Tag: ADLR

  • ಸರ್ಕಾರಿ ಕಚೇರಿ ನವೀಕರಣಕ್ಕೂ ಅನುದಾನ ಕೊರತೆ – ಸಿಬ್ಬಂದಿಯೇ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ

    ಸರ್ಕಾರಿ ಕಚೇರಿ ನವೀಕರಣಕ್ಕೂ ಅನುದಾನ ಕೊರತೆ – ಸಿಬ್ಬಂದಿಯೇ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ

    ಕಲಬುರಗಿ: ರಾಜ್ಯದಲ್ಲಿ ಪಂಚ ಗ್ಯಾರಂಟಿಗಳ ಬಳಿಕ ಅಭಿವೃದ್ಧಿ ಕೆಲಸಗಳಿಗೆ ಹೊಡೆತ ಬಿದ್ದಿರುವುದು ಜಗಜ್ಜಾಹಿರವಾಗಿದ್ದು, ಇದೀಗ ಸರ್ಕಾರಿ ಕಚೇರಿಗಳ (Government Office) ದುರಸ್ತಿಗೂ ಸಹ ಆರ್ಥಿಕ ಸಂಕಷ್ಟ ಎದುರಾದಂತಿದೆ. ಹೀಗಾಗಿ ಸರ್ಕಾರಿ ನೌಕರರು ಕಚೇರಿ ಸಿಬ್ಬಂದಿಯಿಂದ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ ಮಾಡಿಸಿದ್ದಾರೆ.

    ಹೌದು, ಮಳೆ ಬಂದರೆ ಸಾಕು ಕಲಬುರಗಿ (Kalaburagi) ಎಡಿಎಲ್‌ಆರ್ (ADLR) ಕಚೇರಿಯಲ್ಲಿ ನೀರು ಸೋರುತ್ತದೆ. ಯಾಕಂದ್ರೆ ಜಿಲ್ಲಾ ಪಂಚಾಯತ್ ಕಚೇರಿ ಆವರಣದ ಒಂದನೇ ಮಹಡಿಯಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಕಟ್ಟಡ ಶಿಥಿಲಗೊಂಡಿದೆ. ಮಳೆ ಬಂದರೆ ಸಾಕು ಇಡೀ ಕಚೇರಿಯ ಛಾವಣಿಯಿಂದ ಮಳೆ ನೀರು ಸೋರುತ್ತದೆ. ಹೀಗಾಗಿ ಸಾರ್ವಜನಿಕರ ಜಮೀನಿನ ಕಡತಗಳು ಏನಾದರೂ ನೆನೆದು ಹಾಳಾದರೆ ಮತ್ತೆ ಆ ದಾಖಲೆಗಳು ಸಿಗೋದಿಲ್ಲ. ಹೀಗಾಗಿ ಶಿಥಿಲಾವಸ್ಥೆಯ ಕಚೇರಿ ಬೇರೆಡೆ ಸ್ಥಳಾಂತರ ಮಾಡಿ, ಇಲ್ಲ ದುರಸ್ತಿ ಮಾಡಿಕೊಡಿ ಅಂತ ಅಧಿಕಾರಿಗಳಿಗೆ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ. ಹೀಗಾಗಿ ಖುದ್ದು ಕಚೇರಿಯ ಸಿಬ್ಬಂದಿಗಳೇ ಸಹೋದ್ಯೋಗಿಗಳ ಬಳಿ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ ಮಾಡಿಸುತ್ತಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಭಾರೀ ಮಳೆ – 5 ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ

    ಸದ್ಯ ಕಲಬುರಗಿ ಎಡಿಎಲ್‌ಆರ್ ಕಚೇರಿ ದುರಸ್ತಿಗೆ ಒಟ್ಟು 18 ಲಕ್ಷ ರೂ. ಪ್ರಪೋಸಲ್ ಕಳುಹಿಸಿದ್ದರೂ ಪ್ರಯೋಜನವಾಗಿಲ್ಲ. ಸಿಬ್ಬಂದಿ ತಮ್ಮ ಸ್ಚಂತ ಹಣ ಹಾಕಿ ಕಚೇರಿ ದುರಸ್ಥಿ ಮಾಡುತ್ತಿದ್ದಾರೆ. ಹಳೆಯ ಸಿಮೆಂಟ್ ಛಾವಣಿ ಮೇಲೆ ಕಬ್ಬಿಣದ ಶೆಡ್ ಹೊಡೆಸಿ ಮಳೆ ನೀರು ಕಚೇರಿಯ ಒಳಗೆ ಬರದಂತೆ ಮಾಡಿದ್ದಾರೆ. ಅಲ್ಲದೇ ಇಲ್ಲಿ ಮಹಿಳೆಯರಿಗೆ ಶೌಚಾಲಯ ಇಲ್ಲ. ಹೀಗಾಗಿ ಮಹಿಳೆಯರಿಗಾಗಿ ಒಂದು ಶೌಚಾಲಯವನ್ನು ಸಹ ಸಿಬ್ಬಂದಿ ತಮ್ಮ ಸ್ವಂತ ಹಣದಲ್ಲಿಯೇ ಕಟ್ಟಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಕೊಲೆ ಆರೋಪಿ ದರ್ಶನ್‌ ಪಾಲಿಗೆ ಇಂದು ಬಿಗ್‌ ಡೇ

  • 70 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ADLR, DDLR ಎಸಿಬಿ ಬಲೆಗೆ

    70 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ADLR, DDLR ಎಸಿಬಿ ಬಲೆಗೆ

    – ಏಕಕಾಲದಲ್ಲಿ ಮೂರು ಕಡೆ ಎಸಿಬಿ ದಾಳಿ

    ಬೆಂಗಳೂರು: ಲ್ಯಾಂಡ್ ರೆಕಾರ್ಡ್ ಮಾಡಿಕೊಡಲು 70 ಲಕ್ಷ ಲಂಚಕ್ಕೆ ಬೇಡಿಕೆ ಮಾಡಿದ್ದ ಎಡಿಎಲ್‍ಆರ್, ಡಿಡಿಎಲ್‍ಆರ್ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ಮಾಡಿ ಎಡಿಎಲ್‍ಆರ್ ಅಧಿಕಾರಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

    ಎಡಿಎಲ್‍ಆರ್ ಅಧಿಕಾರಿ ಆನಂದ್ ಮತ್ತು ರಮೇಶ್ ಎಂಬುವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ತಡರಾತ್ರಿ ಬೆಂಗಳೂರಿನ ಜಾಲಹಳ್ಳಿ, ತುಮಕೂರು ಸೇರಿದಂತೆ ಒಟ್ಟು ಮೂರು ಕಡೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆರೋಪಿ ಆನಂದ್ ಯಲಹಂಕ ತಾಲೂಕಿನ ಕುದುರುಗೆರೆಯಲ್ಲಿರುವ ಸರ್ವೆ ನಂಬರ್, 145,146ನ ಲ್ಯಾಂಡ್ ರೆಕಾರ್ಡ್ ಮಾಡಿಕೊಡಲು 70 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 25 ಲಕ್ಷ ಹಣ ಪಡೆದಿದ್ದರು. ಈ ಸಂಬಂಧ ಎಸಿಬಿ ಅಧಿಕಾರಿಗಳಿಗೆ ದೂರು ಕೊಡಲಾಗಿತ್ತು. ಇದನ್ನೂ ಓದಿ: ದೋಸೆ ಮಾಡುವಾತ ಲಕ್ಷಾಂತರ ರೂಪಾಯಿ ವಂಚನೆ-ಕಡಬದಿಂದ ಮೈಸೂರಿಗೆ ಪರಾರಿ

    ದೂರಿನ ಆಧಾರದ ಮೇಲೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ದಾಳಿಯ ವೇಳೆ ಮನೆಯಲ್ಲಿದ್ದ 25 ಲಕ್ಷ ನಗದು 70 ಲಕ್ಷ ಮೊತ್ತದ ಮೂರು ಚೆಕ್ ಹಾಗೂ ದಾಖಲೆಗಳನ್ನ ವಶಪಡಿಸಿಕೊಳ್ಳಲಾಗಿದೆ. ಡಿಡಿಎಲ್‍ಆರ್ ಕುಸುಮ ಲತಾ ಎಂಬವರ ಮನೆ ಮತ್ತು ಸರ್ವೆ ಅಧಿಕಾರಿ ಶ್ರೀನಿವಾಸ್ ರ ತುಮಕೂರಿನ ಮನೆಗಳ ಮೇಲು ದಾಳಿ ಮಾಡಿದ್ದ ಎಸಿಬಿ ಅಧಿಕಾರಿಗಳಿಗೆ ಕೆಲವು ದಾಖಲೆ ಪತ್ರಗಳು ಸಿಕ್ಕಿದ್ದು ಜಪ್ತಿ ಮಾಡಲಾಗಿದೆ. ದಾಳಿ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಎಸಿಬಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ನೀರು ಕುಡಿಯಲು ಹೋಗಿ ಕಾಲುವೆಯಲ್ಲಿ ಬಿದ್ದು ಯುವಕ ಸಾವು