Tag: Administration

  • ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾಶ್ರೀ

    ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾಶ್ರೀ

    ಚಿತ್ರದುರ್ಗ: ಪೋಕ್ಸೋ (POCSO) ಕೇಸಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾಶ್ರೀ (Muruga Shree) ತಮ್ಮ ಮಠದ (Muth) ಅಧಿಕಾರವನ್ನು ಮರಳಿ ಪಡೆದಿದ್ದಾರೆ.

    ಪೋಕ್ಸೋ ಕೇಸಲ್ಲಿ 2022, ಸೆಪ್ಟೆಂಬರ್ 1ರಂದು ಮುರುಘಾಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಸೆರೆಮನೆ ವಾಸ ಅನುಭವಿಸಿದ್ದರು. ಈ ವೇಳೆ ರಾಜ್ಯ ಸರ್ಕಾರ ಮುರುಘಾಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿತ್ತು. ಇದನ್ನೂ ಓದಿ: ಆರ್‌ಎಸ್‌ಎಸ್‌ನಲ್ಲಿ ಜಾತಿ ಕೇಳಿ ಒಳಬಿಡುವ ಪದ್ಧತಿಯಿಲ್ಲ: ರಾಜಕುಮಾರ್

    ಈ ನೇಮಕವನ್ನು ಪ್ರಶ್ನಿಸಿ ಮಠದ ಪರ ವಕೀಲರು ಹೈಕೋರ್ಟ್ ಮೊರೆಹೋಗಿದ್ದ ಹಿನ್ನೆಲೆ ಆಡಳಿತಾಧಿಕಾರಿ ನೇಮಕವನ್ನು ಹೈಕೋರ್ಟ್ ರದ್ದುಪಡಿಸಿತ್ತು. ಆಗ ಮಠದ ಪೀಠಾಧಿಪತಿಯಾಗಿದ್ದ ಮುರುಘಾಶ್ರೀ ಜೈಲಲ್ಲಿದ್ದ ಕಾರಣ, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಿಗೆ ತಾತ್ಕಾಲಿಕವಾಗಿ ಮಠದ ಆಡಳಿತದ ಅಧಿಕಾರ ನೀಡಿತ್ತು. ಇದನ್ನೂ ಓದಿ: ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ತಿಂಗಳಲ್ಲಿ ಖಾತಾ: ಉದ್ಯಮಿಗಳ ನಿಯೋಗಕ್ಕೆ ಎಂ.ಬಿ.ಪಾಟೀಲ್‌ ಭರವಸೆ

    ಹೀಗಾಗಿ ಈವರೆಗೆ ಚಿತ್ರದುರ್ಗ (Chitradurga) ಪಿಡಿಜೆ ಅವರು ಮಠದ ಆಡಳಿತಾಧಿಕಾರಿ ಆಗಿದ್ದರು. ಆದರೆ ನವೆಂಬರ್ 16ರಂದು ಮುರುಘಾಶ್ರೀ ಜಾಮೀನಿನ ಮೇಲೆ ಬಿಡುಗಡೆಯಾದ ಬೆನ್ನಲ್ಲೇ ಮಠದ ಅಧಿಕಾರಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಅಧಿಕಾರ ಹಸ್ತಾಂತರಿಸುವಂತೆ ಚಿತ್ರದುರ್ಗದ ಪ್ರಿನ್ಸಿಪಲ್ ಡಿಸ್ಟ್ರಿಕ್ಟ್ ಮತ್ತು ಸೆಷನ್ಸ್ ಜಡ್ಜ್‌ಗೆ ಸೂಚಿಸಿದೆ. ಇದನ್ನೂ ಓದಿ: ಅಂಬಾರಿ ಆನೆ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್‌ ಪೂಜೆ

    ಮುರುಘಾಶ್ರೀಗೆ ಮಠದ ಆಡಳಿತಾಧಿಕಾರವನ್ನು ನ್ಯಾಯಾಧೀಶರು ಮರಳಿ ಹಸ್ತಾಂತರಿಸಿದ್ದಾರೆ. ಈ ಕುರಿತ ಪತ್ರಿಕಾ ಹೇಳಿಕೆಯನ್ನು ಮುರುಘಾ ಮಠ ಇಂದು ಬಿಡುಗಡೆ ಮಾಡಿದೆ. ಅಲ್ಲದೇ ಮುರುಘಾಶ್ರೀಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಪ್ರವೇಶಿಸದೇ ಜಿಲ್ಲೆಯಿಂದ ಹೊರಗಿದ್ದುಕೊಂಡೇ ಮಠದ ಆಡಳಿತ ನಡೆಸಲಿದ್ದಾರೆ ಎಂದು ಮಠದ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಮುರುಡೇಶ್ವರದ ರಂಗು ಹೆಚ್ಚಿಸಿದ ರಾಜ್ಯದ ಅತೀ ದೊಡ್ಡ ಫ್ಲೋಟಿಂಗ್ ಬ್ರಿಡ್ಜ್

  • ಕರ್ನಾಲ್ ರೈತ ಪ್ರತಿಭಟನೆಗೆ ಮಣಿದ ಸರ್ಕಾರ – ಐಎಎಸ್ ಅಧಿಕಾರಿಯ ವಿರುದ್ಧ ತನಿಖೆಗೆ ಅಸ್ತು

    ಕರ್ನಾಲ್ ರೈತ ಪ್ರತಿಭಟನೆಗೆ ಮಣಿದ ಸರ್ಕಾರ – ಐಎಎಸ್ ಅಧಿಕಾರಿಯ ವಿರುದ್ಧ ತನಿಖೆಗೆ ಅಸ್ತು

    ಕರ್ನಾಲ್: ಹರಿಯಾಣದ ಕರ್ನಾಲ್‍ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ರೈತ ಮುಖಂಡರು ವಾಪಸ್ ಪಡೆದಿದ್ದಾರೆ. ರೈತ ಮುಖಂಡರು ಮತ್ತು ರಾಜ್ಯ ಸರ್ಕಾರದ ನಡುವೆ ನಡೆದ ನಾಲ್ಕನೇ ಸುತ್ತಿನ ಮಾತುಕತೆ ಬಳಿಕ ಸರ್ಕಾರ ಹಲವು ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆ ಕೈ ಬಿಡಲು ನಿರ್ಧರಿಸಲಾಗಿದೆ.

    ಬಸ್ತಾರಾ ಟೋಲ್ ಪ್ಲಾಜಾದಲ್ಲಿ ಆಗಸ್ಟ್ 28 ರಂದು ಪೊಲೀಸರು ನಡೆಸಿದ ಲಾಠಿಚಾರ್ಜ್‍ನಲ್ಲಿ ರೈತ ಸುಶೀಲ್ ಕಾಜಲ್ ಸಾವನ್ನಪ್ಪಿದರು. ಈ ಘಟನೆಯಲ್ಲಿ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಪಾತ್ರ ಇದೆ, ಪ್ರತಿಭಟನಾ ನಿರತ ರೈತರ ತಲೆ ಒಡೆಯಿರಿ ಎಂದು ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ವಿವಾದಾತ್ಮಕ ಆದೇಶ ನೀಡಿದ್ದರು ಎನ್ನಲಾಗಿದೆ. ಇದನ್ನೂ ಓದಿ: 46 ವರ್ಷದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆ

    ವಿವಾದಿತ ಹೇಳಿಕೆ ನೀಡಿದ್ದ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ವಿರುದ್ಧ ತನಿಖೆಯಾಗಬೇಕು ಎಂದು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಇಂದು ನಡೆದ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಹಿರಿಯ ಐಎಎಸ್ ಅಧಿಕಾರಿ ದೇವೇಂದ್ರ ಸಿಂಗ್ ಭಾಗಿಯಾಗಿದ್ದರೇ, ರೈತ ಒಕ್ಕೂಟದ ನಾಯಕ ಗುರ್ನಾನಾಮ್ ಸಿಂಗ್ ಚಧುನಿ ಸಭೆಯಲ್ಲಿ ಉಪಸ್ಥಿತರಿದ್ದರು.

    ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ರೈತರ ಬೇಡಿಕೆಗೆ ಸರ್ಕಾರ ಒಪ್ಪಿರುವುದಾಗಿ ಹಿರಿಯ ಐಎಎಸ್ ಅಧಿಕಾರಿ ದೇವೇಂದ್ರ ಸಿಂಗ್ ತಿಳಿಸಿದರು. ಕರ್ನಾಲ್ ಲಾಠಿಚಾರ್ಜ್ ಪ್ರಕರಣದ ಕುರಿತು ಸಮಗ್ರ ತನಿಖೆಯನ್ನು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನಡೆಸಲಾಗುವುದು ಮತ್ತು ಮೃತ ರೈತ ಸುಶೀಲ್ ಕಾಜಲ್ ಕುಟುಂಬದ ಇಬ್ಬರು ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ಅವರು ನೀಡಿದರು. ತನಿಖೆ ನಡೆಯುವವರೆಗೂ ವಿವಾದಾತ್ಮಕ ಹೇಳಿಕೆ ನೀಡಿದ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ರಜೆಯಲ್ಲಿ ಇರಳಿದ್ದಾರೆ ಎಂದು ದೇವೇಂದ್ರ ಸಿಂಗ್ ತಿಳಿಸಿದರು. ಇದನ್ನೂ ಓದಿ: ಮುಂಬೈ ಅತ್ಯಾಚಾರ ಪ್ರಕರಣ- ಚಿಕಿತ್ಸೆ ಫಲಿಸದೆ ಮೃತಪಟ್ಟ ಸಂತ್ರಸ್ತೆ

  • ಕಡತ ವಿಲೇವಾರಿ ಮತ್ತಷ್ಟು ಸ್ಟ್ರಿಕ್ಟ್ – ಬೊಮ್ಮಾಯಿ ಹೊಸ ರೂಲ್ಸ್ ಏನು? ಏಕೆ?

    ಕಡತ ವಿಲೇವಾರಿ ಮತ್ತಷ್ಟು ಸ್ಟ್ರಿಕ್ಟ್ – ಬೊಮ್ಮಾಯಿ ಹೊಸ ರೂಲ್ಸ್ ಏನು? ಏಕೆ?

    ಬೆಂಗಳೂರು: ಬಸವರಾಜ ಬೊಮ್ಮಾಯಿ ಸಿಎಂ ಪದವಿಗೇರಿ ಒಂದು ತಿಂಗಳಾಗಿದೆ. ಒಂದೇ ತಿಂಗಳಲ್ಲಿ ಆಡಳಿತವನ್ನು ಚುರುಕುಗೊಳಿಸಿ ಬಿಗಿ ಮಾಡುವ ಪ್ರಯತ್ನ ಆರಂಭವಾಗಿದೆ. ಹಂತ ಹಂತವಾಗಿ ಆಡಳಿತದಲ್ಲಿ ದಕ್ಷತೆ ತರಲು ಸಿಎಂ ಪ್ಲಾನ್ ಮಾಡಿಕೊಂಡಿದ್ದಾರೆ.

    ಅಧಿಕಾರಿ ವರ್ಗವನ್ನು ಸರಿದಾರಿಗೆ ತರುವುದು, ಸರ್ಕಾರಿ ಆದೇಶಗಳಿಗೆ ಅಧಿಕೃತ ಟಚ್ ಕೊಡುವುದು ಸಿಎಂ ಮೊದಲ ಉದ್ದೇಶವಾಗಿದ್ದು, ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿದ್ದ ಲೂಪ್ ಹೋಲ್ಸ್ ಗಳಿಗೆ ಬ್ರೇಕ್ ಹಾಕಿದ್ದಾರೆ.

    ಅಧಿಕಾರಿಗಳಿಗೆ ಆಯಾಯಾ ಇಲಾಖಾ ಹೊಣೆಗಾರಿಕೆಗಳನ್ನು ಸಿಎಂ ಫಿಕ್ಸ್ ಮಾಡಿದ್ದಾರೆ. ಕಡತಗಳ ವಿಲೇವಾರಿ ವಿಚಾರದಲ್ಲಿ ಸಣ್ಣ ಲೋಪ ಆಗಬಾರದು, ಯಾವುದೇ ಕಾರಣಕ್ಕೂ ಕಡತಗಳು ದುರ್ಬಳಕೆ ಆಗಬಾರದು ಎಂದು ಸೂಚಿಸಿದ್ದಾರೆ. ಪ್ರತೀ ಹಂತದ ಅಧಿಕಾರಿಯೂ ತನ್ನ ವ್ಯಾಪ್ತಿಯಲ್ಲಿ ಕಡತ ಬಗ್ಗೆ ಸಂಪೂರ್ಣ ಜ್ಞಾನವನ್ನು ಹೊಂದಿರಬೇಕೆಂದು ತಾಕೀತು ಮಾಡಿದ್ದಾರೆ.

    ಪ್ರತಿಯೊಂದು ಆಡಳಿತಾತ್ಮಕ ನಿರ್ಧಾರಗಳು ತಮ್ಮ ಕಣ್ತಪ್ಪಿ ಹೋಗಬಾರದು. ನಿರ್ಧಾರಗಳೂ ಆದೇಶ ಪ್ರತಿ ಮೂಲಕವೇ ಅಧಿಕೃತವಾಗಿರಬೇಕೆಂಬ ಕಾರಣಕ್ಕೆ ಸರ್ಕಾರಿ ಆದೇಶ ಕಾಪಿಗಳ ಕುರಿತಂತೆ ಹಿಂದಿನ ಸಂಪ್ರದಾಯಕ್ಕೆ ಸಿಎಂ ತಿಲಾಂಜಲಿ ಇಟ್ಟಿದ್ದಾರೆ. ಇದನ್ನೂ ಓದಿ : ನಾನು ಜೈಲಲ್ಲಿ ಇದ್ದೆ, ಒಂದು ಬೀಡಿಗೆ ಎಷ್ಟು ದುಡ್ಡು ಕೊಡ್ಬೇಕು ಗೊತ್ತು : ಆರಗ ಜ್ಞಾನೇಂದ್ರ 

    ಆದೇಶ ಪ್ರತಿಗಳಲ್ಲಿ ಬರೇ ಸಹಿಯಷ್ಟೇ ಇಲ್ಲದೇ ಮುಖ್ಯಮಂತ್ರಿಗಳ ಮೊಹರನ್ನು ಸಹ ಬಳಸಲಾಗುತ್ತಿದೆ. ಈ ಮೂಲಕ ಸಹಿಯೊಂದಿಗೆ ಸೀಲ್ ಅನ್ನು ಆದೇಶ ಪ್ರತಿಗಳಲ್ಲಿ ಸಿಎಂ ಬಳಕೆಗೆ ತಂದಿದ್ದಾರೆ. ಮಹತ್ವದ ಆದೇಶ ಕಾಪಿಗಳಿಗೆ ತಮ್ಮ ಸೀಲ್ ಅನ್ನು ಸಿಎಂ ಕಡ್ಡಾಯ ಮಾಡಿದ್ದಾರೆ. ಯಾವುದೇ ಲೋಪ, ದುರ್ಬಳಕೆ, ಅಜಾರೂಕತೆ ಆಗದಂತೆ ಸಿಎಂ ನಿಗಾವಹಿಸಿದ್ದು, ಏನೇ ನಿರ್ಧಾರ ಇದ್ದರೂ ಖುದ್ದು ತಾವೇ ಗಮನಿಸಿ, ಪರಿಶೀಲಿಸಿ ಅನುಮತಿ ನೀಡುತ್ತಿದ್ದಾರೆ. ಇದನ್ನೂ ಓದಿ : ಮಿಡ್‍ನೈಟ್ ಪಾರ್ಟಿ ಮಾಡಿ ಜಾಲಿ ರೈಡ್? – ಜೊಮಾಟೊ ಡೆಲಿವರಿ ಬಾಯ್ ಜಸ್ಟ್ ಮಿಸ್

    ಆಡಳಿತದಲ್ಲಿ ಹೊಸ ಸುಧಾರಣೆ ಜಾರಿಗೆ ಮುಂದಾಗಿದ್ದಕ್ಕೆ ಬಿಜೆಪಿ ಹೈಕಮಾಂಡ್ ಮಟ್ಟದಲ್ಲೂ ಸಿಎಂ ಬೊಮ್ಮಾಯಿ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

  • ನಿಯಮ ಉಲ್ಲಂಘಿಸಿ ಖಾಸಗಿ ಶಾಲೆ ತೆರೆದ ಆಡಳಿತ ಮಂಡಳಿ

    ನಿಯಮ ಉಲ್ಲಂಘಿಸಿ ಖಾಸಗಿ ಶಾಲೆ ತೆರೆದ ಆಡಳಿತ ಮಂಡಳಿ

    ಕೊಪ್ಪಳ: ಕೊರೊನಾ ಹಿನ್ನೆಲೆ ಶಾಲೆಗಳನ್ನು ಆರಂಭಿಸಬೇಕೆ, ಬೇಡವೇ ಎಂಬ ಗೊಂದಲದಲ್ಲಿ ಸರ್ಕಾರ ಇದ್ದರೆ, ಇಲ್ಲೊಂದು ಖಾಸಗಿ ಶಾಲೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಶಾಲೆಯ ತರಗತಿಗಳನ್ನು ಆರಂಬಿಸಿದೆ. ಇದರಿಂದಾಗಿ ಪೋಷಕರು ಭಯಭೀತರಾಗಿದ್ದು, ಮಕ್ಕಳಿಗೆ ಸೋಂಕು ತಗುಲಿದರೆ ಏನು ಗತಿ ಎಂಬ ಆತಂಕದಲ್ಲಿದ್ದಾರೆ.

    ಜಿಲ್ಲೆಯ ಗಂಗಾವತಿಯ ಸೇಂಟ್ ಫಾಲ್ಸ್ ಖಾಸಗಿ ಶಾಲೆಯಲ್ಲಿ ತರಗತಿಗಳನ್ನು ಆರಂಭಿಸಲಾಗಿದ್ದು, ಸರ್ಕಾರದ ನಿಯಮ ಉಲ್ಲಂಘಿಸಿ ಖಾಸಗಿ ಶಾಲೆಯನ್ನು ಆಡಳಿತ ಮಂಡಳಿ ತೆರೆದಿದೆ. ಅಲ್ಲದೆ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಸಹ ನಡೆಸುತ್ತಿದೆ.

    ಪ್ರೌಢ ಶಾಲೆಯ 8, 9, 10ನೇ ತರಗತಿಯ ಮಕ್ಕಳಿಗೆ ಪರೀಕ್ಷೆ ನೆಡಸುವ ಮೂಲಕ ಸೇಂಟ್ ಫಾಲ್ಸ್ ಶಾಲೆ ಆಡಳಿತ ಮಂಡಳಿ ಕೊರೊನಾ ನಿಯಮವನ್ನು ಗಳಿಗೆ ತೂರಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಯಾವುದೇ ಕಾರಣಕ್ಕೂ ಶಾಲೆ ತೆರೆಯಬಾರದು ಎಂಬ ಆದೇಶವಿದ್ದರೂ ನಿಯಮ ಮೀರಿ ಶಾಲೆ ತೆರೆಯಲಾಗಿದೆ. ಅಲ್ಲದೆ ಪರೀಕ್ಷೆ ನಡೆಸಲಾಗಿದೆ. ಈ ಕುರಿತು ಶಿಕ್ಷಣಾಧಿಕಾರಿಗಳು ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ವಿಷಯ ತಿಳಿದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುಮ್ಮನೆ ಕುಳಿತರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ.

    ರಾಜ್ಯದಲ್ಲಿ ಇತ್ತೀಚೆಗೆ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಆದರೂ ನಿರ್ಲಕ್ಷಿಸುವಂತಿಲ್ಲ. ಹೀಗಾಗಿ ಸರ್ಕಾರ ಶಾಲೆ ತೆರೆಯಲು ಅನುಮತಿ ನೀಡಲಾಗಿಲ್ಲ. ಆದರೆ ಕೆಲ ಶಾಲೆಗಳು ನಿಯಮಬಹಿರವಾಗಿ ಶಾಲೆಗಳನ್ನು ತೆರೆಯುತ್ತಿವೆ.

  • ಚುನಾಯಿತರಾಗಿ ಅಧಿಕಾರ- ಹೊಸ ದಾಖಲೆ ಬರೆದ ಪ್ರಧಾನಿ ಮೋದಿ

    ಚುನಾಯಿತರಾಗಿ ಅಧಿಕಾರ- ಹೊಸ ದಾಖಲೆ ಬರೆದ ಪ್ರಧಾನಿ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಚುನಾಯಿತವಾದ ಸರ್ಕಾರದ ಮುಖ್ಯಸ್ಥರಾಗಿ ಎರಡು ದಶಕಗಳನ್ನು ಪೂರೈಸಿದ್ದು, ಈ ಮೂಲಕ ವಿಶ್ವದ ಕೆಲವೇ ನಾಯಕರು ಮಾಡಿದ ಸಾಧನೆಯನ್ನು ಮೋದಿ ಮಾಡಿದಂತಾಗಿದೆ.

    ಈ ಕುರಿತು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಚುನಾಯಿತವಾದ ಸರ್ಕಾರದ ಮುಖ್ಯಸ್ಥರಾಗಿ ಹೆಚ್ಚು ವರ್ಷಗಳ ಕಾಲ ಕಾರ್ಯನಿರ್ವಹಿಸಿದ ವಿಶ್ವದ ವಿರಳ ನಾಯಕರ ಪೈಕಿ ಪ್ರಧಾನಿ ನರೇಂದ್ರ ಮೋದಿ ಸಹ ಒಬ್ಬರು. ಇದು ಪ್ರತಿಯೊಬ್ಬ ಭಾರತೀಯನ ಹೆಮ್ಮೆಯಾಗಿದೆ. ಭಾರತ ಹಾಗೂ ಜಗತ್ತು ಶಾಂತಿ, ಸುಸ್ಥಿರತೆಯಿಂದ ಸಮೃದ್ಧವಾಗಿ ಬೆಳೆಯಲು ಶ್ರಮಿಸುತ್ತಿದ್ದಾರೆ. ಅವರಿಗೆ ಇನ್ನೂ ಹೆಚ್ಚು ಶಕ್ತಿ ಬರಲಿ ಎಂದು ಬರೆದುಕೊಂಡಿದ್ದಾರೆ.

    ಅಲ್ಲದೆ ವಿಶ್ವದ ಇತರ ನಾಯಕರೊಂದಿಗೆ ಹೋಲಿಸಿದ ಚಿತ್ರವನ್ನು ಸಹ ರವಿಶಂಕರ್ ಪ್ರಸಾದ್ ಹಾಕಿದ್ದಾರೆ. ಅಮೆರಿಕ ಅಧ್ಯಕ್ಷ ಬಿಲ್ ಕ್ಲಿಂಟನ್, ಜಾರ್ಜ್ ಡಬ್ಲ್ಯೂ ಬುಷ್, ಫ್ರಾಂಕ್ಲಿನ್ ರೂಸ್ವೆಲ್ಟ್ ಹಾಗೂ ಇಂಗ್ಲೆಂಡ್ ಪ್ರಧಾನಿ ದಿವಂಗತ ಮಾರ್ಗರೇಟ್ ಥ್ಯಾಚರ್ ಸೇರಿದಂತೆ ವಿಶ್ವದ ಹಲವು ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲಿಸಲಾಗುತ್ತಿದೆ.

    ಪ್ರಧಾನಿ ನರೇಂದ್ರ ಮೋದಿಯವರು ಭಾರತದಲ್ಲಿ ಚುನಾಯಿತ ಸರ್ಕಾರದ ಮುಖ್ಯಸ್ಥರಾಗಿ ಒಟ್ಟು 6,941 ದಿನ ಆಡಳಿತ ನಡೆಸಿದ್ದಾರೆ. 4,607 ದಿನಗಳ ಕಾಲ ಗುಜರಾತ್ ಸಿಎಂ ಆಗಿ, 2,334 ದಿನ ಪ್ರಧಾನಿಯಾಗಿ ಆಡಳಿತ ನಡೆಸಿದ್ದಾರೆ. ಜವಾಹರ್ ಲಾಲ್ ನೆಹರು 6,130 ದಿನಗಳ ಕಾಲ ಆಡಳಿತ ನಡೆಸಿದ್ದಾರೆ. ಇಂದಿರಾ ಗಾಂಧಿ 5,829 ದಿನ ಕಾರ್ಯನಿರ್ವಹಿಸಿದ್ದಾರೆ. ಮನಮೋಹನ್ ಸಿಂಗ್ 3,656 ದಿನ, ಮೊರಾರ್ಜಿ ದೇಸಾಯಿ 2,511 ಹಾಗೂ ಅಟಲ್ ಬಿಹಾರಿ ವಾಜಪೇಯಿ 2,272 ದಿನಗಳ ಕಾಲ ಆಡಳಿತ ನಡೆಸಿದ್ದಾರೆ. ಈ ಮೂಲಕ ಹೆಚ್ಚು ದಿನ ಸರ್ಕಾರವನ್ನು ಮುನ್ನಡೆಸಿದ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ.

    ಹಲವು ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವರು ಸಹ ಈ ಕುರಿತು ಟ್ವೀಟ್ ಮಾಡುತ್ತಿದ್ದು, 20ನೇ ವರ್ಷದ ನಮೋ ಸಂಭ್ರಮವನ್ನು ಆಚರಿಸುತ್ತಿದ್ದಾರೆ. 2014ರಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗುವುದಕ್ಕೂ ಮುನ್ನ 2001ರಿಂದ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಇದೀಗ ಅವರು ಪ್ರಧಾನಿಯಾಗಿ 7 ವರ್ಷಗಳನ್ನು ಪೂರೈಸಿದ್ದಾರೆ.

    ಈ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಷ್ಟ್ರೀಯ ಪತ್ರಿಕೆಯಲ್ಲಿ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಸರ್ಕಾರದ ಮುಖ್ಯಸ್ಥರಾಗಿ ಚುನಾವಣೆಯಲ್ಲಿ ಸೋತಿಲ್ಲ ಎಂದು ಹೇಳಿದ್ದಾರೆ.

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹ ಟ್ವೀಟ್ ಮಾಡಿ, ಕೃಷಿ ಸುಧಾರಣೆ, ಕೈಗಾರಿಕೆ ಬೆಳವಣಿಗೆ, ಹೆಣ್ಣು ಮಕ್ಕಳ ಶಿಕ್ಷಣದ ಪ್ರೋತ್ಸಾಹಕ್ಕಾಗಿ ಪ್ರಧಾನಿ ಮೋದಿ ನಿರಂತರವಾಗಿ ಶಕ್ತಿಯ ಪ್ರವಹಿಸಿದ್ದಾರೆ. ನರೇಂದ್ರ ಮೋದಿಯವರು ಹಲವು ದಿಕ್ಕುಗಳಲ್ಲಿ ಗುಜರಾತ್‍ನಲ್ಲಿ ಬದಲಾವಣೆ ತಂದರು. ಇದೀಗ ಅವರ ನಾಯಕತ್ವದಲ್ಲಿ ನಮ್ಮ ಭಾರತ, ನವ ಭಾರತವಾಗಿ ಬದಲಾಗುತ್ತಿದೆ ಎಂದು ಬರೆದು ಕೊಂಡಿದ್ದಾರೆ.

    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಸಹ ಮಾತನಾಡಿದ್ದು, ಭಾರತದ ಏಳಿಗೆಗಾಗಿ ಪ್ರಧಾನಿ ನರೇಂದ್ರ ಮೋದಿ ದಣಿವರಿಯದೆ ಕೆಲಸ ಮಾಡಿದ್ದಾರೆ. ವಿರೋಧ ಪಕ್ಷಗಳ ವಾಗ್ದಾಳಿಗಳು ಅವರನ್ನು ತಡೆಯಲಿಲ್ಲ. ತಾಯಿ ಭಾರತ ಮಾತೆಗೆ ಸೇವೆ ಸಲ್ಲಿಸುವಲ್ಲಿ ಅವರ ದೃಢ ನಿರ್ಧಾರವನ್ನು ಟೀಕಿಸಲಾಗುವುದಿಲ್ಲ. 130 ಕೋಟಿ ಜನರೇ ಅವರ ಕುಟುಂಬ. ಭಾರತೀಯರು ಅವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಅವರ ಸಂಕಲ್ಪ ಎಂದಿನಂತೆ ಪ್ರಬಲವಾಗಿದೆ ಎಂದಿದ್ದಾರೆ.

  • ಶಾಲೆ ಫೀ ಕಟ್ಟದ್ದಕ್ಕೆ ಪರೀಕ್ಷೆಯಿಂದ ವಿದ್ಯಾರ್ಥಿಗಳನ್ನ ಹೊರಗಿಟ್ಟ ಪ್ರಿನ್ಸಿಪಾಲ್

    ಶಾಲೆ ಫೀ ಕಟ್ಟದ್ದಕ್ಕೆ ಪರೀಕ್ಷೆಯಿಂದ ವಿದ್ಯಾರ್ಥಿಗಳನ್ನ ಹೊರಗಿಟ್ಟ ಪ್ರಿನ್ಸಿಪಾಲ್

    ಚಿಕ್ಕೋಡಿ(ಬೆಳಗಾವಿ): ಖಾಸಗಿ ಶಿಕ್ಷಣ ಸಂಸ್ಥೆಗಳ ಹಣದ ದಾಹಕ್ಕೆ ಕೊನೆಯೆ ಇಲ್ಲದಂತಾಗಿದ್ದು, ಶಾಲೆಯ ಫೀ ಕಟ್ಟಿಲ್ಲ ಎಂಬ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಮಕ್ಕಳನ್ನು ಹೊರಗೆ ಕೂರಿಸಿದ ಘಟನೆ ನಡೆದಿದೆ.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿರುವ ಸೇಂಟ್ ಫ್ರಾನ್ಸಿಸ್ ಶಾಲೆಯ ಪ್ರಾಂಶುಪಾಲ ಈ ರೀತಿ ಬೇಜವಾಬ್ದಾರಿ ತೋರಿದ್ದಾರೆ. ಅಲ್ಲದೆ ವರದಿ ಮಾಡಲು ತೆರಳಿದ್ದ ಮಾಧ್ಯಮದವರನ್ನೂ ಹಿಯಾಳಿಸಿದ್ದಾರೆ.

    ಫೀ ಕಟ್ಟಿಲ್ಲ ಎಂಬ ಕಾರಣಕ್ಕೆ ಮೂವತ್ತಕ್ಕೂ ಹೆಚ್ಚು ಮಕ್ಕಳನ್ನು ಶಾಲಾ ಕೊಠಡಿಯ ಹೊರಗೆ ಕೂರಿಸಿ ಅವಮಾನ ಮಾಡಲಾಗಿದ್ದು, ವಿಷಯ ತಿಳಿದ ಪೋಷಕರು ಸ್ಥಳಕ್ಕೆ ತೆರಳಿ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟಾದರೂ ತಾನು ಮಾಡಿದ್ದೇ ಸರಿ ಎಂಬಂತೆ ಆಡಳಿತ ಮಂಡಳಿ ವರ್ತಿಸಿದ್ದು, ಆಡಳಿತ ಮಂಡಳಿ ಕ್ರಮಕ್ಕೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.

    ಸರ್ಕಾರದ ಹಾಗೂ ಅಧಿಕಾರಿಗಳ ಶಿಸ್ತು ಕ್ರಮದ ಭಯವೂ ಇಲ್ಲದೆ ಬೇಕಾಬಿಟ್ಟಿ ವರ್ತನೆ ತೋರಿದ್ದು, ಶಾಲೆಯ ಆಡಳಿತ ಮಂಡಳಿ ವಿರುದ್ಧ ಮಕ್ಕಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಅಡಳಿತದಲ್ಲಿ ವಿಜಯೇಂದ್ರನ ಹಸ್ತಕ್ಷೇಪವಿಲ್ಲ, ಶಾಸಕರು ಯಾವುದೇ ದೂರು ನೀಡಿಲ್ಲ: ರೇಣುಕಾಚಾರ್ಯ

    ಅಡಳಿತದಲ್ಲಿ ವಿಜಯೇಂದ್ರನ ಹಸ್ತಕ್ಷೇಪವಿಲ್ಲ, ಶಾಸಕರು ಯಾವುದೇ ದೂರು ನೀಡಿಲ್ಲ: ರೇಣುಕಾಚಾರ್ಯ

    _ ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಿ

    ದಾವಣಗೆರೆ: ಅಡಳಿತದಲ್ಲಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.

    ದಾವಣಗೆರೆಯ ಹೊನ್ನಾಳಿ ತಾಲೂಕಿನಲ್ಲಿ ಹಿರೇಕಲ್ಮಠದಲ್ಲಿ ಮಾತನಾಡಿದ ಎಂಪಿ ರೇಣುಕಾಚಾರ್ಯ, ವಿಜಯೇಂದ್ರ ಒಬ್ಬ ಯುವ ಮುಖಂಡ. ಪಕ್ಷದ ಬೆಳವಣಿಗೆಗಾಗಿ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತಾರೆ. ಆದರೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಎನ್ನುವುದು ತಪ್ಪು. ಯಾವುದೇ ಇಲಾಖೆ ಅಥವಾ ಶಾಸಕರ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಇದೆಲ್ಲ ಕೆಲವರು ಹುಟ್ಟು ಹಾಕಿದ ಸುಳ್ಳು ಎಂದರು.

    ಇದೇ ವೇಳೆ ಇತ್ತೀಚಿಗೆ ನಿರಂತರವಾಗಿ ಪಾಕ್ ಪರವಾಗಿ ಘೋಷಣೆ ಕೂಗುತ್ತಿದ್ದಾರೆ, ಹೀಗೆ ಕೂಗುತ್ತಿರುವವರ ಹಿಂದೆ ಯಾರು ಇದ್ದಾರೆ, ಯಾರ ಷ್ಯಡ್ಯಂತ್ರ ಇದೆ ಎಂದು ನಮ್ಮ ಸರ್ಕಾರ ತನಿಖೆ ಮಾಡುತ್ತದೆ. ಅಲ್ಲದೆ ನಿರ್ದಾಕ್ಷಿಣ್ಯವಾಗಿ ಇಂತವರ ಮೇಲೆ ಕ್ರಮ ಕೈಗೊಂಡು ನಡು ರಸ್ತೆಯಲ್ಲಿ ಗಲ್ಲಿಗೆ ಏರಿಸಬೇಕು ಇಲ್ಲ ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಇಲ್ಲಿಯ ಅನ್ನ, ನೀರು, ಗಾಳಿ ಕುಡಿದು ಪಾಕ್ ಪರವಾಗಿ ಘೋಷಣೆ ಕೂಗುತ್ತಿದ್ದಾರೆ. ಇವರನ್ನು ನಮ್ಮಲ್ಲಿಯೇ ಯಾರೋ ರಕ್ಷಣೆ ಮಾಡುತ್ತಿದ್ದಾರೆ. ಹೀಗೆ ದೇಶ ವಿರೋಧಿ ಘೋಷಣೆ ಕೂಗಿದವರನ್ನು, ರಕ್ಷಣೆ ಮಾಡುತ್ತಿರುವವರನ್ನು ನಾವೇಲ್ಲ ಒಟ್ಟಾಗಿ ಖಂಡಿಸಬೇಕು ಆಗ ಮಾತ್ರ ಇಂತಹ ಹೇಳಿಕೆ ನೀಡುವವರ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಕಿಡಿಕಾರಿದರು.

    ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಹನ್ನೊಂದು ಶಾಸಕರು ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ವಿರುದ್ಧ ದೂರು ನೀಡಿದ್ದು ಸುಳ್ಳು. ಯಾರು ಕೂಡ ದೂರು ಕೊಟ್ಟಿಲ್ಲ. ಎಲ್ಲ ಶಾಸಕರು ಒಂದಾಗಿದ್ದೇವೆ. ಬಿಎಸ್‍ವೈ ನಮಗೆ ತಂದೆ ಇದ್ದ ಹಾಗೆ. ಇವೆಲ್ಲವೂ ಕೇವಲ ಮಾಧ್ಯಮಗಳ ಸೃಷ್ಟಿಯಾಗಿದೆ ಎಂದು ಮಾಧ್ಯಮಗಳ ಮೇಲೆ ಆರೋಪವನ್ನು ತಳ್ಳಿಹಾಕಿದರು.

  • ಕೆಪಿಎಸ್‍ಸಿ ಪರೀಕ್ಷೆಯಲ್ಲಿ ಗೋಲ್ಮಾಲ್ – ವಿರೋಧಿಸಿದ ಅಭ್ಯರ್ಥಿಗಳಿಗೆ ಪುಡಿ ರೌಡಿಗಳಿಂದ ಅವಾಜ್

    ಕೆಪಿಎಸ್‍ಸಿ ಪರೀಕ್ಷೆಯಲ್ಲಿ ಗೋಲ್ಮಾಲ್ – ವಿರೋಧಿಸಿದ ಅಭ್ಯರ್ಥಿಗಳಿಗೆ ಪುಡಿ ರೌಡಿಗಳಿಂದ ಅವಾಜ್

    ಕಲಬುರಗಿ: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (ಕೆಪಿಎಸ್‍ಸಿ) ಪರೀಕ್ಷೆಯಲ್ಲಿ ಗೋಲ್‍ಮಾಲ್ ನಡೆದಿದ್ದು, ವಿರೋಧಿಸಿದ ವಿದ್ಯಾರ್ಥಿಗಳಿಗೆ ಪುಡಿ ರೌಡಿಗಳಿಂದ ಆಡಳಿತ ಮಂಡಳಿ ಅವಾಜ್ ಹಾಕಿಸಿದೆ ಎಂಬ ಆರೋಪಗಳು ಕೇಳಿ ಬಂದಿವೆ.

    ಕಲಬುರಗಿಯ ಬಾಲಾಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಪರೀಕ್ಷೆಗೆ ಹಾಜರಾದ ಕೆಲ ಅಭ್ಯರ್ಥಿಗಳಿಗೆ ಖಾಲಿ ಓಎಂಆರ್ ಶೀಟ್ ಸಲ್ಲಿಕೆ ಮಾಡಲಾಗಿತ್ತು. ಪರೀಕ್ಷೆ ನಂತರ ಪರಿಣಿತರಿಂದ ಫುಲ್‍ಫಿಲ್ ಮಾಡಲು ಪ್ಲಾನ್ ಮಾಡಲಾಗಿತ್ತು. ಇದನ್ನು ಕಂಡ ಇತರೆ ಅಭ್ಯರ್ಥಿಗಳು ಇದನ್ನು ವಿರೋಧಿಸಿ ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಗೋಲ್‍ಮಾಲ್ ದೃಶ್ಯ ಸೆರೆ ಹಿಡಿಯುತ್ತಿದ್ದ ಅಭ್ಯರ್ಥಿಗಳಿಗೆ ಅವಾಜ್ ಹಾಕಿದ್ದಾರೆ. ಈ ರೌಡಿಗಳಿಗೆ ಆಡಳಿತ ಮಂಡಳಿ ಸದಸ್ಯರುಗಳೇ ಸಾಥ್ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

    ಈಗಾಗಲೇ ಬ್ಲ್ಯಾಕ್ ಲಿಸ್ಟ್‍ನಲ್ಲಿರುವ ಪ್ರವೀಣ್ ವಿದ್ಯಾಸಂಸ್ಥೆಯಂತಹ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ನೀಡಿದ ಕೆಪಿಸಿಸಿ ವಿರುದ್ಧ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • 20 ತಿಂಗ್ಳ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸಿದ ನಾಯಕರು ನೀವೇನಾ – ಸಿಎಂಗೆ ಖಾರವಾದ ಪತ್ರ ಬರೆದ ಸ್ಪೀಕರ್

    20 ತಿಂಗ್ಳ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸಿದ ನಾಯಕರು ನೀವೇನಾ – ಸಿಎಂಗೆ ಖಾರವಾದ ಪತ್ರ ಬರೆದ ಸ್ಪೀಕರ್

    ಬೆಂಗಳೂರು: ಕಳೆದ ಒಂದು ವರ್ಷದ ಅವಧಿಯಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸ್ಪೀಕರ್ ರಮೇಶ್ ಕುಮಾರ್ ಅವರು, ಈ ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿ 20 ತಿಂಗಳ ಕಾಲ ಯಶಸ್ವಿ ಆಡಳಿತ ನೀಡಿದ್ದೀರಿ. ಆದರೆ ಈ ಬಾರಿ ಆದರೆ ಈ ಒತ್ತಡವನ್ನ ಸಮರ್ಪಕವಾಗಿ ನಿರ್ವಹಿಸುವಲ್ಲಿ ನೀವು ಎಡವುತ್ತಿದ್ದೀರಾ ಅನ್ನೋದು ನನ್ನ ಭಾವನೆ ಎಂದು ಪತ್ರ ಬರೆದಿದ್ದಾರೆ.

    ಸ್ಪೀಕರ್ ಪತ್ರದಲ್ಲೇನಿದೆ?
    ಕಳೆದ ಒಂದು ವರ್ಷದಿಂದ ರಾಜ್ಯ ಸಮ್ಮಿಶ್ರ ಸರ್ಕಾರದ ಜವಾಬ್ದಾರಿಯನ್ನ ಹೊತ್ತು ತಾವು ಸರ್ಕಾರವನ್ನ ನಡೆಸುತ್ತಿದ್ದೀರಿ. ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲರನ್ನ ಮತ್ತು ಎಲ್ಲವನ್ನ ಸರಿದೂಗಿಸಿಕೊಂಡು ಹೋಗಬೇಕಾದ ಒತ್ತಡದ ಸನ್ನಿವೇಶದಲ್ಲಿ ನೀವು ಸರ್ಕಾರವನ್ನ ಮುನ್ನಡೆಸುತ್ತಿದ್ದೀರಿ ಅನ್ನುವುದು ನನಗೆ ಗೊತ್ತು. ಆದರೆ ಈ ಒತ್ತಡವನ್ನ ಸಮರ್ಪಕವಾಗಿ ನಿರ್ವಹಿಸುವಲ್ಲಿ ನೀವು ಎಡವುತ್ತಿದ್ದೀರಾ ಅನ್ನೋದು ನನ್ನ ಭಾವನೆ. ಈ ಹಿಂದೆಯೂ ತಾವು ಸಮ್ಮಿಶ್ರ ಸರ್ಕಾರವನ್ನ ಯಶಸ್ವಿಯಾಗಿ 20 ತಿಂಗಳುಗಳ ಕಾಲ ನಡೆಸಿದವರು. ಆ ಮೂಲಕ ರಾಜ್ಯದಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಪಡೆದವರು ನೀವು. ಆದರೆ ಈ ಬಾರಿಯ ಸರ್ಕಾರದಲ್ಲಿ ನಿಮ್ಮ ಆಡಳಿತ ನೈಪುಣ್ಯತೆಯಾಗಲಿ, ಜನಪ್ರಿಯತೆಯಾಗಲಿ ಯಾವುದು ನನಗೆ ಕಾಣಿಸಲಿಲ್ಲ. ನೀವು ಮುಖ್ಯಮಂತ್ರಿಯಾಗಿ ಎಲ್ಲರನ್ನು ಒಟ್ಟಿಗೆ ಕರೆದೊಯ್ಯಬೇಕು. ಅದರಲ್ಲೂ ಸಮ್ಮಿಶ್ರ ಸರ್ಕಾರದ ನಾಯಕನಾಗಿ ನೀವು ಇನ್ನು ಹೆಚ್ಚು ಡೆಮಾಕ್ರಟಿಕ್ ಆಗಿ ವರ್ತಿಸಬೇಕು ಅನ್ನೋದು ನನ್ನ ಅಭಿಪ್ರಾಯ. ನಿಮ್ಮ ಆಡಳಿತ ವೈಖರಿ ಹಾಗೂ ಸಾರ್ವಜನಿಕವಾದ ಕೆಲವೊಂದು ನಡೆಗಳು ನಿಮ್ಮ ಬಗ್ಗೆ ಅಪಾರ ಗೌರವ ಇಟ್ಟಿರುವ ನನಗೆ ಅಷ್ಟೊಂದು ಸಮಂಜಸ ಅನ್ನಿಸಲಿಲ್ಲ. ಇದು ನನ್ನ ವೈಯುಕ್ತಿಕ ಅಭಿಪ್ರಾಯವೇ ಹೊರತು ಅನ್ಯತ ಭಾವಿಸಬಾರದು ಅನ್ನೋದು ನನ್ನ ಕಳಕಳಿಯ ಮನವಿ ಎಂದು ತಿಳಿಸಿದ್ದಾರೆ.

    ಇರುವ ವಿಚಾರವನ್ನು ನೇರವಾಗಿ ಹೇಳುವ ರಮೇಶ್ ಕುಮಾರ್ ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಸದನಲ್ಲಿ ಸರ್ಕಾರದ ಮಂತ್ರಿಗಳ ಕಾರ್ಯವೈಖರಿ ವಿರುದ್ಧ ಅಸಮಾಧಾನವನ್ನು ಹೊರ ಹಾಕಿ ಬಹಿರಂಗವಾಗಿಯೇ ಟೀಕಿಸುತ್ತಿದ್ದರು. ಈಗ ರಾಜ್ಯ ದೋಸ್ತಿಗಳ ನಡುವಿನ ಹಗ್ಗ ಜಗ್ಗಾಟದಿಂದ ರಾಜ್ಯದ ಜನರಿಗೆ ಸಮರ್ಪಕ ಆಡಳಿತ ನೀಡದ್ದಕ್ಕೆ ಬೇಸರಗೊಂಡು ರಮೇಶ್ ಕುಮಾರ್ ಈ ಪತ್ರವನ್ನು ಬರೆದಿದ್ದಾರೆ ಎಂದು ವಿಶ್ಲೇಷಿಸಲಾಗುತ್ತದೆ.

  • ಉತ್ತಮ ಆಡಳಿತದಲ್ಲಿ ಕೇರಳ ಫಸ್ಟ್, ಬಿಹಾರ ಲಾಸ್ಟ್

    ಉತ್ತಮ ಆಡಳಿತದಲ್ಲಿ ಕೇರಳ ಫಸ್ಟ್, ಬಿಹಾರ ಲಾಸ್ಟ್

    ಬೆಂಗಳೂರು: ಆಡಳಿತ ವ್ಯವಸ್ಥೆಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿ ಕೇರಳ ಇದ್ದರೆ, ಬಿಹಾರ ಕೊನೆಯ ಕೊನೆಯ ಸ್ಥಾನದಲ್ಲಿದೆ. ಇನ್ನು ಕರ್ನಾಟಕ ನಾಲ್ಕನೇ ಸ್ಥಾನ ಪಡೆದಿದೆ ಎಂದು ಥಿಂಕ್ ಟ್ಯಾಂಕ್ ಪಬ್ಲಿಕ್ ಅಫೆರ್ಸ್ ಸೆಂಟರ್ (ಪಿಎಸಿ) ಸಾರ್ವಜನಿಕ ವ್ಯವಹಾರಗಳ ಸೂಚಂಕ್ಯದ ಆಧಾರದಲ್ಲಿ ಪಟ್ಟಿಯನ್ನು ಇಂದು ಬಿಡುಗೊಡೆಗೊಳಿಸಿದೆ.

    ಸೂಚಂಕ್ಯ ಆಧಾರದ ಅಡಿಯಲ್ಲಿ ಕೇರಳ ಮೊದಲ ಸ್ಥಾನಗಳಿಸಿದೆ. 2016ರಿಂದಲೂ ಅತಿ ದೊಡ್ಡ ರಾಜ್ಯಗಳಲ್ಲಿ ಒಂದಾದ ಕೇರಳ ಮೊದಲ ಸ್ಥಾನವನ್ನು ಪಡೆಯುತ್ತಾ ಬಂದಿದೆ. ಅತಿ ದೊಡ್ಡ ರಾಜ್ಯಗಳಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದು, ನಂತರ ತಮಿಳುನಾಡು, ತೆಲಂಗಾಣ, ಕರ್ನಾಟಕ ಮತ್ತು ಗುಜರಾತ ಟಾಪ್ 5ರ ಸ್ಥಾನದಲ್ಲಿವೆ. ಮಧ್ಯ ಪ್ರದೇಶ, ಜಾರ್ಖಂಡ್ ಮತ್ತು ಬಿಹಾರ ಕೊನೆಯ ಮೂರು ಸ್ಥಾನಗಳನ್ನು ಪಡೆದುಕೊಂಡಿವೆ.

    ಅತಿ ಚಿಕ್ಕ ರಾಜ್ಯಗಳ ಪೈಕಿ (2 ಕೋಟಿಗಿಂತಲೂ ಕಡಿಮೆ ಜನಸಂಖ್ಯೆ) ಹಿಮಾಚಲ ಪ್ರದೇಶ ಮೊದಲ ಸ್ಥಾನ ಪಡೆದರೆ, ಗೋವಾ, ಮಿಜೋರಾಂ, ಸಿಕ್ಕಿಂ ಮತ್ತು ತ್ರಿಪುರ ನಂತರದ ಸ್ಥಾನಗಳನ್ನು ಆಡಳಿತ ವ್ಯವಸ್ಥೆಯಲ್ಲಿ ಪಡೆದುಕೊಂಡಿವೆ. ನಾಗಾಲ್ಯಾಂಡ್, ಮಣಿಪುರ ಮತ್ತು ಮೇಘಾಲಯ ಚಿಕ್ಕ ರಾಜ್ಯಗಳ ಪೈಕಿ ಕೊನೆಯ ಸ್ಥಾನದಲ್ಲಿವೆ.

    ವರದಿ ಹೇಗೆ ತಯಾರಿಸಲಾಗುತ್ತೆ?
    ಮೂಲಭೂತ ಸೌಲಭ್ಯ, ಸಾಮಾಜಿಕ ರಕ್ಷಣೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗು ಮಾನವ ಅಭಿವೃದ್ಧಿ ಸೇರಿದಂತೆ ದೇಶಾದ್ಯಂತ ಹತ್ತು ಅಂಶಗಳನ್ನು ಕುರಿತು ಪಿಎಸಿ ವರದಿಗೂ ಮುನ್ನ ಅಧ್ಯಯನ ನಡೆಸುತ್ತದೆ. ಜನಸಂಖ್ಯೆ ಆಧಾರದ ಮೇಲೆ ದೊಡ್ಡ ಮತ್ತು ಸಣ್ಣ ರಾಜ್ಯಗಳು ಎಂದು ಎರಡು ವರ್ಗ ಮಾಡಿ ಅಧ್ಯಯನ ನಡೆಸಲಾಗುತ್ತದೆ. 2 ಕೋಟಿಗಿಂತ ಹೆಚ್ಚಿಗೆ ಜನಸಂಖ್ಯೆಯನ್ನು ಹೊಂದಿರುವ ರಾಜ್ಯವನ್ನು ದೊಡ್ಡ ರಾಜ್ಯ ಎಂದು ವಿಭಾಗಿಸಲಾಗುತ್ತದೆ. ಒಟ್ಟು 30 ಮುಖ್ಯ ವಿಷಯಗಳು ಮತ್ತು 100 ಸೂಚಕಗಳು ಅಂದಾಜು ಮಾಡಲ್ಪಟ್ಟ, ಸರ್ಕಾರದ ಮಾಹಿತಿಯ ಮೇಲೆ ಈ ವರದಿ ಅವಲಂಬಿಸಿರುತ್ತದೆ.

    2016ರಿಂದಲೂ ಪಿಎಸಿ ಸಾರ್ವಜನಿಕ ವ್ಯವಹಾರಗಳ ಸೂಚಂಕ್ಯದ ಆಧಾರದ ಮೇಲೆ ಈ ಪಟ್ಟಿಯನ್ನು ಬಿಡುಗೊಳಿಸುತ್ತಾ ಬಂದಿದೆ. ಈ ವರದಿಯ ದತ್ತಾಂಶಗಳ ಆಧಾರದ ಮೇಲೆ ರಾಜ್ಯದ ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ದಿಕ್ಸೂಚಿಯಾಗಲಿದೆ. 1994ರಲ್ಲಿ ಭಾರತದ ಖ್ಯಾತ ಅರ್ಥಶಾಸ್ತ್ರಜ್ಞ ಸ್ಯಾಮುವೆಲ್ ಪೌಲ್ ಪಿಎಸಿ ಸಂಸ್ಥೆಯನ್ನು ಹುಟ್ಟು ಹಾಕಿದ್ದರು.