Tag: advertisement

  • ʻಒಂದ್‌ ಸಲ ಕಮಿಟ್‌ ಆದ್ರೆ ತನ್ನ ಮಾತ್‌ ತಾನೇ ಕೇಳಲ್ಲʼ – ಜಾಹೀರಾತಿನಿಂದ ಸಿಟ್ಟಿಗೆದ್ದ ಟ್ರಂಪ್‌, ಕೆನಡಾ ಮೇಲೆ ಹೆಚ್ಚುವರಿ 10% ಸುಂಕ

    ʻಒಂದ್‌ ಸಲ ಕಮಿಟ್‌ ಆದ್ರೆ ತನ್ನ ಮಾತ್‌ ತಾನೇ ಕೇಳಲ್ಲʼ – ಜಾಹೀರಾತಿನಿಂದ ಸಿಟ್ಟಿಗೆದ್ದ ಟ್ರಂಪ್‌, ಕೆನಡಾ ಮೇಲೆ ಹೆಚ್ಚುವರಿ 10% ಸುಂಕ

    ವಾಷಿಂಗ್ಟನ್‌/ಒಟ್ಟಾವ: ಕೆನಾಡದ ಆಮದುಗಳ ಮೇಲೆ 10% ಹೆಚ್ಚುವರಿ ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಘೋಷಣೆ ಮಾಡಿದ್ದಾರೆ.

    MLB ವಿಶ್ವ ಸರಣಿಯ ಮೊದಲ ಪಂದ್ಯದಲ್ಲಿ ಒಂಟಾರಿಯೋ (Ontario) ಸರ್ಕಾರ 75 ದಶಲಕ್ಷ ಡಾಲರ್‌ (USD)‌ ವ್ಯಯಿಸಿ ಟಿವಿ ಜಾಹೀರಾತು ಪ್ರಕಟಿಸಿತ್ತು. ಟ್ರಂಪ್‌ ಅವರು ಒಮ್ಮೆ ದೃಢನಿಶ್ಚಯ ಮಾಡಿದ್ರೆ ಅದನ್ನು ಮಾಡೇ ಮಾಡುತ್ತಾರೆ, ತನ್ನ ಮಾತನ್ನ ತಾನೇ ಕೇಳಲ್ಲ ಅಂತ ಜಾಹೀರಾತು ಪ್ರಸಾರ ಮಾಡಿತ್ತು. ಇದರಿಂದ ಸಿಟ್ಟಿಗೆದ್ದ ಟ್ರಂಪ್‌ ಕೆನಡಾ ಮೇಲೆ ಹೆಚ್ಚುವರಿ ಸುಂಕ ವಿಧಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

    ಕೆನಾಡದ ಮೇಲಿನ ಒಟ್ಟು ಸುಂಕ 45% ಗೆ ಏರಿಕೆಯಾಗಿದೆ. ಕೆನಡಾ (Canada) ಮೇಲಿನ ಸುಂಕ ಏರಿಕೆಯು ವ್ಯಾಪಾರ ಉದ್ವಿಗ್ನತೆಗೆ ಕಾರಣವಾಗಲಿದೆ. ಏಕೆಂದರೆ ಕೆನಡಾ ಅಮೆರಿಕದ ಎರಡನೇ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿದೆ.

    ಕೆನಡಾ ಸರ್ಕಾರ ನೀಡಿದ ಜಾಹೀರಾತಿನಲ್ಲಿ ಮಾಜಿ ಅಧ್ಯಕ್ಷ ಮತ್ತು ರಿಪಬ್ಲಿಕನ್ ಐಕಾನ್ ರೊನಾಲ್ಡ್ ರೇಗನ್ ಅವರ ವೀಡಿಯೊ ಕ್ಲಿಪ್ ಇತ್ತು. ಅದರಲ್ಲಿ ಸುಂಕದ ಕ್ರಮವು ವ್ಯಾಪಾರ ಯುದ್ಧ ಮತ್ತು ಆರ್ಥಿಕ ಬಿಕ್ಕಟ್ಟುಗಳಿಗೆ ಕಾರಣವಾಗುತ್ತವೆ ಎಂದು ಹೇಳಿದ್ದರು. ಈ ಜಾಹೀರಾತನ್ನು ಟ್ರಂಪ್‌ ಟೀಕಿಸಿದ್ದರು. ಇದು ಸುಳ್ಳು ಮತ್ತು ದಾರಿತಪ್ಪಿಸುವ ಜಾಹೀರಾತು ಎಂದು ಅಸಮಾಧಾನ ಹೊರಹಾಕಿದ್ದರು. ಈ ಬೆನ್ನಲ್ಲೇ ಸುಂಕ ಹೆಚ್ಚಿಸುವ ಕ್ರಮ ಕೈಗೊಂಡಿದ್ದಾರೆ ಈ ಕುರಿತು ತಮ್ಮ ಸೋಷಿಯಲ್‌ ಮೀಡಿಯಾ ವೇದಿಕೆ ಟ್ರುತ್‌ ಔಟ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

    ಇನ್ನೂ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಶುಕ್ರವಾರ ಅಮೆರಿಕದೊಂದಿಗೆ ವ್ಯಾಪಾರ ಮಾತುಕತೆಗಳನ್ನು ಪುನರಾರಂಭಿಸಲು ಸಿದ್ಧ ಎಂದು ಹೇಳಿದ್ದರು. ಆದ್ರೆ ಶ್ವೇತಭವನ, ಯುಎಸ್ ವಾಣಿಜ್ಯ ಇಲಾಖೆ ಅಥವಾ ಕಾರ್ನಿ ಕಚೇರಿಯಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

    ಕೆನಡಾಕ್ಕೆ ಸುಂಕದ ಬರೆ
    ಕೆನಡಾ ಸರಕುಗಳ ಮೇಲೆ ಅಮೆರಿಕ ಕಳೆದ ಮಾರ್ಚ್‌ನಲ್ಲಿ 25% ಇದ್ದ ಸುಂಕದ ಪ್ರಮಾಣವನ್ನ 30%ಗೆ ಏರಿಕೆ ಮಾಡಿತ್ತು. ಇದೀಗ 10% ಹೆಚ್ಚಿಗೆ ಮಾಡಿದ್ದು, 45%ಗೆ ತಲುಪಿದೆ.

  • ಆಟೋ ಚಾಲಕರೇ ಗಮನಿಸಿ, ಹಿಂದೆ ಜಾಹೀರಾತು ಹಾಕ್ತೀರಾ? ಹಣದಾಸೆಗೆ ಪೋಸ್ಟರ್ ಹಾಕಿದ್ರೆ ಬೀಳುತ್ತೆ ಭಾರೀ ದಂಡ!

    ಆಟೋ ಚಾಲಕರೇ ಗಮನಿಸಿ, ಹಿಂದೆ ಜಾಹೀರಾತು ಹಾಕ್ತೀರಾ? ಹಣದಾಸೆಗೆ ಪೋಸ್ಟರ್ ಹಾಕಿದ್ರೆ ಬೀಳುತ್ತೆ ಭಾರೀ ದಂಡ!

    ಬೆಂಗಳೂರು: ನಗರದಲ್ಲಿ ಅನೇಕ ಆಟೋಗಳ (Auto) ಹಿಂದೆ ಕಲರ್ ಕಲರ್ ಜಾಹೀರಾತು (Advertisement) ಹಾಕಿ ಓಡಾಡುತ್ತಿದ್ದ ಆಟೋ ಚಾಲಕರಿಗೆ ಆರ್‌ಟಿಓ ಬಿಸಿ ಮುಟ್ಟಿಸಿದೆ. 500 ಹಾಗೂ ಸಾವಿರದಾಸೆಗೆ ಪೋಸ್ಟರ್ ಅಂಟಿಸಿ ಅಧಿಕಾರಿಗಳಿಗೆ ತಗ್ಲಾಕೊಂಡು ಸಾವಿರಾರು ರೂ. ಫೈನ್ ಕಟ್ಟುವಂತಾಗಿದೆ.

    ಆಟೋಗಳ ಮೇಲೆ ಪೋಸ್ಟರ್ ಅಂಟಿಸಿದವರಿಗೆ ಆರ್‌ಟಿಓ (RTO) ಫೈನ್ ಅಸ್ತ್ರ ಪ್ರಯೋಗ ಮಾಡಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 5,000 ರೂ. ದಂಡ ಪ್ರಯೋಗ ಮಾಡಿರುವುದು ಆಟೋ ಚಾಲಕರ ಪಾಲಿಗೆ ಬಿಗ್ ಶಾಕ್ ಆಗಿದೆ. ಇದನ್ನೂ ಓದಿ: 2019 ರಲ್ಲಿ ಶಂಕು, ಇಂದು ಲೋಕಾರ್ಪಣೆ – ಸಿಗಂದೂರು ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಗಡ್ಕರಿ

    ಸಾರಿಗೆ ಇಲಾಖೆಯ ನಿಯಮದ ಪ್ರಕಾರ ಆಟೋಗಳಲ್ಲಿ ಜಾಹೀರಾತು ಪ್ರದರ್ಶನ ಮಾಡುವುದಕ್ಕೆ ವಾರ್ಷಿಕವಾಗಿ ಅನುಮತಿ ಪಡೆದಿರಬೇಕು. ಏನೇ ಜಾಹೀರಾತು ಅಳವಡಿಕೆ ಮಾಡಿದರೂ ವರ್ಷಕ್ಕೆ 5,000 ರೂ. ಕಟ್ಟಬೇಕು. ಹಾಗೊಮ್ಮೆ ಅನುಮತಿ ಪಡೆದಿದ್ದರೆ, ವರ್ಷವಿಡೀ ಜಾಹೀರಾತು ಅಳವಡಿಕೆಗೆ ಅವಕಾಶ ಇದೆ. ಆದರೆ ಈ ನಿಯಮದ ಬಗ್ಗೆ ನಗರದ ಬಹುತೇಕ ಆಟೋ ಚಾಲಕರಿಗೆ ಅರಿವೇ ಇಲ್ಲ. ಅನುಮತಿ ಪಡೆಯದೇ ಹಾಗೂ ಹಣದ ಆಸೆಗೆ ಆಟೋ ಹಿಂದೆ ಜಾಹೀರಾತು ಪೋಸ್ಟರ್ ಹಾಕಿಸಿ ಆರ್‌ಟಿಓ ಫೈನ್ ಸುಳಿಯಲ್ಲಿ ಚಾಲಕರು ಸಿಲುಕಿಕೊಂಡಿದ್ದಾರೆ. ಇದನ್ನೂ ಓದಿ: ಮೊಳಕಾಲ್ಮೂರಲ್ಲಿ ಬೀದಿಗೆ ಬಂದ ‘ಕೈ’ ನಾಯಕರ ಶೀತಲ ಸಮರ – ಪ.ಪಂ. ಕಚೇರಿ ಬಳಿ ಯೋಗೀಶ್ ಬಾಬು ಧರಣಿ

    ಬೈಕ್ ಟ್ಯಾಕ್ಸಿ ಬ್ಯಾನ್ ಬೆನ್ನಲ್ಲೇ ಸಾರಿಗೆ ಸಚಿವರ ಸೂಚನೆ ಮೇರೆಗೆ ಆಟೋ ಚಾಲಕರ ಎಫ್‌ಸಿ, ಪರ್ಮಿಟ್, ಮೀಟರ್ ಅಳವಡಿಕೆಯನ್ನ ಆರ್‌ಟಿಓ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಲಾಗುತ್ತಿತ್ತು. ಈ ವೇಳೆ ಕೆಲವೊಂದು ಪೋಸ್ಟರ್ ಆಟೋ ಹಿಂದೆ ಹಾಕಿದ್ದಕ್ಕೆ ನಗರದ ಸಾವಿರಾರು ಆಟೋಗಳಿಗೆ ದಂಡದ ಬಿಸಿ ತಟ್ಟಿದೆ. ಇದನ್ನೂ ಓದಿ: ಡಿವೋರ್ಸ್‌ ಘೋಷಿಸಿದ ಸೈನಾ ನೆಹ್ವಾಲ್‌-ಪರುಪಳ್ಳಿ ಕಶ್ಯಪ್ ದಂಪತಿ

  • ನಗದಿನ ಮೂಲಕ ಸಂಭಾವನೆ – ಮಹೇಶ್‌ ಬಾಬುಗೆ ಇಡಿ ನೋಟಿಸ್‌

    ನಗದಿನ ಮೂಲಕ ಸಂಭಾವನೆ – ಮಹೇಶ್‌ ಬಾಬುಗೆ ಇಡಿ ನೋಟಿಸ್‌

    ಹೈದರಾಬಾದ್: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಅವರಿಗೆ ಏ.28ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

    ಹೈದರಾಬಾದ್ ಮೂಲದ ರಿಯಲ್ ಎಸ್ಟೇಟ್ (Real Estate) ಸಂಸ್ಥೆಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಮೇಲೆ ಹಣ ಅಕ್ರಮ ವಹಿವಾಟು ತಡೆ ಕಾಯ್ದೆ (PMLA) ಅಡಿ ಇಡಿ ಪ್ರಕರಣ ದಾಖಲಿಸಿ ದಾಳಿ ನಡೆಸಿತ್ತು. ಈ ಕಂಪನಿಗಳ ಜಾಹೀರಾತಿನಲ್ಲಿ (Advertisement) ಮಹೇಶ್‌ ಬಾಬು ನಟಿಸಿದ್ದರು.

    ನಟಿಸಿದ್ದಕ್ಕೆ ಮಹೇಶ್‌ ಬಾಬು ಅವರಿಗೆ 5.9 ಕೋಟಿ ರೂ. ಸಂಭಾವನೆ ಸಿಕ್ಕಿತ್ತು. ಈ ಪೈಕಿ 3.4 ಕೋಟಿ ರೂ. ಚೆಕ್ ಮೂಲಕ ಮತ್ತು 2.5 ಕೋಟಿ ರೂ. ನಗದು ಮೂಲಕ ಪಾವತಿಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ನಗದು ವಹಿವಾಟಿನ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ  ಮಹೇಶ್‌ ಬಾಬು ಅವರಿಗೆ ಇಡಿ ಸಮನ್ಸ್‌ ಜಾರಿ ಮಾಡಿದೆ. ಇದನ್ನೂ ಓದಿ: ಹೊಸ ಪೋಪ್ ಆಯ್ಕೆ ಹೇಗೆ ಮಾಡಲಾಗುತ್ತೆ? ಹೊಗೆ ಹಾಕೋದು ಯಾಕೆ?

    ಸಾಯಿ ಸೂರ್ಯ ರಿಯಲ್‌ ಎಸ್ಟೇಟ್‌ ಕಂಪನಿಯ ಪ್ರಚಾರದ ಜಾಹೀರಾತಿನಲ್ಲಿ ಮಹೇಶ್‌ ಬಾಬು

    ತೆಲಂಗಾಣ ಪೊಲೀಸರು ಹೈದರಾಬಾದ್ ಪ್ರಾಪರ್ಟೀಸ್ ಲಿಮಿಟೆಡ್‌ನ ನರೇಂದ್ರ ಸುರಾನಾ ಮತ್ತು ಸಾಯಿ ಸೂರ್ಯ ಡೆವಲಪರ್ಸ್‌ನ ಸತೀಶ್ ಚಂದ್ರ ಗುಪ್ತಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಅನಧಿಕೃತ ಲೇಔಟ್‌ಗಳಲ್ಲಿ ಪ್ಲಾಟ್‌ಗಳನ್ನು ಮಾರಾಟ ಮಾಡುವ ಮೂಲಕ ಖರೀದಿದಾರರನ್ನು ವಂಚಿಸಿದ್ದಾರೆ. ಒಂದೇ ಪ್ಲಾಟ್ ಅನ್ನು ಹಲವು ಬಾರಿ ಮಾರಾಟ ಮಾಡಿದ ಮತ್ತು ಆಸ್ತಿ ನೋಂದಣಿಗೆ ಸಂಬಂಧಿಸಿದಂತೆ ಸುಳ್ಳು ಭರವಸೆಗಳನ್ನು ನೀಡಿದ ಆರೋಪ ಕಂಪನಿಯ ಮೇಲಿದೆ. ಇದನ್ನೂ ಓದಿ: ಖರ್ಗೆ ಕಾರ್ಯಕ್ರಮಕ್ಕೆ ಬಾರದ ಜನ – ಪಕ್ಷದಿಂದಲೇ ಜಿಲ್ಲಾಧ್ಯಕ್ಷ ಅಮಾನತು

    ನಿಯಮ ಏನು ಹೇಳುತ್ತೆ?
    ಯಾವುದೇ ವ್ಯಕ್ತಿಯು ಒಂದೇ ವಹಿವಾಟಿಗೆ ಅಥವಾ ಒಂದು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯಿಂದ ದಿನದಲ್ಲಿ 2 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತವನ್ನು ನಗದು ರೂಪದಲ್ಲಿ ಸ್ವೀಕರಿಸುವಂತಿಲ್ಲ. ಈ ನಿಯಮವು ಶುಲ್ಕಗಳು, ದೇಣಿಗೆ, ಸಂಭಾವನೆ ಎಲ್ಲದ್ದಕ್ಕೂ ಅನ್ವಯವಾಗುತ್ತದೆ. ಈ ಮಿತಿಯನ್ನು ಉಲ್ಲಂಘಿಸಿದರೆ ಆದಾಯ ತೆರಿಗೆ ಕಾಯ್ದೆ 271DA ಅಡಿಯಲ್ಲಿ ಸ್ವೀಕರಿಸಿದ ಮೊತ್ತಕ್ಕೆ ಸಮಾನವಾದ ದಂಡ ವಿಧಿಸಲಾಗುತ್ತದೆ. 2 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತವನ್ನು UPI, NEFT ಮತ್ತು RTGS ಮೂಲಕ ಪಾವತಿಸಬೇಕಾಗುತ್ತದೆ.

  • 25 ನಿಮಿಷ ಜಾಹೀರಾತು ಪ್ರಕಟಿಸಿ ಸಮಯ ವ್ಯರ್ಥಗೊಳಿಸಿದ್ದಕ್ಕೆ PVR- INOXಗೆ 1.20 ಲಕ್ಷ ದಂಡ – ಬೆಂಗಳೂರು ವ್ಯಕ್ತಿಗೆ ಜಯ

    25 ನಿಮಿಷ ಜಾಹೀರಾತು ಪ್ರಕಟಿಸಿ ಸಮಯ ವ್ಯರ್ಥಗೊಳಿಸಿದ್ದಕ್ಕೆ PVR- INOXಗೆ 1.20 ಲಕ್ಷ ದಂಡ – ಬೆಂಗಳೂರು ವ್ಯಕ್ತಿಗೆ ಜಯ

    ಬೆಂಗಳೂರು: 25 ನಿಮಿಷ ಜಾಹೀರಾತು (Advertisement) ಪ್ರಕಟಿಸಿ ಸಮಯ ವ್ಯರ್ಥ ಮಾಡಿದ್ದಕ್ಕೆ ಪಿವಿಆರ್‌-ಐನಾಕ್ಸ್‌ (PVR- INOX) ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದ ಸಿನಿಮಾ ಅಭಿಮಾನಿಗೆ ಜಯ ಸಿಕ್ಕಿದೆ.

    ಸಿನಿಮಾ ಅಭಿಮಾನಿಯ ವಾದವನ್ನು ಪುರಸ್ಕರಿಸಿದ ಗ್ರಾಹಕ ನ್ಯಾಯಾಲಯ (Consumer Court) ಸಮಯವನ್ನು ಹಣವೆಂದು ಪರಿಗಣಿಸಿ ದೂರುದಾರರಿಂದ ಉಂಟಾದ ನಷ್ಟವನ್ನು ಸರಿದೂಗಿಸಲು PVR ಸಿನಿಮಾಸ್ ಮತ್ತು INOXಗೆ 1.20 ಲಕ್ಷ ರೂ. ದಂಡವನ್ನು ವಿಧಿಸಿ ಆದೇಶ ಪ್ರಕಟಿಸಿದೆ.

    ಏನಿದು ಪ್ರಕರಣ?
    ಬೆಂಗಳೂರಿನ ಅಭಿಷೇಕ್‌ 2023 ರಲ್ಲಿ ಶ್ಯಾಮ್ ಬಹದ್ದೂರ್ ಸಿನಿಮಾ ವೀಕ್ಷಿಸಲು ಬುಕ್‌ಮೈಶೋ (BookmyShow) ಮೂಲಕ 3 ಟಿಕೆಟ್‌ ಖರೀದಿಸಿದ್ದರು. ಸಂಜೆ 4:05ಕ್ಕೆ ನಿಗದಿಯಾಗಿದ್ದ ಸಿನಿಮಾ ಸಂಜೆ 6:30ಕ್ಕೆ ಮುಗಿಯಬೇಕಿತ್ತು. ಆದರೆ ಸಿನಿಮಾ ಪ್ರದರ್ಶನ 4:05ಕ್ಕೆ ಆರಂಭವಾಗುವ ಬದಲು ಸಂಜೆ 4:30ಕ್ಕೆ ಆರಂಭವಾಗಿದೆ.

     

    ಸುಮಾರು 30 ನಿಮಿಷಗಳ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದ್ದರಿಂದ ನಾನು ನಿಗದಿ ಪಡಿಸಿದ ಕೆಲಸಗಳಿಗೆ ಹಾಜರಾಗಲು ಸಾಧ್ಯವಾಗಿಲ್ಲ. ಇದರಿಂದ ನನಗೆ ನಷ್ಟವಾಗಿದೆ ಎಂದು ಕೋರಿ ಅಭಿಷೇಕ್‌ ದೂರು ನೀಡಿದ್ದರು. ಜಾಹೀರಾತುಗಳನ್ನು ಪ್ರದರ್ಶಿಸುವ ಮೂಲಕ ಅನಗತ್ಯ ಲಾಭ ಪಡೆಯಲು ಪ್ರದರ್ಶನದ ಸಮಯವನ್ನು ತಪ್ಪಾಗಿ ಉಲ್ಲೇಖಿಸಿದ್ದಾರೆ ಎಂದು ಕೋರ್ಟ್‌ನಲ್ಲಿ ವಾದಿಸಿದ್ದರು.

    ಇಂದಿನ ಕಾಲದಲ್ಲಿ ಸಮಯವನ್ನು ಹಣವೆಂದು ಪರಿಗಣಿಸಲಾಗುತ್ತದೆ. ಪ್ರತಿಯೊಬ್ಬರ ಸಮಯವು ಬಹಳ ಅಮೂಲ್ಯವಾಗಿದೆ. ಇತರರ ಸಮಯ ಮತ್ತು ಹಣದಿಂದ ಲಾಭ ಪಡೆಯುವ ಹಕ್ಕು ಯಾರಿಗೂ ಇಲ್ಲ.  ಸುಮ್ಮನೆ ಕುಳಿತು ಥಿಯೇಟರ್‌ನಲ್ಲಿ ಪ್ರಸಾರವಾಗುವ ಎಲ್ಲವನ್ನೂ 25-30 ನಿಮಿಷಗ ವೀಕ್ಷಿಸುವುದು ಕಡಿಮೆಯಲ್ಲ. ಬಿಗಿಯಾದ ವೇಳಾಪಟ್ಟಿಯೊಂದಿಗೆ ಕಾರ್ಯನಿರತ ಜನರಿಗೆ ಅನಗತ್ಯ ಜಾಹೀರಾತುಗಳನ್ನು ನೋಡುವುದು ಕಷ್ಟ ಎಂದು ಕೋರ್ಟ್‌ ತನ್ನ ಆದೇಶದಲ್ಲಿ ತಿಳಿಸಿದೆ.

    court order law

    ಅಂತಿಮವಾಗಿ ಅನ್ಯಾಯದ ವ್ಯಾಪಾರ ಪದ್ಧತಿ ಮತ್ತು ದೂರುದಾರರ ಸಮಯ ವ್ಯರ್ಥ ಮಾಡಿದ್ದಕ್ಕಾಗಿ 20,000 ರೂ., ಮಾನಸಿಕ ಯಾತನೆಗಾಗಿ 8,000 ರೂ. ದಂಡ ಮತ್ತು ಗ್ರಾಹಕ ಕಲ್ಯಾಣ ನಿಧಿಗೆ ಒಂದು ಲಕ್ಷ ರೂಪಾಯಿಗಳನ್ನು ಠೇವಣಿ ಇಡುವಂತೆ ನಿರ್ದೇಶಿಸಿದೆ. ಆದೇಶದ ದಿನಾಂಕದಿಂದ 30 ದಿನಗಳಲ್ಲಿ ಮೊತ್ತವನ್ನು ಪಾವತಿಸುವಂತೆ ಗಡುವು ನೀಡಿದೆ.

    ಬುಕ್‌ಮೈಶೋ ಟಿಕೆಟ್ ಬುಕ್ಕಿಂಗ್‌ ವೇದಿಕೆಯಾಗಿರುವುದರಿಂದ ಮತ್ತು ಜಾಹೀರಾತುಗಳ ಸ್ಟ್ರೀಮಿಂಗ್ ಸಮಯದ ಮೇಲೆ ಯಾವುದೇ ನಿಯಂತ್ರಣವನ್ನು ಹೊಂದಿರದ ಕಾರಣ ಈ ಪ್ರಕರಣದಲ್ಲಿ ಬಾಧ್ಯಸ್ಥವಾಗುವುದಿಲ್ಲ ಎಂದು ಹೇಳಿತು.

    ತಮ್ಮ ಪ್ರತಿವಾದದಲ್ಲಿ PVR ಸಿನಿಮಾಸ್ ಮತ್ತು INOX, ಕಾನೂನಿನ ಅಡಿಯಲ್ಲಿ ಜಾಗೃತಿ ಮೂಡಿಸಲು ಕೆಲವು ಸಾರ್ವಜನಿಕ ಸೇವಾ ಪ್ರಕಟಣೆಗಳನ್ನು (PSA) ಪ್ರದರ್ಶಿಸಿದ್ದೇವೆ ಎಂದ ಹೇಳಿತ್ತು.

    ಈ ವೇಳೆ ಕೋರ್ಟ್‌ ಸಿನಿಮಾ ಪ್ರಾರಂಭವಾಗುವ 10 ನಿಮಿಷಗಳ ಮೊದಲು ಮತ್ತು ಚಲನಚಿತ್ರ ಪ್ಯಾಕೇಜ್‌ನ ದ್ವಿತೀಯಾರ್ಧದ ಪ್ರಾರಂಭದ ಮೊದಲು ಮಧ್ಯಂತರ ಅವಧಿಯಲ್ಲಿ ಸಾರ್ವಜನಿಕ ಸೇವಾ ಪ್ರಕಟಣೆಗಳನ್ನು ಪ್ರದರ್ಶಿಸಬೇಕು ಎಂದು  ಸೂಚಿಸಿದೆ.

     

  • IPL 2024: ಐಪಿಎಲ್ ಜಾಹೀರಾತಿನಲ್ಲಿ ನಟ ಪ್ರಭಾಸ್ ‘ಕಲ್ಕಿ’ ಲುಕ್

    IPL 2024: ಐಪಿಎಲ್ ಜಾಹೀರಾತಿನಲ್ಲಿ ನಟ ಪ್ರಭಾಸ್ ‘ಕಲ್ಕಿ’ ಲುಕ್

    ಪಿಎಲ್ 2024ರ (IPL) ಜಾಹೀರಾತು ತಯಾರಾಗಿದ್ದು, ದಕ್ಷಿಣದ ಹೆಸರಾಂತ ನಟ ಪ್ರಭಾಸ್ ಈ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ತಮ್ಮ ಕಲ್ಕಿ ಸಿನಿಮಾವನ್ನೂ ಅವರು ಪ್ರಮೋಟ್ ಮಾಡಿದ್ದಾರೆ. ಕಲ್ಕಿ ಸಿನಿಮಾದ ಲುಕ್ ಅನ್ನೇ ಜಾಹೀರಾತಿನಲ್ಲೂ (Advertisement) ತಂದಿದ್ದಾರೆ. ಹಾಗಾಗಿ ಸಹಜವಾಗಿಯೇ ಪ್ರಭಾಸ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ಒಂದು ಕಡೆ ಐಪಿಎಲ್ ಜಾಹೀರಾತು ಮತ್ತೊಂದು ಕಡೆ ಕಲ್ಕಿ ಸಿನಿಮಾದ ರಿಲೀಸ್ (Release) ಡೇಟ್ ಅಧಿಕೃತವಾಗಿ ಘೋಷಣೆಯಾಗಿದೆ. ಇದೇ ಜೂನ್ 27ರಂದು ವಿಶ್ವದಾದ್ಯಂತ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದೆ. ಜೊತೆಗೆ ಹೊಸ ಪೋಸ್ಟರ್ ಕೂಡ ರಿಲೀಸ್ ಮಾಡಿದೆ. ಭಾರತದ ಭಾಷೆಗಳಿಗೆ ಅಷ್ಟೇ ಅಲ್ಲ, ಇಂಗ್ಲಿಷ್ ಗೂ ಈ ಸಿನಿಮಾ ಡಬ್ ಆಗಿ ಹಾಲಿವುಡ್ (Hollywood) ನಲ್ಲೂ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

    ಈ ಸಿನಿಮಾ ಒಂದಿಲ್ಲೊಂದು ಕಾರಣದಿಂದಾಗಿ ಸುದ್ದಿ ಆಗುತ್ತಲೇ ಇದೆ. ಈ ಬಾರಿ ಕಲಾವಿದರಿಗೆ ನೀಡಿರುವ ಸಂಭಾವನೆಯಿಂದಾಗಿ (Remuneration) ಸಖತ್ ಸದ್ದು ಮಾಡುತ್ತಿದೆ. ಮೂಲಗಳ ಪ್ರಕಾರ ಕಲಾವಿದರಿಗಾಗಿಯೇ ಒಟ್ಟು 250 ಕೋಟಿ ರೂಪಾಯಿಗೂ ಅಧಿಕ ಖರ್ಚು ಮಾಡಿದ್ದಾರಂತೆ ನಿರ್ಮಾಪಕರು. ಅದರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದಿರೋದು ಚಿತ್ರ ನಾಯಕ ಪ್ರಭಾಸ್.

    ಪ್ರಭಾಸ್‌ (Prabhas) ಈ ಸಿನಿಮಾಗಾಗಿ ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರಂತೆ.  ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್‌ ಹಾಸನ್‌ ತಲಾ 20 ಕೋಟಿ ರೂಪಾಯಿ ಸಂಭಾವನೆ ಜೇಬಿಗಿಳಿಸಿಕೊಂಡಿದ್ದಾರೆ. ನಾಯಕಿ ದಿಶಾ ಪಟಾಣಿ 5 ಕೋಟಿ ರೂಪಾಯಿಗೆ ತೃಪ್ತಿ ಪಟ್ಟಿದ್ದಾರೆ. ಲಕ್ಷದಲ್ಲಿ ಸಂಭಾವನೆ ಪಡೆಯುವ ಅನೇಕ ನಟರೂ ಈ ಸಿನಿಮಾದಲ್ಲಿ ಇದ್ದಾರೆ.

     

    ನಾಗ್‌ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ (Kalki 2898 AD) ಸಿನಿಮಾ, ಈಗಾಗಲೇ ಶೂಟಿಂಗ್‌ನಲ್ಲಿ ಬಿಜಿಯಾಗಿದೆ. ಈ ನಡುವೆ ಈಗ ಸೋಷಿಯಲ್‌ ಮೀಡಿಯಾದಲ್ಲಿ ಈ ಸಿನಿಮಾ  ಟ್ರೆಂಡಿಂಗ್‌ನಲ್ಲಿಯೂ ಮುಂದುವರಿದಿದೆ. ಅದಕ್ಕೆ ಕಾರಣ ರಿಲೀಸ್‌ ಆದ ಅಮಿತಾಭ್ ಬಚ್ಚನ್‌ ಅವರ ಹೊಸ ಲುಕ್‌.

  • ಜಾಹೀರಾತು ಕಿರಿಕಿರಿಗೆ ಪಿವಿಆರ್-ಐನಾಕ್ಸ್ ಬ್ರೇಕ್

    ಜಾಹೀರಾತು ಕಿರಿಕಿರಿಗೆ ಪಿವಿಆರ್-ಐನಾಕ್ಸ್ ಬ್ರೇಕ್

    ಪಿವಿಆರ್-ಐನಾಕ್ಸ್ (PVR-Inox)ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಿಗೆ ಸಿನಿಮಾ ನೋಡಲು ಹೋದರೆ, ಸಿನಿಮಾ ಶುರುವಿಗೂ ಮುಂಚೆ ಕನಿಷ್ಠ ಹತ್ತು ನಿಮಿಷಗಳ ಕಾಲ ಜಾಹೀರಾತುಗಳನ್ನು (Advertisement) ನೋಡಬೇಕಾಗಿತ್ತು. ಅದು ಅನಿವಾರ್ಯವಾಗಿತ್ತು. ಎಷ್ಟೋ ಸಲ ಬೈದುಕೊಂಡೇ ಜಾಹೀರಾತುಗಳನ್ನು ನೋಡಿದ್ದೂ ಇದೆ.

    ಸಿನಿಮಾ ಶುರುವಾಗುವ ಮುಂಚೆ ಮಾತ್ರವಲ್ಲ, ಮಧ್ಯಂತರ ಬಿಡುವಿನಲ್ಲೂ ಜಾಹೀರಾತುಗಳನ್ನು ತೋರಿಸಲಾಗುತ್ತಿತ್ತು. ಈಗ ಅದಕ್ಕೆ ಬ್ರೇಕ್ ಹಾಕುವಂತಹ ಕೆಲಸವನ್ನೂ ಪಿವಿಆರ್ ಮಂಡಳಿ ಚಿಂತನೆ ಮಾಡಿದೆಯಂತೆ. ಮುಂದಿನ ದಿನಗಳಲ್ಲಿ ಜಾಹೀರಾತು ರಹಿತ ಸಿನಿಮಾವನ್ನು ನೋಡಬಹುದು ಎಂದಿದೆ.

     

    ಜಾಹೀರಾತು ಪ್ರದರ್ಶನಕ್ಕೆ ಕೆಲವರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಕಡಿಮೆ ದರದಲ್ಲಿ ಚಿತ್ರ ತೋರಿಸ್ತೀರಾ ಎಂದು ಪ್ರಶ್ನೆ ಕೇಳಿದವರೂ ಇದ್ದರು. ಈ ಎಲ್ಲ ಪ್ರಶ್ನೆಗೆ ಗೋಲಿ ಹೊಡೆದು, ಅದೇ ಸಮಯವನ್ನು ಒಟ್ಟು ಮಾಡಿ, ಮತ್ತೊಂದು ಶೋ ತೋರಿಸುವ ಪ್ಲ್ಯಾನ್ ಆಡಳಿತ ಮಂಡಳಿಯದ್ದು ಆಗಿದೆಯಂತೆ.

  • ಕೇರಳಕ್ಕೆ ಬನ್ನಿ ಬಿಂದಿಗೆಯಲ್ಲಿ ನೀರು ಕೊಡ್ತೀವಿ ಅಂತ ಕರೀತಿದ್ದಾರೆ- ‘ಕೈ’ ವಿರುದ್ಧ ಅಶೋಕ್ ಕಿಡಿ

    ಕೇರಳಕ್ಕೆ ಬನ್ನಿ ಬಿಂದಿಗೆಯಲ್ಲಿ ನೀರು ಕೊಡ್ತೀವಿ ಅಂತ ಕರೀತಿದ್ದಾರೆ- ‘ಕೈ’ ವಿರುದ್ಧ ಅಶೋಕ್ ಕಿಡಿ

    ಬೆಂಗಳೂರು: ಚುನಾವಣಾ ಅಖಾಡದ ವಾಕ್ಸಮರಕ್ಕೆ ಇದೀಗ `ಚೊಂಬು’ ಎಂಟ್ರಿ ಕೊಟ್ಟಿದೆ. ಚೊಂಬು ಇಟ್ಟುಕೊಂಡು ಕೇರಳಕ್ಕೆ ಹೋಗಿ ಎಂದು ಹೇಳುವ ಮೂಲಕ ಕಾಂಗ್ರೆಸ್ (Congress) ಚೊಂಬು ಜಾಹೀರಾತಿಗೆ ವಿಪಕ್ಷ ನಾಯಕ ಅಶೋಕ್ (R Ashok) ಕಿಡಿಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳಕ್ಕೆ ಬನ್ನಿ ಬಿಂದಿಗೆಯಲ್ಲಿ ನೀರು ಕೊಡ್ತೀವಿ ಅಂತ ಕರೀತಿದ್ದಾರೆ. ನೀವು ಚೊಂಬು ಅಂತ ಜಾಹೀರಾತು ಕೊಟ್ಟಿದ್ದೀರಿ. ನಿಮ್ಮ ಯೋಗ್ಯತೆಗೆ ಚೊಂಬಿನಷ್ಟು ನೀರೂ ಕೊಟ್ಟಿಲ್ಲ. ಅಲ್ಲಿ ಚೊಂಬಲ್ಲಿ ನೀರಿಲ್ಲ, ಕೇರಳಕ್ಕೆ ಬನ್ನಿ ಬಿಂದಿಗೆಯಲ್ಲಿ ನೀರು ಕೊಡ್ತೀವಿ ಅಂತ ಕರೀತಿದ್ದಾರೆ. ಚೊಂಬು ಇಟ್ಟುಕೊಂಡು ಕೇರಳಕ್ಕೆ (Kerala) ಹೋಗಿ ಅಂತಾ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ರು.

    ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮರೆತಿದೆ. ಕಾಂಗ್ರೆಸ್ ಹೊಸ ಟ್ಯಾಕ್ಸ್. ಅದು ಸ್ಕ್ವೇರ್ ಫೀಟ್ ಟ್ಯಾಕ್ಸ್.. ಒಂದು ಬಿಲ್ಡಿಂಗ್ ಗೆ 7 -8 ಕೋಟಿ ಕಲೆಕ್ಟ್ ಮಾಡ್ತಿದ್ದಾರೆ. ಒಬ್ಬೊಬ್ಬ ಬಿಲ್ಡರ್ ಹತ್ರ ಸ್ಕ್ವೇರ್ ಫೀಟ್ ಲೆಕ್ಕದಲ್ಲಿ ಕಲೆಕ್ಟ್ ಮಾಡ್ತಿದ್ದಾರೆ ಅಂತಾ ಆರೋಪಿಸಿದ್ರು. ಇದುವರೆಗೂ 700 ಕೋಟಿ SDRF ಹಣ ಬಿಡುಗಡೆ ಆಗಿದ್ದು, ಅದು ಕೇಂದ್ರದ ಪರಿಹಾರ 75% ಕೇಂದ್ರದ ಹಣ, ಇವರದ್ದಲ್ಲ ಎಂದರು.  ಇದನ್ನೂ ಓದಿ: ಹುಬ್ಬಳ್ಳಿ ವಿದ್ಯಾರ್ಥಿನಿ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರೋದು: ಸಿಎಂ

    ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ದೋಷಾರೋಪ ಪಟ್ಟಿ ಬಿಡುಗಡೆ ಮಾಡಿದೆ. ಕೈ ಬಿಟ್ಟ ಯೋಜನೆಗಳು, ಕೈ ಕೊಟ್ಟ ಕಾಂಗ್ರೆಸ್ ಸರ್ಕಾರ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಓಲೈಕೆ ರಾಜಕಾರಣ ಎಂಬ ಶೀರ್ಷಿಕೆ ಅಡಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ. ಅಪರಾಧಿಗಳ ಧರ್ಮ ಹುಡುಕುವ ಕಾಂಗ್ರೆಸ್ ನ ಹಳೆಯ ಚಾಳಿ. ಭಯೋತ್ಪಾದನೆಗೆ ಕುಮ್ಮಕ್ಕು, ಬ್ರಾಂಡ್ ಬೆಂಗಳೂರು ಈಗ ಕ್ರೈಂ ಬೆಂಗಳೂರು. 50 ಪಸೆರ್ಂಟ್ ಸರ್ಕಾರ, ರೈತನ ಬೆನ್ನಿಗೆ ಬರ. ಹೆಚ್ಚಾದ ಮಹಿಳೆಯರ ಮೇಲಿನ ದೌರ್ಜನ್ಯ. ಬಹುಸಂಖ್ಯಾತರಿಗೆ ಇಲ್ಲದ ನೀತಿ. ಎಸ್ಸಿ ಎಸ್‍ಟಿ ಸಮುದಾಯಕ್ಕೆ ಅನ್ಯಾಯ, ಬಿಜೆಪಿ ಸರ್ಕಾರದ ಜನಪರ ಯೋಜನೆಗಳಿಗೆ ತಿಲಾಂಜಲಿ ಇಟ್ಟ ಕಾಂಗ್ರೆಸ್ ಸರ್ಕಾರ. ಗ್ಯಾರಂಟಿಗಳ ಮೂಲಕ ಕೊಟ್ಟು ಬೆಲೆ ಏರಿಕೆ ಮೂಲಕ ಕಿತ್ತುಕೊಂಡ ಕಾಂಗ್ರೆಸ್ ಸರ್ಕಾರ ಎಂದು ಹಲವು ದೋಷಾರೋಪಣೆ ಪಟ್ಟಿ ಮಾಡಿದೆ ಬಿಜೆಪಿ. ಬಿಜೆಪಿ- ಜೆಡಿಎಸ್ ಪಕ್ಷ ಗಳ ಚಿಹ್ನೆ ಹಾಗೂ ದೋಸ್ತಿ ನಾಯಕರು ಇರುವ ಫೆÇೀಟೋದ ಜೊತೆ ಕಾಂಗ್ರೆಸ್ ಧಿಕ್ಕರಿಸಿ, ಎನ್ ಡಿಎ ಬೆಂಬಲಿಸಿ, ಮತ್ತೊಮ್ಮೆ ಮೋದಿ ಸರ್ಕಾರ ಎಂಬ ಘೋಷಣೆ ಮಾಡಿದೆ.

  • ಕ್ರಿಕೆಟಿಗ ಡೇವಿಡ್ ವಾರ್ನರ್ ನಟನೆ ಕಂಡು ತಲೆ ಚೆಚ್ಚಿಕೊಂಡ ರಾಜಮೌಳಿ

    ಕ್ರಿಕೆಟಿಗ ಡೇವಿಡ್ ವಾರ್ನರ್ ನಟನೆ ಕಂಡು ತಲೆ ಚೆಚ್ಚಿಕೊಂಡ ರಾಜಮೌಳಿ

    ಸ್ಟ್ರೇಲಿಯಾದ ಕ್ರಿಕೆಟ್ ತಾರೆ ಡೇವಿಡ್ ವಾರ್ನರ್ ಗೆ ಆಕ್ಷನ್ ಕಟ್ ಹೇಳಿದ್ದಾರೆ ರಾಜಮೌಳಿ (Rajamouli). ಡೇವಿಡ್ ನಟನೆ ಕಂಡು ತಲೆ ಚಚ್ಚಿಕೊಂಡಿದ್ದಾರೆ. ಹಾಗಂತ ಇದು ಸಿನಿಮಾವಲ್ಲ, ಜಾಹೀರಾತು (Advertisement). ಆ ಜಾಹೀರಾತಿನಲ್ಲಿ ರಾಜಮೌಳಿ ನಿರ್ದೇಶಕನಾಗಿ ನಟಿಸಿದ್ದರೆ, ವಾರ್ನರ್ (David Warner) ರಾಜಮೌಳಿ ಚಿತ್ರದ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ.

    ಆಪ್ ಒಂದರ ಜಾಹೀರಾತು ಇದಾಗಿದ್ದು, ಡೇವಿಡ್ ಗೆ ಕಾಲ್ ಮಾಡುವ ರಾಜಮೌಳಿ, ನಿಮ್ಮ ಕ್ರಿಕೆಟ್ ಪಂದ್ಯದ ಟಿಕೆಟ್ ಅನ್ನು ರಿಯಾಯತಿ ದರದಲ್ಲಿ ಕೊಡಬಹುದೆ ಎಂದು ಕೇಳ್ತಾರೆ. ಕ್ರೆಡಿಟ್ ಯುಪಿಐ ಆಗಿದ್ದರೆ ಕ್ಯಾಶ್ ಬ್ಯಾಕ್ ಬರುತ್ತದೆ ಎನ್ನುತ್ತಾರೆ ಡೇವಿಡ್. ಸಾಮಾನ್ಯ ಯುಪಿಐ ಇದ್ದರೆ? ಎಂದು ಮರು ಪ್ರಶ್ನೆ ಮಾಡುತ್ತಾರೆ ರಾಜಮೌಳಿ. ನಿಮಗೆ ರಿಯಾಯಲಿ ಬೇಕು ಅಂದರೆ, ನನಗೊಂದು ಅವಕಾಶ ಕೊಡಿ ನಿಮ್ಮ ಸಿನಿಮಾದಲ್ಲಿ ಎನ್ನುವ ಡೇವಿಡ್. ತಮ್ಮ ಸಿನಿಮಾದಲ್ಲಿ ಡೆವಿಡ್ ಇದ್ದರೆ ಹೇಗೆಲ್ಲ ನಟಿಸಬಹುದು ಎಂದು ಅಂದಾಜಿಸಿಕೊಂಡು ರಿಯಾಯತಿಯೇ ಬೇಡವೆಂದು ಬೆಚ್ಚಿ ಬೀಳ್ತಾರೆ ರಾಜಮೌಳಿ.

     

    ಈ ಜಾಹೀರಾತು ಮಜವಾಗಿದೆ. ತಮಾಷೆ ತಮಾಷೆಯಾಗಿ ಇಬ್ಬರೂ ಲವಲವಿಕೆಯಿಂದ ನಟಿಸಿದ್ದಾರೆ. ಅದರಲ್ಲೂ ಡೇವಿಡ್ ನಟನೆ ಸಖತ್ ಇಷ್ಟವಾಗುತ್ತಿದೆ. ಇಬ್ಬರು ದಿಗ್ಗಜರನ್ನು ಬಳಸಿಕೊಂಡು ಆ ಆಪ್ ಜಾಹೀರಾತು ನಿರ್ಮಾಣವಾಗಿದೆ.

  • ದೆಹಲಿ ಪ್ರತಿಭಟನೆ ಬಗ್ಗೆ ಕಾಂಗ್ರೆಸ್ ಜಾಹೀರಾತು – ರಾಜ್ಯ ಸರ್ಕಾರದ ವಿರುದ್ಧ ರಾಜಭವನಕ್ಕೆ ಬಿಜೆಪಿ ದೂರು

    ದೆಹಲಿ ಪ್ರತಿಭಟನೆ ಬಗ್ಗೆ ಕಾಂಗ್ರೆಸ್ ಜಾಹೀರಾತು – ರಾಜ್ಯ ಸರ್ಕಾರದ ವಿರುದ್ಧ ರಾಜಭವನಕ್ಕೆ ಬಿಜೆಪಿ ದೂರು

    ಬೆಂಗಳೂರು: ಬಿಜೆಪಿ (BJP) ನಿಯೋಗವು ಇಂದು (ಫೆ.06) ರಾಜಭವನಕ್ಕೆ (Raj Bhavan) ಭೇಟಿ ನೀಡಿ ರಾಜ್ಯ ಸರ್ಕಾರದ ವಿರುದ್ಧ ದೂರು (Complaint) ಸಲ್ಲಿಸಿತು. ದಿನಪತ್ರಿಕೆಗಳಲ್ಲಿ ಜಾಹೀರಾತು (Advertisement) ನೀಡಲು ರಾಜ್ಯದ ಜನರ ತೆರಿಗೆ ಹಣವನ್ನು ಬಳಸಿದ ಕುರಿತು ಆಕ್ಷೇಪಿಸುವ ಮನವಿಯನ್ನು ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ (Governer) ಸಲ್ಲಿಸಲಾಯಿತು.

    ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಹರತಾಳು ಹಾಲಪ್ಪ, ಮುಖಂಡ ಭಾಸ್ಕರ ರಾವ್, ವಕೀಲರ ಸಂಘದ ಅಧ್ಯಕ್ಷ ವಿವೇಕ ರೆಡ್ಡಿ ಅವರ ನಿಯೋಗವು ಈ ಮನವಿ ಸಲ್ಲಿಸಿತು. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ರೀತಿಯ ಮತ್ತು ಈ ಮೂಲಕ ಸಂವಿಧಾನಕ್ಕೆ ಅಗೌರವ ತರುವ ಕೆಲಸವನ್ನು ಈ ಜಾಹೀರಾತಿನ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಮನವಿ ಗಮನ ಸೆಳೆದಿದೆ. ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಶೀರ್ಷಿಕೆಯ ಈ ಜಾಹೀರಾತಿನ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಚಲೋ ನಡೆಸಲು ಕರೆ ನೀಡಿದ್ದು ಆಘಾತಕರ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಕೇಂದ್ರವನ್ನು ರಾಜ್ಯ ಸರ್ಕಾರದವರು ದೂರುವುದು ಸರಿಯಲ್ಲ, ಅಗತ್ಯವಿದ್ದಾಗಲೆಲ್ಲ ನೆರವು ನೀಡಿದೆ: ಪ್ರಜ್ವಲ್ ರೇವಣ್ಣ

    ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುವ ಅಂಕಿ ಅಂಶಗಳನ್ನು ಈ ಜಾಹೀರಾತು ಒಳಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡಲು ಈ ಜಾಹೀರಾತು ಕೊಟ್ಟಿದ್ದಾರೆ. ಇದರ ವಿರುದ್ಧ ಬಿಜೆಪಿ ಆಕ್ಷೇಪ ವ್ಯಕ್ತಪಡಿಸುವುದಾಗಿ ಮನವಿಯಲ್ಲಿ ಹೇಳಿದೆ. ಇದನ್ನೂ ಓದಿ: ನಮ್ಮ ಹಕ್ಕು ಕೇಳಲು ದೆಹಲಿಯಲ್ಲಿ ಪ್ರತಿಭಟನೆ: ಸತೀಶ್ ಜಾರಕಿಹೊಳಿ

    ಕೇಂದ್ರ ಸರ್ಕಾರದ ವಿರುದ್ಧ ರ‍್ಯಾಲಿ ಅಥವಾ ಪ್ರತಿಭಟನೆ ನಡೆಸುವ ಕುರಿತು ತಿಳಿಸಲು ಈ ಜಾಹೀರಾತು ನೀಡಿದ್ದು, ಇದು ಖಜಾನೆಯ ಹಣದ ದುರ್ಬಳಕೆ ಮತ್ತು ಮೋಸಗಾರಿಕೆ ಎಂದು ಆಕ್ಷೇಪ ವ್ಯಕ್ತಪಡಿಸಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಜಾಹೀರಾತಿನ ಮೂಲಕ ಸಾಂವಿಧಾನಿಕ ಬಿಕ್ಕಟ್ಟು ಉದ್ಭವಿಸಿದ್ದು, ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ. ರಾಜ್ಯದ ವಾರ್ತಾ ಮತ್ತು ಪ್ರಚಾರ ಇಲಾಖೆ ಕಮಿಷನರ್ ಅವರಿಗೆ ಇಂಥ ಜಾಹೀರಾತು ನೀಡುವುದನ್ನು ನಿಲ್ಲಿಸುವಂತೆ ನಿರ್ದೇಶನ ನೀಡಬೇಕೆಂದು ಕೂಡ ಮನವಿ ಕೋರಿದೆ. ಇದನ್ನೂ ಓದಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಆಭ್ಯರ್ಥಿಯಾಗಿ ಸ್ಪರ್ಧಿಸಲು ವಿಶ್ವನಾಥ್ ಸಿದ್ಧತೆ

  • ಇಂಡೋ-ಪಾಕ್‌ ಕದನ: 10 ಸೆಕೆಂಡ್‌ ಜಾಹೀರಾತಿನ ಬೆಲೆ ಕೇಳಿದ್ರೆ ಎದೆ ಬಡಿತ ಹೆಚ್ಚಿಸುತ್ತೆ..!

    ಇಂಡೋ-ಪಾಕ್‌ ಕದನ: 10 ಸೆಕೆಂಡ್‌ ಜಾಹೀರಾತಿನ ಬೆಲೆ ಕೇಳಿದ್ರೆ ಎದೆ ಬಡಿತ ಹೆಚ್ಚಿಸುತ್ತೆ..!

    ಅಹಮದಾಬಾದ್‌: ಏಕದಿನ ವಿಶ್ವಕಪ್‌ (ICC World Cup) ಟೂರ್ನಿಯಲ್ಲಿ ಅಕ್ಟೋಬರ್‌ 14ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಆದ್ರೆ ಪಂದ್ಯದ ನಡುವೆ ಮಾಧ್ಯಮಗಳಲ್ಲಿ ಪ್ರಸಾರಗೊಳ್ಳುವ ಜಾಹೀರಾತಿನ (Advertisement) ಮೌಲ್ಯ ಕೇಳಿದ್ರೆ ನಿಜಕ್ಕೂ ಎದೆ ಬಡಿತ ಹೆಚ್ಚಿಸುತ್ತೆ. ಏಕೆಂದರೆ ಪ್ರತಿ 10 ಸೆಕೆಂಡ್‌ ಜಾಹೀರಾತಿಗೆ ಬರೋಬ್ಬರಿ 25 ರಿಂದ 30 ಲಕ್ಷ ರೂ. ನಿಗದಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಟಿ20 ವಿಶ್ವಕಪ್‌ ಟೂರ್ನಿ ಬಳಿಕ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ (Disney Hot Star) ಸಂಸ್ಥೆಯ ಪ್ರಸಾರ ಒಪ್ಪಂದ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಡಿಸ್ನಿ ಸ್ಟಾರ್‌ ಈ ಪಂದ್ಯದ ಸಂಪೂರ್ಣ ಲಾಭ ಪಡೆಯುವ ನಿರೀಕ್ಷೆಯಲ್ಲಿದೆ. ಪಂದ್ಯದ ವೇಳೆ ಪ್ರಸಾರಗೊಳ್ಳುವ ಪ್ರತಿ 10 ಸೆಕೆಂಡ್ ಜಾಹೀರಾತಿಗೆ ಬರೋಬ್ಬರಿ 25 ರಿಂದ 30 ಲಕ್ಷ ರೂ. ನಿಗದಿಪಡಿಸಲಾಗಿದೆ. ಭಾರತದ ಇತರ ಪಂದ್ಯಗಳ ವೇಳೆ 10 ಸೆಕೆಂಡ್‌ ಜಾಹೀರಾತಿನ ಸ್ಲಾಟ್‌ಗೆ ಅಂದಾಜು 10 ಲಕ್ಷ ರೂ. ನಿಗದಿ ಮಾಡಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ದುಷ್ಮನ್‌ ಅಲ್ಲ ದೋಸ್ತಿ – ಕೊಹ್ಲಿಯನ್ನು ಹಾಡಿ ಹೊಗಳಿದ ಗಂಭೀರ್‌, ಫ್ಯಾನ್ಸ್‌ ವಿರುದ್ಧ ಮತ್ತೆ ಗರಂ

    ಆರಂಭದಲ್ಲಿ ಉಭಯ ತಂಡಗಳ ಈ ಪಂದ್ಯದ ವೇಳೆ ಪ್ರತಿ 10 ಸೆಕೆಂಡ್ ಜಾಹೀರಾತಿಗೆ 17 ರಿಂದ 18 ಲಕ್ಷ ರೂ. ಮೊತ್ತ ನಿಗದಿ ಪಡಿಸಲಾಗಿತ್ತು. ಆದ್ರೆ ಬೇಡಿಕೆ ಹೆಚ್ಚಾಗಿದ್ದರಿಂದ ಸಂಸ್ಥೆ ಇದರ ಲಾಭ ಪಡೆಯಲು ಉದ್ದೇಶಿಸಿದ್ದು, ಜಾಹೀರಾತಿನ ಮೌಲ್ಯವನ್ನು 25 ರಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ. ಏಷ್ಯಾಕಪ್‌ ಟೂರ್ನಿ ವೇಳೆಯೂ ಜಿಯೋ ಆಪ್‌ ಇಷ್ಟೇ ಪ್ರಮಾಣದ ದರವನ್ನು ನಿಗದಿ ಮಾಡಿತ್ತು. ಇದನ್ನೂ ಓದಿ: ಭಾರತ, ಹಿಂದೂ ಧರ್ಮ ಅವಹೇಳನ – ಗಡಿಪಾರಾದ ಬಳಿಕ ಕ್ಷಮೆ ಕೇಳಿದ ಪಾಕ್‌ ನಿರೂಪಕಿ

    ಈಗಾಗಲೇ ಈ ಪಂದ್ಯವನ್ನು ಕಣ್ತುಂಬಿಕೊಳ್ಳುವ ನಿಟ್ಟಿನಲ್ಲಿ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ. ಅಹಮದಾಬಾದ್​ನ ಬಹುತೇಕ ಹೋಟೆಲ್​ಗಳು ಬುಕ್​ ಆಗಿವೆ. ಕೆಲವು ಹೋಟೆಲ್‌ಗಳು 2 ದಿನಕ್ಕೆ ಸುಮಾರು 1 ಲಕ್ಷ ರೂ.ವರೆಗೂ ವಿಧಿಸಿತ್ತು. ಆದರೂ ಬಹುತೇಕ ಹೋಟೆಲ್‌ಗಳು ಈಗಾಗಲೇ ಹೌಸ್‌ಫುಲ್‌ ಆಗಿದೆ. ಸಾಮಾನ್ಯ ದಿನಗಳಲ್ಲಿ ನಗರದ ಐಷಾರಾಮಿ ಹೋಟೆಲ್‌ಗಳ ದರ ಪ್ರತಿದಿನಕ್ಕೆ 5 ರಿಂದ 8 ಸಾವಿರ ಇರುತ್ತದೆ. ಆದರೆ ಭಾರತ ಮತ್ತು ಪಾಕ್​ ಪಂದ್ಯ ನಡೆಯುವ ದಿನದಂದು ದರ 40,000 ರೂ.ಗೆ ಜಿಗಿದಿದೆ. ಕಡಿಮೆ ಖರ್ಚಿನ ಹೋಟೆಲ್‌ಗಳೂ ಲಭ್ಯವಿದ್ದು, ಅಭಿಮಾನಿಗಳು ದಾಂಗುಡಿಯಿಡುತ್ತಿದ್ದಾರೆ.

    ಈ ಮೊದಲು ಇಂಡೋ ಪಾಕ್‌ ಕದನ ಅಕ್ಟೋಬರ್‌ 15 ರಂದು ನಿಗದಿಯಾಗಿತ್ತು. ಆದ್ರೆ ಅಂದು ನವರಾತ್ರಿ ಉತ್ಸವ ಆರಂಭದ ದಿನವಾದ್ದರಿಂದ ಭದ್ರತಾ ಸಮಸ್ಯೆ ಎದುರಾಗಬಹುದು ಎಂದು ಭದ್ರತಾ ಏಜೆನ್ಸಿಗಳು ಸಲಹೆ ನೀಡಿತ್ತು. ಈ ಕಾರಣದಿಂದ ಪಂದ್ಯದ ದಿನಾಂಕವನ್ನು ಬದಲಿಸಿ ಅಕ್ಟೋಬರ್​ 14ಕ್ಕೆ ನಿಗದಿ ಮಾಡಲಾಗಿದೆ. ಇದನ್ನೂ ಓದಿ: World Cup 2023: ಗುಡ್‌ನ್ಯೂಸ್‌ – ಪಾಕ್‌ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಸೇರಲಿದ್ದಾರೆ ಗಿಲ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]