Tag: actress

  • ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸ ಇದೆ – ಡ್ರಗ್ಸ್ ಕೇಸ್ ಬಗ್ಗೆ ರಾಗಿಣಿ ಮಾತು

    ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸ ಇದೆ – ಡ್ರಗ್ಸ್ ಕೇಸ್ ಬಗ್ಗೆ ರಾಗಿಣಿ ಮಾತು

    ವಿಜಯಪುರ: ಚಿತ್ರ ನಟಿ ರಾಗಿಣಿ ದ್ವಿವೇದಿ ವಿಜಯಪುರದಲ್ಲಿ ಬಡ ಜನರಿಗೆ ಆಹಾರ ಕಿಟ್ ವಿತರಣೆ ಮಾಡಿದರು. ಇದೇ ವೇಳೆ ಮಾತನಾಡಿದ ರಾಗಿಣಿ ಡ್ರಗ್ಸ್ ಕೇಸ್ ವಿಚಾರದ ಬಗ್ಗೆ ಹೆಚ್ಚಿಗೆ ಮಾತಾಡೋದಿಲ್ಲ. ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸವಿದೆ. ನಾವು ತಪ್ಪು ಮಾಡಿಲ್ಲ ಅಂದ್ರೆ ನಾವು ಟೆನ್ಷನ್ ಮಾಡ್ಕೋಬಾರ್ದು ಎಂದರು.

    ಡ್ರಗ್ಸ್ ವಿಚಾರದಲ್ಲಿ ಶೇ.100 ಟಾರ್ಗೆಟ್ ಮಾಡಲಾಗಿದೆ. ಬರೀ ಒಂದು ಕೇಸ್ ವಿಚಾರವಾಗಿ ಮಾತ್ರವಲ್ಲ. ಹೆಣ್ಮಕ್ಕಳು ಅಂದ್ರೆ ಸಾಕು ಪ್ರತಿಯೊಂದು ವಿಚಾರದಲ್ಲೂ ಸಮಾಜದಲ್ಲಿ ಟಾರ್ಗೆಟ್ ಮಾಡಲಾಗುತ್ತಿದೆ. ಹೆಣ್ಮಕ್ಕಳನ್ನು ತುಂಬಾ ಈಜಿಯಾಗಿ ಟಾರ್ಗೆಟ್ ಮಾಡೋದು ಹವ್ಯಾಸವಾಗಿದೆ ಎಂದು ಕಿಡಿಕಾರಿದರು.

    ಬ್ಲೇಮ್ ಮಾಡೋ ಬದಲು ಎಲ್ಲರೂ ನಿಮ್ಮ ನಿಮ್ಮ ಕೆಲಸದಲ್ಲಿ ಕರೆಕ್ಟ್ ಆಗಿದ್ರೆ ಸಾಕು. ಪ್ರಶಾಂತ್ ಸಂಬರಗಿ ಅವರು ನಿಜವಾಗಿಯೂ ನನಗೆ ಪರಿಚಯವಿಲ್ಲ, ಅವರೊಂದಿಗೆ ನಾನು ಮಾತಾಡಿಯೂ ಇಲ್ಲ. ಅವರು ಏನು ಮಾತಾಡ್ತಾರೋ ಮಾತಾಡಲಿ, ನನಗೆ ಅವರ ಪರಿಚಯವಿಲ್ಲ. ಅವರವರ ಓಪಿನೀಯನ್ ಮಾತಾಡ್ತಾರೆ, ಅದನ್ನು ನಾನು ಕಂಟ್ರೋಲ್ ಮಾಡಲು ಆಗಲ್ಲಾ ಎಂದರು. ಇದನ್ನೂ ಓದಿ: ಲಸಿಕೆ ಕೊರತೆ ಮುಚ್ಚಿ ಹಾಕಲು ಸರ್ಕಾರ ಸುಳ್ಳು ಹೇಳುತ್ತಿದೆ: ರಾಹುಲ್ ಗಾಂಧಿ

    ನಾನು ಏನು ಮಾಡ್ತೀನಿ, ಏನು ಮಾತಾಡ್ತೀನಿ ಅನ್ನೋದನ್ನು ಮಾತ್ರ ಕಂಟ್ರೋಲ್ ಮಾಡ್ತೀನಿ. ನನ್ನನ್ನು ಎಲ್ಲರೂ ಇಷ್ಟಪಡ್ತಾರೆ, ನನಗೆ ಫ್ಯಾನ್ಸ್ ಇದ್ದಾರೆ, ಅವರಿಗೆಲ್ಲ ಧನ್ಯವಾದ ಹೇಳ್ತೆನೆ. ನನ್ನನ್ನು ಇಷ್ಟಪಟ್ಟವರಿಗೂ, ಇಷ್ಟ ಪಡದವರಿಗೂ ಥ್ಯಾಂಕ್ಯೂ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.

  • ದಿಶಾ ಪಟಾನಿ ಬಿಕಿನಿ ಫೋಟೋಗೆ ಪಡ್ಡೆಗಳು ಫಿದಾ

    ದಿಶಾ ಪಟಾನಿ ಬಿಕಿನಿ ಫೋಟೋಗೆ ಪಡ್ಡೆಗಳು ಫಿದಾ

    ಮುಂಬೈ: ಬಾಲಿವುಡ್ ನಟಿ ದಿಶಾ ಪಟಾನಿ ಬೀಚ್‍ನಲ್ಲಿ ಕುಳಿತು ಫೊಟೋ ಪೋಸ್ ಕೊಟ್ಟ ಹಾಟ್ ಫೊಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

    ಹುಟ್ಟುಹಬ್ಬದ ಸಂಭ್ರಮದಲ್ಲಿರುವ ದಿಶಾ ಪಟಾನಿಯ ಇನ್‍ಸ್ಟಾಗ್ರಾಮ್‍ನಲ್ಲಿ ಹಾಟ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಬೀಚ್‍ನಲ್ಲಿ ಬಿಕಿನಿ ಧರಿಸಿ ದಿಶಾ ಪಟಾನಿ ತೆಗೆಸಿಕೊಂಡಿರುವ ಫೋಟೋಗಳು ಪಡ್ಡೆ ಹುಡುಗರ ನಿದ್ದೆಗೆಡಿಸಿವೆ.

     

    View this post on Instagram

     

    A post shared by disha patani (paatni) (@dishapatani)

    ಎಂ.ಎಸ್. ಧೋನಿ, ರಾಧೆ ಸಿನಿಮಾ ಖ್ಯಾತಿಯ ದಿಶಾ ಪಟಾನಿಗೆ ತೆಲುಗು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯಕ್ಕೆ ಕೊರೊನಾ ಹಾವಳಿಯಿಂದಾಗಿ ಶೂಟಿಂಗ್‍ನಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಈ ನಡುವೆ ಹಾಟ್ ಫೋಟೋಶೂಟ್ ಪೋಸ್ ಕೊಟ್ಟ ಫೋಟೋಗಳು ಮಾತ್ರ ಸಖತ್ ವೈರಲ್ ಆಗುತ್ತಿವೆ.

     

    View this post on Instagram

     

    A post shared by disha patani (paatni) (@dishapatani)

    ಉತ್ತರಾಖಂಡ ಮೂಲದ ದಿಶಾ ಪಟಾನಿ ಹುಟ್ಟಿದ್ದು ಉತ್ತರ ಪ್ರದೇಶದ ಬರೇಲಿಯಲ್ಲಿನ ರಜಪೂತ್ ಮನೆತನದಲ್ಲಾಗಿದೆ. ದಿಶಾ ಪಟಾನಿ ಅವರ ತಂದೆ ಪೊಲೀಸ್ ಆಫೀಸರ್ ಆಗಿದ್ದಾರೆ. ದಿಶಾ ಪಟಾನಿ ಮೊದಲು ಅಭಿನಯಿಸಿದ ಸಿನಿಮಾ ತೆಲುಗು ಭಾಷೆಯ ಲೋಫರ್. ವರುಣ್ ತೇಜ ಜೊತೆ ನಾಯಕಿಯಾಗಿ ದಿಶಾ ಅಭಿನಯಿಸಿದ ಈ ಸಿನಿಮಾ ಆಕೆಗೆ ಭಾರೀ ಹೆಸರು ತಂದುಕೊಟ್ಟಿತು.

     

    View this post on Instagram

     

    A post shared by disha patani (paatni) (@dishapatani)

    ಎಂ.ಎಸ್. ಧೋನಿ, ಅನ್‍ಟೋಲ್ಡ್ ಸ್ಟೋರಿ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ಜೋಡಿಯಾಗಿ ನಟಿಸಿದ ದಿಶಾ ಪಟಾನಿಗೆ ಆ ಸಿನಿಮಾ ದೊಡ್ಡ ಬ್ರೇಕ್ ನೀಡಿತು. ಜಾಕಿ ಚಾನ್ ಅವರ ಕುಂಗ್ ಫು ಯೋಗ ಸಿನಿಮಾದಲ್ಲಿ ದಿಶಾ ಪಟಾನಿ ಸೋನು ಸೂದ್‍ಗೆ ಜೊತೆಯಾಗಿ ನಟಿಸಿದ್ದಾರೆ. ಬಾಘಿ ಸಿನಿಮಾದಲ್ಲಿ ಟೈಗರ್ ಶ್ರಾಫ್ ಜೊತೆ ತೆರೆ ಹಂಚಿಕೊಂಡಿದ್ದ ದಿಶಾ ಪಟಾನಿ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು. ಸಿನಿಮಾಗಳ ಮೂಲಕವಾಗಿ ಸುದ್ದಿ ಮಾಡುವ ದಿಶಾ ಪಟಾನಿ ಇದೀಗ ಹಾಟ್ ಫೋಟೋ ಮೂಲಕವಾಗಿ ಸುದ್ದಿಯಾಗುತ್ತಿದ್ದಾರೆ.

  • ಮುಂಗಾರುಮಳೆ-2 ಚಿತ್ರದ ನಟಿಯ ತಂದೆ ಅರೆಸ್ಟ್..!

    ಮುಂಗಾರುಮಳೆ-2 ಚಿತ್ರದ ನಟಿಯ ತಂದೆ ಅರೆಸ್ಟ್..!

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಮುಂಗಾರು ಮಳೆ-2’ ಚಿತ್ರದ ನಟಿ ನೇಹಾ ಶೆಟ್ಟಿ ತಂದೆ ಹರಿರಾಜ್ ಶೆಟ್ಟಿಯನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಬೆಂಗಳೂರು ನಗರದಲ್ಲಿ ಜೂಜು ಅಡ್ಡೆ ನಿರ್ಮಿಸಿ ಕಾನೂನು ಬಾಹಿರ ಕೃತ್ಯ ಆರೋಪದಡಿಯಲ್ಲಿ ಬಂಧನವಾಗಿದೆ.

    ಬೆಂಗಳೂರಿನಲ್ಲಿ ಪೂಲ್ ಎನ್, ರಿ ಕ್ರಿಯೇಷನ್ ಕ್ಲಬ್ ಹೆಸರಿನಲ್ಲಿ ಹತ್ತಾರು ಕಡೆ ನಡೆಸ್ತಿದ್ದ, ಗೇಮ್ ಗಳು ಬ್ಯಾನ್ ಇರುವ ಸ್ಕಿಲ್ ಗೇಮ್, ವೀಡಿಯೋ ಗೇಮ್ ಪಾರ್ಲರ್ ನಡೆಸುತ್ತಿದ್ದ ಆರೋಪ ಇದೆ. ಅನೇಕ ಬಾರಿ ಸಿಸಿಬಿ ರೇಡ್ ಮಾಡಿದ್ರೂ ಕ್ಯಾರೇ ಅನ್ನದೇ ಕೃತ್ಯ, ನಗರದ ಪ್ರಮುಖ ಜೂಜುಕೋರ ಅಂತಾ ಗೂಂಡಾ ಕಾಯ್ದೆಯಡಿ ಬಂಧನ ಮಾಡಲಾಗಿದೆ. ಹರಿರಾಜ ಶೆಟ್ಟಿ ವಿರುದ್ಧ ಇಲ್ಲಿತನಕ 13 ಕೇಸ್‍ಗಳು ಪತ್ತೆಯಾಗಿದೆ. ಪದೇ ಪದೇ ಕೃತ್ಯವೆಸಗುವ ಹವ್ಯಾಸ ಹೊಂದಿದ ಆರೋಪ ಎದುರಿಸ್ತಾ ಇದ್ದಾರೆ.

    ಕಬ್ಬನ್ ಪಾರ್ಕ್, ಹೈಗ್ರೌಂಡ್ಸ್, ವೈಯಾಲಿ ಕಾವಲ್, ಕೋರಮಂಗಲ, ಅಶೋಕನಗರಣ ಬಸವೇಶ್ವರ ನಗರ, ಕೆ.ಪಿ ಅಗ್ರಹಾರ, ಇಂದಿರಾನಗರ ಠಾಣೆಗೆ ಬೇಕಾದ ಆರೋಪ ಹೊಂದಿರೋ ಹರಿರಾಜ್ ಶೆಟ್ಟಿ ಕಳೆದ 2014 ರಿಂದಲೂ ಈ ಅಕ್ರಮ ದಂಧೆ ನಡೆಸುತ್ತಿದ್ದ ಎಂಬ ಮಾಹಿತಿ ಇದೆ.

    ಪೊಲೀಸರಿಗೆ ಟಾರ್ಚರ್ ಕೊಡ್ತಿದ್ದ ಆರೋಪಿ:
    ತನ್ನ ಅಕ್ರಮ ಕ್ಲಬ್ ಮೇಲೆ ದಾಳಿ ಮಾಡಿದ ಪೊಲೀಸರ ಟಾರ್ಗೆಟ್ ಮಾಡ್ತಿದ್ದ, ಅಧಿಕಾರಿಯ ವಿರುದ್ಧ ಎಸಿಬಿ ದೂರು ನೀಡ್ತಿದ್ದ. ಹಣ ಪಡೆದ ಗಂಭೀರ ಆರೋಪ ಮಾಡಿ ತೇಜೋವಧೆ ಮಾಡ್ತಿದ್ದ ಎಂದು ತನ್ನ ಸೋಷಿಯಲ್ ಮೀಡಿಯಾ ಮೂಲಕ ಅಪಪ್ರಚಾರ ಮಾಡ್ತಿದ್ದ ಆರೋಪ ಕೂಡ ಈತನ ಮೇಲೆ ಇದೆ.

    ಬಳಿಕ ವಿವಿಧ ಠಾಣೆ ಪೊಲೀಸರಿಂದ ಸಿಸಿಬಿ ಆಯುಕ್ತರಿಗೆ ದೂರು ನೀಡಿದ್ರು. ಬಳಿಕ ಆರೋಪಿಯ ವಿರುದ್ಧ ಗೂಂಡಾ ಆಕ್ಟ್ ಅಡಿ ಕೇಸ್ ದಾಖಲಾಗಿದೆ. ಹೈಕೋರ್ಟ್ ರಜಾ ದಿನದ ಪೀಠದಲ್ಲಿ ಚಾಲೆಂಜ್ ಮಾಡಿ ಸ್ಟೇ ಪಡೆದಿದ್ದ ಹರಿರಾಜ್, ತನ್ನನ್ನ ಪೊಲೀಸ್ರು ಹಣಕ್ಕಾಗಿ ಟಾರ್ಗೆಟ್ ಮಾಡ್ತಿದ್ದರು ಎಂದು ಆರೋಪಿಸಿದ್ದ. ಅದರಂತೆ ಹೈಕೋರ್ಟ್ ನಲ್ಲಿ ಸ್ಟೇ ಪಡೆದು ಹೊರಗೆ ಓಡಾಡಿಕೊಂಡಿದ್ದ. ಇದನ್ನ ಪ್ರಶ್ನಿಸಿ ಹೈಕೋರ್ಟ್‍ಗೆ ಸಿಸಿಬಿಯಿಂದ ಮಧ್ಯಂತರ ಅರ್ಜಿ ಹಾಕಾಲಗಿತ್ತು. ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ. ಆರೋಪಿಯ ಪೂರ್ವಾಪರ ತಿಳಿದು ಸ್ಟೇ ತೀರ್ಪುನ್ನ ಅಸಿಂಧುಗೊಳಿಸಿದೆ.

  • ಗಿಡ ನೆಟ್ಟು ಮಾದರಿಯಾದ ಸಿನಿಮಾ ಸ್ಟಾರ್ಸ್

    ಗಿಡ ನೆಟ್ಟು ಮಾದರಿಯಾದ ಸಿನಿಮಾ ಸ್ಟಾರ್ಸ್

    ಬೆಂಗಳೂರು: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತವಾಗಿ ಸೆಲೆಬ್ರೆಟಿಗಳು ಗಿಡನೆಟ್ಟು ಪರಿಚರ Pಕುರಿತಾಗಿ ಕೆಲವು ಸಾಲುಗಳನ್ನು ಬರೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಶುಭಕೋರಿದ್ದಾರೆ. ಮನುಷ್ಯದ ಜೀವನದಲ್ಲಿ ಪ್ರಕೃತಿ ಬಹಳ ಮುಖ್ಯ, ಪರಿಸರ ಆರೋಗ್ಯವಾಗಿದ್ದರೆ ಮಾನವರ ಮುಂದಿನ ಪೀಳಿಗೆ ಆರೋಗ್ಯವಾಗಿರಲು ಸಾಧ್ಯ ಎಂಬ ಸಂದೇಶ ಸಾರಿದ್ದಾರೆ.

    ನಮ್ಮ ಜೀವನ ಪರಿಸರ ಇರುವವರೆಗೆ ಮಾತ್ರ ಎಂಬುದನ್ನು ಮರೆಯದಿರಿ, ನಮಗೆ ಬೇಕಾದಂತೆ ಪರಿಸರ ಬದಲಾಯಿಸುವ ಬದಲು, ಪರಿಸರಕ್ಕೆ ತಕ್ಕಂತೆ ನಾವು ಬದಲಾಗೋಣ ಎಂಬ ಸಂದೇಶವನ್ನು ಬರೆದುಕೊಂಡು ಪರಿಸರ ದಿನಾಚರಣೆಯ ಶುಭಾಶಯೊಂದಿಗೆ ಸಂದೇಶವನ್ನು ಕಿಚ್ಚ ಸುದೀಪ್ ನೀಡಿದ್ದಾರೆ. ಇದನ್ನೂ ಓದಿ:ಪೆಟ್ರೋಲ್, ಡೀಸೆಲ್ ಸುಂಕ ವಿನಾಯಿತಿ ಪ್ರಸ್ತಾಪ ಇಲ್ಲ: ಸಿಎಂ

     

    View this post on Instagram

     

    A post shared by Ragini dwivedi (@rraginidwivedi)

    ನಟ ಶರಣ್ ಸಹ ಟ್ವಿಟ್ಟರ್‌ನಲ್ಲಿ ಪರಿಸರ ದಿನಕ್ಕೆ ಶುಭಕೋರಿದರು. ಗುರುಶಿಷ್ಯರು ಚಿತ್ರದ ಸೆಟ್‍ನಲ್ಲಿ ಗಿಡ ನೆಡಲಾಗಿತ್ತು. ಆ ಫೋಟೋ ಶೇರ್ ಮಾಡಿ ಮನೆಗೊಂದು ಮರ, ಮನಸ್ಸಿಗೊಂದು ನೆಮ್ಮದಿ. ಗುರುಶಿಷ್ಯರು ಚಿತ್ರದ ಶೂಟಿಂಗ್ ದಿನಗಳಲ್ಲಿ ಒಂದು ಪುಟ್ಟ ತೆಂಗಿನ ಸಸಿ ನೆಟ್ಟಿದ್ದ ನೆನಪುಗಳು ಎಂದು ಮೆಲುಕು ಹಾಕಿದ್ದಾರೆ.

     

    View this post on Instagram

     

    A post shared by Allu Arjun (@alluarjunonline)

    ಹೆಚ್ಚಿನ ಮರಗಳನ್ನು ನೆಡೋಣ, ಪರಿಸರ ಸ್ನೇಹಿ ಕೆಲಸಗಳಿಗೆ ಹೊಂದಿಕೊಳ್ಳೋಣ ಎಂದು ತೆಲುಗು ನಟ ಅಲ್ಲು ಅರ್ಜುನ್ ಗಿಡವೊಂದನ್ನು ನೆಡುವ ಫೋಟೋವನ್ನು ಹಂಚಿಕೊಳ್ಳುವ ಮೂಲಕವಾಗಿ ಮೂಲಕ ಪರಿಸರ ದಿನಕ್ಕೆ ಶುಭಕೋರಿದರು. ಸ್ಯಾಂಡಲ್‍ವುಡ್ ನಟ ಸತೀಶ್ ನಿನಾಸಂ ಹಚ್ಚ ಹಸಿರಿನ ವಾತಾವರಣದಲ್ಲಿ ಕುಳಿತು ಕ್ಲೀಕ್ಕಿಸಿಕೊಂಡಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಸೇರ್ ಮಾಡಿಕೊಂಡು ಪರಿಸರ ದಿನಾಚರಣೆ ಶುಭಕೋರಿದ್ದಾರೆ.

    ಪರಿಸರ ದಿನಾಚರಣೆಯ ಅಂಗವಾಗಿ ಸುಮಾರು 150 ಗಿಡಗಳನ್ನು ನೆಟ್ಟಿದ್ದೇವೆ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಡೋಣ ಎಂದು ಬರೆದುಕೊಂಡು ಕೆಲವು ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಳ್ಳುವ ಮೂಲಕ ಸ್ಯಾಂಡಲ್‍ವುಡ್ ನಟಿ ರಾಗಿಣಿ ಪರಿಸರ ದಿನವನ್ನು ಆಚರಿಸಿದ್ದಾರೆ.

    ಬಾಲಿವುಡ್‍ನಲ್ಲಿ ಕರೀನಾ ಕಪೂರ್, ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ, ವರುಣ್ ಧವನ್, ಸೋನಾಲಿ ಬೇಂದ್ರೆ, ಶಿಲ್ಪಾ ಶೆಟ್ಟಿ ಸೇರಿದಂತೆ ಹಲವರು ಪರಿಸರ ದಿನಕ್ಕೆ ವಿಶ್ ಮಾಡಿದ್ದಾರೆ.

  • ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ ನಟಿ ಪ್ರೇಮಾ

    ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ ನಟಿ ಪ್ರೇಮಾ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಪ್ರೇಮಾ ಅವರ ವೈಯಕ್ತಿಕ ಜೀವನದ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹರಡುತ್ತಿರುವ ಸುದ್ದಿಗಳ ಕುರಿತಾಗಿ ಕೊನೆಗೂ ಮನಸ್ಸುಬಿಚ್ಚಿ  ಮಾತನಾಡಿದ್ದಾರೆ.

    ನಟಿ ಪ್ರೇಮಾ ಮೊದಲ ಮದುವೆ ಮುರಿದು ಬಿದ್ದ ನಂತರದಲ್ಲಿ ಅವರ ತಂದೆ ನಿಧನರಾದರು. ಪ್ರೇಮಾರಿಗೆ ಎರಡನೇ ಮದುವೆ ಮಾಡಿಕೊಳ್ಳಲು ಮನೆಯಲ್ಲಿ ತುಂಬ ಒತ್ತಾಯ ಮಾಡಲಾಗುತ್ತಿದೆ. ಈಗ ಅವರು ಮದುವೆಯಾಗಲಿದ್ದಾರೆ. ಪ್ರೇಮಾರಿಗೆ ಖಿನ್ನತೆಯಿದೆ. ಸೋಶಿಯಲ್ ಮೀಡಿಯಾದಲ್ಲಿ ಪ್ರೇಮಾ ಅವರು ಮತ್ತೆ ಮದುವೆಯಾಲಿದ್ದಾರೆ  ಎಂದೆಲ್ಲ ಗಾಸಿಪ್‍ಗಳು ಹರಡುತ್ತಿವೆಯಂತೆ. ಇದನ್ನೂ ಓದಿ: ಮಗ ಇವುಗಳನ್ನು ಮಿಸ್ ಮಾಡಿಕೊಳ್ತಿದ್ದಾನೆ ಅಂದ್ರು ಕ್ರೇಜಿ ಕ್ವೀನ್..!

    ಎರಡನೇ ಮದುವೆಯಾಗುತ್ತಿದ್ದಾರೆ ಎಂದೆಲ್ಲ ಹೇಳಲಾಗುತ್ತಿದೆಯಂತೆ, ಇದೆಲ್ಲವೂ ಸುಳ್ಳು ಸುದ್ದಿ, ಇದನ್ನು ನಂಬಬೇಡಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ನಟಿ ಪ್ರೇಮಾ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಕೂಡ ಅವರ ವೈಯಕ್ತಿಕ ವಿಚಾರದ ಬಗ್ಗೆ ಸಾಕಷ್ಟು ಊಹಾಪೋಹಗಳು ಹಬ್ಬಿದಾಗ ಖಾಸಗಿವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರೇಮಾ ಅವರು ಮದುವೆ ವಿಚಾರ ಏನಾಯ್ತು ಅಂತ ಹೇಳಲು ಇಷ್ಟವಿಲ್ಲ, ನಾನು ಆರೋಗ್ಯವಾಗಿದ್ದೇನೆ, ನನಗೆ ಮಕ್ಕಳಿಲ್ಲ ಎಂದು ಹೇಳಿದ್ದರು.

    ಓಂ, ಕನಸುಗಾರ, ನಮ್ಮೂರ ಮಂದಾರ ಹೂವೇ ಕನ್ನಡದಲ್ಲಿ ಅನೇಕ ಹಿಟ್ ಸಿನಿಮಾ ನೀಡಿರುವ ನಟಿ ಪ್ರೇಮಾ ಅವರು ಸದ್ಯ ಯಾವುದೇ ಚಿತ್ರಗಳಲ್ಲಿ ಅಭಿನಯಿಸುತ್ತಿಲ್ಲ. 2009ರಲ್ಲಿ ಶಿಶಿರ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಪ್ರೇಮಾ ಅವರು 2017ರಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜೊತೆಗೆ ಉಪೇಂದ್ರ ಮತ್ತೆ ಬಾ ಸಿನಿಮಾದಲ್ಲಿ ನಟಿಸಿದ್ದರು. ಅದಾದ ನಂತರದಲ್ಲಿ ಅವರು ಮತ್ತೆ ತೆರೆ ಮೇಲೆ ಕಾಣಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿಯಾದರೂ ಪ್ರೇಮಾ ಅವರು ತೆರೆ ಮೇಲೆ ಕಾಣಿಸಿಕೊಳ್ಳುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

  • ಜಾತಿನಿಂದನೆ ಮಾಡಿದ್ದ ಗೋಲ್ಡನ್ ಸ್ಟಾರ್ ನಟಿ ವಿರುದ್ಧ ಕೇಸ್

    ಜಾತಿನಿಂದನೆ ಮಾಡಿದ್ದ ಗೋಲ್ಡನ್ ಸ್ಟಾರ್ ನಟಿ ವಿರುದ್ಧ ಕೇಸ್

    ಮುಂಬೈ: ಮಳೆಯಲಿ ಜೊತೆಯಲ್ಲಿ ಸಿನಿಮಾದ ನಟಿ ಯುವಿಕಾ ಚೌಧರಿ ವಿರುದ್ಧ ಜಾತಿ ನಿಂದನೆ ಆರೋಪದ ಕೇಳಿ ಬಂದಿದೆ. ಯುವಿಕಾ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದರಿಂದ ನಟಿ ಕೋರ್ಟ್ ಮೆಟ್ಟಿಲು ಹತ್ತಬೇಕಾದ ಪರಿಸ್ಥಿತಿ ಬಂದೊದಗಿದೆ.

    ಯುವಿಕಾ ಮಾತನಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಈ ವೀಡಿಯೋದಲ್ಲಿ ಯುವಿಕಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ದಲಿತ ಹಕ್ಕುಗಳ ಕಾರ್ಯಕರ್ತರೊಬ್ಬರು ಕೇಸ್ ದಾಖಲು ಮಾಡಿದ್ದರು. ಹೀಗಾಗಿ, ಯುವಿಕಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಯುವಿಕಾ ಮನೆಯಲ್ಲಿ ಪತಿ ಪ್ರಿನ್ಸ್ ನರುಲಾ ಅವರಿಗೆ ಹೇರ್ ಕಟ್ ಮಾಡಿಸುವಾಗ ಯುವಿಕಾ ಒಂದು ಫನ್ನಿ ವೀಡಿಯೋ ಮಾಡಿದ್ದಾರೆ. ಅದರಲ್ಲಿ ಯುವಿಕಾ ಬಳಕೆ ಮಾಡಿರುವ ಪದ ವಿವಾದಕ್ಕೀಡಾಯಿತು. ಈ ವೀಡಿಯೋ ನೋಡಿದ ನೆಟ್ಟಿಗರು ಯುವಿಕಾ ಜಾತಿ ನಿಂದನೆ ಮಾಡಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಮತ್ತೆ ಕೆಲವರು ಯುವಿಕಾ ಅವರನ್ನು ಬಂಧಿಸಿ ಎಂದು ಆಗ್ರಹಿಸಿದ್ದರು.

     

    View this post on Instagram

     

    A post shared by Yuvikachaudhary (@yuvikachaudhary)

    ಯುವಿಕಾ ಎಸ್‍ಸಿ-ಎಸ್‍ಟಿ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಈಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎನ್ನುವ ಭರವಸೆ ನಮಗಿದೆ ಎಂದು ದಲಿತ ಹಕ್ಕುಗಳ ಕಾರ್ಯಕರ್ತ ರಜತ್ ಹೇಳಿದ್ದಾರೆ. ಮೇ 26ರಂದು ದೂರು ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಎಫ್‍ಐಆರ್ ದಾಖಲು ಮಾಡಿಕೊಂಡಿದ್ದಾರೆ. ಈ ವಿಚಾರ ವೈರಲ್ ಆಗುತ್ತಿದ್ದಂತೆ ಯುವಿಕಾ ಟ್ವಿಟರ್‍ನಲ್ಲಿ ಕ್ಷಮೆ ಕೇಳಿದ್ದಾರೆ.

     

    View this post on Instagram

     

    A post shared by Yuvikachaudhary (@yuvikachaudhary)

    ಕ್ಷಮೆ ಯಾಚಿಸಿರುವ ಯುವಿಕಾ, ವೀಡಿಯೋದಲ್ಲಿ ಬಳಕೆ ಮಾಡಿರುವ ಪದದ ಅರ್ಥ ನನಗೆ ಗೊತ್ತಿರಲಿಲ್ಲ. ಯಾರನ್ನೂ ನೋಯಿಸುವ ಉದ್ದೇಶ ನನ್ನದಾಗಿರಲಿಲ್ಲ. ನಾನು ಯಾರನ್ನೂ ಯಾವತ್ತೂ ನೋಯಿಸುವುದಿಲ್ಲ. ದಯವಿಟ್ಟು ಕ್ಷಮಿಸಿ… ಎಲ್ಲರೂ ಅರ್ಥ ಮಾಡಿಕೊಳ್ಳುತ್ತೀರಿ ಅಂತ ಭಾವಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.


    ಕ್ಷಮೆ ಕೇಳಿರುವ ನಟಿ ಯುವಿಕಾ ಅವರ ಪೋಸ್ಟ್​ಗೆ ಕಮೆಂಟ್ ಮಾಡಿರುವ ಅವರ ಪತಿ ಪ್ರಿನ್ಸ್, ತಿಳಿಯದೆ ಆದ ತಪ್ಪಿಗೆ ಕ್ಷಮೆ ಕೇಳಿದ್ದೀಯಾ. ನಿನ್ನೊಂದಿಗೆ ನಾನಿದ್ದೇನೆ ಎಂದಿದ್ದಾರೆ. ನೆಟ್ಟಿಗರು ಮಾತ್ರ ನಟಿ ಹೇಳಿಕೆಯ ಕುರಿತು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

  • 150 ರೂ. ಖರ್ಚಿನಲ್ಲಿ ಮದುವೆಯಾದ ಕಿರುತೆರೆ ನಟ

    150 ರೂ. ಖರ್ಚಿನಲ್ಲಿ ಮದುವೆಯಾದ ಕಿರುತೆರೆ ನಟ

    ಇಲ್ಲೊಂದು ಜೋಡಿ 150 ರೂಪಾಯಿ ಖರ್ಚಿನಲ್ಲಿ ಮದುವೆ ಆಗಿ ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ. ಹೀಗೆ ಸಿಂಪಲ್ ಆಗಿ ಬಾಳ ಬಂಧನಕ್ಕೆ ಒಳಗಾಗಿರುವುದು ಕಿರುತರೆ ಖ್ಯಾತಿಯ ನಟ ವಿರಾಫ್ ಪಟೇಲ್ ಮತ್ತು ನಟಿ ಸಲೋನಿ ಖನ್ನಾ ಆಗಿದ್ದಾರೆ.

     

    View this post on Instagram

     

    A post shared by Viraf Patell (@virafpp)

    ಕಿರುತೆರೆಯಲ್ಲಿ ಹೆಚ್ಚು ಫೇಮಸ್ ಆಗಿರುವ ವಿರಾಫ್ ಪಟೇಲ್ ಮತ್ತು ಸಲೋನಿ ಖನ್ನಾ ಪರಸ್ಪರ ಪ್ರೀತಿಸುತ್ತಿದ್ದರು. ಫೆಬ್ರವರಿಯಲ್ಲಿ ಈ ಜೋಡಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅದಕ್ಕಿಂತಲೂ ಅದ್ದೂರಿಯಾಗಿ ಮದುವೆ ಆಗಬೇಕು ಎಂಬುದು ವಿರಾಫ್ ಪಟೇಲ್ ಮತ್ತು ಸಲೋನಿ ಖನ್ನಾ ಅವರ ಆಸೆ ಆಗಿತ್ತು. ಆದರೆ ಅದಕ್ಕೆ ಕೊರೊನಾ ಅವಕಾಶ ನೀಡಿಲ್ಲ. ಅದರ ಬದಲು ಸದ್ಯದ ಪರಿಸ್ಥಿತಿಗೆ ತಕ್ಕಂತೆ ಸಿಂಪಲ್ ಮದುವೆಯನ್ನೇ ಈ ಸೆಲೆಬ್ರಿಟಿಗಳು ಆಯ್ಕೆ ಮಾಡಿಕೊಂಡಿದ್ದಾರೆ.

     

    View this post on Instagram

     

    A post shared by Saloni Khanna Patel (@salk.04)

    ಮೇ 6ರಂದು ದಿಢೀರ್ ಎಂದು ವಿರಾಫ್ ಪಟೇಲ್ ಮತ್ತು ಸಲೋನಿ ಖನ್ನಾ ಬಾಳ ಬಂಧನಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಚ್ಚರಿ ಎಂದರೆ ಮದುವೆಯ ಉಂಗುರದ ಬದಲಿಗೆ ಪತ್ನಿಗೆ ರಬ್ಬರ್ ಬ್ಯಾಂಡ್ ನೀಡಿದ್ದಾರಂತೆ. ವಿರಾಫ್ ಹೊಸ ಸೀರೆ ಖರೀದಿಸುವ ಸಂಭ್ರಮ ಇಲ್ಲ. ವಧುವಿನ ಸೀರೆಯನ್ನು ಬಾಡಿಗೆಗೆ ತರಲಾಗಿದೆ. ಸ್ನೇಹಿತರೇ ಸೇರಿಕೊಂಡು ಮೇಕಪ್ ಮತ್ತು ಕೇಶ ವಿನ್ಯಾಸ ಮಾಡಿದ್ದಾರೆ. ಒಟ್ಟು ಈ ಮದುವೆಗೆ ಅತಿಥಿಗಳಾಗಿದ್ದವರು ಮೂರು ಜನರ ಮಾತ್ರ. ಇನ್ನುಳಿದ ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತ್ರ ಈ ಮದುವೆಯನ್ನು ನೋಡುವ ಅವಕಾಶ ಕಲ್ಪಿಸಲಾಯಿತು. ಒಂದು ಗಂಟೆಯಲ್ಲಿ ಮದುವೆ ಮುಗಿಯಿತು.

     

    View this post on Instagram

     

    A post shared by Saloni Khanna Patel (@salk.04)

    ಈ ಸಿಂಪಲ್ ವಿವಾವಹಕ್ಕೆ ಆದ ಖರ್ಚು ಕೇವಲ 150 ರೂಪಾಯಿ ಎಂದು ಸಲೋನಿ ಖನ್ನಾ ತಿಳಿಸಿದ್ದಾರೆ. ಇದು ಪರ್ಫೆಕ್ಟ್ ಮ್ಯಾರೇಜ್. ಪೈಸಾ ವಸೂಲ್ ಆಯ್ತು, ಮದುವೆ ಒಪ್ಪಿಗೆ ಆಯ್ತು ಎಂಬ ಕ್ಯಾಪ್ಷನ್‍ನೊಂದಿಗೆ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

  • ಛೋಟಾ ಬಾಂಬೆ ಚಿತ್ರದ ನಟಿ, ಮಾಜಿ ಗಗನಸಖಿ, ಮಿಸ್ ಕರ್ನಾಟಕ ಅರೆಸ್ಟ್

    ಛೋಟಾ ಬಾಂಬೆ ಚಿತ್ರದ ನಟಿ, ಮಾಜಿ ಗಗನಸಖಿ, ಮಿಸ್ ಕರ್ನಾಟಕ ಅರೆಸ್ಟ್

    – ಪ್ರೀತಿಗೆ ಅಡ್ಡ ಬಂದ ಅಣ್ಣನ ಕೊಲೆ ಮಾಡಿಸಿದ ಆರೋಪ

    ಹುಬ್ಬಳ್ಳಿ: ತನ್ನ ಪ್ರೀತಿಗೆ ಅಡ್ಡ ಬಂದ ಸಹೋದರನ ಕೊಲೆಗೆ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಛೋಟಾ ಮುಂಬೈ ಚಿತ್ರದ ನಟಿಯನ್ನ ಪೊಲೀಸರು ಬಂಧಿಸಿದ್ದಾರೆ. ನಟಿ, ಮಾಜಿ ಗಗನಸಖಿ ಹಾಗೂ ಮಿಸ್ ಕರ್ನಾಟಕ ಕಿರೀಟ ಪಡೆದಿದ್ದ ನಟಿ ಶನಯಾ ಕಾಟವೇಯನ್ನ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಬಂಧಿಸಿದ್ದರು. ಸದ್ಯ ನಟಿಯನ್ನ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

    ನಟಿ ಶನಯಾ ಕಾಟವೇ ತನ್ನ ಸೆಲೆಬ್ರಿಟಿ ಮ್ಯಾನೇಜರ್ ಆಗಿದ್ದ ನಿಯಾಜ್ ಅಹ್ಮದ್ ಎಂಬಾತನನ್ನ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದಳು. ತನ್ನ ಪ್ರೀತಿಗೆ ಅಡ್ಡಿಯಾಗಿದ್ದ ಸಹೋದರ ರಾಕೇಶನನ್ನ ನಟಿಯ ಪ್ರಿಯತಮ ಹಾಗೂ ಸಹಚರರು ಕೊಲೆ ಮಾಡಿದ್ದರು.

    ಎಪ್ರಿಲ್ 9ರಂದು ನಟಿಯ ಸಹೋದರ ರಾಕೇಶನನ್ನ ಕೊಲೆ ಮಾಡಲಾಗಿತ್ತು. ಕೊಲೆ ಬಳಿಕ ಮೂರು ದಿನ ಶವವನ್ನ ಕಾರಿನಲ್ಲೆ ಮುಚ್ಚಿಡಲಾಗಿತ್ತು. ಆದ್ರೆ ಶವದ ವಾಸನೆ ಬರುತ್ತಿದ್ದಂತೆ ರುಂಡ, ಮುಂಡ, ಎರಡು ಕೈ ಎರಡು ಕಾಲುಗಳನ್ನ ಕತ್ತರಿಸಿ ದೇಹವನ್ನ ಫೀಸ್ ಫೀಸ್ ಮಾಡಿ ಬೇರೆ ಬೇರೆ ಕಡೆ ಎಸೆಯಲಾಗಿತ್ತು.

    ಈ ಪ್ರಕರಣ ಕುರಿತು ತನಿಖೆ ಆರಂಭಿಸಿದ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಇತ್ತೀಚಿಗೆ ನಿಯಾಜ್ ಅಹ್ಮದ್ ಕಟಿಗಾರ, ತೌಸೀಫ ಅಹ್ಮದ್ ಚೆನ್ನಾಪುರ, ಅಲ್ತಾಫ ತಾಜುದ್ದೀನ ಮುಲ್ಲಾ ಹಾಗೂ ಅಮನ ಅಲಿಯಾಸ್ ಮಹ್ಮದ ಉಮರ ಗಿರಣಿವಾಲೆ ಎಂಬವರನ್ನ ಬಂಧನ ಮಾಡಿದ್ರು.

    ಇದೀಗ ಪ್ರಕರಣವನ್ನ ಮತ್ತಷ್ಟು ಆಳವಾಗಿ ತನಿಖೆ ನಡೆಸಿದ ಪೊಲೀಸರು ಇದೇ ಪ್ರಕರಣದಲ್ಲಿ ನಟಿ ಶನಾಯ ಕಾಟವೆ ಸಹಿತ ಮಲೀಕ್, ಫಿರೋಜ್ ಹಾಗೂ ಶೈಪುದ್ದೀನ ಎಂಬಾತನನ್ನ ಬಂಧನ ಮಾಡಿದ್ದಾರೆ. ಈ ಮೂಲಕ ಸಹೋದರನ ಕೊಲೆ ಪ್ರಕರಣದಲ್ಲಿ ನಟಿ ಸೇರಿದಂತೆ ಎಂಟು ಜನರನ್ನ ಬಂಧನ ಮಾಡಲಾಗಿದೆ.

    ರಾಕೇಶ್ ಕಾಟವೇ ಕೊಲೆ ಪ್ರಕರಣದಲ್ಲಿ ಇದೂವರೆಗೂ ಒಟ್ಟು ಎಂಟು ಜನರನ್ನ ಪೊಲೀಸರು ಬಂಧಿಸುವ ಮೂಲಕ ಪೊಲೀಸ ಇಲಾಖೆಗೆ ಚಾಲೆಂಜ್ ಆಗಿದ್ದ ಪ್ರಕರಣವನ್ನ ಭೇಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಧಾರವಾಡ ಎಸ್ ಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

  • ಕೋವಿಡ್ ಲಸಿಕೆ ಪಡೆದುಕೊಂಡ 6 ದಿನಕ್ಕೆ ನಗ್ಮಾಗೆ ಕೊರೊನಾ

    ಕೋವಿಡ್ ಲಸಿಕೆ ಪಡೆದುಕೊಂಡ 6 ದಿನಕ್ಕೆ ನಗ್ಮಾಗೆ ಕೊರೊನಾ

    ಮುಂಬೈ: ನಟಿ ಕಂ ರಾಜಕಾರಣಿ ನಗ್ಮಾ ಅವರಿಗೆ ಬುಧವಾರ ಕೊರೊನಾ ಪಾಸಿಟಿವ್ ಬಂದಿದ್ದು, ಸದ್ಯ ಅವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

    50 ವರ್ಷ ನಗ್ಮಾ ಅವರು ಟ್ವೀಟ್ ಮಾಡಿದ್ದು, ಕೆಲ ದಿನಗಳ ಹಿಂದೆ ಕೋವಿಡ್ 19 ಮೊದಲನೇ ಡೋಸ್ ಲಸಿಕೆ ತೆಗೆದುಕೊಂಡಿದ್ದೆ. ಇದೀಗ ಮತ್ತೆ ಕೊರೊನಾ ಟೆಸ್ನ್ ನಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಸದ್ಯ ಮನೆಯಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ದಯವಿಟ್ಟು ಎಲ್ಲಾರೂ ಜಾಗರೂಕರಾಗಿರಿ. ಅಲ್ಲದೆ ಈಗಾಗಲೇ ಮೊದಲೇ ಡೋಸ್ ಪಡೆದುಕೊಂಡವರು ಕೂಡ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ನಗ್ಮಾ ಅವರು ಏಪ್ರಿಲ್ 2ರಂದು ಮೊದಲನೇ ಲಸಿಕೆ ಹಾಕಿಸಿಕೊಂಡಿದ್ದರು. ಆ ಬಳಿಕ ಇದೀಗ ಮತ್ತೆ ಟೆಸ್ಟ್ ಮಾಡಿದಾಗ ಪಾಸಿಟಿವ್ ಇರುವುದು ಗೊತ್ತಾಗಿದ್ದು, ಸದ್ಯ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

    ನಗ್ಮಾ ಅವರು ತೆಲುಗು, ತಮಿಳು, ಭೊಜ್ ಪುರಿ, ಮಲಯಾಳಂ, ಕನ್ನಡ ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿ ಮಿಂಚಿದ್ದಾರೆ.

  • ರೋಜಾ ಆಸ್ಪತ್ರೆಗೆ ದಾಖಲು

    ರೋಜಾ ಆಸ್ಪತ್ರೆಗೆ ದಾಖಲು

    ಚೆನ್ನೈ: ನಟಿ, ರಾಜಕಾರಣಿ ಆರ್.ಕೆ ರೋಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಐಸಿಯುನಿಂದ ಸಾಮಾನ್ಯ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ.

    ವೈಎಸ್‍ಆರ್‍ಸಿಪಿ ಶಾಸಕಿ ಮತ್ತು ಎಪಿಐಐಸಿ ಮುಖ್ಯಸ್ಥೆ ರೋಜಾ ಶಸ್ತ್ರಚಿಕಿತ್ಸೆಗೆಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರೋಜಾ ಅವರ ಪತಿ ಸೆಲ್ವಮಣಿ ಆಡಿಯೋ ಸಂದೇಶದ ಮೂಲಕವಾಗಿ ತಿಳಿಸಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ವಾರ್ಡಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

    ರೋಜಾ ಅವರ ಮೇಲೆ ವೈದ್ಯರು 2 ವಾರಗಳ ಕಾಲ ನಿಗಾ ಇಡಲಿದ್ದಾರೆ. ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಕುಟುಂಬಸ್ಥರು ಸೇರಿದಂತೆ ರೋಜಾರ ಭೇಟಿಗೆ ಯಾರಿಗೂ ಅನುಮತಿ ಇಲ್ಲ ಎಂದು ಸೆಲ್ವಮಣಿ ಹೇಳಿದ್ದಾರೆ.

    ಕಳೆದ ವರ್ಷವೇ ರೋಜಾ ಅವರಿಗೆ ಆಪರೇಷನ್ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿತ್ತು. ಜನವರಿಯಲ್ಲಿ ಸ್ಥಳೀಯ ಚುನಾವಣೆ ಇರುವುದರಿಂದ ಚಿಕಿತ್ಸೆ ತೆಗೆದುಕೊಳ್ಳುವುದು ವಿಳಂಬವಾಯಿತು. ಹೀಗಾಗಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.