Tag: Adipurusha

  • ಪದೇ ಪದೇ ಪ್ರಭಾಸ್ ವಿರುದ್ದ ಕಿಡಿಕಾರುತ್ತಿರುವ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ

    ಪದೇ ಪದೇ ಪ್ರಭಾಸ್ ವಿರುದ್ದ ಕಿಡಿಕಾರುತ್ತಿರುವ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ

    ದಿ ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಸುಖಾಸುಮ್ಮನೆ ಪ್ರಭಾಸ್ (Prabhas) ವಿರುದ್ಧ ಕುಟುಕುತ್ತಿದ್ದಾರೆ. ಸಲಾರ್ ಸಿನಿಮಾದ ಟೀಸರ್ ವೇಳೆ ‘ಪ್ರಭಾಸ್ ಒಬ್ಬ ನಟನೆ ಅಲ್ಲ’ ಎನ್ನುವ ಅರ್ಥದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಇದೀಗ ಮತ್ತೆ ಪ್ರಭಾಸ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

    ಆದಿಪುರುಷ (Adipurusha) ವಿಚಾರವಾಗಿ ಮಾತನಾಡಿರುವ ವಿವೇಕ್ ಅಗ್ನಿಹೋತ್ರಿ, ‘ಮಹಾಭಾರತ, ರಾಮಾಯಣದಂತಹ ಕಥೆಗಳನ್ನು ಸಿನಿಮಾ ಮಾಡುವಾಗ ಅವುಗಳಿಗೆ ಸ್ಟಾರ್ ನಟರ ಅವಶ್ಯಕತೆ ಇರುವುದಿಲ್ಲ. ಅವರೇ ಜನರಿಗೆ ಸ್ಟಾರ್ ಆಗಬೇಕು. ನಟರು ರಾತ್ರಿಯೆಲ್ಲ ಕುಡಿದು ಬೆಳಗ್ಗೆ ದೇವರು ಆಗು ಅಂದರೆ ಅದು ಹೇಗೆ ಸಾಧ್ಯ?’ ಎಂದು ಪರೋಕ್ಷವಾಗಿ ಪ್ರಭಾಸ್ ಅವರನ್ನು ಟೀಕಿಸಿದ್ದಾರೆ. ಇದನ್ನೂ ಓದಿ:ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಬಾಲಿಗೆ ಹಾರಿದ ಹರ್ಷಿಕಾ ಪೂಣಚ್ಚ

    ಪದೇ ಪದೇ ತಮ್ಮ ನೆಚ್ಚಿನ ನಟನ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಬರೆಯುತ್ತಿರುವ ವಿವೇಕ್ ಅಗ್ನಿಹೋತ್ರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಪ್ರಭಾಸ್ ಅಭಿಮಾನಿಗಳು. ವಿವೇಕ್ ಬಗ್ಗೆ ಸಾಕಷ್ಟು ಕೆಟ್ಟ ಕೆಟ್ಟ ಕಾಮೆಂಟ್ ಗಳನ್ನೂ ಬರೆದು ಹಾಕಿದ್ದಾರೆ. ಅಲ್ಲದೇ, ಎಂತಹ ಸಿನಿಮಾಗಳನ್ನು ವಿವೇಕ್ ಮಾಡಬೇಕು ಎನ್ನುವ ಸಲಹೆಯನ್ನೂ ಕೆಲವರು ಕೊಟ್ಟಿದ್ದಾರೆ.

     

    ಪ್ರಭಾಸ್ ನಟನೆಯ ಆದಿಪುರುಷ ಸಿನಿಮಾಗೆ ನೂರೆಂಟು ವಿಘ್ನಗಳು ಎದುರಾದವು. ಆದರೂ, ಬಾಕ್ಸ್ ಆಫೀಸಿನಲ್ಲಿ ಗೆಲ್ಲುವಲ್ಲಿ ಆದಿಪುರುಷ ವಿಫಲನಾದ. ಇದೀಗ ಪ್ರಭಾಸ್ ನಟನೆಯ ಸಲಾರ್ (Salar) ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಆ ಸಿನಿಮಾ ಬಗ್ಗೆ ನಿರೀಕ್ಷೆ ಇಮ್ಮಡಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ಷಮೆ ಕೇಳಿದರೂ ಆದಿಪುರುಷ ರೈಟರ್ ವಿರುದ್ದ ಟ್ರೋಲ್: ಸಂಭಾವನೆ ದಾನ ಮಾಡುವಂತೆ ಆಗ್ರಹ

    ಕ್ಷಮೆ ಕೇಳಿದರೂ ಆದಿಪುರುಷ ರೈಟರ್ ವಿರುದ್ದ ಟ್ರೋಲ್: ಸಂಭಾವನೆ ದಾನ ಮಾಡುವಂತೆ ಆಗ್ರಹ

    ದಿಪುರುಷ ಸಿನಿಮಾದ ಬರವಣಿಗೆ ವಿಚಾರದಲ್ಲಿ ತಮ್ಮಿಂದ ತಪ್ಪಾಗಿದೆ. ದಯವಿಟ್ಟು ಕ್ಷಮಿಸಿ ಎಂದು ಕೈ ಜೋಡಿಸಿ ಬೇಡಿಕೊಂಡಿದ್ದರು ಚಿತ್ರದ ಸಂಭಾಷಣೆಕಾರ ಮನೋಜ್ ಮುಂತಾಶಿರ್ ಅವರು ಕ್ಷಮೆ ಕೇಳಿದರೂ, ಟ್ರೋಲಿಗರು ಮಾತ್ರ ಕ್ಷಮಿಸಿದಂತೆ ಕಾಣುತ್ತಿಲ್ಲ. ಕ್ಷಮೆಗೆ ಅರ್ಹರಲ್ಲ ನೀವು, ಒಂದು ವೇಳೆ ಕ್ಷಮಿಸಬೇಕು ಎಂದರೆ ಚಿತ್ರಕ್ಕಾಗಿ ಪಡೆದುಕೊಂಡಿರುವ ಸಂಭಾವನೆಯನ್ನು ದಾನ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ.

    ಆದಿಪುರುಷ ಸಿನಿಮಾದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೋರಾಟ ಮಾಡಿದರೂ ಚಿತ್ರತಂಡವಾಗಲಿ ಅಥವಾ ಸಿನಿಮಾದ ಸಂಭಾಷಣೆಯನ್ನು ಬರೆದ ಮನೋಜ್ ಮುಂತಾಶಿರ್ (Manoj Muntashir) ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಸಿನಿಮಾ ಬ್ಯಾನ್ ಮಾಡುವ ಮಟ್ಟಕ್ಕೆ ಬಂದರೂ ಮತ್ತೆ ತಮ್ಮ ಮೊಂಡುತನವನ್ನೇ ಮುಂದುವರೆಸಿಕೊಂಡು ಹೋಗಿತ್ತು ಚಿತ್ರತಂಡ. ಕೋರ್ಟ್ ಕಟಕಟೆ ಏರಿದ ನಂತರ ಇದೀಗ ತಣ್ಣಗಾಗಿದೆ.

    ಈ ಹಿಂದೆ ಅಲಹಾಬಾದ್ (Allahabad) ಹೈಕೋರ್ಟ್ ಚಿತ್ರತಂಡಕ್ಕೆ ಛೀಮಾರಿ ಹಾಕಿತ್ತು. ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದ್ದರ ಬಗ್ಗೆ ತೀವ್ರ ರೀತಿಯಲ್ಲೇ ಅಸಮಾಧಾನ ಹೊರಹಾಕಿತ್ತು. ಕೋರ್ಟಿಗೆ ಖುದ್ದಾಗಿ ಹಾಜರಾಗಬೇಕು ಎಂದು ಮನೋಜ್ ಮುಂತಾಶಿರ್ ಸೇರಿದಂತೆ ನಿರ್ಮಾಪಕರಿಗೆ ಮತ್ತು ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತ್ತು. ಕೋರ್ಟ್ ಬಿಸಿ ತಾಗುತ್ತಿದ್ದಂತೆಯೇ ಬರಹಗಾರ ಮನೋಜ್ ಟ್ವೀಟ್ ಮಾಡಿದ್ದಾರೆ.

    ತಮ್ಮಿಂದ ಚಿತ್ರದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡಿರುವ ಮನೋಜ್, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆ ಕೇಳಿದ್ದಾರೆ. ಜನರಿಗೆ ನೋವು ಆಗಿದ್ದನ್ನು ಒಪ್ಪಿಕೊಳ್ಳುತ್ತೇನೆ. ನಾನು ಎರಡೂ ಕೈಗಳನ್ನು ಮುಗಿದು ಕ್ಷಮೆ ಕೇಳುತ್ತೇನೆ. ಪ್ರಭು ಬಜರಂಗ ಬಲಿ ನಮಗೆ ಮತ್ತಷ್ಟು ಶಕ್ತಿ ನೀಡಲಿ. ಪವಿತ್ರ ಸನಾತನ ಹಾಗೂ ನಮ್ಮ ರಾಷ್ಟ್ರ ಸೇವೆ ಮಾಡಲು ಮತ್ತಷ್ಟು ಶಕ್ತಿ ತುಂಬಲಿ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದರು.

    ಈ ಹಿಂದೆ ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ನಂತರ ಅಲಹಾಬಾದ್ (Allahabad) ಹೈಕೋರ್ಟ್ ಮೊನ್ನೆಯಷ್ಟೇ ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದೆ.

    ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿತ್ತು. ‘ಭಾರತೀಯರು ಸಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿತ್ತು.

    ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿತ್ತು.

     

    ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಹಿನ್ನೆಲೆಯಲ್ಲಿ ಬರಹಗಾರ ಮನೋಜ್ ಕ್ಷಮೆ ಕೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಆದಿಪುರುಷ’ ಚಿತ್ರದಲ್ಲಿ ತಪ್ಪಾಗಿದೆ ಕ್ಷಮಿಸಿ: ಕೈ ಮುಗಿದು ಕ್ಷಮೆ ಕೇಳಿದ ರೈಟರ್

    ‘ಆದಿಪುರುಷ’ ಚಿತ್ರದಲ್ಲಿ ತಪ್ಪಾಗಿದೆ ಕ್ಷಮಿಸಿ: ಕೈ ಮುಗಿದು ಕ್ಷಮೆ ಕೇಳಿದ ರೈಟರ್

    ದಿಪುರುಷ ಸಿನಿಮಾದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೋರಾಟ ಮಾಡಿದರೂ ಚಿತ್ರತಂಡವಾಗಲಿ ಅಥವಾ ಸಿನಿಮಾದ ಸಂಭಾಷಣೆಯನ್ನು ಬರೆದ ಮನೋಜ್ ಮುಂತಾಶಿರ್ (Manoj Muntashir) ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿರಲ್ಲ. ಸಿನಿಮಾ ಬ್ಯಾನ್ ಮಾಡುವ ಮಟ್ಟಕ್ಕೆ ಬಂದರೂ ಮತ್ತೆ ತಮ್ಮ ಮೊಂಡುತನವನ್ನೇ ಮುಂದುವರೆಸಿಕೊಂಡು ಹೋಗಿತ್ತು ಚಿತ್ರತಂಡ. ಕೋರ್ಟ್ ಕಟಕಟೆ ಏರಿದ ನಂತರ ಇದೀಗ ತಣ್ಣಗಾಗಿದೆ.

    ಈ ಹಿಂದೆ ಅಲಹಾಬಾದ್ (Allahabad) ಹೈಕೋರ್ಟ್ ಚಿತ್ರತಂಡಕ್ಕೆ ಛೀಮಾರಿ ಹಾಕಿತ್ತು. ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದ್ದರ ಬಗ್ಗೆ ತೀವ್ರ ರೀತಿಯಲ್ಲೇ ಅಸಮಾಧಾನ ಹೊರಹಾಕಿತ್ತು. ಕೋರ್ಟಿಗೆ ಖುದ್ದಾಗಿ ಹಾಜರಾಗಬೇಕು ಎಂದು ಮನೋಜ್ ಮುಂತಾಶಿರ್ ಸೇರಿದಂತೆ ನಿರ್ಮಾಪಕರಿಗೆ ಮತ್ತು ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತ್ತು. ಕೋರ್ಟ್ ಬಿಸಿ ತಾಗುತ್ತಿದ್ದಂತೆಯೇ ಬರಹಗಾರ ಮನೋಜ್ ಟ್ವೀಟ್ ಮಾಡಿದ್ದಾರೆ.

    ತಮ್ಮಿಂದ ಚಿತ್ರದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡಿರುವ ಮನೋಜ್, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆ ಕೇಳಿದ್ದಾರೆ. ಜನರಿಗೆ ನೋವು ಆಗಿದ್ದನ್ನು ಒಪ್ಪಿಕೊಳ್ಳುತ್ತೇನೆ. ನಾನು ಎರಡೂ ಕೈಗಳನ್ನು ಮುಗಿದು ಕ್ಷಮೆ ಕೇಳುತ್ತೇನೆ. ಪ್ರಭು ಬಜರಂಗ ಬಲಿ ನಮಗೆ ಮತ್ತಷ್ಟು ಶಕ್ತಿ ನೀಡಲಿ. ಪವಿತ್ರ ಸನಾತನ ಹಾಗೂ ನಮ್ಮ ರಾಷ್ಟ್ರ ಸೇವೆ ಮಾಡಲು ಮತ್ತಷ್ಟು ಶಕ್ತಿ ತುಂಬಲಿ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಪ್ಯಾರಿಸ್‌ನ ರೊಮ್ಯಾಂಟಿಕ್‌ ಫೋಟೋ ಹಂಚಿಕೊಂಡ ಅದಿತಿ ಪ್ರಭುದೇವ

    ಈ ಹಿಂದೆ ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ನಂತರ ಅಲಹಾಬಾದ್ (Allahabad) ಹೈಕೋರ್ಟ್ ಮೊನ್ನೆಯಷ್ಟೇ ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದೆ.

    ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿತ್ತು. ‘ಭಾರತೀಯರು ಸಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿತ್ತು.

    ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿತ್ತು.

     

    ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಹಿನ್ನೆಲೆಯಲ್ಲಿ ಬರಹಗಾರ ಮನೋಜ್ ಕ್ಷಮೆ ಕೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಆದಿಪುರುಷ’ ಡ್ಯಾಮೇಜ್ ಮರೆಸಲು ಅಸಲಿ ‘ರಾಮಾಯಣ’ ಮತ್ತೆ ಮರುಪ್ರಸಾರ?

    ‘ಆದಿಪುರುಷ’ ಡ್ಯಾಮೇಜ್ ಮರೆಸಲು ಅಸಲಿ ‘ರಾಮಾಯಣ’ ಮತ್ತೆ ಮರುಪ್ರಸಾರ?

    ಸಲಿ ರಾಮಾಯಣ (Ramayana) ಮತ್ತೆ ಮೆರವಣಿಗೆ ಹೊರಡಲಿದೆ. ಕೆಲವೇ ದಿನಗಳಲ್ಲಿ ರಮಾನಂದ್ ಸಾಗರ್ ನಿರ್ದೇಶನದ ರಾಮಾಯಣವನ್ನು ಜಗತ್ತಿನ ಭಾರತಿಯೆಲ್ಲರೂ ನೋಡಲಿದ್ದಾರೆ. ಮೂವತ್ತಾರು ವರ್ಷಗಳ ಹಿಂದೆ ನಿರ್ಮಾಣವಾದ ರಾಮಾಯಣ ಈಗಲೂ ಜನರ ಮನದಲ್ಲಿ ತಳಿರು ತೋರಣ.  ಇದೇ ಹೊತ್ತಲ್ಲಿ ಆದಿಪುರುಷ್ (Adipurush) ನಿರ್ಮಾಣವಾಗಿ ಎಲ್ಲರಿಂದ ಟೀಕೆಗೆ ಒಳಪಟ್ಟಿದೆ. ನಮ್ಮ ರಾಮ, ಸೀತೆ, ರಾವಣ ಹೇಗಿರಬೇಕು ಎನ್ನುವುದನ್ನು ಪ್ರಭಾಸ್‌ಗೆ ತೋರಿಸಲು ಮರು ಪ್ರಸಾರ ಆಗುತ್ತಿದೆ ಎನ್ನುವ ಮಾತಿದೆ.

    ರಾಮಾಯಣ. ಹೀಗಂದರೆ ಸಾಕು ಈಗಲೂ ಆ ದಿನಗಳು ನೆನಪಾಗುತ್ತವೆ. ಸುಮಾರು ಮೂವತ್ತಾರು ವರ್ಷಗಳ ಹಿಂದೆ ಭಾರತಿಯರ ಪಾಲಿಗೆ ದೈವಸ್ವರೂಪಿಯಂತೆ ಕಾಣಿಸಿದ ರಮಾನಂದ್ ಸಾಗರ್ ನಿರ್ದೇಶನದ ಆ ಮಹಾ ಧಾರಾವಾಹಿ (Serial). 1987ರಲ್ಲಿ ಅಂದಿನ ದೂರದರ್ಶನದಲ್ಲಿ ಪ್ರತಿ ಭಾನುವಾರ ಬೆಳಿಗ್ಗೆ ಪ್ರಸಾರವಾಗುತ್ತಿತ್ತು. ಆಗ ಈಗಿನಷ್ಟು ಟಿವಿ ಮತ್ತು ಚಾನೆಲ್‌ಗಳು ಇರಲಿಲ್ಲ. ಒಂದು ಮನೆಯಲ್ಲಿ ಟಿವಿ ಇದ್ದರೆ ಅವರು ಶ್ರೀಮಂತರು ಎಂದು ಭಾವಿಸುವ ದಿನಮಾನ ಅವು. ಕಪ್ಪು ಬಿಳುಪು ಹಾಗೂ ಕಲರ್ ಟಿವಿಗಳಲ್ಲಿ ರಾಮಾಯಣ ನೋಡಲು ಜನರು ಮುಗಿ ಬೀಳುತ್ತಿದ್ದರು. ಬರೀ ಕತೆ ನೋಡಲು ಅಲ್ಲ, ಅಲ್ಲಿಯ ಶ್ರೀರಾಮಚಂದ್ರ ಹಾಗೂ ಸೀತಾದೇವಿಯನ್ನು ಕಣ್ಣು ತುಂಬಿಕೊಂಡು ಕೈ ಮುಗಿಯುತ್ತಿದ್ದರು.

    ಭಾನುವಾರ ಬೆಳಿಗ್ಗೆ ಹತ್ತು ಗಂಟಗೆ ದೇಶದ ಬೀದಿ ಬೀದಿಗಳು ಭಣಗುಡುತ್ತಿದ್ದವು. ಮುಂಜಾನೆದ್ದು ಹೆಂಗಸರು ಮನೆ ಮಂದಿಗೆಲ್ಲ ತಿಂಡಿ ವ್ಯವಸ್ಥೆ ಮಾಡಿ, ಒಂಬತ್ತೂವರೆಗೆ ಟಿವಿ ಮುಂದೆ ಹಾಜರಾಗುತ್ತಿದ್ದರು. ಕೆಲವರು ಟಿವಿ ಪರದೆಗೆ ಪೂಜೆ ಮಾಡುತ್ತಿದ್ದರು. ಹೂವಿನ ಹಾರ ಹಾಕಿ, ದೀಪ ಬೆಳಗಿ, ಆರತಿ ಎತ್ತಿ ಶ್ರೀರಾಮ ಹಾಗೂ ಸೀತಾದೇವಿಯನ್ನು ಬರಮಾಡಿಕೊಳ್ಳುತ್ತಿದ್ದರು. ಅದು ಆ ರಾಮಾಯಣಕ್ಕೆ ಇದ್ದ ಗತ್ತು ಹಾಗೂ ಗೌರವ. ರಾಮಾಯಣ ಪ್ರಸಾರ ಆಗುತ್ತಿದ್ದ ಹೊತ್ತಿಗೆ ವಿದ್ಯುತ್ ಕೂಡ ತೆಗೆಯುತ್ತಿರಲಿಲ್ಲ. ಅಕಸ್ಮಾತ್ ತೆಗೆದರೆ ಮುಗಿಯಿತು. ಕೆಲವು ಕಡೆ ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ ಹಾಕಿ ಗಲಾಟೆ ಕೂಡ ನಡೆಯುತ್ತಿದ್ದವು. ರಾಮಾಯಣ ಅಷ್ಟೊಂದು ಮೋಡಿ ಮಾಡಿತ್ತು. ಇದನ್ನೂ ಓದಿ:ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು

    ರಮಾನಂದ್ ಸಾಗರ್ ಅದ್ಯಾವ ಗಳಿಗೆಯಲ್ಲಿ ರಾಮಾಯಣವನ್ನು ನಿರ್ದೇಶಿಸಲು ಮನಸು ಮಾಡಿದರೋ ಏನೊ? ಅವರು ಅಲ್ಲಿವರೆಗೆ ಮಾಡಿದ ಸಿನಿಮಾ ಕೆಲಸಗಳು ಮರೆತು ಹೋದವು. ರಾಮಾಯಣ ಮಾತ್ರ ಅವರಿಗೆ ಕೊನೇವರೆಗೂ ದೇಶವ್ಯಾಪಿ ಮೆರವಣಿಗೆ ಮಾಡಿದವು. ಅದಕ್ಕೆ ಕಾರಣ ಅವರು ಕತೆಯನ್ನು ಹೇಳಿದ ರೀತಿ ಮಾತ್ರ ಅಲ್ಲ, ಪ್ರತಿಯೊಂದು ಪಾತ್ರಕ್ಕೂ ಆಯ್ಕೆ ಮಾಡಿಕೊಂಡಿದ್ದ ಕಲಾವಿದರೂ ಕಾರಣ. ರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಚಿಕ್ಲಿಯಾ, ರಾವಣನಾಗಿ ಅರವಿಂದ್ ತ್ರಿವೇದಿ ಹಾಗೂ ಹನುಮಂತನಾಗಿ ಧಾರಾಸಿಂಗ್ ಜೀವ ತುಂಬಿದ್ದರು. ಪೌರಾಣಿಕ ಪಾತ್ರಗಳು ಹೀಗೆ ಇದ್ದಿರಬೇಕೆನ್ನುವಷ್ಟು ಭಕ್ತಿ ಮೂಡಿಸಿದ್ದವು.

    ಮೂವತ್ತಾರು ವರ್ಷ. ಆಗ ಈಗಿನಷ್ಟು ತಂತ್ರಜ್ಞಾನ ಬೆಳೆದಿರಲಿಲ್ಲ. ಗ್ರೀನ್ ಮ್ಯಾಟ್, ವಿಎಫ್‌ಎಕ್ಸ್ ಇತ್ಯಾದಿ ಹೆಸರುಗಳೇ ಗೊತ್ತಿರಲಿಲ್ಲ. ಎಲ್ಲವನ್ನೂ ಕ್ಯಾಮೆರಾ ಟೆಕ್ನಿಕ್‌ನಿಂದ ಮಾಡಬೇಕಿತ್ತು. ಅಂಥ ಕ್ಯಾಮೆರಾಮನ್ ಕೂಡ ಇದ್ದರು. ರಾಮಾಯಣದಲ್ಲಿ ಎಂತೆಂಥ ಪವಾಡ ಸದೃಶ್ಯ ದೃಶ್ಯಗಳು ಬರುತ್ತವೆಂದು ಎಲ್ಲರಿಗೂ ಗೊತ್ತು. ಯುದ್ಧ, ಕಲ್ಲಿನಿಂದ ಸೇತುವೆ ಕಟ್ಟುವುದು, ಹನುಮಂತ ಬೆಟ್ಟವನ್ನು ಹೊತ್ತುಕೊಳ್ಳುವುದು, ಲಂಕಾ ದಹನ, ವಾನರ ಸೇನೆಯ ಕದನ ಪ್ರತಿಯೊಂದಕ್ಕೂ ಕ್ಯಾಮೆರಾ ಟೆಕ್ನಿಕ್‌ನಿಂದ ಮಾಡಿದ್ದರು ರಮಾನಂದ್ ಸಾಗರ್.

    ಇಷ್ಟು ವರ್ಷಗಳ ನಂತರ ಅದೇ ಬೆಸ್ಟ್ ಎನ್ನುವಂತಿದೆ. ಹೀಗಾಗಿಯೇ ರಾಮಾಯಣ ಮರು ಪ್ರಸಾರ ಆಗುತ್ತಿದೆ. ಶಮೋರೋ ಚಾನೆಲ್‌ನಲ್ಲಿ ಜುಲೈ 3ರಿಂದ ದಿಬ್ಬಣ ಹೊರಡಲಿದೆ. ಏಕಾಏಕಿ ಈಗ್ಯಾಕೆ ರಾಮಾಯಣ ಮರು ಪ್ರಸಾರ ಮಾಡುತ್ತಿದ್ದಾರೆ? ಏನಿದರ ಹಿಂದಿನ ಉದ್ದೇಶ? ಪ್ರಶ್ನೆ ಏಳುವುದು ಸಹಜ. ಉತ್ತರ ಇಲ್ಲಿದೆ. ಇತ್ತೀಚೆಗೆ ತೆರೆ ಕಂಡ ಪ್ರಭಾಸ್ (Prabhas) ಅಭಿನಯದ ಆದಿಪುರುಷ್ ಯಾವ ಪರಿ ಉಗಿಸಿಕೊಂಡಿತೆಂದು ಎಲ್ಲರಿಗೂ ಗೊತ್ತು. ಐದು ನೂರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಆದಿಪುರುಷ್ ಇಡೀ ರಾಮಾಯಣದ ಕತೆ ಹಾಗೂ ಪಾತ್ರಗಳನ್ನು ವಿರೂಪಗೊಳಿಸಿತು. ರಾಮನ ಸೆಟ್ ಪ್ರಾಪರ್ಟಿಯಂಥ ಮುಖ, ರಾವಣನ ವಿಕಾರ ಹೇರ್ ಕಟ್, ಸಂಭಾಷಣೆ, ಹಾಲಿವುಡ್ ಹನುಮಂತ ಎಲ್ಲವೂ ನೆಗಪಾಟಲಿಗೆ ಈಡಾದವು. ಅದಕ್ಕೆ ಉತ್ತರವಾಗಿ ರಮಾನಂದ್ ಸಾಗರ್ (Ramanand Sagar) ರಾಮಾಯಣ ಪ್ರಸಾರ ಆಗುತ್ತಿದೆ ಎಂದು ಹೇಳಲಾಗುತ್ತಿದೆ.

    ಐದು ನೂರು ಕೋಟಿ ಕಾಸು ಸುರಿದರೂ ಆದಿಪುರುಷ್ ಬಂಡವಾಳವನ್ನೂ ಬಾಚಿಕೊಳ್ಳಲಿಲ್ಲ. ಪ್ರಭಾಸ್‌ಗೆ ಹೆಚ್ಚು ಕಮ್ಮಿ ನೂರರಿಂದ ನೂರೈವತ್ತು ಕೋಟಿ ಗಂಟು ಮಡಗಿದ್ದಾರೆ. ಆದರೆ ಅವರ ಕಾಲ್‌ಶೀಟ್ ಕೇವಲ ಅರವತ್ತು ದಿನ. ಅಂದರೆ ಗ್ರೀನ್ ಮ್ಯಾಟ್ ಹಾಗೂ ಡ್ಯೂಪ್ ಬಳಸಿ ರಾಮನ ಪಾತ್ರದ ದೃಶ್ಯಗಳನ್ನು ಶೂಟ್ ಮಾಡಿದ್ದಾರೆ ನಿರ್ದೇಶಕ ಓಂರೌತ್. ಕಾರ್ಟೂನ್‌ನಂತಿರುವ ಗ್ರಾಫಿಕ್ಸ್, ಮಾಸ್ ಮಸಾಲಾ ಡೈಲಾಗ್ಸ್ ಎಲ್ಲಕ್ಕಿಂತ ಹೆಚ್ಚಾಗಿ ಇಡೀ ಚಿತ್ರಕತೆ ಆವರಿಸಿಕೊಳ್ಳಬೇಕಿದ್ದ ಭಕ್ತಿಭಾವವೇ ಮಾಯ. ಇದೆಲ್ಲ ಸೇರಿ ಆದಿಪುರುಷ್‌ಗೆ ಇಡೀ ವಿಶ್ವವೇ ಮಹಾ ಮಂಗಳಾರತಿ ಮಾಡುವಂತಾಯಿತು. ನೆನಪಿರಲಿ, ಆ ರಾಮಾಯಣ ಧಾರಾವಾಹಿ ಒಂಬತ್ತು ಲಕ್ಷದಲ್ಲಿ ನಿರ್ಮಾಣವಾಗಿತ್ತು.

    ತೀರಾ ಕಮ್ಮಿ ಬಜೆಟ್‌ನಲ್ಲಿ ನಿರ್ಮಾಣವಾದ ಆ ರಾಮಾಯಣ ದೂರದರ್ಶನಕ್ಕೆ ನಲವತ್ತು ಲಕ್ಷ ಲಾಭ ತಂದು ಕೊಟ್ಟಿತು. ಸುಮಾರು ಅರವತ್ತು ಕೋಟಿ ಜನರು ಇದನ್ನು ನೋಡಿದ್ದರು. ರಾಮನಾಗಿದ್ದ ಅರುಣ್ ಗೋವಿಲ್ ಹಾಗೂ ಸೀತೆ ಪಾತ್ರದ ದೀಪಿಕಾ ಚಿಕ್ಲಿಯಾ ನಿಜಕ್ಕೂ ಅಭಿನವ ರಾಮ-ಸೀತೆಯಾಗಿ ಭಾರತಿಯರ ಮುಂದೆ ನಿಂತರು. ಅರುಣ್ ಮತ್ತು ದೀಪಿಕಾ ಎಲ್ಲೇ ಹೋದರೂ ಜನರು ಅವರ ಕಾಲು ಮುಟ್ಟಿ ನಮಸ್ಕಾರ ಮಾಡುತ್ತಿದ್ದರು. ಕೊರೋನಾ ನಂತರ ಅರುಣ್ ಗೋವಿಲ್ ವಿಮಾನ ನಿಲ್ದಾಣದಲ್ಲಿ  ನಿಂತಾಗ ವಯಸ್ಸಾದ ಮಹಿಳೆ ‘ನೀನೇ ರಾಮ’ ಎಂದು ಕಾಲು ಮುಗಿದಿದ್ದು ಯಾರೂ ಮರೆತಿಲ್ಲ. ಅದು ರಾಮಾಯಣದ ನಿಜವಾದ ಗೆಲುವು, ಸಾಧನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಆದಿಪುರುಷ’ ಸಿನಿಮಾ ತಂಡಕ್ಕೆ ಬಿಸಿ ಮುಟ್ಟಿಸಿದ ಅಲಹಾಬಾದ್ ಹೈಕೋರ್ಟ್

    ‘ಆದಿಪುರುಷ’ ಸಿನಿಮಾ ತಂಡಕ್ಕೆ ಬಿಸಿ ಮುಟ್ಟಿಸಿದ ಅಲಹಾಬಾದ್ ಹೈಕೋರ್ಟ್

    ಪ್ರಭಾಸ್ (Prabhas) ನಟನೆಯ ಆದಿಪುರುಷ ಸಿನಿಮಾ ರಿಲೀಸ್ ಆಗಿ ವಾರದ ನಂತರ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದ್ದರೂ, ಅದರ ಕುರಿತಾಗಿ ನಡೆಯುತ್ತಿರುವ ಚರ್ಚೆ ಮಾತ್ರ ನಿಂತಿಲ್ಲ. ಹಲವು ಕಡೆ ಸಿನಿಮಾದ ಬಗ್ಗೆ ದೂರು ನೀಡಲಾಗಿದೆ. ದೇಶದ ಹೈಕೋರ್ಟ್ ಗಳು ಚಿತ್ರದ ಚಿಂತನೆಯನ್ನು ಗಂಭೀರವಾಗಿ ತಗೆದುಕೊಂಡಿವೆ. ಹೀಗಾಗಿ ಚಿತ್ರ ತಂಡಕ್ಕೆ ಸಂಕಷ್ಟ ಎದುರಾಗುತ್ತಲೇ ಇದೆ.

    ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ಇದೀಗ ಅಲಹಾಬಾದ್ (Allahabad) ಹೈಕೋರ್ಟ್ ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದೆ.

    ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿದೆ. ‘ಭಾರತೀಯರು ಸಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿದೆ. ಇದನ್ನೂ ಓದಿ: ಪಡ್ಡೆಹುಡುಗರ ಕಣ್ಣು ಕುಕ್ಕುವಂತೆ ಹಾಟ್‌ ಆಗಿ ಕಾಣಿಸಿಕೊಂಡ ‘ಕೆಜಿಎಫ್‌’ ನಟಿ

    ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದೆ.

     

    ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿದೆ. ಈ ಎಲ್ಲ ಪ್ರಶ್ನೆಗಳಿಗೆ ಒಂದು ವಾರದಲ್ಲಿ ಉತ್ತರಿಸುವಂತೆ ಕೋಟ್‍ ನಿರ್ದೇಶಿಸಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಮತ್ತೆ ಟಿಕೆಟ್ ದರ ಇಳಿಸಿದ ಆದಿಪುರುಷ: ಹಾಕಿದ ಬಂಡವಾಳ ವಾಪಸ್ಸಿಗೆ ಕಸರತ್ತು

    ಮತ್ತೆ ಟಿಕೆಟ್ ದರ ಇಳಿಸಿದ ಆದಿಪುರುಷ: ಹಾಕಿದ ಬಂಡವಾಳ ವಾಪಸ್ಸಿಗೆ ಕಸರತ್ತು

    ಪ್ರಭಾಸ್ ನಟನೆಯ ಆದಿಪುರುಷ ಸಿನಿಮಾ ಟೀಮ್ ಮತ್ತೆ ಟಿಕೆಟ್ (Ticket) ದರವನ್ನು ಇಳಿಸಿದೆ. ಹಾಕಿದ ಬಂಡವಾಳವನ್ನು ವಾಪಸ್ಸು ಪಡೆಯಲು ಏನೆಲ್ಲ ಹರಸಾಹಸ ಮಾಡುತ್ತಿದೆ. 500 ಕೋಟಿ ರೂಪಾಯಿಗೂ ಅಧಿಕ ಬಂಡವಾಳ ಹೂಡಿ ಮಾಡಿರುವ ಸಿನಿಮಾಗೆ ಈವರೆಗೂ ಬಂದ ಕಲೆಕ್ಷನ್ ಕೇವಲ 450 ಕೋಟಿ ರೂಪಾಯಿ. ಇದರಲ್ಲಿ ನಿರ್ಮಾಪಕರಿಗೆ ಸೇರೋದು ಅರ್ಧಕರ್ಧ. ಹಾಗಾಗಿ ಹಾಕಿದ ಬಂಡವಾಳ ವಾಪಸ್ಸು ಪಡೆಯುವುದಕ್ಕೆ ಏನೆಲ್ಲ ತಾಲೀಮು ಮಾಡಬೇಕಾಗಿದೆ.

    ದಿನದಿಂದ ದಿನಕ್ಕೆ ಕಲೆಕ್ಷನ್‌ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಿಕೆಟ್ ದರವನ್ನು ಕಡಿಮೆ ಮಾಡಿದೆ ಚಿತ್ರತಂಡ. 112 ರೂಪಾಯಿ ಇದೀಗ ನೀವು ಆದಿಪುರುಷ ಸಿನಿಮಾವನ್ನು ನೋಡಬಹುದಾಗಿದೆ. ಅಲ್ಲದೇ, ವಿವಾದಿತ ಸಂಭಾಷಣೆ ಸೇರಿದಂತೆ ಹಲವು ಬದಲಾವಣೆಗಳನ್ನು ಚಿತ್ರತಂಡ ಮಾಡಿದೆ. ಈ ಮಾಹಿತಿಯನ್ನು ಸ್ವತಃ ಚಿತ್ರತಂಡವೇ ಘೋಷಣೆ ಮಾಡಿದೆ. ಇದನ್ನೂ ಓದಿ: ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್

    ಆದಿಪುರುಷ (Adipurush) ಸಿನಿಮಾಗೆ ನಿರೀಕ್ಷೆ ಫಲಿತಾಂಶ ಬಾರದೇ ಇದ್ದರೂ, ಪ್ರಭಾಸ್ ಅವರ ಡಿಮ್ಯಾಂಡ್‌ಗೆ ಯಾವುದೇ ಧಕ್ಕೆ ಬಂದಿಲ್ಲ ಎಂದೇ ಹೇಳಬಹುದು. ಸದ್ಯ ಅವರ ಕೈಯಲ್ಲಿ ಎರಡು ಚಿತ್ರಗಳು ಇದ್ದರೂ, ಮತ್ತೊಂದು ಚಿತ್ರಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾವನ್ನು ಕನ್ನಡದ ಸಂಸ್ಥೆಯೇ ನಿರ್ಮಾಣ ಮಾಡಲಿದೆ ಎನ್ನುವುದು ವಿಶೇಷ.

    ಈಗಾಗಲೇ ಪ್ರಭಾಸ್ (Prabhas) ನಟನೆಯ ಸಲಾರ್ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಿಕೆ ಮಾಡಿದೆ. ಕನ್ನಡದ ನಿರ್ದೇಶಕರೇ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಲಾರ್ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದ ನಂತರ ಪ್ರಭಾಸ್ ಪ್ರಾಜೆಕ್ಟ್ ಕೆ ಚಿತ್ರದಲ್ಲೂ ತೊಡಗಿಕೊಂಡಿದ್ದಾರೆ. ಈ ನಡುವೆ ಮತ್ತೊಂದು ಚಿತ್ರಕ್ಕೆ ಗ್ನಿನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

    ಕೆಡಿ ಸೇರಿದಂತೆ ಹಲವು ಸಿನಿಮಾಗಳನ್ನು ಕನ್ನಡದಲ್ಲಿ ಮಾಡುತ್ತಿರುವ ಕೆವಿಎನ್ ಪ್ರೊಡಕ್ಷನ್ (KVN Production) ಸಂಸ್ಥೆಯು ಪ್ರಭಾಸ್ ಅವರ ಹೊಸ ಸಿನಿಮಾವನ್ನು ನಿರ್ಮಾಣ ಮಾಡಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಪ್ರಭಾಸ್ ಜೊತೆ ಸಂಸ್ಥೆಯ ಮುಖ್ಯಸ್ಥರು ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಪ್ರಭಾಸ್ ಕೂಡ ಒಪ್ಪಿಕೊಂಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

     

    ಕೇವಲ ಪ್ರಭಾಸ್ ಒಪ್ಪಿದ್ದಷ್ಟೇ ಅಲ್ಲ, ಈ ಸಿನಿಮಾದ ನಿರ್ದೇಶಕರು ಯಾರು ಎನ್ನುವ ಮಾಹಿತಿಯೂ ಸೋರಿಕೆಯಾಗಿದೆ. ಗಬ್ಬರ್ ಸಿಂಗ್ ಸೇರಿದಂತೆ ಅನೇಕ ಹಿಟ್ ಚಿತ್ರಗಳನ್ನು ನೀಡಿರುವ ಹರೀಶ್ ಶಂಕರ್ (Harish Shankar) ಈ ಸಿನಿಮಾಗೆ ನಿರ್ದೇಶಕರು ಎಂದು ಹೇಳಲಾಗುತ್ತಿದೆ. ಈ ಎಲ್ಲ ವಿಷಯಗಳು ಹರಿದಾಡುತ್ತಿದ್ದರೂ, ಯಾರೂ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ.

     

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಪ್ರಭಾಸ್ ಸಿನಿಮಾಗಳ ಸೋಲಿನ ಹಿಂದಿರುವ ಲೆಕ್ಕಾಚಾರ ಏನು?

    ಪ್ರಭಾಸ್ ಸಿನಿಮಾಗಳ ಸೋಲಿನ ಹಿಂದಿರುವ ಲೆಕ್ಕಾಚಾರ ಏನು?

    ಕೋಟಿ ಕೋಟಿ ಕಾಸು ಕಂಡರೆ ಸಾಕು ಎಂಥ ಕತೆಗೂ ಪ್ರಭಾಸ್ (Prabhas) ಎದ್ದು ನಿಲ್ಲುತ್ತಾರಾ? ಹಣದ ಮುಂದೆ ಬೇರೇನೂ ನೋಡಲ್ಲವಾ ಡಾರ್ಲಿಂಗ್? ಕಮ್ಮಿ ಡೇಟ್ಸು, ಕೋಟಿ ಡ್ರೈ ಫ್ರೂಟ್ಸು ಸಿಕ್ಕಿದ್ದಕ್ಕೇ ಆದಿಪುರುಷ್ ಒಪ್ಪಿಕೊಂಡು ಇಂದು ಆಕಾಶ ನೋಡುತ್ತಿದ್ದಾರಾ? ಪ್ರಭಾಸ್ ಕಾಸು ಕರಿಮಣಿ ಸ್ಟೋರಿ ಇಲ್ಲಿದೆ.

    ಆದಿಪುರುಷ (Adipurush) ಸಿನಿಮಾ ಕೇವಲ ಏಳು ದಿನಕ್ಕೆ ಎರಡು ನೂರಾ ಐವತ್ತು ಕೋಟಿ ಆಸುಪಾಸು ಗಳಿಸಿ ಗುರು ಗೋವಿಂದನ ಪಾದ ಸೇರಿದೆ. ಬೇಕಿತ್ತಾ ಇದೆಲ್ಲ ಪುಣ್ಯಾತ್ಮ ಎನ್ನುತ್ತಿದ್ದಾರೆ ಸಿನಿಮಾ ಪಂಡಿತರು. ಇನ್ನೊಂದು ಕಡೆ ಮುಖ ಸಪ್ಪಗೆ ಮಾಡಿಕೊಂಡಿರುವ ಫ್ಯಾನ್ಸ್ ಸೈಲೆಂಟ್ ಮೋಡ್‌ನಲ್ಲಿ ಮತ್ತಿನಲ್ಲಿದ್ದಾರೆ. ನಿರ್ದೇಶಕ ಓಂ ರಾವುತ್ ಕಾಣೆಯಾದವರ ಪಟ್ಟಿಗೆ ಸೇರಿಕೊಂಡಿದ್ದಾರೆ. ಇದಕ್ಕೆಲ್ಲ ಕಾರಣ ಪ್ರಭಾಸ್‌ಗಿರುವ ಹಣದ ಮೋಹ ಎನ್ನುತ್ತಿದೆ ಟಾಲಿವುಡ್. ಅರವತ್ತು ದಿನ ಕಾಲ್‌ಶೀಟ್‌ಗೆ ನೂರೈವತ್ತು ಕೋಟಿ ಸುಮ್ಮನೆ ಮಾತಾ? ಇದನ್ನೂ ಓದಿ:ನಾದಬ್ರಹ್ಮ ಹಂಸಲೇಖಗೆ ಪದ್ಮಶ್ರೀ ಕೊಡಿ : ನಿರ್ದೇಶಕ ಶಶಾಂಕ್ ಮನವಿ

    ಬಾಹುಬಲಿ ಸಿನಿಮಾಗಾಗಿ ಐದು ವರ್ಷ ಮುಡುಪಾಗಿಟ್ಟಿದ್ದರು ಪ್ರಭಾಸ್. ಯಾವಾಗ ಅದರಿಂದ ಪ್ಯಾನ್ ಇಂಡಿಯಾ ಪಟ್ಟ ದಕ್ಕಿತೋ ಮೆದುಳಿನಲ್ಲಿ ಮದರಂಗಿ ಕಿಸಿಯಿತು.  ನೂರೈವತ್ತು ಕೋಟಿ ಕೊಟ್ಟರೆ ಸಾಕು. ಕತೆ, ನಿರ್ದೇಶಕ, ನಿರ್ಮಾಪಕ ಯಾವುದನ್ನೂ ನೋಡಲ್ಲ. ಕಾಲ್‌ಶೀಟ್ ಕೊಡೋದು, ಬ್ಯಾಂಕ್‌ ಬ್ಯಾಲೆನ್ಸ್ ದಿಂಬಿನ ಕೆಳಗಿಟ್ಟು ಮಲಗೋದು. ಇದನ್ನು ಮಾಡಿದ್ದಕ್ಕೆ ಆದಿಪುರುಷ ಒಪ್ಪಿಕೊಂಡರು. ಈಗ ಶ್ರೀರಾಮನೂ ನಡಿ ಅತ್ಲಾಗೆ ಎಂದ.

    ಆದಿ ಪುರುಷ ಸಿನಿಮಾದ ಬಗ್ಗೆ ಪ್ರಭಾಸ್ ಅಭಿಮಾನಿಗಳು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಷ್ಟೇ ಅಲ್ಲ, ವಿಶ್ವದಾದ್ಯಂತ ಸಖತ್ ಗಳಿಕೆ ಮಾಡಲಿದೆ ಎಂದು ಹೇಳಲಾಗಿತ್ತು. ವಿವಾದ, ಬೈಕಾಟ್ ನಡುವೆಯೇ ಮೊದಲೆರಡು ದಿನ ಚೆನ್ನಾಗಿಯೇ ಕಲೆಕ್ಷನ್ (Collection) ಮಾಡಿತು. ನಂತರ ಮಕಾಡೆ ಮಲಗಿಕೊಂಡಿದೆ. ಈ ಕಾರಣಕ್ಕಾಗಿ ಸಹಜವಾಗಿಯೇ ಪ್ರಭಾಸ್ ಅಭಿಮಾನಿಗಳಿಗೆ ಬೇಸರವಾಗಿದೆ.

  • 6 ದಿನಕ್ಕೆ ಆದಿಪುರುಷ ಗಳಿಸಿದ್ದು 419 ಕೋಟಿ ರೂ.: ಚಿತ್ರತಂಡವೇ ಅಧಿಕೃತ ಮಾಹಿತಿ

    6 ದಿನಕ್ಕೆ ಆದಿಪುರುಷ ಗಳಿಸಿದ್ದು 419 ಕೋಟಿ ರೂ.: ಚಿತ್ರತಂಡವೇ ಅಧಿಕೃತ ಮಾಹಿತಿ

    ಭಾರೀ ವಿವಾದ (Controversy) ಮತ್ತು ಬ್ಯಾನ್ ನಡುವೆಯೂ ಆದಿ ಪುರುಷ (Adipurush) ಸಿನಿಮಾ 6 ದಿನದಲ್ಲಿ ಬರೋಬ್ಬರಿ 419 ಕೋಟಿ ರೂಪಾಯಿ ಗಳಿಕೆ (Collection) ಮಾಡಿದೆ ಎಂದು ಸ್ವತಃ ಚಿತ್ರತಂಡವೇ ಘೋಷಣೆ ಮಾಡಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಅದು ಪೋಸ್ಟರ್ ವೊಂದನ್ನು ಹಂಚಿಕೊಂಡಿದೆ. ವಿವಾದ, ಬ್ಯಾನ್ ಏನೇ ಇದ್ದರೂ ಉತ್ತಮ ಗಳಿಕೆಯನ್ನೇ ಸಿನಿಮಾ ತಂದುಕೊಟ್ಟಿದೆ.

    ಮೊದಲ ದಿನವೇ ಸಿನಿಮಾ 140 ಕೋಟಿ ರೂಪಾಯಿ ಆದಾಯ ತಂದುಕೊಟ್ಟಿದ್ದರೆ, 2ನೇ ದಿನ 240 ಕೋಟಿ, 3ನೇ ದಿನ 34 ಕೋಟಿ, 4ನೇ ದಿನ 35 ಕೋಟಿ ರೂಪಾಯಿ, 5ನೇ ದಿನ 20 ಕೋಟಿ ರೂಪಾಯಿ ಹಾಗೂ 6ನೇ ದಿನ 15 ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸಿನಲ್ಲಿ ಆದಿ ಪುರುಷ ಕಮಾಯಿ ಮಾಡಿದೆ ಎಂದು ಚಿತ್ರತಂಡ ತಿಳಿಸಿದೆ. ಇದನ್ನೂ ಓದಿ:‘ಕಾಂತಾರ’ 2ಗಾಗಿ ಕುದುರೆ ಸವಾರಿ, ಕಳರಿ ಪಯಟ್ಟು ಕಲಿಕೆಯಲ್ಲಿ ರಿಷಬ್ ಶೆಟ್ಟಿ ಬ್ಯುಸಿ

    ಈ ನಡುವೆ ಇಂದಿನಿಂದ ಟಿಕೆಟ್ ದರವನ್ನೂ ಚಿತ್ರತಂಡ ಇಳಿಸಿದೆ. ತ್ರಿಡಿ ಸಿನಿಮಾವನ್ನು ಕೇವಲ 150 ರೂಪಾಯಿಯಲ್ಲಿ ನೋಡಬಹುದು ಎಂದು ಘೋಷಣೆ ಮಾಡಿದೆ. ಮೂರನೇ ದಿನದಿಂದ ಬಾಕ್ಸ್ ಆಫೀಸ್  (Box Office) ಗಳಿಕೆಯಲ್ಲಿ ಭಾರೀ ಇಳಿಮುಖ ಕಂಡಿದ್ದರಿಂದ ಟಿಕೆಟ್ ದರವನ್ನು ಇಳಿಸುವ ಮೂಲಕ ಮತ್ತೆ ಚೇತರಿಕೆ ಕಾಣುವ ಕನಸು ಕಂಡಿದೆ.

    ಈ ಸಿನಿಮಾವನ್ನು ಬ್ಯಾನ್ (Ban) ಮಾಡಬೇಕು ಎಂದು ವಿಷ್ಣು ಗುಪ್ತಾ ಎನ್ನುವವರು ದೆಹಲಿ ಹೈಕೋರ್ಟ್ ಗೂ ಮೊರೆ ಹೋಗಿದ್ದಾರೆ. ನಿನ್ನೆ ಅರ್ಜಿಯನ್ನು ಕೈಗೆತ್ತಿಕೊಂಡಿರುವ ನ್ಯಾಯಾಧೀಶರು ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿದ್ದಾರೆ. ಸಿನಿಮಾ ರಿಲೀಸ್ ಆಗಿರುವುದರಿಂದ ಆತುರದ ವಿಚಾರಣೆ ಮಾಡುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

  • ಆದಿ ಪುರುಷನಿಗೆ ನೂರೆಂಟು ವಿಘ್ನ: ಪ್ರಶಾಂತ್ ನೀಲ್ ಮೇಲೆ ಹೆಚ್ಚಿದ ಒತ್ತಡ

    ಆದಿ ಪುರುಷನಿಗೆ ನೂರೆಂಟು ವಿಘ್ನ: ಪ್ರಶಾಂತ್ ನೀಲ್ ಮೇಲೆ ಹೆಚ್ಚಿದ ಒತ್ತಡ

    ಪ್ರಭಾಸ್ ಫ್ಯಾನ್ಸ್ ಕೆಂಡ ಕೆಂಡವಾಗಿದ್ದಾರೆ. ಎರಡು ಸೋಲು ನೋಡಿದ್ದರು. ಆದಿಪುರುಷ (Adipurush) ಹ್ಯಾಟ್ರಿಕ್ ಫೇಲ್ಯೂವರ್. ಭಕ್ತಗಣ ಇನ್ನೇನು ಮಾಡಬೇಕು? ಹೈರಾಣಾಗಿದ್ದಾರೆ. ಈ ಹೊತ್ತಿಗೆ ಹೊಂಬಾಳೆ ಸಂಸ್ಥೆ ಮಹಾ ಘೋಷಣೆ ಮಾಡಿದೆ. `ಜಗತ್ತಿಗೆ ಹೊಸ ಉಸಿರು ನೀಡಲು ಸಲಾರ್ ಬರುತ್ತಿದೆ. ಇನ್ನೇನು ನೂರು ದಿನ ಬಾಕಿ.’ ಇದೊಂದು ಸಾಲು ಡಾರ್ಲಿಂಗ್ ಫ್ಯಾನ್ಸ್ಗೆ ಹೊಸ ಹುಮ್ಮಸ್ಸು ನೀಡಿದೆ. ಹಾಗಿದ್ದರೆ ನೂರು ದಿನದಲ್ಲಿ ಏನೇನಾಗಲಿದೆ? ಪ್ರಶಾಂತ್ ನೀಲ್ (Prashant Neel) ಮೇಲೆ ಒತ್ತಡ ಯಾವ ಪರಿ ಇದೆ? ಅಸಲಿಗೆ ಸಲಾರ್ ಕತೆ ಇದೇನಾ? ಆದಿಪುರುಷ ಸೋಲನ್ನು ಪ್ರಭಾಸ್ (Prabhas) ಸಲಾರ್‌ನಲ್ಲಿ ತೀರಿಸಿಕೊಳ್ಳುತ್ತಾರಾ? ಇಂತಹ ನೂರಾರು ಪ್ರಶ್ನೆಗಳು ಅಭಿಮಾನಿಗಳಲ್ಲಿವೆ.  ಸಲಾರ್ ಇನ್ನೇನು ನೂರೇ ನೂರು ದಿನ ಬಾಕಿ. ಸೆಪ್ಟೆಂಬರ್ 28 ಜಗತ್ತಿನ ತುಂಬಾ ಮೆರವಣಿಗೆ ಹೊರಡಲಿದೆ. ಬರೀ ಪ್ರಭಾಸ್ ಫ್ಯಾನ್ಸ್ ಮಾತ್ರ ಅಲ್ಲ, ಇಡೀ ಜಗತ್ತೇ ಇದರತ್ತ ನೋಡುತ್ತಿದೆ. ಬರೀ ನೋಡುತ್ತಿಲ್ಲ ಎರಡೂ ಕಣ್ಣನ್ನು ಇಷ್ಟಗಲ ಬಿಟ್ಟಿದೆ. ಕಿವಿಯನ್ನು ಊರಗಲ ಅಗಲಿಸಿದೆ. ಮೈ ತುಂಬಾ ಬರೀ ಸಲಾರ್ (Salar) ಗುಂಗು. ಕೆಜಿಎಫ್ ಎರಡು ಸೂಪರ್ ಹಿಟ್ ಕೊಟ್ಟಿರುವ ಪ್ರಶಾಂತ್ ಈ ಬಾರಿ ಇನ್ಯಾವ ಲೋಕ ತೋರಿಸಲಿದ್ದಾರೆ? ಅದ್ಯಾವ ಹೊಸ ಜಗತ್ತಿಗೆ ನಮ್ಮನ್ನು ಕರೆದುಕೊಂಡು ಹೋಗಲಿದ್ದಾರೆ? ಎರಡು ಸೋಲಿನಿಂದ ಕಂಗೆಟ್ಟಿರುವ ಪ್ರಭಾಸ್‌ಗೆ ಜೀವದಾನ ನೀಡಲಿದೆಯಾ ಸಲಾರ್? ಇಂತಹ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿವೆ.

    ನಿಜ ಹೇಳಬೇಕೆಂದರೆ ನೀಲ್‌ಗೆ ಇಷ್ಟೊಂದು ಒತ್ತಡ ಇರಲಿಲ್ಲ. `ಸಾಹೋ’ ಸೋತಿತ್ತು ನಿಜ. ಆದರೆ ಇನ್ನೊಂದು ಇತ್ತಲ್ಲ`ರಾಧೇ ಶ್ಯಾಮ್’. ಅದು ಬಿಡುಗಡೆಯಾಗಿರಲಿಲ್ಲ. ಅಷ್ಟರಲ್ಲಿ ಸಲಾರ್ ಘೋಷಣೆಯಾಯಿತು. ರಾಧೇ ಶ್ಯಾಮ್ ಗೆದ್ದೇ ಗೆಲ್ಲುತ್ತೆ ಎನ್ನುವ ನಂಬಿಕೆಯಲ್ಲಿದ್ದರು ಎಲ್ಲರೂ. ಆದರೆ ನೋಡನೋಡುತ್ತಲೇ ರಾಧೇ ಶ್ಯಾಮ್ ಅಡ್ಡಡ್ಡ ಉದ್ದುದ್ದ ಮಲಗಿತು. ಬಾಹುಬಲಿಯಂಥ ಸೂಪರ್ ಹಿಟ್ ಕೊಟ್ಟ ಹೀರೋಗೆ ಸತತ ಎರಡು ಬಾರಿ ಸೀದು ಹೋದ ತೆಂಗಿನ ಕಾಯಿ ಚಿಪ್ಪು. ಭಕ್ತಗಣ ಉರಿದುಕೊಂಡಿತು. `ಅಯ್ಯೋ…ರಾಜಮೌಳಿ ಇದ್ದಿದ್ದಕ್ಕೆ ಪ್ರಭಾಸ್ ಗೆದ್ದಿದ್ದು…’ ಎಂದರು ಜನ ಸಾಮಾನ್ಯರು. ಮುಂದೇನು? ಆಗಲೇ ಅಖಾಡಕ್ಕೆ ಇಳಿಯಲು ಸಜ್ಜಾಯಿತು ಓಂ ರಾವುತ್ ನಿರ್ದೇಶನದ ಆದಿಪುರುಷ.  ಐದು ನೂರು ಕೋಟಿ ಬಜೆಟ್. ಟೀಸರ್ ಮಾಡಿದ ಹಳವಂಡ. ಜನರು ಕೆಂಡ ಕೆಂಡ. ರಿಲೀಸ್ ಡೇಟ್ ಮುಂದಕ್ಕೆ ಹೀಗೆ ಏನೇನೊ ತೆಗ್ಗು ದಿನ್ನೆಗಳನ್ನು ದಾಟಿ ಉಸ್ಸಪ್ಪಾ ಅನ್ನುತ್ತಾ ಮೊನ್ನೆ ಮೊನ್ನೆ ಸಿನಿಮಾ ರಿಲೀಸ್ ಆಯಿತು. ಮೂರು ದಿನಕ್ಕೆ ಮುನ್ನೂರು ಕೋಟಿ ಗಳಿಸಿತು. ಸೋಮವಾರದ ಹೊತ್ತಿಗೆ ಖಾಲಿ ಜೋಳಿಗೆ ಹಾಕಿಕೊಂಡು ನಿರ್ಮಾಪಕರು ಗುಳೆ ಮಾತ್ರ ಹೊರಡುವುದು ಬಾಕಿ ಉಳಿಯಿತು. ಪ್ರಭಾಸ್ ಎಲ್ಲಿದ್ದಾರೆಂದು ಪತ್ತೆ ಇಲ್ಲ. ಬಹುತೇಕ ಭಾರತೀಯರು ಸಿನಿಮಾ ವಿರುದ್ಧ ಕೇಸು ಜಡಿಯುತ್ತಿದ್ದಾರೆ. ಒಂದು ಕಡೆ ಮೂರು ಸೋಲು. ಇನ್ನೊಂದು ಕಡೆ ಜನರು ಹುಟ್ಟಿಸಿದ ದಿಗಿಲು. ಡಾರ್ಲಿಂಗ್ ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ.

    ಈಗ ಮತ್ತೆ ಸಲಾರ್ ಕಡೆ ಎಲ್ಲರೂ ತಿರುಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪ್ರಭಾಸ್ ಫ್ಯಾನ್ಸ್ ಬೇಡಿಕೊಳ್ಳುತ್ತಿರುವುದು ಒಂದೇ ಒಂದು ಮಾತು. `ಸಲಾರ್ ಪಕ್ಕಾ ಸೂಪರ್ ಹಿಟ್ ಆಗುತ್ತದೆ. ಪ್ರಭಾಸ್ ಮತ್ತೆ ಮೈ ಕೊಡವಿ ಎದ್ದು ನಿಲ್ಲುತ್ತಾರೆ. ಪ್ರಶಾಂತ್ ನೀಲ್ ನಮ್ಮ ನಂಬಿಕೆಗೆ ಮೋಸ ಮಾಡುವುದಿಲ್ಲ’ ಇದನ್ನೇ ಮಣಮಣಿಸುತ್ತಿದ್ದಾರೆ. ಯಾವ ಹೀರೋ ಫ್ಯಾನ್ಸ್ಗಾದರೂ ಹೀಗಾಗೋದು ಸಹಜ. ಅದನ್ನೇ ಅವರು ಮಾಡುತ್ತಿದ್ದಾರೆ. ಇದೇ ಹೊತ್ತಿಗೆ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆ ಹೊಸ ಘೋಷಣೆ ಮಾಡಿದೆ. ಪ್ರಭಾಸ್ ಫ್ಯಾನ್ಸ್ಗೆ ಹೊಸ ಹುರುಪು ನೀಡಿದೆ.  ಸಲಾರ್ ಸಿನಿಮಾ ಬಿಡುಗಡೆಗೆ ಇನ್ನು ನೂರು ದಿನ ಬಾಕಿ. ಜಗತ್ತಿನ ಸಿನಿ ಪ್ರೇಮಿಗಳಿಗೆ ಹೊಸ ಉಸಿರು ನೀಡಲು ಬರಲಿದೆ. ನೀವೆಲ್ಲ ಹಬ್ಬಕ್ಕೆ ಸಜ್ಜಾಗಿ.  ಇದೊಂದು ಸಾಲು ಎಲ್ಲರ ನಿದ್ದೆ ಕೆಡಿಸಿದೆ. ನೂರು ದಿನ ಎಷ್ಟು ಹೊತ್ತು ಬಿಡು ಬಂದು ಬಿಡುತ್ತದೆ. ಹೀಗಂತ ಅಂದುಕೊಂಡು ಈಗಿನಿಂದಲೇ ಸಲಾರ್ ಸಂಭ್ರಮಕ್ಕೆ ಸಜ್ಜಾಗುತ್ತಿದ್ದಾರೆ ಜನರು. ಹೀಗಾಗಿ ಪ್ರಶಾಂತ್ ನೀಲ್ ಈ ಐದು ಅಕ್ಷರದತ್ತ ಎಲ್ಲರ ಚಿತ್ತ ನೆಟ್ಟಿದೆ. ಮೊದಲಿನ ಎರಡು ಸಿನಿಮಾ ಇಡೀ ಭಾರತೀಯ ಚಿತ್ರರಂಗದ ದಿಕ್ಕನ್ನೇ ಬದಲಿಸಿದ್ದು ಸತ್ಯ. ಅದಕ್ಕಿಂತ ಭಿನ್ನವಾಗಿ ಇನ್ನೇನು ಕೊಡಲಿದ್ದಾರೆ ನೀಲ್? ಪ್ರಭಾಸ್‌ಗೆ ಈಗಾಗಲೇ ನ್ಯಾಷನಲ್ ಸ್ಟಾರ್ ಪಟ್ಟ ದಕ್ಕಿದೆ. ಅದರ ಜೊತೆಗೆ ಎರಡು ಸೋಲಿನ ಸಿಂಹಾಸನವೂ ಬೇಡ ಎಂದರೂ ಜನ ಕೊಟ್ಟಿದ್ದಾರೆ. ಕೆಜಿಎಫ್ ಗೆಲುವಿನ ಸರಣಿ ಮುಂದುವರೆಯಬೇಕು. ಪ್ರಭಾಸ್ ಸೋಲಿನ ಸರಪಳಿ ತುಂಡಾಗಬೇಕು. ಎರಡು ಗುಡ್ಡಗಳನ್ನು ಒಂದೊಂದು ಹೆಗಲ ಮೇಲೆ ಹೊತ್ತಿದ್ದಾರೆ ನೀಲ್. ಉತ್ತರ ಸಲಾರ್ ಕೊಡಲೇಬೇಕು.

    ಈ ಸಮಯಕ್ಕೆ ಮತ್ತೊಂದು ಖಬರ್ ಸಲಾರ್ ಅಖಾಡದಿಂದ ಬಂದಿದೆ. ಕೆಜಿಎಫ್‌ನಲ್ಲಿ ಚಿನ್ನದ ಗಣಿ ಹಾಗೂ ಅಮ್ಮನ ಸೆಂಟಿಮೆಂಟ್ ಬಳಸಿದ್ದರು ನೀಲ್. ಎರಡೂ ಅದ್ಭುತವಾಗಿ ಸೇರಿಕೊಂಡು ಕಿಚ್ಚು ಹಚ್ಚಿದ್ದವು. ಈಗ ಇನ್ನ್ಯಾವ ಕತೆ ಹೆಣೆದಿದ್ದಾರೆ? ಪ್ರಭಾಸ್ ಇಮೇಜ್‌ಗೆ ಧಕ್ಕೆಯಾಗದಂತೆ ಅದ್ಯಾವ ಹೊಸ ಹೊಳಪನ್ನು ನೀಡಲಿದ್ದಾರೆ? ಈ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ ಜನರು. ಒಂದು ಮೂಲದ ಪ್ರಕಾರ ಇದು ಇಬ್ಬರು ಸ್ನೇಹಿತರ ಕತೆ ಹೊಂದಿದೆಯಂತೆ. ಗೆಳೆತನದ ಪ್ರೀತಿ, ಕೋಪ, ಮುನಿಸು, ಹಠ, ಗೌರವ ಇದರ ಸುತ್ತ ಚಿತ್ರಕತೆ ಹೊಸೆದಿದ್ದಾರಂತೆ ನೀಲ್. ಮಜಾ ಅಂದರೆ ಪ್ರಶಾಂತ್ ನಿರ್ದೇಶನದ ಉಗ್ರಂ ಕೂಡ ಸ್ವಲ್ಪ ಇದೇ ಹಾದಿಯಲ್ಲಿತ್ತು. ಅಲ್ಲವೆ? ಇದನ್ನೂ ಓದಿ:ಮದುವೆಯಾದ್ಮೇಲೆ ಮತ್ತಷ್ಟು ಹಾಟ್ ಆಗಿ ಕಾಣಿಸಿಕೊಳ್ತಿರೋ ಕಿಯಾರಾ

    ಸ್ನೇಹ ಹೀಗಂದಾಕ್ಷಣ ನಮಗೆ ನೆನಪಾದೋಗು ಮಣಿರತ್ನಂ ನಿರ್ದೇಶನದ ದಳಪತಿ ಸಿನಿಮಾ. ರಜನಿಕಾಂತ್ ಹಾಗೂ ಮುಮ್ಮಟಿ ಅಭಿನಯದ ಇದು ಮಹಾಭಾರತದ ದುರ್ಯೋಧನ ಹಾಗೂ ಕರ್ಣನ ಸ್ನೇಹವನ್ನು ಆಧುನೀಕರಣಗೊಳಿಸಿತ್ತು. ಇದೆಲ್ಲ ಹಿಂದೆ ನಡೆದಿದೆ. ಈಗ ಅದೇ ಎಳೆಯನ್ನು ಪ್ರಶಾಂತ್ ಬೇರೊಂದು ರೀತಿ ಹೇಳಲಿದ್ದಾರಾ? ಅಥವಾ ಇದನ್ನೆಲ್ಲ ಬಿಟ್ಟು ಬೇರೊಂದು ಕತೆಗೆ ಜೀವ ಕೊಟ್ಟಿದ್ದಾರಾ? ಸದ್ಯಕ್ಕೆ ಎಲ್ಲವೂ ಉತ್ತರ ಇಲ್ಲದ ಪ್ರಶ್ನೆಗಳು. ಒಂದೇ ಮಾತಿನಲ್ಲಿ ಹೇಳಬೇಕೆಂದರೆ `ನೀನು ಏನೇ ಮಾಡು ಗುರು ಒಟ್ಟಿನಲ್ಲಿ ನಮ್ಮ ಪ್ರಭಾಸ್‌ಗೆ ಸೂಪರ್ ಡ್ಯೂಪರ್ ಕೊಡು…’ ಇದೊಂದೇ ಭಕ್ತಗಣದ ಸಿಂಗಲ್ ಬೇಡಿಕೆ. ಕೋರಿಕೆ.

    ಸಲಾರ್ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಬರೀ ಗೆದ್ದರಷ್ಟೇ ಸಾಲದು. ಒಂದು ಕಡೆ ಹೊಂಬಾಳೆ (Hombale Films) ಸಂಸ್ಥೆಯ ಗೌರವ ಕಾಪಾಡಬೇಕು. ಇನ್ನೊಂದು ಕಡೆ ಕೆಜಿಎಫ್ ಮಾತ್ರ ನನ್ನ ಸರಕಲ್ಲ, ಅದನ್ನು ಬಿಟ್ಟು ಇನ್ನೊಂದು ಲೋಕವನ್ನೂ ನಾನು ತೋರಿಸಬಲ್ಲೆ. ಹೀಗಂತ ಖುದ್ದು ನೀಲ್ ಸಾಬೀತು ಪಡಿಸಿಕೊಳ್ಳಬೇಕಿದೆ. ಮೊನ್ನೆ ಮೊನ್ನೆವರೆಗೆ ಇಷ್ಟೇ ಇತ್ತು. ಅದಕ್ಕೆ ಹೊಸ ಸೇರ್ಪಡೆ ಆದಿಪುರುಷ್ ಸೋಲು. ಪ್ರಭಾಸ್ ಫ್ಯಾನ್ಸ್ ಕಂಗಾಲು. ಇವರನ್ನು ದಂಡೆ ಮುಟ್ಟಿಸುವ ಜವಾಬ್ದಾರಿಯೂ ನೀಲ್‌ಗೆ ಅಕಾಲಿಕವಾಗಿ ಬಂದಿದೆ. ಸವಾಲ ಕಣ್ಣ ಮುಂದಿದೆ. ಸಲಾರ್ ಬರಲು ನೂರು ದಿನ ಉಳಿದಿದೆ. ಮಹಾ ಜಾತ್ರೆ ನಡೆಯಲಿ ಎನ್ನುವುದು ಆಶಯ. ನಡೆಯುತ್ತದಾ ಎನ್ನುವುದು ಪ್ರಶ್ನೆ. ಉತ್ತರ ಸೆಪ್ಟೆಂಬರ್ 28ಕ್ಕೆ.

  • ಪೊಲೀಸ್ ಭದ್ರತೆ ನಡುವೆಯೂ ಹನುಮಾನ್ ದೇವರಲ್ಲ ಎಂದ  ‘ಆದಿಪುರುಷ’ ರೈಟರ್

    ಪೊಲೀಸ್ ಭದ್ರತೆ ನಡುವೆಯೂ ಹನುಮಾನ್ ದೇವರಲ್ಲ ಎಂದ ‘ಆದಿಪುರುಷ’ ರೈಟರ್

    ದಿ ಪುರುಷ ಸಿನಿಮಾದ ಡೈಲಾಗ್ ರೈಟರ್ ಮನೋಜ್ ಮುಂತಶೀರ್  (Manoj Mantashir) ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ‘ಹನುಮಾನ್ (Hanuman) ದೇವರೇ ಅಲ್ಲ’ ಎಂದು ಹೇಳುವ ಮೂಲಕ ಉರಿವ ಬೆಂಕಿಗೆ ತುಪ್ಪ ಸುರಿದ್ದಾರೆ. ಆದಿಪುರುಷ ಸಿನಿಮಾದಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಈಗಾಗಲೇ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತ ಪಡಿಸುತ್ತಿವೆ. ಈ ನಡುವೆ ಹನುಮಾನ್ ದೇವರೇ ಅಲ್ಲ ಅನ್ನುವ ಮಾತು ಮತ್ತೆ ವಿವಾದಕ್ಕೆ (Controversy) ಕಾರಣವಾಗಿದೆ.

    ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ‘ಹನುಮಾನ್ ದೇವರಲ್ಲ. ಭಜರಂಗಿಯನ್ನು ನಾವು ದೇವರು ಮಾಡಿದ್ದೇವೆಯಷ್ಟೆ. ಹನುಮ ರಾಮನ ಭಕ್ತ. ರಾಮನ ಭಕ್ತ ದೇವರು ಹೇಗೆ ಆಗುತ್ತಾನೆ. ರಾಮನನ್ನು ಪೂಜಿಸುತ್ತೇವೆ ಎನ್ನುವ ಕಾರಣಕ್ಕಾಗಿ ಹನುಮನನ್ನೂ ಪೂಜಿಸುತ್ತೇವೆ ಎಂದು ಹೇಳಿದ್ದಾರೆ. ಈ ಮಾತೇ ಅವರಿಗೆ ಮುಳುವಾಗಿದೆ.

    ಆದಿಪುರುಷ (Adipurush) ಸಿನಿಮಾದ ಬಗ್ಗೆ ದಿನಕ್ಕೊಂದು ಹೇಳಿಕೆ ಕೊಡುತ್ತಿರುವ ಮನೋಜ್ ಅವರಿಗೆ ಜೀವ ಬೆದರಿಕೆ ಇದೆ ಎನ್ನುವ ಕಾರಣಕ್ಕಾಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಈ ಭದ್ರತೆಯ ನಡುವೆಯೂ ಅವರು ಮತ್ತೆ ಮತ್ತೆ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದು ಚಿತ್ರತಂಡಕ್ಕೆ ನುಂಗಲಾರದ ತುತ್ತಾಗಿದೆ. ಇದನ್ನೂ ಓದಿ:ಫ್ಯಾಷನ್‌ ರೂಲ್ಸ್‌ ಬ್ರೇಕ್‌ ಮಾಡಿ, ನೆಕ್ಲೇಸ್‌ ಧರಿಸಿ ಹಾಡಿದ ಸಂಜಿತ್‌ ಹೆಗ್ಡೆ

    ಈ ನಡುವೆ ಚಿತ್ರ ತಂಡ ಹೊಸದೊಂದು ವರಸೆ ಶುರು ಮಾಡಿಕೊಂಡಿದೆ. ಸಿನಿಮಾ ಬಗ್ಗೆ ಬಗೆ ಬಗೆಯ ರೀತಿಯಲ್ಲಿ ಚರ್ಚೆ ನಡೆಯುತ್ತಿದ್ದರೆ, ಚಿತ್ರತಂಡದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಇದೀಗ ಸಿನಿಮಾ ಬಗ್ಗೆ ವರಸೆ ಬದಲಿಸಿದ್ದಾರೆ. ರಾಮಾಯಣಕ್ಕೂ ಆದಿಪುರುಷ್ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಅಂತಾ ಹೇಳಿಕೆ ನೀಡಿದ್ದಾರೆ.

    ಓಂ ರಾವತ್ (Om Raut) ನಿರ್ದೇಶನದ ‘ಆದಿಪುರುಷ್’ ಸಿನಿಮಾಗೆ ಕೆಟ್ಟ ವಿಮರ್ಶೆ ವ್ಯಕ್ತವಾಗುತ್ತಿದೆ. ಈ ಸಿನಿಮಾದ ಹಲವು ಅಂಶಗಳನ್ನು ಟೀಕಿಸಲಾಗುತ್ತಿದೆ. ರಾಮಾಯಣವನ್ನು ಆಧರಿಸಿದ ಈ ಚಿತ್ರದಲ್ಲಿ ಪ್ರಭಾಸ್ ಅವರು ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ. ಆಂಜನೇಯನಾಗಿ ದೇವದತ್ತ ನಾಗೆ ಅವರು ಅಭಿನಯಿಸಿದ್ದಾರೆ. ಲಕ್ಷ್ಮಣನ ಪಾತ್ರಕ್ಕೆ ಸನ್ನಿ ಸಿಂಗ್ ಅವರು ಬಣ್ಣ ಹಚ್ಚಿದ್ದಾರೆ. ಸೈಫ್ ಅಲಿ ಖಾನ್ ಅವರು ರಾವಣನಾಗಿ ಅಬ್ಬರಿಸಿದ್ದಾರೆ. ಆದರೆ ರಾಮಾಯಣವನ್ನು ತೋರಿಸಿದ ರೀತಿ ಸರಿಯಾಗಿಲ್ಲ ಎಂದು ಪ್ರೇಕ್ಷಕರು ತಕರಾರು ತೆಗೆದಿದ್ದಾರೆ. ಸೈಫ್‌ರನ್ನ ಮಾಡ್ರನ್ ರಾವಣನಂತೆ ತೋರಿಸಿರೋದು ಟ್ರೋಲ್ ಆಗುತ್ತಿದೆ. ಸಿನಿಮಾ ನೈಜವಾಗಿ ತೋರಿಸಿಲ್ಲ ಎಂದು ಟೀಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಮಾತು ಬದಲಾಯಿಸಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ.

     

    ಸೋಶಿಯಲ್ ಮೀಡಿಯಾದಲ್ಲಿ ‘ಆದಿಪುರುಷ್’ ಸಿನಿಮಾವನ್ನು ಟ್ರೋಲ್ ಮಾಡಲಾಗುತ್ತಿದೆ. ಪಾತ್ರಗಳನ್ನು ತೋರಿಸಿದ ರೀತಿ, ಗ್ರಾಫಿಕ್ಸ್ ಗುಣಮಟ್ಟ ಸೇರಿದಂತೆ ಅನೇಕ ವಿಚಾರಗಳನ್ನು ಜನರು ಟೀಕಿಸುತ್ತಿದ್ದಾರೆ. ಈ ನಡುವೆ ಸಂಭಾಷಣಕಾರ ಮನೋಜ್ ಮುಂತಶೀರ್ ಅವರು ನೀಡಿದ ಕೇಳಿಕೆ ಸೆನ್ಸೇಷನ್ ಕ್ರಿಯೆಟ್ ಮಾಡಿದೆ. ಇದನ್ನು ನಾನು ಮೊದಲೇ ಹೇಳಿದ್ದೇ ಮತ್ತು ಈಗಲೂ ಹೇಳುತ್ತೇನೆ. ಈ ಸಿನಿಮಾದ ಹೆಸರು ಆದಿಪುರುಷ್. ನಾವು ರಾಮಾಯಣವನ್ನು ಸಿನಿಮಾ ಮಾಡಿಲ್ಲ. ರಾಮಾಯಾಣಕ್ಕೂ ಆದಿಪುರುಷ್‌ ಸಿನಿಮಾಗೂ ಸಂಬಂಧವಿಲ್ಲ. ಅದರಿಂದ ತುಂಬ ಸ್ಫೂರ್ತಿ ಪಡೆದಿದ್ದೇವೆ. ಡಿಸ್‌ಕ್ಲೈಮರ್‌ನಲ್ಲೂ ನಾವು ಅದನ್ನೇ ಹೇಳಿದ್ದೇವೆ ಎಂದು ಮನೋಜ್ ಮುಂತಶೀರ್ ಹೇಳಿದ್ದಾರೆ.