Tag: Aditi Prabudeva

  • ರಂಗನಾಯಕಿ: ಕನ್ನಡಿಗರೆಲ್ಲರ ಹೆಮ್ಮೆಯ ಚಿತ್ರ!

    ರಂಗನಾಯಕಿ: ಕನ್ನಡಿಗರೆಲ್ಲರ ಹೆಮ್ಮೆಯ ಚಿತ್ರ!

    ಬೆಂಗಳೂರು: ಕನ್ನಡ ಚಿತ್ರಗಳು ಕರ್ನಾಟಕಕ್ಕೆ ಮಾತ್ರವೇ ಸೀಮಿತ ಎಂಬಂಥಾ ವಾತಾವರಣ ಹಲವಾರು ವರ್ಷಗಳ ಕಾಲ ಚಾಲ್ತಿಯಲ್ಲಿತ್ತು. ಆದರೆ ಕನ್ನಡ ಸಿನಿಮಾಗಳು ಪರಭಾಷಾ ಚಿತ್ರಗಳಿಗೆ ಸೆಡ್ಡು ಹೊಡೆದು ನಿಲ್ಲುತ್ತವೆ, ಪರಭಾಷಾ ಚಿತ್ರಗಳೆದುರೂ ಸ್ಪರ್ಧೆಯೊಡ್ಡಿ ಗೆದ್ದು ಬೀಗುತ್ತವೆಂಬುದು ಇತ್ತೀಚಿನ ದಿನಗಳಲ್ಲಿ ಸ್ಪಷ್ಟವಾಗಿಯೇ ಮನನವಾಗಿದೆ. ಕೆಜಿಎಫ್‍ನಂಥಾ ಚಿತ್ರಗಳು ಅದನ್ನು ಮತ್ತಷ್ಟು ಸ್ಪಷ್ವಾಗಿಯೇ ಸಾಬೀತುಗೊಳಿಸಿವೆ. ಇತ್ತೀಚೆಗೆ ಶುರುವಾಗಿರೋ ಕನ್ನಡ ಚಿತ್ರಗಳ ಖದರ್ ಅನ್ನು ದಯಾಳ್ ಪದ್ಮನಾಭನ್ ನಿರ್ದೇಶನದಲ್ಲಿ ಮೂಡಿ ಬಂದಿರೋ ರಂಗನಾಯಕಿ ಚಿತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಮಿರುಗುವಂತೆ ಮಾಡಿದೆ.

    ಪ್ರತೀ ಬಾರಿ ಗೋವಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡ ಚಿತ್ರಗಳು ಸ್ಥಾನ ಗಿಟ್ಟಿಸಿಕೊಳ್ಳಲು ಶತಾಯ ಗತಾಯ ಪ್ರಯತ್ನಿಸುತ್ತಿದ್ದವು. ಆದರೆ ತೀವ್ರ ಸ್ಪರ್ಧೆಯೊಡ್ಡಿದರೂ ಅದು ಸಾಧ್ಯವಾಗಿರಲಿಲ್ಲ. ಆದರೆ ರಂಗನಾಯಕಿ ವಿಚಾರದಲ್ಲಿ ಬಹು ಕಾಲದ ಕನಸು ಕೈಗೂಡಿದೆ. ಈ ಚಿತ್ರ ಗೋವಾ ಫಿಲಂ ಫೆಸ್ಟಿವಲ್‍ನ ಇಂಡಿಯನ್ ಪನೋರಮಾ ವಿಭಾಗದಲ್ಲಿ ಆಯ್ಕೆಯಾಗಿದೆ. ಈ ಮೂಲಕ ಈ ಸಿನಿಮೋತ್ಸವಕ್ಕೆ ಆಯ್ಕೆಯಾಗಿರೋ ಮೊದಲ ಚಿತ್ರವೆಂಬ ಹೆಗ್ಗಳಿಕೆಯೂ ಈ ಚಿತ್ರದ ಪಾಲಾಗಿದೆ.

    ಇದು ಪ್ರತಿಯೊಬ್ಬರೂ ಹೆಮ್ಮೆ ಪಡುವಂಥಾ ಸಂಗತಿ. ಈ ಮೂಲಕವೇ ದಯಾಳ್ ಕನ್ನಡ ಚಿತ್ರರಂಗದ ತಾಕತ್ತೇನೆಂಬುದನ್ನು ಇಡೀ ದೇಶಕ್ಕೇ ತೋರಿಸಿಕೊಟ್ಟಿದ್ದಾರೆ. ಅದೇನು ಸಾಮಾನ್ಯದ ಸಾಧನೆಯಲ್ಲ. ವಿಶ್ವಾದ್ಯಂತ ಬೇರೆ ಬೇರೆ ಭಾಷೆಗಳ ನೂರಾರು ಚಿತ್ರಗಳೊಂದಿಗೆ ಸರ್ಧೆಯೊಡ್ಡಿ ಜಯಿಸಿಕೊಂಡರೆ ಮಾತ್ರವೇ ಈ ಸಿನಿಮೋತ್ಸವಕ್ಕೆ ಪ್ರವೇಶ ಸಿಗುತ್ತದೆ. ಅದನ್ನು ರಂಗನಾಯಕಿ ಚಿತ್ರ ಸಮರ್ಥವಾಗಿಯೇ ಮಾಡಿ ತೋರಿಸಿದೆ. ಇದು ಸದರಿ ಚಿತ್ರದ ಭಿನ್ನವಾದ ಹೂರಣದ ಪ್ರತಿಫಲ. ಇನ್ನೇನು ವಾರದೊಪ್ಪತ್ತಿನಲ್ಲಿಯೇ ಬಿಡುಗಡೆಗೊಳ್ಳಲಿರೋ ರಂಗನಾಯಕಿ ಕನ್ನಡಿಗರೆಲ್ಲರ ಹೆಮ್ಮೆಯ ಚಿತ್ರವೆಂಬುದರಲ್ಲಿ ಎರಡು ಮಾತಿಲ್ಲ.

  • ಟ್ರೇಲರ್‌ನಲ್ಲಿ  ಕಂಡಿದ್ದು ಭಿನ್ನ ಕಥೆಯ ರಂಗನಾಯಕಿ!

    ಟ್ರೇಲರ್‌ನಲ್ಲಿ ಕಂಡಿದ್ದು ಭಿನ್ನ ಕಥೆಯ ರಂಗನಾಯಕಿ!

    ಬೆಂಗಳೂರು: ನಿರ್ದೇಶಕ ದಯಾಳ್ ಪದ್ಮನಾಭನ್ ಯಾವ ಚಿತ್ರವನ್ನೇ ಮಾಡಿದರೂ ವಿಶಿಷ್ಟವಾದ ಕಥೆಯನ್ನೇ ಕೈಗೆತ್ತಿಕೊಂಡಿರುತ್ತಾರೆಂಬ ನಂಬಿಕೆ ಪ್ರೇಕ್ಷಕರಲ್ಲಿದೆ. ಇತ್ತೀಚೆಗೆ ತೆರೆಗಂಡಿದ್ದ ತ್ರಯಂಬಕಂ ಚಿತ್ರದವರೆಗೂ ಅವರು ಆ ನಂಬಿಕೆಯನ್ನು ಹುಸಿಗೊಳಿಸಿದ್ದೇ ಇಲ್ಲ. ಇದೀಗ ಅವರು ರಂಗನಾಯಕಿ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅದರ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಮೂಲಕವೇ ಇದು ದಯಾಳ್ ನಿರ್ದೇಶನದ ಇದುವರೆಗಿನ ಚಿತ್ರಗಳಿಗಿಂತಲೂ ಭಿನ್ನವಾದ ಕಥೆಯನ್ನೊಳಗೊಂಡಿರೋ ಸಿನಿಮಾ ಎಂಬ ಭರವಸೆ ಪ್ರೇಕ್ಷಕರಲ್ಲಿ ಮೂಡಿಕೊಂಡಿದೆ.

    ಈ ಟ್ರೇಲರ್ ಬಿಡುಗಡೆಯಾದ ತುಸು ಹೊತ್ತಿನಲ್ಲಿಯೇ ವ್ಯಾಪಕ ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ ಭರ್ಜರಿಯಾದ ಪಾಸಿಟಿವ್ ಕಮೆಂಟುಗಳನ್ನೂ ತನ್ನದಾಗಿಸಿಕೊಳ್ಳುತ್ತಾ ಯೂಟ್ಯೂಬ್ ಟ್ರೆಂಡಿಂಗ್‍ನತ್ತ ಸಾಗುತ್ತಿದೆ. ವ್ಯಾಲ್ಯೂಮ್ 1 ವರ್ಜಿನಿಟಿ ಎಂಬ ಟ್ಯಾಗ್ ಲೈನ್ ಹೊಂದಿರೋ ರಂಗನಾಯಕಿಯ ಕಥೆ ಅತ್ಯಾರಕ್ಕೊಳಗಾದ ಹುಡುಗಿಯೊಬ್ಬಳು ಸಮಾಜವನ್ನು ಎದುರಿಸುವಂಥಾ ಸೂಕ್ಷ್ಮ ಕಥಾಹಂದರವನ್ನೊಳಗೊಂಡಿರೋ ಸ್ಪಷ್ಟ ಸುಳಿವನ್ನು ಈ ಟ್ರೇಲರ್ ಬಿಟ್ಟು ಕೊಟ್ಟಿದೆ. ಇದು ವಿಶೇಷವಾದ ಕಥೆಯ ಮಹಿಳಾಪ್ರಧಾನ ಚಿತ್ರ. ಇಲ್ಲಿ ನಾಗಕನ್ನಿಕೆ ಖ್ಯಾತಿಯ ಅದಿತಿ ಪ್ರಭುದೇವ ರಂಗನಾಯಕಿಯಾಗಿ ಅಮೋಘವಾಗಿ ಅಭಿನಯಿಸಿರೋ ಸ್ಪಷ್ಟ ಲಕ್ಷಣಗಳೂ ಗೋಚರಿಸಿವೆ.

    ದಯಾಳ್ ಪದ್ಮನಾಭನ್ ಅವರಿಗೆ ಈ ಚಿತ್ರದಲ್ಲಿಯೂ ನಟ ನವೀನ್ ಕೃಷ್ಣ ಸಂಭಾಷಣೆಕಾರರಾಗಿ ಸಾಥ್ ಕೊಟ್ಟಿದ್ದಾರೆ. ಅದಿತಿ ಪ್ರಭುದೇವ ಜೊತೆ ಎಂಜಿ ಶ್ರೀನಿವಾಸ್ ಮತ್ತು ತ್ರಿವಿಕ್ರಂ ಮುಖ್ಯ ಪಾತ್ರಗಳ ಮೂಲಕ ಜೊತೆಯಾಗಿದ್ದಾರೆ. ಈ ಹಿಂದೆ ಎಟಿಎಂ ಎಂಬ ಚಿತ್ರ ನಿರ್ಮಾಣ ಮಾಡಿದ್ದ ಎಸ್ ವಿ ನಾರಾಯಣ್ ರಂಗನಾಯಕಿಗೂ ಬಂಡವಾಳ ಹೂಡಿದ್ದಾರೆ. ಹೆಣ್ಣೊಬ್ಬಳು ಅತ್ಯಾಚಾರಕ್ಕೊಳಗಾದರೆ ಕೇಸು ದಾಖಲಿಸಿ ಅತ್ಯಾಚಾರಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲೂ ಪೋಶಕರು ಹಿಂದೇಟು ಹಾಕುತ್ತಾರೆ. ಅದಕ್ಕೆ ಕಾರಣ ಈ ಸಮಾಜದ ಭಯ. ಆದರಿಲ್ಲಿ ಅತ್ಯಾಚಾರಕ್ಕೀಡಾದ ನಾಯಕಿಯೇ ಖುದ್ದಾಗಿ ಕೇಸು ದಾಖಲಿಸೋ ದೃಷ್ಯದ ಮೂಲಕ ಇದೊಂದು ಭಿನ್ನ ಕಥೆ ಹೊಂದಿರೋ ಚಿತ್ರವೆಂಬ ಸುಳಿವನ್ನೂ ಈ ಟ್ರೇಲರ್ ಬಿಟ್ಟುಕೊಟ್ಟಿದೆ. ಇದುವೇ ರಂಗನಾಯಕಿಗಾಗಿ ಪ್ರೇಕ್ಷಕರು ನಕಾತರದಿಂದ ಕಾಯುವಂತೆಯೂ ಮಾಡಿದೆ.

  • ಶ್ಯಾನೆ ಟಾಪಾಗಿದೆಯಂತೆ ಸಿಂಗನ ಕಥೆ!

    ಶ್ಯಾನೆ ಟಾಪಾಗಿದೆಯಂತೆ ಸಿಂಗನ ಕಥೆ!

    ಬೆಂಗಳೂರು: ಚಿರಂಜೀವಿ ಸರ್ಜಾ `ಸಿಂಗ’ ಚಿತ್ರ ಇದೇ ತಿಂಗಳ ಹತ್ತೊಂಬತ್ತರಂದು ಬಿಡುಗಡೆಗೆ ರೆಡಿಯಾಗಿದೆ. ಹಾಡು, ಟ್ರೈಲರ್, ಪೋಸ್ಟರ್ ಸೇರಿದಂತೆ ಎಲ್ಲದರಲ್ಲಿಯೂ ಹೊಸ ಕಳೆ ತುಂಬಿಕೊಂಡಿರೋ ಈ ಚಿತ್ರಕ್ಕೆ ಪಾಸಿಟಿವ್ ಟಾಕ್‍ನ ಒಡ್ಡೋಲಗ ಭರ್ಜರಿ ಸಾಥ್ ನೀಡುತ್ತಿದೆ. ಟ್ರೈಲರ್ ಮುಂತಾದ ಬಿಡುಗಡೆ ಪೂರ್ವ ಚಟುವಟಿಕೆಗಳ ಮೂಲಕ ಚರ್ಚೆಗೆ ಕಾರಣವಾಗೋ ಚಿತ್ರಗಳು ಗೆಲುವು ಕಂಡ ಅದೆಷ್ಟೋ ಉದಾಹರಣೆಗಳಿವೆ. ಈ ಫಾರ್ಮುಲಾ ಆಧರಿಸಿ ಹೇಳೋದಾದರೆ ಸಿಂಗ ಚಿತ್ರದ ಗೆಲುವು ನಿಚ್ಚಳವಾದಂತಿದೆ!

    ಅದೇನೇ ಹೈಪು ಸೃಷ್ಟಿಯಾದರೂ ಚಿತ್ರವೊಂದು ಗೆಲ್ಲೋದರಲ್ಲಿ ಗಟ್ಟಿ ಕಥೆಯದ್ದು ಸಿಂಹಪಾಲು. ಸಿಂಗ ಚಿತ್ರದ ಕಥೆಯೂ ಅಷ್ಟೇ ಅದ್ಭುತವಾಗಿದೆಯಂತೆ. ಸಿನಿಮಾಗಳ ಆಯ್ಕೆ ವಿಚಾರದಲ್ಲಿ ವಿಶಿಷ್ಟವಾದ ಟೇಸ್ಟ್ ಹೊಂದಿರುವವರು ಚಿರಂಜೀವಿ ಸರ್ಜಾ. ಅವರೇ ಈ ಕಥೆ ಕೇಳಿ ಆರಂಭದಲ್ಲಿಯೇ ಥ್ರಿಲ್ ಆಗಿದ್ದರಂತೆ. ಮಾಸ್ ಸೇರಿದಂತೆ ಎಲ್ಲ ಅಂಶಗಳಿಂದ ಮೈ ಕೈ ತುಂಬಿಕೊಂಡಿರೋ ಈ ಕಥೆಯ ಸೊಗಸು ಕಂಡೇ ವಿಶೇಷ ಆಸಕ್ತಿ ವಹಿಸಿ ಚಿರು ಈ ಚಿತ್ರವನ್ನು ಪೂರ್ಣಗೊಳಿಸಿಕೊಂಡಿದ್ದಾರೆ. ಸಿಂಗ ತಮ್ಮ ವೃತ್ತಿ ಬದುಕಿಗೆ ಹೊಸ ದಿಕ್ಕಾಗಲಿದೆ ಎಂಬ ಗಾಢ ವಿಶ್ವಾಸವೂ ಅವರಲ್ಲಿದೆ.

    ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಸಿನಿಮಾದ ಶ್ಯಾನೆ ಟಾಪಗೌಳೆ ಎಂಬ ಹಾಡೊಂದು ಭಾರೀ ಫೇಮಸ್ ಆಗಿ ಟ್ರೆಂಡ್ ಸೆಟ್ ಮಾಡಿದೆ. ಈ ಹಾಡಿನ ಅದ್ಧೂರಿತನ ಇಡೀ ಚಿತ್ರದಲ್ಲಿಯೂ ತುಂಬಿಕೊಂಡಿದೆಯಂತೆ. ನಿರ್ದೇಶಕರಾದ ವಿಜಯ್ ಕಿರಣ್ ಅಷ್ಟೊಂದು ಕಾಳಜಿಯಿಂದ, ಎಲ್ಲ ಪ್ರೇಕ್ಷಕ ವರ್ಗವನ್ನೂ ಸಂತುಷ್ಟಗೊಳಿಸುವ ಇರಾದೆಯಿಂದಲೇ ಸಿಂಗನನ್ನು ಶೃಂಗರಿಸಿದ್ದಾರೆ. ಯಶಸ್ವಿ ನಿರ್ಮಾಪಕ ಉದಯ್ ಕೆ ಮೆಹ್ತಾ ಅಂಥಾದ್ದೇ ಕಾಳಜಿಯಿಂದ ಪ್ರತಿ ಹೆಜ್ಜೆಯಲ್ಲಿಯೂ ಸಿಂಗನನ್ನು ಪೊರೆದಿದ್ದಾರೆ. ಇಂಥಾ ಪ್ರೀತಿಯಿಂದಲೇ ಪೊಗದಸ್ತಾಗಿ ಮೂಡಿ ಬಂದಿರೋ ಈ ಚಿತ್ರ ಇದೇ ಹತ್ತೊಂಬತ್ತರಂದು ನಿಮ್ಮ ಮುಂದೆ ಬರಲಿದೆ.