Tag: actor

  • ಪತ್ನಿಯ ಎದೆಹಾಲು ಕದ್ದು ಕುಡಿದ ಆಯುಷ್ಮಾನ್ ಖುರಾನಾ

    ಪತ್ನಿಯ ಎದೆಹಾಲು ಕದ್ದು ಕುಡಿದ ಆಯುಷ್ಮಾನ್ ಖುರಾನಾ

    ಮುಂಬೈ: ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಮತ್ತು ಅವರ ಪತ್ನಿ ತಾಹಿರಾ ಕಶ್ಯಪ್ ಕ್ಯೂಟ್ ಜೋಡಿಗಳಲ್ಲಿ ಒಂದಾಗಿದೆ. ಈ ಜೋಡಿ ಕುರಿತಾದ ಒಂದು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

    ತಾಹಿರಾ ತನ್ನದಿ 7 ಸಿನ್ಸ್ ಆಫ್ ಬೀಯಿಂಗ್ ಎ ಮದರ್ ಪುಸ್ತಕದಲ್ಲಿ ಉಲ್ಲೇಖಿಸಿದ್ದ ಕೆಲವು ಸಂಗತಿಗಳು ವೈರಲ್ ಆಗಿದೆ. ಆಯುಷ್ಮಾನ್ ಮಾಡಿರುವ ತಮಾಷೆಯ ಘಟನೆಯನ್ನು ಬರೆದುಕೊಂಡಿದ್ದಾರೆ. ಈ ಪುಸ್ತಕವು ಮೊದಲ ಬಾರಿ ತಾಯಿಯಾಗುವ ಮಹಿಳೆಯರು ಮತ್ತು ಸಮಾಜದ ಇತರ ಮಹಿಳೆಯರಿಂದ ಸ್ವೀಕರಿಸುವ ತೀರ್ಪು ಕುರಿತು ವಿವರಿಸಿದ್ದಾರೆ. ಜೊತೆಗೆ ಪತಿ ಆಯುಷ್ಮಾನ್ ತನ್ನ ಎದೆ ಹಾಲನ್ನು ಸೇವಿಸಿದರ ಬಗ್ಗೆ ಹೇಳಿಕೊಂಡಿದ್ದಾರೆ.

    ಆಯುಷ್ಮಾನ್ ಪತ್ನಿ ತಾಹಿರಾ ಎರಡನೇ ಹನಿಮೂನ್‍ಗೆ ಬ್ಯಾಂಕಾಕ್ ಹೋಗಲು ನಿರ್ಧರಿಸಿದ್ದರು. ಮೂರು ದಿನಗಳ ಪ್ರವಾಸ ಇದಾಗಿತ್ತು. ಈ ಸಮಯದಲ್ಲಿ ತನ್ನ ಏಳು ತಿಂಗಳ ಮಗು ವಿರಾಜ್‍ವೀರ್‍ನನ್ನು ತನ್ನ ಹೆತ್ತವರ ಆರೈಕೆಯಲ್ಲಿ ಬಿಟ್ಟುಹೋಗುವುದೆಂದು ನಿರ್ಧರಿಸಿದ್ದರು. ತಾಹಿರಾ ಮತ್ತು ಆಯುಷ್ಮಾನ್ ಬ್ಯಾಂಕಾಕ್‍ಗೆ ಹೊರಡುವ ಮೊದಲು ಮಗುವಿಗಾಗಿ ಕೆಲವು ಬಾಟಲಿಯಲ್ಲಿ ಎದೆ ಹಾಲು ತುಂಬಿಸಿ ನಂತರ ವಿಮಾನ ನಿಲ್ದಾಣಕ್ಕೆ ಹೊರಟು ಬಂದರು. ಏರ್ಪೋರ್ಟ್ ತಲುಪಿ ಅಲ್ಲಿ ತಪಾಸಣೆ ಮಾಡುವ ವೇಳೆ ತಾಹಿರಾಗೆ ಮನೆಯಿಂದ ಕರೆ ಬರುತ್ತದೆ. ಮಗುವಿಗಾಗಿ ನೀನು ತುಂಬಿಸಿಟ್ಟಿದ್ದ ಎದೆ ಹಾಲು ಮುಗಿದಿದೆ ಎಂದು ಹೇಳುತ್ತಾರೆ. ಅದು ಮುಗಿದಿದೆ ಎಂಬ ಸುದ್ದಿ ಕೇಳಿ ಆಕೆಗೆ ಶಾಕ್ ಆಗುತ್ತದೆ. ಇಷ್ಟು ಬೇಗ ಹೇಗೆ ಖಾಲಿಯಾಗಿತು ಎಂದು ಆಲೋಚಿಸುತ್ತಾಳೆ. ನಡೆದ ಘಟನೆಯನ್ನು ಗಂಡನ ಬಳಿ ವಿವರಿಸುತ್ತಾಳೆ. ಇದನ್ನೂ ಓದಿ: ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು

    ತಾಹಿರಾ ಪತಿಯ ಬಳಿ ಹೇಳಿದಾಗ ಆಯುಷ್ಮಾನ್ ನಗುತ್ತಲೇ ಉತ್ತರಿಸುತ್ತಾರೆ. ಅದರಲ್ಲಿ ಎಲ್ಲ ಪೋಷಕಾಂಶಗಳೂ ತುಂಬಿವೆ ಎಂದು ಹೇಳುತ್ತಾರೆ. ಅಷ್ಟಕ್ಕೂ ಆದಿದ್ದೇನೆಂದರೆ, ಆಯುಷ್ಮಾನ್ ತಾಹಿರಾ ತುಂಬಿಸಿಟ್ಟಿದ ಪೌಷ್ಟಿಕವಾದ ಎದೆ ಹಾಲನ್ನು ಪ್ರೋಟೀನ್ ಶೇಕ್‍ನೊಂದಿಗೆ ಬೆರೆಸಿ ಕುಡಿದಿದ್ದರು. ಅಂದಿನ ಪ್ರವಾಸವನ್ನು ಅವಿಸ್ಮರಣೀಯವನ್ನಾಗಿಸಲು ತನ್ನ ಪತಿ ಆಯುಷ್ಮಾನ್ ಮಗುವಿಗಾಗಿ ತೆಗೆದಿಟ್ಟ ಎದೆ ಹಾಲನ್ನು ಕದ್ದು ಕುಡಿದಿದ್ದಾರೆ ಎಂದು ತಾಹಿರಾ ಪುಸ್ತಕದಲ್ಲಿ ಹೇಳಿದ್ದಾಳೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ

  • ಅಂದು ಮಗುವಂತೆ ಸಿಕ್ಕಳು, ಇಂದು ಅಮ್ಮನ ಸ್ಥಾನ ತುಂಬಿದಳು: ಮಡದಿಗೆ ಜಗ್ಗೇಶ್ ವಿಶ್

    ಅಂದು ಮಗುವಂತೆ ಸಿಕ್ಕಳು, ಇಂದು ಅಮ್ಮನ ಸ್ಥಾನ ತುಂಬಿದಳು: ಮಡದಿಗೆ ಜಗ್ಗೇಶ್ ವಿಶ್

    – 53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪರಿಮಳಾ ಜಗ್ಗೇಶ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಅವರು ತಮ್ಮ ಮುದ್ದು ಮಡದಿ ಪರಿಮಳಾ ಜಗ್ಗೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ವಿಭಿನ್ನವಾಗಿ ಮಾಡಿದ್ದಾರೆ.

    ಶ್ರೀರಾಮಪುರದ ಮುಖ್ಯ ರಸ್ತೆಯಲ್ಲಿ 1982 ಈಕೆ ನನ್ನ ಕಣ್ಣಿಗೆ ಬಿದ್ದಾಗ 14 ವರ್ಷ, ಇಂದಿಗೆ ಇವಳ ನನ್ನ ಭೇಟಿಗೆ 39ವರ್ಷವಾಗಿದೆ. ಅಂದು ಮಗುವಂತೆ ಸಿಕ್ಕಳು ಇಂದು ಅಮ್ಮನ ಸ್ಥಾನ ತುಂಬಿದಳು. ಇಂದು ಮಡದಿಗೆ 53ನೇ ಹುಟ್ಟುಹಬ್ಬವಾಗಿದೆ. ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡಿ ಮಡದಿಯ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.


    ಜಗ್ಗೇಶ್ ಭಾವುಕ ಜೀವಿ. ತಮ್ಮ ಜೀವನದಲ್ಲಿ ನಡೆದಿರುವ ಘಟನೆಗಳ ಕುರಿತು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುತ್ತಿರುತ್ತಾರೆ. ಇನ್ನು ತಮ್ಮ ಬಾಳಸಂಗಾತಿ ಪರಿಮಳಾ ಅವರ ಬಗ್ಗೆಯೂ ಸಾಕಷ್ಟು ಸಲ ಪೋಸ್ಟ್ ಮಾಡಿದ್ದಾರೆ. ಇಂದು ಪರಿಮಳಾ ಅವರ ಹುಟ್ಟುಹಬ್ಬ. ಅದಕ್ಕಾಗಿ ಮಡದಿಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ಇದನ್ನೂ ಓದಿ:  ಕುಚ್ಚಲಕ್ಕಿ ರೊಟ್ಟಿ ಮಾಡಿದ ರಾಬರ್ಟ್ ನಟಿ ಆಶಾ ಭಟ್

    ನವರಸ ನಾಯಕ ಜಗ್ಗೇಶ್ ಪತ್ನಿ ಪರಿಮಳಾ ಜಗ್ಗೇಶ್ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡು ಹೆಸರು ಮಾಡಿದ್ದಾರೆ. ಜಗ್ಗೇಶ್ ಮತ್ತು ಪರಿಮಳಾ ಅವರು ಪ್ರೀತಿಸಿ ಮದುವೆಯಾಗಿದ್ದಾರೆ. ಜಗ್ಗೇಶ್ ಸಿನಿಮಾಗಳಲ್ಲಿ ಹೆಸರು ಮಾಡಿದರೆ ಪತ್ನಿ ಪರಿಮಳ ಸಾಮಾಜಿಕ ಕೆಲಸಗಳಲ್ಲಿ ಸದಾ ಮುಂದು. ಆದರ್ಶ ದಂಪತಿಗಳ ಸಾಲಿಗೆ ಇವರನ್ನೂ ಸೇರಿಸಬಹುದಾಗಿದೆ. ಇದನ್ನೂ ಓದಿ:  ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ!

  • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ರಜನಿಕಾಂತ್

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ರಜನಿಕಾಂತ್

    ನವದೆಹಲಿ: ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ತಮಿಳು ಸೂಪರ್ ಸ್ಟಾರ್, ನಟ ರಜನಿಕಾಂತ್ ಸೋಮವಾರ ಸ್ವೀಕರಿಸಿದರು.

    ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ರಜನಿಕಾಂತ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

    ಸಮಾರಂಭದಲ್ಲಿ ರಜನಿಕಾಂತ್ ಅಳಿಯ ಧನುಷ್ ಕೂಡ ಹಾಜರಿದ್ದರು. ‘ಅಸುರನ್’ ಸಿನಿಮಾದಲ್ಲಿ ಉತ್ತಮ ನಟನೆಗಾಗಿ ಧನುಷ್, ನ್ಯಾಷನಲ್ ಫಿಲ್ಮ್ ಅವಾರ್ಡ್‍ಗೆ ಭಾಜನರಾಗಿದ್ದಾರೆ. ಹೀಗಾಗಿ ಅವರು ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು. ಇದೇ ವೇಳೆ ರಜನಿಕಾಂತ್ ಪತ್ನಿ ಲತಾ ಹಾಗೂ ಪುತ್ರಿ ಐಶ್ವರ್ಯ (ಧನುಷ್ ಪತ್ನಿ) ಕೂಡ ಇದ್ದರು. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಕೇಸ್ – ಪತ್ನಿ ರೇಖಾ, ಪುತ್ರ ಸ್ನೇಹಿತ್‍ಗೆ ಪೊಲೀಸರಿಂದ ನೋಟಿಸ್

    ಗಾಯಕರಾದ ಆಶಾ ಬೋಸ್ಲೆ, ಶಂಕರ್ ಮಹದೇವನ್, ನಟರಾದ ಮೋಹನಲಾಲ್ ಮತ್ತು ಬಿಸ್ವಜಿತ್ ಚಟರ್ಜಿ, ಚಲನಚಿತ್ರ ನಿರ್ಮಾಪಕ ಸುಭಾಷ್ ಘಾಯ್ ಅವರನ್ನೊಳಗೊಂಡ ತಂಡವು ಈ ವರ್ಷದ ಬಾಬಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ರಜನಿಕಾಂತ್ ಅವರನ್ನು ಆಯ್ಕೆ ಮಾಡಿತ್ತು. ಇದನ್ನೂ ಓದಿ: ಮೂರು ವರ್ಷಗಳ ನಂತರ ಮತ್ತೆ ಬಣ್ಣ ಹಚ್ಚಲಿರುವ ಪ್ರೇಮಾ

    ‘ಎರಡು ವಿಶೇಷ ಹೆಗ್ಗುರುತುಗಳೊಂದಿಗೆ ನಾಳೆ ನನಗೆ ಮಹತ್ವದ ಸಂದರ್ಭವಾಗಿದೆ. ಜನರ ಪ್ರೀತಿ ಮತ್ತು ಬೆಂಬಲದಿಂದಾಗಿ ಭಾರತ ಸರ್ಕಾರ ನನಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡುತ್ತಿದೆ. ಮತ್ತೊಂದು ಪ್ರಮುಖ ವಿಚಾರವೆಂದರೆ ಜನರು ಈಗ ತಮ್ಮ ಧ್ವನಿಯ ಮೂಲಕ ತಮ್ಮ ಶುಭಾಶಯಗಳು ಮತ್ತು ಆಲೋಚನೆಗಳನ್ನು ಯಾವುದೇ ಭಾಷೆಯಲ್ಲಿ ಬರೆಯಲು ಮತ್ತು ವ್ಯಕ್ತಪಡಿಸಲು ಸಹಕಾರಿಯಾಗಿ ನನ್ನ ಪುತ್ರಿ ಸೌಂದರ್ಯ ಅವರು ಆ್ಯಪ್‍ವೊಂದನ್ನು ಬಿಡುಗಡೆ ಮಾಡಲಿದ್ದಾರೆ’ ಎಂದು ಭಾನುವಾರ ರಜನಿಕಾಂತ್ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದರು.

  • ಡಿಲೇ ಆಗಿದ್ದಕ್ಕೆ ಯಾವ ಮಾನಮರ್ಯಾದೆ ಹೋಗಲ್ಲ, ಬದನೆಕಾಯಿಯೂ ಆಗಿಲ್ಲ: ಸುದೀಪ್

    ಡಿಲೇ ಆಗಿದ್ದಕ್ಕೆ ಯಾವ ಮಾನಮರ್ಯಾದೆ ಹೋಗಲ್ಲ, ಬದನೆಕಾಯಿಯೂ ಆಗಿಲ್ಲ: ಸುದೀಪ್

    ಬೆಂಗಳೂರು: ಕೊನೆಗಳಿಗೆಯಲ್ಲಿ ಸಿನಿಮಾ ರಿಲೀಸ್ ವೇಳೆ ನನ್ ಜೊತೆ ಸಂಪಾದಿಸಿರೋ ಜನ ಇದ್ದಾರೆ. ಒಂದು ದಿನ ಡಿಲೇ ಆಗಿದ್ದಕ್ಕೆ ಯಾವ ಮಾನ ಮಾರ್ಯದೆ ಹೋಗಲ್ಲ. ಬದನೆಕಾಯಿಯೂ ಆಗಿಲ್ಲ ಎಂದು ನಟ ಸುದೀಪ್ ಕೋಟಿಗೊಬ್ಬ 3 ಸಿನಿಮಾದ ಸಕ್ಸಸ್ ಸಂಭ್ರಮದಲ್ಲಿ ಹೇಳಿದ್ದಾರೆ.

    ದಸರ ಹಬ್ಬದ ಗಿಫ್ಟ್ ಆಗಿ ರಿಲೀಸ್ ಆಗಿರೋ ಕೋಟಿಗೊಬ್ಬ 3 ಸಿನಿಮಾ ಫ್ಯಾಮಿಲಿ ಎಂಟರ್ ಟೈನ್ ಮೆಂಟ್ ಸಿನಿಮಾವಾಗಿದೆ. ಸಿನಿಮಾ ತೆರೆ ಮೇಲೆ ಅಬ್ಬರಿಸಿ, ಬಾಕ್ಸ್ ಆಫೀಸ್‍ನಲ್ಲಿ ಕಮಾಲ್ ಮಾಡಿದೆ. ಶಿವಕಾರ್ತಿಕ್ ಆಕ್ಷನ್‍ಕಟ್ ಹೇಳಿರೋ ಸಿನಿಮಾವಾಗಿದ್ದು, ಸೂರಪ್ಪ ಬಾಬು ನಿರ್ಮಾಣದಲ್ಲಿ ಸಿನಿಮಾ ಮೂಡಿ ಬಂದಿದೆ. ಕೋಟಿಗೊಬ್ಬ 3 ಸಿನಿಮಾದ ಸಕ್ಸಸ್ ಸಂಭ್ರಮದಲ್ಲಿ ನಟ ಉಪೇಂದ್ರ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ಚಿತ್ರ ಯಶಸ್ವಿಯಾಗಿದೆ, ಅದಕ್ಕೆ ಅಭಿನಂದನೆಗಳು. ನನ್ನನ್ನ ನಿರ್ದೇಶಕ ಮಾಡಿದ್ದು ಸೂರಪ್ಪ ಬಾಬು ಎಂದು ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಇದನ್ನೂ ಓದಿ:  ಜೀವನದ ಹೊಸದೊಂದು ಹೆಜ್ಜೆ, ನಿಮ್ಮೊಂದಿಗೆ ಹಂಚಿಕೊಳ್ಳುವ ಆಸೆ: ನಟಿ ಚಂದನಾ

    Sudeep Kotigobba 3 interview

    ಈ ವೇಳೆ ಮಾತನಾಡಿದ ಸುದೀಪ್, ಕೊನೆಗಳಿಗೆಯಲ್ಲಿ ಸಿನಿಮಾ ರಿಲೀಸ್ ವೇಳೆ ನನ್ ಜೊತೆ ಸಂಪಾದಿಸಿರೋ ಜನ ಇದ್ದಾರೆ ಅವರಿಂದ ಅದಾಗಿದ್ದು. ಸೂರಪ್ಪ ಬಾಬು ಆಕ್ಟಿಂಗ್ ಮಾಡಿದ್ದಾರೆ. ಕಾಲೇಜ್ ದಿನಗಳಲ್ಲಿ ನಿಮ್ ಹತ್ರ ಬರಬೇಕಾದ್ರೆ ಇದ್ದ ದಿನಗಳನ್ನ ನಾನ್ ಯಾವತ್ತೂ ಮರೆಯಲ್ಲ, ಚಿತ್ರರಂಗದ ಪರವಾಗಿ ಶುಭ ಹಾರೈಸಿದ್ದೀರಿ ಥ್ಯಾಂಕ್ಸ್ ಎಂದು ಉಪೇಂದ್ರ ಅವರಿಗೆ ಸುದೀಪ್ ಹೇಳಿದ್ದಾರೆ. ಇದನ್ನೂ ಓದಿ: ಸ್ವಿಮ್ಮಿಂಗ್‍ಪೂಲ್‍ನಲ್ಲಿ ಐರಾ, ಯಥರ್ವ್ ಮೋಜು ಮಸ್ತಿ

    ಒಂದು ದಿನ ಡೀಲೆ ಅದ್ರೂ ಕೂಡ ನನ್ನ ಅಭಿಮಾನಿಗಳು ಸಹಕಾರ ನೀಡಿದ್ದಾರೆ. ಅ ಸ್ನೇಹಿತರು ನೀಡಿದ ಸಹಕಾರಕ್ಕೆ ಧ್ಯನವಾದಗಳು. ಒಂದು ದಿನ ಡಿಲೇ ಆಗಿದ್ದಕ್ಕೇ ಯಾವ ಮಾನ ಮಾರ್ಯದೆ ಹೋಗಲ್ಲ. ಬದನೆಕಾಯಿಯೂ ಕೂಡ ಆಗಿಲ್ಲ. ಅದಕ್ಕೆಲ್ಲ ತಲೆಕೆಡಸಿಕೊಳ್ಳಬಾರದು ಬಾಬು. ಒಬ್ಬ ರಿಟರ್ಡ್ ಆಂಕರ್‍ನ ಕರೆಸಿ ಸಮಾರಂಭ ಮಾಡುತ್ತಿದ್ದಾರೆ ಎಂದು ಅರುಣ್ ಸಾಗರ್ ಅವರಿಗೆ ಸುದೀಪ್ ತಮಾಷೆ ಮಾಡಿದ್ದಾರೆ. ಇದನ್ನೂ ಓದಿ:  ವಿಚ್ಛೇದನದ ನಂತ್ರ ಚಾರ್ ಧಾಮ್ ಯಾತ್ರೆಯಲ್ಲಿ ನಟಿ ಸಮಂತಾ

  • ಯಶ್, ರಾಧಿಕಾ ದುಬೈ ಟ್ರಿಪ್

    ಯಶ್, ರಾಧಿಕಾ ದುಬೈ ಟ್ರಿಪ್

    ಬೆಂಗಳೂರು: ಸ್ಯಾಂಡಲ್‍ವುಡ್ ಕ್ಯೂಟ್ ಕಪಲ್ ಆಗಿರುವ ಯಶ್, ರಾಧಿಕಾ ದುಬೈನಲ್ಲಿ ಜಾಲಿ ಮೂಡ್‍ನಲ್ಲಿ ಸುತ್ತಾಟ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಕೆಲವು ವೀಡಿಯೋ ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ಇತ್ತೀಚೆಗಷ್ಟೆ ಮುಂಬೈನಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದ ಯಶ್ ಈಗ ತಮ್ಮ ಮಡದಿ ರಾಧಿಕಾ ಪಂಡಿತ್ ಜೊತೆ ದುಬೈನಲ್ಲಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವು ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

    ರಾಧಿಕಾ ಪಂಡಿತ್ ಹಾಗೂ ಯಶ್ ಅವರು ದುಬೈಗೆ ಕಾಲಿಡುತ್ತಿದ್ದಂತೆಯೇ ಅಲ್ಲಿನ ಅಧಿಕಾರಿಗಳು ಈ ಜೋಡಿಯನ್ನು ಬರ ಮಾಡಿಕೊಂಡಿದ್ದಾರೆ. ಯಶ್ ಅವರ ಜೊತೆ ಅವರ ಅಭಿಮಾನಿಗಳು ಫೋಟೋಗಳನ್ನು ತೆಗೆಸಿಕೊಳ್ಳುತ್ತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಾಧಿಕಾ ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟು ಸಿಂಪಲ್ ಆಗಿ ಕಾಣಿಸಿಕೊಂಡಿದ್ದಾರೆ. ಯಶ್ ಹೊಸ ಹೇರ್ ಸ್ಟೈಲ್‍ನಲ್ಲಿ ಖಡಕ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ.  ದನ್ನೂ ಓದಿ: ಸಖತ್ ಸ್ಟೈಲಿಶ್ ಆಗಿ ಮುಂಬೈನಲ್ಲಿ ಕಾಣಿಸಿಕೊಂಡ ಯಶ್

     

    View this post on Instagram

     

    A post shared by Radhika Pandit (@iamradhikapandit)

    ಮಕ್ಕಳ ಜೊತೆಗೆ ಮಾಲ್ಡೀವ್ಸ್ ಪ್ರವಾಸ ಮಾಡಿದ್ದ ಈ ಜೋಡಿ ಇದೀಗ ಇಬ್ಬರೇ ದುಬೈಗೆ ಹೋಗಿ ಸುತ್ತಾಡುತ್ತಿದ್ದಾರೆ. ಯಶ್ ಕೆಲವು ದಿನಗಳ ಹಿಂದೆ ಮುಂಬೈ ವಿಮಾನ ನಿಲ್ದಾಣ ಮತ್ತು ಸಲೂನ್‍ವೊಂದರಲ್ಲಿ ಕಾಣಿಸಿಕೊಂಡಿದ್ದರು. ಆಗ ಯಶ್ ಅವರ ಹೇರ್ ಸ್ಟೈಲ್ ಸುದ್ದಿಯಾಗಿತ್ತು. ದನ್ನೂ ಓದಿ: ಯಶ್ ಜೊತೆ ಸೆಲ್ಫಿಗೆ ಮುಗಿಬಿದ್ದ ಮುಂಬೈ ಅಭಿಮಾನಿಗಳು

    ಯಶ್ ಮುಂಬೈನಲ್ಲಿ ಕಾಣಿಸಿಕೊಂಡಿದ್ದ ವೇಳೆ ಅಭಿಮಾನಿಗಳು ಯಶ್ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದರು. ದೇಶ, ವಿದೇಶಗಳಲ್ಲಿ ಯಶ್ ಅವರಿಗೆ ಅಭಿಮಾನಿಗಳಿದ್ದಾರೆ. ಕೆಜಿಎಫ್ ಸಿನಿಮಾದಲ್ಲಿ ಯಶ್ ಉದ್ದ ಕೂದಲು ಮೂಲಕವಾಗಿ ಮಿಂಚಿದ್ದರು. ಅಭಿಮಾನಿಗಳು ಯಶ್ ಅವರ ಉದ್ದ ಗಡ್ಡ, ಕೂದಲಿನ ಸ್ಟೈಲ್ ಇಷ್ಟವಾಗಿತ್ತು. ಇದೀಗ ಕೆಜಿಎಫ್2 ಸಿನಿಮಾದಲ್ಲೂ ಯಶ್ ಅದೇ ಖಡಕ್ ಲುಕ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಬಿಡುಗಡೆಯಾಗಿ ತೆರೆ ಮೇಲೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ದನ್ನೂ ಓದಿ:  ಯಶ್ ಹೇರ್ ಸ್ಟೈಲ್‍ಗೆ ಅಭಿಮಾನಿಗಳು ಫಿದಾ

  • ಮೋಹಕತಾರೆ ರಮ್ಯಾ ಪ್ರಶ್ನೆಗೆ ಉತ್ತರಿಸಿದ ಸುದೀಪ್

    ಮೋಹಕತಾರೆ ರಮ್ಯಾ ಪ್ರಶ್ನೆಗೆ ಉತ್ತರಿಸಿದ ಸುದೀಪ್

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಮೋಹಕತಾರೆ ರಮ್ಯಾ ಅವರು ಸುದೀಪ್‍ಗೆ ಇತ್ತೀಚೆಗೆ ನೇರವಾಗಿ ಒಂದು ಪ್ರಶ್ನೆಯನ್ನು ಕೇಳಿದ್ದರು. ರಮ್ಯಾ ಹೇಳಿಕೆಗ ಕಿಚ್ಚ ಪ್ರತಿಕ್ರಿಯೆ ನೀಡಿದ್ದಾರೆ.

    ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮ್ಯಾ ಅವರು ನಿಮಗೆ ವಯಸ್ಸು ಆಗದೆ ಇಲ್ವಾ ಎಂದು ಹೇಳಿರುವುದರ ಕುರಿತಾಗಿ ಸುದೀಪ್ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ರಮ್ಯಾ ಟ್ವೀಟ್ ಮಾಡಿದ್ದು, ಖುಷಿಯಾಗಿದೆ. ರಾಜಕೀಯ ನಡುವೆ, ಸಾಕಷ್ಟು ವರ್ಷಗಳ ನಂತರ ನನ್ನ ಬಗ್ಗೆ ಟ್ವೀಟ್ ಮಾಡಿರುವುದು ಸಂತಸ ತಂದಿದೆ ಎಂದಿದ್ದಾರೆ. ಇದನ್ನೂ ಓದಿ:   ತಾಯಿ ಆಗಲು ಸಮಂತಾ ಬಯಸಿದ್ರು-ನಿರ್ದೇಶಕರ ಪುತ್ರಿ ಬಿಚ್ಚಿಟ್ಟರು ವಿಚ್ಛೇದನದ ಗುಟ್ಟು

    ಯಾವತ್ತಿದ್ರು ಬಾಸ್ ಬಾಸೇ. ವಿಷ್ಣುವರ್ಧನ್ ಹಾಗೂ ನನ್ನ ತಂದೆ ಇಬ್ಬರು ಆಲದ ಮರ. ಅವರ ನೆರಳಿನಲ್ಲಿಯೇ ನಾವು ಇದ್ದೀವಿ ಎಂದು ಹೇಳುವ ಮೂಲಕ ವಿಷ್ಣು ದಾದಾರನ್ನು ಸುದೀಪ್ ನೆನಪಿಸಿಕೊಂಡರು. ಇದನ್ನೂ ಓದಿ:  ಸುದೀಪ್ ನಿಮಗೆ ವಯಸ್ಸು ಆಗೋದೇ ಇಲ್ವಾ: ರಮ್ಯಾ

    ಅ.14ರಂದು ಅದ್ದೂರಿಯಾಗಿ ಕೋಟಿಗೊಬ್ಬ 3 ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ಕ್ರೇಜ್ ಇದೆ. ಅ.7ರಂದು ಟ್ರೇಲರ್ ರಿಲೀಸ್ ಆಗಿದ್ದು, ಅದನ್ನು ನೋಡಿ ರಮ್ಯಾ ಕೂಡ ಮೆಚ್ಚಿಕೊಂಡಿದ್ದಾರೆ. ರಮ್ಯಾ ಮೆಚ್ಚಿಕೊಂಡಿದ್ದು ಮಾತ್ರವಲ್ಲದೆ ಸುದೀಪ್ ಅವರನ್ನು ಹಾಡಿಹೊಗಳಿದ್ದರು. ಇದನ್ನೂ ಓದಿ:  ನನ್ನ ಅಭಿಮಾನಿಗಳಿಂದಲೇ ನಾನು ಇಲ್ಲಿ ಇರೋದು: ಕಿಚ್ಚ

    ಟ್ರೇಲರ್ ಅದ್ಭುತವಾಗಿದೆ. ಕಿಚ್ಚ ಸುದೀಪ್ ಅವರೇ, ನಿಮಗೆ ವಯಸ್ಸು ಆಗುವುದೇ ಇಲ್ಲವಾ? ಎಂದು ರಮ್ಯಾ ಬರೆದುಕೊಂಡಿದ್ದಾರೆ. ದಿನದಿಂದ ದಿನಕ್ಕೆ ಸುದೀಪ್ ವಯಸ್ಸು ಕಮ್ಮಿ ಆಗುತ್ತಿದೆ ಎಂಬರ್ಥದಲ್ಲಿ ಅವರು ಪ್ರಶಂಸೆ ವ್ಯಕ್ತಪಡಿಸಿ ಇನ್‍ಸ್ಟಾಗ್ರಾಮ್‍ನ ಸ್ಟೋರಿಯಲ್ಲಿ ಹಾಕಿಕೊಂಡಿದ್ದರು. ಈ ವಿಚಾರವಾಗಿ ಸುದೀಪ್ ಇಂದು ಪ್ರತಿಕ್ರಿಯೆ ನೀಡಿದ್ದಾರೆ.

    ರಮ್ಯಾ ಸುದೀಪ್ ಅವರ ಜೊತೆಗೆ ಸಾಕಷ್ಟು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದಾರೆ. ರಂಗ ಎಸ್‍ಎಸ್‍ಎಲ್‍ಸಿ, ಜಸ್ಟ್ ಮಾತ್ ಮಾತಲ್ಲಿ, ಮುಸ್ಸಂಜೆ ಮಾತು ಸಿನಿಮಾಗಳಲ್ಲಿ ರಮ್ಯಾ ಮತ್ತು ಸುದೀಪ್ ನಟಿಸಿದ್ದರು. ಮತ್ತೆ ಅವರು ತೆರೆಮೇಲೆ ಜೋಡಿಯಾಗಿ ಕಾಣಿಸಿಕೊಳ್ಳಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.

  • ನನ್ನ ಅಭಿಮಾನಿಗಳಿಂದಲೇ ನಾನು ಇಲ್ಲಿ ಇರೋದು: ಕಿಚ್ಚ

    ನನ್ನ ಅಭಿಮಾನಿಗಳಿಂದಲೇ ನಾನು ಇಲ್ಲಿ ಇರೋದು: ಕಿಚ್ಚ

    – ಪೈರಸಿ, ಕಳ್ಳರಿಗೆ ನಾನು ಹೆದರಲ್ಲ

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಬಹುನೀರಿಕ್ಷೆಯನ್ನು ಹುಟ್ಟಿಸಿರುವ ಸಿನಿಮಾ ಕೋಟಿಗೊಬ್ಬ3. ಈ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಅವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಕುರಿತಾಗಿ ಕಿಚ್ಚ ಕೆಲವು ವಿಚಾರಗಳನ್ನು ಮಾಧ್ಯಮದವರ ಮುಂದೆ ಹಂಚಿಕೊಂಡಿದ್ದಾರೆ.


    ಕೋಟಿಗೊಬ್ಬ 3 ಸಿನಿಮಾ ಸುದೀಪ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 14ರಂದು ಎರಡು ಸಿನಿಮಾ ರಿಲೀಸ್ ಆಗುತ್ತಿದ್ದು, ಖುಷಿಯಾಗುತ್ತಿದೆ. ಕಥೆ ಇಷ್ಟ ಆಗಿದೆ, ಸಿನಿಮಾ ಪ್ರೇಕ್ಷಕರಿಗೆ ಖುಷಿ ನೀಡುತ್ತದೆ. ಹುಚ್ಚ ಸಿನಿಮಾದಿಂದ ಶುರು ಮಾಡಿದರೆ, ಆ ಕಥೆ ಹೇಗೆ ಹೇಳಬೇಕೊ ಹಾಗೇ ಹೇಳಿದ್ದೇವೆ. ಹಾಗೇ ಈ ಕಥೆ ಹೇಗೆ ಹೇಳಬೇಕೊ ಹಾಗೆ ಹೇಳಿದ್ದೇವೆ ಎಂದಿದ್ದಾರೆ.

    ವಾಪಾಸು ಒಂದು ಪಯಣ ಶುರುವಾಗಿದೆ. ಕೊರೊನಾ ಸಮಯದಲ್ಲಿ ತುಂಬಾ ಎಫೆಕ್ಟ್ ಆಗಿದೆ. ಎಷ್ಟು ಜನ ಕೆಲಸ ಹೋಗಿದೆ. ಹಾಗಂತ ಕೆಲಸ ಮಾಡದು ನಿಲ್ಲಸಲ್ಲ ಎಂದಿದ್ದಾರೆ. ಯಶ್ ಜೊತೆ ಸೆಲ್ಫಿಗೆ ಮುಗಿಬಿದ್ದ ಮುಂಬೈ ಅಭಿಮಾನಿಗಳು

    ಅರ್ಜುನ್ ಮ್ಯೂಸಿಕ್ ಚೆನ್ನಾಗಿದೆ. ಹೊರ ದೇಶದ ರೋಡ್‍ಗಳಲ್ಲಿ ಆ್ಯಕ್ಷನ್ ಸಿಕ್ವೇಲ್‍ಗಳು ಚೆನ್ನಾಗಿದೆ. 50-30 ಕಾರುಗಳು ಚೇಸಿಂಗ್ ನೋಡೊಕೆ ಚೆನ್ನಾಗಿತ್ತು. ನನಗೆ ಹೊಸ ಅನುಭವವಾಗಿದೆ. ಪೈರಸಿಗೆ ಹೆದರಲ್ಲ. ಕಳ್ಳರಿಗೆ ನಾನು ಭಯ ಪಡಲ್ಲ. ನನ್ನ ಫ್ಯಾನ್ಸ್ ನಿಂದಲೇ ನಾನು ಇಲ್ಲಿ ಇರೋದು ಎಂದು ಹೇಳಿದ್ದಾರೆ.

  • ತಂದೆ ವಯಸ್ಸಿನ ಕಾರು ಕಂಡು ಅಪ್ಪನ ಕಂಡಷ್ಟೆ ಸಂತೋಷವಾಯಿತು: ಜಗ್ಗೇಶ್

    ತಂದೆ ವಯಸ್ಸಿನ ಕಾರು ಕಂಡು ಅಪ್ಪನ ಕಂಡಷ್ಟೆ ಸಂತೋಷವಾಯಿತು: ಜಗ್ಗೇಶ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರುತ್ತಾರೆ. ಈಗ ಅವರೊಂದು ವಿಶೇಷ ಕಾರಿನ ಬಗ್ಗೆ ಬರೆದುಕೊಂಡಿದ್ದಾರೆ. ಆ ಕಾರನ್ನು ನೋಡಿದ ಕೂಡಲೇ ಅವರಿಗೆ ತಮ್ಮ ತಂದೆಯ ನೆನಪಾಗಿದೆ. ಅದನ್ನು ಅವರು ಟ್ವೀಟ್ ಮೂಲಕ ಅಭಿಮಾನಿಗಳಿಗೂ ತಿಳಿಸಿದ್ದಾರೆ.

    1930 ಆಸ್ಟಿನ್ ಇಂಗ್ಲೆಂಡ್ ಕಾರು. ಇದು ಅಪ್ಪ ಹುಟ್ಟಿದ ವರ್ಷದ ಕಾರು. ಇಂದು ನಮ್ಮ ಅಪ್ಪನಿಗೆ ಪಿತೃಪಕ್ಷ ಪೂಜೆ ಮಾಡಲು ಮಾಯಸಂದ್ರಕ್ಕೆ ತೆರಳುವಾಗ ಸಿಕ್ಕಿತು. ಅಪ್ಪನ ವಯಸ್ಸಿನ ಕಾರು ಕಂಡು ಅಪ್ಪನ ಕಂಡಷ್ಟೇ ಸಂತೋಷವಾಯಿತು. ಲವ್ ಯೂ ಅಪ್ಪ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಅವರ ಅಭಿಮಾನಿಗಳು ಅದಕ್ಕೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.  ಇದನ್ನೂ ಓದಿ: ಸೀರೆ ಖರೀದಿ ಬಗ್ಗೆ ನನಗೆ ಗೊತ್ತಿಲ್ಲ, ದುಡ್ಡು ಕೊಟ್ಟು ಬೈಸಿಕೊಳ್ಳೋದು ಇದು: ಕಾರಜೋಳ

    ಹಳೇ ಕಾಲದ ಕಾರುಗಳನ್ನು ನೋಡುವುದೇ ಚಂದ. ಅವುಗಳ ವಿನ್ಯಾಸವಂತೂ ಎಲ್ಲರ ಗಮನ ಸೆಳೆಯುತ್ತವೆ. ರೆಟ್ರೋ ಕಾಲದ ಕಾರುಗಳು ನೋಡಲು ಸಿಗುವುದು ಕೂಡ ಅಪರೂಪ. ಪಿತೃಪಕ್ಷ ಪೂಜೆಗೆಂದು ಹೋಗುವಾಗ ಜಗ್ಗೇಶ್ ಕಣ್ಣಿಗೆ ಆಸ್ಟಿನ್ ಆಫ್ ಇಂಗ್ಲೆಂಡ್ ಕಾರು ಕಾಣಿಸಿದೆ. ಅದಕ್ಕೆ ಅವರು ಸಖತ್ ಖುಷಿ ಪಟ್ಟಿದ್ದಾರೆ. ಇದನ್ನೂ ಓದಿ:  ರೈಸ್ ಕುಕ್ಕರನ್ನೇ ಮದುವೆಯಾದ ಆಸಾಮಿ

    ಸಿನಿಮಾ ಕೆಲಸಗಳ ನಡುವೆ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ತಮ್ಮ ಅಭಿಮಾನಿಗಳ ಜೊತೆ ಜಗ್ಗೇಶ್ ಅವರು ಸಂಪರ್ಕದಲ್ಲಿ ಇರುತ್ತಾರೆ. ಆಗಾಗ ಕೆಲವು ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಈಗ ತಮ್ಮ ತಂದೆಯನ್ನು ನೆನೆದು ಸೋಶಿಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

  • ಸಖತ್ ಸ್ಟೈಲಿಶ್ ಆಗಿ ಮುಂಬೈನಲ್ಲಿ ಕಾಣಿಸಿಕೊಂಡ ಯಶ್

    ಸಖತ್ ಸ್ಟೈಲಿಶ್ ಆಗಿ ಮುಂಬೈನಲ್ಲಿ ಕಾಣಿಸಿಕೊಂಡ ಯಶ್

    ಕೆಜಿಎಫ್ ಸಿನಿಮಾದ ಮೂಲಕ ನ್ಯಾಷನಲ್ ಸ್ಟಾರ್ ಪಟ್ಟಕ್ಕೇರಿದ ಯಶ್ ಈಗ ಆಗಾಗ ಮುಂಬೈನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾರ್ ನಲ್ಲಿ ಏರ್‌ರ್ಪೋರ್ಟ್‌ಗೆ ಬಂದಿಳಿದ ಯಶ್ ಅವರ ಲುಕ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

    ವಿಮಾನ ನಿಲ್ದಾಣದಲ್ಲಿ ಯಶ್ ಅವರು ಉದ್ದ ಗಡ್ಡ, ಪುಟ್ಟದಾದ ಪೋನಿ ಹಾಗೂ ಕೂಲಿಂಗ್ ಗ್ಲಾಸ್ ತೊಟ್ಟು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:   ಹೊಸ ಹಲ್ಲು ಹುಟ್ಟಿಲ್ಲವೆಂದು ಪ್ರಧಾನಿಗೆ ಪತ್ರ ಬರೆದ ಪುಟಾಣಿಗಳು

    ಅಲ್ಲದೆ ಕೆಜಿಎಫ್ ಚಾಪ್ಟರ್ 2 ಸಿನಿಮಾದ ರಿಲೀಸ್‍ಗಾಗಿ ಕಾಯುತ್ತಿರುವ ಯಶ್ ಅವರು ಮತ್ತೆ ಯಾವ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ ಅನ್ನೋ ಕುತೂಹಲ ಸಿನಿರಂಗ ಸೇರಿದಂತೆ ಅಭಿಮಾನಿಗಳಲ್ಲೂ ಇದೆ. ಹೀಗಿರುವಾಗಲೇ ಯಶ್ ಅವರು ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ಅವರು ಮುಂಬೈನ ವಿಮಾನ ನಿಲ್ದಾಣದಲ್ಲಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

    ಯಶ್ ಅವರನ್ನು ಮುಂಬೈನಲ್ಲಿ ವಿಮಾನ ನಿಲ್ದಾಣದಲ್ಲಿ ನೋಡಿದ ನಂತರ ಈ ವಿಷಯವಾಗಿ ಸಾಕಷ್ಟು ಗುಸು ಗುಸು ಆರಂಭವಾಗಿದೆ. ಹೌದು, ಯಶ್ ಅವರು ಹೊಸ ಸಿನಿಮಾ ಕುರಿತಾಗಿ ಚರ್ಚಿಸೋಕೆ ಮುಂಬೈ ಹೋಗಿದ್ದಾರೆ. ಅಲ್ಲಿ ಅವರು ನಿರ್ದೇಶಕರು ಹಾಗೂ ನಿರ್ಮಾಪಕರನ್ನು ಭೇಟಿಯಾಗಿದ್ದಾರೆ ಎನ್ನುವ ಸುದ್ದಿ ಹಬ್ಬುತ್ತಿದೆ. ಇದನ್ನೂ ಓದಿ:  ಡೆಲ್ಲಿ ಮಣಿಸಿದ ಕೋಲ್ಕತ್ತಾ – 3 ವಿಕೆಟ್‍ಗಳ ಜಯ

    ಕೆ.ಜಿ.ಎಫ್ ಸಿನಿಮಾ ಮೂಲಕ ನಂ.1 ಸ್ಟಾರ್ ಪಟ್ಟಕ್ಕೇರಿರೋ ರಾಕಿಂಗ್ ಸ್ಟಾರ್ ಯಶ್‍ರ ಪ್ರತಿ ಹೆಜ್ಜೆ ಮೇಲೂ ನಿರೀಕ್ಷೆ ಮೂಡಿದೆ. ಯಶ್ ಪ್ರಶಾಂತ್ ನೀಲ್ ನಿರ್ದೇಶನದ ಬಹು ನಿರೀಕ್ಷಿತ ಕೆಜಿಎಫ್ 2 ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು 2022ರ ಏಪ್ರಿಲ್ 14ರಂದು ಬಿಡುಗಡೆಯಾಗಲಿದೆ.

  • ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು

    ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ದಂಪತಿಗೆ ಗಂಡು ಮಗು ಜನನವಾಗಿದೆ.

    Nikhil revathi

    ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಇಂದು ಗಂಡು ಮಗು ಜನಿಸಿದೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನಿಡಿದ್ದಾರೆ.

    ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಮಾಜಿ ಸಿಎಂ ಹೆಚ್‍ಡಿಕೆ ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯ ವಿಚಾರಿಸಲಿದ್ದಾರೆ. ಇದನ್ನೂ ಓದಿ:  ವಿಧಾನಸಭೆಯಲ್ಲಿ ನಾಗ್ಪುರ vs ಇಟಲಿ ಫೈಟ್

     

    ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಕೆಲವು ದಿನಗಳ ಹಿಂದೆ ನಗರದ ಹೆಚ್‍ಎಸ್‍ಆರ್ ಲೇಔಟ್‍ನ ಮಾನ್ವಿ ಕನ್ವೆನ್ಷನ್ ಹಾಲ್‍ನಲ್ಲಿ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೊರೊನಾ ಕಾರಣದಿಂದಾಗಿ ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.