Tag: Actor Vinod Raj

  • ಮಕ್ಕಳ ದಾಸೋಹ ಸಂಗ್ರಹಕ್ಕೆ ಕಾರು ಉಡುಗೊರೆ ನೀಡಿದ ನಟ ವಿನೋದ್ ರಾಜ್

    ಮಕ್ಕಳ ದಾಸೋಹ ಸಂಗ್ರಹಕ್ಕೆ ಕಾರು ಉಡುಗೊರೆ ನೀಡಿದ ನಟ ವಿನೋದ್ ರಾಜ್

    ನೆಲಮಂಗಲ: ದಿ.ಹಿರಿಯ ನಟಿ, ತಾಯಿ ಲೀಲಾವತಿ ಅವರ ಸ್ಮರಣಾರ್ಥ ಮಠದ ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗೆ ನೆರವಾಗುವ ನಿಟ್ಟಿನಲ್ಲಿ ನಟ ವಿನೋದ್ ರಾಜ್ (Actor Vinod Raj) ಅವರು ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಬೆಂಗಳೂರು (Bengaluru) ಹೊರವಲಯದ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಬಾಗಲಕೋಟೆಯ ಮಹಾಂತ ಮಂದಾರ ಮಠ ಬನಹಟ್ಟಿ ಪೂಜ್ಯ ಶ್ರೀ ಮಹಾಂತ ದೇವರು ಸ್ವಾಮೀಜಿ ಅವರಿಗೆ ಮಾರುತಿ ಕಂಪನಿಯ ಕಾರನ್ನು ಹಸ್ತಾಂತರ ಮಾಡಿ ನೆರವಾಗಿದ್ದಾರೆ.ಇದನ್ನೂ ಓದಿ: ಅಂಬರೀಶ್‌ಗೆ ಕರ್ನಾಟಕ ರತ್ನ ನೀಡಿ- ಅಭಿಮಾನಿಗಳಿಂದ ಮನವಿ

    ಈ ಮೊದಲು ಸ್ಥಳೀಯವಾಗಿ ಲೀಲಾವತಿ ಅವರ ಹೆಸರಿನಲ್ಲಿ ಸಾರ್ವಜನಿಕ ಆಸ್ಪತ್ರೆ, ಪಶು ಚಿಕಿತ್ಸಾಲಯ, ರಸ್ತೆ ರಿಪೇರಿ ಇನ್ನಿತರ ಕೆಲಸ ಕಾರ್ಯಗಳ ಮೂಲಕ ಸಮಾಜಕ್ಕೆ ತನ್ನದೇ ರೀತಿಯಲ್ಲಿ ಸಹಾಯ ಮಾಡುತ್ತ ಬಂದಿರುವ ವಿನೋದ್ ರಾಜ್ ಇದೀಗ ಮಕ್ಕಳ ಅನ್ನ ದಾಸೋಹ ಸಂಗ್ರಹಕ್ಕೆ ನೆರವಾಗುವ ನಿಟ್ಟಿನಲ್ಲಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದೇ ವೇಳೆ ಕಾರಿಗೆ ದೃಷ್ಟಿ ತೆಗೆದು, ನಿಂಬೆ ಹಣ್ಣು ಒಡೆದು ಶ್ರೀಗಳು ಕಾರು ಚಾಲನೆ ಮಾಡಿದರು. ಈ ಮೂಲಕ ಜನರ ಮೆಚ್ಚುಗೆಗೆ ನಟ ವಿನೋದ್ ರಾಜ್ ಸಾಕ್ಷಿಯಾಗಿದ್ದಾರೆ.

     

  • ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿದವರು ದೇಶದ್ರೋಹಿಗಳು: ವಿನೋದ್ ರಾಜ್

    ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿದವರು ದೇಶದ್ರೋಹಿಗಳು: ವಿನೋದ್ ರಾಜ್

    ನೆಲಮಂಗಲ: ಸಂಗೊಳ್ಳಿ ರಾಯಣ್ಣ ಕನ್ನಡಿಗ ಹಾಗೂ ಸ್ವಾತಂತ್ರ್ಯ ಹೋರಾಟಗಾರರು. ಅವರ ಪ್ರತಿಮೆ ಧ್ವಂಸ ಮಾಡುವುದು ದೇಶದ್ರೋಹ ಮಾಡಿದಂತೆ ಆಗುತ್ತದೆ. ಪ್ರತಿಮೆ ಧ್ವಂಸ ಮಾಡುವವರನ್ನು ದೇಶದ್ರೋಹಿಗಳೆಂದು ಕರೆದು ಕ್ರಮಕೈಗೊಳ್ಳಿ ಎಂದು ನಟ ವಿನೋದ್ ರಾಜ್ ಒತ್ತಾಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಹೋರಾಟಗಾರರಿಗೆ ಬೆಂಬಲವನ್ನು ಸೂಚಿಸಿದರು. ಕನ್ನಡಿಗರು ದಂಗೆಗೆ ಮುಂದಾದರೆ ಏನಾಗುತ್ತದೆ ಎಂದು ಹಿರಿಯರು ಗೋಕಾಕ್ ಚಳುವಳಿಯಿಂದ ತೋರಿಸಿದ್ದಾರೆ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತೆ ಕೆಲವು ಕೆಲಸ ಆಗುತ್ತಿದೆ. ಅದನ್ನು ಎಂದಿಗೂ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

    ಎಂಇಎಸ್ ಪುಂಡಾಟಿಕೆಯಿಂದ ಮನಸ್ಸಿಗೆ ತುಂಬಾ ನೋವಾಗುತ್ತಿದೆ. ಜನರನ್ನು ಬಲಿಪಶು ಮಾಡಿ ಹೋರಾಟ ಮಾಡುವ ಸಂಕಷ್ಟಕ್ಕೆ ಸರ್ಕಾರ ದೂಡುತ್ತಿದೆ. ಪ್ರತಿಮೆ ಧ್ವಂಸ, ಸರ್ಕಾರಿ ವಾಹನಗಳಿಗೆ ದಾಳಿ ಮಾಡುವ ಮಟ್ಟಕ್ಕೆ ಬಿಟ್ಟುಕೊಂಡಿರುವುದು ತಪ್ಪು. ಈ ಘಟನೆ ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಿರುವುದು ತಿಳಿಯುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

    ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತೆ ಕೆಲಸವಾಗುತ್ತಿದೆ ಎಂದಾಗ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಿವಣ್ಣನವರ ಹೋರಾಟದ ಹಿಂದೆ ನಾವೆಲ್ಲ ಇರುತ್ತೇವೆ. ನಮ್ಮ ತಾಯಿ ಕೂಡ ಹೋರಾಟಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ ಎಂದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

  • ಸಿಎಂ ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ

    ಸಿಎಂ ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ

    ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರು ಇಂದು ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

    ಪುತ್ರ ವಿನೋದ್ ರಾಜ್ ಅವರೊಂದಿಗೆ ಆಗಮಿಸಿದ್ದ ಅವರು ಸಿಎಂ ಕುಮಾರಸ್ವಾಮಿ ಬಳಿ ಸೋಲದೇವನಹಳ್ಳಿ ಜನವಸತಿ ಪ್ರದೇಶವನ್ನು ಅರಣ್ಯ ವ್ಯಾಪ್ತಿಯಿಂದ ತೆಗೆಯುವಂತೆ ಮನವಿ ಮಾಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಇಲ್ಲಿನ ಸುಮಾರು 900 ಎಕರೆ ಪ್ರದೇಶವನ್ನು ಅರಣ್ಯವೆಂದು ಘೋಷಣೆ ಮಾಡಿದೆ. ಇದರಿಂದಾಗಿ 650 ಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ನಾವು ಆ ಹಳ್ಳಿಯಲ್ಲಿ ವಾಸ ಮಾಡುತ್ತಿದ್ದು, ದಿನ ನಿತ್ಯ ಕಾಡು ಪ್ರಾಣಿಗಳಿಂದ ನಮಗೆ ತೊಂದರೆಯಾಗುತ್ತಿದೆ. ಆದ್ದರಿಂದ ನಮಗೆ ಪರಿಹಾರ ಒದಗಿಸಿಕೊಡಿ ಎಂದು ಸಿಎಂಗೆ ಮನವಿ ಮಾಡಿದ್ದಾಗಿ ತಿಳಿಸಿದರು.

    ಸೋಲದೇವನ ಹಳ್ಳಿ ಅರಣ್ಯ ಪ್ರದೇಶವನ್ನು ಅರಣ್ಯ ವಲಯ ಎಂದು ಘೋಷಣೆ ಮಾಡಿರುವುದರಿಂದ ಅಲ್ಲಿ ಕಾಡು ಪ್ರಾಣಿಗಳನ್ನು ತಂದು ಬಿಡುತ್ತಾರೆ. ಇದರಿಂದ ಮತ್ತಷ್ಟು ಸಮಸ್ಯೆಯಾಗುತ್ತಿದೆ. ಆ ಪ್ರದೇಶದ ಬಡ ಜನರ ಪರವಾಗಿ ಸಿಎಂ ಬಳಿ ಮನವಿ ಮಾಡಿದ್ದೇವೆ. ನಮಗೆ ಮತ್ತೆ ಸೋಮವಾರ ಬರಲು ಸಿಎಂ ಹೇಳಿದ್ದು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

    ಅರಣ್ಯ ಇಲಾಖೆ ಪ್ರದೇಶ ಎಂದು ಘೋಷಣೆ ಮಾಡಿರುವುದರಿಂದ ಸಾವಿರಾರು ರೈತರು ಕೃಷಿ ಮಾಡುತ್ತಾ ಬಂದಿರುವ ಭೂಮಿಯೂ ಕೂಡ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಆದ್ದರಿಂದ ಕಳೆದ 80 ರಿಂದ 90 ವರ್ಷಗಳಿಂದ ಅದೇ ಭೂಮಿಯನ್ನು ನಂಬಿ ಜೀವನ ನಡೆಸುತ್ತಿರುವ ರೈತರ ಪರ ಸಿಎಂ ಅವರಿಗೆ ಮನವಿ ಸಲ್ಲಿಸಲು ಬಂದಿದ್ದೇವೆ. ಸಣ್ಣ ರೈತರಿಗೆ ಇದರ ವಿರುದ್ಧ ಮಾತನಾಡಲು ಸಾಧ್ಯವಿಲ್ಲ. ಆದ್ದರಿಂದ ನಾವು ಸಿಎಂ ಅವರ ಮೇಲಿನ ಭರವಸೆಯಿಂದ ಮಾತುಕತೆ ನಡೆಸಿದ್ದಾಗಿ ವಿನೋದ್ ರಾಜ್ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸರ್ಕಾರದ ವಿರುದ್ಧ ಹಿರಿಯ ನಟಿ ಲೀಲಾವತಿ, ರೈತರ ಪ್ರತಿಭಟನೆ

    ಸರ್ಕಾರದ ವಿರುದ್ಧ ಹಿರಿಯ ನಟಿ ಲೀಲಾವತಿ, ರೈತರ ಪ್ರತಿಭಟನೆ

    ಬೆಂಗಳೂರು: ನೂರಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಕಂದಾಯ ಭೂಮಿಯನ್ನು ರೈತರು ತೆರವುಗೊಳಿಸಬೇಕೆಂದು ರಾಜ್ಯ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿರುವ ಹಿನ್ನೆಯಲ್ಲಿ ಸರ್ಕಾರದ ವಿರುದ್ಧ ಹಿರಿಯ ನಟಿ ಡಾ.ಲೀಲಾವತಿ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು.

    ಇಂದು ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ನಟ ವಿನೋದ್ ರಾಜ್ ಹಾಗೂ ಸ್ಥಳೀಯ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

    ಈ ಹಿಂದೆ ಕೂಡ ಇದೇ ವಿಚಾರದಲ್ಲಿ ಪ್ರತಿಭಟನೆ ನಡೆಸಿದ್ದು, ಆಗ ಮಧ್ಯ ಪ್ರವೇಶ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸಚಿವರು ಭೂಮಿ ಉಳಿಸಿಕೊಡುವುದಾಗಿ ಭರವಸೆಯನ್ನ ನೀಡಿದ್ದರು. ಆದರೆ ಕೆಲದಿನದ ಹಿಂದೆ ಒಬ್ಬೊಬ್ಬ ರೈತರಿಗೆ ರಾಜ್ಯ ಅರಣ್ಯ ಇಲಾಖೆ ಮತ್ತೆ ನೋಟಿಸ್ ಜಾರಿ ಮಾಡುರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

    ಇಗಾಗಲೇ ನೂರಾರು ಮಂದಿಯ ಸುಮಾರು 950 ಎಕರೆ ಕಂದಾಯ ಭೂಮಿ ರೈತರ ಹೆಸರಿನಲ್ಲಿದ್ದು ಪಹಣಿಯಲ್ಲಿಯು ಸಹ ರೈತರ ಹೆಸರೇ ನಮೂದಾಗಿದೆ. ಆದರೆ ರಾಜ್ಯ ಅರಣ್ಯ ಇಲಾಖೆ ಇದು ಅರಣ್ಯ ಭೂಮಿ ಈ ಹಿಂದೆ ಮೈಸೂರು ಮಹಾರಾಜರು ಅರಣ್ಯ ಇಲಾಖೆಗೆ ನೀಡಿದ್ದಾರೆ. ಹೀಗಾಗಿ ರೈತರು ತಮ್ಮ ಸ್ವಾಧೀನದಲ್ಲಿರುವ ಭೂಮಿಯನ್ನು ತೆರವುಗೊಳಿಸಿ ರಾಜ್ಯ ಅರಣ್ಯ ಇಲಾಖೆಗೆ ಬಿಟ್ಟುಕೊಡುವಂತೆ ನೋಟಿಸ್ ಜಾರಿ ಮಾಡಿದೆ.

    ಅರಣ್ಯ ಇಲಾಖೆಯ ಅಧಿಕಾರಿಗಳು ಪದೇ ಪದೆ ನೋಟಿಸ್ ಜಾರಿ ಮಾಡಿ ರೈತರನ್ನ ಅಲೆದಾಡಿಸುತ್ತಿದ್ದಾರೆ ಎಂದು ನಟಿ ಡಾ.ಲೀಲಾವತಿ ನೇತೃತ್ವದಲ್ಲಿ ನಟ ವಿನೋದ್ ರಾಜ್ ಹಾಗೂ ಸ್ಥಳೀಯ ರೈತರು ಆಕ್ರೋಶವನ್ನ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.