Tag: Aditi

  • ಮದುವೆ ಬಳಿಕ ಅದಿತಿ ಪ್ರಭುದೇವ ಬದಲಾಗಿದ್ದಾರಾ? ಸ್ಪಷ್ಟನೆ ನೀಡಿದ ನಟಿ ತಾಯಿ

    ಮದುವೆ ಬಳಿಕ ಅದಿತಿ ಪ್ರಭುದೇವ ಬದಲಾಗಿದ್ದಾರಾ? ಸ್ಪಷ್ಟನೆ ನೀಡಿದ ನಟಿ ತಾಯಿ

    ಸ್ಯಾಂಡಲ್‌ವುಡ್ (Sandalwood) ಶ್ಯಾನೆ ಟಾಪ್ ನಟಿ ಅದಿತಿ ಪ್ರಭುದೇವ (Aditi Prabhudeva), ಯಶಸ್ (Yashas) ಜೊತೆ ದಾಂಪತ್ಯ ಜೀವನದಲ್ಲಿ ಖುಷಿಯಾಗಿದ್ದಾರೆ. ಮದುವೆಯ (Wedding) ಬಳಿಕ ನಟಿ ಬದಲಾಗಿರುವ ಬಗ್ಗೆ ಅದಿತಿ ತಾಯಿ (Aditi’s Mother) ಮಾತನಾಡಿದ್ದಾರೆ. ಈ ಬಗ್ಗೆ ಅದಿತಿ ತಾಯಿ ಸ್ಪಷ್ಟನೆ ನೀಡಿದ್ದಾರೆ.

    ಮದುವೆ ನಂತರ ಕೂಡ ಮತ್ತೆ ಸಿನಿಮಾಗಳಲ್ಲಿ (Films) ಅದಿತಿ ಪ್ರಭುದೇವ ಆಕ್ಟೀವ್ ಆಗಿದ್ದಾರೆ. ಪತಿ ಯಶಸ್ ಅವರನ್ನ ಕೂಡ ಇತ್ತೀಚಿಗೆ ತನ್ನ ಸಿನಿಮಾ ಸೆಟ್‌ಗೆ ಕರೆದುಕೊಂಡು ಹೋಗಿದ್ದರು. ವೈವಾಹಿಕ ಬದುಕು ಮತ್ತು ನಟನೆ ಎರಡನ್ನ ಬ್ಯಾಲೆನ್ಸ್ ಮಾಡ್ತಿದ್ದಾರೆ. ಪತ್ನಿ ಅದಿತಿ ಸಿನಿಮಾ ಕಾರ್ಯಕ್ಕೆ ಪತಿ ಯಶಸ್ ಕೂಡ ಬೆಂಬಲಿಸುತ್ತಿದ್ದಾರೆ. ಹೀಗಿರುವಾಗ ಮಗಳ ಬಗ್ಗೆ ಅದಿತಿ ತಾಯಿ ಅಚ್ಚರಿಯ ಹೇಳಿಕೆಯೊಂದನ್ನ ನೀಡಿದ್ದಾರೆ.

    ನಟಿ ಅದಿತಿ ಅವರು ತಮ್ಮ ಯೂಟ್ಯೂಬ್‌ನಲ್ಲಿ ತಾಯಿ ಜೊತೆ ಪುಟ್ಟ ಚಿಟ್ ಚಾಟ್ ಮಾಡಿದ್ದಾರೆ. ತುಂಬಾ ಜನ ಹೆಣ್ಣು ಮಕ್ಕಳಿಗೆ ಮದುವೆಯಾಗಿ ಗಂಡನ ಮನೆಗೆ ಹೋಗುವಾಗ ತಾಯಂದಿರು ಸಲಹೆ ಸೂಚನೆಗಳನ್ನು ಕೊಡುತ್ತಾರೆ. ಹಾಗೆ ಮಾಡಬೇಡ ಹೀಗೆ ಮಾಡು ಅಂತ ಹೇಳಿ ಕಳುಹಿಸುತ್ತಾರೆ ಆದರೆ ನನ್ನ ಅಮ್ಮ ನನಗೆ ಏನೂ ಹೇಳಿಲ್ಲ. ಮದುವೆಯಾಗಿ 2 ತಿಂಗಳು ಕಳೆದಿದೆ ಅದಿಕ್ಕೆ ಈಗ ಕೇಳುತ್ತಿರುವೆ ನೀವು ನನಗೆ ಏನಾದರೂ ಸಲಹೆ ಕೊಡಬೇಕು ಅಂತಿದ್ದರೆ ಏನು ಹೇಳುತ್ತೀರಾ ಎಂದು ಅದಿತಿ ಪ್ರಭುದೇವ ತಾಯಿಯನ್ನ ಕೇಳಿದ್ದಾರೆ. ನನ್ನ ಮಗಳಿಗೆ ನಾನು ಯಾವ ಸಲಹೆನೂ ಕೊಡುವುದಿಲ್ಲ. ಚಿತ್ರರಂಗಕ್ಕೆ ಬರುವಾಗ ಏನೂ ಸಲಹೆ ಕೊಟ್ಟಿಲ್ಲ ನೀನು ಹೇಗಿದ್ಯಾ ಹಾಗೆ ಇರಮ್ಮ ಅಂತ ಹೇಳಿದೆ. ಈಗಲೂ ನೀನು ಹೇಗೆ ಇರ್ತೀಯಾ ಹಾಗೆ ಇರು. ಸಲಹೆ ಕೊಡುವುದು ಏನೂ ಇಲ್ಲ ಎಂದು ಅದಿತಿ ತಾಯಿ ಹೇಳುತ್ತಾರೆ. ಇದನ್ನೂ ಓದಿ: ಜಾಹೀರಾತಿನ ಪೋಸ್ಟ್‌ನೊಂದಿಗೆ ಮುದ್ದು ಮಗುವಿನ ಫೋಟೋ ಹಂಚಿಕೊಂಡ ನಟಿ ಆಲಿಯಾ

    ಮದುವೆ ಮೊದಲು ನನ್ನನ್ನು ನೋಡಿದ್ದೀರಿ ಮದುವೆ ಆದ್ಮೇಲೂ ನನ್ನನ್ನು ನೋಡುತ್ತಿದ್ದೀರಿ. ತುಂಬಾ ಜನರು ನನ್ನನ್ನು ಕೇಳುತ್ತಾರೆ ಏನು ಬದಲಾವಣೆಗಳು ಇದೆ ನಿಮ್ಮ ಲೈಫಲ್ಲಿ ಅಂತ. ವೈಯಕ್ತಿಕವಾಗಿ ನನಗೆ ಯಾವ ಬದಲಾವಣೆ ಕಾಣಿಸಿಲ್ಲ. ತಾಯಿಯಾಗಿ ನಿಮ್ಮ ಪ್ರಕಾರ ನಾನು ಏನಾದರೂ ಬದಲಾಯಿಸಿಕೊಳ್ಳಬೇಕು ಅಂತಿದ್ದರೆ ನೀವು ನನಗೆ ಯಾವ ವಿಚಾರದಲ್ಲಿ ಬದಲಾಗಬೇಕು ಎಂದು ಹೇಳುತ್ತೀರಾ? ಎಂದು ತಾಯಿಗೆ ಅದಿತಿ ಮರು ಪ್ರಶ್ನೆ ಮಾಡಿದ್ದಾರೆ. ನೀನು ಏನೂ ಬದಲಾಗಿಲ್ಲ.ಮದುವೆ ಮುನ್ನ ನೀನು ಹೈಪರ್ ಆಕ್ಟಿವ್ ಆಗಿದ್ದೆ ಈಗ ಹೈಪರ್ ಕಡಿಮೆ ಮಾಡಿ ಆಕ್ಟಿವ್ ಆಗಿರುವೆ ಅಷ್ಟೆ. ಆರಾಮ ಆಗಿರು ಎಂದು ಅದಿತಿ ತಾಯಿ ಹೇಳಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿರ್ಮಾಪಕ ಕೆ.ಮಂಜು ಪುತ್ರನ ‘ರಾಣ’ ಸಿನಿಮಾದ ಹಾಡು ರಿಲೀಸ್ ಮಾಡಿದ ಜೋಗಿ ಪ್ರೇಮ್

    ನಿರ್ಮಾಪಕ ಕೆ.ಮಂಜು ಪುತ್ರನ ‘ರಾಣ’ ಸಿನಿಮಾದ ಹಾಡು ರಿಲೀಸ್ ಮಾಡಿದ ಜೋಗಿ ಪ್ರೇಮ್

    ನಿರ್ಮಾಪಕ ಕೆ.ಮಂಜು (, K. Manju) ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ , ನಂದಕಿಶೋರ್ ನಿರ್ದೇಶನದ “ರಾಣ” (Rana) ಚಿತ್ರದ “ಗಲ್ಲಿ ಬಾಯ್” ಹಾಡನ್ನು ಜೋಗಿ ಪ್ರೇಮ್ (Jogi Prem) ಬಿಡುಗಡೆ ಮಾಡಿದರು. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ಶ್ರೇಯಸ್ ಹಾಗೂ ರೀಷ್ಮಾ ನಾಣಯ್ಯ ಇಬ್ಬರೂ ಚೆನ್ನಾಗಿ ನೃತ್ಯ ಮಾಡಿದ್ದಾರೆ. ಚಂದನ್ ಶೆಟ್ಟಿ ಸಂಗೀತ ಸುಂದರವಾಗಿದೆ. ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಗಾಯನ ಸುಮಧುರವಾಗಿದೆ. ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಜೋಗಿ ಪ್ರೇಮ್ ಹಾರೈಸಿದರು.

    ಮೊದಲು ನಾನು, ನನ್ನ ಸ್ಪೂರ್ತಿಯಾದ ವಿಷ್ಣುವರ್ಧನ್ ಹಾಗೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇನೆ. ಚಂದನ್ ಶೆಟ್ಟಿ  ಎಲ್ಲರ ಮನಸಿಗೆ ಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಅನಿರುಧ್ದ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಅವರ ಅದ್ಭುತ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ.  ನೃತ್ಯ ನಿರ್ದೇಶಕ ಇಮ್ರಾನ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ ಅವರ ಕಾರ್ಯವೈಖರಿ ಚೆನ್ನಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ. ನವೆಂಬರ್ 11 ರಂದು ಚಿತ್ರ ತೆರೆಗೆ ಬರಲಿದೆ.‌ ಹಾಡು ಬಿಡುಗಡೆ ಮಾಡಿಕೊಟ್ಟ ಪ್ರೇಮ್ ಅವರಿಗೆ ಹಾಗೂ ಅವಕಾಶ ನೀಡಿರುವ ನಿರ್ಮಾಪಕ ಪುರುಷೋತ್ತಮ್ ಹಾಗೂ ನಿರ್ದೇಶಕ ನಂದಕಿಶೋರ್ ಅವರಿಗೆ ಧನ್ಯವಾದ ಎಂದರು ನಾಯಕ ಶ್ರೇಯಸ್ (Shreyash). ಇದನ್ನೂ ಓದಿ:ಯೂಟ್ಯೂಬ್‌ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಉಪ್ಪಿ- ಕಿಚ್ಚ ನಟನೆಯ ‘ಕಬ್ಜ’ ಟೀಸರ್

    ಚಿತ್ರ ಚೆನ್ನಾಗಿ ಬಂದಿದೆ. ಈ ಹಾಡಂತೂ ಸಖತ್‌ ಆಗಿದೆ. ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ (Chandan Shetty)  ಅವರು ಬರೆದಿರುವ ಈ ಹಾಡು ಎಲ್ಲರ ಗಮನ ಸೆಳೆಯುತ್ತಿದೆ ಎಂದರು ನಾಯಕಿ ರೀಷ್ಮಾ ನಾಣಯ್ಯ. ಗುಜ್ಜಲ್ ಪುರುಷೋತ್ತಮ್ ಅವರು ಒಂದು ಸಿನಿಮಾ ಮಾಡುತ್ತಿದ್ದೇನೆ. ನೀವು ಜೊತೆಗಿರಬೇಕು ಎಂದರು.  ನನ್ನ ಮಗನೇ ಹೀರೋ ಅಂತ ತಿಳಿದ ಮೇಲೆ, ನಾನು ಅವನಿಗೆ ಚಿತ್ರ ಚೆನ್ನಾಗಿ ಬರಲು ನಿರ್ದೇಶಕರು ಕಾರಣ ಅವರು ಹೇಳಿದ ಹಾಗೆ ಕೇಳಬೇಕು ಅಂತ ಹೇಳಿದೆ. “ರಾಣ” ಒಂದೊಳ್ಳೆಯ ಕೌಟುಂಬಿಕ ಚಿತ್ರ.  ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆಯಿದೆ. ನಂದಕಿಶೋರ್ (Nandakishor) ನಿರ್ದೇಶನ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಸೇರಿದಂತೆ ಎಲ್ಲರ ಕೆಲಸ ಚೆನ್ನಾಗಿದೆ. ನವೆಂಬರ್ 11ಕ್ಕೆ ಚಿತ್ರ ತೆರೆಗೆ ಬರುತ್ತಿದೆ ಎಂದು ತಿಳಿಸಿದ ಕೆ.ಮಂಜು, ಹಾಡು ಬಿಡುಗಡೆ ಮಾಡಲು ದೂರದ ಮುಂಬೈನಿಂದ ಬಂದ ಪ್ರೇಮ್ ಅವರಿಗೆ ಧನ್ಯವಾದ ಹೇಳಿದರು.

    ಹಾಡು (Song) ಬಿಡುಗಡೆ ಮಾಡಿದ ಪ್ರೇಮ್ ಸರ್ ಗೆ ಧನ್ಯವಾದ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.‌ ನವೆಂಬರ್ 11ರಂದು ಬಿಡುಗಡೆಯಾಗಲಿದೆ. ತಂಡದವರೆಲ್ಲಾ ಸೇರಿ ಉತ್ತಮ ಚಿತ್ರ ಮಾಡಿದ್ದೇವೆ. ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ನಂದಕಿಶೋರ್. ಕೆ.ಮಂಜು ಅವರ ಸಹಕಾರದಿಂದ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನನ್ನ ಧನ್ಯವಾದ ಎಂದರು ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್. ನಂದಕಿಶೋರ್ ನಿರ್ದೇಶನದಲ್ಲಿ ಚಿತ್ರ  ಚೆನ್ನಾಗಿ ಬಂದಿದೆ. ಹಾಡುಗಳು ಸುಂದರವಾಗಿದೆ. ಇದೇ ಮೊದಲ ಬಾರಿಗೆ ನಾನು ಹಿನ್ನೆಲೆ ಸಂಗೀತ ಕೂಡ ನೀಡಿದ್ದೇನೆ ಎಂದು ಸಂಗೀತದ ಬಗ್ಗೆ ಚಂದನ್ ಶೆಟ್ಟಿ ಮಾಹಿತಿ ನೀಡಿದರು. ಚಿತ್ರದಲ್ಲಿ ಅಭಿನಯಿಸಿರುವ ಕೋಟೆ ಪ್ರಭಾಕರ್, ಅಶೋಕ್, ರಘು ಹಾಗೂ ಗಾಯಕ ಅನಿರುದ್ಧ್ ಶಾಸ್ತ್ರಿ ಚಿತ್ರದ ಕುರಿತು ಮಾತನಾಡಿದರು. ರೈತ ಕೇಶವ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕ ಮಹಿಳಾ ಟಿ-20 ತಂಡಕ್ಕೆ ಶಿವಮೊಗ್ಗದ ಅದಿತಿ ರಾಜೇಶ್ ಆಯ್ಕೆ

    ಕರ್ನಾಟಕ ಮಹಿಳಾ ಟಿ-20 ತಂಡಕ್ಕೆ ಶಿವಮೊಗ್ಗದ ಅದಿತಿ ರಾಜೇಶ್ ಆಯ್ಕೆ

    ಶಿವಮೊಗ್ಗ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದ ಕೃಷ್ಣಮೂರ್ತಿ ನೇತೃತ್ವದ ಕರ್ನಾಟಕ ಮಹಿಳಾ ಟಿ-20 ತಂಡಕ್ಕೆ ಶಿವಮೊಗ್ಗದ ಮಹಿಳಾ ಕ್ರಿಕೆಟರ್ ಕು.ಅದಿತಿ ರಾಜೇಶ್ ಆಯ್ಕೆಯಾಗಿದ್ದಾರೆ.

    ಅದಿತಿ ರಾಜೇಶ್ ಏಪ್ರಿಲ್ 18 ರಿಂದ ಗುಜರಾಜ್‍ನ ರಾಜ್‍ಕೋಟ್‍ನಲ್ಲಿ ನಡೆಯಲಿರುವ ಹಿರಿಯ ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಅದಿತಿ ರಾಜೇಶ್ ಪ್ರಸ್ತುತ ವಿನೋಬನಗರದ ಡಿ.ವಿ.ಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು, ಸಹ್ಯಾದ್ರಿ ಕಾಲೇಜಿನಲ್ಲಿರುವ ಕ್ರೀಡಾಂಗಣದಲ್ಲಿ ಕಳೆದ 8 ವರ್ಷಗಳಿಂದ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಕ್ರಿಕೆಟ್ ತರಬೇತುದಾರ ಪಿ.ವಿ.ನಾಗರಾಜ್ ಅವರ ಬಳಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಇದನ್ನೂ ಓದಿ: ಗ್ರಾಮ ಸಹಾಯಕರ ಮಾಸಿಕ ಸಂಬಳ ಏರಿಕೆ

    ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿ ನಗರಕ್ಕೆ ಕೀರ್ತಿ ತಂದ ಪ್ರತಿಭಾವಂತ ಯುವತಿಗೆ ವಿಧಾನ ಪರಿಷತ್ ಸದಸ್ಯ, ಕೆಎಸ್‍ಸಿಎ ಶಿವಮೊಗ್ಗ ವಲಯದ ಸಂಚಾಲಕ ಡಿ.ಎಸ್.ಅರುಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ.ಟಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಶುಭಹಾರೈಸಿ ಅಭಿನಂದಿಸಿದ್ದಾರೆ. ಇದನ್ನೂ ಓದಿ: ಕೆಪಿಎಸ್‍ಸಿ ಸದಸ್ಯರಾಗಿ ಬಿ.ವಿ ಗೀತಾ ನೇಮಕ

  • ಗೆಳತಿ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಮೋಹಿತ್ ರೈನಾ

    ಗೆಳತಿ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಮೋಹಿತ್ ರೈನಾ

    ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ʻದೇವೋ ಕೆ ದೇವ್ ಮಹದೇವ್ʼ ಧಾರವಾಹಿ ನಟ ಮೋಹಿತ್ ರೈನಾ ಅವರು ತಮ್ಮ ಬಹುಕಾಲದ ಗೆಳತಿ ಅದಿತಿ ಜೊತೆಗೆ ಸಪ್ತಪದಿ ತುಳಿದಿದ್ದಾರೆ.

    Mohit Raina

    2022ರ ಜನವರಿ 1ರಂದು ಹೊಸ ವರ್ಷದ ದಿನ ಹೊಸ ಜೀವನಕ್ಕೆ ಕಾಲಿಟ್ಟ ಮೋಹಿತ್ ರೈನಾ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ, ಅದ್ದೂರಿ ಮದುವೆಯ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಮೋಹಿತ್ ಗುರು ಹಿರಿಯರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾಗಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ವಿದ್ಯುತ್‌ ನೀಡದಿದ್ದಕ್ಕೆ ಅಖಿಲೇಶ್‌ ಯಾದವ್‌ ಮೊದಲು ಕ್ಷಮೆಯಾಚಿಸಲಿ: ಯೋಗಿ ಆದಿತ್ಯನಾಥ್

    ಫೋಟೋ ಜೊತೆಗೆ, ಪ್ರೀತಿ ಇರುವಲ್ಲಿ ಅಡೆತಡೆಗಳಿರುವುದಿಲ್ಲ. ಅಡೆತಡೆಗಳಿದ್ದರೂ ಬೇಲಿಯನ್ನು ದಾಟುತ್ತೇವೆ. ಗುರಿಯನ್ನು ತಲುಪಲು ತಡೆಗೋಡೆಗಳನ್ನು ಭೇದಿಸುವ ಭರವಸೆಯಿಂದ ಮುನ್ನುಗ್ಗುತ್ತೇವೆ. ಈ ಭರವಸೆಯಿಂದ ನಾವಿಂದು ನಮ್ಮ ತಂದೆ, ತಾಯಿ ಆಶೀರ್ವಾದದಿಂದ ಒಂದಾಗಿದ್ದೇವೆ. ನಮ್ಮಿಬ್ಬರ ಈ ಹೊಸ ಪ್ರಯಾಣಕ್ಕೆ ನಿಮ್ಮೆಲ್ಲರ ಪ್ರೀತಿ ಹಾಗೂ ಆರ್ಶೀವಾದ ಬೇಕಾಗಿದೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Mohit Raina (@merainna)

    ಈ ನವಜೋಡಿಗೆ ಕರಣ್ ಜೋಹಾರ್, ಕತ್ರಿಕಾ ಸೆಂಗಾರ್, ಸಚಿನ್ ಶ್ರಾಫ್, ಕರಿಷ್ಮಾ ಕೋಟಕ್ ಮತ್ತು ಸೋಮ್ಯಾ ಸೇಠ್ ಸೇರಿದಂತೆ ಚಿತ್ರರಂಗದ ಹಲವಾರು ಗಣ್ಯರು, ಸ್ನೇಹಿತರು ಮತ್ತು ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ಕೊರೊನಾ ತಡೆಗಟ್ಟುವಲ್ಲಿ ಕೇಜ್ರಿವಾಲ್ ಸರ್ಕಾರ ವಿಫಲ: ಚರಣ್‌ಜಿತ್ ಸಿಂಗ್

  • ಸಿಂಗನಿಗೆ ಟಾಂಗ್ ಕೊಡೋ ರವಿಶಂಕರ್ ನೀವಂದುಕೊಂಡಂತಿಲ್ಲ!

    ಸಿಂಗನಿಗೆ ಟಾಂಗ್ ಕೊಡೋ ರವಿಶಂಕರ್ ನೀವಂದುಕೊಂಡಂತಿಲ್ಲ!

    ಬೆಂಗಳೂರು: ಕನ್ನಡ ಚಿತ್ರರಂಗವನ್ನು ತನ್ನ ಅಗಾಧ ಪ್ರತಿಭೆಯ ಮೂಲಕವೇ ಆವರಿಸಿಕೊಂಡಿರುವ ಖ್ಯಾತ ಖಳನಟ ರವಿಶಂಕರ್. ಕಿಚ್ಚ ಸುದೀಪ್ ಅಭಿನಯದ ಕೆಂಪೇಗೌಡ ಚಿತ್ರದ ಮೂಲಕ ಖಳನಾಗಿ ಅಬ್ಬರಿಸಲಾರಂಭಿಸಿದ್ದ ರವಿಶಂಕರ್ ಆ ನಂತರ ತಿರುಗಿ ನೋಡಿದ್ದೇ ಇಲ್ಲ. ಈ ಹಾದಿಯಲ್ಲಿ ವೈವಿಧ್ಯಮಯ ಪಾತ್ರಗಳ ರೂವಾರಿಯಾಗಿ ಸಾಗಿ ಬಂದಿರೋ ಅವರು ಚಿರಂಜೀವಿ ಸರ್ಜಾ ನಾಯಕನಾಗಿ ನಟಿಸಿರೋ ಸಿಂಗ ಚಿತ್ರದಲ್ಲಿಯೂ ಒಂದು ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಅವರ ಪಾತ್ರ ಈ ಚಿತ್ರದಲ್ಲಿ ಖಂಡಿತಾ ನೀವಂದುಕೊಂಡಂತೆ ಇರೋದಿಲ್ಲ!

    ರವಿಶಂಕರ್ ಅಂದರೆ ಎಂಥವರೂ ಅದುರಿ ಹೋಗುವಂಥಾ ಅಬ್ಬರದ ನಟನಾ ಶಕ್ತಿ ಹೊಂದಿರೋ ಕಲಾವಿದ. ಹೀಗಿರೋದರಿಂದಲೇ ಅವರ ಹೆಸರು ಕೇಳಿದರೇನೇ ವಿಲನ್ ಪಾತ್ರಗಳು ಕಣ್ಮುಂದೆ ತೇಲಿ ಹೋಗುತ್ತವೆ. ಇನ್ನು ಪಕ್ಕಾ ಮಾಸ್ ಶೈಲಿಯ ಸಿಂಗ ಚಿತ್ರದಲ್ಲಿ ರವಿಶಂಕರ್ ನಟಿಸಿದ್ದಾರೆಂದ ಮೇಲೆ ಹೀರೋ ಚಿರುಗೆ ಟಕ್ಕರ್ ಕೊಡೋ ಪಾತ್ರದಲ್ಲಿಯೇ ನಟಿಸಿದ್ದಾರೆ ಅಂತಲೇ ಅರ್ಥ. ಇದಕ್ಕೆ ಪೂರಕವಾದ ದೃಶ್ಯಾವಳಿಗಳೇ ಟ್ರೈಲರ್‍ನಲ್ಲಿಯೂ ಸರಿದು ಹೋಗಿವೆ.

    ಆದರೆ ಈ ಚಿತ್ರದಲ್ಲಿ ರವಿಶಂಕರ್ ಪಾತ್ರ ಅಷ್ಟು ಸಲೀಸಾಗಿ ಊಹಿಸುವಂಥಾದ್ದಲ್ಲ. ಬಹುಶಃ ಇದುವರೆಗೂ ಕಾಣಿಸಿಕೊಳ್ಳದ ಪಾತ್ರದ ಮೂಲಕ ಸಿಂಗನ ಜೊತೆಗೆ ಅವರು ಪ್ರೇಕ್ಷಕರನ್ನು ತಲುಪಲಿದ್ದಾರೆ. ಕಥೆ ರೆಡಿ ಮಾಡುವ ಕ್ಷಣದಲ್ಲಿಯೇ ಪ್ರೇಕ್ಷಕರಿಗೊಂದು ಸರ್‍ಪ್ರೈಸ್ ಕೊಡಬೇಕೆಂಬ ಉದ್ದೇಶದಿಂದ ವಿಜಯ್ ಕಿರಣ್ ಈ ಪಾತ್ರವನ್ನು ಸೃಷ್ಟಿಸಿದ್ದರಂತೆ. ಇದು ಹೀಗೆಯೇ ಬರಬೇಕೆಂಬ ಕಲ್ಪನೆಯೊಂದು ನಿರ್ದೇಶಕರಲ್ಲಿತ್ತಲ್ಲಾ? ಅದನ್ನು ಮೀರಿಸುವಂತೆ ರವಿಶಂಕರ್ ಈ ಪಾತ್ರವನ್ನು ಮಿರುಗಿಸಿದ್ದಾರಂತೆ. ಅಷ್ಟಕ್ಕೂ ರವಿಶಂಕರ್ ಆ ಥರದ ಯಾವ ಪಾತ್ರವನ್ನು ನಿರ್ವಹಿಸಿದ್ದಾರೆಂಬ ಕುತೂಹಲ ನಿಮ್ಮಲ್ಲಿದ್ದರೆ, ಇದೇ ತಿಂಗಳ ಹತ್ತೊಂಬತ್ತರಂದು ಅದಕ್ಕೆ ನಿಖರ ಉತ್ತರ ಸಿಗಲಿದೆ.

  • ರಣ್‍ಬೀರ್ ಕಪೂರ್ ನಟನೆಗೆ ಅದಿತಿ ಫಿದಾ!

    ರಣ್‍ಬೀರ್ ಕಪೂರ್ ನಟನೆಗೆ ಅದಿತಿ ಫಿದಾ!

    ಮುಂಬೈ: ಬಹು ನಿರೀಕ್ಷಿತ ಸಂಜು ಚಿತ್ರ ಬಿಡುಗಡೆಯಾಗಿ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಂಜಯ್ ದತ್ ಜೀವನಾಧಾರಿತವಾದ ಈ ಚಿತ್ರದಲ್ಲಿ ಸಂಜಯ್ ಪಾತ್ರ ಮಾಡಿರುವ ರಣ್‍ಬೀರ್ ಕಪೂರ್ ನಟನೆಯ ಬಗ್ಗೆ ಎಲ್ಲೆಡೆ ಅದ್ಭುತ ಪ್ರತಿಕ್ರಿಯೆಗಳು ಕೇಳಿ ಬರುತ್ತಿವೆ. ಇದರಲ್ಲಿನ ಮುಖ್ಯವಾದ ಇತರೆ ಪಾತ್ರಗಳೂ ಕೂಡಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿವೆ.

    ಅದರಲ್ಲಿಯೂ ವಿಶೇಷವಾಗಿ ಸಂಜಯ್ ದತ್ ತಂಗಿ ಪ್ರಿಯಾ ಪಾತ್ರವನ್ನೂ ಕೂಡಾ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಪಾತ್ರದಲ್ಲಿ ನಟಿಸಿರುವಾಕೆ ಅದಿತಿ ಸಿಯಾ. ರಣ್‍ಬೀರ್ ಕಪೂರ್ ಜೊತೆ ನಟಿಸಿದ್ದಕ್ಕಾಗಿ ಖುಷಿಗೊಂಡಿರುವ ಆದಿತಿ ಆತನ ನಟನೆ ಮತ್ತು ವ್ಯಕ್ತಿತ್ವವನ್ನು ಕೊಂಡಾಡಿದ್ದಾಳೆ!

    ತಾನೋರ್ವ ಸ್ಟಾರ್ ನಟ ಎಂಬ ಸಣ್ಣ ಅಹಂ ಇಲ್ಲದೆ ಓರ್ವ ಕಲಾವಿದನಾಗಿ ಮಾತ್ರವೇ ವರ್ತಿಸುವ ರಣ್‍ಬೀರ್ ಒಬ್ಬ ಒಳ್ಳೆತನದ ವ್ಯಕ್ತಿ ಅಂದಿರುವ ಅದಿತಿ, ಆತ ಒನ್ ಟೇಕ್ ಸ್ಪೆಷಲಿಸ್ಟ್ ಅಂತಲೂ ಹೇಳಿಕೊಂಡಿದ್ದಾಳೆ. ರಣ್‍ಬೀರ್ ಪ್ರತೀ ದೃಶ್ಯಗಳನ್ನೂ ಒಂದೇ ಟೇಕಿಗೆ ಓಕೆ ಮಾಡಿಸಿಕೊಳ್ಳುತ್ತಿದ್ದುದರ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾಳೆ.

    ಸಂಜಯ್ ದತ್ ತಂಗಿ ಪ್ರಿಯಾ ಪಾತ್ರಕ್ಕೆ ನಿರ್ದೇಶಕರು ಸಾಕಷ್ಟು ಹುಡುಕಾಟ ನಡೆಸಿ ಕಡೆಗೆ ಅದಿತಿಯನ್ನು ಆಯ್ಕೆ ಮಾಡಿದ್ದರು. ಆದರೆ ಕಥೆಯನ್ನಷ್ಟೇ ಕೇಳಿಕೊಂಡಿದ್ದ ಅದಿತಿ ಪ್ರಿಯಾಳ ಹಾವಭಾವಗಳನ್ನು ನೇರವಾಗಿ ಅಭ್ಯಸಿಸಿರಲಿಲ್ಲವಂತೆ. ಆದರೂ ಕೂಡಾ ಎಲ್ಲರೂ ಮೆಚ್ಚುವಂತೆ ಆ ಪಾತ್ರವನ್ನು ಮಾಡಲು ರಣ್‍ಬೀರ್ ಕಪೂರ್ ಕೊಟ್ಟ ಸಲಹೆಗಳೇ ಕಾರಣ ಎಂದೂ ಅದಿತಿ ಹೇಳಿಕೊಂಡಿದ್ದಾಳೆ.