Tag: Adar Poonawalla

  • ಆರ್‌ಸಿಬಿ ಸೇಲ್‌ – ಪುಣೆಯ ಶತಕೋಟ್ಯಧಿಪತಿ ಪೂನಾವಾಲಾ ತೆಕ್ಕೆಗೆ ಹೋಗುತ್ತಾ ಬೆಂಗಳೂರು?

    ಆರ್‌ಸಿಬಿ ಸೇಲ್‌ – ಪುಣೆಯ ಶತಕೋಟ್ಯಧಿಪತಿ ಪೂನಾವಾಲಾ ತೆಕ್ಕೆಗೆ ಹೋಗುತ್ತಾ ಬೆಂಗಳೂರು?

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಮಾರಾಟವಾಗುತ್ತಾ? ಕೋವಿಡ್‌ ಲಸಿಕೆ (Covid Vaccine) ಕೋವಿಶೀಲ್ಡ್‌ ತಯಾರಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (SII) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅದಾರ್ ಪೂನವಾಲಾ (Adar Poonawalla) ಖರೀದಿಸುತ್ತಾರಾ ಈ ಪ್ರಶ್ನೆ ಈಗ ಎದ್ದಿದೆ.

    ಹೌದು. ಆರ್‌ಸಿಬಿ ಷೇರನ್ನು ಮಾರಾಟ ಮಾಡಲು ಡಿಯಾಜಿಯೊ ಮುಂದಾಗಿದೆ ಎಂದು ಐಪಿಎಲ್‌ ಮಾಜಿ ಮುಖ್ಯಸ್ಥ ಲಲಿತ್‌ ಮೋದಿ ಸಾಮಾಜಿಕ ಜಾಲತಾಣದಲ್ಲಿ ಬಾಂಬ್‌ ಸಿಡಿಸಿದ್ದಾರೆ. ಎಕ್ಸ್‌ನಲ್ಲಿ ಸ್ಫೋಟಕ ವಿಚಾರ ಬಹಿರಂಗ ಪಡಿಸಿದ ಬೆನ್ನಲ್ಲೇ ಅದಾರ್ ಪೂನವಾಲಾ ಆರ್‌ಸಿಬಿ ಖರೀದಿಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

    ಮೋದಿ ಹೇಳಿದ್ದೇನು?
    ಆರ್‌ಸಿಬಿ ಫ್ರಾಂಚೈಸಿ ಮಾರಾಟದ ಬಗ್ಗೆ ಇಲ್ಲಿ ಸಾಕಷ್ಟು ವದಂತಿಗಳಿತ್ತು. ನಂತರ ಈ ವದಂತಿಗಳನ್ನು ನಿರಾಕರಿಸಲಾಗಿತ್ತು. ಆದರೆ ಮಾಲೀಕರು ಅಂತಿಮವಾಗಿ ಮಾರಾಟ ಮಾಡಲು ಮುಂದಾಗಿದ್ದಾರೆ. ಕಳೆದ ಬಾರಿ ಚಾಂಪಿಯನ್‌ ಆಗಿರುವ ತಂಡಕ್ಕೆ ಅತಿ ಹೆಚ್ಚು ಅಭಿಮಾನಿಗಳಿದ್ದಾರೆ ಮತ್ತು ಅತ್ಯುತ್ತಮ ಮ್ಯಾನೆಜ್ಮೆಂಟ್‌ ತಂಡವಿದೆ. ಫ್ರಾಂಚೈಸಿಗಳ ಪೈಕಿ ಅತ್ಯುತ್ತಮ ತಂಡ ಆಗಿರುವ ಕಾರಣ ದೊಡ್ಡ ಜಾಗತಿಕ ಹೂಡಿಕೆದಾರರು ಭಾರತದ ಹೂಡಿಕೆ ತಂತ್ರವಾಗಿ ಹೂಡಿಕೆ ಮಾಡಲು ಮುಂದಾಗಿವೆ. ಇದಕ್ಕಿಂತ ಉತ್ತಮ ಹೂಡಿಕೆ ಅವಕಾಶ ಇನ್ನೊಂದಿಲ್ಲ ಎಂದು ನಾನು ಭಾವಿಸುತ್ತೇನೆ. ಮಾರಾಟದ ಮೊತ್ತ ದಾಖಲೆಯಾಗಲಿದೆ. ಇದು ಐಪಿಎಲ್ ವೇಗವಾಗಿ ಬೆಳೆಯುತ್ತಿರುವ ಗ್ಲೋಬಲ್ ಸ್ಪೋರ್ಟಿಂಗ್ ಲೀಗ್ ಮಾತ್ರವಲ್ಲದೆ ಅತ್ಯಂತ ಮೌಲ್ಯಯುತವಾಗಿದೆ ಎಂದು ತೋರಿಸುತ್ತದೆ. ಎಲ್ಲರಿಗೂ ಶುಭವಾಗಲಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

     

     

    ಲಲಿತ್‌ ಮೋದಿ ಬಾಂಬ್‌ ಸಿಡಿಸಿದ ಬೆನ್ನಲ್ಲೇ ಆರ್‌ಸಿಬಿ ಖರೀದಿಸಲು ಅದರ್ ಪೂನವಾಲಾ ಮುಂದಾಗಿದ್ದು ಮಾತುಕತೆ ನಡೆಯುತ್ತಿದೆ ಎಂದು ವರದಿಯಾಗಿದೆ. ಡಿಯಾಜಿಯೊ ಸದ್ಯ ಸಂಭಾವ್ಯ ಸಲಹೆಗಾರರೊಂದಿಗೆ ಚರ್ಚೆ ನಡೆಸಿದೆ ಮತ್ತು 2 ಬಿಲಿಯನ್ ಡಾಲರ್‌ ಮೌಲ್ಯಮಾಪನವನ್ನು ಬಯಸುತ್ತಿದೆ ಮತ್ತು ಹೂಡಿಕೆದಾರರಿಂದ ಒಂದು ಬಾರಿಯ ಪಾವತಿಯನ್ನು ಬಯಸುತ್ತಿದೆ ಎನ್ನಲಾಗುತ್ತಿದೆ.

    ಈ ಹಿಂದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿದ ಬಳಿಕ ಆರ್‌ಸಿಬಿ ಫ್ರಾಂಚೈಸಿಯಲ್ಲಿರುವ ತನ್ನ ಪಾಲನ್ನು ಮಾರಾಟ ಮಾಡಲು ಡಿಯಾಜಿಯೊ (Diageo) ಮುಂದಾಗಿದೆ ಎಂದು ವರದಿಯಾಗಿತ್ತು. ವರದಿ ಬೆನ್ನಲ್ಲೇ ಬಾಂಬೆ ಷೇರು ಮಾರುಕಟ್ಟೆಗೆ ಡಿಯಾಜಿಯೊದ ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್, ಆರ್‌ಸಿಬಿಯ ಸಂಭಾವ್ಯ ಪಾಲು ಮಾರಾಟಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳ ಊಹಾತ್ಮಕ ಸ್ವರೂಪದ್ದಾಗಿವೆ. ಅಂತಹ ಯಾವುದೇ ಚರ್ಚೆಗಳನ್ನು ನಡೆದಿಲ್ಲ ಎಂದು ಸ್ಪಷ್ಟನೆ ನೀಡಿತ್ತು. ಇದನ್ನೂ ಓದಿ: 1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ

    ಡಿಯಾಜಿಯೊ ತೆಕ್ಕೆಗೆ ಆರ್‌ಸಿಬಿ ಹೋಗಿದ್ದು ಹೇಗೆ?
    2008 ರಲ್ಲಿ ವಿಜಯ್‌ ಮಲ್ಯ ಒಡೆತನದ ಯುನೈಟೆಡ್‌ ಸ್ಪೀರಿಟ್ಸ್‌ ಆರ್‌ಸಿಬಿ ತಂಡವನ್ನು 111.6 ಮಿಲಿಯನ್‌ ಡಾಲರ್‌(ಆಗಿನ 700-800 ಕೋಟಿ ರೂ.) ನೀಡಿ ಖರೀದಿಸಿತ್ತು. 2012ರಲ್ಲಿ ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಕಾರ್ಯಾಚರಣೆ ನಿಲ್ಲಿಸಿತು. ಉದ್ಯಮದಲ್ಲಿ ನಷ್ಟವಾದ ಕಾರಣ ಮಲ್ಯ ಅವರ ಯುನೈಟೆಡ್ ಸ್ಪಿರಿಟ್ಸ್ ಕಂಪನಿಯನ್ನು ಡಿಯಾಜಿಯೊ ಸ್ವಾಧೀನಪಡಿಸಿಕೊಂಡಿತು. ಆರ್‌ಸಿಬಿಯಲ್ಲಿ ಯುನೈಟೆಡ್ ಸ್ಪಿರಿಟ್ಸ್ ಷೇರುಗಳು ಇದ್ದ ಕಾರಣ ಅದರ ಮಾಲೀಕತ್ವ ಡಿಯಾಜಿಯೊಗೆ (Diageo) ಹೋಗಿತ್ತು.

  • ಭಾರತದೊಂದಿಗೆ ಭಿನ್ನಾಭಿಪ್ರಾಯ ಮರೆತು ನಮ್ಮ ಲಸಿಕೆಯನ್ನು ತರಿಸಿಕೊಳ್ಳಿ: ಚೀನಾಗೆ ಪೂನಾವಾಲಾ ಸಲಹೆ

    ಭಾರತದೊಂದಿಗೆ ಭಿನ್ನಾಭಿಪ್ರಾಯ ಮರೆತು ನಮ್ಮ ಲಸಿಕೆಯನ್ನು ತರಿಸಿಕೊಳ್ಳಿ: ಚೀನಾಗೆ ಪೂನಾವಾಲಾ ಸಲಹೆ

    ದಾವೋಸ್: ಭಾರತದೊಂದಿಗಿನ (India) ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಚೀನಾ (China) ಕೋವಿಡ್ ಲಸಿಕೆಗಳನ್ನು (Vaccine) ತರಿಸಿಕೊಳ್ಳುವ ಬಗ್ಗೆ ಯೋಚನೆ ಮಾಡಬೇಕು ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಮುಖ್ಯಸ್ಥ ಅದಾರ್ ಪೂನಾವಾಲಾ (Adar Poonawalla) ಸಲಹೆ ನೀಡಿದ್ದಾರೆ.

    ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ಗೆ ಆಗಮಿಸಿರುವ ಅವರು ಮಾಧ್ಯಮದ ಜೊತೆ ಮಾತನಾಡಿ, ಚೀನಾ ಇದೀಗ ಕೋವಿಡ್‌ನಿಂದ (Covid-19) ಚೇತರಿಸಿಕೊಳ್ಳುವುದು ಮುಖ್ಯವಾಗಿದೆ. ಇದು ಜಗತ್ತಿಗೂ ಒಳಿತು. ನಾವು ಚೀನಾದೊಂದಿಗೆ ತೊಡಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಭಿನ್ನಾಭಿಪ್ರಾಯಗಳು, ಸಮಸ್ಯೆಗಳು ಹಾಗೂ ಯಾವುದೇ ರೀತಿಯ ಆತಂಕಗಳನ್ನು ಬದಿಗಿಟ್ಟು ನಮ್ಮ ಲಸಿಕೆಗಳನ್ನು ಬೂಸ್ಟರ್ ಡೋಸ್ ಆಗಿ ಪಡೆದುಕೊಳ್ಳಲು ಕೇಳುತ್ತಿದ್ದೇವೆ ಎಂದಿದ್ದಾರೆ.

    ಭಾರತದ ಸೀರಮ್ ಇನ್‌ಸ್ಟಿಟ್ಯೂಟ್ ತನ್ನ 2 ಪ್ರಮುಖ ಲಸಿಕೆಗಳಾದ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಅನ್ನು ಕೊರೊನಾ ಸೋಂಕಿಗಾಗಿ ಮಾರಾಟ ಮಾಡುತ್ತಿದೆ. ಚೀನಾ ಇದೀಗ ಮತ್ತೆ ಕೊರೊನಾ ಸೋಂಕಿಗೆ ನಲುಗುತ್ತಿದೆ. ಜಗತ್ತು ತನ್ನ ಪೂರೈಕೆ ಸರಪಳಿಯನ್ನು ಕಾರ್ಯಗತಗೊಳಿಸುವುದು ಮುಖ್ಯ. ಈ ಸಂದರ್ಭದಲ್ಲಿ ಚೀನಾ ಲಸಿಕೆಗಳನ್ನು ತರಿಸಿ, ಸೋಂಕಿನಿಂದ ಚೇತರಿಸಿಕೊಂಡರೆ ಜಗತ್ತಿಗೂ ಒಳಿತಾಗುತ್ತದೆ ಎಂದು ತಿಳಿಸಿದರು.

    ಚೀನಾ ಇದೀಗ ಕೋವಿಡ್‌ನಿಂದ ನರಳಾಡುತ್ತಿದ್ದು, ಮುಂದೆ ಯಾವ ಹೆಜ್ಜೆಯಿಟ್ಟು ಸಾಗಬೇಕು ಎಂಬುದನ್ನು ತ್ವರಿತವಾಗಿ ನಿರ್ಧರಿಸಲಿದೆ ಎಂದು ನಾನು ಭಾವಿಸುತ್ತೇನೆ. ಚೀನಾ ಪಾಶ್ಚಿಮಾತ್ಯ ದೇಶಗಳಿಂದ ಲಸಿಕೆಯನ್ನು ಆಮದು ಮಾಡಿಕೊಳ್ಳುವ ದಿಟ್ಟ ನಿರ್ಧಾರ ಮಾಡಬೇಕಾಗುತ್ತದೆ. ಒಂದು ವೇಳೆ ಚೀನಾ ಈಗಲೇ ಮಹತ್ವದ ನಿರ್ಧಾರ ಮಾಡದೇ ಹೋದರೆ ಮುಂದೆ ಪರಿಸ್ಥಿತಿಯನ್ನು ನಿಭಾಯಿಸಲು ಕಷ್ಟವಾಗಬಹುದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಕೊಪ್ಪಳದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಿದ ಖಾಕಿ

    ಕೋವಿಡ್ 2020ರ ಡಿಸೆಂಬರ್‌ನಲ್ಲಿ ಚೀನಾದಲ್ಲಿ ಕಂಡುಬಂದಿತ್ತು. ಇಡೀ ಜಗತ್ತು ಕೊರೊನಾ ಸಂಕಷ್ಟವನ್ನು ಅನುಭವಿಸಿ ನರಳಿದೆ. ಇದೀಗ ಮತ್ತೆ ಚೀನಾದಲ್ಲಿ ಕೊರೊನಾ ಪ್ರಕರಣ ಉಲ್ಬಣಗೊಳ್ಳುತ್ತಿದೆ. ಆದರೆ ಚೀನಾದಲ್ಲಿ ಆರೋಗ್ಯ ಮೂಲಸೌಕರ್ಯದ ಕೊರತೆಯಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವುಗಳನ್ನು ಕಾಣುತ್ತಿದೆ. ಇದನ್ನೂ ಓದಿ: ಚಲನಚಿತ್ರಗಳ ಬಗ್ಗೆ ಅನಗತ್ಯ ಟೀಕೆ ಮಾಡಬೇಡಿ: ನಾಯಕರಿಗೆ ಮೋದಿ ಸೂಚನೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವ್ಯರ್ಥವಾಯ್ತು 10 ಕೋಟಿ ಕೋವಿಶೀಲ್ಡ್ ಡೋಸ್

    ವ್ಯರ್ಥವಾಯ್ತು 10 ಕೋಟಿ ಕೋವಿಶೀಲ್ಡ್ ಡೋಸ್

    ಪುಣೆ: 10 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ(Covishield Vaccine) ವ್ಯರ್ಥವಾಗಿದೆ ಎಂದು ವಿಶ್ವದ ಅತಿದೊಡ್ಡ ಅತಿ ದೊಡ್ಡ ಲಸಿಕೆ ತಯಾರಿಕೆ ಕಂಪನಿ ಪುಣೆ ಮೂಲದ ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ(Serum Institute of India) ಹೇಳಿದೆ.

    ಕಂಪನಿಯ ಸಿಇಒ ಆದಾರ್‌ ಪೂನಾವಾಲ(Adar Poonawalla), 2021ರ ಡಿಸೆಂಬರ್‌ನಲ್ಲೇ ಕೋವಿಡ್‌ ಲಸಿಕೆ ಕೋವಿಶೀಲ್ಡ್ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವುದಾಗಿ ಹೇಳಿದೆ.

    ಜನರು ಬೂಸ್ಟರ್‌ ಡೋಸ್‌(Booster Dose) ಪಡೆಯಲು ಹಿಂಜರಿಯುತ್ತಿದ್ದಾರೆ. ಈ ಕಾರಣಕ್ಕೆ ನಾವು ಉತ್ಪಾದನೆ ಮಾಡುವುದನ್ನು ನಿಲ್ಲಿಸಿದೆವು ಎಂದಿದ್ದಾರೆ.

    ಈ ವೇಳೆ ಉತ್ಪಾದನೆಯಾಗಿ ಖರೀದಿಯಾಗದೇ ಉಳಿದಿದ್ದ 10 ಕೋಟಿ ಡೋಸ್‌ನಷ್ಟು ಲಸಿಕೆಯ ಅವಧಿ ಮುಗಿದ ಕಾರಣ ವ್ಯರ್ಥವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಕೋವಿಶೀಲ್ಡ್‌ ಲಸಿಕೆಯ ಗರಿಷ್ಠ ಬಳಕೆಯ ಅವಧಿ 9 ತಿಂಗಳು ಆಗಿತ್ತು. 2021ರ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರ ಕೋವಿಶೀಲ್ಡ್ ಲಸಿಕೆಯ ಗರಿಷ್ಠ ಬಳಕೆಯ ಅವಧಿಯನ್ನು ಆರರಿಂದ ಒಂಬತ್ತು ತಿಂಗಳಿಗೆ ಹೆಚ್ಚಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಓಮಿಕ್ರಾನ್ ವಿರುದ್ಧ ಲಸಿಕೆ – 6 ತಿಂಗಳ ಒಳಗಾಗಿ ಸಿಗಲಿದೆ ಎಂದ ಆದಾರ್ ಪೂನಾವಾಲ

    ಓಮಿಕ್ರಾನ್ ವಿರುದ್ಧ ಲಸಿಕೆ – 6 ತಿಂಗಳ ಒಳಗಾಗಿ ಸಿಗಲಿದೆ ಎಂದ ಆದಾರ್ ಪೂನಾವಾಲ

    ಪುಣೆ: ಕೊರೊನಾ ರೂಪಾಂತರಿ ಬಿಎ5 ಓಮಿಕ್ರಾನ್ ವೈರಸ್ ವಿರುದ್ಧ ಹೋರಾಡಲು ನಿರ್ದಿಷ್ಟ ಲಸಿಕೆ ತಯಾರಿಸಲು ನೋವಾವ್ಯಾಕ್ಸ್‌ನೊಂದಿಗೆ ಸೀರಂ ಇನ್ಸಿಟ್ಯೂಟ್ ಕೆಲಸ ಮಾಡುತ್ತಿದೆ ಎಂದು ಮಾಧ್ಯಮವೊಂದರ ಸಂದರ್ಶನದಲ್ಲಿ ಸೀರಂ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಓ ಆದಾರ್ ಪೂನಾವಾಲ ಹೇಳಿದ್ದಾರೆ.

     

    ವಿಶೇಷವಾಗಿ ಓಮಿಕ್ರಾನ್ ಸೋಂಕಿನ ವಿರುದ್ಧ ಹೋರಾಟ ನಡೆಸಲು ಲಸಿಕೆಯನ್ನು ತಯಾರು ಮಾಡಲಾಗುತ್ತಿದೆ. 6 ತಿಂಗಳಲ್ಲಿ ಈ ಲಸಿಕೆ ಪ್ರಯೋಗಿಕವಾಗಿ ಅನುಮೋದನೆ ಪಡೆದು ಬರುವ ನಿರೀಕ್ಷೆ ಇದೆ. ಈಗಾಗಲೇ ಓಮಿಕ್ರಾನ್ ವೈರಸ್ ವಿರುದ್ಧ ಪರಿಣಾಮಕಾರಿಯಾಗಿರುವ ಮಾಡೆರ್ನಾ ಲಸಿಕೆಗೆ ಬ್ರಿಟನ್ ಅನುಮೋದನೆ ನೀಡಿತ್ತು. ಈ ಲಸಿಕೆ ಓಮಿಕ್ರಾನ್ ತಳಿ ಮತ್ತು ಮೂಲ ರೂಪದ ವಿರುದ್ಧ ಪರಿಣಾಮಕಾರಿಯಾಗಿದೆ. ಈ ಲಸಿಕೆ ಬೂಸ್ಟರ್ ಡೋಸ್‍ನಂತೆ ಕಾರ್ಯನಿರ್ವಹಿಸಲಿದೆ. ಇದೀಗ ನಮ್ಮ ದೇಶಕ್ಕೂ ಓಮಿಕ್ರಾನ್ ವಿರುದ್ಧ ನಿರ್ದಿಷ್ಟ ಲಸಿಕೆ ಬಹಳ ಮುಖ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಮೋದಿ, ಶಾ ಜೊತೆ ಗಂಗೂಲಿ ಚರ್ಚೆ – ರಾಜಕೀಯ ಇನ್ನಿಂಗ್ಸ್‌ ಆಡ್ತಾರಾ ದಾದಾ?

    ಇದೀಗ ತಯಾರು ಮಾಡುತ್ತಿರುವ ಲಸಿಕೆಗೆ ಭಾರತದ ಔಷಧಿ ನಿಯಂತ್ರಕ ಅನುಮೋದನೆ ಕೊಟ್ಟ ಬಳಿಕ ಲಸಿಕೆ ಮಾರುಕಟ್ಟೆಗೆ ಬರಲಿದೆ. ಭಾರತದಲ್ಲಿ ಪ್ರತ್ಯೇಕವಾಗಿ ಕ್ಲಿನಿಕಲ್ ಪ್ರಯೋಗದ ಅಗತ್ಯವಿದೆಯೇ ಎಂಬುದು ಈವರೆಗೆ ಸ್ಪಷ್ಟವಾಗಿಲ್ಲ. ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ನೋವಾವ್ಯಾಕ್ಸ್ ಪ್ರಯೋಗ ನಡೆಯುತ್ತಿದೆ. ನವೆಂಬರ್- ಡಿಸೆಂಬರ್ ತಿಂಗಳಲ್ಲಿ ಇದು ಅಮೆರಿಕದ ಔಷಧ ನಿಯಂತ್ರಕ ಗ್ರೀನ್ ಸಿಗ್ನಲ್ ಕೊಡುವ ಸಾಧ್ಯತೆ ಇದೆ. ದೆಹಲಿ ಸೇರಿದಂತೆ ದೇಶದ ಇತರ ಹಲವು ರಾಜ್ಯಗಳಲ್ಲಿ ಓಮಿಕ್ರಾನ್‍ಗಿಂತಲು ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ. ಓಮಿಕ್ರಾನ್ ಕೂಡ ತುಂಬಾ ಅಪಾಯಕಾರಿಯಾಗಿದ್ದು, ಈ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನೆಹರೂವನ್ನು ನೆನಪಿಸಿಕೊಂಡ ಮೋದಿಗೆ ನಮಸ್ಕಾರ ಹೇಳುತ್ತೇನೆ: ಡಿಕೆಶಿ

    ಲಸಿಕೆ ಪಡೆದರೆ, ಸೋಂಕು ತಗುಳಿದರೂ ಸಾವಿನ ಪ್ರಮಾಣ ಕಡಿಮೆ ಹಾಗಾಗಿ ಲಸಿಕೆಯೊಂದೇ ಸೋಂಕಿಗೆ ರಾಮಬಾಣವಾಗಿದೆ. ಪ್ರತಿಯೊಬ್ಬರು ಲಸಿಕೆಯನ್ನು ಸರಿಯಾಗಿ ಪಡೆದುಕೊಳ್ಳಿ ಈ ಮೂಲಕ ಸೋಂಕಿನ ವಿರುದ್ಧ ಹೋರಾಡೋಣ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನೀವು ಮನಸ್ಸು ಬದಲಾಯಿಸುವಿರಿ ಎಂಬ ನಂಬಿಕೆ ಇದೆ – ಲಸಿಕೆ ಬಗ್ಗೆ ಜೊಕೊವಿಕ್‍ಗೆ ಪೂನಾವಾಲ ಸಂದೇಶ

    ನೀವು ಮನಸ್ಸು ಬದಲಾಯಿಸುವಿರಿ ಎಂಬ ನಂಬಿಕೆ ಇದೆ – ಲಸಿಕೆ ಬಗ್ಗೆ ಜೊಕೊವಿಕ್‍ಗೆ ಪೂನಾವಾಲ ಸಂದೇಶ

    ಮುಂಬೈ: ಕೊರೊನಾ ಲಸಿಕೆ ಪಡೆಯಲು ನಿರಾಕರಿಸಿ ಆಸ್ಟ್ರೇಲಿಯಾ ಓಪನ್ ಗ್ರ್ಯಾನ್‍ಸ್ಲಾಂ ಆಡುವ ಅವಕಾಶ ಕಳೆದುಕೊಂಡಿದ್ದ ವಿಶ್ವ ನಂಬರ್ 1 ಟೆನಿಸ್ ಆಟಗಾರ ನೊವಾಕ್ ಜೊಕೊವಿಕ್‍ಗೆ ಲಸಿಕೆ ಬಗ್ಗೆ ಸೀರಂ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಓ ಆದಾರ್ ಪೂನಾವಾಲ ವಿಶೇಷ ಸಂದೇಶ ರವಾನಿಸಿದ್ದಾರೆ.

    ಕೊರೊನಾ ಲಸಿಕೆ ಪಡೆಯಲು ಬಯಸದ ಜೊಕೊವಿಕ್ ಫ್ರೆಂಚ್ ಓಪನ್, ವಿಂಬಲ್ಡನ್ ಸೇರಿದಂತೆ ಪ್ರತಿಷ್ಠಿತ ಟೆನಿಸ್ ಟೂರ್ನಿಗಳಿಂದ ಹೊರಗುಳಿಯುತ್ತಿದ್ದಾರೆ. ಈವರೆಗೆ ಲಸಿಕೆ ಪಡೆಯಲು ಒಪ್ಪದ ಜೊಕೊವಿಕ್‍ಗೆ ಆದಾರ್ ಪೂನಾವಾಲ ಟ್ವಿಟ್ಟರ್‌ನಲ್ಲಿ ತಾವು ಟೆನಿಸ್ ಆಡುವ ವೀಡಿಯೋ ಮೂಲಕ ವಿಶೇಷ ಸಂದೇಶ ರವಾನಿಸಿದ್ದಾರೆ.  ಇದನ್ನೂ ಓದಿ: ನೊವಾಕ್ ಜೊಕೊವಿಕ್ ವೀಸಾ 2ನೇ ಬಾರಿ ರದ್ದು – 3 ವರ್ಷ ಆಸ್ಟ್ರೇಲಿಯಾಗೆ ಪ್ರವೇಶವಿಲ್ಲ

    ಲಸಿಕೆ ಪಡೆಯದೆ ಇರುವ ನಿಮ್ಮ ವೈಯಕ್ತಿಕ ವಿಚಾರವನ್ನು ನಾನು ಗೌರವಿಸುತ್ತೇನೆ. ನಿಮ್ಮ ಆಟವನ್ನು ನಾನು ತುಂಬಾ ಇಷ್ಟ ಪಡುತ್ತೇನೆ. ನೀವು ಮನಸ್ಸು ಬದಲಾಯಿಸುವಿರಿ ಎಂಬ ನಂಬಿಕೆ ಇದೆ. ಈ ಮೂಲಕ ಇನ್ನೊಂದು ಗ್ರ್ಯಾನ್‍ಸ್ಲಾಂ ಪ್ರಶಸ್ತಿ ಗೆಲ್ಲುವ ಅವಕಾಶ ನಿಮ್ಮದಾಗಬಹುದು ಎಂದಿದ್ದಾರೆ. ಇದನ್ನೂ ಓದಿ: ಡೆಲ್ಲಿ To ಲಂಡನ್ ಬಸ್ ಟೂರ್ – 70 ದಿನಗಳಲ್ಲಿ 18 ದೇಶ ಸುತ್ತುವ ಅವಕಾಶ

    ಜೊಕೊವಿಕ್ ಈಗಾಗಲೇ 20 ಗ್ರ್ಯಾನ್‍ಸ್ಲಾಂ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ಓಪನ್ ಗೆಲ್ಲುವ ಅವಕಾಶ ಜೊಕೊವಿಕ್‍ಗೆ ಇತ್ತು ಆದರೆ ಲಸಿಕೆ ಪಡೆಯದ ಕಾರಣ ಆಸ್ಟ್ರೇಲಿಯಾ ವೀಸಾ ರದ್ದಾಗಿತ್ತು. ಇವರ ಅನುಪಸ್ಥಿತಿಯಲ್ಲಿ ರಫೇಲ್ ನಡಾಲ್ 21ನೇ ಗ್ರ್ಯಾನ್‍ಸ್ಲಾಂ ಪ್ರಶಸ್ತಿ ಜಯಿಸಿ ದಾಖಲೆ ನಿರ್ಮಿಸಿದ್ದಾರೆ.

  • ಜನವರಿ ವೇಳೆಗೆ ಮಕ್ಕಳ ಲಸಿಕೆ ಲಭ್ಯವಾಗಬಹುದು: ಆದಾರ್ ಪೂನಾವಾಲಾ

    ಜನವರಿ ವೇಳೆಗೆ ಮಕ್ಕಳ ಲಸಿಕೆ ಲಭ್ಯವಾಗಬಹುದು: ಆದಾರ್ ಪೂನಾವಾಲಾ

    ನವದೆಹಲಿ: ಮಕ್ಕಳ ಮೇಲೆ ನಡೆಯುತ್ತಿರುವ ಕೊವೊವ್ಯಾಕ್ಸ್ ಲಸಿಕೆ ಪ್ರಯೋಗ ಸುಗಮವಾಗಿದ್ದು, ಅಂದುಕೊಂಡಂತೆ ಆದರೆ ಜನವರಿ ಅಥಾವ ಫೆಬ್ರವರಿಯಲ್ಲಿ ಬಳಕೆಗೆ ಮುಕ್ತವಾಗಬಹುದು ಎಂದು ಸೀರಂ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಓ ಆದಾರ್ ಪೂನಾವಾಲಾ ತಿಳಿಸಿದ್ದಾರೆ.

    ರಾಷ್ಟ್ರೀಯ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಭಾರತದಲ್ಲಿ ವ್ಯಾಕ್ಸಿನ್ ಪ್ರಯೋಗ ಹಂತದಲ್ಲಿದ್ದು, ಬಹಳಷ್ಟು ಸ್ವಯಂ ಸೇವಕರಿಗೆ ನೀಡಲಾಗಿದೆ. ಅದನ್ನು ವಿಮರ್ಶೆ ಮಾಡಲಾಗುತ್ತಿದೆ. ಡಿಸೆಂಬರ್ ವೇಳೆಗೆ ವ್ಯಾಕ್ಸಿನ್ ಪರಿಣಾಮಗಳ ಬಗ್ಗೆ ನಡೆಯುತ್ತಿರುವ ಪರಾಮರ್ಶೆ ಅಂತ್ಯವಾಗಲಿದ್ದು, ಬಳಿಕ ಸಾರ್ವಜನಿಕ ಬಳಕೆಗೆ ಮುಕ್ತ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊಸ ಶಿಕ್ಷಣ ನೀತಿಯಲ್ಲಿ ಕಾಂಬಿನೇಶನ್‍ನಿಂದ ಕೋರ್ಸ್, ಸಬ್ಜೆಕ್ಟ್‌ಗೆ ಬದಲಾಯಿಸಲಾಗಿದೆ: ಅಶ್ವಥ್ ನಾರಾಯಣ್

    3-4 ತಿಂಗಳ ಅವಧಿಯಲ್ಲಿ ವ್ಯಾಕ್ಸಿನ್ ಪ್ರತಿಕ್ರಿಯೆಯನ್ನು ಅಧ್ಯಯನ ಮಾಡಲಾಗುತ್ತಿದೆ. ವ್ಯಾಕ್ಸಿನ್ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ಅಧ್ಯಯನ ನಡೆದಿದ್ದು, ಹಂತ ಹಂತವಾಗಿ ಈ ಬಗ್ಗೆ ವರದಿಗಳು ಬರಲಿದೆ ಎಂದು ಪೂನಾವಾಲಾ ಹೇಳಿದರು.

    ಅಮೇರಿಕದ ಲಸಿಕೆ ತಯಾರಕ ಸಂಸ್ಥೆ ನೊವೊವಾಕ್ಸ್ ಇಂಕ್ ಮಕ್ಕಳಿಗಾಗಿ ಓಗಿಘಿ-ಅoಗಿ2373 ಹೆಸರಿನ ಲಸಿಕೆ ಅಭಿವೃದ್ಧಿ ಪಡಿಸಿದೆ. ಇದು ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಸೀರಂ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ, ಪ್ರಯೋಗಗಳನ್ನು ನಡೆಸಲಾಗುತ್ತಿದೆ. 2 ರಿಂದ 17 ವರ್ಷದ ಮಕ್ಕಳ ಮೇಲೆ ಪ್ರಯೋಗ ನಡೆಯುತ್ತಿದ್ದು, ದೇಶದ ಹತ್ತು ಪ್ರದೇಶಗಳಲ್ಲಿ 910 ಸ್ವಯಂ ಸೇವಕರು ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ.

  • ಬೆದರಿಕೆ ಬರುತ್ತಿದೆ ಇಂತಹ ಸ್ಥಿತಿಯಲ್ಲಿ ಇರಲಾರೆ: ಕೋವಿಶೀಲ್ಡ್ ಲಸಿಕೆ ತಯಾರಿಕಾ ಸಂಸ್ಥೆಯ ಸಿಇಓ

    ಬೆದರಿಕೆ ಬರುತ್ತಿದೆ ಇಂತಹ ಸ್ಥಿತಿಯಲ್ಲಿ ಇರಲಾರೆ: ಕೋವಿಶೀಲ್ಡ್ ಲಸಿಕೆ ತಯಾರಿಕಾ ಸಂಸ್ಥೆಯ ಸಿಇಓ

    – ಭಾರತ ತೊರೆದು ಲಂಡನ್ ಸೇರಿದ ಆದಾರ್ ಪೂನಾವಾಲಾ
    – ಪವರ್ ಫುಲ್ ಜನರಿಂದಲೇ ಬೆದರಿಕೆ, ಒತ್ತಡ

    ನವದೆಹಲಿ: ಬೆದರಿಕೆ  ಬಂದ ಹಿನ್ನೆಲೆ ಕೋವಿಶೀಲ್ಡ್ ಲಸಿಕೆ ತಯಾರಿಕಾ ಸೀರಂ  ಸಂಸ್ಥೆಯ ಸಿಇಓ ಆದಾರ್ ಪೂನಾವಾಲಾ ಭಾರರ ತೊರೆದು ಲಂಡನ್ ಸೇರಿದ್ದಾರೆ. ಇದು ದೀರ್ಘ ಸಮಯದ ಪ್ರವಾಸ ಆಗಿದ್ದು, ಇಂತಹ ಸ್ಥಿತಿಯಲ್ಲಿ ಇರಲಾರೆ ಎಂದು ಪೂನಾವಾಲಾ ಹೇಳಿಕೊಂಡಿದ್ದಾರೆ.

    ನಾನು ಲಂಡನ್ ನಲ್ಲಿ ಹೆಚ್ಚು ದಿನಗಳನ್ನ ಕಳೆಯಲಿದ್ದೇನೆ. ಇಂತಹ ಪರಿಸ್ಥಿತಿಯಲ್ಲಿ ನಾನು ಭಾರತದಲ್ಲಿ ಇರಲು ಸಾಧ್ಯವಿಲ್ಲ. ಎಲ್ಲ ಜವಾಬ್ದಾರಿಗಳನ್ನು ನನ್ನ ಹೆಗಲ ಮೇಲೆ ಹಾಕಲಾಗುತ್ತಿದೆ. ಇದೆಲ್ಲವನ್ನು ನನ್ನ ಒಬ್ಬನಿಂದ ನಿಭಾಯಿಸಲು ಆಗಲಾರದು. ನನ್ನ ಕೆಲಸಗಳನ್ನು ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದ್ದಾರೆ.

    ಕೆಲವು ಸಮಯಗಳಿಂದ ಪ್ರಭಾವಿ ಜನರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪೂನಾವಾಲಾ ಹೇಳಿಕೊಂಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಪೂನಾವಾಲಾಗೆ ಭದ್ರತೆ ಕೋರಿ ಸಿರಂ ನಿರ್ದೇಶಕ, ಸರ್ಕಾರಿ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಏಪ್ರಿಲ್ 16 ರಂದು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಕೇಂದ್ರ ಸರ್ಕಾರ ಸಹ ಪೂನಾವಾಲಾ ಅವರಿಗೆ ವೈ ದರ್ಜೆ ಭದ್ರತೆ ಒದಗಿಸಿತ್ತು.

  • ಕೋವಿಶೀಲ್ಡ್ ದರ ಇಳಿಕೆ ಮಾಡಿದ ಸೀರಂ ಇನ್‍ಸ್ಟಿಟ್ಯೂಟ್

    ಕೋವಿಶೀಲ್ಡ್ ದರ ಇಳಿಕೆ ಮಾಡಿದ ಸೀರಂ ಇನ್‍ಸ್ಟಿಟ್ಯೂಟ್

    ಪುಣೆ: ಕೇಂದ್ರ ಸರ್ಕಾರದ ಮನವಿಗೆ ಸ್ಪಂದಿಸಿದ ಸೀರಂ ಇನ್‍ಸ್ಟಿಟ್ಯೂಟ್ ಕೋವಿಶೀಲ್ಡ್ ದರವನ್ನು ಇಳಿಕೆ ಮಾಡಿದೆ. ರಾಜ್ಯಗಳಿಗೆ ಈ ಹಿಂದೆ ನಿಗದಿ ಮಾಡಿದ್ದ 400 ರೂಪಾಯಿ ದರವನ್ನು 300 ರೂ.ಗಳಿಗೆ ಇಳಿಕೆ ಮಾಡಲಾಗಿದೆ.

    ಕೋವಿಶೀಲ್ಡ್ ಲಸಿಕೆಗೆ ಈ ಹಿಂದೆ 400 ರೂಪಾಯಿ ನಿಗದಿಯಾಗಿತ್ತು. ಇದೀಗ 100 ರೂಪಾಯಿ ಕಡಿತ ಮಾಡಿ 300 ರೂಪಾಯಿ ದರ ನಿಗದಿ ಪಡಿಸಿದೆ. ಇದರೊಂದಿಗೆ ಕೋವ್ಯಾಕ್ಸಿನ್ ದರವೂ ಇಳಿಕೆಯಾಗುವ ಸಾಧ್ಯತೆಗಳಿವೆ. ಈ ಮಧ್ಯೆ, ರಾಜ್ಯದಲ್ಲಿ ಸೋಂಕು ಹೆಚ್ಚಾದಂತೆ ವ್ಯಾಕ್ಸಿನ್‍ಗೆ ಬೇಡಿಕೆ ಹೆಚ್ಚಾಗಿದೆ. ಜನತೆ ವ್ಯಾಕ್ಸಿನ್ ಪಡೆಯಲು ಮುಗಿಬೀಳುತ್ತಿದ್ದಾರೆ.

    ಈ ಕುರಿತು ಟ್ವಿಟ್ಟರ್ ಮೂಲಕ ತಿಳಿಸಿರುವ ಸೀರಂ ಇನ್‍ಸ್ಟಿಟ್ಯೂಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದಾರ್ ಪೂನಾವಾಲಾ, ಲೋಕೋಪಾಕಾರಿಯಾಗಿ ಗುರುತಿಸಿ ಕೊಂಡಿರುವ ಸೀರಂ ಇನ್‍ಸ್ಟಿಟ್ಯೂಟ್ ಲಸಿಕೆಯ ದರವನ್ನು ರಾಜ್ಯಗಳಿಗೆ ಈ ಹಿಂದೆ ನಿಗದಿ ಮಾಡಿದ್ದ 400 ರೂಪಾಯಿ ದರವನ್ನು 300 ರೂ.ಗಳಿಗೆ ಇಳಿಕೆ ಮಾಡಿದೆ. ಇದರಿಂದ ಸಾವಿರಾರು ಕೋಟಿ ರೂಪಾಯಿ ರಾಜ್ಯಗಳ ಹಣ ಉಳಿಕೆಯಾಲಿದೆ. ಹಾಗೆ ಹೆಚ್ಚು ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೋತ್ಸಾಹ ಸಿಗಲಿದೆ ಮತ್ತು ಹಲವು ಜನರ ಪ್ರಾಣ ಉಳಿಯಲಿದೆ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.

    ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಫಾರ್ಮಾ ಪ್ರಮುಖ ಅಸ್ಟ್ರಾಜೆನಿಕಾ ಸಹಭಾಗಿತ್ವದಲ್ಲಿ ಸೀರಂ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೋಲ್ಡ್ ಲಸಿಕೆಯನ್ನು ಅಭಿವೃದ್ದಿ ಪಡಿಸಿದ್ದು, ಈಗಾಗಲೇ ಸಾವಿರಾರು ಜನ ಲಸಿಕೆಯನ್ನು ಪಡೆದಿದ್ದಾರೆ. ಹಾಗೆ ಬೇರೆ ಬೇರೆ ದೇಶಗಳಿಗೆ ವ್ಯಾಕ್ಸಿನ್‍ನ್ನು ಕಳುಹಿಸಿ ಕೊಡಲಾಗಿದೆ.

    ಇದೀಗ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ವ್ಯಾಕ್ಸಿನ್ ಪಡೆಯಲು ಕೋವಿನ್ ಆ್ಯಪ್ ಮೂಲಕ ನೋಂದಣಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

  • ಕೋವಿಶೀಲ್ಡ್ ಬಳಕೆಗೆ ಅನುಮತಿ – ಪೂನಾವಾಲಾ ಮೊದಲ ಪ್ರತಿಕ್ರಿಯೆ

    ಕೋವಿಶೀಲ್ಡ್ ಬಳಕೆಗೆ ಅನುಮತಿ – ಪೂನಾವಾಲಾ ಮೊದಲ ಪ್ರತಿಕ್ರಿಯೆ

    ನವದೆಹಲಿ: ಕೋವಿಶೀಲ್ಡ್ ಬಳಕೆಗೆ ಅನುಮತಿ ನೀಡಿದ ಕುರಿತು ಸೀರಂ ಇನ್‍ಸ್ಟಿಟ್ಯೂಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದಾರ್ ಪೂನಾವಾಲಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ವ್ಯಾಕ್ಸಿನ್ ಕಂಡು ಹಿಡಿಯುವಲ್ಲಿ ಸೀರಂ ತಂಡದ ಶ್ರಮಗಳು ಇಂದಿಗೆ ಒಂದು ಹಂತಕ್ಕೆ ತಲುಪಿವೆ. ಇನ್ನೂ ಕೆಲ ದಿನಗಳಲ್ಲಿ ಸೀರಂ ಅಭಿವೃದ್ಧಿ ಪಡಿಸಿರುವ ಕೋವಿಶೀಲ್ಡ್ ಭಾರತದಲ್ಲಿ ತುರ್ತು ಬಳಕೆಗೆ ಬಳಸಬಹುದು ಎಂದಿದ್ದಾರೆ.

    ಆಕ್ಸ್‌ಫರ್ಡ್‌  ವಿಶ್ವವಿದ್ಯಾಲಯ ಮತ್ತು ಫಾರ್ಮಾ ಪ್ರಮುಖ ಅಸ್ಟ್ರಾಜೆನಿಕಾ ಸಹಭಾಗಿತ್ವದಲ್ಲಿ ಸೀರಂ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೀಲ್ಟ್ ಲಸಿಕೆಯನ್ನು ಅಭಿವೃದ್ದಿ ಪಡಿಸಿದೆ. ಇದು ಕೊರೊನಾ ವೈರಸ್ ವಿರುದ್ಧ ಸುರಕ್ಷಿತ ಮತ್ತು ಪರಿಣಾಮಕಾರಿ ಹೋರಾಡುತ್ತದೆ. ಮುಂಬರುವ ವಾರಗಳಲ್ಲಿ ಲಸಿಕೆ ಹೊರಬರಲು ಸಿದ್ಧವಾಗಿದೆ ಎಂದು ಆದಾರ್ ಪೂನಾವಾಲಾ ಮಾಹಿತಿ ನೀಡಿದ್ದಾರೆ.

    ವಿಶ್ವದ ಅತಿದೊಡ್ಡ ಲಸಿಕೆ ತಯಾರಿಕ ಸೀರಂ ಸಂಸ್ಥೆಯ ಸಿಇಒ ಆದಾರ್ ಪೂನಾವಾಲಾ ಮೊದಲ 50 ಮಿಲಿಯನ್ ಡೋಸ್‍ಗಳಲ್ಲಿ ಹೆಚ್ಚಿನವು ಭಾರತಕ್ಕೆ ನೀಡಲಾಗುತ್ತದೆ ಎಂದು ಈಗಾಗಲೇ ತಿಳಿಸಿದ್ದರು. ಕೋವಿಶೀಲ್ಡ್ ಹೊರತು ಪಡಿಸಿ ಭಾರತ್ ಬಯೋಟಿಕ್ ಕೋವ್ಯಾಕ್ಸಿನ್‍ನನ್ನು ನಿರ್ಬಂಧಿತ ಬಳಕೆಗೆಂದು ಅನುಮತಿ ನೀಡಲಾಗಿದೆ.