Tag: actress

  • ಆಯುಧಗಳ ಜೊತೆ ಫೋಟೋ ಇರೋ ಏನು ತಿಳಿಯದ ಹುಡ್ಗನಿಗೆ ಬಿಜೆಪಿ ಟಿಕೆಟ್: ನಟಿ ಅಭಿನಯ

    ಆಯುಧಗಳ ಜೊತೆ ಫೋಟೋ ಇರೋ ಏನು ತಿಳಿಯದ ಹುಡ್ಗನಿಗೆ ಬಿಜೆಪಿ ಟಿಕೆಟ್: ನಟಿ ಅಭಿನಯ

    ಬೆಂಗಳೂರು: ಲೋಕಸಭಾ ಚುನಾವಣೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಮಚ್ಚು, ಲಾಂಗ್ ಜೊತೆ ಫೋಟೋ ಇರುವ ಹುಡುಗನಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ನಟಿ ಅಭಿನಯ ಹೇಳಿದ್ದಾರೆ.

    ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ ಹರಿಪ್ರಸಾದ್ ಪರ ಮತ ಪ್ರಚಾರದ ಅಖಾಡಕ್ಕಿಳಿದಿರುವ ಇವರು, ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಏನೂ ತಿಳಿಯದ ಯುವಕನಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಮೂಲಕ ಬಿಜೆಪಿ ಒಬ್ಬ ಉತ್ತಮ ಮಹಿಳೆಗೆ ಟಿಕೆಟ್ ತಪ್ಪಿಸಿದೆ. ಅದನ್ನು ಮಹಿಳೆಯೇ ತಿಳಿದುಕೊಳ್ಳಬೇಕು. ಅವರು ಕಷ್ಟಪಟ್ಟಿರುವ ಹೆಣ್ಣುಮಗಳು. ಹೀಗಾಗಿ ಅವರಿಗೆ ಮೋಸ ಮಾಡಿ ಆಯುಧಗಳನ್ನು ಹಿಡಿದುಕೊಂಡು ಕುಳಿತಿರುವ ಹಾಗೂ ಏನೂ ತಿಳಿಯದಿರುವ ಯುವಕನಿಗೆ ಈ ಬಾರಿ ಟಿಕೆಟ್ ಕೊಟ್ಟಿದ್ದಾರೆ. ಹೀಗಾಗಿ ಇದನ್ನು ಮನಗಂಡು ಮತದಾರರು ದಯವಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.

    ನೀವು ತಪ್ಪು ಮಾಡಿ 5 ವರ್ಷ ಸುಳ್ಳು ಹೇಳುವವರಿಗೆ ಮತ ಹಾಕಿದ್ದೀರಿ. ಈಗಲಾದರೂ ತಾವು ಅದನ್ನು ಅರಿತು, ನಮಗೆ ಆ ಪಕ್ಷ ಬೇಡ, ನಮಗೆ ಕಾಂಗ್ರೆಸ್ ಸರಿ ಎಂದು ದಯವಿಟ್ಟು ಈ ಬಾರಿ ಕಾಂಗ್ರೆಸ್ಸನ್ನು ಗೆಲ್ಲಿಸಿ. ನಮ್ಮ ದೇಶಕ್ಕೆ ಹಿತ ಆಗುವಂತೆ ಮಾಡಿ ಎಂದು ಮತದಾರರಲ್ಲಿ ಕೇಳಿಕೊಂಡರು.

    ಇದೇ ವೇಳೆ ಕಾರ್ಯಕರ್ತರು ತುಂಬಾ ಉತ್ಸಾಹದಿಂದ ಪ್ರಚಾರಕ್ಕೆ ಇಳಿದಿದ್ದಾರೆ. ಗಾಂಧೀಜಿ, ವಿವೇಕಾನಂದ ಹಾಗೂ ಕೆಂಪೇಗೌಡ ಪ್ರತಿಮೆಗೆ ಹೂವಿನ ಹಾರ ಹಾಕಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೊರಟಿದ್ದೇವೆ ಅಂದ್ರು.

    ಬಸವನಗುಡಿ ಕ್ಷೇತ್ರದ ಗುಟ್ಟಲ್ಲಿ, ರಾಮಕೃಷ್ಣ ಆಶ್ರಮ ಗಾಂಧಿ ಬಜಾರ್ ಸುತ್ತಮುತ್ತ ಪ್ರಚಾರ ನಡೆಯುತ್ತಿದ್ದು, ನೂರಾರು ಕಾರ್ಯಕರ್ತರು ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್, ರಾಹುಲ್ ಗಾಂಧಿ ಹಾಗೂ ಹರಿಪ್ರಸಾದ್ ಪರ ಘೋಷಣೆ ಕೂಗುವ ಮೂಲಕ ಭರ್ಜರಿ ಪ್ರಚಾರ ನಡೆಯುತ್ತಿದೆ.

    ತೇಜಸ್ವಿ ಸೂರ್ಯ ಹೇಳಿದ್ದು ಏನು?
    ಕತ್ತಿಗಳ ಜೊತೆ ತನ್ನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದಕ್ಕೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದ ತೇಜಸ್ವಿ ಸೂರ್ಯ, ಆಯುಧ ಪೂಜೆ ಸಮಯದಲ್ಲಿ ನಮ್ಮ ಕಾಫಿ ಎಸ್ಟೇಟ್ ನಲ್ಲಿ ಇರುವ ಆಯುಧಗಳ ಜೊತೆ ಕುಳಿತುಕೊಂಡ ಫೋಟೋವನ್ನು ನನ್ನ ಫೇಸ್‍ಬುಕ್ ನಿಂದ ಡೌನ್‍ಲೋಡ್ ಮಾಡಲಾಗಿದೆ ಎಂದು ತಿಳಿಸಿದ್ದರು.

    https://twitter.com/Tejasvi_Surya/status/885775335383379968

  • ಮೈತ್ರಿ ಸರ್ಕಾರದ ವಿರುದ್ಧ ನಟಿ ಶೃತಿ ವಾಗ್ದಾಳಿ

    ಮೈತ್ರಿ ಸರ್ಕಾರದ ವಿರುದ್ಧ ನಟಿ ಶೃತಿ ವಾಗ್ದಾಳಿ

    ತುಮಕೂರು: ಮೈತ್ರಿ ಸರ್ಕಾರ ಹಾಗೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೃತಿ ವಾಗ್ದಾಳಿ ನಡೆಸಿದ್ದಾರೆ.

    ನಗರದ ಖಾಸಗಿ ಹೋಟೆಲ್ ನಲ್ಲಿ ನಾನು ಚೌಕಿದಾರ್ ಅಭಿಯಾನಕ್ಕೆ ಚಾಲನೆ ಕೊಟ್ಟ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕುರ್ಚಿಗಾಗಿ ಒದ್ದಾಡುತ್ತಿದ್ದಾರೆ. ಅವರು ಮಗನ ಗೆಲುವಿಗಾಗಿ ಮಂಡ್ಯಕ್ಕೆ ಹೋಗುತ್ತಿದ್ದಾರೆ. ರಾಜ್ಯದಲ್ಲಿ ಅತಂತ್ರ ಸ್ಥಿತಿ ಇದೆ ಅಂದ್ರು.

    ತುಮಕೂರಲ್ಲಿ ಮುದ್ದಹನುಮೇಗೌಡ ನಾಮಪತ್ರ ಹಿಂಪಡೆದಿದ್ದಾರೆ. ಯಾವುದೇ ಕಾರಣಕ್ಕೆ ನಾಮಪತ್ರ ಹಿಂಪಡೆಯಲ್ಲ ಎಂದು ಕಣ್ಣೀರು ಹಾಕಿದ್ದರು. ಇಷ್ಟೆಲ್ಲಾ ಆದ ಮೇಲೂ ಇದೀಗ ಅವರು ನಾಮಪತ್ರ ಯಾಕೆ ವಾಪಸ್ ಪಡೆದ್ರು ಎಂದು ಪ್ರಶ್ನಿಸಿದ ಅವರು, ಈ ಹಿಂದೆ ಯಾರದ್ದೋ ದೊಡ್ಡ ಪ್ರಭಾವವಿದೆ ಎಂದು ವಾಗ್ದಾಳಿ ನಡೆಸಿದರು. ಮೈತ್ರಿ ಸರ್ಕಾರ ಬಂದಾಗಿನಿಂದಲೂ ನಾಯಕರು ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ತುಮಕೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸಿ ಎಂದು ಶೃತಿ ಮನವಿ ಮಾಡಿಕೊಂಡರು.

    ಮೋದಿಯಿಂದ ಹೆಮ್ಮೆ:
    ಇಲ್ಲಿ ಪ್ರತಿಯೊಬ್ಬರೂ ಕಾವಲುದಾರರು. ಮೋದಿಯವರು ನಿಜವಾದ ಚೌಕಿದಾರ. ದೇಶವನ್ನ ಚೌಕಿದಾರ ಕಾಯುತ್ತಿರುವಾಗ ದೇಶದ ಜನರು ಕೂಡಾ ಚೌಕಿದಾರ್ ಅನ್ನುತ್ತಿದ್ದಾರೆ. ನಾನು ಭಾರತೀಯಳು ಅನ್ನುವ ಹೆಮ್ಮೆ ಹಾಗೆ ನಾನು ಬಿಜೆಪಿ ಕಾರ್ಯಕರ್ತೆ ಅನ್ನೋದಕ್ಕೂ ಹೆಮ್ಮೆ ಇದೆ. ಆ ಹೆಮ್ಮೆ ಬಂದಿರೋದೇ ಮೋದಿಯವರಿಂದಾಗಿ ಎಂದು ಹೇಳಿದ್ರು.

    ಇಡೀ ವಿಶ್ವದಲ್ಲೇ ಮೋದಿ ಅವರಿಗೆ ಗೌರವ ಸಿಗುತ್ತಿದೆ. ಮಹಿಳಾ ಪರವಾದ ಹಲವು ಕಾರ್ಯಕ್ರಮಗಳನ್ನು ಮೋದಿ ನೀಡಿದ್ದಾರೆ. ನಿರ್ಮಲಾ ಸೀತಾರಾಮನ್‍ಗೆ ದೇಶದ ರಕ್ಷಣಾ ಖಾತೆ ಕೊಟ್ಟು ಮಹಿಳೆಯರ ಪ್ರಾಮುಖ್ಯತೆ ಹೆಚ್ಚಿಸಿದ್ದಾರೆ. ರಾಜ್ಯದಲ್ಲಿ ಬಂದಿರುವ ಅತಂತ್ರ ಸ್ಥಿತಿ ಕೇಂದ್ರದಲ್ಲಿ ಬರಬಾರದು. ಯಾಕಂದ್ರೆ ಇದೀಗ ದೋಸ್ತಿಗಳಲ್ಲಿ ಕುರ್ಚಿಗಾಗಿ ಕಾದಾಟ ನಡೆಯುವುದನ್ನು ನೋಡುತ್ತಿದ್ದೇವೆ. ಕಾಂಗ್ರೆಸ್ ನವರ ಬಳಿ ಕಪ್ಪು ಹಣ ಇರಬಹುದು. ಅದನ್ನೇ ಈಗ ತಿಂಗಳಿಗೆ ವರ್ಷಕ್ಕೆ 72 ಸಾವಿರ ಪ್ರಣಾಳಿಕೆ ಮಾಡಿದ್ದಾರೆ. ಅದೊಂದು ಸುಳ್ಳಿನ ಕಂತೆಯಾಗಿದೆ ಎಂದು ಟಾಂಗ್ ನೀಡಿದ್ರು.

  • ನಟಿ ವಿಜಯಲಕ್ಷ್ಮಿ ವಿರುದ್ಧ ಎಫ್‍ಐಆರ್ ದಾಖಲು

    ನಟಿ ವಿಜಯಲಕ್ಷ್ಮಿ ವಿರುದ್ಧ ಎಫ್‍ಐಆರ್ ದಾಖಲು

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ವಿಜಯಲಕ್ಷ್ಮಿ ಮತ್ತು ಸಹೋದರಿ ಉಷಾದೇವಿ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ನಟಿ ವಿಜಯಲಕ್ಷ್ಮಿಗೆ ಆಸ್ಪತ್ರೆ ಖರ್ಚಿಗೆ ಒಂದು ಲಕ್ಷ ಹಣ ಸಹಾಯ ಮಾಡಿದ ನಟ ರವಿಪ್ರಕಾಶ್ ಈ ಕುರಿತು ವಿಡಿಯೋ ಮೂಲಕ ಮಾಹಿತಿ ಕೊಟ್ಟಿದ್ದಾರೆ. ವಿಜಯಲಕ್ಷ್ಮಿ ಅವರಿಂದ ತಮಗಾಗಿರುವ ನೋವು ಮತ್ತು ಅವಮಾನಗಳ ಬಗ್ಗೆ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ. ನಟಿ ವಿಜಯಲಕ್ಷ್ಮಿ ನನ್ನಿಂದ ಸಹಾಯ ಪಡೆದು ಸಮಾಜದಲ್ಲಿ ನನಗೆ ಅವಮಾನವಾಗುವ ರೀತಿ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ.

    ಈ ಕುರಿತು ರವಿಪ್ರಕಾಶ್ ಈಗಾಗಲೇ ಫಿಲಂ ಚೇಂಬರ್‍ನಲ್ಲಿ ದೂರು ದಾಖಲಿಸಿದ್ದರು. ಸದ್ಯ ಈಗ ರವಿಪ್ರಕಾಶ್ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವಂಚನೆ ಮತ್ತು ಘನತೆಗೆ ಧಕ್ಕೆತಂದಿರುವ ಆರೋಪ ಮೇಲೆ ದೂರು ದಾಖಲಾಗಿದೆ.

    ಏನಿದು ಪ್ರಕರಣ?
    ನಟಿ ವಿಜಯಲಕ್ಷ್ಮಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ವಿಜಯಲಕ್ಷ್ಮಿ ತಮಗೆ ನಟನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ಕೊಟ್ಟಿದ್ದರು. ನಟ ರವಿಪ್ರಕಾಶ್ ವಿರುದ್ಧ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದರು. ಅಷ್ಟೇ ಅಲ್ಲದೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ರವಿಪ್ರಕಾಶ್ ವಿರುದ್ಧ ದೂರು ನೀಡಿದ್ದರು.

    ನಾನು ಕಳೆದ ಕೆಲ ದಿನಗಳಿಂದ ಆನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಯುತ್ತಿದ್ದೇನೆ. ಹಣಕಾಸಿನ ನೆರವು ನೀಡಿ ಎಂದು ಸ್ಯಾಂಡಲ್‍ವುಡ್ ನ ಸ್ಟಾರ್ ನಟರಿಗೆ ಮನವಿ ಮಾಡಿಕೊಂಡಿದ್ದೆ. ಇದನ್ನು ನೋಡಿದ ನಟ ರವಿಪ್ರಕಾಶ್ ಫೆಬ್ರವರಿ 27ರಂದು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ, ಒಂದು ಲಕ್ಷ ನಗದು ಸೇರಿದಂತೆ ಬಟ್ಟೆ, ಊಟ, ತಿಂಡಿ ಸೇರಿದಂತೆ ಅವಶ್ಯಕ ವಸ್ತುಗಳನ್ನು ನೀಡಿದ್ದರು. ಇದಾದ ನಂತರ ಪ್ರತಿದಿನ ಆಸ್ಪತ್ರೆಯ ಐಸಿಯೂಗೆ ಬರೋದು, ಪದೇ ಪದೇ ಫೋನ್, ಮಸೇಜ್ ಮಾಡೋದು ಸೇರಿದಂತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ನಟಿ ದೂರಿನಲ್ಲಿ ಆರೋಪಿಸಿದ್ದರು.

  • ಸುದ್ದಿ ಕೇಳಿ ನನಗೆ ಶಾಕ್ ಆಗಿದೆ- ಬಿಜೆಪಿ ಮುಖಂಡ ಪ್ರತಿಕ್ರಿಯೆ

    ಸುದ್ದಿ ಕೇಳಿ ನನಗೆ ಶಾಕ್ ಆಗಿದೆ- ಬಿಜೆಪಿ ಮುಖಂಡ ಪ್ರತಿಕ್ರಿಯೆ

    ಬೆಂಗಳೂರು: ನಟಿ ಪೂಜಾಗಾಂಧಿ ಜೊತೆ ನಗರದ ಲಲಿತ್ ಅಶೋಕ್ ಹೋಟೆಲಿನಲ್ಲಿ 1 ವರ್ಷ ರೂಂ ಬುಕ್ ಮಾಡಿ ಹಣ ಪಾವತಿಸದೇ ಸಿಲುಕಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗದಗ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಪ್ರತಿಕ್ರಿಯೆ ನೀಡಿದ್ದಾರೆ.

    ಮಾಧ್ಯಮದ ಜೊತೆ ಮಾತನಾಡಿದ ಅವರು, ಈ ಸುದ್ದಿ ಕೇಳಿ ನನಗೆ ಶಾಕ್ ಆಗಿದೆ. ಉದ್ದೇಶಪೂರ್ವಕವಾಗಿಯೇ ನನ್ನನ್ನ ಯಾಕೆ ತಗೊಂಡ್ರು. ನನಗೆ ವಾಹಿನಿಗಳಲ್ಲಿ ಸುದ್ದಿ ಪ್ರಸಾರವಾದ ಬಳಿಕವೇ ಈ ವಿಚಾರ ತಿಳಿಯಿತು. ಈ ವಿಚಾರದ ಬಗ್ಗೆ ನಾನು ಚೆಕ್ ಮಾಡುತ್ತೇನೆ ಅಂದ್ರು.

    ಅಲ್ಲದೆ 23 ಲಕ್ಷ ರೂ ಕಟ್ಟುವಷ್ಟು ನಾನು ದೊಡ್ಡವನಲ್ಲ. ಅದು ಯಾರದ್ದೋ, ಏನೋ, ಎಂತದ್ದೋ.. ಆದ್ರೆ ನನ್ನ ಯಾಕೆ ತಗ್ಲಾಕ್ಕುತ್ತಾರೆ ಎಂದು ಗೊತ್ತಿಲ್ಲ. ಯಾವ ಉದ್ದೇಶ ಹಾಗೂ ನನ್ನ ಹೆಸರಿಗೆ ಮಸಿ ಬಳಿಯೋ ಪ್ರಯತ್ನ ಮಾಡಲಾಗುತ್ತಿದೆ ಎಂದು ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದ್ರು. ಇದನ್ನೂ ಓದಿ: ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದ ನಟಿ ಪೂಜಾ ಗಾಂಧಿ!

    ನಾನು ಹೋಟೆಲ್ ಗೆ ಹೋಗಿಯೇ ಇಲ್ಲ. ಬೇಕಾದ್ರೆ ನೀವೇ ಪರಿಶೀಲನೆ ಮಾಡಿಕೊಳ್ಳಿ. ನಿಮಗೆ ಬೇಕಾದ್ದನ್ನು ನೀವೇ ವೆರಿಫೈ ಮಾಡಿಕೊಳ್ಳಿ. ನಾನು ಎಲ್ಲಿಯೂ ಹೋಗಿಲ್ಲ. ನನಗೆ ನನ್ನದೇ ಆದ ಆಫೀಸ್, ಮನೆ ಇದೆ. ಒಳ್ಳೆಯ ಸಂಸಾರ ಇದೆ. ಹೀಗಾಗಿ ಮನೆ, ಆಫೀಸ್ ಬಿಟ್ಟರೆ ನಾನು ಎಲ್ಲಿಗೂ ಹೋಗಲ್ಲ ಅಂದ್ರು.

    ಏನಿದು ಪ್ರಕರಣ..?
    ನಟಿ ಪೂಜಾಗಾಂಧಿ ಅವರು ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಜೊತೆ ನಗರದ ಲಲಿತ್ ಅಶೋಕ್ ಹೋಟೆಲಿನಲ್ಲಿ 1 ವರ್ಷ ಹೋಟೆಲ್ ಬುಕ್ ಮಾಡಿದ್ದರು. ಕಳೆದ 2016ರ ಏಪ್ರಿಲ್‍ನಿಂದ ಮಾರ್ಚ್ 2017ರವರೆಗೆ ಬರೋಬ್ಬರಿ 1 ವರ್ಷದ ಹೊಟೇಲ್ ಬಿಲ್ ಒಟ್ಟು 26 ಲಕ್ಷ ಆಗಿತ್ತು. ಇದರಲ್ಲಿ 22 ಲಕ್ಷ ರೂಪಾಯಿ ಪಾವತಿಸಿ 3.53 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಹೋಟೆಲ್ ಆಡಳಿತ ಮಂಡಳಿ ಬೆಂಗಳೂರಿನ ಹೈ ಗ್ರೌಂಡ್ ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: ಒಂದು ವರ್ಷ ರೂಂ ಬುಕ್ ಮಾಡಿ ಜೊತೆಗಿದ್ದೆವು ಅನ್ನೋದಕ್ಕೆ ನಿಮ್ಮಲ್ಲಿ ಸಾಕ್ಷಿ ಇದ್ಯಾ: ಪೂಜಾ ಗಾಂಧಿ

    ದೂರು ಹಿನ್ನೆಲೆಯಲ್ಲಿ ಪೊಲೀಸರು ನಟಿ ವಿರುದ್ಧ ಎನ್‍ಸಿಆರ್(ಗಂಭೀರ ಸ್ವರೂಪವಲ್ಲದ ಪ್ರಕರಣ) ದಾಖಲು ಮಾಡಿಕೊಂಡಿದ್ದಾರೆ. ಅಲ್ಲದೆ ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ. ನೀಡಿದ್ದಾರೆ. ಉಳಿದ ಹಣ ಕೊಡಲು ಕಾಲಾವಕಾಶ ಕೇಳಿದ್ದಾರೆ ಎಂಬುದಾಗಿ ತಿಳಿದುಬಂದಿತ್ತು.

  • ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದ ನಟಿ ಪೂಜಾ ಗಾಂಧಿ!

    ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದ ನಟಿ ಪೂಜಾ ಗಾಂಧಿ!

    ಬೆಂಗಳೂರು: ಸ್ಯಾಂಡಲ್‍ವುಡ್ ಮಳೆ ಹುಡುಗಿ ಪೂಜಾ ಗಾಂಧಿ ವಿರುದ್ಧ ದೂರು ದಾಖಲಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೂಜಾಗಾಂಧಿಯವರು ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದರು ಎಂಬ ಮಾಹಿತಿ ಹೊರಬಿದ್ದಿದೆ.

    ಹೌದು. ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್‍ನಲ್ಲಿ ನಟಿ ಪೂಜಾ ಗಾಂಧಿ ಹಾಗೂ ಗದಗ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ 1 ವರ್ಷ ರೂಂ ಬುಕ್ ಮಾಡಿದ್ದರು. ಕಳೆದ 2016ರ ಏಪ್ರಿಲ್‍ನಿಂದ ಮಾರ್ಚ್ 2017ರವರೆಗೆ ಬರೋಬ್ಬರಿ 1 ವರ್ಷ ರೂಂ ಬುಕ್ ಮಾಡಿದ್ದರು.

    ಬಿಜೆಪಿ ಮುಖಂಡನ ಜೊತೆ ರೂಂ ಬುಕ್ ಮಾಡಿ ಆತಿಥ್ಯ ಸ್ವೀಕರಿಸಿದ್ದ ನಟಿ, 26 ಲಕ್ಷ ರೂಪಾಯಿ ಬಿಲ್ ಕಟ್ಟದೆ ಹೋಟೆಲಿಗೆ ಸತಾಯಿಸುತ್ತಿದ್ದರು. ಅಲ್ಲದೆ ಇದರಲ್ಲಿ 22 ಲಕ್ಷ ರೂಪಾಯಿ ಪಾವತಿಸಿ 3.53 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಹೋಟೆಲ್ ಆಡಳಿತ ಮಂಡಳಿ ಬೆಂಗಳೂರಿನ ಹೈ ಗ್ರೌಂಡ್ ಪೊಲೀಸರಿಗೆ ದೂರು ನೀಡಿದ್ದಾರೆ.

    ದೂರು ಹಿನ್ನೆಲೆಯಲ್ಲಿ ಪೊಲೀಸರು ನಟಿ ವಿರುದ್ಧ ಎನ್‍ಸಿಆರ್(ಗಂಭೀರ ಸ್ವರೂಪವಲ್ಲದ ಪ್ರಕರಣ) ದಾಖಲು ಮಾಡಿಕೊಂಡಿದ್ದಾರೆ. ಅಲ್ಲದೆ ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ. ನೀಡಿದ್ದಾರೆ. ಉಳಿದ ಹಣ ಕೊಡಲು ಕಾಲಾವಕಾಶ ಕೇಳಿದ್ದಾರೆ. ಒಟ್ಟಿನಲ್ಲಿ ಓರ್ವ ಸ್ಟಾರ್ ನಟಿಯ ಬಳಿ ಬಿಲ್ ಕಟ್ಟಲೂ ಹಣ ಇರಲಿಲ್ಲವೇ? ನಾಲ್ಕೂವರೆ ಲಕ್ಷ ಹಣ ಕೊಡದೇ ಎಸ್ಕೇಪ್ ಆಗಿದ್ದು ಯಾಕೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ.

  • ನಟಿ ಪೂಜಾ ಗಾಂಧಿ ವಿರುದ್ಧ ದೂರು ದಾಖಲು

    ನಟಿ ಪೂಜಾ ಗಾಂಧಿ ವಿರುದ್ಧ ದೂರು ದಾಖಲು

    ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ.

    ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ದೂರು ಹಿನ್ನೆಲೆಯಲ್ಲಿ ಪೊಲೀಸರು ನಟಿ ವಿರುದ್ಧ ಎನ್‍ಸಿಆರ್ ( ಗಂಭೀರ ಸ್ವರೂಪವಲ್ಲದ ಪ್ರಕರಣ) ದಾಖಲಿಸಿಕೊಂಡಿದ್ದಾರೆ.

    ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ. ನೀಡಿದ್ದಾರೆ. ಉಳಿದ ಹಣ ಕೊಡಲು ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ.

    ಒಟ್ಟಿನಲ್ಲಿ ಓರ್ವ ಸ್ಟಾರ್ ನಟಿಯ ಬಳಿ ಬಿಲ್ ಕಟ್ಟಲೂ ಹಣ ಇರಲಿಲ್ಲವೇ. ನಾಲ್ಕೂವರೆ ಲಕ್ಷ ಹಣ ಕೊಡದೇ ಎಸ್ಕೇಪ್ ಆಗಿದ್ದು ಯಾಕೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ.

  • ರಾಗಿಣಿಗಾಗಿ ಸ್ನೇಹಿತರ ಮಾರಾಮಾರಿ – ಕೇಸ್ ದಾರಿ ತಪ್ಪಿಸಲು ಶಿವಪ್ರಕಾಶ್ ಪ್ಲಾನ್

    ರಾಗಿಣಿಗಾಗಿ ಸ್ನೇಹಿತರ ಮಾರಾಮಾರಿ – ಕೇಸ್ ದಾರಿ ತಪ್ಪಿಸಲು ಶಿವಪ್ರಕಾಶ್ ಪ್ಲಾನ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಾಗಿಣಿಗಾಗಿ ಹಾಲಿ ಮತ್ತು ಮಾಜಿ ಬಾಯ್‍ಫ್ರೆಂಡ್‍ಗಳ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ಆರೋಪಿ ಶಿವಪ್ರಕಾಶ್ ಉಲ್ಟಾ ಹೊಡೆದಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರೋ ಶಿವಪ್ರಕಾಶ್, ನನ್ನ ಗೆಳತಿ ರಾಗಿಣಿಯೇ ಬೇರೆ. ನಟಿ ರಾಗಿಣಿಯೇ ಬೇರೆ. ನಾನು ರವಿಶಂಕರ್ ಮೇಲೆ ಹಲ್ಲೆ ನಡೆಸಿಲ್ಲ ಎಂದು ಹೇಳಿದ್ದಾರೆ.

    ಗಣಿ ಉದ್ಯಮಿಯೂ ಆಗಿರೋ ಶಿವಪ್ರಕಾಶ್ ರಾಗಿಣಿಯ ಹಲವು ವರ್ಷಗಳ ಸ್ನೇಹಿತನಾಗಿದ್ದಾನೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ರೆಸಿಡೆನ್ಸಿ ರಸ್ತೆಯ ರಿಟ್ಜ್ ಕಾರ್ಲ್ ಟನ್ ಹೋಟೆಲ್‍ಗೆ ನಟಿ ರಾಗಿಣಿ ಹಾಗೂ ಹಾಲಿ ಬಾಯ್‍ಫ್ರೆಂಡ್ ರವಿ ಶಂಕರ್ ಹೋಗಿದ್ದರು. ಈ ವೇಳೆಗಾಗಲೇ ಹೋಟೆಲ್‍ನಲ್ಲಿ ರಾಗಿಣಿಯ ಮಾಜಿ ಗೆಳೆಯ, ಗಣಿ ಉದ್ಯಮಿ ಶಿವಪ್ರಕಾಶ್ ತನ್ನ ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದರು. ರಾಗಿಣಿಯನ್ನು ರವಿ ಜೊತೆ ಕಂಡು ಸಿಟ್ಟಿಗೆದ್ದ ಶಿವಪ್ರಕಾಶ್, ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ನಟಿ ರಾಗಿಣಿಗಾಗಿ ಪ್ರೇಮಿಗಳಿಬ್ಬರ ಕಿತ್ತಾಟ

    ಅಲ್ಲದೆ ತಾನು ರಾಗಿಣಿಗೆ ಕೊಡಿಸಿದ್ದ ಬಿಳಿ ಬಣ್ಣದ ಮರ್ಸಿಡಿಸ್ ಕಾರನ್ನು ಕಿತ್ತುಕೊಂಡು ಕಳುಹಿಸಿದ್ದಾರೆ. ಸದ್ಯ ಪೊಲೀಸರು ಹೋಟೆಲ್‍ನ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆ ನಾಟಿ ಕೋಳಿ ಸಿನಿಮಾ ಸೆಟ್‍ಗೆ ನುಗ್ಗಿದ್ದ ಶಿವಪ್ರಕಾಶ್, ನನ್ನ ಹುಡುಗಿಗೆ ತುಂಡು ಬಟ್ಟೆ ಹಾಕಿ ಫೋಟೋ ಶೂಟ್ ನಡೆಸ್ತೀರಾ ಎಂದು ನಿರ್ಮಾಪಕ ಶ್ರೀನಿವಾಸ್ ರಾಜು ಮೇಲೂ ಹಲ್ಲೆ ನಡೆಸಿದ್ದ ಅನ್ನೋ ಆರೋಪವೂ ಕೇಳಿ ಬರುತ್ತಿದೆ.

  • ನಾನು ಹುಡ್ಗ ಆಗಿದ್ರೆ ತಮನ್ನಾಳನ್ನ ಮದ್ವೆಯಾಗ್ತಿದ್ದೆ: ಶ್ರುತಿ ಹಾಸನ್

    ನಾನು ಹುಡ್ಗ ಆಗಿದ್ರೆ ತಮನ್ನಾಳನ್ನ ಮದ್ವೆಯಾಗ್ತಿದ್ದೆ: ಶ್ರುತಿ ಹಾಸನ್

    ಚೆನ್ನೈ: ನಾನು ಹುಡುಗ ಆಗಿ ಹುಟ್ಟಿದ್ದರೆ, ನಾನು ತಮನ್ನಾ ಭಾಟಿಯಾನನ್ನು ಮದುವೆಯಾಗುತ್ತಿದ್ದೆ ಎಂದು ಬಹುಬಾಷಾ ನಟಿ ಶ್ರುತಿ ಹಾಸನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

    ಇತ್ತೀಚೆಗೆ ಶ್ರುತಿ ಹಾಸನ್ ಫೀಲ್ಮ್ ಫೇರ್ ಮ್ಯಾಗಜೀನ್‍ಗೆ ಸಂದರ್ಶನ ನೀಡಿದ್ದರು. ಈ ವೇಳೆ ಸಂದರ್ಶಕಿ ನೀವು ಹುಡುಗ ಆಗಿ ಹುಟಿದ್ದರೆ, ಯಾರನ್ನು ಡೇಟ್ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆಗ ಶ್ರುತಿ ಹಾಸನ್ ನಾನು ಹುಡುಗ ಆಗಿದ್ದರೆ ತಮನ್ನಾಳನ್ನು ಮದುವೆ ಆಗುತ್ತಿದ್ದೆ ಎಂದು ಉತ್ತರಿಸಿದ್ದಾರೆ.

    ನಾನು ಹುಡುಗ ಆಗಿದಿದ್ರೆ ತಮನ್ನಾಳನ್ನು ಡೇಟ್ ಮಾಡುತ್ತಿದೆ. ಅಲ್ಲದೇ ನಾನು ಆಕೆಯನ್ನೇ ಮದುವೆಯಾಗುತ್ತಿದ್ದೆ. ಏಕೆಂದರೆ ಆಕೆ ಒಳ್ಳೆಯ ಹುಡುಗಿ ಹಾಗೂ ನಾನು ಆಕೆಯನ್ನು ಬಿಟ್ಟುಕೊಡಲು ಇಷ್ಟಪಡುವುದಿಲ್ಲ ಎಂದು ಶ್ರುತಿ ಹಾಸನ್ ಸಂದರ್ಶನದಲ್ಲಿ ಹೇಳಿದ್ದಾರೆ.

    ಶ್ರುತಿ ಹಾಸನ್ ಅವರು ನಟಿಸಿದ ‘ಕಟಮರಾಯುಡು’ ಚಿತ್ರ ಫ್ಲಾಪ್ ಆಗಿತ್ತು. ಇದು ಅವರ ಸಿನಿಮಾ ವೃತ್ತಿಯಲ್ಲಿ ಫ್ಲಾಪ್ ಆದ ದೊಡ್ಡ ಚಿತ್ರ. ಈ ಚಿತ್ರದ ಸೋಲಿನ ನಂತರ ಶ್ರುತಿ ಈಗ ತಮಿಳು ಹಾಗೂ ತೆಲುಗು ಚಿತ್ರರಂಗದಿಂದ ದೂರ ಇದ್ದಾರೆ. ಅಲ್ಲದೇ ಅವರು ಈಗ ಸಿನಿಮಾಗಳನ್ನು ಆಯ್ಕೆ ಮಾಡುವಾಗ ಯೋಚಿಸಿ ಒಪ್ಪಿಕೊಳ್ಳುತ್ತಿದ್ದಾರೆ.

    ಶ್ರುತಿ ಹಾಸನ್ ಈ ಹಿಂದೆ ಪವನ್ ಕಲ್ಯಾಣ್ ಜೊತೆ ‘ಗಬ್ಬರ್ ಸಿಂಗ್’, ರಾಮ್ ಚರಣ್ ಜೊತೆ ‘ಎವಡು’ ಹಾಗೂ ಅಲ್ಲು ಅರ್ಜುನ್ ಜೊತೆ ‘ರೇಸ್ ಗುರಂ’ ಚಿತ್ರಗಳಲ್ಲಿ ನಟಿಸಿದ್ದರು. ಈ ಚಿತ್ರಗಳೆಲ್ಲಾ ಅವರ ಸಿನಿಮಾ ವೃತ್ತಿಯಲ್ಲಿ ಹಿಟ್ ಆಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜ್ ಕುಮಾರ್, ಪಾರ್ವತಮ್ಮ ಇಲ್ಲದೆ ಅನಾಥಳಾಗಿದ್ದೇನೆ- ವಿಜಯಲಕ್ಷ್ಮಿ ಕಣ್ಣೀರು

    ರಾಜ್ ಕುಮಾರ್, ಪಾರ್ವತಮ್ಮ ಇಲ್ಲದೆ ಅನಾಥಳಾಗಿದ್ದೇನೆ- ವಿಜಯಲಕ್ಷ್ಮಿ ಕಣ್ಣೀರು

    – ಸುದೀಪ್ ಬಿಟ್ರೆ ನನ್ನ ಮೇಲೆ ಯಾರಿಗೂ ಕರುಣೆ ಇಲ್ವ
    – ಶಿವಣ್ಣ, ರಾಘಣ್ಣ, ಪುನೀತ್, ಯಶ್, ದರ್ಶನ್ ಯಾರೂ ಮಾತಾಡಿಸ್ತಿಲ್ಲ

    ಬೆಂಗಳೂರು: ಸದ್ಯಕ್ಕೆ ನಾನು ಸ್ವಲ್ಪ ಸುಧಾರಿಸಿಕೊಳ್ಳುತ್ತಿದ್ದೇನೆ. ಔಷಧಿ ಬದಲಾಯಿಸಿದ್ದರಿಂದ ನನ್ನ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಆದ್ರೆ ಈ ಸಮಯದಲ್ಲಿ ನಾನು ರಾಜ್‍ಕುಮಾರ್ ಮತ್ತು ಪಾರ್ವತಮ್ಮ ಅವರನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಇಷ್ಟೊಂದು ನೋವು ಅನುಭವಿಸಲು ಅವರಿಬ್ಬರು ಬಿಡುತ್ತಿರಲಿಲ್ಲ. ಅವರಿಲ್ಲದೆ ನಾನು ಅನಾಥೆಯಾಗಿದ್ದೇನೆ ಎಂದು ನಟಿ ವಿಜಯಲಕ್ಷ್ಮಿ ಮತ್ತೆ ಕಣ್ಣೀರು ಹಾಕಿದ್ದಾರೆ.

    ಇಂಡಸ್ಟ್ರಿಯಲ್ಲಿ ಸುದೀಪ್ ಸರ್ ಬಿಟ್ಟು ಬೇರೆ ಯಾರಿಗೂ ಯಾಕೆ ಕರುಣೆ ಬಂದಿಲ್ಲ. ನಾನು ಏನ್ ತಪ್ಪು ಮಾಡಿದ್ದೀನಿ, ಯಾಕೆ ಎಷ್ಟು ಶಿಕ್ಷೆ ಕೊಡುತ್ತಿದ್ದೀರಿ ಎಂದು ವಿಡಿಯೋ ಮಾಡಿ ನಟಿ ವಿಜಯಲಕ್ಷ್ಮಿ ತನ್ನ ಮನದಾಳದ ನೋವನ್ನು ಹಂಚಿಕೊಂಡಿದ್ದಾರೆ.

    ಈ ಮಧ್ಯೆ ನನ್ನ ಮನಸ್ಸಿನಲ್ಲಿ ಒಂದು ಚಿಕ್ಕ ಕೊರಗು ಇದೆ. ನಾನಿರುವ ಪರಿಸ್ಥಿತಿಯಲ್ಲಿ ಶೀಘ್ರವೇ ನಾನು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಮೊದಲಿಗೆ ನನ್ನ ಬಳಿ ಇರುವುದಕ್ಕೆ ಮನೆಯಿಲ್ಲ. ಬಾಡಿಗೆ ಮನೆಗೆ ಹೋಗೋಣ ಎಂದರೆ ಅಡ್ವಾನ್ಸ್ ಕೊಡುವುದಕ್ಕೂ ಹಣ ಇಲ್ಲ. ಈ ಬಗ್ಗೆ ನಾನು ಮೂರು ತಿಂಗಳಿಂದ ಹೇಳುತ್ತಿದ್ದೇನೆ. ಆದ್ರೆ ಯಾರ ಬಳಿ ಹೇಳಿದರೂ ಮೊದಲಿಗೆ ಮಾತನಾಡುತ್ತಾರೆ. ನಂತರ ಅವರು ನನ್ನ ಫೋನ್ ರಿಸೀವ್ ಮಾಡುವುದಿಲ್ಲ. ಮನೆ ಇಲ್ಲದ ಕಾರಣ ನಾನು ಮನೆ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನನ್ನ ಆರೋಗ್ಯ ಹದಗೆಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಸುದೀಪ್ ಸರ್ ಹಾಗೂ ಇಂಡಸ್ಟ್ರಿಯಲ್ಲಿ ಎಲ್ಲರೂ ಸಹಾಯ ಮಾಡುತ್ತಿದ್ದಾರೆ. ಆದರೆ ಇಂತಹ ಪರಿಸ್ಥಿತಿಯಲ್ಲಿ ರಾಜ್‍ಕುಮಾರ್ ಮತ್ತು ಪಾರ್ವತಮ್ಮ ಅವರು ಇರುತ್ತಿದ್ದರೆ ನಾನು ಇಷ್ಟೊಂದು ನೋವು ಅನುಭವಿಸಲು ಬಿಡುತ್ತಿರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಟಿ ವಿಜಯಲಕ್ಷ್ಮಿ ಚಿಕಿತ್ಸೆಗೆ ಸಹಾಯಹಸ್ತ ಚಾಚಿದ ಕಿಚ್ಚ

    ಸುದೀಪ್ ಸರ್ ಬಿಟ್ಟರೆ ಶಿವಣ್ಣ, ರಾಘಣ್ಣ, ಪುನೀತ್, ಯಶ್, ದರ್ಶನ್ ತುಂಬಾ ಜನರು ಇದ್ದಾರೆ. ಆದರೆ ಯಾರು ನನ್ನ ಬಳಿ ಮಾತನಾಡುತ್ತಿಲ್ಲ. ಶೀಘ್ರದಲ್ಲೇ ನಾನು ಕೆಲಸಕ್ಕೆ ಹೋಗಲು ಸಾಧ್ಯವಿಲ್ಲ. ಸುದೀಪ್ ಕೊಟ್ಟ ಒಂದು ಲಕ್ಷವನ್ನು ಆಸ್ಪತ್ರೆಗೆ ಕೊಟ್ಟಿದ್ದೇನೆ. ನಾನು ಮನೆಗೆ ಹೋಗಬೇಕು. ದಯವಿಟ್ಟು ಯಾರಾದರೂ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಟಿ ವಿಜಯಲಕ್ಷ್ಮಿ ನೆರವಿಗೆ ಧಾವಿಸಿದ ಫಿಲ್ಮ್ ಚೇಂಬರ್

    ವಿಜಯಲಕ್ಷ್ಮಿ ಅವರು ತೀವ್ರ ಜ್ವರ ಹಾಗೂ ಅಧಿಕ ರಕ್ತದೊತ್ತಡದಿಂದಾಗಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆಯ ಖರ್ಚು ಭರಿಸುವ ಹಣವಿಲ್ಲದೆ ವಿಜಯಲಕ್ಷ್ಮಿ ಅವರ ಸಹೋದರಿ ಚಿತ್ರರಂಗದ ಸಹಾಯ ಕೋರಿದ್ದರು. ಈ ಸುದ್ದಿಯನ್ನು ಪಬ್ಲಿಕ್ ಟಿವಿ ವರದಿ ಮಾಡಿತ್ತು. ವರದಿಯಿಂದ ವಿಜಯಲಕ್ಷ್ಮಿ ಅವರ ಸಹಾಯಕ್ಕೆ ಆಗಮಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದರು. ಇದನ್ನೂ ಓದಿ: ನಟಿ ವಿಜಯಲಕ್ಷ್ಮಿ ಆಸ್ಪತ್ರೆಗೆ ದಾಖಲು- ಸಹಾಯಕ್ಕಾಗಿ ಚಿತ್ರರಂಗದ ಮೊರೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೀಟೂ ಕೇಸ್‍ಗೆ ಸಾಕ್ಷಿಗಳ ಕೊರತೆ- ಸೂಕ್ತ ದಾಖಲೆಗಳಿಲ್ಲದೆ ಪೊಲೀಸರು ಕಂಗಾಲು

    ಮೀಟೂ ಕೇಸ್‍ಗೆ ಸಾಕ್ಷಿಗಳ ಕೊರತೆ- ಸೂಕ್ತ ದಾಖಲೆಗಳಿಲ್ಲದೆ ಪೊಲೀಸರು ಕಂಗಾಲು

    ಬೆಂಗಳೂರು: ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಪ್ರಕರಣ ಹಳ್ಳ ಹಿಡಿಯುವ ಎಲ್ಲ ಲಕ್ಷಣಗಳು ಕಾಣುತ್ತಿದೆ. ತನಿಖೆಗಿಳಿದ ಪೊಲೀಸರಿಗೆ ಯುಬಿ ಸಿಟಿಯ ಸೆಕ್ಯೂರಿಟಿ ಗಾರ್ಡ್‍ಗಳು ತಲೆನೋವಾಗಿ ಪರಿಣಮಿಸಿದ್ದಾರೆ.

    ಹೌದು. ನಟಿ ಶ್ರುತಿ ಹರಿಹರನ್ ಅವರು ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಕಬ್ಬನ್ ಪಾರ್ಕ್ ಪೊಲೀಸರು, ಮೊದಲಿಗೆ ನಟ ಅರ್ಜುನ್ ಸರ್ಜಾ, ವಿಸ್ಮಯ ಚಿತ್ರದ ನಿರ್ದೇಶಕ, ನಿರ್ಮಾಪಕ ಸೇರಿದಂತೆ ಸಾಕಷ್ಟು ಜನರನ್ನು ಮೀಟೂ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಹೇಳಿಕೆಗಳನ್ನು ಪಡೆದುಕೊಂಡಿದ್ದರು.

    ವಿಸ್ಮಯ ಚಿತ್ರ ಚಿತ್ರೀಕರಣದ ವೇಳೆ ನಂಗೆ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ರು. ಯುಬಿ ಸಿಟಿಯಲ್ಲಿ ರೂಮ್ ನಲ್ಲಿ ಒಬ್ಬನೇ ಇದೇನಿ, ಬಾ ಸ್ವಲ್ಪ ಹೊತ್ತು ಕಾಲ ಕಳೆಯೋಣ ಅಂತಾ ನನ್ನನ್ನು ಕರೆದ್ರು ಎಂದು ನಟಿ ಶ್ರುತಿ ಹರಿಹರನ್ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಆ ವೇಳೆ ಯುಬಿ ಸಿಟಿಯಲ್ಲಿ ಕೆಲಸ ಮಾಡ್ತಿದ್ದ ಸೆಕ್ಯೂರಿಟಿ ಗಾರ್ಡ್ ಗಳನ್ನು ವಿಚಾರಣೆ ನಡೆಸೋಕೆ ಹೋದ ಪೊಲೀಸರಿಗೆ ಶಾಕ್ ಆಗಿದೆ. ಯಾಕಂದ್ರೆ ಆ ಘಟನೆ ನಡೆದ ನಂತ್ರ ಹತ್ತಾರು ಸೆಕ್ಯೂರಿಟಿ ಗಾರ್ಡ್‍ಗಳು ಕೆಲಸಬಿಟ್ಟಿರೋದಲ್ಲದೇ, ಸೆಕ್ಯೂರಿಟಿ ಏಜೆನ್ಸಿಯನ್ನೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಅಲ್ಲಿದ್ದ ಕೆಲ ಸಿಬ್ಬಂದಿ ಕೂಡ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಬಾಯಿ ಬಿಡ್ತಿಲ್ಲ.

    ಈ ಎಲ್ಲಾ ಘಟನೆಗಳಿಂದ ಬೇಸತ್ತ ಕಬ್ಬನ್ ಪಾರ್ಕ್ ಪೊಲೀಸರು, ಸೂಕ್ತ ಸಾಕ್ಷಿಗಳ ಕೊರತೆಯ ನಡುವೆಯೇ ಚಾರ್ಜ್ ಶೀಟ್ ಸಲ್ಲಿಸೋಕೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಈ ಮೇಲಿನ ಕೆಲ ಅಂಶಗಳನ್ನು ನೋಡ್ತಿದ್ರೆ, ಪ್ರಕರಣ ಹಳ್ಳ ಹಿಡಿಯೋದು ಗ್ಯಾರಂಟಿ ಎಂದು ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv