Tag: actress

  • ಪರಿಚಯಸ್ಥನಿಂದ್ಲೇ ನಟಿಯ ಮೇಲೆ ಅತ್ಯಾಚಾರ- ವಿಡಿಯೋ ರೆಕಾರ್ಡ್

    ಪರಿಚಯಸ್ಥನಿಂದ್ಲೇ ನಟಿಯ ಮೇಲೆ ಅತ್ಯಾಚಾರ- ವಿಡಿಯೋ ರೆಕಾರ್ಡ್

    – ನಟಿಯ ಅಪಾರ್ಟ್‍ಮೆಂಟಿಗೆ ಬಂದು ರೇಪ್

    ಕೊಲ್ಕತ್ತಾ: ಬೆಂಗಾಲಿಯ 26 ವರ್ಷದ ನಟಿ ಮತ್ತು ರೂಪದರ್ಶಿಯ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಕೊಲ್ಕತ್ತಾದ ಬಿಜೋಯ್ ಪ್ರದೇಶದಲ್ಲಿ ವರದಿಯಾಗಿದೆ.

    ಕೆಲವು ಟಿವಿ ಕಾರ್ಯಕ್ರಮಗಳಲ್ಲಿ ಮೂಲಕ ನಟಿ ಖ್ಯಾತಿ ಪಡೆದುಕೊಂಡಿದ್ದರು. ಜುಲೈ 8 ರಂದು ಜಾದವ್‍ಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಾಗಿದೆ.

    ಜುಲೈ 5 ರಂದು ನಟಿಗೆ ಪರಿಚಿತವಿರುವ ವ್ಯಕ್ತಿ ಬಿಜೋಯ್‍ದಲ್ಲಿರುವ ಅವರ ಅಪಾರ್ಟ್‍ಮೆಂಟಿಗೆ ಬಂದಿದ್ದನು. ಆತ ಆರ್ಥಿಕ ಸಹಾಯವನ್ನು ಕೇಳಿಕೊಂಡು ನಟಿಯ ಬಳಿ ಬಂದಿದ್ದನು. ಆದರೆ ಫ್ಲ್ಯಾಟ್‍ನಲ್ಲಿ ನಟಿ ಏಕಾಂಗಿಯಾಗಿ ಇರುವುದನ್ನು ನೋಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ವರದಿಯಾಗಿದೆ.

    ಅಷ್ಟೇ ಅಲ್ಲದೇ ಆತ ಅದನ್ನು ತನ್ನ ಫೋನ್‍ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ. ಒಂದು ವೇಳೆ ಪೊಲೀಸರಿಗೆ ದೂರು ನೀಡಿದರೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ನಟಿ ಧೈರ್ಯದಿಂದ ಜಾದವ್‍ಪುರ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ ಎಂದು ಪೊಲಿಸರು ತುಳಿಸಿದ್ದಾರೆ.

    ನಟಿ ಮೂಲತಃ ಪಶ್ಚಿಮ ಬಂಗಾಳದ ನಾಡಿಯಾ ಮೂಲದವರಾಗಿದ್ದು, ಕೊಲ್ಕತ್ತಾದಲ್ಲಿ ವಾಸಿಸುತ್ತಿದ್ದರು. ಅತ್ಯಾಚಾರ ಎಸಗಿರುವ ವ್ಯಕ್ತಿ ಮತ್ತು ನಟಿ ಇಬ್ಬರು ಸ್ನೇಹಿತರಾಗಿದ್ದು, ಕೆಲವು ವರ್ಷಗಳ ಹಿಂದೆ ಜಗಳ ಮಾಡಿಕೊಂಡು ದೂರವಾಗಿದ್ದರು. ಲಾಕ್‍ಡೌನ್ ಸಮಯದಲ್ಲಿ ಆ ವ್ಯಕ್ತಿ ಫೇಸ್‍ಬುಕ್ ಮೂಲಕ ಮತ್ತೆ ನಟಿಯನ್ನು ಸಂಪರ್ಕಿಸಿ ಅವಳನ್ನು ಭೇಟಿಯಾಗುವಂತೆ ಮನವಿ ಮಾಡಿಕೊಂಡಿದ್ದಾನೆ. ಆದರೆ ನಟಿ ಆತನನ್ನು ಭೇಟಿಯಾಗಲು ನಿರಾಕರಿಸಿದ್ದರು ಎಂದು ತಿಳಿದು ಬಂದಿದೆ.

    ಕೊನೆಗೆ ಆ ವ್ಯಕ್ತಿ ತನ್ನ ವ್ಯವಹಾರದಲ್ಲಿ ನಷ್ಟವಾಗಿದೆ. ಹೀಗಾಗಿ ತನಗೆ ಆರ್ಥಿಕವಾಗಿ ಸಹಾಯ ಮಾಡುವಂತೆ ಮನವೊಲಿಸಿದ್ದಾನೆ. ಹೀಗಾಗಿ ನಟಿಯಿದ್ದ ಅಪಾರ್ಟ್‍ಮೆಂಟಿಗೆ ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯಕ್ಕೆ ಪೊಲೀಸರು ನಟಿಯ ಹೇಳಿಕೆಯನ್ನು ದಾಖಲಿಸಿಕೊಂಡು ಈ ಕುರಿತು ತನಿಖೆ ಮುಂದುವರಿಸಿದ್ದಾರೆ.

  • ಜ್ಯೂಸಿನಲ್ಲಿ ಮತ್ತು ಬರೋ ಔಷಧಿ ಹಾಕಿ ಸ್ಯಾಂಡಲ್‍ವುಡ್ ನಟಿ ಮೇಲೆ ರೇಪ್

    ಜ್ಯೂಸಿನಲ್ಲಿ ಮತ್ತು ಬರೋ ಔಷಧಿ ಹಾಕಿ ಸ್ಯಾಂಡಲ್‍ವುಡ್ ನಟಿ ಮೇಲೆ ರೇಪ್

    – ಕೃತ್ಯದ ವಿಡಿಯೋ ತೋರಿಸಿ ಪದೇ ಪದೇ ಅತ್ಯಾಚಾರ
    – ಬೆದರಿಸಿ 20 ಲಕ್ಷ ಹಣ ವಸೂಲಿ

    ಬೆಂಗಳೂರು: ಜ್ಯೂಸಿನಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿ ಕುಡಿಸಿ ಸ್ಯಾಂಡಲ್‍ವುಡ್ ನಟಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಆರೋಪಿಯನ್ನು ಮೋಹಿತ್ ಎಂದು ಗುರುತಿಸಲಾಗಿದೆ. ಈತ ಖಾಸಗಿ ಕಂಪನಿಯಲ್ಲಿ ಸಿಇಒ ಆಗಿ ಕೆಲಸ ಮಾಡುತ್ತಿದ್ದು, ಅತ್ಯಾಚಾರ ಎಸಗಿದ್ದಾನೆ ಎಂದು ನಟಿ ಆರೋಪ ಮಾಡುತ್ತಿದ್ದಾರೆ.

    ಏನಿದು ಪ್ರಕರಣ?
    ಮೋಹಿತ್ ಮತ್ತು ನಟಿ ಕಳೆದ ವರ್ಷ ರೆಸ್ಟೋರೆಂಟ್‍ನಲ್ಲಿ ಪರಿಚಯವಾಗಿದ್ದರು. ಆರೋಪಿ ಮೋಹಿತ್ ತನ್ನ ಕಂಪನಿ ಬ್ರಾಂಡ್ ಅಂಬಾಸಿಡರ್ ಮಾಡುವುದಾಗಿ ನಟಿಯನ್ನು ಪರಿಚಯ ಮಾಡಿಕೊಂಡಿದ್ದನು. ಪರಿಚಯ ಸ್ನೇಹವಾಗಿ ಮೋಹಿತ್ ನಟಿಯ ಜೊತೆ ಸಲುಗೆ ಬೆಳೆಸಿದ್ದನು. ನಂತರ ಆರೋಪಿ ಮೋಹಿತ್ ನಟಿಯ ಹುಟ್ಟುಹಬ್ಬವನ್ನು ತನ್ನ ಮನೆಯಲ್ಲೇ ಆಯೋಜನೆ ಮಾಡಿದ್ದನು.

    ಈ ವೇಳೆ ನಟಿಗೆ ಜ್ಯೂಸಿನಲ್ಲಿ ಮತ್ತು ಬರುವ ಮಾತ್ರೆ ಹಾಕಿ ಮಿಕ್ಸ್ ಮಾಡಿದ್ದಾನೆ. ಅದನ್ನು ಕುಡಿದ ನಟಿ ಪ್ರಜ್ಞೆ ತಪ್ಪಿದ್ದು, ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮರುದಿನ ಬೆಳಗ್ಗೆ ನಟಿಗೆ ನಿನ್ನನ್ನು ಅತ್ಯಾಚಾರ ಮಾಡಿರುವುದಾಗಿ ಆರೋಪಿ ಮೋಹಿತ್ ತಿಳಿಸಿ ಬೆದರಿಕೆ ಹಾಕಿದ್ದಾನೆ.

    ಆರೋಪಿ ಮೋಹಿತ್, ಮೊಬೈಲ್‍ನಲ್ಲಿ ಎಲ್ಲಾವೂ ರೆಕಾರ್ಡ್ ಆಗಿದೆ. ನಾನು ಹೇಳಿದಂತೆ ಕೇಳಬೇಕು ಎಂದು ಬೆದರಿಕೆ ಹಾಕಿದ್ದನು. ಅಷ್ಟೇ ಅಲ್ಲದೇ ಮೊಬೈಲ್ ತೋರಿಸಿ ಮತ್ತೆ ಅತ್ಯಾಚಾರ ಮಾಡಿದ್ದಾನೆ. ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ವಿಡಿಯೋವನ್ನು ಯೂಟ್ಯೂಬ್‍ಗೆ ಹಾಕುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾನೆ. ಇದೇ ರೀತಿ ಬೆದರಿಕೆ ಹಾಕಿ ಸುಮಾರು 20 ಲಕ್ಷ ಹಣ ವಸೂಲಿ ಮಾಡಿದ್ದಾನೆ ಎಂದು ನಟಿ ದೂರಿನಲ್ಲಿ ಆರೋಪಿಸಿದ್ದಾರೆ.

    ಆರೋಪಿ ಮೋಹಿತ್ ಈಗಲೂ ವಿಡಿಯೋ ತೋರಿಸಿ ಬ್ಲಾಕ್‍ಮೇಲ್ ಮಾಡುತ್ತಿದ್ದಾನೆ ಎಂದು ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ನಟಿ ದೂರು ದಾಖಲಿಸಿದ್ದಾರೆ. ನಟಿ ದೂರು ನೀಡಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ಲಾಕ್‍ಡೌನ್ ವೇಳೆ ಸರಳವಾಗಿ ಮೂರನೇ ಮದ್ವೆಯಾದ 40ರ ನಟಿ

    ಲಾಕ್‍ಡೌನ್ ವೇಳೆ ಸರಳವಾಗಿ ಮೂರನೇ ಮದ್ವೆಯಾದ 40ರ ನಟಿ

    ಚೆನ್ನೈ: ಮಹಾಮಾರಿ ಕೊರೊನಾ ಲಾಕ್‍ಡೌನ್ ಆಗಿದ್ದ ವೇಳೆಯೂ ಅನೇಕ ನಟ-ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ತಮಿಳಿನ ನಟಿಯೊಬ್ಬರು ಸರಳವಾಗಿ ಮೂರನೇ ಮದುವೆಯಾಗಿದ್ದಾರೆ.

    ನಟಿ ವನಿತಾ ವಿಜಯಕುಮಾರ್ ವಿಎಫ್‍ಎಕ್ಸ್ ತಂತ್ರಜ್ಞ ಪೀಟರ್ ಪೌಲ್ ಜೊತೆ ಮೂರನೇ ಮದುವೆಯಾಗಿದ್ದಾರೆ. ಜೂನ್ 27ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ಇಬ್ಬರು ವಿವಾಹವಾಗಿದ್ದಾರೆ. ಚೆನ್ನೈನಲ್ಲಿ ಇವರ ವಿವಾಹ ಸಮಾರಂಭ ನಡೆದಿದೆ. ಮದುವೆಯಲ್ಲಿ ಕುಟುಂಬದವರು ಮತ್ತು ಕೆಲವು ಆಪ್ತರು ಮಾತ್ರ ಭಾಗವಹಿಸಿದ್ದು, ಜೋಡಿಗೆ ಶುಭಾಶಯ ಕೋರಿದ್ದಾರೆ. ನಟಿ ವನಿತಾಗೆ ಈಗಾಗಲೇ ಎರಡು ಮದುವೆಯಾಗಿದ್ದು, ವಿಚ್ಛೇದನ ಪಡೆದುಕೊಂಡಿದ್ದಾರೆ. ಇದು ಮೂರನೇ ಮದುವೆಯಾಗಿದೆ.

    ನಟಿ ವನಿತಾ 2000 ರಲ್ಲಿ ಕಿರುತೆರೆ ನಟ ಆಕಾಶ್ ಜೊತೆಗೆ ಮದುವೆಯಾಗಿದ್ದರು. ಈ ದಂಪತಿಗೆ ಮಗ ವಿಜಯ್ ಶ್ರೀ ಹರಿ ಹಾಗೂ ಮಗಳು ಜೋವಿಕಾ ಮಕ್ಕಳಿದ್ದರು. ಆದರೆ 2007ರಲ್ಲಿ ವನಿತಾ ವಿಚ್ಛೇದನ ಪಡೆದುಕೊಂಡಿದ್ದರು. ಅದೇ ವರ್ಷ ಉದ್ಯಮಿ ಆನಂದ್ ಜಯರಾಜನ್ ಜೊತೆ ಎರಡನೇ ವಿವಾಹವಾಗಿದ್ದರು. ಅವರಿಗೆ ಜಯನಿತಾ ಜನಿಸಿದ್ದರು. 2012ರಲ್ಲಿ ಅವರಿಂದಲೂ ದೂರವಾಗಿದ್ದರು. ಇನ್ನೂ 2013-2017 ರವರೆಗೆ ನಿರ್ದೇಶಕ ರಾಬರ್ಟ್ ಜೊತೆಗೆ ವನಿತಾ ಲಿವ್‍ಇನ್ ರಿಲೇಷನ್‍ಶಿಪ್‍ನಲ್ಲಿದ್ದರು ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಈಗ ಪೀಟರ್ ಪೌಲ್ ಜೊತೆ ಮೂರನೇ ಮದುವೆಯಾಗಿದ್ದಾರೆ.

    “ಪೀಟರ್ ಭೇಟಿ ಮಾಡಿದಾಗ ಪ್ರೀತಿಯಲ್ಲಿ ಬಿದ್ದೆ. ಮದುವೆಯಲ್ಲಿ ನನ್ನ ಕೈ ನೀಡುವಂತೆ ಪೀಟರ್ ಕೇಳಿದರು. ಆಗ ನಾನು ಏನು ಉತ್ತರ ಕೊಡದೆ ಮೂಕವಿಸ್ಮಿತಳಾದೆ. ಈ ವೇಳೆ ನನ್ನ ಮಕ್ಕಳು ಇದಕ್ಕೆ ಒಪ್ಪಬೇಕು ಎಂದು ಅವರಿಗೆ ಹೇಳಿದೆ. ನಂತರ ನನ್ನ ಮಕ್ಕಳೆದರು ಪೀಟರ್ ಬಗ್ಗೆ ಹೇಳಿದಾಗ ಅವರು ಸಂತಸದಿಂದ ಒಪ್ಪಿಕೊಂಡರು. ನನ್ನ ಪಾಲಿಗೆ ಸಂಭವಿಸುತ್ತಿರುವ ಅತ್ಯುತ್ತಮ ಗಳಿಗೆ ಎಂದು ಮಕ್ಕಳು ಹೇಳಿದಾಗ ನನ್ನ ಕಣ್ಣಲ್ಲಿ ನೀರು ಬಂತು” ಎಂದು ವನಿತಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ವನಿತಾ ಕಾಲಿವುಡ್‍ನ ಹಿರಿಯ ನಟ ವಿಜಯ್ ಕುಮಾರ್ ಪುತ್ರಿಯಾಗಿದ್ದು, ತಮಿಳು ಮತ್ತು ಮಲೆಯಾಳಂ ಸಿನಿಮಾದಲ್ಲಿ ನಟಿಸಿದ್ದಾರೆ. ‘ಚಂದ್ರಲೇಖಾ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ಹೆಚ್ಚಾಗಿ ಸಿನಿಮಾಗಳಲ್ಲಿ ಅಭಿನಯಿಸಿಲ್ಲ. ಆದರೆ ಕಿರುತೆರೆಯಲ್ಲಿ ಅನೇಕ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ತಮಿಳಿನ ಬಿಗ್‍ಬಾಸ್ ರಿಯಾಲಿಟಿ ಶೋಗೂ ಹೊಗಿದ್ದರು.

    ವನಿತಾ ಸಹೋದರ ಅರುಣ್ ವಿಜಯ್ ಕೂಡ ನಟರಾಗಿದ್ದು, ಕನ್ನಡದಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯದ ‘ಚಕ್ರವ್ಯೂಹ’ ಚಿತ್ರದಲ್ಲಿ ನಟಿಸಿದ್ದಾರೆ. ಸಹೋದರಿ ಪ್ರೀತಾ, ಸಾಯಿಕುಮಾರ್ ಜತೆ ‘ಓಂ ನಮಃ ಶಿವಾಯ’ ಚಿತ್ರದಲ್ಲಿ ನಟಿಸಿದ್ದರು. ಇನ್ನೂ ಮತ್ತೊಬ್ಬ ಸಹೋದರಿಯರಾದ ಶ್ರೀದೇವಿ ಅವರು ಶ್ರೀ ಮುರಳಿ ನಿರ್ದೇಶನ ‘ಪ್ರೀತಿಗಾಗಿ’, ಶಿವರಾಜ್ ಕುಮಾರ್ ನಟನೆಯ ‘ಕಾಂಚನಗಂಗಾ’, ರವಿಚಂದ್ರನ್ ನಟನೆಯ ‘ಲಕ್ಷ್ಮಣ’ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

    https://www.instagram.com/p/CB72v_TiGW-/?utm_source=ig_embed

  • ಮದ್ವೆ ಆಗೋದಾಗಿ ನಂಬಿಸಿ ‘ಜೋಶ್’ ಸಿನಿಮಾ ಖ್ಯಾತಿಯ ನಟಿಗೆ ಬ್ಲ್ಯಾಕ್‍ಮೇಲ್- ಆರೋಪಿಗಳು ಅರೆಸ್ಟ್

    ಮದ್ವೆ ಆಗೋದಾಗಿ ನಂಬಿಸಿ ‘ಜೋಶ್’ ಸಿನಿಮಾ ಖ್ಯಾತಿಯ ನಟಿಗೆ ಬ್ಲ್ಯಾಕ್‍ಮೇಲ್- ಆರೋಪಿಗಳು ಅರೆಸ್ಟ್

    ತಿರುವನಂತಪುರಂ: ದಕ್ಷಿಣ ಭಾರತದ ನಟಿ ಶಮ್ನಾ ಕಾಸಿಮ್ ಅವರಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಲು ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

    ನಟಿ ಕಾಸಿಮ್‍ನ ತಂದೆ ಪೊಲೀಸರಿಗೆ ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳು ಕೆಲವು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ನಟಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದರು. ನಾಲ್ವರು ಆರೋಪಿಗಳು ತ್ರಿಶೂರ್ ಮೂಲದವರಾಗಿದ್ದು, ನಟಿಗೆ ಮದುವೆ ಆಗುವುದಾಗಿ ನಂಬಿಸಿ ಹಣ ಸೂಲಿಗೆ ಮಾಡಲು ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

     

    ಮಾರ್ಚ್ ತಿಂಗಳಲ್ಲಿ ಮದುವೆಯ ಬಗ್ಗೆ ಮಾತನಾಡಲು ಈ ಗ್ಯಾಂಗ್‍ನ ಒಬ್ಬ ವ್ಯಕ್ತಿ ನಟಿಯ ತಂದೆಯನ್ನು ಭೇಟಿ ಮಾಡಿದ್ದನು. ಈ ವೇಳೆ ವರ ದುಬೈನಲ್ಲಿ ಬಿಸಿನೆಸ್ ಮಾಡುತ್ತಿದ್ದಾನೆ. ಕೇರಳದ ಕೋಳಿಕೋಡ್‍ನಲ್ಲಿ ಕುಟುಂಬದವರು ವಾಸಿಸುತ್ತಿದ್ದಾರೆ ಎಂದು ನಂಬಿಸಿದ್ದಾನೆ. ನಕಲಿ ಪ್ರೋಫೈಲ್ ಕೂಡ ರೆಡಿ ಮಾಡಿದ್ದು, ನಟಿ ಕಾಸಿಮ್‍ಗೆ ಅಲ್ವರ್ ಅಲಿ ಎಂದು ಪರಿಯಚ ಮಾಡಿಕೊಂಡು ಫೋನಿನಲ್ಲಿ ಮಾತನಾಡಿದ್ದಾನೆ.

    ನಂತರ ಈ ಗ್ಯಾಂಗ್ ಕೊಚ್ಚಿಯಲ್ಲಿರುವ ನಟಿಯ ಮನೆಗೆ ಭೇಟಿ ನೀಡಿ ಮದುವೆ ಬಗ್ಗೆ ಮಾತುಕತೆ ಮಾಡಿದ್ದರು. ಮಾತುಕತೆ ಮುಗಿಸಿ ಮನೆಯಿಂದ ಹೋಗುವಾಗ ಅವರ ಮನೆ ಮತ್ತು ಕಾರ್ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡು ಹೋಗಿದ್ದರು.

    ನಂತರ ಗ್ಯಾಂಗ್‍ನ ಓರ್ವ ಫೋನ್ ಮಾಡಿ ನಟಿಗೆ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಒಂದು ವೇಳೆ ಹಣ ನೀಡಲು ನಿರಾಕರಿಸಿದರೆ ಹಳೆಯ ಕೆಲವು ವಿಡಿಯೋಗಳನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ನಟಿ ಹಣ ಕೊಡಲು ನಿರಾಕರಿಸಿದ್ದಾರೆ. ಆಗ ಆರೋಪಿ ತಂದೆಗೆ ನಿರಂತರವಾಗಿ ಫೋನ್ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೊನೆಯ ನಟಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ತಂದೆ ಮತ್ತು ನಟಿಗೆ ಮಾಡಿದ ಫೋನ್ ಡಿಟೈಲ್ಸ್ ಮೂಲಕ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಆರೋಪಿಗಳನ್ನು ವಿಚಾರಣೆ ಮಾಡುತ್ತಿದ್ದಾರೆ.

    ನಮ್ಮಂತೆ ಬೇರೆ ಯಾರೂ ಇಂತಹವರ ಮೋಸದ ಬಲೆಗೆ ಬೀಳಬಾರದು. ಅದಕ್ಕಾಗಿಯೇ ನಾನು ನನ್ನ ಪೋಷಕರಿಗೆ ದೂರು ನೀಡಲು ಹೇಳಿದೆ. ಅವರು ಹಣ ಸುಲಿಗೆ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ನಟಿ ಹೇಳಿದ್ದಾರೆ.

    ನಟಿ ಶಮ್ನಾ ಕಾಸಿಮ್ ಅವರು ಪೂರ್ಣ ಹೆಸರಿನ ಮೂಲಕ ಚಿತ್ರರಂಗದಲ್ಲಿ ಖ್ಯಾತಿ ಪಡೆದಿದ್ದಾರೆ. 2007ರಲ್ಲಿ ನಟನಾ ವೃತ್ತಿಜೀವನವನ್ನು ಪ್ರಾರಂಭಿಸಿದ ನಟಿ ಮಲಯಾಳಂ, ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ 40ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ‘ಜೋಶ್’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಖ್ಯಾತಿ ಪಡೆದುಕೊಂಡಿದ್ದಾರೆ.

  • ರಕ್ಷಣೆಯ ಮೊದಲ ಹೆಜ್ಜೆ- ಸೋನಾಕ್ಷಿ ಸಿನ್ಹಾ ಟ್ವಿಟ್ಟರ್‌ನಿಂದ ಔಟ್

    ರಕ್ಷಣೆಯ ಮೊದಲ ಹೆಜ್ಜೆ- ಸೋನಾಕ್ಷಿ ಸಿನ್ಹಾ ಟ್ವಿಟ್ಟರ್‌ನಿಂದ ಔಟ್

    ಮುಂಬೈ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿರುತ್ತಾರೆ. ಇಸ್‍ಸ್ಟಾಗ್ರಾಮ್‍ನಿಂದ ಟ್ವಿಟ್ಟರ್‌ವರೆಗೆ ಪ್ರತಿ ಪ್ಲಾಟ್ಫಾರ್ಮ್ ನಲ್ಲೂ ತಮ್ಮ ಅಭಿಪ್ರಾಯಗಳೊಂದಿಗೆ ಫೋಟೋ, ವಿಡಿಯೋ ಹಾಗೂ ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಆದರೆ ಈಗ ಸೋನಾಕ್ಷಿ ಟ್ವಿಟ್ಟರ್‌ನಿಂದ ದೂರವಾಗಿದ್ದಾರೆ. ನಟಿ ತಮ್ಮ ಟ್ವಿಟ್ಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.

    33 ವರ್ಷದ ನಟಿ ಸೋನಾಕ್ಷಿ ಸಿನ್ಹಾ ಶನಿವಾರ ಸಂಜೆ ಟ್ವಿಟ್ಟರ್ ನಿಂದ ನಿರ್ಗಮಿಸುವುದಾಗಿ ಘೋಷಿಸಿದ್ದರು. ಜೊತೆಗೆ “ನಿಮ್ಮ ವಿವೇಕವನ್ನು ಕಾಪಾಡುವ ಮೊದಲ ಹೆಜ್ಜೆ ನಕಾರಾತ್ಮಕತೆಯಿಂದ ದೂರವಿರುವುದು. ಈ ದಿನಗಳಲ್ಲಿ ಅದಕ್ಕಿಂತ ಹೆಚ್ಚಿನದ್ದೇನೂ ಇಲ್ಲ. ಟ್ವಿಟರ್ ಚಲೋ, ನಾನು ಆಫ್ ಆಗಿದ್ದೇನೆ. ನನ್ನ ಖಾತೆಯನ್ನು ನಿಷ್ಕ್ರಿಯಗೊಳಿಸುತ್ತಿದ್ದೇನೆ. ಹುಡುಗರೇ, ಪೀಸ್ ಔಟ್” ಎಂದು ಬರೆದಿದ್ದರು. ಇದಾದ ಬಳಿಕ ಕೆಲವೇ ಕ್ಷಣಗಳಲ್ಲಿ ತಮ್ಮ ಖಾತೆಯನ್ನು ನಿಷ್ಕ್ರೀಯಗೊಳಿಸಿದ್ದಾರೆ. ಜೊತೆಗೆ ಅದರ ಸ್ಕ್ರೀನ್‍ಶಾಟ್ ತೆಗೆದು “ಬೆಂಕಿಯಲ್ಲಿ, ನಾವು ನಮ್ಮ ವಿನೋದದಲ್ಲಿ. ಬಾಯ್ ಬಾಯ್ ಟ್ವಿಟ್ಟರ್” ಎಂದು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

    https://www.instagram.com/p/CBp5HA5AcpP/?utm_source=ig_embed

    ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಬಳಿಕ ನೆಟ್ಟಿಗರು ಅನೇಕ ಸ್ಟಾರ್ ನಟ, ನಟಿಯರು ಹಾಗೂ ನಿರ್ದೇಶಕರನ್ನು ಟ್ರೋಲ್ ಮಾಡುತ್ತಿದ್ದಾರೆ. ಹಾಗೆ ನಟಿ ಸೋನಾಕ್ಷಿ ಸಿನ್ಹಾ ಅವರನ್ನು ನಟ್ಟಿಗರು ಹೆಚ್ಚಾಗಿ ಟ್ರೋಲ್ ಮಾಡುತ್ತಿದ್ದಾರೆ.

    ಇದಕ್ಕೂ ಮುನ್ನ ಅಂದ್ರೆ ಕಳೆದ ವರ್ಷ ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ “ಕೌನ್ ಬನೇಗಾ ಕರೋಡಪತಿ”ಯಲ್ಲಿ ಕೇಳಲಾಗಿದ್ದ ರಾಮಾಯಣಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಲು ವಿಫಲವಾದ ನಂತರವೂ ನೆಟ್ಟಿಗರು ಸೋನಾಕ್ಷಿ ಅವರನ್ನು ಟ್ರೋಲ್ ಮಾಡಿದ್ದರು. ಇದೇ ವಿಚಾರವಾಗಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸೋನಾಕ್ಷಿ ಸಿನ್ಹಾ, “ಆ ಘಟನೆ ನಡೆದು ಸುಮಾರು ಐದರಿಂದ ಆರು ತಿಂಗಳಾಗಿದೆ. ಆದರೂ ನೆಟ್ಟಿಗರು ನನ್ನನ್ನು ಟ್ರೋಲ್ ಮಾಡುತ್ತಿರುವುದು ಬೇಸರದ ಸಂಗತಿಯಾಗಿದೆ” ಎಂದಿದ್ದರು.

    https://www.instagram.com/p/B7DUjteA0_1/?utm_source=ig_embed

  • ಸಿನಿಮಾದಲಷ್ಟೆ ನಟಿ, ನಿಮ್ಮಂತೆ ನಾನೂ ಮನುಷ್ಯಳೇ: ಸಿಂಧು ಲೋಕನಾಥ್

    ಸಿನಿಮಾದಲಷ್ಟೆ ನಟಿ, ನಿಮ್ಮಂತೆ ನಾನೂ ಮನುಷ್ಯಳೇ: ಸಿಂಧು ಲೋಕನಾಥ್

    ಬೆಂಗಳೂರು: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಅನೇಕ ನಟ-ನಟಿಯರು ಮಾನಸಿಕ ಖಿನ್ನತೆಯ  ಬಗ್ಗೆ ತಮ್ಮ ಅಭಿಪ್ರಾಯ, ಅನುಭವಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಸ್ಯಾಂಡಲ್‍ವುಡ್ ನಟಿ ಸಿಂಧು ಲೋಕ್‍ನಾಥ್ ತಮ್ಮ ಬಗ್ಗೆ ಮಾತನಾಡಿದ್ದಾರೆ.

    ನಟಿ ಸಿಂಧು ಲೋಕನಾಥ್ ಇನ್‍ಸ್ಟಾಗ್ರಾಂನಲ್ಲಿ “ನಾನು ಸಿನಿಮಾದಲ್ಲಿ ಮಾತ್ರ ನಟಿ, ನಿಮ್ಮಂತೆ ನಾನು ಕೂಡ ಮನುಷ್ಯಳು’ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಆದರೆ ಸಿಂಧು ಲೋಕನಾಥ್ ಇದ್ದಕ್ಕಿದ್ದಂತೆ ಏಕೆ ಹೀಗೆ ಪೋಸ್ಟ್ ಮಾಡಿದ್ದಾರೆ ಎಂಬ ಅನುಮಾನ ಮೂಡಿದೆ.

    ಪೋಸ್ಟ್‌ನಲ್ಲಿ ಏನಿದೆ?
    “ನಾನೊಬ್ಬ ನಟಿ, ಅಂದರೆ ನಾನು ತೆರೆಯ ಮೇಲಷ್ಟೆ ನಟಿ. ತೆರೆಯ ಹಿಂದೆ ಅಲ್ಲ. ನಾನು ಜೀವನದಲ್ಲಿ ಮಾಡುವುದೆಲ್ಲವೂ ನಟನೆ ಅಲ್ಲ. ನಾನೂ ಸಹ ಎಲ್ಲರಂತೆ ನನ್ನ ಭಾವನೆಗಳನ್ನು ವ್ಯಕ್ತಪಡಿಸುತ್ತೇನೆ. ಭಾವನೆಗಳನ್ನು ಸುಳ್ಳು, ನಕಲಿ ಮಾಡಲಾಗುವುದಿಲ್ಲ. ನಾನು ಭಯಪಡುತ್ತೇನೆ. ನಾನು ಕಷ್ಟಪಡುತ್ತೇನೆ, ನನಗೂ ನೋವಾಗುತ್ತದೆ, ಅಳುತ್ತೇನೆ, ನಾನು ಕೂಡ ಸಂತೋಷ ಮತ್ತು ನೋವನ್ನು ಸಮಾನವಾಗಿ ಅನುಭವಿಸುತ್ತೇನೆ” ಎಂದಿದ್ದಾರೆ.

    “ನಾನು ಸಿನಿಮಾ ನಟಿ ಆಗಿರುವುದರಿಂದ ಸಾಮಾನ್ಯ ಮನುಷ್ಯಳಲ್ಲವೆಂದು ನಿಮಗೆ ಕಾಣಿಸಬಹುದು. ಆದರೆ ಆಳದಲ್ಲಿ ನಾನು ಸಾಮಾನ್ಯಳು. ಎಲ್ಲಕ್ಕಿಂತ ಮುಖ್ಯವಾಗಿ  ನಿಮ್ಮಂತೆ ನಾನೂ ಸಹ ಒಬ್ಬ ಸಾಮಾನ್ಯ ಮನುಷ್ಯಳು” ಎಂದು ಸಿಂಧು ಲೋಕನಾಥ್ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

    ಸಿಂಧು 2009ರಲ್ಲಿ ಬಿಡುಗಡೆಗೊಂಡ ‘ಪರಿಚಯ’ ಸಿನಿಮಾದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದರು. ನಂತರ 2012ರಲ್ಲಿ ತೆರೆಕಂಡ ‘ಲೈಫ್ ಇಷ್ಟೇನೆ’ ಚಿತ್ರದಲ್ಲಿ ಮೊದಲ ಬಾರಿಗೆ ನಾಯಕಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಂತರ ಸಿಂಧು ಲೋಕ್‍ನಾಥ್ ಅನೇಕ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

    https://www.instagram.com/p/CBfB7pvHAHk/?igshid=18c29hisu1425

  • ದಾಂಪತ್ಯ ಜೀವನಕ್ಕೆ ಕಾಲಿಡ್ತಿದ್ದಾರೆ ನಟಿ ಮಯೂರಿ

    ದಾಂಪತ್ಯ ಜೀವನಕ್ಕೆ ಕಾಲಿಡ್ತಿದ್ದಾರೆ ನಟಿ ಮಯೂರಿ

    ಬೆಂಗಳೂರು: ‘ಕೃಷ್ಣ ಲೀಲಾ’ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಸೌಂಡ್ ಮಾಡಿದ ನಟಿ ಮಯೂರಿ ಕ್ಯಾತರಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

    ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿಯೋದಕ್ಕೆ ನಟಿ ಮಯೂರಿ ಸಜ್ಜಾಗಿದ್ದಾರೆ. ಭರ್ತಿ 10 ವರ್ಷಗಳಿಂದ ಪ್ರೀತಿಯಲ್ಲಿ ಬಂಧಿಯಾಗಿರುವ ಮಯೂರಿ ಹಾಗೂ ಅರುಣ್, ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಅಡಿಯಿಡಲು ರೆಡಿಯಾಗಿದ್ದಾರೆ. ಶುಕ್ರವಾರ ಮಯೂರಿ ಮದುವೆ ನಡೆಯಲಿದ್ದು, ಕುಟುಂಬಸ್ಥರು-ಆಪ್ತರು ಭಾಗಿಯಾಗಲಿದ್ದಾರೆ. ದೇವಸ್ತಾನದಲ್ಲಿ ಕೃಷ್ಣಲೀಲಾ ಸುಂದರಿಯ ಮದುವೆ ನೆರವೇರುತ್ತಿದೆ.

    ಮಯೂರಿ ಅವರು ‘ಅಶ್ವಿನಿ ನಕ್ಷತ್ರ’ ಕಿರುತೆರೆ ಪ್ರವೇಶಿಸಿ, ಬಳಿಕ ‘ಕೃಷ್ಣ ಲೀಲಾ’ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟವರು. ‘ಇಷ್ಟಕಾಮ್ಯ’, ‘ರುಸ್ತುಂ’ನಂತಹ ಭಿನ್ನ ಬಗೆಯ ಸಿನಿಮಾಗಳಲ್ಲಿ ನಟಿಸಿದ ನಂತರ, ಮಯೂರಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’, ‘ಮೌನಂ’ ಚಿತ್ರಗಳಲ್ಲಿ ವಿಭಿನ್ನ ಪಾತ್ರದಲ್ಲಿ ಮಿಂಚಿದ್ದಾರೆ.

    ಸಂಪೂರ್ಣ ಹೊಸಬರೇ ಇರುವ ‘ಮೌನಂ’ ಸಿನಿಮಾದಲ್ಲಿ ಮಯೂರಿ ಅವರು ನಾಯಕಿಯಾಗಿ ನಟಿಸಿದ್ದರು. ರಾಜ್ ಪಂಡಿತ್ ನಿರ್ದೇಶನದ ಈ ಸಿನಿಮಾ ಇದೇ ವರ್ಷ ಫೆಬ್ರವರಿಯಲ್ಲಿ ರಿಲೀಸ್ ಆಗಿತ್ತು.

  • ಸೆಲ್ಫಿ ವಿಡಿಯೋದಲ್ಲೇ ನಟಿ ಆತ್ಮಹತ್ಯೆ ಪ್ರಕರಣ- ಕಾಡಿನಲ್ಲಿ ಪ್ರಿಯಕರ ಅರೆಸ್ಟ್

    ಸೆಲ್ಫಿ ವಿಡಿಯೋದಲ್ಲೇ ನಟಿ ಆತ್ಮಹತ್ಯೆ ಪ್ರಕರಣ- ಕಾಡಿನಲ್ಲಿ ಪ್ರಿಯಕರ ಅರೆಸ್ಟ್

    ಬೆಂಗಳೂರು: ಪ್ರಿಯಕರನಿಂದ ಮೋಸ ಹೋದ ಸ್ಯಾಂಡಲ್‍ವುಡ್‍ನ ಕಿರುತೆರೆ ನಟಿ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿ ಪ್ರಿಯಕರನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ದೈಹಿಕವಾಗಿ ಬಳಸಿಕೊಂಡು ಪ್ರಿಯಕರ ಮೋಸ – ಸೆಲ್ಫಿ ವಿಡಿಯೋದಲ್ಲೇ ನಟಿ ಆತ್ಮಹತ್ಯೆ

    ಆರೋಪಿ ದಿನೇಶ್‍ನನ್ನು ಸದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಚಂದನಾ (29) ಆತ್ಮಹತ್ಯೆ ಮಾಡಿಕೊಂಡ ನಟಿ. ಚಂದನಾ ಆತ್ಮಹತ್ಯೆ ಮಾಡಿಕೊಂಡ ನಂತರ ಆರೋಪಿ ದಿನೇಶ್ ಪರಾರಿಯಾಗಿದ್ದನು. ಈತನನ ವಿರುದ್ಧ ಚಂದನಾ ಪೋಷಕರು ದೂರು ದಾಖಲಿಸಿದ್ದರು. ಈ ಕುರಿತು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಪೊಲೀಸರು ಆರೋಪಿ ದಿನೇಶ್‍ಗಾಗಿ ಹುಡುಕಾಟ ನಡೆಸುತ್ತಿದ್ದರು.

    ಇದೀಗ ಪೊಲೀಸರು ಆರೋಪಿಯನ್ನು ಚಿಕ್ಕಮಗಳೂರು ಕಾಡಿನಲ್ಲಿ ಬಂಧಿಸಿದ್ದಾರೆ. ಇಷ್ಟು ದಿನ ಆರೋಪಿ ಕಾಡಿನಲ್ಲೇ ತಲೆಮರೆಸಿಕೊಂಡಿದ್ದನು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ದಿನೇಶ್‍ನನ್ನು ಪೊಲೀಸರು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‍ನಲ್ಲಿ ಮೇ 28 ರಂದು ಚಂದನಾ ವಿಷ ಕುಡಿದು ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಚಂದನಾ ಮತ್ತು ಪ್ರಿಯಕರ ದಿನೇಶ್ ಸುಮಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಎರಡು ಮನೆಯಲ್ಲೂ ಇವರ ಮದುವೆಗೆ ಒಪ್ಪಿಗೆ ನೀಡಲಾಗಿತ್ತು.

    ದಿನೇಶ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಹಣವನ್ನು ಪಡೆದುಕೊಂಡಿದ್ದನು. ಅಷ್ಟೇ ಅಲ್ಲದೇ ಆರೋಪಿ ಚಂದನಾರನ್ನು ನಂಬಿಸಿ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದನು. ಅಲ್ಲದೇ ಆರೋಪಿ ದಿನೇಶ್ ಚಂದನಾರಿಗೆ ಗರ್ಭಪಾತ ಕೂಡ ಮಾಡಿಸಿದ್ದನು ಎಂದು ತಿಳಿದು ಬಂದಿತ್ತು. ಕೊನೆಗೆ ಲಕ್ಷ, ಲಕ್ಷ ಹಣ ಪಡೆದು ಮದುವೆಯಾಗಲು ನಿರಾಕರಿಸಿದ್ದಾನೆ. ಅಲ್ಲದೇ ಆರೋಪಿ ಚಂದನಾರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದನು. ಇದರಿಂದ ನೊಂದು ಚಂದನಾ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.

    ಈ ಕುರಿತು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ನಟಿ ಆತ್ಮಹತ್ಯೆ ಮಾಡಿಕೊಂಡ ನಂತರ ಪ್ರಿಯಕರ ತನ್ನ ಕುಟುಂಬದವರ ಜೊತೆ ಪರಾರಿಯಾಗಿದ್ದನು. ಸದ್ಯಕ್ಕೆ ಪೊಲೀಸರು ಆರೋಪಿ ದಿನೇಶ್‍ನನ್ನು ಬಂಧಿಸಿದ್ದಾರೆ.

  • ನಟಿಯ ಬೀಟ್‍ರೂಟ್ ಮೈಮಾಟ ನೋಡಿ ಕೆಂಪಾದವು ನೆಟ್ಟಿಗರ ಕಣ್ಣು

    ನಟಿಯ ಬೀಟ್‍ರೂಟ್ ಮೈಮಾಟ ನೋಡಿ ಕೆಂಪಾದವು ನೆಟ್ಟಿಗರ ಕಣ್ಣು

    ನವದೆಹಲಿ: ಬಾಲಿವುಟ್ ನಟಿ, ಡ್ಯಾನ್ಸರ್ ಎಲಿ ಅವ್ರಾಮ್ ಮುಖ, ಕೈ-ಕಾಲು ಸೇರಿ ಈಡೀ ದೇಹಕ್ಕೆ ಬೀಟ್‍ರೂಟ್ ಹಚ್ಚಿಕೊಂಡು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

    29 ವರ್ಷದ ನಟಿ ಎಲಿ ಅವ್ರಾಮ್‍ಗೆ ಚರ್ಮದ ಚಿಕಿತ್ಸೆಗಾಗಿ ಮೈತುಂಬ ಬೀಟ್‍ರೂಟ್ ಜ್ಯೂಸ್ ಅನ್ನು ಹಚ್ಚಿಕೊಳ್ಳಲು ಅವರ ಮನೆಯ ಸಹಾಯಕಿ ಸಲಹೆ ನೀಡಿದ್ದಳು. ಇದರಿಂದಾಗಿ ಮೈತುಂಬ ಬೀಟ್‍ರೂಟ್ ಜ್ಯೂನ್ ಅನ್ನು ಹಚ್ಚಿಕೊಂಡ ನಟಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

    ಬಿಕಿನಿಯಲ್ಲಿರುವ ಫೋಟೋಗಳನ್ನು ತಮ್ಮನ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿರುವ ಎಲಿ ಅವ್ರಾಮ್, ‘ಇದು ಬೀಟ್‍ರೂಟ್ ಅಂಗಡಿ’ ಎಂದು ಶೀರ್ಷಿಕೆ ಹಾಕಿದ್ದಾರೆ. ಜೊತೆಗೆ “ಬೀಟ್‍ರೂಟ್‍ನ ಪ್ರೀತಿಗಾಗಿ. ಇದು ಮನೆಯಲ್ಲಿ ನನ್ನ ಸಹಾಯಕಿ ಉಷಾ ಕಲ್ಪನೆ. ಈ ಅಲಂಕಾರ ನೋಡಿ ಅವಳು ನನ್ನನ್ನು ಅನ್ಯಲೋಕದವಳು ಎಂದು ಕರೆದಳು” ಎಂದು ಬರೆದುಕೊಂಡಿದ್ದಾರೆ.

    ಎಲಿ ಅವ್ರಾಮ್ ಫೋಟೋಗಳಿಗೆ 99 ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ. ಕೆಲ ನೆಟ್ಟಿಗರು ತಮ್ಮದೇ ರೀತಿಯಲ್ಲಿ  ಕಮೆಂಟ್ ಮಾಡಿದ್ದಾರೆ.

    ಡ್ಯಾನ್ಸಿಂಗ್ ಕೌಶಲ್ಯದಲ್ಲಿ ಸಖತ್ ಹೆಸರು ಮಾಡಿರುವ ಎಲಿ ಅವ್ರಾಮ್ ಅನೇಕ ಸಿನಿಮಾ ಹಾಡುಗಳಿಗೆ ಸ್ಟೆಪ್ ಹಾಕಿದ್ದಾರೆ. ಸಲ್ಮಾನ್ ಖಾನ್ ನಿರೂಪಿಸಿದ ರಿಯಾಲಿಟಿ ಟಿವಿ ಶೋ ಬಿಗ್‍ಬಾಸ್‍ನ ಏಳನೇ ಆವೃತ್ತಿಯಲ್ಲಿ ಎಲಿ ಅವ್ರಾಮ್ ಭಾಗವಹಿಸಿದ್ದರು. ಅಷ್ಟೇ ಅಲ್ಲದೆ ಝಲಕ್ ದಿಕ್ಲಾ ಜಾ ಸೀಸನ್ 7ರ ಸ್ಪರ್ಧಿಯೂ ಆಗಿದ್ದಾರೆ. ಕಳೆದ ವರ್ಷ, ಅವರು ಟೈಪ್ ರೈಟರ್ ಮತ್ತು ಇನ್‍ಸೈಡ್ ಎಡ್ಜ್-2 ನಂತಹ ವೆಬ್ ಶೋಗಳಲ್ಲಿ ಕಾಣಿಸಿಕೊಂಡಿದ್ದರು.

    https://www.instagram.com/p/CAz1kmMggFm/?utm_source=ig_embed

  • ದೈಹಿಕವಾಗಿ ಬಳಸಿಕೊಂಡು ಪ್ರಿಯಕರ ಮೋಸ – ಸೆಲ್ಫಿ ವಿಡಿಯೋದಲ್ಲೇ ನಟಿ ಆತ್ಮಹತ್ಯೆ

    ದೈಹಿಕವಾಗಿ ಬಳಸಿಕೊಂಡು ಪ್ರಿಯಕರ ಮೋಸ – ಸೆಲ್ಫಿ ವಿಡಿಯೋದಲ್ಲೇ ನಟಿ ಆತ್ಮಹತ್ಯೆ

    ಬೆಂಗಳೂರು: ಪ್ರಿಯಕರನಿಂದ ಮೋಸ ಹೋದ ಸ್ಯಾಂಡಲ್‍ವುಡ್‍ನ ಕಿರುತೆರೆ ನಟಿಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‍ನಲ್ಲಿ ನಡೆದಿದೆ.

    ಚಂದನಾ (29) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇದೇ ಮೇ 28 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವಕನ ಮೋಸಕ್ಕೆ ಬಲಿಯಾದ ನಟಿ ಸೆಲ್ಫಿ ವಿಡಿಯೋದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮೃತ ಚಂದನಾ ಮತ್ತು ಪ್ರಿಯಕರ ದಿನೇಶ್ ಸುಮಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಎರಡು ಮನೆಯಲ್ಲೂ ಇವರ ಮದುವೆಗೆ ಒಪ್ಪಿಗೆ ನೀಡಲಾಗಿತ್ತು. ದಿನೇಶ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಹಣವನ್ನು ಪಡೆದುಕೊಂಡಿದ್ದನು. ಅಷ್ಟೇ ಅಲ್ಲದೇ ಆರೋಪಿ ಚಂದನಾರನ್ನು ನಂಬಿಸಿ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದನು. ಅಲ್ಲದೇ ಆರೋಪಿ ದಿನೇಶ್ ಚಂದನಾರಿಗೆ ಗರ್ಭಪಾತ ಕೂಡ ಮಾಡಿಸಿದ್ದನು ಎಂದು ತಿಳಿದು ಬಂದಿದೆ.

    ಕೊನೆಗೆ ಲಕ್ಷ, ಲಕ್ಷ ಹಣ ಪಡೆದು ಮದುವೆಯಾಗಲು ನಿರಾಕರಿಸಿದ್ದಾನೆ. ಅಲ್ಲದೇ ಆರೋಪಿ ಚಂದನಾರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದನು. ಇದರಿಂದ ನೊಂದು ಚಂದನಾ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ಕುರಿತು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ನಟಿ ಆತ್ಮಹತ್ಯೆ ಮಾಡಿಕೊಂಡ ನಂತರ ಪ್ರಿಯಕರ ತನ್ನ ಕುಟುಂಬದವರ ಜೊತೆ ಪರಾರಿಯಾಗಿದ್ದಾನೆ. ಈಗ ಚಂದನಾ ಪೋಷಕರು ದಿನೇಶ್ ಮತ್ತು ಆತನ ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಆರೋಪಿ ದಿನೇಶ್‍ಗಾಗಿ ಹುಡುಕಾಟ ಆರಂಭಿಸಿದ್ದಾರೆ.