Tag: actress

  • ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ: ನಾವೂ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದ ನಟಿ

    ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ: ನಾವೂ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದ ನಟಿ

    ತ್ತಿಗೆಗೆ ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ನಡೆಸಿದ್ದಾರೆ ಎನ್ನುವ ಕಾರಣಕ್ಕಾಗಿ ನಟಿ ಅಭಿನಯಗೆ ನಿನ್ನೆಯಷ್ಟೇ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಭಿನಯ ಅವರ ಸಹೋದರನ ಪತ್ನಿ ಲಕ್ಷ್ಮಿದೇವಿ ಅನ್ನುವವರು ಅಭಿನಯ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ವಿಚಾರಣೆ ನಡೆಸಿದ ಹೈಕೋರ್ಟ್ ಅಭಿನಯ ಅವರಿಗೆ 2 ವರ್ಷ ಮತ್ತು ಅವರ ತಾಯಿಗೆ 5 ವರ್ಷ ಜೈಲು ಶಿಕ್ಷೆ ನೀಡಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಭಿನಯ, ‘ಇದು ಇಪ್ಪತ್ತು ವರ್ಷದ ಕೇಸು. ಕಳೆದ ಬಾರಿ ತೀರ್ಪು ನಮ್ಮಂತೆ ಆಗಿತ್ತು. ಇದೀಗ ಅವರಂತೆ ಆಗಿದೆ. ನಾವು ಕಾನೂನು ಸಮರವನ್ನು ಮುಂದುವರೆಸುತ್ತೇವೆ. ಲಕ್ಷ್ಮಿದೇವಿ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕಾನೂನು ಹೋರಾಟ ಮುಂದುವರೆಯುತ್ತದೆ, ಮುಂದೇನಾಗತ್ತೋ ನೋಡೋಣ’ ಎಂದಿದ್ದಾರೆ. ಅತ್ತಿಗೆ ಮಾಡಿರುವ ಎಲ್ಲ ಆರೋಪಗಳನ್ನೂ ಈ ಸಂದರ್ಭದಲ್ಲಿ ಅವರು ತಳ್ಳಿ ಹಾಕಿದ್ದಾರೆ.  ಇದನ್ನೂ ಓದಿ: ಜಗ್ಗೇಶ್ ನಟನೆ `ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಬಗ್ಗೆ ಸ್ಪಷ್ಟನೆ ನೀಡಿದ ಸಂತೋಷ್‌ ಆನಂದ್‌ರಾಮ್

    ಏನಿದು ಪ್ರಕರಣ? : ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಜೈಲು‌ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ  2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು. ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಹೇಳಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಾಗಿತ್ತು.

    ಹಣದ ಬೇಡಿಕೆ ಇಟ್ಟಿದ್ದ ಅಭಿನಯ ಕುಟುಂಬವು  ಲಕ್ಷ್ಮೀದೇವಿಗೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಲಕ್ಷ್ಮಿದೇವಿ ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಲಕ್ಷ್ಮೀದೇವಿ. ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದ ಅದೇಶ.

    Live Tv
    [brid partner=56869869 player=32851 video=960834 autoplay=true]

  • ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು

    ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು

    ಮ್ಮ ಕುಟುಂಬದ ಜೊತೆ ಭಾಗಿಯಾಗಿ ಸಹೋದರನ ಪತ್ನಿಗೆ ಕಿರುಕುಳ ನೀಡಿದರು ಮತ್ತು ವರದಕ್ಷಿಣಿ ತರುವಂತೆ ಪೀಡಿಸಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿರುವ ಖ್ಯಾತನಟಿ ಅಭಿನಯ ಅವರ ಕುಟುಂಬದ ಕುರಿತು ಹಲವು ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಅಭಿನಯ ಸಹೋದರನ ಪತ್ನಿ ಲಕ್ಷ್ಮಿದೇವಿ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಅದೊಂದು ನರಕದ ಮನೆಯಾಗಿತ್ತು’ ಎಂದು ಹೇಳಿಕೊಂಡಿದ್ದಾರೆ.

    ನಾನು ಗಂಡನ ಮನೆಯಲ್ಲಿ ಇದ್ದದ್ದು ಒಂದೇ ವರ್ಷ ಮಾತ್ರ. ಎಲ್ಲ ರೀತಿಯ ನರಕವನ್ನೂ ಅನುಭವಿಸಿದೆ. ತಿನ್ನೋಕೆ ಒಂದ್ ರೊಟ್ಟಿ, ಸ್ನಾನ ಮಾಡೋಕೆ ಒಂದ್ ಬಕೆಟ್ ನೀರು ಜೊತೆಗೆ ಪರಪುರುಷನ ಜೊತೆ ಸಹಕರಿಸು ಅಂತ ಚಿತ್ರಹಿಂಸೆ ಕೊಡುತ್ತಿದ್ದರು. ಪರಪುರುಷನನ್ನು ಮನೆಗೂ ಕರೆದುಕೊಂಡು ಬರುತ್ತಿದ್ದರು. ಅಭಿನಯ ಚಿತ್ರ ನಟಿಯಾದರೂ, ಅವರು ನನ್ನ ನೆರವಿಗೆ ಬರಲಿಲ್ಲ. ಅವರೂ ಕೂಡ ಹಿಂಸೆ ಕೊಟ್ಟರು ಎಂದು ಮಾತನಾಡಿದ್ದಾರೆ ಲಕ್ಷ್ಮಿದೇವಿ. ಇದನ್ನೂ ಓದಿ: ಕೊನೆಗೂ ಹೊರಬಿತ್ತು ಕೆ.ಎಲ್ ರಾಹುಲ್ -ಅಥಿಯಾ ಮದುವೆ ಡೇಟ್

    ಏನಿದು ಪ್ರಕರಣ?
    ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಜೈಲು‌ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ  2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು. ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಹೇಳಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಾಗಿತ್ತು.

    ಹಣದ ಬೇಡಿಕೆ ಇಟ್ಟಿದ್ದ ಅಭಿನಯ ಕುಟುಂಬವು  ಲಕ್ಷ್ಮೀದೇವಿಗೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಲಕ್ಷ್ಮಿದೇವಿ ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಲಕ್ಷ್ಮೀದೇವಿ. ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದ ಅದೇಶ.

    Live Tv
    [brid partner=56869869 player=32851 video=960834 autoplay=true]

  • ಅನುಭವ ಸಿನಿಮಾದ ಖ್ಯಾತನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

    ಅನುಭವ ಸಿನಿಮಾದ ಖ್ಯಾತನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

    ನ್ನಡ ಸಿನಿಮಾ ಮತ್ತು ಕಿರುತೆರೆ ನಟಿ ಅಭಿನಯಗೆ ಹೈಕೋರ್ಟ್ ಏಕಸದಸ್ಯ ಪೀಠವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಜೈಲು‌ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

    ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ  2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು. ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಹೇಳಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಾಗಿತ್ತು. ಇದನ್ನೂ ಓದಿ: ಮಹಾಲಕ್ಷ್ಮಿ ಮದುವೆಗೆ ಶತದಿನೋತ್ಸವ: ಹೆಂಡ್ತಿಗೆ ಹ್ಯಾಪಿ ಕ್ರೆಡಿಟ್ ಕೊಟ್ಟ ರವೀಂದ್ರ

    ಹಣದ ಬೇಡಿಕೆ ಇಟ್ಟಿದ್ದ ಅಭಿನಯ ಕುಟುಂಬವು  ಲಕ್ಷ್ಮೀದೇವಿಗೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಲಕ್ಷ್ಮಿದೇವಿ ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಲಕ್ಷ್ಮೀದೇವಿ. ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದ ಅದೇಶ.

    Live Tv
    [brid partner=56869869 player=32851 video=960834 autoplay=true]

  • ಮಹಾರಾಷ್ಟ್ರ ಮಾಜಿ ಸಿಎಂ ಮೊಮ್ಮಗನ ಜೊತೆ ಮಾಲ್ಡೀವ್ಸ್‌ಗೆ ಹಾರಿದ ಜಾನ್ವಿ

    ಮಹಾರಾಷ್ಟ್ರ ಮಾಜಿ ಸಿಎಂ ಮೊಮ್ಮಗನ ಜೊತೆ ಮಾಲ್ಡೀವ್ಸ್‌ಗೆ ಹಾರಿದ ಜಾನ್ವಿ

    ಬಾಲಿವುಡ್ (Bollywood) ನಟಿ ಜಾನ್ವಿ ಕಪೂರ್ (Janhavi Kapoor) ಮಹಾರಾಷ್ಟ್ರ ಮಾಜಿ ಸಿಎಂ ಮೊಮ್ಮಗ ಶಿಖರ್ ಪಹಾರಿಯಾ (Shikhar Pahariya) ಜೊತೆ ಮಾಲ್ಡೀವ್ಸ್‌ಗೆ ಹಾರಿದ್ದಾರೆ ಎಂಬ ಸುದ್ದಿ ಬಿಟೌನ್‌ನಲ್ಲಿ ಹರಿದಾಡುತ್ತಿದೆ. ಮಾಜಿ ಗಳೆಯನ ಜೊತೆ ನಟಿ ವೆಕೇಷನ್ಸ್ ಎಂಜಾಯ್ ಮಾಡ್ತಿದ್ದಾರೆ ಎನ್ನಲಾಗುತ್ತಿದೆ.

    ಇತ್ತೀಚೆಗೆ ನಟಿ ಜಾನ್ವಿ ಮಾಲ್ಡೀವ್ಸ್‌ನಲ್ಲಿ (Maldivas) ಕಳೆದ ತಮ್ಮ ಬೋಲ್ಡ್ ಫೋಟೋಗಳನ್ನ ಶೇರ್ ಮಾಡುವ ಮೂಲಕ ಸಂಚಲನ ಮೂಡಿಸಿದ್ದರು. ಈಗ ನಟಿಯ ಬಗ್ಗೆ ಹೊಸ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮಹಾರಾಷ್ಟ್ರ ಮಾಜಿ ಸಿಎಂ ಮೊಮ್ಮಗ ಶಿಖರ್ ಜೊತೆ ನಟಿ ಡೇಟ್ ಮಾಡ್ತಿದ್ದಾರೆ. ಇಬ್ಬರು ಮಾಲ್ಡೀವ್ಸ್‌ನ ಫೋಟೋ ಶೇರ್ ಮಾಡಿರುವುದ್ದಕ್ಕೆ ಈ ಅನುಮಾನ ಮೂಡಲು ಕಾರಣವಾಗಿದೆ. ಇದನ್ನೂ ಓದಿ: ರಿಷಬ್ ಮಗನಿಗೆ ಕೂಸುಮರಿ ಮಾಡಿದ ʻಕಾಂತಾರʼ ನಟಿ ಸಪ್ತಮಿ

    ಸುಶೀಲ್‌ಕುಮಾರ್ ಶಿಂಧೆ ಅವರ ಮೊಮ್ಮಗ ಶಿಖರ್. ಈ ಮೊದಲು ಜಾನ್ವಿ ಮತ್ತು ಶಿಖರ್ ಪಹಾರಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದರು. ಆದರೆ ಬಳಿಕ ಬ್ರೇಕಪ್ ಮಾಡಿಕೊಂಡು ದೂರ ಆಗಿದ್ದರು. ಇದೀಗ ಮತ್ತೆ ಒಂದಾಗಿದ್ದಾರೆ, ಮಾಲ್ಡೀವ್ಸ್ ಪ್ರವಾಸ ಮಾಡುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ದಂತದ ಗೊಂಬೆಯಂತೆ ಮಿಂಚಿದ ಪ್ರಣಿತಾ ಸುಭಾಷ್

    ದಂತದ ಗೊಂಬೆಯಂತೆ ಮಿಂಚಿದ ಪ್ರಣಿತಾ ಸುಭಾಷ್

    ಸ್ಯಾಂಡಲ್‌ವುಡ್ ನಟಿ ಪ್ರಣಿತಾ (Pranitha Subhash) ಮಗಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಚೆಂದದ ಫೋಟೋಶೂಟ್‌ವೊಂದನ್ನ ಮಾಡಿಸಿದ್ದಾರೆ. ದಂತದ ಗೊಂಬೆಯಂತೆ ಫೋಟೋಗೆ ನಟಿ ಪೋಸ್ ಕೊಟ್ಟಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

     

    View this post on Instagram

     

    A post shared by Pranita Subhash (@pranitha.insta)

    `ಪೊರ್ಕಿ’ (Porki) ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ (Sandalwood) ಎಂಟ್ರಿ ಕೊಟ್ಟ ನಟಿ ಪ್ರಣಿತಾ, ಬಹುಭಾಷಾ ನಾಯಕಿಯಾಗಿ ಮಿರ ಮಿರ ಅಂತಾ ಮಿಂಚಿದ್ದರು. ಕಳೆದ ವರ್ಷ ಬಹುಕಾಲದ ಗೆಳೆಯ ನಿತಿನ್ (Nitin) ಜೊತೆ ಹಸೆಮಣೆ ಏರಿದ್ದರು. ಈಗ ಮುದ್ದು ಮಗಳ ಎಂಟ್ರಿಯಾಗಿದೆ. ಮದುವೆ ಆಗಿ, ತಾಯಿಯಾಗಿದ್ದರೂ ಕೂಡ ನಟಿಯ ಗ್ಲಾಮರ್ ಒಂದಚೂರು ಕಮ್ಮಿಯಾಗಿಲ್ಲ. ಮದುವೆ ನಂತರ ಮತ್ತಷ್ಟು ಸುಂದರವಾಗಿ ನಟಿ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ: ವಸಿಷ್ಠನ ಮದುವೆ ವಿಚಾರ ಮಾತಾಡಬೇಡಿ ನೋವಾಗುತ್ತೆ ಎಂದ ಡಾಲಿ

     

    View this post on Instagram

     

    A post shared by Pranita Subhash (@pranitha.insta)

    ಇದೀಗ ಹೊಸ ಫೋಟೋಶೂಟ್ ಮೂಲಕ ನಟಿ ಪ್ರಣಿತಾ ಮಿಂಚಿದ್ದಾರೆ. ಬಳಕುವ ಬಳ್ಳಿಯಂತೆ ನಟಿ ಕಾಣಿಸಿಕೊಂಡಿದ್ದಾರೆ. ಆರೆಂಜ್ ಕಲರ್ ಟಾಪ್‌ನಲ್ಲಿ ಬಿಳಿ ಬಣ್ಣದ ಹೂವು ಹಿಡಿದು ದಂತದ ಗೊಂಬೆಯಂತೆ ಕಂಗೊಳಿಸಿದ್ದಾರೆ. ನಟಿಯ ಹೊಸ ಲುಕ್ ನೋಡಿರುವ ನೆಟ್ಟಿಗರು ಸಂತೂರ್ ಮಮ್ಮಿ ಎಂದು ಕಾಮೆಂಟ್ ಮಾಡ್ತಿದ್ದಾರೆ.

    ಇನ್ನೂ ಪ್ರಣಿತಾ ಸುಭಾಷ್ ನಟನೆಯ `ರಾಮನ ಅವತಾರ’ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ.

    Live Tv
    [brid partner=56869869 player=32851 video=960834 autoplay=true]

  • ಎಂಗೇಜ್ ಮೆಂಟ್ ವಿಚಾರದಲ್ಲಿ ನಾನು ಡಿಪ್ರೆಷನ್ ಗೆ ಹೋಗಿರಲಿಲ್ಲ: ನಟಿ ವೈಷ್ಣವಿ

    ಎಂಗೇಜ್ ಮೆಂಟ್ ವಿಚಾರದಲ್ಲಿ ನಾನು ಡಿಪ್ರೆಷನ್ ಗೆ ಹೋಗಿರಲಿಲ್ಲ: ನಟಿ ವೈಷ್ಣವಿ

    ವಿದ್ಯಾಭರಣ್ ಜೊತೆಗಿನ ನಿಶ್ಚಿತಾರ್ಥ ವಿಚಾರವಾಗಿ ನಟಿ ವೈಷ್ಣವಿ ಹಲವು ದಿನಗಳ ಕಾಲ ಕಾಣಿಸಿಕೊಂಡಿರಲಿಲ್ಲ. ಮಾಧ್ಯಮಗಳ ಜೊತೆ ಅವರ ತಾಯಿ ಮಾತನಾಡಿ, ‘ಮಗಳ ಮನಸ್ಸು ಸರಿಯಿಲ್ಲ. ಹಾಗಾಗಿ ಮಾಧ್ಯಮಗಳ ಮುಂದೆ ಆಕೆ ಕಾಣಿಸಿಕೊಳ್ಳುತ್ತಿಲ್ಲ’ ಎಂದಿದ್ದರು. ವೈಷ್ಣವಿ ಆಚೆ ಬಾರದೇ ಇರುವ ಕಾರಣಕ್ಕಾಗಿ ಅವರು ಡಿಪ್ರೆಷನ್ ಗೆ ಹೋಗಿದ್ದಾರೆ ಎಂದು ಹೇಳಲಾಗಿತ್ತು. ಅದರಿಂದ ಆಚೆ ಬರಲು ಅವರು ಟ್ಯಾಟೋ ಹಾಕಿಸಿಕೊಂಡರು ಎಂದು ಚರ್ಚೆ ನಡೆದಿತ್ತು. ಈ ಕುರಿತು ವೈಷ್ಣವಿ ಮೊದಲ ಬಾರಿಗೆ ಸ್ಪಷ್ಟನೆ ನೀಡಿದ್ದಾರೆ.

    ವಿದ್ಯಾಭರಣ್ ಕುರಿತಾದ ಆಡಿಯೋ ಬಹಿರಂಗವಾದಾಗ ಅವರ ಮನಸಿಗೆ ನೋವು ಆಗಿದ್ದು ನಿಜವಂತೆ. ಆದರೆ, ಯಾವುದೇ ಕಾರಣಕ್ಕೂ ಡಿಪ್ರೆಷನ್ ಗೆ ಹೋಗಿರಲಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. ಕೆಲವರು ಈ ರೀತಿಯಲ್ಲಿ ಮಾತನಾಡಿದರು. ಅದರಿಂದ ಆಚೆ ಬರುವುದಕ್ಕಾಗಿ ಟ್ಯಾಟೋ ಹಾಕಿಸಿಕೊಂಡರು ಎಂದೆಲ್ಲ ಮಾತನಾಡಿದ್ದನ್ನು ಕೇಳಿದ್ದೇನೆ. ಆದರೆ, ನಾನು ತುಂಬಾ ಸ್ಟ್ರಾಂಗ್. ನನ್ನ ಬದುಕಿಗೆ ಬಗ್ಗೆ ನನಗೆ ಸ್ಪಷ್ಟತೆ ಇದೆ ಎಂದು ಅವರು ಹೇಳಿದ್ದಾರೆ.

    ಸದ್ಯ ವೈಷ್ಣವಿ ಮತ್ತೊಂದು ಹೊಸ ಧಾರಾವಾಹಿಯನ್ನು ಒಪ್ಪಿಕೊಂಡಿದ್ದಾರೆ. ಸದ್ಯದಲ್ಲೇ ಆ ಧಾರಾವಾಹಿಯ ಚಿತ್ರೀಕರಣದಲ್ಲೂ ಅವರು ತೊಡಗಿಕೊಳ್ಳಲಿದ್ದಾರೆ. ‘ನನ್ನ ಬದುಕಿನ ಬಗ್ಗೆ ಸ್ಪಷ್ಟತೆ ಇದೆ. ನಾನು ಗೆಲ್ಲುತ್ತೀನೋ ಅಥವಾ ಜೀವನ ಗೆಲ್ಲತ್ತೋ ನೋಡೇ ಬಿಡೋಣ’ ಎಂದೂ ಅವರು ಹೇಳಿಕೊಂಡಿದ್ದಾರೆ. ಮದುವೆಯ ಬಗ್ಗೆ ತಮಗಿರುವ ಕನಸುಗಳ ಬಗ್ಗೆಯೂ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನಟಿ ಅಶು ರೆಡ್ಡಿ ಕಾಲು ಹಿಡಿದ ರಾಮ್ ಗೋಪಾಲ್ ವರ್ಮಾ: ನೆಟ್ಟಿಗರು ಶಾಕ್

    ವಿದ್ಯಾಭರಣ್ ಜೊತೆ ತಮಗೆ ನಿಶ್ಚಿತಾರ್ಥ ಆಗಿರಲಿಲ್ಲ. ಮದುವೆಗೂ ತಾವು ಒಪ್ಪಿರಲಿಲ್ಲ ಎಂದೂ ಹೇಳಿರುವ ವೈಷ್ಣವಿ ಆದ ಘಟನೆಯ ಬಗ್ಗೆ ವಿಷಾದವನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಸದ್ಯ ಕೆರಿಯರ್ ಬಗ್ಗೆ ಫೋಕಸ್ ಮಾಡಿಕೊಂಡು, ಧಾರಾವಾಹಿಯನ್ನು ಅವರು ಒಪ್ಪಿಕೊಂಡಿದ್ದಾರೆ. ಈ ವಿಚಾರದಿಂದ ಮತ್ತೆ ಅವರು ದೂರ ಇರುವುದಾಗಿಯೂ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಗುವಿನ ಮುಖ ತೋರಿಸದೇ ಫೋಟೋ ಹಾಕಿದ್ದಕ್ಕೆ, ಪ್ರಣಿತಾ ವಿರುದ್ಧ ನೆಟ್ಟಿಗರು ಗರಂ

    ಮಗುವಿನ ಮುಖ ತೋರಿಸದೇ ಫೋಟೋ ಹಾಕಿದ್ದಕ್ಕೆ, ಪ್ರಣಿತಾ ವಿರುದ್ಧ ನೆಟ್ಟಿಗರು ಗರಂ

    ಹುಭಾಷಾ ನಟಿ ಪ್ರಣಿತಾ ಸುಭಾಷ್ (Pranitha Subhash) ಸದಾ ಒಂದಲ್ಲಾ ಒಂದು ಸುದ್ದಿ ಮೂಲಕ ಸೌಂಡ್ ಮಾಡ್ತಿರುತ್ತಾರೆ. ಇದೀಗ ಮುದ್ದು ಮಗಳ ಫೋಟೋ ಹಾಕಿ, ಮುಖ ತೋರಿಸದೇ ಇರೋದಕ್ಕೆ ನಟಿಗೆ ನೆಟ್ಟಿಗರು ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಕನ್ನಡತಿ ಪ್ರಣಿತಾ ಸುಭಾಷ್, ಬಹುಭಾಷಾ ನಾಯಕಿಯಾಗಿ ಸಂಚಲನ ಮೂಡಿಸಿದವರು. ಇದೀಗ ಮದುವೆ, ಪತಿ, ಮಗಳು ಅಂತಾ ತಮ್ಮ ವೈಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಆಗಾಗ ಮಗಳ ಜೊತೆಗಿನ ಫೋಟೋ ಹಂಚಿಕೊಳ್ಳುತ್ತಾರೆ. ಇದೀಗ ಪ್ರಣಿತಾಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರೀ ವೆಡ್ಡಿಂಗ್ ಪಾರ್ಟಿಯಲ್ಲಿ ಮಿಂಚಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ

     

    View this post on Instagram

     

    A post shared by Pranita Subhash (@pranitha.insta)

    ಇತ್ತೀಚೆಗೆ ಮುದ್ದು ಮಗಳು ಆರ್ನಾ ಫೋಟೋ ಅಪ್‌ಲೋಡ್ ಮಾಡಿದ್ದರು. ಆದರೆ ಮಗುವಿನ ಮುಖ ಮಾತ್ರ ತೋರಿಸುತ್ತಿರಲಿಲ್ಲ. ಆ ರೀತಿ ಹಲವು ಬಾರಿ ನಡೆದಿತ್ತು. ಮಗುವಿನ ಮುಖ ತೋರಿಸಲ್ಲ ಅಂದ್ಮೇಲೆ ಫೋಟೋ ಯಾಕೆ ಹಾಕಬೇಕು. ಫೋಟೋ ಹಾಕಬೇಡಿ ಎಂದು ನಟಿಗೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

     

    View this post on Instagram

     

    A post shared by Pranita Subhash (@pranitha.insta)

    ಇನ್ನೂ ಪ್ರಣಿತಾ ಸುಭಾಷ್ ಮದುವೆಗೂ ಮುನ್ನ ನಟಿಸಿರುವ ಕನ್ನಡದ `ರಾಮನ ಅವತಾರ’ (Ramana Avatara) ಮುಂದಿನ ವರ್ಷ ತೆರೆ ಕಾಣಲಿದೆ. ಮದುವೆ ನಂತರ ಮತ್ತಷ್ಟು ಫಿಟ್ ಆಗಿರುವ ಪ್ರಣಿತಾ ಸಿನಿಮಾ ರಂಗಕ್ಕೆ ಮತ್ತೆ ಕಂಬ್ಯಾಕ್ ಮಾಡುತ್ತಾರಾ ಅಂತಾ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ತಾರಾ ಭೇಟಿ

    ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ತಾರಾ ಭೇಟಿ

    ಸ್ಯಾಂಡಲ್‌ವುಡ್‌ನ (Sandalwood) ಹಿರಿಯ ನಟಿ ತಾರಾ ಅನುರಾಧ (Tara Anuradha) ಇದೀಗ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ(Kateel Durgaparameshwari) ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ.

    ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಆಕ್ಟೀವ್ ಆಗಿದ್ದಾರೆ. ಈ ಮಧ್ಯೆ ಡಿಸೆಂಬರ್ 2ರಂದು ತಾರಾ ಕಟೀಲಿನ ಪುಣ್ಯ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಶಿವನ ಮುಡಿಗೆ ಸಿದ್ಧಶ್ರೀ ಪ್ರಶಸ್ತಿಯ ಗರಿ – ಪಂರ್ಜುಲಿ ದೈವಕ್ಕೆ ಅರ್ಪಿಸಿದ ರಿಷಬ್

    ಇನ್ನೂ ಸಾಲು ಸಾಲು ಚಿತ್ರಗಳಲ್ಲಿ ನಟಿ ತಾರಾ ಬ್ಯುಸಿಯಾಗಿದ್ದಾರೆ. `ನನ್ನಮ್ಮ ಸೂಪರ್ ಸ್ಟಾರ್ 2′ ರಿಯಾಲಿಟಿ ಶೋನ ಜಡ್ಜ್ ಆಗಿ ಕಾಣಿಸಿಕೊಳ್ತಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ನಟಿ ತಾರಾ ಸೈ ಎನಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಲೆಕೆಳಗಾಗಿ ರಾಷ್ಟ್ರಧ್ವಜ ಹಾರಿಸಿದ ನೋರಾ ಫತೇಹಿ ವಿರುದ್ಧ ನೆಟ್ಟಿಗರ ಆಕ್ರೋಶ

    ತಲೆಕೆಳಗಾಗಿ ರಾಷ್ಟ್ರಧ್ವಜ ಹಾರಿಸಿದ ನೋರಾ ಫತೇಹಿ ವಿರುದ್ಧ ನೆಟ್ಟಿಗರ ಆಕ್ರೋಶ

    ನೋರಾ ಫತೇಹಿ (Nora Fatehi) ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ನಟಿ ನೋರಾ ಫತೇಹಿ ವಿಶ್ವಕಪ್‌ನಲ್ಲಿ ತಲೆಕಳೆಗಾಗಿ ಭಾರತದ ಧ್ವಜ ಹಾರಿಸಿದ ಪರಿಣಾಮ ಇದೀಗ ಹಿಗ್ಗಾಮುಗ್ಗಾ ಟ್ರೋಲ್ ಆಗಿದ್ದಾರೆ.

    ಕತಾರ್‌ನಲ್ಲಿ 2022ರ ವಿಶ್ವಕಪ್ (World Cup) ನಡೆಯುತ್ತಿದೆ. ನಟಿ ನೋರಾ ಫತೇಹಿ ಕೂಡ ಭಾಗವಹಿಸಿದ್ದರು. ಹಾಜರಿ ಹಾಕಿದ್ದಷ್ಟೆ ಅಲ್ಲದೇ ನೋರಾ ಫತೇಹಿ ವಿಶೇಷ ಪ್ರದರ್ಶನ ನೀಡಿದ್ದರು. ಬಾಲಿವುಡ್‌ನ ಅನೇಕ ಸೂಪರ್ ಹಿಟ್ ಹಾಡುಗಳಿಗೆ ನೋರಾ ಫತೇಹಿ ಹೆಜ್ಜೆ ಹಾಕಿದರು. ಡ್ಯಾನ್ಸ್ ಮಾಡುತ್ತಾ ಭಾರತದ ಧ್ವಜ ಹಾರಿದರು. ಜೈ ಹಿಂದ್ ಎಂದು ಕೂಗಿದರು. ಆದರೂ ನೋರಾ ಫತೇಹಿ ಹಿಗ್ಗಾಮುಗ್ಗಾ ಟ್ರೋಲ್ ಆಗುತ್ತಿದ್ದಾರೆ. ತಿರಂಗಾಗೆ ಅವಮಾನ ಮಾಡಿದ್ದಾರೆ ಎಂದು ನೆಟ್ಟಿಗರು ಅಸಮಾಧಾನ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ರೂಪೇಶ್ ರಾಜಣ್ಣ – ಗುರೂಜಿ ಜಟಾಪಟಿ: ಸಂಬರ್ಗಿ ಗಪ್‌ಚುಪ್

     

    View this post on Instagram

     

    A post shared by Arshin k madhu (@arshin_k_madhu)

    ನೃತ್ಯ ಮಾಡುವಾಗ ನೋರಾ ಫತೇಹಿ ಭಾರತದ ಧ್ವಜ ಹಾರಿಸಿದರು. ಧ್ವಜ ತೆಗೆದುಕೊಂಡ ನೋರಾ ಮೊದಲು ಸರಿಯಾಗಿ ಹಾರಿಸಿದರು. ಆದರೆ ನಂತರ ತಲೆಕೆಳಗಾಗಿ ರಾಷ್ಟ್ರಧ್ವಜವನ್ನು ಹಾರಿಸಿದರು. ನಟಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ. ನೋರಾ ಉಲ್ಟಾ ತಿರಂಗಾ ಹಾರಿಸಿದ ಫೋಟೋ ಶೇರ್ ಮಾಡಿ ಅಸಮಾಧಾನ ಹೊರಹಾಕುತ್ತಿದ್ದಾರೆ.

     

    View this post on Instagram

     

    A post shared by Arshin k madhu (@arshin_k_madhu)

    ನೋರಾ ಫತೇಹಿ ಡ್ಯಾನ್ಸ್ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಅನೇಕರು ನೋರಾ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ತಲೆಕಳಗಾಗಿ ತಿರಂಗಾ ಹಾರಿಸಿ ಟ್ರೋಲ್ ಆಗುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಕಿನಿ ತೊಟ್ಟು ಪೋಸ್‌ ಕೊಟ್ಟ ನಿವೇದಿತಾಗೆ ಬೆವರಿಳಿಸಿದ ನೆಟ್ಟಿಗರು

    ಬಿಕಿನಿ ತೊಟ್ಟು ಪೋಸ್‌ ಕೊಟ್ಟ ನಿವೇದಿತಾಗೆ ಬೆವರಿಳಿಸಿದ ನೆಟ್ಟಿಗರು

    `ಬಿಗ್ ಬಾಸ್’ (Bigg Boss) ಖ್ಯಾತಿಯ ನಿವೇದಿತಾ ಗೌಡ(Niveditha Gowda) ಪ್ರವಾಸಿಗರ ಸ್ವರ್ಗ ಬಾಲಿಗೆ ಹಾರಿದ್ದಾರೆ. ಒಂಟಿಯಾಗಿ ತಮ್ಮ ಪ್ರವಾಸದ ದಿನವನ್ನ ಎಂಜಾಯ್ ಮಾಡ್ತಿದ್ದಾರೆ. ಹೀಗಿರುವಾಗ ಇದೀಗ ಮತ್ತೆ ಟ್ರೋಲಿಗರ ಬಾಯಿಗೆ ನಿವಿ ಗುರಿಯಾಗಿದ್ದಾರೆ. ಬಿಕಿನಿ ತೊಟ್ಟ ನಟಿಗೆ ನೆಟ್ಟಿಗರು ಫುಲ್ ತರಾಟೆಗೆ ತೆಗೆದುಕೊಂಡಿದ್ದಾರೆ. ನಿವೇದಿತಾ ಶೇರ್ ಮಾಡಿರುವ ಬಿಕಿನಿ ವೀಡಿಯೋ ಈಗ ಸಖತ್ ಸದ್ದು ಮಾಡುತ್ತಿದೆ.

    ಸದಾ ಟ್ರೋಲ್ ಆಗುವ ನಿವೇದಿತಾ (Niveditha Gowda) ಈ ಬಾರಿ ತುಸು ಜಾಸ್ತಿಯೇ ಟ್ರೋಲ್ ಆಗಿದ್ದಾರೆ. ಬಾಲಿಯಲ್ಲಿ (Bali) ಏಕಾಂಗಿಯಾಗಿ ಎಂಜಾಯ್ ಮಾಡ್ತಿರುವ ನಟಿ, ಬಿಕಿನಿಯಲ್ಲಿ ಸೊಂಟ ಬಳುಕಿಸಿದ್ದಾರೆ. ಮದುವೆ ಆದ ಮೇಲೆ ಹೇಗಿರಬೇಕು ಎಂದು ನಟಿಗೆ ನೆಟ್ಟಿಗರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ನಿನ್ನ ಗಂಡನ ಮುಂದೆ ನಿನ್ನನ್ನು ಪ್ರದರ್ಶಿಸು, ಸಾರ್ವಜನಿಕ ಮುಂದೆ ಅಲ್ಲ ಎಂದು ನಿವೇದಿತಾ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ಅನಿರುದ್ಧ್-ಅನು ಜೋಡಿ

    ಬಾಲಿಗೆ ತೆರಳಿದ್ದ ನಟಿಗೆ ಚಂದನ್ ಶೆಟ್ಟಿ (Chandan Shetty) ಎಲ್ಲಿ ಎಂದು ಟ್ರೋಲ್ ಮಾಡಿದ್ದರು. ನಿವಿ ಬಿಕಿನಿ ಅವತಾರಕ್ಕೆ ಫ್ಯಾನ್ಸ್ ರಾಂಗ್ ಆಗಿದ್ದಾರೆ. ಮದುವೆ ಆದ ಮೇಲೆ ರಾಧಿಕಾ ಪಂಡಿತ್ ಹೇಗಿದ್ದಾರೆ ನೋಡಿ. ಅವರನ್ನ ನೋಡಿ ಕಲಿಯಿರಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಚಂದನ್ ಶೆಟ್ಟಿ ಅವರನ್ನ ಮಾರಿಕೊಂಡು ತಿನ್ನುತ್ತೀರಾ ಎಂದು ಕಿಡಿಕಾರಿದ್ದಾರೆ. ನಿನ್ನ ಗಂಡನ ಮುಂದೆ ನಿನ್ನನ್ನು ಪ್ರದರ್ಶಿಸು, ಸಾರ್ವಜನಿಕ ಮುಂದೆ ಅಲ್ಲ ಎಂದು ನೆಟ್ಟಿಗರು ಫುಲ್ ರಾಂಗ್ ಆಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]