Tag: adopt

  • ಸಂಚಾರಿ ವಿಜಯ್ ಹೆಸರಲ್ಲಿ ಗಿಣಿ ದತ್ತು ಪಡೆದ ಬಿಗ್‍ಬಾಸ್ ಸ್ಪರ್ಧಿ ಚಂದ್ರಚೂಡ್

    ಸಂಚಾರಿ ವಿಜಯ್ ಹೆಸರಲ್ಲಿ ಗಿಣಿ ದತ್ತು ಪಡೆದ ಬಿಗ್‍ಬಾಸ್ ಸ್ಪರ್ಧಿ ಚಂದ್ರಚೂಡ್

    ಬೆಂಗಳೂರು: ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಬಳಿಕ ಇದೀಗ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅಕಾಲಿಕ ನಿಧನ ಇಡೀ ಚಿತ್ರರಂಗವನ್ನೇ ದಂಗುಬಡಿಸಿದೆ. ಸಂಚಾರ ನಿಲ್ಲಿಸಿದ ಸಂಚಾರಿಗೆ ಈಗಾಗಲೇ ಎಲ್ಲರೂ ಕಣ್ಣೀರ ವಿದಾಯ ತಿಳಿಸಿದ್ದಾರೆ. ಈ ಬೆನ್ನಲ್ಲೇ ಕನ್ನಡದ ಬಿಗ್ ಬಾಸ್ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಅವರು ವಿಜಯ್ ಹೆಸರಿನಲ್ಲಿ ಮಹಾನ್ ಕಾರ್ಯವೊಂದನ್ನು ಮಾಡಿದ್ದಾರೆ.

    ಹೌದು, ಸಂಚಾರಿ ವಿಜಯ್ ಅವರ ಹೆಸರಿನಲ್ಲಿ ಚಕ್ರವರ್ತಿ ಚಂದ್ರಚೂಡ್ ಅವರು ಗಿಣಿಯೊಂದನ್ನು ದತ್ತು ಪಡೆದಿದ್ದಾರೆ. ಈ ಮೂಲಕ ವಿಜಯ್ ಹೆಸರು ಸದಾ ಮನದಲ್ಲಿರುವಂತೆ ಮಾಡಿದ್ದಾರೆ. ದಾವಣಗೆರೆಯ ಇಂದಿರಾ ಪ್ರಿಯದರ್ಶಿನಿ ಪ್ರಾಣಿಸಂಗ್ರಹಾಲಯದಲ್ಲಿ ಗಿಣಿ ದತ್ತು ಪಡೆದಿರುವ ಚಂದ್ರಚೂಡ್, 1 ವರ್ಷಗಳ ಕಾಲ ಅದರ ಆರೈಕೆಯನ್ನು ಮಾಡಲಿದ್ದಾರೆ. ಇದನ್ನೂ ಓದಿ: ದಾಸನ ಮನವಿಗೆ ಸ್ಪಂದನೆ- ಪ್ರಾಣಿಗಳನ್ನು ದತ್ತು ಪಡೆದ ಅಭಿಮಾನಿಗಳು

    ತಾವು ಗಿಣಿ ದತ್ತು ಪಡೆದಿರುವ ವಿಚಾರವನ್ನು ಚಂದ್ರಚೂಡ್ ಅವರು ಸಾಮಾಜಿಕ ಜಾಲತಾನದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ಇನ್ ಸ್ಟಾ ಖಾತೆಯಲ್ಲಿ ಸರ್ಟಿಫಿಕೆಟ್ ಸಹಿತ ಮಾಹಿತಿ ಶೇರ್ ಮಾಡಿಕೊಂಡಿರುವ ಚಂದ್ರಚೂಡ್, ಸಂಚಾರಿ ವಿಜಯ್ ನಿನಗೆ ಗಿಣಿ ಇಷ್ಟ, ಅದಕ್ಕೆ ನಿನ್ ಹೆಸರಲ್ಲೊಂದು ತಗೊಂಡಿದ್ದೀನಿ ನೋಡಿ ಸ್ವಾಮಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಡಿಕೆ ರವಿ ಪಾತ್ರದಲ್ಲಿ ಅಭಿನಯಿಸ್ತಾರಾ ಚಕ್ರವರ್ತಿ ಚಂದ್ರಚೂಡ್?

    ಕೆಲ ದಿನಗಳ ಹಿಂದೆ ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ಕೊರೊನಾ ಬಿಕ್ಕಟ್ಟಿನಿಂದ ಜನಸಾಮಾನ್ಯರಿಗೆ ತೊಂದರೆಯಾದಂತೆ ಪ್ರಾಣಿಗಳಿಗೂ ಅಷ್ಟೇ ತೊಂದರೆ ಉಂಟಾಗಿದೆ. ಮೃಗಾಲಯಗಳಲ್ಲಿ ಪ್ರಾಣಿಗಳ ಪೋಷಣೆ ಕಷ್ಟವಾಗಿದೆ. ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆಯುವುದರ ಮೂಲಕ ನೆರವಾಗಿ ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ದರ್ಶನ್ ಮಹತ್ಕಾರ್ಯಕ್ಕೆ ಕೈ ಜೋಡಿಸಿದ ಉಪೇಂದ್ರ

    ದರ್ಶನ್ ಮನವಿಯ ಬೆನ್ನಲ್ಲೇ ಅವರ ಅಭಿಮಾನಿಗಳು ಹಾಗೂ ಪ್ರಾಣಿಪ್ರಿಯರು ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿಯೂ ಪ್ರಾಣಿಗಳನ್ನು ದತ್ತು ಪಡೆಯುವುದರ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ಡಿ ಬಾಸ್ ಮನವಿ ನಂತರ ಕೇವಲ ಎರಡು ದಿನದಲ್ಲಿ 25 ಲಕ್ಷ ಮೌಲ್ಯದ ದತ್ತು ಹಣ ಸಂಗ್ರಹವಾಗಿದೆ ಎಂದು ಕರ್ನಾಟಕ ಮೃಗಾಲಯ ಮಾಹಿತಿ ನೀಡಿತ್ತು. ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸೇರಿದಂತೆ ಹಲವು ಮಂದಿ ಈಗಲೂ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಮಾನವೀಯ ಕಾರ್ಯ ಮುಂದುವರಿದಿದೆ.

  • ಉತ್ತರ ಕರ್ನಾಟಕದ ಏಕೈಕ ಮೃಗಾಲಯಕ್ಕೆ ಆರ್ಥಿಕ ಸಂಕಷ್ಟ – 1 ಹುಲಿ, 4 ಚಿರತೆ ದತ್ತು ಪಡೆಯುವಂತೆ ಮನವಿ

    ಉತ್ತರ ಕರ್ನಾಟಕದ ಏಕೈಕ ಮೃಗಾಲಯಕ್ಕೆ ಆರ್ಥಿಕ ಸಂಕಷ್ಟ – 1 ಹುಲಿ, 4 ಚಿರತೆ ದತ್ತು ಪಡೆಯುವಂತೆ ಮನವಿ

    ಗದಗ: ಮಹಾಮಾರಿ ಕೊರೊನಾ ಇಡೀ ಜಗತ್ತನ್ನೇ ಅಲ್ಲೋಲ ಕಲ್ಲೋಲ ಮಾಡಿಬಿಟ್ಟಿದೆ. ಕೊರೊನಾ ಬಿಸಿ ಉತ್ತರ ಕರ್ನಾಟಕದ ಏಕೈಕ ಮೃಗಾಲಯ ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದೆ. ಹೀಗಾಗಿ ದಾನಿಗಳು ಮುಂದೆ ಬಂದು ಪ್ರಾಣಿಗಳನ್ನು ದತ್ತು ಪಡೆಯುವಂತೆ ಅರಣ್ಯ ಇಲಾಖೆ ಮನವಿ ಮಾಡ್ತಿದೆ.

    ಹೌದು, ಉತ್ತರ ಕರ್ನಾಟಕದ ಏಕೈಕ ಸಣ್ಣ ಮೃಗಾಲಯವೆಂದೇ ಹೆಸರಾಗಿರೋ ಬಿಂಕದಕಟ್ಟಿ ಝೂ  ಸಾಕಷ್ಟು ಆಕರ್ಷಣೀಯ ಕೇಂದ್ರಬಿಂದು. ಈ ಮೃಗಾಲಯಕ್ಕೆ ಉತ್ತರ ಕರ್ನಾಟಕದ ನಾನಾ ಜಿಲ್ಲೆಗಳಿಂದ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರಾಣಿ ಪ್ರಿಯರು ಬರ್ತಾಯಿದ್ರು. ಆದರೆ ಈ ಕೊರೋನಾ ಅಟ್ಟಹಾಸದಿಂದ ಮೃಗಾಲಯಕ್ಕೆ ಬರುವವರ ಸಂಖ್ಯೆ ಬಹಳ ಕಡಿಮೆಯಾಗಿದೆ. ಹೀಗಾಗಿ ಗದಗನ ಬಿಂಕದಕಟ್ಟಿ ಮೃಗಾಲಯಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಇಲ್ಲಿನ ಪ್ರಾಣಿಗಳನ್ನು ಸಾಕುವುದು ಅರಣ್ಯ ಇಲಾಖೆಗೆ ಕಷ್ಟ ಸಾಧ್ಯವಾಗಿದೆ. ಅದರಲ್ಲೂ ಮಾಂಸಾಹಾರಿ ಪ್ರಾಣಿಗಳನ್ನು ಸಲುವುದು ಮತ್ತಷ್ಟು ಸಮಸ್ಯೆಯಾಗಿದೆ.

    ಸದ್ಯ ಎರಡು ಹುಲಿ ಹಾಗೂ ಆರು ಚಿರತೆಗಳು ಮೃಗಾಲಯದಲ್ಲಿ ಆಶ್ರಯ ಪಡೆದುಕೊಂಡಿವೆ. ಆ ಪೈಕಿ ಒಂದು ಹುಲಿ ಹಾಗೂ ಎರಡು ಚಿರತೆಗಳನ್ನು ಪ್ರಾಣಿ ಪ್ರಿಯರು ಈಗಾಗಲೇ ದತ್ತು ಪಡೆದುಕೊಂಡಿದ್ದಾರೆ. ಉಳಿದ ಒಂದು ಹುಲಿ ಹಾಗೂ ನಾಲ್ಕು ಚಿರತೆಗಳನ್ನು ದತ್ತು ಪಡೆಯುವಂತೆ ಮೃಗಾಲಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಒಂದು ಹುಲಿಗೆ ಆಹಾರ ಸೇರಿದಂತೆ ಹಾಗೂ ಅದರ ಸಂಪೂರ್ಣ ಆರೈಕೆ ಮಾಡಲು ವರ್ಷಕ್ಕೆ ಒಂದು ಲಕ್ಷ ರೂಪಾಯಿ ವೆಚ್ಚ ತಗುಲುತ್ತದೆ. ಹಾಗೇ ಒಂದು ಚಿರತೆ ಆಹಾರ ಹಾಗೂ ಆರೈಕೆ ಮಾಡಲು 35 ಸಾವಿರ ರೂಪಾಯಿ ವೆಚ್ಚ ತಗಲುತ್ತದೆ. ಸದ್ಯ ಒಂದು ಹುಲಿ ಹಾಗೂ ನಾಲ್ಕು ಚಿರತೆಯನ್ನು ದತ್ತು ನೀಡಲು ಅರಣ್ಯ ಇಲಾಖೆ ಮುಂದಾಗಿದ್ದು ಕೊರೊನಾ ಹಾವಳಿ ಇಲ್ಲದಿದ್ದರೆ ಮೃಗಾಲಯಯಕ್ಕೆ ಬರುವ ಪ್ರಾಣಿ ಪ್ರಿಯರು ನೀಡುವ ಟಿಕೇಟ್ ದರದಲ್ಲಿ ಅವುಗಳಿಗೆ ಆಹಾರ ಹಾಗೂ ಆರೈಕೆ ಮಾಡಲಾಗುತ್ತಿತ್ತು. ಸದ್ಯ ಪ್ರಾಣಿ ವೀಕ್ಷಣೆ ಮಾಡಲು ಬರುವವರ ಸಂಖ್ಯೆ ಬಹಳ ವಿರಳವಾಗಿದೆ. ಹೀಗಾಗಿ ಆರ್ಥಿಕವಾಗಿ ಸದೃಢರಾದ ನಾಗರಿಕರು ಹಾಗೂ ಪ್ರಾಣಿ ಪ್ರಿಯರು ದತ್ತು ಪಡೆಯಲು ಮುಂದಾಗಬೇಕಾಗಿದೆ.

    ಪ್ರಮುಖವಾಗಿ ಮಾಂಸಾಹಾರಿ ಪ್ರಾಣಿಗಳನ್ನು ದಾನಿಗಳು ದತ್ತು ಪಡೆಯುವಂತೆ ಮೃಗಾಲಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಸರ್ಕಾರ ಕೂಡ ಇಂತಹ ಕಾರ್ಯಗಳಿಗೆ ಪ್ರಥಮ ಪ್ರಾಶಸ್ತ್ಯ ನೀಡಿ ಅನುದಾನ ಬಿಡುಗಡೆ ಮಾಡಬೇಕಾಗಿದೆ.

  • ಕುಟುಂಬಸ್ಥರ ಚಿತ್ರಹಿಂಸೆಯಿಂದ ನಲುಗಿದ್ದ ಯುವತಿಯನ್ನು ದತ್ತು ಪಡೆದು ಮದ್ವೆ ಮಾಡಿಕೊಟ್ಟ ದಂಪತಿ!

    ಕುಟುಂಬಸ್ಥರ ಚಿತ್ರಹಿಂಸೆಯಿಂದ ನಲುಗಿದ್ದ ಯುವತಿಯನ್ನು ದತ್ತು ಪಡೆದು ಮದ್ವೆ ಮಾಡಿಕೊಟ್ಟ ದಂಪತಿ!

    – ದಂಪತಿಯ ಮಾನವೀಯ ಕಾರ್ಯಕ್ಕೆ ಶ್ಲಾಘನೆ

    ತಿಸ್ಸೂರ್(ಕೇರಳ): ತಾಯಿ ಹಾಗೂ ತನ್ನ ಮಲತಂದೆಯಿಂದ ಪ್ರತಿನಿತ್ಯ ಚಿತ್ರಹಿಂಸೆ ಅನುಭವಿಸುತ್ತಿದ್ದ ಯುವತಿಯನ್ನು ದಂಪತಿ ದತ್ತು ಪಡೆದು ಆಕೆಯನ್ನು ಮದುಎವ ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಹೌದು. ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುವ ತಂದೆ-ತಾಯಿಯನ್ನು ಪಡೆದುಕೊಂಡ ಸೂರ್ಯಪ್ರಭಾ(18) ಇದೀಗ ಜೀವನದುದ್ದಕ್ಕೂ ಜೊತೆಯಾಗಿ ನಿಲ್ಲುವ ಒಳ್ಳೆಯ ಹುಡುಗನನ್ನು ಬಾಳ ಸಂಗಾತಿಯಾಗಿ ಪಡೆದಿದ್ದಾರೆ. ಈ ಮೂಲಕ ಆಕೆಯ ಜೀವನವೇ ಸಂಪೂರ್ಣ ಬದಲಾಗಿದೆ.

    ಮೂಲತಃ ಕೊಂಡಾಜಿ ನಿವಾಸಿಯಾಗಿರುವ ಸೂರ್ಯಪ್ರಭಾ ಕೆಲ ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದಳು. ಬಳಿಕ ತಾಯಿ ಮತ್ತು ಮಲತಂದೆಯ ಜೊತೆ ವಾಸಿಸುತ್ತಿದ್ದಳು. ಆದರೆ ಈ ದಂಪತಿ ಸೂರ್ಯಪ್ರಭಾಗೆ ಪ್ರತಿನಿತ್ಯ ಚಿತ್ರಹಿಂಸೆ ನೀಡುತ್ತಿದ್ದರು. ಇದರಿಂದ ಸೂರ್ಯಪ್ರಭಾ ಕೂಡ ಬೇಸತ್ತಿದ್ದಳು.

    ಸೂರ್ಯಪ್ರಭಾಳ ಕಷ್ಟ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಂತೆಯೇ ಪೊಲೀಸರು ಮಲತಂದೆಯನ್ನು ವಶಕ್ಕೆ ಪಡೆದಿದ್ದರು. ಸೂರ್ಯಪ್ರಭಾಳನ್ನು ಕೂಡ ಜೊತೆಯಲ್ಲಿಯೇ ಠಾಣೆಗೆ ಕರೆತಂದಿದ್ದರು. ಈ ವೇಳೆ ದಿನ ನಿತ್ಯವು ನರಕ ಅನುಭವಿಸುತ್ತಿದ್ದ ಸೂರ್ಯಪ್ರಭಾ ಮತ್ತೆ ಮನೆಗೆ ಹೋಗಲು ಪೊಲೀಸರ ಮುಂದೆ ನಿರಾಕರಿಸಿದಳು.

    ಪಜಯನ್ನೂನಲ್ಲಿರುವ ಶಿವದಾಸನ್ ದಂಪತಿಯ ವ್ಹೀಲರ್ ಶಾಪ್‍ನಲ್ಲಿ ಸೂರ್ಯಪ್ರಭಾ ಕೆಲ ದಿನಗಳವರೆಗೆ ಕೆಲಸ ಮಾಡಿದ್ದಳು. ಆಗ ನಿಶಾ ಅವರು ಸೂರ್ಯಪ್ರಭಾಳನ್ನು ಮಗಳಂತೆ ನೋಡಿಕೊಳ್ಳುತ್ತಿದ್ದರು. ಹೀಗಾಗಿ ಆಕೆಯ ಎಲ್ಲ ವಿಷಯ ತಿಳಿದ ಬಳಿಕ ದಂಪತಿ ಪೊಲೀಸ್ ಅಧಿಕಾರಿಗಳ ಮುಂದೆ ಮನವಿ ಮಾಡಿಕೊಂಡರು. ಹಾಗೆಯೇ ಸೂರ್ಯಪ್ರಭಾಳನ್ನು ದತ್ತು ಪಡೆದು ತಮ್ಮೊಂದಿಗೆ ಕರೆದೊಯ್ದರು.

    ಇನ್ನು ಸೂರ್ಯಪ್ರಭಾಳ ಬಗ್ಗೆ ತಿಳಿದ ತಿರುವಿಲ್ವಮಲಾ ನಿವಾಸಿ ಮನೋಜ್ ಆಕೆಯನ್ನು ಮದುವೆಯಾಗಲು ಮುಂದೆ ಬಂದಿದ್ದಾನೆ. ಇದನ್ನು ತಿಳಿದ ಶಿವದಾಸನ್ ದಂಪತಿ ಮದುವೆ ಸಿದ್ಧತೆ ಮಾಡಿ, ಮದುವೆ ಮಾಡಿಕೊಟ್ಟಿದ್ದಾರೆ. ಕೊಡತೂರ್ ಭಗವತಿ ದೇವಸ್ಥಾನದಲ್ಲಿ ಮದುವೆ ಸಮಾರಂಭ ನಡೆದಿದ್ದು, ಕಾರ್ಪೆಂಟರ್ ಆಗಿರುವ ಶಿವದಾಸನ್ ತನ್ನ ಸಾಮಥ್ರ್ಯಕ್ಕೆ ತಕ್ಕಂತೆ ಸೂರ್ಯಪ್ರಭಾಳಿಗೆ ಆಭರಣಗಳನ್ನು ಮಾಡಿಸಿಕೊಟ್ಟಿದ್ದಾರೆ.

    ಒಟ್ಟಿನಲ್ಲಿ ಮಾನವೀಯತೆ ಎಂಬುದೇ ಮರೆಯಾಗುತ್ತಿರುವ ಈ ಕಾಲದಲ್ಲಿ ಶಿವದಾಸನ್ ದಂಪತಿ ಮತ್ತು ಮನೋಜ್ ಸೂರ್ಯಪ್ರಭಾಳ ಬಾಳಿನಲ್ಲಿ ಹೊಸ ಬೆಳಕು ತಂದಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

  • ವಿಶ್ವದ ದಿ ಬೆಸ್ಟ್ ಮಮ್ಮಿ ಪ್ರಶಸ್ತಿ ಪಡೆಯಲಿದ್ದಾರೆ ಟೆಕ್ಕಿ

    ವಿಶ್ವದ ದಿ ಬೆಸ್ಟ್ ಮಮ್ಮಿ ಪ್ರಶಸ್ತಿ ಪಡೆಯಲಿದ್ದಾರೆ ಟೆಕ್ಕಿ

    – ಡೌನ್ ಸಿಂಡ್ರೋಮ್ ಮಗುವನ್ನು ದತ್ತು ಪಡೆದು ಆರೈಕೆ
    – ಮಗುವಿನ ಪಾಲನೆಗಾಗಿ ಸಾಫ್ಟ್‌ವೇರ್ ಕೆಲಸ ತೊರೆದ್ರು

    ಮುಂಬೈ: ಮಹಾರಾಷ್ಟ್ರದ ಪುಣೆ ಮೂಲದ ಟೆಕ್ಕಿಯೊಬ್ಬರು ‘ವಿಶ್ವದ ಅತ್ಯುತ್ತಮ ಮಮ್ಮಿ’ ಪ್ರಶಸ್ತಿಯನ್ನು ಪಡೆಯುತ್ತಿದ್ದಾರೆ.

    ಟೆಕ್ಕಿ ಆದಿತ್ಯ ತಿವಾರಿ 2016ರಲ್ಲಿ ಡೌನ್ ಸಿಂಡ್ರೋಮ್‍ನಿಂದ ಬಳಲುತ್ತಿರುವ ಮಗುವನ್ನು ದತ್ತು ಪಡೆದುಕೊಂಡಿದ್ದರು. ಮಗು ದತ್ತು ಪಡೆಯಲು ಆದಿತ್ಯ ದೀರ್ಘ ಕಾಲ ಕಾನೂನಿನ ಹೋರಾಟ ಕೂಡ ಮಾಡಿ ಗೆಲುವು ಸಾಧಿಸಿದ್ದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂದರೆ ಮಾರ್ಚ್ 8ರಂದು ದೇಶಾದ್ಯಂತ ಅನೇಕ ಮಹಿಳೆಯರೊಂದಿಗೆ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಆದಿತ್ಯ ಅವರಿಗೆ ವಿಶ್ವದ ಅತ್ಯುತ್ತಮ ಮಮ್ಮಿ ಎಂಬ ಬಿರುದನ್ನು ನೀಡಲಾಗುತ್ತದೆ.

    ಅರೆ ತಾಯಿಗೆ ಪ್ರಶಸ್ತಿ ನೀಡುವುದು ಸಹಜ. ಆದರೆ ತಂದೆಗೆ ‘ಬೆಸ್ಟ್ ಮಮ್ಮಿ’ ಪ್ರಶಸ್ತಿ ಹೇಗೆ ಸಾಧ್ಯ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಆದರೆ ತಾಯಿಯ ಕರ್ತವ್ಯವನ್ನು ನಿಭಾಯಿಸುವ ಪ್ರತಿಯೊಬ್ಬ ಪುರುಷನೂ ತಾಯಿಯಂದೇ ಪರಿಗಣಿಸಲಾಗುತ್ತದೆ. ಈ ಕಾರಣಕ್ಕೆ ಆದಿತ್ಯ ತಿವಾರಿ ಅವರು ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಆದಿತ್ಯ, ವಿಶ್ವದ ಅತ್ಯುತ್ತಮ ಮಮ್ಮಿಗಳಲ್ಲಿ ಒಬ್ಬನಾಗಿ ಆಯ್ಕೆಯಾಗಿದ್ದಕ್ಕೆ ಸಂತೋಷವಾಗಿದೆ. ವಿಶೇಷ ಮಗುವನ್ನು ನೋಡಿಕೊಂಡ ನನ್ನ ಅನುಭವವನ್ನು ಇತರರೊಂದಿಗೆ ಹಂಚಿಕೊಳ್ಳಲು ನಾನು ಬಯಸುತ್ತೇನೆ. ನಾನು ಸಿಂಗಲ್ ಪೇರೆಂಟ್ ಆಗಿ ಮಗುವನ್ನು ದತ್ತು ಪಡೆದಿದ್ದೇನೆ. 22 ತಿಂಗಳ ಮಗು ಅವನೀಶ್‍ನನ್ನು ದತ್ತು ಪಡೆಯಲು ನಾನು ಸಾಫ್ಟ್‌ವೇರ್ ಕಂಪೆನಿಯಲ್ಲಿ ಕೆಲಸ ಕೂಡ ಬಿಟ್ಟೆ. ಇದೀಗ ಭಾರತದಲ್ಲಿ ವಿಶೇಷ ಮಕ್ಕಳ ಪೋಷಕರಿಗೆ ಕೌನ್ಸಲಿಂಗ್ ನೀಡುತ್ತೇನೆ ಹಾಗೂ ಅವರಿಗೆ ಪ್ರೋತ್ಸಾಹ ಮಾಡುತ್ತೇನೆ ಎಂದರು.

    ಆದಿತ್ಯ 2016 ಅವನೀಶ್ ದತ್ತು ಪಡೆದುಕೊಂಡಿದ್ದು, ಮಗು ಡೌನ್ ಸಿಂಡ್ರೋಮ್‍ನಿಂದ ಬಳಲುತ್ತಿದೆ. ಸುಮಾರು ಒಂದೂವರೆ ವರ್ಷಗಳ ಕಾಲ ಆದಿತ್ಯ ಕಾನೂನಿನ ಹೋರಾಟ ನಡೆಸಿ ಗೆದ್ದಿದ್ದಾರೆ. ಆದಿತ್ಯ ಅವರ ಈ ನಿರ್ಧಾರವನ್ನು ಅವರ ಕುಟುಂಬಸ್ಥರು ವಿರೋಧಿಸಿದ್ದರು. ಆದರೆ ಇದು ಯಾವುದನ್ನು ಲೆಕ್ಕಿಸದೇ ಆದಿತ್ಯ ಮಗುವನ್ನು ದತ್ತು ಪಡೆದಿದ್ದರು. ಮಗುವಿನ ತಾಯಿ ಆಶ್ರಮದ ಮುಂದೆ ಬಿಟ್ಟು ಹೋಗಿದ್ದಳು. ಆದರೆ ಆದಿತ್ಯ ಮಗುವನ್ನು ತಾಯಿಯಂತೆ ನೋಡಿಕೊಂಡಿದ್ದಾರೆ.

    ನಾನು ಹಾಗೂ ಅವನೀಶ್ 22 ರಾಜ್ಯಗಳಲ್ಲಿ ವಾಸವಿದ್ದು, 400 ಸ್ಥಳಗಳಲ್ಲಿ ಮೀಟಿಂಗ್ಸ್, ವರ್ಕ್‍ಶಾಪ್, ಟಾಕ್ಸ್ ಹಾಗೂ ಕಾನ್ಫರೆನ್ಸ್ ಮಾಡಿದ್ದೇನೆ. ಭಾರತದಾದ್ಯಂತ 10,000 ಪೋಷಕರ ಜೊತೆ ನಾವು ಸೇರಿದ್ದೇವೆ. ಈ ಸಂದರ್ಭದಲ್ಲಿ ವಿಶೇಷ ಮಕ್ಕಳನ್ನು ನಿಭಾಯಿಸುವ ಬಗ್ಗೆ ಮಾತನಾಡಬೇಕಾದ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ವಿಶ್ವಸಂಸ್ಥೆಯಿಂದ ನಮ್ಮನ್ನು ಕರೆಯಲಾಯಿತು ಎಂದು ತಿಳಿಸಿದ್ದಾರೆ.

  • ‘ಡಿ ಕಂಪನಿ’ಯ ಉತ್ತಮ ಕೆಲಸಕ್ಕೆ ಶಿಕ್ಷಣ ಸಚಿವರ ಮೆಚ್ಚುಗೆ

    ‘ಡಿ ಕಂಪನಿ’ಯ ಉತ್ತಮ ಕೆಲಸಕ್ಕೆ ಶಿಕ್ಷಣ ಸಚಿವರ ಮೆಚ್ಚುಗೆ

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಸಕಲೇಶಪುರ ತಾಲೂಕಿನ ಸರ್ಕಾರಿ ಶಾಲೆಯನ್ನು ಡಿ ಕಂಪನಿ ದತ್ತು ಪಡೆದ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದನ್ನು ನೋಡಿದ ಸುರೇಶ್ ಕುಮಾರ್ ಅವರು ದರ್ಶನ್ ಅಭಿಮಾನಿಗಳ ಈ ಉತ್ತಮ ಕಾರ್ಯವನ್ನು ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ‘ಡಿ ಕಂಪನಿ’ಗೆ ಅಭಿನಂದನೆ ತಿಳಿಸಿದ್ದಾರೆ. ಈ ಅನುಕರಣೀಯ ಕಾರ್ಯ ಮಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ (ಡಿ ಬಾಸ್) ಅಭಿಮಾನಿಗಳಿಗೆ ರಾಜ್ಯದ ಶಿಕ್ಷಣ ಸಚಿವನಾಗಿ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಬರೆದು ಪಬ್ಲಿಕ್ ಟಿವಿಯ ವರದಿಯನ್ನು ಹಾಕಿ ಟ್ವೀಟ್ ಮಾಡಿದ್ದಾರೆ.

    ಸುರೇಶ್ ಕುಮಾರ್ ಅವರು ತಮ್ಮ ಕಾರ್ಯವನ್ನು ಶ್ಲಾಘಿಸಿದಕ್ಕೆ ಇತ್ತ ‘ಡಿ ಕಂಪನಿ’ಯ ಟ್ವಿಟ್ಟರ್ ಖಾತೆಯಿಂದ ಅಭಿಮಾನಿಗಳು ಸಚಿವರಿಗೆ ಧನ್ಯವಾದ ತಿಳಿಸಿದ್ದಾರೆ. ರಾಜ್ಯದ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ನಮ್ಮ ಡಿ ಕಂಪನಿಯ ಸದಸ್ಯರಿಗೆ ಮತ್ತು ಡಿ ಬಾಸ್ ಅಭಿಮಾನಿಗಳಿಗೆ ಹೃತ್ಪೂರ್ವಕ ಧನ್ಯವಾದ ತಿಳಿಸಿದ್ದಾರೆ ಎಂದು ಟ್ವೀಟ್ ಮಾಡಿ ಖುಷಿಯನ್ನು ಹಂಚಿಕೊಂಡಿದ್ದಾರೆ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ `ಡಿ ಕಂಪನಿ’ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಗ್ರಾಮ ರಾಮೇನಹಳ್ಳಿಯ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದು ಶಾಲಾ ಅಭಿವೃದ್ಧಿಗೆ ಮುಂದಾಗಿದೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದರು.

    ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದು, ರಾಮೇನಹಳ್ಳಿ ಸರ್ಕಾರಿ ಶಾಲೆಗೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡುವುದಾಗಿ ಭರವಸೆ ನೀಡಿದೆ. ಇದರಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದರು.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಲೆಯ ಶಿಕ್ಷಕಿ ಕೃಪಾ ಅವರು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಶಾಲೆಗೆ ಭೇಟಿ ನೀಡಿ, ಅಗತ್ಯಗಳನ್ನು ಪಟ್ಟಿ ಮಾಡಿಕೊಂಡಿದ್ದಾರೆ. ಪೂರ್ವಭಾವಿಯಾಗಿ ಸೆಪ್ಟೆಂಬರ್ 22ರಂದು ದಿನಕರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಶಾಲೆಗೆ ಗ್ಲೋಬ್, ಗ್ರೀನ್ ಬೋರ್ಡ್ ಸೇರಿದಂತೆ ಅನೇಕ ಉಡುಗೊರೆ ನೀಡಿದ್ದಾರೆ ಎಂದು ತಿಳಿಸಿದರು.

    ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚುವುದು, ಚಿತ್ರಗಳನ್ನು ಬಿಡಿಸುವುದು ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ನಮ್ಮ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಮುಂದಾಗಿದ್ದಾರೆ. ಈ ವಿಚಾರ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಗ್ರಾಮಸ್ಥರಿಗೆ ಖುಷಿ ತಂದಿದೆ ಎಂದಿದ್ದರು.

  • ಸರ್ಕಾರಿ ಶಾಲೆ ದತ್ತು ಪಡೆದುಕೊಂಡ ಡಿಬಾಸ್ ಫ್ಯಾನ್ಸ್

    ಸರ್ಕಾರಿ ಶಾಲೆ ದತ್ತು ಪಡೆದುಕೊಂಡ ಡಿಬಾಸ್ ಫ್ಯಾನ್ಸ್

    ಹಾಸನ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

    ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಇದನ್ನೂ ಓದಿ: ‘ಡಿ’ ಕಂಪನಿಯ ‘ದಿನಕರೋತ್ಸವ’ದಲ್ಲಿ ಟಕ್ಕರ್!

    ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದು, ರಾಮೇನಹಳ್ಳಿ ಸರ್ಕಾರಿ ಶಾಲೆಗೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಲೆಯ ಶಿಕ್ಷಕಿ ಕೃಪಾ ಅವರು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಶಾಲೆಗೆ ಭೇಟಿ ನೀಡಿ, ಅಗತ್ಯಗಳನ್ನು ಪಟ್ಟಿ ಮಾಡಿಕೊಂಡಿದ್ದಾರೆ. ಪೂರ್ವಭಾವಿಯಾಗಿ ಸೆಪ್ಟೆಂಬರ್ 22ರಂದು ದಿನಕರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಶಾಲೆಗೆ ಗ್ಲೋಬ್, ಗ್ರೀನ್ ಬೋರ್ಡ್ ಸೇರಿದಂತೆ ಅನೇಕ ಉಡುಗೊರೆ ನೀಡಿದ್ದಾರೆ ಎಂದು ತಿಳಿಸಿದರು.

    ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚುವುದು, ಚಿತ್ರಗಳನ್ನು ಬಿಡಿಸುವುದು ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ನಮ್ಮ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಮುಂದಾಗಿದ್ದಾರೆ. ಈ ವಿಚಾರ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಗ್ರಾಮಸ್ಥರಿಗೆ ಖುಷಿಯನ್ನು ತಂದಿದೆ ಎಂದರು.

  • ಮೊಮ್ಮಗನ ಹುಟ್ಟುಹಬ್ಬಕ್ಕೆ ಹೆಣ್ಣುಲಿ ದತ್ತು ಪಡೆದ ಜಿಟಿಡಿ

    ಮೊಮ್ಮಗನ ಹುಟ್ಟುಹಬ್ಬಕ್ಕೆ ಹೆಣ್ಣುಲಿ ದತ್ತು ಪಡೆದ ಜಿಟಿಡಿ

    ಮೈಸೂರು: ಮೊಮ್ಮಗನ ಹುಟ್ಟುಹಬ್ಬದ ಪ್ರಯುಕ್ತ ನೆನಪಿಗಾಗಿ ಸಚಿವ ಜಿ.ಟಿ ದೇವೇಗೌಡ ಅವರು ಹೆಣ್ಣುಲಿಯೊಂದನ್ನು ದತ್ತು ಪಡೆದಿದ್ದಾರೆ.

    ಜಿಟಿಡಿ ಅವರ ಮಗ ಹರೀಶ್ ಗೌಡರ ಏಕೈಕ ಪುತ್ರ ಸಂವೇದ್ ಗೌಡ ಹುಟ್ಟುಹಬ್ಬವನ್ನು ಆಚರಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯದಲ್ಲಿನ ಹುಲಿಯನ್ನು ಜಿಟಿಡಿ ದತ್ತು ಪಡೆದಿದ್ದಾರೆ. ಮೊಮ್ಮಗನ ಎರಡನೇ ವರ್ಷದ ಹುಟ್ಟುಹಬ್ಬದ ಸಂದರ್ಭದ ನೆನಪಿಗಾಗಿ ಚಾಮುಂಡಿ ಹೆಸರಿನ ಹೆಣ್ಣು ಹುಲಿಯನ್ನು ಜಿಟಿಡಿ ಅವರು ಒಂದು ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಸದ್ಯ ರಾಜ್ಯ ರಾಜಕೀಯದಲ್ಲಿ ರೆಸಾರ್ಟ್ ರಾಜಕಾರಣ ಹಾಗೂ ರಾಜೀನಾಮೆಯ ಹೈಡ್ರಾಮಗಳು ನಡುಯುತ್ತಿವೆ. ಈ ಮಧ್ಯೆ ಜಿಟಿಡಿ ಅವರು ವನ್ಯ ಜೀವಿಗಳ ಮೇಲೆ ಒಲವನ್ನು ತೋರಿರುವುದು ಎಲ್ಲರು ಮೆಚ್ಚುವಂತ ವಿಷಯವಾಗಿದೆ.

  • 45 ಹೆಚ್‍ಐವಿ ಪೀಡಿತ ಮಕ್ಕಳಿಗೆ ತಂದೆಯಾದ ಚೆನ್ನೈ ವ್ಯಕ್ತಿ

    45 ಹೆಚ್‍ಐವಿ ಪೀಡಿತ ಮಕ್ಕಳಿಗೆ ತಂದೆಯಾದ ಚೆನ್ನೈ ವ್ಯಕ್ತಿ

    ಚೆನ್ನೈ: ತಮ್ಮ ಕುಟುಂಬದಿಂದ ದೂರಾಗಿದ್ದ 45 ಹೆಚ್‍ಐವಿ ಪೀಡಿತ ಮಕ್ಕಳನ್ನು ದತ್ತು ಪಡೆದು, ಆಶ್ರಯ ನೀಡುವ ಮೂಲಕ ಚೆನ್ನೈ ಮೂಲದ ವ್ಯಕ್ತಿಯೊಬ್ಬರು ಇತರರಿಗೆ ಮಾದರಿಯಾಗಿದ್ದಾರೆ.

    ಹೆಚ್‍ಐವಿ ಪೀಡಿತ ಮಕ್ಕಳನ್ನು ಅವರ ಹೆತ್ತವರು ಬಿಟ್ಟು ಹೋಗಿರುತ್ತಾರೆ. ಇಂತಹ ಮಕ್ಕಳು ಇರಲು ಜಾಗವಿಲ್ಲದೆ, ಹೊಟ್ಟೆಗೆ ಸರಿಯಾಗಿ ಊಟವಿಲ್ಲದೆ ಕಷ್ಟಪಡುತ್ತಿರುತ್ತಾರೆ. ಇಂತಹ ಮಕ್ಕಳನ್ನು ಚೆನ್ನೈ ಮೂಲದ ಸಲೋಮನ್ ರಾಜ್ ದತ್ತು ಪಡೆದು ಆಶ್ರಯ ನೀಡಿದ್ದಾರೆ. ಅಲ್ಲದೆ ಮಕ್ಕಳಿಗೆ ತಂದೆ ಸ್ಥಾನದಲ್ಲಿ ನಿಂತು ಅವರನ್ನು ನೋಡಿಕೊಳ್ಳುತ್ತಿದ್ದಾರೆ.

    ಈ ಬಗ್ಗೆ ಮಾತನಾಡಿದ ಸಲೋಮನ್, ನಮಗೆ ಮದುವೆಯಾಗಿ 8 ವರ್ಷವಾಗಿದ್ದರೂ ಮಕ್ಕಳಾಗಿರಲಿಲ್ಲ. ಹೀಗಾಗಿ ನಾವು ಅನಾಥ ಮಕ್ಕಳನ್ನು ದತ್ತು ಪಡೆಯಲು ಮುಂದಾಗಿದ್ದೆವು. ಆದರೆ ನಾವು ಈ ನಿರ್ಧಾರ ಮಾಡಿದ ಬಳಿಕ ನಮಗೆ ಮಕ್ಕಳಾದವು. ಆದ್ದರಿಂದ ದತ್ತು ಪಡೆಯುವ ಆಲೋಚನೆಯನ್ನು ಕೈ ಬಿಟ್ಟಿದ್ದೆವು. ಎಚ್‍ಐವಿ ಪೀಡಿತ ಮಕ್ಕಳನ್ನು ದತ್ತು ಪಡೆದು ಸಾಕಿ ಸಲುಹಬೇಕೆನ್ನುವ ಆಸೆ ನನಗಿತ್ತು. ಹೀಗಾಗಿ ಈ ವಿಚಾರ ನನಗೆ ಬಹಳ ದಿನದವರೆಗೆ ಕಾಡುತ್ತಿತ್ತು. ಬಳಿಕ ದೃಢ ನಿರ್ಧಾರ ಮಾಡಿ ಮೊದಲು ಒಂದು ಎಚ್‍ಐವಿ ಪೀಡಿತ ಮಗುವನ್ನು ದತ್ತು ಪಡೆದೆ. ಬಳಿಕ ಅದು ಹಾಗೆ ಮುಂದುವರಿಯಿತು. ಈಗ ನಾನು 45 ಎಚ್‍ಐವಿ ಪೀಡಿತ ಮಕ್ಕಳಿಗೆ ತಂದೆ ಆಗಿದ್ದೇನೆ ಎಂದು ಖುಷಿ ಹಂಚಿಕೊಂಡರು.

    ಈ ಮಕ್ಕಳ ಬಾಯಲ್ಲಿ ಅಪ್ಪ ಎಂದು ಕರೆಸಿಕೊಳ್ಳಲು ಖುಷಿಯಾಗುತ್ತೆ. ಈ ಮಕ್ಕಳನ್ನು ದತ್ತು ಪಡೆದು ಸಾಕುವುದರಲ್ಲಿ ನನಗೆ ನೆಮ್ಮದಿ ಸಿಕ್ಕಿದೆ. ಈ ಮಕ್ಕಳಿಗೆ ಆಶ್ರಯ ನೀಡಿ, ಬೇಕಾದ ಸೌಲಭ್ಯವನ್ನು ನಾನು ಒದಗಿಸುತ್ತಿದ್ದೇನೆ. ಮಕ್ಕಳಿಗೆ ಶಿಕ್ಷಣ, ವೈದ್ಯಕೀಯ ವ್ಯವಸ್ಥೆ, ಡ್ಯಾನ್ಸ್, ಕಂಪ್ಯೂಟರ್ ಶಿಕ್ಷಣವನ್ನೂ ಕೂಡ ಕೊಡಿಸುತ್ತಿದ್ದೇನೆ.

    ಈ ಮಕ್ಕಳಲ್ಲಿ ಹಲವರು ಪ್ರೌಢಶಿಕ್ಷಣವನ್ನು ಪಡೆಯುತ್ತಿದ್ದಾರೆ. ಹಾಗೆಯೇ 7 ಮಂದಿ ಬೇರೆ ಬೇರೆ ವಿಷಯದಲ್ಲಿ ಪದವಿ ಶಿಕ್ಷಣವನ್ನೂ ಕೂಡ ಪಡೆಯುತ್ತಿದ್ದಾರೆ. ಅಲ್ಲದೆ ಈಗ ಪಿಯುಸಿ ಕಲಿಯುತ್ತಿರುವ ಒಬ್ಬಳು ಹುಡುಗಿ ಮುಂದೆ ಡಾಕ್ಟರ್ ಆಗಬೇಕೆಂದು ಆಸೆ ಪಟ್ಟಿದ್ದಾಳೆ. ತನ್ನಂತ ಇತರೆ ಮಕ್ಕಳಿಗೆ ಚಿಕಿತ್ಸೆ ನೀಡಬೇಕೆಂಬುದು ಬಯಸಿದ್ದಾಳೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ.

    ಅಲ್ಲದೆ ಕೆಲವೊಮ್ಮೆ ಮಕ್ಕಳನ್ನು ನೋಡಿಕೊಳ್ಳುವುದು, ಅವರ ಔಷಧಿಯ ವೆಚ್ಚ ಬರಿಸಲು ಕಷ್ಟವಾಗುತ್ತೆ. ಕೆಲವೊಮ್ಮೆ ಅವರು ತೀರಾ ಅನಾರೋಗ್ಯಕ್ಕೆ ತುತ್ತಾಗುತ್ತಾರೆ ಎಂದರು. ಹೆಚ್‍ಐವಿ ಪೀಡಿತ ಮಕ್ಕಳನ್ನು ಕೆಲವು ತಂದೆ ತಾಯಿಯರು ನಡು ಬೀದಿಯಲ್ಲಿ ಬಿಟ್ಟು ಹೋಗುತ್ತಾರೆ. ಆದರೆ ಸಲೋಮನ್ ಅವರು ಇಂತಹ ಮಕ್ಕಳಿಗೆ ಜೀವನ ರೂಪಿಸಿಕೊಟ್ಟು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.

  • ಗ್ರಾಮವನ್ನು ದತ್ತು ಪಡೆದು ಅಭಿವೃದ್ಧಿಗೆ ಮುಂದಾದ ಕಾಲೇಜು ವಿದ್ಯಾರ್ಥಿಗಳು

    ಗ್ರಾಮವನ್ನು ದತ್ತು ಪಡೆದು ಅಭಿವೃದ್ಧಿಗೆ ಮುಂದಾದ ಕಾಲೇಜು ವಿದ್ಯಾರ್ಥಿಗಳು

    ಬಳ್ಳಾರಿ: ಸರ್ಕಾರ, ರಾಜಕಾರಣಿಗಳು, ಶ್ರೀಮಂತ ದಾನಿಗಳು ಸಾಮಾನ್ಯವಾಗಿ ಹಳ್ಳಿಗಳನ್ನು ದತ್ತು ಪಡೆಯುತ್ತಾರೆ. ಆದರೆ ಬಳ್ಳಾರಿ ಜಿಲ್ಲೆಯ ಜಾನೆಕುಂಟೆ ಗ್ರಾಮವನ್ನು ಕಾಲೇಜು ವಿದ್ಯಾರ್ಥಿಗಳು ದತ್ತು ಪಡೆದು ಅಭಿವೃದ್ಧಿಗೆ ಮುಂದಾಗಿದ್ದಾರೆ.

    ಬಳ್ಳಾರಿಯ ಆರ್ ವೈಎಂಇಸಿ ಎಂಜಿನಿಯರ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿ ವರ್ಷ ಗಿಡ ನೆಟ್ಟು ಸ್ವಚ್ಚತಾ ಅಭಿಯಾನ ಮಾಡುತ್ತಿದ್ದರು. ಈ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿ ಬಳ್ಳಾರಿ ಪಕ್ಕದಲ್ಲಿರುವ ಅಭಿವೃದ್ಧಿ ಕಾಣದ ಜಾನೆಕುಂಟೆ ಗ್ರಾಮವನ್ನು ದತ್ತು ಪಡೆದು ಅಭಿವೃದ್ಧಿಗೆ ಮುಂದಾಗಿದ್ದಾರೆ.

    ಸುಮಾರು 350 ಮನೆಗಳಿರುವ ಜಾನೆಕುಂಟೆ ಗ್ರಾಮದಲ್ಲಿ ಮೂಲಸೌಕರ್ಯ ಸೇರಿದಂತೆ ಶಾಲೆ ಮತ್ತು ಅಂಗನವಾಡಿಯನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ವಿದ್ಯಾರ್ಥಿಗಳು ಹೊಂದಿದ್ದಾರೆ. ಮೊದಲ ಹಂತದಲ್ಲಿ ಜನರಲ್ಲಿ ಜಾಗೃತಿ ಜೊತೆಗೆ ಅರ್ಧಕ್ಕೆ ನಿಂತಿರುವ ಅಂಗನವಾಡಿ ಕಟ್ಟಡವನ್ನು ನಿರ್ಮಾಣ ಮಾಡಲು ವಿದ್ಯಾರ್ಥಿಗಳು ಮುಂದಾಗಿದ್ದಾರೆ.

    ವಿದ್ಯಾರ್ಥಿಗಳ ಕೆಲಸಕ್ಕೆ ಉಪನ್ಯಾಸಕರು ಮತ್ತು ಕಾಲೇಜು ಆಡಳಿತ ಮಂಡಳಿ ಸಹ ಸಾಥ್ ನೀಡಿದೆ. ಈ ಗ್ರಾಮವೂ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬಂದರೂ ರಸ್ತೆಗಳು, ಮೂಲಭೂತ ಸೌಲಭ್ಯಗಳು ಕಲ್ಪಿಸುವುದಕ್ಕೆ ಕಾಲೇಜಿನ ವಿದ್ಯಾರ್ಥಿಗಳು ಪಂಚಾಯ್ತಿ ಜೊತೆಗೆ ಕೈ ಜೋಡಿಸಿ ಜನರಿಗೆ ಅರಿವು ಮೂಡಿಸವುದರ ಜೊತೆಗೆ ಅಭಿವೃದ್ಧಿಗೆ ಮುಂದಾಗಿದ್ದಾರೆ.

    ವಿದ್ಯಾರ್ಥಿಗಳು ಜಾನೆಕುಂಟೆ ಗ್ರಾಮದ ಅಭಿವೃದ್ಧಿಗಾಗಿ ಗ್ರಾಮವನ್ನು ದತ್ತು ಪಡೆದ ನಂತರ ಗ್ರಾಮದ ಅಭಿವೃದ್ಧಿಗಾಗಿ ಕಾಲೇಜು ಆಡಳಿತ ಮಂಡಳಿ ಸೇರಿದಂತೆ ಗ್ರಾಮದ ಮುಖಂಡರು ಕೂಡ ಹಣಕಾಸಿನ ನೇರವು ನೀಡಿದ್ದಾರೆ. ಅಲ್ಲದೇ, ಮೊದಲ ಬಾರಿಗೆ ಇಂತಹದ್ದೊಂದು ಪ್ರಯತ್ನಕ್ಕೆ ವಿದ್ಯಾರ್ಥಿಗಳೊಂದಿಗೆ ಕಾಲೇಜು ಆಡಳಿತ ಮಂಡಳಿ ಕೈ ಹಾಕಿದ್ದು ವಿಶೇಷವಾಗಿದೆ.

  • 28 ಮಕ್ಕಳನ್ನು ದತ್ತು ಪಡೆದ ಆಧುನಿಕ ರೈತ ಶಶಿ: ವಿಡಿಯೋ ನೋಡಿ

    28 ಮಕ್ಕಳನ್ನು ದತ್ತು ಪಡೆದ ಆಧುನಿಕ ರೈತ ಶಶಿ: ವಿಡಿಯೋ ನೋಡಿ

    ಬೆಂಗಳೂರು: ಬಿಗ್ ಬಾಸ್ ಸೀಸನ್- 6 ವಿಜೇತ, ಆಧುನಿಕ ರೈತ 28 ಮಕ್ಕಳನ್ನು ದತ್ತು ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಶಶಿಕುಮಾರ್ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದ ವಿವಿಎಸ್ ಶಾಲೆಯಲ್ಲಿ ಓದಿದ್ದರು. ಈಗ ಈ ಶಾಲೆಯ 28 ಮಕ್ಕಳನ್ನು ದತ್ತು ಪಡೆದಿದ್ದಾರೆ. ಅವರ ವಿದ್ಯಾಭ್ಯಾಸದ ಖರ್ಚುನ್ನು ನೋಡಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ. ಅಲ್ಲದೆ ಈ ವಿಷಯವನ್ನು ಅವರು ಇನ್‍ಸ್ಟಾಗ್ರಾಂನಲ್ಲಿ ವಿಡಿಯೋ ಹಾಕುವುದರ ಮೂಲಕ ಅಭಿಮಾನಿಗಳಲ್ಲಿ ಹಂಚಿಕೊಂಡಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ನಾನು ಈ ಶಾಲೆಯಲ್ಲಿ 28 ಮಕ್ಕಳನ್ನು ದತ್ತು ಪಡೆದುಕೊಳ್ಳುತ್ತಿದ್ದೇವೆ. ಇವರು ಇಲ್ಲಿ ಎಷ್ಟು ದಿನ ಎಷ್ಟು ವರ್ಷ ಇರುತ್ತಾರೋ ನಾನು ಅವರ ವಿದ್ಯಾಭ್ಯಾಸ ಮುಗಿಸೋವರೆಗೂ, ಅವರ ವಿದ್ಯಾಭ್ಯಾಸದ ಖರ್ಚು, ಯೂನಿಫಾರಂ, ಬುಕ್ಸ್, ಶೂ ಇಂತಹ ಖರ್ಚು ವೆಚ್ಚ ಏನೇ ಬಂದರೂ ನಾನೇ ನೋಡಿಕೊಳ್ಳುತ್ತೇನೆ ಎಂದು ಅವರಿಗೆ ಮಾತು ನೀಡಿದ್ದೇನೆ. ಈ ವಿವಿಎಸ್ ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗೆ ಈ ವಿಷಯ ತಿಳಿಸಿದ್ದೀನಿ.

    ಈ ಮಕ್ಕಳನ್ನು ದತ್ತು ಪಡೆದುಕೊಂಡಿದಕ್ಕೆ ನನಗೆ ತುಂಬಾ ಖುಷಿ ಹಾಗೂ ಹೆಮ್ಮೆ ಆಗುತ್ತಿದೆ. ನಾನು ಇದೇ ಊರಿನವನಾಗಿದ್ದು, ಈ ಶಾಲೆ ಮೈದಾನದಲ್ಲಿ ಆಟವಾಡುತ್ತಾ ಬೆಳೆದು ಬಂದಿರುವದರಿಂದ ನನಗೆ ಆ ಒಂದು ಋಣ ಇದೆ. ಮುಂದಿನ ದಿನಗಳಲ್ಲಿ ಸಂಖ್ಯೆ ಹೆಚ್ಚಾಗುತ್ತೆ ಎಂದುಕೊಂಡಿದ್ದೇನೆ. 28 ಸಂಖ್ಯೆ ಇನ್ನು ಜಾಸ್ತಿ ಆಗುತ್ತೆ ಎಂದು ನಾನು ಅಂದುಕೊಂಡಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.

    ಶಶಿಕುಮಾರ್ ಈಗ ತಮ್ಮ ಎರಡನೇ ಸಿನಿಮಾವನ್ನು ಕೂಡ ಒಪ್ಪಿಕೊಂಡಿದ್ದಾರೆ. ಸಿನಿಮಾದ ಜೊತೆಗೆ ಶಶಿಕುಮಾರ್ ಕೃಷಿ ಕೆಲಸವನ್ನು ಕೂಡ ಮಾಡುತ್ತಿದ್ದಾರೆ.

     

    View this post on Instagram

     

    Happy to adopt these 28 kids until they complete their schooling and listen to their dreams.

    A post shared by Shashi Kumar (@shashi.official) on