Tag: actor

  • ತಪ್ಪಾಯ್ತು ಕ್ಷಮಿಸಿ ಬಿಡಿ – ಕಣ್ಣೀರಿಟ್ಟು ಕ್ಷಮೆಯಾಚಿಸಿದ ನಟ ವಿಜಯ್ ರಂಗರಾಜು

    ತಪ್ಪಾಯ್ತು ಕ್ಷಮಿಸಿ ಬಿಡಿ – ಕಣ್ಣೀರಿಟ್ಟು ಕ್ಷಮೆಯಾಚಿಸಿದ ನಟ ವಿಜಯ್ ರಂಗರಾಜು

    ಬೆಂಗಳೂರು: ಸಾಹಸಿಂಹ ಡಾ. ವಿಷ್ಣುವರ್ಧನ್ ಅವರ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿದ್ದ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಇಡೀ ಚಿತ್ರರಂಗ ಹಾಗೂ ಅಭಿಮಾನಿಗಳು ತಿರುಗಿ ಬಿದ್ದಿದ್ದಾರೆ. ಈ ಬೆನ್ನಲ್ಲೇ ನಟ ಪರಿಪರಿಯಾಗಿ ಕ್ಷಮೆಯಾಚಿಸಿದ್ದಾರೆ.

    ಈ ಸಂಬಂಧ ವೀಡಿಯೋ ಮಾಡಿರುವ ನಟ, ಕರ್ನಾಟಕದ ಜನತೆ, ಸುದೀಪ್, ಪುನೀತ್ ರಾಜ್ ಕುಮಾರ್ ಹಾಗೂ ಭಾರತಿ ವಿಷ್ಣುವರ್ಧನ್ ಬಳಿ ಕ್ಷಮೆಯಾಚಿಸಿದ್ದಾರೆ. ವೀಡಿಯೋದಲ್ಲಿಯೇ ಅಡ್ಡಬಿದ್ದು ನನ್ನಿಂದ ತಪ್ಪಾಗಿದೆ ಎಂದು ಅಲವತ್ತುಕೊಂಡಿದ್ದಾರೆ.

    ವೀಡಿಯೋದಲ್ಲಿ ಏನಿದೆ..?
    ಕರ್ನಾಟಕದ ಜನರು, ಕರ್ನಾಟಕದ ಮಕ್ಕಳಿಗೆ ನಮಸ್ಕಾರ. ವಿಜಯ್ ರಂಗರಾಜು ಮಾತಾಡ್ತಾ ಇದ್ದೀನಿ. ನಾನು ತುಂಬಾ ದೊಡ್ಡ ತಪ್ಪು ಮಾಡಿ, ಆ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದ್ದೇನೆ. ಕೊರೊನಾದಿಂದಾಗಿ ಮಾಸ್ಕ್ ಹಾಕಿಕೊಂಡಿದ್ದೇನೆ. ನಿಮಗೆ ನನ್ನ ಮುಖ ತೋರಿಸಬಾರದು ಅಂತೇನೂ ಅಲ್ಲ. ಕೊರೊನಾದಿಂದಾಗಿ ನೋವು ಅನುಭವಿಸುತ್ತಿದ್ದೇನೆ. ನಾನು ದೊಡ್ಡ ಪಾಪ ಮಾಡಿದ್ದೇನೆ. ನಾನು ಇಂಡಸ್ಟ್ರಿಗೆ ಬಂದು ತುಂಬಾ ವರ್ಷ ಆಗಿದೆ. ಫೈಟರ್ ಆಗಿಯೇ ಬಂದೆ ನಾನು. ನಾನೇನೂ ದೊಡ್ಡ ನಟ ಅಲ್ಲ. ಕೆಲ ವ್ಯಾಪಾರಗಳನ್ನು ಮಾಡಿ ಎಲ್ಲಾ ಕಳೆದುಕೊಂಡೆ. ನಂತರ ಲಂಡನ್‍ಗೆ ಹೋಗಿ 5 ವರ್ಷ ಇದ್ದೆ. ತುಂಬಾ ಕಷ್ಟ ಪಟ್ಟಿದ್ದೇನೆ. ರಸ್ತೆಯಲ್ಲಿ ಕಸ ಗುಡಿಸಿದ್ದೇನೆ, ಟಾಯ್ಲೆಟ್ ತೊಳೆದಿದ್ದೇನೆ. ಆದರೆ ನನ್ನ ಕಷ್ಟ ಪರಿಹಾರ ಆಗ್ಲಿಲ್ಲ.

    ನಾನು ಆ ದಿನ, ‘ಅವರನ್ನು’ ಹಿಡಿದುಕೊಳ್ಳಲಿಲ್ಲ…ಅಷ್ಟು ದೊಡ್ಡ ವ್ಯಕ್ತಿಯನ್ನು ಹಿಡಿದುಕೊಂಡಿದ್ರೆ, ಅಲ್ಲಿ ಯುನಿಟ್‍ನವರು ನನ್ನನ್ನು ಸುಮ್ಮನೆ ಬಿಡ್ತಿದ್ರಾ..? ಆಗಲೇ ನನ್ನ ಅಲ್ಲಿದ್ದವರು ಸಾಯಿಸಿಬಿಡುತ್ತಿದ್ರು. ಆದರೆ ತುಂಬಾ ವರ್ಷಗಳ ನಂತರ, ಯಾಕಂದ್ರೆ ನಾನು ನಟಿಸಬೇಕಿದ್ದ ಶಾಟ್‍ನಲ್ಲಿ ನಟಿಸಿದ್ದ ಇನ್ನೊಬ್ಬ ಒಂದು ವಾರದ ನಂತರ ಸತ್ತು ಹೋಗಿದ್ದ. ಆ ಕೋಪ ಹಾಗೇ ಉಳಿದುಬಿಟ್ಟಿತ್ತು. ಏನೋ ಮಾತಿನ ಪ್ಲೋನಲ್ಲಿ ಆ ರೀತಿ ಹೇಳಿಬಿಟ್ಟೆ. ನನ್ನ ದಯಮಾಡಿ ಕ್ಷಮಿಸಿ, ನಿಮ್ಮ ಕಾಲು ಮುಟ್ಟಿ ಬೇಡಿಕೊಳ್ತಿದ್ದೇನೆ. ಪ್ರತಿಯೊಬ್ಬರಿಗೂ ಕಾಲಿಗೆ ಬಿದ್ದು ನಮಸ್ಕಾರ ಮಾಡ್ತಿದ್ದೀನಿ. ವಿಷ್ಣುವರ್ಧನ್ ಅಭಿಮಾನಿಗಳು ಹಾಗೂ ಭಾರತಿ ಅಮ್ಮನವರಿಗೂ ಕೂಡ ‘ಸಾರಿ’ ಕೇಳ್ತಿದ್ದೀನಿ. ಯಾಕಂದ್ರೆ ಇಂತಹ ದೊಡ್ಡ ಸುಳ್ಳು ಯಾರೂ ಹೇಳಬಾರದು. ಆದರೆ ನಾನು ಹೇಳಿದ್ದೀನಿ.. ಐ ಆಮ್ ಸಾರಿ, ನನ್ನ ಕ್ಷಮಿಸಿಬಿಡಿ… ನನ್ನ ಕ್ಷಮಿಸಿಬಿಡಿ..ನನ್ನ ಕ್ಷಮಿಸಿಬಿಡಿ.. ಸುದೀಪ್ ಅವರೇ, ರಾಜ್‍ಕುಮಾರ್ ಅವರ ಮಗ ಪುನೀತ್ ರಾಜ್‍ಕುಮಾರ್ ಅವರೇ ಎಲ್ಲಾ ದೊಡ್ಡವರು ನನ್ನ ಕ್ಷಮಿಸಿ. ನನ್ನ ಕ್ಷಮಿ ಸಿ ಎಂದು ಪರಿಪರಿಯಾಗಿ ಬೇಡಿಕೊಂಡಿದ್ದಾರೆ.

    ನಟ ಹೇಳಿದ್ದೇನು?
    ತೆಲುಗು ಚಿತ್ರರಂಗದ ನಟ ವಿಜಯ್ ರಂಗರಾಜು ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆ ವೈರಲ್ ಆಗಿದೆ. ಇದನ್ನು ಗಮನಿಸಿದ ಸ್ಯಾಂಡಲ್‍ವುಡ್ ತಾರೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದಶಕಗಳ ಹಿಂದೆ ವಿಷ್ಣುವರ್ಧನ್ ಜೊತೆ ನಟಿಸಿದ್ದಾಗಿ ಹೇಳಿಕೊಂಡಿದ್ದು, ಇದೇ ವೇಳೆ ವಿಷ್ಣುವರ್ಧನ್ ಅವರ ನಡತೆ ಬಗ್ಗೆ ಆಕ್ಷೇಪಣೆಯ ಮಾತುಗಳನ್ನಾಡಿದ್ದಾರೆ. ಅಲ್ಲದೆ ಅಂದು ವಿಷ್ಣುವರ್ಧನ್ ಕಾಲರ್ ಹಿಡಿದು ಜಗಳ ಮಾಡಿದ್ದಾಗಿ ಸಹ ಹೇಳಿದ್ದಾರೆ. ಹೀಗಾಗಿ ಆಕ್ರೋಶ ಭುಗಿಲೆದ್ದಿದೆ.

    ವಿಷ್ಣುಸೇನೆ, ವಿಷ್ಟುವರ್ಧನ್ ಅಭಿಮಾನಿಗಳು ನಟನ ವಿರುದ್ಧ ಹಲವು ಕಡೆ ದೂರು ದಾಖಲಿಸಿದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಸಹ ದೂರು ದಾಖಲಿಸಿಕೊಂಡಿದೆ. ಅಲ್ಲದೆ ಸ್ಯಾಂಡಲ್‍ವುಡ್ ನಟರು ಸಹ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ವಿಜಯ್ ಕ್ಷಮೆಯಾಚಿಸಿದ್ದಾರೆ.

  • ಹಿರಿಯ ರಂಗಕರ್ಮಿ, ಗುಡ್ಡದ ಭೂತ ಸೀರಿಯಲ್ ನಟ ಉದ್ಯಾವರ ಮಾಧವ ಆಚಾರ್ಯ ಇನ್ನಿಲ್ಲ

    ಹಿರಿಯ ರಂಗಕರ್ಮಿ, ಗುಡ್ಡದ ಭೂತ ಸೀರಿಯಲ್ ನಟ ಉದ್ಯಾವರ ಮಾಧವ ಆಚಾರ್ಯ ಇನ್ನಿಲ್ಲ

    ಉಡುಪಿ: ಹಿರಿಯ ರಂಗಕರ್ಮಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಐವತ್ತಕ್ಕೂ ಹೆಚ್ಚು ನಾಟಕಗಳಿಗೆ ನಿರ್ದೇಶನ ಮಾಡಿದ ಉಡುಪಿಯ ಉದ್ಯಾವರ ಮಾಧವ ಆಚಾರ್ಯ ಕೊನೆಯುಸಿರೆಳೆದಿದ್ದಾರೆ.

    ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಉದ್ಯಾವರ ಮಾಧವ ಆಚಾರ್ಯರಿಗೆ 79 ವರ್ಷವಾಗಿತ್ತು. ರಂಗಭೂಮಿ ನಿರ್ದೇಶಕರಾಗಿ, ಕಥೆಗಾರನಾಗಿ, ಕವಿಯಾಗಿ ನಾಡಿನಾದ್ಯಂತ ಪ್ರಸಿದ್ಧರಾಗಿದ್ದರು. ಬಾರಿ ಜನಮೆಚ್ಚುಗೆ ಪಡೆದಿದ್ದ ಗುಡ್ಡದ ಭೂತ ಧಾರಾವಾಹಿಯಲ್ಲಿ ಮಾಧವ ಆಚಾರ್ಯ ನಟಿಸಿದ್ದರು. ಉಡುಪಿಯ ಸಮೂಹ ಸಂಸ್ಥೆಯನ್ನು ಹುಟ್ಟು ಹಾಕಿದ್ದ ಇವರು, ತಮ್ಮ ತಂಡವನ್ನು ದೇಶ-ವಿದೇಶಗಳಿಗೆ ಕೊಂಡೊಯ್ದು ನಾಟಕ, ರೂಪಕಗಳನ್ನು ಪ್ರದರ್ಶಿಸಿದ್ದರು.

    ರಾಜ್ಯೋತ್ಸವ, ರಂಗ ವಿಶಾರದ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಸನ್ಮಾನಗಳು ಆಚಾರ್ಯರಿಗೆ ಒಲಿದು ಬಂದಿದೆ. ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಅರ್ಥಶಾಸ್ತ್ರದ ಉಪನ್ಯಾಸಕರಾಗಿ ಕುಂದಾಪುರದ ಬಿಪಿ ಶೆಟ್ಟಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು.

    ಬಾಗಿದ ಮರ- ಕಥಾಸಂಕಲನ, ರಂಗಸ್ಥಳದ ಕನವರಿಕೆಗಳು, ಎಂಬ ಕವನ ಸಂಕಲನ, ಕೃಷ್ಣನ ಸೋಲು, ಗಾಂಧಾರಿ ನಾಟಕ ಶಬರಿ, ಅಂಧಯುಗ, ಪಾಂಚಾಲಿ, ಅಂಬೆ, ನಾಟಕ ನೃತ್ಯ ರೂಪಕಗಳನ್ನು ರಚಿಸಿ ನಿರ್ದೇಶಿಸಿದ್ದರು. ಮಂಗಳೂರು ಆಕಾಶವಾಣಿ ಮೂಲಕ ಹಲವಾರು ನಾಟಕಗಳು ಪ್ರಸಾರಗೊಂಡಿದ್ದವು. ಹಿರಿಯ ಅರ್ಥಶಾಸ್ತ್ರಜ್ಞರಾಗಿಯೂ ಸಮಾಜಕ್ಕೆ ಉದ್ಯಾವರ ಮಾಧವ ಆಚಾರ್ಯ ಸೇವೆ ಸಲ್ಲಿಸಿದ್ದಾರೆ.

  • ಆತ್ಮಹತ್ಯೆ ಅಲ್ಲ, ಕೊಲೆ? – ನಟ ಅಕ್ಷತ್ ಉತ್ಕರ್ಷ್ ಪ್ರಕರಣದಲ್ಲಿ ಟ್ವಿಸ್ಟ್

    ಆತ್ಮಹತ್ಯೆ ಅಲ್ಲ, ಕೊಲೆ? – ನಟ ಅಕ್ಷತ್ ಉತ್ಕರ್ಷ್ ಪ್ರಕರಣದಲ್ಲಿ ಟ್ವಿಸ್ಟ್

    – ಅಕ್ಷತ್ ಪ್ರೇಯಸಿ ಸುತ್ತ ಅನುಮಾನದ ಹುತ್ತ

    ಮುಂಬೈ: ಉದಯೋನ್ಮುಖ ನಟ ಅಕ್ಷತ್ ಉತ್ಕರ್ಷ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಪೊಲೀಸರು ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 34ರ ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ. ಈ ಮೂಲಕ ಅಕ್ಷತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಕೊಲೆ ಎಂಬುದನ್ನ ಪೊಲೀಸರು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಡೀ ಪ್ರಕರಣ ಅಕ್ಷತ್ ಗೆಳತಿ ಸ್ನೇಹಾ ಚೌಹಾಣ್ ಅತ್ತ ಬೆರಳು ಮಾಡುತ್ತಿದೆ.

    ಸ್ನೇಹಾ ಚೌಹಾಣ್ ಸಹ ನಟಿಯಾಗಿದ್ದು, ಅಕ್ಷತ್ ಜೊತೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದರು. ಅಕ್ಷತ್ ನಿಧನವಾದ ದಿನ ಅಂದ್ರೆ ಸೆಪ್ಟೆಂಬರ್ 27ರ ರಾತ್ರಿ ಸ್ನೇಹಾ ಚೌಹಾಣ್ ಮನೆಯಲ್ಲಿದ್ದಿದ್ದು, ಅವರೇ ಪೊಲೀಸರು ಮತ್ತು ಕುಟುಂಬಸ್ಥರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಅಕ್ಷತ್ ಜೊತೆಯಲ್ಲಿದಿದ್ದನ್ನು ಸ್ನೇಹಾ ಸಹ ಒಪ್ಪಿಕೊಂಡಿದ್ದಾರೆ. ಭಾನುವಾರ ಜೊತೆಯಲ್ಲಿ ಊಟ ಮಾಡುತ್ತಿರುವಾಗ ಅಕ್ಷತ್ ಒಂದು ರೀತಿ ವರ್ತಿಸುತ್ತಿದ್ದನು. ರಾತ್ರಿ ಸುಮಾರು 11.30ಕ್ಕೆ ಅಕ್ಷಯ್ ಶವ ಹಾಲ್ ನಲ್ಲಿ ನೇತಾಡುತ್ತಿತ್ತು. ಕೂಡಲೇ 100 ನಂಬರ್ ಗೆ ಕರೆ ಮಾಡಿದೆ. ಸ್ಥಳಕ್ಕಾಗಮಿಸಿದ ಅಂಬೋಲೆ ಪೊಲೀಸರ ಸಹಾಯದಿಂದ ಅಕ್ಷತ್ ನನ್ನು ಆಸ್ಪತ್ರೆಗೆ ಕರೆದೊಯ್ದದಾಗ ವೈದ್ಯರು ಮೃತಪಟ್ಟಿರೋದನ್ನ ಖಚಿತ ಪಡಿಸಿದರು ಎಂದು ಸ್ನೇಹಾ ಚೌಹಾಣ್ ಹೇಳಿದ್ದಾರೆ.

    ಬಿಹಾರದ ಮುಜಫರ್ ನಗರ ಮೂಲದ ಎಂಬಿಎ ಪದವಿಧರ ಅಕ್ಷತ್ ಮುಂಬೈನಲ್ಲಿ ಉಳಿದುಕೊಂಡಿದ್ದರು. ಕೆಲಸದ ಜೊತೆಯಲ್ಲಿ ಅಲ್ಬಂಗಳಲ್ಲಿಯೂ ಅಕ್ಷತ್ ಕಾಣಿಸಿಕೊಂಡಿದ್ದರು. ಮುಂಬೈನ ಸುರೇಶ್ ನಗರದಲ್ಲಿರುವ ಪಶ್ಚಿಮ ಅಂಧೇರಿಯ ಆರ್ ಟಿಓ ಲೈನ್ ಕಟ್ಟಡದಲ್ಲಿ ಅಕ್ಷತ್ ವಾಸವಾಗಿದ್ದರು.

    ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಅಕ್ಷತ್ ತಂದೆ ಜೊತೆ ಫೋನ್ ನಲ್ಲಿ ಮಾತನಾಡಿದ್ದಾನೆ. ಅದಾದ ಬಳಿಕ ಅಕ್ಷತ್ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅಂದು ತಡರಾತ್ರಿ ಅಕ್ಷತ್ ಸಾವಿನ ಬಗ್ಗೆ ನಮಗೆ ಮಾಹಿತಿ ಬಂತು. ಮುಂಬೈ ಪೊಲೀಸರು ನಮಗೆ ಯಾವುದೇ ಮಾಹಿತಿ ನೀಡಲಿಲ್ಲ ಎಂದು ಅಕ್ಷತ್ ಮಾವ ರಂಜಿತ್ ಸಿಂಗ್ ಹೇಳಿದ್ದಾರೆ.

    ಅಕ್ಷತ್ ಸಾವು ಆಗಿದೆಯಾ ಅಥವಾ ಇಲ್ಲವಾ ಎಂಬುದರ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಸಿಗದ ಹಿನ್ನೆಲೆ ಮುಂಬೈಗೆ ದೌಡಾಯಿಸಿದೆ. ಅಕ್ಷತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಬಗ್ಗೆ ಕೆಲವರು ಮಾಹಿತಿ ನೀಡಿದ್ರೆ, ಆತನ ಗೆಳೆಯರು ಅಕ್ಷತ್ ತಂದೆಗೆ ಫೋನ್ ಮಗ ಸಾವು ಆಗಿದೆ ಅಂತಾ ಹೇಳಿದ್ದರು. ಕೊನೆಗೆ ಮುಂಬೈಗೆ ಬಂದಾಗ ಅಕ್ಷತ್ ನಮ್ಮನ್ನು ಅಗಲಿರುವ ವಿಷಯ ತಿಳಿಯಿತು ಎಂದು ರಂಜಿತ್ ಸಿಂಗ್ ಹೇಳಿದ್ದರು.

    ಒಂದಿಷ್ಟು ಅನುಮಾನ: ಅಕ್ಷತ್ ಪ್ಲಾಸ್ಟಿಕ್ ಚೀಲ ಬಳಸಿ ನೇಣುಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಆರು ಅಡಿ ಎತ್ತರದ ಮಗನ ಭಾರವನ್ನ ಒಂದು ಸಣ್ಣ ಚೀಲ ಹಿಡಿಯಲು ಸಾಧ್ಯವೇ ಎಂದು ಅಕ್ಷತ್ ಪೋಷಕರು ಪ್ರಶ್ನೆ ಮಾಡುತ್ತಿದ್ದಾರೆ. ಆರಂಭದಲ್ಲಿ ಅಕ್ಷತ್ ಪೋಷಕರು ಮುಂಬೈ ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಸಹ ಆರೋಪಿಸಿದ್ದರು.

    ಸುಶಾಂತ್ ಸಿಂಗ್ ರಜಪೂತ್ ಸಾವು: ಜೂನ್ 14ರಂದು ನಟ ಸುಶಾಂತ್ ಸಿಂಗ್ ರಜಪೂತ್ ಮೃತದೇಹ ಅವರ ಬಾಂದ್ರಾದ ನಿವಾಸದಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಮಾನಸಿಕ ಖಿನ್ನತೆಯಿಂದಾಗಿ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ ನಟಿ ಕಂಗನಾ ರಣಾವತ್ ಮತ್ತು ಸುಶಾಂತ್ ಅಭಿಮಾನಿಗಳು ಇದೊಂದು ಪೂರ್ವಯೋಜಿತ ಕೊಲೆ ಎಂದು ಆರೋಪಿಸಿ, ಸಿಬಿಐ ತನಿಖೆ ನಡೆಯಬೇಕೆಂದು ಅಭಿಯಾನ ಆರಂಭಿಸಿದ್ದರು. ಬಿಹಾರ ಮತ್ತು ಮುಂಬೈ ಪೊಲೀಸರ ಹಗ್ಗ ಜಗ್ಗಾಟದಲ್ಲಿ ಸುಶಾಂತ್ ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿದೆ.

  • ಅಣ್ಣಾವ್ರ ಕೈ ಸ್ಪರ್ಶಿಸಿದ್ದೇ ನನ್ನ ಭಾಗ್ಯ: ನಟ ಗಣೇಶ್ ರಾವ್ ಕೇಸರ್ಕರ್

    ಅಣ್ಣಾವ್ರ ಕೈ ಸ್ಪರ್ಶಿಸಿದ್ದೇ ನನ್ನ ಭಾಗ್ಯ: ನಟ ಗಣೇಶ್ ರಾವ್ ಕೇಸರ್ಕರ್

    ಟನೆಯ ವ್ಯಾಮೋಹಕ್ಕೆ ಸಿಲುಕಿ ಕೈಯಲ್ಲಿ ಸ್ವಂತ ಕೆಲಸವಿದ್ರೂ ಕಲಾ ಸರಸ್ವತಿಯ ಆರಾಧನೆಗೆ ಬಣ್ಣದ ಲೋಕಕ್ಕೆ ಕಾಲಿಟ್ಟು ಚಿಕ್ಕ ಚಿಕ್ಕ ಪಾತ್ರಗಳಲ್ಲೇ ಖುಷಿಪಡುತ್ತಾ ಇಂದು ಸಾಕಷ್ಟು ಹೆಸರು ಗಳಿಸಿರುವ ನಟ ಗಣೇಶ್ ರಾವ್ ಕೇಸರ್ಕರ್. ತಮ್ಮ 20 ವರ್ಷಗಳ ಕಿರುತೆರೆ, ಹಿರಿತೆರೆ ಜರ್ನಿಯ ಬಗ್ಗೆ ನಮ್ಮೊಂದಿಗೆ ಮಾತನಾಡಿದ್ದಾರೆ.

    * ನಿಮ್ಮ ಹಿನ್ನೆಲೆ ಬಗ್ಗೆ ಹೇಳಿ..
    ಮೂಲತಃ ಕೊಳ್ಳೆಗಾಲದವನು. ನಮ್ಮ ತಂದೆ ಮಿಲಿಟರಿ ಅಧಿಕಾರಿ. ನಾನು ಡಿಪ್ಲೋಮ ಇನ್ ಆಟೋಮೊಬೈಲ್ ಎಂಜಿನಿಯರಿಂಗ್ ಮುಗಿಸಿದ್ದೇನೆ. ಹೈಸ್ಕೂಲ್‍ನಲ್ಲಿದ್ದಾಗ ನಾಟಕವೊಂದಕ್ಕೆ ಬಣ್ಣ ಹಚ್ಚಿದ್ದೆ. ಅದರಲ್ಲಿ ನಾನು ಬಹುಮಾನ ಪಡೆದುಕೊಂಡಿದ್ದೆ. ಅಂದು ಆ ಸಂದರ್ಭ ನನಗೆ ಬಹಳ ಖುಷಿ ಕೊಡ್ತು. ನಾನು ಕಲಾವಿದನಾಗಬೇಕೆಂಬ ಆಸೆ ಮೊಳಕೆಯೊಡೆಯಿತು. ಆದರೆ ಮನೆಯಲ್ಲಿ ಮೊದಲಿನಿಂದಲೂ ಈ ಕ್ಷೇತ್ರದ ಬಗ್ಗೆ ಅಷ್ಟು ಆಸಕ್ತಿ ಇರಲಿಲ್ಲ. ಆದ್ದರಿಂದ ನಾನು ವಿದ್ಯಾಭ್ಯಾಸದ ನಂತರ ನಟನೆಯಲ್ಲಿ ತೊಡಗಿಕೊಳ್ಳೋಣ ಎಂದು ಓದಿನ ಕಡೆ ಗಮನ ಹರಿಸಿದೆ. ಇಂಜಿನಿಯರಿಂಗ್ ಮುಗಿದ ಬಳಿಕ ಕಲಾವಿದನಾಗಲು ನಿರ್ಧರಿಸಿದೆ.

    * ಕಿರುತೆರೆ ನಿಮ್ಮ ಕಲಾ ಬದುಕಿಗೆ ತಂದು ಕೊಟ್ಟ ಶ್ರೇಯಸ್ಸಿನ ಬಗ್ಗೆ ಹೇಳಿ..
    ವಿದ್ಯಾಭ್ಯಾಸದ ಬಳಿಕ ಸ್ವಂತ ಕೆಲಸದಲ್ಲಿ ತೊಡಗಿದ ನನಗೆ ಚಿತ್ರರಂಗದ ಪರಿಚಯಸ್ಥರೊಬ್ಬರ ಮೂಲಕ ಕಿರುತೆರೆಯಲ್ಲಿ ನಟಿಸಲು ಅವಕಾಶ ದೊರೆಯಿತು. ನಾನು ಆರಡಿ ಎತ್ತರ ಅಷ್ಟೇ ಪರ್ಸನಾಲಿಟಿ ಇದ್ದಿದ್ದರಿಂದ ‘ಮಂಜುಕರಗಿತು’ ಧಾರಾವಾಹಿಯಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ದೊರೆಯಿತು. ಆ ಪಾತ್ರ ಕ್ಲಿಕ್ ಆಗಿ ಕಿರುತೆರೆಯಲ್ಲಿ ‘ಭಾಗ್ಯಚಕ್ರ’, ‘ಮನ್ವಂತರ’, ‘ಗೋಧೂಳಿ’, ‘ಪುಣ್ಯಕೋಟಿ’ ಹೀಗೆ ಬ್ಯಾಕ್ ಟು ಬ್ಯಾಕ್ ಸೀರಿಯಲ್ ಗಳಲ್ಲಿ ಅಭಿನಯಿಸಿದೆ. ಇದರ ಜೊತೆಗೆ ಪೌರಾಣಿಕ ಧಾರಾವಾಹಿಗಳಲ್ಲಿ ಪಾತ್ರ ಮಾಡಿ ಸೈ ಎನಿಸಿಕೊಂಡೆ. ಕಲಾ ಸರಸ್ವತಿಯ ಆಶೀರ್ವಾದದಿಂದ ಇಂದು ಸುಮಾರು 4000ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಲು ಅವಕಾಶ ದೊರಕಿದೆ, ಈಗಲೂ ಅವಕಾಶ ಸಿಗುತ್ತಿದೆ. ಇದನ್ನೂ ಓದಿ: ಪರಿಶ್ರಮ ಪ್ರಯತ್ನದ ಜೊತೆ ತಾಳ್ಮೆ ಇರಲಿ: ನಟಿ ದೀಪಾ ಭಾಸ್ಕರ್

    * ಬೆಳ್ಳಿತೆರೆಯಲ್ಲಿ ನಿಮ್ಮ ಪಯಣ ಶುರುವಾಗಿದ್ದು ಹೇಗೆ?
    ಧಾರಾವಾಹಿಗಳಲ್ಲಿ ಒಂದಾದ ಮೇಲೆ ಒಂದರಂತೆ ನಟಿಸುತ್ತಾ ನನ್ನ ಪಾತ್ರಗಳ ಮೂಲಕ ಚಿತ್ರರಂಗದಿಂದಲೂ ಅವಕಾಶಗಳು ಬರಲು ಆರಂಭವಾಯಿತು. `ಚಾಮುಂಡಿ’ ಚಿತ್ರ ನಾನು ಮೊದಲು ನಟಿಸಿದ ಚಲನಚಿತ್ರ. ಅಲ್ಲಿಂದ ಚಿಕ್ಕ ಪುಟ್ಟ ಪಾತ್ರಗಳ ಮೂಲಕ ಸಿನಿಮಾದಲ್ಲಿ ನಟನೆ ಮಾಡುತ್ತಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡೆ. ಸುಮಾರು 200 ಸಿನಿಮಾಗಳಲ್ಲಿ ನಾನು ಪೋಷಕ ಪಾತ್ರಗಳಿಗೆ ಬಣ್ಣಹಚ್ಚಿದ್ದೇನೆ. ಈ ಮಧ್ಯೆ ನಾನು ನಮ್ಮವರು ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದೇನೆ. `ಸಚ್ಚಿ’, `ಡಾನ್’, `ಶಾಸ್ತ್ರಿ’, `ತಂಗಿಗಾಗಿ’, `ನಂದ’, ‘ರಾಕ್ಷಸ’, `ಪಾರ್ಥ’ ಹೀಗೆ ಒಂದಾದ ಮೇಲೆ ಒಂದು ಸಿನಿಮಾಗಳಲ್ಲಿ ನಟಿಸುತ್ತಾ ಹೋದೆ. ಅಂಬರೀಶ್, ವಿಷ್ಣುವರ್ಧನ್, ರವಿಚಂದ್ರನ್, ಜಗ್ಗೇಶ್, ಶಿವಣ್ಣ ದರ್ಶನ್, ಸುದೀಪ್ ಸೇರಿದಂತೆ ಚಂದನವನದ ಎಲ್ಲಾ ಸ್ಟಾರ್ ನಟರು ಹಾಗೂ ಈಗಿನ ನವ ನಟರ ಜೊತೆಯೂ ನಟಿಸಿದ್ದೇನೆ. ಇದನ್ನೂ ಓದಿ: ನನ್ನ ಕಡೆ ಎಸೆದ ಕಲ್ಲುಗಳನ್ನು ಮೆಟ್ಟಿಲು ಮಾಡಿಕೊಂಡು ಬೆಳೆದೆ- ಪಾಪಾ ಪಾಂಡು ಖ್ಯಾತಿಯ ಚಿದಾನಂದ್

    * ನಿಮಗೆ ಖ್ಯಾತಿ ತಂದು ಕೊಟ್ಟ ಪಾತ್ರ ಯಾವುದು?
    ಪೊಲೀಸ್ ಇನ್ಸ್ ಪೆಕ್ಟರ್ ಪಾತ್ರಗಳು ನನಗೆ ಹೆಚ್ಚು ಖ್ಯಾತಿಯನ್ನು ತಂದುಕೊಟ್ಟಿದೆ. ನಾನು 200 ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದೇನೆ. ಅದರಲ್ಲಿ ಬಹುತೇಕ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದೇ ಹೆಚ್ಚು. ಖಳನಟನಾಗಿ, ಪೊಲೀಸ್ ಅಧಿಕಾರಿಯಾಗಿ ನಟಿಸಿದ ಪಾತ್ರಗಳು ಸಿನಿಮಾದಲ್ಲಿ ನನಗೆ ಖ್ಯಾತಿಯನ್ನು ತಂದು ಕೊಟ್ಟಿದೆ. ಹೆಚ್ಚಾಗಿ ನನ್ನನ್ನು ಪೊಲೀಸ್ ರೋಲ್ ಮಾಡಲೆಂದೇ ಈಗಲೂ ಕರೆಯುತ್ತಾರೆ ಇದು ನನಗೆ ಒಂದು ರೀತಿಯ ಹೆಮ್ಮೆಯ ವಿಚಾರ ಎನ್ನಿಸುತ್ತೆ.  ಇದನ್ನೂ ಓದಿ: ಹಂಡ್ರೆಡ್ ಪರ್ಸೆಂಟ್ ಹ್ಯಾಪಿ ನಾನು- ಖ್ಯಾತ ಕಿರುತೆರೆ ನಟ, ನಿರ್ದೇಶಕ ರವಿಕಿರಣ್

    * ನೀವು ಎಂದೂ ಮರೆಯದ ಘಟನೆ ಯಾವುದು?
    ಅಣ್ಣಾವ್ರು ಕಾಡಿನಿಂದ ಬಂದ ನಂತರ ಅವರ ನೇತೃತ್ವದಲ್ಲಿ ಚಿತ್ರರಂಗದಲ್ಲಿ ಹೋರಾಟ ನಡೆಯಿತು. ರಾಜ್ಯದಲ್ಲಿ ಕನ್ನಡ ಸಿನಿಮಾ ಬಿಡುಗಡೆಯಾದ ಆರು ವಾರದ ನಂತರ ಪರಭಾಷೆ ಸಿನಿಮಾ ಬಿಡುಗಡೆಯಾಗಬೇಕೆಂಬುದು ಆ ಹೋರಾಟದ ಉದ್ದೇಶ. ಈ ಸಮಯಯದಲ್ಲಿ ಡಾ.ರಾಜ್‍ಕುಮಾರ್ ಅವರ ಆರೋಗ್ಯ ಅಷ್ಟು ಚೆನ್ನಾಗಿರಲಿಲ್ಲ. ಅವರ ಕೈ ನಡುಗುತ್ತಿತ್ತು. ಆಗ ಅವರ ಪಕ್ಕದಲ್ಲಿ ನಾನಿದ್ದೆ. ಅಣ್ಣಾವ್ರು ನನ್ನ ಕೈ ಮೇಲೆ ಕೈಯಿಟ್ಟು ಸ್ವಲ್ಪ ಹಿಡಿದುಕೋ ಎಂದು ಹೇಳಿದ್ರು. ಅವರ ಕೈ ಸ್ಪರ್ಶ ನನಗೊಂದು ರೋಮಾಂಚನದ ಅನುಭವ ನೀಡಿತು. ಅವರ ಭಾಷಣ ಮುಗಿಯುವವರೆಗೂ ಕೈಹಿಡಿದುಕೊಂಡೇ ಇದ್ದೆ. ಈಗಲೂ ಆ ಕ್ಷಣ ನನಗೆ ತುಂಬಾ ಖುಷಿ ಕೊಡುತ್ತೆ. ಅವರ ಜೊತೆ ನಟಿಸಲು ಆಗದಿದ್ದರೂ ಅವರ ಕೈ ಹಿಡಿದುಕೊಳ್ಳುವ ಭಾಗ್ಯ ನನ್ನದಾಗಿತಲ್ಲ ಎಂಬ ಧನ್ಯತಾ ಭಾವ ನನ್ನಲ್ಲಿದೆ. ಇದನ್ನೂ ಓದಿ:ಸೋಲು-ಗೆಲುವನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿದ್ದೇನೆ, ಯಾವುದೇ ರಿಗ್ರೆಟ್ ಇಲ್ಲ- ನಟ ದಿಲೀಪ್ ರಾಜ್ 

    * ಚಿತ್ರರಂಗದಲ್ಲಿ ಎದುರಿಸಿದ ನೋವಿನ ಸಂಗತಿ
    ನಾನು ತುಂಬಾ ಇಷ್ಟಪಟ್ಟು ಈ ಕ್ಷೇತ್ರಕ್ಕೆ ಬಂದಿದ್ದೇನೆ. ಏನೇ ಆದರೂ ಕಲಾವಿದನಾಗೇ ಉಳಿಯಬೇಕು ಎಂದುಕೊಂಡಿದ್ದೇನೆ. ಆದ್ದರಿಂದ ಏನೇ ನೋವಾದರೂ ಸಹಿಸಿಕೊಳ್ಳಲೇಬೇಕು. ಅವಮಾನ, ಅಪಮಾನ ಆದಾಗ ಸಾಕಪ್ಪ ಬಿಟ್ಟು ಹೋಗೋಣ ಅನ್ನಿಸಿದ್ದು ಇದೆ. ಆದರೆ ನಾನು ನಟನೆಯಲ್ಲೇ ಸಾರ್ಥಕತೆ ಕಂಡುಕೊಂಡಿರೋದ್ರಿಂದ ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಮುಂದೆ ಸಾಗುತ್ತಿದ್ದೇನೆ.

    * ರಾಜಕೀಯ ರಂಗದಲ್ಲೂ ನೀವು ಗುರುತಿಸಿಕೊಂಡಿದ್ದೀರಿ?
    ನನಗೆ ಸಾಮಾಜಿಕ, ಸಮಾಜಮುಖಿ ಕೆಲಸದಲ್ಲಿ ಮೊದಲಿನಿಂದಲೂ ಆಸಕ್ತಿ. ಸಮಾಜದಲ್ಲಿ ಒಂದೊಳ್ಳೆ ಸ್ಥಾನದಲ್ಲಿ ಗುರುತಿಸಿಕೊಳ್ಳಬೇಕೆಂಬ ಬಯಕೆ ಇದೆ. ಆ ಮೂಲಕ ಜನರ ಸೇವೆ ಮಾಡಬೇಕು ಎಂದುಕೊಂಡಿದ್ದೇನೆ ಇದೇ ನಿಟ್ಟಿನಲ್ಲಿ ರಾಜಕೀಯ ರಂಗದಲ್ಲಿಯೂ ಸಕ್ರಿಯವಾಗಿದ್ದೇನೆ. ಇದನ್ನೂ ಓದಿ: ನಮ್ಮ ಅನುಭವಕ್ಕೆ ಈಗ ಬೆಲೆಯಿಲ್ಲ: ಹಿರಿಯ ನಟ, ರಂಗಭೂಮಿ ಕಲಾವಿದ ಶಂಕರ್ ಭಟ್

    * ಚಿತ್ರರಂಗದಲ್ಲಿ ನಿಮ್ಮ ಮುಂದಿನ ನಡೆ?
    ಒಳ್ಳೊಳ್ಳೆ ಪಾತ್ರಗಳಲ್ಲಿ ನಟಿಸುತ್ತಾ ಹೋಗಬೇಕು ಅನ್ನೋದೊಂದೇ ನನ್ನ ಮುಂದಿರುವ ಗುರಿ. ಸಿನಿಮಾ ನಿರ್ದೇಶನ ಮಾಡುವ ಪ್ಲಾನ್ ಕೂಡ ಇದೆ. ಕಥೆ ಕೂಡ ರೆಡಿ ಮಾಡುತ್ತಿದ್ದೇನೆ. ಇದರ ಬೆನ್ನಲ್ಲೇ ಕಂಠೀರವ ಸ್ಟುಡಿಯೋ ಅಧ್ಯಕ್ಷ ಸ್ಥಾನದ ಚುನಾವಣೆಗೆ ಬೇಡಿಕೆ ಇಟ್ಟಿದ್ದೇನೆ. ಸ್ಟುಡಿಯೋ ಅಭಿವೃದ್ಧಿಗೆ ನನ್ನದೇ ಆದ ಕೊಡುಗೆ ನೀಡಬೇಕು ಎಂಬ ಬಹುದೊಡ್ಡ ಕನಸಿದೆ.

    * ಪ್ರಸ್ತುತ ನಟಿಸುತ್ತಿರುವ ಸೀರಿಯಲ್ ಮತ್ತು ಸಿನಿಮಾಗಳು ಯಾವ್ಯಾವು.?
    ರವಿಬೋಪಣ್ಣ, ಕಿರಿಕ್ ಶಂಕ್ರ, ಯಾರ್ ಮಗ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ. ಕೆಲವು ಚಿತ್ರಗಳು ಬಿಡುಗಡೆಯಾಗಬೇಕಿದೆ. ಇದರ ಜೊತೆ ಚೈತನ್ಯ ನಿರ್ದೇಶನದ ಆಕೃತಿ ಧಾರಾವಾಹಿಯಲ್ಲಿಯೂ ನಟಿಸುತ್ತಿದ್ದೇನೆ.

  • ಶೀಘ್ರವೇ ಕನ್ನಡದ ಸ್ಟಾರ್ ನಟನಿಗೆ ಎನ್‍ಸಿಬಿ ಡ್ರಗ್ಸ್ ಶಾಕ್

    ಶೀಘ್ರವೇ ಕನ್ನಡದ ಸ್ಟಾರ್ ನಟನಿಗೆ ಎನ್‍ಸಿಬಿ ಡ್ರಗ್ಸ್ ಶಾಕ್

    ಬೆಂಗಳೂರು: ಡ್ರಗ್ಸ್ ಡೀಲ್ ಪ್ರಕರಣಕ್ಕೆ ಶೀಘ್ರವೇ ಸ್ಫೋಟಕ ಟ್ವಿಸ್ಟ್ ದೊರೆಯಲಿದ್ದು, ಸ್ಯಾಂಡಲ್‍ವುಡ್‍ಗೆ ಅತಿ ದೊಡ್ಡ ಶಾಕ್ ಒಂದು ಕಾದಿದೆ.

    ಇದು ಸಿಸಿಬಿ ಅಲ್ಲ, ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್‍ಸಿಬಿ)ಯ ದೊಡ್ಡ ಕಾರ್ಯಾಚರಣೆಯಾಗಿದೆ. ಈ ಮೂಲಕ ಡ್ರಗ್ ಕೇಸಿನಲ್ಲಿ ಎನ್‍ಸಿಬಿ ಸೈಲೆಂಟ್ ಆಗಿ ಕೆಲಸ ಮಾಡುತ್ತಿದ್ದು, ಶೀಘ್ರವೇ ಸ್ಯಾಂಡ್‍ಲವುಡ್‍ನ ಬಿಗ್ ಬ್ರೇಕಿಂಗ್ ಸುದ್ದಿಯೊಂದು ಹೊರಬೀಳಲಿದೆ.

    ಕಾರ್ಪೊರೇಟರ್ ಮಗ ಯಶಸ್ ‘ಸ್ಟಾರ್ ನಟ’ನ ಹೆಸರು ಹೇಳಿದ್ದಾನೆ. ಹೀಗಾಗಿ ಸದ್ಯದಲ್ಲೇ ಕನ್ನಡದ ದೊಡ್ಡ ನಟನಿಗೆ ಶಾಕ್ ಸಿಗಲಿದೆ. ಯಶಸ್ ಹೇಳಿಕೆ ಆಧರಿಸಿ ಎನ್‍ಸಿಬಿ ದೊಡ್ಡ ನಟನ ಬೆನ್ನುಬಿದ್ದಿದೆ. ಸ್ಟಾರ್ ನಟ ಆಗಿರೋದ್ರಿಂದ ಪ್ರಬಲ ಸಾಕ್ಷ್ಯಕ್ಕೆ ಎನ್‍ಸಿಬಿ ಶೋಧ ನಡೆಸುತ್ತಿದೆ. ಇದನ್ನೂ ಓದಿ: ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ಯಾಂಡಲ್‍ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಹಾಗೂ ಇವರ ಆಪ್ತರು ಪರಪ್ಪನ ಅಗ್ರಹಾರ ಸೇರಿದ್ದಾರೆ. ಇಬ್ಬರೂ ನಟಿಯರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 23ರವರೆಗೆ ವಿಸ್ತರಿಸಿ ಡಿಪಿಎಸ್ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ. ಈ ಆದೇಶದೊಂದಿಗೆ ಇಬ್ಬರೂ ನಟಿಯರು 23ರವರೆಗೂ ಜೈಲುಶಿಕ್ಷೆ ಅನುಭವಿಸುವುದು ಪಕ್ಕಾ ಆಗಿದೆ. ಇದನ್ನೂ ಓದಿ: ಅನುಶ್ರೀ ಪ್ರಕರಣದ ಮಾಜಿ ಸಿಎಂ ಯಾರೆಂದು ಬಹಿರಂಗಪಡಿಸಿ- ಹೆಚ್‍ಡಿಕೆ ಗರಂ

    ಇತ್ತ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಕಂ ನಟಿ ಅನುಶ್ರೀ ಕೂಡ ಮಂಗಳೂರಿನಲ್ಲಿ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ. ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅನುಶ್ರೀ ಅವರ ಮೊಬೈಲ್ ಕರೆಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರಾಜ್ಯದ ಪ್ರಭಾವಿ ನಾಯಕರಿಗೆ ಕರೆ ಮಾಡಿರುವ ಮಾಹಿತಿ ಲಭ್ಯವಾಗಿದೆ ಎನ್ನಲಾಗಿತ್ತು. ಅಲ್ಲದೇ ವಿಚಾರಣೆ ಸಂದರ್ಭದಲ್ಲಿ ಸಿಸಿಬಿ ಪೊಲೀಸರು ಮೊಬೈಲ್ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅನುಶ್ರೀ ಅವರಿಗೆ ನೋಟಿಸ್ ಬಂದ ದಿನ ಮತ್ತು ಮಾರನೇ ದಿನ ರಾಜ್ಯದ ಮೂವರು ಪ್ರಭಾವಿಗಳಿಗೆ ಕರೆ ಮಾಡಿದ್ದಾರೆ. ಮೂವರು ಪ್ರಭಾವಿಗಳಿಗೆ ಕರೆ ಮಾಡಿ ಹೆಚ್ಚು ಸಮಯ ಮಾತನಾಡಿದ್ದಾರೆ ಎಂಬ ಮಾಹಿತಿ ಲಭಿಸಿತ್ತು.  ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

  • ನಟ ದಿಗಂತ್‍ಗೆ ತಪ್ಪದ ಕಂಟಕ- ಮತ್ತೆ ಸಿಸಿಬಿ ಬುಲಾವ್

    ನಟ ದಿಗಂತ್‍ಗೆ ತಪ್ಪದ ಕಂಟಕ- ಮತ್ತೆ ಸಿಸಿಬಿ ಬುಲಾವ್

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಗೆ ವೇಗ ನೀಡಿರುವ ಸಿಸಿಬಿ ಪೊಲೀಸರು, ಮತ್ತೊಮ್ಮೆ ನಟ ದಿಗಂತ್ ಅವರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

    ಈಗಾಗಲೇ ಒಂದು ಬಾರಿ ಸಿಸಿಬಿ ಎದುರು ಹಾಜರಾಗಿದ್ದ ದಿಗಂತ್, ಐಂದ್ರಿತಾ ದಂಪತಿ ಮತ್ತೆ ಸಿಸಿಬಿ ವಿಚಾರಣೆಗೆ ಕರೆದರೆ ಹಾಜರಾಗುತ್ತೇವೆ ಎಂದು ಹೇಳಿದ್ದರು. ಮೊದಲ ವಿಚಾರಣೆ ನಡೆದ 6 ದಿನಗಳ ಬಳಿಕ ದಿಗಂತ್ ಮತ್ತೆ ನೋಟಿಸ್ ನೀಡಲಾಗಿದೆ. ಇಂದು 11 ಗಂಟೆಗೆ ಕಚೇರಿಗೆ ಆಗಮಿಸುವಂತೆ ದಿಗಂತ್ ಅವರಿಗೆ ಮಾತ್ರ ನೋಟಿಸ್ ತಲುಪಿದೆ ಎಂಬ ಮಾಹಿತಿ ಲಭಿಸಿದೆ. ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಅವರ ಎದುರು ದಿಗಂತ್ ವಿಚಾರಣೆಗೆ ಹಾಜರಾಗಬೇಕಿದೆ.

    ನಿನ್ನೆಯೇ ವಾಟ್ಸಾಪ್ ಮೂಲಕ ನಟ ದಿಗಂತ್ ಅವರಿಗೆ ನೋಟಿಸ್ ನೀಡಲಾಗಿದೆ. ಈ ಹಿಂದೆ ದಿಗಂತ್ ಮತ್ತು ಐಂದ್ರಿತಾ ರೇ ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಸಿಸಿಬಿ ಅಧಿಕಾರಿಗಳು 4 ರಿಂದ 5 ಗಂಟೆ ವಿಚಾರಣೆ ನಡೆಸಿದ್ದರು. ಆ ಬಳಿಕ ಇಬ್ಬರ ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡೆದಿದ್ದರು.

    ಸದ್ಯ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಫೋನ್‍ನಲ್ಲಿದ್ದ ಮಾಹಿತಿಯನ್ನು ಸಿಸಿಬಿ ಪೊಲೀಸರು ರೀಟ್ರೀವ್ ಮಾಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿಯನ್ನ ಆಧರಿಸಿ ಪೊಲೀಸರು ಸದ್ಯ ಮತ್ತೊಮ್ಮೆ ವಿಚಾರಣೆ ನಡೆಸಲು ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ವಿಚಾರಣೆ ಅಂತ್ಯವಾದಾಗ ಈ ಸಾಕ್ಷಿಗಳೇ ಸ್ಟಾರ್ ದಂಪತಿಗೆ ಮುಳುವಾಗ ಬಹುದು ಎನ್ನಲಾಗಿದ್ದು, ಸದ್ಯ ದಿಗಂತ್ ವಿಚಾರಣೆ ತೀವ್ರ ಕುತೂಹಲ ಮೂಡಿಸಿದೆ.

  • ಜಮೀರ್‌ನನ್ನು ಯಾಕೆ ಬಂಧಿಸಿಲ್ಲ- ಸರ್ಕಾರಕ್ಕೆ ಪ್ರತಾಪ್ ಸಿಂಹ ಪ್ರಶ್ನೆ

    ಜಮೀರ್‌ನನ್ನು ಯಾಕೆ ಬಂಧಿಸಿಲ್ಲ- ಸರ್ಕಾರಕ್ಕೆ ಪ್ರತಾಪ್ ಸಿಂಹ ಪ್ರಶ್ನೆ

    ಮೈಸೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾಕೆ ಶಾಸಕ ಜಮೀರ್ ಅಹ್ಮದ್‍ನನ್ನು ಬಂಧಿಸಿ ವಿಚಾರಣೆ ನಡೆಸಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

    ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೇವಲ ಕೆಲ ಸ್ಯಾಂಡಲ್‍ವುಡ್ ನಟಿಯರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಪ್ರಶಾಂತ್ ಸಂಬರಗಿ ನೇರವಾಗಿ ಹೆಸರಿಸಿರುವ ಶಾಸಕ ಜಮೀರ್ ಅಹ್ಮದ್‍ನನ್ನು ಬಂಧಿಸಿ ಯಾಕೆ ವಿಚಾರಣೆ ನಡೆಸುತ್ತಿಲ್ಲ, ಇದರ ಹಿಂದಿನ ಉದ್ದೇಶವೇನು ಎಂಬುದು ಅರ್ಥವಾಗುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.

    ಪ್ರಶಾಂತ್ ಸಂಬರಗಿ ಹಲವರ ಹೆಸರು ಹೇಳಿದ್ದಾರೆ. ಈ ಪಟ್ಟಿಯಲ್ಲಿ ಜಮೀರ್ ಅಹಮ್ಮದ್ ಹೆಸರು ಸಹ ಇದೆ. ಈ ವರೆಗೆ ಜಮೀರ್ ಅಹಮ್ಮದ್ ರನ್ನ ಯಾಕೆ ಬಂಧಿಸಿಲ್ಲ. ಇದರ ಹಿಂದಿನ ಉದ್ದೇಶವೇನು? ತನಿಖಾಧಿಕಾರಿಗಳಿಗೆ ಪ್ರಶಾಂತ್ ಸಂಬರಗಿ ಆರೋಪಗಳ ಮೇಲೆ ಅನುಮಾನಗಳಿದ್ದರೆ ಅವರನ್ನೂ ತನಿಖೆಗೆ ಒಳಪಡಿಸಿ. ಅವರ ಆರೋಪಗಳಿಗೆ ಪೂರಕ ದಾಖಲೆಗಳಿದ್ದರೆ ಅದನ್ನು ಸಂಗ್ರಹಿಸಿಕೊಂಡು ತನಿಖೆ ಮುಂದುವರಿಸಿ ಎಂದು ಹೇಳಿದ್ದಾರೆ.

     

    ಪ್ರಶಾಂತ್ ಸಂಬರಗಿ ಯಾರ್ಯಾರ ಹೆಸರು ಹೇಳಿದ್ದಾರೆ. ಅವರೆಲ್ಲರನ್ನೂ ವಿಚಾರಣೆಗೆ ಒಳಪಡಿಸಿ, ಯಾರೋ ಒಬ್ಬಿಬ್ಬರು ಸಿನಿಮಾ ನಟಿಯರನ್ನು ಕೂಡಿ ಹಾಕಿ ವಿಚಾರಣೆ ನಡೆಸಿ ಕಳುಹಿಸಿದರೆ ಸರಿ ಆಗುವುದಿಲ್ಲ. ಈ ಪ್ರಕರಣ ಹೊರ ಬಂದಿದ್ದೇ ಇಂದ್ರಜಿತ್ ಲಂಕೇಶ್ ಅವರ ಧೈರ್ಯದ ನಿರ್ಧಾರದಿಂದ. ಹೀಗಾಗಿ ಅವರು ಹೇಳಿದ ಎಲ್ಲ ವಿಚಾರ ಹಾಗೂ ಮಜಲುಗಳಿಂದ ತನಿಖೆಯಾಗಬೇಕು ಎಂದು ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

    ಡ್ರಗ್ಸ್ ವಿಚಾರದಲ್ಲಿ ರಾಜಕೀಯ ಪ್ರಭಾವ ಇರುವುದು ಸತ್ಯ. ಇಂತಹ ಪ್ರಕರಣಗಳಲ್ಲಿ ರಾಜಕೀಯ ಬೆರಸಿಕೊಳ್ಳುವುದೂ ಸಹಜ. ಆದರೆ ಗೃಹ ಮಂತ್ರಿಗಳು ಯಾವುದೇ ಪ್ರಭಾವಕ್ಕೆ ಮಣಿಯಲ್ಲ ಎಂದು ಹೇಳಿದ್ದಾರೆ ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ ಎಂದು ಪ್ರತಾಪ್ ಸಿಂಹ ಹೇಳಿದರು.

     

    ಇದು ಶಾಲಾ, ಕಾಲೇಜುಗಳಿಗೂ ಹಬ್ಬುತ್ತಿದ್ದು, ವಿದ್ಯಾರ್ಥಿಗಳು ಡ್ರಗ್ಸ್ ದಾಸರಾಗುತ್ತಿದ್ದಾರೆ. ಇದನ್ನು ಸೇವಿಸಿದರೆ ವಾಸನೆ ಸಹ ಬರುವುದಿಲ್ಲ. ಹೀಗಾಗಿ ಯುವಕರು ಹೆಚ್ಚು ಅಡಿಕ್ಟ್ ಆಗುತ್ತಿದ್ದಾರೆ. ಈ ಸಮಾಜದ ಪಿಡುಗನ್ನು ತೊಲಗಿಸಲು ಸಮಗ್ರ ತನಿಖೆ ಕ್ರಮ ಕೈಗೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

  • ದಲಿತ ಯುವಕನಿಗೆ ಥಳಿಸಿದ್ದ ಆಂಧ್ರದ ನಟ ಉಡುಪಿಯಲ್ಲಿ ಅರೆಸ್ಟ್

    ದಲಿತ ಯುವಕನಿಗೆ ಥಳಿಸಿದ್ದ ಆಂಧ್ರದ ನಟ ಉಡುಪಿಯಲ್ಲಿ ಅರೆಸ್ಟ್

    ಉಡುಪಿ: ಆಂಧ್ರಪ್ರದೇಶದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ದಲಿತ ಯುವಕನ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ತೆಲುಗು ಚಿತ್ರ ನಿರ್ಮಾಪಕ, ತೆಲುಗು ಬಿಗ್‍ಬಾಸ್ ಸ್ಪರ್ಧಿ ಆರೋಪಿ ನೂತನ್ ನಾಯ್ಡುನನ್ನು ಉಡುಪಿ ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

    ಆಂಧ್ರಪ್ರದೇಶ, ವಿಶಾಖಪಟ್ಟಣ ಪೊಲೀಸರಿಂದ ಶನಿವಾರ ಬೆಳಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಪೊಲೀಸರು ಆರೋಪಿಯನ್ನು ರೈಲ್ಲೇ ನಿಲ್ದಾಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮಂಗಳೂರಿನಿಂದ ಮುಂಬೈಗೆ ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದೆ.

    ಉಡುಪಿ ಮತ್ತು ಮಣಿಪಾಲ ಠಾಣೆ ಪಿಎಸ್‍ಐ ನೇತೃತ್ವದ ತಂಡ ಆರೋಪಿಯನ್ನು ಸುತ್ತುವರಿದಾಗ ತನ್ನ ಬಳಿಯಿದ್ದ ಒಂದು ಮೊಬೈಲ್ ಅನ್ನು ಎಸೆಯಲು ಮುಂದಾಗಿದ್ದಾನೆ. ಆರೋಪಿ ನೂತನ್ ಬಳಿಯಿಂದ ನಾಲ್ಕು ಮೊಬೈಲ್ ಫೋನ್‍ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಒಂದು ಗಂಟೆ ಬಳಿಕ ಆರೋಪಿ ನೂತನ್‍ನ್ನು ವಿಶಾಖಪಟ್ಟಣ ಪೊಲೀಸರು ವಶಕ್ಕೆ ಪಡೆದುಕೊಂಡರು. ವಿಶಾಖಪಟ್ಟಣ ಪೊಲೀಸರು ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಶಾಖಪಟ್ಟಣಕ್ಕೆ ಕರೆದೊಯ್ದಿದ್ದಾರೆ.

  • ನಟ, ನಟಿಯರು ಮಾತ್ರವಲ್ಲ ಯುವ ಪೀಳಿಗೆಯೂ ಡ್ರಗ್ಸ್ ಮಾಫಿಯಾದಲ್ಲಿದೆ: ಶ್ರೀರಾಮುಲು

    ನಟ, ನಟಿಯರು ಮಾತ್ರವಲ್ಲ ಯುವ ಪೀಳಿಗೆಯೂ ಡ್ರಗ್ಸ್ ಮಾಫಿಯಾದಲ್ಲಿದೆ: ಶ್ರೀರಾಮುಲು

    ದಾವಣಗೆರೆ: ಡ್ರಗ್ಸ್ ಮಾಫಿಯಾದಲ್ಲಿ ಕೇವಲ ಸ್ಯಾಂಡಲ್‍ವುಡ್ ನಟ, ನಟಿಯರು ಮಾತ್ರವಲ್ಲ ಯುವ ಪೀಳಿಯೇ ಇದೆ. ಈ ಡ್ರಗ್ಸ್ ಮಾಫಿಯಾವನ್ನು ನಮ್ಮ ಸರ್ಕಾರ ಬೇರು ಸಮೇತ ಕಿತ್ತು ಹಾಕಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

    ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ಸ್ಯಾಂಡಲ್‍ವುಡ್ ನಟ, ನಟಿಯರು ಮಾತ್ರ ಡ್ರಗ್ಸ್ ಮಾಫಿಯಾದಲ್ಲಿಲ್ಲ. ಯುವ ಪೀಳಿಗೆಯೂ ಇದೆ. ನಮ್ಮ ಸರ್ಕಾರದ ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತು ಹಾಕಲಿದೆ. ತನಿಖೆ ಪ್ರಗತಿಯಲ್ಲಿದ್ದು, ಪೊಲೀಸರು ಆಳವಾದ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

    ನನ್ನ ಮಾತಿಗೆ ಈಗಲೂ ಬದ್ಧ
    ನ್ಯಾ.ನಾಗಮೋಹನ್ ದಾಸ್ ವರದಿಯನ್ನು ಸಿಎಂ ಯಡಿಯೂರಪ್ಪ ಜಾರಿ ಮಾಡಲಿದ್ದಾರೆ. ವರದಿ ನೀಡಿ ಒಂದು ತಿಂಗಳು ಮಾತ್ರ ಆಗಿದೆ. ಅದರ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಸಿಎಂ ಬಳಿ ನಿಯೋಗ ಹೋಗಲಿದ್ದೇವೆ. ನಾಗಮೋಹನ್ ದಾಸ್ ವರದಿ ಸರ್ಕಾರದ ಮುಂದಿದೆ. ಕೋವಿಡ್ ಇರುವುದರಿಂದ ತಡೆಹಿಡಿಯಲಾಗಿದೆ. ಅದಷ್ಟು ಬೇಗ ಜಾರಿಗೊಳಿಸಲು ಸಭೆ ನಡೆಸಲಾಗುತ್ತಿದೆ. ಇಂದು ಸಭೆಯಲ್ಲಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆಯಲಿದ್ದೇವೆ. ವಾಲ್ಮೀಕಿ ಸಮಾಜಕ್ಕೆ ಶೇಕಡಾ 7.5ರಷ್ಟು ಮೀಸಲಾತಿ ಸಿಗುತ್ತದೆ ಎಂಬ ವಿಶ್ವಾಸ ನನಗಿದೆ.

    ಈಗಾಗಲೇ ನ್ಯಾ.ನಾಗಮೋಹನ ದಾಸ್ ವರದಿ ನೀಡಿದ್ದಾರೆ. ಇದರಲ್ಲಿ ಶೇ.5ರಷ್ಟು ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಆದರೆ ಅದು ಶೇ.7.5 ರಷ್ಟು ಮೀಸಲಾತಿ ಹೆಚ್ಚಳ ಆಗಬೇಕು. ಈ ಹಿಂದೆ ನಾನು ನೀಡಿದ ಹೇಳಿಕೆಗೆ ಬದ್ಧನಾಗಿದ್ದೇನೆ. ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಆಗಬೇಕು. ಅದು ಆಗದಿದ್ದರೆ, ಈ ಹಿಂದೆ ನಾನು ಮಾತು ನೀಡಿದಂತೆ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

  • ಸ್ಟಾರ್ ನಟರ ವಿರುದ್ಧ ಚೇತನ್ ಆಕ್ರೋಶ

    ಸ್ಟಾರ್ ನಟರ ವಿರುದ್ಧ ಚೇತನ್ ಆಕ್ರೋಶ

    ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಇದೆ ಎಂಬುದರ ಬಗ್ಗೆ ತನಿಖೆಗಳು ನಡೆಯುತ್ತಿದೆ. ಈ ಮಧ್ಯೆ ಇದೀಗ ಆ ದಿನಗಳು ಖ್ಯಾತಿ ನಟ ಚೇತನ್ ಸ್ಟಾರ್ ನಟರ ವಿರುದ್ಧ ಗರಂ ಆಗಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಚೇತನ್, ಪ್ರಸ್ತುವಾಗಿ ಎಲ್ಲರ ಗಮನ ಮಾದಕ ವಸ್ತುಗಳನ್ನು ಖಾಸಗಿಯಾಗಿ ಬಳಸುವ ಚಲನಚಿತ್ರ ಸಿಬ್ಬಂದಿ ಮತ್ತು ನಟರನ್ನು ಬಹಿರಂಗಪಡಿಸುವುದರ ಮೇಲಿದೆ.

    ಕೇವಲ ಹಣಕ್ಕಾಗಿ ಮದ್ಯ(ಸೋಡ), ಗುಟ್ಕಾ/ಪಾನ್ ಮಸಲಾ, ಜೂಜು(ರಮ್ಮಿ) ಇತ್ಯಾದಿಗಳ ಬಗ್ಗೆ ಮುಕ್ತವಾಗಿ ಜಾಹೀರಾತು ನೀಡುವ ‘ಸ್ಟಾರ್ಸ್’ಗಳ ಮೇಲೆ ಬೆರಳು ತೋರಿಸದರಿವುದು ಮೋಸವಲ್ಲವೇ?, ಇವರು ಸಾಮಾಜಿಕ ದೃಷ್ಕøತ್ಯಗಳ ‘ರಾಯಾಭಾರಿಗಳಲ್ಲವೇ’? ಎಂದು ಬರೆದುಕೊಂಡಿದ್ದಾರೆ.

    ನಿನ್ನೆಯಷ್ಟೇ ನಮ್ಮ ನಡುವೆ ಇಲ್ಲದ ವ್ಯಕ್ತಿಯ ಮೇಲೆ ಕೆಸರೆರಚಾಟ ಮಾಡುತ್ತಿರುವುದರ ಬಗ್ಗೆ ದುಃಖವಿದೆ ಎಂದು ನಟ ಚೇತನ್ ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಕ್ಕೆ ಪ್ರತಿಕ್ರಿಯಿಸಿದ್ದರು.

    ಈ ಬಗ್ಗೆ ಟ್ವೀಟ್ ಮಾಡಿದ್ದ ಅವರು, ಮಾದಕ ವಸ್ತುವಿನ ಜಾಗೃತಿ ಅಭಿಯಾನ, ಪುನರ್ವಸತಿ ಕಾರ್ಯಕ್ರಮಗಳು, ಸರ್ಕಾರದ ಉತ್ತಮ ನೀತಿಗಳು, ಮತ್ತು ಸರಿಯಾದ ತನಿಖೆಗಳು ನಮಗೆ ಬೇಕಾಗಿದೆ. ಮಸಿ ಬಳಿಯುವುದು ಮತ್ತು ಉದ್ರೇಕಕಾರಿ ಹೇಳಿಕೆಗಳು ನಮಗೆ ಬೇಡವಾದುದ್ದು ಎಂದು ಬರೆದುಕೊಂಡಿದ್ದಾರೆ.

    ಅಷ್ಟೇ ಅಲ್ಲದೇ ಸಿಗರೇಟು, ಮದ್ಯ, ಮಾದಕ ಮತ್ತು ಪಾರ್ಟಿಗೆ ಹೋಗುವ ಅಭ್ಯಾಸಗಳು ನನಗಿಲ್ಲ. ಮುಂದುವರಿದು ಕನ್ನಡ ಇಂಡಸ್ಟ್ರಿಯಲ್ಲಿ ಯಾವುದೇ ಸಾಮಾಜಿಕ ಅಭ್ಯಾಸಗಳ ಬಗ್ಗೆ ಗೊತ್ತಿಲ್ಲದ ನನಗೆ ನಮ್ಮ ನಡುವೆ ಇಲ್ಲದ ವ್ಯಕ್ತಿಯ ಮೇಲೆ ಕೆಸರೆರಾಚಾಟ ಮಾಡುತ್ತಿರುವುದರ ಬಗ್ಗೆ ದುಃಖವಿದೆ. ನಾವು ಯಾವುದೇ ಆರೋಪಗಳನ್ನು ಹೋರಿಸಿದರೂ ಅದನ್ನು ಸಮರ್ಥಿಸಲು ಅಥವಾ ಉತ್ತರಿಸಲು ಆ ಧ್ವನಿಯೇ ಇಲ್ಲದಿರುವ ಸಮಯದಲ್ಲಿ ಅವರ ಮೇಲೆ ಕೆಸರು ಎರಚುವುದನ್ನು ನಾನು ಖಂಡಿಸುತ್ತೇನೆ ಎಂದು ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದರು.