Tag: adani

  • ಅದಾನಿ ಕಂಪನಿಗಳನ್ನು ಕಾಡಿದ್ದ ಹಿಂಡನ್‌ಬರ್ಗ್‌ಗೆ ಬೀಗ – ಬಂದ್‌ ಆಗಿದ್ದು ಯಾಕೆ?

    ಅದಾನಿ ಕಂಪನಿಗಳನ್ನು ಕಾಡಿದ್ದ ಹಿಂಡನ್‌ಬರ್ಗ್‌ಗೆ ಬೀಗ – ಬಂದ್‌ ಆಗಿದ್ದು ಯಾಕೆ?

    – ಯಾವುದೇ ಬೆದರಿಕೆಯಿಂದ ಮುಚ್ಚುತ್ತಿಲ್ಲ
    – ವೈಯಕ್ತಿಕ ಕಾರಣಗಳಿಂದಾಗಿ ಸಂಸ್ಥೆಯನ್ನು ಮುಚ್ಚುತ್ತಿದ್ದೇವೆ

    ವಾಷಿಂಗ್ಟನ್‌: ಅದಾನಿ ಸಮೂಹ ಕಂಪನಿಗಳನ್ನು (Adani Group) ಗುರಿಯಾಗಿ ವರದಿ ಪ್ರಕಟಿಸಿ ಸಂಚಲನ ಉಂಟುಮಾಡಿದ್ದ ಅಮೆರಿಕ ಶಾರ್ಟ್‌ ಸೆಲ್ಲಿಂಗ್‌ ಕಂಪನಿ ಹಿಂಡನ್‌ಬರ್ಗ್‌ ರಿಸರ್ಚ್‌ (Hindenburg Research) ಬಾಗಿಲು ಮುಚ್ಚಿದೆ.

    ಹಿಂಡನ್‌ಬರ್ಗ್‌ ರಿಸರ್ಚ್‌ ಸಂಸ್ಥೆಯನ್ನು ವಿಸರ್ಜಿಸಲು ನಿರ್ಧರಿಸಿದ್ದೇನೆ ಎಂದು ಎಂದು ಸಂಸ್ಥಾಪಕ ನೇಟ್ ಆಂಡರ್ಸನ್ (Nate Anderson) ಹೇಳಿದ್ದಾರೆ.

    ಅಚ್ಚರಿ ಏನೆಂದರೆ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಜ.20 ರಂದು ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅಧಿಕಾರ ಸ್ವೀಕರಿಸಲು 4 ದಿನ ಮೊದಲೇ ಹಿಂಡನ್‌ಬರ್ಗ್‌ ಮುಚ್ಚುವ ನಿರ್ಧಾರ ಪ್ರಕಟವಾಗಿದೆ.

    ಈ ವಿಚಾರದ ಬಗ್ಗೆಯೂ ಅಂಡರ್ಸನ್‌ ಪ್ರತಿಕ್ರಿಯಿಸಿ, ಈ ಶಾರ್ಟ್ ಸೆಲ್ಲರ್ ನಿರ್ಧಾರದ ಹಿಂದೆ ಯಾವುದೇ ನಿರ್ದಿಷ್ಟ ಬೆದರಿಕೆ ಅಥವಾ ವೈಯಕ್ತಿಕ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಂಸ್ಥೆಯನ್ನು ಮುಚ್ಚಲು ನಿರ್ದಿಷ್ಟ ಕಾರಣ ಏನು ಎನ್ನುವುದನ್ನು ಹೇಳಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಸಂಸ್ಥೆಯನ್ನು ಮುಚ್ಚುತ್ತಿದ್ದೇವೆ. ವೈಯಕ್ತಿಕ ಜೀವನಕ್ಕೆ ಹೆಚ್ಚು ಸಮಯ ನೀಡಲು ತಾನು ಈ ನಿರ್ಧಾರ ಮಾಡಿದ್ದಾಗಿ ಆಂಡರ್ಸನ್ ತಿಳಿಸಿದ್ದಾರೆ.

    2017ರಲ್ಲಿ ಸ್ಥಾಪನೆಯಾದ ಹಿಂಡನ್‌ಬರ್ಗ್‌ ಬಹುರಾಷ್ಟ್ರೀಯ ಕಾರ್ಪೋರೇಟ್‌ ಕಂಪನಿಗಳ ಮೋಸವನ್ನು ಬಯಲು ಮಾಡುವುದು ತನ್ನ ಉದ್ದೇಶ ಎಂದು ಹೇಳಿಕೊಂಡಿತ್ತು. ಹಲವಾರು ಕಂಪನಿಗಳ ಬಗ್ಗೆ ವರದಿ ಪ್ರಕಟಿಸಿತ್ತು. ಇದರಿಂದ ಹಲವು ಕಂಪನಿಗಳಿಗೆ ಆರ್ಥಿಕವಾಗಿ ಬಹಳ ಸಮಸ್ಯೆಯಾಗಿತ್ತು. ಈ ಹಿಂಡನ್‌ಬರ್ಗ್‌  ಸಂಸ್ಥೆಯ ಮೇಲೆ ಕಂಪನಿಗಳು ಕೇಸ್‌ ಹಾಕಿದ್ದವು.

    2023ರಲ್ಲಿ ಅದಾನಿ ಕಂಪನಿಯನ್ನು ಗುರಿಯಾಗಿಸಿದ್ದ ಹಿಂಡನ್‌ಬರ್ಗ್‌ ನಂತರ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ ವಿರುದ್ಧವೇ ವರದಿ ಪ್ರಕಟಿಸಿತ್ತು. ಈ ವರದಿಗಳು ಪ್ರಕಟವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ರಕ್ತಪಾತವಾಗಿತ್ತು. ಅದಾನಿ ಕಂಪನಿಗಳ ಷೇರುಗಳ ಮೌಲ್ಯ ಭಾರೀ ಕುಸಿತಗೊಂಡಿತ್ತು.

    ಅದಾನಿ ಕಂಪನಿಗಳ ವಿರುದ್ಧ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಸಮಿತಿ ರಚನೆ ಮಾಡಿತ್ತು. ಈ ಸಮಿತಿ ಅದಾನಿ ಕಂಪನಿ ಕೃತಕವಾಗಿ ಷೇರುಗಳ ಬೆಲೆ ಹೆಚ್ಚಳ ಮಾಡಿಲ್ಲ ಎಂದು ವರದಿ ಸಲ್ಲಿಸಿತ್ತು.

    ಲೋಕಸಭಾ ಅಧಿವೇಶನ ಆರಂಭಗೊಳ್ಳುವ ಸಮಯದಲ್ಲೇ ಹಿಂಡನ್‌ಬರ್ಗ್‌ ವರದಿ ಪ್ರಕಟ ಮಾಡುತ್ತಿತ್ತು. ಈ ವರದಿಯನ್ನು ಆಧಾರವಾಗಿಟ್ಟುಕೊಂಡು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವು. ಇದಕ್ಕೆ ಬಿಜೆಪಿ ಪ್ರತಿಕ್ರಿಯಿಸಿ ಹಿಂಡನ್‌ಬರ್ಗ್‌ನಲ್ಲಿ ಜಾರ್ಜ್‌ ಸೊರೊಸ್ (George Soros) ಮುಖ್ಯ ಹೂಡಿಕೆದಾರ. ಭಾರತದ ಆರ್ಥಿಕ ಬೆಳವಣಿಗೆಯನ್ನು ಹಳಿತಪ್ಪಿಸಲು ವಿದೇಶದಿಂದ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿತ್ತು.

    ಹಿಂಡನ್‌ಬರ್ಗ್‌ ಹೆಸರಿನಲ್ಲೇ ಶಾರ್ಟ್‌ ಸೆಲ್ಲಿಂಗ್‌ ಕಂಪನಿಯಾಗಿದೆ. ಉದ್ದೇಶಪೂರ್ವಕವಾಗಿ ತನ್ನ ಗ್ರಾಹಕರಿಗೆ ಲಾಭ ಮಾಡಲು ಈ ವರದಿ ಬಿಡುಗಡೆ ಮಾಡುತ್ತಿದೆ ಎಂಬ ಆರೋಪ ಬಂದಿತ್ತು.

    ಏನಿದು ಶಾರ್ಟ್‌ಸೆಲ್ಲಿಂಗ್‌?
    ಶಾರ್ಟ್ ಸೆಲ್ಲಿಂಗ್ ಎನ್ನುವುದು ಹೂಡಿಕೆಯ ತಂತ್ರವಾಗಿದ್ದು ಇದಕ್ಕೆ ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಅವಕಾಶವಿದೆ. ಮುಂದಿನ ದಿನಗಳಲ್ಲಿ ಕಂಪನಿಯ ಷೇರು ಮೌಲ್ಯ ಕುಸಿಯಬಹುದು ಎಂಬುದನ್ನು ಮೊದಲೇ ಊಹಿಸಿ ನಿಗದಿತ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿ ನಂತರ ಆ ಕಂಪನಿಯ ಷೇರು ಮೌಲ್ಯ ಕುಸಿತಗೊಂಡಾಗ ಅವುಗಳನ್ನು ಕಡಿಮೆ ಬೆಲೆಗೆ ಮರು ಖರೀದಿಸಿ ಲಾಭ ಮಾಡುವುದಕ್ಕೆ ಶಾರ್ಟ್‌ ಸೆಲ್ಲಿಂಗ್‌ ಎಂದು ಕರೆಯಲಾಗುತ್ತದೆ. ಇದು ಒಂದು ರೀತಿಯಲ್ಲಿ ಅಪಾಯದ ಕಾರ್ಯಾಚರಣೆ. ಒಂದು ವೇಳೆ ಷೇರುಗಳ ಮೌಲ್ಯ ಕಡಿಮೆ ಆಗದೇ ಇದ್ದರೆ ಶಾರ್ಟ್‌ ಸೆಲ್ಲಿಂಗ್‌ ಟ್ರೇಡರ್‌ಗಳಿಗೆ ನಷ್ಟವಾಗುತ್ತದೆ.

     

    ಅದಾನಿಯಿಂದ ಎಫ್‌ಪಿಒ ರದ್ದು:
    20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ (ಮುಂದುವರಿದ ಸಾರ್ವಜನಿಕ ಕೊಡುಗೆ ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಕಂಪನಿ 2023ರ ಜನವರಿಯಲ್ಲಿ ಚಾಲನೆ ನೀಡಿತ್ತು. ಪ್ರತಿ ಷೇರಿಗೆ 3,112ರಿಂದ 3,276 ರೂ. ಆಫರ್‌ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಹಿಂಡನ್‌ಬರ್ಗ್‌ ಅದಾನಿ ಕಂಪನಿ ವಿರುದ್ಧ ಸಂಶೋಧನಾ ವರದಿ ಬಿಡುಗಡೆ ಮಾಡಿತ್ತು. ವರದಿ ಬಳಿಕ ಅದಾನಿ ಕಂಪನಿಯ ಷೇರಿನ ಮೌಲ್ಯ ಕುಸಿತ ಕಂಡಿದ್ದರೂ ಎಫ್‌ಪಿಒ ಬಿಡ್‌ ಖರೀದಿ ಪ್ರಕ್ರಿಯೆ ಪೂರ್ಣಗೊಂಡಿತ್ತು.

    ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ನಂತರ 20 ಸಾವಿರ ಕೋಟಿ ರೂ. ಬಂಡವಾಳ ಸಂಗ್ರಹಿಸಲು ಮುಂದಾಗಿದ್ದ ಎಫ್‌ಪಿಒ ಪ್ರಕ್ರಿಯೆಯನ್ನೇ ಅದಾನಿ ಸಮೂಹ ರದ್ದು ಮಾಡಿತ್ತು. ನಮ್ಮ ಷೇರು ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಹೇಳಿ ಹೂಡಿಕೆದಾರರ ಹಣವನ್ನು ಮರಳಿಸಲಾಗುವುದು ಎಂದು ಗೌತಮ್‌ ಅದಾನಿ ತಿಳಿಸಿದ್ದರು.

     

  • ಅದಾನಿ ವಿರುದ್ಧ ಸಂಸತ್‌ ಹೋರಾಟದಲ್ಲಿ ಬಿರುಕು – INDIA ಸಭೆಗೆ ಟಿಎಂಸಿ ಗೈರು

    ಅದಾನಿ ವಿರುದ್ಧ ಸಂಸತ್‌ ಹೋರಾಟದಲ್ಲಿ ಬಿರುಕು – INDIA ಸಭೆಗೆ ಟಿಎಂಸಿ ಗೈರು

    ನವದೆಹಲಿ: ಅದಾನಿ ವಿಚಾರವನ್ನು (Adani Case) ಇಟ್ಟುಕೊಂಡು ಸಂಸತ್‌ ಸದನದಲ್ಲಿ ಭಾರೀ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ ನಿರ್ಧಾರಕ್ಕೆ ಟಿಎಂಸಿ (TMC) ವಿರೋಧ ವ್ಯಕ್ತಪಡಿಸಿದೆ.

    ಇಂದು ಸದನ ನಡೆಯುತ್ತಿದ್ದಂತೆ ಕಾಂಗ್ರೆಸ್‌ ಸದಸ್ಯರು ಸೇರಿಂತೆ INDIA ಒಕ್ಕೂಟದ ಸದಸ್ಯರು ಅದಾನಿ ವಿರುದ್ಧ ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಇದರ ಜೊತೆ ವಿವಿಧ ವಿಷಯಗಳನ್ನು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಕೊನೆಗೆ ಲೋಕಸಭೆ ಮತ್ತು ರಾಜ್ಯ ಸಭೆಯ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.

    ಸದನ ನಡೆಯುವ ಮೊದಲು ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ ಅವರ ಕಚೇರಿಯಲ್ಲಿ INDIA ಒಕ್ಕೂಟದ ಸದಸ್ಯರು ಸಭೆ ನಡೆಸಿದರು. ಈ ಸಭೆಗೆ ಟಿಎಂಸಿ ಸದಸ್ಯರು ಗೈರಾಗಿದ್ದರು.

    ಮೂಲಗಳ ಪ್ರಕಾರ ಬೆಲೆ ಏರಿಕೆ, ಮಣಿಪುರ ಘರ್ಷಣೆ, ನಿರುದ್ಯೋಗ ಇತ್ಯಾದಿ ವಿಚಾರಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಬೇಕು. ಆದರೆ ಕಾಂಗ್ರೆಸ್‌ ಕೇವಲ ಅದಾನಿ ವಿಚಾರವನ್ನು ಮುಂದಿಟ್ಟುಕೊಂಡು ಗದ್ದಲ ಎಬ್ಬಿಸುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನಗೊಂಡ ಟಿಎಂಸಿ ಸದಸ್ಯರು ಸಭೆಗೆ ಹಾಜರಾಗಲಿಲ್ಲ ಎಂದು ವರದಿಯಾಗಿದೆ.  ಇದನ್ನೂ ಓದಿ: ನನ್ನ ಸೋಲಿಸೋಕೆ ದೇವೇಗೌಡ್ರು ವೀಲ್‍ಚೇರ್‌ನಲ್ಲಿ ಹಳ್ಳಿ ಹಳ್ಳಿಗೆ ಹೋಗಿದ್ರು: ಶಿವಲಿಂಗೇಗೌಡ

    ಕಳೆದ ಸೋಮವಾರದಿಂದ ಸಂಸತ್‌ ಅಧಿವೇಶನ ಆರಂಭವಾಗಿದೆ. ಪ್ರತಿ ದಿನವೂ ಕಾಂಗ್ರೆಸ್‌ ಅದಾನಿ ವಿಚಾರಕ್ಕೆ ಜೆಪಿಸಿ ತನಿಖೆ ನಡೆಸಬೇಕೆಂದು ಪಟ್ಟು ಹಿಡಿದಿದೆ. ಚಳಿಗಾಲದ ಅಧಿವೇಶನದ ಡಿ. 20ಕ್ಕೆ ಕೊನೆಯಾಗಲಿದೆ.

     

  • ಅರ್ಧದಷ್ಟು ವಿದ್ಯುತ್‌ ಸರಬರಾಜು ಕಡಿತ – ಬಾಂಗ್ಲಾಗೆ ಅದಾನಿ ಪವರ್‌ ಶಾಕ್‌

    ಅರ್ಧದಷ್ಟು ವಿದ್ಯುತ್‌ ಸರಬರಾಜು ಕಡಿತ – ಬಾಂಗ್ಲಾಗೆ ಅದಾನಿ ಪವರ್‌ ಶಾಕ್‌

    ನವದೆಹಲಿ: ಅದಾನಿ ಪವರ್‌ನ (Adani Power) ಅಂಗ ಸಂಸ್ಥೆಯಾದ ಅದಾನಿ ಪವರ್ ಜಾರ್ಖಂಡ್ ಲಿಮಿಟೆಡ್ (APJL) ಬಾಂಗ್ಲಾದೇಶಕ್ಕೆ (Bangladesh) ತನ್ನ ವಿದ್ಯುತ್ ಸರಬರಾಜನ್ನು ಅರ್ಧದಷ್ಟು ಕಡಿಮೆ ಮಾಡಿದೆ.

    846 ದಶಲಕ್ಷ ಡಾಲರ್‌ ಹಣವನ್ನು ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಅದಾನಿ ಕಂಪನಿ ಬಾಂಗ್ಲಾದೇಶಕ್ಕೆ ವಿದ್ಯುತ್‌ ಸರಬರಾಜನ್ನು ಕಡಿತಗೊಳಿಸಿದೆ.

    ಗುರುವಾರ ರಾತ್ರಿಯಿಂದ ವಿದ್ಯುತ್‌ ಕಡಿತದಿಂದಾಗಿ ಬಾಂಗ್ಲಾದೇಶಲ್ಲಿ 1,600 ಮೆಗಾವ್ಯಾಟ್‌ಗಳನ್ನು (MW) ವಿದ್ಯುತ್ ಕೊರತೆಯಾಗಿದೆ. 1,496 MW ಅದಾನಿ ಸ್ಥಾವರವು ಈಗ ಅರ್ಧ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಕೇವಲ 700 MW ವಿದ್ಯುತ್‌ ಮಾತ್ರ ಉತ್ಪಾದಿಸುತ್ತದೆ.

    ಅದಾನಿ ಪವರ್ ತನ್ನ ಪೂರೈಕೆಯನ್ನು ಅರ್ಧದಷ್ಟು ಕಡಿಮೆಗೊಳಿಸುವುದರಿಂದ ಕೈಗಾರಿಕೆ, ವ್ಯವಹಾರಗಳು ಮತ್ತು ಗೃಹ ಬಳಕೆಯ ಮನೆಗಳಿಗೂ ಸಮಸ್ಯೆಯಾಗುತ್ತಿದೆ. ಇದನ್ನೂ ಓದಿ: ವಕ್ಫ್ ಆಸ್ತಿಯನ್ನು ಅಲ್ಲಾನ ಆಸ್ತಿ ಅಂತೀವಿ – ಜಮೀರ್

    ಬಾಂಗ್ಲಾದೇಶದ ಪವರ್ ಡೆವಲಪ್‌ಮೆಂಟ್ ಬೋರ್ಡ್ (PDB) ತನ್ನ ಬಾಕಿಗಳನ್ನು ಪಾವತಿಸಲು ಕೆಲಸ ಮಾಡುತ್ತಿದೆ. ಬಾಂಗ್ಲಾದೇಶ ಕೃಷಿ ಬ್ಯಾಂಕ್ ಅದಾನಿ ಪವರ್‌ಗೆ 170.03 ಮಿಲಿಯನ್ ಡಾಲರ್‌ ಸಾಲದ ಪತ್ರವನ್ನು ನೀಡಲು ಒಪ್ಪಿಕೊಂಡಿದ್ದರೂ, ಸೀಮಿತ ಡಾಲರ್ ಲಭ್ಯತೆಯಿಂದಾಗಿ ಅದನ್ನು ಪಾವತಿಸಲು ಸಾಧ್ಯವಾಗಲಿಲ್ಲ.

     ದಂಗೆಯ ಬಳಿಕ ಬಾಂಗ್ಲಾದಲ್ಲಿ ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಬಾಂಗ್ಲಾದೇಶ ಬ್ಯೂರೋ ಆಫ್​ ಸ್ಟಾಟಿಸ್ಟಿಕ್ಸ್​ ಪ್ರಕಾರ ಗ್ರಾಹಕ ಹಣದುಬ್ಬರ 12 ವರ್ಷಕ್ಕಿಂತ ಹೆಚ್ಚಾಗಿದ್ದು, ಶೇ. 11.6ಕ್ಕೆ ತಲುಪಿದೆ. ಅದರಲ್ಲೂ ಆಹಾರ ಹಣದುಬ್ಬರವು ಕಳೆದ 13 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ 14 ಪ್ರತಿಶತವನ್ನು ಮೀರಿದೆ. ಹಣದುಬ್ಬರ ನಿಯಂತ್ರಿಸಲು ಬಾಂಗ್ಲಾ ಕೇಂದ್ರ ಬ್ಯಾಂಕ್‌ ರೆಪೋ ದರವನ್ನು 10% ಏರಿಕೆ ಮಾಡಿದೆ.

     

  • ಶೀಘ್ರವೇ ಭಾರತದ ದೊಡ್ಡ ಸುದ್ದಿ: ಬ್ರೇಕಿಂಗ್‌ ನ್ಯೂಸ್‌ ಕೊಟ್ಟ ಹಿಂಡನ್‌ಬರ್ಗ್‌

    ಶೀಘ್ರವೇ ಭಾರತದ ದೊಡ್ಡ ಸುದ್ದಿ: ಬ್ರೇಕಿಂಗ್‌ ನ್ಯೂಸ್‌ ಕೊಟ್ಟ ಹಿಂಡನ್‌ಬರ್ಗ್‌

    ನವದೆಹಲಿ: ಅದಾನಿ ಸಮೂಹ ಕಂಪನಿಗಳ (Adani Group Companies) ವಿರುದ್ಧ ವರದಿ ಪ್ರಕಟಿಸಿ ಷೇರು ಮೌಲ್ಯ ಕುಸಿತ ಮಾಡಿದ್ದ ಹಿಂಡನ್‌ಬರ್ಗ್‌ (Hindenburg Research) ಶೀಘ್ರವೇ ಭಾರತ ಬಗ್ಗೆ ದೊಡ್ಡ ಸುದ್ದಿ ಪ್ರಕಟಿಸುವುದಾಗಿ ತಿಳಿಸಿದೆ.

    ಅದಾನಿ ಕಂಪನಿಯ ಬಗ್ಗೆಯೋ ಅಥವಾ ಬೇರೆ ಯಾವುದೋ ಕಂಪನಿಯೋ ಅಥವಾ ಯಾವುದೋ ಕ್ಷೇತ್ರಗಳ ಕಂಪನಿಗಳ ಬಗ್ಗೆ ವರದಿ ಬಿಡುಗಡೆ ಮಾಡುತ್ತದೋ ಎನ್ನುವುದರ ಬಗ್ಗೆ ಯಾವುದೇ ವಿವರವನ್ನು ಹಿಂಡನ್‌ಬರ್ಗ್‌ ನೀಡಿಲ್ಲ.


    2023ರ ಜನವರಿಯಲ್ಲಿ ಅಮೆರಿಕದ ಶಾರ್ಟ್‌ ಸೆಲ್ಲಿಂಗ್‌ (Short Selling) ಕಂಪನಿ ಹಿಂಡನ್‌ಬರ್ಗ್‌ ಅದಾನಿ ಕಂಪನಿ ವಿರುದ್ಧ ಸಂಶೋಧನಾ ವರದಿ ಪ್ರಕಟಿಸಿತ್ತು. ಈ ವರದಿ ಪ್ರಕಟವಾದ ಬಳಿಕ ಅದಾನಿ ಕಂಪನಿಯ ಷೇರುಗಳ ಮೌಲ್ಯ ಭಾರೀ ಇಳಿಕೆಯಾಗಿತ್ತು. ನಂತರ ಪ್ರಕರಣ ಸುಪ್ರೀಂ ಕೋರ್ಟ್‌ (Supreme Court) ಮೆಟ್ಟಿಲೇರಿತ್ತು. ಜಾರಿ ನಿರ್ದೇಶನಾಲಯ (ED) ಇಡಿ ನಡೆಸಿದ ತನಿಖೆಯಲ್ಲಿ 16 ಕಂಪನಿಗಳು ಭಾರೀ ಲಾಭ ಮಾಡಿಕೊಂಡ ವಿಚಾರ ದೃಢಪಟ್ಟಿತ್ತು. ಇದನ್ನೂ ಓದಿ: ಅದಾನಿ ಷೇರು ಶಾರ್ಟ್‌ ಸೆಲ್ಲಿಂಗ್‌, 16 ಕಂಪನಿಗಳಿಗೆ ಭಾರೀ ಲಾಭ – ಇಡಿ ತನಿಖಾ ವರದಿಯಲ್ಲಿ ಏನಿದೆ?

    ಸುಪ್ರೀಂ ಕೋರ್ಟ್‌ ನೇಮಿಸಿದ್ದ ಸಮಿತಿಯೂ ಅದಾನಿ ಕಂಪನಿಗೆ ಕ್ಲೀನ್‌ ಚಿಟ್‌ ನೀಡಿತ್ತು. ತನಿಖಾ ವರದಿಗಳು ಪ್ರಕಟವಾಗುತ್ತಿದ್ದಂತೆ ನಿಧಾನವಾಗಿ ಅದಾನಿ ಕಂಪನಿಗಳ ಷೇರುಗಳ ಮೌಲ್ಯ ಏರಿಕೆಯಾಗಿತ್ತು. ಹಿಂಡನ್‌ಬರ್ಗ್‌ ವರದಿಯಿಂದ ವಿಶ್ವದ ಮೂರನೇ ಶ್ರೀಮಂತರ ವ್ಯಕ್ತಿಯಾಗಿದ್ದ ಗೌತಮ್‌ ಅದಾನಿ ಸಂಪತ್ತು ಕರಗಿ 30ನೇ ಸ್ಥಾನಕ್ಕೆ ಕುಸಿದಿದ್ದರು. ನಂತರ ಚೇತರಿಕೆ ಕಂಡು 12ನೇ ಸ್ಥಾನಕ್ಕೆ ಏರಿದ್ದಾರೆ. ಇದನ್ನೂ ಓದಿ: ಷೇರು ವಿವಾದ; ಅದಾನಿ ಗ್ರೂಪ್‌ಗೆ ಸುಪ್ರೀಂ ಕೋರ್ಟ್ ಸಮಿತಿ ಕ್ಲೀನ್ ಚಿಟ್

    ಏನಿದು ಶಾರ್ಟ್‌ ಸೆಲ್ಲಿಂಗ್‌?
    ಶಾರ್ಟ್ ಸೆಲ್ಲಿಂಗ್ ಎನ್ನುವುದು ಹೂಡಿಕೆಯ ತಂತ್ರವಾಗಿದ್ದು, ಮುಂದಿನ ದಿನಗಳಲ್ಲಿ ಕಂಪನಿಯ ಷೇರು ಮೌಲ್ಯ ಕುಸಿಯಬಹುದು ಎಂಬುದನ್ನು ಮೊದಲೇ ಊಹಿಸಿ ನಿಗದಿತ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿ ನಂತರ ಆ ಕಂಪನಿಯ ಷೇರು ಮೌಲ್ಯ ಕುಸಿತಗೊಂಡಾಗ ಅವುಗಳನ್ನು ಕಡಿಮೆ ಬೆಲೆಗೆ ಮರು ಖರೀದಿಸಿ ಲಾಭ ಮಾಡುವುದಕ್ಕೆ ಶಾರ್ಟ್‌ ಸೆಲ್ಲಿಂಗ್‌ ಎಂದು ಕರೆಯಲಾಗುತ್ತದೆ.

    ಅದಾನಿಯಿಂದ ಎಫ್‌ಪಿಒ ರದ್ದು:
    20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ (ಮುಂದುವರಿದ ಸಾರ್ವಜನಿಕ ಕೊಡುಗೆ ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಎಂಟರ್‌ಪ್ರೈಸಸ್‌ ಕಳೆದ ಜನವರಿಯಲ್ಲಿ ಚಾಲನೆ ನೀಡಿತ್ತು. ಪ್ರತಿ ಷೇರಿಗೆ 3,112ರಿಂದ 3,276 ರೂ. ಆಫರ್‌ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಹಿಂಡನ್‌ಬರ್ಗ್‌ ಅದಾನಿ ಕಂಪನಿಗಳ ವಿರುದ್ಧ ಸಂಶೋಧನಾ ವರದಿ ಬಿಡುಗಡೆ ಮಾಡಿತ್ತು. ವರದಿ ಬಳಿಕ ಅದಾನಿ ಕಂಪನಿಗಳ ಷೇರಿನ ಮೌಲ್ಯ ಕುಸಿತ ಕಂಡಿದ್ದರೂ ಎಫ್‌ಪಿಒ ಬಿಡ್‌ ಖರೀದಿ ಪ್ರಕ್ರಿಯೆ ಪೂರ್ಣಗೊಂಡಿತ್ತು. ಇದನ್ನೂ ಓದಿ: ಹಿಂಡನ್‌ಬರ್ಗ್‌ ಸಂಶೋಧನಾ ವರದಿ ಸುಳ್ಳು, ಆಧಾರ ರಹಿತ: ಅದಾನಿಗೆ ಮಾರಿಷಸ್‌ ಸರ್ಕಾರದಿಂದ ಕ್ಲೀನ್‌ ಚಿಟ್‌

    ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ನಂತರ 20 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಮುಂದಾಗಿದ್ದ ಎಫ್‌ಪಿಒ ಪ್ರಕ್ರಿಯೆಯನ್ನೇ ಅದಾನಿ ಸಮೂಹ ರದ್ದು ಮಾಡಿತ್ತು. ನಮ್ಮ ಷೇರು (Share) ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಹೇಳಿ ಹೂಡಿಕೆದಾರರ ಹಣವನ್ನು ಮರಳಿಸಲಾಗುವುದು ಎಂದು ಗೌತಮ್‌ ಅದಾನಿ (Gautam Adani) ತಿಳಿಸಿದ್ದರು.

     

  • ಅದಾನಿ ಗ್ರೂಪ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಮೋದಿ, ರಾಹುಲ್‌ಗೆ ನಿರ್ದೇಶಿಸಿ: ಕೋರ್ಟ್‌ಗೆ ಅರ್ಜಿ ಸಲ್ಲಿಕೆ

    ಅದಾನಿ ಗ್ರೂಪ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಮೋದಿ, ರಾಹುಲ್‌ಗೆ ನಿರ್ದೇಶಿಸಿ: ಕೋರ್ಟ್‌ಗೆ ಅರ್ಜಿ ಸಲ್ಲಿಕೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ರಾಹುಲ್‌ ಗಾಂಧಿ (Rahul Gandhi) ಅವರು ಅದಾನಿ ಗ್ರೂಪ್‌ (Adani Group) ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ಆದೇಶ ನೀಡಬೇಕೆಂದು ಕೋರಿ ದೆಹಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ.

    ಅರ್ಜಿದಾರರು ಸಾಮಾಜಿಕ ಕಾರ್ಯಕರ್ತ, ರೈತ ಮತ್ತು ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಾಗಿದ್ದಾರೆ. ಚುನಾವಣಾ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮೋದಿಯವರ ಭಾಷಣಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ:  ಈ ಚುನಾವಣೆಯಲ್ಲಿ ಅದಾನಿ-ಅಂಬಾನಿಯನ್ನು ನಿಂದಿಸುತ್ತಿಲ್ಲ ಯಾಕೆ – ರಾಹುಲ್‌ಗೆ ಮೋದಿ ಪ್ರಶ್ನೆ

    ರಾಹುಲ್‌ ಗಾಂಧಿ ಮತ್ತು ಮೋದಿ ಸುಳ್ಳು, ಆಧಾರರಹಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪ ಮಾಡಿರುವ ಅವರು ಅದಾನಿ ಗ್ರೂಪ್‌ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಶಾಶ್ವತ ತಡೆಯಾಜ್ಞೆ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದ್ದಾರೆ.

    ತನ್ನ ವಿರುದ್ಧ ಸುಳ್ಳು ಆರೋಪ ಮಾಡುವುದರಿಂದ ತನ್ನ ಮಾರುಕಟ್ಟೆ ಮೌಲ್ಯ ಮತ್ತು ಹೂಡಿಕೆದಾರರ ಹಿತಾಸಕ್ತಿಗಳಿಗೆ ಹಾನಿಯುಂಟಾಗುತ್ತದೆ. ಕೈಗಾರಿಕೋದ್ಯಮಿಗಳ ವಿರುದ್ಧ ಇಂತಹ ನಕಾರಾತ್ಮಕ ಪ್ರಚಾರವು ಷೇರು ಮಾರುಕಟ್ಟೆಯಲ್ಲಿ ದೊಡ್ಡ ನಷ್ಟವನ್ನು ಉಂಟುಮಾಡುತ್ತದೆ. ನಾನು ಸ್ವತಃ ಹೂಡಿಕೆದಾರನಾಗಿದ್ದು ಅದಾನಿ ಗ್ರೂಪ್‌ ಪಟ್ಟಿ ಮಾಡಿದ ಕೆಲ ಕಂಪನಿಗಳಲ್ಲಿ ನಾನು ಹೂಡಿಕೆ ಮಾಡಿದ್ದೇನೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅಂಬಾನಿ, ಅದಾನಿ ಟೆಂಪೋದಲ್ಲಿ ಹಣ ಕಳುಹಿಸುತ್ತಾರೆ- ಮೋದಿಗೆ ರಾಗಾ ತಿರುಗೇಟು

    ಇಂತಹ ಸುಳ್ಳು, ಕಪೋಲಕಲ್ಪಿತ ಮತ್ತು ತಪ್ಪುದಾರಿಗೆಳೆಯುವ ಭಾಷಣಗಳು ಸಾಮಾನ್ಯ ಜನರ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಪ್ರಪಂಚದ ದೃಷ್ಟಿಯಲ್ಲಿ ದೇಶದ ಇಮೇಜ್ ಹಾಳಾಗುತ್ತದೆ. ಇದು ವಿದೇಶಿ ಹೂಡಿಕೆಯ ಮೇಲೆ ಪರಿಣಾಮ ಬೀರುವಂತಹ ಋಣಾತ್ಮಕ ಪರಿಣಾಮಗಳನ್ನು ಉಂಟುಮಾಡಬಹುದು. ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ವ್ಯಕ್ತಿಗಳ ಋಣಾತ್ಮಕ ಪ್ರಚಾರದಿಂದ ಸ್ಟಾಕ್‌ ಮಾರುಕಟ್ಟೆ ಪರಿಣಾಮ ಬೀರುತ್ತದೆ. ಈ ಕೆಟ್ಟ ಪ್ರಚಾರ ದೇಶದ ಆರ್ಥಿಕ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯ ಹೂಡಿಕೆದಾರರು ಮತ್ತು ಅದಾನಿ ಗೂಪ್‌ ರಕ್ಷಣೆಗೆ ಕೋರ್ಟ್‌ ಮುಂದಾಗಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

     

  • ಅಂಬಾನಿ, ಅದಾನಿ ಟೆಂಪೋದಲ್ಲಿ ಹಣ ಕಳುಹಿಸುತ್ತಾರೆ- ಮೋದಿಗೆ ರಾಗಾ ತಿರುಗೇಟು

    ಅಂಬಾನಿ, ಅದಾನಿ ಟೆಂಪೋದಲ್ಲಿ ಹಣ ಕಳುಹಿಸುತ್ತಾರೆ- ಮೋದಿಗೆ ರಾಗಾ ತಿರುಗೇಟು

    ನವದೆಹಲಿ: ಅಂಬಾನಿ, ಅದಾನಿ ಹೆಸರು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿಯವರು ಟಾಂಗ್‌ ನೀಡಿದ್ದಕ್ಕೆ ಇದೀಗ ಕೈ ನಾಯಕ ರಾಹುಲ್‌ ಗಾಂಧಿ (Rahul Gandhi) ತಿರುಗೇಟು ಕೊಟ್ಟಿದ್ದಾರೆ.

    ಈ ಸಂಬಂಧ ವೀಡಿಯೋ ಮಾಡಿದ ರಾಗಾ, ನಮಸ್ಕಾರ ಮೋದಿ ಅವರೇ, ಏನು ಭಯಗೊಂಡಿದ್ದೀರಾ..?. ಸಾಮಾನ್ಯವಾಗಿ ನೀವು ಮುಚ್ಚಿದ ಕೋಣೆಯಲ್ಲಿ ಅಂಬಾನಿ (Mukesh Ambani), ಅದಾನಿ (Adani) ಬಗ್ಗೆ ನೀವು ಮಾತನಾಡುತ್ತೀರಿ. ಆದರೆ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದೀರಿ. ಅವರು ಟೆಂಪೋದಲ್ಲಿ ಹಣ ಕೊಡ್ತಾರೆ ಅಂತಾ ನಿಮಗೆ ಗೊತ್ತು. ಇದು ನಿಮ್ಮ ವೈಯಕ್ತಿಕ ಅನುಭವನಾ ಎಂದು ಪ್ರಶ್ನಿಸಿದ್ದಾರೆ.

    ಸಿಬಿಐ, ಇಡಿ ಕಳುಹಿಸಿ ಸಾಧ್ಯವಾದಷ್ಟು ಬೇಗ ವಿಚಾರಣೆ ನಡೆಸಿ ಹೆದರಿಕೊಳ್ಳಬೇಡಿ. ನಾನು ಮತ್ತೆ ಹೇಳುತ್ತೇನೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಅಂಬಾನಿ, ಅದಾನಿಗೆ ನೀಡಿದ್ದಾರೆ. ಅಷ್ಟೇ ಹಣವನ್ನು ನಾನು ಭಾರತದ ಬಡವರಿಗೆ ನೀಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಈ ಚುನಾವಣೆಯಲ್ಲಿ ಅದಾನಿ-ಅಂಬಾನಿಯನ್ನು ನಿಂದಿಸುತ್ತಿಲ್ಲ ಯಾಕೆ – ರಾಹುಲ್‌ಗೆ ಮೋದಿ ಪ್ರಶ್ನೆ

    ಮಹಾಲಕ್ಷ್ಮಿ, ಮೊದಲ ಉದ್ಯೋಗ ಯೋಜನೆ ಮೂಲಕ ಕೋಟ್ಯಂತರ ಜನರನ್ನು ಲಕ್ಷಾಧಿಪತಿಯನ್ನಾಗಿ ಮಾಡುತ್ತೇವೆ. ಮೋದಿ ಅವರು 22 ಜನರನ್ನು ಕೊಟ್ಯಾಧಿಪತಿ ಮಾಡಿದ್ದಾರೆ. ಆದರೆ ನಾವು ಕೋಟ್ಯಾಂತರ ಜನರನ್ನು ಲಕ್ಷಾಧಿಪತಿ ಮಾಡಲಿದ್ದೇವೆ ಎಂದು ರಾಹುಲ್‌ ಗಾಂಧಿ ಭರವಸೆ ಕೊಟ್ಟರು.

    ಮೋದಿ ಹೇಳಿದ್ದೇನು..?; ತೆಲಂಗಾಣದ ಕರೀಂಪುರದಲ್ಲಿ ನಡೆದ ಪಕ್ಷದ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ ಅವರು, ಐದು ವರ್ಷಗಳಿಂದ ಕಾಂಗ್ರೆಸ್‌ನ ಶೆಹಜಾದ (ರಾಹುಲ್‌ ಗಾಂಧಿ) ಒಂದು ಮಾತನ್ನು ಜಪಿಸುತ್ತಲೇ ಇದ್ದರು. ಅವರ ರಫೇಲ್ ವಿವಾದದ ನಂತರ ಅವರು ಹೊಸ ಜಪವನ್ನು ಪ್ರಾರಂಭಿಸಿದರು. ಹೋದಲ್ಲಿ ಬಂದಲ್ಲಿ ಐದು ಕೈಗಾರಿಕೋದ್ಯಮಿಗಳು, ಐದು ಕೈಗಾರಿಕೋದ್ಯಮಿಗಳು ಎಂದು ಹೇಳುತ್ತಿದ್ದರು. ನಂತರ ಅವರು ಅಂಬಾನಿ-ಅದಾನಿ ಎಂದು ಹೇಳಲು ಪ್ರಾರಂಭಿಸಿದರು. ಆದರೆ ಚುನಾವಣೆ ಘೋಷಣೆಯಾದಾಗಿನಿಂದ ಅವರು ಅಂಬಾನಿ ಮತ್ತು ಅದಾನಿಯನ್ನು ನಿಂದಿಸುತ್ತಿಲ್ಲ ಯಾಕೆ ಎಂದು ಪ್ರಶ್ನಿಸಿದ್ದರು.

  • ಈ ಚುನಾವಣೆಯಲ್ಲಿ ಅದಾನಿ-ಅಂಬಾನಿಯನ್ನು ನಿಂದಿಸುತ್ತಿಲ್ಲ ಯಾಕೆ – ರಾಹುಲ್‌ಗೆ ಮೋದಿ ಪ್ರಶ್ನೆ

    ಈ ಚುನಾವಣೆಯಲ್ಲಿ ಅದಾನಿ-ಅಂಬಾನಿಯನ್ನು ನಿಂದಿಸುತ್ತಿಲ್ಲ ಯಾಕೆ – ರಾಹುಲ್‌ಗೆ ಮೋದಿ ಪ್ರಶ್ನೆ

    – ರಫೇಲ್‌ ವಿವಾದದ ನಂತರ ಅದಾನಿ ವಿರುದ್ಧ ರಾಹುಲ್‌ ವಾಗ್ದಾಳಿ
    – RR ತೆರಿಗೆ RRR ಸಿನಿಮಾ ಕಲೆಕ್ಷನ್‌ ಹಿಂದಿಕ್ಕಿದೆ

    ಹೈದರಾಬಾದ್‌: ಈ ಚುನಾವಣೆಯಲ್ಲಿ ಅದಾನಿ-ಅಂಬಾನಿಯನ್ನು (Adani-Ambani) ರಾಹುಲ್‌ ಗಾಂಧಿ (Rahul Gandhi) ನಿಂದಿಸುತ್ತಿಲ್ಲ ಯಾಕೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಪ್ರಶ್ನಿಸಿದ್ದಾರೆ.

    ತೆಲಂಗಾಣದ ಕರೀಂಪುರದಲ್ಲಿ ನಡೆದ ಪಕ್ಷದ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ ಅವರು, ಐದು ವರ್ಷಗಳಿಂದ ಕಾಂಗ್ರೆಸ್‌ನ ಶೆಹಜಾದ (ರಾಹುಲ್‌ ಗಾಂಧಿ) ಒಂದು ಮಾತನ್ನು ಜಪಿಸುತ್ತಲೇ ಇದ್ದರು. ಅವರ ರಫೇಲ್ ವಿವಾದದ ನಂತರ ಅವರು ಹೊಸ ಜಪವನ್ನು ಪ್ರಾರಂಭಿಸಿದರು. ಹೋದಲ್ಲಿ ಬಂದಲ್ಲಿ ಐದು ಕೈಗಾರಿಕೋದ್ಯಮಿಗಳು, ಐದು ಕೈಗಾರಿಕೋದ್ಯಮಿಗಳು ಎಂದು ಹೇಳುತ್ತಿದ್ದರು. ನಂತರ ಅವರು ಅಂಬಾನಿ-ಅದಾನಿ ಎಂದು ಹೇಳಲು ಪ್ರಾರಂಭಿಸಿದರು. ಆದರೆ ಚುನಾವಣೆ ಘೋಷಣೆಯಾದಾಗಿನಿಂದ ಅವರು ಅಂಬಾನಿ ಮತ್ತು ಅದಾನಿಯನ್ನು ನಿಂದಿಸುತ್ತಿಲ್ಲ ಯಾಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪೂರ್ವ ಭಾರತದ ಜನರು ಚೀನಿಯರಂತೆ, ದಕ್ಷಿಣದ ಜನರು ಆಫ್ರಿಕನ್ನರಂತೆ ಕಾಣುತ್ತಾರೆ: ಸ್ಯಾಮ್‌ ಪಿತ್ರೋಡಾ

    ಅವರು ಅಂಬಾನಿಯಿಂದ ಎಷ್ಟು ಹಣವನ್ನು ತೆಗೆದುಕೊಂಡಿದ್ದಾರೆ ಎಂಬುದನ್ನು ಅವರು ಘೋಷಿಸಬೇಕು, ನೀವು ಅಂಬಾನಿ ಮತ್ತು ಅದಾನಿಯನ್ನು ರಾತ್ರೋರಾತ್ರಿ ದುರುಪಯೋಗಪಡಿಸಿಕೊಂಡಿದ್ದೀರಾ? ಐದು ವರ್ಷಗಳ ಕಾಲ ಅವರನ್ನು ನಿಂದಿಸಿದ ನೀವು ರಾತ್ರೋರಾತ್ರಿ ನಿಂದನೆಯನ್ನು ನಿಲ್ಲಿಸಿದ್ದು ಯಾಕೆ? ಏನಾದ್ರೂ ರಹಸ್ಯ ಒಪ್ಪಂದ ನಡೆದಿದ್ಯಾ ಎಂದು ರಾಹುಲ್‌ ಗಾಂಧಿಗೆ ಪ್ರಶ್ನೆ ಕೇಳಿದರು.

    ತೆಲಂಗಾಣದಿಂದ ದೆಹಲಿಯವರೆಗೆ, ‘ಡಬಲ್ ಆರ್’ (RR) ತೆರಿಗೆಯ ಬಗ್ಗೆ ಸಾಕಷ್ಟು ಮಾತನಾಡಲಾಗುತ್ತಿದೆ. RRR ಹೆಸರಿನ ತೆಲುಗು ಚಿತ್ರ ಬಿಡುಗಡೆಯಾಗಿ ಭರ್ಜರಿ ಹಿಟ್‌ ಆಯ್ತು. ಆದರೆ ಕಲೆಕ್ಷನ್‌ ವಿಚಾರದಲ್ಲಿ RRR ಸಿನಿಮಾವನ್ನು RR ತೆರಿಗೆ ಬಹಳ ಹಿಂದೆಯೇ ಹಿಂದಿಕ್ಕಿದೆ ಎಂದು ಯಾರೋ ನನಗೆ ಹೇಳಿದ್ದಾರೆ ಎನ್ನುವ ಮೂಲಕ ರೇವಂತ್‌ ರೆಡ್ಡಿ ಸರ್ಕಾರವನ್ನು ಟೀಕಿಸಿದರು.

     

    ತೆಲಂಗಾಣದಲ್ಲಿ ಗೌತಮ್‌ ಅದಾನಿ ಹೂಡಿಕೆ ಮಾಡಿದ್ದಾರೆ. ರೇವಂತ್‌ ರೆಡ್ಡಿ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಗೌತಮ್‌ ಅದಾನಿ ಜೊತೆ ಒಪ್ಪಂದ ಮಾಡಿದ್ದನ್ನು ಪರೋಕ್ಷವಾಗಿ ಮೋದಿ ಪ್ರಸ್ತಾಪಿಸಿ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಇದನ್ನೂ ಓದಿ: ಭಾರತದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಿದರೆ ಅಂಬಾನಿ, ಅದಾನಿಯಂಥ ಶ್ರೀಮಂತರು ದುಬೈಗೆ ಹೋಗ್ತಾರೆ: ಆರ್ಥಶಾಸ್ತ್ರಜ್ಞ

    ವಿಶ್ವ ಆರ್ಥಿಕ ವೇದಿಕೆ-2024 ರಲ್ಲಿ ತೆಲಂಗಾಣ ಸರ್ಕಾರದೊಂದಿಗೆ ಅದಾನಿ ಗ್ರೂಪ್‌ ಬಹುಕೋಟಿ ರೂಪಾಯಿ ಮೊತ್ತದ ಹೂಡಿಕೆಗೆ ಒಡಂಬಡಿಕೆ ಮಾಡಿಕೊಂಡಿತ್ತು. ಪ್ರಮುಖ ಸಂಸ್ಥೆಯಾದ ಅದಾನಿ ಎಂಟರ್‌ಪ್ರೈಸಸ್‌ನ ಹೂಡಿಕೆಯು 50 ಶತಕೋಟಿ ರೂಪಾಯಿಗಳಿಗೆ ಸ್ಥಾಪಿಸಲು 100 ಮೆಗಾವ್ಯಾಟ್ ಡೇಟಾ ಕೇಂದ್ರವನ್ನೂ ಒಳಗೊಂಡಿದೆ. ಅದಾನಿ ಗ್ರೀನ್ ಎನರ್ಜಿ, ಅಂಬುಜಾ ಸಿಮೆಂಟ್ಸ್ ಮತ್ತು ಅದಾನಿ ಡಿಫೆನ್ಸ್ ಸಿಸ್ಟಮ್ಸ್ ಮತ್ತು ಟೆಕ್ನಾಲಜೀಸ್ ರಾಜ್ಯದಲ್ಲಿ ಯೋಜನೆಗಳನ್ನು ಜಾರಿಗೆ ತರುವ ಒಪ್ಪಂದಗಳಿಗೆ ಸಹಿ ಹಾಕಿವೆ.

    ಇಂಧನ ಕ್ಷೇತ್ರದಲ್ಲಿ ಅದಾನಿ ಎನರ್ಜಿ ತೆಲಂಗಾಣದಲ್ಲಿ 5 ಸಾವಿರ ಕೋಟಿ ರೂ., ಅಂಬುಜಾ ಸಿಮೆಂಟ್‌ ತಯಾರಿಕೆಗೆ 1,400 ಕೋಟಿ ರೂ. ಹೂಡಿಕೆ ಮಾಡಲಿದೆ. ಅಷ್ಟೇ ಅಲ್ಲದೇ, 1,000 ಕೋಟಿ ರೂ. ವೆಚ್ಚದಲ್ಲಿ ಡ್ರೋನ್‌ ಮತ್ತು ಕ್ಷಿಪಣಿ ವ್ಯವಸ್ಥೆ ಸಂಶೋಧನೆ, ಅಭಿವೃದ್ಧಿ ಮತ್ತು ವಿನ್ಯಾಸ ಘಟಕ ಸ್ಥಾಪಿಸುವ ಪ್ರಸ್ತಾವನೆಯೂ ಇದೆ.

     

  • ಅದಾನಿ ಕೇಸ್‌ ತನಿಖೆ ನಡೆಸಲು ಸೆಬಿ ಸಮರ್ಥವಾಗಿದೆ – ಪತ್ರಿಕೆಯ ವರದಿಯನ್ನು ಅವಲಂಬಿಸಬೇಡಿ : ಸುಪ್ರೀಂ ಹೇಳಿದ್ದೇನು?

    ಅದಾನಿ ಕೇಸ್‌ ತನಿಖೆ ನಡೆಸಲು ಸೆಬಿ ಸಮರ್ಥವಾಗಿದೆ – ಪತ್ರಿಕೆಯ ವರದಿಯನ್ನು ಅವಲಂಬಿಸಬೇಡಿ : ಸುಪ್ರೀಂ ಹೇಳಿದ್ದೇನು?

    ನವದೆಹಲಿ: ಅದಾನಿ (Adani) ಹಿಂಡೆನ್‌ಬರ್ಗ್‌ ಶಾರ್ಟ್‌ ಸೆಲ್ಲಿಂಗ್‌ ಪ್ರಕರಣದಲ್ಲಿ ಸೆಬಿ ಬದಲು ಬೇರೆ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕೆಂಬ ವಾದವನ್ನು ಸುಪ್ರೀಂ ಕೋರ್ಟ್‌ (Supreme Court) ತಿರಸ್ಕರಿಸಿದೆ.

    ಈ ಪ್ರಕರಣದ ತನಿಖೆ ನಡೆಸಲು ಸೆಬಿ ಸಮರ್ಥವಾಗಿದೆ. ಮೂರು ತಿಂಗಳ ಒಳಗಡೆ ಸೆಬಿ ಸಂಪೂರ್ಣವಾಗಿ ತನಿಖೆ ನಡೆಸಬೇಕೆಂದು ಕೋರ್ಟ್‌ ಸೂಚಿಸಿದೆ.

    ಸಿಜೆಐ ಡಿವೈ ಚಂದ್ರಚೂಡ್, ನ್ಯಾ.ಜೆಬಿ ಪರ್ದಿವಾಲಾ ಮತ್ತು ನ್ಯಾ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ನವೆಂಬರ್‌ನಲ್ಲಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

    ಅದಾನಿ ಕಂಪನಿಗಳು ತನ್ನ ಷೇರಿನ ಬೆಲೆಗಳನ್ನು ಕೃತಕವಾಗಿ ಹೆಚ್ಚಿಸಿದೆ ಎಂದು ಹಿಂಡೆನ್‌ಬರ್ಗ್ ಸಂಶೋಧನಾ ವರದಿ (Hindenburg Research Report) ಬಳಿಕ ವಿವಿಧ ಅದಾನಿ ಕಂಪನಿಗಳ ಷೇರು ಮೌಲ್ಯದಲ್ಲಿ ತೀವ್ರ ಕುಸಿತವಾಗಿ ಸುಮಾರು 100 ಶತಕೋಟಿ ಡಾಲರ್‌ ಸಂಪತ್ತು ಕರಗಿತ್ತು. ಪ್ರಕರಣದ ತನಿಖೆ ವಿಶೇಷ ತನಿಖಾ ತಂಡ (SIT) ರಚಿಸಬೇಕು ಎಂದು ಕೋರಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.  ಇದನ್ನೂ ಓದಿ: ಹಿಂಡೆನ್‌ಬರ್ಗ್‌ ಆರೋಪ ಅಪ್ರಸ್ತುತ – ಅಮೆರಿಕ ಹೇಳಿಕೆ ಬೆನ್ನಲ್ಲೇ ಅದಾನಿ ಕಂಪನಿಗಳ ಷೇರು ಮೌಲ್ಯ ಭಾರೀ ಏರಿಕೆ

    ಕೋರ್ಟ್‌ ಹೇಳಿದ್ದೇನು?
    ಅದಾನಿ ವಿರುದ್ಧದ 22 ಆರೋಪಗಳ ಪೈಕಿ 20ರ ತನಿಖೆಯನ್ನು ಪೂರ್ಣಗೊಳಿಸಿದೆ. ಸಾಲಿಸಿಟರ್ ಜನರಲ್ ಅವರ ಭರವಸೆಯನ್ನು ಗಣನೆಗೆ ತೆಗೆದುಕೊಂಡು ಇತರ ಎರಡು ಪ್ರಕರಣಗಳ ತನಿಖೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸಲು ನಾವು ಸೆಬಿಗೆ ನಿರ್ದೇಶಿಸುತ್ತೇವೆ.

    ತನಿಖೆಯನ್ನು ಸೆಬಿಯಿಂದ ಎಸ್‌ಐಟಿಗೆ ವರ್ಗಾಯಿಸಲು ಯಾವುದೇ ಆಧಾರವಿಲ್ಲ. ಸೆಬಿ ತನಿಖೆಯನ್ನು ಅನುಮಾನಿಸಲು ಒಸಿಸಿಆರ್‌ಪಿ (OCCRP: Organized Crime and Corruption Reporting Project) ವರದಿಯನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ. ಒಸಿಸಿಆರ್‌ಪಿ ವರದಿಯನ್ನು ತಿರಸ್ಕರಿಸಲಾಗಿದೆ. ಯಾವುದೇ ಪರಿಶೀಲನೆಯಿಲ್ಲದೆ ಮೂರನೇ ಸಂಸ್ಥೆಯ ವರದಿಯನ್ನು ಪುರಾವೆಯಾಗಿ ಪರಿಗಣಿಸುವುದಿಲ್ಲ.

    ಈ ಪ್ರಕರಣದ ತನಿಖೆಯನ್ನು ಸೆಬಿಯಿಂದ ಬೇರೆ ಕಡೆ ವರ್ಗಾಯಿಸಬೇಕೆಂಬ ವಾದಕ್ಕೆ ಯಾವುದೇ ಆಧಾರವಿಲ್ಲ. ತಜ್ಞರ ಸಮಿತಿಯ ಸದಸ್ಯರ ಹಿತಾಸಕ್ತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಾದಗಳನ್ನು ತಿರಸ್ಕರಿಸುತ್ತದೆ.

    ಭಾರತ ಸರ್ಕಾರ ಮತ್ತು ಸೆಬಿಯು ಹಿಂಡೆನ್‌ಬರ್ಗ್ ವರದಿಯಿಂದ ಶಾರ್ಟ್‌ ಸೆಲ್ಲಿಂಗ್‌ಗೆ ಸಂಬಂಧಿಸಿದಂತೆ ಯಾವುದೇ ಕಾನೂನು ಉಲ್ಲಂಘನೆಯಾಗಿದೆಯೇ ಎಂದು ಪರಿಶೀಲಿಸಬೇಕು. ಉಲ್ಲಂಘನೆಯಾಗಿದ್ದಲ್ಲಿ ಕಾನೂನು ಪ್ರಕಾರ ಕೈಗೊಳ್ಳಬೇಕು.

     

  • ಅದಾನಿ ಹಿಂಡೆನ್‌ಬರ್ಗ್‌ ಶಾರ್ಟ್‌ ಸೆಲ್ಲಿಂಗ್‌ ಕೇಸ್‌: ಸುಪ್ರೀಂನಿಂದ ಇಂದು ತೀರ್ಪು ಪ್ರಕಟ

    ಅದಾನಿ ಹಿಂಡೆನ್‌ಬರ್ಗ್‌ ಶಾರ್ಟ್‌ ಸೆಲ್ಲಿಂಗ್‌ ಕೇಸ್‌: ಸುಪ್ರೀಂನಿಂದ ಇಂದು ತೀರ್ಪು ಪ್ರಕಟ

    ನವದೆಹಲಿ: ಅದಾನಿ (Adani) ಸಮೂಹದ ಕಂಪನಿಗಳ ವಿರುದ್ಧ ಹಿಂಡೆನ್‌ಬರ್ಗ್‌ ಸಂಶೋಧನಾ ವರದಿಯಲ್ಲಿನ (Hindenburg Research Report) ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆಯ ತೀರ್ಪು ಇಂದು ಪ್ರಕಟವಾಗಲಿದ.

    ಸಿಜೆಐ ಡಿವೈ ಚಂದ್ರಚೂಡ್, ನ್ಯಾ. ಜೆಬಿ ಪರ್ದಿವಾಲಾ ಮತ್ತು ನ್ಯಾ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ನವೆಂಬರ್‌ನಲ್ಲಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇದನ್ನೂ ಓದಿ: ಅದಾನಿ ಷೇರು ಶಾರ್ಟ್‌ ಸೆಲ್ಲಿಂಗ್‌, 16 ಕಂಪನಿಗಳಿಗೆ ಭಾರೀ ಲಾಭ – ಇಡಿ ತನಿಖಾ ವರದಿಯಲ್ಲಿ ಏನಿದೆ?

    ಅದಾನಿ ತನ್ನ ಷೇರಿನ ಬೆಲೆಗಳನ್ನು ಕೃತಕವಾಗಿ ಹೆಚ್ಚಿಸಿದೆ ಎಂದು ಹಿಂಡೆನ್‌ಬರ್ಗ್ ವರದಿ ಬಳಿಕ ವಿವಿಧ ಅದಾನಿ ಕಂಪನಿಗಳ ಷೇರು ಮೌಲ್ಯದಲ್ಲಿ ತೀವ್ರ ಕುಸಿತವಾಗಿ ಸುಮಾರು 100 ಶತಕೋಟಿ ಡಾಲರ್‌ ಸಂಪತ್ತು ಕರಗಿತ್ತು. ಪ್ರಕರಣ ತನಿಖೆಗೆ ಆಗ್ರಹಿಸಿ ಹಲವು ಅರ್ಜಿ ಸಲ್ಲಿಕೆಯಾಗಿದ್ದವು. ಇದನ್ನೂ ಓದಿ: ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ – ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌

    ಸುಪ್ರೀಂಕೋರ್ಟ್ ಈ ಪ್ರಕರಣ ಪರಿಶೀಲಿಸಲು ನಿವೃತ್ತ ನ್ಯಾಯಮೂರ್ತಿ ಎ.ಎಂ ಸಪ್ರೆ ನೇತೃತ್ವದ ತಜ್ಞರ ಸಮಿತಿಯನ್ನು ರಚಿಸುವುದರ ಜೊತೆಗೆ ಸ್ವತಂತ್ರವಾಗಿ ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಸೆಬಿಗೆ ಸೂಚಿಸಿತು. ತಜ್ಞರ ಸಮಿತಿಯು ಕಳೆದ ಮೇ ತಿಂಗಳಲ್ಲಿ ಬಿಡುಗಡೆ ಮಾಡಿದ ತನ್ನ ವರದಿಯಲ್ಲಿ ಸೆಬಿಯ ಕಡೆಯಿಂದ ಯಾವುದೇ ಪ್ರಾಥಮಿಕ ಲೋಪ ಕಂಡುಬಂದಿಲ್ಲ ಎಂದು ಹೇಳಿತ್ತು‌.

    ಹಿಂಡೆನ್‌ಬರ್ಗ್ ಸಂಶೋಧನಾ ವರದಿಬಿಡುಗಡೆಯಾಗುವ ಸಮಯದಲ್ಲಿ ಅದಾನಿ ಸಮೂಹದ ಷೇರುಗಳನ್ನು ಶಾರ್ಟ್ ಸೆಲ್ಲಿಂಗ್ (Short Selling) ಮಾಡುವ ಮೂಲಕ ಒಂದು ಖಾಸಗಿ ಬ್ಯಾಂಕ್‌ ಸೇರಿದಂತೆ 16 ಸಂಸ್ಥೆಗಳು ಭಾರೀ ಲಾಭ ಮಾಡಿರುವ ವಿಷಯ ಜಾರಿ ನಿರ್ದೇಶನಾಲಯದ (ED) ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಮಾಧ್ಯಮವೊಂದು ಹಿಂದೆ ವರದಿ ಮಾಡಿತ್ತು.  ಇದನ್ನೂ ಓದಿ: ಹಿಂಡೆನ್‌ಬರ್ಗ್‌ ಆರೋಪ ಅಪ್ರಸ್ತುತ – ಅಮೆರಿಕ ಹೇಳಿಕೆ ಬೆನ್ನಲ್ಲೇ ಅದಾನಿ ಕಂಪನಿಗಳ ಷೇರು ಮೌಲ್ಯ ಭಾರೀ ಏರಿಕೆ

    ವಿದೇಶಿ ಬಂಡವಾಳ ಹೂಡಿಕೆದಾರರು ಮತ್ತು ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FPIs/FIIs) ಸೇರಿದಂತೆ ಒಂದು ಡಜನ್ ಕಂಪನಿಗಳು ಅದಾನಿ ಗ್ರೂಪ್‌ನ ಷೇರುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಲಾಭ ಮಾಡಿರುವ ವಿಷಯ ಇಡಿ ನಡೆಸಿದ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿತ್ತು.

     

  • ಅದಾನಿ ಷೇರು ಶಾರ್ಟ್‌ ಸೆಲ್ಲಿಂಗ್‌, 16 ಕಂಪನಿಗಳಿಗೆ ಭಾರೀ ಲಾಭ – ಇಡಿ ತನಿಖಾ ವರದಿಯಲ್ಲಿ ಏನಿದೆ?

    ಅದಾನಿ ಷೇರು ಶಾರ್ಟ್‌ ಸೆಲ್ಲಿಂಗ್‌, 16 ಕಂಪನಿಗಳಿಗೆ ಭಾರೀ ಲಾಭ – ಇಡಿ ತನಿಖಾ ವರದಿಯಲ್ಲಿ ಏನಿದೆ?

    ನವದೆಹಲಿ: ಹಿಂಡೆನ್‌ಬರ್ಗ್ ಸಂಶೋಧನಾ ವರದಿ (Hindenburg Research Report) ಬಿಡುಗಡೆಯಾಗುವ ಸಮಯದಲ್ಲಿ ಅದಾನಿ (Adani) ಸಮೂಹದ ಷೇರುಗಳನ್ನು ಶಾರ್ಟ್ ಸೆಲ್ಲಿಂಗ್ (Short Selling ) ಮಾಡುವ ಮೂಲಕ ಒಂದು ಖಾಸಗಿ ಬ್ಯಾಂಕ್‌ ಸೇರಿದಂತೆ 16 ಸಂಸ್ಥೆಗಳು ಭಾರೀ ಲಾಭ ಮಾಡಿರುವ ವಿಷಯ ಜಾರಿ ನಿರ್ದೇಶನಾಲಯದ (ED) ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ವಿದೇಶಿ ಬಂಡವಾಳ ಹೂಡಿಕೆದಾರರು ಮತ್ತು ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FPIs/FIIs) ಸೇರಿದಂತೆ ಒಂದು ಡಜನ್ ಕಂಪನಿಗಳು ಅದಾನಿ ಗ್ರೂಪ್‌ನ ಷೇರುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಲಾಭ ಮಾಡಿರುವ ವಿಷಯ ಇಡಿ ನಡೆಸಿದ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

    ಲಾಭ ಮಾಡಿದ ಸಂಸ್ಥೆಗಳ ಪೈಕಿ ಮೂರು ಭಾರತದಲ್ಲಿ ನೆಲೆಗೊಂಡಿದ್ದರೆ, ನಾಲ್ಕು ಮಾರಿಷಸ್‌, ಮತ್ತು ಫ್ರಾನ್ಸ್, ಹಾಂಕಾಂಗ್‌, ಕೇಮನ್ ದ್ವೀಪಗಳು, ಐರ್ಲೆಂಡ್ ಮತ್ತು ಲಂಡನ್‌ನಲ್ಲಿ ತಲಾ ಒಂದು ಸಂಸ್ಥೆಗಳು ನೆಲೆಗೊಂಡಿವೆ ಎಂದು ಇಡಿ ತನ್ನ ವರದಿಯಲ್ಲಿ ಹೇಳಿದೆ. ಇದನ್ನೂ ಓದಿ: ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ – ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌

    ಹಿಂಡೆನ್‌ಬರ್ಗ್‌ ವರದಿ ಜನವರಿ 24ರಂದು ಪ್ರಕಟವಾಗಿತ್ತು. ವರದಿ ಪ್ರಕಟವಾಗುವ 2-3 ದಿನಗಳ ಹಿಂದೆ ಕೆಲ ಕಂಪನಿಗಳು ಶಾರ್ಟ್‌ ಸೆಲ್ಲಿಂಗ್‌ ಮಾಡಿವೆ. ಅದರಲ್ಲೂ ಕೆಲ ಕಂಪನಿಗಳು ಇದೇ ಮೊದಲ ಬಾರಿಗೆ ಶಾರ್ಟ್‌ ಸೆಲ್ಲಿಂಗ್‌ ಮಾಡಿದೆ ಎಂದು ಇಡಿ ಜುಲೈನಲ್ಲಿ ಸಲ್ಲಿಸಿದ ತನಿಖಾ ವರದಿಯಲ್ಲಿ ಸೆಬಿಗೆ (SEBI) ತಿಳಿಸಿದೆ. ಎರಡು ಭಾರತೀಯ ಕಂಪನಿಗಳು ‘ಟಾಪ್ ಶಾರ್ಟ್ ಸೆಲ್ಲರ್’ಗಳಲ್ಲಿ ಕಾಣಿಸಿಕೊಂಡಿವೆ. ಈ ಪೈಕಿ ಒಂದು ದೆಹಲಿಯಲ್ಲಿ ಮತ್ತು ಇನ್ನೊಂದು ಮುಂಬೈನಲ್ಲಿ ನೋಂದಾಯಿಸಲಾಗಿದೆ.

    ಕಡಿಮೆ ಅವಧಿಯಲ್ಲಿ ಲಾಭ ಮಾಡಿದ 16 ಸಂಸ್ಥೆಗಳ ಮೇಲೆ ಸದ್ಯ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಸಂಸ್ಥೆಗಳ ಮೇಲೆ ಕ್ರಿಮಿನಲ್‌ ತನಿಖೆ ನಡೆಸುವ ಸಂಪೂರ್ಣ ಅಧಿಕಾರ ಸೆಬಿಗೆ ಇದ್ದು ಒಂದು ವೇಳೆ ಅನುಮಾನಾಸ್ಪದ ವ್ಯವಹಾರ ನಡೆದಿದ್ದರೆ ದೂರು ದಾಖಲಿಸಬಹುದು. ದೂರು ದಾಖಲಾದ ಬಳಿಕ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (PMLA) ಅಡಿ ಇಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಿದೆ. ಇದನ್ನೂ ಓದಿ: ಷೇರು ವಿವಾದ; ಅದಾನಿ ಗ್ರೂಪ್‌ಗೆ ಸುಪ್ರೀಂ ಕೋರ್ಟ್ ಸಮಿತಿ ಕ್ಲೀನ್ ಚಿಟ್

    ಏನಿದು ಶಾರ್ಟ್‌ ಸೆಲ್ಲಿಂಗ್‌?
    ಶಾರ್ಟ್ ಸೆಲ್ಲಿಂಗ್ ಎನ್ನುವುದು ಹೂಡಿಕೆಯ ತಂತ್ರವಾಗಿದ್ದು, ಮುಂದಿನ ದಿನಗಳಲ್ಲಿ ಕಂಪನಿಯ ಷೇರು ಮೌಲ್ಯ ಕುಸಿಯಬಹುದು ಎಂಬುದನ್ನು ಮೊದಲೇ ಊಹಿಸಿ ನಿಗದಿತ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿ ನಂತರ ಆ ಕಂಪನಿಯ ಷೇರು ಮೌಲ್ಯ ಕುಸಿತಗೊಂಡಾಗ ಅವುಗಳನ್ನು ಕಡಿಮೆ ಬೆಲೆಗೆ ಮರು ಖರೀದಿಸಿ ಲಾಭ ಮಾಡುವುದಕ್ಕೆ ಶಾರ್ಟ್‌ ಸೆಲ್ಲಿಂಗ್‌ ಎಂದು ಕರೆಯಲಾಗುತ್ತದೆ.

    ಲಾಭ ಮಾಡಿರುವ ಒಂದು ಸಂಸ್ಥೆ 2020ರಲ್ಲಿ ಆರಂಭಗೊಂಡಿದ್ದರೂ 2021 ರವರೆಗೆ ನಿಷ್ಕ್ರಿಯವಾಗಿತ್ತು. ಹೀಗಿದ್ದರೂ ಇದು ಸೆಪ್ಟೆಂಬರ್ 2021 ರಿಂದ ಮಾರ್ಚ್ 2022 ರವರೆಗಿನ ಕೇವಲ ಆರು ತಿಂಗಳೊಳಗೆ 31,000 ಕೋಟಿ ರೂ. ವಹಿವಾಟಿನ ಮೇಲೆ 1,100 ಕೋಟಿ ರೂಪಾಯಿಗಳ ಗಳಿಕೆಯನ್ನು ಘೋಷಿಸಿದೆ. ಇದನ್ನೂ ಓದಿ: ಅದಾನಿ ಸಮೂಹ ಕಂಪನಿಗಳಲ್ಲಿ 15,446 ಕೋಟಿ ಹೂಡಿಕೆ – ಅದಾನಿ ಕೈ ಹಿಡಿದ ರಾಜೀವ್‌ ಜೈನ್‌ ಯಾರು?

    ಭಾರತದಲ್ಲಿ ಬ್ಯಾಂಕ್ ಆಗಿ ಕಾರ್ಯನಿರ್ವಹಿಸುತ್ತಿರುವ ಮತ್ತೊಂದು ಹಣಕಾಸು ಸೇವೆಗಳ ಗುಂಪು 122 ಕೋಟಿ ರೂಪಾಯಿಗಳ ಅಲ್ಪ ಆದಾಯವನ್ನು ದಾಖಲಿಸಿದೆ. ಹೀಗಿದ್ದರೂ ಎಫ್‌ಐಐ ಆಗಿ ಯಾವುದೇ ತೆರಿಗೆ ಹೊಣೆಗಾರಿಕೆಯಿಲ್ಲದೆ 9,700 ಕೋಟಿ ರೂ. ಆದಾಯಗಳಿಸಿ ಅಚ್ಚರಿ ಮೂಡಿಸಿದೆ ಎಂದು ಇಡಿ ಹೇಳಿದೆ.

    ಈ ಎಫ್‌ಪಿಐಗಳು ಮತ್ತು ಎಫ್‌ಐಐಗಳು ನಿಜವಾದ ಫಲಾನುಭವಿಗಳಲ್ಲ. ಇವುಗಳು ವಿದೇಶಿ ಹೂಡಿಕೆದಾರರರಿಗೆ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸಿರಬಹುದು ಎಂದು ಇಡಿ ಸಂಶಯ ವ್ಯಕ್ತಪಡಿಸಿದೆ.

    ಅದಾನಿಯಿಂದ ಎಫ್‌ಪಿಒ ರದ್ದು:
    20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ (ಮುಂದುವರಿದ ಸಾರ್ವಜನಿಕ ಕೊಡುಗೆ ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಕಂಪನಿ ಈ ಜನವರಿಯಲ್ಲಿ ಚಾಲನೆ ನೀಡಿತ್ತು. ಪ್ರತಿ ಷೇರಿಗೆ 3,112ರಿಂದ 3,276 ರೂ. ಆಫರ್‌ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಹಿಂಡೆನ್‌ಬರ್ಗ್‌ ಅದಾನಿ ಕಂಪನಿ ವಿರುದ್ಧ ಸಂಶೋಧನಾ ವರದಿ ಬಿಡುಗಡೆ ಮಾಡಿತ್ತು. ವರದಿ ಬಳಿಕ ಅದಾನಿ ಕಂಪನಿಯ ಷೇರಿನ ಮೌಲ್ಯ ಕುಸಿತ ಕಂಡಿದ್ದರೂ ಎಫ್‌ಪಿಒ ಬಿಡ್‌ ಖರೀದಿ ಪ್ರಕ್ರಿಯೆ ಪೂರ್ಣಗೊಂಡಿತ್ತು.

    ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ನಂತರ 20 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಮುಂದಾಗಿದ್ದ ಎಫ್‌ಪಿಒ ಪ್ರಕ್ರಿಯೆಯನ್ನೇ ಅದಾನಿ ಸಮೂಹ ರದ್ದು ಮಾಡಿತ್ತು. ನಮ್ಮ ಷೇರು (Share) ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಹೇಳಿ ಹೂಡಿಕೆದಾರರ ಹಣವನ್ನು ಮರಳಿಸಲಾಗುವುದು ಎಂದು ಗೌತಮ್‌ ಅದಾನಿ ತಿಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]