Tag: adulteration

  • ಮೈಸೂರು ಪಾಕ್, ಜಿಲೇಬಿ ಪ್ರಿಯರೇ ಹುಷಾರ್ – ಕ್ಯಾನ್ಸರ್, ಡಯಾಬಿಟಿಸ್‌ಗೆ ಕಾರಣವಾಗ್ತಿದ್ಯಾ ಸಿಹಿತಿಂಡಿಗಳು?

    ಮೈಸೂರು ಪಾಕ್, ಜಿಲೇಬಿ ಪ್ರಿಯರೇ ಹುಷಾರ್ – ಕ್ಯಾನ್ಸರ್, ಡಯಾಬಿಟಿಸ್‌ಗೆ ಕಾರಣವಾಗ್ತಿದ್ಯಾ ಸಿಹಿತಿಂಡಿಗಳು?

    – ಆಹಾರ ಇಲಾಖೆಯಿಂದ 10ಕ್ಕೂ ಅಧಿಕ ಸಿಹಿ ತಿಂಡಿಗಳು ಟೆಸ್ಟಿಂಗ್‌ಗೆ ರವಾನೆ

    ಬೆಂಗಳೂರು: ಗೋಬಿ, ಪಾನಿಪುರಿ, ಕಬಾಬ್, ಪನ್ನೀರ್ ಆಯ್ತು. ಇದೀಗ ಆಹಾರ ಇಲಾಖೆ ಸಿಹಿ ತಿಂಡಿಗಳನ್ನು ಪರೀಕ್ಷೆಗೊಳಪಡಿಸಿ ಏನೆಲ್ಲಾ ಕಲಬೆರಿಕೆ ಮಾಡಲಾಗುತ್ತಿದೆ ಹಾಗೂ ಕ್ಯಾನ್ಸರ್, ಡಯಾಬಿಟಿಸ್‌ಗೆ ಸಿಹಿತಿಂಡಿಗಳು ಕಾರಣವಾಗುತ್ತಿದ್ಯಾ ಎನ್ನುವುದನ್ನು ಪತ್ತೆ ಹಚ್ಚಲು ಹೊರಟಿದೆ.

    ಹೌದು, ಜನರು ಬಾಯಿ ಚಪ್ಪರಿಸಿಕೊಂಡು ತಿನ್ನುವ ಸ್ಟೀಟ್ಸ್‌ ಮೇಲೆ ಇದೀಗ ಆಹಾರ ಇಲಾಖೆ ಸಮರ ಸಾರಲು ಸಜ್ಜಾಗಿದ್ದು, 10ಕ್ಕೂ ಅಧಿಕ ಸಿಹಿ ತಿಂಡಿಗಳನ್ನು ಟೆಸ್ಟಿಂಗ್‌ಗೆ ರವಾನಿಸಿದೆ. ಯುಗಾದಿ ಹಬ್ಬ ಬಂದರೆ ಸಾಕು ಜನರು ಸಿಹಿ ತಿಂಡಿಗಳ ಖರೀದಿಗೆ ಮುಂದಾಗುತ್ತಾರೆ. ಹೀಗಾಗಿ ಹಬ್ಬ ಹತ್ತಿರವಾಗುತ್ತಿದ್ದಂತೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.ಇದನ್ನೂ ಓದಿ:ಟಾರ್ಗೆಟ್‌ ರಾಜಣ್ಣ – ಹೈಕಮಾಂಡ್‌ಗೆ ದೂರು ನೀಡಲು ಮುಂದಾದ ಸಿಎಂ ಆಪ್ತರು

    ಮೈಸೂರು ಪಾಕ್, ಮಿಕ್ಸ್ಚ್‌ರ್‌, ಕಾಜುಬರ್ಫಿ, ಜಿಲೇಬಿ, ಜಹಂಗೀರ್‌ನಲ್ಲಿ ಕಲರಿಂಗ್, ಕಲಬೆರಕೆ ಮತ್ತು ಸಕ್ಕರೆ ಪ್ರಮಾಣ ಹೆಚ್ಚಳದ ಬಗ್ಗೆ ಆಹಾರ ಸುರಕ್ಷತಾ ಇಲಾಖೆಗೆ ದೂರು ಹೋಗಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸುರಕ್ಷತಾ ಇಲಾಖೆ ಅಧಿಕಾರಿಗಳು ಸಿಹಿ ತಿಂಡಿಗಳ ಮಾದರಿಗಳನ್ನು ಟೆಸ್ಟ್‌ಗೆ ರವಾನಿಸಿದ್ದಾರೆ.

    ಸುಮಾರು 10ಕ್ಕೂ ಹೆಚ್ಚು ಸಿಹಿ ತಿಂಡಿಗಳನ್ನ ಟೆಸ್ಟಿಂಗ್‌ಗೆ ಕಳುಹಿಸಲಾಗಿದೆ. ಈ ಸ್ಟೀಟ್‌ಗಳಲ್ಲಿ ಕಲಬೆರಕೆ, ಕಲರಿಂಗ್ ಇದೆ ಎಂದು ಹೇಳಲಾಗುತ್ತಿದೆ. ಇದರಿಂದ ಕ್ಯಾನ್ಸರ್, ಡಯಾಬಿಟಿಸ್‌ಗೆ ಕಾರಣ ಆಗುತ್ತಿದೆ ಎಂದು ಈ ಬಗ್ಗೆ ಆಹಾರ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಕಲರಿಂಗ್‌ನಿಂದ ಕ್ಯಾನ್ಸರ್, ಹೆಪಟೈಟಿಸ್ ಸಮಸ್ಯೆ ಆಗಿ ದೇಹಕ್ಕೆ ಹಾನಿಯಾಗಲಿದೆ. ಜೊತೆಗೆ ಸಕ್ಕರೆ ಪ್ರಮಾಣ ಇದ್ದರೆ ಅದು ಡಯಾಬಿಟಿಸ್‌ಗೆ ಕಾರಣ ಆಗುತ್ತದೆ ಎಂದು ಆಹಾರ ತಜ್ಞರು ಹೇಳುತ್ತಿದ್ದಾರೆ.

    1. ಜಿಲೇಬಿ, ಮಿಕ್ಸ್ಚ್‌ರ್‌ಗಳಲ್ಲಿ ಸನ್ ಸೆಟ್ ಯಲ್ಲೋ ಕಲರ್ ಬಳಕೆ ಮಾಡಲಾಗುತ್ತದೆ. ಇದು ಕ್ಯಾನ್ಸರ್ ಕಾರಕ.
    2. ಸಿಹಿ ತಿಂಡಿಗಳಲ್ಲೂ ಅಪಾಯಕಾರಿ ರೋಡೋಮೆನ್ ಬಿ ಅಂಶ ಇರುತ್ತದೆ
    3. ಕಾರ್ಸೋನೋಜೆನಿಕ್ ಎನ್ನುವ ಕ್ಯಾನ್ಸರ್ ಕಾರಕ ಅಪಾಯಕಾರಿ
    4. ಕೆಲ ಸ್ವೀಟ್‌ಗಳಲ್ಲಿ ಸಕ್ಕರೆ ಪ್ರಮಾಣ ಹೆಚ್ಚಳ ಇದ್ದು ಡಯಾಬಿಟಿಸ್‌ಗೆ ಕಾರಣ
    5. ಬಳಸುವ ಅಡುಗೆ ಎಣ್ಣೆ ಕೂಡ ಹೈಜೆನಿಕ್ ಇರಲ್ಲ

    ಕಲಬೆರಕೆ, ಕಲರಿಂಗ್, ಸಕ್ಕರೆ ಪ್ರಮಾಣ ಹೆಚ್ಚಳ ಸಂಬಂಧ ಆಹಾರ ಸುರಕ್ಷತಾ ಇಲಾಖೆ (Department of Food Safety) ಅಧಿಕಾರಿಗಳು 10 ಸಿಹಿತಿಂಡಿಗಳನ್ನು ಲ್ಯಾಬ್‌ಗೆ ರವಾನಿಸಿದ್ದು, ವರದಿಯಲ್ಲಿ ಏನಿರಲಿದೆ ಎಂದು ಕಾದುನೋಡಬೇಕಿದೆ.ಇದನ್ನೂ ಓದಿ:ಸ್ನೇಹಿತೆಯನ್ನ ಭೇಟಿಯಾಗಲು ಬುರ್ಖಾ ಧರಿಸಿ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ನುಗ್ಗಿದ ಯುವಕ

  • ಕಲಬೆರಕೆ ಹಾಲು ಸರಬರಾಜು ಶಂಕೆ – ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಂದ ದಾಳಿ

    ಕಲಬೆರಕೆ ಹಾಲು ಸರಬರಾಜು ಶಂಕೆ – ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಂದ ದಾಳಿ

    ಯಾದಗಿರಿ: ಕಲಬೆರಕೆ (Adulteration) ಹಾಲು ಸರಬರಾಜು ಶಂಕೆ ವ್ಯಕ್ತಪಡಿಸಿ ಹಾಲು ಮಾರಾಟ ಮಳಿಗೆ ಹಾಗೂ ಹಾಲು ಸರಬರಾಜು ವಾಹನಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ (Department of Food Safety) ಅಧಿಕಾರಿಗಳು ದಾಳಿ (Ride) ನಡೆಸಿರುವ ಘಟನೆ ಯಾದಗಿರಿಯಲ್ಲಿ (Yadgiri) ನಡೆದಿದೆ.

    ರಂಜಾನ್ (Ramzan) ಹಬ್ಬ ಹಿನ್ನೆಲೆ ಕಲಬೆರಕೆ ಹಾಲು (Milk) ಸರಬರಾಜು ಮಾಡುತ್ತಿದ್ದಾರೆ ಎಂಬ ಶಂಕೆಯಿಂದ ಶನಿವಾರ ಬೆಳ್ಳಂಬೆಳಗ್ಗೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ನಗರದ ವಿವಿಧೆಡೆ ದಾಳಿ ಮಾಡಿದ್ದಾರೆ. ಯಾದಗಿರಿ ನಗರದ ರೈಲ್ವೆ ನಿಲ್ದಾಣದ ರಸ್ತೆ, ಚಿತ್ತಾಪುರ ರಸ್ತೆ ಸೇರಿದಂತೆ ಅನೇಕ ಕಡೆ ದಾಳಿ ನಡೆಸಿದ್ದಾರೆ. ಆಹಾರ ಸುರಕ್ಷತಾ ಅಧಿಕಾರಿ ಆಂಜನೇಯ ಎಂಬವರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ವಿವಿಧ ಬ್ರ್ಯಾಂಡ್‌ನ ಹಾಲಿನ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಮುಗಿಯುವವರೆಗೂ ಲಿಂಗಾಯತ ದಾಳ ಬಳಸಿ: ಶಾ ತಾಕೀತು 

    ಸಂಗ್ರಹಿಸಿದ ಹಾಲನ್ನು ಪರಿಶೀಲನೆಗಾಗಿ ಪ್ರಯೋಗಾಲಯಕ್ಕೆ (Laboratory) ಕಳುಹಿಸಲಿದ್ದು, ಕಲಬೆರಕೆ ಎಂದು ವರದಿ ಬಂದ ಬಳಿಕ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ನಾಯಕರಿಗೆ ಕ್ಲಾಸ್‌ – ಬಂಡಾಯ ಶಮನಕ್ಕೆ ಶಾ ಮದ್ದು

  • ಪಿಎಸ್‍ಐ ನೇಮಕಾತಿ ಅಕ್ರಮ ಭೇದಿಸಲು ಸಹಾಯವಾಯ್ತು ಫೋಟೋಶೂಟ್

    ಪಿಎಸ್‍ಐ ನೇಮಕಾತಿ ಅಕ್ರಮ ಭೇದಿಸಲು ಸಹಾಯವಾಯ್ತು ಫೋಟೋಶೂಟ್

    ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು. ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ.

    ಪಿಎಸ್‍ಐ ಪರೀಕ್ಷೆ ಬಳಿಕ ಎಲ್ಲ ಸಿಬ್ಬಂದಿಗೆ 4 ಸಾವಿರ ಹೆಚ್ಚಿನ ಭತ್ಯೆಯನ್ನು ಶಾಲೆಯ ಒಡತಿ ದಿವ್ಯಾ ಹಾಗರಗಿ ನೀಡಿದ್ದರು. ಆ ಭತ್ಯೆ ನೀಡುವ ಸಂದರ್ಭದಲ್ಲಿ ನೆನಪಿನ ಸ್ಮರಣಾರ್ಥ ಇದೊಂದು ಐತಿಹಾಸಿಕ ದಿನವೆಂದು ಎಲ್ಲರಿಗೂ ಒಟ್ಟಿಗೆ ಕೂಡಿಸಿ ಫೋಟೋಶೂಟ್ ಮಾಡಿಕೊಂಡಿದ್ದರು. ಇದನ್ನೂ ಓದಿ: 1945 ರಲ್ಲಿದ್ದಂತೆ, ವಿಜಯವು ನಮ್ಮದಾಗಿರುತ್ತದೆ: ಪುಟಿನ್ ಪ್ರತಿಜ್ಞೆ 

    ಫೋಟೋಶೂಟ್‍ನಲ್ಲಿ ಬಹುತೇಕರು ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಪರಿಣಾಮ ಇದೀಗ ಸಿಐಡಿ ಬಲೆಗೆ ಬಿದ್ದಿದ್ದಾರೆ. ಈಗ ಅಕ್ರಮದ ನೇಮಕಾತಿ ಪ್ರಕರಣ ಭೇಧಿಸಲು ಈ ಫೋಟೋಶೂಟ್ ಸಹಾಯಕವಾಗಿದೆ.

    KARNATAKA PSI EXAM

    ಫೋಟೋಶೂಟ್‍ನಲ್ಲಿ ಶಾಲಾ ಸಿಬ್ಬಂದಿಗಳ ಜೊತೆಗೆ ಪೊಲಿಸ್ ಅಧಿಕಾರಿಗಳು ಸಹ ಕ್ಯಾಮೆರಾಗೆ ಪೋಸ್ ನೀಡಿದ್ದು, ಡಿವೈಎಸ್‍ಪಿ ಹೊಸಮನಿ, ಸಿಪಿಐ ಆನಂದ ಮೇತ್ರೆ, ದಿಲೀಪ್ ಸಾಗರ ಸೇರಿದಂತೆ ಹಲವರು ಭಾಗಿಯಾಗಿದ್ದು ಕಾಣಬಹುದು.

  • ಅಂತ್ಯಕ್ರಿಯೆಗೆ ಹೋಗಿ ಆಸ್ಪತ್ರೆಗೆ ಸೇರಿದ 40 ಜನರ ಸ್ಥಿತಿ ಚಿಂತಾಜನಕ

    ಅಂತ್ಯಕ್ರಿಯೆಗೆ ಹೋಗಿ ಆಸ್ಪತ್ರೆಗೆ ಸೇರಿದ 40 ಜನರ ಸ್ಥಿತಿ ಚಿಂತಾಜನಕ

    ಪಾಟ್ನಾ: ಅಂತ್ಯಕ್ರಿಯೆಗೆಂದು ಹೋಗಿ ಊಟವನ್ನು ಸೇವಿಸಿದ್ದ ಸುಮಾರು 40 ಜನರು ಆಸ್ಪತ್ರೆಗೆ ದಾಖಲಾದ ಆಘಾತಕಾರಿ ಘಟನೆ ಬಿಹಾರದ ಮುಜಾಫರ್‌ಪುರ್ ಜಿಲ್ಲೆಯಲ್ಲಿ ನಡೆದಿದೆ.

    ಬಿಹಾರದ ಮುಜಾಫರ್‌ಪುರ್ ಜಿಲ್ಲೆಯ ರೂಪೌಲಿ ಗ್ರಾಮದ ನಿವಾಸಿ ಗಣೇಶ ಮಹ್ತೋ ಎಂಬವರ ಮನೆಯಲ್ಲಿ ಮಹ್ತೋ ಅವರ ಪತ್ನಿ ತೀರಿಕೊಂಡಿದ್ದರು. ಹೀಗಾಗಿ ಹಿಂದೂ ಸಂಪ್ರದಾಯದಂತೆ ಮಂಗಳವಾರ ಸಂಜೆ ಶ್ರಾದ್ಧವನ್ನು ಮಾಡಲಾಗುತ್ತಿತ್ತು. ಕಾರ್ಯ ಮುಗಿದ ನಂತರ ಔತಣವನ್ನು ಏರ್ಪಡಿಸಿದ್ದು, ಊಟವನ್ನು ಸೇವಿಸಿದ ಮಕ್ಕಳು ಸೇರಿದಂತೆ 40 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಾಧನೆ ಶೂನ್ಯ, ಅವಹೇಳನಕಾರಿ ಮಾತಾಡ್ತಿದ್ದಾರೆ: ಡಿಕೆಶಿ ಕಿಡಿ

    ಊಟವನ್ನು ಸೇವಿಸಿದ ನಂತರ, ಹಲವು ಮಕ್ಕಳು ತೀವ್ರ ಹೊಟ್ಟೆ ನೋವು ಮತ್ತು ವಾಂತಿಯಾಗಿದ್ದು, ಇದನ್ನು ತಮ್ಮ ಪೋಷಕರಿಗೆ ತಿಳಿಸಿದ್ದಾರೆ. ಈ ಹಿನ್ನೆಲೆ ಚಿಕಿತ್ಸೆಗಾಗಿ ಅವರನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ(ಪಿಎಚ್‍ಸಿ) ಕರೆದೊಯ್ಯಲಾಯಿತು. ಮಕ್ಕಳು ಅಲ್ಲದೇ ದೊಡ್ಡವರಿಗೂ ಈ ರೀತಿ ಸಮಸ್ಯೆಯಾಗಿದ್ದು, ಹಲವು ಜನರು ಆಸ್ಪತ್ರೆಯಲ್ಲಿ ದಾಖಲಾಗುತ್ತಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳ ಪ್ರಕರಣಗಳು ಹೆಚ್ಚಾದಂತೆ, ಶಸ್ತ್ರಚಿಕಿತ್ಸಕರು ಆರೋಗ್ಯ ರಕ್ಷಣೆಯ ಹೊರಗೆ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

    ಈ ಕುರಿತು ಮಾತನಾಡಿದ ಡಾ.ವಿನಯ್ ಕುಮಾರ್ ಶರ್ಮಾ, ಕೆಲವು ಮಕ್ಕಳನ್ನು ಸಾರಾಯ ಸಾಮಾನ್ಯ ಆಸ್ಪತ್ರೆ(ಸಿಎಚ್‍ಸಿ)ಯಲ್ಲಿ ದಾಖಲಿಸಲಾಗಿದ್ದು, ಇನ್ನೂ 5 ಜನರನ್ನು ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಯ ಸಮಯದಲ್ಲಿ ಮಕ್ಕಳಲ್ಲಿ ಒಂದು ಮಗು ಸಾವನ್ನಪ್ಪಿದ್ದು, ಆತನನ್ನು ನಿಶಾಂತ್ ಕುಮಾರ್ ಎಂದು ಗುರುತಿಸಲಾಗುದೆ. ಈ ಹಿನ್ನೆಲೆ ನಾವು ಸಿಎಚ್‍ಸಿಯಲ್ಲಿ ವೈದ್ಯಕೀಯ ಅಧಿಕಾರಿಗಳಿಗೆ ತುಂಬಾ ಎಚ್ಚರಿಕೆಯಿಂದ ಮಕ್ಕಳ ಚಿಕಿತ್ಸೆಯನ್ನು ಮಾಡಲು ಸೂಚಿಸಿದ್ದೇವೆ. ಜಿಲ್ಲೆಯ ಹಲವಾರು ಹಿರಿಯ ಅಧಿಕಾರಿಗಳು ಕೂಡ ಸಿಎಚ್‍ಸಿ ಹಾಗೂ ಗ್ರಾಮದಲ್ಲಿ ಕ್ಯಾಂಪ್ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬೀದಿ ನಾಟಕ ಅಭಿಯಾನದ ಮೂಲಕ ಕೋವಿಡ್ ಲಸಿಕೆ ಜಾಗೃತಿ

    ಅಂತ್ಯಕ್ರಿಯೆಯ ಸಮಯದಲ್ಲಿ ಮಾಡಿದ್ದ ಆಹಾರದ ಸ್ಯಾಂಪಲ್ ಅನ್ನು ಸಂಗ್ರಹಿಸಿದ್ದು, ಅದನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಿದ್ದೇವೆ. ಆಹಾರವನ್ನು ತಯಾರಿಸುವಾಗ ಕಲಬೆರಕೆಯಾದ ವಸ್ತುಗಳಿಂದ ಆಹಾರ ವಿಷಕಾರಿಯಾಗಿ ಪರಿವರ್ತನೆಯಾಗಿರಬಹುದೆಂದು ಹೇಳಿದರು.

  • ಯುವಕನ ಅಂಗಾಂಗ ದಾನ: ಜಿರೋ ಟ್ರಾಫಿಕ್‍ನಲ್ಲಿ ಹೈದರಾಬಾದ್‍ಗೆ ರವಾನೆ

    ಯುವಕನ ಅಂಗಾಂಗ ದಾನ: ಜಿರೋ ಟ್ರಾಫಿಕ್‍ನಲ್ಲಿ ಹೈದರಾಬಾದ್‍ಗೆ ರವಾನೆ

    ಕಲಬುರಗಿ: ಜಿರೋ ಟ್ರಾಫಿಕ್ ಮೂಲಕ ಮೃತ ಯುವಕನ ಅಂಗಾಗವನ್ನು ಕಲಬುರಗಿಯಿಂದ ಹೈದರಾಬಾದ್‍ಗೆ ಕಳಿಸಿ, ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಕಳುಹಿಸಲಾಗಿದೆ.

    ಇತ್ತೀಚೆಗೆ ಅಂಗಾಗ ದಾನದ ಪರಿಕಲ್ಪನೆ ಹೆಚ್ಚಾಗುತ್ತಿದೆ. ಮೃತ ವ್ಯಕ್ತಿಯ ಕೆಲ ಅಂಗಾಗಗಳನ್ನು ನಿಗದಿತ ಸಮಯದಲ್ಲಿ ತೆಗೆದು, ಬೇರೆಯವರಿಗೆ ಹಾಕಿದರೆ ಅನೇಕರ ಜೀವ ಉಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಇಂದು ಕಲಬುರಗಿ ನಗರದ ಚಿರಾಯು ಆಸ್ಪತ್ರೆಯ ವೈದ್ಯರು ಕೆಲಸ ಮಾಡಿದ್ದು, ಜಿರೋ ಟ್ರಾಫಿಕ್‍ನಲ್ಲಿ ಮೃತ ಯುವಕನ ಅಂಗಾಗವನ್ನು ಹೈದರಾಬಾದ್‍ಗೆ ಕಳುಹಿಸಿ ಅಲ್ಲಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ ರವಾನೆ ಮಾಡಲಾಗಿದೆ.ಇದನ್ನೂ ಓದಿ:ಕಾಬೂಲ್‍ನಲ್ಲಿ ಎಟಿಎಂಗಳ ಮುಂದೆ ಜನಸಾಗರ – ಬ್ಯಾಂಕ್ ಸಿಬ್ಬಂದಿಯಿಂದ ಪ್ರತಿಭಟನೆ

    ಏನಿದು ಘಟನೆ?
    ಹತ್ತೊಂಬತ್ತು ವರ್ಷದ ಯುವಕ ಮಹಡಿ ಮೇಲಿಂದ ಕಾಲು ಜಾರಿ ಬಿದ್ದಿದ್ದು, ಆತನನ್ನು ಕಲಬುರಗಿ ನಗರದ ಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎರಡು ದಿನದ ಹಿಂದೆ ಆತನ ಮೆದುಳು ನಿಷ್ಕ್ರಿಯವಾಗಿತ್ತು. ಈ ಬಗ್ಗೆ ವೈದ್ಯರು ಆತನ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಜೊತೆಗೆ ಅಂಗಾಂಗ ದಾನದ ಬಗ್ಗೆಯೂ ಮಾಹಿತಿ ನೀಡಿದ್ದರು. ವೈದ್ಯರ ಮಾತಿಗೆ ಯುವಕನ ಕುಟುಂಬದವರು ಒಪ್ಪಿಗೆಯನ್ನು ನೀಡಿದ್ದರು. ಹೀಗಾಗಿ ಕಳೆದ ಎರಡು ದಿನಗಳಿಂದ ಅನೇಕ ಪರೀಕ್ಷೆಗಳನ್ನು ನಡೆಸಲಾಗಿತ್ತು.

    ಯುವಕನ ಮೆದುಳು ನಿಷ್ಕ್ರಿಯವಾಗಿದ್ದನ್ನು ಖಚಿತಪಡಿಸಿಕೊಂಡು, ಸರ್ಕಾರಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿರುವ ರೋಗಿಯೊಬ್ಬರಿಗೆ ಲಿವರ್ ಅವಶ್ಯಕತೆ ಇತ್ತು. ಹೀಗಾಗಿ ಇಂದು ಮುಂಜಾನೆ ಮೃತ ಯುವನಕ ಲಿವರ್‍ನನ್ನು ತೆಗೆದು ಹೈದರಾಬಾದ್‍ಗೆ ಕಳುಹಿಸಲಾಗಿದೆ. ನಂತರ ಹೈದರಾಬಾದ್‍ನಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ.ಇದನ್ನೂ ಓದಿ:ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

    ಜಿರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಲಿವರ್ ರವಾನೆ!
    ಕಲಬುರಗಿಯಿಂದ ಹೈದರಾಬಾದ್‍ವರಗೆ ಸುಮಾರು 221 ಕಿಲೋಮೀಟರ್‍ವರಗೆ ಕಲಬುರಗಿ ಪೆÇಲೀಸರು ಜಿರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು. ಮುಂದೆ ತೆಲಂಗಾಣ ಪೆÇಲೀಸರಿಗೆ ಮಾಹಿತಿ ನೀಡಿದ್ದು, ಅವರು ಕೂಡಾ ಜಿರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು. ಸಾಮಾನ್ಯವಾಗಿ ಹೈದರಾಬಾದ್ ವಿಮಾನ ನಿಲ್ದಾಣ ಮುಟ್ಟಲು ನಾಲ್ಕು ಗಂಟೆ ಸಮಯಬೇಕು. ಆದರೆ ಜಿರೋ ಟ್ರಾಫಿಕ್‍ನಿಂದಾಗಿ ಕೇವಲ ಎರಡೂವರೆ ಗಂಟೆಯಲ್ಲಿ ಹೈದರಾಬಾದ್‍ಗೆ ತಲುಪಲಾಗಿದೆ.

    ಚಿರಾಯು ಆಸ್ಪತ್ರೆ ವೈದ್ಯ ಡಾ.ಮಂಜುನಾಥ್ ಈ ಕುರಿತು ಮಾತನಾಡಿದ್ದು, ಇಂದು ಬೆಂಗಳೂರಿನಿಂದ ಬಂದಿದ್ದ ನುರಿತ ವೈದ್ಯರ ತಂಡ, ಯುವಕನ ಲಿವರ್ ತಗೆದು ಅದನ್ನು ಬೆಂಗಳೂರಿಗೆ ತಗೆದುಕೊಂಡು ಹೋಗಿದ್ದಾರೆ. ಲಿವರ್ ಸಾಗಿಸಲು ಪೆÇಲೀಸರು ಮತ್ತು ರಾಜ್ಯ ಸರ್ಕಾರ ಸಹಾಯ ಮಾಡಿದೆ ಎಂದು ತಿಳಿಸಿದರು.ಇದನ್ನೂ ಓದಿ:ಪೊಲೀಸರಿಗೆ ಒತ್ತಡ ಇದೆ, ಬೆಳಗ್ಗೆಯಿಂದ ರಾತ್ರಿಯವರೆಗೂ ಕೆಲಸ ಮಾಡ್ತಾರೆ: ಸತೀಶ್ ಜಾರಕಿಹೊಳಿ

    ಈ ಕುರಿತು ಪ್ರತಿಕ್ರಿಯಿಸಿದ ಯುವಕನ ಪೋಷಕರು, ನಮ್ಮ ಮಗನನ್ನು ಉಳಿಸಿಕೊಳ್ಳಲು ನಾವು ಅನೇಕ ರೀತಿಯ ಪ್ರಯತ್ನಗಳನ್ನು ಮಾಡಿದೆವು. ಆದರೆ ಅದು ಸಾಧ್ಯವಾಗಲಿಲ್ಲ. ಆತನಿಂದ ಬೇರೆಯವರಿಗೆ ಅನುಕೂಲವಾಗಲೆಂದು ಅಂಗಾಂಗ ದಾನ ಮಾಡಿದ್ದೇವೆ ಎಂದು ಭಾವುಕರಾದರು.

  • ಹಾಲು ಕಲಬೆರಕೆ ಅಡ್ಡೆ ಮೇಲೆ ಮತ್ತೆ ಪೊಲೀಸರ ದಾಳಿ

    ಹಾಲು ಕಲಬೆರಕೆ ಅಡ್ಡೆ ಮೇಲೆ ಮತ್ತೆ ಪೊಲೀಸರ ದಾಳಿ

    – ಅಪಾರ ಪ್ರಮಾಣದ ಎಣ್ಣೆ ಜಪ್ತಿ

    ಚಿಕ್ಕೋಡಿ(ಬೆಳಗಾವಿ): ಕಲಬೆರಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿನ ಘಟಕದ ಮೇಲೆ ದಾಳಿ ನಡೆಸಿದ್ದು, ಕಲಬೆರಕೆ ಹಾಲು ತಯಾರಿಸುತ್ತಿದ್ದ ಮಹಾಲಿಂಗ ಜಾಧವನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಕಲಬೆರಕೆ ಹಾಲು ತಯಾರಿಗೆ ಬಳಸುತ್ತಿದ್ದ ಅಪಾರ ಪ್ರಮಾಣದ ಎಣ್ಣೆ, ಮಿಕ್ಸಿ ಸೇರಿದಂತೆ ಇತರೆ ಸಲಕರಣೆಗಳನ್ನು ವಶಕ್ಕೆ ಪಡೆದಿದ್ದಾರೆ.

    ಅರಳಿಕಟ್ಟಿ ಗ್ರಾಮದ ಜಾಧವ ತೋಟದಲ್ಲಿ ಮಾಹಾಲಿಂಗ ಜಾಧವ ಕಲಬೆರಕೆ ಹಾಲು ತಯಾರಿಕೆ ನಡೆಸುತ್ತಿದ್ದ. ಗುರುವಾರ ಬೆಳ್ಳಂ ಬೆಳಗ್ಗೆ ಅಥಣಿ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಅಥಣಿ ತಾಲೂಕಿನಲ್ಲಿ ಕಲಬೆರಕೆ ಹಾಲು ತಯಾರಿ ಅವ್ಯಾಹತವಾಗಿ ನಡೆಯುತ್ತಿದ್ದು, ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ನಿಟ್ಟಿನಲ್ಲಿ ಪೊಲೀಸರು ಸಹ ಕಾರ್ಯ ಪ್ರವೃತ್ತರಾಗಿ ವಸ್ತುಗಳನ್ನು ಜಪ್ತಿ ಮಾಡುತ್ತಿದ್ದಾರೆ.

    ಕಳೆದ ನಾಲ್ಕು ದಿನದ ಹಿಂದೆ ಇದೇ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಕಲಬೆರಕೆ ಹಾಲು ಉತ್ಪಾದಕ ಘಟಕದ ಮೇಲೆ ಪೋಲಿಸರು ದಾಳಿ ನಡೆಸಿದ್ದರು. ಝುಂಜರವಾಡ ಗ್ರಾಮದ ಉಮರಾಲಿ ಅನಸಾರಿ(23)ಯನ್ನು ಬಂಧಿಸಿದ್ದರು. ದಾಳಿ ವೇಳೆ ಕಲಬೆರಕೆಯ 665 ಲೀಟರ್ ಹಾಲು ಜಪ್ತಿ ಮಾಡಿಕೊಂಡಿದ್ದರು. ಅಲ್ಲದೆ ಕಲಬೆರಕೆ ಹಾಲು ತಯಾರಿಗೆ ಬಳಸುತ್ತಿದ್ದ ಎಣ್ಣೆ, ಒಂದು ಮಿಕ್ಸಿ ಸೇರಿ ಒಟ್ಟು 49,270 ರೂ. ಮೌಲ್ಯದ ವಸ್ತುಗಳು ಜಪ್ತಿ ಮಾಡಿಕೊಂಡಿದ್ದರು.

  • ಹಾಲು ಕಲಬೆರಕೆ ಅಡ್ಡೆ ಮೇಲೆ ದಾಳಿ – ಓರ್ವ ಅರೆಸ್ಟ್

    ಹಾಲು ಕಲಬೆರಕೆ ಅಡ್ಡೆ ಮೇಲೆ ದಾಳಿ – ಓರ್ವ ಅರೆಸ್ಟ್

    ಚಿಕ್ಕೋಡಿ: ಅಡುಗೆ ಎಣ್ಣೆ ಸೇರಿದಂತೆ ವಿವಿಧ ವಸ್ತುಗಳನ್ನು ಬಳಸಿ ಕಲಬೆರಕೆ ಹಾಲು ತಯಾರಿಸುತ್ತಿದ್ದ ಹಾಲು ಉತ್ಪಾದಕ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

    ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಹೋರವಲದಲ್ಲಿ ಘಟನೆ ನಡೆದಿದ್ದು, ಝುಂಜರವಾಡ ಗ್ರಾಮದ ಉಮರಾಲಿ ಅನಸಾರಿ(23)ಯನ್ನು ಬಂಧಿಸಲಾಗಿದೆ. ಅಪಾರ ಪ್ರಮಾಣದ ಕಲಬೆರಕೆ ಹಾಲು ತಯಾರಿಸುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಕಲಬೆರಕೆಯ 665 ಲೀಟರ್ ಹಾಲು ಜಪ್ತಿ ಮಾಡಿಕೊಂಡಿದ್ದಾರೆ. ಕಲಬೆರಕೆ ಹಾಲು ತಯಾರಿಗೆ ಬಳಸುತ್ತಿದ್ದ ಎಣ್ಣೆ, ಒಂದು ಮಿಕ್ಸಿ ಸೇರಿ ಒಟ್ಟು 49,270 ರೂ. ಮೌಲ್ಯದ ವಸ್ತುಗಳು ಜಪ್ತಿ ಮಾಡಲಾಗಿದೆ.

    ಬೆಳಗಾವಿ ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ನಿಂಗನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕುಡಿಯೋ ಹಾಲಿಗೆ ಬೆರೆಸ್ತಾರೆ ಎಣ್ಣೆ, ಯೂರಿಯಾ – ಅಥಣಿ, ರಾಯಬಾಗದಲ್ಲಿ ಭಾರೀ ದಂಧೆ

    ಬೆಳಗಾವಿ: ಹಾಲು ಕುಡಿದವರೇ ಬದಕಲ್ಲ, ಇನ್ನು ವಿಷ ಕುಡಿದವರು ಬದುಕ್ತಾರಾ? ಅನ್ನೋ ಗಾದೆ ಮಾತಿದೆ. ಬೆಳಗಾವಿ ಜಿಲ್ಲೆಯ ನಗರ ಪ್ರದೇಶದ ಜನ ಹಾಲಿನ ಹೆಸರಲ್ಲಿ ವಿಷವನ್ನೇ ಕುಡೀತಿದ್ದಾರೆ.

    ಜನರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿರೋ ಹಾಲಿಗೆ ರಾಸಾಯನಿಕ ಬೆರೆಸುತ್ತಿದ್ದು, ಬೆಳಗಾವಿಯ ಅಥಣಿ ಮತ್ತು ರಾಯಬಾಗ ತಾಲೂಕಿನ ಹಾಲಿನ ದಂಧೆಯ ಬಗ್ಗೆ ಜನರಿಗೆ ಆತಂಕ ಶುರುವಾಗಿದೆ. ಇದ್ರಿಂದ ಭಯಾನಕ ರೋಗಗಳ ಭೀತಿನೂ ಎದುರಾಗಿದೆ.

    ರೈತರಿಂದ ಹಾಲು ಪಡೆಯೋ ಡೈರಿಯವರು, ಹಾಲಿನ ಫ್ಯಾಟ್ ಹಾಗೂ ಡಿಗ್ರಿ ಹೆಚ್ಚಳ ಮಾಡೋಕೆ ಇಂಥ ಅಕ್ರಮ ಹಾದಿ ಹಿಡಿದಿದ್ದಾರೆ. 50 ಲೀಟರ್ ಹಾಲಿಗೆ ಎಣ್ಣೆ, ಯೂರಿಯಾ ಸೇರಿದಂತೆ ವಿಷಪೂರಿತ ಕೆಮಿಕಲ್ ಮಿಕ್ಸ್ ಮಾಡಿ ಅದನ್ನ 100 ಲೀಟರ್‍ಗೆ ಹೆಚ್ಚಿಸ್ತಾರೆ. ಬಳಿಕ ಗ್ರಾಹಕರಿಗೆ ಹಾಲನ್ನ ಮಾರಾಟ ಮಾಡ್ತಿದ್ದಾರೆ. ಈ ಹಾಲಾಹಲದ ದಂಧೆ ಹಿಂದೆ ಭ್ರಷ್ಟ ಅಧಿಕಾರಿಗಳ ಕುಮ್ಮಕ್ಕೂ ಇದೆ ಅಂತ ಸ್ಥಳೀಯರು ಆರೋಪಿಸಿದ್ದಾರೆ.

    ಶುಭ್ರ, ಶುದ್ಧ ಹಾಲಿನಲ್ಲಿ ಪಾತಕಿಗಳು ವಿಷ ತುಂಬಿ ಅಕ್ರಮವಾಗಿ ಲಾಭ ಪಡೀತಿದ್ದಾರೆ. ಈ ಮಿಲ್ಕ್ ಮಾಫಿಯಾ ಹೀಗೆ ಮುಂದುವರಿದ್ರೆ ನಗರದ ಜನ ಆಸ್ಪತ್ರೆಗಳಲ್ಲಿ ಸಾಲು ನಿಲ್ಲೋದು ತಪ್ಪಲ್ಲ.