Tag: Aditya L-1

  • PublicTV Explainer: ಚಂದ್ರ, ಸೂರ್ಯಯಾನ ಆಯ್ತು.. ಈಗ ಶುಕ್ರನ ಮೇಲೆ ಇಸ್ರೋ ಕಣ್ಣು – ಶುಕ್ರಯಾನ ಯಾವಾಗ?

    PublicTV Explainer: ಚಂದ್ರ, ಸೂರ್ಯಯಾನ ಆಯ್ತು.. ಈಗ ಶುಕ್ರನ ಮೇಲೆ ಇಸ್ರೋ ಕಣ್ಣು – ಶುಕ್ರಯಾನ ಯಾವಾಗ?

    – ಒಡಲಲ್ಲಿ ಜ್ವಾಲಾಮುಖಿ, ಹೊಳೆಯುವ ಗ್ರಹದ ಅಧ್ಯಯನ ಹೇಗೆ?
    – ಶುಕ್ರನ ಒಂದು ಹಗಲು, ಒಂದು ರಾತ್ರಿಗೆ ಬೇಕು 243 ದಿನ
    – ಭೂಮಿಯ ಸಹೋದರ ಗ್ರಹ ಶುಕ್ರನ ವೈಶಿಷ್ಟ್ಯತೆ ಏನು?

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗೈಲ್ಲು ಸೃಷ್ಟಿಸುತ್ತಿದೆ. ಚಂದ್ರಯಾನ-3 (Chandrayaan-3), ಸೂರ್ಯಯಾನದಂಥ (Aditya L1) ಐತಿಹಾಸಿಕ ಕಾರ್ಯಾಚರಣೆ ಕೈಗೊಂಡು ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಇಸ್ರೋದ ಬಾಹ್ಯಾಕಾಶ ಸಾಧನೆಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಈ ಹೊತ್ತಿನಲ್ಲಿ ಇಸ್ರೋ ಮತ್ತೊಂದು ಕಾರ್ಯಾಚರಣೆಗೆ ಸಿದ್ಧವಾಗಿದೆ. ಅದೇ ಶುಕ್ರಯಾನ. ಚಂದ್ರಯಾನ-3, ಆದಿತ್ಯ ಎಲ್1 (ಸೂರ್ಯಯಾನ) ಯಶಸ್ಸಿನ ಬಳಿಕ ಮಾತನಾಡಿರುವ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ (S.Somanath), ಶುಕ್ರ ಅಧ್ಯಯನ ಮಿಷನ್ ಕೈಗೊಳ್ಳಲು ತಯಾರಾಗಿದ್ದೇವೆ ಎಂದು ಹೇಳಿದ್ದಾರೆ. ಅಂತರಗ್ರಹ ಯೋಜನೆಗಳನ್ನು ನಡೆಸಲು ನಾವು ಸಮರ್ಥರಿದ್ದೇವೆ ಎಂದೂ ಸಹ ತಿಳಿಸಿದ್ದಾರೆ.

    ಶುಕ್ರ ಗ್ರಹ ವೈಶಿಷ್ಟ್ಯ ಏನು?
    ಸೂರ್ಯನಿಗೆ ಅತಿ ಸಮೀಪದ ಎರಡನೇ ಗ್ರಹ ಶುಕ್ರ (Shukrayaan). ಸೂರ್ಯನನ್ನು ಒಂದು ಬಾರಿ ಪ್ರದಕ್ಷಿಣೆ ಹಾಕಲು 224.7 ದಿನಗಳನ್ನು ತೆಗೆದುಕೊಳ್ಳುತ್ತದೆ. ಅತ್ಯಂತ ಪ್ರಕಾಶಮಾನವಾದ ಗ್ರಹ ಇದು. ಮುಂಜಾನೆ ಮತ್ತು ಮುಸ್ಸಂಜೆಯಲ್ಲಿ ಚೆನ್ನಾಗಿ ಕಾಣುವ ಶುಕ್ರ ಗ್ರಹವನ್ನು ‘ಹಗಲು ನಕ್ಷತ್ರ’ ಮತ್ತು ‘ಸಂಜೆ ನಕ್ಷತ್ರ’ ಎಂದೂ ಕರೆಯಲಾಗುತ್ತದೆ. ಗಾತ್ರದಲ್ಲಿ ಭೂಮಿಯಷ್ಟೇ ಇದೆ. ತನ್ನ ಅಕ್ಷದ ಮೇಲೆ ಬುಧ ಗ್ರಹಕ್ಕಿಂತ ನಿಧಾನವಾಗಿ ಸುತ್ತುವ ಈ ಗ್ರಹದ ಒಂದು ದಿನ, ಭೂಮಿಯ 243 ದಿನಕ್ಕೆ ಸಮ. ಶುಕ್ರ ಗ್ರಹ ಭೂಮಿಯ ವಿರುದ್ಧ ದಿಕ್ಕಿನಲ್ಲಿ ಸುತ್ತುತ್ತದೆ. ಇದರ ವಾತಾವರಣದಲ್ಲಿ ಇಂಗಾಲಾಮ್ಲ ಹೆಚ್ಚಾಗಿದೆ. ಹೀಗಾಗಿ ಈ ಗ್ರಹದಲ್ಲಿ ಜೀವಿಗಳು ಇಲ್ಲ. ಇದರ ಮೇಲ್ಮೈ ಸೀಸವನ್ನೂ ಕರಗಿಸಬಲ್ಲಷ್ಟು ಶಾಖದಿಂದ ಕೂಡಿದೆ. ವ್ಯಾಪಕವಾಗಿ ಜ್ವಾಲಾಮುಖಿಗಳು ಕಂಡುಬರುವ ಇದರ ಮೇಲ್ಮೈನಲ್ಲಿ ಇಂದಿಗೂ ಕೆಲವು ಜ್ವಾಲಾಮುಖಿಗಳು ಜೀವಂತವಾಗಿರಬಹುದು ಎಂದು ಅಧ್ಯಯನಯಗಳು ಹೇಳುತ್ತವೆ. ಇದನ್ನೂ ಓದಿ: ಚಂದ್ರನ ದಕ್ಷಿಣ ಧ್ರುವದಲ್ಲಿ ಗಂಧಕ ಪತ್ತೆ ಹಚ್ಚಿದ ಚಂದ್ರಯಾನ-3

    ಭುವಿಯ ಸಹೋದರ ಗ್ರಹ
    ಭೂಮಿಯ ಅವಳಿ ಗ್ರಹ ಎಂದೇ ಗುರುತಿಸಿಕೊಂಡಿರುವುದು ಶುಕ್ರ ಗ್ರಹ. ಬರಿಗಣ್ಣಿಗೆ ಕಾಣುವ ಶುಕ್ರ ಹೆಚ್ಚು ಚಂದವಾದ ಗ್ರಹ. ಗಾತ್ರ ಮತ್ತು ಸಾಂಧ್ರತೆಯಲ್ಲಿ ಭೂಮಿಯನ್ನು ಹೋಲುತ್ತದೆ. ಆದ್ದರಿಂದಲೇ ಇದನ್ನು ಭೂಮಿಯ ಅವಳಿ ಗ್ರಹ ಎಂದು ಕರೆಯಲಾಗುತ್ತದೆ. ಶುಕ್ರ ಗ್ರಹ 95% ಇಂಗಾಲದ ಆಕ್ಸೈಡ್ ಹಾಗೂ ಸ್ವಲ್ಪ ರಂಜಕದ ಡೈಆಕ್ಸೈಡ್ ಹೊಂದಿದೆ. ಅತಿ ಹೆಚ್ಚಿನ ಸೂರ್ಯನ ಬೆಳಕನ್ನು ಪ್ರತಿಫಲಿಸುವುದರಿಂದ ಶುಕ್ರ ಹೆಚ್ಚು ಪ್ರಕಾಶಮಾನ ಗ್ರಹ ಎಂದು ಬಿಂಬಿತವಾಗಿದೆ. ಸೂರ್ಯನಿಂದ ಶುಕ್ರ 11 ಕೋಟಿ ಕಿ.ಮೀ ದೂರದಲ್ಲಿದೆ.

    ಶುಕ್ರ ಅಧ್ಯಯನಕ್ಕೆ ಇಲ್ಲಿವರೆಗೆ ಕೈಗೊಂಡ ಮಿಷನ್‌ಗಳೆಷ್ಟು?
    ಮಾನವ ಶುಕ್ರ ಗ್ರಹವನ್ನು ಕುತೂಹಲ ಕಣ್ಣಿನಿಂದ ನೋಡುತ್ತಿದ್ದಾನೆ. ಹೀಗಾಗಿ ಶುಕ್ರ ಗ್ರಹಕ್ಕೆ 40 ಕ್ಕೂ ಹೆಚ್ಚು ಬಾಹ್ಯಾಕಾಶ ಕಾರ್ಯಾಚರಣೆಗಳು ನಡೆದಿವೆ. ಪಕ್ಕಾ ಮಾಹಿತಿ ಅಂದ್ರೆ, ಇಲ್ಲಿವರೆಗೆ 46 ಬಾಹ್ಯಾಕಾಶ ನೌಕೆಗಳು ಶುಕ್ರನ ಅಧ್ಯಯನಕ್ಕಾಗಿ ಉಡಾವಣೆಗೊಂಡಿವೆ. ಜಪಾನ್‌ನ ಅಕಾಟ್ಸುಕಿ ಬಾಹ್ಯಾಕಾಶ ನೌಕೆ ಪ್ರಸ್ತುತ ಶುಕ್ರನ ಕಕ್ಷೆಯಲ್ಲಿ ಸುತ್ತುತ್ತಿದೆ. ಮುಂದಿನ ದಶಕದಲ್ಲಿ ಮೂರು ಹೊಸ ಮಿಷನ್‌ಗಳು ಪ್ರಾರಂಭವಾಗಲಿವೆ ಎಂದು ನಾಸಾ ತಿಳಿಸಿದೆ. ಇದನ್ನೂ ಓದಿ: ದ್ರವರೂಪದ ಚಿನ್ನ, ಬಾಹ್ಯಾಕಾಶದಲ್ಲಿ ವಾಸ್ತವ್ಯ, ಮಾನವ ಸಾಹಸಗಳಿಗೆ ಹಾದಿ ಮಾಡಿಕೊಡಲಿದೆ ಚಂದ್ರಯಾನ-3ರ ಯಶಸ್ಸು

    ಶುಕ್ರಯಾನದ ಇತಿಹಾಸ ಏನು?
    ಶುಕ್ರ ಗ್ರಹದ ಅಧ್ಯಯನಕ್ಕೆ ಜಗತ್ತಿನಲ್ಲೇ ಮೊಟ್ಟ ಮೊದಲ ಬಾರಿಗೆ ಸೋವಿಯತ್ ಒಕ್ಕೂಟ 1961 ರಲ್ಲಿ ಟ್ಯಾಝೆಲಿ ಸ್ಪುಟ್ನಿಕ್ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಿತು. ಆದರೆ ಮಿಷನ್ ವಿಫಲವಾಯಿತು. ಬಳಿಕವು ಶುಕ್ರ ಗ್ರಹಕ್ಕೆ ಹಲವಾರು ಕಾರ್ಯಾಚರಣೆಗಳನ್ನು ನಡೆಸಲು ಮುಂದಾಗಿ ಸೋವಿಯತ್ ಒಕ್ಕೂಟ ಕೈಸುಟ್ಟುಕೊಂಡಿತು. ಈ ನಡುವೆ 1962 ರ ಜುಲೈ 22 ರಂದು ಮ್ಯಾರಿನರ್ 1 ನೌಕೆ ಉಡಾವಣೆ ಮಾಡಿ ವಿಫಲವಾಗಿದ್ದ ಅಮೆರಿಕದ ನಾಸಾ (NASA), ತನ್ನ ಎರಡನೇ ಪ್ರಯತ್ನದಲ್ಲೇ ಯಶಸ್ಸು ಕಂಡಿತು. ನಾಸಾ ಅದೇ ವರ್ಷದ ಆಗಸ್ಟ್ 27 ರಂದು ಹಾರಿಸಿದ್ದ ಮ್ಯಾರಿನರ್ 2 ನೌಕೆಯು 109 ದಿನಗಳ ನಂತರ ಶುಕ್ರನನ್ನು ಸಮೀಪಿಸಿತು. ಶುಕ್ರನ ಮೇಲ್ಮೈನಿಂದ 34,833 ಕಿ.ಮೀ ದೂರದಲ್ಲಿ ಹಾದುಹೋದ ವಿಶ್ವದ ಮೊಟ್ಟಮೊದಲ ಅಂತರಗ್ರಹ ಯಾತ್ರೆ ಇದಾಯಿತು.

    ನಾಸಾದ ಮ್ಯಾರಿನರ್ 2 ನೌಕೆಯು 1962ರ ಡಿಸೆಂಬರ್ 14 ರಂದು ಶುಕ್ರನ ಹತ್ತಿರ ಹಾರಾಡಿದ ಮೊದಲ ಬಾಹ್ಯಾಕಾಶ ನೌಕೆಯಾಯಿತು. 42 ನಿಮಿಷಗಳ ಸ್ಕ್ಯಾನರ್‌ನಲ್ಲಿ ಸಂಗ್ರಹಿಸಿದ ಡೇಟಾವು, ಭೂಮಿಯ ನೆರೆಯ ಗ್ರಹವನ್ನು ನಾವು ಸಾಮಾನ್ಯವಾಗಿ ನೋಡುವ ದೃಷ್ಟಿಕೋನವನ್ನೇ ಬದಲಾಯಿತು. ಶುಕ್ರದ ಮೋಡ ಪದರಗಳು ತಣ್ಣಗಿದ್ದರೂ, ಅದರ ಮೇಲ್ಮೈ 425 ಡಿಗ್ರಿ ಸೆಲ್ಸಿಯಸ್ ತಾಪಮಾನದೊಂದಿಗೆ ಅತಿ ಬಿಸಿಯಾಗಿದೆ ಎಂದು ಮ್ಯಾರಿನರ್ 2 ನೌಕೆಯ ಮೈಕ್ರೋತರಂಗ ಮತ್ತು ರೇಡಿಯೋಮಾಪಕಗಳು ಕಂಡುಹಿಡಿದವು. ಈ ವಿಚಾರ ಬೆಳೆಕಿಗೆ ಬಂದ ನಂತರ ಶುಕ್ರ ಗ್ರಹದ ಮೇಲ್ಮೈನಲ್ಲಿ ಜೀವಿಗಳಿರಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಯಿತು.

    ಶುಕ್ರನ ವಾಯುಮಂಡಲ ಹೇಗಿದೆ?
    ವಿಫಲ ಯತ್ನಗಳಿಂದ ಕಂಗೆಟ್ಟಿದ್ದ ಸೋವಿಯತ್ ಒಕ್ಕೂಟ 1966ರಲ್ಲಿ ಉಡಾಯಿಸಿದ್ದ ವೆನೆರಾ 3 ನೌಕೆಯು ದೇಶದ ವಿಜ್ಞಾನಿಗಳಲ್ಲಿ ಭರವಸೆಯ ಬೆಳಕನ್ನು ಮೂಡಿಸಿತು. ಈ ನೌಕೆಯು ಶುಕ್ರ ಗ್ರಹದ ಮೇಲ್ಮೈನಲ್ಲಿ ಅಪ್ಪಳಿಸಿತು. ಆದರೆ ಭೂಮಿಯಲ್ಲದೇ ಇನ್ನೊಂದು ಗ್ರಹದ ಮೇಲ್ಮೈಯನ್ನು ತಲುಪಿದ ಮೊಟ್ಟಮೊದಲ ನೌಕೆ ಎಂದು ಹೆಸರು ಮಾಡಿತು. ಇದಾದ ನಂತರ ಮತ್ತೆ 1967 ರಲ್ಲಿ ರಷ್ಯಾ ಉಡಾಯಿಸಿದ ವೆನೆರಾ 4 ನೌಕೆ ಯಶಸ್ವಿಯಾಗಿ ಶುಕ್ರದ ವಾಯುಮಂಡಲವನ್ನು ಪ್ರವೇಶಿಸಿ ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಿತು. ಶುಕ್ರದ ವಾಯುಮಂಡಲವು 90 ರಿಂದ 95% ಇಂಗಾಲದ ಡೈಆಕ್ಸೈಡ್‌ನಿಂದ ಕೂಡಿದ್ದು, ಸುಮಾರು 500 ಡಿಗ್ರಿ ಸೆಲ್ಸಿಯಸ್‌ನಲ್ಲಿ ಮೇಲ್ಮೈ ತಾಪಮಾನ ಇದೆ ಎಂದು ಮಾಪನ ಮಾಡಿತು. ಇದು ನಾಸಾದ ಮ್ಯಾರಿನರ್ 2 ಮಾಪಿಸಿದ್ದಕ್ಕಿಂತ ಹೆಚ್ಚು ಎಂದು ತಿಳಿಸಿತು. ಇದಾದ ನಂತರ ರಷ್ಯಾ ಹಾಗೂ ಅಮೆರಿಕ ದೇಶಗಳು ಹಲವಾರು ಮಿಷನ್ ಕೈಗೊಂಡು ಶುಕ್ರ ಗ್ರಹದ ಅಧ್ಯಯನ ನಡೆಸಿವೆ. ಇದನ್ನೂ ಓದಿ: ಚಂದ್ರಯಾನ-3 ಲ್ಯಾಂಡರ್‌, ರೋವರ್‌ನಿಂದ ಸಿಗ್ನಲ್‌ ಸಿಗ್ತಿಲ್ಲ: ಇಸ್ರೋ

    ಶುಕ್ರನ ಮೇಲೆ ರಷ್ಯಾ ಮೊದಲ ಲ್ಯಾಂಡಿಂಗ್
    ಡಿಸೆಂಬರ್ 15, 1970 ರಂದು ಮಾನವರಹಿತ ಸೋವಿಯತ್ ಬಾಹ್ಯಾಕಾಶ ನೌಕೆ ವೆನೆರಾ 7 ಮತ್ತೊಂದು ಗ್ರಹದಲ್ಲಿ ಇಳಿದ ಮೊದಲ ಬಾಹ್ಯಾಕಾಶ ನೌಕೆಯಾಯಿತು. ಇದು ಶುಕ್ರದ ಮೇಲಿನ ವಾತಾವರಣದ ತಾಪಮಾನವನ್ನು ಅಳೆಯಿತು. ನೌಕೆಯು 23 ನಿಮಿಷಗಳವರೆಗೆ ಶುಕ್ರದ ತಾಪಮಾನದ ಮಾಹಿತಿಯನ್ನು ಕಳುಹಿಸಿತು. ಬೇರೊಂದು ಗ್ರಹದ ಮೇಲ್ಮೈನಿಂದ ಬಂದ ಮೊದಲ ದೂರಮಾಪಿತ ಮಾಹಿತಿ ಇದಾಗಿದೆ.

    ಸೋವಿಯತ್ ಒಕ್ಕೂಟ, ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಬಾಹ್ಯಾಕಾಶ ಒಕ್ಕೂಟ, ಜಪಾನ್ ದೇಶಗಳು ಶುಕ್ರ ಗ್ರಹಕ್ಕೆ ಕಾರ್ಯಾಚರಣೆ ಕೈಗೊಂಡು ಗ್ರಹದ ವಾಯುಮಂಡಲ, ಮೇಲ್ಮೈ ಭೂವಿಜ್ಞಾನದ ವೈಜ್ಞಾನಿಕ ಅಧ್ಯಯನಗಳನ್ನು ನಡೆಸಿವೆ. ಶುಕ್ರ ಗ್ರಹಕ್ಕೆ ಸಂಬಂಧಿಸಿದ ಕುತೂಹಲಕಾರಿ ಅಂಶಗಳನ್ನು ಈ ದೇಶಗಳು ವಿಶ್ಲೇಷಿಸಿವೆ. ಈ ದೇಶಗಳ ಸಾಲಿಗೆ ಸೇರಲು ಭಾರತ ಕೂಡ ಸಜ್ಜಾಗಿದೆ. ಶುಕ್ರಯಾನ ಕೈಗೊಳ್ಳಲು ಭಾರತದ ಇಸ್ರೋ ಸಿದ್ಧತೆ ನಡೆಸುತ್ತಿದೆ.

    ಆದಾಗ್ಯೂ, ಶುಕ್ರನನ್ನು ಅಧ್ಯಯನ ಮಾಡುವುದು ಸುಲಭದ ಸಾಧನೆಯಲ್ಲ. ತೀವ್ರವಾದ ಶಾಖ ಮತ್ತು ಗಾಳಿಯ ಒತ್ತಡದಿಂದಾಗಿ ಶುಕ್ರದ ಮೇಲ್ಮೈಯನ್ನು ಅನ್ವೇಷಿಸುವುದು ಕಷ್ಟಕರವಾಗಿದೆ. 1981 ರಲ್ಲಿ ಸೋವಿಯತ್ ಒಕ್ಕೂಟದ ವೆನೆರಾ 13 ಮಾಡಿದ ದಾಖಲೆಯನ್ನು ಯಾವುದೇ ಬಾಹ್ಯಾಕಾಶ ನೌಕೆಯು ಮಾಡಿಲ್ಲ. ಶುಕ್ರನ ಮೇಲ್ಮೈನಲ್ಲಿ ಉಳಿದಿದ್ದ ದೀರ್ಘಾವಧಿಯ ನೌಕೆ ಇದಾಗಿದೆ ನಾಸಾ ವೆಬ್‌ಸೈಟ್ ವಿವರಿಸುತ್ತದೆ. ನಾಸಾ 2031 ರಲ್ಲಿ ಶುಕ್ರನ ಅಧ್ಯಯನಕ್ಕೆ DAVINCI ಮಿಷನ್ ಕೈಗೊಳ್ಳುವ ಯೋಜನೆ ಹೊಂದಿದೆ. ಇದನ್ನೂ ಓದಿ: ಭೂಮಿ ಕಕ್ಷೆ ತೊರೆದ ಆದಿತ್ಯ ಎಲ್‌1 ನೌಕೆ – 110 ದಿನಗಳ ಸೂರ್ಯ ಯಾತ್ರೆ ಆರಂಭ

    ಏನಿದು ಭಾರತದ ಶುಕ್ರಯಾನ-1?
    ಶುಕ್ರಯಾನ-1 ಯೋಜನೆಯು ಶುಕ್ರನ ಅಧ್ಯಯನಕ್ಕೆ ಇಸ್ರೋ ಕೈಗೊಳ್ಳುತ್ತಿರುವ ಮೊದಲ ಮಿಷನ್ ಆಗಿದೆ. ಇದು ಸೌರವ್ಯೂಹದ ಅತ್ಯಂತ ಬಿಸಿಯಾದ ಗ್ರಹದ ಮೇಲ್ಮೈನಲ್ಲಿ ಏನಿದೆ ಎಂಬುದನ್ನು ಅಧ್ಯಯನ ಮಾಡಲಿದೆ. ಬಾಹ್ಯಾಕಾಶ ನೌಕೆಯು ಗ್ರಹವನ್ನು ಸುತ್ತುವ ಮೂಲಕ ಮೇಲ್ಮೈನಲ್ಲಿ ಆವರಿಸಿರುವ ಸಲ್ಫ್ಯೂರಿಕ್ ಆಸಿಡ್ ಮೋಡಗಳ ಅಡಿಯಲ್ಲಿನ ರಹಸ್ಯಗಳನ್ನು ಬಿಚ್ಚಿಡುವ ಕೆಲಸ ಮಾಡಲಿದೆ. ಮುಂದಿನ ವರ್ಷದ ಕೊನೆಯಲ್ಲಿ ಇಸ್ರೋ ಶುಕ್ರಯಾನ ನೌಕೆ ಉಡಾವಣೆ ಮಾಡುವ ನಿರೀಕ್ಷೆಯಿದೆ.

    ನಾವು ಪರಿಕಲ್ಪನಾ ಹಂತದಲ್ಲಿ ಸಾಕಷ್ಟು ಕಾರ್ಯಾಚರಣೆಗಳನ್ನು ಹೊಂದಿದ್ದೇವೆ. ಶುಕ್ರಕ್ಕೆ ಮಿಷನ್ ಅನ್ನು ಈಗಾಗಲೇ ಕಾನ್ಫಿಗರ್ ಮಾಡಲಾಗಿದೆ. ಅದಕ್ಕಾಗಿ ಪೇಲೋಡ್‌ಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಶುಕ್ರ ಗ್ರಹದ ಮೇಲ್ಮೈ, ಭೂಮಿಯ 100 ಪಟ್ಟು ವಾತಾವರಣದ ಒತ್ತಡದೊಂದಿಗೆ ವಾತಾವರಣವನ್ನು ಹೊಂದಿದೆ. ಶುಕ್ರ ಮೇಲ್ಮೈ ಬಳಿ ಹೆಚ್ಚಿನ ವಾತಾವರಣದ ಒತ್ತಡಕ್ಕೆ ಕಾರಣಗಳು ಏನು ಎಂಬುದು ವಿಜ್ಞಾನಿಗಳಿಗೆ ತಿಳಿದಿಲ್ಲ. ಶುಕ್ರವನ್ನು ಆವರಿಸಿರುವ ದಟ್ಟವಾದ ಮೋಡಗಳು ಆಮ್ಲಗಳಿಂದ ತುಂಬಿವೆ. ಮೇಲ್ಮೈಯನ್ನು ಭೇದಿಸಲು ಸಹ ಸಾಧ್ಯವಿಲ್ಲ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದಾರೆ.

    ಗ್ರಹಗಳ ವಿಕಸನವನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ನೀವು ಶುಕ್ರ, ಮಂಗಳವನ್ನು ನೋಡಿದರೆ ಮಾತ್ರ ಭೂಮಿಯ ಮೇಲಿನ ನಿಮ್ಮ ಚಟುವಟಿಕೆಗಳಲ್ಲಿ ವಾಸ್ತವಿಕವಾಗಿ ವಾಸಯೋಗ್ಯ ಅಥವಾ ವಾಸಯೋಗ್ಯವಲ್ಲದ ಯಾವ ಪರಿಣಾಮಗಳಿವೆ ಎಂಬುದನ್ನು ಅಧ್ಯಯನ ಮಾಡಬಹುದು ಎಂದು ಸೋಮನಾಥ್ ಹೇಳಿದ್ದಾರೆ. ಇದನ್ನೂ ಓದಿ: Aditya-L1: ಆದಿತ್ಯ ನೌಕೆ 4ನೇ ಕಕ್ಷೆ ಬದಲಾವಣೆ ಪ್ರಕ್ರಿಯೆ ಯಶಸ್ವಿ – ಮುಂದಿನ ಹಂತ ‘ಭೂಮಿಯಿಂದ ಬೀಳ್ಕೊಡುಗೆ’

    ಶುಕ್ರ ಮಿಷನ್‌.. ಪಾಸ್‌ ಆಗಿದ್ದೆಷ್ಟು, ಫೇಲ್‌ ಆಗಿದ್ದೆಷ್ಟು?
    1961 ರಿಂದ ಇದುವರೆಗೆ ಶುಕ್ರನ ಅಧ್ಯಯನಕ್ಕೆ ಕೈಗೊಂಡ ಮಿಷನ್‌ಗಳ ಪೈಕಿ ರಷ್ಯಾದ್ದೇ ಬಹುಪಾಲಿದೆ. ರಷ್ಯಾ ದೇಶ ಎನರ್ಜಿಯ ಸಂಸ್ಥೆ ನೇತೃತ್ವದಲ್ಲಿ ಶುಕ್ರನ ವೈಜ್ಞಾನಿಕ ಅಧ್ಯಯನಕ್ಕೆ 11 ಕಾರ್ಯಾಚರಣೆಗಳನ್ನು ಕೈಗೊಂಡಿತ್ತು. ದುರಾದೃಷ್ಟವಶಾತ್‌ ಎಲ್ಲ ಕಾರ್ಯಾಚರಣೆಗಳೂ ವಿಫಲವಾದವು. ಇದರ ಜೊತೆಗೆ ಲಾವೊಚ್ಕಿನ್ ಬಾಹ್ಯಾಕಾಶ ಸಂಸ್ಥೆಯಿಂದ 18 ಶುಕ್ರಯಾನ ಮಿಷನ್‌ ಕೈಗೊಳ್ಳಲಾಗಿತ್ತು. ಅದರಲ್ಲಿ 14 ಮಿಷನ್‌ಗಳ ಯಶಸ್ಸು ಕಂಡವು. 1 ಭಾಗಶಃ ಸಕ್ಸಸ್‌ ಆಯಿತು. ಉಳಿದಂತೆ 3 ಕಾರ್ಯಾಚರಣೆಗಳು ಫೇಲ್‌ ಆದವು.

    ಇತ್ತ ಅಮೆರಿಕದ ನಾಸಾ ಶುಕ್ರನ ಅಧ್ಯಯನಕ್ಕೆ ಒಟ್ಟು 11 ಕಾರ್ಯಾಚರಣೆಗಳನ್ನ ಕೈಗೊಂಡಿತು. ಅದರಲ್ಲಿ 6 ಮಿಷನ್‌ಗಳು ಸಕ್ಸಸ್‌ ಆದವು. 1 ಕಾರ್ಯಾಚರಣೆ ವಿಫಲವಾಯಿತು. ಇನ್ನು 4 ಮಿಷನ್‌ಗಳು ಶುಕ್ರನ ಕಕ್ಷೆ ತಲುಪಿದ್ದು, ಈಗಲೂ ಕಾರ್ಯ ನಿರ್ವಹಿಸುತ್ತಿವೆ. ಯುರೋಪಿಯನ್‌ ಬಾಹ್ಯಾಕಾಶ ಒಕ್ಕೂಟ ಕೂಡ ಇದುವರೆಗೆ 3 ಕಾರ್ಯಾಚರಣೆಗಳನ್ನು ನಡೆಸಿದೆ. ಅದರಲ್ಲಿ 1 ಯಶಸ್ಸು ಕಂಡಿದೆ. ಇನ್ನೆರಡು ಮಿಷನ್‌ಗಳು ಶುಕ್ರನ ಕಕ್ಷೆ ತಲುಪಿದ್ದು, ಈಗಲೂ ಕಾರ್ಯನಿರ್ವಹಿಸುತ್ತಿವೆ. ಇದನ್ನೂ ಓದಿ: PublicTV Explainer: ಭಾರತೀಯ ವಿಜ್ಞಾನಿಗಳಿಂದ ‘ಏಲಿಯನ್‌ ಗ್ರಹ’ ಪತ್ತೆ – ಇಲ್ಲಿ ಅನ್ಯಗ್ರಹ ಜೀವಿಗಳು ಇವೆಯೇ?

    ಜಪಾನ್‌ ದೇಶ ಜಾಕ್ಸಾ ಬಾಹ್ಯಾಕಾಶ ಸಂಸ್ಥೆಯಿಂದ 2 ಕಾರ್ಯಾಚರಣೆ ನಡೆಸಿತು. ಅದರಲ್ಲಿ ಒಂದು ಯಶಸ್ಸು ಕಂಡರೆ ಮತ್ತೊಂದು ಶುಕ್ರನ ಕಾರ್ಯ ನಿರ್ವಹಿಸುತ್ತಿದೆ. ಮತ್ತೆ ಯುನಿಸೆಕ್‌ ಸಂಸ್ಥೆಯಿಂದ ಕೈಗೊಂಡಿದ್ದ ಒಂದು ಕಾರ್ಯಾಚರಣೆ ವಿಫಲವಾಯಿತು.

    – ಚಂದ್ರಶೇಖರ.ಬಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆದಿತ್ಯ ಎಲ್-1 ಯಶಸ್ವಿ ಉಡಾವಣೆ – ಇಸ್ರೋ ವಿಜ್ಞಾನಿಗಳಿಗೆ ಮೋದಿ ಅಭಿನಂದನೆ

    ಆದಿತ್ಯ ಎಲ್-1 ಯಶಸ್ವಿ ಉಡಾವಣೆ – ಇಸ್ರೋ ವಿಜ್ಞಾನಿಗಳಿಗೆ ಮೋದಿ ಅಭಿನಂದನೆ

    ಬೆಂಗಳೂರು: ಚಂದ್ರಯಾನ-3 (Chandrayaan-3) ಯಶಸ್ವಿಯಾದ ಬೆನ್ನಲ್ಲೇ ಇಸ್ರೋ (ISRO) ಮತ್ತೊಂದು ಮಹತ್ತರವಾದ ಸಾಧನೆ ಮಾಡಿದ್ದು, ಸೂರ್ಯನ ಅಧ್ಯನಕ್ಕಾಗಿ ಆದಿತ್ಯ ಎಲ್-1 (Aditya L-1) ಮಿಷನ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.

    ಇಸ್ರೋ ಸಂಸ್ಥೆ ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಎಲ್-1 ಮಿಷನ್ ಅನ್ನು ಶನಿವಾರ ಬೆಳಗ್ಗೆ 11.50ಕ್ಕೆ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆ ಮಾಡಿತು. ಇಸ್ರೋ ವಿಜ್ಞಾನಿಗಳ ಈ ಅಭೂತಪೂರ್ವ ಸಾಧನೆಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಟ್ವೀಟ್ (Tweet) ಮೂಲಕ ಅಭಿನಂದನೆ ತಿಳಿಸಿದ್ದಾರೆ. ಇದನ್ನೂ ಓದಿ: Aditya L1 ಮಿಷನ್ ಯಶಸ್ವಿ: ಇಸ್ರೋ ಅಧ್ಯಕ್ಷ

    ಟ್ವೀಟ್‌ನಲ್ಲಿ ಏನಿದೆ?
    ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರಿಸಿದೆ. ಭಾರತದ ಮೊದಲ ಸೌರ ಮಿಷನ್, ಆದಿತ್ಯ ಎಲ್-1ನ ಯಶಸ್ವಿ ಉಡಾವಣೆಗಾಗಿ ಇಸ್ರೋ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ಅಭಿನಂದನೆಗಳು. ಇದನ್ನೂ ಓದಿ: Aditya L1 Launch: ಸೂರ್ಯ ಶಿಕಾರಿಗೆ ಹೊರಟ ಆದಿತ್ಯ

    ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಬರೆದು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ವಿಚಿತ್ರಾತಿ ವಿಚಿತ್ರಗಳ ಉರಿ ಉಂಡೆ ನಮ್ಮ ಸೂರ್ಯ: ಡಾ. ಎಪಿ ಭಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Aditya L1 ಮಿಷನ್ ಯಶಸ್ವಿ: ಇಸ್ರೋ ಅಧ್ಯಕ್ಷ

    Aditya L1 ಮಿಷನ್ ಯಶಸ್ವಿ: ಇಸ್ರೋ ಅಧ್ಯಕ್ಷ

    – ಮೋದಿ, ಇಸ್ರೋ ಟೀಂಗೆ ಸಚಿವ ಧನ್ಯವಾದ

    ಶ್ರೀಹರಿಕೋಟಾ: ಇಂದು ಬೆಳಗ್ಗೆ 11.50ಕ್ಕೆ ಆಂಧ್ರಪ್ರದೇಶದ (Andhrapradesh) ಶ್ರೀಹರಿಕೋಟಾದಿಂದ (Sriharikota) ಸೂರ್ಯ ಶಿಕಾರಿಗೆ ಹೊರಟ ಆದಿತ್ಯ ಎಲ್ 1 (Aditya L1) ಮಿಷನ್ ಯಶಸ್ವಿಯಾಗಿದೆ ಎಂದು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ತಿಳಿಸಿದ್ದಾರೆ.

    ಮಿಷನ್ ಯಶಸ್ವಿ ಬಗ್ಗೆ ಘೋಷಣೆ ಮಾಡಿದ ಅವರು, ಯಶಸ್ವಿಯಾಗಿ ಆದಿತ್ಯ ಎಲ್1 ಆರ್ಬಿಟ್ ಗೆ ಇನ್ ಸರ್ಟ್ ಮಾಡಲಾಗಿದೆ ಎಂದರು. ಇದೇ ವೇಳೆ ಆದಿತ್ಯ ಐ1 ಟೀಂಗೆ ಸೋಮನಾಥ್ (S Somanath) ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: Aditya L1 Launch: ಸೂರ್ಯ ಶಿಕಾರಿಗೆ ಹೊರಟ ಆದಿತ್ಯ

    ಈ ಸಂದರ್ಭದಲ್ಲಿ ಚಂದ್ರಯಾನದ (Chandrayaan-3) ಬಗ್ಗೆ ಮಾಹಿತಿ ನೀಡಿದ ಸೋಮನಾಥ್, ಚಂದ್ರಯಾನದ ಲ್ಯಾಂಡರ್, ರೋವರ್ ಇನ್ನೂ ಯಶಸ್ವಿಯಾಗಿ ಕೆಲಸ ನಿರ್ವಹಣೆ ಮಾಡುತ್ತಿವೆ. ಗುಡ್ ನ್ಯೂಸ್ ಅಂದ್ರೆ ರೋವರ್ 100 ಮೀಟರ್ ವರೆಗೂ ಸಂಚಾರ ಮಾಡಿದೆ. ಚಂದ್ರಯಾನದ ಅಧ್ಯಯನ ಯಶಸ್ವಿಯಾಗಿ ಮುಂದುವರಿದಿದೆ ಎಂದರು.

    ಇತ್ತ ಸಚಿವ ಜೀತೇಂದ್ರ ಸಿಂಗ್ ಅವರು ಇಸ್ರೋ ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ಪ್ರಧಾನಿ ಮೋದಿ ಹಾಗೂ ಇಸ್ರೋ ವಿಜ್ಞಾನಿಗಳಿಗೆ ಧನ್ಯವಾದ ಹೇಳ್ತೀನಿ. ಇಸ್ರೋ ವಿಜ್ಞಾನಿಗಳು ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ದೇಶಕ್ಕಾಗಿ ಕೆಲಸ ಮಾಡಿದ್ದಾರೆ. ಚಂದ್ರಯಾನ ಯಶಸ್ವಿ ಬಳಿಕ ಆದಿತ್ಯ ಎಲ್‌ 1 ಯಶಸ್ವಿಯಾಗಿದೆ. ಈ ಸಾಧನೆ ವಿಶ್ವದ ಗಮನ ಸೆಳೆದಿದೆ. ಆದಿತ್ಯ ಎಲ್‌ 1ಗೆ ಉಪಕರಣ ಸಿದ್ಧ ಮಾಡಿಕೊಂಡ ವಿವಿಧ ಸಂಸ್ಥೆಗಳಿಗೆ ಧನ್ಯವಾದಗಳು ಎಂದು ಅವರು ಹೇಳಿದರು.

    ಒಟ್ಟಿನಲ್ಲಿ ಬಾಹ್ಯಾಕಾಶ ಸಂಸ್ಥೆ ಇಸ್ರೋ ಸೂರ್ಯಯಾನ ಯಶಸ್ವಿಯಾಗುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದ್ದು, ಭಾರತೀಯರ ಕನಸು ನನಸಾಗಿದೆ. ಇನ್ನು ಮುಂದೆ ಆದಿತ್ಯ ಎಲ್‌ 1 125 ದಿನ ತನ್ನ ಜರ್ನಿ ನಡೆಸಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Aditya L1 Launch: ಸೂರ್ಯ ಶಿಕಾರಿಗೆ ಹೊರಟ ಆದಿತ್ಯ

    Aditya L1 Launch: ಸೂರ್ಯ ಶಿಕಾರಿಗೆ ಹೊರಟ ಆದಿತ್ಯ

    ಶ್ರೀಹರಿಕೋಟಾ: ಇಡೀ ವಿಶ್ವವೇ ತುದಿಗಾಲಲ್ಲಿ ನಿಂತು ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-3 (Chandrayaan-3) ಯಶಸ್ವಿಯಾಗಿದೆ. ಈ ಬೆನ್ನಲ್ಲೆ ಈಗ ನಮ್ಮ ಇಸ್ರೋ (ISRO) ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇದೀಗ ಶ್ರೀಹರಿಕೋಟಾದಲ್ಲಿ ಆದಿತ್ಯ ಎಲ್1 (Aditya L1) ಉಡಾವಣೆಯಾಗಿದೆ. ಈ ಮೂಲಕ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಭಾರತ ಇಂದು ಸಾಕ್ಷಿಯಾಯಿತು.

    ಹೌದು. ಇಸ್ರೋ ಸಂಸ್ಥೆ ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಎಲ್‌-1 ಮಿಷನ್ ಅನ್ನು ಇಂದು ಸರಿಯಾಗಿ ಬೆಳಗ್ಗೆ 11.50 ಕ್ಕೆ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆಯಾಗಿದೆ. ಈ ವೇಳೆ ಇಸ್ರೋ ಅಧ್ಯಕ್ಷ ಸೋಮನಾಥ್ ನೇತೃತ್ವದಲ್ಲಿ ವಿಜ್ಞಾನಿಗಳ ತಂಡ ಹಾಜರಿದ್ದರು. ಜೊತೆಗೆ ಆದಿತ್ಯ L1 ಉಡಾವಣೆಗೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಕೂಡ ಸಾಕ್ಷಿಯಾದರು. ಇಷ್ಟು ಮಾತ್ರವಲ್ಲದೆ ಅಪಾರ ಸಂಖ್ಯೆಯಲ್ಲಿ ಜನಸಾಗರವೇ ನೆರೆದಿತ್ತು.

    ಆರಂಭದಲ್ಲಿ ಸೂರ್ಯಯಾನ ಶುರುವಾಗಿದ್ದು, ಕೇವಲ ಸೂರ್ಯನ ಅನ್ನೋ ಹೆಸರಲ್ಲಿ ಮಾತ್ರ. ಆ ಬಳಿಕ ಕೆಲವು ಅಧ್ಯಯನದ ನಂತರ ಎಲ್ 1 ಕಕ್ಷೆ ಹೋಗಲು ವಿಜ್ಞಾನಿಗಳ ತಂಡ ತೀರ್ಮಾನ ಮಾಡಿದ್ದು, ಅದರಂತೆ ಇಂದು ಯಶಸ್ವಿ ಉಡಾವಣೆ ಮಾಡಲಾಗಿದೆ. ಪಿಎಸ್‍ಎಲ್‍ವಿ ಸಿ 57 ಹೆಸರಿನ ಎಕ್ಸ್ಟ್ರಾ ಲಾರ್ಜ್ ರಾಕೆಟ್ ಬರೊಬ್ಬರಿ 1450 ಕೆ.ಜಿ ತೂಕವಿದ್ದು, ಒಟ್ಟು ಅಧ್ಯಯನಕ್ಕೆ ಬೇಕಾದ 7 ಉಪಕರಣಗಳನ್ನ ಹೊತ್ತೊಯ್ದಿದೆ. ಇದನ್ನೂ ಓದಿ: Aditya-L1: ಚಂದ್ರಯಾನ ಆಯ್ತು – ಈಗ ಸೂರ್ಯ ಸವಾರಿಯತ್ತ ಇಸ್ರೋ ಚಿತ್ತ

    ಈ ಅಧ್ಯಯನದ ಪ್ರಮುಖ ಅಂಶ ಸೌರ ಚಟುವಟಿಕೆ ಮತ್ತು ಬಾಹ್ಯಕಾಶ ವಾತಾವರಣದ ಮೇಲಿನ ಪರಿಣಾಮವನ್ನ ಅಧ್ಯಯನ ಮಾಡೋದು. ಉಡಾವಣೆ ಬಳಿಕ ನಿರ್ದಿಷ್ಟ ಸ್ಥಳವಾದ ಎಲ್ 1 ಪಾಯಿಂಟ್ ತಲುಪೋಕೆ ಬರೊಬ್ಬರಿ 120 ದಿನಗಳನ್ನ ತೆಗೆದುಕೊಳ್ಳಲಿದೆ. ಕಕ್ಷೆಯನ್ನ ತಲುಪಿದ ಬಳಿಕ ರಾಕೆಟ್ ಹೊತ್ತೊಯ್ದ 8 ಉಪಕರಣಗಳ ಸ್ವಿಚ್ ಪ್ರೋಗ್ರಾಂಮಿಂಗ್ ಮೂಲಕ ತಮ್ಮ ಕಾರ್ಯವನ್ನ ಆರಂಭಿಸಲಿವೆ. ಮುಖ್ಯವಾಗಿ ಎಲ್ 1 ಕಕ್ಷೆಯಲ್ಲೇ ಇ ಎಲ್ಲಾ ಕಾರ್ಯಗಳು ಸರಾಗವಾಗಿ ಆಗೋದಕ್ಕೆ ಸಾಧ್ಯ ಇರೋದು. ಆ ಕಾರಣಕ್ಕೆ ಸದ್ಯ ಇಸ್ರೋ ಕೂಡ ಇದೇ ಪಾಯಿಂಟ್ ನ್ನ ಆಯ್ಕೆ ಮಾಡಿದೆ. ಇದನ್ನೂ ಓದಿ: ಆದಿತ್ಯ ಎಲ್ 1 ಉಡಾವಣೆಗೂ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ಮುಖ್ಯಸ್ಥ

    ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಈ ಕಕ್ಷೆಯಲ್ಲಿ, ಭೂಮಿ ಮತ್ತು ಸೂರ್ಯನ ಗುರುತ್ವಾಕರ್ಷಣೆಯ ಸಮನಾಗಿರುತ್ತದೆ. ಇಲ್ಲಿ ಯಾವುದೇ ಉಪಗ್ರಹ ನಿಯೋಜಿಸಿದರು ಯಾವುದೇ ಅಡ್ಡಿ ಆತಂಕ ಇರೋದಿಲ್ಲ. ಜೊತೆಗೆ ಗ್ರಹಣದಂತ ಅಡ್ಡಿ ಆತಂಕ ಇಲ್ಲದೆ ಅಧ್ಯಯನ ಸರಾಗವಾಗಿ ಸಾಗುವು ಮೂಲಕ ಹೆಚ್ಚು ಇಂಧನ ವ್ಯರ್ಥವಾಗದ ಕಾರಣ ಈ ಜಾಗ ಅಧ್ಯಯನಕ್ಕೆ ಸೂಕ್ತವಾಗಿದ್ದು, ಬರೊಬ್ಬರಿ ನಾಲ್ಕೂವರೆ ವರ್ಷಗಳ ಕಾಲ ಕಕ್ಷೆಯಲ್ಲಿ ಅಧ್ಯಯನ ನಡೆಸಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತಕ್ಕೆ ಗೌರವ ತರುವ ಕೆಲಸವನ್ನ ಕರ್ನಾಟಕದಿಂದ ಇಸ್ರೋ ಮಾಡ್ತಿದೆ: ಡಿಕೆಶಿ

    ಭಾರತಕ್ಕೆ ಗೌರವ ತರುವ ಕೆಲಸವನ್ನ ಕರ್ನಾಟಕದಿಂದ ಇಸ್ರೋ ಮಾಡ್ತಿದೆ: ಡಿಕೆಶಿ

    ಬೆಂಗಳೂರು: ಭಾರತಕ್ಕೆ ಗೌರವ ತರುವ ಕೆಲಸವನ್ನ ಕರ್ನಾಟಕದಿಂದ ಇಸ್ರೋ (ISRO) ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೋ ವಿಜ್ಞಾನಿಗಳು ಸಾಹಸ, ಪ್ರಯೋಗ ಎಲ್ಲ ಮಾಡುತ್ತಿದ್ದಾರೆ. ಇಸ್ರೋ ಕೈಗೊಂಡಿರುವ ಸೂರ್ಯಯಾನಕ್ಕೆ ಶುಭಕೋರುತ್ತೇನೆ. ಯಶಸ್ವಿಯಾಗಲಿ, ದೇಶದ ಜನ ಪ್ರಾರ್ಥನೆ ಮಾಡುತ್ತಿದ್ದಾರೆ. ಇಡೀ ವಿಶ್ವದಲ್ಲೇ ಇಸ್ರೋ ಶ್ರಮದ ಬಗ್ಗೆ ಮಾತಾಡುತ್ತಿದ್ದಾರೆ ಎಂದು ತಿಳಿಸಿದರು.

    ಸೂರ್ಯಶಿಕಾರಿ: ಜುಲೈ 14 ರಂದು ಶ್ರೀಹರಿಕೋಟಾದ ಬಾಹ್ಯಾಕಾಶದಿಂದ ಉಡಾವಣೆಯಾಗಿದ್ದ ಚಂದ್ರಯಾನ-3 ಜಗತ್ತಿನೆಲ್ಲೆಡೆ ಸಂಚಲನ ಸೃಸ್ಠಿಸಿತ್ತು. ಸತತವಾಗಿ 41 ದಿನಗಳ ಕಾಲ ನಿರಂತರವಾಗಿ ಚಂದ್ರ ನತ್ತ ಕ್ರಮಿಸಿ ಚಂದ್ರನ ಅಂಗಳದಲ್ಲಿ ಇಳಿದು ಯಶಸ್ವಿ ಕಂಡಿತ್ತು. ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರನ ದಕ್ಷಿಣ ಧ್ರುವವನ್ನು ತಲುಪುವಲ್ಲಿ ಸಕ್ಸಸ್ ಹೆಜ್ಜೆಯನ್ನಿಟ್ಟಿದ್ದು, ಲ್ಯಾಂಡರ್, ರೋವರ್ ಚಂದ್ರನ ಅಧ್ಯಯನದಲ್ಲಿ ತೊಡಗಿದ್ದು, ಇಡೀ ದೇಶವೆ ತನ್ನತ ತಿರುಗಿ ನೋಡುವಂತೆ ಮಾಡಿದೆ. ಇದನ್ನೂ ಓದಿ: ಸೂರ್ಯ ಶಿಕಾರಿಗೆ ಕೌಂಟ್‍ಡೌನ್- ಬೆಳಗ್ಗೆ 11:50ಕ್ಕೆ ಆದಿತ್ಯ ಎಲ್1 ಉಡಾವಣೆ

    ಇದರ ಬೆನ್ನಲ್ಲೇ ಇಸ್ರೋ ಸಂಸ್ಥೆ ಮತ್ತೊಂದು ಮಹತ್ವದ ಕಾರ್ಯ ಕೈಗೊಂಡಿದ್ದು, ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಐ1 ಮಿಷನ್ ಲಾಂಚ್ ಮಾಡುತ್ತಿದೆ. ಇದಕ್ಕಾಗಿ ಈಗಾಗಲೇ ಕ್ಷಣಗಣನೆ ಪ್ರಾರಂಭವಾಗಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಜನ ಕಾಯುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೂರ್ಯ ಶಿಕಾರಿಗೆ ಕೌಂಟ್‍ಡೌನ್- ಬೆಳಗ್ಗೆ 11:50ಕ್ಕೆ ಆದಿತ್ಯ ಎಲ್1 ಉಡಾವಣೆ

    ಸೂರ್ಯ ಶಿಕಾರಿಗೆ ಕೌಂಟ್‍ಡೌನ್- ಬೆಳಗ್ಗೆ 11:50ಕ್ಕೆ ಆದಿತ್ಯ ಎಲ್1 ಉಡಾವಣೆ

    ಅಮರಾವತಿ: ಚಂದ್ರಯಾನ (Chandrayaan-3) ಯಶಸ್ಸಿನ ಬಳಿಕ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1 (Aditya L-1) ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ.

    ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ 11.50ಕ್ಕೆ ಸರಿಯಾಗಿ ಆದಿತ್ಯ ಎಲ್1 ಹೊತ್ತ ಪಿಎಸ್‍ಎಲ್‍ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ದರ್ಶಿಸಿದೆ. ಸೂಳ್ಳೂರುಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಸಿದೆ. ಇದನ್ನೂ ಓದಿ: ಆದಿತ್ಯ ಎಲ್ 1 ಉಡಾವಣೆ – ಸೂರ್ಯನ ಅಧ್ಯಯನಕ್ಕೆ ಹೇಗೆ ಸಿದ್ಧವಾಗಿದೆ ಇಸ್ರೋ?

    ಚಂದ್ರಯಾನ್, ಮಂಗಳಯಾನ್ ನಂತ್ರ ಇಸ್ರೋ ಕೈಗೊಳ್ಳುತ್ತಿರುವ ಅತ್ಯಂತ ಪ್ರಮುಖ ಯೋಜನೆ ಇದಾಗಿದೆ. ಇದೇ ಮೊದಲ ಬಾರಿ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಇದಕ್ಕೆ ಯುರೋಪಿಯನ್ ಸ್ಪೇಸ್ ಏಜೆನ್ಸಿ, ಆಸ್ಟ್ರೇಲಿಯಾ ಸೇರಿ ವಿವಿಧ ದೇಶಗಳ ಅಂತರಿಕ್ಷ ಸಂಸ್ಥೆಗಳ ನೆರವನ್ನು ಇಸ್ರೋ ಪಡೆಯುತ್ತಿದೆ. ಈ ಪ್ರಯೋಗವನ್ನು ನೇರವಾಗಿ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಆದರೆ ಮೊದಲೇ ನೋಂದಣಿ ಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಳೆ ಆದಿತ್ಯ ಎಲ್ 1 ಉಡಾವಣೆ – ಸೂರ್ಯನ ಅಧ್ಯಯನಕ್ಕೆ ಹೇಗೆ ಸಿದ್ಧವಾಗಿದೆ ಇಸ್ರೋ?

    ನಾಳೆ ಆದಿತ್ಯ ಎಲ್ 1 ಉಡಾವಣೆ – ಸೂರ್ಯನ ಅಧ್ಯಯನಕ್ಕೆ ಹೇಗೆ ಸಿದ್ಧವಾಗಿದೆ ಇಸ್ರೋ?

    – ಸೂರ್ಯಯಾನದಿಂದ ಲಾಭವೇನು?

    ನವದೆಹಲಿ: ಚಂದ್ರಯಾನ-3 ರ ಯಶಸ್ಸಿನ ನಂತರ ಭಾರತವು ಸೂರ್ಯಯಾನ ಆದಿತ್ಯ ಎಲ್-1 (Aditya L-1) ಅನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಇಂದಿನಿಂದ ಆದಿತ್ಯ-ಎಲ್1 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ.

    ಇಸ್ರೋ (ISRO) ಈ ಹೊಸ ಯೋಜನೆ ಬಗೆಗೆ ಕೇವಲ ಭಾರತ ಮಾತ್ರವಲ್ಲದೇ ಇಡೀ ವಿಶ್ವದಲ್ಲಿ ಆಸಕ್ತಿ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿಗೆ ಎಂದು ಅವರು ಹೇಳಿದ್ದಾರೆ.

    ಮಾಹಿತಿಗಳ ಪ್ರಕಾರ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೌರ ಕರೋನ (ಸೂರ್ಯನ ಹೊರಗಿನ ಪದರಗಳು) ದೂರದ ವೀಕ್ಷಣೆಗಾಗಿ ಮತ್ತು ಎಲ್-1ನಲ್ಲಿ (ಲಾಗ್ರಾಂಜಿಯನ್ ಪಾಯಿಂಟ್ -1) ಸೌರ ಮಾರುತದ ಸ್ಥಳ ವೀಕ್ಷಣೆಗಾಗಿ ವಿನ್ಯಾಸಗೊಳಿಸಲಾಗಿದೆ. ಈ ಎಲ್-1 ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿದ್ದು, ಇದೊಂದು ಕಷ್ಟಕರ ಯೋಜನೆಯೂ ಆಗಿದೆ.

    ಏನಿದು ಎಲ್1 ಪಾಯಿಂಟ್?
    ಸೂರ್ಯನ ಗುರುತ್ವಾಕರ್ಷಣೆ ಹಾಗೂ ಭೂಮಿಯ ಗುರುತ್ವಾಕರ್ಷಣೆ ಸಮ ಪ್ರಮಾಣದಲ್ಲಿ ಇರುವ 5 ಸ್ಥಳಗಳು ಭೂಮಿಯ ಕಕ್ಷೆಯಲ್ಲಿ ಸಿಗುತ್ತವೆ. ಇದನ್ನು ಲಾಗ್ರಾಂಜಿಯನ್ ಪಾಯಿಂಟ್ ಎಂದು ಕರೆಯಲಾಗುತ್ತದೆ. ಈ ಪೈಕಿ ಲಾಗ್ರಾಂಜಿಯನ್ ಪಾಯಿಂಟ್ 1ರಲ್ಲಿ ಭಾರತದ ಸೌರ ಅಧ್ಯಯನ ಉಪಗ್ರಹ ನಿಲ್ಲಲಿದೆ. ಬಾಹ್ಯಾಕಾಶಕ್ಕೆ ಕಳುಹಿಸಲಾಗುವ ವಸ್ತುಗಳು ಸ್ಥಳದಲ್ಲಿಯೇ ಇರುವಂತೆ ಮಾಡಲಾಗುತ್ತದೆ

    ಈ ಮಿಷನ್‌ನಿಂದ ಏನು ಪ್ರಯೋಜನ?
    ಇಸ್ರೋ ಪ್ರಕಾರ, ಸೂರ್ಯನು ನಮಗೆ ಹತ್ತಿರದ ನಕ್ಷತ್ರ. ಇದು ನಕ್ಷತ್ರಗಳ ಅಧ್ಯಯನದಲ್ಲಿ ನಮಗೆ ಹೆಚ್ಚು ಸಹಾಯ ಮಾಡುತ್ತದೆ. ಇದರಿಂದ ಪಡೆದ ಮಾಹಿತಿಯು ಇತರ ನಕ್ಷತ್ರಗಳು, ನಮ್ಮ ನಕ್ಷತ್ರಪುಂಜ ಮತ್ತು ಅನೇಕ ರಹಸ್ಯಗಳು ಮತ್ತು ಖಗೋಳಶಾಸ್ತ್ರದ ನಿಯಮಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಸೂರ್ಯನು ನಮ್ಮ ಭೂಮಿಯಿಂದ ಸುಮಾರು 15 ಕೋಟಿ ಕಿ.ಮೀ. ದೂರದಲ್ಲಿದ್ದಾನೆ. ಆದಿತ್ಯ ಎಲ್-1 ಈ ದೂರದಲ್ಲಿ ಕೇವಲ ಒಂದು ಪ್ರತಿಶತವನ್ನು ಮಾತ್ರ ಕ್ರಮಿಸುತ್ತಿದೆ. ಇದು ಸೂರ್ಯನ ಬಗ್ಗೆ ಅಂತಹ ಅನೇಕ ಮಾಹಿತಿಯನ್ನು ನೀಡುತ್ತದೆ. 4 ತಿಂಗಳುಗಳ ಕಾಲ ಉಪಗ್ರಹ ಕ್ರಮಿಸಿ, ಕಾಯಾಚರಣೆ ನಡೆಸಲಿದೆ. ಇದು 5 ವರ್ಷ ಆಯಸ್ಸನ್ನು ಹೊಂದಿದೆ.

    ಆದಿತ್ಯ ಎಲ್-1ನಲ್ಲಿ ಯಾವ ಸಲಕರಣೆಗಳನ್ನು ಬಳಸಲಾಗಿದೆ?
    ವಿಸಿಬಲ್ ಎಮಿಷನ್ ಲೈನ್ ಕರೋನಾಗ್ರಾಫ್ (VELC): ಈ ಸಾಧನವನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (ಬೆಂಗಳೂರು) ಅಭಿವೃದ್ಧಿಪಡಿಸಿದೆ. ಇದು ಸೂರ್ಯನ ಕರೋನಾ ಮತ್ತು ಅದು ಹೊರ ಸೂಸುವ ಕಿರಣಗಳಲ್ಲಿನ ಬದಲಾವಣೆಗಳನ್ನು ಅಧ್ಯಯನ ಮಾಡುತ್ತದೆ.

    ಸೌರ ಅಲ್ಟ್ರಾ-ವೈಲೆಟ್ ಇಮೇಜಿಂಗ್ ಟೆಲಿಸ್ಕೋಪ್ (SUIT): ಖಗೋಳ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರದ ಅಂತರ-ವಿಶ್ವವಿದ್ಯಾಲಯದಿಂದ (ಪುಣೆ) ನಿರ್ಮಿಸಲಾಗಿದೆ. ಇದು ಸೂರ್ಯನ ದ್ಯುತಿಗೋಳ ಮತ್ತು ವರ್ಣಗೋಳದ ಚಿತ್ರಗಳನ್ನು ತೆಗೆದುಕೊಳ್ಳುತ್ತದೆ. ಇವುಗಳು ನೇರಳಾತೀತ ವ್ಯಾಪ್ತಿಯಲ್ಲಿರುವ ಛಾಯಾಚಿತ್ರಗಳಾಗಿವೆ. ಈ ಬೆಳಕು ಬಹುತೇಕ ಅಗೋಚರವಾಗಿರುತ್ತದೆ. ಇದನ್ನೂ ಓದಿ: One Nation, One Election – ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚನೆ

    Solex ಮತ್ತು Hal1OS: ಸೋಲಾರ್ ಲೋ-ಎನರ್ಜಿ ಎಕ್ಸ್-ರೇ ಸ್ಪೆಕ್ಟ್ರೋಮೀಟರ್ (ಸೋಲೆಕ್ಸ್) ಮತ್ತು ಹೈ-ಎನರ್ಜಿ ಎಲ್-1 ಆರ್ಬಿಟಿಂಗ್ ಸೂರ್ಯನ ಎಕ್ಸ್- ಕಿರಣಗಳ ಅಧ್ಯಯನ ಮಾಡಲಿವೆ. ಮ್ಯಾಗ್ನೆಟೋಮೀಟರ್ (MAG) ಅನ್ನು ಬೆಂಗಳೂರಿನ ಎಲೆಕ್ಟ್ರೋ ಆಪ್ಟಿಕ್ಸ್ ಸಿಸ್ಟಮ್ಸ್ ಲ್ಯಾಬೋರೇಟರಿ (ಬೆಂಗಳೂರು) ಅಭಿವೃದ್ಧಿಪಡಿಸಿದೆ. ಇದು ಎಲ್-1 ಕಕ್ಷೆಯ ಸುತ್ತ ಇರುವ ಅಂತರಗ್ರಹ ಕಾಂತಕ್ಷೇತ್ರವನ್ನು ಅಳೆಯುತ್ತದೆ.

    ಆಸ್ಪೆಕ್ಸ್ ಮತ್ತು ಪಾಪಾ: ಅಹಮದಾಬಾದ್‌ನ ಭೌತಿಕ ಸಂಶೋಧನಾ ಪ್ರಯೋಗಾಲಯವು ಆದಿತ್ಯ ಸೌರ ಮಾರುತ ಕಣದ ಪ್ರಯೋಗವನ್ನು (SPEX) ಅಭಿವೃದ್ಧಿಪಡಿಸಿದೆ ಮತ್ತು ಬಾಹ್ಯಾಕಾಶ ಭೌತಶಾಸ್ತ್ರ ಪ್ರಯೋಗಾಲಯ, ತಿರುವನಂತಪುರಂನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ಆದಿತ್ಯ (PAPA) ಪ್ಲಾಸ್ಮಾ ವಿಶ್ಲೇಷಕ ಪ್ಯಾಕೇಜ್ ಅನ್ನು ಅಭಿವೃದ್ಧಿಪಡಿಸಿದೆ. ಸೌರ ಮಾರುತವನ್ನು ಅಧ್ಯಯನ ಮಾಡುವುದು ಮತ್ತು ಶಕ್ತಿಯ ವಿತರಣೆಯನ್ನು ಅರ್ಥಮಾಡಿಕೊಳ್ಳುವುದು ಇವುಗಳ ಕೆಲಸವಾಗಿದೆ. ಇದನ್ನೂ ಓದಿ: ಎಲ್ಲಾ ಸಚಿವರಿಗೆ ಕಾರು ಭಾಗ್ಯ – 33 ಮಂದಿಗೆ ಸಿಗಲಿದೆ ಇನ್ನೋವಾ ಹೈಕ್ರಾಸ್‌ ಹೈಬ್ರಿಡ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆಪ್ಟೆಂಬರ್ 2ಕ್ಕೆ ‘ಆದಿತ್ಯ-ಎಲ್1’ ಉಡಾವಣೆ – ಏನಿದರ ವಿಶೇಷ?

    ಸೆಪ್ಟೆಂಬರ್ 2ಕ್ಕೆ ‘ಆದಿತ್ಯ-ಎಲ್1’ ಉಡಾವಣೆ – ಏನಿದರ ವಿಶೇಷ?

    ನವದೆಹಲಿ: ಚಂದ್ರಯಾನ-3 (Chandrayaan-3) ಯೋಜನೆಯ ಯಶಸ್ಸಿನ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಸೂರ್ಯನನ್ನು ಅಧ್ಯಯನ ಮಾಡಲು ಸೆಪ್ಟೆಂಬರ್ 2 ರಂದು ಸೂರ್ಯ ಮಿಷನ್‌ನ ಉಡಾವಣೆಗೆ ತಯಾರಿ ನಡೆಸುತ್ತಿದೆ. ಈಗಾಗಲೇ ‘ಆದಿತ್ಯ-ಎಲ್1’ (Aditya L-1) ಬಾಹ್ಯಾಕಾಶ ನೌಕೆಯನ್ನು ಶ್ರೀಹರಿಕೋಟಾಗೆ (Sriharikota) ಕಳುಹಿಸಿ ಕೊಡಲಾಗಿದೆ ಎಂದು ಮೂಲಗಳು ಹೇಳಿವೆ.

    ಆದಿತ್ಯ-ಎಲ್1 ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಸೂರ್ಯನ ಹೊರಗಿನ ಪದರಗಳು (ಕರೋನಾ) ಮತ್ತು ಎಲ್-1 (ಸೂರ್ಯ-ಭೂಮಿಯ ಲಗ್ರಾಂಜಿಯನ್ ಪಾಯಿಂಟ್) ಅಧ್ಯಯನ ಮಾಡಲಿದೆ. ಇದಕ್ಕಾಗಿ ಬಾಹ್ಯಾಕಾಶ ನೌಕೆಯು ದ್ಯುತಿಗೋಳ, ವರ್ಣಗೋಳ (ಸೂರ್ಯನ ಗೋಚರ ಮೇಲ್ಮೈಗಿಂತ ಸ್ವಲ್ಪ ಮೇಲೆ) ಮತ್ತು ಸೂರ್ಯನ ಹೊರಗಿನ ಪದರವನ್ನು (ಕರೋನಾ) ವಿವಿಧ ತರಂಗ ಬ್ಯಾಂಡ್‌ಗಳಲ್ಲಿ ವೀಕ್ಷಿಸಲು ಸಹಾಯ ಮಾಡುವ ಏಳು ಪೇಲೋಡ್‌ಗಳನ್ನು ಒಯ್ಯುತ್ತದೆ. ಇದನ್ನೂ ಓದಿ: ಸೋಲಾರ್ ಮಿಷನ್ ‘ಆದಿತ್ಯ’ ಸೆಪ್ಟೆಂಬರ್‌ನಲ್ಲಿ ಲಾಂಚ್‍ಗೆ ಸಿದ್ಧ: ಇಸ್ರೋ ಅಧ್ಯಕ್ಷ

    ಆದಿತ್ಯ-ಎಲ್1 ರಾಷ್ಟ್ರೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಿದ್ದವಾಗಿರುವ ಸ್ವದೇಶಿ ಪ್ರಯತ್ನವಾಗಿದೆ. ಬೆಂಗಳೂರಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA) ವಿಸಿಬಲ್ ಎಮಿಷನ್ ಲೈನ್ ಕರೋನಾಗ್ರಾಫ್ ಪೇಲೋಡ್‌ನ ನಿರ್ಮಾಣದ ಪ್ರಮುಖ ಸಂಸ್ಥೆಯಾಗಿದೆ. ಪುಣೆಯ ಖಗೋಳವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರದ ಅಂತರ-ವಿಶ್ವವಿದ್ಯಾನಿಲಯ ಕೇಂದ್ರವೂ ಸೌರ ನೇರಳಾತೀತ ಇಮೇಜರ್ ಪೇಲೋಡ್ ಅನ್ನು ಮಿಷನ್‌ಗಾಗಿ ಅಭಿವೃದ್ಧಿಪಡಿಸಿದೆ. ಇದನ್ನೂ ಓದಿ: ಕರ್ನಾಟಕದಿಂದ ಪಾಠ ಕಲಿತ ಬಿಜೆಪಿ ಹೈಕಮಾಂಡ್ – ಮಧ್ಯಪ್ರದೇಶದಲ್ಲಿ ಮಾಡಿದ ಬದಲಾವಣೆ ಏನು?

    ಕ್ರೋಮೋಸ್ಪಿಯರ್ ಕೀಗಳು ಮತ್ತು ಎಕ್ಸ್-ರೇ ಪೇಲೋಡ್‌ಗಳನ್ನು ಬಳಸಿಕೊಂಡು ಸೂರ್ಯನ ಜ್ವಾಲೆಗಳನ್ನು ಮೇಲ್ವಿಚಾರಣೆ ಮಾಡಿ ಮಾಹಿತಿಯನ್ನು ಒದಗಿಸುತ್ತದೆ. ಪಾರ್ಟಿಕಲ್ ಡಿಟೆಕ್ಟರ್ ಮತ್ತು ಮ್ಯಾಗ್ನೆಟೋಮೀಟರ್ ಪೇಲೋಡ್ ಚಾರ್ಜ್ಡ್ ಕಣಗಳು ಮತ್ತು ಎಲ್-1 ಸುತ್ತ ಹೊರಗಿನ ಕಕ್ಷೆಯನ್ನು ತಲುಪುವ ಕಾಂತಕ್ಷೇತ್ರದ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ. ಇದನ್ನೂ ಓದಿ: ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಭಾರತ ವಿಶ್ವಕ್ಕೇ ತನ್ನ ಸಾಮರ್ಥ್ಯ ತೋರಿಸಿದೆ- ಮೋದಿ

    ಆದಿತ್ಯ ಎಲ್1 ಎರಡು ವಾರಗಳ ಹಿಂದೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಇಸ್ರೋದ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದೆ. ಸೆಪ್ಟೆಂಬರ್ 2 ರಂದು ಉಡಾವಣೆಯಾಗುವ ಸಾಧ್ಯತೆ ಇದೆ ಎಂದು ಇಸ್ರೋ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಹ್ಯಾಕಾಶ ನೌಕೆಯನ್ನು ಸೂರ್ಯ-ಭೂಮಿಯ ಬಾಹ್ಯ ಕಕ್ಷೆಯಲ್ಲಿ ಇರಿಸಲು ಯೋಜಿಸಲಾಗಿದೆ. ಉಪಗ್ರಹವು ಯಾವುದೇ ಗ್ರಹಣ ಅಥವಾ ರಹಸ್ಯವಿಲ್ಲದೇ ಸೂರ್ಯನನ್ನು ನಿರಂತರವಾಗಿ ವೀಕ್ಷಿಸುವ ಹೆಚ್ಚಿನ ಪ್ರಯೋಜನವನ್ನು ಹೊಂದಿದೆ. ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ತಮಿಳುನಾಡು ಮನವಿಗೆ ಆದೇಶ ನೀಡಲು ಸುಪ್ರೀಂ ನಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]