Tag: Adhvithi Shetty

  • ರೂಪೇಶ್ ಶೆಟ್ಟಿಗೆ ಜೋಡಿಯಾದ ಕುಡ್ಲದ ಬೆಡಗಿ ಅದ್ವಿತಿ

    ರೂಪೇಶ್ ಶೆಟ್ಟಿಗೆ ಜೋಡಿಯಾದ ಕುಡ್ಲದ ಬೆಡಗಿ ಅದ್ವಿತಿ

    ‘ಬಿಗ್ ಬಾಸ್ ಕನ್ನಡ 9’ರ (Bigg Boss Kannada 9) ವಿನ್ನರ್ ರೂಪೇಶ್ ಶೆಟ್ಟಿ (Roopesh Shetty) ಅವರು ‘ಜೈ’ (Jai Film) ಎಂಬ ತುಳು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ (Adhvithi Shetty) ಎಂಟ್ರಿ ಕೊಟ್ಟಿದ್ದಾರೆ. ಮೊದಲ ಬಾರಿಗೆ ತುಳು ಸಿನಿಮಾದಲ್ಲಿ ನಟಿಸುತ್ತಿರುವ ಖುಷಿಯನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.

    ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಜೈ’ (Jai Film) ಸಿನಿಮಾದಲ್ಲಿ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲೂ ಅವರು ಪಾಲ್ಗೊಂಡಿದ್ದಾರೆ. ನಟನೆಗೆ ಸ್ಕೋಪ್ ಇರುವ ವಿಭಿನ್ನ ಪಾತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಸುದೀಪ್ ತಾಯಿ ಅಗಲಿಕೆಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ- ಪ್ರತಿಕ್ರಿಯಿಸಿದ ಕಿಚ್ಚ

    ಇನ್ನೂ ಅದ್ವಿತಿ ಶೆಟ್ಟಿ ಅವರು ಮೂಲತಃ ಮಂಗಳೂರಿನವರು. ಮಾತೃ ಭಾಷೆ ತುಳು ಆಗಿದ್ದರೂ ಅವರು ಮೊದಲ ಬಾರಿಗೆ ತುಳು ಭಾಷೆಯ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಜೈ’ ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ತುಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿರುವ ಕುರಿತು ನಟಿ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ರೂಪೇಶ್ ಮತ್ತು ಇಡೀ ತಂಡಕ್ಕೆ ನಟಿ ಧನ್ಯವಾದ ತಿಳಿಸಿದ್ದಾರೆ.

     

    View this post on Instagram

     

    A post shared by JAI TULU MOVIE (@jai_tulumovie2024)

    ಅಂದಹಾಗೆ, ರೂಪೇಶ್ ಶೆಟ್ಟಿ ಅವರಿಗೆ ತುಳು ಚಿತ್ರರಂಗ ಏನು ಹೊಸದಲ್ಲ. ಅವರು ಮೂಲತಃ ಮಂಗಳೂರಿನವರೇ ಆಗಿದ್ದಾರೆ. ‘ಜೈ’ ಸಿನಿಮಾದ ಜೊತೆಗೆ ಕನ್ನಡದ ‘ಅಧಿಪತ್ರ’ ಸೇರಿದಂತೆ ಹಲವು ಚಿತ್ರಗಳು ಅವರ ಕೈಯಲ್ಲಿವೆ.

  • ಬಿಗ್ ಬಾಸ್‌ಗೆ ಹೋಗ್ತಾರಾ ಅವಳಿ ಸಹೋದರಿಯರು?- ಸ್ಪಷ್ಟನೆ ನೀಡಿದ ಅದ್ವಿತಿ ಶೆಟ್ಟಿ

    ಬಿಗ್ ಬಾಸ್‌ಗೆ ಹೋಗ್ತಾರಾ ಅವಳಿ ಸಹೋದರಿಯರು?- ಸ್ಪಷ್ಟನೆ ನೀಡಿದ ಅದ್ವಿತಿ ಶೆಟ್ಟಿ

    ಬಿಗ್ ಬಾಸ್ ಸೀಸನ್ 11ಕ್ಕೆ (Bigg Boss Kannada 11) ವೇದಿಕೆ ಸಿದ್ಧವಾಗುತ್ತಿದ್ದಂತೆ ಹಲವರ ಹೆಸರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಅದರಲ್ಲಿ ಅದ್ವಿತಿ ಮತ್ತು ಅಶ್ವಿತಿ ಶೆಟ್ಟಿ ದೊಡ್ಮನೆಗೆ ಬರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಅದಕ್ಕೆಲ್ಲಾ ನಟಿ ಅದ್ವಿತಿ (Adhvithi Shetty) ಉತ್ತರ ನೀಡಿದ್ದಾರೆ. ನಾವು ಬಿಗ್ ಬಾಸ್‌ಗೆ ಹೋಗ್ತೀವಿ ಅಂತ ನೀವೇ ನಿರ್ಧರಿಸಲು ಹೋಗಬೇಡಿ ಎಂದಿದ್ದಾರೆ. ಇದನ್ನೂ ಓದಿ:ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳಲ್ಲಿ ಬ್ಯುಸಿಯಾದ ರಶ್ಮಿಕಾ ಮಂದಣ್ಣ

    ಕಳೆದ ಹಲವು ಸೀಸನ್‌ಗಳಿಂದ ಬಿಗ್ ಬಾಸ್‌ಗೆ ಹೋಗುವ ಕುರಿತು ಈ ಅವಳಿ ಸಹೋದರಿಯರ ಹೆಸರು ಕೇಳಿ ಬರುತ್ತಲೇ ಇದೆ. ಪ್ರತಿ ಸೀಸನ್ ಬಂದಾಗಲೂ ಇವರ ಸದ್ದು ಮಾಡುತ್ತದೆ. ಈ ಬಾರಿಯೂ ಹಾಗೇ ಆಗಿದೆ. ಅದಕ್ಕೆ ಇನ್ಸ್ಟ್ರಾಗ್ರಾಂ ಸ್ಟೋರಿ ಶೇರ್ ಮಾಡಿ, ಎಲ್ಲರಿಗೂ ನಮಸ್ಕಾರ, ನಾನು ಹಲವು ಪೋಸ್ಟ್‌ಗಳನ್ನು ನೋಡಿದೆ, ಬಿಗ್ ಬಾಸ್‌ಗೆ ಈ ಬಾರಿ ನಾನು ಮತ್ತು ಸಹೋದರಿ ಅಶ್ವಿತಿ (Ashvithi Shetty) ದೊಡ್ಮನೆಗೆ ಹೋಗುವ ಕುರಿತು. ನಾವು ಬಿಗ್ ಬಾಸ್‌ಗೆ ಹೋಗುತ್ತೇವೆ ಎಂದು ಎಲ್ಲೂ ಅಧಿಕೃತವಾಗಿ ಹೇಳಿಲ್ಲ ಎಂದಿದ್ದಾರೆ.

    ನಾನೇ ಹೇಳುವವರೆಗೂ ದಯವಿಟ್ಟು ನೀವೇ ಕಲ್ಪನೆ ಮಾಡಿಕೊಳ್ಳಲು ಹೋಗಬೇಡಿ ಎಂದಿದ್ದಾರೆ ನಟಿ ಅದ್ವಿತಿ. ಧನ್ಯವಾದಗಳು ನಮ್ಮನ್ನು ಹೀಗೆ ಬೆಂಬಲಿಸುತ್ತಾ ಇರಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಬಿಗ್ ಬಾಸ್‌ಗೆ ಹೋಗುವ ವಿಚಾರ ಇದು ವದಂತಿ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

    ಅಂದಹಾಗೆ, ಮಿಸ್ಟರ್ & ಮಿಸೆಸ್ ರಾಮಾಚಾರಿ ಸಿನಿಮಾ ಮೂಲಕ ಈ ಅವಳಿ ಸಹೋದರಿಯರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ರಾಧಿಕಾ ಪಂಡಿತ್ (Radhika Pandit) ಸ್ನೇಹಿತೆಯರಾಗಿ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಇಬ್ಬರೂ ಹೊಸ ಸಿನಿಮಾಗಳನ್ನು ಮಾಡುತ್ತಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

  • Exclusive: ಬಿಗ್ ಬಾಸ್‌ಗೆ ಅದ್ವಿತಿ ಶೆಟ್ಟಿ ಹೋಗುತ್ತಾರಾ? ನಟಿ ಸ್ಪಷ್ಟನೆ

    Exclusive: ಬಿಗ್ ಬಾಸ್‌ಗೆ ಅದ್ವಿತಿ ಶೆಟ್ಟಿ ಹೋಗುತ್ತಾರಾ? ನಟಿ ಸ್ಪಷ್ಟನೆ

    ಕಿರುತೆರೆಯ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (Bigg Boss Kannada 10) ಶುರುವಾಗಲು ಕೌಂಟ್ ಡೌನ್ ಶುರುವಾಗಿದೆ. ಯಾರೆಲ್ಲಾ ದೊಡ್ಮನೆಗೆ ಎಂಟ್ರಿ ಕೊಡುತ್ತಾರೆ ಎಂದು ಒಂದಿಷ್ಟು ಹೆಸರುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಅದರಲ್ಲಿ ಅದ್ವಿತಿ ಶೆಟ್ಟಿ (Adhvithi Shetty) ಕೂಡ ಹೋಗುತ್ತಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಸ್ವತಃ ನಟಿ ಅದ್ವಿತಿ ಶೆಟ್ಟಿ ಪಬ್ಲಿಕ್ ಟಿವಿ ಡಿಜಿಟಲ್‌ಗೆ ಸ್ಪಷ್ಟನೆ ನೀಡಿದ್ದಾರೆ.

    ಬಿಗ್ ಬಾಸ್ ಮನೆಗೆ (Bigg Boss Kannada) ಬರಲು ಆಫರ್ ಸಿಕ್ಕಿದ್ದು ನಿಜ. ಆದರೆ ನಾನು ಶೋನಲ್ಲಿ ಭಾಗಿಯಾಗ್ತಿಲ್ಲ. ಇತ್ತೀಚಿಗೆ ನನ್ನ ತಂದೆ ಅಗಲಿದರು. ಆ ನೋವಿನಿಂದ ಹೊರಬರಲು ಮಾನಸಿಕವಾಗಿ ಸಮಯಬೇಕಿದೆ. ಈ ನಡುವೆ ಫಿಟ್‌ನೆಸ್ ಕಡೆ ಕೂಡ ನಾನು ಗಮನ ನೀಡಿಲ್ಲ. ಬಿಗ್ ಬಾಸ್ ಶೋ ಬಗ್ಗೆ ಗೌರವಿದೆ. ಆ ಗೌರವಕ್ಕಾದರೂ ಸರಿಯಾದ ಪೂರ್ವ ತಯಾರಿ ಮಾಡಬೇಕು ಎಂದು ನಟಿ ತಿಳಿಸಿದ್ದಾರೆ.

    ಮಾನಸಿಕವಾಗಿ ಮತ್ತು ಫಿಟ್‌ನೆಸ್ ವಿಚಾರದಲ್ಲಿ ನೋಡಿದರೆ ನಾನು ಈ ಬಾರಿ ಬಿಗ್ ಬಾಸ್‌ಗೆ ಹೋಗಲು ತಯಾರಿಲ್ಲ. ತಯಾರಿ ಇಲ್ಲದೇ ಹೋಗಬಾರದು. ಬಿಗ್ ಬಾಸ್‌ಗೆ ನಾನು ಹೋಗುತ್ತೀನಿ ಎನ್ನುವ ಸುದ್ದಿ ಸುಳ್ಳು ಎಂದಿದ್ದಾರೆ. ನನ್ನ ಸಹೋದರಿ ಅಶ್ವಿತಿ ಕೂಡ ಭಾಗಿಯಾಗುತ್ತಿಲ್ಲ. ಇನ್ನೂ ನಾನು ನಟಿಸಿರುವ ‘ಧೀರ ಸಾಮ್ರಾಟ್’, ‘ಶುಗರ್ ಫ್ಯಾಕ್ಟರಿ’ ರಿಲೀಸ್‌ಗೆ ರೆಡಿಯಿದೆ. ಚಿತ್ರತಂಡದ ಜೊತೆ ಸೇರಿ ಪ್ರಚಾರದ ಕಡೆ ಗಮನ ಹರಿಸಬೇಕಿದೆ ಎಂದು ಅದ್ವಿತಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:‘ಐ ಯ್ಯಾಮ್ ಇನ್ ಲವ್’ ಅಂತಿದ್ದಾರೆ ರಚಿತಾ ರಾಮ್

    ‘ಮಿಸ್ಟರ್ & ಮಿಸೆಸ್ ರಾಮಾಚಾರಿ’ ಸಿನಿಮಾದ ಮೂಲಕ ಅದ್ವಿತಿ ಶೆಟ್ಟಿ ಬಣ್ಣದ ಬದುಕಿಗೆ ಎಂಟ್ರಿ ಕೊಟ್ಟರು. ಫ್ಯಾನ್, ಐರಾವನ್ ಸಿನಿಮಾಗಳ ಮೂಲಕ ನಟಿ ಗಮನ ಸೆಳೆದರು.

    ವರದಿ: ಶ್ರುತಿ ನಾಗೇಶ್‌, ಪಬ್ಲಿಕ್‌ ಟಿವಿ ಡಿಜಿಟಲ್‌

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕ್ಯಾಡ್ಬರಿಸ್’ ಸಿನಿಮಾದಲ್ಲಿ ಸೋನು ಗೌಡ- ಪೋಸ್ಟರ್ ಔಟ್

    ‘ಕ್ಯಾಡ್ಬರಿಸ್’ ಸಿನಿಮಾದಲ್ಲಿ ಸೋನು ಗೌಡ- ಪೋಸ್ಟರ್ ಔಟ್

    ‘ಬಿಗ್ ಬಾಸ್ ಖ್ಯಾತಿಯ ಸೋನು ಗೌಡ (Sonu Srinivas Gowda) ಇದೀಗ ಬಿಕಿನಿ ಫೋಟೋಗಳ ಮೂಲಕ ಸಖತ್ ಸುದ್ದಿಯಾದ ಬೆನ್ನಲ್ಲೇ ಅಭಿಮಾನಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದಾರೆ. ತಮ್ಮ ಚೊಚ್ಚಲ ಸಿನಿಮಾದ ಅಪ್‌ಡೇಟ್ ಹಂಚಿಕೊಂಡಿದ್ದಾರೆ.

    ಧರ್ಮ ಕೀರ್ತಿರಾಜ್ & ಅದ್ವಿತಿ ಶೆಟ್ಟಿ ನಟನೆಯ ಕ್ಯಾಡ್ಬರಿಸ್ ಸಿನಿಮಾದಲ್ಲಿ ಸೋನು ಶ್ರೀನಿವಾಸ್ ಗೌಡ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ಕ್ಯಾಡ್ಬರಿಸ್’ (Cadburys) ಸಿನಿಮಾದಲ್ಲಿನ ಸೋನು ಲುಕ್ ಕೂಡ ಚಿತ್ರತಂಡ ರಿವೀಲ್ ಮಾಡಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಚಿತ್ರತಂಡಕ್ಕೆ ಸೋನು ಧನ್ಯವಾದ ತಿಳಿಸಿದ್ದಾರೆ.

    ಕನಸು ಪ್ರೊಡಕ್ಷನ್ಸ್ ನಿರ್ಮಾಣದ ಕ್ಯಾಡ್ಬರಿಸ್ (Cadburys Film) ಚಿತ್ರದ ಒಂದು ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದೇನೆ ಎಂದು ಹೇಳಿದ್ದೆ. ಈಗ ಆ ಮೂವಿಯ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಈ ವರ್ಷದ ಕೊನೆಯಲ್ಲಿ ನಿಮ್ಮ ಮುಂದೆ ಬರಲಿದ್ದೇವೆ. ಇಂದು ಈ ಚಿತ್ರದ ನನ್ನ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಹಾಗೂ ನಮ್ಮ ಚಿತ್ರತಂಡದ ಮೇಲೆ ಸದಾ ಇರಲಿ ಎಂದು ಕೇಳಿಕೊಳ್ಳುತ್ತೇವೆ.

    ಈ ಚಿತ್ರವು ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದ್ದು, ಈ ಸಿನಿಮಾದಲ್ಲಿ ನನ್ನ ಪಾತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಈ ಚಿತ್ರದಲ್ಲಿ ಧರ್ಮ ಕೀರ್ತಿರಾಜ್- ಅದ್ವಿತಿ ಶೆಟ್ಟಿ(Adhvithi Shetty) ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಇನ್ನು ಹಲವಾರು ದೊಡ್ಡ ದೊಡ್ಡ ನಟರು ನಟಿಸುತ್ತಿದ್ದಾರೆ. ಅವರೆಲ್ಲರ ಜೊತೆ ನಟಿಸಿದ್ದು ನನಗೆ ಸಂತಸ ತಂದಿದೆ. ನನಗೆ ಈ ಚಿತ್ರದಲ್ಲಿ ನಟಿಸಲು ಅವಕಾಶ ಮಾಡಿಕೊಟ್ಟ ಈ ಚಿತ್ರದ ನಿರ್ಮಾಪಕರಿಗೂ ನಿರ್ದೇಶಕರಿಗೂ ಹಾಗೂ ಚಿತ್ರತಂಡದ ಎಲ್ಲರಿಗೂ ನನ್ನ ಧನ್ಯವಾದಗಳು ತಿಳಿಸುತ್ತಾ, ಸಮಸ್ತ ಕನ್ನಡ ನಾಡಿನ ಜನರ ಆಶೀರ್ವಾದ ಬಯಸುತ್ತಿರುವ ನಿಮ್ಮ ಪ್ರೀತಿಯ ಸೋನು ಶ್ರೀನಿವಾಸ್ ಗೌಡ ಎಂದು ಬರೆದುಕೊಂಡಿದ್ದಾರೆ.

    ಬಿಗ್ ಬಾಸ್ (Bigg Boss Kannada) ಶೋ ಬಳಿಕ ಇದೀಗ ಕ್ಯಾಡ್ಬರಿಸ್ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಸೋನು ಪಾದಾರ್ಪಣೆ ಮಾಡುತ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಅದ್ವಿತಿ ಶೆಟ್ಟಿಗೆ ಪಿತೃ ವಿಯೋಗ

    ನಟಿ ಅದ್ವಿತಿ ಶೆಟ್ಟಿಗೆ ಪಿತೃ ವಿಯೋಗ

     

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅದ್ವಿತಿ ಶೆಟ್ಟಿಗೆ ಪಿತೃ ವಿಯೋಗ

    ಅದ್ವಿತಿ ಶೆಟ್ಟಿಗೆ ಪಿತೃ ವಿಯೋಗ

    Mr & Mrs ರಾಮಾಚಾರಿ ನಟಿ ಅದ್ವಿತಿ ಶೆಟ್ಟಿ (Advithi Shetty) ತಂದೆ (Father) ನಿಧನರಾಗಿದ್ದಾರೆ. ತಂದೆಯನ್ನು ಕಳೆದುಕೊಂಡ ನೋವಿನಲ್ಲಿ ನಟಿ ಪೋಸ್ಟ್ ಶೇರ್ ಮಾಡಿದ್ದಾರೆ.

    ಅದ್ವಿತಿ ಶೆಟ್ಟಿ (Adhvithi Shetty) ಅವರ ತಂದೆ (Father) ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅದ್ವಿತಿ ತಂದೆಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಇದೀಗ ಅದ್ವಿತಿ ಶೆಟ್ಟಿ ತಂದೆಗೆ ವಿಧಿವಶರಾಗಿದ್ದಾರೆ. ತಂದೆಯ ನಿಧನದ ಬಗ್ಗೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ನಟಿ ಹಂಚಿಕೊಂಡಿದ್ದಾರೆ.

    ಅದ್ವಿತಿ- ಅಶ್ವಿತಿ ಶೆಟ್ಟಿ ಇಬ್ಬರು ಟ್ವಿನ್ಸ್ ಮಕ್ಕಳ ವೃತ್ತಿ ರಂಗದ ಗೆಲುವಿಗೆ ತಂದೆ ಸದಾ ಪ್ರೋತ್ಸಾಹ ನೀಡುತ್ತಿದ್ದರು. ತಂದೆ ನಿಧನ ಇದೀಗ ನಟಿ ಅದ್ವಿತಿ ಕುಟುಂಬಕ್ಕೆ ಶಾಕ್ ಕೊಟ್ಟಿದೆ. ಅದ್ವಿತಿ ತಂದೆಯ ನಿಧನಕ್ಕೆ ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಇದನ್ನೂ ಓದಿ:Bigg Boss: ದೊಡ್ಮನೆಗೆ ಕಾಲಿಡಲು ಸಜ್ಜಾದ ಶಕೀಲಾ

    ಯಶ್(Yash)- ರಾಧಿಕಾ ಪಂಡಿತ್ (Radhika Pandit) ನಟನೆಯ ‘ಮಿಸ್ಟರ್ & ಮಿಸೆಸ್ ರಾಮಾಚಾರಿ’ ಸಿನಿಮಾದಲ್ಲಿ ಅದ್ವಿತಿ ಶೆಟ್ಟಿ ನಟಿಸಿದ್ದರು. ರಾಧಿಕಾ ಸ್ನೇಹಿತೆಯ ಪಾತ್ರದಲ್ಲಿ ನಟಿ ಮಿಂಚಿದ್ದರು. ಬಳಿಕ ಕಿರುತೆರೆ ಮತ್ತು ಹಿರಿತೆರೆಯ ಫ್ಯಾನ್, ಐರಾವನ್ ಚಿತ್ರದಲ್ಲಿ ನಟಿಸಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅದ್ವಿತಿ-ಅಶ್ವಿತಿ: ಅವಳಿ ಸೋದರಿಯರ ಬಗ್ಗೆ ಇಲ್ಲಿದೆ ಅಚ್ಚರಿಯ ಸಂಗತಿ!

    ಅದ್ವಿತಿ-ಅಶ್ವಿತಿ: ಅವಳಿ ಸೋದರಿಯರ ಬಗ್ಗೆ ಇಲ್ಲಿದೆ ಅಚ್ಚರಿಯ ಸಂಗತಿ!

    ಕೆಲವೊಮ್ಮೆ ತೀವ್ರವಾಗಿ ಹಂಬಲಿಸಿ ಸಾಕಷ್ಟು ತಯಾರಿ ನಡೆಸಿದರೂ ಸಿನಿಮಾ ಅವಕಾಶವೆಂಬುದು ಅದೆಷ್ಟೋ ನಟ ನಟಿಯರ ಪಾಲಿಗೆ ಸತಾಯಿಸಿ ಬಿಡುತ್ತೆ. ಇದೀಗ ಯಶಸ್ವಿಯಾಗಿರೋ ಅದೆಷ್ಟೋ ಕಲಾವಿದರ ಹಿನ್ನೆಲೆಯಲ್ಲಿ ಅಂಥಾದ್ದೇ ಸೈಕಲ್ಲು ಹೊಡೆದ ಕಥಾನಕಗಳಿದ್ದಾವೆ. ಆದರೆ ಇನ್ನೂ ಕೆಲ ಅದೃಷ್ಟವಂತರ ಪಾಲಿಗೆ ಅದೃಷ್ಟವೆಂಬುದು ಇದ್ದಲ್ಲಿಗೇ ಸಾಗಿ ಬಂದು ಬರಸೆಳೆದುಕೊಳ್ಳುತ್ತದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ ಚಿತ್ರದ ಮೂಲಕ ನಟಿಯರಾಗೋ ಅವಕಾಶ ಗಿಟ್ಟಿಸಿಕೊಂಡು ಈಗ ಬೇಡಿಕೆಯ ನಾಯಕಿಯರಾಗಿರುವ ಅದ್ವಿತಿ ಶೆಟ್ಟಿ ಮತ್ತು ಅದ್ವಿತಿ ಶೆಟ್ಟಿ ಎಂಬ ಅವಳಿ ಸಹೋದರಿಯರು ಆ ಸಾಲಿಗೆ ಸೇರಿಕೊಳ್ಳುತ್ತಾರೆ. ಇದೀಗ ಎಲ್ಲರ ಕುತೂಹಲಕ್ಕೆ ಕಾರಣರಾಗಿರುವ ಈ ಅವಳಿ ಸೋದರಿಯರ ಬಗೆಗಿನ ಕೆಲ ಅಚ್ಚರಿಯ ಸಂಗತಿಗಳು ಇಲ್ಲಿವೆ.

    ಸಿನಿಮಾ ನಟಿಯರಾಗೋದೆಂದರೆ ಅದೇನು ಸಲೀಸಿನ ಸಂಗತಿಯಲ್ಲ. ಅದೇನೇ ಟ್ಯಾಲೆಂಟಿದ್ದರೂ ಕೂಡಾ ಮೊದಲ ಅವಕಾಶ ಗಿಟ್ಟಿಸಿಕೊಳ್ಳಲು ಅದೆಷ್ಟೋ ಗಾವುದ ದೂರ ಸಾಗಿ ಬರಬೇಕಾಗುತ್ತೆ. ಅಲ್ಲೆದುರಾಗೋ ನೋವು, ನಿರಾಸೆಗಳನ್ನು ನುಂಗಿಕೊಂಡು ಮುಂದುವರೆದರಷ್ಟೇ ಬದುಕು ಗುರಿಯ ನೇರಕ್ಕೆ ಬಂದು ನಿಲ್ಲುತ್ತದೆ. ಆದರೆ ಯಾವುದೋ ದಾರಿ ಮತ್ಯಾವುದೋ ನಿರೀಕ್ಷಿಸದ ನಿಲ್ದಾಣಕ್ಕೆ ತಂದು ಬಿಡುವಂಥ ಮಿರ್ಯಾಕಲ್‍ಗಳೂ ವಿರಳವೆಂಬಂತೆ ಘಟಿಸುತ್ತಿರುತ್ತವೆ. ಬಹುಶಃ ಅಂಥಾದ್ದೊಂದು ಪವಾಡದಂಥಾ ಅವಕಾಶ ಅರಸಿ ಬರದೇ ಇದ್ದಿದ್ದರೆ ಈವತ್ತಿಗೆ ಮಂಗಳೂರು ಮೂಲದ ಅದ್ವಿತಿ ಶೆಟ್ಟಿ ಮತ್ತು ಅಶ್ವಿತಿ ಶೆಟ್ಟಿಯೆಂಬ ಅವಳಿಗಳು ಎಂಎನ್‍ಸಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಾ ಅನಾಮಿಕರಾಗಿಯೇ ಉಳಿದು ಬಿಡುತ್ತಿದ್ದರೇನೋ.

    ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ ಚಿತ್ರವನ್ನು ನೋಡಿದ ಯಾರೇ ಆದರೂ ಅದ್ವಿತಿ ಮತ್ತು ಅಶ್ವಿತಿಯನ್ನು ಮರೆಯಲು ಸಾಧ್ಯವೇ ಇಲ್ಲ. ಅದರಲ್ಲಿ ರಾಧಿಕಾ ಪಂಡಿತ್ ಸ್ನೇಹಿತೆಯರಾಗಿ ನಟಿಸಿದ್ದ ಇವರದ್ದು ಡಬಲ್ ರೋಲ್ ಅಂತ ಬಹುತೇಕರು ಅಂದುಕೊಂಡಿದ್ದರೆ ಅದರಲ್ಲಿ ಅಚ್ಚರಿಯಾಗುವಂಥಾದ್ದೇನೂ ಇಲ್ಲ. ಅಂಥಾ ಅಪರೂಪದ ಚಹರೆಯೊಂದಿಗೆ ಈ ಸೋದರಿಯರು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಯಾರೇ ಕಲಾವಿದರಾದರೂ ಸಾಮಾಜಿಕ ಜವಾಬ್ದಾರಿಗಳಿರುತ್ತವೆ. ತಮ್ಮ ಕಷ್ಟಕೋಟಲೆಗಳಾಚೆಗೂ ಸಿನಿಮಾ ನೋಡಿ ಆರಾಧಿಸುವ ಜನರ ಸಂಕಷ್ಟಗಳಿಗೆ ಮಿಡಿಯುವವರೇ ನಿಜವಾದ ನಾಯಕ ನಾಯಕಿಯರಾಗಿಯೂ ಬಿಂಬಿತರಾಗುತ್ತಾರೆ. ಈ ನಿಟ್ಟಿನಲ್ಲಿ ನೋಡ ಹೋದರೆ ಕೊರೋನಾ ಬಾಧೆಯಿಂದ ಗೃಹ ಬಂಧನಕ್ಕೀಡಾಗಿ ದಿಕ್ಕೆಟ್ಟವರಿಗೆ ಸಹಾಯ ಮಾಡುವ ಮೂಲಕವೂ ಅದ್ವಿತಿ ಮತ್ತು ಅಶ್ವಿತಿ ಮೆಚ್ಚುಗೆ ಗಳಿಸಿಕೊಂಡಿದ್ದಾರೆ.

    ಅದ್ವಿತಿ ಮತ್ತು ಅಶ್ವಿತಿ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಚೆಂದಗೆ ಅರಿತುಕೊಂಡಿದ್ದಾರೆ. ಆದ್ದರಿಂದಲೇ ತಮ್ಮ ಸಿನಿಮಾ ತಯಾರಿಯೂ ಸೇರಿದಂತೆ ಎಲ್ಲವನ್ನೂ ಬದಿಗೊತ್ತಿ ಇತ್ತೀಚೆಗೆ ಸ್ಲಂ ಏರಿಯಾಗಳ ಬಡವರಿಗೆ ಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ. ಈಗ ಎಲ್ಲೆಡೆ ಒಂದಷ್ಟು ಮಾನವೀಯ ಮನಸುಗಳು ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸುತ್ತಿವೆ. ಆದರೆ ಅದರಾಚೆಗೂ ಅಗತ್ಯವಿರುವವರಿಗೆ ನೆರವಾಗಬೇಕೆಂಬ ಉದ್ದೇಶದಿಂದ ಇವರಿಬ್ಬರೂ ಒಳ ಪ್ರದೇಶಗಳ ಸ್ಲಂ ಏರಿಯಾಗಳನ್ನು ಹುಡುಕಿ ಸಹಾಯಹಸ್ತ ಚಾಚಿದ್ದಾರೆ. ಪ್ರತಾಪ್, ಶಿವಾಜಿ ಮತ್ತು ಚೇತನ್ ಎಂಬವರ ಸಹಾಯದೊಂದಿಗೆ ಈ ಸಾರ್ಥಕ ಕೆಲಸವನ್ನು ಅವಳಿ ಸಹೋದರಿಯರು ಮಾಡಿದ್ದಾರೆ.

    ಹೀಗೆ ಸಹಾಯ ಹಸ್ತ ನೀಡುವ ಪ್ರಸ್ತಾಪವನ್ನು ಸಾಮಾಜಿಕ ಜಾಲತಾಣದ ಮೂಲಕ ಅದ್ವಿತಿ ಮತ್ತಯು ಅಶ್ವಿತಿ ಅಭಿಮಾನಿಗಳ ಮುಂದಿಟ್ಟಿದ್ದರಂತೆ. ಅದಕ್ಕೆ ನೆರವಿನ ಮಹಾಪೂರವೇ ಹರಿದು ಬಂದಿದೆ. ಅದನ್ನು ಅವಶ್ಯಕತೆ ಇರುವವರಿಗೆ ಮುಟ್ಟಿಸಲಾಗಿದೆ. ಹಾಗಂತ ಅವರು ಅಷ್ಟಕ್ಕೇ ಸುಮ್ಮನಾಗಿಲ್ಲ. ಮುಂದೆ ಇನ್ನೊಂದಷ್ಟು ನೆರವು ನೀಡಲೂ ಕಾರ್ಯ ಯೋಜನೆ ಸಿದ್ಧಪಡಿಸಿಕೊಂಡಿದ್ದಾರೆ. ಅದರನ್ವಯ ಸ್ಲಂ ಪ್ರದೇಶದ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ಪೌಂಶ್ಟಿಕಾಂಶಯುಕ್ತ ಆಹಾರದ ಕಿಟ್‍ಗಳನ್ನು ವಿತರಿಸುವ ಕಾರ್ಯಕ್ಕೂ ನೀಲನಕ್ಷೆ ಸಿದ್ಧಗೊಂಡಿದೆ. ಈ ಮೂಲಕ ಸದ್ದಿಲ್ಲದೆ ಕೊರೋನಾ ಕಾಲದಲ್ಲಿ ದಿಕ್ಕೆಟ್ಟವರಿಗೆ ನೆರವಾಗಿವ ಮಹತ್ಕಾರ್ಯವನ್ನೂ ಚಾಲನೆಯಲ್ಲಿಟ್ಟಿದ್ದಾರೆ.

    ಹೀಗೆ ಸಿನಿಮಾ, ಸಾಮಾಜಿಕ ಕಾರ್ಯಗಳ ಮೂಲಕ ಹೆಸರಾಗಿರುವ ಈ ಅವಳಿ ಸೋದರಿಯರು ಸಾಗಿ ಬಂದ ಹಾದಿಯೇ ಭಿನ್ನವಾಗಿದೆ. ಸಾಮಾನ್ಯವಾಗಿ ಯಾರೇ ನಟನ ನಟಿಯರ ಹಿನ್ನೆಲೆ ಕೆದಕಿದರೆ ಅದಕ್ಕಾಗಿ ಅದೆಷ್ಟೋ ವರ್ಷಗಳಿಂದ ಕಂಡ ಕನಸಿನ ಕಥೆಯಿರುತ್ತದೆ. ಆದರೆ ಅದ್ವಿತಿ ಮತ್ತು ಅಶ್ವಿತಿಗೆ ಅಂಥಾ ಯಾವ ಇರಾದೆಯೂ ಇರಲಿಲ್ಲ. ಮಂಗಳೂರು ಸೀಮೆಯವರಾಗಿ ಅಲ್ಲಿಯೇ ವ್ಯಾಸಂಗ ಪೂರೈಸಿದ್ದ ಇವರಿಬ್ಬರಿಗೂ ಪ್ರತಿಷ್ಠಿತ ಕಂಪೆನಿಯ ಹೆಚ್‍ಆರ್ ಕೆಲಸ ಸಿಕ್ಕಿತ್ತು. ಆ ಪ್ರಪಂಚದಲ್ಲಿ ಮುಳುಗಿದ್ದವರಿಗೆ ನಟಿಯರಾಗಬೇಕೆಂಬ ಯಾವ ಮೋಹವೂ ಇರಲಿಲ್ಲ. ಆ ಕ್ಷೇತ್ರದಲ್ಲಿಯೇ ಮಹತ್ತರವಾದುದನ್ನು ಸಾಧಿಸಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದವರಿಗೆ ಅನಿರೀಕ್ಷಿತವಾಗಿ ಒದಗಿಬಂದಿದ್ದು ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ ಚಿತ್ರದಲ್ಲಿ ನಟಿಸೋ ಆಫರ್!

    ಹಾಗೆ ರಾಕಿಂಗ್ ಸ್ಟಾರ್ ಯಶ್ ಚಿತ್ರದಲ್ಲಿ ಇವರಿಬ್ಬರೂ ಟ್ವಿನ್ಸ್ ಎಂಬ ಕಾರಣದಿಂದಲೇ ನಟಿಸೋ ಅವಕಾಶ ಒದಗಿ ಬಂದಿತ್ತು. ಆದರೆ ಆರಂಭದಲ್ಲಿ ಅದನ್ನು ನಿರಾಕರಿಸಿದದ್ದರಂತೆ. ಆ ಪಾತ್ರಕ್ಕೆ ಇವರಿಬ್ಬರೂ ಹೇಳಿ ಮಾಡಿಸಿದಂತಿದ್ದದ್ದರಿಂದ ಕಡೆಗೂ ನಿರ್ದೇಶಕರು ಒಪ್ಪಿಸಿದ್ದರಂತೆ. ನಂತರದ್ದೆಲ್ಲವೂ ಹೊಸಾ ಅನುಭವ. ರಾಧಿಕಾ ಸೇರಿದಂತೆ ಎಲ್ಲರೂ ಹೆಜ್ಜೆ ಹೆಜ್ಜೆಗೂ ಜೊತೆಗಿದ್ದು ಪೊರೆದಿದ್ದರಿಂದಾಗಿ ಅದ್ವಿತಿ ಮತ್ತು ಅಶ್ವಿತಿಗೆ ಸಿನಿಮಾ ನಟನೆಯ ಬಗ್ಗೆ ಮೆಲ್ಲಗೆ ಮೋಹ ಮೂಡಿಕೊಂಡಿತ್ತು. ಆ ಚಿತ್ರವೇ ಅವರಿಬ್ಬರಿಗೂ ವ್ಯಾಪಕ ಜನಪ್ರಿಯತೆಯನ್ನೂ ತಂದುಕೊಟ್ಟಿತ್ತು. ಆ ನಂತರದಲ್ಲಂತೂ ಪ್ರತೀ ನಟಿಯರೂ ಬಯಸುವಂಥಾ ಅಪರೂಪದ ಅವಕಾಶವೇ ಈ ಅವಳಿ ಅಕ್ಕ ತಂಗಿಯರ ಕೈ ಹಿಡಿದಿತ್ತು.

    ಪಿ.ಎಚ್ ವಿಶ್ವನಾಥ್ ನಿರ್ದೇಶನದ ಸುಳಿ ಎಂಬ ಕಲಾತ್ಮಕ ಚಿತ್ರದಲ್ಲಿ ಅದ್ವಿತಿ ಮತ್ತು ಅಶ್ವಿತಿ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರು. ಅದು ಅವರ ಪಾಲಿಗೆ ಎರಡನೇ ಚಿತ್ರ. ಹಿರಿಯ ನಟ ಶ್ರೀನಾಥ್ ಮಕ್ಕಳಾಗಿ ನಟಿಸಿದ್ದ ಅವರಿಗೆ ಇದೊಂದು ಸವಾಲು. ಯಾಕೆಂದರೆ ಅದು ಹೆಜ್ಜೆ ಹೆಜ್ಜೆಗೂ ಭಿನ್ನ ಅಭಿವ್ಯಕ್ತಿಯನ್ನು ಬಯಸುವಂಥಾ ಪಾತ್ರ. ಇದಕ್ಕಾಗಿ ನಿರ್ದೇಶಕರು ನೀನಾಸಂ ತಂಡದಿಂದ ಒಂದು ತಿಂಗಳ ಕಾಲ ನಟನಾ ತರಬೇತಿ ಕೊಡಿಸಿದ್ದರಂತೆ. ಅದಾದ ನಂತರ ಮಂಗಳೂರು ಶೈಲಿಯ ಕನ್ನಡದಾಚೆಗಿನ ಮತ್ತೊಂದು ಧಾಟಿಯ ಕನ್ನಡವನ್ನು ಅಭ್ಯಸಿಸಿ ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಅನ್ನೂ ಮಾಡಿದ್ದರಂತೆ. ಇದು ಇವರಿಬ್ಬರನ್ನೂ ಕೂಡಾ ಪಳಗಿದ ನಟಿಯರನ್ನಾಗಿ ರೂಪಾಂತರಿಸಿತ್ತು. ಆ ಸಿನಿಮಾಗಾಗಿ ಹಲವಾರು ಪ್ರಶಸ್ತಿಗೂ ಅರಸಿ ಬಂದಿದ್ದವು.

    ಅದಾದ ನಂತರ ಅದ್ವಿತಿ ದೊಡ್ಮನೆ ಹುಡುಗ ಸೇರಿದಂತೆ ಕೆಲ ಚಿತ್ರಗಳಲ್ಲಿ ಪಾತ್ರ ನಿರ್ವಹಿಸಿದ್ದರು. ಸೀರಿಯಲ್‍ನಲ್ಲಿಯೂ ಕಾಣಿಸಿಕೊಂಡಿದ್ದರು. ತದ ನಂತರ ಫ್ಯಾನ್ ಮತ್ತು ಕಾರ್ಮೋಡ ಸರಿದು ಎಂಬ ಚಿgತ್ರಗಳಲ್ಲಿಯೂ ಬಣ್ಣ ಹಚ್ಚಿದ್ದರು. ಸದ್ಯ 188 ಮತ್ತು ಧೀರ ಸಾಮ್ರಾಟ್ ಎಂಬ ಚಿತ್ರಗಳಲ್ಲಿ ಅದ್ವಿತಿ ನಟಿಸುತ್ತಿದ್ದಾರೆ. ಸೈಕೋ ಖ್ಯಾತಿಯ ನಿರ್ದೇಶಕರ ಎಸ್ ಎಂಬ ಚಿತ್ರದಲ್ಲಿಯೂ ಅವರದ್ದು ಮಹತ್ವದ ಪಾತ್ರ. ಇದೆಲ್ಲವೂ ಲಾಕ್‍ಡೌನ್ ಮುಗಿದಾದ ನಂತರವಷ್ಟೇ ಟೇಕಾಫ್ ಆಗಲಿದೆ. ಇನ್ನುಳಿದಂತೆ ಮಹಾನ್ ಹುತಾತ್ಮ ಎಂಬ ಶಾರ್ಟ್ ಮೂವಿ ಅದ್ವಿತಿ ಪಾಲಿಗೆ ರಾಷ್ಟ್ರಪ್ರಶಸ್ತಿಯ ಸವಿಯೂಡಿದೆ. ಮತ್ತೊಂದಷ್ಟು ಕಿರುಚಿತ್ರಗಳೂ ಅವರನ್ನು ನಟಿಯಾಗಿ ಪೊರೆದಿವೆ.

    ಇನ್ನುಳಿದಂತೆ ಅಶ್ವಿತಿ ಶೆಟ್ಟಿಯೂ ತಮ್ಮದೇ ರೀತಿಯಲ್ಲಿ ಸಕ್ರಿಯರಾಗಿದ್ದಾರೆ. ಸುಳಿಯ ನಂತರದಲ್ಲಿ ಏನ್ ಬರ್ತೀಯಾ ಎಂಬ ಶಾರ್ಟ್ ಮೂವಿಯಲ್ಲಿಯೂ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ. ಇದಕ್ಕಾಗಿ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ. ಚಂದನ್ ಶೆಟ್ಟಿಯ ಶೋಕಿಲಾಲ ಎಂಬ ಆಲ್ಬಂ ಸಾಂಗ್ ಕೂಡಾ ಅವರಿಗೆ ಮೈಲೇಜು ತಂದುಕೊಟ್ಟಿದೆ. ಜೈನ್ ಯುನಿವರ್ಸಿಟಿಯ ವಿಮೆನ್ ಅಚೀವರ್ಸ್ ಅವಾರ್ಡನ್ನೂ ಅಶ್ವಿತಿ ತಮ್ಮದಾಗಿಸಿಕೊಂಡಿದ್ದಾರೆ. ಅನಂತು ವರ್ಸಸ್ ನುಸ್ರತ್ ಚಿತ್ರದಲ್ಲಿನ ಪಾತ್ರಕ್ಕಾಗಿಯೂ ಅವರನ್ನು ಪ್ರಶಸ್ತಿ ಅರಸಿ ಬಂದಿದೆ. ಈ ಕ್ಷಣದವರೆಗೂ ಹೀಗೆ ಸಾಗಿ ಬಂದಿರುವ ಈ ಅವಳಿ ಸಹೋದರಿಯರ ಪ್ರಧಾನ ಆಸಕ್ತಿ ಡ್ಯಾನ್ಸ್. ಈಗಾಗಲೇ ಹಲವಾರು ಶೋಗಳನ್ನು ನೀಡಿರೋ ಅವರಿಗೆ ಆ ಕ್ಷೇತ್ರದಲ್ಲಿಯೂ ಸಾಧಿಸೋ ಹಂಬಲವಿದೆಯಾದರೂ ನಟನೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ.

    ಹೀಗೆ ಈವತ್ತಿಗೆ ಕನ್ನಡ ಸಿನಿಮಾ ರಂಗದಲ್ಲಿಮೆಲ್ಲಗೆ ನೆಲೆ ಕಂಡುಕೊಳ್ಳುತ್ತಿರೋ ಅದ್ವಿತಿ-ಅಶ್ವಿತಿ ಶೆಟ್ಟಿ ತಕ್ಷಣಕ್ಕೆ ಗುರುತಿಸಲು ತುಣಿಕಾಡುವಷ್ಟು ಹೋಲಿಕೆಗಳಿರೋ ಅಪರೂಪದ ಅವಳಿಗಳು. ಈ ಇಬ್ಬರ ನಡುವೆ ಯಾರು ದೊಡ್ಡವರೆಂಬ ಕುತೂಹಲವಿದ್ದರೆ, ಅದಕ್ಕೆ ಕೇವಲ ಐದಾರು ಸೆಕೆಂಡುಗಳ ಸೀನಿಯಾರಿಟಿಯಷ್ಟೇ ಗೋಚರಿಸುತ್ತದೆ. ಅದರನ್ವಯ ಹೇಳೋಡಾದರೆ ಅದ್ವಿತಿ ಆಶ್ವಿತಿಗಿಂತ ಐದು ಸೆಕೆಂಡ್ ದೊಡ್ಡವರು ಅನ್ನಲಡ್ಡಿಯಿಲ್ಲ!

    ಮಂಗಳೂರಿನಲ್ಲಿಯೇ ಹುಟ್ಟಿ ಬೆಳೆದ ಅದ್ವಿತಿ ಮತ್ತು ಆಶ್ವಿತಿ ಸದಾ ಸುತ್ತಲಿನವರಿಗೆ ನಡೆದಾಡುವ ಅಚ್ಚರಿಯಂತಿದ್ದವರು. ಹೇಳಿಕೊಳ್ಳುವಂಥಾ ಸಾಂಸ್ಕೃತಿಕ ಚಟುವಟಿಕೆಗಳ ಗುಂಗಿಲ್ಲದ ಇವರಿಬ್ಬರೂ ಅಚಾನಕ್ಕಾಗಿ ಶಾಲಾ ದಿನಗಳಲ್ಲಿ ಕೋಟಿ ಚೆನ್ನಯರಾಗಿ ಅಭಿನಯಿಸುವ ಸಂದರ್ಭ ಎದುರಾಗಿತ್ತು. ತುಳುನಾಡಿನ ಪರಂಪರೆಯ ಅಸ್ಮಿತೆಯಂತಿರೋ ಕೋಟಿ ಚೆನ್ನಯರಾಗಿ ಅಭಿನಯಿಸಿದ್ದೇ ತಮ್ಮ ಬದುಕಿನ ಕಲಾ ಯಾನಕ್ಕೆ ಶ್ರೀಕಾರ ಹಾಡಿದೆ ಎಂಬ ಸುಳಿವು ಈ ಸಹೋದರಿಯರಿಗೆ ಅಚಾನಕ್ಕಾದ ಅವಕಾಶ ಕೂಡಿ ಬರುವವರೆಗೂ ತಿಳಿದಿರಲಿಲ್ಲ. ತಾವು ಎತ್ತ ಹೊರಳಿಕೊಂಡರೂ ತಮ್ಮನ್ನು ತೆಕ್ಕೆಗೆಳೆದುಕೊಂಡಿರೋ ಕಲೆಗೆ ಈ ಸಹೋದರಿಯರೀಗ ಶರಣಾಗಿದ್ದಾರೆ. ನಟನೆಗೆ ಅವಕಾಶವಿರೋ ಪಾತ್ರಗಳಲ್ಲಿ ನಟಿಸುತ್ತಾ ಮತ್ತಷ್ಟು ಪ್ರೇಕ್ಷಕರಿಗೆ ಹತ್ತಿರಾಗಬೇಕೆಂಬ ಸಮಾನ ಆಸಕ್ತಿಯನ್ನೂ ಹೊಂದಿದ್ದಾರೆ.