Tag: actress

  • ಸಹಾಯ ಬೇಕು, ಭಿಕ್ಷೆ ಅಂತ ಆದರೂ ಹೇಳಿ ಪರವಾಗಿಲ್ಲ: ನಟಿ ವಿಜಯಲಕ್ಷ್ಮಿ

    ಸಹಾಯ ಬೇಕು, ಭಿಕ್ಷೆ ಅಂತ ಆದರೂ ಹೇಳಿ ಪರವಾಗಿಲ್ಲ: ನಟಿ ವಿಜಯಲಕ್ಷ್ಮಿ

    -ನಾನು ಇನ್ನು ಮುಂದೆ ತಮಿಳುನಾಡಿಗೆ ಹೋಗಲ್ಲ

    ಬೆಂಗಳೂರು: ವಯೋಸಹಜವಾದ ಕಾಯಿಲೆಯಿಂದ ಇಂದು ತಾಯಿಯನ್ನು ಕಳೆದುಕೊಂಡಿರುವ ನಟಿ ವಿಜಯಲಕ್ಷ್ಮಿ ಅವರು ಎಲ್ಲರ ಸಹಾಯ ಬೇಕು, ಭಿಕ್ಷೆ ಅಂತ ಆದರೂ ಹೇಳಿ ಪರವಾಗಿಲ್ಲ ಎಂದು ತಮ್ಮ ದುಃಖವನ್ನು ತೊಡಿಕೊಂಡಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚೆನ್ನೈಯಲ್ಲಿ ಸಮಸ್ಯೆ ಆಗಿ ತಾಯಿ, ಅಕ್ಕನನ್ನು ಕರೆದುಕೊಂಡು ಬೆಂಗಳೂರಿಗೆ ಬಂದಿದ್ದೇನೆ. ಅಕ್ಕ, ತಾಯಿ ನನ್ನ ಮಕ್ಕಳ ಸಮವಾಗಿದ್ದಾರೆ. ಬೆಳಗ್ಗೆ 12 ಗಂಟೆಗೆ ಅಮ್ಮನಿಗೆ ನೋಡಿ ಆಘಾತ ಆಯಿತು. ಕೂಡಲೇ ಹೋಟೆಲ್ ಅವರನ್ನು ಕರೆದು ನೋಡಿದಾಗ ಅವರು ಇನ್ನಿಲ್ಲ ಅಂತ ತಿಳಿಯಿತು. ಕೂಡಲೇ ಬಾ. ಮಾ ಹರೀಶ್ ಅವರಿಗೆ ತಿಳಿಸಿದೆ, ಅವರು ಬಂದು ಸಹಾಯ ಮಾಡುತ್ತಿದ್ದಾರೆ. ಇದನ್ನೂ ಓದಿ:  ನಟಿ ವಿಜಯಲಕ್ಷ್ಮಿ ತಾಯಿ ನಿಧನ

    ಸಾಕಷ್ಟು ಹೊಡೆತ ತಿಂದಿದ್ದೇನೆ, ನೀವೆಲ್ಲ ಜೊತೆಗೆ ಇದ್ದೀರಾ. ಅನಾಥ ಆಶ್ರಮಕ್ಕೆ ಕರೆದುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸುತ್ತೇವೆ. ನನ್ನ ಅಕ್ಕ ಉಷಾ ಅವರಿಗೆ ಚಿಕಿತ್ಸೆ ಕೊಡಬೇಕು. ನನ್ನ ಅಕ್ಕನಿಗೆ ಸಾಕಷ್ಟು ಸಮಸ್ಯೆ ಎದುರಾಗಿತ್ತು. ನಾನು ಮಾತನಾಡೋದು ಒರಟು ಅನ್ನಿಸಬಹುದು. ಅಕ್ಕನಿಗೆ ಎಲ್ಲಾ ರೀತಿಯ ಸೇವೆ ನಾನು ಮಾಡುತ್ತಿದ್ದೇನೆ ಎಂದು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:  ಭಾರತ್ ಬಂದ್ ಮಾಡಿದ್ದು ರೈತರಲ್ಲ, ಮಧ್ಯವರ್ತಿಗಳು: ನಾರಾಯಣಗೌಡ

    ಅಮ್ಮ ಬಿಟ್ಟು ಹೋದ ಮೇಲೆ ನಾನು ಬದಲಾಗುತ್ತೇನೆ. ನಾನು ಇನ್ನು ಮುಂದೆ ತಮಿಳುನಾಡಿಗೆ ಹೋಗಲ್ಲ. ಇಲ್ಲೇ ಇರುತ್ತೇನೆ ಇಲ್ಲೇ ಜೀವನ ಸಾಗಿಸುತ್ತೇನೆ. ಅಕ್ಕನಿಗೆ ಸಮಸ್ಯೆ ಆದ ಮೇಲೆ ಅಮ್ಮ ಮಾನಸಿಕವಾಗಿ ನೊಂದಿದ್ದರು. ನೀವೆಲ್ಲಾ ಇದ್ದೀರ, ನಾನು ಧೈರ್ಯವಾಗಿ ಇರುತ್ತೇನೆ ಎಂದು ಹೇಳುತ್ತಾ ತಾಯಿ ಅಗಲಿರುವ ನೋವನ್ನು ಹೇಳಿಕೊಂಡಿದ್ದಾರೆ.

  • ನಟಿ ವಿಜಯಲಕ್ಷ್ಮಿ ತಾಯಿ ನಿಧನ

    ನಟಿ ವಿಜಯಲಕ್ಷ್ಮಿ ತಾಯಿ ನಿಧನ

    ಬೆಂಗಳೂರು: ನಾಗಮಂಡಲ ಸಿನಿಮಾ ಖ್ಯಾತಿಯ ವಿಜಯಲಕ್ಷ್ಮಿ ಅವರ ತಾಯಿ ವಿಜಯಾ ಸುಂದರಂ (75) ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.

    ಗಾಂಧಿನಗರದ ಸಂತೃಪ್ತಿ ಹೊಟೇಲ್‍ನಲ್ಲಿ ವಿಜಯಲಕ್ಷ್ಮಿ ಕುಟುಂಬ ವಾಸವಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಜಯಲಕ್ಷ್ಮಿ ತಾಯಿ ಸಂಜೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ರೇಷ್ಮೆ ಬೆಳೆಗಾರರಿಗೆ ವಿಶಿಷ್ಟ ಗುರುತಿನ ಚೀಟಿ: ನಾರಾಯಣಗೌಡ

    ಬೆಂಗಳೂರಿನ ಗಾಂಧಿನಗರದಲಿರೋ ಸಂತೃಪ್ತಿ ರೆಸಿಡೆನ್ಸಿಯಲ್ಲಿ ವಿಜಯಲಕ್ಷ್ಮಿ ತಾಯಿ ಹಾಗು ಅಕ್ಕ ಉಷಾ ಕಳೆದ ಮೂರು ದಿನಗಳಿಂದ ಅಲ್ಲಿಯೇ ತಂಗಿದ್ದರು. ಇಂದು ಚೆನ್ನೈಗೆ ಹೋಗಲು ವಿಜಯಲಕ್ಷ್ಮಿ ಕುಟುಂಬ ಸಿದ್ಧವಾಗಿತ್ತು. ಇಂದು ಬೆಳಗ್ಗೆ ವಿಜಯಲಕ್ಷ್ಮಿ ಅವರ ತಾಯಿ ದಿಢೀರ್ ನಿಧನದಿಂದ ವಿಜಯಲಕ್ಷ್ಮಿ ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ:  ಸಿ.ಎಂಗೆ ಉಡುಗೊರೆ ನೀಡಿದ್ದ ಬೆಳ್ಳಿ ಗದೆಯನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಿದ ಬಿ.ಸಿ.ಪಾಟೀಲ್

    ಸಾಕಷ್ಟು ಸಮಸ್ಯೆಯಿಂದ ನೊಂದಿದ್ದ ನಟಿ ವಿಜಯಲಕ್ಷ್ಮಿ ಅವರ ಅಕ್ಕ ಉಷಾ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಕ್ಕನಿಗೆ ಚಿಕಿತ್ಸೆ ಕೊಡಿಸಲೂ ಆಗದೇ ಅಸಹಾಯಕರಾಗಿದ್ದಾರೆ. ತಾಯಿ ಅಂತ್ಯಕ್ರಿಯೆಗಾಗಿ ಕಷ್ಟದಲ್ಲಿರೋ ವಿಜಯಲಕ್ಷ್ಮಿ ಸಹಾಯಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಕಾರ್ಯದರ್ಶಿ ಬಾ. ಮಾ ಹರೀಶ್ ಬಂದಿದ್ದಾರೆ. ಸಂತೃಪ್ತಿ ಹೋಟೆಲ್ ಗೆ ಬಂದು ವಿಜಯಲಕ್ಷ್ಮಿಗೆ ಸಾಂತ್ವನವನ್ನು ಹೇಳಿದ್ದಾರೆ.

  • 2 ಕೋಟಿ ಬೆಲೆ ಬಾಳುವ ಕಾರು ಖರೀದಿಸಿದ ಗೂಳಿ ನಟಿ

    2 ಕೋಟಿ ಬೆಲೆ ಬಾಳುವ ಕಾರು ಖರೀದಿಸಿದ ಗೂಳಿ ನಟಿ

    ಬೆಂಗಳೂರು: ಗೂಳಿ ಸಿನಿಮಾ ನಟಿ ಮಮತಾ ಮೋಹನದಾಸ್ ಎರಡು ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿ ಮಾಡುವ ಮೂಲಕವಾಗಿ ಸುದ್ದಿಯಲ್ಲಿದ್ದಾರೆ.

    ಕನಸು ಇಂದು ನನಸಾಗಿದೆ. ನಾನು ಇದಕ್ಕಾಗಿ ದಶಕದಿಂದ ಕಾಯುತ್ತಿದೆ. ನನ್ನ ಕುಟುಂಬದ ಹೊಸ ಮಗುವನ್ನು ಪರಿಚಯಿಸಲು ಖುಷಿಯಾಗುತ್ತಿದೆ. ಪೋರ್ಷಾ 911 ಕ್ಯಾರೆರಾ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಇದನ್ನೂ ಓದಿ:  ಸ್ನಾನ ಮಾಡಲ್ಲವೆಂದು ಪತಿ ತಲಾಖ್ ನೀಡಿದ್ದಕ್ಕೆ ಠಾಣೆ ಮೆಟ್ಟಿಲೇರಿದ ಪತ್ನಿ!

    ಈ ಕಾರಿನ ಬೆಲೆ 1.80 ಕೋಟಿ ರೂಪಾಯಿ ಇದೆ. ಟ್ಯಾಕ್ಸ್ ಮೊತ್ತ ಸೇರಿದರೆ ಎರಡು ಕೋಟಿ ರೂಪಾಯಿ ದಾಟಲಿದೆ. ಇಷ್ಟೋಂದು ಬೆಲೆ ಬಾಳುವ ಕಾರಿನ ಒಡತಿಯಾಗುವ ಮೂಲಕವಾಗಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗುತ್ತಿದ್ದಾರೆ.

    mamta

    ಮಮತಾ 2005ರಲ್ಲಿ ಚಿತ್ರರಂಗಕ್ಕೆ ಬಂದರು. ಮಯೂಖಮ್ ಅವರ ಮೊದಲ ಸಿನಿಮಾ. ಮಲಯಾಳಂನಲ್ಲಿ ಸಾಕಷ್ಟು ಚಿತ್ರ ಮಾಡಿದ ನಂತರ ಮಮತಾ ತಮಿಳು ಹಾಗೂ ತೆಲುಗು ಚಿತ್ರರಂಗಕ್ಕೂ ಕಾಲಿಟ್ಟರು. 2008ರಲ್ಲಿ ತೆರೆಗೆ ಬಂದ ಸುದೀಪ್ ನಟನೆಯ ಗೂಳಿ ಚಿತ್ರದಲ್ಲೂ ನಾಯಕಿಯಾಗಿ ಕಾಣಿಸಿಕೊಂಡರು ಮಮತಾ. ಈ ಚಿತ್ರವೇ ಮೊದಲು ಮತ್ತು ಕೊನೆ. ನಂತರ ಅವರು ಕನ್ನಡಕ್ಕೆ ಮರಳಲೇ ಇಲ್ಲ. ಮಮತಾ ವಿದ್ಯಾಭ್ಯಾಸ ಮಾಡಿದ್ದು ಬೆಂಗಳೂರಿನಲ್ಲಿ. ಮಮತಾಗೆ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಅವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 2014ರಿಂದ ಅಮೆರಿಕದ ಲಾಸ್ ಏಂಜಲೀಸ್‍ನಲ್ಲೇ ಅವರು ವಾಸವಾಗಿದ್ದಾರೆ. ಇದೀಗ ಬೆಲೆ ಬಾಳುವ ಹೊಸ ಕಾರನ್ನು ಖರೀದಿ ಮಾಡಿದ್ದಾರೆ.

    mamta

    ಮಮತಾ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಹಿಂದಿಯಲ್ಲಿ ತೆರೆಗೆ ಬಂದ ಅಂಧಾಧೂನ್ ಸಿನಿಮಾ ಇತ್ತೀಚೆಗೆ ತೆಲುಗಿಗೆ ರಿಮೇಕ್ ಆಗಿ ಮೆಚ್ಚುಗೆ ಪಡೆದುಕೊಂಡಿತ್ತು. ಈ ಸಿನಿಮಾ ಈಗ ಮಲಯಾಳಂನಲ್ಲೂ ತೆರೆಗೆ ಬರುತ್ತಿದೆ. ಹಿಂದಿಯಲ್ಲಿ ಟಬು ಮಾಡಿದ ಪಾತ್ರವನ್ನು ಮಮತಾ ಮಲಯಾಳಂನಲ್ಲಿ ನಿರ್ವಹಿಸುತ್ತಿದ್ದಾರೆ.

  • ಆಶ್ರಯ ನೀಡಿದ ಅಭಿಮಾನಿಯೊಂದಿಗೆ ಕಿರಿಕ್- ಮನೆ ಬಿಟ್ಟು ಬಂದ ನಟಿ ವಿಜಯಲಕ್ಷ್ಮಿ

    ಆಶ್ರಯ ನೀಡಿದ ಅಭಿಮಾನಿಯೊಂದಿಗೆ ಕಿರಿಕ್- ಮನೆ ಬಿಟ್ಟು ಬಂದ ನಟಿ ವಿಜಯಲಕ್ಷ್ಮಿ

    ಕಾರವಾರ: ಆಶ್ರಯ ನೀಡಿದ್ದ ಅಭಿಮಾನಿಯೊಡನೆ ಕಿರಿಕ್ ಮಾಡಿಕೊಂಡು ಮನೆಯಲ್ಲಿ ಹಲ್ಲಿ ಕಾರಣ ಹೇಳಿ ನಟಿ ವಿಜಯಲಕ್ಷ್ಮಿ ಮನೆ ಬಿಟ್ಟು ಬಂದಿದ್ದಾರೆ.

    ಕೊರೊನಾ ಬಂದು ಆಸ್ಪತ್ರೆಯ ಬಿಲ್ ಕಟ್ಟಲಾಗದೇ ತೊಂದರೆಗೊಳಗಾಗಿದ್ದ ವಿಜಯಲಕ್ಷ್ಮಿ, ತಾನು ಬದುಕುವುದಿಲ್ಲ ಸಹಾಯ ಬೇಕಿದೆ. ಉಳಿದುಕೊಳ್ಳಲು ನನಗೆ ಮನೆ ಬೇಕಿದೆ ಎಂದು ಫೇಸ್ ಬುಕ್ ಮೂಲಕ ತಮ್ಮ ನೋವು ತೋಡಿಕೊಂಡಿದ್ದರು. ಇದನ್ನೂ ಓದಿ: ಬ್ಯಾಂಕ್‍ನಲ್ಲಿ ಹಿಂದಿ ಬೇಡ, ಚೆಕ್ಕುಗಳು ಕನ್ನಡದಲ್ಲೇ ಇರಬೇಕು: ವಾಟಾಳ್

    ಇದನ್ನು ಗಮನಿಸಿದ್ದ ಉತ್ತರ ಕನ್ನಡ ಜಿಲ್ಲೆಯ ದೀಪಾ ತುಕರಾಮ್ ನಾಯ್ಕ ಅವರು, ಫೇಸ್ ಬುಕ್ ಮೂಲಕ ವಿಜಯಲಕ್ಷ್ಮಿ ಅವರನ್ನು ಸಂಪರ್ಕ ಮಾಡಿ ಅವರ ಆಸ್ಪತ್ರೆ ಬಿಲ್ ಮೊತ್ತ 30,000 ರೂಪಾಯಿಯನ್ನು ತಾವೇ ಭರಿಸಿದ್ದರು. ನಂತರ ಹೊನ್ನಾವರದ ಕರ್ಕಿಯಲ್ಲಿದ್ದ ತಂದೆ ತುಕಾರಾಮ್ ಅವರಿಗೆ ಕರೆ ಮಾಡಿ ಮನೆಯ ವ್ಯವಸ್ಥೆ ಮಾಡಲು ತಿಳಿಸಿದ್ದರು. ಆದರಂತೆ ತುಕಾರಾಮ್ ಕರ್ಕಿಯಲ್ಲಿ ತಮ್ಮದೇ ವೆಚ್ಚದಲ್ಲಿ ನಾಲ್ಕು ಸಾವಿರ ರೂಪಾಯಿಗೆ ಬಾಡಿಗೆ ಮನೆ ಮಾಡಿ ಅವರ ಕುಟುಂಬವನ್ನು ತಮ್ಮದೇ ವೆಚ್ಚದಲ್ಲಿ ಆರು ದಿನಗಳ ಕಾಲ ನೋಡಿಕೊಂಡಿದ್ದಾರೆ. ಇದನ್ನೂ ಓದಿ: ಮಾತನಾಡುವ ನೆಪದಲ್ಲಿ ವಿದ್ಯಾರ್ಥಿಯಿಂದ ಮೊಬೈಲ್ ಪಡೆದ- ಹಲ್ಲೆ ಮಾಡಿ, ಫೋನ್ ಕದ್ದ

    ಬಂದಾಗಿನಿಂದ ಕಿರಿಕ್ ಮಾಡಿಕೊಂಡು ತಾಯಿ ಅಕ್ಕನನ್ನು ವಿಜಯಲಕ್ಷ್ಮಿ ಸರಿಯಾಗಿ ಗಮನಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಕರ್ಕಿಗೆ ಬಂದಾಗಿನಿಂದ ಕಿರಿಕ್ ಮಾಡಿಕೊಂಡಿದ್ದ ವಿಜಯಲಕ್ಷ್ಮಿ, ಹಾಸಿಗೆಯಲ್ಲಿಯೇ ಇರುವ ಅಕ್ಕ, ತಾಯಿಯನ್ನು ನೋಡಿಕೊಳ್ಳುತ್ತಿರಲಿಲ್ಲ. ಅಕ್ಕ, ತಾಯಿಯ ಶೌಚ, ಸ್ವಚ್ಛ ಮಾಡುವುದು, ಊಟ ಮಾಡಿಸುವುದು ಸಹ ತುಕಾರಾಮ್ ಅವರ ಮನೆಯವರು ಹಾಗೂ ಅವರ ಮನೆಯ ಕೆಲಸದವರು ಮಾಡಿದ್ದಾರೆ.

    ವಿಜಯಲಕ್ಷ್ಮಿ ಪರಿಸ್ಥಿತಿ ನೋಡಿ, ತಾಯಿ ಮತ್ತು ಅಕ್ಕನನ್ನು ಇಲ್ಲಿಯೇ ಬಿಡಿ, ಇಲ್ಲಿ ಆಶ್ರಮ ಇದೆ ನಾನು ಇರುತ್ತೇನೆ ನೋಡಿಕೊಳ್ಳುತ್ತೇನೆ. ನೀವು ಬೆಂಗಳೂರಿಗೆ ಹೋಗಿ ಸಿನಿಮಾದಲ್ಲಿ ಅವಕಾಶ ಪಡೆದು ನಿಮ್ಮ ವೃತ್ತಿ ಮುಂದುವರಿಸುವಂತೆ ತುಕರಾಮ್ ಹೇಳಿದ್ದಾರೆ. ಆದರೆ ಆದಕ್ಕೆ ಒಪ್ಪದ ವಿಜಯಲಕ್ಷ್ಮಿ ನನ್ನ ತಾಯಿ, ಅಕ್ಕ ನನ್ನೊಂದಿಗೆ ಇರುತ್ತಾರೆ. ಅವರನ್ನು ಬಿಟ್ಟು ಇರುವುದಿಲ್ಲ ಎಂದು ತಾಯಿ ಮತ್ತು ಅಕ್ಕನನ್ನು ಕರೆದುಕೊಂಡು ಬೆಂಗಳೂರಿಗೆ ತೆರಳಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ತುಕರಾಮ್, ಉಚಿತವಾಗಿ ಎಲ್ಲವನ್ನೂ ಮಾಡಿದರೂ ಮನೆ ಸರಿಯಿಲ್ಲ, ವ್ಯವಸ್ಥೆ ಸರಿಯಿಲ್ಲ. ನನಗೆ ಕೆಲಸದವರನ್ನು ನೇಮಿಸಿ, ಮನೆಗೆ ಬೇರೆ ವ್ಯವಸ್ಥೆ ಕಲ್ಪಿಸಿ ಎಂದು ಫೇಸ್ ಬುಕ್‍ನಲ್ಲಿ ನಟಿ ಕೇಳಿದ್ದರು. ಈ ಬಗ್ಗೆ ನಾನು ಅವರನ್ನು ವಿಚಾರಿಸಿದೆ. ಹೀಗೆ ವಿಚಾರಿಸಿದ್ದಕ್ಕೆ ಮನಸ್ಸಿಗೆ ಹಚ್ಚಿಕೊಂಡ ಅವರು ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿದರು. ಅದಕ್ಕೆ ನಾನೇ ಕಾರನ್ನು ಮಾಡಿ ಕಳುಹಿಸಿದ್ದೇನೆ ಎಂದರು.

  • ಬಾತುಕೋಳಿಯಂತೆ ನಡೆದ ಮಲೈಕಾ- ಸಖತ್ ಹಾಟ್

    ಬಾತುಕೋಳಿಯಂತೆ ನಡೆದ ಮಲೈಕಾ- ಸಖತ್ ಹಾಟ್

    ಮುಂಬೈ: ಬಾಲಿವುಡ್ ಸಿನಿಮಾ ಅಂಗಳದಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುವ ನಟಿ, ಡಾನ್ಸರ್ ಮಲೈಕಾ ಅರೋರಾ. ಇದೀಗ ಬಾತುಕೋಳಿಯಂತೆ ನಡೆದು ಸಖತ್ ಹಾಟ್ ಆಗಿ ಕಾಣಿಸಿಕೊಂಡು ಚರ್ಚೆಯ ಮೂಲವಾಗಿದ್ದಾರೆ.

    47 ವರ್ಷದ ಮಲೈಕಾ ದಿನವೂ ಜಿಮ್‍ಗೆ ತೆರಳುವಾಗ ನೆರೆದಿರುವ ಪಾಪರಾಜಿಗಳಿಗೆ ಪೋಸ್ ನೀಡುತ್ತಾರೆ. ಅಂತೆಯೇ ಇತ್ತೀಚೆಗೆ ಕೂಡ ಪೋಸ್ ನೀಡಿದ್ದಾರೆ. ಅದರೊಂದಿಗೆ ವಿಚಿತ್ರವಾಗಿ ನಡೆದಿದ್ದಾರೆ. ಇದು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಇದನ್ನೂ ಓದಿ:  ಕಟೌಟ್ ಡ್ರೆಸ್‍ನಲ್ಲಿ ನೋರಾ ಫತೇಹಿ ಸಖತ್ ಹಾಟ್

    ಮಲೈಕಾ ಅವರ ಬಾತುಕೋಳಿ ನಡಿಗೆ ಕಂಡ ಅವರ ಅಭಿಮಾನಿಗಳಲ್ಲಿ ಕೆಲವರು ಮೆಚ್ಚುಕೊಂಡಿದ್ದಾರೆ, ಇನ್ನು ಕೆಲವರಿಗೆ ಇಷ್ಟವಾಗಿಲ್ಲ. ಬಾತುಕೋಳಿ ನಡಿಗೆ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ. ಮತ್ತೆ ಹಲವರು ಏಕೆ ಹಾಗೆ ನಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

    ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಮಲೈಕಾ ಹಾಗೂ ನಟ ಅರ್ಜುನ್ ಬಹಳ ಕಾಲದಿಂದ ರಿಲೇಶನ್‍ಶಿಪ್‍ನಲ್ಲಿದ್ದಾರೆ. ಇತ್ತೀಚೆಗಷ್ಟೇ ಗೆಳತಿಯ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅರ್ಜುನ್ ಕಪೂರ್, ನಾನು ದುಃಖದಲ್ಲಿದ್ದಾಗ, ಖುಷಿಯಲ್ಲಿದಾಗ ಯಾವುದೇ ಸಂದರ್ಭವಿರಲಿ ಅದು ಆಕೆಗೆ ತಿಳಿಯುತ್ತದೆ. ಒಂದು ವೇಳೆ ನಾನು ಕದ್ದು ಕುಳಿತರೂ ಅದು ಆಕೆಗೆ ತಿಳಿದಿರುತ್ತದೆ ಎಂದು ಮಲೈಕಾ ಕುರಿತು ಹೇಳಿದ್ದರು.

     

    View this post on Instagram

     

    A post shared by Bollywood Pap (@bollywoodpap)

    ಸಾಮಾಜಿಕ ಜಾಲತಾಣಗಳಲ್ಲೂ ಈ ಜೋಡಿ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಅಧಿಕೃತವಾಗಿ ದಾಂಪತ್ಯಕ್ಕೆ ಕಾಲಿಟ್ಟಿಲ್ಲವಾದರೂ, ಇಬ್ಬರೂ ಜೊತೆಯಾಗಿಯೇ ಸುತ್ತಾಡುವುದನ್ನು ಒಪ್ಪಿಕೊಂಡಿದ್ದಾರೆ. ಬಾತುಕೋಳಿಯಂತೆ ನಡೆದ ಮಲೈಕಾ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

  • ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ

    ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ

    ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಎರಡು ಬಾರಿ ಒಲಿಂಪಿಕ್ಸ್ ಪದಕ ತನ್ನದಾಗಿಸಿಕೊಂಡಿರುವ ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ್ದಾರೆ.

    ಒಲಂಪಿಕ್ಸ್ ವಿಜೇತೆ ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿ ದೀಪಿಕಾ ಗಮನ ಸೆಳೆದಿದ್ದಾರೆ. ಅಲ್ಲದೆ ಈ ಫೋಟೋಗಳನ್ನು ನಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕ್ಯಾಲರಿ ಬರ್ನ್ ಆಗಿ ಮುಖದಲ್ಲಿ ಬೆವರಿಳಿದಿದೆ. ಇದರಿಂದ ಮುಖದ ಕಾಂತಿ ಹೆಚ್ಚಿದೆ ಎಂದು ನಟಿ ದೀಪಿಕಾ ಬರೆದುಕೊಂಡಿದ್ದರು. ಪಿವಿ ಸಿಂಧು ಕಾಮೆಂಟ್ ಮಾಡಿ ಎಷ್ಟು ಕ್ಯಾಲರಿ ಬರ್ನ್ ಆಯಿತು ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:  ಅರಣ್ಯಕ್ಕೆ ಬಿಟ್ಟು ಬಂದರೂ ಗೊಬ್ಬರದ ಲಾರಿ ಏರಿ ಮತ್ತೆ ಪೇಟೆಗೆ ಬಂದ ಕೋತಿ

     

    View this post on Instagram

     

    A post shared by Deepika Padukone (@deepikapadukone)

    ಈ ವಿಶೇಷ ಪಂದ್ಯಕ್ಕಾಗಿ ದೀಪಿಕಾ ಕಪ್ಪು ಧಿರಿಸು ಧರಿಸಿದ್ದರು. ಸಿಂಧೂ ಕೂಡ ಅದೇ ರೀತಿಯ ಬಟ್ಟೆ ಧರಿಸಿದ್ದು ವಿಶೇಷವಾಗಿತ್ತು. ಸಿಂಧು ನೇರಳೆ ಮತ್ತು ಗುಲಾಬಿ ಬಣ್ಣಗಳ ಟಾಪ್ ಧರಿಸಿದ್ದರು. ಇಬ್ಬರು ಬೆವರಿಳಿಸುವಂತೆ ಆಟವಾಡಿದ್ದು, ಈ ಆಟದಲ್ಲಿ ಯಾರಿಗೆ ಗೆಲುವು ಆಯಿತು ಎಂಬುದನ್ನು ಮಾತ್ರ ತಿಳಿಸಿಲ್ಲ. ಆದರೆ ನಟಿ ದೀಪಿಕಾ ಈ ಆಟದಿಂದ ತಮ್ಮ ಮುಖದ ಕಾಂತಿ ಹೆಚ್ಚಿತು ಎಂದಿದ್ದಾರೆ.

     

    View this post on Instagram

     

    A post shared by Deepika Padukone (@deepikapadukone)

    ನಟಿ ದೀಪಿಕಾ ಇತ್ತೀಚಿನ ದಿನಗಳಲ್ಲಿ ಒಲಿಂಪಿಕ್ಸ್ ವಿಜೇತೆ ಪಿವಿ ಸಿಂಧು ಅವರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಿಂಧುಗಾಗಿ ವಿಶೇಷ ಔತಣ ಕೂಟವನ್ನು ಮುಂಬೈನ ರೆಸ್ಟೋರೆಂಟ್‍ನಲ್ಲಿ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಆಯೋಜಿಸಿದ್ದರು. ನಟಿ ದೀಪಿಕಾ ಪಡುಕೋಣೆ ತಂದೆ ಪ್ರಕಾಶ್ ಪಡುಕೋಣೆ ಕೂಡ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದರು. ನಟಿ ದೀಪಿಕಾ ಕೂಡ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಟುವಾಗಿದ್ದರು. ನಟಿ ದೀಪಿಕಾ ಕೂಡ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಟುವಾಗಿದ್ದರು. ಇದೀಗ ಪಿವಿ ಸಿಂಧು ಜೊತೆಗೆ ಮೈದಾನಲ್ಲಿ ಕಾಣಿಸಿಕೊಂಡಿರುವುದು ಸಖತ್ ಸುದ್ದಿಯಲ್ಲಿದೆ.

  • ಮಗನಿಗೆ 6 ತಿಂಗಳು ತುಂಬಿರೋ ಸಂಭ್ರಮ- ಮುಯೂರಿ ಫೋಟೋಶೂಟ್

    ಮಗನಿಗೆ 6 ತಿಂಗಳು ತುಂಬಿರೋ ಸಂಭ್ರಮ- ಮುಯೂರಿ ಫೋಟೋಶೂಟ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮಯೂರಿಯ ಮುದ್ದು ಕಂದ ಆರವ್‍ಗೆ 6 ತಿಂಗಳು ತುಂಬಿರುವ ಸಂತೋಷವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಒಳ್ಳೆಯದರೊಂದಿಗೆ ಒಳ್ಳೆಯ ಕೊನೆಗೊಳ್ಳುತ್ತದೆ. ಆರವ್‍ಗೆ 6 ತಿಂಗಳು ಎಂದು ಬರೆದುಕೊಂಡು ತಮ್ಮ ಮಗನಿಗೆ ಆರು ತಿಂಗಳು ತುಂಬಿದ ಖುಷಿಯಲ್ಲಿದ್ದಾರೆ. ಇದೇ ಖುಷಿಯಲ್ಲಿ ಕೇಕ್ ಕತ್ತರಿಸಿ, ಮಗ ಹಾಗೂ ಗಂಡನ ಜೊತೆ ಫೋಟೋಶೂಟ್‍ಗೆ ಪೋಸ್ ಕೊಟ್ಟಿದ್ದಾರೆ. ಈ ಸಂತೋಷದ ಕ್ಷಣಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ಇಲಿ ವಿಷದಿಂದ ಹಲ್ಲುಜ್ಜಿ ಪ್ರಾಣ ಬಿಟ್ಟ 18ರ ಯವತಿ

     

    View this post on Instagram

     

    A post shared by mayuri (@mayurikyatari)

    ಮಗುವಾದಾಗಿನಿಂದ ಅಭಿನಯದಿಂದ ಬ್ರೇಕ್ ತೆಗೆದುಕೊಂಡಿರುವ ಮಯೂರಿ ಅವರು ಈಗ ಮಗುವಿನ ಆರೈಕೆ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಮಯೂರಿ ಅವರಿಗೆ ಮಗುವಾಗಿ 6 ತಿಂಗಳು ಕಳೆದಿದೆ. ಮಗನಿಗೆ ಆರವ್ ಎಂದು ನಾಮಕರಣ ಮಾಡಿರುವ ಮಯೂರಿ ಹಾಗೂ ಅರುಣ್ ದಂಪತಿ ಮಗನ ಜೊತೆ ಸಂತೋಷದಿಂದ ಕಾಲ ಕಳೆಯುತ್ತಿದ್ದಾರೆ.

     

    View this post on Instagram

     

    A post shared by mayuri (@mayurikyatari)

    ಬಹಳ ಸಮಯದಿಂದ ಪ್ರೀತಿಸುತ್ತಿದ್ದ ಬಾಲ್ಯದ ಗೆಳೆಯ ಅರುಣ್ ಅವರನ್ನು ಮಯೂರಿ ಕಳೆದ ವರ್ಷ ಜೂನ್ ತಿಂಗಳಲ್ಲಿ ಮದುವೆಯಾದರು. ಬೆಂಗಳೂರಿನ ಜೆಪಿ ನಗರದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇವರ ಮದುವೆ ನಡೆದಿತ್ತು. ಲಾಕ್‍ಡೌನ್ ಸಮಯದಲ್ಲಿ ಇವರ ಮದುವೆಯಾಗಿದ್ದರಿಂದ ಕೇವಲ ಕುಟುಂಬಸ್ಥರು, ಸ್ನೇಹಿತರು ಮತ್ತು ಕೆಲವೇ ಮಂದಿ ಆಪ್ತರ ಭಾಗಿಯಾಗಿದ್ದರು. ಮಯೂರಿ ತಮ್ಮ ಮಗುವಿನ ಮುದ್ದಾದ ವೀಡಿಯೋಗಳನ್ನು ಹಂಚಿಕೊಳ್ಳುತ್ತಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುತ್ತಾರೆ.

  • ರಮ್ಯಾ ಸೌಂದರ್ಯವನ್ನು ಹಾಡಿಹೊಗಳಿದ ಅಭಿಮಾನಿಗಳು

    ರಮ್ಯಾ ಸೌಂದರ್ಯವನ್ನು ಹಾಡಿಹೊಗಳಿದ ಅಭಿಮಾನಿಗಳು

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಮ್ಯಾ ಸ್ನೇಹಿತರು ಒಟ್ಟಿಗೆ ಕ್ಲಿಕ್ಕಿಸಿಕೊಂಡಿರುವ ಸೆಲ್ಫಿಯನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ಒಂದೇ ನಾಣ್ಯದ ಎರಡು ಮುಖಗಳು ಎಂದು ಬರೆದುಕೊಂಡು ಸ್ನೇಹಿತರೊಟ್ಟಿಗೆ ಇರುವ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. ರಮ್ಯಾ ಅವರ ಹೇರ್ ಸ್ಟೈಲ್‍ಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಇದನ್ನೂ ಓದಿ:  ಸುದೀಪ್ ಫೋಟೋಗೆ ಫಿದಾ ಆದ ನಟಿ ರಮ್ಯಾ

    ರಮ್ಯಾ ಫೋಟೋದಲ್ಲಿ ಸಖತ್ ಕ್ಯೂಟ್ ಮತ್ತು ಸ್ಲಿಮ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಂಪು ಬಣ್ಣದ ಬಟ್ಟೆ ಹಾಕಿರುವ ರಮ್ಯ ಶಾರ್ಟ್ ಹೇರ್‌ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಮೆಚ್ಚುವುದರ ಜೊತೆಗೆ ಸ್ಯಾಂಡಲ್‍ವುಡ್‍ನ ಹಲವು ಕಲಾವಿದರು ರಮ್ಯಾ ಅವರ ಫೋಟೋವನ್ನು ನೋಡುತ್ತಿದ್ದಂತೆ ಕಾಮೆಂಟ್‍ಗಳ ಸುರಿ ಮಳೆಗೈದಿದ್ದಾರೆ.

     

    View this post on Instagram

     

    A post shared by Ramya/Divya Spandana (@divyaspandana)

    ಶರ್ಮಿಳಾ ಮಾಂಡ್ರೆ ಅದ್ಭುತ ಎಂದು ಕಾಮೆಂಟ್ ಮಾಡಿದ್ದಾರೆ. ಎಷ್ಟು ಸುಂದರವಾದ ಗೊಂಬೆ ಸ್ಯಾಂಡಲ್‍ವುಡ್‍ನ ಕ್ವೀನ್ ರಮ್ಯ ಎಂದು ನಟಿ ಕಾರುಣ್ಯಾ ರಾಮ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕನ್ನಡದ ರಾಜಕುಮಾರಿ, ಸುಮ್ನೆ ಹೇಳಲ್ಲ ಸ್ಯಾಂಡಲ್‍ವುಡ್ ಕ್ವೀನ್ ಎಂದು, ನೀವು ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಆ್ಯಕ್ಟಿವ್ ಆಗಿರಿ, ನಿಮ್ಮ ಬರಹಗಳು ಬರಲಿ, ನಿಮ್ಮನ್ನು ನೋಡುವುದಕ್ಕಿಂತ ನಮಗೆ ಬೇರೇನೂ ಇಲ್ಲ ಎಂದು ಅಭಿಮಾನಿಗಳು ರಮ್ಯಾ ಅವರನ್ನು ಮಿಸ್ ಮಾಡಿಕೊಳ್ಳುತ್ತೀರುವುದಾಗಿ ಕಾಮೆಂಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

     

    View this post on Instagram

     

    A post shared by Ramya/Divya Spandana (@divyaspandana)

    ನಿನ್ನೆ ಸುದೀಪ್ ಅವರ ವರ್ಕಔಟ್ ಫೋಟೋಗೆ ರಮ್ಯಾ ಕಮೆಂಟ್ ಮಾಡುವ ಮೂಲಕವಾಗಿ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಲ್ಲಿದ್ದರು. ಮತ್ತೆ ತೆರೆ ಮೇಲೆ ಬನ್ನಿ, ನೀವು ಸುದೀಪ್ ಅವರ ಜೊತೆಗೆ ಸಿನಿಮಾ ಮಾಡಿ ಎನ್ನುವ ಬೇಡಿಕೆಯನ್ನು ಅಭಿಮಾನಿಗಳು ಇಟ್ಟಿದ್ದರು. ಇದೀಗ ರಮ್ಯಾ ಅವರ ಸೆಲ್ಫಿ ನೋಡುತ್ತಿದ್ದಂತೆ ಅಭಿಮಾನಿಗಳು ರಮ್ಯಾ ಅವರ ಸೌಂದರ್ಯವನ್ನು ಹಾಡಿಹೊಗಳಿದ್ದಾರೆ.

  • ಸುದೀಪ್ ಫೋಟೋಗೆ ಫಿದಾ ಆದ ನಟಿ ರಮ್ಯಾ

    ಸುದೀಪ್ ಫೋಟೋಗೆ ಫಿದಾ ಆದ ನಟಿ ರಮ್ಯಾ

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಮೋಹಕತಾರೆ ರಮ್ಯಾ ಕಿಚ್ಚ ಸುದೀಪ್ ಅವರ ಜೀಮ್ ಫೋಟೋವನ್ನು ನೋಡಿ ಫಿದಾ ಆಗಿದ್ದಾರೆ. ಕಾಮೆಂಟ್ ಮಾಡುವ ಮೂಲಕವಾಗಿ ರಮ್ಯಾ ಸುದ್ದಿಯಾಗಿದ್ದಾರೆ.

    sudeep

    ಕಿಚ್ಚ ಬಹಳ ದಿನಗಳ ನಂತರ ಮತ್ತೆ ವರ್ಕಔಟ್ ಶುರು ಮಾಡಿದ್ದಾರೆ. ಲಾಕ್‍ಡೌನ್‍ನಿಂದ ಹೊಸ ಸಿನಿಮಾಗಳ ಕೆಲಸಗಳಿಗೆ ಬ್ರೇಕ್ ಆಗಿತ್ತು. ಈ ಬ್ರೇಕ್‍ನಲ್ಲಿ ಜಿಮ್‍ಗೆ ಕೂಡ ಅಲ್ಪ ವಿರಾಮ ಪಡೆದು ಚಿಲ್ ಮಾಡುತ್ತಿದ್ದರು. ಈಗ ಮತ್ತೆ ಜಿಮ್‍ನಲ್ಲಿ ಬೆವರು ಸುರಿಸಿ ಕಟ್ಟುಮಸ್ತಾದ ದೇಹ ಪಡೆಯಲು ಅಖಾಡಕ್ಕೆ ಇಳಿದಿದ್ದಾರೆ. ಮತ್ತೆ ಜಿಮ್‍ಗೆ ಎಂಟ್ರಿ ಕೊಟ್ಟಿದ್ದೀನಿ ಅಂತ ಸುದೀಪ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‍ವೊಂದನ್ನು ಹಾಕಿದ್ದರು. ಅಭಿಮಾನಿಗಳು ಕಿಚ್ಚನಿಗೆ ಮೆಚ್ಚುಗೆ ಸೂಚಿಸುವುದು ಸಹಜ ಆದರೆ ಮೋಹಕ ತಾರೆ ರಮ್ಯಾ ( ATTA BOY) ಎಂದು ಕಾಮೆಂಟ್ ಮಾಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಲ್ಲಿದ್ದಾರೆ. ಇದನ್ನೂ ಓದಿ:  ನಾಮಧಾರಿಯಾದ ಡಿಂಪಲ್ ಕ್ವೀನ್ ರಚಿತಾ ರಾಮ್

     

    View this post on Instagram

     

    A post shared by KicchaSudeepa (@kichchasudeepa)

    ಕಿಚ್ಚಸುದೀಪ್ ಮತ್ತು ರಮ್ಯಾ ಬಹಳ ಒಳ್ಳೆ ಸ್ನೇಹಿತರು. ಇಬ್ಬರು ಜೊತೆಯಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸುದೀಪ್ ಹುಟ್ಟುಹಬ್ಬಕ್ಕೆ ರಮ್ಯಾ ಬರ್ತಡೇ ದಿನ ಒಬ್ಬರಿಗೊಬ್ಬರು ಶುಭಾಷಯ ಕೋರ್ತಾರೆ. ಸುದೀಪ್ ಜಿಮ್‍ಗೆ ಎಂಟ್ರಿ ಕೊಟ್ಟಿರುವ ಫೋಟೋಗೆ ಮತ್ತೆ ರಮ್ಯಾ ಕಾಮೆಂಟ್ ಮಾಡಿರೋದು ಇವರ ಸ್ನೇಹಕ್ಕೆ ಸಾಕ್ಷಿಯಾಗಿದೆ.

    ರಮ್ಯಾ ಕಾಮೆಂಟ್ ನೋಡಿ ಕಿಚ್ಚನ ಅಭಿಮಾನಿಗಳು ಖುಷಿಯಾಗಿದ್ದಾರೆ. ಜೊತೆಗೆ ಮತ್ತೆ ಸಿನಿಮಾ ಮಾಡಿ ಅಂತ ಕೂಡ ರಮ್ಯಾಗೆ ಅಭಿಮಾನಿಗಳು ಮನವಿ ಇಟ್ಟಿದ್ದಾರೆ. ಕಿಚ್ಚ, ರಮ್ಯಾ ಈಗಾಲೇ ಹಲವು ಸಿನಿಮಾಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಮತ್ತೆ ತೆರೆ ಮೇಲೆ ಈ ಜೋಡಿ ಮೊಡಿ ಮಾಡುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

  • ನಾಮಧಾರಿಯಾದ ಡಿಂಪಲ್ ಕ್ವೀನ್ ರಚಿತಾ ರಾಮ್

    ನಾಮಧಾರಿಯಾದ ಡಿಂಪಲ್ ಕ್ವೀನ್ ರಚಿತಾ ರಾಮ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಹಣೆಗೆ ನಾಮವನ್ನು ಇಟ್ಟುಕೊಂಡಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    ಮುಂಜಾನೆಯ ಒಂದು ಸಣ್ಣ ಧನಾತ್ಮಕ ಯೋಚನೆ ನಿಮ್ಮ ಇಡೀ ದಿನವನ್ನು ಬದಲಾಯಿಸುತ್ತದೆ. ಆದ್ದರಿಂದ ಧನಾತ್ಮಕ ಯೋಚನೆಗಳೊಂದಿಗೆ ದಿನವನ್ನು ಆರಂಭಿಸಿ ಎಂದು ಬರೆದುಕೊಂಡು ನಾಮಧಾರಿಯಾಗಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

     

    View this post on Instagram

     

    A post shared by Rachita Ram (@rachita_instaofficial)

    ನಾಮಧಾರಿಯಾಗಿರುವ ರಚಿತಾ ಅವರ ಫೋಟೋವನ್ನು ನೋಡಿದ ಅಭಿಮಾನಿಗಳು ಮೆಚ್ಚುಗೆ ಸೂಚಿಸಿ ನಟಿಯನ್ನು ಕೊಂಡಾಡುತ್ತೀದ್ದಾರೆ. ವರ್ಣನೆಗೂ ಮೀರಿದ ಗೊಂಬೆ ಇವಳು, ಹಿಂದೂ ಧರ್ಮದ ಬಗ್ಗೆ ಗೌರವ ಮತ್ತು ಪ್ರೀತಿಯನ್ನು ತೋರಿಸುವ ಧೈರ್ಯವಿರುವ ನಟಿ ಜೈ ಶ್ರೀರಾಮ್ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತೀದ್ದಾರೆ. ಇದನ್ನೂ ಓದಿ: ಭೂಪೇಂದ್ರ ಪಟೇಲ್ ಯಾರು? ಹಿನ್ನೆಲೆ ಏನು?

     

    View this post on Instagram

     

    A post shared by Rachita Ram (@rachita_instaofficial)

    ರಚಿತಾ ರಾಮ್ ಕೆಲವು ದಿನಗಳ ಹಿಂದೆ ಅವರ ಸಹೋದರಿಯ ಜೊತೆಗೆ ಇರುವ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. ನಾನು ಎಷ್ಟು ಥ್ರಿಲ್ ಆಗಿದ್ದೇನೆ ಎಂದರೆ ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ಮತ್ತೆ ನಾವಿಬ್ಬರು ಒಂದಾಗಿದ್ದೇವೆ. ಈ ಖುಷಿಯಿಂದ ನನ್ನ ಹೃದಯ ಕರಗಿದೆ ಎಂದು ಬರೆದುಕೊಂಡು ಸಹೋದರಿಯ ಜೊತೆಗೆ ಇರುವ ವೀಡಿಯೋವನ್ನು ಪೋಸ್ಟ್ ಮಾಡಿದ್ದರು. ಇದನ್ನೂ ಓದಿ:  ನಾನು ಫುಲ್ ಥ್ರಿಲ್ ಆಗಿದ್ದೇನೆ ಅಂದ್ರು ಡಿಂಪಲ್ ಕ್ವೀನ್ ರಚಿತಾ

    ರಚಿತಾ ಅವರ ಸಹೋದರಿ ನಿತ್ಯ ರಾಮ್ ಮದುವೆಯಾಗಿ ವಿದೇಶಕ್ಕೆ ಹೋಗಿದ್ದರು. ಇದರಿಂದ ರಚಿತಾ ತನ್ನ ಸಹೋದರಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದರು. ಮತ್ತೆ ಇವರಿಬ್ಬರು ಒಂದಾಗಿದ್ದಾರೆ. ರಚಿತಾ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಈ ಕುರಿತಾಗಿ ಬರೆದುಕೊಂಡಿದ್ದರು.