Tag: advertisement

  • ಯೋಗಿ ಆದಿತ್ಯನಾಥ್‌ ಸರ್ಕಾರ ಜಾಹೀರಾತಿಗೆ ವಾರ್ಷಿಕ 2,000 ಕೋಟಿ ಖರ್ಚು ಮಾಡ್ತಿದೆ: ಎಎಪಿ

    ಯೋಗಿ ಆದಿತ್ಯನಾಥ್‌ ಸರ್ಕಾರ ಜಾಹೀರಾತಿಗೆ ವಾರ್ಷಿಕ 2,000 ಕೋಟಿ ಖರ್ಚು ಮಾಡ್ತಿದೆ: ಎಎಪಿ

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜಾಹೀರಾತುಗಳಿಗೆ ಅನವಶ್ಯಕವಾಗಿ ಕೋಟ್ಯಂತರ ವೆಚ್ಚ ಮಾಡುತ್ತಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಟೀಕೆಗೆ ಆಮ್‌ ಆದ್ಮಿ ಪಕ್ಷ (ಎಎಪಿ) ತಿರುಗೇಟು ನೀಡಿದೆ.

    ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಎಪಿ, ದೆಹಲಿ ಸರ್ಕಾರ ವಾರ್ಷಿಕವಾಗಿ ಜಾಹೀರಾತಿಗೆ 70 ಕೋಟಿ ರೂ. ಮಾತ್ರ ವೆಚ್ಚ ಮಾಡಿದೆ. ಆದರೆ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರ್ಕಾರ ವಾರ್ಷಿಕವಾಗಿ ಜಾಹೀರಾತಿಗೆ 2,000 ಕೋಟಿ ರೂ. ವಿನಿಯೋಗಿಸಿದೆ ಎಂದು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಬಿಜೆಪಿಯಿಂದ ದೆಹಲಿಯಲ್ಲಿ ಮೂಲಸೌಕರ್ಯ ಸುಧಾರಿಸಿದೆ: ಅಮಿತ್ ಶಾ

    ಬಿಜೆಪಿ ನೇತೃತ್ವದ ದೆಹಲಿ ನಗರಪಾಲಿಕೆಯು ವಿಶ್ವದಲ್ಲೇ ಅತ್ಯಂತ ಭ್ರಷ್ಟ ಪಾಲಿಕೆಯಾಗಿದೆ. ಭ್ರಷ್ಟಾಚಾರದ ಹಣವೆಲ್ಲ ಬಿಜೆಪಿ ನಾಯಕರ ಜೇಬು ಸೇರುತ್ತಿದೆ. ಜಾಹೀರಾತುಗಳಿಗೆ ಹಣ ವ್ಯಯಿಸುತ್ತಿರುವ ಬಿಜೆಪಿ ನಾಯಕರ ಜಾಹೀರಾತುಗಳೇ ದೆಹಲಿಯಾದ್ಯಂತ ತುಂಬಿವೆ ಎಂದು ಎಎಪಿ ಆರೋಪಿಸಿದೆ.

    ದೆಹಲಿಯ ಪತ್ರಿಕೆಗಳಲ್ಲಿ ನಿತ್ಯ ಯೋಗಿ ಜಿ ಮತ್ತು ಮೋದಿ ಜಿ ಅವರ ಜಾಹೀರಾತುಗಳೇ ಇರುತ್ತವೆ. ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಸರ್ಕಾರಕ್ಕೆ ಸಂಬಂಧಿಸಿದ 108 ಜಾಹೀರಾತು ಫಲಕಗಳಿವೆಯಷ್ಟೆ. ಆದರೆ ಮೋದಿ ಜಿ ಮತ್ತು ಯೋಗಿ ಜಿ ಅವರಿಗೆ ಸಂಬಂಧಿಸಿದಂತೆ 850 ಜಾಹೀರಾತು ಫಲಕಗಳಿವೆ. ಯೋಗಿ ಆದಿತ್ಯನಾಥ್‌ ಅವರು ಉತ್ತರ ಪ್ರದೇಶದ ಸಿಎಂ. ಆದರೆ ದೆಹಲಿಯಲ್ಲಿ ಯಾಕೆ ಜಾಹೀರಾತುಗಳನ್ನು ನೀಡುತ್ತಾರೆ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ನನ್ನ ಸಲಹೆಯನ್ನು ಒಪ್ಪಿಕೊಂಡಿದೆ: ರಾಹುಲ್ ಗಾಂಧಿ

    ಸಣ್ಣ ಪುಟ್ಟ ಕೆಲಸಗಳಿಗೂ ಬಿಜೆಪಿ ಸರ್ಕಾರ ದೊಡ್ಡ ಪ್ರಚಾರವನ್ನು ಪಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ ಎಎಪಿ ಹರಿಹಾಯ್ದಿದೆ.

  • ಭಾರತ Vs ಪಾಕಿಸ್ತಾನ ಮ್ಯಾಚ್ – 10 ಸೆಕೆಂಡ್ ಜಾಹೀರಾತಿಗೆ ಲಕ್ಷ ಲಕ್ಷ ರೇಟ್

    ಭಾರತ Vs ಪಾಕಿಸ್ತಾನ ಮ್ಯಾಚ್ – 10 ಸೆಕೆಂಡ್ ಜಾಹೀರಾತಿಗೆ ಲಕ್ಷ ಲಕ್ಷ ರೇಟ್

    ದುಬೈ: ಭಾರತ ಹಾಗೂ ಪಾಕಿಸ್ತಾನ ನಡುವಿನ ರಣರೋಚಕ ಪಂದ್ಯಾಟಕ್ಕೆ ವಿಶ್ವಕಪ್ ವೇದಿಕೆಯಾಗಿ ಸಜ್ಜಾಗುತ್ತಿದೆ. ಈ ನಡುವೆ ಈ ಪಂದ್ಯದ ನೇರ ಪ್ರಸಾರ ಮಾಡುತ್ತಿರುವ ಖಾಸಗಿ ವಾಹಿನಿ ಜಾಹೀರಾತಿನಲ್ಲಿ ಹಣದ ಹೊಳೆ ನಿರೀಕ್ಷಿಸಿದೆ. ಪಂದ್ಯ ನಡೆಯುತ್ತಿರುವಾಗ 10 ಸೆಕೆಂಡ್‍ನ ಜಾಹೀರಾತು ದರ ಬರೋಬ್ಬರಿ 30 ಲಕ್ಷ ರೂ.ಗೆ ಮಾರಾಟವಾಗಿದೆ ಎಂದು ವರದಿಯಾಗಿದೆ.

    ಬದ್ಧವೈರಿಗಳ ಕಾದಾಟ ನೋಡಲು ಕ್ರಿಕೆಟ್ ಅಭಿಮಾನಿಗಳು ಹಾತೊರೆಯುತ್ತಿದ್ದಾರೆ. ಪಂದ್ಯವನ್ನು ಮೈದಾನಕ್ಕೆ ತೆರಳಿ ನೋಡಲು ಆಗದೆ ಇದ್ದವರು, ಟಿವಿ ಮುಂದೆ ಕೂತು ಮಿಸ್ ಮಾಡದೆ ನೋಡುತ್ತಾರೆ. ಹಾಗಾಗಿ ಈ ಪಂದ್ಯವನ್ನು ಪ್ರಸಾರ ಮಾಡುವ ಖಾಸಗಿ, ವಾಹಿನಿ ಪಂದ್ಯದ ವೇಳೆ ಪ್ರಸಾರ ವಾಗುವ ಜಾಹೀರಾತುಗಳನ್ನು ಪ್ರತಿ 10 ಸೆಕೆಂಡ್‍ಗೆ 25 ರಿಂದ 30 ಲಕ್ಷ ರೂ.ಗೆ ಮಾರಾಟ ಮಾಡುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದು ಭಾರತದ ವಾಹಿನಿಯೊಂದು ಅತಿಹೆಚ್ಚು ಮೊತ್ತಕ್ಕೆ ಜಾಹೀರಾತು ಮಾರಾಟ ಮಾಡಿ ದಾಖಲೆ ಬರೆಯುವ ಸನಿಹದಲ್ಲಿದೆ. ಇದನ್ನೂ ಓದಿ: T20 ಕ್ರಿಕೆಟ್‍ನಲ್ಲಿ ಭಾರತ vs ಪಾಕಿಸ್ತಾನ ನಡುವೆ ಯಾರು ಬೆಸ್ಟ್?

    ಖಾಸಗಿ ವಾಹಿನಿ ಪ್ರಮುಖವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವಲ್ಲದೆ ಭಾರತ ಆಡಲಿರುವ ಎಲ್ಲಾ ಪಂದ್ಯಗಳ 10 ಸೆಕೆಂಡ್ ಜಾಹೀರಾತಿಗೆ 9 ರಿಂದ 10 ಲಕ್ಷ ರೂ. ನಿಗದಿ ಮಾಡಿದ್ದು, ಈಗಾಗಲೇ ಜಾಹೀರಾತು ಸ್ಲಾಟ್ ಕೂಡ ಮಾರಾಟವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಜಾಹೀರಾತಿನಿಂದ 270 ಕೋಟಿಗೂ ರೂ. ಹೆಚ್ಚು ಆದಾಯದ ನಿರೀಕ್ಷೆ ಇದೆ. ವಿಶ್ವಕಪ್ ಪಂದ್ಯದ ಇತರ ಪಂದ್ಯಗಳಿಂತ ಭಾರತ ವಿರುದ್ಧ ನಡೆಯಲಿರುವ ಪಂದ್ಯಗಳಿಗೆ ಬೇಡಿಕೆ ಹೆಚ್ಚಿದೆ. ಇದನ್ನೂ ಓದಿ: ಮೊದಲ ಟಿ20 ವಿಶ್ವಕಪ್ ಬಾಲ್‍ಔಟ್ ಮೂಲಕ ಪಾಕ್‍ಗೆ ಶಾಕ್ ಕೊಟ್ಟ ಭಾರತ

    ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಪ್ರತಿ ಬಾರಿ ವೀಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುತ್ತಾರೆ. ಈ ಬಾರಿ ವೀಕ್ಷಕರ ಸಂಖ್ಯೆ ಕೂಡ ಏರಿಕೆ ಯಾಗುವ ಸಾಧ್ಯತೆ ಇದ್ದು, ಪ್ರಮುಖವಾಗಿ ಯುವ ಜನರು ಟಿವಿ ಜೊತೆಗೆ ಆನ್‍ಲೈನ್ ವೇದಿಕೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಡುವ ಸಾಧ್ಯತೆ ಇದೆ.

  • ಒಳ ಉಡುಪು ಜಾಹೀರಾತಿನಲ್ಲಿ ಅಭಿನಯ – ಟ್ರೋಲ್ ಕೆಂಗಣ್ಣಿಗೆ ಗುರಿಯಾದ ರಶ್ಮಿಕಾ ಮಂದಣ್ಣ

    ಒಳ ಉಡುಪು ಜಾಹೀರಾತಿನಲ್ಲಿ ಅಭಿನಯ – ಟ್ರೋಲ್ ಕೆಂಗಣ್ಣಿಗೆ ಗುರಿಯಾದ ರಶ್ಮಿಕಾ ಮಂದಣ್ಣ

    ಮುಂಬೈ: ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮತ್ತೆ ಟ್ರೋಲ್ ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಇತ್ತೀಚೆಗೆ ರಶ್ಮಿಕಾ ಮತ್ತು ಬಾಲಿವುಡ್ ನಟ ವಿಕ್ಕಿ ಕೌಶಲ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಈ ಜಾಹೀರಾತು ಪುರುಷರ ಒಳ ಉಡುಪಿನ ಬಗ್ಗೆಯಾಗಿದ್ದು, ಅದರಲ್ಲಿ ರಶ್ಮಿಕಾ ಯೋಗ ಇನ್‍ಸ್ಟ್ರಾಕ್ಟರ್ ಆಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ವಿಕ್ಕಿ ಅವರು ಯೋಗ ಕಲಿಯುವ ವಿದ್ಯಾರ್ಥಿಯಾಗಿದ್ದು, ಅವರ ಒಳ ಉಡುಪನ್ನೆ ರಶ್ಮಿಕಾ ನೋಡುವ ಅದರತ್ತ ಆಕರ್ಷಕರಾಗುವ ರೀತಿ ವೀಡಿಯೋವನ್ನು ಚಿತ್ರೀಕರಿಸಲಾಗಿತ್ತು. ಇದನ್ನೂ ಓದಿ: 2022ರ ಪ್ರೇಮಿಗಳ ದಿನ ಬರಲಿದೆ ‘ಲಾಲ್ ಸಿಂಗ್ ಚಡ್ಡಾ’

    ಈ ಜಾಹೀರಾತಿಗೆ ರಶ್ಮಿಕಾ ಅಭಿಮಾನಿಗಳಲ್ಲೂ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಟ್ರೋಲ್ ಪೇಜ್ ಗಳು ಈ ಜಾಹೀರಾತಿನಲ್ಲಿ ರಶ್ಮಿಕಾ ಅಭಿನಯದ ಬಗ್ಗೆ ಫುಲ್ ಟ್ರೋಲ್ ಮಾಡುತ್ತಿದ್ದಾರೆ.

    ಸಖತ್ ಬ್ಯುಸಿಯಾಗಿರುವ ರಶ್ಮಿಕಾ ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯಾಗಿದ್ದಾರೆ. ಅದು ಅಲ್ಲದೇ ಇತ್ತೀಚೆಗೆ ಬಾಲಿವುಡ್ ಗೂ ಹಾರಿರುವ ಇವರು ‘ಮಿಷನ್ ಮಜ್ನು’ ಸಿನಿಮಾ ಮುಗಿಸಿ, ಬಾಲಿವುಡ್ ನ ಮತ್ತೊಂದು ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಜೊತೆಗೂ ನಟಿಸುತ್ತಿದ್ದಾರೆ. ಇದನ್ನೂ ಓದಿ: ನಾಗಚೈತನ್ಯ ‘ಲವ್ ಸ್ಟೋರಿ’ ಲೀಕ್ ಆಯ್ತು

    ರಶ್ಮಿಕಾ ಅಭಿಮಾನಿಗಳು ಮಾತ್ರ ಇವರ ನಟನೆಯ ‘ಪುಷ್ಪ’ ನೋಡಲು ಕಾಯುತ್ತಿದ್ದು, ಕೊರೊನಾ ಮತ್ತು ಚಿತ್ರಮಂದಿರಗಳ ಸಮಸ್ಯೆಯಿಂದ ಚಿತ್ರದ ರಿಲೀಸ್ ಡೇಟ್ ಮುಂದೆ ಹೋಗುತ್ತಿದೆ.

  • ಬೆಂಗ್ಳೂರಲ್ಲಿ ಮತ್ತೆ ರಾರಾಜಿಸಲಿದೆ ಜಾಹೀರಾತು ಫಲಕಗಳು- ಸರ್ಕಾರದಿಂದ ಅಧಿಸೂಚನೆ

    ಬೆಂಗ್ಳೂರಲ್ಲಿ ಮತ್ತೆ ರಾರಾಜಿಸಲಿದೆ ಜಾಹೀರಾತು ಫಲಕಗಳು- ಸರ್ಕಾರದಿಂದ ಅಧಿಸೂಚನೆ

    ಬೆಂಗಳೂರು: ಮೂರು ವರ್ಷಗಳ ಬಳಿಕ ನಗರದಲ್ಲಿ ಮತ್ತೆ ವಾಣಿಜ್ಯ ಜಾಹೀರಾತು ಪ್ರದರ್ಶನಕ್ಕೆ ಸರ್ಕಾರ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರ ಜುಲೈ 26 ರಂದು ಎಲ್ಲಾ ಬಗೆಯ ಜಾಹೀರಾತು ಹೋಡಿರ್ಂಗ್ಸ್ ಗಳ ಅಳವಡಿಕೆಗೆ ಅನುಮತಿ ನೀಡುವ ಪ್ರಸ್ತಾವನೆಗೆ ಅಂಕಿತ ಹಾಕಿದೆ.

    ಬಿಬಿಎಂಪಿ ಕಾಯಿದೆ -2020 ರನ್ನೇ ಬಳಸಿಕೊಂಡು, ಬಿಬಿಎಂಪಿ ಜಾಹೀರಾತು ನಿಯಮಗಳು-2019 ಅನ್ನು ಬದಲಾಯಿಸಿ, ಜಾಹೀರಾತು ಏಜೆನ್ಸಿಗಳ ಒತ್ತಡಕ್ಕೆ ಮಣಿದು ನಗರದಲ್ಲಿ ಮತ್ತೆ ಜಾಹೀರಾತು ಹಾವಳಿಗೆ ಅವಕಾಶ ಕಲ್ಪಿಸಿದಂತಾಗಿದೆ. ಹೊಸ ನಿಯಮದಂತೆ ಜಾಹೀರಾತು ಏಜೆನ್ಸಿಗಳು ಕಡ್ಡಾಯವಾಗಿ ಪರವಾನಗಿ ಪಡೆದು, ಮೂರು ವರ್ಷಕ್ಕೊಮ್ಮೆ ನವೀಕರಣಗೊಳಿಸಬೇಕು. ಪಾಲಿಕೆ ಮುಖ್ಯ ಆಯುಕ್ತರಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಮೂರು ವರ್ಷಗಳ ಅವಧಿಯ ಪರವಾನಗಿಗೆ 50 ಸಾವಿರ ರೂ ಶುಲ್ಕ ಪಾವತಿಸಬೇಕು. ಖಾಸಗಿ ನಿವೇಶನ, ಕಟ್ಟಡ ಅಥವಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜಾಗದಲ್ಲಿ ಜಾಹೀರಾತು ಪ್ರದರ್ಶಿಸಲು ನಿರಾಕ್ಷೇಪಣಾ ಪ್ರಮಾಣಪತ್ರ ಪಡೆಯುವುದು ಕಡ್ಡಾಯಗೊಳಿಸಲಾಗಿದೆ. ಇಲ್ಲವಾದಲ್ಲಿ ಶೇ.150 ರಷ್ಟು ಹೆಚ್ಚುವರಿ ಶುಲ್ಕ ಪಾವತಿಸಬೇಕಿದೆ ಎಂಬ ಹೊಸ ನಿಯಮವನ್ನು ಸರ್ಕಾರ ತಿಳಿಸಿದೆ.

    ಅನುಮತಿ ಪಡೆಯದೇ ಜಾಹೀರಾತು ಪ್ರದರ್ಶಿಸಿದರೆ, ನೋಟೀಸ್ ನೀಡದೆ ಪಾಲಿಕೆ ತೆರವು ಮಾಡಬಹುದಾಗಿದೆ. 100 ಚ.ಮೀ ಕಡಿಮೆ ವಿಸ್ತೀರ್ಣವಿದ್ದರೆ 5 ಸಾವಿರ, ಇದಕ್ಕಿಂತ ಹೆಚ್ಚಿನ ವಿಸ್ತೀರ್ಣಕ್ಕೆ 7 ಸಾವಿರ ರೂ. ದಂಡ ನಿಗದಿಪಡಿಸಲಾಗಿದೆ. ನಿಯಮ ಪಾಲನೆ ಮಾಡದ ಕಂಪನಿಗಳಿಗೆ ದಿನಕ್ಕೆ ಕೇವಲ ಒಂದು ಸಾವಿರದಂತೆ ದಂಡ ವಿಧಿಸಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: 21 ಸಚಿವರ ಪಟ್ಟಿಗೆ ಇನ್ನೂ ಹೈಕಮಾಂಡ್‍ನಿಂದ ಸಿಕ್ಕಿಲ್ಲ ಗ್ರೀನ್‍ಸಿಗ್ನಲ್

    ವಿಧಾನಸೌಧ ಸುತ್ತಮುತ್ತ ನಿರ್ಬಂಧ
    ಹೊಸ ನಿಯಮದಂತೆ, ಕುಮಾರಕೃಪಾ ರಸ್ತೆ, ವಿಂಡ್ಸರ್ ಮ್ಯಾನರ್-ಶಿವಾನಂದ ವೃತ್ತ, ರಾಜಭವನ ರಸ್ತೆ, ಹೈಗ್ರೌಂಡ್ಸ್ ನಿಂದ ಮಿನ್ಸ್ಕ್ ಚೌಕ, ಸ್ಯಾಂಕಿ ರಸ್ತೆ, ಹೈಗ್ರೌಂಡ್ಸ್ ನಿಂದ ವಿಂಡ್ಸರ್‍ಸಿಗ್ನಲ್, ಅಂಬೇಡ್ಕರ್ ವೀದಿ, ಕೆ.ಆರ್ ವೃತ್ತದಿಂದ ಇನ್ ಫೆಂಟ್ರಿ ರಸ್ತೆ ಜಂಕ್ಷನ್, ಅಂಚೆ ಕಚೇರಿ ರಸ್ತೆ, ಕೆ.ಆರ್ ವೃತ್ತದಿಂದ ಮೈಸೂರು ಬ್ಯಾಂಕ್ ವೃತ್ತ, ಚಾಲುಕ್ಯ ವೃತ್ತ, ಮಹಾರಾಣಿ ಕಾಲೇಜು ರಸ್ತೆ, ಕೆ.ಆರ್ ವೃತ್ತ, ಕಬ್ಬನ್ ಪಾರ್ಕ್, ಲಾಲ್ ಭಾಗ್, ನೃಪತುಂಗ ರಸ್ತೆಗಳಲ್ಲಿ ಜಾಹೀರಾತು ಪ್ರದರ್ಶನಕ್ಕೆ ನಿಷೇಧ ಹೇರಲಾಗಿದೆ. ಇದರೊಂದಿಗೆ ದೇವಾಲಯ, ಮಸೀದಿ, ಗುರುದ್ವಾರ, ಚರ್ಚ್ ಹಾಗೂ ಧಾರ್ಮಿಕ ಸ್ಥಳಗಳಿಂದ ಐವತ್ತು ಮೀಟರ್, ವ್ಯಾಪ್ತಿಯಲ್ಲಿ ಜಾಹಿರಾತು ಪ್ರದರ್ಶನ ನಿಬರ್ಂಧಿಸಲಾಗಿದೆ.

    ಮೇಲ್ಸೇತುವೆ, ರೈಲ್ವೇ ಮೇಲ್ಸೇತುವೆ, ಎಲಿವೇಟೆಡ್ ಕಾರಿಡಾರ್, ಟೆಲಿಕಾಂ ಟವರ್ ನ ಅಂಚಿನಿಂದ 3.5 ಮೀಟರ್ ಪರಿಧಿ ಹಾಗೂ ಜಲಮಂಡಳಿಯ ವಾಟರ್ ಟ್ಯಾಂಕರ್ ನಿಂದ 15 ಮೀಟರ್ ವ್ಯಾಪ್ತಿಯಲ್ಲಿ ಜಾಹಿರಾತು ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದ್ದು. ಇದರೊಂದು ಜಾಹೀರಾತು ಫಲಕಗಳ ಅಳತೆಗಳ ಬಗ್ಗೆಯೂ ನಿಯಮ ಜಾರಿ ಮಾಡಿದೆ.

  • ‘ದುಡ್ಡಿಗಾಗಿ ವಂಚನೆ’ – ಸೋನು ಸೂದ್ ವಿರುದ್ಧದ ಪೋಸ್ಟ್‌ಗೆ ಲೈಕ್ ಕೊಟ್ಟ ಕಂಗನಾ

    ‘ದುಡ್ಡಿಗಾಗಿ ವಂಚನೆ’ – ಸೋನು ಸೂದ್ ವಿರುದ್ಧದ ಪೋಸ್ಟ್‌ಗೆ ಲೈಕ್ ಕೊಟ್ಟ ಕಂಗನಾ

    ಮುಂಬೈ: ಬಾಲಿವುಡ್ ನಟ ಸೋನು ಸೂದ್ ಕೋವಿಡ್-19 ಹೆಸರಿನಲ್ಲಿ ದುಡ್ಡು ಮಾಡುತ್ತಿದ್ದಾರೆ ಎಂಬ ಸೋಶಿಯಲ್ ಮೀಡಿಯಾದ ಪೋಸ್ಟ್‌ವೊಂದಕ್ಕೆ ನಟಿ ಕಂಗನಾ ರಣಾವತ್ ಲೈಕ್ ಕೊಡುವ ಮೂಲಕರ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

    ಕಳೆದ ವರ್ಷ ಕೋವಿಡ್ ಲಾಕ್‍ಡೌನ್ ಸಮಯದಲ್ಲಿ ಅನೇಕ ಮಂದಿಗೆ ಸೆಲೆಬ್ರೆಟಿಗಳು ಸಹಾಯ ಮಾಡಿದ್ದರು. ಇವರೆಲ್ಲರ ಮಧ್ಯೆ ನಟ ಸೋನು ಸೂದ್ ಕೂಡ ಸಂಕಷ್ಟದಲ್ಲಿದ್ದ ಅನೇಕ ಜನರಿಗೆ ನೆರವು ನೀಡಿ ರೀಲ್‍ನಲ್ಲಿ ಮಾತ್ರವಲ್ಲದೇ, ರಿಯಲ್ ಲೈಫ್‍ನಲ್ಲಿಯೂ ಹೀರೋ ಆಗಿ ಮಿಂಚುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅಲ್ಲದೆ ಹಲವಾರು ಮಂದಿ ಸೋನು ಸೂದ್ ಪ್ರತಿಮೆಯನ್ನು ಸ್ಥಾಪಿಸಿ ದೇವರಂತೆ ಪೂಜೆ ಕೂಡ ಮಾಡುತ್ತಿದ್ದಾರೆ. ಆದರೆ ಈ ಎಲ್ಲದರ ಮಧ್ಯೆ ಸಹಿಸಲಾಗದ ಕೆಲವರು ಸೋನು ಸೂದ್‍ರವನ್ನು ಟ್ರೋಲ್ ಮಾಡುತ್ತಿದ್ದಾರೆ. ಅದರಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಒಬ್ಬರು. ಸದಾ ಒಂದಲ್ಲಾ ಒಂದು ಕಾಂಟ್ರವರ್ಸಿ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುವ ಕಂಗನಾ ರಣಾವತ್ ಸೋನು ಸೂದ್‍ರನ್ನು ಟೀಕೆ ಮಾಡಿದ್ದ ಪೋಸ್ಟ್‍ವೊಂದಕ್ಕೆ ಲೈಕ್ ಕೊಟ್ಟಿದ್ದಾರೆ.

    ಸದ್ಯ ಕೊರೊನಾ ತನ್ನ ಎರಡನೇ ಅಲೆ ಆರ್ಭಟ ಶುರು ಮಾಡಿದ್ದು, ಈ ಬಾರಿಯೂ ನಟ ಸೋನು ಸೂದ್ ಜನರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಲು ಮುಂದಾಗಿದ್ದಾರೆ. ಜೊತೆಗೆ ಇತ್ತೀಚಿಗೆ ಸೋನು ಸೂದ್ ಆಕ್ಸಿಜನ್ ಸಿಲಿಂಡರ್ ಜಾಹೀರಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆಕ್ಸಿಜನ್ ಬೆಲೆ 2 ಲಕ್ಷ ಎಂದು ಉಲ್ಲೇಖಿಸಲಾಗಿದೆ ಸದ್ಯ ಈ ಜಾಹಿರಾತು ಪೋಸ್ಟ್‍ಗೆ ಕೆಲವರು ಸೋನು ಸೂದ್ ದುಡ್ಡಿಗಾಗಿ ಹೀಗೆ ಮಾಡುತ್ತಿದ್ದಾರೆ. ಸೋನು ಸೂದ್ ಮೋಸಗಾರ, ವಂಚಕ ಎಂದು ಟ್ರೋಲ್ ಮಾಡುತ್ತಿದ್ದಾರೆ. ಸೋನುಸೂದ್ ಕಾರ್ಯಕ್ಕೆ ಎಲ್ಲರೂ ಶ್ಲಾಘಿಸುತ್ತಿದ್ದಾರೆ ಕಂಗನಾ ರಣಾವತ್ ಮಾತ್ರ ಲೈಕ್ ನೀಡಿದ್ದಾರೆ.

    ಈ ವಿಚಾರ ಸೋನು ಸೂದ್ ಅವರ ಅಭಿಮಾನಿಗಳಿಗೆ ಬೇಸರ ತರಿಸಿದ್ದು, ಕಳೆದ ವರ್ಷದಿಂದ ಸಂಕಷ್ಟದಲ್ಲಿರುವ ಕನರಿಗೆ ಸಹಾಯ ಮಾಡುತ್ತಿರುವ ಸೋನು ಸೂದ್‍ಗೆ ವಂಚಕ ಮೋಸಗಾರ ಎನ್ನುತ್ತಿರುವುದು ಬಗ್ಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಬೆಂಗಳೂರಲ್ಲಿ ಫ್ಲೆಕ್ಸ್‌, ಬ್ಯಾನರ್‌ಗಳಿಗೆ ಬರವಿಲ್ಲ!

    ಬೆಂಗಳೂರಲ್ಲಿ ಫ್ಲೆಕ್ಸ್‌, ಬ್ಯಾನರ್‌ಗಳಿಗೆ ಬರವಿಲ್ಲ!

    – ಸದ್ದಿಲ್ಲದೇ ಮತ್ತೆ ತಲೆಯೆತ್ತಿದೆ ಜಾಹೀರಾತು ಮಾಫಿಯಾ?

    ಬೆಂಗಳೂರು: ಕೆಲ ತಿಂಗಳಿಂದ ಸಿಲಿಕಾನ್ ಸಿಟಿ ಜನ, ಬ್ಯಾನರ್, ಫ್ಲೆಕ್ಸ್ ಕಾಟದಿಂದ ಮುಕ್ತಿ ಹೊಂದಿದ್ದರು. ಆದ್ರೆ ಈಗ ಸಿಕ್ಕ ಸಿಕ್ಕಲ್ಲಿ ಅನಧಿಕೃತ ಬ್ಯಾನರ್ ಗಳು ರಾರಾಜಿಸುತ್ತಿವೆ. ಈ ಮೂಲಕ ಮಾಫಿಯಾವೊಂದು ಸದ್ದಿಲ್ಲದೆ ತಲೆಯತ್ತಿದೆ. ಕೋರ್ಟ್ ವಿಧಿಸಿದ್ದ ನಿಯಮಗಳನ್ನು ಗಾಳಿಗೆ ತೂರಲಾಗಿದೆ. 2018ರ ಅಗಸ್ಟ್ ತಿಂಗಳಲ್ಲಿ ರಾಜ್ಯ ಹೈಕೋರ್ಟ್ ಬೆಂಗಳೂರು ನಗರದಲ್ಲಿ ಜಾಹೀರಾತು ಬ್ಯಾನ್ ಮಾಡಿ ಆದೇಶ ನೀಡಿತ್ತು. ಆದರೆ ಈಗ ದೊಡ್ಡ ಬ್ಯಾನರ್ ಫಲಕದ ಪ್ರದರ್ಶನವಾಗುತ್ತಿವೆ. ಹೆಬ್ಬಾಳ ಫ್ಲೈಓವರ್ ಮೇಲೆ 120 ಮೀಟರ್ ಜಾಗದಲ್ಲಿ ಖಾಸಗಿ ಕಂಪನಿಯ 4 ದೊಡ್ಡದಾದ ಜಾಹೀರಾತುಗಳು ರಾರಾಜಿಸುತ್ತಿವೆ. ಈ ಬಗ್ಗೆ ಪರಿಸರವಾದಿಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದು ಹೆಬ್ಬಾಳಕ್ಕೆ ಮಾತ್ರ ಸೀಮಿತವಾಗಿಲ್ಲ. ರಾಜಾಜಿನಗರ, ಮಾಗಡಿ ರೋಡ್ ಸೇರಿದಂತೆ ಎಲ್ಲೆಡೆ ಅನಧಿಕೃತ ಜಾಹೀರಾತುಗಳು ರಾರಾಜಿಸುತ್ತಿವೆ. ಈ ಬ್ಯಾನ್ ಜಾಹೀರಾತುಗಳ ವಿಚಾರವಾಗಿ ಹೈಕೋರ್ಟ್ ಪದೇ ಪದೇ ಚಾಟಿ ಬೀಸ್ತಿದ್ರು ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತು ಕೊಂಡಿಲ್ಲ.

    ಪಬ್ಲಿಕ್ ಟಿವಿ ಈ ಬಗ್ಗೆ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ಅವರಲ್ಲಿ ಸ್ಪಷ್ಟನೆ ಕೇಳಿದಾಗ, ಹೆಬ್ಬಾಳದಲ್ಲಿ ತಲೆಯೆತ್ತಿರೋ ಜಾಹೀರಾತಿಗೆ ಬಿಡಿಎ ಅನುಮತಿ ನೀಡಿದೆಯಂತೆ. 30 ವರ್ಷಕ್ಕೆ ಅನುಮತಿ ನೀಡಿದ್ದು, ಕೆಎಂಸಿ ಆಕ್ಟ್ ಹಾಗೂ ಜಾಹೀರಾತು ಬೈಲಾ ಉಲ್ಲಂಘನೆಯಾದ್ರೆ ಫ್ಲೆಕ್ಸ್ ಸಂಬಂಧ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳಿಗೆ ಬ್ರೇಕ್ ಹಾಕಿ, ಬೆಂಗಳೂರಿನ ಅಂದವನ್ನು ಕಾಪಾಡೋ ಜವಬ್ದಾರಿ ಬಿಬಿಎಂಪಿ ಮೇಲಿದೆ ಎನ್ನುವುದಂತೂ ಸುಳ್ಳಲ್ಲ.

  • ಕ್ರೆಡಿಟ್ ಪಾಲಿಟಿಕ್ಸ್- ಜೆಡಿಎಸ್ ವಿರುದ್ಧ ‘ಕೈ’ ಗರಂ

    ಕ್ರೆಡಿಟ್ ಪಾಲಿಟಿಕ್ಸ್- ಜೆಡಿಎಸ್ ವಿರುದ್ಧ ‘ಕೈ’ ಗರಂ

    ಬೆಂಗಳೂರು: ದೋಸ್ತಿ ಸರ್ಕಾರದಲ್ಲಿ ಕೈಗೊಂಡ ಕರ್ನಾಟಕ ಋಣ ಪರಿಹಾರ ಕಾಯ್ದೆ 2018ರ ನಿರ್ಧಾರ ಬರೀ ಜೆಡಿಎಸ್‍ಗೆ ಸೇರಬೇಕಾ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿದೆ.

    14 ತಿಂಗಳು ಆಡಳಿತ ನಡೆಸಿದರೂ ಕಾಂಗ್ರೆಸ್ಸಿಗೆ ಯಾವುದೇ ಕ್ರೆಡಿಟ್ ಸೇರಲ್ವಾ? ಸರ್ಕಾರ ಬಿದ್ದ ನಾಲ್ಕೇ ದಿನಕ್ಕೆ ಕಾಂಗ್ರೆಸ್ಸನ್ನು ಜೆಡಿಎಸ್ ಮರೆತು ಬಿಟ್ಟಿತಾ ಎಂಬ ಪ್ರಶ್ನೆಗಳು ಎದ್ದಿವೆ. ಇಂತಹ ಪ್ರಶ್ನೆಗಳಿ ಎದ್ದೇಳಲು ಮುಖ್ಯ ಕಾರಣ ಇಂದಿನ ದಿನ ಪತ್ರಿಕೆಯಲ್ಲಿ ಕಡುಬಡವರಿಗೆ ಜಾರಿಗೆ ತಂದ ಋಣಮುಕ್ತ ಕಾಯ್ದೆಯ ಜಾಹೀರಾತು.

    ಋಣಮುಕ್ತ ಕಾಯ್ದೆಯ ಜಾಹೀರಾತಿನಲ್ಲಿ ಗಾಂಧೀಜಿ, ಜೆಡಿಎಸ್ ಪಕ್ಷದ ಚಿಹ್ನೆ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಫೋಟೋ ಮಾತ್ರ ಹಾಕಲಾಗಿದೆ. ಎಲ್ಲಿಯೂ ಮೈತ್ರಿ ಪಕ್ಷ ಕಾಂಗ್ರೆಸ್‍ನ ಚಿಹ್ನೆ, ನಾಯಕರ ಹೆಸರನ್ನು ಜಾಹೀರಾತಿನಲ್ಲಿ ಪ್ರಸ್ತಾಪಿಸಿಲ್ಲ. ಹೀಗಾಗಿ ಕಾಂಗ್ರೆಸ್ ವಲಯದಲ್ಲಿ ಜೆಡಿಎಸ್ ಹಾಗೂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಎದ್ದಿದೆ.

    ಋಣಮುಕ್ತ ಕಾಯ್ದೆಯ ನಿರ್ಧಾರವು ಏಕಪಕ್ಷೀಯ ಎಂಬಂತೆ ಬಿಂಬಿಸಿರುವುದು ಖಂಡನೀಯ. ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರ ಪಾತ್ರವನ್ನೇ ಮರೆತಿದ್ದಾರೆ. ಮೈತ್ರಿ ಸರ್ಕಾರದ ನಿರ್ಧಾರವನ್ನು ಕೇವಲ ಜೆಡಿಎಸ್‍ಗೆ ಸೇರಿದ್ದು ಎಂಬಂತೆ ಜಾಹೀರಾತಿನಲ್ಲಿ ಬಿಂಬಿಸಿದ್ದು ತಪ್ಪು ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರು, ಹೀಗೆ ಮಾಡಿದ್ದರೆ ಅದು ತಪ್ಪಾಗುತ್ತದೆ. ಋಣ ಮುಕ್ತ ಕಾನೂನನ್ನು ನಾವು ಸ್ವಾಗತಿಸುತ್ತೇವೆ. ಆದರೆ ಆ ಜಾಹೀರಾತಿನಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಬಿಟ್ಟಿದ್ದು ಸರಿಯಲ್ಲ ಎಂದು ಹೇಳಿದರು.

    ಕಾಂಗ್ರೆಸ್ ಬೆಂಬಲದೊಂದಿಗೆ ಋಣ ಮುಕ್ತ ಕಾಯ್ದೆ, ರೈತರ ಸಾಲ ಮನ್ನಾ ಆಗಿರುತ್ತದೆ. ಯಾವುದೇ ಕಾಯ್ದೆಯಾದರೂ ಅದು ಕಾಂಗ್ರೆಸ್ ಬಲದಿಂದಲೇ ಆಗಿರುತ್ತದೆ. ಯಾರಾದರು ಈ ಅಚಾತುರ್ಯ ಮಾಡಿರುತ್ತಾರೆ. ಅವರು ಅದನ್ನು ಸರಿ ಪಡೆಸಿಕೊಳ್ಳಬೇಕು ಎಂದು ಉತ್ತರಿಸಿದರು.

  • ಕ್ಯಾನ್ಸರ್ ಪೀಡಿತ ಅಪ್ಪಟ ಅಭಿಮಾನಿಯಿಂದ ನಟ ಅಜಯ್ ದೇವಗನ್‍ಗೆ ಮನವಿ

    ಕ್ಯಾನ್ಸರ್ ಪೀಡಿತ ಅಪ್ಪಟ ಅಭಿಮಾನಿಯಿಂದ ನಟ ಅಜಯ್ ದೇವಗನ್‍ಗೆ ಮನವಿ

    ಜೈಪುರ: ಸಮಾಜದ ಏಳಿಗೆಗೋಸ್ಕರ ದಯಮಾಡಿ ತಂಬಾಕು ಉತ್ಪನ್ನದ ಬಗ್ಗೆ ಜಾಹೀರಾತು ನೀಡಬೇಡಿ ಎಂದು ಕಟ್ಟ ಅಭಿಮಾನಿಯೊಬ್ಬರು ಬಾಲಿವುಡ್ ನಟ ಅಜಯ್ ದೇವಗನ್ ಬಳಿ ಮನವಿ ಮಾಡಿದ್ದಾರೆ.

    ಅಭಿಮಾನಿಯಾಗಿರುವ 40 ವರ್ಷದ ನನಕ್ರಮ್ ಜಾಹೀರಾತುಗಳಲ್ಲಿ ಅಭಿನಯಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಮೂಲತಃ ರಾಜಸ್ಥಾನದವರಾಗಿರುವ ಇವರು ಜೈಪುರದ ಸಂಗನೆರ್ ಪಟ್ಟಣದಲ್ಲಿ ವಾಸವಾಗಿದ್ದು, ಸದ್ಯ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ.

    ನನಕ್ರಮ್ ಅವರು ಅಜಯ್ ದೇವಗನ್ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ. ಹೀಗಾಗಿ ತನ್ನ ನೆಚ್ಚಿನ ನಟ ನೀಡುತ್ತಿರುವ ತಂಬಾಕು ಜಾಹೀರಾತು ನೋಡಿ ಅದನ್ನು ಪ್ರತಿನಿತ್ಯ ತೆಗೆದುಕೊಳ್ಳಲು ಆರಂಭಿಸಿದ್ದಾರೆ. ಇದು ಅವರ ದೇಹದ ಮೇಲೆ ಪರಿಣಾಮ ಬೀರಿದೆ ಎಂದು ರೋಗಿಯ ಕುಟುಂಬಸ್ಥರು ತಿಳಿಸಿದ್ದಾರೆ.

    ನಟ ದೇವಗನ್ ಅವರು ಜಾಹೀರಾತು ನೀಡುತ್ತಿರುವ ತಂಬಾಕನ್ನೇ ಕಳೆದ ಕೆಲ ವರ್ಷಗಳ ಹಿಂದೆಯಿಂದ ನನ್ನ ತಂದೆ ಸೇವನೆ ಮಾಡಲು ಆರಂಭಿಸಿದ್ದಾರೆ. ದೇವಗನ್ ಅವರು ನೀಡುತ್ತಿರುವ ಜಾಹೀರಾತಿನಿಂದ ತಂದೆ ಪ್ರಭಾವಿತರಾಗಿದ್ದರು. ಆದರೆ ಇದೀಗ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಹೀಗಾಗಿ ಒಬ್ಬ ದೊಡ್ಡ ನಟ ಮನುಷ್ಯನ ಜೀವನಕ್ಕೆ ಕುತ್ತು ತರುವಂತಹ ಜಾಹೀರಾತುಗಳನ್ನು ನೀಡಿ ಜನರನ್ನು ಪ್ರೇರೇಪಣೆಗೊಳಿಸಬಾರದು ಅಂತ ತಂದೆ ಹೇಳುತ್ತಿದ್ದಾರೆಂದು ಮಗ ದಿನೇಶ್ ಮೀನಾ ತಿಳಿಸಿದ್ದಾರೆ.

    ಮದ್ಯಪಾನ, ಸಿಗರೇಟ್ ಹಾಗೂ ತಂಬಾಕು ಮನುಷ್ಯನ ದೇಹದ ಮೇಲೆ ಅಡ್ಡಪರಿಣಾಮ ಬೀರುತ್ತವೆ. ಹೀಗಾಗಿ ಕುತ್ತು ತರುವಂತಹ ಉತ್ಪನ್ನಗಳ ಜಾಹೀರಾತುಗಳನ್ನು ನಟರು ಕೊಡಬಾರದೆಂದು ನನಕ್ರಮ್ ಮೀನಾ ಮನವಿ ಮಾಡಿಕೊಂಡಿದ್ದಾರೆ.

    ಒಟ್ಟಿನಲ್ಲಿ ಇಬ್ಬರು ಮಕ್ಕಳ ತಂದೆಯಾಗಿರುವ ನನಕ್ರಮ್ ಅವರು ಟೀ ಸ್ಟಾಲ್ ಇಟ್ಟುಕೊಂಡು ವ್ಯಾಪಾರ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಆದರೆ ಇದೀಗ ಅವರು ಕ್ಯಾನ್ಸರ್ ರೋಗಿಯಾಗಿದ್ದು ಜೀವನ ನಡೆಸಲು ಕಷ್ಟ ಪಡುತ್ತಿದ್ದಾರೆ.

  • ಅನ್ನಭಾಗ್ಯ ಜಾಹೀರಾತಿನ ಅನ್ನದಾತನೊಂದಿಗೆ ವಾಣಿವಿಲಾಸ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯ ವರ್ತನೆ

    ಅನ್ನಭಾಗ್ಯ ಜಾಹೀರಾತಿನ ಅನ್ನದಾತನೊಂದಿಗೆ ವಾಣಿವಿಲಾಸ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯ ವರ್ತನೆ

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಅನ್ನಭಾಗ್ಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಅನ್ನದಾತನನ್ನು ನಗರದ ವಾಣಿವಿಲಾಸ ಆಸ್ಪತ್ರೆಯಲ್ಲಿ ಪಶುವಿನಂತೆ ನೋಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಎಂ.ಸಿ.ರಾಜು ಆಸ್ಪತ್ರೆ ಸಿಬ್ಬಂದಿಯಿಂದ ಅವಮಾನಕ್ಕೊಳದ ರೈತ. ಇವರು ಮೂಲತಃ ಬೆಂಗಳೂರು ಗ್ರಾಮಂತರ ಜಿಲ್ಲೆಯ ಮಾರಹಳ್ಳಿ ನಿವಾಸಿಯಾಗಿದ್ದಾರೆ. ಇವರು ಮಾಜಿ ಸಿಎಂ ಸಿದ್ದರಾಮಯ್ಯನ ಕನಸಿನ ಯೋಜನೆಯಾಗಿದ್ದ ಅನ್ನಭಾಗ್ಯ ಜಾಹೀರಾತಿನಲ್ಲಿ ತಮ್ಮ ಮಗನೊಂದಿಗೆ ಕಾಣಿಸಿಕೊಂಡಿದ್ದರು.

    ರೈತ ರಾಜು ತನ್ನ ಮಗನನ್ನು ಕಿಡ್ನಿ ತೊಂದರೆಯ ಕಾರಣದಿಂದ ನಗರದ ವಾಣಿವಿಲಾಸ ಆಸ್ಪತ್ರೆಗೆ ಕರೆತಂದಿದ್ದರು. ಮಗ ನಂದರಾಜು ಕಿಡ್ನಿ ತೊಂದರೆಯಿಂದಾಗಿ ಅವನ ಹೊಟ್ಟೆಯಲ್ಲಿ ನೀರು ತುಂಬಿಕೊಂಡಿತ್ತು. ಹೀಗಾಗಿ ಜೂನ್ 11ಕ್ಕೆ ಮಗನನ್ನು ವಾಣಿವಿಲಾಸ ಆಸ್ಪತ್ರೆಗೆ ಕರೆತಂದಿದ್ದರು. ಮಗನ ಅವಸ್ಥೆ ಕಂಡರೂ ಆಸ್ಪತ್ರೆಯ ಸಿಬ್ಬಂದಿಗಳು ಕ್ಯಾರೇ ಎನ್ನದೇ ಅಲ್ಲಿಂದ ಇಲ್ಲಿಗೆ ಓಡಾಡಿಸಿ ಕೊನೆಗೆ ದಾಖಲು ಮಾಡಿಕೊಂಡಿದ್ದಾರೆ.

    ವಾಣಿವಿಲಾಸ ಆಸ್ಪತ್ರೆಯಲ್ಲಿ ದಾಖಲಾಗಿಸಿದ್ದರೂ ಸಹ ಮಗ ನಂದರಾಜುವಿನ ತೊಂದರೆ ಕಡಿಮೆಯಾಗಿಲ್ಲ. ಹೀಗಾಗಿ ರೈತ ರಾಜಪ್ಪ ವಾಣಿವಿಲಾಸ ಆಸ್ಪತ್ರೆಯ ವೈದ್ಯರಾದ ಮೂರ್ತಿ ಹಾಗೂ ರಘುರವರನ್ನು ವಿಚಾರಿಸಿದಾಗ, ಬೇಜವಾಬ್ದಾರಿತನದಿಂದ ನಿಮಗೇನು ಹೊಟ್ಟೆ ಕೊಯ್ಯಬೇಕಾ, ಇಲ್ಲಿಂದ ಹೊರಡಿ ಎಂದು ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡದಿಂದ ಬೇಸತ್ತ ರೈತ ತನ್ನ ಮಗನನ್ನು ಉಳಿಸಿಕೊಳ್ಳುವ ಸಲುವಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡಿ ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ.

  • ಸಾವಿರಾರು ಜನ ಓಡಾಡೋ ರಸ್ತೆಯ ಎಲೆಕ್ಟ್ರಾನಿಕ್ ಫಲಕದಲ್ಲಿ ಪ್ರಸಾರವಾಯ್ತು ಪೋರ್ನ್ ವಿಡಿಯೋ!

    ಸಾವಿರಾರು ಜನ ಓಡಾಡೋ ರಸ್ತೆಯ ಎಲೆಕ್ಟ್ರಾನಿಕ್ ಫಲಕದಲ್ಲಿ ಪ್ರಸಾರವಾಯ್ತು ಪೋರ್ನ್ ವಿಡಿಯೋ!

    ಮನಿಲಾ: ರಸ್ತೆಯಲ್ಲಿರುವ ದೊಡ್ಡ ಎಲೆಕ್ಟ್ರಾನಿಕ್ ಫಲಕದಲ್ಲಿ ಜಾಹಿರಾತು ಪ್ರಸಾರವಾಗೋ ಬದಲು ಪೋರ್ನ್ ವಿಡಿಯೋ ಪ್ರಸಾರವಾದ ಘಟನೆ ಫಿಲಿಪೈನ್ಸ್ ನ ರಾಜಧಾನಿ ಮನಿಲಾದ ಮಕಾಟಿ ಸಿಟಿಯಲ್ಲಿ ನಡೆದಿದೆ.

    30 ಸೆಕೆಂಡ್‍ಗಳಿರುವ ಈ ಪೋರ್ನ್ ವಿಡಿಯೋ ಅಕಸ್ಮಾತಾಗಿ ರಸ್ತೆ ಮಧ್ಯೆ ಜನಸಂದಣಿಯಲ್ಲಿರುವ ಎಲೆಕ್ಟ್ರಾನಿಕ್ಸ್ ಫಲಕದಲ್ಲಿ ಪ್ರಸಾರವಾಗಿದೆ. ಈ ವಿಡಿಯೋ ನೋಡಿದ ಸಾರ್ವಜನಿಕರು ಒಂದು ಕ್ಷಣ ದಂಗಾಗಿ ಹೋದರು. ವಿಡಿಯೋದಲ್ಲಿದ್ದ ಜೋಡಿ ನಗ್ನವಾಗಿದ್ದು, ಆ ರಸ್ತೆಯಲ್ಲಿದ್ದ ಲಕ್ಷಾಂತರ ಮಂದಿ ಅಂದ್ರೆ ಮಕ್ಕಳಿಂದ ವಯೋವೃದ್ಧರವರೆಗೂ ಈ ವಿಡಿಯೋ ನೋಡುವಂತಾಯಿತು.

    ಈ ವಿಡಿಯೋ ಪ್ರಸಾರವಾಗುತ್ತಿದ್ದಂತೆ ಮಕಾಟಿಯ ಮೇಯರ್ ಅಭಿಗೇಲ್ ಬಿನಯ್ ಅದನ್ನು ನಿಲ್ಲಿಸಲ್ಲು ಹೇಳಿದ್ದಾರೆ. ಆದರೆ ಅಷ್ಟರಲ್ಲಿ ಅಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ತೆಗೆದಿದ್ದರು. ಇನ್ನೂ ಕೆಲವರು ಆ ವಿಡಿಯೋ ನೋಡಲಾಗದೇ ಅದನ್ನು ನಿರ್ಲಕ್ಷಿಸಿದರು.

    ಫಿಲಿಪೈನ್ಸ್ ನಲ್ಲಿ ಈ ರಸ್ತೆ ಅತ್ಯಂತ ಬ್ಯೂಸಿ ರಸ್ತೆಯಾಗಿದ್ದು, ಸಾವಿರಾರು ವಾಹನಗಳು ಹಾಗೂ ಸಾಕಷ್ಟು ಜನರು ಈ ರಸ್ತೆಯಲ್ಲಿ ಓಡಾಡುತ್ತಿರುತ್ತಾರೆ. ಇಂತಹ ರಸ್ತೆಯಲ್ಲಿ ಪೋರ್ನ್ ವಿಡಿಯೋ ಪ್ರಸಾರವಾಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.