Tag: actress

  • ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ತಿದ್ದಾರೆ ಎಂದಿದ್ದ ನಟಿ ಕ್ಷಮೆ

    ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ತಿದ್ದಾರೆ ಎಂದಿದ್ದ ನಟಿ ಕ್ಷಮೆ

    ಭೋಪಾಲ್: ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಜನಪ್ರಿಯ ಕಿರುತೆರೆ ನಟಿ ಶ್ವೇತಾ ತಿವಾರಿ ಇದೀಗ ಕ್ಷಮೆಯಾಚಿಸಿದ್ದಾರೆ.

    ತನ್ನ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಫ್‍ಐಆರ್ ದಾಖಲಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ನಟಿ, ಪತ್ರಿಕಾಗೋಷ್ಠಿ ನಡೆಸಿ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಕೂಡ ದೇವರನ್ನು ಆರಾಧಿಸುತ್ತೇನೆ. ಹೀಗಾಗಿ ಉದ್ದೇಶಪೂರ್ವಕವಾಗಿ ನಾನು ಆ ಹೇಳಿಕೆಯನ್ನು ನೀಡಿಲ್ಲ. ನನ್ನ ನಿರ್ದಿಷ್ಟ ಹೇಳಿಕೆಯೇ ಬೇರೆ ಇದೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಯಾರ ಭಾವನೆಗಳನ್ನು ನೋಯಿಸಲು ನಾನು ಇಷ್ಟಪಡುವುದಿಲ್ಲ. ಆದರೆ ಇದೀಗ ನನ್ನ ಹೇಳಿಕೆಯಿಂದ ಜನರ ಭಾವನೆಗಳಿಗೆ ಧಕ್ಕೆ ಆಗಿದೆ ಎಂಬುದು ತಿಳಿದಿದೆ. ಹಾಗಾಗಿ ನನ್ನ ಈ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ. ನಟ ಸೌರಭ್ ರಾಜ್ ಜೈನ್ ಬಗ್ಗೆ ಮಾತನಾಡುತ್ತಿದ್ದ ವೇಳೆ ಅವರನ್ನು ಭಗವಾನ್ ಎಂದು ಉದಾಹರಣೆಯಾಗಿ ಬಳಸಿದ್ದೇನೆ. ಉದ್ದೇಶಪೂರ್ವಕವಾಗಿ ಈ ಹೇಳಿಕೆ ನೀಡಿಲ್ಲ ಎಂದು ನಟಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 15 ದಿನದ ಹಿಂದೆಯಷ್ಟೇ ಪತಿ ಜೊತೆಗೆ ಕಾಲೇಜಿಗೆ ತೆರಳಿ ಹಳೆ ಸ್ನೇಹಿತರನ್ನು ಮಾತಾಡಿಸಿದ್ದ ಸೌಂದರ್ಯ!

    ವೈರಲ್ ಆಗಿದ್ದೇನು..?
    ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣ ಖ್ಯಾತಿಯ ಸೌರಭ್ ರಾಜ್ ಜೈನ್ ಜೊತೆ ಫ್ಯಾಷನ್ ಸಂಬಂಧಿತ ವೆಬ್ ಸರಣಿಯಲ್ಲಿ ಶ್ವೇತಾ ತಿವಾರಿ ನಟಿಸಿದ್ದಾರೆ. ಈ ವೆಬ್ ಸೀರಿಸ್ ಪ್ರಮೋಷನ್ ಇತ್ತೀಚೆಗೆ ಭೋಪಾಲ್ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶ್ವೇತಾ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಶ್ವೇತಾ, ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಮಾತಿನ ಭರದಲ್ಲಿ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅನೇಕ ಬಳಕೆದಾರರು, ದೇವರ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಕ್ಕೆ ಕಿಡಿಕಾರಿದ್ದರು. ಇದನ್ನೂ ಓದಿ: ಅತ್ತಿಗೆಯಾಗಬೇಕಿದ್ದವಳ ಮೇಲೆ ಕಣ್ಣಾಕಿದ್ದ ಸಹೋದರನ ಕತ್ತು ಸೀಳಿದ ಅಣ್ಣ!

    ತನಿಖೆಗೆ ಸೂಚನೆ:
    ನಟಿಯ ಈ ಹೇಳಿಕೆಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಭೋಪಾಲ್ ಕಮಿಷನರ್ ಗೆ ತ ಈ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಶ್ವೇತಾ ತಿವಾರಿ ಅವರು ನೀಡಿರುವ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಅಲ್ಲದೆ ಅವರ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಬಗ್ಗೆ ತನಿಖೆ ನಡೆಸಿ ವರದಿಯನ್ನು ನನಗೆ ಸಲ್ಲಿಸುವಂತೆ ಭೋಪಾಲ್ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.

  • ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ತಿದ್ದಾರೆ- ಶ್ವೇತಾ ತಿವಾರಿ ವಿವಾದಾತ್ಮಕ ಹೇಳಿಕೆ

    ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ತಿದ್ದಾರೆ- ಶ್ವೇತಾ ತಿವಾರಿ ವಿವಾದಾತ್ಮಕ ಹೇಳಿಕೆ

    ಭೋಪಾಲ್: ಜನಪ್ರಿಯ ಕಿರುತೆರೆ ನಟಿ ಶ್ವೇತಾ ತಿವಾರಿ ಅವರು ಹೇಳಿಕೆಯೊಂದನ್ನು ನೀಡಿ ಇದೀಗ ವಿವಾದಕ್ಕೀಡಾಗಿದ್ದಾರೆ. ಈ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಭೋಪಾಲ್ ಕಮಿಷನರ್‍ಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ.

    ತಮ್ಮ ಮುಂಬರುವ ವೆಬ್ ಸೀರಿಸ್ ವೇಳೆ ನಟಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟಿಯ ಹೇಳಿಕೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಪರ ವಿರೋಧ ಕಾಮೆಂಟ್ ಗಳು ಬರುತ್ತಿವೆ.

    ಶ್ವೇತಾ ಹೇಳಿದ್ದೇನು..?
    ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣ ಖ್ಯಾತಿಯ ಸೌರಭ್ ರಾಜ್ ಜೈನ್ ಜೊತೆ ಫ್ಯಾಷನ್ ಸಂಬಂಧಿತ ವೆಬ್ ಸರಣಿಯಲ್ಲಿ ಶ್ವೇತಾ ತಿವಾರಿ ನಟಿಸಿದ್ದಾರೆ. ಈ ವೆಬ್ ಸೀರಿಸ್ ಪ್ರಮೋಷನ್ ಇತ್ತೀಚೆಗೆ ಭೋಪಾಲ್ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶ್ವೇತಾ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಶ್ವೇತಾ, ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಮಾತಿನ ಭರದಲ್ಲಿ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅನೇಕ ಬಳಕೆದಾರರು, ದೇವರ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಕ್ಕೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಗನ ವಿಚ್ಛೇದನಕ್ಕೆ ನಿಜವಾದ ಕಾರಣವನ್ನು ಬಹಿರಂಗ ಪಡಿಸಿದ ನಾಗಾರ್ಜುನ

    ತನಿಖೆಗೆ ಸೂಚನೆ:
    ನಟಿಯ ಈ ಹೇಳಿಕೆಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಭೋಪಾಲ್ ಕಮಿಷನರ್ ಗೆ ತ ಈ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಶ್ವೇತಾ ತಿವಾರಿ ಅವರು ನೀಡಿರುವ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಅಲ್ಲದೆ ಅವರ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಬಗ್ಗೆ ತನಿಖೆ ನಡೆಸಿ ವರದಿಯನ್ನು ನನಗೆ ಸಲ್ಲಿಸುವಂತೆ ಭೋಪಾಲ್ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ನಾಪತ್ತೆಯಾಗಿದ್ದ ಬಾಂಗ್ಲಾ ನಟಿ ಶವವಾಗಿ ಗೋಣಿಚೀಲದಲ್ಲಿ ಪತ್ತೆ

    ನಾಪತ್ತೆಯಾಗಿದ್ದ ಬಾಂಗ್ಲಾ ನಟಿ ಶವವಾಗಿ ಗೋಣಿಚೀಲದಲ್ಲಿ ಪತ್ತೆ

    ಢಾಕಾ: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಅವರು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

    ನಟಿ ರೈಮಾ ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಪ್ರಾರಂಭಿಸಿದ್ದರು. ಆದರೆ ಕೆರಣಿಗಂಜ್‍ನ ಹಜರತ್‍ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಆಕೆಯ ಶವ ಪತ್ತೆಯಾಗಿದೆ. ಇದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಕೆರಣಿಗಂಜ್ ಠಾಣೆಯ ಪೊಲೀಸರ ತಂಡ ಮೃತದೇಹವನ್ನು ಗೋಣಿಚೀಲದಿಂದ ಹೊರತೆಗೆದಿದೆ.

    ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ ಸಲೀಮುಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. ಇದನ್ನೂ ಓದಿ:  ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ

    45 ವರ್ಷದ ರೈಮಾ 1998ರಲ್ಲಿ ಬರ್ತಮನ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಅವರು ಸುಮಾರು 25 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಬಾಂಗ್ಲಾದೇಶ ಚಲನಚಿತ್ರ ಕಲಾವಿದರ ಸಂಘದ ಸಹಾಯಕ ಸದಸ್ಯರಾಗಿದ್ದರು. ಸಿನಿಮಾದ ಜೊತೆಗೆ ಅವರು ಕೆಲವು ಕಿರುತೆರೆ ಧಾರವಾಹಿಗಳನ್ನು ನಿರ್ಮಿಸಿದ್ದರು ಹಾಗೂ ನಟಿಸಿದ್ದರು. ಇದನ್ನೂ ಓದಿ:  ಕೊರೊನಾ ಇನ್ನು ಮುಗಿದಿಲ್ಲ, ಮುಗಿಯುವ ಹಂತದಲ್ಲಿಯೂ ಇಲ್ಲ: WHO ಮುಖ್ಯಸ್ಥ

     

  • ಕ್ಷಮೆ ಕೋರಿ ಎಲ್ಲರಿಗೂ ಧನ್ಯವಾದ ತಿಳಿಸಿದ ಶುಭಾ ಪೂಂಜಾ

    ಕ್ಷಮೆ ಕೋರಿ ಎಲ್ಲರಿಗೂ ಧನ್ಯವಾದ ತಿಳಿಸಿದ ಶುಭಾ ಪೂಂಜಾ

    ಬೆಂಗಳೂರು: ನಟಿ ಶುಭಾ ಪೂಂಜಾ ಅವರು ಈಗಾಗಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇದೀಗ ಅವರು ತಮ್ಮ ಗೆಳೆಯ- ಗೆಳತಿಯರು ಹಾಗೂ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ಅಲ್ಲದೆ ಮದುವೆಗೆ ವಿಶ್ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

     

    View this post on Instagram

     

    A post shared by shubha Poonja . (@shubhapoonja)

     

    ಈ ಸಂಬಂಧ ಇನ್‍ಸ್ಟಾಗ್ರಾಂನಲ್ಲಿ ತಮ್ಮ ಮದುವೆಯ ಫೋಟೋ ಶೇರ್ ಮಾಡಿಕೊಂಡು ನಟಿ ಬರೆದುಕೊಂಡಿದ್ದಾರೆ. ಶುಭ ಕೋರಿದ ಹಾಗೂ ಆಶೀರ್ವದಿಸಿದ ಎಲ್ಲರಿಗೂ ಧನ್ಯವಾದಗಳು. ಉಡುಪಿಯ ಶಿರ್ವದಲ್ಲಿರುವ ನನ್ನ ಅಜ್ಜಿ ಮನೆಯಲ್ಲಿಯೇ ಸರಳವಾಗಿ ಮದುವೆಯಾಗಬೇಕೆಂಬುದು ನನ್ನ ಕನಸಾಗಿತ್ತು. ಅದರಂತೆ ಅಜ್ಜಿ ಮನೆಯಲ್ಲಿಯೇ ಕೇವಲ ಬೆರಳೆಣಿಕೆಯಷ್ಟೇ ಮಂದಿಯ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದೇನೆ. ಇದನ್ನೂ ಓದಿ: ಯಶ್ ಹುಟ್ಟುಹಬ್ಬಕ್ಕೆ ರಜೆ ಕೋರಿ ಪ್ರಾಂಶುಪಾಲರಿಗೆ ಪತ್ರ ಬರೆದ ಅಭಿಮಾನಿ

    ನಾನು ಆಡಿ ಬೆಳೆದ ಮನೆಯಲ್ಲಿ ನಡೆದ ಈ ಶುಭ ಕಾರ್ಯದಲ್ಲಿ ಕೇವಲ 30 ಮಂದಿಗಷ್ಟೇ ಆಹ್ವಾನ ನೀಡಲಾಗಿತ್ತು. ಮದುವೆಗೆ ನಿಮಗೆ ಆಹ್ವಾನ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ನಾನು ನಿಮ್ಮೆಲ್ಲರ ಜೊತೆ ಕ್ಷಮೆ ಕೇಳುತ್ತೇನೆ. ಅಲ್ಲದೆ ಕೆಲವು ಅತ್ಯಂತ ಕ್ಲೋಸ್ ಇರುವವರಿಗೂ ಆಮಂತ್ರಣ ನೀಡಲು ಆಗಿಲ್ಲ. ಆದರೆ ನಿಮ್ಮೆಲ್ಲರ ಪ್ರೀತಿಗೆ ತುಂಬಾನೇ ಧನ್ಯವಾದಗಳು. ಹಾಗೆಯೇ ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಬರೆದುಕೊಂಡಿದ್ದಾರೆ.

     

    View this post on Instagram

     

    A post shared by shubha Poonja . (@shubhapoonja)

    ಶುಭಾ ಪೂಂಜಾ ಅವರು ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿಚಾರವನ್ನು ನಿನ್ನೆ ಸ್ವತಃ ನಟಿಯೇ ತಮ್ಮ ಇನ್ ಸ್ಟಾದಲ್ಲಿ ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಬಹಿರಂಗಪಡಿಸಿದ್ದಾರೆ. ಅಲ್ಲದೆ, ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟು ಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು ಎಂದು ಬರೆದುಕೊಂಡಿದ್ದರು.

  • ಲೈಂಗಿಕತೆ ವಿಚಾರದಲ್ಲಿ ಮಗಳಿಗೆ ಬುದ್ಧಿ ಹೇಳಿಕೊಡ್ಬೇಡಿ, ಮಗನಿಗೆ ಕಲಿಸಿಕೊಡಿ: ಸಮಂತಾ

    ಲೈಂಗಿಕತೆ ವಿಚಾರದಲ್ಲಿ ಮಗಳಿಗೆ ಬುದ್ಧಿ ಹೇಳಿಕೊಡ್ಬೇಡಿ, ಮಗನಿಗೆ ಕಲಿಸಿಕೊಡಿ: ಸಮಂತಾ

    ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಮಹಿಳೆಯ ಲೈಂಗಿಕತೆಯ ವಿಚಾರವಾಗಿ ಸೋಶಿಯಲ್ ಮೀಡಿಯಾದಲ್ಲಿ ಸ್ಟೇಟಸ್ ಹಾಕುವ ಮೂಲಕವಾಗಿ ಸುದ್ದಿಯಲ್ಲಿದ್ದಾರೆ.

    ಲೈಂಗಿಕತೆಯ ವಿಚಾರದಲ್ಲಿ ಮಗಳಿಗೆ ಬುದ್ಧಿ ಹೇಳುವ ಬದಲು ಮಹಿಳೆಯರನ್ನು ನಿಯಂತ್ರಿಸದಂತೆ ಮಗನಿಗೆ ಕಲಿಸಿಕೊಡಿ. ಏಕೆಂದರೆ ನಿಮ್ಮ ಮಗಳಿಗೆ ಲೈಂಗಿಕತೆಯ ಹಕ್ಕನ್ನು ನಿರಾಕರಿಸುವುದು, ಅವಳನ್ನು ವಸ್ತುವನ್ನಾಗಿಸುವ ಇನ್ನೊಂದು ಮಾರ್ಗವಾಗಿದೆ ಎಂದು ಇನ್‍ಸ್ಟಾಗ್ರಾಮ್ ಸ್ಟೋರಿಸ್‍ನಲ್ಲಿ ಸಮಂತಾ ತಿಳಿಸಿದ್ದಾರೆ.

    ಸಮಂತಾ  ಪುಷ್ಪ ಸಿನಿಮಾದಲ್ಲಿ ಊ..ಅಂಟಾವಾ..  ಐಟಂ  ಮಾದಕವಾಗಿ ಹೆಜ್ಜೆ ಹಾಕಿ ಸುದ್ದಿಯಾಗಿದ್ದರು. ಅವರ ಮಾದಕ ನೃತ್ಯವನ್ನು ಹಲವರು ಮೆಚ್ಚುಗೆ, ಆಕ್ಷೇಪ ವ್ಯಕ್ತಪಡಿಸಿದ್ದರು.  ಮೊದಲ ಬಾರಿಗೆ ಐಟಂ ಸಾಂಗ್‍ನಲ್ಲಿ ಕಾಣಿಸಿಕೊಂಡಿದ್ದ ಸಮಂತಾ  ಟ್ರೋಲ್‍ಗೆ ಒಳಗಾಗಿದ್ದರು.

    ಸಮಂತಾ ಅವರು ಇತ್ತೀಚೆಗೆ ನಟ ನಾಗಚೈತನ್ಯರಿಂದ ವಿಚ್ಛೇದನ ಪಡೆದಿದ್ದು, ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ವಿಭಿನ್ನ ಪಾತ್ರಗಳಲ್ಲಿ ಕಾಣಿಕೊಳ್ಳುವ ಮೂಲಕವಾಗಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ಕೆಲವು ವಿಚಾರಗಳ ಕುರಿತಾಗಿ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ವ್ಯಕ್ತಪಡಿಸುತ್ತಿರುತ್ತಾರೆ.

  • ತಲೆಕೂದಲು ತೆಗೆದ ಫೋಟೋ ಶೇರ್ ಮಾಡಿ ಶಾಕಿಂಗ್ ಸುದ್ದಿ ಕೊಟ್ಟ ಮೋಹಿನಿ ನಟಿ

    ತಲೆಕೂದಲು ತೆಗೆದ ಫೋಟೋ ಶೇರ್ ಮಾಡಿ ಶಾಕಿಂಗ್ ಸುದ್ದಿ ಕೊಟ್ಟ ಮೋಹಿನಿ ನಟಿ

    ಮುಂಬೈ: ನಟಿ ಹಂಸ ನಂದಿನಿ ಕೂದಲು ಇಲ್ಲದ ತಲೆಯ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ಮೂಲಕ ತಾವು ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಘೋಷಣೆ ಮಾಡುವ ಮೂಲಕವಾಗಿ ಅಭಿಮಾನಿಗಳಿ ಶಾಕಿಂಗ್ ಸುದ್ದಿಕೊಟ್ಟಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಜೀವನದಲ್ಲಿ ನಡೆಯುವ ಈ ಘಟನೆ ನನಗೆ ಅನ್ಯಾಯವೆಂದು ತೋರುತ್ತದೆಯಾದರೂ, ನಾನು ಬಲಿಪಶು ಆಗೋಕೆ ನಿರಾಕರಿಸುತ್ತೇನೆ. ನನಗೆ ನಾಲ್ಕು ತಿಂಗಳ ಹಿಂದೆ ಸ್ತನ ಕ್ಯಾನ್ಸರ್ ಪತ್ತೆ ಆಯಿತು. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ನಾನು ಅನೇಕ ಶಸ್ತ್ರಚಿಕಿತ್ಸೆಗಳಿಗೆ ಒಳಪಡಬೇಕಾಗುತ್ತದೆ. ಎಲ್ಲಾ ಅಪಾಯಗಳನ್ನು ತೊಡೆದುಹಾಕುವುದು ಅಸಾಧ್ಯ. ಈ ಕ್ಯಾನ್ಸರ್ ಎಂಬ ಅಪಾಯವು ನಾನು ಬದುಕಿರುವವರೆಗೂ ಇರುತ್ತದೆ. ನಾನು ಈಗಾಗಲೇ 9 ಬಾರಿ ಕೀಮೋಥೆರಪಿಗೆ ಒಳಗಾಗಿದ್ದೇನೆ. ಇನ್ನೂ 7 ಬಾರಿ ಈ ಥೆರಪಿಗೆ ಒಳಗಾಗಬೇಕು ಎಂದು ಹೇಳಿದ್ದಾರೆ.

    ಈಗ ಒಂದು ಸ್ತನಕ್ಕೆ ಮಾತ್ರ ಕ್ಯಾನ್ಸರ್ ಇದ್ದು, ಮತ್ತೊಂದು ಸ್ತನಕ್ಕೂ ಈ ಕ್ಯಾನ್ಸರ್ ಹಬ್ಬುವ ಸಾಧ್ಯತೆ ಶೇ. 70 ಇದೆಯಂತೆ ಎಂದು ಬರೆದುಕೊಂಡು ತಮ್ಮ ಆರೋಗ್ಯ ಸ್ಥಿತಿಯ ಕುರಿತಾಗಿ ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ಹಿಂದುತ್ವದಲ್ಲಿ ನಂಬಿಕೆ ಇದ್ದವರು ಭಾರತೀಯರ DNA ಒಂದೇ ಎಂದು ಭಾವಿಸುತ್ತಾರೆ: ರಾಹುಲ್

    2004ರಲ್ಲಿ ಹಂಸ ಅವರು ಚಿತ್ರರಂಗಕ್ಕೆ ಕಾಲಿಟ್ಟರು. 2006ರಲ್ಲಿ ತೆರೆಗೆ ಬಂದ ಕನ್ನಡದ ಮೋಹಿನಿ ಸಿನಿಮಾ ಮೂಲಕ ಅವರು ಸ್ಯಾಂಡಲ್‍ವುಡ್‍ಗೂ ಕಾಲಿಟ್ಟರು. ಪ್ರಭಾಸ್ ನಟನೆಯ ಮಿರ್ಚಿ ಚಿತ್ರದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದರೆ, ಸುದೀಪ್ ಅಭಿನಯದ ಈಗ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕವಾಗಿ ಅಭಿಮಾನಿಗಳನ್ನ ರಂಜಿಸಿದ್ದರು.

     

    View this post on Instagram

     

    A post shared by Hamsa Nandini (@ihamsanandini)

    ನಂತರ ಅವರು ಅನಾರೋಗ್ಯದ ಕಾರಣದಿಂದಾಗಿ ಸಿನಿಮಾ, ಸೋಶಿಯಲ್ ಮೀಡಿಯಾಗಳಿಂದ ದೂರವಾಗಿದ್ದ ನಟಿ ಹಂಸ ನಂದಿನಿ ಇದೀಗ ಕ್ಯಾನ್ಸರ್‌ಗೆ ತುತ್ತಾಗಿರುವ ವಿಚಾರವನ್ನು ಅಭಿಮಾನಿಗಳಿಗೆ ತಿಳಿಸುವ ಮೂಲಕ ಸೋಶಿಯಲ್ ಮೀಡಿಯಾಗೆ ವಾಪಸ್ಸಾಗಿದ್ದಾರೆ.

  • ಒಳ್ಳೆಯ ಅವಕಾಶ ಸಿಗುವ ಟೈಂನಲ್ಲೇ ಬ್ರೇಕ್ ಪಡೆದುಕೊಂಡ ಶ್ರೀಲೀಲಾ

    ಒಳ್ಳೆಯ ಅವಕಾಶ ಸಿಗುವ ಟೈಂನಲ್ಲೇ ಬ್ರೇಕ್ ಪಡೆದುಕೊಂಡ ಶ್ರೀಲೀಲಾ

    ಬೆಂಗಳೂರು: ನಟಿ ಶ್ರೀಲೀಲಾ ಬಹುಬೇಡಿಕೆಯ ನಟಿಯರ ಸಾಲಿನಲ್ಲಿ ಇವರು ಒಬ್ಬರಾಗಿದ್ದಾರೆ. ಕಾಲ್‍ಶೀಟ್ ಪಡೆಯಲು ನಿರ್ಮಾಪಕರು ಕಾದು ಕುಳಿತುಕೊಳ್ಳುವ ಮಟ್ಟಿಗೆ ಶ್ರೀಲೀಲಾ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ಆದರೆ ಇದೀಗ ಇವರು ಸಿನಿಮಾದಿಂದ ಬ್ರೇಕ್ ಪಡೆದುಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

    ಸಾಕಷ್ಟು ಸಿನಿಮಾ ಆಫರ್ ಶ್ರೀಲೀಲಾಳನ್ನು ಹುಡುಕಿ ಬರುತ್ತಿದೆ. ಒಳ್ಳೆಯ ಅವಕಾಶಗಳು ಸಿಗುವ ಸಮಯದಲ್ಲಿ ಶ್ರೀಲೀಲಾ ಯಾಕೆ ಬ್ರೇಕ್ ಪಡೆದುಕೊಳ್ಳುತ್ತಿದ್ದಾರೆ ಎನ್ನುವ ಪ್ರಶ್ನೆಯನ್ನು ಅಭಿಮಾನಿಗಳು ಕೇಳುತ್ತಿದ್ದಾರೆ. ಸಿನಿಮಾ ಅವಕಾಶಗಳ ಮಧ್ಯೆ ತಮ್ಮ ಶಿಕ್ಷಣದ ಬಗ್ಗೆಯೂ ಗಮನ ಹರಿಸುತ್ತಿದ್ದಾರೆ. ಈ ಕಾರಣಕ್ಕೆ ಶ್ರೀಲೀಲಾ ಸಿನಿಮಾ ಕೆಲಸ ತೊರೆದು ಶಿಕ್ಷಣದತ್ತ ಗಮನ ಹರಿಸೋಕೆ ಮುಂದಾಗಿದ್ದಾರೆ. ಶ್ರೀಲೀಲಾ ಎಂಬಿಬಿಎಸ್ ಪರೀಕ್ಷೆ ಬರೆಯೋಕೆ ಸಿದ್ಧರಾಗುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರು ಸಿನಿಮಾದಿಂದ ಕೊಂಚ ಬ್ರೇಕ್ ಪಡೆದುಕೊಳ್ಳುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಹಲವು ಆಫರ್‍ಗಳು ಬರುತ್ತಿರುವ ಮಧ್ಯೆಯೂ ಶ್ರೀಲೀಲಾ ಎಂಬಿಬಿಎಸ್ ಅಂತಿಮ ವರ್ಷದ ಪರೀಕ್ಷೆಗೆ ಸಿದ್ಧರಾಗುತ್ತಿದ್ದಾರೆ. ಇದಕ್ಕಾಗಿ ಅವರು ಮುಂಬೈಗೆ ತೆರಳಿದ್ದಾರೆ. ಈ ಕಾರಣಕ್ಕೆ ಶೂಟಿಂಗ್ ಕೆಲಸಕ್ಕೆ ಬ್ರೇಕ್ ನೀಡಿದ್ದಾರೆ. ಹೊಸ ಸಿನಿಮಾಗಳನ್ನು ಶಿಕ್ಷಣ ಪೂರ್ಣಗೊಂಡ ನಂತರವೇ ಒಪ್ಪಿಕೊಳ್ಳಬೇಕು ಎನ್ನುವ ನಿರ್ಧಾರ ಅವರದ್ದಾಗಿದೆ. ಇದನ್ನೂ ಓದಿ:  ಕರ್ನಾಟಕ ರತ್ನ ಅಪ್ಪು ಅಗಲಿ ನಾಳೆಗೆ 1 ತಿಂಗಳು- ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

    ಕಿಸ್ ಸಿನಿಮಾದ ಮೂಲಕವಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಶ್ರೀಲೀಲಾ ಇದೀಗ ಟಾಲಿವುಡ್‍ನಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಇದೀಗ ಅವರು ಕೊಂಚ ಬ್ರೇಕ್ ಪಡೆದುಕೊಳ್ಳುತ್ತಿರುವುದು ಅವರ ವಿದ್ಯಾಭ್ಯಾಸಕ್ಕಾಗಿ ಆಗಿದೆ. ಇದನ್ನೂ ಓದಿ: ಕಟೀಲ್ ಅಸಂಬದ್ಧ ಹೇಳಿಕೆ ನೀಡ್ತಾನೆ: ಏಕವಚನದಲ್ಲಿ ಸತೀಶ್ ಜಾರಕಿಹೊಳಿ ವಾಗ್ದಾಳಿ

  • ನಟಿಯರು, ಮಹಿಳಾ ಜರ್ನಲಿಸ್ಟ್‌ಗಳಿಗೆ ಹೊಸ ಧಾರ್ಮಿಕ ಮಾರ್ಗಸೂಚಿ ಹೊರಡಿಸಿದ ತಾಲಿಬಾನ್‌

    ನಟಿಯರು, ಮಹಿಳಾ ಜರ್ನಲಿಸ್ಟ್‌ಗಳಿಗೆ ಹೊಸ ಧಾರ್ಮಿಕ ಮಾರ್ಗಸೂಚಿ ಹೊರಡಿಸಿದ ತಾಲಿಬಾನ್‌

    ಕಾಬೂಲ್‌: ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಆಡಳಿತವು ಧಾರ್ಮಿಕ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಟಿವಿ ವಾಹಿನಿಗಳು ನಟಿಯರಿರುವ ನಾಟಕಗಳು ಹಾಗೂ ಮಹಿಳೆಯರು ಬಳಸುವ ಸೋಪುಗಳಿಗೆ ಸಂಬಂಧಿಸಿದ ಜಾಹೀರಾತುಗಳನ್ನು ತೋರಿಸುವುದಕ್ಕೆ ನಿರ್ಬಂಧ ವಿಧಿಸಿದೆ.

    ಟಿವಿ ವಾಹಿನಿಗಳ ಮಹಿಳಾ ಪತ್ರಕರ್ತರು ಇಸ್ಲಾಮಿಕ್‌ ಹಜೀಬ್‌ಗಳನ್ನು ಧರಿಸಿ ಸುದ್ದಿಗಳನ್ನು ಓದಬೇಕು. ಅಲ್ಲದೇ ವಾಹಿನಿಗಳ ಪ್ರವಾದಿ ಮೊಹಮ್ಮದ್‌ ಅಥವಾ ಇತರ ಪೂಜ್ಯ ವ್ಯಕ್ತಿಗಳನ್ನು ತೋರಿಸುವ ಚಲನಚಿತ್ರಗಳು, ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಎಂದು ತಾಲಿಬಾನ್‌ ಸಚಿವಾಲಯವು ಸೂಚಿಸಿದೆ. ಇದನ್ನೂ ಓದಿ: ಚಹರ್ ಸಿಕ್ಸ್‌ಗೆ ಸೆಲ್ಯೂಟ್ ಹೊಡೆದ ರೋಹಿತ್

    ಇಸ್ಲಾಮಿಕ್‌ ಹಾಗೂ ಅಫ್ಘಾನ್‌ ಮೌಲ್ಯಗಳನ್ನು ಉಲ್ಲಂಘಿಸುವ ಯಾವುದೇ ಸಿನಿಮಾ ಅಥವಾ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಖಡಕ್‌ ಸೂಚನೆ ನೀಡಲಾಗಿದೆ. ಇವು ನಿಯಮಗಳಲ್ಲ. ಆದರೆ ಧಾರ್ಮಿಕ ಮಾರ್ಗಸೂಚಿಗಳು ಎಂದು ಸಚಿವಾಲಯದ ವಕ್ತಾರ ಹಕಿಫ್‌ ಮೊಹಜಿರ್‌ ತಿಳಿಸಿದ್ದಾರೆ. ಇದನ್ನೂ ಓದಿ: ಲಿಂಗ ತಾರತಮ್ಯಕ್ಕೆ ಬ್ರೇಕ್‌ – ಕೇರಳ ಶಾಲೆಯಲ್ಲಿ ಒಂದೇ ವಿನ್ಯಾಸದ ಸಮವಸ್ತ್ರ

    ಅಮೆರಿಕವು ತನ್ನ ಸೈನ್ಯವನ್ನು ಅಫ್ಘಾನಿಸ್ತಾನದಿಂದ ವಾಪಸ್‌ ಕರೆಸಿಕೊಂಡ ನಂತರ ಇಡೀ ದೇಶವನ್ನು ತಾಲಿಬಾನಿಗಳು ನಿಯಂತ್ರಣಕ್ಕೆ ತೆಗೆದುಕೊಂಡರು. ನಂತರ ಇಸ್ಲಾಮಿಕ್‌ ಸಾಂಪ್ರದಾಯಿಕ ನಿಯಮಗಳನ್ನು ಜನರ ಮೇಲೆ ಹೇರಲಾಗುತ್ತಿದೆ. ಮಹಿಳೆಯರಿಗಿದ್ದ ಎಲ್ಲಾ ಬಗೆಯ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ.

  • ರಚಿತಾ ರಾಮ್ ಫಸ್ಟ್ ನೈಟ್ ಹೇಳಿಕೆಗೆ ಆಕ್ಷೇಪ: ಕ್ಷಮೆ ಕೇಳಲು ಆಗ್ರಹ

    ರಚಿತಾ ರಾಮ್ ಫಸ್ಟ್ ನೈಟ್ ಹೇಳಿಕೆಗೆ ಆಕ್ಷೇಪ: ಕ್ಷಮೆ ಕೇಳಲು ಆಗ್ರಹ

    ಚಾಮರಾಜನಗರ: ಹಲವು ಕಲಾವಿದರು ಐತಿಹಾಸಿಕ, ಪೌರಾಣಿಕ, ಸಾಮಾಜಿಕ ಚಿತ್ರಗಳಲ್ಲಿ ನಟಿಸಿ ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿಯ ಪ್ರತೀಕವಾಗಿ ಅಭಿನಯಿಸಿದ್ದಾರೆ. ಆದರೆ, ಕನ್ನಡ ಚಿತ್ರರಂಗದ ಇತಿಹಾಸವನ್ನೇ ಅರಿಯದೆ ನಿನ್ನೆ, ಮೊನ್ನೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಅಸಭ್ಯವಾಗಿ ಮಾತನಾಡಿ ಚಿತ್ರರಂಗದ ಇತಿಹಾಸಕ್ಕೆ ಧಕ್ಕೆ ಉಂಟು ಮಾಡಿದ್ದಾರೆ. ಈ ಬಗ್ಗೆ ಕ್ಷಮೆಯಾಚಿಸಬೇಕೆಂದು ಕನ್ನಡ ಕ್ರಾಂತಿದಳ ಆಗ್ರಹಿಸಿದೆ.

    ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಅವರು ಫಸ್ಟ್ ನೈಟ್ ಹೇಳಿಕೆಗೆ ಬಹಿರಂಗ ಕ್ಷಮೆ ಕೇಳಬೇಕು ಎಂದು ಕನ್ನಡ ಕ್ರಾಂತಿದಳ ಆಗ್ರಹಿಸಿದೆ. ರಚಿತಾ ರಾಮ್ ಅವರು ಇತ್ತೀಚಿಗೆ ನಡೆದ ಲವ್ ಯೂ ರಚ್ಚು ಚಿತ್ರದ ಸುದ್ದಿಗೋಷ್ಠಿಯಲ್ಲಿ ಸಿಬಿಮಾದ ಹಾಡೊಂದರಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದ ಬಗ್ಗೆ ಪ್ರಶ್ನೆ ಕೇಳಿದಾಗ ರಚಿತಾ ರಾಮ್, ಫಸ್ಟ್ ನೈಟ್ ಬಗ್ಗೆ ಪ್ರಶ್ನೆ ಎತ್ತಿದರು. ಆಮೇಲೆ ಉತ್ತರವನ್ನೂ ಅವರೇ ನೀಡಿದರು ಫಸ್ಟ್ ನೈಟ್ ನಲ್ಲಿ ರೊಮ್ಯಾನ್ಸ್ ಮಾಡ್ತಾರೆ, ಫಸ್ಟ್ ನೈಟ್ ಕಾನ್ಸೆಪ್ಟ್ ನಲ್ಲಿರುವ ಈ ಹಾಡಿನಲ್ಲೂ ನಾನು ಲೈಟಾಗಿ ರೊಮ್ಯಾನ್ಸ್ ಮಾಡೋ ದೃಶ್ಯದಲ್ಲಿ ಕಾಣಿಸಿಕೊಂಡಿದ್ದೆ ಎಂದಿದ್ದರು. ಇದನ್ನೂ ಓದಿ: ಶಾಂಪೇನ್ ಅಲ್ಲ ಅದು ನಾನ್ ಅಲ್ಕೋಹಾಲಿಕ್ ಬಾಟಲ್: ರಕ್ಷಿತಾ

    ಕನ್ನಡ ನಾಡಿನ ಸಂಸ್ಕೃತಿಗೆ ಧಕ್ಕೆಯಾಗುವ ರೀತಿ ನೀಡಿರುವ ಹೇಳಿಕೆಗೆ ಕನ್ನಡ ಕ್ರಾಂತಿದಳ ಮತ್ತು ರಾಜ್ಯಾದ್ಯಂತ ಇರುವ ಸಂಘಟನೆಗಳು ತೀವ್ರವಾಗಿ ಖಂಡಿಸುತ್ತವೆ ಎಂದು ಕನ್ನಡ ಕ್ರಾಂತಿದಳ ಗುಡುಗಿದೆ. ಕನ್ನಡ ಚಿತ್ರರಂಗಕ್ಕೆ ತನ್ನದೇ ಆದ ಪರಂಪರೆಯಿದೆ. ಡಾ.ರಾಜ್‍ಕುಮಾರ್ ಹಾಕಿಕೊಟ್ಟಿರುವ ಭವ್ಯ ಬುನಾದಿಯನ್ನು ಈವರೆಗೂ ಮುಂದುವರೆಸಿಕೊಂಡು ಬರಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಹಿರಿಯರಾದ ಕಲ್ಪನಾ, ಜಯಂತಿ, ಭಾರತಿ, ಆರತಿ, ಲೀಲಾವತಿ, ಮಾಲಾಶ್ರೀ, ಶೃತಿ, ತಾರಾ ಸೇರಿದಂತೆ ಇನ್ನು ಅನೇಕ ನಟಿಯರು ಗೌರಯುತವಾಗಿ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಐತಿಹಾಸಿಕ, ಪೌರಾಣಿಕ, ಸಾಮಾಜಿಕ ಚಿತ್ರಗಳಲ್ಲಿ ನಟಿಸಿ ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿಯ ಪ್ರತೀಕವಾಗಿ ಅಭಿನಯಿಸಿದ್ದಾರೆ. ಆದರೆ, ಕನ್ನಡ ಚಿತ್ರರಂಗದ ಇತಿಹಾಸವನ್ನೇ ಅರಿಯದೆ ನಿನ್ನೆ, ಮೊನ್ನೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಚಿತಾ ರಾಮ್ ಅಸಭ್ಯವಾಗಿ ಮಾತನಾಡಿ ಚಿತ್ರರಂಗದ ಇತಿಹಾಸಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಏಕ್ ಲವ್ ಯಾ ಸಿನಿಮಾ ತಂಡದಿಂದ ಅಪ್ಪುಗೆ ಅವಮಾನ- ಶಾಂಪೇನ್ ಚಿಮ್ಮಿಸಿ ಸಂಭ್ರಮ

  • ಚಿಕ್ಕವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ಬಗ್ಗೆ ರಶ್ಮಿಕಾ ಉತ್ತರ ಏನು ಗೊತ್ತಾ?

    ಚಿಕ್ಕವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ಬಗ್ಗೆ ರಶ್ಮಿಕಾ ಉತ್ತರ ಏನು ಗೊತ್ತಾ?

    ಬೆಂಗಳೂರು: ಚಿಕ್ಕವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ವಿಚಾರವಾಗಿ ನಟಿ ರಶ್ಮಿಕಾ ಮಂದಣ್ಣ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

    ವೈಯಕ್ತಿಕ ವಿಚಾರವಾಗಿ ಆಗಾಗ ಸುದ್ದಿಯಲ್ಲಿ ಇರುವ ರಶ್ಮಿಕಾ ಯಾರನ್ನಾದರೂ ಲವ್ ಮಾಡುತ್ತಿದ್ದಾರಾ? ಈ ಪ್ರಶ್ನೆ ಅಭಿಮಾನಿಗಳ ತಲೆಯಲ್ಲಿ ಕೊರೆಯುತ್ತಿದೆ. ಕೆಲವು ಸಂದರ್ಶನಗಳಲ್ಲೂ ಅವರಿಗೆ ರಿಲೇಷನ್‍ಶಿಪ್ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಇತ್ತೀಚೆಗೆ ಡೇಟಿಂಗ್ ಕುರಿತ ಪ್ರಶ್ನೆಗೆ ರಶ್ಮಿಕಾ ಉತ್ತರಿಸಿದ್ದಾರೆ.

    ರಶ್ಮಿಕಾ ಮಂದಣ್ಣ ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ಬಗ್ಗೆ ಅವರ ಅಭಿಪ್ರಾಯ ಏನು ಎಂದು ಪ್ರಶ್ನಿಸಲಾಯಿತು. ಅದಕ್ಕೆ ಬುದ್ಧಿವಂತಿಕೆಯಿಂದ ಅವರು ಉತ್ತರ ನೀಡಿದ್ದಾರೆ. ವಯಸ್ಸು ಮುಖ್ಯವಾಗುವುದಿಲ್ಲ. ವ್ಯಕ್ತಿ ಮುಖ್ಯವಾಗುತ್ತಾರೆ ಎಂದು ರಶ್ಮಿಕಾ ಹೇಳಿದ್ದಾರೆ. ಈ ಜಾಣತನದ ಉತ್ತರಕ್ಕೆ ಅವರ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.  ಇದನ್ನೂ ಓದಿ:    ಲಸಿಕೆ ಹಾಕಿಸಿಕೊಂಡರೆ ವಾಷಿಂಗ್ ಮಶಿನ್, ಫ್ರಿಡ್ಜ್, ಟಿವಿ ಬಹುಮಾನ


    ರಶ್ಮಿಕಾ ಮಂದಣ್ಣ ಈಗ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಸ್ಟಾರ್ ನಟರ ಸಿನಿಮಾಗಳಿಗೆ ಅವರೇ ನಾಯಕಿ ಆಗಬೇಕು ಎನ್ನುವ ಬೇಡಿಕೆ ದಿನದಿಂದದಿನಕ್ಕೆ ಹೆಚ್ಚಾಗುತ್ತಿದೆ. ತೆಲುಗು, ತಮಿಳು ಮಾತ್ರವಲ್ಲದೇ ಹಿಂದಿಯಲ್ಲೂ ಅವರ ಹವಾ ಹೆಚ್ಚಿದೆ. ಅಮಿತಾಭ್ ಬಚ್ಚನ್, ಸಿದ್ದಾರ್ಥ್ ಮಲ್ಹೋತ್ರಾ ಸೇರಿದಂತೆ ಸ್ಟಾರ್ ಕಲಾವಿದರ ಜೊತೆ ತೆರೆಹಂಚಿಕೊಳ್ಳುವ ಚಾನ್ಸ್ ರಶ್ಮಿಕಾ ಮಂದಣ್ಣಗೆ ಸಿಕ್ಕಿದೆ.  ಇದನ್ನೂ ಓದಿ:  ಲಸಿಕೆ ಪಡೆಯದಿದ್ದರೆ ರೇಷನ್, ಗ್ಯಾಸ್‌, ಪೆಟ್ರೋಲ್‌ ಇಲ್ಲ