Tag: adhar card

  • ಇನ್ನು ಮುಂದೆ ಹೊಟೇಲ್‌ಗಳಲ್ಲಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವಿಲ್ಲ – ಫೇಸ್ ಐಡಿಯಲ್ಲೇ ದೃಢೀಕರಣ

    ಇನ್ನು ಮುಂದೆ ಹೊಟೇಲ್‌ಗಳಲ್ಲಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವಿಲ್ಲ – ಫೇಸ್ ಐಡಿಯಲ್ಲೇ ದೃಢೀಕರಣ

    – ಹೊಸ ಆಧಾರ್ ಅಪ್ಲಿಕೇಶನ್ ಪರಿಚಯಿಸಿದ ಕೇಂದ್ರ
    – ಯುಪಿಐ ರೀತಿಯಲ್ಲೇ ಕ್ಯೂಆರ್ ಕೋಡ್ ಸ್ಕ್ಯಾನ್

    ನವದೆಹಲಿ: ಹೋಟೆಲ್‌ಗಳಲ್ಲಿ, ಅಂಗಡಿ ಹಾಗೂ ಪ್ರಯಾಣದ ಸಮಯದಲ್ಲಿ ಆಧಾರ್ ಫೋಟೋ ಪ್ರತಿಯನ್ನು ಹಸ್ತಾಂತರಿಸುವ ಅಗತ್ಯವಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

    ಅಲ್ಲದೇ ಡಿಜಿಟಲ್ ಪರಿಶೀಲನೆಗಾಗಿ ಕೇಂದ್ರ ಸರ್ಕಾರ ಹೊಸ ಆಧಾರ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಗೌಪ್ಯತೆಯನ್ನು ಹೆಚ್ಚಿಸುವ ಮತ್ತು ಆಧಾರ್ ವಿವರಗಳನ್ನು ಡಿಜಿಟಲ್ ರೂಪದಲ್ಲಿ ಹಂಚಿಕೊಳ್ಳುವ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಆಧಾರ್ ಪರಿಶೀಲನೆಯ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಇದನ್ನೂ ಓದಿ: ದುಡ್ಡಿಲ್ಲ ಎಂದಿದ್ದಕ್ಕೆ ಕೆನ್ನೆಗೆ ಬಾರಿಸಿದ್ದ ನೇಪಾಳಿ ಮಂಜ – ಇದೇ ಸಿಟ್ಟಿಗೆ ನಡೆದಿತ್ತು ಮರ್ಡರ್!

    ಬಳಕೆದಾರರ ನಿಯಂತ್ರಣ ಮತ್ತು ಗೌಪ್ಯತೆಗೆ ಆದ್ಯತೆ ನೀಡುವ ವೈಶಿಷ್ಟ್ಯಗಳನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಾಗಿದೆ ಎಂದು ಅಶ್ವಿನಿ ವೈಷ್ಣವ್ ಎಕ್ಸ್ ಖಾತೆಯಲ್ಲಿ ವೀಡಿಯೋ ಮೂಲಕ ಅಪ್ಲಿಕೇಶನ್ ಅನ್ನು ಅನಾವರಣಗೊಳಿಸಿದರು.

    ಪ್ರಸ್ತುತ ಈ ಅಪ್ಲಿಕೇಶನ್ ಬೀಟಾ ಪರೀಕ್ಷಾ ಹಂತದಲ್ಲಿದ್ದು, ಫೇಸ್ ಐಡಿ ದೃಢೀಕರಣವನ್ನು ಪರಿಚಯಿಸುತ್ತದೆ. ಇನ್ನು ಆಧಾರ್ ಕಾರ್ಡ್‌ಗಳ (Adhar Card) ಮತ್ತು ಜೆರಾಕ್ಸ್ ಪ್ರತಿಗಳ ಅಗತ್ಯ ಇರುವುದಿಲ್ಲ. ಬಳಕೆದಾರರ ಆಧಾರ್ ಪರಿಶೀಲನೆ ಭೌತಿಕವಾಗಿ ಇರದೇ ಡಿಜಿಟಲ್ ರೂಪದಲ್ಲಿ ಪರಿಶೀಲನೆ ಆಗಲಿದೆ. ಇದನ್ನೂ ಓದಿ: ಏ.22ರಿಂದ ಜ್ಯೂ.ಎನ್‌ಟಿಆರ್, ಪ್ರಶಾಂತ್ ನೀಲ್ ಸಿನಿಮಾದ ಶೂಟಿಂಗ್ ಶುರು

    ಈ ಹೊಸ ಅಪ್ಲಿಕೇಶನ್ ಆಧಾರ್ ಪರಿಶೀಲನೆಯನ್ನು ಯುಪಿಐ (UPI) ಪಾವತಿಗಳಂತೆ ಸುಲಭಗೊಳಿಸುತ್ತದೆ. ಬಳಕೆದಾರರಿಗೆ ಡಿಜಿಟಲ್ ದೃಢೀಕರಣಕ್ಕಾಗಿ ತಡೆರಹಿತ ಅನುಭವವನ್ನು ನೀಡುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವೀಡಿಯೋದ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಹಗರಣ – ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಅರೆಸ್ಟ್

    ಈ ಹೊಸ ಅಪ್ಲಿಕೇಶನ್‌ನಲ್ಲಿ ಬಳಕೆದಾರರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅಗತ್ಯ ದಾಖಲೆಗಳನ್ನು ಸುರಕ್ಷಿತವಾಗಿ ಹಂಚಿಕೊಳ್ಳಬಹುದು. ಈ ತಂತ್ರಜ್ಞಾನವು ಗೌಪ್ಯತೆಯನ್ನು ಖಚಿತಪಡಿಸುತ್ತದೆ. ಇದು ಜೆರಾಕ್ಸ್ ಪ್ರತಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಎಂದು ಕೇಂದ್ರ ತಿಳಿಸಿದೆ. ಇದನ್ನೂ ಓದಿ: 26 ರಫೇಲ್ ಯುದ್ಧ ವಿಮಾನ ಖರೀದಿ – ಭಾರತ ಫ್ರಾನ್ಸ್ ಮಧ್ಯೆ 63,000 ಕೋಟಿ ಡೀಲ್‌ಗೆ ಅನುಮೋದನೆ

    ಬಳಕೆದಾರರ ಫೇಸ್ ಐಡಿ ದೃಢೀಕರಣ ಮಾಡುವುದು ಈ ಆಪ್‌ನ ಪ್ರಮುಖ ಅಂಶವಾಗಿದೆ. ಇದರಿಂದ ಗುರುತಿನ ಚೀಟಿ ಹಾಗೂ ಮಾಹಿತಿ ಪರಿಶೀಲನೆ ಹೆಚ್ಚು ಸರಳವಾಗಿರುತ್ತದೆ. ಇದರೊಂದಿಗೆ ಯುಪಿಐ ರೀತಿಯಲ್ಲೇ ಕ್ಯೂಆರ್ ಕೋಡ್  ಸ್ಕ್ಯಾನ್ ಮಾಡಿ ಪರಿಶೀಲಿಸಬಹುದು.

  • ವಯಸ್ಸಾದ ವೃದ್ಧರಿಗೆ ಸೇರಬೇಕಾದ ಪಿಂಚಣಿ ವಯಸ್ಕರ ಜೇಬಿಗೆ – ಓರ್ವ ಅರೆಸ್ಟ್

    ವಯಸ್ಸಾದ ವೃದ್ಧರಿಗೆ ಸೇರಬೇಕಾದ ಪಿಂಚಣಿ ವಯಸ್ಕರ ಜೇಬಿಗೆ – ಓರ್ವ ಅರೆಸ್ಟ್

    ಬೆಂಗಳೂರು: ವಯಸ್ಸಾಯಿತು ಎಂದು ಮಕ್ಕಳು ತಂದೆ ತಾಯಿಯನ್ನು ಹೊರ ಹಾಕುತ್ತಾರೆ. ಮಕ್ಕಳಿಲ್ಲದವರು ಅಸಹಾಯಕತೆಯಿಂದ ಕಷ್ಟಪಟ್ಟು ಜೀವನ ಮಾಡುತ್ತಾರೆ. ಅಂತಹವರಿಗೆ ಸಹಾಯವಾಗಲಿ ಎಂದು ಸರ್ಕಾರ ಕೆಲವು ಯೋಜನೆಗಳನ್ನು ಜಾರಿಗೆ ತಂದಿದೆ. 65ಕ್ಕೂ ಹೆಚ್ಚು ವಯಸ್ಸಾದವರಿಗೆ ವೃದ್ಧಾಪ್ಯವೇತನ (Old Age Scheme) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಇಂತಹ ಯೋಜನೆಗಳ ಮೇಲೆ ಇದೀಗ ವಂಚಕರು ಕಣ್ಣು ಹಾಕಿದ್ದಾರೆ.

    ಆಧಾರ್ ಕಾರ್ಡ್‌ಗಳನ್ನು (Adhar Card) ನಕಲಿ ಮಾಡುವ ಮೂಲಕ ಕಿರಿಯ ವಯಸ್ಕರಿಗೆ ವೃದ್ಧಾಪ್ಯವೇತನ ಬರುವಂತೆ ಮಾಡಿ ಸರ್ಕಾರದ ಬೊಕ್ಕಸಕ್ಕೆ ವಂಚನೆ ಮಾಡುತ್ತಿದ್ದ ಕಡೆ ಸಿಸಿಬಿ (CCB) ಅಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ರಾಜಾಜಿನಗರ (Rajajinagar), ಕೆಂಗೇರಿ (Kengeri) ಠಾಣಾ ವ್ಯಾಪ್ತಿಯಲ್ಲಿ ಈ ರೀತಿಯಾದ ಕೃತ್ಯ ಎಸಗುತ್ತಿದ್ದ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಸಿಸಿಬಿ ಪೊಲೀಸರು ಆರೋಪಿ ಚತುರ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಯುಗಾದಿ ಮುನ್ನಾ ದಿನವೇ 2 ಜೀವ ಬಲಿ – ಚರಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ಸಾವು

    ಜನರಿಂದ ಜನರನ್ನು ಸಂಪರ್ಕಿಸಿ ವಂಚನೆಗಿಳಿಯುತ್ತಿದ್ದ ಆರೋಪಿಗಳು, 200ಕ್ಕೂ ಹೆಚ್ಚು ಜನರಿಗೆ ಈ ಯೋಜನೆಯಿಂದ ಹಣ ಬರುವಂತೆ ಮಾಡಿದ್ದಾರೆ. 35 ರಿಂದ 65ವರ್ಷದೊಳಗಿನ ಹಲವರಿಗೆ ವೃದ್ಧಾಪ್ಯವೇತನ ಬರುವಂತೆ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ್ದಾರೆ. ಅವರಿಂದ ಹೆಚ್ಚಿನ ಹಣ ಪಡೆದು ಆಧಾರ್‌ಕಾರ್ಡ್ ಪೋರ್ಜರಿ ಮಾಡುತ್ತಿದ್ದ ಏಜೆಂಟ್‌ಗಳು (Agent) ಆಧಾರ್ ಕಾರ್ಡಿನಲ್ಲಿ ಹುಟ್ಟಿದ ದಿನಾಂಕವನ್ನು ಬದಲಿಸುತ್ತಿದ್ದರು. 65ಕ್ಕೂ ಹೆಚ್ಚು ವಯಸ್ಸು ಬರುವ ರೀತಿ ಹುಟ್ಟಿದ ದಿನಾಂಕವನ್ನು ನಮೂದಿಸಿ ವೃದ್ಧಾಪ್ಯವೇತನಕ್ಕೆ ಅರ್ಜಿ ಹಾಕಿಸುತ್ತಿದ್ದರು. ನಂತರ ಕೆಲವು ಕಂದಾಯ ಅಧಿಕಾರಿಗಳು (Revenue Officer) ಮತ್ತು ಗ್ರಾಮಲೆಕ್ಕಿಗರ (Village Accountant) ಮೂಲಕ ಕೆಲಸ ಮಾಡಿಸಿಕೊಳ್ಳುತ್ತಿದ್ದರು ಎನ್ನುವುದು ತನಿಖೆ ವೇಳೆ ಬಯಲಾಗಿದೆ. ಇದನ್ನೂ ಓದಿ: ಬಿಜೆಪಿಗೆ ಚಿಂಚನಸೂರ್‌ ರಾಜೀನಾಮೆ ನೀಡಿದ್ಯಾಕೆ?

    ಈ ಬಗ್ಗೆ ಮಾಹಿತಿ ಬಂದಿದ್ದೇ ತಡ ಮೂರು ಕಡೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಮುಖ್ಯ ಏಜೆಂಟ್ ಚತುರ್ ಎಂಬಾತನನ್ನು ಬಂಧಿಸಿ ಕೆಲವು ದಾಖಲೆಗಳು, ನಕಲಿ ಆಧಾರ್ ಕಾರ್ಡ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ತನಿಖೆ ಮುಂದುವರೆಸಿರುವ ಸಿಸಿಬಿ, ಇದರಲ್ಲಿ ಯಾವೆಲ್ಲಾ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ? ನಗರದ ಎಲ್ಲೆಲ್ಲಿ ಇದೇ ರೀತಿಯಾದ ಕೃತ್ಯಗಳು ನಡೆದಿದೆ ಎನ್ನುವುದರ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಫಾಕ್ಸ್‌ಕಾನ್ ಸೇರಿದಂತೆ 18 ಹೂಡಿಕೆ ಪ್ರಸ್ತಾವನೆಗಳಿಗೆ ಎಸ್‌ಹೆಚ್ಎಲ್‌ಸಿಸಿ ಸಭೆಯಲ್ಲಿ ಅನುಮೋದನೆ

  • ಗಣೇಶ ಚತುರ್ಥಿಗೆ ಗಣೇಶನಿಗೊಂದು ಆಧಾರ್ ಕಾರ್ಡ್!

    ಗಣೇಶ ಚತುರ್ಥಿಗೆ ಗಣೇಶನಿಗೊಂದು ಆಧಾರ್ ಕಾರ್ಡ್!

    ರಾಂಚಿ: ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ವಿವಿಧ ರೀತಿಯ ಗಣಪನನ್ನು ಕೂರಿಸಿ ಜನರು ಸಂಭ್ರಮಿಸುತ್ತಿದ್ದಾರೆ. ಇಲ್ಲೊಬ್ಬರು ಗಣೇಶನನ್ನು ಪೆಂಡಾಲ್‌ನ್ನು ಆಧಾರ್ ಕಾರ್ಡ್ ರೀತಿ ಮಾಡಿ ಕೂರಿಸಿದ್ದಾರೆ.

    ಈ ವಿಚಿತ್ರ ಘಟನೆ ಜಾರ್ಖಂಡ್‍ನ ಜುಮ್ಶೆಡ್‍ಪುರದಲ್ಲಿ ನಡೆದಿದೆ. ಈ ಪೆಂಡಾಲ್‌ನಲ್ಲಿ ಸಾಮಾನ್ಯವಾಗಿ ಆಧಾರ್ ಕಾರ್ಡ್‍ನಲ್ಲಿ ಯಾವ ಯಾವ ಮಾಹಿತಿ ಇರುತ್ತದೆಯೋ ಅವೆಲ್ಲಾ ಮಾಹಿತಿಯೂ ಇದೆ. ಗಣೇಶನಿಗೆ ಹುಟ್ಟಿದ ದಿನಾಂಕದಿಂದ ಆತನ ವಿಳಾಸವನ್ನು ಇದರಲ್ಲಿ ಎಂದು ಬರೆದಿದ್ದಾರೆ. ಅಷ್ಟೇ ಯಾಕೇ ಕ್ಯೂಆರ್ ಕೋಡ್‍ನ್ನು ರಚಿಸಿದ್ದಾರೆ. ಈ ಬಾರ್‌ಕೋಡ್‍ನ್ನು ಸ್ಕ್ಯಾನ್ ಮಾಡಿದರೆ ಗಣೇಶನ ವಿವಿಧ ಚಿತ್ರಗಳ ಗೂಗಲ್ ಲಿಂಕ್‍ಗಳನ್ನು ನಾವು ನೋಡಬಹುದಾಗಿದೆ.

    ಹೆಸರು, ವಿಳಾಸ ಏನಿದೆ?: ಶ್ರೀಗಣೇಶ್, S/O ಮಹದೇವ, ಕೈಲಾಸ ಪರ್ವತ, ಟಾಪ್ ಫ್ಲೋರ್, ಮಾನಸ ಸರೋವರದ ಹತ್ತಿರವಿರುವ ಕೈಲಾಸ ಪಿನ್‍ಕೋಡ್-000001 ಹಾಗೂ ಹುಟ್ಟಿದ ವರ್ಷ ಕ್ರಿ.ಪೂ 01/01/600 ಎಂದು ಬರೆದಿದ್ದಾರೆ. ಇದನ್ನೂ ಓದಿ: ಕ್ಷೇಮವನ ಜೀವನದ ಸೂತ್ರವಾಗಲಿ: ಬೊಮ್ಮಾಯಿ

    ಈ ಬಗ್ಗೆ ಗಣೇಶ್ ಪೆಂಡಾಲ್‌ನ ಆಯೋಜಕ ಸರವ್ ಕುಮಾರ್ ಮಾತನಾಡಿ, ನಾನು ಒಮ್ಮೆ ಕೆಲಸದ ನಿಮಿತ್ತ ಕೋಲ್ಕತ್ತಾಕ್ಕೆ ಭೇಟಿ ನೀಡಿದ್ದೆ. ಅಲ್ಲಿ ಫೇಸ್‍ಬುಕ್ ಥಿಮ್‍ನ ಪೆಂಡಾಲ್‍ನ್ನು ತಯಾರಿಸಲಾಗಿತ್ತು. ಇದನ್ನು ನೋಡಿದ ನನಗೆ ಗಣೇಶ್ ಪೂಜೆಯನ್ನು ಮಾಡುವಾಗ ನಾವೂ ಏನಾದರೂ ವಿಶಿಷ್ಟ ಕೆಲಸ ಮಾಡಬೇಕು ಎಂಬ ಆಲೋಚನೆ ಬಂತು. ಈ ಹಿನ್ನೆಲೆಯಲ್ಲಿ ಆಧಾರ್ ಕಾರ್ಡ್ ಪೆಂಡಾಲ್‌ನ್ನು ಮಾಡಿದ್ದು, ಇದರ ಪ್ರಮುಖ ಮಾಹಿತಿಯೆಂದರೆ, ಆಧಾರ್ ಕಾರ್ಡ್ ಪ್ರಮುಖ ದಾಖಲೆಯಾಗಿರುವುದರಿಂದ, ಆಧಾರ್ ಕಾರ್ಡ್ ಮಾಡಿಸಿಕೊಳ್ಳದೇ ಇರುವವರು ಆದಷ್ಟು ಬೇಗ ಮಾಡಿಸಿಕೊಡಿ ಎನ್ನುವುದಾಗಿದೆ ಎಂದು ತಿಳಿಸಿದರು.

    ಈ ಕುತೂಹಲಕಾರಿಯಾದ ಗಣೇಶನ ಪೆಂಡಾಲ್‌ನ್ನು ಹಲವಾರು ಜನರು ಆನಂದಿಸುತ್ತಿದ್ದಾರೆ. ಅದರೊಂದಿಗೆ ಫೋಟೋಗಳು ಮತ್ತು ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಹಂದಿಜ್ವರಕ್ಕೆ ತುಂಬು ಗರ್ಭಿಣಿ ಬಲಿ

    Live Tv
    [brid partner=56869869 player=32851 video=960834 autoplay=true]

  • ಭಟ್ಕಳದಲ್ಲಿ ಪಾಕಿಸ್ತಾನಿ ಮಹಿಳೆಗೆ ಆಧಾರ್ ಕಾರ್ಡ್ – ಚುನಾವಣೆ ಆಯೋಗದಿಂದ 100ಕ್ಕೂ ಹೆಚ್ಚು ಅರ್ಜಿಗಳು ವಜಾ

    ಭಟ್ಕಳದಲ್ಲಿ ಪಾಕಿಸ್ತಾನಿ ಮಹಿಳೆಗೆ ಆಧಾರ್ ಕಾರ್ಡ್ – ಚುನಾವಣೆ ಆಯೋಗದಿಂದ 100ಕ್ಕೂ ಹೆಚ್ಚು ಅರ್ಜಿಗಳು ವಜಾ

    ಕಾರವಾರ: ಕಳೆದ 2021, ಜೂನ್ ತಿಂಗಳಿನಲ್ಲಿ ಬೆಳಕಿಗೆ ಬಂದ ಪಾಕಿಸ್ತಾನಿ ಮಹಿಳೆ ಭಟ್ಕಳದಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಪಡೆದುಕೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ, ಮತದಾರರ ಸೇರ್ಪಡೆ ವಿಷಯದಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ತಾಕೀತು ಮಾಡಿದೆ.

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಳೆದ ತಿಂಗಳು ನಡೆದ ಮತದಾರರ ನೋಂದಣಿ ಅಭಿಯಾನದಲ್ಲಿ ಹೆಸರು ಸೇರ್ಪಡೆಗೆ ಮುಂದಾಗಿದ್ದ 100ಕ್ಕೂ ಹೆಚ್ಚು ಜನರ ಅರ್ಜಿಯನ್ನು ದಾಖಲೆ ವ್ಯತ್ಯಾಸದ ಕಾರಣವೊಡ್ಡಿ ತಿರಸ್ಕರಿಸಲಾಗಿದೆ. ಮತದಾರರ ನೋಂದಣಿ ಅಭಿಯಾನದಲ್ಲಿ 1,176 ಜನರು ಹೊಸದಾಗಿ ಮತದಾರರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದು, 114 ಜನರ ಅರ್ಜಿ ತಿರಸ್ಕೃತಗೊಂಡಿದೆ. ಹೆಸರು ಕೈಬಿಡಲು ಸಲ್ಲಿಸಲಾಗಿದ್ದ 1,718 ಅರ್ಜಿಗಳ ಪೈಕಿ 18 ಹಾಗೂ ತಿದ್ದುಪಡಿಗಾಗಿ ಸಲ್ಲಿಸಲಾಗಿದ್ದ 761 ಅರ್ಜಿಗಳ ಪೈಕಿ 112 ಅರ್ಜಿಗಳು ತಿರಸ್ಕೃತಗೊಂಡಿವೆ. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಾಗುತ್ತಿದೆ, ಜನರಿಗೆ ಅಭದ್ರತೆ ಕಾಡುತ್ತಿದೆ: ಅನ್ಸಾರಿ

    ಮತದಾರರ ವರ್ಗಾವಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 187 ಅರ್ಜಿಗಳಲ್ಲಿ 13 ಅರ್ಜಿಗಳನ್ನು ಮಾನ್ಯತೆ ಪಡೆದುಕೊಂಡಿಲ್ಲ. ಹೆಸರು ಸೇರ್ಪಡೆ ಸಂಬಂಧ ತಿರಸ್ಕೃತಗೊಂಡ ಅರ್ಜಿಗಳೊಂದಿಗೆ ಲಗತ್ತಿಸಲಾದ ದಾಖಲೆಗಳಲ್ಲಿ ಹೆಚ್ಚಿನವರ ವಿಳಾಸ ತಾಳೆಯಾಗದೇ ಇರುವುದು, ಹೆಸರು ವ್ಯತ್ಯಾಸ ಸೇರಿದಂತೆ ವಿವಿಧ ಕಾರಣಗಳನ್ನು ಪರಿಗಣಿಸಿ ತಿರಸ್ಕೃತಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ಎಸ್‌ಪಿ ಗೆದ್ದರೆ ಯುಪಿ ಗೂಂಡಾಗಳ ರಾಜ್ಯವಾಗುತ್ತೆ: ಅಮಿತ್‌ ಶಾ ವಾಗ್ದಾಳಿ

    ಭಟ್ಕಳ ತಾಲೂಕು ಅತೀ ಸೂಕ್ಷ್ಮವಾಗಿದ್ದು ಈ ಹಿಂದೆ ಪಾಕಿಸ್ತಾನದಿಂದ ಭಟ್ಕಳ ವ್ಯಕ್ತಿಗಳನ್ನು ಮದುವೆಯಾಗಿ ನಕಲಿ ಪಾಸ್‍ಪೋರ್ಟ್ ಹಾಗೂ ಪ್ರವಾಸಿ ವಿಸಾ ಪಡೆದು ಇಲ್ಲಿ ಬಂದು ನೆಲೆಸಿದ್ದರು. ಈ ಕುರಿತು ಜಿಲ್ಲಾ ಪೊಲೀಸ್ ಇಲಾಖೆ, ಕೇಂದ್ರ ಗುಪ್ತದಳ ಇಲಾಖೆ ಮಾಹಿತಿ ಕಲೆಹಾಕುತಿದ್ದು ಪಾಕಿಸ್ತಾನದಿಂದ ಭಾರತಕ್ಕೆ ವಿವಿಧ ಕಾರಣದಿಂದ ವಿಸಾ ಪಡೆದು ಬಂದ 12 ಜನರನ್ನು ಹಾಗೂ ನಕಲಿ ಪಾಸ್‍ಪೋರ್ಟ್ ಮಾಡಿಸಿಕೊಂಡು ಬಂದು ಭಟ್ಕಳದಲ್ಲಿ ನೆಲಸಿದ್ದವರನ್ನು ಪತ್ತೆ ಮಾಡಿದೆ. ಹೀಗಾಗಿ ಚುನಾವಣಾ ಆಯೋಗ ಸಹ ಸಲ್ಲಿಕೆಯಾದ ದಾಖಲೆಗಳಲ್ಲಿ ವ್ಯತ್ಯಾಸವನ್ನು ಹುಡುಕಿ ಪತ್ತೆಮಾಡುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಕೊರೊನಾ ಬಂದಿದೆ – ಇಬ್ರಾಹಿಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಆಕ್ರೋಶ

  • ಅಂತ್ಯಸಂಸ್ಕಾರಕ್ಕೆ ಮೃತರ ಆಧಾರ್ ಕಾರ್ಡ್ ಕಡ್ಡಾಯ

    ಅಂತ್ಯಸಂಸ್ಕಾರಕ್ಕೆ ಮೃತರ ಆಧಾರ್ ಕಾರ್ಡ್ ಕಡ್ಡಾಯ

    ಮೈಸೂರು: ನಗರದಲ್ಲಿ ಇನ್ಮುಂದೆ ಅಂತ್ಯಸಂಸ್ಕಾರಕ್ಕೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಬೇಕು. ಬದುಕಿದ್ದಾಗ ಮಾತ್ರವಲ್ಲ ಸತ್ತಮೇಲು ಆಧಾರ್ ಕಡ್ಡಾಯವಾಗಿದೆ.

    ಸ್ಮಶಾನದಲ್ಲಿ ಹೂಳಲು, ಸುಡಲು ಮೃತರ ಆಧಾರ್ ಪ್ರತಿ ಬೇಕು. ಮೃತರಿಂದ ಉಂಟಾಗುವ ಕಾನೂನು ತೊಡಕು ಹಾಗೂ ಕೌಟುಂಬಿಕ ವ್ಯಾಜ್ಯ ನಿವಾರಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮೈಸೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಯಾವುದೇ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಬೇಕಿದ್ರೆ ಆಧಾರ್ ಜೆರಾಕ್ಸ್ ಪ್ರತಿ ನೀಡಬೇಕು. ವಾಸ ಧೃಡಿಕರಣ ಯಾವುದಾದರೂ ದಾಖಲೆ ನೀಡಬೇಕು. ಈ ದಾಖಲೆ ಇಲ್ಲವಾದಲ್ಲಿ ಸ್ಮಶಾನದಲ್ಲಿರುವ ಪಾಲಿಕೆ ಅಧಿಕಾರಿಯಿಂದ ಸ್ಥಳ ಪರಿಶೀಲನೆ ನಡೆಸಬೇಕು. ಆ ನಂತರವಷ್ಟೇ ಅಂತ್ಯಕ್ರಿಯೆಗೆ ಅವಕಾಶ ಕಲ್ಪಿಸಲಾಗುತ್ತದೆ.

    ಇದು ಪಾಲಿಕೆ ವ್ಯಾಪ್ತಿಯಲ್ಲಿ ಬರುವ ರುದ್ರಭೂಮಿ ಹಾಗೂ ಸ್ಮಶಾನಗಳಿಗೆ ಅನ್ವಯವಾಗಿದೆ. ಜನರಿಗೆ ಅನುಕೂಲವಾಗಲೆಂದು ಈ ಕ್ರಮ ಜಾರಿ ಮಾಡಲಾಗಿದೆ. ಅಂತ್ಯಸಂಸ್ಕಾರ ಸಂದರ್ಭದಲ್ಲಿ ತಪ್ಪು ಮಾಹಿತಿ ಅಥವಾ ತಪ್ಪು ಹೆಸರು ನೀಡುತ್ತಿದ್ದರು. ಅಲ್ಲದೆ ಕ್ರೈಂ ನಡೆದಿದ್ದರು ಪೊಲೀಸರಿಗೆ ಮಾಹಿತಿ ಗೊತ್ತಿಲ್ಲದೆ ಅಂತ್ಯಸಂಸ್ಕಾರವಾಗಿದ್ದ ಪ್ರಕರಣ ಇವೆ. ಇದರಿಂದ ಅಂತ್ಯಸಂಸ್ಕಾರವಾಗಿದ್ರೂ ಮತ್ತೆ ಶವ ಹೊರ ತೆಗೆದಿರುವ ಪ್ರಕರಣ ನಡೆದಿವೆ. ಇದಷ್ಟೇ ಅಲ್ಲದೆ ಮರಣ ಪ್ರಮಾಣ ಪತ್ರದಲ್ಲಿ ಹೆಸರು ತಪ್ಪಾದ್ರೆ ಜನರು ಕೋರ್ಟ್ ಗೆ ಅಲೆದಾಡಬೇಕಿತ್ತು. ಈ ಎಲ್ಲಾ ದೃಷ್ಟಿಯಿಂದ ಪಾಲಿಕೆ ಈ ನಿರ್ಧಾರ ಕೈಗೊಳ್ಳಲಾಗಿದೆ.

  • ಆಧಾರ್ ಕಾರ್ಡ್‍ಗಾಗಿ ರಾತ್ರಿಯಿಡೀ ಜಾಗರಣೆ ಮಾಡ್ತಿದ್ದಾರೆ ಜನ

    ಆಧಾರ್ ಕಾರ್ಡ್‍ಗಾಗಿ ರಾತ್ರಿಯಿಡೀ ಜಾಗರಣೆ ಮಾಡ್ತಿದ್ದಾರೆ ಜನ

    – ಸಿಬ್ಬಂದಿ ವಿರುದ್ಧ ಆಕ್ರೋಶ

    ಚಿಕ್ಕೋಡಿ(ಬೆಳಗಾವಿ): ಆಧಾರ್ ಕಾರ್ಡ್ ಗಾಗಿ ರಾತ್ರಿಯಿಡಿ ಜಾಗರಣೆ ಮಾಡಿ ಜನ ಪರದಾಡುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಾಗೂ ರಾಯಾಬಾಗ ತಾಲೂಕುಗಳಲ್ಲಿ ನಡೆಯುತ್ತಿದೆ.

    ನೂತನ ಆಧಾರ್ ಕಾರ್ಡ್ ಹಾಗೂ ತಿದ್ದುಪಡಿಗೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ರಾತ್ರಿ ಜಾಗರಣೆ ಮಾಡಿ ನಂಬರ್‍ಗಾಗಿ ಜನ ಕಾಯುತ್ತಿರುವ ದೃಶ್ಯಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಸಂಕೇಶ್ವರ ಪಟ್ಟಣದ ಅಂಚೆ ಕಚೇರಿ ಮುಂದೆಯೇ ಜನರ ವಸತಿ ಮಾಡಿ ಸರತಿ ನಿಲ್ಲುತ್ತಾರೆ. ಕೇವಲ 30 ಜನರಿಗೆ ಮಾತ್ರ ಅವಕಾಶ ಹಿನ್ನೆಲೆಯಲ್ಲಿ ಸಂಜೆ 6 ರಿಂದ ಬೆಳಗ್ಗೆ 10 ಗಂಟೆವರೆಗೂ ಜನರ ಕ್ಯೂನಲ್ಲಿ ನಿಂತು ಪಡಬಾರದ ಕಷ್ಟ ಪಡುತ್ತಿದ್ದಾರೆ. ಬೆಳಗ್ಗೆ 10 ಗಂಟೆಗೆ ಆರಂಭವಾಗುವ ಪ್ರಕ್ರಿಯೆ ಇದ್ದರೂ ರಾತ್ರಿಯೇ ಬಂದು ಜನರು ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ.

    ಜನರು ಇಷ್ಟೆಲ್ಲ ಪರದಾಡುತ್ತಿದ್ದರೂ ಬೆಳಗ್ಗೆ 10 ಗಂಟೆಗೆ ಆರಾಮವಾಗಿ ಸಂಬಂಧಿಸಿದ ಸಿಬ್ಬಂದಿ ಆಗಮಿಸುತ್ತಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ. ಬಳಿಕ ಕೇವಲ 30 ಜನರ ಅರ್ಜಿ ಪಡೆದು ಉಳಿದವರನ್ನ ವಾಪಸ್ ಕಳುಹಿಸಿ ನಾಳೆ ಬನ್ನಿ ಎಂದು ಹೇಳುತ್ತಿರುವ ಸಿಬ್ಬಂದಿ ವಿರುದ್ಧ ಹಾಗೂ ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ಜನರ ಹಿಡಿಶಾಪ ಹಾಕುತ್ತಿದ್ದಾರೆ.

    ಅಲ್ಲದೆ ತಕ್ಷಣವೇ ಆಧಾರ್ ಕಾರ್ಡ್ ಕೇಂದ್ರಗಳನ್ನ ಹೆಚ್ಚಿನ ಸಂಖ್ಯೆಯಲ್ಲಿ ತೆರೆದು ಜನರಿಗೆ ಅನುಕೂಲ ಮಾಡಿ ಕೊಡುವಂತೆ ಸಾರ್ವಜನಿಕರು ಬೆಳಗಾವಿ ಜಿಲ್ಲಾಧಿಕಾರಿಗಳನ್ನ ಆಗ್ರಹಿಸಿದ್ದಾರೆ.

  • ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್ – ಎಣ್ಣೆಗೂ ಆಧಾರ್ ಕಾರ್ಡ್ ಕಡ್ಡಾಯ

    ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್ – ಎಣ್ಣೆಗೂ ಆಧಾರ್ ಕಾರ್ಡ್ ಕಡ್ಡಾಯ

    ಬೆಂಗಳೂರು: ಮದ್ಯಪ್ರಿಯರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದ್ದು, ಮದ್ಯ ಖರೀದಿಗೆ ಇನ್ಮುಂದೆ ಆಧಾರ್ ಕಾರ್ಡ್ ಕಡ್ಡಾಯ ಮಾಡಬೇಕು ಎಂದು ಹೇಳಲಾಗುತ್ತಿದೆ.

    ಬಾರ್ ನಲ್ಲಿ ಎಣ್ಣೆ ತೆಗೆದುಕೊಳ್ಳಬೇಕು ಎಂದರೆ ಕಡ್ಡಾಯವಾಗಿ ಅಧಾರ್ ಕಾರ್ಡ್ ತೋರಿಸಬೇಕು. ಮದ್ಯ ತಗೊಂಡು ಹೋಗಿ ಕುಡಿದು ಎಲ್ಲಾದ್ರಲ್ಲಿ ಖಾಲಿ ಬಾಟಲ್ ಎಸೆದರೆ, ಆ ಬಾಟಲ್ ಮೇಲಿರುವ ಬಾರ್ ಕೋಡ್ ಆಧಾರದ ಮೇಲೆ ಇದು ಯಾವ ಬಾರಿನಲ್ಲಿ ಮಾರಾಟವಾಗಿದೆ, ಆ ಬಾರಲ್ಲಿ ಮದ್ಯ ತಗೊಂಡು ಹೀಗೆ ಬಿಸಾಕಿದ ವ್ಯಕ್ತಿ ಯಾರು ಎನ್ನುವುದನ್ನು ಆಧಾರ್ ಕಾರ್ಡ್ ಅಧಾರದ ಮೇಲೆ ಕಂಡು ಹಿಡಿದು ಬಾರ್ ನವನಿಗೂ, ಕುಡಿದವನಿಗೂ ಇಬ್ಬರಿಗೂ ಫೈನ್ ಹಾಕುತ್ತಾರೆ.

    ಮಂಗಳೂರಿನ ರಾಷ್ಟ್ರೀಯ ಪರಿಸರ ಒಕ್ಕೂಟ ಎನ್ನುವ ಎನ್‍ಜಿಓ ಈ ರೀತಿಯ ಮನವಿ ಇರುವ ಪತ್ರವನ್ನು ಮಂಡ್ಯದ ಮಳವಳ್ಳಿ ಅಬಕಾರಿ ಇಲಾಖೆ ಬರೆದಿದೆ. ಅಬಕಾರಿ ಇಲಾಖೆಯಿಂದ ಸರ್ಕಾರ ಸಾಕಷ್ಟು ದುಡ್ಡು ಮಾಡುತ್ತೆ, ಕುಡುಕರ ಕ್ಷೇಮಾಭಿವೃದ್ಧಿಗೆ ಹಣ ಮೀಸಲಿಡಬೇಕು. ಕುಡಿದು ಅನಾರೋಗ್ಯಕ್ಕೆ ತುತ್ತಾದರೆ ಸರ್ಕಾರ ಉಚಿತ ಚಿಕಿತ್ಸೆ ಕೊಡಿಸೋದರ ಜೊತೆಗೆ ಅವರ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಬೇಕು ಎಂದು ಪತ್ರ ಬರೆದಿದೆ.

    ಈ ಪತ್ರಕ್ಕೆ ಪ್ರತಿಕ್ರಿಯಿಸಿದ, ರಾಜ್ಯ ಅಬಕಾರಿ ಇಲಾಖೆಯ ಆಯುಕ್ತ ಯಶವಂತ್ ಈ ರೀತಿಯ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ, ಇದೆಲ್ಲಾ ಮಾಡುವುದ್ದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

  • ಆಧಾರ್  ಕಾರ್ಡ್ ಗಾಗಿ ಬ್ಯಾಂಕ್ ಮುಂದೆ ಮಲಗಿದ ಜನ

    ಆಧಾರ್ ಕಾರ್ಡ್ ಗಾಗಿ ಬ್ಯಾಂಕ್ ಮುಂದೆ ಮಲಗಿದ ಜನ

    ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಆಧಾರ  ಕಾರ್ಡ್  ಗಾಗಿ ರಾತ್ರಿ ಜನರು ಬ್ಯಾಂಕ್ ಮುಂದೆ ಮಲಗುತ್ತಿದ್ದಾರೆ.

    ಬ್ಯಾಂಕಿನ ಸಿಬ್ಬಂದಿ ರಾತ್ರಿ ಬಂದವರಿಗೆ ಮಾತ್ರ ಟೋಕನ್ ನೀಡುತ್ತಾರೆ. ಆದ ಕಾರಣ ಗಂಗಾವತಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂದೆ ಜನರು ಆಧಾರ್ ಕಾರ್ಡ್ ಮಾಡಿಸಲು ಕ್ಯೂ ನಿಲ್ಲಲು ಬಂದು ಅಲ್ಲೇ ರಾತ್ರಿ ಮಲಗುವ ಪರಿಸ್ಥಿತಿ ಬಂದಿದೆ.

    ವಾರಕ್ಕೆ ಕೇವಲ ನೂರು ಆಧಾರ್ ಕಾರ್ಡ್ ಮಾಡಿಕೊಡುವುದರಿಂದ, ಗಂಗಾವತಿ ತಾಲೂಕಿನ ಹಳ್ಳಿಯ ಜನರು ರಾತ್ರಿ ಬಂದು ಆಧಾರ ಕಾರ್ಡ್ ಗಾಗಿ ಸಾಲಿನಲ್ಲಿ ನಿಲ್ಲುತ್ತಾರೆ. ಈ ವಿಚಾರವಾಗಿ ತಹಶೀಲ್ದಾರ್ ಅವರಿಗೆ ಗಮನಕ್ಕೆ ತಂದರು ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ ಎಂದು ಹಳ್ಳಿಯ ಜನರು ಕಿಡಿಕಾರಿದ್ದಾರೆ.

  • ಆಧಾರ್‌ ಕಾರ್ಡ್‌ಗಾಗಿ  ರಾತ್ರಿಯಿಡೀ ಬ್ಯಾಂಕ್‍ ಮುಂದೆಯೇ ಜಾಗರಣೆ

    ಆಧಾರ್‌ ಕಾರ್ಡ್‌ಗಾಗಿ ರಾತ್ರಿಯಿಡೀ ಬ್ಯಾಂಕ್‍ ಮುಂದೆಯೇ ಜಾಗರಣೆ

    ಮೈಸೂರು: ಆಧಾರ್ ಕಾರ್ಡ್ ಗಾಗಿ ರಾತ್ರಿಯಿಡೀ ಬ್ಯಾಂಕ್ ಮುಂದೆ ಮಲಗುವ ಸ್ಥಿತಿ ಮೈಸೂರು ಜಿಲ್ಲೆ ಟಿ.ನರಸೀಪುರ ಪಟ್ಟಣದಲ್ಲಿ ಎದುರಾಗಿದೆ.

    ಕೋಟಕ್ ಮಹೇಂದ್ರ ಬ್ಯಾಂಕ್ ಮುಂದೆ ಆಧಾರ್ ಕಾರ್ಡ್ ಮಾಡಿಸಲು ರಾತ್ರಿಯೇ ಬಂದು ಮಹಿಳೆಯರು, ಮಕ್ಕಳು, ವಯೋವೃದ್ಧರು ಮಲಗಿದ್ದಾರೆ. ಒಂದು ದಿನಕ್ಕೆ ಕೇವಲ 15 ಜನರಿಗೆ ಮಾತ್ರ ಬ್ಯಾಂಕ್‍ನಲ್ಲಿ ಕಾರ್ಡ್ ಮಾಡಿ ಕೊಡಲಾಗುತ್ತಿದೆ. ಹೀಗಾಗಿ ರಾತ್ರಿಯೇ ಬಂದು ಬ್ಯಾಂಕ್ ಮುಂದೆ ಜನ ಮಲಗಿದ್ದಾರೆ.

    ಪಟ್ಟಣದ ಮಿನಿವಿಧಾನಸೌಧದ ಕಚೇರಿಯಲ್ಲಿ ಆಧಾರ್ ಕಾರ್ಡ್ ಪ್ರಕ್ರಿಯೆ ಸ್ಥಗಿತಗೊಂಡಿದೆ. ಹೀಗಾಗಿ ಜನ ಅನಿವಾರ್ಯವಾಗಿ ಖಾಸಗಿ ಬ್ಯಾಂಕ್‍ಗಳ ಮುಂದೆ ಕಾದು ಕುಳಿತುಕೊಳ್ಳುವ ಸ್ಥಿತಿ ಬಂದಿದೆ. ದಿನನಿತ್ಯ ಆಧಾರ್ ಕಾರ್ಡ್‍ಗಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ.

    ಸರ್ಕಾರದ ಯೋಜನೆಗಳ ಸವಲತ್ತು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಮಾಡಿದೆ. ಹೀಗಾಗಿ ಆಧಾರ್ ಕಾರ್ಡ್ ಮಾಡಿಸಲು ಜನರು ಪಡಬಾರದ ಪಾಡು ಪಡುತ್ತಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ವೀಸಾ ಬೇಡ, ಆಧಾರ್ ಕಾರ್ಡ್ ಇದ್ರೆ ಭೂತಾನ್, ನೇಪಾಳಕ್ಕೆ ಎಂಟ್ರಿ!

    ವೀಸಾ ಬೇಡ, ಆಧಾರ್ ಕಾರ್ಡ್ ಇದ್ರೆ ಭೂತಾನ್, ನೇಪಾಳಕ್ಕೆ ಎಂಟ್ರಿ!

    ನವದೆಹಲಿ: ಇನ್ಮುಂದೆ ನಮ್ಮ ನೆರೆಯ ದೇಶಗಳಾದ ಭೂತಾನ್ ಹಾಗೂ ನೇಪಾಳಕ್ಕೆ ಪ್ರಯಾಣಿಸಲು 15 ವರ್ಷದೊಳಗಿನ ಮಕ್ಕಳಿಗೆ ಮತ್ತು 65 ವರ್ಷ ಮೇಲ್ಪಟ್ಟವರಿಗೆ ವಿಸಾದ ಅಗತ್ಯವಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ.

    ಭಾರತೀಯರು ಪಾಸ್‍ಪೋರ್ಟ್ ಹೊಂದಿದ್ದರೆ, ಭಾರತ ಸರ್ಕಾರ ನೀಡಿದ ಫೋಟೋ ಗುರುತಿನ ಚೀಟಿ ಅಥವಾ ಚುನಾವಣಾ ಆಯೋಗ ನೀಡಿದ ಚುನಾವಣಾ ಗುರುತಿನ ಚೀಟಿ ಇದ್ದರೆ ವೀಸಾ ಬೇಕಾಗಿಲ್ಲ, ಹಾಗೆಯೇ ಈ ಎರಡು ದೇಶಗಳಿಗೆ ಹೋಗಬಹುದು ಎಂದು ಸಚಿವಾಲಯ ತಿಳಿಸಿದೆ.

    ಮೊದಲೆಲ್ಲ 65 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 15 ವರ್ಷದೊಳಗಿನವರು ನೇಪಾಳ ಮತ್ತು ಭೂತಾನ್‍ಗೆ ಹೋಗುವುದಕ್ಕೆ ಗುರುತು ಪರಿಶೀಲನೆಗಾಗಿ ಹಲವು ದಾಖಲೆಗಳನ್ನು ನೀಡಬೇಕಾಗಿತ್ತು. ಗುರುತಿಗಾಗಿ ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಕೇಂದ್ರ ಸರ್ಕಾರದ ಆರೋಗ್ಯ ಸೇವೆ ಕಾರ್ಡ್ ಅಥವಾ ರೇಷನ್ ಕಾರ್ಡ್‍ನ್ನು ಮಾತ್ರ ಸಲ್ಲಿಸಲು ಅವಕಾಶವಿತ್ತು. ಆದರೆ ಆಧಾರ್ ಕಾರ್ಡ್‍ನ್ನು ಸಲ್ಲಿಸಲು ಅವಕಾಶವಿರಲಿಲ್ಲ.

    ಆದರೆ ಇನ್ಮುಂದೆ ಹಾಗೆ ಆಗಲ್ಲ. ಯಾಕೆಂದರೆ ಆಧಾರ್ ಕಾರ್ಡ್ ಅನ್ನು ಕೂಡ ಗುರುತಿನ ದಾಖಲೆಗಳಾಗಿ ಪರಿಗಣಿಸಬಹುದು. ಅಲ್ಲದೆ ಪ್ರಯಾಣಿಕರು ಆಧಾರ್ ಕಾರ್ಡ್ ಅನ್ನು ಪ್ರಯಾಣ ದಾಖಲೆಯಾಗಿ ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಅಷ್ಟೇ ಅಲ್ಲದೆ 15 ರಿಂದ 18 ವರ್ಷದೊಳಗಿನ ಯುವಕ-ಯುವತಿಯರಿಗೆ ಭಾರತ ಮತ್ತು ನೇಪಾಳಕ್ಕೆ ಪ್ರಯಾಣಿಸಲು ಶಾಲೆಯ ಪ್ರಾಂಶುಪಾಲರಿಂದ ಪಡೆದ ಗುರುತಿನ ಚೀಟಿಯನ್ನು ಬಳಸಬಹುದಾಗಿದೆ. ಹಾಗೆಯೇ ಒಂದೇ ಕುಟುಂಬ ಹಲವರು ಒಟ್ಟಾಗಿ ಪ್ರಯಾಣಿಸುವ ಸಂದರ್ಭದಲ್ಲಿ ಎಲ್ಲರಿಗೂ ಪಾಸ್‍ಪೋರ್ಟ್ ಅಥವಾ ಚುನಾವಣೆ ಐಡಿಗಳನ್ನು ತೋರಿಸುವ ಅಗತ್ಯವಿಲ್ಲ. ಬದಲಿಗೆ ಆ ಕುಟುಂಬಸ್ಥರಲ್ಲಿ ಹಿರಿಯರಾದವರು ಸರ್ಕಾರದಿಂದ ಮಾನ್ಯತೆ ಪಡೆದ ದಾಖಲೆಗಳನ್ನು ಹೊಂದಿದ್ದರೆ ಸಾಕು ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

    ಹಾಗೆಯೇ ಭಾರತೀಯರು ಭೂತಾನ್‍ಗೆ ತೆರಳಲು ಅವರ ಬಳಿ 6 ತಿಂಗಳು ಅವಧಿ ಇರುವ ಭಾರತದ ಪಾಸ್‍ಪೋರ್ಟ್ ಅಥವಾ ಚುನಾವಣೆ ಐಡಿ ಇರಬೇಕು. ಪ್ರತಿ ದಿನವು ಭೂತಾನ್ ಹಾಗೂ ಭಾರತ ಗಡಿ ಭಾಗದಲ್ಲಿ 8 ರಿಂದ 10 ಸಾವಿರ ಕೂಲಿ ಕಾರ್ಮಿಕರು ಓಡಾಡುತ್ತಾರೆ. ಅಲ್ಲದೆ ನೇಪಾಳದಲ್ಲಿ ಸುಮಾರು 6 ಲಕ್ಷ ಭಾರತೀಯರು ವಾಸವಾಗಿದ್ದಾರೆ. ಆದರಿಂದ ಆಧಾರ್ ಕಾರ್ಡ್ ಅನ್ನು ಗುರುತಿನ ದಾಖಲೆಯಾಗಿ ಪರಿಗಣಿಸಲು ಗೃಹ ಸಚಿವಾಲಯ ನಿಯಮ ಜಾರಿಗೊಳಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv