Tag: actor

  • ಅಮ್ಮನನ್ನು ನೆನೆದು ಭಾವುಕರಾದ್ರು ಪುನೀತ್ ರಾಜ್ ಕುಮಾರ್

    ಅಮ್ಮನನ್ನು ನೆನೆದು ಭಾವುಕರಾದ್ರು ಪುನೀತ್ ರಾಜ್ ಕುಮಾರ್

    ಬೆಂಗಳೂರು: ಇಂದು ತಮ್ಮ 43ನೇ ವರ್ಷದ ಹುಟ್ಟುಹಬ್ಬದ ಸಂಭ್ರದಲ್ಲಿರೋ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಮ್ಮನನ್ನು ನೆನೆದು ಭಾವುಕರಾಗಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಮ್ಮ ಪಾರ್ವತಮ್ಮ ಅವರನನ್ನು ನೆನೆದು ಬೇಸರ ವ್ಯಕ್ತಪಡಿಸಿದ್ರು. ಅಭಿಮಾನಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ತಿರೋದಕ್ಕೆ ಖುಷಿಯಾಗ್ತಿದೆ. ಆದ್ರೆ ಈ ಬಾರಿ ನನ್ನ ಹುಟ್ಟುಹಬ್ಬ ಆಚರಣೆಯಲ್ಲಿ ಅಮ್ಮ ಇಲ್ಲ ಅನ್ನೋದೇ ಬೇಜಾರಿನ ಸಂಗಂತಿಯಾಗಿದೆ ಅಂದ್ರು. ಇದನ್ನೂ ಓದಿ: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಹ್ಯಾಟ್ರಿಕ್ ಹೀರೋ ವಿಶ್- ಅಪ್ಪು ನಂಗೆ ಮಗ ಇದ್ದಂಗೆ ಅಂದ್ರು ಶಿವಣ್ಣ

    ಈ ಬಾರಿ ನನ್ನ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಅದು ಅವರ ಪ್ರೀತಿ, ವಿಶ್ವಾಸ ಹಾಗೂ ಅಭಿಮಾನ. ಆದ್ರೆ ಈ ಬಾರಿ ನಾನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಈ ಎರಡು ದಿನ ನಾನು ಅಭಿಮಾನಿಗಳಿಗೋಸ್ಕರ ಅಂತಾನೇ ಇಟ್ಟಿದ್ದೇನೆ. ಈ ಬಾರಿ ಅಮ್ಮನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಕಳೆದ ವರ್ಷ ಇದೇ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಬಾರಿ ಅವರು ನಮ್ಮ ಜೊತೆ ಇಲ್ಲ. ಜೀವನದಲ್ಲಿ ಏನೇ ಸಾಧಿಸಿದ್ರೂ, ಅದಕ್ಕೆ ಅವರೇ ಕಾರಣ. ಹೀಗಾಗಿ ತುಂಬಾ ವಿಚಾರಗಳಲ್ಲಿ ಅಪ್ಪ-ಅಮ್ಮನ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅಪ್ಪ-ಅಮ್ಮ ನಮ್ಮ ಜೊತೆ ಇಲ್ಲ ಆದ್ರೆ ಅಭಿಮಾನಿಗಳು ಬೇರೆ ಬೇರೆ ಊರುಗಳಿಂದ ಬರುತ್ತಿದ್ದಾರೆ. ಹೀಗಾಗಿ ಅವರನ್ನು ನಿರಾಸೆ ಮಾಡಕ್ಕಾಗಲ್ಲ ಅಂತ ಹೇಳಿದ್ರು.

    ರಾಜ್ ಕುಮಾರ್ ಅವರನ್ನು ಯಾರಿಗೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅವರಿಗೆ ಅವರೇ ಸಾಟಿ. ಅವರ ಮಗನಾಗಿರುವುದು ನನ್ನ ಪುಣ್ಯ. ಆ ಪ್ರೀತಿ, ವಿಶ್ವಾಸ, ಅಭಿಮಾನ ನಮ್ಮ ಕುಟುಂಬದಲ್ಲಿ ಎಲ್ಲರೂ ನೋಡುತ್ತಿದ್ದಾರೆ. ಅದಕ್ಕೆ ನಾವು ಅವರಿಗೆ ಯಾವತ್ತೂ ಚಿರಋಣಿ ಅಂದ್ರು.

    ಅಭಿಮಾನಿಗಳು ರಾಜರತ್ಸೋತ್ಸವ ಹೆಸರಲ್ಲಿ ಅದ್ಧೂರಿಯಾಗಿಯೇ ನನ್ನ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ. ನಟಸಾರ್ವಭೌಮ ಅಂತ ಸಿನಿಮಾಗೆ ಹೆಸರಿಟ್ಟಿರೋದಕ್ಕೆ ಭಯ ಆಗ್ತಿದೆ. ಯಾಕಂದ್ರೆ ಈ ಹಿಂದೆ ರಾಜಕುಮಾರ ಅಂತ ಸಿನಿಮಾಗೆ ಹೆಸರಿಟ್ಟಾಗಲೂ ಭಯವಾಗಿತ್ತು ಅಂತ ಹೇಳಿದ್ರು. ಇದನ್ನೂ ಓದಿ: ದೊಡ್ಮನೆ ರಾಜಕುಮಾರನಿಗೆ ಹುಟ್ಟು ಹಬ್ಬದ ಸಂಭ್ರಮ- ನಟಸಾರ್ವಭೌಮ ತಂಡದಿಂದ ಫಸ್ಟ್ ಟೀಸರ್ ಗಿಫ್ಟ್

    ಇದೇ ವೇಳೆ ತಮ್ಮ ಹೇರ್ ಸ್ಟೈಲ್ ಬಗ್ಗೆ ಮಾತನಾಡಿದ ಅವರು, ಹೇರ್ ಸ್ಟೈಲ್ ಸಿಕ್ಕಾಪಟ್ಟೆ ಟ್ರೆಂಡ್ ಆಗ್ತಿರೋದಕ್ಕೆ ಖುಷಿಯಿದೆ. ಜುಲೈಗೆ ಸಂತೋಷ್ ಆನಂದ್ ರಾಮ್ ನಿರ್ದೇಶನದ ಸಿನಿಮಾ ಅಧಿಕೃತವಾಗಿ ಅನೌನ್ಸ್ ಆಗಲಿದೆ ಅಂತ ತಿಳಿಸಿದ್ರು.

  • ಪ್ರಕಾಶ್ ರೈ ಎಲ್ಲಿ ಉಳಿದುಕೊಳ್ಳುತ್ತಾನೆ- ಕಾರ್ ಚಾಲಕನಿಗೆ ಧಮ್ಕಿ

    ಪ್ರಕಾಶ್ ರೈ ಎಲ್ಲಿ ಉಳಿದುಕೊಳ್ಳುತ್ತಾನೆ- ಕಾರ್ ಚಾಲಕನಿಗೆ ಧಮ್ಕಿ

    ಮಂಗಳೂರು: ನಟ ಪ್ರಕಾಶ್ ರೈ ಅವರಿಗೆ ನಗರದ ವಿಮಾನ ನಿಲ್ದಾಣದಲ್ಲಿ ನಾಲ್ವರು ಬೆದರಿಕೆ ಹಾಕಿರೋ ಘಟನೆಯೊಂದು ನಡೆದಿರುಬವ ಬಗ್ಗೆ ಬೆಳಕಿಗೆ ಬಂದಿದೆ.

    ರಾತ್ರಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರ್ ಡ್ರೈವರ್ ಬಳಿ ಬಂದ ನಾಲ್ವರು ಕೆಲ ಪ್ರಶ್ನೆಗಳನ್ನು ಹಾಕಿದ್ದಾರೆ. ಪ್ರಕಾಶ್ ರೈ ಎಲ್ಲಿ ಉಳಿದುಕೊಳ್ಳುತ್ತಾರೆ ಅಂತ ಹೇಳಿ ಕಾರ್ ಡ್ರೈವರ್ ಗೆ ಧಮ್ಕಿ ಹಾಕಿದ್ದಾರೆ. ಪೊಲೀಸರು ಬಂದ ಬಳಿಕ ಕೂಡಲೇ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದರಿಂದ ಇಲ್ಲಿ ನನಗೆ ಆತಂಕದ ವಾತಾವರಣ ನಿರ್ಮಾಣವಾಗಿದೆ ಅಂತ ರೈ ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

    ನನ್ನ ಹೇಳಿಕೆಯನ್ನು ಸದಾ ತಿರುಚಲಾಗುತ್ತದೆ. ನಾನು ರಾಜಕೀಯ ಪಕ್ಷದಿಂದ ಬೆಳೆದಿಲ್ಲ. ರಾಜಕೀಯದಲ್ಲಿ ಆತಂಕದ ವಾತಾವರಣ ಇದೆ. ನಾನು ಆಳುವ ಪಕ್ಷದ ವಿರೋಧಿಯಾಗಿದ್ದೇನೆ. ಒಬ್ಬ ಪ್ರಜೆ, ಪ್ರಜೆಯಾಗಿರೋದಕ್ಕೆ ಸಾಧ್ಯವಾಗುತ್ತಿಲ್ಲ. ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. #just asking ಅಭಿಯಾನ ನಿರಂತರವಾಗಿರುತ್ತದೆ ಅಂತ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪ್ರತಾಪ್ ಸಿಂಹ ಜೊತೆ ದ್ವೇಷವಿಲ್ಲ: ನಾನು ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗಲ್ಲ. ಆದ್ರೆ ಕೆಲ ಪಕ್ಷಗಳ ವಿರುದ್ಧ ಮಾತನಾಡುತ್ತೇನೆ. ಬಿಜೆಪಿ ಕೋಮುವಾದದ ಬಗ್ಗೆ ಮಾತನಾಡ್ತೇನೆ. ಬಿಜೆಪಿ ಕೋಮುವಾದ ದೇಶದ ಸಾಮರಸ್ಯ ಹಾಳು ಮಾಡುತ್ತದೆ. ಸಂಸದ ಪ್ರತಾಪ್ ಸಿಂಹ ಬಗ್ಗೆ ನನಗೆ ದ್ವೇಷ ಇಲ್ಲ. ಅವರು ಮುಖವಾಡ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸೊಂಟದ ಕೆಳಗಿನ ಭಾಷೆ ಬಳಕೆ ಮಾಡ್ತಾರೆ. ನಾನು ಒಬ್ಬ ಪ್ರಜೆಯಾಗಿ ಪ್ರತಾಪ್ ಸಿಂಹ ವಿರುದ್ಧ ಕೇಸ್ ಹಾಕಿದ್ದೇನೆ ಅಂತ ಅವರು ಹೇಳಿದ್ರು.

    ಆರೋಪಿಗಳ ಖುಲಾಸೆಗೆ ವಿಷಾದ: ಪಬ್ ದಾಳಿ ಆರೋಪಿಗಳಿಗೆ ಕೋರ್ಟ್ ಖುಲಾಸೆ ವಿಚಾರದ ಕುರಿತು ಇದೇ ವೇಳೆ ಮಾತನಾಡಿದ ಅವರು, ಕೋರ್ಟ್ ಸಾಕ್ಷ್ಯಾಧಾರ ಇಲ್ಲ ಅಂತ ಹೇಳಿದೆ. ಕಾರ್ಯಕರ್ತರು ಹೊಡೆದಿರುವ ವಿಡಿಯೋ ಕೂಡಾ ಇದೆ. ಕೋರ್ಟ್ ಆಜ್ಞೆ ಜನಸಾಮಾನ್ಯರನ್ನು ಗೊಂದಲ ಮಾಡಿದೆ. ಕೋರ್ಟ್ ಆರ್ಡರ್ ಕೊಟ್ಟಿದ್ದು ನ್ಯಾಯನಾ? ಆಡಳಿತರೂಢ ಕಾಂಗ್ರೆಸ್ ಇದರ ಬಗ್ಗೆ ಪ್ರಶ್ನೆ ಮಾಡಬಹುದಿತ್ತು. ಪ್ರಶ್ನೆ ಮಾಡಿದ್ರೆ ವಿರೋಧಿಯಾಗ್ತಿವಿ ಎಂಬ ಭಯ ಇದೆ. ಕಾಂಗ್ರೆಸ್ ರಾಜಕೀಯ ಪ್ರದರ್ಶನ ಮಾಡುತ್ತಿದೆ ಅಂದ್ರು.

  • ನಟ ಪ್ರಕಾಶ್ ರೈಗೆ 9 ರೂ. ಡಿಡಿ ಕಳುಹಿಸಿದ ಪ್ರತಾಪ್ ಸಿಂಹ ಅಭಿಮಾನಿ

    ನಟ ಪ್ರಕಾಶ್ ರೈಗೆ 9 ರೂ. ಡಿಡಿ ಕಳುಹಿಸಿದ ಪ್ರತಾಪ್ ಸಿಂಹ ಅಭಿಮಾನಿ

    ಮೈಸೂರು: ಸಂಸದ ಪ್ರತಾಪದ ಸಿಂಹ ಅಭಿಮಾನಿಯೊಬ್ಬರು ನಟ ಪ್ರಕಾಶ್ ರೈ ಗೆ 9 ರೂಪಾಯಿ ಡಿಡಿ ಕಳುಹಿಸಿದ್ದಾರೆ.

    ಪ್ರತಾಪ್ ಸಿಂಹ ವಿರುದ್ಧ ನಟ ಪ್ರಕಾಶ್ ರೈ 1 ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿರುವುದಕ್ಕೆ ಅಭಿಮಾನಿ ಸಂದೇಶ್ ಎಂಬವರು ಈ ಡಿಡಿಯನ್ನು ಕಳುಹಿಸಿದ್ದಾರೆ. ತಮಿಳು ಚಿತ್ರರಂಗದ ನಿರ್ಮಾಪಕರ ಸಂಘದ ಉಪಾಧ್ಯಕ್ಷರ ಕಚೇರಿ ವಿಳಾಸಕ್ಕೆ ಡಿಡಿ ಕಳುಹಿಸಲಾಗಿದೆ. ಪ್ರಕಾಶ್ ರೈ ತಮಿಳು ಚಿತ್ರರಂಗದ ನಿರ್ಮಾಪಕರ ಸಂಘದ ಉಪಾಧ್ಯಕ್ಷ ಆಗಿರೋ ಕಾರಣ ಈ ವಿಳಾಸಕ್ಕೆ ಡಿಡಿ ಕಳುಹಿಸಲಾಗಿದೆ. ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಪ್ರಕಾಶ್ ರೈ

    ನೀವು ಒಂದು ರುಪಾಯಿ ಕೇಳಿದ್ದೀರಿ. ನಾನು ನಿಮಗೆ 9 ರೂಪಾಯಿ ಕಳುಹಿಸಿದ್ದೇನೆ ತೆಗೆದುಕೊಳ್ಳಿ. ನಿಮ್ಮ ಮೌಲ್ಯ 1 ರೂಪಾಯಿ ಅಷ್ಟೆ ಅಂತಾ ನೀವೇ ಹೇಳಿದ್ದೀರಿ. ಆದರೆ, ನಾನು ಅದನ್ನು ಸ್ಪಲ್ಪ ಹೆಚ್ಚು ಮಾಡಿ 9 ರೂಪಾಯಿ ಕಳುಹಿಸಿದ್ದೇನೆ ಎಂದು ಸುದೀರ್ಘ ಪತ್ರವೊಂದನ್ನು ಬರೆದಿದ್ದಾರೆ. ಇದನ್ನೂ ಓದಿ: ನಾನು ಪ್ರಕಾಶ್ ರೈ ಅವರನ್ನ ತುಂಬು ಹೃದಯದಿಂದ ಅಭಿನಂದಿಸುತ್ತೇನೆ- ನಟರಿಗೆ ಪ್ರತಾಪ್ ಸಿಂಹ ತಿರುಗೇಟು

    ಮಾನನಷ್ಟ ಹೂಡಿದ್ದು ಯಾಕೆ?
    ಅಕ್ಟೋಬರ್ 2 ರಂದು ಪ್ರತಾಪ್ ಸಿಂಹ ವೆಬ್‍ಸೈಟ್ ಒಂದರಲ್ಲಿ ಬಂದಿದ್ದ ಸುದ್ದಿಯನ್ನು ಟ್ವೀಟ್ ಮಾಡಿದ್ದರು. “ಮಗನ ಸಾವಿನ ದು:ಖದಲ್ಲಿದ್ದ ಹೆಂಡತಿಯನ್ನು ಬಿಟ್ಟು ಡ್ಯಾನ್ಸರ್ ಹಿಂದೆ ಓಡಿದ ರೈಯಂತಹವನು ಮೋದಿ? ಯೋಗಿಗೆ ಹೇಳುವಷ್ಟು ಯೋಗ್ಯತೆಯಿರುವವನಾ?” ಎನ್ನುವ ಹೆಡ್‍ಲೈನ್ ಈ ಸುದ್ದಿಯಲ್ಲಿತ್ತು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಪ್ರಕಾಶ್ ರೈ ಅವರು 1 ರೂ. ಪರಿಹಾರ ಕೋರಿ ಮೈಸೂರಿನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

  • ಕೇಳದೆ ಕೊಡುವ ಸರ್ಕಾರ ಮುಂದಿನ ದಿನಗಳಲ್ಲಿ ಬರಬೇಕಿದೆ: ನಟ ಚೇತನ್

    ಕೇಳದೆ ಕೊಡುವ ಸರ್ಕಾರ ಮುಂದಿನ ದಿನಗಳಲ್ಲಿ ಬರಬೇಕಿದೆ: ನಟ ಚೇತನ್

    ಮಡಿಕೇರಿ: ಬಸವನಹಳ್ಳಿಯಲ್ಲಿ ಸರ್ಕಾರದ ವತಿಯಿಂದ ಆದಿವಾಸಿಗಳಿಗೆ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ನಟ ಚೇತನ್ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿರುವ ಬಸವನಹಳ್ಳಿಯಲ್ಲಿ ಆದಿವಾಸಿಗಳಿಗೆಂದೇ ನಿರ್ಮಾಣವಾಗುತ್ತಿರುವ ಮನೆಗಳಿಗೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋರಾಟ ಮಾಡಿದ್ದಕ್ಕೆ ಪ್ರತಿಫಲ ದೊರೆಯುತ್ತಿದೆ. ಇದು ನನಗೆ ತೃಪ್ತಿ ತಂದಿದೆ ಎಂದು ಹೇಳಿದ್ದಾರೆ.

    ಯಾವುದೇ ಸರ್ಕಾರ ಬಂದ್ರೂ ಕೇಳಿ ಪಡೆದುಕೊಳ್ಳಲು ಬಿಡಬಾರದು. ಕೇಳದೇ ಕೊಡುವ ಸರ್ಕಾರ ಮುಂದಿನ ದಿನಗಳಲ್ಲಿ ನಮಗೆ ಬೇಕು ಎಂದು ತಮ್ಮ ಅಭಿಪ್ರಾಯನ್ನು ಹಂಚಿಕೊಂಡರು. ಬಳಿಕ ಆದಿವಾಸಿಗಳ ಜೊತೆ ಕೆಲಕಾಲ ಬಸವನಹಳ್ಳಿಯಲ್ಲಿ ಕಾಲಕಳೆದ್ರು. ಇದನ್ನೂ ಓದಿ: ನಮ್ಮ ಅಧಿಕೃತ ಬಾವುಟ ಹಳದಿ, ಕೆಂಪು: ಸರ್ಕಾರ,ಸಾಹಿತಿಗಳ ವಿರುದ್ಧ ವಾಟಾಳ್ ಕಿಡಿ

    ಆದಿವಾಸಿಗಳಿಗೆ ನ್ಯಾಯ ಸಿಗಬೇಕು ಅಂತ ಭಾರೀ ಹೋರಾಟದ ಬಳಿಕ ರಾಜ್ಯ ಸರ್ಕಾರ ಸರ್ಕಾರ ಸುಮಾರು 528 ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಲು ಮುಂದಾಗಿದೆ. ಹೀಗಾಗಿ ಆದಿವಾಸಿಗಳಿಗೆ ಮನೆ ನಿರ್ಮಾಣವಾಗುತ್ತಿದೆ. ದಿಡ್ಡಳಿ ಹೋರಾಟ ನಡಸಿ ರಾಜ್ಯ ಸರ್ಕಾರ ಗಮನ ಸೆಳೆದ ಆದಿವಾಸಿಗಳು ಇಡೀ ಸರ್ಕಾರವನ್ನೇ ತಮ್ಮ ಬಳಿ ಬರುವಂತೆ ಉಗ್ರವಾಗಿ ಹೋರಾಟ ಮಾಡಿದ್ರು. ಈ ಹೋರಾಟದಲ್ಲಿ ಅನೇಕ ಹೋರಾಟಗಾರರು ಭಾಗಿಯಾಗಿದ್ದರು. ಆದಿವಾಸಿಗಳಿಗೆ ನ್ಯಾಯ ಸಿಗಬೇಕು. ಅವರಿಗೆ ಪುನರ್ ವಸತಿ ಲಭ್ಯವಾಗಬೇಕು ಎಂದು ಚೇತನ್ ಕೂಡ ಹೋರಾಟ ನಡೆಸಿದ್ದರು.

  • ಅಪರೂಪದ ಕಾಯಿಲೆಯಿಂದ ಬಳಲುತ್ತಿರೋ ಬಗ್ಗೆ ಸುಳಿವು ನೀಡಿದ ಬಾಲಿವುಡ್ ನಟ ಇರ್ಫಾನ್ ಖಾನ್

    ಅಪರೂಪದ ಕಾಯಿಲೆಯಿಂದ ಬಳಲುತ್ತಿರೋ ಬಗ್ಗೆ ಸುಳಿವು ನೀಡಿದ ಬಾಲಿವುಡ್ ನಟ ಇರ್ಫಾನ್ ಖಾನ್

    ಮುಂಬೈ: ಬಾಲಿವುಡ್ ನಟ ಇರ್ಫಾನ್ ಖಾನ್ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಅದರ ವಿರುದ್ಧ ಹೋರಾಟ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಈ ಕುರಿತು ಸ್ವತಃ ಇರ್ಫಾನ್ ಖಾನ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    ದೀಪಿಕಾ ಪಡುಕೋಣೆ ಹಾಗೂ ಇರ್ಫಾನ್ ನಟನೆಯ ಸಿನಿಮಾ ಚಿತ್ರೀಕರಣವನ್ನು ಮುಂದೂಡಲಾಗಿದೆ ಎಂದು ಕಳೆದ ತಿಂಗಳಷ್ಟೇ ನಿರ್ಮಾಪಕ ವಿಶಾಲ್ ಭಾರದ್ವಾಜ್ ತಿಳಿಸಿದ್ದರು. ಕೆಲ ತಿಂಗಳ ಮಟ್ಟಿಗೆ ಚಿತ್ರದ ಚಿತ್ರೀಕರಣವನ್ನು ಮುಂದೂಡುತ್ತಿದ್ದೇನೆ. ಯಾಕಂದ್ರೆ ಚಿತ್ರದಲ್ಲಿ ನಟಿಸುವ ಪ್ರಮುಖ ನಟರೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜಾಂಡೀಸ್ ಕಾಯಿಲೆಯಿಂದ ನಟ ಇರ್ಫಾನ್ ಖಾನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಅಂತ ಹೇಳಿದ್ದರು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಸ್ವತಃ ಇರ್ಫಾನ್ ಖಾನ್ ಟ್ವೀಟ್ ಮಾಡುವ ಮೂಲಕ ತಾವು ಅನಾರೋಗ್ಯಕ್ಕೀಡಾಗಿರುವುದನ್ನು ಸ್ಪಷ್ಟಪಡಿಸಿದ್ದಾರೆ.

    `ಕೆಲವೊಂದು ಬಾರಿ ನಿಮ್ಮ ಜೀವನವನ್ನೇ ಘಾಸಿಗೊಳಿಸುವಂತಹ ಘಟನೆಗಳು ನಡೆಯುತ್ತವೆ. ಕಳೆದ 15 ದಿನಗಳಲ್ಲಿ ನನ್ನ ಜೀವನ ನಿಗೂಢ ಕಥೆಯಂತಾಗಿದೆ ಅಪರೂಪದ ಕಥೆಯನ್ನು ಹುಡುಕಲು ಹೊರಟ ನನಗೆ ಅಪರೂಪದ ರೋಗದ ಬಗ್ಗೆ ತಿಳಿಯುವಂತಾಗುತ್ತದೆ ಎಂದುಕೊಂಡಿರಲಿಲ್ಲ. ನಾನು ನನ್ನ ಜೀವನದಲ್ಲಿ ನನಗೆ ಬೇಕಾದ್ದನ್ನು ಹಠಕ್ಕೆ ಬಿದ್ದು ಪಡೆಯುತ್ತಿದ್ದೆ. ಹೀಗಾಗಿ ಎಂದಿಗೂ ಸೋತಿಲ್ಲ ಮತ್ತು ಹಾಗೆಯೇ ಇರಲು ಬಯಸುತ್ತೇನೆ. ನನ್ನ ಕುಟುಂಬದವರು ಮತ್ತು ಸ್ನೇಹಿತರು ನನ್ನ ಜೊತೆಗಿದ್ದಾರೆ. ಇನ್ನು 8-10 ದಿನಗಳಲ್ಲಿ ನನ್ನ ಆರೋಗ್ಯದ ಬಗ್ಗೆ ನಾನೇ ಇನ್ನಷ್ಟು ಮಾಹಿತಿಗಳನ್ನು ನೀಡುತ್ತೇನೆ. ಅಲ್ಲಿಯವರೆಗೆ ಯಾವುದೇ ರೀತಿಯ ಅನುಮಾನಗಳು ಬೇಡ. ನನಗೆ ಒಳ್ಳೆಯದನ್ನು ಬಯಸಿ ಅಂತ ಬರೆದುಕೊಂಡಿದ್ದಾರೆ.

  • ಪತಿಯ ಹೊಸ ಪಕ್ಷ ಸ್ಥಾಪನೆ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೀಗಂದ್ರು

    ಪತಿಯ ಹೊಸ ಪಕ್ಷ ಸ್ಥಾಪನೆ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೀಗಂದ್ರು

    ಬೆಂಗಳೂರು: ತಾನು ಸ್ಥಾಪಿಸಿದ ಕೆಪಿಜೆಪಿ ಪಕ್ಷಕ್ಕೆ ನಟ ಉಪೇಂದ್ರ ಅವರು ಈಗಾಗಲೇ ರಾಜೀನಾಮೆ ನೀಡಿದ್ದು, ಈ ಕುರಿತು ಪತ್ನಿ ಪ್ರಿಯಾಂಕಾ ಉಪೇಂದ್ರ ಪ್ರತಿಕ್ರಿಯಿಸಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಘಟನೆಯಿಂದ ಸಾಕಷ್ಟು ಬೇಸರವಾಗಿದೆ. ಉಪೇಂದ್ರರವರ ಇಮೇಜ್ ಗೆ ಧಕ್ಕೆ ಆಗುತ್ತೇನೋ ಅನ್ನೋ ಬೇಸರವಾಗಿತ್ತು. ಉಪ್ಪಿ ಹೊಸ ಪಕ್ಷದ ನಿರ್ಧಾರ ಒಳ್ಳೆಯದೇ ಆಯ್ತು. ಮಹೇಶ್ ಗೌಡ ಚೆನ್ನಾಗಿಯೇ ಇದ್ರು. ನಮ್ಮ ಕುಟುಂಬದವರ ಜೊತೆ ಇದ್ದು, ಉಪ್ಪಿಗೆ ಹಾಗೂ ನನಗೆ ಜೀವನದಲ್ಲಿ ದೊಡ್ಡ ಪಾಠ ಕಲಿಸಿದ್ರು ಅಂತ ಬೇಸರ ವ್ಯಕ್ತಪಡಿಸಿದ್ರು.

    ಉಪ್ಪಿ ಸೇರಿದಕ್ಕೆ ಕೆಪಿಜೆಪಿ ಪಕ್ಷದ ಹೆಸರಿಗೆ ಪಬ್ಲಿಸಿಟಿ ಸಿಕ್ತು. ಉಪ್ಪಿ ಇಲ್ಲದೇ ಇದ್ರೆ ಆ ಪಕ್ಷದ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ ಬಿಡಿ. ಸಜೆಷನ್ ಕೊಟ್ಟಿದ್ದನ್ನೇ ಸರ್ವಾಧಿಕಾರಿ ಅಂತಾ ತಿಳ್ಕೊಂಡ್ರೇ ಹೇಗೆ? ಎಲೆಕ್ಷನ್ ಹತ್ರ ಬರುವ ದಿನಗಳಲ್ಲಿಯೇ ಈ ರೀತಿ ವರ್ತನೆ ಎಷ್ಟರ ಮಟ್ಟಿಗೆ ಸರಿ? ಉಪ್ಪಿ ಅಭ್ಯರ್ಥಿಗಳನ್ನ ಪಕ್ಷೇತರವಾಗಿ ನಿಲ್ಲಿಸುವ ಯೋಚನೆ ಕೂಡ ಮಾಡಿದ್ದರು. ಅಭ್ಯರ್ಥಿಗಳು ಈಗಾಗಲೇ ರೆಡಿಯಾಗಿದ್ದಾರೆ ಅಂತ ಅವರು ತಿಳಿಸಿದ್ರು. ಇದನ್ನೂ ಓದಿ: ಕೆಪಿಜೆಪಿಗೆ ನಟ ಉಪೇಂದ್ರ ರಾಜೀನಾಮೆ – ಹೊಸ ಪಕ್ಷ ಸ್ಥಾಪನೆಗೆ ನಿರ್ಧಾರ

    ನಾನು ಕಂಟೆಸ್ಟ್ ಮಾಡಲ್ಲ: ಉಪ್ಪಿಗೆ ಎಲ್ಲಾ ರಾಷ್ಟ್ರೀಯ ಪಕ್ಷದಲ್ಲೂ ಸ್ನೇಹಿತರಿದ್ದಾರೆ. ಕಾಂಗ್ರೆಸ್, ಬಿಜೆಪಿಯಿಂದಲೂ ಆಹ್ವಾನ ಇತ್ತು. ಆದ್ರೆ ಹೊಸ ಪಕ್ಷದ ಕನಸು ಅವರಿಗಿದೆ. ಇನ್ನು ಮುಂದೆ ನಾವು ಕೇರ್ ಫುಲ್ ಆಗಿರ್ತೀವಿ. ನಾನು ಕಂಟೆಸ್ಟ್ ಮಾಡಲ್ಲ, ಹೊಸ ಪಕ್ಷಕ್ಕೆ ಎಲ್ಲ ಸಪೋರ್ಟ್ ಕೊಡ್ತೀನಿ ಅಂತ ಪ್ರಿಯಾಂಕಾ ಸ್ಪಷ್ಟಪಡಿಸಿದ್ರು.

    https://www.youtube.com/watch?v=RBF3GyZURh4

  • ಮುಂಬೈ ತಲುಪಿದ ಶ್ರೀದೇವಿ ಮೃತದೇಹ- ವಿಲೆ ಪಾರ್ಲೆಯಲ್ಲಿ ಇಂದು ಅಂತಿಮ ಸಂಸ್ಕಾರ

    ಮುಂಬೈ ತಲುಪಿದ ಶ್ರೀದೇವಿ ಮೃತದೇಹ- ವಿಲೆ ಪಾರ್ಲೆಯಲ್ಲಿ ಇಂದು ಅಂತಿಮ ಸಂಸ್ಕಾರ

    ಮುಂಬೈ: ದುಬೈನಲ್ಲಿ ಬಾತ್‍ಟಬ್‍ನಲ್ಲಿ ಶನಿವಾರ ಆಕಸ್ಮಿಕವಾಗಿ ಸಾವನ್ನಪ್ಪಿದ ನಟಿ ಶ್ರೀದೇವಿ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಮುಂಬೈಗೆ ಆಗಮಿಸಿದೆ.

    ನಿನ್ನೆ 7 ಗಂಟೆಗೆ ದುಬೈನಿಂದ ಹೊರಟ ಚಾರ್ಟರ್ಡ್ ವಿಮಾನ ರಾತ್ರಿ 9.30 ವೇಳೆಗೆ ಮುಂಬೈನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಶವ ಸ್ವೀಕರಿಸಲು ಬೋನಿ ಕಪೂರ್ ಸಹೋದರ ಅನಿಲ್ ಕಪೂರ್ ಮುಂಬೈನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ರು. ಬಳಿಕ ಪಾರ್ಥೀವ ಶರೀರವನ್ನು ಆಂಬ್ಯುಲೆನ್ಸ್ ನಲ್ಲಿ ಲೋಕಂಡ್‍ವಾಲದಲ್ಲಿರುವ ನಿವಾಸಕ್ಕೆ ಒಯ್ಯಲಾಯ್ತು. ಇದನ್ನೂ ಓದಿ: ಅನಿಲ್ ಕಪೂರ್ ಕೈ ಹಿಡಿದು ಹೆಜ್ಜೆ ಹಾಕಿದ್ದ ಶ್ರೀದೇವಿ- ಕೊನೆಯ ಡ್ಯಾನ್ಸ್ ನೋಡಿ

    ಇಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಅಂಧೇರಿಯ ಸೆಲೆಬ್ರೇಷನ್ ಸ್ಪೋರ್ಟ್ಸ್ ಕ್ಲಬ್‍ನಲ್ಲಿ ಶ್ರೀದೇವಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಈ ವೇಳೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದನ್ನೂ ಓದಿ: ನಟಿ ಶ್ರೀದೇವಿ ಸಾವಿನ ರಹಸ್ಯ ಬಯಲು

    ಮಧ್ಯಾಹ್ನ 2 ಗಂಟೆ ವೇಳೆಗೆ ಸೆಲೆಬ್ರೇಷನ್ ಸ್ಪೋರ್ಟ್ಸ್ ಕ್ಲಬ್‍ನಿಂದ ವಿಲೆ ಪಾರ್ಲೆ ಸೇವಾ ಸೇವಾ ಸಮಾಜದತ್ತ ಶ್ರೀದೇವಿಯ ಅಂತಿಮ ಯಾತ್ರೆ ಶುರುವಾಗಲಿದೆ. ನಂತರ ಸುಮಾರು 3.30ರ ವೇಳೆಗೆ ವಿಲೆ ಪಾರ್ಲೆ ಸೇವಾ ಸಮಾಜದ ಶವಾಗಾರದಲ್ಲಿ ನಟಿ ಶ್ರೀದೇವಿ ಅಂತಿಮ ಸಂಸ್ಕಾರ ನಡೆಯಲಿದೆ. ಅರ್ಜುನ್ ಕಪೂರ್ ಅಥವಾ ಬೋನಿ ಕಪೂರ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ಶ್ರೀದೇವಿಯವರ ಪ್ರಾಣಕ್ಕೆ ವಿಪರೀತ ಶಸ್ತ್ರಚಿಕಿತ್ಸೆಯೇ ಮುಳುವಾಯ್ತಾ? ಜನ ಹೇಳೋದು ಏನು?

    ನಾಲ್ಕು ದಶಕಗಳ ಕಾಲ ಭಾರತೀಯ ಸಿನಿರಂಗವನ್ನು ಆಳಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯಲು ಬಾಲಿವುಡ್ ದಂಡೇ ಹರಿದು ಬರ್ತಿದೆ. ಅಲ್ಲದೆ ರಜನಿಕಾಂತ್, ಕಮಲ್ ಹಾಸನ್, ಚಿರಂಜೀವಿ, ವೆಂಕಟೇಶ್ ಮುಂಬೈ ತಲುಪಿದ್ದಾರೆ. ಇನ್ನು ಪಾರ್ಥಿವ ಶರೀರ ಬರ್ತಿದ್ದಂತೆ ಅಮಿತಾಬ್ ಬಚ್ಚನ್, ಶಾರೂಖ್ ಖಾನ್, ಸಲ್ಮಾನ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ಸೇರಿದಂತೆ ಹಲವರು ಭೇಟಿ ನೀಡಿ ಶ್ರದ್ಧಾಂಜಲಿ ಅರ್ಪಿಸಿದ್ರು. ಇದನ್ನೂ ಓದಿ: ಶ್ರೀದೇವಿ ಸಾವಿನ 30 ನಿಮಿಷ ಮೊದ್ಲು ಸರ್ಪ್ರೈಸ್ ನೀಡಲು ಮುಂದಾಗಿದ್ದ ಪತಿ ಬೋನಿ ಕಪೂರ್

    ರಾತ್ರಿಯೇ 2000 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಶ್ರೀದೇವಿ ನಿವಾಸದ ಮುಂದೆ ಜಮಾಯಿಸಿದ್ರು. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ರು. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

  • ಕೊಲ್ಲೂರಿಗೆ ಮಲಯಾಳಂ ಸೂಪರ್ ಸ್ಟಾರ್- ಮೂಕಾಂಬಿಕೆಯ ದರ್ಶನ ಪಡೆದ ಮೋಹನ್ ಲಾಲ್

    ಕೊಲ್ಲೂರಿಗೆ ಮಲಯಾಳಂ ಸೂಪರ್ ಸ್ಟಾರ್- ಮೂಕಾಂಬಿಕೆಯ ದರ್ಶನ ಪಡೆದ ಮೋಹನ್ ಲಾಲ್

    ಉಡುಪಿ: ಮಲಯಾಳಂ ಸೂಪರ್ ಸ್ಟಾರ್, ನಿರ್ದೇಶಕ ಮೋಹನ್‍ಲಾಲ್ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

    ಉಡುಪಿ ಜಿಲ್ಲೆ ಕುಂದಾಪುರದ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬೆಳಗ್ಗೆ ದೇವಸ್ಥಾನಕ್ಕೆ ಭೇಟಿಕೊಟ್ಟು ದೇವಿಯ ಸನ್ನಿಧಿಯಲ್ಲಿ ಕೆಲಕಾಲ ಧ್ಯಾನ ಮಾಡಿದರು. ದೇವಿಗೆ ಮುಂಜಾನೆ ನಡೆಯುವ ಮಹಾಮಂಗಳಾರತಿಯಲ್ಲಿ ಪಾಲ್ಗೊಂಡರು.

    ದೇವಸ್ಥಾನದ ಪ್ರಾಂಗಣದಲ್ಲಿ ಗಣಪತಿ, ವೀರಭದ್ರ ಗುಡಿಗಳಿಗೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಬಂದಿದ್ದ ಭಕ್ತರು ಮೋಹನ್ ಲಾಲ್ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು, ವೀಡಿಯೋ ಮಾಡಲು ನೂರಾರು ಜನ ಮುಗಿಬಿದ್ದರು. ಇದನ್ನೂ ಓದಿ: ಸಾಮಾನ್ಯರಂತೆ ಸುಳ್ಯದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಖ್ಯಾತ ಮಲೆಯಾಳಂ ನಟ ಮಮ್ಮುಟ್ಟಿ

    ಸುಬ್ರಹ್ಮಣ್ಯಕ್ಕೆ ಭೇಟಿ: ಇದೇ ತಿಂಗಳ 15ರಂದು ಇವರು ದಕ್ಷಿಣಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದರು. ನಟ ಮೋಹನ್ ಲಾಲ್ ಗುರುವಾರ ಮುಂಜಾನೆ ದೇವರ ದರ್ಶನ ಪಡೆದು ಬಳಿಕ ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಮಲಯಾಳಂ ಕಾಯಂಕುಳಂ ಕೊಚ್ಚುನ್ನಿ ಚಿತ್ರದ ಚಿತ್ರೀಕರಣ ಪುತ್ತೂರು ತಾಲೂಕಿನ ಕಡಬದ ಬಲ್ಯ ಹಾಗೂ ಪದವು ನಲ್ಲಿ ನಡೆಯುತ್ತಿತ್ತು. ಕೊಚ್ಚುನ್ನಿ ಸಿನಿಮಾದಲ್ಲಿ ಮೋಹನ್ ಲಾಲ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

    ನಿವಿನ್ ಪೌಲ್, ಪ್ರಿಯಾ ಆನಂದ್ ಸೇರಿದಂತೆ ಇತರ ಸಹ ನಟರು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೊಂದೆಡೆ ಬಹುಕೋಟಿ ವೆಚ್ಚದ ಮಮ್ಮುಟ್ಟಿ ನಟನೆಯ ಮಾಮಾಂಗಂ ಚಿತ್ರದ ಚಿತ್ರೀಕರಣ ಕೂಡಾ ಕಡಬದ ಕೊಯಿಲ ಫಾರ್ಮ್‍ನಲ್ಲಿ ನಡೆದಿತ್ತು. ಎರಡೂ ಚಿತ್ರದ ನಟರಿಗೆ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.

  • ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಪ್ರಕಾಶ್ ರೈ

    ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಪ್ರಕಾಶ್ ರೈ

    ಮೈಸೂರು: ಸಂಸದ ಹಾಗೂ ಬಹುಭಾಷಾ ನಟನ ಕೋಲ್ಡ್ ವಾರ್ ಮುಂದುವರೆದಿದ್ದು, ಇದೀಗ ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

    ಕೇವಲ 1 ರೂ ಪರಿಹಾರ ಕೋರಿ ಮೈಸೂರಿನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ರೈ ನಿರ್ಧರಿಸಿದ್ದಾರೆ. ಹೀಗಾಗಿ ಪ್ರಕಾಶ್ ರೈ ಇಂದು ಮಧ್ಯಾಹ್ನ ಮೈಸೂರು ನ್ಯಾಯಾಲಯಕ್ಕೆ ತೆರಳಿ ಕೇಸು ದಾಖಲಿಸಲಿದ್ದಾರೆ. ಇದನ್ನೂ ಓದಿ:  ಅಪ್ರಸ್ತುತ ವ್ಯಕ್ತಿಗಳ ಬಗ್ಗೆ ಮಾತನಾಡಲ್ಲ: ಪ್ರತಾಪ್ ಸಿಂಹ

    ಈ ಹಿಂದೆ ನವೆಂಬರ್ 23 ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ರೈ 10 ದಿನದ ಒಳಗೆ ದೂರಿಗೆ ಉತ್ತರ ಕೊಡಬೇಕು ಲಿಗಲ್ ನೋಟಿಸ್ ಕಳುಹಿಸಿದ್ದರು. ಇದಕ್ಕೆ ಪ್ರತಿಯಾಗಿ ನಿಮ್ಮ ನೋಟಿಸ್ ಲಿಗಲ್ ಆಗಿ ಇಲ್ಲ ಅದಕ್ಕೆ ಉತ್ತರಿಸಲ್ಲ ಎಂದು ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದರು. ಆದರೆ ಇದೀಗ ರೈ ಅಧಿಕೃತವಾಗಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮ್ಮೆ ಹೂಡಲು ಸಜ್ಜಾಗಿದ್ದಾರೆ. 1 ರೂ ಪರಿಹಾರಕ್ಕೆ ಮನವಿ ಮಾಡಿ ಕೇಸು ದಾಖಲಿಸಲಿದ್ದಾರೆ. ಇದನ್ನೂ ಓದಿ: ನಾನು ಹೇಳಿಕೆ ನೀಡಲ್ಲ, ಹೋರಾಡೋ ವ್ಯಕ್ತಿ: ಪ್ರತಾಪ್ ಸಿಂಹ ವಿರುದ್ಧ ರೈ ಕಿಡಿ

    ಪ್ರತಾಪ್ ಸಿಂಹ ಟ್ವೀಟ್ ಏನಿತ್ತು?
    ಅಕ್ಟೋಬರ್ 2 ರಂದು ಪ್ರತಾಪ್ ಸಿಂಹ ವೆಬ್‍ಸೈಟ್ ಒಂದರಲ್ಲಿ ಬಂದಿದ್ದ ಸುದ್ದಿಯನ್ನು ಟ್ವೀಟ್ ಮಾಡಿದ್ದರು. “ಮಗನ ಸಾವಿನ ದು:ಖದಲ್ಲಿದ್ದ ಹೆಂಡತಿಯನ್ನು ಬಿಟ್ಟು ಡ್ಯಾನ್ಸರ್ ಹಿಂದೆ ಓಡಿದ ರೈಯಂತಹವನು ಮೋದಿ? ಯೋಗಿಗೆ ಹೇಳುವಷ್ಟು ಯೋಗ್ಯತೆಯಿರುವವನಾ?” ಎನ್ನುವ ಹೆಡ್‍ಲೈನ್ ಈ ಸುದ್ದಿಯಲ್ಲಿತ್ತು. ಇದನ್ನೂ ಓದಿ: ನಟ ಪ್ರಕಾಶ್ ರಾಜ್ ವಿರುದ್ಧ ಕೇಸ್ ದಾಖಲು

    ಇದನ್ನು ಓದಿ: ತಮ್ಮ ದಂಧೆಗಾಗಿ, ಹಣಕ್ಕಾಗಿ ತಮಿಳುನಾಡಿನಲ್ಲಿ ರೈ, ಇಲ್ಲಿ ರಾಜ್: ಪ್ರತಾಪ್ ಸಿಂಹ

    ಇದನ್ನು ಓದಿ: ಮೋದಿ, ಪ್ರತಾಪ್ ಸಿಂಹಗೆ ಪರೋಕ್ಷವಾಗಿ ಟಾಂಗ್ ನೀಡಿದ ನಟ ಪ್ರಕಾಶ್ ರೈ

  • ರೌಡಿ ನಲಪಾಡ್ ಹೊಗಳಿ ಈಗ ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ ಪ್ರಕಾಶ್ ರೈ

    ರೌಡಿ ನಲಪಾಡ್ ಹೊಗಳಿ ಈಗ ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ ಪ್ರಕಾಶ್ ರೈ

    ಮೈಸೂರು: ಇನ್ಮುಂದೆ ಯಾರನ್ನಾದರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ. ಅವರ ಪೂರ್ವ ಪರ ತಿಳಿದು ಮಾತನಾಡುತ್ತೇನೆ. ನನ್ನನ್ನ ಪ್ರೀತಿಸುತ್ತಿರುವ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ತಿಳಿಸಿದ್ದಾರೆ.

    ನಗರದಲ್ಲಿ ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಒಂದು ಗ್ರಾಮ ತೆಗೆದುಕೊಳ್ಳಲು ಹ್ಯಾರಿಸ್ ಪುತ್ರ ನಲಪಾಡ್ ಹಣ ನೀಡಿದ್ದರು. ಆ ಕ್ಷಣದಲ್ಲಿ ಈ ರೀತಿಯ ಯುವಕರು ಇರಬೇಕು ಎಂದಿದ್ದೆ. ಅಲ್ಲದೇ ಈ ರೀತಿಯ ಗುಣ ಬೆಳೆಸಿಕೊಳ್ಳಬೇಕು ಎಂದಿದ್ದೆ. ಆದ್ರೆ ಆತನ ಮನದಲ್ಲಿ ರಾಕ್ಷಸ ಇದ್ದಾನೆಂದು ಗೊತ್ತಿರಲಿಲ್ಲ ಅಂತ ಹೇಳಿದ್ರು. ಇದನ್ನೂ ಓದಿ: ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ ಸೆಹ್ವಾಗ್

    ಹಿರಿಯ ಗೌರಿಯ ಸಾವು ನನ್ನನ್ನು ತುಂಬಾ ಡಿಸ್ಟರ್ಬ್ ಮಾಡಿತು. ಹೀಗಾಗಿ, ಕಂಫರ್ಟ್ ಲೈಫ್ ಬಿಟ್ಟು ಹೋರಾಟದ ದಾರಿಗೆ ಇಳಿದು ಪ್ರಶ್ನೆ ಕೇಳುತ್ತಿದ್ದೇನೆ. ನಾನು ಪ್ರಜೆಯಾಗಿ ಮಾತಾಡುತ್ತಿದ್ದೇನೆ. ನಾನೂ ಎಡಪಂಥೀಯನಾಗಿ ಧ್ವನಿ ಎತ್ತಿದ್ದು ನಿಜ. ಯಾವುದು ತಪ್ಪು ಎನಿಸುತ್ತಿದೆಯೋ ಅದರ ವಿರುದ್ಧ ಹೋರಾಟಕ್ಕೆ ಇಳಿದಿದ್ದೇನೆ. ನಾನೂ ಧೋರಣೆಗಳ ವಿರುದ್ಧ ಧ್ವನಿ ಎತ್ತುತ್ತಿದ್ದೇನೆ. ನಾನೂ ರೈಟೂ ಅಲ್ಲ ಲೆಫ್ಟೂ ಅಲ್ಲ. ನಾನೂ ಮೂರನೇ ಸಿದ್ದಾಂತಕ್ಕೆ ಸೇರಿದವನು ಅಂತ ಅಂದ್ರು.

    ಅಂದು ರೈ ಏನ್ ಹೇಳಿದ್ರು?: ಜನವರಿಯಲ್ಲಿ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಪ್ರಕಾಶ್ ರೈ ಅವರು, ಮಹಮ್ಮದ್ ನಲಪಾಡ್ ನನ್ನು ವೇದಿಕೆಯ ಮೇಲೆ ಕರೆದು, ಈತ ನಲಪಾಡ್ ಅಂತ. ಎಂಎಲ್ ಎ ಹ್ಯಾರಿಸ್ ಮಗ. ಹ್ಯಾರಿಸ್ ಮಕ್ಕಳನ್ನು ಬೆಳೆಸಿದ ಹಾಗೆ ಎಲ್ಲರೂ ತಮ್ಮ ಮಕ್ಕಳನ್ನು ಬೆಳೆಸಬೇಕು ಅಂತ ವೇದಿಕೆಯ ಮೇಲೆಯೇ ಹೇಳುವ ಮೂಲಕ ಮಹಮ್ಮದ್ ನಲಪಾಡ್ ನ ಬೆನ್ನು ತಟ್ಟಿದ್ದರು.

    ಈತ ಸಣ್ಣ ಹುಡುಗ. ಒಂದು ಕಾರ್ಯಕ್ರಮವಿದೆ. ನೀವು ಬರಬೇಕು ಅಂತ ಹೇಳಿದ. ನೀವು ಬಹಳ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದೀರಿ. ಹೀಗಾಗಿ ಆ ಕಾರ್ಯಕ್ರಮಕ್ಕೆ ನಾನು ಬರ್ತಿನಿ ಅಂತ ಹೇಳಿದೆ. ನನ್ನದೊಂದು ಪ್ರಕಾಶ್ ರಾಜ್ ಫೌಂಡೇಶನ್ ಅನ್ನೊದೊಂದಿದೆ. ಅದರಲ್ಲಿ ಒಂದಷ್ಟು ಹಳ್ಳಿಗಳನ್ನು ದತ್ತು ತೆಗೆದುಕೊಂಡು ನಿಮ್ಮ ಕೈಲಾದಷ್ಟು ಸಹಾಯ ಮಾಡಿ ಅಂದೆ. ಆ ಸಂದರ್ಭದಲ್ಲಿ ಈ ಹುಡುಗ ನನಗೆ ಸಹಾಯ ಮಾಡಿದ್ದ. ತನ್ನ ಕ್ಷೇತ್ರವಲ್ಲದೇ, ನಾನು ದತ್ತು ತೆಗೆದುಕೊಳ್ಳುವ ಚಿತ್ರದುರ್ಗದ ಒಂದು ಹಳ್ಳಿಯಲ್ಲಿ ಒಂದು ಪುಟ್ಟ ಮನೆ ಬಡವನಿಗಾಗಿ ಕಟ್ಟಿ, ಅಲ್ಲಿ ಒಬ್ಬ ರೈತನಿಗೆ ಸಹಾಯ ಮಾಡಿದಿದ್ದಿದ್ರೆ, ಅದು ಈ ಹುಡುಗ ಅಂತ ಹೇಳಿ ನೆರೆದ ಜನರ ಮುಂದೆ ಬೆನ್ನು ತಟ್ಟಿದ್ರು.

    https://www.youtube.com/watch?v=G06kEeDdJ2U&feature=youtu.be

    https://www.youtube.com/watch?v=fElPQI1QKLg