Tag: Actress Ashika Ranganath

  • ಯಶ್ ಥರ ಗಂಡ ಬೇಕು ಎಂದ ‘ಪಟಾಕಿ ಪೋರಿ’ ಆಶಿಕಾ ರಂಗನಾಥ್

    ಯಶ್ ಥರ ಗಂಡ ಬೇಕು ಎಂದ ‘ಪಟಾಕಿ ಪೋರಿ’ ಆಶಿಕಾ ರಂಗನಾಥ್

    ಸ್ಯಾಂಡಲ್‌ವುಡ್‌ನ ರ‍್ಯಾಂಬೋ ಬೆಡಗಿ ಆಶಿಕಾ ರಂಗನಾಥ್ (Ashika Ranganath) ಅವರು ಸದ್ಯ ಕನ್ನಡದ ಜೊತೆಗೆ ತೆಲುಗು- ತಮಿಳು ಚಿತ್ರರಂಗದಲ್ಲೂ ಆಕ್ಟೀವ್ ಆಗಿದ್ದಾರೆ. ಈ ನಡುವೆ ಕಾರ್ಯಕ್ರಮವೊಂದರಲ್ಲಿ ನಟಿ ಆಶಿಕಾ ಅವರು ತಮ್ಮ ಲೈಫ್ ಪಾರ್ಟನರ್ ಹೇಗಿರಬೇಕು ಎಂದು ಬಣ್ಣಿಸಿದ್ದಾರೆ. ಯಶ್ (Actor Yash) ತರ ಗಂಡ ಇರಬೇಕು ಎಂದು ಹೇಳಿಕೊಂಡಿದ್ದಾರೆ.

    ‘ಕ್ರೇಜಿ ಬಾಯ್’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದ ನಟಿ ಆಶಿಕಾ ರಂಗನಾಥ್, ಮುಗುಳುನಗೆ, ಮಾಸ್ ಲೀಡರ್, ರ‍್ಯಾಂಬೋ 2, ತಾಯಿಗೆ ತಕ್ಕ ಮಗ, ಮದಗಜ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ರು. ‘ಕೋಟಿಗೊಬ್ಬ-3’ನಲ್ಲಿ ಆಶಿಕಾ ರಂಗನಾಥ್, ಕಿಚ್ಚ ಸುದೀಪ್ (Kiccha Sudeep) ಜೊತೆ ಪಟಾಕಿ ಪೋರಿ ಹಾಡಿಗೆ ಸೊಂಟ ಬಳುಕಿಸಿದ್ದರು.

    ಇತ್ತೀಚಿನ ಅವಾರ್ಡ್ ಕಾರ್ಯಕ್ರಮದಲ್ಲಿ ಯಂಗ್ ಸ್ಟಾರ್ ಐಕಾನ್ ಪ್ರಶಸ್ತಿಯೂ ಆಶಿಕಾ ರಂಗನಾಥ್‌ಗೆ ಲಭಿಸಿದೆ. ನಟಿ ಪ್ರಶಸ್ತಿ ಪಡೆದು ತುಂಬಾ ಖುಷಿಯಾಗಿದ್ದಾರೆ. ಬ್ಲ್ಯಾಕ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಈ ಪ್ರಶಸ್ತಿ ಪಡೆದ ನಂತರ ನಿರೂಪಕ ನಿರಂಜನ್ ದೇಶಪಾಂಡೆ ಅವರು ನಿಮ್ಮ ಬಾಯ್ ಫ್ರೆಂಡ್ ಯಾವ ರೀತಿ ಇರಬೇಕು ಎಂದು ಕೇಳ್ತಾರೆ. ಅದಕ್ಕೆ ಆಶಿಕಾ, ನಮ್ಮ ನಡುವೆ ತುಂಬಾ ಹೊಂದಾಣಿಕೆ ಇರಬೇಕು. ಪ್ರೀತಿ ತೋರಿಸಬೇಕು ಎಂದು ಆಶಿಕಾ ಹೇಳಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ‘ಜೋಶ್’ ನಟಿ ಸ್ನೇಹಾ ಆಚಾರ್ಯ

    ನಿರಂಜನ್ ಸ್ಯಾಂಡಲ್‌ವುಡ್‌ನ ಹೀರೋ ಫೋಟೋಗಳನ್ನು ಹಾಕಿ. ಇದರಲ್ಲಿ ನಿಮ್ಮ ಮದುವೆ ಆಗೋ ಹುಡುಗ ಯಾವ ರೀತಿ ಇರಬೇಕು ಎಂದು ಕೇಳ್ತಾರೆ. ಅದಕ್ಕೆ ಆಶಿಕಾ, ಯಶ್ (Yash) ಸರ್ ಥರ ಗಂಡ (Husband) ಇರಬೇಕು ಎನ್ನಿಸುತ್ತೆ ಎಂದಿದ್ದಾರೆ. ನಾನು ಇವರನ್ನು ಓಡಿ ಹೋಗಿ ಪ್ರಪೋಸ್ ಮಾಡ್ತೀನಿ ಅಂದ್ರೆ ಯಾರನ್ನ ಎಂದು ನಿರೂಪಕ ಕೇಳಿದ್ದಾರೆ. ಅದಕ್ಕೆ ಆಶಿಕಾ, ಧ್ರುವ ಸರ್ಜಾ ಎಂದು ಹೇಳಿದ್ದಾರೆ.

    ಚಂದನವನದ ಬೆಸ್ಟ್ ಜೋಡಿ ಯಶ್- ರಾಧಿಕಾ ಪಂಡಿತ್ (Radhika Pandit) ಅವರದ್ದು ಹಲವು ವರ್ಷಗಳು ಪ್ರೀತಿಸಿ ಬಳಿಕ ಮದುವೆ ಆಗಿದ್ದಾರೆ. ಅಲ್ಲದೇ ಇತರೆ ಜೋಡಿಗಳಿಗೆ ಮಾದರಿ ಆಗಿದ್ದಾರೆ. ಅವರ ರೀತಿ ಗಂಡ ಇರಬೇಕು ಎಂದುಕೊಳ್ಳುವುದು ಸಹಜ ಬಿಡಿ ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.

  • ರಾಷ್ಟ್ರೀಯ ಪ್ರತಿಭಟನಾ ದಿನಕ್ಕೆ ಬೆಂಬಲ ಸೂಚಿಸಿದ ನಟಿ ಆಶಿಕಾ ರಂಗನಾಥ್

    ರಾಷ್ಟ್ರೀಯ ಪ್ರತಿಭಟನಾ ದಿನಕ್ಕೆ ಬೆಂಬಲ ಸೂಚಿಸಿದ ನಟಿ ಆಶಿಕಾ ರಂಗನಾಥ್

    ಬೆಂಗಳೂರು: ದೇಶಾದ್ಯಂತ ಇಂದು ವೈದ್ಯ ಸಂಘಟನೆಗಳು ರಾಷ್ಟ್ರೀಯ ಪ್ರತಿಭಟನಾ ದಿನ ಆಚರಿಸುತ್ತಿವೆ. ಕರ್ನಾಟಕ ವೈದ್ಯರ ಪ್ರೋಟೆಸ್ಟ್ ಗೆ, ಸ್ಯಾಂಡಲ್ ವುಡ್ ಖ್ಯಾತ ನಟಿ ಆಶಿಕಾ ರಂಗನಾಥ್ ಬೆಂಬಲ ಸೂಚಿಸಿದ್ದಾರೆ.

    ಈ ಪ್ರತಿಭಟನೆ ಬಗ್ಗೆ ಮಾತನಾಡಿರುವ ಅವರು, ಡಾಕ್ಟರ್ಸ್ ಎಂದರೆ ನನಗೆ ಮೊದಲು ನೆನಪಾಗುವ ಪದ ಸಂರಕ್ಷಕರು ಎಂದು. 14 ತಿಂಗಳಿನಿಂದ ಕೋವಿಡ್ ಮಹಾಮಾರಿಯ ಆರ್ಭಟ ನೆಡೆಯುತ್ತಿದೆ. ಈ ಸಂದರ್ಭದಲ್ಲಿ ಕುಟುಂಬದ ಜೊತೆ ತಮ್ಮ ಜೀವನವನ್ನು ಕೂಡ ಅಪಾಯಕ್ಕೆ ಒಡ್ಡಿಕೊಂಡು ಸಮಾಜಕ್ಕೋಸ್ಕರ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೂ ಅಭಾರಿಯಾಗಿದ್ದೇನೆ. ಆರೋಗ್ಯ ಕಾರ್ಯಕರ್ತರ ಪ್ರಯತ್ನ ಮತ್ತು ಸೇವಾ ಮನೋಭಾವಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

    ಡಾಕ್ಟರ್ಸ್‍ಗಳ ಮೇಲಿನ ಹಲ್ಲೆ ಖಂಡಿಸಿ, ಜನರಲ್ಲಿ ಸಾಮಾಜಿಕ ತಿಳುವಳಿಕೆ ಮೂಡಿಸಲು ಪ್ರತಿಭಟನೆ ನಡೆಸಲಾಗುತ್ತಿದೆ. ಈ ಜಾಗೃತಿ ಕಾರ್ಯಕ್ರಮಕ್ಕೆ ನಾನು ಸಂಪೂರ್ಣ ಬೆಂಬಲ ನೀಡುತ್ತಿದ್ದೇನೆ. ಎಲ್ಲರೂ ಕೂಡ ಬೆಂಬಲ ನೀಡಿ ಎಂದು ಮನವಿಮಾಡಿದ್ದಾರೆ. ನಮ್ಮ ಡಾಕ್ಟರ್ಸ್‍ನ ನಾವು ಉಳಿಸಿಕೊಳ್ಳೋಣ, ಅವರ ಪ್ರಯತ್ನಗಳನ್ನು ಶ್ಲಾಘಿಸೋಣ… #Save the Saviours# ಎನ್ನುವ ಹ್ಯಾಶ್ ಟ್ಯಾಗ್ ಮುಖಾಂತರ ಈ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಟಾಪ್‍ಲೆಸ್ ಫೋಟೋ ಶೂಟ್‍ನಲ್ಲಿ ನಟಿ ಕಿಯಾರಾ ಅಡ್ವಾಣಿ ಸಖತ್ ಹಾಟ್