 5 ಜನ ಸೇರಿ ಹಲ್ಲೆ ನಡೆಸಿದರು ಎಂದು ಆರೋಪಿಸಿದ್ದಾರೆ.

    ಸದ್ಯ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ವಿಡಿಯೋ ಮೊಬೈಲ್‍ನಲ್ಲಿ ಸೆರೆ ಹಿಡಿದಿರುವ ದೃಶ್ಯಗಳು ಮಾತ್ರ. ಮನೆಯ ಸಿಸಿಟಿವಿ ದೃಶ್ಯಗಳಲ್ಲಿ ನನ್ನ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ದಾಖಲಾಗಿದೆ. ಇದನ್ನು ಪರಿಶೀಲನೆ ನಡೆಸಬೇಕು. ಈಗಾಗಲೇ ಪೊಲೀಸರಿಗೆ ದೂರು ನೀಡಿರುವುದರಿಂದ ಮುಂದಿನ ಕ್ರಮ ಅವರೇ ಕೈಗೊಳ್ಳುತ್ತಾರೆ ಎಂದರು. ಇದನ್ನೂ ಓದಿ:ದುನಿಯಾ ವಿಜಿ ವಿರುದ್ಧ ಮಗಳಿಂದಲೇ ದೂರು- ಎಫ್‍ಐಆರ್ ದಾಖಲು

    ನನ್ನ ಮೇಲೆ ನಡೆಸಿದ ಬಳಿಕ ನನ್ನನ್ನು ಗೇಟ್‍ನಿಂದ ಹೊರ ಹಾಕಿದ್ದರು. ನನಗೆ ಕೋಪ ಬಂದ ಕಾರಣ ನಾನು ಮನೆ ಹೊರಭಾಗದಿಂದ ಕಲ್ಲನ್ನು ತೆಗೆದುಕೊಂಡು ಬಾಗಿಲಿಗೆ ಹೊಡೆದೆ. ಈ ವೇಳೆ ಅವರು ನನಗೆ ಏನೆಂದು ಬೈದರೋ, ನಾನು ಅದನ್ನೇ ಬೈದೆ ಅಷ್ಟೇ. ನಡೆದ ಘಟನೆ ಎಲ್ಲವೂ ಪೂರ್ವ ನಿಗದಿಯಂತೆ ಮಾಡಿದ್ದಾರೆ. ನಾನು ನನ್ನ ಬಟ್ಟೆ ಹಾಗೂ ಕಾರಿನ ದಾಖಲಾತಿ ಸೇರಿದಂತೆ ಕೆಲ ವಸ್ತುಗಳನ್ನು ತರಲು ಒಬ್ಬಳೇ ಹೋಗಿದ್ದೆ. ಒಂದೊಮ್ಮೆ ಜಗಳ ಮಾಡುವ ಉದ್ದೇಶ ಹೊಂದಿದ್ದರೆ. ನಾನು 5 ಜನರನ್ನು ಕರೆದುಕೊಂಡು ಹೋಗುತ್ತಿದೆ ವಿನಃ, ಒಬ್ಬಳೇ ಹೋಗುತ್ತಿರಲಿಲ್ಲ ಎಂದರು.

    ನಿರಂತರ ಜಗಳ:
    ಕೀರ್ತಿ ಗೌಡ ಮನೆಗೆ ಬಂದ ಬಳಿಕ ಮನೆಯಲ್ಲಿ ನಿರಂತರವಾಗಿ ಜಗಳ ನಡೆಯುತ್ತಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ನಾನು, ನನ್ನ ತಂಗಿ ಹೇಳಿಕೊಳ್ಳಲು ಸಾಧ್ಯವಾಗಿರಲಿಲ್ಲ. ಮನೆಯಲ್ಲಿ ಇದ್ದ ವೇಳೆ ನನ್ನ ತಂಗಿಯ ಮೇಲೆಯೂ ಒತ್ತಡ ಹಾಕಿ ಅಮ್ಮನ ವಿರುದ್ಧ ದೂರು ನೀಡಲು ತಿಳಿಸಿದ್ದರು. ಆದರೆ ನಾವು ಒಪ್ಪಿಗೆ ನೀಡಿರಲಿಲ್ಲ. ಅಪ್ಪ ಜೈಲಿಂದ ಬಂದ ಮೇಲೆ ಹೇಗೆ ಇದ್ದಾರೆಂಬುದು ನನಗೆ ಗೊತ್ತಿಲ್ಲ. ಏಕೆಂದರೆ ಅವರು ಬಂದ ಕೂಡಲೇ 15 ದಿನ ಪ್ರವಾಸಕ್ಕೆ ಸಿದ್ಧರಾದರು. ಈ ವೇಳೆ ನಮ್ಮನ್ನು ಮನೆಯಲ್ಲಿ ಯಾರು ನೋಡಿಕೊಳ್ಳಲು ಇಲ್ಲದ ಕಾರಣ ಅಮ್ಮನ ಮನೆಗೆ ಬಂದೆ. 15 ದಿನದ ಬಳಿಕ ನನ್ನ ವಸ್ತುಗಳನ್ನು ತರಲು ಮನೆಗೆ ತೆರಳಿದ್ದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊಟ್ಟಿರುವ ದೂರು ಸುಳ್ಳು, ಮೂರು ದಿನದಲ್ಲಿ ಪತ್ನಿ, ಮಗಳ ಡ್ರಾಮಾ ಬಯಲು: ದುನಿಯಾ ವಿಜಿ ಸ್ಪಷ್ಟನೆ 

    ನನ್ನ ಮೇಲೆ ಹಲ್ಲೆ ನಡೆಸಿದ ವೇಳೆ ಕೈ ಗೆ ರಕ್ತ ಬರುವಂತೆ ಗಾಯವಾಗಿಲ್ಲ. ಆದರೆ ಮೂಳೆಗೆ ಗಾಯವಾಗಿದೆ. ವೈದ್ಯರು ಚಿಕಿತ್ಸೆ ನೀಡಿ ಮತ್ತೆ ನೋವು ಹೆಚ್ಚಾದರೆ ಬರುವಂತೆ ಸಲಹೆ ನೀಡಿದ್ದಾರೆ. ಆದ್ದರಿಂದ ನಾನು ಮನೆಗೆ ತೆರಳುತ್ತಿದ್ದೇನೆ. ರಕ್ತ ಬರುವಂತೆ ಮಾಡಿದರೆ ಮಾತ್ರ ಅದು ಹಲ್ಲೆ ಎಂದು ಕರೆಯುವುದಾದರೆ ನಾನು ಏನು ಮಾಡಲು ಸಾಧ್ಯವಿಲ್ಲ. ಇಲ್ಲಿ ನಾನು ಯಾರ ಮೇಲೂ ಹೋರಾಟ ಮಾಡುತ್ತಿಲ್ಲ. ಪೊಲೀಸರೆ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

    ಇದೇ ವೇಳೆ ಮಾತನಾಡಿದ ದುನಿಯಾ ವಿಜಯ್ ಪತ್ನಿ ನಾಗರತ್ನ ಅವರು, ನಾವು ಜೀವದ ಆಸೆ ಬಿಟ್ಟು ಬಿಟ್ಟಿದ್ದೇವೆ. ಅಪ್ಪನೇ ಈ ರೀತಿ ಮಾಡುತ್ತಾರೆ ಎಂದರೆ ಏನು ಹೇಳಲು ಸಾಧ್ಯ. ಅವರು ಸಿನಿಮಾ ಸೆಲೆಬ್ರೆಟಿ ಆಗಿರುವುದಿಂದ ಎಲ್ಲರೂ ಬೆಂಬಲ ನೀಡುತ್ತಾರೆ. ಸಾಯಿಸುವುದಾದರೆ ಸಾಯಿಸಲಿ. ಈ ಜೀವನವೇ ಸಾಕಾಗಿದೆ. ನನ್ನ ಮಕ್ಕಳು ನನಗೆ ಎಂದು ಭಾರ ಆಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 3 ಲಕ್ಷ ರೂ. ನೀಡಿ 62 ಕೈದಿಗಳನ್ನು ಜೈಲಿಂದ ಬಿಡಿಸಿದ್ದರು ದುನಿಯಾ ವಿಜಯ್!

    3 ಲಕ್ಷ ರೂ. ನೀಡಿ 62 ಕೈದಿಗಳನ್ನು ಜೈಲಿಂದ ಬಿಡಿಸಿದ್ದರು ದುನಿಯಾ ವಿಜಯ್!

    ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ದುನಿಯಾ ಸಿನಿಮಾ ಮೂಲಕ ಕನ್ನಡ ಅಭಿಮಾನಿಗಳ ಮನಗೆದ್ದ ನಟ ದುನಿಯಾ ವಿಜಯ್ ಹೆಚ್ಚು ಸಿನಿಮಾಗಳ ಮೂಲಕವೇ ಗುರುತಿಸಿಕೊಂಡವರು, ಆದರೆ ಅವರು ತೆರೆ ಹಿಂದೆ ಮಾಡಿದ ಸಾಮಾಜಿಕ ಕಳಕಳಿಯ ಕುರಿತು ಹಾಡುಗಾರ ಮಹದೇವಸ್ವಾಮಿ ಬಿಚ್ಚಿಟ್ಟಿದ್ದಾರೆ.

    ಖಾಸಗಿ ವಾಹಿನಿವೊಂದರ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಮಹದೇವಪ್ಪ, ದುನಿಯಾ ವಿಜಯ್ ಅವರು ಜೈಲಿನಿಂದ 62 ಕೈದಿಗಳನ್ನು ಬಿಡುಗಡೆ ಮಾಡಿಸಿದ್ದ ಕುರಿತು ರಿವೀಲ್ ಮಾಡಿದ್ದಾರೆ.

    2013 ರಲ್ಲಿ ದುನಿಯಾ ವಿಜಯ್ ಅಭಿನಯದ `ದೇವ್ರು’ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ಚಿತ್ರ ತಂಡ ಜೈಲಿಗೆ ಬಂದಿತ್ತು. ಅದನ್ನು ಗಮನಿಸದೆ ನಾನು ಅಮ್ಮನ ಕುರಿತು ಕವಿತೆ ಬರೆಯುತ್ತಿದ್ದೆ. ಬಳಿಕ ಪುಸ್ತಕ ಎತ್ತಿಟ್ಟು ಊಟ ಮಾಡಲು ತೆರಳಿದ ವೇಳೆ ಕೆಲ ಜನರು ಗುಂಪು ಕಟ್ಟಿಕೊಂಡು ಮಾತನಾಡುತ್ತಿದ್ದರು. ಆಗ ಸ್ವತಃ ದುನಿಯಾ ವಿಜಯ್ ಅವರೇ ನನ್ನ ತಟ್ಟೆಯಿಂದ ಅನ್ನ ತೆಗೆದುಕೊಂಡು ತಿಂದರು. ಇದನ್ನು ಕಂಡು ಅಚ್ಚರಿಗೊಂಡೆ. ಬಳಿಕ ನನ್ನ ಬಳಿ ಮಾತನಾಡಿ ನಾನು ಬರೆಯುತ್ತಿದ್ದ ಪುಸ್ತಕ ತೆಗೆದುಕೊಡುವಂತೆ ಹೇಳಿದರು. ನಾನು ಬರೆದಿದ್ದ ಅಮ್ಮನ ಕುರಿತ ಕವಿತೆ ಓದಿ ಪುಸ್ತಕದಲ್ಲಿ ಸಹಿ ಮಾಡಿದರು ಅಂದ್ರು.

    ಊಟ ಬೇಡ, ದಂಡ ಕಟ್ಟಿ ಎಂದು ಮನವಿ:
    ನನ್ನ ಜೊತೆ ಮಾತನಾಡುವ ವೇಳೆ ವಿಜಯ್ ಅವರು ಊಟ ಕೊಡಿಸುವುದಾಗಿ ಹೇಳಿದರು. ಆದರೆ ಈ ವೇಳೆ ಅಲ್ಲಿನ ಕೆಲ ಹಿರಿಯರೊಂದಿಗೆ ಮಾತನಾಡಿ ಊಟ ಬೇಡ ವಿವಿಧ ಕಾರಣಗಳಿಂದ ಹಣ ಕಟ್ಟಲಾಗದೆ ಜೈಲಿನಲ್ಲೇ ಉಳಿದ ಕೆಲ ಕೈದಿಗಳ ಬಿಡುಗಡೆಗೆ ಮನವಿ ಮಾಡಿದೆವು. ಇದನ್ನು ಒಪ್ಪಿದ ದುನಿಯಾ ವಿಜಯ್ ಅವರು ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ 62 ಕೈದಿಗಳ ಬಿಡುಗಡೆಗೆ 3 ಲಕ್ಷ ರೂ. ಹಣವನ್ನು ನೀಡಿದರು ಅಂತ ಮಹದೇವಪ್ಪ ಭಾವುಕರಾದರು.

    ದುನಿಯಾ ವಿಜಯ್ ಷರತ್ತು:
    ತಮ್ಮನ್ನು ಬಿಡುಗಡೆ ಮಾಡುವ ಕುರಿತು ಯಾವುದೇ ಮಾಧ್ಯಮ ಹಾಗೂ ಪತ್ರಿಕೆಗಳಿಗೆ ಹೇಳಿಕೆ ನೀಡಬಾರದು ಎಂದು ದುನಿಯಾ ವಿಜಯ್ ಅವರು ಷರತ್ತು ವಿಧಿಸಿದ್ದರು. ಆದರೆ ಇಂದು ಅನಿವಾರ್ಯವಾಗಿ ಅವರ ಕುರಿತು ಹೇಳಬೇಕೆನಿಸಿತು. ಅದ್ದರಿಂದ ಇದನ್ನು ಹೇಳಿದ್ದಾಗಿ ಮಹದೇವಪ್ಪ ತಿಳಿಸಿದರು. ಅಂದಹಾಗೇ ರಿಯಾಲಿಟಿ ಶೋ ಸ್ಪರ್ಧಿಯಾಗಿರುವ ಮಹದೇವಸ್ವಾಮಿ ಅವರು ಸಂದರ್ಭವೊಂದರಲ್ಲಿ ಮಾಡಿದ ತಪ್ಪಿನಿಂದ 11 ವರ್ಷ ಜೈಲು ಶಿಕ್ಷೆ ಆನುಭವಿಸಿದ್ದರು. ಬಳಿಕ ಸನ್ನಡತೆಯ ಆಧಾರ ಮೇಲೆ ಅವರನ್ನು ಬಿಡುಗಡೆ ಮಾಡಿಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews