Tag: actress

  • ನಟಿ ಶೃತಿ ಹರಿಹರನ್ #MeToo ಆರೋಪಕ್ಕೆ ಧರ್ಮದ ನಂಟು..!

    ನಟಿ ಶೃತಿ ಹರಿಹರನ್ #MeToo ಆರೋಪಕ್ಕೆ ಧರ್ಮದ ನಂಟು..!

    ಬೆಂಗಳೂರು: ನಟಿ ಶೃತಿ ಹರಿಹರನ್ ಅವರು ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ `ಲೈಂಗಿಕ ಕಿರುಕುಳ’ ಆರೋಪ ಮಾಡಿರುವುದು ಇದೀಗ ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಇದಕ್ಕೆ ಇದೀಗ ಧರ್ಮದ ನಂಟು ಅಂಟಿಸಲಾಗಿದೆ.

    ಅರ್ಜುನಾ ಸರ್ಜಾ ಅವರು ಹನುಮ ಭಕ್ತ, ಆರೋಪದ ಹಿಂದೆ ಹಿಂದೂ ವಿರೋಧಿ ಅಜೆಂಡಾವಿದೆ. ಸರ್ಜಾ ಅವರು ಹಿಂದೂಧರ್ಮ ಅನುಸರಿಸುತ್ತಾರೆ. ಅವರು ಚೆನ್ನೈನಲ್ಲಿ ಹನುಮನ ಮೂರ್ತಿ ನಿರ್ಮಿಸಿದ್ದಾರೆ. ಅರ್ಜುನ್ ಸರ್ಜಾ ಅವರ ತಂದೆ ಆರ್‍ಎಸ್‍ಎಸ್‍ನಲ್ಲಿದ್ದವರು ಎಂದು ಅರ್ಜುನ್ ಸರ್ಜಾ ಪರ ಕನ್ನಡ ಹೋರಾಟಗಾರ, ಉದ್ಯಮಿ ಪ್ರಶಾಂತ್ ಸಂಬರ್ಗಿ ನಿಂತಿದ್ದಾರೆ.

    ಶೃತಿ ಹರಿಹರನ್ ತಂದೆ ಕಮ್ಯೂನಿಸ್ಟ್ ಬೆಂಬಲಿಗರು. ಶೃತಿ ಹರಿಹರನ್ ಅವರ ಮೀಟೂ ಆರೋಪದ ಹಿಂದೆ ಮೋದಿ ವಿರೋಧಿ, ಹಿಂದೂ ವಿರೋಧಿ, ಬಿಜೆಪಿ ವಿರೋಧಿ ಅಜೆಂಡಾವಿದೆ. ಕವಿತಾ ಲಂಕೇಶ್, ನಟ ಚೇತನ್, ರೂಪಾ ಅಯ್ಯರ್ ಇವರೆಲ್ಲ ಕನ್ನಡ ಸಿನಿಮಾ ಲೋಕದ ಎಡಪಂಥಿಯರು. ಪ್ರಕಾಶ್ ರೈ ಅಂತ ವುಮೆನೈಜರ್ ಹಿಂದೆ ಮುಂದೆ ನೋಡದೆ ಸಪೋರ್ಟ್ ಮಾಡ್ತಿದ್ದಾರೆ. ಇದು ಸಂಪೂರ್ಣ ವ್ಯವಸ್ಥಿತವಾದ ಪೊಲಿಟಿಕಲ್ ಡ್ರಾಮಾ ಎಂದು ಪ್ರಶಾಂತ್ ಸಂಬರ್ಗಿ ಕಿಡಿಕಾರಿದ್ದಾರೆ. ಇದನ್ನು ಓದಿ: ತಾವೇ ಆಂಜನೇಯ ಮೂರ್ತಿಗೆ ಕೆತ್ತನೆ ಮಾಡಿದ ಅರ್ಜುನ್ ಸರ್ಜಾ – ವಿಡಿಯೋ

    ಶೃತಿ ಹರಿಹರನ್ ಆರೋಪವೇನು?:
    ಮ್ಯಾಗಜೀನ್‍ವೊಂದರ ಸಂದರ್ಶನದ ವೇಳೆ ನಟ ಅರ್ಜುನ್ ವಿರುದ್ಧ ಆರೋಪ ಮಾಡಿದ ಶೃತಿ ಹರಿಹರನ್, ವಿಸ್ಮಯ ಚಿತ್ರೀಕರಣದ ವೇಳೆ ತನ್ನ ಮೇಲಾದ ಲೈಂಗಿಕ ಕಿರುಕುಳವಾದ ಅನುಭವವನ್ನು ಬಿಚ್ಚಿಟ್ಟಿದ್ದರು. ಕಳೆದ ವರ್ಷ `ವಿಸ್ಮಯ’ ಅನ್ನೋ ಸಿನಿಮಾವೊಂದನ್ನು ನಾನು ಮಾಡಿದ್ದೆ. ಚಿತ್ರದಲ್ಲಿ ಅರ್ಜುನ್ ಅರ್ಜಾ ಅವರು ನನ್ನ ಸಹನಟನಾಗಿ ಅಭಿನಯಿಸಿದ್ದರು. ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ `ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ `ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ದರು.

    ಇಷ್ಟೆಲ್ಲಾ ಆದ್ರೂ ಅರ್ಜುನ್ ಸರ್ಜಾ ಮಾತ್ರ ವಿಚಲಿತನಾದಂತೆ ಕಾಣಲಿಲ್ಲ. ಯಾಕಂದ್ರೆ ಅದಾದ ಬಳಿಕ ಅವರು ನನ್ನ ಜೊತೆ ಮಾತನಾಡುವಾಗಲೂ ಬಳಸಿದ ಭಾಷೆ ಸಭ್ಯವಾಗಿರಲಿಲ್ಲ. ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. `ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಆರಂಭಿಸಿದ್ರು. ಹೀಗೆ ಕರೆಯುವಾಗ ನಾನು ನೇರವಾಗಿ `ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. `ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಯಾಕಂದ್ರೆ ಅವರಿಗೆ ಹೀಗೆ ಕರೆದಾಗ ಯಾರೂ `ನೋ’ ಅಂತ ಹೇಳಿರಲಿಲ್ಲವೋ ಏನೋ, ಅದಕ್ಕೆ ಅವರು ನನ್ನ ನೇರ ಮಾತುಗಳನ್ನು ಕಡೆಗಣಿಸುತ್ತಿದ್ದರು ಅಂತ ಅವರು ತನಗಾದ ಅನುಭವವನ್ನು ಬಿಚ್ಚಿಟ್ಟಿದ್ದರು.

    ಅರ್ಜುನ್ ಸರ್ಜಾ ಹೇಳಿದ್ದೇನು?
    ಶೃತಿ ಆರೋಪದಿಂದ ನನಗೆ ತುಂಬಾ ನೋವಾಗಿದೆ. ಇದೂವರೆಗೂ ನಾನು 60 ರಿಂದ 70 ನಟಿಯರ ಜೊತೆ ನಟಿಸಿದ್ದೇನೆ. ಯಾರೂ ಸಹ ಈ ರೀತಿಯ ಆರೋಪ ಮಾಡಿಲ್ಲ. ಜೊತೆಯಲ್ಲಿಯೂ ಕೂರಿಸಿಕೊಂಡು ದೃಶ್ಯದಲ್ಲಿ ಹೇಗೆ ನಟಿಸಬೇಕು? ಡೈಲಾಗ್ ನಲ್ಲಿ ಏನಾದರೂ ಬದಲಾವಣೆ ಮಾಡಬೇಕು ಎಂಬುದರ ಕುರಿತು ಚರ್ಚಿಸುತ್ತೇವೆ. ನಮ್ಮ ವೃತ್ತಿಯನ್ನು ಮುಂದಿಟ್ಟುಕೊಂಡು ಇಂತಹ ಕೆಳಮಟ್ಟದಲ್ಲಿ ನಾನು ಎಂದೂ ಇಳಿದಿಲ್ಲ. ನಮ್ಮ ಪ್ರೊಫೆಶನ್ ಮುಂದೆ ಇಟ್ಟುಕೊಂಡು ಒಂದು ಹೆಣ್ಣಿನ ಮೈ ಮುಟ್ಟಬೇಕು ಎಂಬ ಚೀಪ್ ಮೆಂಟಾಲಿಟಿ ನನ್ನಲ್ಲಿ ಇಲ್ಲ. ನಾನು ಮೀಟೂ ವೇದಿಕೆ ಬಗ್ಗೆ ತುಂಬಾ ಗೌರವ ಹೊಂದಿದ್ದೇನೆ. ಈ ದೊಡ್ಡ ಅಭಿಯಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಶೃತಿ ಮಾತನಾಡುವ ಮಾತುಗಳಿಗೆ ಯಾವುದಾದರೂ ಆಧಾರವಿದೆಯಾ? ಶೃತಿ ಆರೋಪದ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಅಂತ ಹೇಳಿದ್ದರು.

    ನಾನು ಪ್ರತಿಕ್ರಿಯಿಸಬಾರದು ಅಂತಾ ನಿರ್ಧರಿಸಿದ್ದೆ. ಆದ್ರೆ `ಮೌನಂ ಸಮ್ಮತಿ ಲಕ್ಷ್ಮಣಂ’ ಎಂದು ಅರ್ಥವಾಗುತ್ತದೆ ಎಂದು ಪಬ್ಲಿಕ್ ಟಿವಿ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದೇನೆ. ಒಂದೂವರೆ ವರ್ಷದ ಹಿಂದೆ ನಡೆದ ಸಿನಿಮಾ ಮುಗಿದಿದೆ. ಅಂದೇ ನಿರ್ದೇಶಕರಿಗೆ ಅಥವಾ ಚಲನಚಿತ್ರ ಮಂಡಳಿಗೆ ದೂರು ಕೊಡಬೇಕಿತ್ತು. ಇಷ್ಟು ದಿನ ಸುಮ್ಮನಿದ್ದು ಈವಾಗ ಯಾಕೆ ಹೇಳುತ್ತಿದ್ದಾರೆಂದು ಗೊತ್ತಿಲ್ಲ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=LFKlX3O1iuM

    https://www.youtube.com/watch?v=CT09s2HQWKY

  • #MeToo ಅಭಿಯಾನವನ್ನು ಸಮರ್ಥಿಸಿಕೊಂಡ್ರು ಶೃತಿ ಹರಿಹರನ್

    #MeToo ಅಭಿಯಾನವನ್ನು ಸಮರ್ಥಿಸಿಕೊಂಡ್ರು ಶೃತಿ ಹರಿಹರನ್

    ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿದ ಆರೋಪವನ್ನು ನಟಿ ಶೃತಿ ಹರಿಹರನ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

    ಫೇಸ್ ಬುಕ್ ನಲ್ಲಿ ಏನಿದೆ?:
    ನಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯಗಳನ್ನು ಹೇಳಿಕೊಳ್ಳಲು #MeToo ಅಭಿಯಾನವೊಂದು ವೇದಿಕೆಯಾಗಿದೆ. ಈ ಮೂಲಕ ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಹೊರಹಾಕಲಾಗುತ್ತಿದೆ.

    ಹಾಗೆಯೇ ನನಗೂ ಇಂದು ನನ್ನ ಮೌನ ಮುರಿಯುವ ಸಮಯವಿದು. ನನ್ನಂತೆ ಸಮಾಜದ ಬಹಳಷ್ಟು ಹೆಣ್ಣು ಮಕ್ಕಳು ಯಾತನೆ ಅನುಭವಿಸಿದ್ದಾರೆ. ಇಲ್ಲಿ ನಾನು ಅನುಭವಿಸಿದ ಯಾತನೆಯನ್ನು ಬಹಿರಂಗಪಡಿಸಿದ್ದೇನೆ. ನನಗೆ ಅರ್ಜುನ್ ಸರ್ಜಾ ಮಾತ್ರವಲ್ಲದೇ ಬಹಳಷ್ಟು ಮಂದಿಯಿಂದ ಮೀಟೂ ಅನುಭವವಾಗಿದೆ. ಈ ಬಗ್ಗೆ ಹೇಳಿಕೊಳ್ಳಲು ಧೈರ್ಯ ಮಾಡಿದ್ದೇನೆ. ಮಾತ್ರವಲ್ಲದೇ ಈ ಬಗ್ಗೆ ಶೀಘ್ರವೇ ಪತ್ರಿಕಾಗೋಷ್ಠಿ ನಡೆಸಿ ಇನ್ನೊಂದಷ್ಟು ವಿಚಾರಗಳನ್ನು ತಿಳಿಸುವುದಾಗಿ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

    18 ವರ್ಷದವಳಿದ್ದಾಗಲೇ ನನಗೆ ಚಿತ್ರರಂಗದ ದೌರ್ಜನ್ಯದ ಬಗ್ಗೆ ಅನುಭವವಾಗಿದೆ. ಚಿತ್ರರಂಗದ ಹಿರಿಯರೊಬ್ಬರು ನನ್ನ ಕಾಲನ್ನೂ ಕೂಡ ಹಿಡಿದಿದ್ರೂ, ನಾನು ಭಯದಿಂದ ಓಡಿಹೋಗಿದ್ದೆ ಅಂತ ಚಿಂತ್ರರಂಗದಲ್ಲಿ ಅನುಭವಿಸಿದ್ದ ಯಾತನೆಗಳನ್ನು ಈ ಹಿಂದೆ ಶೃತಿ ಅವರು ಎಳೆಎಳೆಯಾಗಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡುತ್ತಾ ಬಿಚ್ಚಿಟ್ಟಿದ್ದರು.

    ಆರೋಪವೇನು?:
    ಕಳೆದ ವರ್ಷ ‘ವಿಸ್ಮಯ’ ಅನ್ನೋ ಸಿನಿಮಾವೊಂದನ್ನು ನಾನು ಮಾಡಿದ್ದೆ. ಚಿತ್ರದಲ್ಲಿ ಅರ್ಜುನ್ ಅರ್ಜಾ ಅವರು ನನ್ನ ಸಹನಟನಾಗಿ ಅಭಿನಯಿಸಿದ್ದರು. ‘ವಿಸ್ಮಯ’ ಸಿನಿಮಾಕ್ಕೂ ಮೊದಲು ನಾನು ಹಲವು ಸಿನಿಮಾಗಳನ್ನು ಮಾಡಿದ್ದೇನೆ. ಹಲವು ನಟರ ಜೊತೆಯೂ ಅಭಿನಯಿಸಿದ್ದೇನೆ. ಇಂದಿಗೂ ನನಗೆ ಬೇರೆ ನಟರ ಜೊತೆ ನಟಿಸುವಾಗ ಯಾವ ತೊಂದರೆಗಳೂ ಆಗಿಲ್ಲ. ಚಿತ್ರೀಕರಣದ ಸಂದರ್ಭದಲ್ಲಿ ನಾವು ಪರಸ್ಪರ ಗೌರವದಿಂದಲೇ ನಡೆದುಕೊಳ್ಳುತ್ತಿದ್ದೇವು. ನಾಯಕ-ನಾಯಕಿಯ ನಡುವಿನ ಪ್ರಣಯದ ದೃಶ್ಯಗಳನ್ನು ಚಿತ್ರೀಕರಿಸುವ ಸಂದರ್ಭಗಳಲ್ಲಿಯೂ ಕಲಾವಿದರ ನಡುವೆ ಬಹುಸೂಕ್ಷ್ಮವಾದ ಒಂದು ಗಡಿ ರೇಖೆ ಇರುತ್ತದೆ. ಅದನ್ನು ಮೀರಿ ನಾವು ನಡೆದುಕೊಳ್ಳುತ್ತಿರಲಿಲ್ಲ. ಒಂದು ವೇಳೆ ಆ ರೇಖೆಯನ್ನು ದಾಟಿದ್ರೆ ಹೆಣ್ಣಿಗೆ ಇರುಸು ಮುರುಸು ಉಂಟಾಗಲು ಆರಂಭವಾಗುತ್ತದೆ. ‘ವಿಸ್ಮಯ’ ಚಿತ್ರದ ಶೂಟಿಂಗ್ ವೇಳೆ ಆಗಿದ್ದು ಇದೇ. ಚಿತ್ರೀಕರಣದ ವೇಳೆ ನಟ ಅರ್ಜುನ್ ಸರ್ಜಾ ಅವರು ಗಡಿರೇಖೆ ದಾಟಿದ್ದರು ಅಂತ ಅವರು ಮ್ಯಾಗಜಿನ್ ಒಂದು ಸಂದಶನದ ವೇಳೆ ನಡೆದಿದ್ದ ಘಟನೆಯ ಮೆಲುಕು ಹಾಕಿದ್ದರು.

    ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ ‘ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಸಕರ ಬಳಿ ತೆರಳಿ ‘ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ದರು.

    ಇಷ್ಟೆಲ್ಲಾ ಆದ್ರೂ ಅರ್ಜುನ್ ಸರ್ಜಾ ಮಾತ್ರ ವಿಚಲಿತನಾದಂತೆ ಕಾಣಲಿಲ್ಲ. ಯಾಕಂದ್ರೆ ಅದಾದ ಬಳಿಕ ಅವರು ನನ್ನ ಜೊತೆ ಮಾತನಾಡುವಾಗಲೂ ಬಳಸಿದ ಭಾಷೆ ಸಭ್ಯವಾಗಿರಲಿಲ್ಲ. ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. ‘ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಆರಂಭಿಸಿದ್ರು. ಹೀಗೆ ಕರೆಯುವಾಗ ನಾನು ನೇರವಾಗಿ ‘ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ‘ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಯಾಕಂದ್ರೆ ಅವರಿಗೆ ಹೀಗೆ ಕರೆದಾಗ ಯಾರೂ `ನೋ’ ಅಂತ ಹೇಳಿರಲಿಲ್ಲವೋ ಏನೋ, ಅದಕ್ಕೆ ಅವರು ನನ್ನ ನೇರ ಮಾತುಗಳನ್ನು ಕಡೆಗಣಿಸುತ್ತಿದ್ದರು ಅಂತ ಅವರು ತನಗಾದ ಅನುಭವವನ್ನು ಬಿಚ್ಚಿಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=Pvb9crCfEe4

    https://www.youtube.com/watch?v=uw6_G0ZSGlY

    https://www.youtube.com/watch?v=b38lBhiL-y8

  • ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು #MeToo- ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಆರೋಪ

    ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು #MeToo- ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಆರೋಪ

    ಬೆಂಗಳೂರು: ನಟಿ ಸಂಜನಾ ಗಲ್ರಾಣಿ ಅವರ #MeToo ಆರೋಪದ ಬೆನ್ನಲ್ಲೇ ಇದೀಗ ಶೃತಿ ಹರಿಹರನ್ ಕೂಡ ಫೇಮಸ್ ನಟನ ವಿರುದ್ಧವೇ ಆರೋಪವೊಂದನ್ನು ಮಾಡಿದ್ದಾರೆ.

    ಹೌದು. ನಟಿ ಶೃತಿ ಹರಿಹರನ್ ಅವರು ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಈ ಆರೋಪ ಎಸಗಿದ್ದಾರೆ. ಮ್ಯಾಗಜೀನ್‍ವೊಂದರ ಸಂದರ್ಶನದ ವೇಳೆ ನಟ ಅರ್ಜುನ್ ವಿರುದ್ಧ ಆರೋಪ ಮಾಡಿದ ಶೃತಿ ಹರಿಹರನ್, ವಿಸ್ಮಯ ಚಿತ್ರೀಕರಣದ ವೇಳೆ ತನ್ನ ಮೇಲಾದ ಲೈಂಗಿಕ ಕಿರುಕುಳವಾದ ಅನುಭವವನ್ನು ಬಿಚ್ಚಿದ್ದಾರೆ. ಇದನ್ನೂ ದಿನ:  50ಕ್ಕೂ ಹೆಚ್ಚು ಕಿಸ್ಸಿಂಗ್ ಸೀನ್ ಮಾಡಿಸಿದ್ರು- ಸ್ಯಾಂಡಲ್‍ವುಡ್ ನಿರ್ದೇಶಕನ ವಿರುದ್ಧ ಸಂಜನಾ #Metoo ಆರೋಪ

    ಆರೋಪವೇನು?:
    ಕಳೆದ ವರ್ಷ ‘ವಿಸ್ಮಯ’ ಅನ್ನೋ ಸಿನಿಮಾವೊಂದನ್ನು ನಾನು ಮಾಡಿದ್ದೆ. ಚಿತ್ರದಲ್ಲಿ ಅರ್ಜುನ್ ಅರ್ಜಾ ಅವರು ನನ್ನ ಸಹನಟನಾಗಿ ಅಭಿನಯಿಸಿದ್ದರು. ‘ವಿಸ್ಮಯ’ ಸಿನಿಮಾಕ್ಕೂ ಮೊದಲು ನಾನು ಹಲವು ಸಿನಿಮಾಗಳನ್ನು ಮಾಡಿದ್ದೇನೆ. ಹಲವು ನಟರ ಜೊತೆಯೂ ಅಭಿನಯಿಸಿದ್ದೇನೆ. ಇಂದಿಗೂ ನನಗೆ ಬೇರೆ ನಟರ ಜೊತೆ ನಟಿಸುವಾಗ ಯಾವ ತೊಂದರೆಗಳೂ ಆಗಿಲ್ಲ. ಚಿತ್ರೀಕರಣದ ಸಂದರ್ಭದಲ್ಲಿ ನಾವು ಪರಸ್ಪರ ಗೌರವದಿಂದಲೇ ನಡೆದುಕೊಳ್ಳುತ್ತಿದ್ದೇವು. ನಾಯಕ-ನಾಯಕಿಯ ನಡುವಿನ ಪ್ರಣಯದ ದೃಶ್ಯಗಳನ್ನು ಚಿತ್ರೀಕರಿಸುವ ಸಂದರ್ಭಗಳಲ್ಲಿಯೂ ಕಲಾವಿದರ ನಡುವೆ ಬಹುಸೂಕ್ಷ್ಮವಾದ ಒಂದು ಗಡಿ ರೇಖೆ ಇರುತ್ತದೆ. ಅದನ್ನು ಮೀರಿ ನಾವು ನಡೆದುಕೊಳ್ಳುತ್ತಿರಲಿಲ್ಲ. ಒಂದು ವೇಳೆ ಆ ರೇಖೆಯನ್ನು ದಾಟಿದ್ರೆ ಹೆಣ್ಣಿಗೆ ಇರುಸು ಮುರುಸು ಉಂಟಾಗಲು ಆರಂಭವಾಗುತ್ತದೆ. ‘ವಿಸ್ಮಯ’ ಚಿತ್ರದ ಶೂಟಿಂಗ್ ವೇಳೆ ಆಗಿದ್ದು ಇದೇ. ಚಿತ್ರೀಕರಣದ ವೇಳೆ ನಟ ಅರ್ಜುನ್ ಸರ್ಜಾ ಅವರು ಗಡಿರೇಖೆ ದಾಟಿದ್ದರು ಅಂತ ಅವರು ಘಟನೆಯ ಮೆಲುಕು ಹಾಕಿದ್ರು. ಇದನ್ನೂ ದಿನ:   #MeToo ಸುಳಿಯಲ್ಲಿ ಕೇಂದ್ರ ಸಚಿವ ಸದಾನಂದಗೌಡ!

    ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ ‘ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ ‘ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ರು. ಇದನ್ನೂ ದಿನ: #MeToo ಅಭಿಯಾನವನ್ನ ಕೆಲವರು ಪ್ರಚಾರಕ್ಕೆ ಬಳಸಿಕೊಳ್ತಿದ್ದಾರೆ: ನಟಿ ರಾಗಿಣಿ

    ಇಷ್ಟೆಲ್ಲಾ ಆದ್ರೂ ಅರ್ಜುನ್ ಸರ್ಜಾ ಮಾತ್ರ ವಿಚಲಿತನಾದಂತೆ ಕಾಣಲಿಲ್ಲ. ಯಾಕಂದ್ರೆ ಅದಾದ ಬಳಿಕ ಅವರು ನನ್ನ ಜೊತೆ ಮಾತನಾಡುವಾಗಲೂ ಬಳಸಿದ ಭಾಷೆ ಸಭ್ಯವಾಗಿರಲಿಲ್ಲ. ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. ‘ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಆರಂಭಿಸಿದ್ರು. ಹೀಗೆ ಕರೆಯುವಾಗ ನಾನು ನೇರವಾಗಿ ‘ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ‘ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಯಾಕಂದ್ರೆ ಅವರಿಗೆ ಹೀಗೆ ಕರೆದಾಗ ಯಾರೂ `ನೋ’ ಅಂತ ಹೇಳಿರಲಿಲ್ಲವೋ ಏನೋ, ಅದಕ್ಕೆ ಅವರು ನನ್ನ ನೇರ ಮಾತುಗಳನ್ನು ಕಡೆಗಣಿಸುತ್ತಿದ್ದರು ಅಂತ ಅವರು ತನಗಾದ ಅನುಭವವನ್ನು ಬಿಚ್ಚಿಟ್ಟರು. ಇದನ್ನೂ ದಿನ:  #MeToo ಅಭಿಯಾನ – ರವಿಚಂದ್ರನ್ ಬಗ್ಗೆ ಸತ್ಯ ಬಿಚ್ಚಿಟ್ಟ ಖುಷ್ಬೂ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿನಿಮಾದಲ್ಲಿ ಚಾನ್ಸ್ ಕೊಡ್ತೀನಿ ಕಮಿಟ್ ಆಗ್ತೀಯಾ? ಸ್ಯಾಂಡಲ್‍ವುಡ್ ನಿರ್ದೇಶಕನ ಮೇಲೆ ಯುವನಟಿ ಗಂಭೀರ ಆರೋಪ

    ಸಿನಿಮಾದಲ್ಲಿ ಚಾನ್ಸ್ ಕೊಡ್ತೀನಿ ಕಮಿಟ್ ಆಗ್ತೀಯಾ? ಸ್ಯಾಂಡಲ್‍ವುಡ್ ನಿರ್ದೇಶಕನ ಮೇಲೆ ಯುವನಟಿ ಗಂಭೀರ ಆರೋಪ

    ಬೆಂಗಳೂರು: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ತಿಳಿಸಿದ್ದ ನಿರ್ದೇಶಕರೊಬ್ಬರು, ಬಳಿಕ ಚಾನ್ಸ್ ಬೇಕಾದರೆ ಕಮಿಟ್ ಮೆಂಟ್ ಕೇಳಿದ್ದರು ಎಂದು ಸ್ಯಾಂಡಲ್‍ವುಡ್ ಯುವ ನಟಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

    `ಗೋರಿ ಮೇಲೆ ಲಗೋರಿ’ ಎಂಬ ಸಿನಿಮಾ ನಿರ್ದೇಶಕ ಎಸ್‍ಪಿ ಪ್ರಕಾಶ್ ವಿರುದ್ಧ ಯುವ ನಟಿ ಆರೋಪ ಮಾಡಿದ್ದಾರೆ. ಸಿನಿಮಾ ರಂಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಪ್ರಕರಣಗಳು ಬೆಳಕಿಗೆ ಬರುತ್ತಿರುವ ವೇಳೆಯೇ ಯುವ ನಟಿ ತಮಗಾದ ಅನುಭವವನ್ನು ಬಿಚ್ಚಿಟ್ಟಿದ್ದಾರೆ.

    ಕನ್ನಡ ಸಿನಿಮಾ ಕ್ಷೇತ್ರದಲ್ಲೂ ನಟಿಯನ್ನು ಗುರಿ ಮಾಡಿ ಮಂಚಕ್ಕೆ ಕರೆಯವು ನಿರ್ದೇಶಕರಿದ್ದಾರೆ ಎಂದು ಹೇಳಿರುವ ಯುವ ನಟಿ, ಮೊದಲು ನನಗೆ ಸಿನಿಮಾದಲ್ಲಿ ಚಾನ್ಸ್ ನೀಡುವ ಕುರಿತು ಹೇಳಿದ್ದರು. ಬಳಿಕ ಕಮಿಟ್ ಆಗುತ್ತಿಯಾ, ಹಣ ಕೊಡುತ್ತೇನೆ ಎಂದು ಎಸ್ ಪಿ ಪ್ರಕಾಶ್ ಕೇಳಿದ್ದರು ಎಂದು ನಟಿ ಹೇಳಿದ್ದಾರೆ. ಅಲ್ಲದೇ ಈ ಕುರಿತು ಫೀಲಂ ಚೇಂಬರ್‍ಗೆ ದೂರು ನೀಡುವುದಾಗಿ ಹೇಳಿದ ವೇಳೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

    ನನಗೆ ಪೋಲೀಸ್, ರಾಜಕೀಯ ನಾಯಕರು ಹಾಗೂ ರೌಡಿಗಳು ಗೊತ್ತು. ನೀನು ದೂರು ನೀಡಿದರೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ನಿರ್ದೇಶಕರು ಬೆದರಿಕೆ ಹಾಕಿದ್ದರು ಎಂದು ನಟಿ ಹೇಳಿದ್ದು, ಈ ಕುರಿತ ವಾಟ್ಸಾಪ್ ಮೇಸೆಜ್‍ಗಳ ಸ್ಕ್ರಿನ್ ಶಾಟ್ ಫೋಟೋ ಶೇರ್ ಮಾಡಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಮೀಟೂ ಅಭಿಯಾನ ಆರಂಭವಾದ ಬಳಿಕ ತನಗಾದ ಕಿರುಕುಳದ ಕುರಿತು ಬಹಿರಂಗ ಪಡಿಸಿರುವ ನಟಿ ತನ್ನ ಹೆಸರನ್ನು ಹೇಳಲು ಇಚ್ಛಿಸಿಲ್ಲ. ಆದರೆ ಸಿನಿಮಾದಲ್ಲಿ ಚಾನ್ಸ್‍ಗಾಗಿ ಆಗಮಿಸುವ ಬೇರೆಯಾವ ಯುವತಿಯರು ತನಗಾದ ಅನುಭವ ಉಂಟಾಗಬಾರದು ಎಂಬ ಹಿನ್ನೆಲೆಯಲ್ಲಿ ಈ ಕುರಿತು ಮಾಹಿತಿ ಬಹಿರಂಗ ಮಾಡಿದ್ದಾರೆ. ಆದರೆ ಇದುವರೆಗೂ ನಿರ್ದೇಶಕರ ಮೇಲೆ ಮಾಡಿರುವ ಆರೋಪದ ಕುರಿತು ನಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=WhWv-Ae2_BM

  • ಐದು ವಿವಾದಿತ ಲಿಪ್‍ಲಾಕ್ ಸೀನ್- ಮಗಳನ್ನೇ ಕಿಸ್ ಮಾಡಿ ಸುದ್ದಿಯಾಗಿದ್ದ ಖ್ಯಾತ ನಿರ್ದೇಶಕ

    ಐದು ವಿವಾದಿತ ಲಿಪ್‍ಲಾಕ್ ಸೀನ್- ಮಗಳನ್ನೇ ಕಿಸ್ ಮಾಡಿ ಸುದ್ದಿಯಾಗಿದ್ದ ಖ್ಯಾತ ನಿರ್ದೇಶಕ

    ಮುಂಬೈ: ಬಾಲಿವುಡ್ ಚಿತ್ರಗಳಲ್ಲಿ ಲಿಪ್‍ಲಾಕ್ ಸೀನ್‍ನಲ್ಲಿ ಹಲವಾರು ಸೆಲೆಬ್ರಿಟಿಗಳು ವಿವಾದಕ್ಕೆ ಸಿಲುಕಿದ್ದಾರೆ. ಹಲವಾರು ಕಲಾವಿದರು ಕಿಸ್ಸಿಂಗ್ ಸೀನ್‍ನಿಂದ ಸುದ್ದಿ ಆಗಿದ್ದಲ್ಲದೇ ವಿವಾದಕ್ಕೂ ಸಿಲುಕಿದ್ದಾರೆ. ಕಿಸ್ ಮಾಡಿ ವಿವಾದಕ್ಕೆ ಸಿಲುಕಿದ ಬಾಲಿವುಡ್ ತಾರೆಯರ ಬಗ್ಗೆ ಮಾಹಿತಿ;

    1. ದೀಪಿಕಾ ಪಡುಕೋಣೆ- ಸಿದ್ಧಾರ್ಥ್ ಮಲ್ಯ:
    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ಉದ್ಯಮಿ ವಿಜಯ್ ಮಲ್ಯ ಪುತ್ರ ಸಿದ್ಧಾರ್ಥ್ ಮಲ್ಯ 2013ರಲ್ಲಿ ಇಬ್ಬರು ಒಬ್ಬರನ್ನೊಬ್ಬರು ಕಿಸ್ ಮಾಡಿದ್ದಕ್ಕೆ ವಿವಾದಕ್ಕೆ ಸಿಲುಕಿದ್ದರು. ಆ ವೇಳೆ ಐಪಿಎಲ್ ನಡೆಯುತ್ತಿದ್ದು, ರಾಯಲ್ ಚಾಲೆಂಜೆರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯ ನಡೆಯುತ್ತಿತ್ತು. ದೀಪಿಕಾ ಹಾಗೂ ಸಿದ್ಧಾರ್ಥ್ ಇಬ್ಬರು ಒಟ್ಟಿಗೆ ಮ್ಯಾಚ್ ವೀಕ್ಷಿಸುತ್ತಿದ್ದರು. ಆಗ ಆರ್ ಸಿಬಿ ತಂಡ ಪಂದ್ಯದಲ್ಲಿ ಗೆಲುವು ಕಂಡಿತ್ತು. ಈ ವೇಳೆ ಸಿದ್ಧಾರ್ಥ್ ದೀಪಿಕಾರನ್ನು ಹಿಡಿದು ಕಿಸ್ ಮಾಡಿದ್ದರು.

    2. ಮಹೇಶ್ ಭಟ್- ಪೂಜಾ ಭಟ್:
    ನಿರ್ದೇಶಕ ಹಾಗೂ ನಿರ್ಮಾಪಕರಾದ ಮಹೇಶ್ ಭಟ್ ತಮ್ಮ ಜೀವನದಲ್ಲಿ ಯಾವಾಗಲೂ ವಿವಾದದಲ್ಲೇ ಸಿಲುಕಿದ ವ್ಯಕ್ತಿ. ಮಹೇಶ್ ಭಟ್ ಒಮ್ಮೆ ತಮ್ಮ ಮಗಳು ಪೂಜಾ ಭಟ್ ಜೊತೆ ಲಿಪ್‍ಲಾಕ್ ಮಾಡಿ ವಿವಾದಕ್ಕೆ ಸಿಲುಕಿದ್ದರು. ಸ್ಟಾರ್ ದಷ್ಟ್ ಮ್ಯಾಗಜೀನ್‍ಗಾಗಿ ಮಹೇಶ್ ಹಾಗೂ ಪೂಜಾ ಲಿಪ್ ಲಾಕ್ ಸೀನ್ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋ ಮ್ಯಾಗಜೀನ್ ಕವರ್ ಪೇಜ್‍ನಲ್ಲಿ ಹಾಕಲಾಗಿತ್ತು. ಆಗ ಈ ಫೋಟೋ ಸಾಕಷ್ಟು ವಿವಾದ ಆಗಿತ್ತು. ಫೋಟೋ ಅಲ್ಲದೇ ಮಹೇಶ್ ಅವರ ಹೇಳಿಕೆಯೂ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಪೂಜಾ ನನ್ನ ಮಗಳು ಆಗಿಲ್ಲದಿದ್ದರೆ ನಾನು ಆಕೆಯನ್ನೇ ಮದುವೆಯಾಗುತ್ತಿದ್ದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಾಕಷ್ಟು ಜನ ವಿರೋಧ ವ್ಯಕ್ತಪಡಿಸಿದ್ದರು.

    3. ರಾಖಿ ಸಾವಂತ್- ಮೀಕಾ ಸಿಂಗ್:
    2007ರಲ್ಲಿ ರಾಖಿ ಸಾವಂತ್ ಅವರು ಮೀಕಾ ಸಿಂಗ್ ಅವರ ಬರ್ತ್ ಡೇ ಪಾರ್ಟಿಗೆ ಹೋಗಿದ್ದರು. ಈ ವೇಳೆ ಮೀಕಾ, ರಾಖಿ ಸಾವಂತ್‍ನನ್ನು ಬಲವಂತವಾಗಿ ಎಳೆದು ಕಿಸ್ ಮಾಡಿದ್ದಾರೆ. ಈ ಕಿಸ್ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಅಲ್ಲದೇ ರಾಖಿ ಸಾವಂತ್, ಮೀಕಾ ಅವರ ಮೇಲೆ ರೊಚ್ಚಿಗೆದಿದ್ದರು. ಸದ್ಯ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟೀಲೆರಿತ್ತು.

    4. ಬಿಪಾಶಾ ಬಸು- ಕ್ರಿಸ್ಟಿಯಾನೋ ರೋನಲ್ಡೋ:
    ಫುಟ್ ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಲ್ಡೋ ಅವರು ಬಾಲಿವುಡ್ ಬೆಡಗಿ ಬಿಪಾಶಾ ಬಸುಗೆ ಸಾರ್ವಜನಿಕವಾಗಿ ಕಿಸ್ ಮಾಡಿದ್ದರು. ಭಾರತೀಯ ಮಾಧ್ಯಮಗಳಲ್ಲೂ ಈ ವಿವಾದ ಸಾಕಷ್ಟು ಸದ್ದು ಮಾಡಿತ್ತು. ಕ್ರಿಸ್ಟಿಯಾನೋ ಹಾಗೂ ಬಿಪಾಶಾ ಅವರ ಕಿಸ್ ವಿವಾದದ ಕಾರಣದಿಂದಾಗಿ ಜಾನ್ ಅಬ್ರಹಾಂ ನಟಿ ಬಿಪಾಶಾ ಜೊತೆ ಬ್ರೇಕಪ್ ಮಾಡಿಕೊಂಡಿದ್ದರು.

    5. ಲೀನಾ ಚಂದ್ರವರ್ಕರ್ – ರಾಮ್ ಜೇಟ್ಮಲಾನಿ: 2015ರಲ್ಲಿ ದೇಶದ ಖ್ಯಾತ ವಕೀಲ ರಾಮ್ ಜೇಟ್ಮಲಾನಿ ಅವರು ಒಂದು ಅವಾರ್ಡ್ ಕಾರ್ಯಕ್ರಮದಲ್ಲಿ ಎಲ್ಲರ ಸಮ್ಮುಖದಲ್ಲಿ ಖ್ಯಾತ ನಟಿ ಲೀನಾ ಅವರಿಗೆ ಸಖತ್ ಜೋಶ್‍ಯಿಂದ ಕಿಸ್ ಮಾಡಿದ್ದರು. ಈ ಕಿಸ್ ಕೂಡ ಸಾಕಷ್ಟು ವಿವಾದ ಸೃಷ್ಟಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೇಕಪ್ ಹಾಕಿ ಯುವನಟಿಯರನ್ನು ನಾಚಿಸುವಂತೆ ಕಾಣ್ತಿದ್ದ 40ರ ನಟಿಯರ ಅಸಲಿ ಮುಖ

    ಮೇಕಪ್ ಹಾಕಿ ಯುವನಟಿಯರನ್ನು ನಾಚಿಸುವಂತೆ ಕಾಣ್ತಿದ್ದ 40ರ ನಟಿಯರ ಅಸಲಿ ಮುಖ

    ಮುಂಬೈ: ಮೇಕಪ್ ಹಾಕಿ ಯುವನಟಿಯರಿಗೆ ಕಾಂಪಿಟೇಶನ್ ನೀಡುತ್ತಿದ್ದ 40ರ ನಟಿಯರ ಮೇಕಪ್ ಇಲ್ಲದಿರುವ ಫೋಟೋಗಳು ಈಗ ವೈರಲ್ ಆಗಿದೆ. 40ರ ವಯಸ್ಸಿನಲ್ಲೂ ಮೇಕಪ್ ಹಾಕಿ ತಮ್ಮ ಫಿಟ್ನೆಸ್ ಮೆಂಟೇನ್ ಮಾಡುತ್ತಿದ್ದಾರೆ.

    ಬಾಲಿವುಡ್ ಧಕ್-ಧಕ್ ಬೆಡಗಿ ಮಾಧುರಿ ದೀಕ್ಷಿತ್ ಯಾವಾಗಲೂ ತನ್ನ ಗ್ಲಾಮರಸ್ ಲುಕ್ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ಆಗುತ್ತಿರುತ್ತಾರೆ. ಆದರೆ ಅವರನ್ನು ಮೇಕಪ್ ಇಲ್ಲದೇ ನೋಡಿದರೆ ಅಭಿಮಾನಿಗಳು ಅವರನ್ನು ಗುರುತು ಹಿಡಿಯುವುದ್ದಕ್ಕೆ ಕಷ್ಟಪಡುತ್ತಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧುರಿ ಅವರ ಮೇಕಪ್ ಹಾಗೂ ಮೇಕಪ್ ಇಲ್ಲದಿರುವ ಫೋಟೋ ನೋಡಿದರೆ ವ್ಯತ್ಯಾಸ ತಿಳಿಯುತ್ತದೆ.

    ಬಾಲಿವುಡ್ ನಟಿ ತಬ್ಬು ತಮ್ಮ ಅತ್ಯುತ್ತಮ ಅಭಿನಯದಿಂದ ಚಿತ್ರರಂಗದಲ್ಲಿ ಜನಪ್ರಿಯರಾಗಿದ್ದಾರೆ. ತಬ್ಬು 1985 ಇಸವಿಯಲ್ಲಿ ‘ಹಮ್ ನೌಜವಾನ್’ ಚಿತ್ರದಿಂದ ಬಾಲಿವುಡ್‍ಗೆ ಎಂಟ್ರಿ ನೀಡಿದ್ದರು. ತಬ್ಬು ಅವರಿಗೆ 46 ವರ್ಷವಾಗಿದ್ದು, ಈಗಲೂ ಸ್ಕ್ರೀನ್ ಮೇಲೆ ಸುಂದರವಾಗಿ ಕಾಣಿಸುತ್ತಾರೆ. ಆದರೆ ತಬ್ಬು ಮೇಕಪ್ ಇಲ್ಲದೇ ಇರುವ ಫೋಟೋ ನೋಡಿದರೆ ಜನರು ಆಶ್ಚರ್ಯಪಡುತ್ತಾರೆ. ತಬ್ಬು ಮೇಕಪ್ ಇಲ್ಲದೇ ಹೇಗೆ ಕಾಣುತ್ತಾರೆಂದು ನೀವು ಒಮ್ಮೆ ಈ ಫೋಟೋ ನೋಡಿ.

    ಹಿರಿಯ ನಟಿ ರೇಖಾ ಅವರನ್ನು ನೋಡಿದರೆ ಅವರು ತುಂಬಾ ಯಂಗ್ ಆಗಿ ಕಾಣಿಸುತ್ತಾರೆ. ವಯಸ್ಸಾದ ಮೇಲೂ ಹೀಗಿನ ಕಾಲದ ನಟಿಯರಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಸುಂದರವಾಗಿ ಕಾಣುತ್ತಾರೆ. ಸಾಕಷ್ಟು ಜನರು ಇವರ ಸೌಂದರ್ಯದ ಸೀಕ್ರೆಟ್ ಎನೂ ಎಂದು ಯೋಚಿಸುತ್ತಿರುತ್ತಾರೆ?. ಆದರೆ ಅಭಿಮಾನಿಗಳು ರೇಖಾ ಅವರ ಮೇಕಪ್ ಇಲ್ಲದಿರುವ ಫೋಟೋವನ್ನು ನೋಡಿದರೆ ಅವರ ವಯಸ್ಸನ್ನು ಸುಲಭವಾಗಿ ಕಂಡು ಹಿಡಿಯಬಹುದು.

    ನಟಿ ರವೀನಾ ಟಂಡನ್ ಕೂಡ ತಮ್ಮ ಉತ್ತಮ ಅಭಿನಯ ಹಾಗೂ ಸೌಂದರ್ಯದಿಂದ ಬಾಲಿವುಡ್‍ನಲ್ಲಿ ಗುರುತಿಸಿಕೊಂಡಿದ್ದಾರೆ. ರವೀನಾ ತಮ್ಮ ‘ಮಾತೃ’ ಚಿತ್ರದಲ್ಲಿ ತುಂಬಾ ಸುಂದರವಾಗಿ ಕಾಣಿಸುತ್ತಿದ್ದರು. ಆದರೆ ಈಗ ಅವರಿಗೆ ವಯಸ್ಸಾಗುತ್ತಿರುವುದು ಸುಲಭವಾಗಿ ಕಾಣಿಸುತ್ತದೆ. ಹಲವು ಬಾರಿ ರವೀನಾ ಮೇಕಪ್ ಇಲ್ಲದೇ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದಾರೆ. ಮೇಕಪ್ ಇಲ್ಲದೇ ಅವರನ್ನು ನೋಡಿದರೆ ಜನರಿಗೆ ನಂಬಲು ಅಸಾಧ್ಯವಾಗುತ್ತದೆ.

    ಬಾಲಿವುಡ್ 90ರ ಬೆಡಗಿ ಕರೀಶ್ಮಾ ಕಪೂರ್ ಅವರು ಸದ್ಯ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಆದರೆ ಇಂದಿಗೂ ಕರೀಶ್ಮಾ ಅವರು ತಮ್ಮ ಹಾಟ್ ಅವತಾರದಿಂದ ಲೈಮ್‍ಲೈಟ್‍ನಲ್ಲಿರುತ್ತಾರೆ. ಕರೀಶ್ಮಾ ಕಪೂರ್ ಮೇಕಪ್ ಇಲ್ಲದೇ ಹೇಗೆ ಕಾಣುತ್ತಾರೆ ಎನ್ನುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತದೆ. ಕರೀಶ್ಮಾ ಅವರ ಮೇಕಪ್ ಇಲ್ಲದಿರುವ ಫೋಟೋ ನೋಡಿದರೆ ಅವರ ವಯಸ್ಸನ್ನು ಜನರು ಸುಲಭವಾಗಿ ಕಂಡು ಹಿಡಿಯುತ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಮ್ಯಾ ವಯಸ್ಸಿನ ಬಗ್ಗೆ ಮಾತನಾಡಿದ್ರು ರಾಗಿಣಿ

    ರಮ್ಯಾ ವಯಸ್ಸಿನ ಬಗ್ಗೆ ಮಾತನಾಡಿದ್ರು ರಾಗಿಣಿ

    ಬೆಂಗಳೂರು: ಇತ್ತೀಚೆಗಷ್ಟೆ ರಮ್ಯಾ ಕನ್ನಡ ಚಿತ್ರರಂಗಕ್ಕೆ ಬರಬೇಕು ಅಂತ ಅಭಿಮಾನಿಯೊಬ್ಬರು ಟ್ವೀಟ್ ಮಾಡಿದ್ದು, ಈ ಟ್ವೀಟ್ ಅನ್ನು ನಟಿ ರಾಗಿಣಿ ದ್ವಿವೇದಿ ಅವರು ರೀಟ್ವೀಟ್ ಮಾಡುವ ಮೂಲಕ ಇಬ್ಬರ ಮಧ್ಯೆ ಇರುವ ವೈಮನಸ್ಸು ಮಾಯವಾಯುತ್ತಾ ಅನ್ನೋ ಪ್ರಶ್ನೆಯೊಂದು ಮೂಡಿತ್ತು. ಈ ಬೆನ್ನಲ್ಲೇ ಇದೀಗ ರಾಗಿಣಿ ಅವರು ರಮ್ಯಾ ವಯಸ್ಸಿನ ಬಗ್ಗೆ ಮಾತನಾಡುವ ಮೂಲಕ ಇಬ್ಬರೂ ಸ್ನೇಹಿತರಾಗಿದ್ದಾರೆ ಅನ್ನೋದು ಸ್ಪಷ್ಟವಾಗಿದೆ.

    https://twitter.com/LeaderRamya/status/1045710004777603072

    ಹೌದು. ಯೂತ್ ಐಕಾನ್ ರಮ್ಯಾ ಎಂಬ ಟ್ವಿಟ್ಟರ್ ಅಕೌಂಟ್ ನಲ್ಲಿ ಅಭಿಮಾನಿ ಜೊತೆ ರಮ್ಯಾ ಇರೋ ಫೋಟೋವನ್ನು ಶೇರ್ ಮಾಡಲಾಗಿತ್ತು. ಈ ಫೋಟೋಗೆ ರಾಗಿಣಿ ರಿಟ್ವೀಟ್ ಮಾಡಿದ್ದು, ನಮ್ಮ ವಯಸ್ಸು ಮುಂದಕ್ಕೆ ಹೋದಂತೆ ರಮ್ಯಾ ಅವರ ವಯಸ್ಸು ಹಿಂದಕ್ಕೆ ಬರುತ್ತಿದೆ. ಹೀಗಾಗಿ ಅವರು ದಿನ ಕಳೆದಂತೆ ಹೆಚ್ಚು ಸುಂದರವಾಗಿ ಕಾಣುತ್ತಿದ್ದಾರೆ ಅಂತ ಹೇಳಿದ್ದಾರೆ. ರಾಗಿಣಿ ರೀಟ್ವೀಟ್ ಗೆ ರಮ್ಯಾ ಕೂಡ ಪ್ರತಿಕ್ರಿಯಿಸಿದ್ದು, ಧನ್ಯಾವಾದಗಳು ರಾಗಿಣಿ ಅಂತ ಹೇಳಿದ್ದಾರೆ.

    ಮೋಹಕ ತಾರೆ ರಮ್ಯಾ ಇದೀಗ ಸಂಪೂರ್ಣವಾಗಿ ರಾಜಕಾರಣದಲ್ಲಿ ಕಳೆದು ಹೋಗಿದ್ದಾರೆ. ಆದರೆ ಈಗಲೂ ಕೂಡಾ ಹಲವಾರು ಮಂದಿ ಅವರು ಮತ್ತೆ ಬಂದು ಚಿತ್ರಗಳಲ್ಲಿ ನಟಿಸಲಿ ಎಂದೇ ಬಯಸುತ್ತಿದ್ದಾರೆ. ಆದರೆ ಒಂದು ಕಾಲದಲ್ಲಿ ರಮ್ಯಾ ಜೊತೆ ಕಿತ್ತಾಡಿಕೊಂಡಿದ್ದ ರಾಗಿಣಿ ದ್ವಿವೇದಿ ಕೂಡಾ ಅದನ್ನೇ ಬಯಸುತ್ತಿದ್ದಾರಾ ಎಂಬ ಅಚ್ಚರಿಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಪತ್ತೆಯಾಗಿತ್ತು.

    ಟ್ವಿಟ್ಟರಿನಲ್ಲಿ ರಮ್ಯಾ ಅಭಿಮಾನಿಯೊಬ್ಬರು ಅವರು ಮತ್ತೆ ಬರಬೇಕೆಂದು ಗೋಗರೆಯುವಂತೆ ಒಂದು ಟ್ವೀಟ್ ಮಾಡಿದ್ದರು. ಅದನ್ನು ರಾಗಿಣಿ ದ್ವಿವೇದಿ ಕೂಡಾ ರೀಟ್ವೀಟ್ ಮಾಡಿದ್ದರು. ಈ ಮೂಲಕ ಮುನಿಸು ಮರೆತು ಮತ್ತೆ ರಮ್ಯಾ ಚಿತ್ರ ರಂಗಕ್ಕೆ ಮರಳಲಿ ಅಂತ ಆಶಿಸುತ್ತಿದ್ದಾರಾ ಎಂಬ ಪ್ರಶ್ನೆ ಸಿನಿಪ್ರಿಯರನ್ನು ಕಾಡಿತ್ತು.

    ವರ್ಷಾಂತರಗಳ ಹಿಂದೆ ರಾಗಿಣಿ, ರಮ್ಯಾ ವಿರುದ್ಧ ಮಾತಾಡಿದ್ದರೆಂಬ ಬಗ್ಗೆ ಗುಲ್ಲೆದ್ದಿತ್ತು. ಈ ವಿಚಾರವಾಗಿ ರಮ್ಯಾ ಕೂಡಾ ಪರೋಕ್ಷವಾಗಿ ರಾಗಿಣಿಯವರನ್ನು ಫೇಸ್ ಬುಕ್ ಮೂಲಕ ತಿವಿದಿದ್ದರು. ರಾಗಿಣಿ ಕೂಡಾ ಅದಕ್ಕೆ ಅಷ್ಟೇ ಮೊನಚಾಗಿ ಮಾರುತ್ತರ ನೀಡಿದ್ದರು. ಒಟ್ಟಿನಲ್ಲಿ ರಮ್ಯಾ ಮತ್ತು ರಾಗಿಣಿ ವಿರುದ್ಧಾರ್ಥಕ ಪದಗಳಂತಾಗಿದ್ದ ಇವರಿಬ್ಬರ ನಡುವೆ ಮುನಿಸಿನ ಮುಸುಕು ಸರಿದಂತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸರ್ಜರಿ ಮೂಲಕ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಂಡ ಸ್ಟಾರ್ ನಟಿಯರು

    ಸರ್ಜರಿ ಮೂಲಕ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಂಡ ಸ್ಟಾರ್ ನಟಿಯರು

    ಮುಂಬೈ: ಬಾಲಿವುಡ್‍ನ ಹಲವು ಸ್ಟಾರ್ ನಟಿಯರು ಸರ್ಜರಿ ಮೂಲಕ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಂಡಿದ್ದಾರೆ. ಕೆಲವು ನಟಿಯರು ನ್ಯಾಚ್ಯೂರಲ್ ಬ್ಯೂಟಿಯಲ್ಲೇ ಸಿನಿಮಾದಲ್ಲಿ ನಟಿಸಿ ಅಂದವಾಗಿ ಕಾಣಿಸಿದರೆ, ಇನ್ನೂ ಕೆಲವು ನಟಿಯರು ಶಸ್ತ್ರ ಚಿಕಿತ್ಸೆ ಮೂಲಕ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಂಡಿದ್ದಾರೆ.

    90ರ ದಶಕದ ಸ್ಟಾರ್ ನಟಿಯಾಗಿದ್ದ ಶಿಲ್ಪಾ ಶೆಟ್ಟಿ ಇಂದಿಗೂ ತಮ್ಮ ಫಿಟ್ನೆಸ್ ಮೆಂಟೇನ್ ಮಾಡುತ್ತಿದ್ದಾರೆ. ಆದರೆ ಶಿಲ್ಪಾ ಶೆಟ್ಟಿ ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಶಸ್ತ್ರ ಚಿಕಿತ್ಸೆಯ ಮೊರೆ ಹೋಗಿದ್ದರು. ಶಿಲ್ಪಾ ತಮ್ಮ ಮೂಗಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಇನ್ನಷ್ಟು ಸುಂದರವಾಗಿ ಕಾಣಿಸಿಕೊಂಡರು.

    ಬಾಲಿವುಡ್ ನಿಂದ ಹಾಲಿವುಡ್‍ಗೆ ಹಾರಿದ ನಟಿ ಪ್ರಿಯಾಂಕಾ ಚೋಪ್ರಾ ಕೂಡ ಸುಂದರವಾಗಿ ಕಾಣಲು ಸಾಕಷ್ಟು ಬಾರಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಪ್ರಿಯಾಂಕಾ ತಮ್ಮ ತುಟಿ ಹಾಗೂ ಮೂಗಿನ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾರೆ. ಪ್ರಿಯಾಂಕಾ ಅವರ ಈಗ ಮತ್ತು ಹಿಂದಿನ ಫೋಟೋಗಳಲ್ಲಿ ವ್ಯತ್ಯಾಸ ತಿಳಿಯುತ್ತದೆ.

    ವಿರಾಟ್ ಕೊಹ್ಲಿ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೂಡ ತುಟಿಯ ಶಸ್ತ್ರ ಚಿಕಿತ್ಸೆ ನಡೆಸಿ ಸೌಂದರ್ಯವನ್ನು ಹೆಚ್ಚಿಸಿಕೊಂಡಿದ್ದರು. ಸಮಯಕ್ಕೆ ತಕ್ಕಂತೆ ಅವರು ಕೂಡ ತಮ್ಮ ಲುಕ್ ಬದಲಾಯಿಸಿಕೊಂಡಿದ್ದಾರೆ. ಅನುಷ್ಕಾ ತಮ್ಮ ತುಟಿಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾಗ ಅಭಿಮಾನಿಗಳು ಅವರನ್ನು ಸಾಕಷ್ಟು ಟ್ರೋಲ್ ಮಾಡಿದ್ದರು.

    ಈ ಲಿಸ್ಟ್ ನಲ್ಲಿ ನಟಿ ಕಂಗನಾ ರಣೌತ್ ಕೂಡ ಸೇರಿದ್ದಾರೆ. ಕಂಗನಾ ನ್ಯಾಚ್ಯೂರಲ್ ಬ್ಯೂಟಿ ಎಂದು ಎಲ್ಲರು ತಿಳಿದಿದ್ದರು. ಆದರೆ ಅದು ತಪ್ಪು ಎಂದು ಈಗ ತಿಳಿದು ಬಂದಿದೆ. ಏಕೆಂದರೆ ಕಂಗನಾ ಈ ಮೊದಲು ತಮ್ಮ ತುಟಿಯ ಸರ್ಜರಿ ಮಾಡಿಸಿಕೊಂಡಿದ್ದರು. ನಂತರ ಅವರು ತಮ್ಮ ಸ್ತನದ ಸರ್ಜರಿ ಮಾಡಿಸಿಕೊಂಡಿದ್ದಾರೆ.

    ಇತ್ತೀಚೆಗೆ ‘ದಡಕ್’ ಚಿತ್ರದ ಮೂಲಕ ಬಾಲಿವುಡ್‍ಗೆ ಪಾದಾರ್ಪಣೆ ಮಾಡಿದ ಹಿರಿಯ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಕಪೂರ್ ಕೂಡ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಸರ್ಜರಿ ಮಾಡಿಸಿಕೊಂಡಿದ್ದಾರೆ. ಬಾಲಿವುಡ್‍ಗೆ ಕಾಲಿಡುವ ಮೊದಲೇ ಜಾಹ್ನವಿ ತನ್ನ ಲುಕ್ ಹೆಚ್ಚಿಸಿಕೊಳ್ಳಲು ತುಟಿ ಹಾಗೂ ಗಲ್ಲದ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು.

    ಸಲ್ಮಾನ್ ಖಾನ್ ಜೊತೆ ‘ವಾಂಟೆಡ್’ ಚಿತ್ರದಲ್ಲಿ ನಟಿಸಿದ್ದ ಅಯೇಶಾ ಟಾಕಿಯಾ ಕೂಡ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರು. ಅಯೇಶಾ ತಮ್ಮ ತುಟಿಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿದ್ದಕ್ಕೆ ಜನ ಟ್ರೋಲ್ ಮಾಡಿದ್ದರು.

    ಶ್ರೀದೇವಿ ಒಟ್ಟು 29 ಶಸ್ತ್ರಚಿಕಿತ್ಸೆಗಳನ್ನು ಮಾಡಿಸಿಕೊಂಡಿದ್ದಾರೆ. ಒಟ್ಟು 29 ಶಸ್ತ್ರಚಿಕಿತ್ಸೆಯಲ್ಲಿ ಒಂದು ಸರಿಯಾಗಿ ಆಗಿರಲಿಲ್ಲ. ಅಲ್ಲದೇ ಶ್ರೀದೇವಿ ಹೊಟ್ಟೆ ಕೊಬ್ಬು ಕರಗಿಸಿಕೊಳ್ಳಲು ಶಸ್ತ್ರಚಿಕಿತ್ಸೆ ಕೂಡ ಮಾಡಿಸಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ನೇಪಾಳ ರಾಯಭಾರಿಯಾದ ಬಾಲಿವುಡ್ ನಟಿ ಜಯಪ್ರದಾ

    ನೇಪಾಳ ರಾಯಭಾರಿಯಾದ ಬಾಲಿವುಡ್ ನಟಿ ಜಯಪ್ರದಾ

    ನವದೆಹಲಿ: ಮಾಜಿ ಸಂಸತ್ ಸದಸ್ಯೆ ಹಾಗೂ ಬಾಲಿವುಡ್‍ನ ಖ್ಯಾತ ನಟಿ ಜಯಪ್ರದಾ ಅವರನ್ನು ನೇಪಾಳ ಸರ್ಕಾರ ಸೌಹಾರ್ದ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿದೆ.

    ಸೌಹಾರ್ದ ರಾಯಭಾರಿಯನ್ನಾಗಿ ನಟಿ ಜಯಪ್ರದಾರವರನ್ನು ಆಯ್ಕೆಮಾಡುವ ಬಗ್ಗೆ ನೇಪಾಳ ಸರ್ಕಾರ ಸಂಸತ್ತಿನಲ್ಲಿ ವಿಚಾರ ಪ್ರಸ್ತಾಪಿಸಿತ್ತು. ಇದಕ್ಕೆ ಎಲ್ಲಾ ಸದಸ್ಯರು ಸರ್ವಾನುಮತದಿಂದ ಆಯ್ಕೆಮಾಡಿ ನೇಪಾಳ ಸರ್ಕಾರದ ಸೌಹಾರ್ದ ರಾಯಭಾರಿಯನ್ನಾಗಿ ನಟಿ ಜಯಪ್ರದಾರವರನ್ನು ಅಂಗೀಕರಸಿದೆ.

    ಜಯಪ್ರದಾ ಅವರು ರಾಯಭಾರಿ ಹುದ್ದೆಗೆ ನಾಮನಿರ್ದೇಶನದಿಂದಾಗಿ ನೆರೆಹೊರೆ ರಾಷ್ಟ್ರಗಳ ನಡುವಿನ ಹಳೆಯ ಸಾಂಸ್ಕೃತಿಕ ಸಂಬಂಧ ಮತ್ತಷ್ಟು ಬಲಗೊಳಿಸುವ ಹಾಗೂ ನೇಪಾಳದ ಪ್ರವಾಸೋದ್ಯಮ ಇಲಾಖೆಯನ್ನು ಭಾರತದಲ್ಲಿ ಉತ್ತೇಜಿಸಲು ನೆರವಾಗಲಿದೆ. ಒಟ್ಟು ನಾಲ್ಕು ವರ್ಷಗಳ ಕಾಲ ಜಯಪ್ರದಾ ಅವರು ನೇಪಾಳದ ರಾಯಭಾರಿಗಳಾಗಲಿದ್ದಾರೆ ಎನ್ನಲಾಗಿದೆ.

    ಆದಾಯ ಮತ್ತು ಉದ್ಯೋಗ ಸೃಷ್ಟಿಯಲ್ಲಿ ನೇಪಾಳಕ್ಕೆ ಪ್ರವಾಸೋದ್ಯಮವೇ ಮೂಲ ಆಧಾರವಾಗಿದೆ. ಅಲ್ಲದೇ ಭಾರತದ ಪ್ರವಾಸಿಗರು ನೇಪಾಳದ ಪ್ರಮುಖ ಗ್ರಾಹಕರಾಗಿದ್ದಾರೆ. ಹೀಗಾಗಿ ಪ್ರವಾಸೋದ್ಯಮವನ್ನು ಸೆಳೆಯುವ ಹಾಗೂ ಪ್ರೋತ್ಸಾಹಿಸುವ ದೃಷ್ಟಿಯಿಂದ ನೇಪಾಳ ಸರ್ಕಾರವು 2020ರ ವರ್ಷವನ್ನು ವಿಸಿಟ್ ನೇಪಾಳ ಇಯರ್ ಎಂಬ ಅಡಿಬರಹದ ಯೋಜನೆಯನ್ನು ಹಮ್ಮಿಕೊಂಡಿದೆ. ಈ ಮೂಲಕ ನೇಪಾಳಕ್ಕೆ ಭೇಟಿ ನೀಡುವ ಪ್ರವಾಸಿಗರನ್ನು ಆಕರ್ಷಿಸುವಂತೆ ಮಾಡಿದೆ. ಈ ಯೋಜನೆ ಮೂಲಕ ಸುಮಾರು 20 ಲಕ್ಷ ಪ್ರವಾಸಿಗರನ್ನು ಸೆಳೆಯುವ ಉದ್ದೇಶವನ್ನು ಪ್ರವಾಸೋದ್ಯಮ ಇಲಾಖೆ ಹೊಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಜಿ ಪ್ರಿಯಕರ ಆತ್ಮಹತ್ಯೆ-ಮನನೊಂದು ಸೊಳ್ಳೆ ಬತ್ತಿ ತಿಂದ ನಟಿ

    ಮಾಜಿ ಪ್ರಿಯಕರ ಆತ್ಮಹತ್ಯೆ-ಮನನೊಂದು ಸೊಳ್ಳೆ ಬತ್ತಿ ತಿಂದ ನಟಿ

    ಚೆನ್ನೈ: ಮಾಜಿ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದ ನಟಿ ನಿಳನಿ ಸೊಳ್ಳೆ ಬತ್ತಿ ತಿಂದಿರುವ ಘಟನೆ ವಲಸರವಕ್ಕಂನಲ್ಲಿ ನಡೆದಿದೆ.

    ನಿಳನಿ ಮಾಜಿ ಪ್ರಿಯಕರ ಗೌರಿ ಲಲಿತ್ ಕುಮಾರ್ ಗುರುವಾರ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದರು. ಇಂದು ಬೆಳಗ್ಗೆ ನಿಳನಿ ಸೊಳ್ಳೆ ಬತ್ತಿ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದರು. ನೆರೆಹೊರೆಯವರು ಕೂಡಲೇ ನಳಿನಿ ಅವರನ್ನು ಸ್ಥಳೀಯರು ಕೂಡಲೇ ರೊಯಪೆಟ್ಟಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ದೂರು ನೀಡಿದ್ದ ನಿಳಿನಿ: ಕೆಲವು ದಿನಗಳ ಹಿಂದೆ ಗೌರಿ ಲಲಿತ್ ಮತ್ತು ನನ್ನ ನಡುವೆ ಬ್ರೇಕಪ್ ಆಗಿದೆ. ಆತ ನನ್ನನ್ನು ಹಿಂಬಾಲಿಸುವ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಮೈಲಾಪುರ ಪೊಲೀಸ್ ಠಾಣೆಯಲ್ಲಿ ಗೌರಿ ಲಲಿತ್ ವಿರುದ್ಧ ಭಾನುವಾರ ದೂರು ದಾಖಲಿಸಿದ್ದರು.

    ದೂರು ದಾಖಲಾದ ಬಳಿಕ ಗೌರಿ ಲಲಿತ್ ಆತ್ಮಹತ್ಯೆ ಶರಣಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇತ್ತ ಗೌರಿ ಲಲಿತ್ ಸಾವಿನ ಸುದ್ದಿ ತಿಳಿದ ನಿಳಿನಿ ಆತ್ಮಹತ್ಯೆ ಯತ್ನಿಸಿದ್ದಾರೆ. ಇಬ್ಬರು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv